Vishnuvardhan | ಬಾಲಣ್ಣ ಕುಟುಂಬಸ್ಥರು ಅವಮಾನ ಮಾಡಿದ್ದಾರೆ: ನಟ ಅನಿರುದ್ಧ - Vistara News

ಸಿನಿಮಾ

Vishnuvardhan | ಬಾಲಣ್ಣ ಕುಟುಂಬಸ್ಥರು ಅವಮಾನ ಮಾಡಿದ್ದಾರೆ: ನಟ ಅನಿರುದ್ಧ

ಬಾಲಣ್ಣ ಕುಟುಂಬಸ್ಥರು ಕೋರ್ಟ್ ಮೊರೆ ಹೋಗಿದ್ದಾರೆ. ನಟ ಹಾಗೂ ವಿಷ್ಣುವರ್ಧನ್ (Vishnuvardhan) ಅಳಿಯ ಅನಿರುದ್ಧ. ಈ ಕುರಿತು ಅವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಡಾ.ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕವೂ ಅಭಿಮಾನ್ ಸ್ಟುಡಿಯೋದಲ್ಲಿಯೇ ಆಗಬೇಕು ಎನ್ನುವುದು ಅಸಂಖ್ಯಾತ ಅಭಿಮಾನಿಗಳ ಆಸೆಯಾಗಿತ್ತು. ಆದರೆ, ಮೈಸೂರಿಗೆ ಅದು ಸ್ಥಳಾಂತರಗೊಂಡಿದೆ. ಈ ಸಂದರ್ಭದಲ್ಲಿ ಸಮಾಧಿಯನ್ನೇ ಕಿತ್ತಹಾಕಬೇಕು ಎಂದು ಬಾಲಣ್ಣ ಕುಟುಂಬಸ್ಥರು ಕೋರ್ಟ್ ಮೊರೆ ಹೋಗಿದ್ದಾರೆ ಎಂದು ನಟ ಹಾಗೂ ವಿಷ್ಣುವರ್ಧನ್ ಅಳಿಯ ಅನಿರುದ್ಧ ಅವರು ಹೇಳಿದ್ದಾರೆ. ಈ ಕುರಿತು ಅವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಅನಿರುದ್ಧ ಪೋಸ್ಟ್‌ನಲ್ಲಿ ʻʻಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳು ಪೂಜೆ ಇತ್ಯಾದಿ ಮಾಡಿಕೊಂಡು ಬರಲಿ, ನಮಗೆ ಯಾವತ್ತೂ ಅಭ್ಯಂತರ ಇರಲಿಲ್ಲ, ಇರೋದೂ ಇಲ್ಲ. ಇದ್ದಿದ್ದರೆ ಅಭಿಮಾನಿಗಳಿಗೆ ಇಷ್ಟು ವರ್ಷ ಪೂಜೆ ಇತ್ಯಾದಿ ಮಾಡಿಕೊಂಡು ಬರೋದಕ್ಕೆ ಅವಕಾಶಾನೇ ಸಿಗುತ್ತಿರಲಿಲ್ಲ. ನಮ್ಮ ಅಭ್ಯಂತರ ಇಲ್ಲ ಅಂದಮೇಲೆ ನಮ್ಮ ಅನುಮತಿ ಯಾತಕ್ಕೆ? ಅನುಮತಿ ಕೊಡಬೇಕಾಗಿರೋದು ಬಾಲಣ್ಣರವರ ಮಕ್ಕಳು ಅಭಿಮಾನಿಗಳಿಗೆ. ಅಭಿಮಾನಿಗಳೇ! ಅವರ ಅನುಮತಿ ಪಡೆದುಕೊಳ್ಳಿ, ನೆನಪಿಡಿ ಅದು ಅವರ ಜಾಗ, ಎಲ್ಲಾ ಸಮಸ್ಯೆ ಬಗೆಹರಿಯತ್ತೆ. ಹಾಗೇನೆ ನಾವು ಯಾವತ್ತು ಕೂಡ ಅದು ತೆರವು ಆಗೋದಕ್ಕೆ ಬಯಸಲಿಲ್ಲ, ಬಯಸೋದೂ ಇಲ್ಲ. ಆದರೆ ಬಾಲಣ್ಣರವರ ಕುಟುಂಬದವರ ಅಪೇಕ್ಷೆ ಈಗ ಏನು? 10 ಗುಂಟೆ ಅವತ್ತು ಯಾಕೆ ಕೊಡಲಿಲ್ಲ? 6 1/2 ವರ್ಷಗಳು ಕೇಳಿ, ಕೇಳಿ, ಎಷ್ಟೇ, ಹೇಗೆೇ ಪ್ರಯತ್ನ ಪಟ್ಟರೂ, ಆಗ ಅವರು ಮನಸ್ಸು ಮಾಡಲಿಲ್ಲ, ಅಪ್ಪಾವರನ್ನ, ಅಮ್ಮಾವರನ್ನ ಅವಮಾನ ಮಾಡಿದ್ದಾರೆ. ಕೊನೆಗೆ ಸರಕಾರನೇ ಬೇರೆ ಕಡೆ ಮಾಡಿ ಅಂತ ಹೇಳಿದಮೇಲೆ ನಾವು ನಿರ್ಧಾರ ತೆಗೆದುಕೊಳ್ಳೇ ಬೇಕಾಯಿತು.…ತುಂಬಾ ನೊಂದುಕೊಂಡಿದ್ದೇವೆ. ಸಾಕಷ್ಟು ಸಂಘರ್ಷಗಳನ್ನು ಎದುರಿಸಿದ್ದೇವೆ. ಹೋರಾಡಿದ್ದೇವೆ…ನಮ್ಮ ಪ್ರಯತ್ನಗಳ ಬಗ್ಗೆ, ಶ್ರಮ, ಶ್ರದ್ಧೆ, ಪ್ರೀತಿ, ಕಾಳಜಿ ಬಗ್ಗೆ ದಯಮಾಡಿ ಪ್ರಶ್ನೆಗಳನ್ನು ಎತ್ತಬೇಡಿ ಎಂದಿದ್ದಾರೆ.

ಇದನ್ನೂ ಓದಿ | Actor Vishnuvardhan | ʻಕೋಟಿಗೊಬ್ಬʼ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

ʻʻಸರಕಾರ ಈಗಾಗಲೆ ಮೈಸೂರಲ್ಲಿ ಸ್ಮಾರಕ ಮಾಡಾಗಿದೆ.…ಅಲ್ಲಿ ಅಪ್ಪಾವರ ಅಸ್ಥಿಯನ್ನು ಪೂಜಾವಿಧಿಯಿಂದ ಇಟ್ಟು ಅದರ ಮೇಲೆ ಪ್ರತಿಮೆಯನ್ನು ಸ್ಥಾಪಿಸಿದ್ದೇವೆ.…ಇದೇ ತಿಂಗಳು 29ಕ್ಕೆ, ಭಾನುವಾರ ಲೋಕಾರ್ಪಣೆ ಆಗಲಿದೆ. ನಾವೂ ಅಲ್ಲಿ ಅತ್ಯಂತ ಶ್ರದ್ಧೆಯಿಂದ ನಮ್ಮ ನಮನಗಳನ್ನು ಸಲ್ಲಿಸುತ್ತೆವೆ. ಅಭಿಮಾನಿಗಳೇ! ಈ ಸ್ಮಾರಕ ನಿಮಗಾಗಿ, ನಿಮಗೋಸ್ಕರ, ಯಾವುದೇ ಕಹಿ ಭಾವನೆಗಳು ಇಟ್ಟುಕೊಳ್ಳದೇ, ಬಂದು ಸಂಭ್ರಮಿಸಿ, ಅಪ್ಪಾವರಗೆ ತಮ್ಮ ನಮನಗಳನ್ನು , ಶ್ರದ್ಧಾಂಜಲಿಯನ್ನು ಸಲ್ಲಿಸಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ | Actor Vishnuvardhan | ಕೊನೆಗೂ ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಮುಹೂರ್ತ: ಜನವರಿ 29ರಂದು ಫಿಕ್ಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Dhanush: ಧನುಷ್-ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದ ಖ್ಯಾತ ಗಾಯಕಿ

Actor Dhanush: ಕಾಲಿವುಡ್‌ ನಟ ಧನುಷ್‌ ಮತ್ತು ಐಶ್ವರ್ಯಾ ರಜನಿಕಾಂತ್‌ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇಬ್ಬರು ತಮ್ಮ ಸುದೀರ್ಘ ದಾಂಪತ್ಯ ಜೀವನ ಯಾವ ಕಾರಣಕ್ಕೆ ಕೊನೆಯಾಯ್ತು ಎನ್ನುವುದನ್ನು ತಿಳಿಸಿಲ್ಲ. ಇದೀಗ ಜನಪ್ರಿಯ ಗಾಯಕಿ ಸುಚಿತ್ರಾ ಅವರು ಇಬ್ಬರ ಬಗ್ಗೆ ಶಾಕಿಂಗ್‌ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅವರು ಪರಸ್ಪರ ಮೋಸ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

Actor Dhanush
Koo

ಚೆನ್ನೈ: ಈಗಾಗಲೇ ಕಾಲಿವುಡ್‌ ನಟ ಧನುಷ್‌ (Actor Dhanush) ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ (Aishwarya Rajinikanth) ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ. 2022ರ ಜನವರಿ 17ರಂದು ಧನುಷ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ 18 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುವುದಾಗಿ ಘೋಷಿಸಿದ್ದರು. ಆದರೆ ಇಬ್ಬರು ತಮ್ಮ ಸುದೀರ್ಘ ದಾಂಪತ್ಯ ಜೀವನ ಯಾವ ಕಾರಣಕ್ಕೆ ಕೊನೆಯಾಯ್ತು ಎನ್ನುವುದನ್ನು ತಿಳಿಸಿಲ್ಲ. ಇದೀಗ ಜನಪ್ರಿಯ ಗಾಯಕಿ ಸುಚಿತ್ರಾ (Suchitra) ಅವರು ಧನುಷ್‌ ಮತ್ತು ಐಶ್ವರ್ಯಾ ಅವರಿಗೆ ಸಂಬಂಧಿಸಿ ಶಾಕಿಂಗ್‌ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೂ ಧನುಷ್‌ ಬಗ್ಗೆ ಆರೋಪ ಹೊರಿಸಿದ್ದ ಸುಚಿತ್ರಾ ಸಂದರ್ಶನವೊಂದರಲ್ಲಿ, ಧನುಷ್‌ ಮತ್ತು ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಯೂಟ್ಯೂಬ್‌ ಚಾನಲ್‌ ಕುಮುದಂಗೆ ನೀಡಿದ ಸಂದರ್ಶನಲ್ಲಿ ಸುಚಿತ್ರಾ ಈ ಬಗ್ಗೆ ಮಾತನಾಡಿದ್ದಾರೆ. ಧನುಷ್‌ ಮತ್ತು ಐಶ್ವರ್ಯಾ ಇಬ್ಬರೂ ವ್ಯವಸ್ಥಿತವಾಗಿ ಪರಸ್ಪರ ಮೋಸ ಮಾಡಿಕೊಂಡಿದ್ದ ದಂಪತಿ ಎಂದು ಸುಚಿತ್ರಾ ಕರೆದಿದ್ದಾರೆ. ಇವರು ಮದುವೆಯಾದ ಮೇಲೆ ಆಗಾಗ ಇತರರೊಂದಿಗೆ ಡೇಟಿಂಗ್ ಹೋಗುತ್ತಿದ್ದರು ಎಂದೂ ಹೇಳಿದ್ದಾರೆ. ಧನುಷ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಸುಚಿತ್ರಾ, ಐಶ್ವರ್ಯಾ ಅವರನ್ನು ಕೆಟ್ಟ ತಾಯಿ ಎಂದು ಜರೆದಿದ್ದಾರೆ ಮತ್ತು ಈ ವಿಚಾರದಲ್ಲಿ ಧನುಷ್‌ ಪರವಾಗಿ ನಿಂತಿದ್ದಾರೆ. ಧನುಷ್ ಪ್ರೀತಿಯ ತಂದೆಯಾಗಿ ತಮ್ಮ ಕರ್ತವ್ಯಗಳನ್ನು ಪೂರೈಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಐಶ್ವರ್ಯಾ ಅವರು ಯಾವಾಗಲೂ ಧನುಷ್‌ ತಮಗೆ ಮೋಸ ಮಾಡಿದ್ದಾರೆ ಎಂದು ಹೇಳುತ್ತಾರೆ. ಆದರೆ ಅವರೂ ಕೂಡ ಅದನ್ನೇ ಮಾಡಿದ್ದಾರೆ. ಆಕೆಗೊಂದು ನ್ಯಾಯ ಆತನಿಗೊಂದು ನ್ಯಾಯವೇ? ಎಂದು ಸುಚಿತ್ರಾ ಪ್ರಶ್ನಿಸಿದ್ದಾರೆ. “ಅವರು ಬಾರ್‌ನಲ್ಲಿ ಕುಳಿತು ಡೇಟಿಂಗ್ ನಡೆಸುತ್ತಿರುವ ವ್ಯಕ್ತಿಯೊಂದಿಗೆ ಮದ್ಯ ಸೇವಿಸಿದ್ದಾರೆ” ಎಂದಿದ್ದಾರೆ.

ಧನುಷ್ ವಿರುದ್ಧ ಆರೋಪ ಹೊರಿಸಿದ್ದ ಸುಚಿತ್ರಾ

2017ರಲ್ಲಿ ಸುಚಿತ್ರಾ ಅವರು ಧನುಷ್ ಸಹಾಯಕ ತಮ್ಮ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು. ಆ ಬಳಿಕ ಧನುಷ್ ಬಗ್ಗೆಯೂ ದೂರಿದ್ದರು. ಧನುಷ್ ಓರ್ವ ಡ್ರಗ್ ಅಡಿಕ್ಟ್ ವ್ಯಕ್ತಿ, ತಮಗೆ ಕಿರುಕುಳ ನೀಡಿದ್ದರು ಎಂದು ಹೇಳಿದ್ದರು. ಇದೀಗ ಮತ್ತೊಮ್ಮೆ ಧನುಷ್‌ ವಿರುದ್ದ ಮಾತನಾಡಿ ಸಂಚಲನ ಮೂಡಿಸಿದ್ದಾರೆ.

ಕಳೆದ ತಿಂಗಳು ಧನುಷ್‌ ಮತ್ತು ಐಶ್ವರ್ಯಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ʼʼಇಬ್ಬರೂ ಅಧಿಕೃತವಾಗಿ ಚೆನ್ನೈಯ ನ್ಯಾಯಾಲಯದಲ್ಲಿ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೆಲವು ವರ್ಷಗಳಿಂದ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅವರು ಪರಸ್ಪರ ಗೌರವ ಹೊಂದಿದ್ದಾರೆ. ಇದು ಸೌಹಾರ್ದಯುತ ಪ್ರಕ್ರಿಯೆಯಾಗಲಿದೆ” ಎಂದು ಮೂಲಗಳು ತಿಳಿಸಿವೆ.

ಸದ್ಯ ಧನುಷ್‌ ‌ʼರಾಯನ್‌ʼ ಚಿತ್ರದಲ್ಲಿ ನಟಿಸುವ ಜತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ರಾಷ್ಟ್ರ ಪಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಬಹುಭಾಷಾ ಸಿನಿಮಾ ʼಕುಬೇರʼದಲ್ಲಿಯೂ ಧನುಷ್‌ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಕನ್ನಡತಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಐಶ್ವರ್ಯಾ ರಜನಿಕಾಂತ್‌ ನಿರ್ರದೇಶನದ ʼಲಾಲ್‌ ಸಲಾಂʼ ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡಿಲ್ಲ. ಅವರ ಮುಂದಿನ ಸಿನಿಮಾ ಇನ್ನಷ್ಟೆ ಘೋಷಣೆಯಾಗಬೇಕಿದೆ.

ಇದನ್ನೂ ಓದಿ: Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Continue Reading

ಕಿರುತೆರೆ

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

Vaishnavi Gowda: ಕನ್ನಡದ ಜನಪ್ರಿಯ ಸೀತಾ ರಾಮ ಧಾರಾವಹಿಯ ನಾಯಕಿ ವೈಷ್ಣವಿ ಗೌಡ ಅವರಿಗೆ ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗಿದೆ.

VISTARANEWS.COM


on

Vaishnavi Gowda
Koo

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ವೈಷ್ಣವಿ ಗೌಡ (Vaishnavi Gowda) ಅವರಿಗೆ ಬೆಂಗಳೂರು ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಸದ್ಯ ಝೀ ಕನ್ನಡ ವಾಹಿನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ʼಸೀತಾ ರಾಮʼ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ನಾಯಕಿ ಸೀತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 2023ರ ಜುಲೈ 17ರಂದು ಆರಂಭವಾದ ಈ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಿದೆ. ಆರಂಭವಾಗಿ ಸುಮಾರು 10 ತಿಂಗಳು ಕಳೆದಿದ್ದರೂ ಈಗಲೂ ಟಾಪ್‌ ಲಿಸ್ಟ್‌ನಲ್ಲಿದೆ. ಉತ್ತಮ ಟಿಆರ್‌ಪಿ ಪಡೆದುಕೊಳ್ಳುತ್ತಿರುವ ಈ ಧಾರಾವಾಹಿಯ ದೃಶ್ಯವೇ ಸದ್ಯ ವೈಷ್ಣವಿ ಗೌಡ ಅವರಿಗೆ ಫಜೀತಿ ತಂದಿಟ್ಟಿದೆ.

ಏನಿದು ಪ್ರಕರಣ?

ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ವೈಷ್ಣವಿ ಗೌಡ ಟ್ರಾಫಿಕ್‌ ರೂಲ್ಸ್‌ ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಪೊಲೀಸರಿಗೆ ಬಳಿಕ ಧಾರಾವಾಹಿಯ ಶೂಟಿಂಗ್ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ನಡೆದ ವಿಚಾರ ಗೊತ್ತಾಗಿತ್ತು. ಬಳಿಕ ಇದನ್ನು ಬೆಂಗಳೂರಿನ ರಾಜಾಜಿನಗರ ಠಾಣೆಗೆ ವರ್ಗಾಯಿಸಲಾಯಿತು. ಸದ್ಯ ಸ್ಕೂಟರ್‌ ಮಾಲೀಕರಾದ ಸವಿತಾ ಹಾಗೂ ವೈಷ್ಣವಿ ಅವರಿಗೆ ತಲಾ 500 ರೂ. ದಂಡ ವಿಧಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಹಿಂದಿಗೆ ರಿಮೇಕ್‌

ಸದ್ಯ ʼಸೀತಾ ರಾಮʼ ಧಾರಾವಾಹಿ ಹಿಂದಿಗೆ ರಿಮೇಕ್‌ ಆಗುತ್ತಿದೆ. ಹಿಂದಿ ರಿಮೇಕ್‌ಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಝೀ ಹಿಂದಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕನ್ನಡದಲ್ಲಿ ವೈಷ್ಣವಿ ಗೌಡ ಜತೆಗೆ ರಾಮ್‌ ಆಗಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಧಾರಾವಾಹಿಯ ಪ್ರಧಾನ ಆಕರ್ಷಣೆಯಾದ ಸಿಹಿ ಪಾತ್ರದಲ್ಲಿ ಪುಟಾಣಿ ರೀತು ಸಿಂಗ್ ಮೋಡಿ ಮಾಡಿದ್ದಾರೆ. ಇವರ ಜತೆಗೆ ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಹಿಂದಿಯಲ್ಲಿ ಗಗನ್ ಚಿನ್ನಪ್ಪ ಮಾಡಿರುವ ರಾಮ್‌ ಪಾತ್ರವನ್ನು ಕರಣ್ ವೋಹ್ರಾ ನಿರ್ವಹಿಸಲಿದ್ದು, ವೈಷ್ಣವಿ ಗೌಡ ಅವರ ಸೀತಾ ಪಾತ್ರವನ್ನು ಪಾತ್ರವನ್ನು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಖ್ಯಾತಿಯ ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಇದರ ಜತೆಗೆ ʼಸೀತಾ ರಾಮʼ ಮಲೆಯಾಳಂಗೂ ಡಬ್‌ ಆಗುತ್ತಿದೆ. ಝೀ ಕೇರಳಂ ವಾಹಿನಿಯಲ್ಲಿ ಇದು ಪ್ರಸಾರವಾಗಲಿದೆ.

ಇದನ್ನೂ ಓದಿ: Seetha Raama Serial: ಹಿಂದಿಗೆ ರಿಮೇಕ್‌ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ

ವಿಶೇಷ ಎಂದರೆ ʼಸೀತಾ ರಾಮʼ ಧಾರಾವಾಹಿಯೂ ರಿಮೇಕ್‌. ಇದು ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿ ತಯಾರಾಗಿದೆ. ಈ ಧಾರಾವಾಹಿ ಝೀ ಮರಾಠಿಯಲ್ಲಿ 2021ರ ಆಗಸ್ಟ್​ನಿಂದ 2023ರ ಜನವರಿವರೆಗೆ ಪ್ರಸಾರವಾಗಿತ್ತು. 458 ಕಂತುಗಳನ್ನು ಹೊಂದಿದ್ದ ಇದರಲ್ಲಿ ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಸಿನಿಮಾ

Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

Ramayana Movie: ಸದ್ಯ ಚಿತ್ರ ಪ್ರೇಮಿಗಳ ಕುತೂಹಲ ಕೆರಳಿಸಿರುವ ಸಿನಿಮಾಗಳಲ್ಲಿ ರಾಮಾಯಣ ಕೂಡ ಒಂದು. ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಕೆಜಿಎಫ್‌ ಸರಣಿ ಚಿತ್ರಗಳ ಮೂಲಕ ದೇಶದ ಗಮನ ಸೆಳೆದ ರಾಕಿ ಭಾಯಿ ಯಶ್‌ ರಾವಣನಾಗಿ ಈ ಸಿನಿಮಾ ಮೂಲಕ ಬಾಲಿವುಡ್‌ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಸಿನಿಮಾ ಬಜೆಟ್‌ ಬಗ್ಗೆ ಹೊಸದೊಂದು ಅಪ್‌ಡೇಟ್‌ ಹೊರ ಬಿದ್ದಿದೆ. ಈ ಚಿತ್ರದ ಬಜೆಟ್‌ ಎಷ್ಟು ಗೊತ್ತೆ?

VISTARANEWS.COM


on

Ramayana Movie
Koo

ಮುಂಬೈ: ಸದ್ಯ ದೇಶಾದ್ಯಂತ ʼರಾಮಾಯಣʼ (Ramayana Movie) ಚಿತ್ರದ್ದೇ ಸದ್ದು. ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ (Nitesh Tiwari) ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾ ಬಹು ತಾರಾಗಣದ ಮೂಲಕವೇ ಸುದ್ದಿಯಾಗುತ್ತಿದೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯರಾಗುತ್ತಿರುವ ಈ ಚಿತ್ರದಲ್ಲಿ ರಾಮನಾಗಿ ರಣಬೀರ್‌ ಕಪೂರ್‌ (Ranbir Kapoor) ಮತ್ತು ಸೀತೆಯಾಗಿ ಸಾಯಿ ಪಲ್ಲವಿ (Sai Pallavi) ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ ರಾಕಿಂಗ್‌ ಸ್ಟಾರ್‌ ಯಶ್‌ (Yash) ಬಾಲಿವುಡ್‌ಗೆ ಕಾಲಿಡುತ್ತಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಈ ಮಧ್ಯೆ ಸಿನಿಮಾ ಬಜೆಟ್‌ ಬಗ್ಗೆ ಹೊಸ ಅಪ್‌ಡೇಟ್‌ ಹೊರ ಬಿದ್ದಿದೆ.

ಬಜೆಟ್‌ ಎಷ್ಟು?

ʼರಾಮಾಯಣʼ ಸಿನಿಮಾ ಬರೋಬ್ಬರಿ 835 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿದೆ ಎನ್ನುವ ಸುದ್ದಿ ಹಬ್ಬಿದೆ. ಈ ಮೂಲಕ ಭಾರತೀಯ ಸಿನಿರಂಗದಲ್ಲೇ ಅತೀ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ. ʼʼರಾಮಾಯಣ ಕೇವಲ ಸಿನಿಮಾವಲ್ಲ. ಅದೊಂದು ಭಾವನೆ. ನಂಬಿಕೆ. ಹೀಗಾಗಿ ನಿರ್ಮಾಪಕರು ಈ ಚಿತ್ರದ ತಯಾರಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುತ್ತಿಲ್ಲ. ದುಬಾರಿ ವೆಚ್ಚದಲ್ಲಿ ನಿರ್ಮಾಪಕರು ತೆರೆ ಮೇಲೆ ಮ್ಯಾಜಿಕ್‌ ಮಾಡಲು ಮುಂದಾಗಿದ್ದಾರೆʼʼ ಎಂದು ಮೂಲವೊಂದು ತಿಳಿಸಿದೆ.

ಈಗಾಗಲೇ ರಾಮಾಯಣ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ಇತ್ತೀಚೆಗೆ ಶೂಟಿಂಗ್‌ನ ತುಣುಕೊಂಡು ಲೀಕ್‌ ಆಗಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ʼʼಚಿತ್ರದ ಬಜೆಟ್‌ 835 ಕೋಟಿ ರೂ.ಗೆ ತಲುಪಲಿದೆ. ಪೋಸ್ಟ್‌ ಪ್ರೊಡಕ್ಷನ್‌ಗೇ ಸುಮಾರು 600 ದಿನ ಬೇಕಾಗುತ್ತದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತೀಯ ಸಿನಿಮಾವೊಂದು ರಾರಾಜಿಸಲಿದೆʼʼ ಎಂದು ವರದಿಯೊಂದರಲ್ಲಿ ವಿವರಿಸಲಾಗಿದೆ.

ಅತ್ಯಂತ ದುಬಾರಿ ಚಿತ್ರ

ಪ್ರಭಾಸ್‌ ಅಭಿನಯದ, ಕಳೆದ ವರ್ಷ ತೆರೆಕಂಡ ʼಆದಿಪುರುಷ್‌ʼ ಸಿನಿಮಾ ಇದುವರೆಗಿನ ಅತ್ಯಂತ ವೆಚ್ಚದ ಸಿನಿಮಾ ಎನಿಸಿಕೊಂಡಿತ್ತು. ರಾಮಾಯಣವನ್ನು ಆಧರಿಸಿದ ಇದು ಸುಮಾರು 700 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿತ್ತು ಎನ್ನಲಾಗಿದೆ. ಎರಡನೇ ಸ್ಥಾನದಲ್ಲಿ ಪ್ರಭಾಸ್‌ ಅವರದ್ದೇ ʼಕಲ್ಕಿ 2898 ಎಡಿʼ ಸಿನಿಮಾ ಇದೆ. ದೀಪಿಕಾ ಪಡುಕೋಣೆ ನಾಯಕಿಯಾಗಿರುವ ಇದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿದ್ದು, ಈ ಚಿತ್ರದ ಬಜೆಟ್‌ ಸುಮಾರು 600 ಕೋಟಿ ರೂ. ಇನ್ನು ರಜನಿಕಾಂತ್‌ ನಟಿಸಿದ್ದ ʼ2.0ʼ ಚಿತ್ರಕ್ಕೆ 570 ಕೋಟಿ ರೂ. ವೆಚ್ಚವಾಗಿತ್ತು. ಹೀಗಾಗಿ ʼರಾಮಾಯಣʼ ಇದುವರೆಗಿನ ದುಬಾರಿ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಇದು ಸುಮಾರು 3 ಭಾಗಗಳಲ್ಲಿ ತೆರೆಗೆ ಬರಲಿದೆ ಎನ್ನುವ ಸುದ್ದಿಯೂ ಇದೆ.

ಯಶ್‌ ನಟಿಸುತ್ತಾರಾ?

ʼಕೆಜಿಎಫ್‌ʼ ಸರಣಿ ಸಿನಿಮಾ ಮೂಲಕ ದೇಶದ ಗಮನ ಸೆಳೆದ ಸ್ಯಾಂಡಲ್‌ವುಡ್‌ ನಟ ಯಶ್‌ ರಾಮಾಯಣ ಸಿನಿಮಾದಲ್ಲಿ ರಾವಣನನಾಗಿ ಅಬ್ಬರಿಸಲಿದ್ದಾರೆ. ಅದಕ್ಕಾಗಿ ದುಬಾರಿ ಸಂಭಾವನೆಯನ್ನೇ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿ ಹರಡಿದೆ. ಇದರ ಜತೆಗೆ ಯಶ್‌ ನಟಿಸುತ್ತಿಲ್ಲ, ಬದಲಾಗಿ ಚಿತ್ರ ನಿರ್ಮಾಣದಲ್ಲಿ ಕೈ ಜೋಡಿಸುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ ಇದುವರೆಗೆ ಈ ಬಗ್ಗೆ ಚಿತ್ರತಂಡವಾಗಲೀ, ಯಶ್‌ ಕಡೆಯಿಂದಾಗಲೀ ಸ್ಪಷ್ಟನೆ ದೊರೆತಿಲ್ಲ.

ಇದನ್ನೂ ಓದಿ: Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ನಟಿಸುತ್ತಾರೆ ಎಂದು ವರದಿಯಾಗಿದೆ. ಸದ್ಯ ಯಶ್ ಮತ್ತೊಂದು ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.

Continue Reading

ಬಾಲಿವುಡ್

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

Salman Khan: ಕೆಲವು ದಿನಗಳ ಹಿಂದೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮನೆ ಮುಂದೆ ಫೈರಿಂಗ್‌ ಮಾಡಿದ ಪ್ರಕರಣದಲ್ಲಿ ಪೊಲೀಸರು 6ನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು 37 ವರ್ಷದ ಹರ್ಪಾಲ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನನ್ನು ಹರಿಯಾಣದ ಫತೇಹಾಬಾದ್‌ನಿಂದ ವಶಕ್ಕೆ ಪಡೆಯಲಾಗಿದ್ದು, ಈತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Salman Khan
Koo

ಮುಂಬೈ: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರನೇ ಆರೋಪಿಯನ್ನು ಹರಿಯಾಣದಲ್ಲಿ ಬಂಧಿಸಲಾಗಿದೆ. ತನಿಖೆ ನಡೆಸುತ್ತಿರುವ ಮುಂಬೈ ಕ್ರೈಂ ಬ್ರ್ಯಾಂಚ್‌ ಹರಿಯಾಣದ ಫತೇಹಾಬಾದ್‌ನಿಂದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನಾದ ಆರನೇ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು 37 ವರ್ಷದ ಹರ್ಪಾಲ್‌ ಸಿಂಗ್‌ ಎಂದು ಗುರುತಿಸಲಾಗಿದೆ.

ʼʼಹರ್ಪಾಲ್‌ ಸಿಂಗ್‌ನನ್ನು ಆತನ ಊರಾದ ಫತೇಹಾಬಾದ್‌ನಿಂದ ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್‌ನ ಅಧಿಕಾರಿಗಳ ತಂಡ ಸೋಮವಾರ ರಾತ್ರಿ ಆಗಮಿಸಿದ ಆತನನ್ನು ವಶಕ್ಕೆ ಪಡೆದುಕೊಂಡಿದೆʼʼ ಎಂದು ಮೂಲಗಳು ತಿಳಿಸಿವೆ. ಹರ್ಪಾಲ್‌ ಸಿಂಗ್‌ನನ್ನು ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತರಲಾಗಿದ್ದು, ನಂತರ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಇದುವರೆಗೆ 6 ಮಂದಿಯನ್ನು ಬಂಧಿಸಿದಂತಾಗಿದೆ.

ಈ ಹಿಂದೆ ಆರಂಭದಲ್ಲಿ ಪೊಲೀಸರು ಪಂಜಾಬ್‌ ಮೂಲದ ಇಬ್ಬರನ್ನು ಬಂಧಿಸಿದ್ದರು. ಬಳಿಕ ಗುಜರಾತ್‌ನಿಂದ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ರಾಜಸ್ಥಾನದ ಓರ್ವ ಬಲೆಗೆ ಬಿದ್ದಿದ್ದ.

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಇದನ್ನೂ ಓದಿ: Salman Khan : ಸಲ್ಮಾನ್​ ಮನೆ ಬಳಿ ಗುಂಡಿನ ದಾಳಿ; ಪಂಜಾಬ್​​ನಲ್ಲಿ ಗನ್​ ಕೊಟ್ಟವರಿಬ್ಬರ ಬಂಧನ

Continue Reading
Advertisement
KL Rahul
ಕ್ರೀಡೆ7 mins ago

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

Actor Dhanush
ಸಿನಿಮಾ10 mins ago

Actor Dhanush: ಧನುಷ್-ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದ ಖ್ಯಾತ ಗಾಯಕಿ

pm narendra modi nomination 2
ಪ್ರಮುಖ ಸುದ್ದಿ14 mins ago

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

HD Revanna released from jail Revanna Go straight to HD Deve Gowda house
ರಾಜಕೀಯ16 mins ago

HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Patanjali case
ದೇಶ31 mins ago

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

T20 World Cup 2024
ಕ್ರೀಡೆ49 mins ago

T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

Job News
ಉದ್ಯೋಗ2 hours ago

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

kurkure divorce viral news
ವೈರಲ್ ನ್ಯೂಸ್2 hours ago

Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

Supriya Sule
ದೇಶ2 hours ago

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Road Accident
ಕ್ರೈಂ2 hours ago

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು4 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ11 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ21 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ21 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ21 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ22 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ22 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌