ವಿಸ್ತಾರ Explainer | ನೇಪಾಳದಲ್ಲಿ ಪದೇಪದೆ ವಿಮಾನ ದುರಂತ ಸಂಭವಿಸುವುದೇಕೆ? ಇದುವರೆಗಿನ ಭೀಕರ ದುರಂತ ಯಾವವು? - Vistara News

ಪ್ರಮುಖ ಸುದ್ದಿ

ವಿಸ್ತಾರ Explainer | ನೇಪಾಳದಲ್ಲಿ ಪದೇಪದೆ ವಿಮಾನ ದುರಂತ ಸಂಭವಿಸುವುದೇಕೆ? ಇದುವರೆಗಿನ ಭೀಕರ ದುರಂತ ಯಾವವು?

ನೇಪಾಳಕ್ಕೂ, ವಿಮಾನ ದುರಂತಗಳಿಗೂ ಇನ್ನಿಲ್ಲದ ನಂಟಿದೆ. ಕಳೆದ ಮೂರು ದಶಕಗಳಲ್ಲಿ ಸಂಭವಿಸಿದ ವಿಮಾನ ದುರಂತಗಳನ್ನು ನೋಡಿದರೆ ಈ ಮಾತು ನಿಜವೆನಿಸುತ್ತದೆ.

VISTARANEWS.COM


on

Nepal Plane Crash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೇಪಾಳದ ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ ವೇ ಬಳಿಯ ಕಣಿವೆಯಲ್ಲಿ ವಿಮಾನ ಪತನವಾಗಿದ್ದು, ಐವರು ಭಾರತೀಯರು ಸೇರಿ ವಿಮಾನದಲ್ಲಿದ್ದ ಎಲ್ಲ 72 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದುವರೆಗೆ 40ಕ್ಕೂ ಅಧಿಕ ಶವಗಳು ಸಿಕ್ಕಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದೊಂದೇ ಅಲ್ಲ, ನೇಪಾಳದಲ್ಲಿ ಆಗಾಗ ವಿಮಾನ ಪತನಗಳು ಸಂಭವಿಸುತ್ತಲೇ ಇರುತ್ತವೆ. ನೂರಾರು ಜನ ದುರಂತಕ್ಕೆ ಬಲಿಯಾಗುತ್ತಲೇ ಇರುತ್ತಾರೆ. ಹಾಗಾದರೆ, ನೇಪಾಳದಲ್ಲಿಯೇ ಏಕೆ ಹೆಚ್ಚಿನ ವಿಮಾನಗಳು ಪತನವಾಗುತ್ತವೆ? ಇದಕ್ಕೆ ಕಾರಣಗಳೇನು? ಇದುವರೆಗೆ ಸಂಭವಿಸಿದ ಪ್ರಮುಖ ವಿಮಾನ ದುರಂತಗಳು ಯಾವವು ಎಂಬುದರ ಸಂಕ್ಷಿಪ್ತ ಮಾಹಿತಿಯೇ ಇಂದಿನ ವಿಸ್ತಾರ Explainer.

ವಿಮಾನ ಪತನಕ್ಕೆ ಕಾರಣಗಳೇನು?
ನೇಪಾಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಮಾನ ದುರಂತ ಸಂಭವಿಸಲು ಹತ್ತಾರು ಕಾರಣಗಳಿವೆ. ನೇಪಾಳವು ಪರ್ವತ ಭೂಪ್ರದೇಶವಾದ ಕಾರಣ ವಿಮಾನಗಳ ಹಾರಾಟ, ಲ್ಯಾಂಡಿಂಗ್‌ಗೆ ಕಷ್ಟವಾಗುತ್ತದೆ. ಶಿಖರಗಳ ಬಳಿಯೇ ವಿಮಾನ ನಿಲ್ದಾಣಗಳು ಇರುವುದರಿಂದ ಟೇಕ್‌ಆಫ್‌ ಹಾಗೂ ಲ್ಯಾಂಡ್‌ ಆಗುವಾಗ ಹೆಚ್ಚಿನ ದುರಂತಗಳು ಸಂಭವಿಸುತ್ತಿವೆ. ಇನ್ನು ನೇಪಾಳ ಸರ್ಕಾರ ಹಾಗೂ ಖಾಸಗಿ ವಿಮಾನಯಾನ ಸಂಸ್ಥೆಗಳು ಹೊಸ ಹೊಸ ವಿಮಾನಗಳ ಮೇಲೆ ಹೂಡಿಕೆ ಮಾಡದಿರುವುದು, ಮೂಲ ಸೌಕರ್ಯಗಳ ಕೊರತೆ ಹಾಗೂ ವಿಮಾನಯಾನ ಕ್ಷೇತ್ರದ ಮೇಲೆ ಸರಿಯಾದ ನಿಯಂತ್ರಣ ಇರದ ಕಾರಣ ಹೆಚ್ಚಿನ ದುರಂತಗಳು ಸಂಭವಿಸುತ್ತಿವೆ ಎಂದು ವರದಿಗಳು ತಿಳಿಸಿವೆ.

2022ರಲ್ಲಿ ಸಂಭವಿಸಿದ ವಿಮಾನ ದುರಂತ.

ನೇಪಾಳ ಏರ್‌ಲೈನ್ಸ್‌ಗೆ ಐರೋಪ್ಯ ಒಕ್ಕೂಟ ನಿಷೇಧ
ನೇಪಾಳ ಮೂಲದ ಏರ್‌ಲೈನ್ಸ್‌ಗಳ ವಿಮಾನಗಳ ಹಾರಾಟವನ್ನೇ ಐರೋಪ್ಯ ಒಕ್ಕೂಟ ನಿಷೇಧಿಸಿದೆ. 2008ರಿಂದ 2012ರ ಅವಧಿಯಲ್ಲಿ ನೇಪಾಳ ವಿಮಾನಗಳ ಪತನ ಹೆಚ್ಚಾದ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಐರೋಪ್ಯ ಒಕ್ಕೂಟವು ನೇಪಾಳ ವಿಮಾನಗಳು ಸದಸ್ಯ ರಾಷ್ಟ್ರಗಳ ವಾಯುಮಾರ್ಗವನ್ನು ಬಳಸುವಂತಿಲ್ಲ ಎಂದು ನಿರ್ಬಂಧ ವಿಧಿಸಿದೆ. 2013ರಿಂದಲೂ ನೇಪಾಳ ವಿಮಾನಗಳ ಹಾರಾಟವನ್ನು ನಿಷೇಧಿಸಿದ್ದು, ಈಗಲೂ ನಿರ್ಬಂಧ ಜಾರಿಯಲ್ಲಿದೆ. ನೇಪಾಳಕ್ಕೆ ಇದು ಹಿನ್ನಡೆಯಾಗಿದ್ದು, ನಿರ್ಬಂಧಿದ ಹೊರಬರಲು ಹಲವು ಪ್ರಯತ್ನ ನಡೆಸಿದರೂ ಸಾಧ್ಯವಾಗಿಲ್ಲ.

30 ವರ್ಷದಲ್ಲಿ 27 ವಿಮಾನ ದುರಂತ
ನೇಪಾಳದಲ್ಲಿ ಕಳೆದ ಮೂರು ದಶಕಗಳಲ್ಲಿ ಭೀಕರ ದುರಂತಗಳು ಸಂಭವಿಸಿವೆ. 30 ವರ್ಷಗಳಲ್ಲಿ 27 ವಿಮಾನಗಳು ಪತನಗೊಂಡಿವೆ. ಅದರಲ್ಲೂ, 2008ರಿಂದ 2012ರ ಅವಧಿಯಲ್ಲಿ ವರ್ಷಕ್ಕೆ ಸರಾಸರಿ ಎರಡು ವಿಮಾನ ದುರಂತಗಳು ಸಂಭವಿಸಿವೆ. ಕಳೆದ 10 ವರ್ಷದಲ್ಲಿಯೂ ಸರಾಸರಿ ವರ್ಷಕ್ಕೆ ಎರಡರಂತೆ 20 ವಿಮಾನಗಳು ಪತನಗೊಂಡಿವೆ. ಹಾಗಾಗಿ, ನೇಪಾಳದ ವಿಮಾನಯಾನ ಸಂಸ್ಥೆಗಳ ವಿಮಾನಗಳು ಎಂದರೆ ಜನರಿಗೆ ಭಯ ಉಂಟಾಗುತ್ತದೆ. ಇದಕ್ಕಾಗಿ ಐರೋಪ್ಯ ಒಕ್ಕೂಟವು ನಿರ್ಬಂಧ ವಿಧಿಸಿದೆ.

ನೇಪಾಳ ಕಂಡ ಭೀಕರ ದುರಂತಗಳು
2022, ಮೇ 29, 22 ಜನ ಸಾವು:
ನೇಪಾಳದ ತಾರಾ ಏರ್‌ ಸಂಸ್ಥೆಯ ವಿಮಾನ ಮುಸ್ತಾಂಗ್‌ ಜಿಲ್ಲೆಯಲ್ಲಿ ಪತನಗೊಂಡು 22 ಜನ ಮೃತಪಟ್ಟಿದ್ದರು. ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಪತನಗೊಂಡಿತ್ತು.

2018, ಮಾರ್ಚ್‌ 12, 51 ಮಂದಿ ಬಲಿ: ಕಾಠ್ಮಂಡು ವಿಮಾನ ನಿಲ್ದಾಣದ ಬಳಿ ಅಮೆರಿಕ-ಬಾಂಗ್ಲಾ ವಿಮಾನಯಾನ ಸಂಸ್ಥೆಯ ವಿಮಾನ ಪತನವಾಗಿ 51 ಜನ ಮೃತಪಟ್ಟಿದ್ದರು.

2012ರಲ್ಲಿ ಪತನಗೊಂಡಿದ್ದ ಸೀತಾ ಏರ್‌ಲೈನ್ಸ್‌ ವಿಮಾನ.

2016, ಫೆಬ್ರವರಿ 24, 2016, 23 ಜನರ ಮರಣ: ತಾರಾ ಏರ್‌ಲೈನ್ಸ್‌ ವಿಮಾನವು ಇದೇ ಪೋಖರಾ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಿದ ಎಂಟೇ ನಿಮಿಷಕ್ಕೆ ಪತನಗೊಂಡು 23 ನಾಗರಿಕರು ಮರಣ ಹೊಂದಿದ್ದರು.

1992, ಸೆಪ್ಟೆಂಬರ್‌ 28, 167 ಜನ ಸಾವು: ನೇಪಾಳ ಇತಿಹಾಸದಲ್ಲಿಯೇ ಕಾಠ್ಮಂಡು ಏರ್‌ಪೋರ್ಟ್‌ ಬಳಿ ಸಂಭವಿಸಿದ ದುರಂತವು ಭೀಕರ ದುರಂತ ಎನಿಸಿದೆ. ಪಾಕಿಸ್ತಾನ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ನ ವಿಮಾನವು ಶಿಖರವೊಂದಕ್ಕೆ ಡಿಕ್ಕಿಯಾಗಿ ವಿಮಾನದಲ್ಲಿದ್ದ ಎಲ್ಲ 167 ಜನ ಬಲಿಯಾಗಿದ್ದರು.

ಇದನ್ನೂ ಓದಿ | Nepal Plane Crash | ನೇಪಾಳದಲ್ಲಿ 72 ಜನರಿದ್ದ ವಿಮಾನ ಪತನ; ಹಲವರು ಮೃತಪಟ್ಟಿರುವ ಶಂಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

Milk Price hike: ಇಷ್ಟು ದಿನ 1000 ml ಹಾಲು 42 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ನಾಳೆಯಿಂದ 50 ml ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ, ಅದರ ದರ 2 ರೂ.ಗಳನ್ನು ಸೇರಿಸಿ ನಾಳೆಯಿಂದ ಮಾರಾಟ ಮಾಡಲಾಗುತ್ತದೆ. ಒಟ್ಟು 1050 ml ಹಾಲಿನ ದರ 44 ರೂ. ಆಗುತ್ತಿದೆ ಎಂದು KMF ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.

VISTARANEWS.COM


on

milk price hike
Koo

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಹಾಲಿನ (Nandini milk) ದರಗಳನ್ನು (milk price hike) ಏರಿಸಲಾಗಿದೆ. ಲೀಟರ್‌ಗೆ 2 ರೂ. ಏರಿಕೆ ಮಾಡಲಾಗಿದ್ದು, ಒಂದು ಲೀಟರ್‌ ಹಾಲಿನ ದರ ನಾಳೆಯಿಂದ 44 ರೂ. ಆಗುತ್ತಿದೆ. ಈ ಮೂಲಕ ತೈಲ ಬೆಲೆ ಏರಿಕೆ (petrol price hike) ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ ರಾಜ್ಯ ಸರಕಾರ.

ಇಷ್ಟು ದಿನ 1000 ml ಹಾಲು 42 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ನಾಳೆಯಿಂದ 50 ml ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ, ಅದರ ದರ 2 ರೂ.ಗಳನ್ನು ಸೇರಿಸಿ ನಾಳೆಯಿಂದ ಮಾರಾಟ ಮಾಡಲಾಗುತ್ತದೆ. ಒಟ್ಟು 1050 ml ಹಾಲಿನ ದರ 44 ರೂ. ಆಗುತ್ತಿದೆ ಎಂದು KMF ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.

ಆದರೆ ಅರ್ಧ ಲೀಟರ್ ಪ್ಯಾಕೇಟ್ ಹಾಲಿಗೂ 2 ರೂಪಾಯಿ ಏರಿಕೆ ಮಾಡಲಾಗುತ್ತಿದೆ. ಯಾಕೆಂದರೆ ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ಗೂ 50 ml ಹಾಲನ್ನು ಹೆಚ್ಚುವರಿಯಾಗಿ ಸೇರಿಸಲಾಗುತ್ತಿದೆ. ಪ್ರತಿಯೊಂದು ಪ್ಯಾಕೆಟ್‌ಗೂ 50 ML ಹಾಲು ಹೆಚ್ಚುವರಿಯಾಗಿ ಸೇರಿಸುವುದರಿಂದ 2 ರೂಪಾಯಿ ಏರಿಕೆ ಮಾಡಲಾಗುತ್ತಿದೆ. ಈ ಲೆಕ್ಕಾಚಾರದಲ್ಲಿ ಅರ್ಧ ಲೀಟರ್‌ ಹಾಲಿನ ಎರಡು ಪ್ಯಾಕೆಟ್‌ಗಳನ್ನು ತೆಗೆದುಕೊಳ್ಳುವುದಕ್ಕಿಂತಲೂ, ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ ತೆಗೆದುಕೊಳ್ಳುವುದು ಅಗ್ಗವಾಗಲಿದೆ.

“ಕೆಎಂಎಫ್‌ ಇಡೀ ರಾಷ್ಟ್ರದಲ್ಲಿ ಅತಿ ದೊಡ್ಡ ಎರಡನೇ ದೊಡ್ಡ ಹಾಲಿನ ಮಂಡಲಿ. 98 ಲಕ್ಷದ 17 ಸಾವಿರ ಲೀಟರ್ ಹಾಲು ನಮ್ಮಲ್ಲಿ ಶೇಖರಣೆ ಆಗುತ್ತಿದೆ. ಒಂದು ಕೋಟಿ ಲೀಟರ್ ಹಾಲಿನ ಶೇಖರಣೆ ಮಾಡಲು ಸಿದ್ಧರಾಗಿದ್ದೇವೆ. 27 ಲಕ್ಷ ಹಾಲು ಉತ್ಪಾದಕ ರೈತರಿಂದ ನಮಗಿದು ಸಾಧ್ಯವಾಗಿದೆ. 30 ಲಕ್ಷ ಲೀಟರ್ ಹಾಲು, ಹಾಲಿನ ಪೌಡರ್‌ಗೆ ಮೀಸಲಾಗಿದೆ” ಎಂದು ಭೀಮಾ ನಾಯ್ಕ್‌ ಮಾಹಿತಿ ನೀಡಿದ್ದಾರೆ.

ಹೊಸ ದರಗಳು ಹೀಗಿವೆ:

  • ನೀಲಿ ಪ್ಯಾಕೆಟ್ ಹಾಲು 42 ರಿಂದ 44 ರೂ
  • ನೀಲಿ ಪ್ಯಾಕೆಟ್ (ಟೋನ್ಡ್ ಹಾಲು) 43 ರಿಂದ 45ರೂ
  • ಆರೆಂಜ್ ಪ್ಯಾಕೆಟ್ ಹಾಲು 46ರಿಂದ 48 ರೂ
  • ಆರೆಂಜ್ ಸ್ಪೆಷಲ್ ಹಾಲು 48 ರಿಂದ 50 ರೂ
  • ಶುಭಂ ಹಾಲು 48ರಿಂದ 50 ರೂ
  • ಸಮೃದ್ದಿ ಹಾಲು 51ರಿಂದ 53ರೂ
  • ಶುಭಂ (ಟೋನ್ಡ್ ಹಾಲು) 49ರಿಂದ 51ರೂ
  • ಸಂತೃಪ್ತಿ ಹಾಲು 55 ರಿಂದ 57 ರೂ
  • ಶುಭಂ ಗೋಲ್ಡ್ ಹಾಲು 49ರಿಂದ 51ರೂ
  • ಶುಭಂ ಡಬಲ್ ಟೋನ್ಡ್ ಹಾಲು 41 ರಿಂದ 43 ರೂ ಗೆ ಏರಿಕೆ

ಇದನ್ನೂ ಓದಿ: Milk Products: ಹಾಲು, ಹಾಲಿನ ಉತ್ಪನ್ನ ಸೇವಿಸಿದರೆ ಲಾಭವೋ ನಷ್ಟವೋ?

Continue Reading

ಪ್ರಮುಖ ಸುದ್ದಿ

CM Siddaramaiah: ಡಿಸಿಎಂ ವಿಚಾರದಲ್ಲಿ ಮತ್ತೆ ಒಡೆದುಹೋದ ಕಾಂಗ್ರೆಸ್‌; ಸಿದ್ದು- ಡಿಕೆಶಿ ಬಣದ ನಡುವೆ ಡಿಶುಂ ಡಿಶುಂ

CM Siddaramaiah: ಸಿಎಂ ಸಿದ್ದರಾಮಯ್ಯ ಬಣದಿಂದ ಸಮುದಾಯಕ್ಕೊಂದು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಕೆ.ಎನ್ ರಾಜಣ್ಣ, ತಿಮ್ಮಾಪುರ್, ಜಮೀರ್ ಅಹಮದ್ ಖಾನ್ ಅವರಿಂದ ಡಿಸಿಎಂ ಹುದ್ದೆ ಜಪ ಮುಂದುವರಿದಿದೆ.

VISTARANEWS.COM


on

cm siddaramaiah DK Shivakumar power fight
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಸಂದರ್ಭದಲ್ಲಿ ಮೈತ್ರಿ ಪಕ್ಷಗಳನ್ನು ಎದುರಿಸಲು ತಾತ್ಕಾಲಿಕವಾಗಿ ಒಂದಾಗಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಬಣ ಮತ್ತೆ ಎರಡಾಗಿ ಹೋಗಿದ್ದು, ಡಿಸಿಎಂ (DCM) ನೇಮಕಾತಿ ವಿಚಾರದಲ್ಲಿ ಗುದ್ದಾಡತೊಡಗಿವೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಡಿಸಿಎಂ ಹುದ್ದೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಇದೀಗ ಬಣ ಪಾಲಿಟಿಕ್ಸ್ ರಂಗೇರಿದೆ. ಇನ್ನಷ್ಟು ಡಿಸಿಎಂ ಹುದ್ದೆ ಸೃಷ್ಟಿ ಆಗಬೇಕು ಅಂತ ಒಂದು ಬಣ ಪಟ್ಟು ಹಿಡಿದಿದ್ದರೆ, ಅದಕ್ಕೆ ತಡೆ ಹಾಕಲು ಮತ್ತೊಂದು ಬಣ ಬೇರೊಂದು ಪಟ್ಟು ಹಾಕುತ್ತಿದೆ.

ಸಿಎಂ ಸಿದ್ದರಾಮಯ್ಯ ಬಣದಿಂದ ಸಮುದಾಯಕ್ಕೊಂದು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಕೆ.ಎನ್ ರಾಜಣ್ಣ, ತಿಮ್ಮಾಪುರ್, ಜಮೀರ್ ಅಹಮದ್ ಖಾನ್ ಅವರಿಂದ ಡಿಸಿಎಂ ಹುದ್ದೆ ಜಪ ಮುಂದುವರಿದಿದೆ. ಸಮುದಾಯಕ್ಕೊಂದು ಡಿಸಿಎಂ ಹುದ್ದೆ ಕೊಟ್ಟರೆ ಚುನಾವಣೆ ಸಂದರ್ಭದಲ್ಲಿ ಅನುಕೂಲ. ಅಧಿಕಾರ ಕೆಲ ಸಮುದಾಯಗಳಿಗೆ ಮಾತ್ರ ಸೀಮಿತವಾಗಬಾರದು. ದಲಿತ, ಮುಸ್ಲಿಂ, ಲಿಂಗಾಯತ ಸಮುದಾಯಗಳನ್ನು ಸೆಳೆಯಲು ಡಿಸಿಎಂ ಹುದ್ದೆ ಅನಿವಾರ್ಯ ಎಂದು ಪಟ್ಟು ಹಿಡಿದಿದ್ದಾರೆ.

ದಿನಕ್ಕೊಬ್ಬ ಸಚಿವರು ಈ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಮೂವರು ಸಚಿವರು ಸಹ ಸಿದ್ದರಾಮಯ್ಯ ಬಣಕ್ಕೆ ಸೇರಿದವರು. ಇದರ ಹಿಂದೆ, ಡಿಕೆಶಿ ಪ್ರಭಾವವನ್ನು ಕಡಿಮೆ ಮಾಡುವ ಚಿಂತನೆಯೂ ಇದೆ ಎನ್ನಲಾಗಿದೆ.

ಇತ್ತ ಸಿದ್ದರಾಮಯ್ಯ ಬಣದಿಂದ ಹೇಳಿಕೆ ಬಂದ ತಕ್ಷಣ ಡಿಕೆಶಿ ಬಣದಿಂದಲೂ ತಿರುಗೇಟು ಬರಲಾರಂಭಿಸಿದೆ. ಡಿಕೆ ಸುರೇಶ್ ಕೂಡಲೇ ಕೌಂಟರ್ ನೀಡಿದ್ದಾರೆ. ಮೂರಲ್ಲ ಐದಕ್ಕೂ ಹೆಚ್ಚು ಡಿಸಿಎಂ ಹುದ್ದೆ ಸೃಷ್ಟಿ ಆಗಬೇಕು ಎಂದಿದ್ದಾರೆ. ಜಮೀರ್ ಅಹಮದ್ ಖಾನ್, ರಾಜಣ್ಣ, ತಿಮ್ಮಾಪುರ, ಕೃಷ್ಣ ಬೈರೇಗೌಡ, ಚಲುವರಾಯಸ್ವಾಮಿಗೂ ಡಿಸಿಎಂ ಹುದ್ದೆ ಕೊಡಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಅತ್ತ ಪ್ರಿಯಾಂಕ್ ಖರ್ಗೆ ಅವರಿಂದಲೂ ತಿರುಗೇಟು ಬಂದಿದೆ. ಸಚಿವರಲ್ಲದವರನ್ನೆಲ್ಲ ಡಿಸಿಎಂ ಮಾಡೋಣ, ಕೆಲಸ ಮಾಡೋದು ಬೇಡ- ಡಿಸಿಎಂ ಹುದ್ದೆ ಕೋಡೋಣ ಎಂದು ಪ್ರಿಯಾಂಕ್ ಖರ್ಗೆ ಟಾಂಗ್‌ ಕೊಟ್ಟಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಗೊಂದಲವೆಬ್ಬಿಸಿದೆ. ಅತ್ತ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಆದ ತಕ್ಷಣ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟ ಭುಗಿಲೆದ್ದಿದೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಿ ಸಮುದಾಯಗಳಿಗೆ ಮಣೆ ಹಾಕಿ ಅಂತ ಪಟ್ಟು ಹಿಡಿಯಲಾಗಿದೆ. ಪಕ್ಷದ ಪರವಾಗಿ ನಿಲ್ಲದ ಸಮುದಾಯಕ್ಕೆ ಮಣೆ ಹಾಕುವುದಕ್ಕಿಂತಲೂ, ಪಕ್ಷದ ಪರವಾಗಿ ನಿಂತ ಸಮುದಾಯಗಳಿಗೆ ಮಣೆ ಹಾಕುವಂತೆ ಒತ್ತಾಯ

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಆದರೆ ಡಿಕೆಶಿ ಅವರ ಪ್ರಭಾವವನ್ನು ಕಡಿಮೆ ಮಾಡಬಹುದು ಎನ್ನುವ ಚಿಂತನೆ ಸಿದ್ದರಾಮಯ್ಯ ಬಳಗದಲ್ಲಿದೆ. ಇತ್ತ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡದಂತೆ ಡಿಕೆಶಿ ಬಣದಿಂದ ತಿರುಗೇಟು ನೀಡಲಾಗುತ್ತಿದೆ. ಅತ್ತ ಬಿಜೆಪಿ ಕೂಡ ಕಾಂಗ್ರೆಸ್‌ನೊಳಗಿನ ಡಿಸಿಎಂ ವಿವಾದವನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಮುಂದಾಗಿದ್ದು, ಈ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿದೆ.

ʼಈ ಸಂಘರ್ಷ ಕೆಲವೇ ತಿಂಗಳಲ್ಲಿ ತಾರ್ಕಿಕ ಅಂತ್ಯ ತಲಪಲಿದೆʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. “ಡಿಸಿಎಂ ವಿಚಾರ ಇದೇ ಮೊದಲ ಬಾರಿ ಅಲ್ಲ, ಹಲವು ಬಾರಿ ಚರ್ಚೆ ಆಗಿದೆ. ಆದರೆ ಇವತ್ತು ನಡೆಯುತ್ತಿರುವ ಡಿಸಿಎಂ ಗುದ್ದಾಟ ಆಂತರಿಕ ಗುಂಪಿನದ್ದು. ಕಾಂಗ್ರೆಸ್‌ನಲ್ಲಿ ಎರಡು ಆಂತರಿಕ ಗುಂಪು ಇದೆ. ಒಂದು ಗುಂಪು ಮುಖ್ಯಮಂತ್ರಿಗಳದ್ದು, ಮತ್ತೊಂದು ಗುಂಪು ಉಪಮುಖ್ಯಮಂತ್ರಿಗಳದ್ದು. ಒಂದು ಗುಂಪು ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನ ಮಾಡ್ತಿದೆ. ಮತ್ತೊಂದು ಗುಂಪು ಹೆಚ್ಚಿನ ಅಧಿಕಾರ ಪಡೆದುಕೊಳ್ಳಲು ಪ್ರಯತ್ನ ಮಾಡ್ತಿದೆ. ಈ ಸಂಘರ್ಷ ಕೆಲವೇ ತಿಂಗಳಲ್ಲಿ ತಾರ್ಕಿಕ ಅಂತ್ಯ ತಲಪಲಿದೆ” ಎಂದಿದ್ದಾರೆ.

ಇದನ್ನೂ ಓದಿ: DK Shivakumar: ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಡಿ.ಕೆ. ಶಿವಕುಮಾರ್

Continue Reading

Latest

Viral Video: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

Viral Video: ಜನರಿಗೆ ಆಸ್ಪತ್ರೆ ಎಂದರೆ ಒಂದು ನಂಬಿಕೆ ಇರುತ್ತದೆ. ಇಲ್ಲಿ ನಮ್ಮ ಆರೋಗ್ಯ ಸಮಸ್ಯೆ ನಿವಾರಣೆಯಾಗಿ ಖುಷಿಯಿಂದ ಮನೆಗೆ ಹೋಗಬಹುದು ಎಂದು. ಆದರೆ ಈಗ ವ್ಯವಸ್ಥೆ ಬದಲಾಗಿದೆ. ಆಸ್ಪತ್ರೆ ಎಂದರೆ ಹೆದರುವ ಕಾಲ ಬಂದಿದೆ. ಇಂತಹದೊಂದು ಘಟನೆ ಇತ್ತೀಚೆಗೆ ನಡೆದಿದೆ.ಆಸ್ಪತ್ರೆಗೆ ದಾಖಲಾದ ವೃದ್ಧ ರೋಗಿಯ ಮೇಲೆ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಹಲ್ಲೆ ಮಾಡಿದ್ದಾನೆ.. ಈ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಈ ಬಗ್ಗೆ ಕಿಡಿಕಾರಿದ್ದಾರೆ.

VISTARANEWS.COM


on

Viral Video
Koo

ಆಸ್ಪತ್ರೆಗಳೆಂದರೆ ನೋವು, ಸಾವನ್ನು ದೂರ ಮಾಡುವಂತಹ ಸ್ಥಳವೆಂದು ಜನರು ಭಾವಿಸುತ್ತಾರೆ. ಹಾಗಾಗಿ ತಮಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇದ್ದರೂ ಅದನ್ನು ಪರಿಹರಿಸಿಕೊಳ್ಳಲು ಜನರು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಆಸ್ಪತ್ರೆಯೊಳಗೆ ಕಾಲಿಟ್ಟಾಗ ಆತಂಕವಿದ್ದರೂ ಕೂಡ ನಮ್ಮ ನೋವು ಇಲ್ಲಿ ದೂರವಾಗುತ್ತದೆ ಎಂಬ ನಂಬಿಕೆ ಇರುತ್ತದೆ. ಆದರೆ ಇಂತಹ ಆಸ್ಪತ್ರೆಗಳಲ್ಲಿ ಜನರನ್ನು ಸರಿಯಾಗಿ ನೋಡಿಕೊಳ್ಳದೆ ಅವರ ನೋವಿನ ಮೇಲೆ ಬರೆ ಎಳೆಯುವಂತಹ ಕೆಲಸ ಮಾಡಿದರೆ ಜನರು ಹೋಗುವುದಾರೂ ಎಲ್ಲಿಗೆ? ಅಂತಹದೊಂದು ಘಟನೆ ಇದೀಗ ಆಸ್ಪತ್ರೆಯೊಂದರಲ್ಲಿ ನಡೆದಿದೆ. ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು, ವೈರಲ್ (Viral Video )ಆಗಿದೆ.

ಆಸ್ಪತ್ರೆಗೆ ದಾಖಲಾದ ವೃದ್ಧ ರೋಗಿಯ ಮೇಲೆ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಹಲ್ಲೆ ಮಾಡಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಈ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಈ ಬಗ್ಗೆ ಕಿಡಿಕಾರಿದ್ದಾರೆ.

ಈ ವಿಡಿಯೊ ಜೂನ್ 24ರಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ಜೂನ್ 19ರಂದು ಘಟನೆ ನಡೆದಿರುವುದಾಗಿ ಸಿಸಿಟಿವಿ ದೃಶ್ಯವಾಳಿಗಳು ತೋರಿಸುತ್ತಿದೆ. ಹಾಗಾಗಿ ಆಸ್ಪತ್ರೆಯ ಹೆಸರು, ಸ್ಥಳ ನಿಖರವಾಗಿ ತಿಳಿದುಬಂದಿಲ್ಲ. ಆದರೆ ವಿಡಿಯೊದಲ್ಲಿ ಆಸ್ಪತ್ರೆಯ ಸಮವಸ್ತ್ರ ಧರಿಸಿರುವ ವಯೋವೃದ್ಧ ರೋಗಿ ಒಬ್ಬರು ಹಾಸಿಗೆಯ ಮೇಲೆ ಮಲಗಿದ್ದರು. ಅಲ್ಲಿಗೆ ಪರದೆ ಸರಿಸುತ್ತಾ ಬಂದ ಸಿಬ್ಬಂದಿ ಪರದೆಯನ್ನು ಮುಚ್ಚಿ ಆ ವೃದ್ಧನ ಹೊಟ್ಟೆಗೆ ಮೊಣಕೈಯಿಂದ ಹೊಡೆದಿದ್ದಾರೆ. ನಂತರ ಸಿಸಿಟಿವಿ ಕ್ಯಾಮರಾವನ್ನು ನೋಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಆ ದುಷ್ಟ ಸಿಬ್ಬಂದಿಯ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ:Viral Video: ಶಾಪಿಂಗ್‌ ಮಾಲ್‌ನ ಆಟಿಕೆ ರೈಲು ಪಲ್ಟಿಯಾಗಿ ಬಾಲಕ ಸಾವು

ಆದರೆ ಈ ವಿಡಿಯೊವನ್ನು ಪ್ರೊ. ಸುಧಾಂಶು ತ್ರಿವೇದಿ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ, “ಜನರು ವೈದ್ಯರಿಗೆ ದೇವರ ಸ್ಥಾನ ನೀಡಿದ್ದಾರೆ. ಆದರೆ ಇಲ್ಲಿ ವೈದ್ಯರು ದೆವ್ವದ ರೂಪದಲ್ಲಿದ್ದಾರೆ ನೋಡಿ” ಎಂದು ಅದಕ್ಕೆ ಶೀರ್ಷಿಕೆ ನೀಡಿದ್ದಾರೆ. ಇದು ಪೋಸ್ಟ್ ಆಗುತ್ತಿದ್ದಂತೆ ಹಲವು ಜನರು ಸಿಬ್ಬಂದಿಯ ಅಮಾನವೀಯ ಕೃತ್ಯದ ವಿರುದ್ಧ ಕಿಡಿಕಾರಿದ್ದಾರೆ. ಮತ್ತು ಇದು ವೈದ್ಯರಲ್ಲ ಆಸ್ಪತ್ರೆ ಸಿಬ್ಬಂದಿ ಇರಬಹುದು ಎಂದು ಕೆಲವರು ಊಹಿಸಿದ್ದಾರೆ. ಹಾಗೇ ಇನ್ನೊಬ್ಬರು ಎಲ್ಲಾ ವೈದ್ಯರು ದೇವರಲ್ಲ, ಅವರಲ್ಲಿ ಕೆಟ್ಟವರಿದ್ದಾರೆ ಎಂದು ತಿಳಿಸಿದ್ದಾರೆ. ಮತ್ತೊಬ್ಬರು ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರನ್ನು ಕೆಲಸದಿಂದ ತೆಗೆಯಬೇಕು. ಅವರು ದೆವ್ವಗಳೆಂದು ಕರೆಸಿಕೊಳ್ಳಲು ಅರ್ಹರು ಎಂದು ಕಿಡಿಕಾರಿದ್ದಾರೆ.ಇನ್ನೂ ಕೆಲವರು ಇದು ವೈದ್ಯರಲ್ಲ, ಸರಿಯಾಗಿ ತಿಳಿಯದೆ ವೈದ್ಯರನ್ನು ನಿಂದಿಸುವುದು ತಪ್ಪಾಗುತ್ತೆ ಎಂದು ತಿಳಿಸಿದ್ದಾರೆ.

Continue Reading

ಕ್ರೀಡೆ

AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

AFG vs BAN: ಆರಂಭಕಾರ ಲಿಟ್ಟನ್​ ದಾಸ್​ ಅಜೇಯ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಲು ಶಕ್ತಿ ಮೀರಿ ಪ್ರಯತ್ನಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಬ್ಯಾಟಿಂಗ್​ ಸಾಥ್​ ಸಿಗದ ಕಾರಣ ಪಂದ್ಯ ಸೋಲು ಕಂಡಿತು.

VISTARANEWS.COM


on

AFG vs BAN
Koo

ಕಿಂಗ್‌ಸ್ಟೌನ್ (ಸೇಂಟ್ ವಿನ್ಸೆಂಟ್): ಅತ್ಯಂತ ರೋಚಕವಾಗಿ ಸಾಗಿದ, ಪ್ರೇಕ್ಷಕರನ್ನು ಉಸಿರು ಬಿಗಿ ಹಿಡಿದು, ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ ಸಣ್ಣ ಮೊತ್ತದ ಮೇಲಾಟದಲ್ಲಿ ಕೊನೆಗೂ ಬಾಂಗ್ಲಾದೇಶ ವಿರುದ್ಧ ಅಫಘಾನಿಸ್ತಾನ 8 ರನ್​ ಅಂತರ ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ ಪ್ರೇವೇಶಿಸಿದೆ. ಆಫ್ಘಾನ್ ಗೆಲುವಿನಿಂದ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಒಂದೊಮ್ಮೆ ಬಾಂಗ್ಲಾ ಗೆಲ್ಲುತ್ತಿದ್ದರೆ ರನ್​ರೇಟ್​ ಆಧಾರದಲ್ಲಿ ಮುಂದಿದ್ದ ಆಸೀಸ್​ಗೆ ಸೆಮಿ ಟಿಕೆಟ್​ ಲಭಿಸುತ್ತಿತ್ತು.

ಹಲವು ಬಾರಿ ಮಳೆಯಿಂದ ಅಡಚಣೆಯಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಅಫಘಾನಿಸ್ತಾನ ರಹಮಾನುಲ್ಲಾ ಗುರ್ಬಾಜ್(43) ಅವರ ಏಕಾಂಗಿ ಬ್ಯಾಟಿಂಗ್​ ಹೋರಾಟದ ನೆರವಿನಿಂದ 5 ವಿಕೆಟ್​ಗೆ 115 ರನ್​ ಬಾರಿಸಿತು. ಬಾಂಗ್ಲಾ ಬ್ಯಾಟಿಂಗ್​ ಸರದಿಯ ವೇಳೆ ಹಲವು ಬಾರಿ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತು. ಅಂತಿಮವಾಗಿ ಒಂದು ಓವರ್​ ಕಡಿತಗೊಳಿಸಿ 19 ಓವರ್​ಗೆ 114 ರನ್​ ಗೆಲುವಿನ ಗುರಿ ನೀಡಲಾಯಿತು. ಈ ಮೊತ್ತವನ್ನು ಬಾಂಗ್ಲಾ ಒಂದು ಹಂತದವರೆಗೆ ಯಶಸ್ವಿಯಾಗಿ ಬೆನ್ನಟ್ಟಿಕೊಂಡು ಬಂದರೂ ಕೂಡ ಅಂತಿಮ ಹಂತದಲ್ಲಿ ನಾಟಕೀಯ ಕುಸಿತ ಕಂಡು 17.5 ಓವರ್​ನಲ್ಲಿ 105 ರನ್​ಗೆ ಸರ್ವಪತನ ಕಂಡಿತು.

ಕಳೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲುಣಿಸುವ ಮೂಲಕ ಭಾರೀ ಸಂಚಲನ ಮೂಡಿಸಿದ್ದ ಅಫಫಾನಿಸ್ತಾದ ಇದೀಗ ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ ಪ್ರವೇಶಿಸಿ ಐತಿಹಾಸಿಕ ಸಾಧನೆ ಮಾಡಿದೆ. ಸೋಮವಾರ ನಡೆದಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ ಸೋಲು ಕಂಡ ಪರಿಣಾಮ ಆಫ್ಘಾನ್​ಗೆ ಸೆಮಿಫೈನಲ್​ ಪ್ರವೇಶಿಸಲು ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸಾಕಿತ್ತು. ಅದರಂತೆ ಆಫ್ಘನ್​ ಈ ಪಂದ್ಯ ಗೆದ್ದು ಸೆಮಿಗೆ ಅರ್ಹತೆ ಪಡೆಯಿತು. ಜೂನ್​ 26ರಂದು ನಡೆಯುವ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಆಫ್ಘನ್​​ ತಂಡ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ.

ಇದನ್ನೂ ಓದಿ Rohit Sharma: ಬಾಬರ್​ ಅಜಂ ದಾಖಲೆ ಸರಿಗಟ್ಟಿದ ರೋಹಿತ್​ ಶರ್ಮ

ಲಿಟ್ಟನ್​ ದಾಸ್​ ಅರ್ಧಶತಕ

ಚೇಸಿಂಗ್​ ವೇಳೆ ಬಾಂಗ್ಲಾದೇಶ ಕೂಡ ಆಫ್ಘನ್​ ತಂಡದಂತೆ ನಾಟಕೀಯ ಕುಸಿತ ಕಂಡಿತು. ಒಂದೆಡೆ ವಿಕೆಟ್​ ಬೀಳುತ್ತಿದ್ದರೂ ಕೂಡ ತಂಡದ ಗೆಲುವಿಗಾಗಿ ಟೊಂಕ ಕಟ್ಟಿ ನಿಂತ ಆರಂಭಕಾರ ಲಿಟ್ಟನ್​ ದಾಸ್​ ಅಜೇಯ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಲು ಶಕ್ತಿ ಮೀರಿ ಪ್ರಯತ್ನಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಬ್ಯಾಟಿಂಗ್​ ಸಾಥ್​ ಸಿಗದ ಕಾರಣ ಪಂದ್ಯ ಸೋಲು ಕಂಡಿತು. ಆರಂಭಿಕನಾಗಿ ಕಣಕ್ಕಿಳಿದ ದಾಸ್​ ಕೊನೆಯ ತನಕ ಬ್ಯಾಟಿಂಗ್​ ನಡೆಸಿ ಅಜೇಯ 54 ರನ್​ ಬಾರಿಸಿದರು. ಪಂದ್ಯ ಸೋತ ಕಾರಣ ಇವರ ಈ ಬ್ಯಾಟಿಂಗ್​ ಹೋರಾಟ ವ್ಯರ್ಥಗೊಂಡಿತು. ಸಣ್ಣ ಮೊತ್ತ ಬಾರಿಸಿದರೂ ಕೂಡ ಆಫ್ಘನ್​ ಬೌಲರ್​ಗಳು ಶಕ್ತಿ ಮೀರಿ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಪಂದ್ಯದಲ್ಲಿ ಹಿಡಿತ ಸಾಧಿಸಿದರು. ನಾಯಕ ರಶೀದ್​ ಖಾನ್​ ಮತ್ತು ನವೀನ್​ ಉಲ್​ ಹಕ್​ ತಲಾ 4 ವಿಕೆಟ್​ ಬೇಟೆಯಾಡಿ ಬಾಂಗ್ಲಾ ಬ್ಯಾಟರ್​ಗಳ ಸೊಕ್ಕಡಗಿಸಿದರು.

ಮೊದಲು ಬ್ಯಾಟಿಂಗ್​ ನಡೆಸಿದ ಅಫಘಾನಿಸ್ತಾನ ಪರ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಹೊರತುಪಡಿಸಿದ ಉಳಿದ ಯಾವ ಬ್ಯಾಟರ್​ಗಳು ಕೂಡ ನಿರೀಕ್ಷಿತ ಬ್ಯಾಟಿಂಗ್​ ನಡೆಸುವಲ್ಲಿ ಯಶಸ್ಸು ಕಾಣಲಿಲ್ಲ. ಇಬ್ರಾಹಿಂ ಜದ್ರಾನ್(18),ಅಜ್ಮತುಲ್ಲಾ(10), ನಬಿ(1) ರನ್​ ಗಳಿಸಿ ವಿಕೆಟ್​ ಕೈಚೆಲ್ಲಿದರು. ರಹಮಾನುಲ್ಲಾ ಗುರ್ಬಾಜ್ 3 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 43 ರನ್​ ಬಾರಿಸಿದರು. ಇವರ ಈ ಬ್ಯಾಟಿಂಗ್​ ಹೋರಾಟದಿಂದ ತಂಡ 100ರ ಗಡಿ ದಾಟಿತು. ಬಾಂಗ್ಲಾ ಪರ ರಿಶಾದ್ ಹೊಸೈನ್ 26 ರನ್​ಗೆ 3 ವಿಕೆಟ್​ ಕಿತ್ತು ಮಿಂಚಿದರು.

Continue Reading
Advertisement
milk price hike
ಪ್ರಮುಖ ಸುದ್ದಿ13 mins ago

Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

Viral News
ಕ್ರೈಂ22 mins ago

ಜಮೀನಿನಲ್ಲಿ ಕೆಲಸ ಮಾಡಲು ನಿರಾಕರಿಸಿದ ಮಹಿಳೆಯ ಮೇಲೆ ಹಲ್ಲೆ; ಖಾಸಗಿ ಅಂಗಕ್ಕೆ ಖಾರದ ಪುಡಿ ಎರಚಿ ವಿಕೃತಿ ಮೆರೆದ ಸಂಬಂಧಿಕರು

AFG vs BAN
ಕ್ರೀಡೆ24 mins ago

AFG vs BAN: ‘ನಿಧಾನವಾಗಿ ಆಡಿ, ಮಳೆ ಬರುತ್ತೆ’; ಆಫ್ಘನ್​ ಆಟಗಾರರಿಗೆ ಸಲಹೆ ನೀಡಿದ ಕೋಚ್​; ವಿಡಿಯೊ ವೈರಲ್​

cm siddaramaiah DK Shivakumar power fight
ಪ್ರಮುಖ ಸುದ್ದಿ51 mins ago

CM Siddaramaiah: ಡಿಸಿಎಂ ವಿಚಾರದಲ್ಲಿ ಮತ್ತೆ ಒಡೆದುಹೋದ ಕಾಂಗ್ರೆಸ್‌; ಸಿದ್ದು- ಡಿಕೆಶಿ ಬಣದ ನಡುವೆ ಡಿಶುಂ ಡಿಶುಂ

Viral Video
Latest53 mins ago

Viral Video: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

LeT Associate killed
ದೇಶ1 hour ago

LeT Associate killed: ಪ್ರಚೋದನಕಾರಿ ಧರ್ಮ ಪ್ರಚಾರಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

Udhayanidhi Stalin
ಕರ್ನಾಟಕ1 hour ago

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

AFG vs BAN
ಕ್ರೀಡೆ2 hours ago

AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

Mamata Banerjee
ದೇಶ2 hours ago

Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

physical abuse mandya
ಕ್ರೈಂ2 hours ago

Physical Abuse: ಅಪ್ರಾಪ್ತ ಮಗಳನ್ನು ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌