Hockey World Cup | ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್​ಗೆ ಒತ್ತಡವಿದೆ; ಕೋಚ್‌ ಗ್ರಹಾಂ ರೀಡ್‌! - Vistara News

ಕ್ರೀಡೆ

Hockey World Cup | ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್​ಗೆ ಒತ್ತಡವಿದೆ; ಕೋಚ್‌ ಗ್ರಹಾಂ ರೀಡ್‌!

ಹಾಕಿ ವಿಶ್ವ ಕಪ್​ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಸ್ಪೇನ್​ ವಿರುದ್ಧ ಆಡಲಿದೆ. ಈ ಪಂದ್ಯ ಶುಕ್ರವಾರ ನಡೆಯಲಿದೆ.

VISTARANEWS.COM


on

graham reid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭುವನೇಶ್ವರ: ಪುರುಷರ ಹಾಕಿ ವಿಶ್ವಕಪ್(Hockey World Cup)​ ಟೂರ್ನಿಗೆ ಈಗಾಗಲೇ ವರ್ಣರಂಜಿತ ಚಾಲನೆ ಸಿಕ್ಕಿದೆ. ಶುಕ್ರವಾರ ಟೂರ್ನಿಯ ಪಂದ್ಯಗಳು ಆರಂಭವಾಗಲಿದೆ. ಮೊದಲ ದಿನವೇ ಆತಿಥೇಯ ಭಾರತ ತಂಡ ಸ್ಪೇನ್​ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ. ಪಂದ್ಯದಕ್ಕೂ ಮುನ್ನ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್​ ಒತ್ತಡದಲ್ಲಿ ಆಡಬೇಕಿದೆ ಎಂದು ಕೋಚ್​ ಹೇಳಿದ್ದಾರೆ.

“ಪೆನಾಲ್ಟಿ ಕಾರ್ನರ್‌ ಅವಕಾಶದಲ್ಲಿ ಗೋಲಾಗಿ ಪರಿವರ್ತಿಸಲು ನಿಸ್ಸೀಮರಾಗಿರುವ ಹರ್ಮನ್‌ಪ್ರೀತ್ ಸಿಂಗ್ ಮೊದಲ ಪಂದ್ಯದಲ್ಲಿ ಬಹಳಷ್ಟು ಒತ್ತಡದಿಂದ ಆಡಬೇಕಾಗಿದೆ” ಎಂದು ತಂಡದ ಮುಖ್ಯ ಕೋಚ್‌ ಗ್ರಹಾಂ ರೀಡ್‌ ಹೇಳಿದ್ದಾರೆ.

“ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ಮೇಲೆ ಈ ಬಾರಿಯ ವಿಶ್ವ ಕಪ್‌ ಹಾಕಿ ಟೂರ್ನಿಯಲ್ಲಿ ಸಹಜವಾಗಿಯೇ ಒತ್ತಡವಿದೆ. ಆದರೆ ಈ ಪ್ರಮುಖ ಆಟಗಾರನ ಮೇಲಿನ ಹೊರೆ ತಗ್ಗಿಸುವ ಯೋಜನೆಗಳನ್ನು ಹಾಕಿಕೊಳ್ಳಲು ರಣತಂತ್ರ ರೂಪಿಸಲಾಗಿದೆ” ಎಂದು ಗ್ರಹಾಂ ರೀಡ್‌ ಹೇಳಿದ್ದಾರೆ.

ಹರ್ಮನ್‌ಪ್ರೀತ್ ಸಿಂಗ್ ಅವರ ಒತ್ತಡದ ಹೊರೆಯನ್ನು ತಂಡದ ಇನ್ನುಳಿದ ಪ್ರಮುಖ ಡ್ರ್ಯಾಗ್‌ಫ್ಲಿಕರ್‌ಗಳಾದ ಉಪನಾಯಕ ಅಮಿತ್‌ ರೋಹಿದಾಸ್‌, ವರುಣ್ ಕುಮಾರ್ ಮತ್ತು ನೀಲಂ ಸಂಜೀಪ್ ಕ್ಸೆಸ್ ಅವರು ಜವಾಬ್ದಾರಿಯನ್ನು ಹಂಚಿಕೊಳ್ಳಬೇಕೆಂಬುದು ಗ್ರಹಾಂ ರೀಡ್‌ ಹೇಳಿದ್ದಾರೆ.

ಆಸ್ಟ್ರೇಲಿಯಾದ ರೀಡ್‌ ಅವರ ಮಾರ್ಗದರ್ಶನದಲ್ಲಿ ಭಾರತ ತಂಡವು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿತ್ತು. ಇದೀಗ ಇವರ ಮಾರ್ಗದರ್ಶನದಲ್ಲಿ ಭಾರತ ವಿಶ್ವಕಪ್​ ಚಾಂಪಿಯನ್​ ಆಗಲಿದೆಯಾ ಎಂಬುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ | Hockey World Cup | ಪುರುಷರ ಹಾಕಿ ವಿಶ್ವಕಪ್‌ಗೆ ಅದ್ಧೂರಿ ಚಾಲನೆ; ಮೊದಲ ಪಂದ್ಯದಲ್ಲಿ ಭಾರತಕ್ಕೆ ಸ್ಪೇನ್​ ಎದುರಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IND vs SL T20 : ಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ ಜಯ, ಸರಣಿ ಕೈವಶ

IND vs SL T20 : ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 9 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಅಂತೆಯೇ ಭಾರತ ರನ್ ಮಾಡಲು ಆರಂಭಿಸಿ 6 ರನ್ ಬಾರಿಸಿದ್ದಾಗ ಮಳೆ ಶುರುವಾಯಿತು. ತುಂಬಾ ಹೊತ್ತು ನಷ್ಟವಾದ ಕಾರಣ ಭಾರತಕ್ಕೆ 8 ಓವರ್​ಗಳಲ್ಲಿ 76 ರನ್ ಸವಾಲು ನೀಡಲಾಯಿತು. ಭಾರತ ಇನ್ನೂ 3 ಎಸೆತ ಬಾಕಿ ಇರುವಾಗ 3 ವಿಕೆಟ್​ ನಷ್ಟಕ್ಕೆ 81 ರನ್ ಬಾರಿಸಿ ಗೆಲುವು ಕಂಡಿತು.

VISTARANEWS.COM


on

IND vs SL T20
Koo

ಪಲ್ಲೆಕೆಲೆ: : ಶ್ರೀಲಂಕಾ ವಿರುದ್ಧದ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ (IND vs SL T20) ಭಾರತ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆಯೊಂದಿಗೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಂಡಿದೆ. ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ ಅವರಿಂದ ಅಧಿಕಾರ ವಹಿಸಿಕೊಂಡ ನಂತರ ಸೂರ್ಯಕುಮಾರ್ ಯಾದವ್ ಇದರೊಂದಿಗೆ ಭರ್ಜರಿ ಆರಂಭ ಮಾಡಿದರೆ ಕೋಚ್ ಗೌತಮ್ ಗಂಭೀರ್​ ಕೂಡ ಮೊದಲ ಯಶಸ್ಸು ಸಾಧಿಸಿದ್ದಾರೆ. ಮಳೆಯಿಂದ ಬಾಧಿತವಾತ ಪಂದ್ಯದಲ್ಲಿ ಭಾರತ ಸಂಪೂರ್ಣವಾಗಿ ಮೇಲುಗೈ ಸಾಧಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 9 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಅಂತೆಯೇ ಭಾರತ ರನ್ ಮಾಡಲು ಆರಂಭಿಸಿ 6 ರನ್ ಬಾರಿಸಿದ್ದಾಗ ಮಳೆ ಶುರುವಾಯಿತು. ತುಂಬಾ ಹೊತ್ತು ನಷ್ಟವಾದ ಕಾರಣ ಭಾರತಕ್ಕೆ 8 ಓವರ್​ಗಳಲ್ಲಿ 76 ರನ್ ಸವಾಲು ನೀಡಲಾಯಿತು. ಭಾರತ ಇನ್ನೂ 3 ಎಸೆತ ಬಾಕಿ ಇರುವಾಗ 3 ವಿಕೆಟ್​ ನಷ್ಟಕ್ಕೆ 81 ರನ್ ಬಾರಿಸಿ ಗೆಲುವು ಕಂಡಿತು.

ಮೊದಲು ಬ್ಯಾಟ್ ಮಾಡಿದ ಲಂಕಾ ಪವರ್​ ಪ್ಲೇನಲ್ಲಿ 54 ರನ್ ಗಳಿಸಿತು. ಪಥುಮ್ ನಿಸ್ಸಾಂಕಾ ಉತ್ತಮವಾಗಿ ಆಡಿದರು. ಕುಸಾಲ್ ಮೆಂಡಿಸ್ ಅವರ ವಿಕೆಟ್ ಕಳೆದುಕೊಂಡರು. ನಿಸ್ಸಾಂಕಾ 24 ಎಸೆತಗಳಲ್ಲಿ 32 ರನ್ ಗಳಿಸಿ ರವಿ ಬಿಷ್ಣೋಯ್ ಬೌಲಿಂಗ್​ಗೆ ಔಟಾದರು. ಬಳಿಕ ಕುಸಾಲ್ ಪೆರೆರಾ ಅತ್ಯುತ್ತಮ ಪ್ರದರ್ಶನ ನೀಡಿದರು. ಮಧ್ಯಮ ಓವರ್ಗಳಲ್ಲಿ ಇನ್ನಿಂಗ್ಸ್​ಗೆ ವೇಗ ನೀಡಿದ ಅವರು 34 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್ ನೊಂದಿಗೆ 53 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ 16ನೇ ಓವರ್ನಲ್ಲಿ ಪೆರೆರಾ ಮತ್ತು ಕಮಿಂಡು ಮೆಂಡಿಸ್ ಅವರನ್ನು ಒಂದೇ ಓವರ್​ನಲ್ಲಿ ಔಟ್ ಮಾಡಿದರು.

ಪೆರೆರಾ ಔಟಾದ ನಂತರ ಶ್ರೀಲಂಕಾ ಕೊನೆಯ ನಾಲ್ಕು ಓವರ್ ಗಳಲ್ಲಿ ಕೇವಲ 22 ರನ್ ಗಳಿಸಿತು. ದಸುನ್ ಶನಕಾ ಮತ್ತು ವನಿಂದು ಹಸರಂಗ ಗೋಲ್ಡನ್ ಡಕ್​ ಔಟಾದರ. ಭಾರತದ ಪರ ಬಿಷ್ಣೋಯ್ ತಮ್ಮ 4 ಓವರ್​ಗಳ ಸ್ಪೆಲ್​ನಲ್ಲಿ 3 ವಿಕೆಟ್ ಪಡೆದರು. ಅರ್ಷ್ದೀಪ್ ಸಿಂಗ್ 2 ವಿಕೆಟ್ ಉರುಳಿಸಿದರು.

ಸೂರ್ಯಕುಮಾರ್, ಜೈಸ್ವಾಲ್ ಗೆಲುವು ತಂದುಕೊಟ್ಟರು

ಭಾರತದ ರನ್ ಚೇಸ್ ನ ಮೊದಲ ಓವರ್ ನಲ್ಲಿ ಮಳೆ ಬಂತು. ಆದರೆ ಅಂತಿಮವಾಗಿ ಭಾರತಕ್ಕೆ 8 ಓವರ್ಗಳಲ್ಲಿ 78 ರನ್​ಗಳ ಪರಿಷ್ಕೃತ ಗುರಿ ನೀಡಲಾಯಿತು. ಗಿಲ್​ ಅನುಪಸ್ಥಿತಿಯಲ್ಲಿ ಆರಂಭಿಕರಾಗಿ ಆಡಲು ಬಂದ ಸಂಜು ಸ್ಯಾಮ್ಸನ್ ಶೂನ್ಯಕ್ಕೆ ಔಟಾದರು. ಹೀಗಾಗಿ ಭಾರತ ಅವರು ಆರಂಭಿಕ ತೊಂದರೆಯಲ್ಲಿ ಸಿಲುಕಿತು.

ಇದನ್ನೂ ಓದಿ: Paris Olympics 2024 : ಪುರಷರ 10 ಮೀಟರ್​ ಏರ್​ರೈಫಲ್​​ ಸ್ಪರ್ಧೆಯಲ್ಲಿ ಫೈನಲ್​ಗೇರಿದ ಅರ್ಜುನ್ ಬಬುಟಾ

, ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಅಬ್ಬರಿಸಿದರು. ಭಾರತವು ರನ್​ಗಳಿಕೆಯಲ್ಲಿ ಹಿಂದೆ ಬೀಳದಂತೆ ನೋಡಿಕೊಂಡರು. 12 ಎಸೆತಗಳಲ್ಲಿ 26 ರನ್ ಗಳಿಸಿದ ಸೂರ್ಯಕುಮಾರ್ ಮಥೀಶಾ ಪತಿರಾನಾ ಎಸೆತಕ್ಕೆ ಔಟಾದರು. ಜೈಸ್ವಾಲ್ 15 ಎಸೆತಗಳಲ್ಲಿ 30 ರನ್ ಗಳಿಸಿದರು.

ಡೆತ್ ಓವರ್​ಗಳಲ್ಲಿ ಭಾರತಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಹಾರ್ದಿಕ್ ಪಾಂಡ್ಯ ಎಲ್ಲಾ ಪ್ರಯತ್ನ ಮಾಡಿದರು. ಅವರು ಒಂಬತ್ತು ಎಸೆತಗಳಲ್ಲಿ 22 ರನ್ ಗಳಿಸಿ ಔಟಾಗದೆ ಉಳಿದರು.

Continue Reading

ಪ್ರಮುಖ ಸುದ್ದಿ

Paris Olympics 2024 : ಪುರಷರ 10 ಮೀಟರ್​ ಏರ್​ರೈಫಲ್​​ ಸ್ಪರ್ಧೆಯಲ್ಲಿ ಫೈನಲ್​ಗೇರಿದ ಅರ್ಜುನ್ ಬಬುಟಾ

Paris Olympics 2024 : 2016 ರಿಂದ ರಾಷ್ಟ್ರೀಯ ತಂಡದಲ್ಲಿ ಇರುವ ಚಂಡೀಗಢದ ಬಬುತಾ, ಕಳೆದ ವರ್ಷ ಚಾಂಗ್ವಾನ್​​ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್ಶಿಪ್​​ಶಿಪ್​ ಮೂಲಕ ಒಲಿಂಪಿಕ್ ಅರ್ಹತೆ ಪಡೆದಿದ್ದರು. ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಆಯ್ಕೆ ಟ್ರಯಲ್ಸ್​​ನಲ್ಲಿ ವಿಶ್ವ ಚಾಂಪಿಯನ್ ರುದ್ರಾಕ್ಷ್ ಪಾಟೀಲ್ ಅವರನ್ನು ಸೋಲಿಸಿದ ನಂತರ ತಮ್ಮ ಚೊಚ್ಚಲ ಒಲಿಂಪಿಕ್ಸ್​ಗೆ ಅವರು ಪ್ರವೇಶ ಪಡೆದುಕೊಂಡಿದ್ದರು.

VISTARANEWS.COM


on

Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನ ಕ್ರೀಡಾಕೂಟದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯ ಫೈನಲ್​ಗೆ ಭಾರತದ ಶೂಟರ್ ಅರ್ಜುನ್ ಬಬುಟಾ ಭಾನುವಾರ ಅರ್ಹತೆ ಗಳಿಸಿದ್ದಾರೆ. ಅರ್ಹತಾ ಸುತ್ತಿನಲ್ಲಿ ಏಳನೇ ಸ್ಥಾನ ಪಡೆದ ಅವರು ಪ್ರಶಸ್ತಿ ಸುತ್ತಿಗೆ ಏರಿದ್ದಾರೆ. 25ರ ವರ್ಷದ ಬಬುಟಾ 105.7, 104.9, 105.5, 105.4, 104.0 ಮತ್ತು 104.6 ಅಂಕಗಳೊದಿಗೆ ಒಟ್ಟಾರೆ 630.1 ಅಂಕಗಳನ್ನು ಗಳಿಸಿ ಅಗ್ರಸ್ಥಾನ ಪಡೆದರು. ಶನಿವಾರ ರಮಿತಾ ಜಿಂದಾಲ್ ಅವರೊಂದಿಗೆ ಮಿಶ್ರ ತಂಡ ಸ್ಪರ್ಧೆಯಲ್ಲಿ ಅಂತಿಮ ಸುತ್ತಿನ ಅವಕಾಶ ಕಳೆದುಕೊಂಡ ಅವರು ಸೋಮವಾರ ಎಂಟು ಶೂಟರ್ ಗಳ ಫೈನಲ್ ನಲ್ಲಿ ಮತ್ತೊಂದು ಸಾಧನೆ ಮಾಡುವ ಅವಕಾಶ ಹೊಂದಿದ್ದಾರೆ.

2016 ರಿಂದ ರಾಷ್ಟ್ರೀಯ ತಂಡದಲ್ಲಿ ಇರುವ ಚಂಡೀಗಢದ ಬಬುತಾ, ಕಳೆದ ವರ್ಷ ಚಾಂಗ್ವಾನ್​​ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್ಶಿಪ್​​ಶಿಪ್​ ಮೂಲಕ ಒಲಿಂಪಿಕ್ ಅರ್ಹತೆ ಪಡೆದಿದ್ದರು. ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಆಯ್ಕೆ ಟ್ರಯಲ್ಸ್​​ನಲ್ಲಿ ವಿಶ್ವ ಚಾಂಪಿಯನ್ ರುದ್ರಾಕ್ಷ್ ಪಾಟೀಲ್ ಅವರನ್ನು ಸೋಲಿಸಿದ ನಂತರ ತಮ್ಮ ಚೊಚ್ಚಲ ಒಲಿಂಪಿಕ್ಸ್​ಗೆ ಅವರು ಪ್ರವೇಶ ಪಡೆದುಕೊಂಡಿದ್ದರು. ಸೇನಾ ಸಿಬ್ಬಂದಿ ಸಂದೀಪ್ ಸಿಂಗ್ ಇದೇ ಸ್ಪರ್ಧೆಯಲ್ಲಿ 629.3 ಅಂಕಗಳನ್ನು ಗಳಿಸಿ ಪ್ಯಾರಿಸ್ ಅಭಿಯಾನ ಕೊನೆಗೊಳಿಸಿದ್ದಾರೆ. .

ಅರ್ಹತಾ ಸುತ್ತಿನಲ್ಲಿ ಚೀನಾದ ಶೆಂಗ್ ಲಿಹಾವೊ 631.7 ಅಂಕಗಳನ್ನು ಗಳಿಸಿ ಅಗ್ರಸ್ಥಾನ ಪಡೆದರು, ಟೋಕಿಯೊ ಕ್ರೀಡಾಕೂಟದಲ್ಲಿ ದೇಶದ ಯಾಂಗ್ ಹೌರಾನ್ ಸ್ಥಾಪಿಸಿದ ಅರ್ಹತಾ ದಾಖಲೆಯಾದ 632.7 ಕ್ಕಿಂತ ಕೇವಲ ಒಂದು ಅಂಕ ಹಿಂದೆ ಬಿದ್ದಿದ್ದಾರೆ.

ಶೂಟಿಂಗ್​ನಲ್ಲಿ ಫೈನಲ್​ ಪ್ರವೇಶಿಸಿದ ರಮಿತಾ ಜಿಂದಾಲ್; ಭಾರತಕ್ಕೆ 2 ಪದಕ ನಿರೀಕ್ಷೆ

ಪ್ಯಾರಿಸ್​: ಶೂಟಿಂಗ್​ನಲ್ಲಿ(Paris 2024 Shooting) ಭಾರತ ಸದ್ಯ 2 ಪದಕಗಳ ನಿರೀಕ್ಷೆಯಲ್ಲಿದೆ. ಇಂದು ನಡೆದ 10 ಮೀಟರ್ ಮಹಿಳಾ ಏರ್ ರೈಫಲ್ ಸ್ಪರ್ಧೆಯಲ್ಲಿ ಶೂಟರ್ ರಮಿತಾ ಜಿಂದಾಲ್(Ramita Jindal) 631.5 ಅಂಕ ಗಳಿಸಿ 5 ನೇ ಸ್ಥಾನದೊಂದಿಗೆ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಆದರೆ, ಅನುಭವಿ ಶೂಟರ್​ ಎಲವೆನಿಲ್ ವಲರಿವನ್(Elavenil Valarivan) 630.7 ಅಂಕ ಗಳಿಸಿ 10ನೇ ಸ್ಥಾನಕ್ಕೆ ತೃಪ್ತಿಪಟ್ಟರು. ಅಗ್ರ 8 ಮಂದಿಗೆ ಫೈನಲ್​ ಪ್ರವೇಶ ಲಭಿಸಿತು.

ಇದನ್ನೂ ಓದಿ: Manu Bhaker : ಭಾರತಕ್ಕೆ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಪದಕ ತಂದುಕೊಟ್ಟ ಮನು ಭಾಕರ್ ಯಾರು? ಅವರ ಹಿನ್ನೆಲೆಯೇನು?

ರಮಿತಾ ಕಳೆದ 20 ವರ್ಷಗಳಲ್ಲಿ ಮನು ಭಾಕರ್ ನಂತರ ಪದಕ ಸುತ್ತಿಗೆ ತಲುಪಿದ ಎರಡನೇ ಮಹಿಳಾ ಶೂಟರ್ ಎನಿಸಿಕೊಂಡರು. ರಮಿತಾ ತನ್ನ ಕೋಚ್ ಸುಮಾ ಶಿರೂರ್ (ಅಥೆನ್ಸ್ 2004) ನಂತರ ಒಲಿಂಪಿಕ್ ಫೈನಲ್‌ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ರೈಫಲ್ ಶೂಟರ್ ಆಗಿದ್ದಾರೆ. ಎಲವೆನಿಲ್ ವಲರಿವನ್ ಆರಂಭಿಕ ಮೂರು ಸೆಟ್​ಗಳಲ್ಲಿ ಅಗ್ರ 8ರೊಳಗೆ ಕಾಣಿಸಿಕೊಂಡಿದ್ದರೂ ಕೂಡ ಅಂತಿಮ ಮೂರು ಸೆಟ್​ಗಳಲ್ಲಿ ಹಿನ್ನಡೆ ಕಂಡು ಫೈನಲ್​ ಅವಕಾಶ ತಪ್ಪಿಸಿಕೊಂಡರು. ಕನಿಷ್ಠ 8ನೇ ಸ್ಥಾನ ಪಡೆಯುತ್ತಿದ್ದರೂ ಕೂಡ ಅವರಿಗೆ ಫೈನಲ್​ ಟಿಕೆಟ್​ ಲಭಿಸುತ್ತಿತ್ತು.

Continue Reading

ಪ್ರಮುಖ ಸುದ್ದಿ

Manu Bhaker : ಭಾರತಕ್ಕೆ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಪದಕ ತಂದುಕೊಟ್ಟ ಮನು ಭಾಕರ್ ಯಾರು? ಅವರ ಹಿನ್ನೆಲೆಯೇನು?

Manu Bhaker : ಮನು ಭಾಕರ್​ 221.7 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದು ಸಂಭ್ರಮಿಸಿದ್ದಾರೆ. ಶನಿವಾರ ನಡೆದ ಅರ್ಹತಾ ಸುತ್ತಿನಲ್ಲಿ 4ನೇ ಸ್ಥಾನ ಪಡೆದ ಬಳಿಕ ಅವರು ತಮ್ಮ ಸಾಧನೆಯನ್ನು ಉತ್ತಮಪಡಿಸಿಕೊಂಡಿದ್ದಾರೆ. ಒಲಿಂಪಿಕ್ಸ್ ಪ್ರಾರಂಭವಾದ ದಿನದಿಂದ ಎಲ್ಲರ ಕಣ್ಣುಗಳು ಭಾಕರ್ ಮೇಲೆ ನೆಟ್ಟಿದ್ದವು.

VISTARANEWS.COM


on

Manu Bhaker
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾನುವಾರ ನಡೆದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್​ನಲ್ಲಿ 22 ವರ್ಷದ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪದಕಗಳ ಖಾತೆ ತೆರೆದಿದ್ದಾರೆ. ಭಾರತದ ಅತಿದೊಡ್ಡ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ಭಾಕರ್​ ನಿರೀಕ್ಷೆಯಂತೆ ಪದಕ ಗೆದ್ದಿದ್ದು, ಒಲಿಂಪಿಕ್ಸ್ ಪದಕ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರೆ. ಅಲ್ಲದೆ 2016 ಮತ್ತು 2020ರ ರಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಶೂಟಿಂಗ್​ನಲ್ಲಿ ಪದಕ ಗೆಲ್ಲದ ಕಾರಣ ದೊಡ್ಡ ಕೊರತೆಯನ್ನು ನೀಗಿಸಿದ್ದಾರೆ.

ಮನು ಭಾಕರ್​ 221.7 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದು ಸಂಭ್ರಮಿಸಿದ್ದಾರೆ. ಶನಿವಾರ ನಡೆದ ಅರ್ಹತಾ ಸುತ್ತಿನಲ್ಲಿ 4ನೇ ಸ್ಥಾನ ಪಡೆದ ಬಳಿಕ ಅವರು ತಮ್ಮ ಸಾಧನೆಯನ್ನು ಉತ್ತಮಪಡಿಸಿಕೊಂಡಿದ್ದಾರೆ. ಒಲಿಂಪಿಕ್ಸ್ ಪ್ರಾರಂಭವಾದ ದಿನದಿಂದ ಎಲ್ಲರ ಕಣ್ಣುಗಳು ಭಾಕರ್ ಮೇಲೆ ನೆಟ್ಟಿದ್ದವು. ಪಿ.ವಿ.ಸಿಂಧು, ಶ್ರೀಜಾ ಅಕುಲಾ ಮತ್ತು ನಿಖಾತ್ ಝರೀನ್ ಎರಡನೇ ದಿನ ಮೇಲುಗೈ ಸಾಧಿಸಿದರೂ ಭಾಕರ್​ ಪದಕವನ್ನೇ ಗೆದ್ದರು.

ಮೂರು ವರ್ಷಗಳ ಹಿಂದೆ ಟೋಕಿಯೊದಲ್ಲಿ ನಡೆದ ಒಲಿಂಪಿಕ್ಸ್​​ನಲ್ಲಿ ಅರ್ಹತಾ ಸುತ್ತಿನಲ್ಲಿ ಬಂದೂಕು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಮನು ಬೇಸರಗೊಂಡಿದ್ದರು. ನಿರಾಶೆಯಿಂದ ಹೊರಬರಲು ಮನುವಿಗೆ ಸಾಕಷ್ಟು ಸಮಯ ಬೇಕಾಗಿತ್ತು. ಇದೀಗ ಖುಷಿ ಹೆಚ್ಚಿಸಿಕೊಂಡಿದ್ದಾರೆ.

ಸ್ಪರ್ಧೆ ನಡೆಯುವ ವೇಳೆ ಮನು ಬೆಳ್ಳಿಯ ಪದಕದ ಸನಿಹವೇ ಇದ್ದರು. ಕೊನೆಯ ಐದು ಸುತ್ತುಗಳಲ್ಲಿ ಮೂರನೇ ಸ್ಥಾನದಲ್ಲಿದ್ದ ಅವರು ಎರಡನೇ ಸ್ಥಾನಕ್ಕೆ ಏರಿದ್ದರು. ಆದರೆ ಆದರೆ, ಅಂತಿ ಸುತ್ತಿನಲ್ಲಿ ಕೊರಿಯಾದ ಯೆಗಿ 10.5 ಅಂಕಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದರು. ಕೊರಿಯಾದ ಓಹ್ ಯೆ ಜಿನ್ 243.2 ಅಂಕಗಳ ಮೂಲಕ ಚಿನ್ನದ ಪದಕ ಗೆದ್ದರು.

ಮನು ಭಾಕರ್ ಯಾರು ಮತ್ತು ಅವರ ಪ್ರಯಾಣ ಹೇಗಿತ್ತು?

ಭಾರತದಲ್ಲಿ ಅತಿ ಹೆಚ್ಚು ಕ್ರೀಡಾಪಟುಗಳನ್ನು ಹೊಂದಿರುವ ರಾಜ್ಯವಾದ ಹರಿಯಾಣದ ಮೂಲದ ಮನು ಶೂಟಿಂಗ್ ನಲ್ಲಿ ಪಾರಮ್ಯ ಮೆರೆದಿದಿದ್ದಾರೆ. ಅವರ ತವರು ರಾಜ್ಯವು ಬಾಕ್ಸರ್​ಗಳು ಮತ್ತು ಕುಸ್ತಿಪಟುಗಳನ್ನು ಉತ್ಪಾದಿಸುವಲ್ಲಿ ಹೆಸರುವಾಸಿಯಾಗಿದ್ದರೂ, ಭಾಕರ್ ತಮ್ಮ ಗಮನವನ್ನು ಶೂಟಿಂಗ್ ರೇಂಜ್​​ ಕಡೆಗೆ ಇಟ್ಟರು.

ಭಾಕರ್ ಅವರ ಪ್ರಯಾಣವು ಪಿಸ್ತೂಲ್ ನ ಗುರಿಯೊಂದಿಗೆ ಆರಂಭಗೊಂಡರೂ ಅವರು ಬಹುಮುಖ ಪ್ರತಿಭೆ. ಟೆನಿಸ್, ಸ್ಕೇಟಿಂಗ್ ಮತ್ತು ಥಂಗ್ ಮುಂತಾದ ಸಮರ ಕಲೆಯಲ್ಲಿ ತೊಡಗಿಸಿಕೊಂಡರು. ಆ ಕ್ಷೇತ್ರದಲ್ಲಿ ರಾಷ್ಟ್ರೀಯ ಪ್ರಶಂಸೆಗಳನ್ನು ಗಳಿಸಿದರು. 2016 ರ ರಿಯೋ ಒಲಿಂಪಿಕ್ಸ್​ ವೇಳೆಯ ಪ್ರೇರಣೆಯಿಂದ ಅವರು ಶೂಟಿಂಗ್ ಕಡೆಗೆ ಹೊರಳಿದರು.

ಇದನ್ನೂ ಓದಿ: Manu Bhaker: ಭಾರತದ ಹೆಮ್ಮೆಯ ಪುತ್ರಿ ; ಮನು ಭಾಕರ್​ಗೆ ಪದಕ ಗೆಲ್ಲಲು ಭಗವದ್ಗೀತೆಯೇ ಪ್ರೇರಣೆ

ಕೇವಲ ಹದಿನಾಲ್ಕು ವರ್ಷದವಳಾಗಿದ್ದಾಗ ಭಾಕರ್ ಶೂಟಿಂಗ್ ಅಭ್ಯಾಸ ಆರಂಭಿಸಿದ್ದರು. ತಂದೆಯ ಮನವೊಲಿಸಿದ ಅವರು ಶೂಟಿಂಗ್ ಕ್ಷೇತ್ರಕ್ಕೆ ಪ್ರವೇಶ ಪಡದರು. ರಾಷ್ಟ್ರೀಯ ಚಾಂಪಿಯನ್​​ಶಿಪ್​​ನಲ್ಲಿ ಅನುಭವಿ ಒಲಿಂಪಿಯನ್ ಹೀನಾ ಸಿಧು ವಿರುದ್ಧ ಅದ್ಭುತ ಗೆಲುವು ಗಳಿಸಿದಾಗ ಅವರು ಶೂಟಿಂಗ್​ ಕ್ಷೇತ್ರವು ಅವರ ಕಡೆಗೆ ಗಮನ ಸೆಳೆಯಿತು.

ಅವರಿಗೆ ಅಂತರರಾಷ್ಟ್ರೀಯ ಮೆಚ್ಚುಗೆಯು ತ್ವರಿತವಾಗಿ ಬಂತು. ಏಷ್ಯನ್ ಜೂನಿಯರ್ ಚಾಂಪಿಯನ್​ಶಿಪ್​ನಲ್ಲಿ ಅವರು ಬೆಳ್ಳಿ ಗೆದ್ದರು. ಅವರ ಶೂಟಿಂಗ್​ ಅವರ ಪ್ರಯಾಣವು ಗೆಲುವುಗಳು ಮತ್ತು ಆಘಾತಗಳಿಂದಲೂ ಕೂಡಿದೆ. ಆದಾಗ್ಯೂ ಯೂತ್ ಒಲಿಂಪಿಕ್ಸ್​ನಲ್ಲಿ ಅವರ ಚಿನ್ನದ ಕ್ಷಣವು ಅವರ ಸ್ಥಾನಮಾನವನ್ನು ಗಟ್ಟಿಗೊಳಿಸಿತು. ಹದಿನಾರನೇ ವಯಸ್ಸಿನಲ್ಲಿ, ಅವರು ಶೂಟಿಂಗ್​ನಲ್ಲಿ ಮಿಂಚಿದರು.

ಅನುಭವಿ ಕೋಚ್​​ ಜಸ್ಪಾಲ್ ರಾಣಾ ಅವರ ಮಾರ್ಗದರ್ಶನದಲ್ಲಿ, ಭಾಕರ್ ಅವರ ಪ್ರಯಾಣ ಗಟ್ಟಿಯಾಯಿತು. ಒಲಿಂಪಿಕ್ ಆಯ್ಕೆ ಟ್ರಯಲ್ಸ್​ನಲ್ಲಿ ಪ್ರಬಲ ಪ್ರದರ್ಶನವು ಭಾರತೀಯ ಶೂಟಿಂಗ್ ತಂಡದಲ್ಲಿ ಅವರ ಸ್ಥಾನ ಭದ್ರಪಡಿಸಿತು.

Continue Reading

ಪ್ರಮುಖ ಸುದ್ದಿ

Manu Bhaker: ಭಾರತದ ಹೆಮ್ಮೆಯ ಪುತ್ರಿ ; ಮನು ಭಾಕರ್​ಗೆ ಪದಕ ಗೆಲ್ಲಲು ಭಗವದ್ಗೀತೆಯೇ ಪ್ರೇರಣೆ

Manu Bhaker : 2012ರ ಲಂಡನ್ ಒಲಿಂಪಿಕ್ಸ್​ನಲ್ಲಿ ರ್ಯಾಲಿ ಫೈರ್ ಪಿಸ್ತೂಲ್ ಶೂಟರ್ ವಿಜಯ್ ಕುಮಾರ್ ಮತ್ತು 10 ಮೀಟರ್ ಏರ್ ರೈಫಲ್ ನಲ್ಲಿ ಗಗನ್ ನಾರಂಗ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದರು. ನಾರಂಗ್ ಇದೀಗ ಪ್ಯಾರಿಸ್ ತಂಡದ ಚೆಫ್ ಡಿ ಮಿಷನ್ ಆಗಿದ್ದಾರೆ.

VISTARANEWS.COM


on

Manu Bhaker
Koo

ನವದೆಹಲಿ: ಒಲಿಂಪಿಕ್ಸ್ ಪದಕ ಗೆದ್ದ ಭಾರತೀಯ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಮನು ಭಾಕರ್ (Manu Bhaker) ಭಾನುವಾರ ಪಾತ್ರರಾಗಿದ್ದಾರೆ. ಪ್ಯಾರಿಸ್: ಪ್ಯಾರಿಸ್​ನಲ್ಲಿ ನಡೆದ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಅವರು ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದು ಭಾರತಕ್ಕೆ ಹಾಲಿ ಕ್ರೀಡಾಕೂಟದಲ್ಲಿ ಮೊದಲ ಪದಕವಾಗಿದೆ. ಹೀಗಾಗಿ ಭಾರತದ ಸಂಭ್ರಮ ಹೆಚ್ಚಾಗಿದೆ. ಇದೇ ವೇಳೆ ಪದಕ ಗೆದ್ದ ಖುಷಿಯಲ್ಲಿರುವ ಭಾಕರ್​ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಆದರೆ, ಹೆಚ್ಚಾಗಿ ನೆನಪಿಸಿಕೊಂಡಿರುವುದು ಹಿಂದೂಗಳ ಶ್ರೇಷ್ಠ ಗ್ರಂಥವಾದ ಭಗವದ್ಗೀತೆಯನ್ನು. ಅದರಲ್ಲೂ ಅದಲ್ಲಿರುವ ಕರ್ಮಫಲ ಸಿದ್ಧಾಂತವನ್ನು.

2012ರ ಲಂಡನ್ ಒಲಿಂಪಿಕ್ಸ್​ನಲ್ಲಿ ರ್ಯಾಲಿ ಫೈರ್ ಪಿಸ್ತೂಲ್ ಶೂಟರ್ ವಿಜಯ್ ಕುಮಾರ್ ಮತ್ತು 10 ಮೀಟರ್ ಏರ್ ರೈಫಲ್ ನಲ್ಲಿ ಗಗನ್ ನಾರಂಗ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದರು. ನಾರಂಗ್ ಇದೀಗ ಪ್ಯಾರಿಸ್ ತಂಡದ ಚೆಫ್ ಡಿ ಮಿಷನ್ ಆಗಿದ್ದಾರೆ.

ಇದು ಭಾರತಕ್ಕೆ ಅನಿವಾರ್ಯ ದೀರ್ಘಕಾಲದ ಪದಕವಾಗಿತ್ತು. ಸಾಧನೆಯ ಹಾದಿಯಲ್ಲಿ ನಾನು ಕೇವಲ ನೆಪವಷ್ಟೇ. ಭಾರತ ಇನ್ನೂ ಹೆಚ್ಚಿನ ಪದಕಗಳಿಗೆ ಅರ್ಹವಾಗಿದೆ. ನಾವು ಈ ಬಾರಿ ಸಾಧ್ಯವಾದಷ್ಟು ಪದಕಗಳನ್ನು ಗೆಲ್ಲಲು ಎದುರು ನೋಡುತ್ತಿದ್ದೇವೆ. ವೈಯಕ್ತಿಕವಾಗಿ ನನಗೆ ಈ ಭಾವನೆ ಅತಿವಾಸ್ತವಿಕವಾಗಿದೆ. ನಾನು ಸಾಕಷ್ಟು ಪ್ರಯತ್ನ ಮಾಡಿದ್ದೇನೆ. ಕೊನೆಯ ಶಾಟ್ ವರೆಗೂ ನಾನು ಎಲ್ಲಾ ಶಕ್ತಿಯೊಂದಿಗೆ ಹೋರಾಡುತ್ತಿದ್ದೆ ಎಂದು ಮನು ಹೇಳಿದ್ದಾರೆ.

10 ಮೀಟರ್ ಏರ್ ಪಿಸ್ತೂಲ್ ಫೈನಲ್​​ನ ಕೊನೇ ಕ್ಷಣದ ಹೋರಾಟದ ಬಗ್ಗೆ ಕೇಳಿದ್ದಕ್ಕೆ, . “ಪ್ರಾಮಾಣಿಕವಾಗಿ ನನಗೆ ನೆರವಾಗಿದ್ದು ಭಗವದ್ಗೀತೆ. ನಾನು ಬಹಳಷ್ಟು ಬಾರಿ ಓದಿದ್ದೇನೆ, ಆದ್ದರಿಂದ ನನ್ನ ಮನಸ್ಸಿನಲ್ಲಿ ಅದೇ ಇತ್ತು ‘ನೀವು ಏನನ್ನು ಮಾಡಬೇಕೋ ಅದನ್ನು ಮಾಡಿ, ಫಲವನ್ನು ನನಗೆ ಬಿಟ್ಟು ಬಿಡಿ ಎಂಬ ಸಾರ ನೆನಪಾಗುತ್ತಿತ್ತು. ವಿಧಿಯನ್ನು ನೀವು ನಿಯಂತ್ರಿಸಲು ಯಾರಿಂದಲೂ ಸಾಧ್ಯವಿಲ್ಲ. ಎಂಬುದು, ಇನ್ನು ಗೀತೆಯಲ್ಲಿ ಕೃಷ್ಣನು ಅರ್ಜುನನಿಗೆ ಹೇಳುವ “ನೀವು ಕರ್ಮದ ಮೇಲೆ ಗಮನವಿಡಿ. ಫಲಿತಾಂಶದ ಮೇಲೆ ಅಲ್ಲ, ಉವಾಚ ನನ್ನ ತಲೆಯಲ್ಲಿ ಓಡುತ್ತಿತ್ತು ಎಂದು ಮನು ಹೇಳಿದ್ದಾರೆ,

ಇದನ್ನೂ ಓದಿ: Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಟೋಕಿಯೊ ಒಲಿಂಪಿಕ್ಸ್​ನಲ್ಲಿ ನಾನು ತುಂಬಾ ನಿರಾಶೆಗೊಂಡಿದ್ದೆ. ಅದರಿಂದ ಚೇತರಿಸಿಕೊಳ್ಳಲು ಬಹಳ ಸಮಯ ಹಿಡಿಯಿತು. ಮುಗಿದು ಹೋಗಿದ್ದು ಹೋಯಿತು. ನಾವು ವರ್ತಮಾನದ ಮೇಲೆ ಕೇಂದ್ರೀಕರಿಸೋಣ. ಈ ಪದಕವು ಯಾವಾಗಲೂ ತಂಡದ ಕೆಲಸವಾಗಿದೆ. ನಾನು ಅದನ್ನು ಮಾಡಲು ಒಂದು ನೆಪವಾಗಿದ್ದೆ ಎಂದು ಅವರು ಹೇಳಿದ್ಧಾರೆ.

Continue Reading
Advertisement
Rajendra Nagar Tragedy
ವೈರಲ್ ನ್ಯೂಸ್57 seconds ago

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಅವಾಂತರ; ದುರಂತದಿಂದ ಪಾರಾದವರ Video ಇಲ್ಲಿದೆ

Health Tips
ಆರೋಗ್ಯ2 mins ago

Health Tips: ಗ್ಯಾಸ್ಟ್ರಿಕ್‌, ಅಜೀರ್ಣ ಸಮಸ್ಯೆಗೆ ನಿಮ್ಮ ಮನೆಯಲ್ಲೇ ಇದೆ ಪರಿಣಾಮಕಾರಿ ಮದ್ದು!

Road Accident jigani anekal
ಬೆಂಗಳೂರು ಗ್ರಾಮಾಂತರ14 mins ago

Road Accident: ಕುಡಿದ ಮತ್ತಿನಲ್ಲಿ ಕಾರು ಹರಿಸಿದ ಚಾಲಕ, ಒಬ್ಬನ ಸಾವು, ಇಬ್ಬರಿಗೆ ಗಾಯ

India Pakistan War
ದೇಶ25 mins ago

India Pakistan War: ಭಾರತಕ್ಕೆ ನುಗ್ಗಿದ ಪಾಕ್‌ನ 600 ಕಮಾಂಡೋಗಳು; ನಡೆಯುತ್ತಾ ಮತ್ತೊಂದು ಯುದ್ಧ?

ITR Filing
ಮನಿ-ಗೈಡ್32 mins ago

ITR Filing: ಐಟಿಆರ್ ಸಲ್ಲಿಕೆ; ಜುಲೈ 31ರ ಗಡುವು ತಪ್ಪಿಸಿಕೊಂಡರೆ ಎಷ್ಟು ದಂಡ?

peenya flyover
ಪ್ರಮುಖ ಸುದ್ದಿ36 mins ago

Peenya flyover: ಇಂದಿನಿಂದ ಪೀಣ್ಯ ಮೇಲ್ಸೇತುವೆ ಎಲ್ಲ ವಾಹನಗಳಿಗೆ ಮುಕ್ತ

bbmp lorry road accident
ಬೆಂಗಳೂರು58 mins ago

Road Accident: ಬೆಂಗಳೂರಿನಲ್ಲಿ ಕಸದ ಲಾರಿಯ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ

Lakshadweep Tour
Latest1 hour ago

Lakshadweep Tour: ಲಕ್ಷದ್ವೀಪದಲ್ಲಿ ಪ್ರವಾಸಿಗರನ್ನು ಸೆಳೆಯುವ ಪಂಚರತ್ನಗಳಿವು

Monsoon Healthy Cooking Tips
ಆರೋಗ್ಯ1 hour ago

Monsoon Healthy Cooking Tips: ಮಳೆಗಾಲದಲ್ಲಿ ಸೊಪ್ಪಿನ ಅಡುಗೆ ಮಾಡುವ ಮುನ್ನ ಈ ಎಚ್ಚರಿಕೆಗಳನ್ನು ವಹಿಸಿ

Vastu Tips
ಧಾರ್ಮಿಕ2 hours ago

Vastu Tips: ಈ ವಾಸ್ತು ನಿಯಮ ಪಾಲಿಸಿ; ಹಣಕಾಸಿನ ಸಮಸ್ಯೆಯಿಂದ ಪಾರಾಗಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ14 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ16 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ18 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ19 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌