Infosys | 3ನೇ ತ್ರೈಮಾಸಿಕದಲ್ಲಿ 6000 ಫ್ರೆಶರ್ಸ್ ನೇಮಕ ಮಾಡಿಕೊಂಡ ಇನ್ಫೋಸಿಸ್! - Vistara News

ದೇಶ

Infosys | 3ನೇ ತ್ರೈಮಾಸಿಕದಲ್ಲಿ 6000 ಫ್ರೆಶರ್ಸ್ ನೇಮಕ ಮಾಡಿಕೊಂಡ ಇನ್ಫೋಸಿಸ್!

ಆರ್ಥಿಕ ಹಿಂಜರಿತ ಕಾರಣಕ್ಕೆ ಬಹುತೇಕ ಕಂಪನಿಗಳು ಉದ್ಯೋಗಗಳನ್ನು ಕಡಿತ ಮಾಡುತ್ತಿದ್ದರೆ, ಇನ್ಫೋಸಿಸ್ (Infosys) 50 ಸಾವಿರ ಫ್ರೆಶರ್ಸ್ ನೇಮಕ ಮಾಡಿಕೊಳ್ಳುವ ಯೋಜನೆ ಹಾಕಿಕೊಂಡಿದೆ.

VISTARANEWS.COM


on

infosys
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2022-23ನೇ ಸಾಲಿನಲ್ಲಿ ಇನ್ಫೋಸಿಸ್ (Infosys) ಸುಮಾರು 6 ಸಾವಿರ ಫ್ರೆಶರ್ಸ್ ನೇಮಕ ಮಾಡಿಕೊಂಡಿದೆ. ವಿತ್ತ ಆರ್ಥಿಕ ವರ್ಷದ ಅಂತ್ಯಕ್ಕೆ ಈ ಪ್ರಮಾಣವು 50 ಸಾವಿರವರೆಗೂ ತಲುಪಲಿದೆ ಎಂದು ಹೇಳಲಾಗುತ್ತಿದೆ. ಕಂಪನಿಯು ಮೊದಲರ್ಧ ವರ್ಷದಲ್ಲಿ ಸುಮಾರು 40 ಸಾವಿರ ಫ್ರೆಶರ್ಸ್ ನೇಮಕ ಮಾಡಿಕೊಳ್ಳಲಿದೆ.

ಮುಖ್ಯ ಹಣಕಾಸು ಅಧಿಕಾರಿ ನಿಲಂಜನ್ ರಾಯ್ ಅವರು ವರ್ಷದಲ್ಲಿ ಕಂಪನಿಯು ತನ್ನ ವಾರ್ಷಿಕ ಗುರಿಯನ್ನು ಪೂರೈಸಲಿದೆ. ನಾವು ವರ್ಷವನ್ನು ಕೊನೆಗೊಳಿಸುವ ಹೊತ್ತಿಗೆ ನಾವು ಆ ಸಂಖ್ಯೆಯ ಸುತ್ತಲೂ ಇರಬೇಕು ಎಂದು ನಾನು ಭಾವಿಸುತ್ತೇನೆ. ನಾವು ನೇಮಕವನ್ನು ಮುಂದುವರಿಸಿದ್ದೇವೆ ಎಂದು ಅವರು ಹೇಳಿದರು.

ಇನ್ಫೋಸಿಸ್ ಫ್ರೆಶರ್ಸ್ ನೇಮಕ ಮಾಡಿಕೊಂಡು, ತನ್ನ ಮೈಸೂರು ತರಬೇತಿ ಕೇಂದ್ರದಲ್ಲಿ ತರಬೇತಿಯನ್ನು ನೀಡಿ ಅವರನ್ನು ಉದ್ಯೋಗಕ್ಕೆ ಸಜ್ಜುಗೊಳಿಸುತ್ತದೆ. ಫ್ರೆಶರ್ಸ್‌ರನ್ನು ನೇಮಕ ಮಾಡಿಕೊಂಡಿದ್ದು, ಅವರಿಗೆ ಕಂಪನಿಯು ಟ್ರೈನಿಂಗ್ ನೀಡಲಾಗುತ್ತಿದೆ. ಇನ್ಫೋಸಿಸ್ ಭಾರತದ ಪ್ರಮುಕ ಐಟಿ ಕಂಪನಿಗಳಲ್ಲಿ ಒಂದಾಗಿದೆ. ಕರ್ನಾಟಕದವರೇ ಆದ ನಾರಾಯಣಮೂರ್ತಿ ಅವರು ಈ ಕಂಪನಿಯನ್ನು ಹುಟ್ಟು ಹಾಕಿದ್ದಾರೆ.

ಇದನ್ನೂ ಓದಿ | Infosys | ಇನ್ಫೋಸಿಸ್‌ಗೆ 6,586 ಕೋಟಿ ರೂ. ತ್ರೈಮಾಸಿಕ ನಿವ್ವಳ ಲಾಭ, 13% ಹೆಚ್ಚಳ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

ದೇಶದಲ್ಲಿ ಮುಂಚೂಣಿಯಲ್ಲಿರುವ ಎಲೆಕ್ಟ್ರಿಕ್ ಸೈಕಲ್ ತಯಾರಕರಾದ ಮೋಟೋರಾಡ್ ಬಹುನಿರೀಕ್ಷಿತ ಪ್ರಭಾಸ್ ಅಭಿನಯದ “ಕಲ್ಕಿ: 2898 ಎಡಿ” ಯೊಂದಿಗೆ ವಿಶಿಷ್ಟ ಪಾಲುದಾರಿಕೆಯಲ್ಲಿ ಇ ಸೈಕಲ್ ಅನ್ನು ಪರಿಚಯಿಸುತ್ತಿದೆ.
“ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್” (Doodle V3 E-Cycle) ಎಂಬ ಹೆಸರಿನ ಈ ಸೈಕಲ್ ಚಲನಚಿತ್ರದ ಸಾಹಸಮಯ ಮನೋಭಾವ ಮತ್ತು ಭವಿಷ್ಯದ ಸೆಟ್ಟಿಂಗ್ ಅನ್ನು ಒಳಗೊಂಡಂತೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

VISTARANEWS.COM


on

By

Doodle V3 E-Cycle
Koo

ಪುಣೆ (Pune) ಮೂಲದ ಎಲೆಕ್ಟ್ರಿಕ್ ಬೈಸಿಕಲ್ ಕಂಪನಿಯಾದ ಇಮೊಟೊರಾಡ್ (EMotorad) ಇತ್ತೀಚೆಗೆ ಕಲ್ಕಿ ಸಹಭಾಗಿತ್ವದಲ್ಲಿ ಸೀಮಿತ ಆವೃತ್ತಿಯ ಇ-ಸೈಕಲ್ (Doodle V3 E-Cycle) ಅನ್ನು ಬಿಡುಗಡೆ ಮಾಡಿದೆ. ಬಾಹುಬಲಿ ಖ್ಯಾತಿಯ ಪ್ರಭಾಸ್ (Prabhas) ಅವರ ಅಭಿನಯದ ಮುಂಬರುವ ಆಕ್ಷನ್ ಚಿತ್ರ 2898 ಎಡಿ ಯಿಂದ (Kalki 2898 AD) ಪ್ರೇರಿತವಾದ ಇ ಸೈಕಲ್ ಇದಾಗಿದೆ.

ದೇಶದಲ್ಲಿ ಮುಂಚೂಣಿಯಲ್ಲಿರುವ ಎಲೆಕ್ಟ್ರಿಕ್ ಸೈಕಲ್ ತಯಾರಕರಾದ ಮೋಟೋರಾಡ್ ಬಹುನಿರೀಕ್ಷಿತ ಪ್ರಭಾಸ್ ಅಭಿನಯದ “ಕಲ್ಕಿ: 2898 ಎಡಿ” ಯೊಂದಿಗೆ ವಿಶಿಷ್ಟ ಪಾಲುದಾರಿಕೆಯಲ್ಲಿ ಇ ಸೈಕಲ್ ಅನ್ನು ಪರಿಚಯಿಸುತ್ತಿದೆ.
ಕಲ್ಕಿ: 2898 ಎಡಿ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದುಲ್ಕರ್ ಸಲ್ಮಾನ್, ದಿಶಾ ಪಟಾನಿ, ರಾಣಾ ದಗ್ಗುಬಾಟಿ ಮೊದಲಾದವರು ನಟಿಸಿದ್ದಾರೆ. “ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್” ಎಂಬ ಹೆಸರಿನ ಈ ಸೈಕಲ್ ಚಲನಚಿತ್ರದ ಸಾಹಸಮಯ ಮನೋಭಾವ ಮತ್ತು ಭವಿಷ್ಯದ ಸೆಟ್ಟಿಂಗ್ ಅನ್ನು ಒಳಗೊಂಡಂತೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

ಕಲ್ಕಿ: 2898 ಎಡಿ ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಆಕ್ಷನ್- ಸಾಹಸ ಚಲನಚಿತ್ರ. ಅದರ ದೃಶ್ಯ ವೈಭವ ಮತ್ತು ತಾರಾ ಬಳಗದ ಶಕ್ತಿಯನ್ನು ಸಂಯೋಜಿಸಿ ಇದನ್ನು ತಯಾರಿಸಲಾಗಿದೆ. ಮೊಟೊರಾಡ್ ನ ಸೀಮಿತ ಆವೃತ್ತಿಯ ಇ-ಸೈಕಲ್ ಜನಪ್ರಿಯ ಡೂಡಲ್ ವಿ3 ಮಾದರಿಯನ್ನು ಆಧರಿಸಿದೆ.

“ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್” ನ ಈ ವಿಶೇಷ ಆವೃತ್ತಿಯು ಚಲನಚಿತ್ರದಿಂದ ಪ್ರೇರಿತವಾದ ವಿಶೇಷ ಗ್ರಾಫಿಕ್ಸ್ ಮತ್ತು ಬಣ್ಣದ ಯೋಜನೆಗಳನ್ನು ಹೊಂದಿದೆ. ಇದು ಅಭಿಮಾನಿಗಳಿಗೆ ಸಂಗ್ರಹಿಸಬಹುದಾದಂತೆ ಮಾಡುತ್ತದೆ.
ಈ ವಿಶಿಷ್ಟವಾದ ಸೀಮಿತ ಆವೃತ್ತಿಯ ಡೂಡಲ್ ವಿ3 ಇ-ಸೈಕಲ್ ಅನ್ನು ಪರಿಚಯಿಸಲು ಪ್ರಭಾಸ್ ಅವರ ಇತ್ತೀಚಿನ ಚಲನಚಿತ್ರ ಕಲ್ಕಿಯೊಂದಿಗೆ ಸಹಕರಿಸಲು ನಾವು ರೋಮಾಂಚನಗೊಂಡಿದ್ದೇವೆ ಎಂದು ಇಮೊಟೊರಾಡ್‌ನ ಸಿಇಒ ಕುನಾಲ್ ಗುಪ್ತಾ ಹೇಳಿದರು.

ನಮ್ಮ ಪಾಲುದಾರಿಕೆಯು ನಾವೀನ್ಯತೆಗೆ ನಮ್ಮ ಬದ್ಧತೆ ಮತ್ತು ಉತ್ಪನ್ನಗಳನ್ನು ರಚಿಸುವ ನಮ್ಮ ಉತ್ಸಾಹವನ್ನು ಪ್ರತಿನಿಧಿಸುತ್ತದೆ. ಅದು ನಮ್ಮ ಗ್ರಾಹಕರ ಜೀವನಶೈಲಿ ಮತ್ತು ಆಸಕ್ತಿಗಳೊಂದಿಗೆ ಅನುರಣಿಸುತ್ತದೆ. ಅಭಿಮಾನಿಗಳಿಗೆ ಫ್ಯೂಚರಿಸ್ಟಿಕ್ ಇ-ಸೈಕಲ್ ಅನ್ನು ನೀಡಲು ನಾವು ಸಂತೋಷಪಡುತ್ತೇವೆ. ಅದು ಅವರಿಗೆ ನಿಕಟವಾಗಿ ಸಂಯೋಜಿಸಲು ಮತ್ತು ಅಂತಹ ಐಕಾನಿಕ್ ಚಲನಚಿತ್ರದ ಭಾಗವನ್ನು ಮನೆಗೆ ತೆಗೆದುಕೊಂಡು ಹೋಗಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

Doodle V3 E-Cycle


ಮುಂಗಡ ಬುಕ್ಕಿಂಗ್ ಲಭ್ಯ

ಇದರ ಬೆಲೆ 55,999 ರೂಪಾಯಿ. ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್ ಅನ್ನು ಮುಂಗಡವಾಗಿ ಬುಕ್ಕಿಂಗ್ ಮಾಡಲು 2,898 ರೂ. ಗಳ ಮುಂಗಡ ಪಾವತಿಯ ವಿಶೇಷ ಸೌಲಭ್ಯವೂ ಇದೆ.

ಇದನ್ನೂ ಓದಿ: Top 10 Motar Bike: ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಟಾಪ್ 10 ಬೈಕ್‌ಗಳಿವು

ವಿಶೇಷತೆ ಏನು?

ಕಲ್ಕಿ ಲಿಮಿಟೆಡ್ ಆವೃತ್ತಿಯು ವಿಶೇಷವಾದ “ಕಲ್ಕಿ: 2898ಎಡಿ” ನಿಂದ ಪ್ರೇರಿತವಾಗಿ ವಿನ್ಯಾಸಗೊಳಿಸಲಾಗಿದೆ. ಸುಲಭವಾಗಿ ಸಾಗಿಸಲು ಮಡಿಚಬಹುದಾದ ಫ್ರೇಮ್ ಇದರಲ್ಲಿದೆ. ವರ್ಧಿತ ಸ್ಥಿರತೆಗಾಗಿ ಫ್ಯಾಟ್ ಟೈರ್‌ಗಳು ಇದರ ವೈಶಿಷ್ಟ್ಯವಾಗಿದೆ. ವಿಶೇಷ ವಿನ್ಯಾಸದ ಜೊತೆಗೆ ಇ-ಸೈಕಲ್ ಅನ್ನು ಮಡಚಬಹುದು. ಇದು ನಗರ ಪ್ರಯಾಣಿಕರಿಗೆ ಸೂಕ್ತವಾಗಿದೆ. ಎಲ್ಲಾ ರೀತಿಯ ಭೂಪ್ರದೇಶಗಳಲ್ಲಿ ಉತ್ತಮ ಸ್ಥಿರತೆ ಮತ್ತು ಸೌಕರ್ಯಕ್ಕಾಗಿ ಇದರ ಟೈರ್‌ ಗಳು ಸೂಕ್ತವಾಗಿದೆ.

60ಕ್ಕಿಂತ ಹೆಚ್ಚು ಕಿ.ಮೀ. ವ್ಯಾಪ್ತಿ ಮತ್ತು 25ಕೆಎಂಪಿಹೆಚ್ ಗರಿಷ್ಠ ವೇಗವನ್ನು ಹೊಂದಿರುವ ಇದು ಬಹುಮುಖ ಕಾರ್ಯಕ್ಷಮತೆಗಾಗಿ ಐದು ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ವಿಶಿಷ್ಟ ವಿನ್ಯಾಸ ಮತ್ತು ಸೀಮಿತ ಲಭ್ಯತೆಯೊಂದಿಗೆ ಕಲ್ಕಿ ಲಿಮಿಟೆಡ್ ಆವೃತ್ತಿಯ ಡೂಡಲ್ ಇ-ಸೈಕಲ್ ಉತ್ಸಾಹಿಗಳು ಮತ್ತು ಚಲನಚಿತ್ರದ ಅಭಿಮಾನಿಗಳಿಗೆ ಬೇಡಿಕೆಯ ಉತ್ಪನ್ನವಾಗಿದೆ.

Continue Reading

ಧಾರ್ಮಿಕ

Vastu Tips: ತಿಳಿದಿರಲಿ, ಕನ್ನಡಿಯೂ ನುಡಿಯುತ್ತದೆ ನಮ್ಮ ಭವಿಷ್ಯ!

ಕನ್ನಡಿಯನ್ನು ಪ್ರತಿಯೊಂದು ಮನೆಯಲ್ಲೂ ವಿವಿಧ ಉದ್ದೇಶದಿಂದ ಇಡಲಾಗುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಅದು ಬಳಕೆಯಾಗುವುದು ಪ್ರತಿಬಿಂಬ ನೋಡಲು. ಹೀಗೆ ಮನೆಯಲ್ಲಿ ಇಡುವ ಕನ್ನಡಿಗಳನ್ನು ವಾಸ್ತು ಪ್ರಕಾರ (Vastu Tips) ಇರಿಸುವುದರಿಂದ ನಾವು ನಮ್ಮ ಅದೃಷ್ಟವನ್ನು ಬದಲಾಯಿಕೊಳ್ಳಬಹುದು.

VISTARANEWS.COM


on

By

Vastu Tips
Koo

ಮನೆಯಲ್ಲಿ (home) ಇಡುವ ಪ್ರತಿಯೊಂದು ವಸ್ತುವಿಗೂ ವಾಸ್ತು (Vastu Tips) ಅನ್ವಯವಾಗುತ್ತದೆ. ಅದರಲ್ಲೂ ನಾವು ಅಲಂಕಾರದ ವಿಚಾರದಲ್ಲಿ ಇಡುವ ಕನ್ನಡಿ (mirror) ನಮ್ಮ ಸೌಂದರ್ಯವನ್ನು ಬದಲಾಯಿಸುವ ಸಾಮರ್ಥ್ಯವನ್ನು ಮಾತ್ರ ಹೊಂದಿಲ್ಲ ಬದಲಾಗಿ ನಮ್ಮ ಅದೃಷ್ಟವನ್ನೂ ಬದಲಾಯಿಸುತ್ತದೆ.

ಕನ್ನಡಿಯನ್ನು ಪ್ರತಿಯೊಂದು ಮನೆಯಲ್ಲೂ ವಿವಿಧ ಉದ್ದೇಶದಿಂದ ಇಡಲಾಗುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಅದು ಬಳಕೆಯಾಗುವುದು ಪ್ರತಿಬಿಂಬ ನೋಡಲು. ಹೀಗೆ ಮನೆಯಲ್ಲಿ ಇಡುವ ಕನ್ನಡಿಗಳನ್ನು ವಾಸ್ತು ಪ್ರಕಾರ ಇರಿಸುವುದರಿಂದ ನಾವು ನಮ್ಮ ಅದೃಷ್ಟವನ್ನು ಬದಲಾಯಿಕೊಳ್ಳಬಹುದು.

ವಾಸ್ತು ಶಾಸ್ತ್ರವು ಅನೇಕ ನಂಬಿಕೆಗಳನ್ನು ಹೊಂದಿದ್ದು, ಅದರಲ್ಲಿ ಮುಖ್ಯವಾದದ್ದು ಕನ್ನಡಿಯನ್ನು ಸರಿಯಾಗಿ ಇರಿಸಿದಾಗ ಅದು ಮನೆಗೆ ಸಮೃದ್ಧಿ ಮತ್ತು ಸಂತೋಷ, ಮನೆಮಂದಿಗೆ ಅರೋಗ್ಯ ವನ್ನು ತರುತ್ತದೆ ಮತ್ತು ಅದು ಸದಾಕಾಲ ಇರುವಂತೆ ಮಾಡುತ್ತದೆ. ಹಾಗಾದರೆ ವಾಸ್ತುವಿನ ಪ್ರಕಾರ ಮನೆಯಲ್ಲಿ ಕನ್ನಡಿ ಎಲ್ಲಿ, ಹೇಗೆ ಇಡಬೇಕು ಎನ್ನುವ ಮಾಹಿತಿ ಇಲ್ಲಿದೆ.

Vastu Tips


ದಿಕ್ಕು ಮುಖ್ಯ

ಕನ್ನಡಿಯನ್ನು ಇಡಲು ದಿಕ್ಕು ಮುಖ್ಯವಾಗಿದೆ. ಸಕಾರಾತ್ಮಕ ಶಕ್ತಿಯು ಉತ್ತರದಿಂದ ದಕ್ಷಿಣಕ್ಕೆ ಮತ್ತು ಪೂರ್ವದಿಂದ ಪಶ್ಚಿಮಕ್ಕೆ ಹರಿಯುತ್ತದೆ. ಈ ಕಾರಣದಿಂದಾಗಿ ಕನ್ನಡಿಯನ್ನು ಯಾವಾಗಲೂ ವೀಕ್ಷಕರ ಮುಖವು ಪೂರ್ವ ಅಥವಾ ಉತ್ತರದ ಗೋಡೆಗೆ ಎದುರಿಸುವಂತೆ ಇರಿಸಬೇಕು. ಕನ್ನಡಿಯನ್ನು ಎಚ್ಚರಿಕೆಯಿಂದ ಇರಿಸುವುದನ್ನು ಖಚಿತಪಡಿಸಿಕೊಳ್ಳಿ. ಎರಡು ಕನ್ನಡಿಗಳು ಎಂದಿಗೂ ಪರಸ್ಪರ ನೇರವಾಗಿ ಇಡಬಾರದು. ಹೀಗೆ ಮಾಡುವುದರಿಂದ ಮನೆಯಲ್ಲಿನ ನಕಾರಾತ್ಮಕ ಶಕ್ತಿ ದೂರವಾಗುತ್ತದೆ.

ಎಷ್ಟು ಎತ್ತರ?

ಕನ್ನಡಿಯು ನೆಲದಿಂದ ನಾಲ್ಕರಿಂದ ಐದು ಅಡಿ ಎತ್ತರದಲ್ಲಿ ಇರಿಸಬೇಕು. ಹಾಸಿಗೆಯ ಪಕ್ಕದಲ್ಲಿ ದೊಡ್ಡ ಡ್ರೆಸ್ಸಿಂಗ್ ಟೇಬಲ್ ಅಥವಾ ಸೈಡ್ ಟೇಬಲ್ ಅನ್ನು ಹೊಂದುವುದು ಅದೃಷ್ಟ. ಯಾವುದೇ ಕೋಣೆಯಲ್ಲಿ ಕನ್ನಡಿಯನ್ನು ಅಳವಡಿಸುವಾಗ ನೀವು ಮಲಗಿದಾಗ ನಿಮ್ಮ ದೇಹದ ಯಾವುದೇ ಭಾಗವು ಕನ್ನಡಿಯಲ್ಲಿ ಗೋಚರಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಿ. ಪೂರ್ವ ಮತ್ತು ಉತ್ತರದಿಂದ ಧನಾತ್ಮಕ ಶಕ್ತಿಗಳು ಪಶ್ಚಿಮ ಅಥವಾ ದಕ್ಷಿಣಕ್ಕೆ ಎದುರಾಗಿರುವ ಗೋಡೆಗಳ ಮೇಲೆ ಇರುವ ಕನ್ನಡಿಗಳಿಂದ ಪ್ರತಿಫಲಿಸುತ್ತದೆ.

ಸೂಕ್ತ ಗಾತ್ರ?

ಕನ್ನಡಿಯ ಗಾತ್ರವು ಬಹಳ ಮುಖ್ಯವಾಗಿರುತ್ತದೆ. ಚದರ ಅಥವಾ ಆಯತದಂತಹ ನಾಲ್ಕು ಮೂಲೆಗಳ ಫಾರ್ಮ್ ಅನ್ನು ಆಯ್ಕೆ ಮಾಡಬಹುದು. ಚೌಕ ಮತ್ತು ಆಯತಾಕಾರದ ರೂಪಗಳು ಅದೃಷ್ಟ ಎಂದು ವಾಸ್ತು ಹೇಳುತ್ತದೆ. ಸುಂದರವಾದ ಮಾದರಿಗಳನ್ನು ರಚಿಸಲು ಚೌಕ ಮತ್ತು ಆಯತಾಕಾರದ ಕನ್ನಡಿಗಳು ತುಂಬಾ ಉಪಯುಕ್ತವಾಗಿವೆ.

ಇದನ್ನೂ ಓದಿ: Vastu Tips: ಮನೆ ಆವರಣದ ತಪ್ಪಾದ ದಿಕ್ಕಿನಲ್ಲಿ ಗಿಡ ಬೆಳೆಸಿದರೆ ಕೆಟ್ಟ ಪರಿಣಾಮ!

ತಿಳಿದಿರಲಿ

ಕನ್ನಡಿಗಳಲ್ಲಿ ಯಾವಾಗಲೂ ಸ್ಪಷ್ಟವಾದ ಚಿತ್ರವು ಗೋಚರಿಸುತ್ತದೆ ಎಂದು ಖಚಿತಪಡಿಸಿಕೊಳ್ಳಲು ಅವುಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ.

ಮನೆಯ ಈಶಾನ್ಯ ಅಥವಾ ವಾಯುವ್ಯ ದಿಕ್ಕಿನಲ್ಲಿ ಕನ್ನಡಿ ಅಥವಾ ಯಾವುದೇ ಗಾಜಿನ ವಸ್ತುವನ್ನು ಇರಿಸಿ.

ಮನೆಯಲ್ಲಿ ಯಾವುದೇ ಕನ್ನಡಿ ನಾಲ್ಕು ಅಥವಾ ಐದು ಅಡಿಗಳಿಗಿಂತ ಹೆಚ್ಚಿಲ್ಲ ಎಂದು ಖಚಿತಪಡಿಸಿಕೊಳ್ಳಿ.

ಅಪಾರದರ್ಶಕ ಬಾಗಿಲುಗಳು ಮತ್ತು ಕಿಟಕಿ ಫಲಕಗಳಿಂದ ದೂರವಿರಿ. ಅರೆಪಾರದರ್ಶಕವಾದವುಗಳನ್ನು ಆರಿಸುವುದು ಸಾಮಾನ್ಯವಾಗಿ ಯೋಗ್ಯವಾಗಿದೆ.

ಕನ್ನಡಿಗಳು ಯುವಕರು ವಿಚಲಿತರಾಗಲು ಮತ್ತು ಗಮನಹರಿಸುವಲ್ಲಿ ತೊಂದರೆಗೆ ಕಾರಣವಾಗಬಹುದು. ಆದ್ದರಿಂದ ಅವುಗಳನ್ನು ಸ್ಟಡಿ ಟೇಬಲ್‌ನಿಂದ ದೂರವಿರಿಸಿ.

Continue Reading

ಪ್ರಮುಖ ಸುದ್ದಿ

NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ

NEET-UG:

VISTARANEWS.COM


on

NEET UG
Koo

ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆ ಹೊಣೆಯನ್ನು ಕೇಂದ್ರ ಸರ್ಕಾರ ಸಿಬಿಐ ಒಪ್ಪಿಸಿ ಶನಿವಾರ ಆದೇಶಿಸಿದೆ. ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ ಮತ್ತು ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪರೀಕ್ಷೆಗಳ ಪಾವಿತ್ರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧ. ಮೋಸದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿ, ಸಂಸ್ಥೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಂದು ಸಚಿವಾಲಯ ಹೇಳಿದೆ.

ಮೇ 5 ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್-ಯುಜಿ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷಿತ ದಿನಾಂಕಕ್ಕಿಂತ ಹತ್ತು ದಿನ ಮುಂಚಿತವಾಗಿ ಜೂನ್ 4 ರಂದು ಫಲಿತಾಂಶಗಳನ್ನು ಘೋಷಿಸಲಾಗಿತ್ತು. ಫಲಿತಾಂಶದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ದುಷ್ಕೃತ್ಯಗಳ ಆರೋಪಗಳು ಕೇಳಿಬಂದವು, ಏಕೆಂದರೆ 67 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು (720ಕ್ಕೆ 720) ಗಳಿಸಿದ್ದರು. ಅವರಲ್ಲಿ ಕೆಲವರು ಒಂದೇ ಪರೀಕ್ಷಾ ಕೇಂದ್ರಗಳಿಂದ ಬಂದವರು. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಿಹಾರದಲ್ಲಿ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಕಂಡುಬಂದಿದೆ. ಕೆಲವು ಅಭ್ಯರ್ಥಿಗಳು ಪರೀಕ್ಷೆಯ ಮುನ್ನಾದಿನದಂದು ಪ್ರಶ್ನೆ ಪತ್ರಿಕೆಗಳನ್ನು ಸ್ವೀಕರಿಸಿದ್ದರು.

ಇದನ್ನೂ ಓದಿ: NEET PG : ಪರೀಕ್ಷಾ ಅಕ್ರಮ; ನಾಳೆ ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ

ಈ ಆರೋಪಗಳು ಹಲವಾರು ನಗರಗಳಲ್ಲಿ ಪ್ರತಿಭಟನೆಗೆ ಕಾರಣವಾಗಿವೆ. ಕೋರ್ಟ್​ಗಳಲ್ಲಿ ಅರ್ಜಿಗಳನ್ನು ಸಲ್ಲಿಕೆಯಾಗಿವೆ. ಈ ವರ್ಷದ ಜೂನ್ 18 ರಂದು ನಡೆದ ಯುಜಿಸಿ ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆಯೂ ಸಿಬಿಐ ತನಿಖೆ ನಡೆಸುತ್ತಿದೆ. ಈ ಸಂಬಂಧ ಸಿಬಿಐ ಜೂನ್ 20ರಂದು ಎಫ್ಐಆರ್ ದಾಖಲಾಗಿದೆ.

ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಯ ಬಗ್ಗೆ ಇತ್ತೀಚಿನ ಆರೋಪಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 23 ರಂದು ನಡೆಯಬೇಕಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿದೆ

Continue Reading

ದೇಶ

NEET PG : ಪರೀಕ್ಷಾ ಅಕ್ರಮ; ನಾಳೆ ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ

NEET-PG :ಪರೀಕ್ಷೆ ಒಂದು ದಿನ ಮೊದಲು, ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ದೂರುಗಳು ದಾಖಲಾಗಿದ್ದವು. ಸಾಮಾಜಿಕ ಮಾಧ್ಯಮಗಳ ಮೂಲಕ ಆಕಾಂಕ್ಷಿಗಳಿಗೆ ಹಣಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ನೀಡುವ ಆಮಿಷ ಒಡ್ಡಲಾಗಿದೆ ಎಂದು ದೂರಲಾಗಿತ್ತು. ಹೀಗಾಗಿ ಪರೀಕ್ಷೆಯನ್ನೇ ರದ್ದು ಮಾಡಲಾಗಿದೆ.

VISTARANEWS.COM


on

NEET-PG
Koo

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಜೂನ್ 23 ರಂದು ನಡೆಯಬೇಕಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು (NEET PG) ಏಕಾಏಕಿ ಮುಂದೂಡಲಾಗಿದೆ. ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಗೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಆರೋಗ್ಯ ಸಚಿವಾಲಯ ಈ ನಿರ್ಧಾರ ಪ್ರಕಟಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದೂ ಹೇಳಿದೆ

ಪರೀಕ್ಷೆ ಒಂದು ದಿನ ಮೊದಲು, ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ದೂರುಗಳು ದಾಖಲಾಗಿದ್ದವು. ಸಾಮಾಜಿಕ ಮಾಧ್ಯಮಗಳ ಮೂಲಕ ಆಕಾಂಕ್ಷಿಗಳಿಗೆ ಹಣಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ನೀಡುವ ಆಮಿಷ ಒಡ್ಡಲಾಗಿದೆ ಎಂದು ದೂರಲಾಗಿತ್ತು. ಹೀಗಾಗಿ ಪರೀಕ್ಷೆಯನ್ನೇ ರದ್ದು ಮಾಡಲಾಗಿದೆ.

ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಪರೀಕ್ಷಾ ಪ್ರಕ್ರಿಯೆಗಳ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಮೌಲ್ಯಮಾಪನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: NEET UG Row : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮುಖ್ಯಸ್ಥರನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ

ಕೊನೇ ಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗೆ ಆರೋಗ್ಯ ಸಚಿವಾಲಯವು ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ಡಾರ್ಕ್​ನೆಟ್​​ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಯುಜಿಸಿ-ನೆಟ್ ರದ್ದುಗೊಳಿಸಿದ ನಂತರ ಮುಂದೂಡಲ್ಪಟ್ಟ ಎರಡನೇ ಸ್ಪರ್ಧಾತ್ಮಕ ಪರೀಕ್ಷೆ ಇದಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (UG) ಅಕ್ರಮಗಳು ನಡೆದಿವೆ ಎಂಬ ಆರೋಪದ ಬಗ್ಗೆಯೂ ವಿವಾದವಿದೆ.

ಒಂದು ದಿನದ ಹಿಂದೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 25 ರಿಂದ ನಡೆಯಬೇಕಿದ್ದ ಸಿಎಸ್ಐಆರ್-ಯುಜಿಸಿ-ನೆಟ್ ಪರೀಕ್ಷೆಯನ್ನು ಅನಿವಾರ್ಯ ಸಂದರ್ಭಗಳಿಂದಾಗಿ ಮುಂದೂಡಲಾಗಿದೆ ಎಂದು ಘೋಷಿಸಿತ್ತು

Continue Reading
Advertisement
Suraj Revanna Case
ಕರ್ನಾಟಕ16 mins ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಪ್ರಜ್ವಲ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್24 mins ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ45 mins ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ1 hour ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Menopausal Weight Gain
ಆರೋಗ್ಯ2 hours ago

Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Vastu Tips
ಧಾರ್ಮಿಕ3 hours ago

Vastu Tips: ತಿಳಿದಿರಲಿ, ಕನ್ನಡಿಯೂ ನುಡಿಯುತ್ತದೆ ನಮ್ಮ ಭವಿಷ್ಯ!

Virat kohli
ಪ್ರಮುಖ ಸುದ್ದಿ3 hours ago

Virat Kohli : ಐಸಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ ವಿರಾಟ್​ ಕೊಹ್ಲಿ

Dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಮಡದಿಯ ಪ್ರೀತಿಗೆ ಸೋಲುವಿರಿ; ಮನೆಯಲ್ಲಿ ಸಂತೋಷದ ದಿನ

NEET UG
ಪ್ರಮುಖ ಸುದ್ದಿ8 hours ago

NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌