Supreme Court | ಬಿಹಾರ ಜಾತಿಗಣತಿ ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ಜ.20ಕ್ಕೆ: ಸುಪ್ರೀಂ ಕೋರ್ಟ್ - Vistara News

ದೇಶ

Supreme Court | ಬಿಹಾರ ಜಾತಿಗಣತಿ ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ಜ.20ಕ್ಕೆ: ಸುಪ್ರೀಂ ಕೋರ್ಟ್

ಕಳೆದ ಶನಿವಾರದಿಂದ ಬಿಹಾರದಲ್ಲಿ ಜಾತಿಗಣತಿಯನ್ನು ರಾಜ್ಯ ಸರ್ಕಾರವು ಆರಂಭಿಸಿದೆ. ಬಿಜೆಪಿ ಸೇರಿ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ಈ ನಡೆಯನ್ನು ವಿರೋಧಿಸಿವೆ(Supreme Court).

VISTARANEWS.COM


on

Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬಿಹಾರ ಸರ್ಕಾರ ಆರಂಭಿಸಿರುವ ಜಾತಿ ಗಣತಿ ಪ್ರಶ್ನಿಸಿ ದಾಖಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಜನವರಿ 20ರಂದು ನಡೆಸಲಿದೆ.

ಬಿಹಾರ ಸರ್ಕಾರದ ಈ ಜಾತಿ ಗಣತಿಯನ್ನು ಪ್ರಶ್ನಿಸಿ ಕನಿಷ್ಠ ಅರ್ಜಿಗಳು ಸುಪ್ರೀಂ ಕೋರ್ಟ್ ಮುಂದಿವೆ. ಬಿಹಾರ ನಾಗರಿಕರೇ ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಿದ್ದಾರೆ. ಈ ರೀತಿಯ ಗಣತಿಯನ್ನು ಕೈಗೊಳ್ಳುವ ಯಾವುದೇ ಶಾಸನಾತ್ಮಕ ಅಥವಾ ಕಾರ್ಯಾಂಗದ ಅಧಿಕಾರಗಳು ರಾಜ್ಯ ಸರ್ಕಾರಕ್ಕಿಲ್ಲ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಜಾತಿ ಗಣತಿಯಿಂದ ಎಲ್ಲರಿಗೂ ಲಾಭ
ಭಾರೀ ಚರ್ಚೆಗೆ ಕಾರಣವಾಗಿದ್ದ ಜಾತಿ ಆಧರಿತ ಜನಗಣತಿಯನ್ನು ಬಿಹಾರ ಸರ್ಕಾರವು ಶನಿವಾರದಿಂದ ಆರಂಭಿಸಿದೆ(Bihar Caste Census). ಜಾತಿ ಗಣತಿಯಿಂದ ಬಿಹಾರದ ಎಲ್ಲ ವರ್ಗದ ಜನರಿಗೆ ಲಾಭವಾಗಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಹೇಳಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಲಾಭಗಳನ್ನು ದಾಟಿಸಲು ಅನುಕೂಲವಾಗಲೆಂದೇ ಈ ಜಾತಿಗಣತಿ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

”ಜಾತಿ ಗಣತಿಯಿಂದ ಎಲ್ಲರಿಗೂ ಅನುಕೂಲವಾಗಲಿದೆ. ಸೌಲಭ್ಯ ವಂಚಿತರು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗೆ ಸರ್ಕಾರ ಕೆಲಸ ಮಾಡಲು ಇದರಿಂದ ಸಾಧ್ಯವಾಗಲಿದೆ. ಗಣತಿ ಕಾರ್ಯ ಮುಗಿದ ಬಳಿಕ ಅಂತಿಮ ವರದಿ ಕೇಂದ್ರ ಸರ್ಕಾರಕ್ಕೂ ಕಳುಹಿಸಲಾಗುವುದು” ಎಂದು ಸಿಎಂ ನಿತೀಶ್ ಕುಮಾರ್ ಅವರು ಶೆಯೋಹರ್ ಜಿಲ್ಲೆಯಲ್ಲಿ ತಮ್ಮ ‘ಸಮಾಧಾನ ಯಾತ್ರೆ’ಯ ಎರಡನೇ ದಿನದಂದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಇದನ್ನೂ ಓದಿ | Bihar Caste Census | ಬಿಹಾರದಲ್ಲಿ ಜಾತಿ ಗಣತಿ ಆರಂಭ, ಇದರಿಂದ ಏನು ಲಾಭ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಲೋಕಸಭೆ ಫಲಿತಾಂಶದ ಪ್ರಕಾರ, ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ ವಿಧಾನಸಭೆ ಚುನಾವಣೆಯಲ್ಲಿ 142 ಸ್ಥಾನ!

Lok Sabha Election: ರಾಜ್ಯ ಸರ್ಕಾರದ 18 ಮಂತ್ರಿಗಳು ತಮ್ಮ ಸ್ವಂತ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಮುನ್ನಡೆ ಕೊಡಿಸಲು ವಿಫಲರಾಗಿದ್ದರು. ಇದು ಕಾಂಗ್ರೆಸ್​ ಪಾಲಿಗೆ ಕಟು ಸತ್ಯವಾಗಿದೆ. ಉದಾಹರಣೆಗೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಬಿಟಿಎಂ ಲೇಔಟ್ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಅವರಿಗೆ 9,000 ಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿತ್ತು.

VISTARANEWS.COM


on

Lok Sabha Election
Koo

ಬೆಂಗಳೂರು: ಈ ಕ್ಷಣದಲ್ಲೇ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದರೆ ಮತ್ತು ಲೋಕಸಭಾ ಚುನಾವಣೆಯಂತೆಯೇ (Lok Sabha Election ) ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರೆ, ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ 142 ಸ್ಥಾನಗಳನ್ನು ಗೆಲ್ಲಲಿದೆ. ಈ ಮೂಲಕ ಇದು ರಾಜ್ಯದಲ್ಲಿ ಕಾಂಗ್ರೆಸ್ 2023ರಲ್ಲಿ ಪಡೆದ ಭಾರಿ ಜನಾದೇಶ ಬುಡಮೇಲಾಗಲಿದೆ. ಡೆಕ್ಕಲ್​ ಹೆರಾಲ್ಡ್​ ಪತ್ರಿಕೆಯು ಈ ಬಗ್ಗೆ ವರದಿಯೊಂದನ್ನು ಮಾಡಿದ್ದು ಜೆಡಿಎಸ್​, ಬಿಜೆಪಿ ಮೈತ್ರಿಯಿಂದಾಗಿ ಕಾಂಗ್ರೆಸ್​ಗೆ ನಷ್ಟವಾಗಲಿದೆ ಎಂದು ವರದಿ ಮಾಡಿದೆ.

ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ವಿಭಿನ್ನವಾಗಿ ಮತ ಚಲಾಯಿಸುವ ಸುದೀರ್ಘ ಇತಿಹಾಸವನ್ನು ಕರ್ನಾಟಕದ ಮತದಾರರು ಹೊಂದಿದ್ದಾರೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರು 28 ಸ್ಥಾನಗಳ ಪೈಕಿ ಬಿಜೆಪಿಗೆ 17 ಸೀಟ್ ಕೊಟ್ಟಿದ್ದಾರೆ. ಜೆಡಿಎಸ್ ಸ್ಪರ್ಧಿಸಿರುವ 3ರಲ್ಲಿ 2 ಮತ್ತು ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದ್ದುಕೊಂಡಿದೆ. 2019ರಲ್ಲಿ ಕೇವಲ ಒಂದು ಸ್ಥಾನ ಗೆದ್ದಿದ್ದ ಕಾಂಗ್ರೆಸ್ 14ರಿಂ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ, ಅದು ಕೆಲಸ ಮಾಡಿಲ್ಲ.

ರಾಜ್ಯ ಸರ್ಕಾರದ 18 ಮಂತ್ರಿಗಳು ತಮ್ಮ ಸ್ವಂತ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಮುನ್ನಡೆ ಕೊಡಿಸಲು ವಿಫಲರಾಗಿದ್ದರು. ಇದು ಕಾಂಗ್ರೆಸ್​ ಪಾಲಿಗೆ ಕಟು ಸತ್ಯವಾಗಿದೆ. ಉದಾಹರಣೆಗೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಬಿಟಿಎಂ ಲೇಔಟ್ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಅವರಿಗೆ 9,000 ಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿತ್ತು. ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅವರ ಪುತ್ರ ಮೃಣಾಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ ಅಲ್ಲಿ ಬಿಜೆಪಿ 50,000 ಮತಗಳ ಮುನ್ನಡೆ ಸಾಧಿಸಿದೆ.

ಮೈತ್ರಿ ಯಶಸ್ಸು

ಚುನಾವಣಾ ಬಳಿಕದ ಅಂಕಿ ಅಂಶಗಳ ಪ್ರಕಾರ, ಬಿಜೆಪಿ-ಜೆಡಿಎಸ್ ಮೈತ್ರಿ ಕೆಲಸ ಮಾಡಿದೆ. ಏಕೆಂದರೆ ಎರಡೂ ಪಕ್ಷಗಳು ಪರಸ್ಪರ ತಮ್ಮ ಮತಗಳನ್ನು ಹಂಚಿಕೊಳ್ಳುವಲ್ಲಿ ಯಶಸ್ವಿಯಾಗಿವೆ. ಇದು ಸಂಭವಿಸುವುದಿಲ್ಲ ಎಂದು ಕಾಂಗ್ರೆಸ್ ಭಾವಿಸಿತ್ತು. ಅವರ ನಿರೀಕ್ಷೆ ಸುಳ್ಳಾಗಿದೆ. ತುಮಕೂರು ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿಲ್ಲ ಎಂಬುದೇ ಇದಕ್ಕೆ ಸಾಕ್ಷಿ. ಅದೇ ರೀತಿ ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕೊಂಚವೂ ಮುನ್ನಡೆ ಸಿಕ್ಕಿಲ್ಲ.

ಇದನ್ನೂ ಓದಿ: Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

ವ್ಯತರಿಕ್ತ ಫಲಿತಾಂಶ

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು. ಬೀದರ್, ರಾಯಚೂರು ಮತ್ತು ಬಳ್ಳಾರಿಯಲ್ಲಿ ಇದು ಬಹುತೇಕ ಮೇಲುಗೈ ಸಾಧಿಸಿದೆ.
ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವ್ ಮತ್ತು ಫೈರ್ ಬ್ರಾಂಡ್ ಹಿಂದುತ್ವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಜಾಪುರ ನಗರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ವಿಶೇಷ.

ಒಂದು ವಿಧಾನಸಭಾ ಕ್ಷೇತ್ರದಲ್ಲಿ ಸಿಗುವ ಗಣನೀಯ ಮುನ್ನಡೆ ಇಡೀ ಫಲಿತಾಂಶವನ್ನು ಹೇಗೆ ತಿರುಗಿಸುತ್ತದೆ ಎಂಬುದಕ್ಕೂ ಉದಾಹರಣೆಯಿದೆ. ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್ ಅವರು ಮಹದೇವಪುರ ಕ್ಷೇತ್ರ ಒಂದರಲ್ಲಿಯೇ 1.14 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದರು. ಇದು ಫಲಿತಾಂಶವನ್ನೇ ಬದಲಾಯಿಸಿ ಗೆಲುವು ತಂದುಕೊಟ್ಟಿತು. ಮಹದೇವಪುರದ ಮತದಾರರ ಸಂಖ್ಯೆ 3 ವಿಧಾನಸಭಾ ಕ್ಷೇತ್ರಗಳಿಗೆ ಸಮನಾಗಿದೆ. ರಾಜಾಜಿನಗರ ಮತ್ತು ಇತರ ಸ್ಥಳಗಳಲ್ಲಿ ನನಗೆ ದೊರೆತ ಮುನ್ನಡೆ ಇಲ್ಲದಿದ್ದರೆ, ಮಹದೇವಪುರ ಮಾತ್ರ ಸಾಕಾಗುತ್ತಿರಲಿಲ್ಲ ಎಂದು ಮೋಹನ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆಯನ್ನು ಪಕ್ಷ ರಾಜಕೀಯಗೊಳಿಸದಿದ್ದರೆ ಬಿಜೆಪಿಗೆ ಇಷ್ಟೊಂದು ಸೀಟು ಸಿಗುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದರು. ಯಾಕೆಂದರೆ 2019ಕ್ಕೆ ಹೋಲಿಸಿದರೆ ಕಾಂಗ್ರೆಸ್ ಮತ ಹಂಚಿಕೆ ಶೇ.13ರಷ್ಟು ಹೆಚ್ಚಾಗಿದೆ ಎಂದು ಅಂಕಿ ಅಂಶಗಳ ಮೂಲ ಗೊತ್ತಾಗಿದೆ.

Continue Reading

Lok Sabha Election 2024

INDIA Bloc: 6 ಸಂಸದರನ್ನು ಕಳೆದುಕೊಳ್ಳುವ ಭೀತಿಯಲ್ಲಿ ಇಂಡಿ ಒಕ್ಕೂಟ; ಕಾರಣವೇನು?

INDIA Bloc: ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 43 ಕಡೆ ಜಯ ಗಳಿಸಿದ ಇಂಡಿ ಒಕ್ಕೂಟಕ್ಕೆ ಬಹು ದೊಡ್ಡ ಆಘಾತ ಎದುರಾಗಿದೆ. ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ಸಂಸದರಿಗೆ ಶಿಕ್ಷೆ ಪ್ರಕಟವಾದರೆ ಅವರು ತಮ್ಮ ಸ್ಥಾನದಿಂದ ಅನರ್ಹರಾಗುವ ಭೀತಿ ಇದೆ. ಈ ರೀತಿ ಅನರ್ಹತೆ ಎದುರಾಗುವ ಭೀತಿಯಲ್ಲಿ ಎಸ್‌ಪಿಯ ಐವರು ಮತ್ತು ಕಾಂಗ್ರೆಸ್‌ ಓರ್ವ ಸಂಸದ ಇದ್ದಾರೆ.

VISTARANEWS.COM


on

INDIA Bloc
Koo

ಲಕ್ನೋ: ಲೋಕಸಭಾ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶ ಪ್ರಕಟಗೊಂಡು ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ (Narendra Modi) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ ಪ್ರತಿಪಕ್ಷಗಳ ಇಂಡಿ ಒಕ್ಕೂಟ (INDIA bloc)ದ ಸುಮಾರು 6 ಸಂಸದರು ತಮ್ಮ ಹುದ್ದೆಯನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಇದರಲ್ಲಿ ಎಸ್‌ಪಿಯ ಐವರು ಮತ್ತು ಕಾಂಗ್ರೆಸ್‌ನ ಓರ್ವ ಸಂಸದ ಇದ್ದಾರೆ.

ಉತ್ತರ ಪ್ರದೇಶದಿಂದ ಆಯ್ಕೆಯಾದ ಈ 6 ಸಂಸದರ ವಿರುದ್ಧ ಪ್ರಕರಣಗಳು ದಾಖಲಾಗಿದೆ. ಇದರಲ್ಲಿ ಕನಿಷ್ಠ ಪಕ್ಷ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಿವೆ. ಹೀಗಾದಲ್ಲಿ ಅವರ ಸಂಸತ್‌ ಸದಸ್ಯ ಸ್ಥಾನ ನಷ್ಟವಾಗಲಿದ್ದು, ಉಪ ಚುನಾವಣೆ ನಡೆಸಬೇಕಾಗುತ್ತದೆ.

ಅಫ್ಜಲ್ ಅನ್ಸಾರಿ

ಉತ್ತರ ಪ್ರದೇಶದ ಘಾಝಿಪುರ ಕ್ಷೇತ್ರದಿಂದ ಗೆದ್ದಿರುವ ಸಮಾಜವಾದಿ ಪಾರ್ಟಿ (SP)ಯ ಅಫ್ಜಲ್ ಅನ್ಸಾರಿ ಈಗಾಗಲೇ ಗ್ಯಾಂಗ್‌ಸ್ಟರ್ ಕಾಯ್ದೆ (Gangster Act)ಯಡಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಕಳೆದ ತಿಂಗಳು ಅಲಹಾಬಾದ್ ಹೈಕೋರ್ಟ್ ಅವರ ಶಿಕ್ಷೆಯನ್ನು ತಡೆಹಿಡಿದಿತ್ತು. ಹೀಗಾಗಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಜುಲೈಯಲ್ಲಿ ಮತ್ತೆ ಈ ಪ್ರಕರಣದ ವಿಚಾರಣೆ ನಡೆಯಲಿದೆ. ನ್ಯಾಯಾಲಯವು ಅಂತಿಮವಾಗಿ ಶಿಕ್ಷೆಯನ್ನು ಎತ್ತಿ ಹಿಡಿದರೆ, ಅನ್ಸಾರಿ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆ.

ಧರ್ಮೇಂದ್ರ ಯಾದವ್

ಸಂಸದ ಸ್ಥಾನ ಕಳೆದುಕೊಳ್ಳಲಿರುವ ಭೀತಿ ಎದುರಿಸುತ್ತಿರುವ ಇನ್ನೊಬ್ಬ ನಾಯಕ ಎಸ್‌ಪಿಯ ಧರ್ಮೇಂದ್ರ ಯಾದವ್. ಅವರು ಈ ಚುನಾವಣೆಯಲ್ಲಿ ಅಜಂಗಢ ಕ್ಷೇತ್ರದಲ್ಲಿ ಜಯ ಗಳಿಸಿದ್ದಾರೆ. ಧರ್ಮೇಂದ್ರ ಯಾದವ್ ವಿರುದ್ಧ ನಾಲ್ಕು ಪ್ರಕರಣಗಳು ಬಾಕಿ ಉಳಿದಿವೆ ಮತ್ತು ಆ ಪೈಕಿ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಶಿಕ್ಷೆಗೊಳಗಾದರೆ ಸಂಸದ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ.

ಬಾಬು ಸಿಂಗ್ ಕುಶ್ವಾಹ

ರಾಜಕೀಯದ 10 ವರ್ಷಗಳ ವನವಾಸವನ್ನು ಕೊನೆಗೊಳಿಸಿ ಜಾನ್ಪುರ ಸ್ಥಾನವನ್ನು ಗೆದ್ದ ಎಸ್‌ಪಿಯ ಬಾಬು ಸಿಂಗ್ ಕುಶ್ವಾಹ ಅವರು ಮಾಯಾವತಿ ಆಡಳಿತದಲ್ಲಿ ನಡೆದ ಎನ್ಆರ್‌ಎಚ್‌ಎಂ (NRHM) ಹಗರಣಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರ ವಿರುದ್ಧ ಬರೋಬ್ಬರಿ 25 ಪ್ರಕರಣಗಳಲ್ಲಿ ದಾಖಲಾಗಿದೆ.

ರಾಮ್ಬುವಾಲ್‌ ನಿಷಾದ್

ಬಿಜೆಪಿಯ ಮೇನಕಾ ಗಾಂಧಿ ಅವರನ್ನು ಸೋಲಿಸುವ ಮೂಲಕ ಸುಲ್ತಾನ್ಪುರ ಕ್ಷೇತ್ರದಲ್ಲಿ ಗೆದ್ದ ಎಸ್‌ಪಿಯ ರಾಮ್ಬುವಾಲ್‌ ನಿಷಾದ್ ವಿರುದ್ಧ ಗ್ಯಾಂಗ್‌ಸ್ಟರ್‌ ಕಾಯ್ದೆಯಡಿ ಒಂದು ಸೇರಿದಂತೆ ಎಂಟು ಪ್ರಕರಣಗಳು ದಾಖಲಾಗಿವೆ.

ವೀರೇಂದ್ರ ಸಿಂಗ್

ಚಂದೌಲಿ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಮಹೇಂದ್ರ ನಾಥ್ ಪಾಂಡೆ ಅವರನ್ನು ಸೋಲಿಸಿದ ವೀರೇಂದ್ರ ಸಿಂಗ್ ಅವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಮತ್ತೊಬ್ಬ ಎಸ್‌ಪಿ ಸಂಸದ. ಇವರು ಕೂಡ ಗಂಭೀರ ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಇಮ್ರಾನ್ ಮಸೂದ್

ಸಹರಾನ್ಪುರ ಕ್ಷೇತ್ರದಲ್ಲಿ ಗೆದ್ದ ಕಾಂಗ್ರೆಸ್‌ನ ಇಮ್ರಾನ್ ಮಸೂದ್ ವಿರುದ್ಧ ಎಂಟು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಜಾರಿ ನಿರ್ದೇಶನಾಲಯದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಒಂದು ಪ್ರಕರಣವೂ ಸೇರಿದೆ.

ಇದನ್ನೂ ಓದಿ: Lok Sabha Election 2024: ಈ ಬಾರಿ 74 ಮಹಿಳಾ ಸಂಸದರು, ಯಾವ ಪಕ್ಷದಲ್ಲಿ ಎಷ್ಟು ಮಂದಿ?

ಇಂಡಿ ಒಕ್ಕೂಟದ ಭಾಗವಾಗಿರುವ ಎಸ್‌ಪಿ ಮತ್ತು ಕಾಂಗ್ರೆಸ್‌ ಈ ಬಾರಿಯ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 80 ಕ್ಷೇತ್ರಗಳ ಪೈಕಿ 43 ಕಡೆ ಜಯ ಗಳಿಸಿದೆ. ಈ ಪೈಕಿ 6 ಸಂಸದರನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ.

Continue Reading

ಪ್ರಮುಖ ಸುದ್ದಿ

Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Terrorist Attack :ಕಳೆದ ಎರಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ ಪ್ರಕರಣ ಇದಾಗಿದೆ. ಮೊದಲಿಗೆ ರಿಯಾಸಿಯಲ್ಲಿ ಹಿಂದೂ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆದು ಒಂಬತ್ತು ಪ್ರಯಾಣಿಕರು ಸಾವನ್ನಪ್ಪಿದ್ದರೆ, ಮಂಗಳವಾರ ರಾತ್ರಿ ಎರಡು ಕಡೆ ದಾಳಿಯಾಗಿದೆ.

VISTARANEWS.COM


on

Terroris Attack
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಪಾಕ್​ ಬೆಂಬಲಿತ ಉಗ್ರರ ಅಟ್ಟಹಾಸ (Terrorist Attack 🙂 ಜೋರಾಗಿದೆ. ಮಂಗಳವಾರ ರಾತ್ರಿ ಇಲ್ಲಿ ದೋಡಾದಲ್ಲಿ ಸೇನಾ ನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಘಟನೆಯಲ್ಲಿ ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (ಎಸ್ಪಿಒ) ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಅದಕ್ಕಿಂತ ಮೊದಲು ಕಥುವಾದಲ್ಲಿ ಭಯೋತ್ಪಾದಕರು ಹಾರಿಸಿದ ಗುಂಡಿಗೆ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಇಲ್ಲಿ ಸಿಆರ್​ಪಿಎಫ್​ ಪೇದೆ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ ಪ್ರಕರಣ ಇದಾಗಿದೆ. ಮೊದಲಿಗೆ ರಿಯಾಸಿಯಲ್ಲಿ ಹಿಂದೂ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆದು ಒಂಬತ್ತು ಪ್ರಯಾಣಿಕರು ಸಾವನ್ನಪ್ಪಿದ್ದರೆ, ಮಂಗಳವಾರ ರಾತ್ರಿ ಎರಡು ಕಡೆ ದಾಳಿಯಾಗಿದೆ.

ಕಳೆದ ರಾತ್ರಿ ಕಥುವಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್​ಪಿಎಫ್) ಗೆ ಸೇರಿದ ಜವಾನರೊಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಭಯೋತ್ಪಾದಕನನ್ನು ಸಹ ಹೊಡೆದುರುಳಿಸಲಾಗಿದೆ ಎನ್ನಲಾಗಿದೆ. ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಅವರು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ದೋಡಾ ಘಟನೆಯ ಬಗ್ಗೆ ಮಾತನಾಡಿದ ಅವರು, ಕಳೆದ ರಾತ್ರಿ ಚಟ್ಟರ್ಗಲಾ ಪ್ರದೇಶದ ಸೇನಾ ನೆಲೆಯಲ್ಲಿ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್ ತಂಡದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ, ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಚಕಮಕಿ ನಡೆಯುತ್ತಿದೆ ಎಂದು ಅವರು ಹೇಳಿದರು. ಈ ಬಾರಿ ದಾಳಿ ನಡೆಯುತ್ತಿರು ಪ್ರದೇಶ ಭಯೋತ್ಪಾದನಾ ದಾಳಿಯಿಂದ ಮುಕ್ತ ಪ್ರದೇಶ ಎನ್ನಲಾಗಿದೆ.

ಇಬ್ಬರು ಭಯೋತ್ಪಾಕರು ಭಾಗಿ

ನಿನ್ನೆ ಸಂಜೆ ಕಥುವಾ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಭಾಗಿಯಾಗಿದ್ದಾರೆ. ಅವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಥುವಾದ ಹಿರಾನಗರ್ ಪ್ರದೇಶದಲ್ಲಿ ಉಗ್ರರನ್ನು ಬೇಟೆಯಾಡಲು ಭದ್ರತಾ ಪಡೆಗಳು ಈಗ ಡ್ರೋನ್​ಗಳನ್ನು ಬಳಸುತ್ತಿವೆ.

ಭಯೋತ್ಪಾದಕರು ಹಲವಾರು ಮನೆಗಳಿಂದ ನೀರು ಕೇಳಿದ್ದರು. ಇದು ಗ್ರಾಮಸ್ಥರ ಅನುಮಾನಗಳನ್ನು ಹೆಚ್ಚಿಸಿತು ಮತ್ತು ಕೆಲವು ಗ್ರಾಮಸ್ಥರು ಎಚ್ಚರಿಕೆ ನೀಡಿದಾಗ ಗುಂಡು ಹಾರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ ಜೈನ್, ಕಥುವಾ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದರು.

ಇದನ್ನೂ ಓದಿ: Bird Flu: ದೇಶದಲ್ಲಿ ಎರಡನೇ ಹಕ್ಕಿ ಜ್ವರದ ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

“ಅನೇಕ ಜನರು ಗಾಯಗೊಂಡಿದ್ದಾರೆ ಮತ್ತು ಮೂವರು ಸಾವನ್ನಪ್ಪಿದ್ದಾರೆ ಎಂಬ ವದಂತಿಗಳಿವೆ. ಆದರೆ ಒಬ್ಬ ನಾಗರಿಕ ಮಾತ್ರ ಗಾಯಗೊಂಡಿದ್ದಾನೆ, ಇದನ್ನು ಹೊರತುಪಡಿಸಿ ಒತ್ತೆಯಾಳುಗಳನ್ನು ಬಂಧಿಸಿಡಲಾಗಿದೆ ಮತ್ತು ಸಾವಿನ ಬಗ್ಗೆ ಎಲ್ಲಾ ಮಾಹಿತಿಗಳು ವದಂತಿಗಳಾಗಿವೆ” ಎಂದು ಅವರು ಹೇಳಿದರು.

ಕಥುವಾ ದಾಳಿಯನ್ನು “ಹೊಸ ಒಳನುಸುಳುವಿಕೆ” ಎಂದು ಕರೆದ ಅವರು, ಪಾಕಿಸ್ತಾನದತ್ತ ಬೊಟ್ಟು ಮಾಡಿದರು.

ನಮ್ಮ ನೆರೆಹೊರೆಯವರು ಯಾವಾಗಲೂ ನಮ್ಮ ದೇಶದ ಶಾಂತಿಯುತ ವಾತಾವರಣವನ್ನು ಹಾನಿಗೊಳಿಸಲು ಪ್ರಯತ್ನಿಸುತ್ತಾರೆ. ಇದು (ಹಿರಾನಗರ್ ಭಯೋತ್ಪಾದಕ ದಾಳಿ) ಹೊಸ ಒಳನುಸುಳುವಿಕೆಯಂತೆ ತೋರುತ್ತದೆ ಎಂದು ಅವರು ಹೇಳಿದರು.

ಎರಡು ದಿನಗಳ ಹಿಂದೆ ರಿಯಾಸಿಯಲ್ಲಿ ಶಿವ ಖೋರಿ ಗುಹಾ ದೇವಾಲಯಕ್ಕೆ ತೆರಳುತ್ತಿದ್ದ ಬಸ್ ಮೇಲೆ ದಾಳಿ ನಡೆದಿತ್ತು. ಬಸ್ ಚಾಲಕ ಪ್ರಯಾಣಿಕರನ್ನು ಇಳಿಸಲು ನಿರಾಕರಿಸಿದ ನಂತರ ಭಯೋತ್ಪಾದಕರು ಗುಂಡು ಹಾರಿಸಿದರು, ಆದರೆ ನಿಯಂತ್ರಣ ಕಳೆದುಕೊಂಡು ಕಮರಿಗೆ ಬಿದ್ದರು ಎಂದು ಬಸ್ ಕಂಪನಿಯ ವ್ಯವಸ್ಥಾಪಕರು ತಿಳಿಸಿದ್ದಾರೆ. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಬು ಹಮ್ಜಾ ನಿರ್ದೇಶನದ ಮೇರೆಗೆ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ಆರೋಗ್ಯ

Bird Flu: ದೇಶದಲ್ಲಿ ಎರಡನೇ ಹಕ್ಕಿ ಜ್ವರದ ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

Bird Flu: ದೇಶದಲ್ಲಿ H9N2 ವೈರಸ್‌ ಸೋಂಕಿನಿಂದ ಹರಡುವ ಹಕ್ಕಿ ಜ್ವರ (Bird Flu)ದ ಎರಡನೇ ಪ್ರಕರಣ ಕಾಣಿಸಿಕೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (World Health Organization – WHO) ಮಂಗಳವಾರ ಮಾಹಿತಿ ನೀಡಿದೆ. ಪಶ್ಚಿಮ ಬಂಗಾಳದ ನಾಲ್ಕು ವರ್ಷದ ಮಗುವಿಗೆ H9N2 ವೈರಸ್‌ ಸೋಂಕಿನಿಂದ ಹಕ್ಕಿಜ್ವರ ಕಾಣಿಸಿಕೊಂಡಿದೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.

VISTARANEWS.COM


on

Bird Flu
Koo

ನವದೆಹಲಿ: ದೇಶದಲ್ಲಿ H9N2 ವೈರಸ್‌ ಸೋಂಕಿನಿಂದ ಹರಡುವ ಹಕ್ಕಿ ಜ್ವರ (Bird Flu)ದ ಎರಡನೇ ಪ್ರಕರಣ ಕಾಣಿಸಿಕೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (World Health Organization – WHO) ಮಂಗಳವಾರ ಮಾಹಿತಿ ನೀಡಿದೆ. ಪಶ್ಚಿಮ ಬಂಗಾಳದ ನಾಲ್ಕು ವರ್ಷದ ಮಗುವಿಗೆ H9N2 ವೈರಸ್‌ ಸೋಂಕಿನಿಂದ ಹಕ್ಕಿಜ್ವರ ಕಾಣಿಸಿಕೊಂಡಿದೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.

ತೀವ್ರ ಉಸಿರಾಟದ ತೊಂದರೆಗಳು, ಹೆಚ್ಚಿನ ಜ್ವರ ಮತ್ತು ಕಿಬ್ಬೊಟ್ಟೆಯ ಸೆಳೆತದಿಂದಾಗಿ ಮಗುವನ್ನು ಫೆಬ್ರವರಿಯಲ್ಲಿ ಸ್ಥಳೀಯ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿತ್ತು. ಇದೀಗ ಮೂರು ತಿಂಗಳ ನಂತರ ಮಗುವನ್ನು ಡಿಸ್‌ಚಾರ್ಜ್‌ ಮಾಡಲಾಗಿದೆ ಎಂದು ಹೇಳಿದೆ.

ಮಗು ತನ್ನ ಮನೆಯಲ್ಲಿದ್ದ ಕೋಳಿಗಳೊಂದಿಗೆ ಒಡನಾಟ ಹೊಂದಿತ್ತು. ಅದಾಗ್ಯೂ ಹಕ್ಕಿಜ್ವರ ಲಕ್ಷಣಗಳಿರುವ ಬೇರೆ ಪ್ರಕರಣ ಯಾವುದೂ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಇದು ಭಾರತದಿಂದ ವರದಿಯಾದ ಎರಡನೇ H9N2 ವೈರಸ್‌ ಸೋಂಕಿನ ಪ್ರಕರಣವಾಗಿದ್ದು, 2019ರಲ್ಲಿ ಮೊದಲನೆಯ ಪ್ರಕರಣ ಕಂಡು ಬಂದಿತ್ತು. H9N2 ವೈರಸ್ ಸಾಮಾನ್ಯವಾಗಿ ಕಡಿಮೆ ಪ್ರಮಾಣದ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಆದರೆ ನಿರ್ಲಕ್ಷ್ಯ ಮಾಡುವುದು ಸಲ್ಲ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಾರೆ.

ಆತಂಕ ಸೃಷ್ಟಿಸಿದ ಚೀನಾ

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಚೀನಾದಲ್ಲಿ ಎಚ್‌9ಎನ್‌2 (ಏವಿಯನ್ ಇನ್ಫ್ಲುಯೆನ್ಸ ವೈರಸ್-ಹಕ್ಕಿ ಜ್ವರದ ವೈರಾಣು) ಪ್ರಕರಣಗಳಲ್ಲಿ ದಿಢೀರ್‌ ಏರಿಕೆ ಕಂಡುಬಂದು ಆತಂಕ ಸೃಷ್ಟಿಯಾಗಿತ್ತು. ಚೀನಾದಲ್ಲಿ ಮಾನವರಲ್ಲಿ ಎಚ್‌9ಎನ್‌2 ಪತ್ತೆಯಾದ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಹಕ್ಕಿ ಜ್ವರದ ವಿರುದ್ಧ ಸನ್ನದ್ಧತಾ ಕ್ರಮಗಳ ಬಗ್ಗೆ ಚರ್ಚಿಸಲು ʻಡಿಜಿಎಚ್ಎಸ್ʼ ಅಧ್ಯಕ್ಷತೆಯಲ್ಲಿ ಸಭೆ ನಡೆಸಿತ್ತು. ಭಾರತದಲ್ಲಿಯೂ ಸೋಂಕು ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು.

ಇದನ್ನೂ ಓದಿ: Health Update: ಮಕ್ಕಳಲ್ಲಿ ಹೆಚ್ಚುತ್ತಿದೆ ಜ್ವರ ಬಾಧೆ; ಮುನ್ನೆಚ್ಚರಿಕೆ ಇರಲಿ, ಆತಂಕ ಬೇಡ

ಅಪಾಯಕಾರಿ ಎಚ್5ಎನ್1 ಹಕ್ಕಿ ಜ್ವರ

ಇನ್ನು ಕೆಲವು ದಿನಗಳ ಹಿಂದೆ ಕೋವಿಡ್ ಸಾಂಕ್ರಾಮಿಕಕ್ಕಿಂತ ಅಪಾಯಕಾರಿಯಾಗಿರುವ ಎಚ್5ಎನ್1 ಹಕ್ಕಿ ಜ್ವರದ (H5N1 bird flu) ಕುರಿತು ಪಿಟ್ಸ್‌ಬರ್ಗ್‌ನ ಸಂಶೋಧಕರು ಎಚ್ಚರಿಕೆ ನೀಡಿದ್ದರು. ಆರೋಗ್ಯ ತಜ್ಞರು ಕೋವಿಡ್ ಸಾಂಕ್ರಾಮಿಕ ರೋಗಕ್ಕಿಂತ 100 ಪಟ್ಟು ವೇಗವಾಗಿ ಎಚ್5ಎನ್1 ಹಕ್ಕಿ ಜ್ವರದ ಹರಡುವ ಅಪಾಯವಿದೆ ಎಂದು ಹೇಳಿದ್ದು, ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಹಕ್ಕಿಜ್ವರ ಸಾಂಕ್ರಾಮಿಕ ರೋಗವು ವೇಗವಾಗಿ ಹರಡಲಿದ್ದು, ಹೆಚ್ಚಿನ ಸಾವು, ನೋವಿಗೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದರು. ಇದು ಜಾಗತಿಕವಾಗಿ ಮತ್ತೊಂದು ಸಾಂಕ್ರಾಮಿಕದ ಅಪಾಯವನ್ನು ಉಂಟು ಮಾಡುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಪಿಟ್ಸ್‌ಬರ್ಗ್‌ನ ಪ್ರಮುಖ ಪಕ್ಷಿ ಜ್ವರ ಸಂಶೋಧಕ ಡಾ. ಸುರೇಶ್ ಕೂಚಿಪುಡಿ, ʼʼಬ್ರೀಫಿಂಗ್‌ನಲ್ಲಿ ಎಚ್5ಎನ್1 ಪಕ್ಷಿ ಜ್ವರವು ಮಾನವ ಸೇರಿದಂತೆ ವಿವಿಧ ಜಾತಿಯ ಪ್ರಾಣಿಗಳಿಗೂ ಸೋಂಕು ತಗುಲಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ವೇಗವಾಗಿ ಈ ಸೋಂಕು ಸಾಂಕ್ರಾಮಿಕ ರೋಗವಾಗುವ ಅಪಾಯವಿದೆ. ಹೀಗಾಗಿ ಶೀಘ್ರದಲ್ಲೇ ವಿಶ್ವಕ್ಕೆ ಮತ್ತೊಂದು ಸಾಂಕ್ರಾಮಿಕ ರೋಗವನ್ನು ಹರಡಲು ಈ ವೈರಸ್‌ ಕಾರಣವಾಗಬಹುದುʼʼ ಎಂದು ಹೇಳಿದ್ದರು.

Continue Reading
Advertisement
Vinod Raj admitted hospital
ಸ್ಯಾಂಡಲ್ ವುಡ್2 mins ago

Vinod Raj: ಲೀಲಮ್ಮನ ಮಗ, ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲು

Lok Sabha Election
ಪ್ರಮುಖ ಸುದ್ದಿ10 mins ago

Lok Sabha Election : ಲೋಕಸಭೆ ಫಲಿತಾಂಶದ ಪ್ರಕಾರ, ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ ವಿಧಾನಸಭೆ ಚುನಾವಣೆಯಲ್ಲಿ 142 ಸ್ಥಾನ!

Actor Darshan arrest what about his future project
ಸ್ಯಾಂಡಲ್ ವುಡ್23 mins ago

Actor Darshan: ʻಡೆವಿಲ್‌ʼಗೆ ಜೈಲು ಗ್ಯಾರಂಟಿ ಆದ್ರೆ ಮುಂದಿನ ಸಿನಿಮಾಗಳ ಗತಿಯೇನು? ನಿರ್ಮಾಪಕರಿಗೆ ನಡುಕ!

INDIA Bloc
Lok Sabha Election 202442 mins ago

INDIA Bloc: 6 ಸಂಸದರನ್ನು ಕಳೆದುಕೊಳ್ಳುವ ಭೀತಿಯಲ್ಲಿ ಇಂಡಿ ಒಕ್ಕೂಟ; ಕಾರಣವೇನು?

Actor Darshan a Want To Escape From This Case
ಸ್ಯಾಂಡಲ್ ವುಡ್53 mins ago

Actor Darshan: ಕೊಲೆ ಕೇಸ್‌ನಿಂದ ಎಸ್ಕೇಪ್‌ ಆಗಲು 30 ಲಕ್ಷ ರೂ. ಕೊಟ್ಟಿದ್ದ ʻಡೆವಿಲ್‌ʼ? ಆದರೆ ಫ್ಲ್ಯಾನ್‌ ಆಗಿದ್ದು ಮಾತ್ರ ಉಲ್ಟಾ!

Terroris Attack
ಪ್ರಮುಖ ಸುದ್ದಿ1 hour ago

Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Actor Darshan Murder accusations Chetan Kumar Ahimsa react
ಸಿನಿಮಾ1 hour ago

Actor Darshan: ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು; ಚೇತನ್‌ ಅಹಿಂಸಾ!

Bird Flu
ಆರೋಗ್ಯ2 hours ago

Bird Flu: ದೇಶದಲ್ಲಿ ಎರಡನೇ ಹಕ್ಕಿ ಜ್ವರದ ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

Actor Darshan 10 Biryani For Sent To Police Custody
ಸ್ಯಾಂಡಲ್ ವುಡ್2 hours ago

Actor Darshan: ಆರೋಪಿ ದರ್ಶನ್​ಗೆ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ತರಿಸಿದ್ದ ಪೊಲೀಸರು!

Chikkaballapur News
ಪ್ರಮುಖ ಸುದ್ದಿ2 hours ago

Chikkaballapur News : ಒಂದೇ ಗ್ರಾಮದಲ್ಲಿ ನಾಲ್ವರ ಸರಣಿ ಸಾವು ; ಸ್ಥಳೀಯರಲ್ಲಿ ಆತಂಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ19 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ21 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ22 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌