Women Empowerment : ದುಡಿಯುವ ವರ್ಗ, ಮಹಿಳೆಯರಿಗೆ ಆರ್ಥಿಕ ಸಬಲತೆ; ಈ ಬಜೆಟ್‌ನಲ್ಲಿ ಘೋಷಣೆ: ಸಿಎಂ ಬೊಮ್ಮಾಯಿ - Vistara News

ಕರ್ನಾಟಕ

Women Empowerment : ದುಡಿಯುವ ವರ್ಗ, ಮಹಿಳೆಯರಿಗೆ ಆರ್ಥಿಕ ಸಬಲತೆ; ಈ ಬಜೆಟ್‌ನಲ್ಲಿ ಘೋಷಣೆ: ಸಿಎಂ ಬೊಮ್ಮಾಯಿ

Women Empowerment : ಕೋವಿಡ್‌ ಮತ್ತು ಪ್ರವಾಹದಿಂದ ರಾಜ್ಯದಲ್ಲಿ ದುಡಿಯುವ ವರ್ಗದವರಿಗೆ ಆರ್ಥಿಕವಾಗಿ ಸಮಸ್ಯೆಯಾಗಿದೆ. ಅಲ್ಲದೆ, ಮಹಿಳೆಯರ ಸಬಲೀಕರಣಕ್ಕೂ ಒತ್ತು ನೀಡುವ ದೃಷ್ಟಿಯಿಂದ ಈ ಬಾರಿ ಬಜೆಟ್‌ನಲ್ಲಿ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

cm on women empowerment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮಹಿಳಾ ಸಬಲೀಕರಣಕ್ಕೆ (Women Empowerment) ಒತ್ತು ನೀಡಲಾಗುತ್ತಿದೆ. ಕೋವಿಡ್ ಹಾಗೂ ಪ್ರವಾಹದ ಕಾರಣದಿಂದ ನಲುಗಿರುವ ದುಡಿಯುವ ವರ್ಗಕ್ಕೆ ಸಹಾಯ ಹಾಗೂ ಹೆಣ್ಣುಮಕ್ಕಳು ಸ್ವತಂತ್ರವಾಗಿ ಮನೆ ನಿರ್ವಹಣೆ ಮಾಡುವಷ್ಟರ ಮಟ್ಟಿಗೆ ಆರ್ಥಿಕ ಸಬಲತೆ ಸಾಧಿಸುವ ನಿಟ್ಟಿನಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಶನಿವಾರ (ಜ.೧೪) ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಹೆಣ್ಣು ಮಕ್ಕಳಿಗೆ ಆರ್ಥಿಕ ಚೇತನ ಸಿಗಬೇಕು. ಅವರು ಕುಟುಂಬವನ್ನು ಸ್ವತಂತ್ರವಾಗಿ ನಡೆಸುವಂತಾಗಲು ವಿಶೇಷ ಕಾರ್ಯಕ್ರಮವನ್ನು ನೀಡಲಾಗುವುದು. ಸ್ತ್ರೀ ಶಕ್ತಿ ಯೋಜನೆಯಡಿ ಮನೆ ನಡೆಸಲು, ಕೋವಿಡ್ ಉಪಚಾರ, ಆರೋಗ್ಯ, ಮುಂತಾದವುಗಳಿಗೆ ಸಹಾಯವಾಗುವಂತಹ ಕಾರ್ಯಕ್ರಮಗಳನ್ನು ಈ ವಿಶೇಷ ಯೋಜನೆ ಒಳಗೊಂಡಿದೆ ಎಂದರು.

ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ
ಜನಕಲ್ಯಾಣ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವ ಯೋಜನೆಗಳ ಚಿಂತನೆ ಮಾಡುತ್ತಿದ್ದೇವೆ. ದುಡಿಯುವ ವರ್ಗಕ್ಕೆ ಹೆಚ್ವಿನ ಅನುಕೂಲ ಮಾಡುವ ಚಿಂತನೆ ಮಾಡಲಾಗುತ್ತಿದೆ. ರೈತರು, ಕಾರ್ಮಿಕರು, ಮಹಿಳೆಯರು ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಜನಾಂಗದವರ ಶ್ರೇಯೋಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಯುವಕರಿಗೆ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಒಂದು ಲಕ್ಷ ರೂ. ನೆರವು ನೀಡಿ, ಬ್ಯಾಂಕ್ ಖಾತೆಯನ್ನು ಜೋಡಿಸಿ ಅವರನ್ನು ಸ್ವಾವಲಂಬಿ ಮಾಡಲು ನೇರ ಕಾರ್ಯಕ್ರಮ ಇದಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು. ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.

ಬಜೆಟ್‌ಗೆ ಪೂರ್ವಭಾವಿ ಸಿದ್ಧತೆ
ಸಚಿವ ಸಂಪುಟದಲ್ಲಿ ವಿಧಾನಸಭೆಯ ಜಂಟಿ ಅಧಿವೇಶನಕ್ಕೆ ದಿನಾಂಕ ಗೊತ್ತು ಮಾಡಲಾಗುವುದು. ಬಜೆಟ್ ಅಧಿವೇಶನವನ್ನು ಫೆ. 17ರಂದು ಮಾಡುವ ಸಾಧ್ಯತೆ ಇದೆ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲ ಸಿದ್ಧತೆಗಳನ್ನು ಪ್ರಾರಂಭ ಮಾಡಿದ್ದೇವೆ. ಈಗಾಗಲೇ ಡಿಸೆಂಬರ್‌ವರೆಗೆ ನಮ್ಮ ರಾಜ್ಯದ ಆದಾಯವು ಮೂರುಪಟ್ಟು ಹೆಚ್ಚಾಗಿದೆ. ಇದನ್ನು ಇನ್ನಷ್ಟು ಹೆಚ್ಚು ಮಾಡಲು ಗುರಿಗಳನ್ನು ಹೆಚ್ಚು ಮಾಡಲು ಸೂಚನೆ ನೀಡಲಾಗಿದೆ. ಜನಪರ ಆಯವ್ಯಯ ನೀಡಲು ತೀರ್ಮಾನ ಮಾಡಲಾಗಿದೆ. ಚುನಾವಣೆ ಇರುವುದರಿಂದ ವಿಶೇಷ ಬಜೆಟ್ ಇರಲಿದೆ. ಅಸ್ಸಾಂ ಹಾಗೂ ಗುಜರಾತ್ ಸರ್ಕಾರ ಕೆಲವು ಘೋಷಣೆಗಳನ್ನು ಮಾಡಿವೆ. ಆದರೆ, ಘೋಷಣೆ ಬೇರೆ ಅನುಷ್ಠಾನ ಬೇರೆ ಎಂದರು.

ಇದನ್ನೂ ಓದಿ | Grenades Found | ಗಣರಾಜ್ಯೋತ್ಸವಕ್ಕೂ ಮುನ್ನ ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ, 2 ಗ್ರೆನೇಡ್, ಮನುಷ್ಯರ ರಕ್ತ ಪತ್ತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

ಮೂಲಸೌಕರ್ಯ ಸರಿಯಿಲ್ಲ ಎಂದು ಇತರ ನಗರಗಳು ಬೆಂಗಳೂರಿನ ಅವಕಾಶವನ್ನು ಕಸಿಯುತ್ತವೆ. ನಾಲ್ಕಾರು ಕಂಪನಿಗಳು ಬೆಂಗಳೂರಿನ ಮೂಲಸೌಕರ್ಯ ಕಳಪೆ ಎಂದು ಒಂದು ಮಾತು ಹೇಳಿದರೂ ಅದು ವಾಣಿಜ್ಯಾತ್ಮಕವಾಗಿ ಕಪ್ಪು ಚುಕ್ಕೆ. ಆದ್ದರಿಂದ, ಮುಂಗಾರಿಗೆ ಮುನ್ನವೇ ಈ ಮುನ್ನೆಚ್ಚರಿಕೆ ವ್ಯವಸ್ಥೆಗಳನ್ನು ರೂಪಿಸಿಕೊಂಡು ಸನ್ನದ್ಧರಾಗಬೇಕಿದೆ.

VISTARANEWS.COM


on

Rajakaluve
Koo

ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವುಗೊಳಿಸಲು ಸೂಚಿಸಲಾಗಿದೆ. ಯಾವ ಪ್ರಬಲ ರಾಜಕಾರಣಿಯೇ ಇರಲಿ, ಬೇರೆ ಯಾರೇ ಇರಲಿ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿವೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಇಂದು ಮುಖ್ಯಮಂತ್ರಿಗಳು ನಗರದ ವಿವಿಧೆಡೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿ ಬಳಿಕ ಇದನ್ನು ಹೇಳಿದ್ದಾರೆ.

ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಲಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಲಾಗಿದೆ. ಇತ್ತೀಚೆಗೆ ಸುರಿದ ಮಳೆಗೆ ಯಲಹಂಕದಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ. ಮುಯಮಂತ್ರಿಗಳು ತಿಳಿಸುವ ಪ್ರಕಾರ, ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು. ಹಿಂದಿನ ಸರ್ಕಾರ 193 ಕಿಮೀ ತೆರವು ಮಾಡಿದೆ. ಸದ್ಯ ರಾಜಕಾಲುವೆ ತೆರವಿಗೆ 1800 ಕೋಟಿ ರೂ. ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12.15 ಕಿಮೀ ದೂರದ ಕಾಲುವೆ ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ.

ಜೂನ್‌ ಇನ್ನೇನು ಒಂದು ವಾರದಲ್ಲಿ ಬರಲಿದೆ. ಮುಂಗಾರು ಆರಂಭವಾಗಲಿದೆ. ಮಲೆನಾಡು ಹಾಗೂ ಬಯಲುಸೀಮೆಯ ಕೃಷಿಕ ಜನತೆಗೆ ಇರುವ ಮುಂಗಾರಿನ ಸಿದ್ಧತೆಯ ಜ್ಞಾನ ನಗರದ ಮಹಾಜನತೆಗೆ ಇಲ್ಲ. ಹೀಗಾಗಿ ಮುಂಗಾರಿನ ಆರಂಭದಲ್ಲಿ ಅಪ್ಪಳಿಸುವ ಮಳೆಗೆ, ಮಹಾನಗರ ಸಿದ್ಧವಾಗಿರುವುದಿಲ್ಲ. ಹೀಗಾಗಿಯೇ ರಾಜಕಾಲುವೆಗಳು ಕಸ ತುಂಬಿ ಕಟ್ಟಿಕೊಳ್ಳುವುದು, ರಸ್ತೆಗಳಲ್ಲಿ ನೀರು ನಿಲ್ಲುವುದು ಹಳೆಯ ಹಾಗೂ ದುರ್ಬಲ ಮರಗಳು ಬೀಳುವುದು, ಶಿಥಿಲ ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ವಿದ್ಯುತ್‌ ಕಂಬಗಳು, ತೆರೆದ ಮ್ಯಾನ್‌ಹೋಲ್‌ಗಳು ಸಾವಿನರಮನೆಗಳಾಗುವುದನ್ನು ಕಾಣುತ್ತೇವೆ. ವಿಳಂಬವಾಗಿರುವ ರಾಜಕಾಲುವೆ ತೆರವು ಹಾಗೂ ಸ್ವಚ್ಛತೆ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು. ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿವೆ ಎಂಬ ಲೆಕ್ಕ ಇವೆ. ನಾಲ್ಕು ಮಳೆಗೆ ರಸ್ತೆಗುಂಡಿಗಳು ಮರಣಕೂಪಗಳಾಗುತ್ತವೆ. ಇವುಗಳನ್ನು ಮುಚ್ಚಿಸಬೇಕು.

ರಾಜಕಾಲುವೆಗಳ ನಿರ್ವಹಣೆಗೆ ಶಾಶ್ವತವಾದ ಒಂದು ವ್ಯವಸ್ಥೆಯನ್ನೇ ರೂಪಿಸಬೇಕಿದೆ. ರಾಜಕಾಲುವೆ ಹಾಗೂ ಒಳಚರಂಡಿ ವ್ಯವಸ್ಥೆಗಳು ಪ್ರತ್ಯೇಕವಾಗಿರಬೇಕು. ಆದರೆ ನಗರದ ಎಷ್ಟೋ ಕಡೆ ಅವು ಒಟ್ಟಾಗಿವೆ. ಇದು ತಪ್ಪಬೇಕು. ಇನ್ನು ರಾಜಕಾಲುವೆಯ ಒತ್ತುವರಿ ಪ್ರಭಾವಿಗಳಿಂದಲೇ ಆಗಿರುವುದು ಹೆಚ್ಚು. ಕಾನೂನಾತ್ಮಕ ಅಡ್ಡಿಆತಂಕಗಳನ್ನು ಸೃಷ್ಟಿಸುವವರೂ ಇವರೇ. ಇವರನ್ನು ಎದುರಿಸಲು ಸರ್ಕಾರ ಇನ್ನಷ್ಟು ಸನ್ನದ್ಧವಾಗಬೇಕು. ಮನೆಗಳಲ್ಲಿ ಮಳೆ ನೀರು ಕೊಯ್ಲಿಗೆ ವ್ಯವಸ್ಥೆಯಾದರೂ ಇರಬೇಕು. ಇಲ್ಲವಾದರೆ ರಾಜಕಾಲುವೆಗಳಿಗಾದರೂ ಅದು ಸೇರಬೇಕು. ಎರಡೂ ಇಲ್ಲದೆ ಹೋದರೆ ಕೃತಕ ಪ್ರವಾಹ ಸೃಷ್ಟಿಯಾಗುತ್ತದೆ. ಈ ಕೃತಕ ಪ್ರವಾಹಗಳಿಂದ ಜನಜೀವನ ಅಸ್ತವ್ಯಸ್ಥಗೊಂಡು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಲಯದಲ್ಲಿಯೂ ರಾಜಧಾನಿಗೆ ಕೆಟ್ಟ ಹೆಸರು ಬರುತ್ತದೆ. ಮೂಲಸೌಕರ್ಯ ಸರಿಯಿಲ್ಲ ಎಂದು ಇತರ ನಗರಗಳು ನಮ್ಮ ಅವಕಾಶವನ್ನು ಕಸಿಯುತ್ತವೆ. ನಾಲ್ಕಾರು ಕಂಪನಿಗಳು ಬೆಂಗಳೂರಿನ ಇನ್‌ಫ್ರಾಸ್ಟ್ರಕ್ಚರ್‌ ಕಳಪೆ ಎಂದು ಒಂದು ಮಾತು ಹೇಳಿದರೂ ಅದು ವಾಣಿಜ್ಯಾತ್ಮಕವಾಗಿ ಕಪ್ಪು ಚುಕ್ಕೆ. ಆದ್ದರಿಂದ, ಮುಂಗಾರಿಗೆ ಮುನ್ನವೇ ಈ ಮುನ್ನೆಚ್ಚರಿಕೆ ವ್ಯವಸ್ಥೆಗಳನ್ನು ರೂಪಿಸಿಕೊಂಡು ಸನ್ನದ್ಧರಾಗಬೇಕಿದೆ.

ಇದನ್ನೂ ಓದಿ: PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

Continue Reading

ಕರ್ನಾಟಕ

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Bengaluru News: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM D K Shivakumar instructed to test drinking water everywhere including Bengaluru
Koo

ಬೆಂಗಳೂರು: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು (Bengaluru News) ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವೈಯಾಲಿಕಾವಲ್‌ನ ಐಪಿಪಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ. ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.

ಒತ್ತುವರಿ ತೆರವು ವಿಚಾರವಾಗಿ ಬಿಎಂಟಿಎಫ್‌ ಅವರ ಸಹಾಯ ಪಡೆಯುತ್ತೀರಾ ಎಂದು ಕೇಳಿದಾಗ, “ಬಿಎಂಟಿಎಫ್‌ ಜತೆ ಚರ್ಚೆ ನಡೆಸಲಾಗಿದ್ದು. ಎಲ್ಲೆಲ್ಲಿ ಬಾಕಿ ಇದೆ ಅವುಗಳನ್ನು ತೆರವುಗೊಳಿಸಲು ಸಿಎಂ ಸೂಚಿಸಿದ್ದಾರೆ”ಎಂದರು.

ರಾಜಕಾಲುವೆ, ಕೆರೆ ಒತ್ತುವರಿದಾರರು ತಡೆಯಾಜ್ಞೆ ತರುತ್ತಿರುವ ವಿಚಾರವಾಗಿ ಕೇಳಿದಾಗ, “ಕೆರೆ, ಸರ್ಕಾರಿ ಉದ್ಯಾನವನ ಜಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದಾರೆ. ಇದು ನಮ್ಮ ಗಮನದಲ್ಲಿದ್ದು. ಈ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಕಾನೂನು ಅವಕಾಶಗಳನ್ನು ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ 5 ಅಂಶಗಳ ಕಾರ್ಯಕ್ರಮ

ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ ಆಸ್ತಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣೆ, ಆಸ್ತಿ ತೆರಿಗೆ, ರಾಜಕಾಲುವೆ, ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಈ ಐದು ಅಂಶಗಳ ಕಾರ್ಯಕ್ರಮದಲ್ಲಿ ಸೇರಿವೆ ಎಂದರು.

ಇದನ್ನೂ ಓದಿ: Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

ಮುಖ್ಯಮಂತ್ರಿಗಳ ಜತೆಗೂಡಿ ಬುಧವಾರ ಬೆಂಗಳೂರು ನಗರದ ಒಂದಷ್ಟು ಭಾಗಗಳಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಅನೇಕ ಸಮಸ್ಯೆಗಳು ಕಂಡು ಬಂದ ಕಾರಣ ಬಿಬಿಎಂಪಿ ವಲಯ ಅಧಿಕಾರಿಗಳು ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಚರ್ಚೆ ನಡೆಸಲಾಯಿತು ಎಂದರು.

ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ ನಗರದ ಎಲ್ಲಾ ಭಾಗಗಳಲ್ಲಿ ಸರಬರಾಜಾಗುವ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಬಿಬಿಎಂಪಿ ನಡೆಸಬೇಕು ಹಾಗೂ ಗುಣಮಟ್ಟದ ಫಲಿತಾಂಶವನ್ನು ಬಿಡ್ಬ್ಲೂಎಸ್‌ಎಸ್‌ಬಿಗೆ ನೀಡಬೇಕು ಎಂದು ಸೂಚಿಸಲಾಗಿದೆ ಎಂದರು.

ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿತ್ತು. ಅದರಂತೆ 2016-17 ರಲ್ಲಿ 2,626 ಒತ್ತುವರಿಗಳನ್ನು ಗುರುತಿಸಲಾಗಿತ್ತು. 2022- 23 ಹೊತ್ತಿಗೆ 556 ಒತ್ತುವರಿ ತೆರವು ಮಾಡಲಾಗಿತ್ತು. ಈಗ 1136 ಹೊಸದಾಗಿ ಒತ್ತುವರಿಗಳನ್ನು ಗುರುತಿಸಲಾಗಿದ್ದು, ಒಟ್ಟು 4,316 ಒತ್ತುವರಿಗಳನ್ನು ಗುರುತಿಸಲಾಗಿದೆ. ಸ್ಯಾಟ್‌ಲೈಟ್, ಗೂಗಲ್ ಇಮೇಜ್ ಮತ್ತು ಸರ್ವೇ ಇಲಾಖೆ ಈ ಒತ್ತುವರಿ ಮಾಹಿತಿ ಸಂಗ್ರಹಿಸಿದೆ. ಒತ್ತುವರಿ ತೆರವುಗೊಳಿಸಲು ಬಿಎಂಟಿಎಫ್‌ಗೆ ಕಾನೂನಾತ್ಮಕವಾಗಿ ಮತ್ತು ಎಲ್ಲಾ ರೀತಿಯ ಬೆಂಬಲ ನೀಡಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒತ್ತುವರಿ ವಿಚಾರವಾಗಿ ಬಂದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದ ಅವರು, 182 ಕೆರೆಗಳಲ್ಲಿ 116 ಕೆರೆಗಳ ಒತ್ತುವರಿ ಬಗ್ಗೆ ಸರ್ವೇ ನಡೆಸಬೇಕಾಗಿದೆ. ಬಾಕಿ ಉಳಿದ ಕೆರೆಗಳನ್ನು ಸರ್ವೇ ನಡೆಸಬೇಕು. ಹಾಗೂ ಬಿಬಿಎಂಪಿ ಆಸ್ತಿಗಳನ್ನು ಗುರುತು ಮಾಡಬೇಕು. ಪಾಲಿಕೆ ಆಸ್ತಿ ಸಂರಕ್ಷಣೆ ಸೇರಿದಂತೆ ಒತ್ತುವರಿ ತೆರವಿಗೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ. ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಜವಾಬ್ದಾರಿಯನ್ನು ಬಿಡ್ಬ್ಲೂಎಸ್‌ಎಸ್‌ಬಿ ಗೆ ವಹಿಸಲಾಗಿದೆ. ಕೆರೆಗಳಲ್ಲಿ ನೀರಿದ್ದರೆ ಒತ್ತುವರಿ ತಪ್ಪುತ್ತದೆ, ಅಂತರ್ಜಲ ಹೆಚ್ಚುತ್ತದೆ. ಆದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

ನಗರದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳು ಇವೆ ಎಂದು ಸಿಎಂ ಮಾಹಿತಿ ನೀಡಿದ್ದರು. ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಸಾರ್ವಜನಿಕರೇ ರಸ್ತೆಗುಂಡಿಗಳ ಫೋಟೋ ತೆಗೆದು ಮಾಹಿತಿ ನೀಡುವ ಆ್ಯಪ್ ಬಿಡುಗಡೆ ಮಾಡಲಾಗುವುದು. ಮುಂದಿನ 15 ದಿನಗಳಲ್ಲಿ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಬೇಕು ಎಂದು ತಿಳಿಸಲಾಗಿದೆ ಎಂದರು.

Continue Reading

ಕರ್ನಾಟಕ

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

ಕಳೆದೊಂದು ವಾರದಿಂದ (Arecanut Price) ಅಡಿಕೆ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಹಾಗಂತ ಅಡಿಕೆ ತೋಟದ ಉಪ ಬೆಳೆಗಳ ಧಾರಣೆ ಏರುತ್ತಿದೆ. ಈ ಕುರಿತ ನಿಖರ ವಿಶ್ಲೇಷಣೆ ಇಲ್ಲಿದೆ.

VISTARANEWS.COM


on

arecanut price
Koo

| ಅರವಿಂದ ಸಿಗದಾಳ್, ಮೇಲುಕೊಪ್ಪ

ಕಳೆದ ತಿಂಗಳು ಏರಿಕೆ ಗ್ರಾಫ್ (Arecanut Price) ಕಂಡು ರೈತರಲ್ಲಿ ಸಂತಸ ಮೂಡಿಸಿದ ಶಿವಮೊಗ್ಗ ಅಡಿಕೆ ಧಾರಣೆ, ಮೇ ತಿಂಗಳಿನ ಪ್ರಾರಂಭದಲ್ಲಿ ಮತ್ತೊಂದು ಸಣ್ಣ ಮೊತ್ತದ ಏರಿಕೆ ದಾಖಲಿಸಿ, ಕಳೆದೊಂದು ವಾರದಿಂದ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಆದರೆ
ಕಳೆದ ವಾರ ಅಂದರೆ 14.05.2024ರಂದು ಗರಿಷ್ಠ ₹ 54,596 ದಾಖಲಿಸಿದ್ದ ರಾಶಿ ಇಡಿ ಧಾರಣೆ, ದಿನ ದಿನವೂ ಇಳಿಯುತ್ತ, ಇವತ್ತು ₹ 53,009 ಬಂದು ನಿಂತಿದೆ. ಸರಿ ಸುಮಾರು ₹ 1,500 ದರ ‘ಅಡಿಕೆ ರಾಶಿ ಇಡಿ’ಯಲ್ಲಿ ಕೊರತೆ ಕಾಣಿಸಿದೆ.

ಅಡಿಕೆ ರಾಶಿ ಇಡಿಯಲ್ಲಿ ₹1,500 ಇಳಿಮುಖವಾಗಿದ್ದರೆ, ಅಡಿಕೆ ಬೆಟ್ಟೆ ಧಾರಣೆಯಲ್ಲಿ ಕೇವಲ ₹.500 ಮಾತ್ರ ಇಳಿಕೆಯಾಗಿದ್ದು, ಆಲ್‌ಮೋಸ್ಟ್ ಸ್ಥಿರತೆಯನ್ನೇ ಉಳಿಸಿಕೊಂಡಿದೆ. ಇದೇ ಸಮಯದಲ್ಲಿ ಅಡಿಕೆ ಮಾರುಕಟ್ಟೆಗೆ ಬರುತ್ತಿರುವ ಆವಕವೂ (ಪೂರೈಕೆ) ಗಣನೀಯವಾಗಿ ಅತ್ತ-ಇತ್ತ ಆಗುತ್ತಿರುವುದು ಕಂಡು ಬಂದಿದೆ. ಅಡಿಕೆ ಆವಕ ಏರಿಳಿಕೆ ಆಗುತ್ತಿದ್ದರೂ, ಅಡಿಕೆ ಧಾರಣೆ ಮಾತ್ರ ಇಳಿಯುತ್ತಿರುವುದು ಒಂದು ವಿಶೇಷ.

ಶಿವಮೊಗ್ಗ APMC ದಾಖಲೆಗಳ ಪ್ರಕಾರ ಹೆಚ್ಚು ವ್ಯಾಪಾರವಾಗುವ ‘ರಾಶಿ ಇಡಿ ಅಡಿಕೆ’ ಆವಕದ ‘ಏರಿಳಿಕೆ’ ಹೀಗಿದೆ:
ದಿನಾಂಕ 14.05.2024 – 15,921 ಕ್ವಿಂಟಾಲ್
ದಿನಾಂಕ 15.05.2024 – 5,435 ಕ್ವಿಂಟಾಲ್
ದಿನಾಂಕ 16.05.2024 – 14,464ಕ್ವಿಂಟಾಲ್
ದಿನಾಂಕ 20.05.2024 – 3231 ಕ್ವಿಂಟಾಲ್
ದಿನಾಂಕ 21.05.2024 – 11,538 ಕ್ವಿಂಟಾಲ್
ರಾಶಿ ಇಡಿ ಧಾರಣೆ 53,009ಕ್ಕೆ ಇಳಿಕೆಯಾದಾಗ, ಗೊರಬಲು ಅಡಿಕೆ ₹.38,800 ಸನಿಹದಲ್ಲಿದೆ.

ಸಿಪ್ಪೆ ಗೋಟು ದರ ಏರಿಕೆ

ಈ ಎಲ್ಲ ವೆರೈಟಿಗಳ ಧಾರಣೆಯ ಇಳಿಕೆ ಕಾಣುತ್ತಿರುವಾಗ, ಸಿಪ್ಪೆ ಗೋಟು ದರ ಮಾತ್ರ ಸಣ್ಣ ಮಟ್ಟದ ಏರಿಕೆಯನ್ನು ದಾಖಲಿಸಿದೆ. APMC ಮಂಡಿ ಮತ್ತು ಸೊಸೈಟಿಗಳಲ್ಲಿ ಸಿಪ್ಪೆ ಗೋಟು ಅಡಿಕೆ ವ್ಯವಹಾರ ಬಹಳ ಕಮ್ಮಿ ಮತ್ತು ನಗದು ಮಾರುಕಟ್ಟೆಯಲ್ಲೇ ಹೆಚ್ಚಾಗಿ ಸಿಪ್ಪೆ ಗೋಟು ಅಡಿಕೆ ವ್ಯಾಪಾರ ಕಾಣುವುದು.

ಪ್ರತೀ ವರ್ಷವೂ ನಗದು ಮಾರುಕಟ್ಟೆಯಲ್ಲಿ ಮೇ 15 ರ ನಂತರ ಸಿಪ್ಪೆ ಗೋಟು ಅಡಿಕೆ ಚೇತರಿಕೆ ಕಾಣುವುದು ಎಂದು ನಂಬಿಕೆ ಮತ್ತು ವಾಡಿಕೆಯಾಗಿದೆ. ಅದರಂತೆ ಮೇ 15 ರಿಂದ ಸಿಪ್ಪೆ ಗೋಟು ಅಡಿಕೆ ಏರಿಕೆಯೊಂದಿಗೆ ₹.19,000 ದಲ್ಲಿ ವ್ಯಾಪಾರ ನೆಡೆಯುತ್ತಿದೆ ಎಂದು ವರದಿಯಾಗಿದೆ. (ಸಿಪ್ಪೆ ಗೋಟಿನ ಅಡಿಕೆಗೆ ಬಿಲ್ಲ ಇರುವುದಿಲ್ಲ. ಅಧಿಕೃತವಾಗಿ APMC ಯಲ್ಲಿ ಇದರ ವ್ಯವಹಾರ ಕಡಿಮೆ ಇರುವುದರಿಂದ, ವ್ಯಾಪಾರಸ್ತರು/ಏಜಂಟರು ನೇರವಾಗಿ ರೈತರ ಅಂಗಳದಲ್ಲೇ ಖರೀಧಿ ಮಾಡುವುದರಿಂದ ವ್ಯಾವಹಾರಿಕ ದಾಖಲೆಗಳು ಎಲ್ಲಾ ಕಡೆ ಇರುವುದು ಕಮ್ಮಿ.)
ಸಿಪ್ಪೆ ಗೋಟು ದರ ಇನ್ನಷ್ಟು ಏರುವ ನಿರೀಕ್ಷೆಯಿದ್ದು, ಸದ್ಯದಲ್ಲೇ ಓಪನ್ ನಗದು ಮಾರುಕಟ್ಟೆಯಲ್ಲಿ ₹.20,000 ದಾಟುವ ನಿರೀಕ್ಷೆ ರೈತರದು.

ಅಡಿಕೆ ಬೆಳೆಗಾರರ ನಿರೀಕ್ಷೆ ಮತ್ತು ಅಭಿಪ್ರಾಯ ಪ್ರಕಾರ, ಎಲ್ಲಾ ವೆರೈಟಿ ಅಡಿಕೆಗಳ (ಹಸ, ಬೆಟ್ಟೆ, ಇಡಿ, ಗೊರಬಲು, ಸಿಪ್ಪೆ ಗೋಟು) ಧಾರಣೆಗಳು ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಮೇಲೆ, ವ್ಯಾಪಾರ ವಹಿವಾಟು ತೀವ್ರತೆ ಪಡೆದು, ಧಾರಣೆ ಗ್ರಾಫ್ ಮೇಲ್ಮುಖವಾಗಲಿದೆ ಎಂದು ಅಂದಾಜಿಸಲಾಗುತ್ತಿದೆ.

ಉಪ ಬೆಳೆ ಧಾರಣೆ ಏರಿಕೆ

ಅಡಿಕೆ ಬೆಲೇ ಏರಿಳಿತವಾಗುವ ಸಮಯದಲ್ಲಿ, ಅಡಿಕೆಯ ತೋಟದಲ್ಲಿನ ಉಪ ಬೆಳೆಯಾದ ಕಾಳು ಮೆಣಸು ಧಾರಣೆ ಗಣನೀಯವಾಗಿ ಏರುತ್ತಿದ್ದು, ಕಳೆದ ವಾರ ₹.56,500 (ಕ್ವಿಂಟಾಲಿಗೆ) ಇದ್ದ ದರ, ಇವತ್ತು ₹.60,000 ದಾಟಿದೆ. ವಿಯಟ್ಣಾಮ್‌ನಲ್ಲಿ ಕಾಳು ಮೆಣಸು ಬೆಳೆ ತೀವ್ರ ಕುಸಿತ ಕಂಡ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದು, ಭಾರತದ ಕಾಳು ಮೆಣಸಿಗೆ ಜಾಕ್ ಪಾಟ್ ಧಾರಣೆ ಸಿಗಲಿದೆ ಎಂದು ಜಾಲತಾಣಗಳಲ್ಲಿ ಚರ್ಚೆ ಆಗುತ್ತಿದೆ. ಬಹುಶಃ ಎಲ್ಲ ಧಾರಣೆಗಳ ಗಣನೀಯ ಏರಿಳಿತಗಳಿಗೂ ಚಾಲನೆ ಸಿಗುವುದು ಜೂನ್ ನಾಲ್ಕರ ನಂತರ? ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್ಕಿ ಬಾರ್ ₹ 60,000 ಪಾರ್’ ಆಗಲಿದೆಯಾ? ಕಾದು ನೋಡಬೇಕು!

ಇದನ್ನೂ ಓದಿ: Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

Continue Reading

ಕರ್ನಾಟಕ

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

Self Harming: ಗದಗನ ಬಸವೇಶ್ವರ ನಗರದಲ್ಲಿ‌ನ ಸರ್ಕಾರಿ ಶಾಲೆ ನಂ. 6 ರಲ್ಲಿ ಶಿಕ್ಷಕನಾಗಿದ್ದ ಈಶಪ್ಪ ಕಳೆದ ರಾತ್ರಿ ಹೆಂಡತಿ ಜತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಈ ವೇಳೆಗೆ ಆಕೆಯ ಸಹೋದರರಾದ ಅನಿಲ್‌ ಪವಾರ ಮತ್ತು ಮಂಜುನಾಥ ಪವಾರ ಎಂಬುವವರು ಮನಗೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಸಹೋದರಿಯೊಂದಿಗೆ ಭಾವ ಜಗಳ ಮಾಡುತ್ತಿರುವುದನ್ನು ನೋಡಿಕೊಂಡು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ಇದರಿಂದ ಸಿಟ್ಟಿಗೆದ್ದ ಅವರು ನಮ್ಮ ತಂಗಿ ಜತೆಗೆ ಯಾಕೆ ಜಗಳ ಮಾಡುತ್ತೀಯಾ ಎಂದು ಈಶಪ್ಪನಿಗೆ ಎರಡು ಬಾರಿಸಿದ್ದಾರೆ. ಇದರಿಂದ ಮನನೊಂದು ಈಶಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

Self Harming Husband commits suicide for taking his wife home
Koo

ಗದಗ: ಭಾವಂದಿರು ಬಂದು ಥಳಿಸಿ ತನ್ನ ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋದರು ಎಂಬ ಕಾರಣಕ್ಕೆ ಪತಿ ಮಹಾಶಯನೊಬ್ಬ ನೊಂದು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಗದಗ ನಗರದ ಬಸವೇಶ್ವರ ನಗರದಲ್ಲಿ ನಡೆದಿದೆ.

ಈಶಪ್ಪ ಕಟ್ಟಿಮನಿ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನನ್ನ ಸಾವಿಗೆ ಭಾವಂದಿರೇ (ಪತ್ನಿಯ ಸಹೋದರರು) ಕಾರಣ ಎಂದು‌ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗದಗನ ಬಸವೇಶ್ವರ ನಗರದಲ್ಲಿ‌ನ ಸರ್ಕಾರಿ ಶಾಲೆ ನಂ. 6 ರಲ್ಲಿ ಶಿಕ್ಷಕನಾಗಿದ್ದ ಈಶಪ್ಪ ಕಳೆದ ರಾತ್ರಿ ಹೆಂಡತಿ ಜತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಈ ವೇಳೆಗೆ ಆಕೆಯ ಸಹೋದರರಾದ ಅನಿಲ್‌ ಪವಾರ ಮತ್ತು ಮಂಜುನಾಥ ಪವಾರ ಎಂಬುವವರು ಮನಗೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಸಹೋದರಿಯೊಂದಿಗೆ ಭಾವ ಜಗಳ ಮಾಡುತ್ತಿರುವುದನ್ನು ನೋಡಿಕೊಂಡು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ಇದರಿಂದ ಸಿಟ್ಟಿಗೆದ್ದ ಅವರು ನಮ್ಮ ತಂಗಿ ಜತೆಗೆ ಯಾಕೆ ಜಗಳ ಮಾಡುತ್ತೀಯಾ ಎಂದು ಈಶಪ್ಪನಿಗೆ ಎರಡು ಬಾರಿಸಿದ್ದಾರೆ. ಅಲ್ಲದೆ, ಈ ವೇಳೆ ಸಾಕಷ್ಟು ಗಲಾಟೆಗಳು ಸಹ ನಡೆದಿವೆ ಎನ್ನಲಾಗಿದೆ.

ಕೊನೆಗೆ ಮಾತಿಗೆ ಮಾತು ಬೆಳೆದಿದ್ದರಿಂದ ಅನಿಲ್‌ ಮತ್ತು ಮಂಜುನಾಥ ಅವರು ಇನ್ನು ತಮ್ಮ ತಂಗಿ ಇಲ್ಲಿ ಇರುವುದು ಸರಿಯಲ್ಲ. ಆಕೆಯನ್ನು ತವರು ಮನೆಗೆ ಕರೆದೊಯ್ಯುವುದೇ ಸರಿ ಎಂದು ನಿರ್ಧರಿಸಿ ಅಲ್ಲಿಂದ ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದಾರೆ.

ಇದರಿಂದ ಮನನೊಂದ ಈಶಪ್ಪ ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ, ಈ ವೇಳೆ ಡೆತ್‌ ನೋಟ್‌ ಬರೆದಿಟ್ಟಿದ್ದು, ತನ್ನ ಸಾವಿಗೆ ಭಾವಂದಿರಾದ ಅನಿಲ್‌ ಮತ್ತು ಮಂಜುನಾಥ್‌ ಅವರೇ ಕಾರಣ ಎಂದು ದೂರಿದ್ದಾರೆ. ನನ್ನ ಸಾವಿಗೆ ಇವರಿಬ್ಬರೂ ಕಾರಣರಾಗಿದ್ದಾರೆ. ಇವರಿಗೆ ಶಿಕ್ಷೆ ಆಗಲೇಬೇಕು ಎಂದು ಉಲ್ಲೇಖಿಸಿದ್ದಾರೆ. ಗದಗ ನಗರ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Naxal activities: ವೆಂಕಟಮ್ಮನಹಳ್ಳಿ ನಕ್ಸಲ್ ದಾಳಿ ಕೇಸ್‌; 19 ವರ್ಷಗಳಿಂದ ತಲೆಮರೆಸಿಕೊಂಡಿದ್ದವ ಅರೆಸ್ಟ್‌

ತುಮಕೂರು: ವೆಂಕಟಮ್ಮನಹಳ್ಳಿ ನಕ್ಸಲ್ ದಾಳಿ (Naxal activities) ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನವಾಗಿದೆ. ಶಂಕರ ಅಲಿಯಾಸ್‌ ಕೊತ್ತಗೆರೆ ಶಂಕರ (38) ಬಂಧಿತ ಆರೋಪಿಯಾಗಿದ್ದಾನೆ.

2005ರಲ್ಲಿ ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿಯಲ್ಲಿ ಪೊಲೀಸ್ ಕ್ಯಾಂಪ್ ಮೇಲೆ ನಕ್ಸಲಿಯರ ದಾಳಿ ನಡೆದಿತ್ತು. ಪೊಲೀಸ್ ಕ್ಯಾಂಪ್ ಮೇಲೆ ಸುಮಾರು 300ಕ್ಕೂ ಹೆಚ್ಚು ಮಾವೊಯಿಸ್ಟ್ ನಕ್ಸಲಿಯರು ದಾಳಿ ಮಾಡಿದ್ದರು. ದಾಳಿ ವೇಳೆ ಕರ್ತವ್ಯದಲ್ಲಿದ್ದ 7 ಮಂದಿ ಪೊಲೀಸರನ್ನು ಬಂದೂಕು ಹಾಗೂ ಬಾಂಬ್‌ಗಳಿಂದ ಕೊಲೆಗೈದಿದ್ದರು. ಘಟನೆಯಲ್ಲಿ 5 ಮಂದಿ ಪೊಲೀಸರಿಗೆ ಗಂಭೀರ ಗಾಯವಾಗಿತ್ತು.

ಅಲ್ಲದೇ ಕ್ಯಾಂಪ್ ಮುಂಭಾಗ ನಿಂತಿದ್ದ ಖಾಸಗಿ ಬಸ್ ಡ್ರೈವರ್‌ನ ಕೊಲೆಯಾಗಿತ್ತು. ಪೊಲೀಸ್ ಕ್ಯಾಂಪ್‌ನಲ್ಲಿದ್ದ ಬಂದೂಕುಗಳು ಹಾಗೂ ಗುಂಡುಗಳನ್ನು ದೋಚಿಕೊಂಡು ನಕ್ಸಲ್ ಟೀಂ ನಾಪತ್ತೆಯಾಗಿತ್ತು. ಈ ಸಂಬಂಧ ಪಾವಗಡ ತಾಲೂಕಿನ ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಸದರಿ ಪ್ರಕರಣದಲ್ಲಿ 32 ಆರೋಪಿಗಳ ಮೇಲೆ ಪಾವಗಡ ಜೆಎಂಎಫ್‌ಸಿ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಪ್ರಕರಣ ಸಂಬಂಧ ಆರೋಪಿಗಳ ಹುಡುಕಾಟದಲ್ಲಿದ್ದ ಪೊಲೀಸರಿಗೆ ಆರೋಪಿ ಶಂಕರ ಸಿಕ್ಕಿ ಬಿದ್ದಿದ್ದಾನೆ. ಬೆಂಗಳೂರಿನ ಗೌರಿಪಾಳ್ಯದಲ್ಲಿ ವಾಸವಿದ್ದ ಆರೋಪಿ ಶಂಕರ ಬಿಬಿಎಂಪಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಖಚಿತ ಮಾಹಿತಿ ಆಧರಿಸಿ ತುಮಕೂರು ಎಸ್‌ಪಿ ಅಶೋಕ್ ಕೆ.ವಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಶಾಲೆ, ದೇವಸ್ಥಾನದ ಬಳಿಕ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ಗೂ ಬಾಂಬ್‌ ಬೆದರಿಕೆ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic city) ಪ್ರತಿಷ್ಠಿತ ಹೋಟೆಲ್‌ಗೆ ಇಂದು ಬಾಂಬ್ ಬೆದರಿಕೆ ಮೇಲ್ (Bomb Hoax) ಬಂದಿದೆ. ಈ ಹಿನ್ನೆಲೆಯಲ್ಲಿ ಹೋಟೆಲ್‌ (Hotel) ಆವರಣವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದೆ. ಶಾಲೆ, ದೇವಸ್ಥಾನ ಬಳಿಕ ಇದೀಗ ಹೋಟೆಲ್‌ ಬಾಂಬ್‌ ಬೆದರಿಕೆಗೆ ತುತ್ತಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಬಳಿಯ ಒಟೇರಾ (Hotel Oterra) ಎಂಬ ಹೋಟೆಲ್‌ಗೆ ಬಾಂಬ್‌ ಬೆದರಿಕೆ ಮೇಲ್ ರವಾನೆಯಾಗಿದೆ. ತಡರಾತ್ರಿ 2 ಘಂಟೆಗೆ ಮೇಲ್ ಬಂದಿದ್ದು, ಇಂದು ಬೆಳಿಗ್ಗೆ ಹೋಟೆಲ್ ಸಿಬ್ಬಂದಿಗಳು ಮೇಲ್ ಚೆಕ್ ಮಾಡುವಾಗ ಕಂಡಿದೆ. ಆಗ ಗಾಬರಿಯಾಗಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಒಟೇರಾ ಹೋಟೆಲ್‌ಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿದ್ದು, ಬಾಂಬ್ ಸ್ಕ್ವಾಡ್ ಕರೆಸಿ ತಪಾಸಣೆ ನಡೆಸಿದ್ದಾರೆ. ಸದ್ಯ ಯಾವುದೇ ಬಾಂಬ್‌ ಕಂಡುಬಂದಿಲ್ಲ. ಮುನ್ನೆಚ್ಚರಿಕೆಯಾಗಿ ತಪಾಸಣೆ ಮುಗಿಯುವವರೆಗೂ ಹೋಟೆಲ್‌ ಆವರಣವನ್ನು ಗ್ರಾಹಕರಿಗೆ ಬಂದ್‌ ಮಾಡಲಾಗಿದೆ.

ಶಾಲೆ, ದೇವಸ್ಥಾನಗಳಿಗೆ ಬೆದರಿಕೆ

ಇತ್ತೀಚೆಗೆ ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆ‌ಯಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಇಲಾಖೆಯ ಸಿಟಿ ಎಸ್.ಬಿ.ಗೆ ಇ-ಮೇಲ್ ಬಂದಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಹಲವು ಪ್ರತಿಷ್ಠಿತ ಶಾಲೆಗಳಿಗೆ ಇದೇ ರೀತಿಯ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಇದು ಕೂಡ ಹುಸಿಯಾಗಿತ್ತು. ಇತ್ತೀಚೆಗೆ ಹೊಸದಿಲ್ಲಿಯ ಹತ್ತಾರು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿದ್ದು, ಆ ಎಲ್ಲ ಶಾಲೆಗಳ ಮಕ್ಕಳಿಗೂ ರಜೆ ನೀಡಿ ಆವರಣ ತಲಾಶ್‌ ಮಾಡಲಾಗಿತ್ತು. ಇದು ಕೂಡ ಹುಸಿ ಎಂದು ಕಂಡುಬಂದಿತ್ತು. ಹೀಗೆ ಬೆದರಿಕೆ ಇಮೇಲ್‌ ಮಾಡಿದ ವ್ಯಕ್ತಿ ಅಪ್ರಾಪ್ತ ವಯಸ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದರು. ನಂತರ ದೆಹಲಿಯ ವಿಮಾನ ನಿಲ್ದಾಣ (delhi airport) ಮತ್ತು ಹಲವಾರು ಆಸ್ಪತ್ರೆಗಳಿಗೆ (hospital) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಸಂದೇಶಗಳು ಬಂದಿದ್ದವು.

ಇದನ್ನೂ ಓದಿ: Ration Card : ಸಾವಿನ ಎಡವಟ್ಟು ಸರಿಪಡಿಸಿದ ಆಹಾರ ಇಲಾಖೆ! ಮನೆ ಬಾಗಿಲಿಗೆ ಬಂತು ರೇಷನ್‌ ಕಾರ್ಡ್‌; ಇದು ವಿಸ್ತಾರ ನ್ಯೂಸ್‌ ಇಂಪ್ಯಾಕ್ಟ್‌

ಇದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಹೀಗೆ ಬೆದರಿಕೆ ಮೇಲ್‌ ಮಾಡುತ್ತಿರುವವರ ತಂತ್ರಜ್ಞಾನದಲ್ಲಿ ಪರಿಣಿತರಾಗಿದ್ದು, ದೇಶದ ಸರ್ವರ್‌ ಕನೆಕ್ಷನ್‌ ತಪ್ಪಿಸಿ ವಿಪಿಎನ್‌ ಮೂಲಕ ಕಾರ್ಯಾಚರಿಸಿ ವಿದೇಶಗಳ ಸರ್ವರ್‌ನಿಂದ ಬಂದಂತೆ ತೋರಿಸುವ ಕಲೆಯಲ್ಲಿ ನಿಷ್ಣಾತರಾಗಿದ್ದಾರೆ. ಹೀಗಾಗಿ ಇದನ್ನು ಭೇದಿಸುವುದು ಪೊಲೀಸರಿಗೆ ಕಷ್ಟವಾಗುತ್ತಿದೆ.

ದೂರು ದಾಖಲು

ಇ-ಮೇಲ್‌ಗಳ ನಿಖರವಾದ ಮೂಲವನ್ನು ಪತ್ತೆ ಹಚ್ಚಲು ದೆಹಲಿ ಪೊಲೀಸರು ಇಂಟರ್‌ಪೋಲ್ ಮೂಲಕ ರಷ್ಯಾದ ಮೇಲಿಂಗ್ ಸೇವಾ ಕಂಪೆನಿ Mail.ru ಅನ್ನು ಸಂಪರ್ಕಿಸಿದರು. ಬಾಂಬ್ ಹುಸಿ ಇ-ಮೇಲ್‌ಗಳ ಉದ್ದೇಶವು ಸಾಮೂಹಿಕ ಭೀತಿಯನ್ನು ಸೃಷ್ಟಿಸುವುದು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದಾಗಿದೆ ಎಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸುಳ್ಳು ಬಾಂಬ್ ಬೆದರಿಕೆಗಳ ಸಂದರ್ಭಗಳನ್ನು ಎದುರಿಸಲು ವಿವರವಾದ ಪ್ರೋಟೋಕಾಲ್ ಮತ್ತು ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್ಸ್ (SOP) ಗಾಗಿ ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ವಾರದ ಆರಂಭದಲ್ಲಿ, ಗೃಹ ಕಾರ್ಯದರ್ಶಿ ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ತಪ್ಪು ಮಾಹಿತಿಯಿಂದಾಗಿ ಯಾವುದೇ ಅನಗತ್ಯ ಭಯವನ್ನು ಉಂಟಾಗದಂತೆ ತಡೆಯಲು ವ್ಯವಸ್ಥೆಗೊಳಿಸುವಂತೆ ಕೇಳಿಕೊಂಡಿದ್ದರು.
ಭದ್ರತೆ ಹೆಚ್ಚಳಕ್ಕೆ ಸೂಚನೆ

ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಭದ್ರತೆ, ಸಿಸಿಟಿವಿ ಕೆಮರಾ ಮತ್ತು ಇಮೇಲ್‌ಗಳ ನಿಯಮಿತ ಮೇಲ್ವಿಚಾರಣೆಯನ್ನು ಹೆಚ್ಚಿಸುವ ಅಗತ್ಯವನ್ನು ಸಚಿವಾಲಯ ಒತ್ತಿಹೇಳಿದೆ. ತಪ್ಪು ಮಾಹಿತಿಯು ಯಾವುದೇ ಅನಗತ್ಯ ಭೀತಿಯನ್ನು ಸೃಷ್ಟಿಸದಂತೆ ಪರಿಣಾಮಕಾರಿ ಪ್ರತಿಕ್ರಿಯೆ ಕಾರ್ಯವಿಧಾನಕ್ಕಾಗಿ ನಿಕಟ ಸಮನ್ವಯವನ್ನು ಹೊಂದಲು ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ಗೃಹ ಕಾರ್ಯದರ್ಶಿ ತಿಳಿಸಿದ್ದಾರೆ.

Continue Reading
Advertisement
Narendra Modi
ದೇಶ3 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ3 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ4 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ4 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ4 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ5 hours ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ5 hours ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ5 hours ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ5 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ22 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌