Varisu vs Thunivu | 5ನೇ ದಿನ ವಾರಿಸು, ತುನಿವು ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಎಷ್ಟು? ರೇಸ್‌ನಲ್ಲಿ ಗೆದ್ದವರಾರು? - Vistara News

ಕಾಲಿವುಡ್

Varisu vs Thunivu | 5ನೇ ದಿನ ವಾರಿಸು, ತುನಿವು ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಎಷ್ಟು? ರೇಸ್‌ನಲ್ಲಿ ಗೆದ್ದವರಾರು?

ಕೆಲವೇ ದಿನಗಳಲ್ಲಿ ತೆಲುಗು ರಾಜ್ಯಗಳು ಮತ್ತು ಹಿಂದಿ ಬೆಲ್ಟ್‌ನಲ್ಲಿ ತೆರೆಕಂಡ ವಾರಿಸು ಭಾನುವಾರ ಸಖತ್ ಪ್ರದರ್ಶನ ಕಂಡಿದೆ. ರೇಸ್‌ನಲ್ಲಿ (Varisu vs Thunivu) ಗೆದ್ದವರ್ಯಾರು?

VISTARANEWS.COM


on

Varisu vs Thunivu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸಂಕ್ರಾಂತಿಗೆ ದಳಪತಿ ವಿಜಯ್‌ ಅಭಿನಯದ ʻವಾರಿಸುʼ ಹಾಗೂ ಅಜಿತ್‌ ಅಭಿನಯದ ʻತುನಿವುʼ ಸಿನಿಮಾಗಳು (Varisu vs Thunivu ) ಒಟ್ಟಿಗೆ ತೆರೆ ಕಂಡಿವೆ. ಭಾನುವಾರದಂದು ತುನಿವು ಸಿನಿಮಾಗಿಂತ ವಾರಿಸು ಸಿನಿಮಾ ಹೆಚ್ಚು ಗಳಿಕೆ ಕಂಡಿದೆ ಎಂದು ವರದಿಯಾಗಿದೆ.

ಕೆಲವೇ ದಿನಗಳಲ್ಲಿ ತೆಲುಗು ರಾಜ್ಯಗಳು ಮತ್ತು ಹಿಂದಿ ಬೆಲ್ಟ್‌ನಲ್ಲಿ ತೆರೆಕಂಡ ವಾರಿಸು ಭಾನುವಾರ ಸಖತ್ ಪ್ರದರ್ಶನ ಕಂಡಿದೆ. ಮೊದಲ ವಾರ ಸುಮಾರು 18.50 ಕೋಟಿ ರೂ. ಗಳಿಕೆ ಕಂಡಿದ್ದು, ಅದರ ಅಖಿಲ ಭಾರತ ನಿವ್ವಳ ಒಟ್ಟು ಮೊತ್ತವನ್ನು 85.25 ಕೋಟಿ ರೂ. ಕಲೆಕ್ಷನ್‌ ಮಾಡಿದೆ ಎಂದು ವರದಿಯಾಗಿದೆ. ವಿಜಯ್ ಅವರ ಚಿತ್ರವು ಭಾನುವಾರದಂದು ಒಟ್ಟಾರೆ 74.52% ಚಿತ್ರಮಂದಿರದಲ್ಲಿ ಆಕ್ಯುಪೆನ್ಸಿಯನ್ನು ಹೊಂದಿದೆ ಎಂದು ವರದಿಯಾಗಿದೆ.

ಮತ್ತೊಂದೆಡೆ, ತುನಿವು ಐದನೇ ದಿನದಂದು 11.50 ಕೋಟಿ ರೂಪಾಯಿಗಳನ್ನು ಗಳಿಸಿದೆ. ಅದರ ಅಖಿಲ ಭಾರತ ನಿವ್ವಳ ಸಂಗ್ರಹವನ್ನು 67 ಕೋಟಿ ರೂ ಕಲೆಕ್ಷನ್‌ ಮಾಡಿದೆ. ಹಿಂದಿಯಲ್ಲಿ ಇನ್ನೂ ಬಿಡುಗಡೆಯಾಗಬೇಕಿದೆ. ಚಿತ್ರವು ಭಾನುವಾರದಂದು ಒಟ್ಟಾರೆ 74.26% ಆಕ್ಯುಪೆನ್ಸಿಯನ್ನು ಹೊಂದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ | Rashmika Mandanna | ಕರ್ನಾಟಕದಲ್ಲಿ ಸೋಲನುಭವಿಸಿದ ವಾರಿಸು: ರಶ್ಮಿಕಾ ಕಾರಣವಂತೆ!

2022ರ ಬೀಸ್ಟ್‌ನಲ್ಲಿ ಕೊನೆಯದಾಗಿ ಕಾಣಿಸಿಕೊಂಡ ವಿಜಯ್‌ ಅಷ್ಟಾಗಿ ಸಕ್ಸೆಸ್‌ ಕಂಡಿರಲಿಲ್ಲ. ಇದೀಗ ವಾರಿಸು ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ವಿಮರ್ಶಾತ್ಮಕ ಪ್ರಶಂಸೆಯನ್ನು ಪಡೆದುಕೊಂಡಿದೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್‌ ಅಡಿ ದಿಲ್‌ ರಾಜು ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ತೆಲುಗಿನ ಬೃಂದಾವನಂ, ʻಮಹರ್ಷಿʼ ಖ್ಯಾತಿಯ ವಂಶಿ ಪೈಡಿಪಲ್ಲಿ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಆರ್. ಶರತ್‌ಕುಮಾರ್, ಪ್ರಕಾಶ್ ರಾಜ್, ಶಾಮ್, ಶ್ರೀಕಾಂತ್, ಯೋಗಿ ಬಾಬು, ಮತ್ತು ಜಯಸುಧಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ʻತುನಿವುʼ ಚಿತ್ರವನ್ನು ಎಚ್ ವಿನೋತ್ ಬರೆದು ನಿರ್ದೇಶಿಸಿದ್ದಾರೆ ಮತ್ತು ಬೋನಿ ಕಪೂರ್ ನಿರ್ಮಿಸಿದ್ದಾರೆ. ಇದರಲ್ಲಿ ಮಂಜು ವಾರಿಯರ್, ಪಾವನಿ ರೆಡ್ಡಿ ,ಜಾನ್ ಕೊಕ್ಕೆನ್, ಮಮತಿ ಚಾರಿ, ವೀರ ಮತ್ತು ಬಗವತಿ ಪೆರುಮಾಳ್ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ | Thala-Thalapathy Fans War | ತುನಿವು- ವಾರಿಸು ಸಿನಿಮಾಗಳ ಮೊದಲ ದಿನದ ಕಲೆಕ್ಷನ್‌ ಎಷ್ಟು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Latest

Actor Kamal Haasan: ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟಾಗಿ ನಟಿಸದಿರಲು ಇದೇ ಕಾರಣ!

Actor Kamal Haasan: ರಜನಿಕಾಂತ್ ಹಾಗೂ ಕಮಲ್ ಹಾಸನ್ ಇಬ್ಬರೂ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ ನಟರು. ಇವರು ಚಿತ್ರರಂಗಕ್ಕೆ ಕಾಲಿಟ್ಟಾಗಲಿನಿಂದ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿದ್ದರು.ಸಾಕಷ್ಟು ಸಿನಿಮಾಗಳಲ್ಲಿ ಇಬ್ಬರೂ ಜತೆಯಾಗಿ ನಟಿಸಿದ್ದಾರೆ. ಆದರೆ ಅವರು ಸೂಪರ್‌ಸ್ಟಾರ್‌ಗಳಾದ ನಂತರ ಒಟ್ಟಿಗೆ ಚಿತ್ರ ಮಾಡಿಲ್ಲ. ಇದಕ್ಕೆ ಕಾರಣವೇನು ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಆದರೆ ಈಗ ಅದಕ್ಕೆ ನಟ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

Actor Kamal Haasan
Koo

ಚೆನ್ನೈ : ರಜನಿಕಾಂತ್ ಹಾಗೂ ನಟ ಕಮಲ್ ಹಾಸನ್ (Actor Kamal Haasan) ಅವರು ತಮಿಳು ಚಿತ್ರರಂಗದ ಖ್ಯಾತ ನಟರು. ಇವರು ಚಿತ್ರರಂಗಕ್ಕೆ ಕಾಲಿಟ್ಟ ಆರಂಭದಲ್ಲಿ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿದ್ದರು. ಇಳಮೈ ಊಂಜಲ್ ಆಡುಕಿರಾತು, ತಿಲ್ಲು ಮುಲ್ಲು, ಅಪೂರ್ವ ರಾಗಂಗಲ್, ಅವಲ್ ಅಪ್ಪಾದಿಥನ್, 16 ವಯತಿನಿಲೆ, ಐ ಮತ್ತು ನೈನೈತಾಲೆ ಇನಿಕ್ಕುಮ್ ಸೇರಿದಂತೆ ಸುಮಾರು 16 ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದರು.

Actor Kamala Hasan

ಈ ಇಬ್ಬರು ಚಿತ್ರರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಸೂಪರ್ ಸ್ಟಾರ್ ನಟರೆನಿಸಿಕೊಂಡಿದ್ದಾರೆ. ಹಿಂದಿ ಚಿತ್ರ ಗಿರಫ್ತಾರ್ (1985)ನಲ್ಲಿ ಇಬ್ಬರೂ ಜೊತೆಯಾಗಿ ನಟಿಸಿದ ಕೊನೆಯ ಚಿತ್ರವಾಗಿತ್ತು. ಇದರಲ್ಲಿ ಇಬ್ಬರೂ ಅಮಿತಾಭ್ ಬಚ್ಚನ್ ಜೊತೆ ಕಾಣಿಸಿಕೊಂಡರು. ಆದರೆ ಅವರು ಸೂಪರ್‌ಸ್ಟಾರ್‌ಗಳಾದ ನಂತರ ಒಟ್ಟಿಗೆ ಚಿತ್ರ ಮಾಡಿಲ್ಲ. ಇದಕ್ಕೆ ಕಾರಣವೇನು ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಆದರೆ ಈಗ ಅದಕ್ಕೆ ನಟ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.

Actor Kamala Hasan

ನಟ ಕಮಲ್ ಹಾಸನ್ ಅವರ ನಟನೆಯ ‘ಇಂಡಿಯನ್ 2’ ಸಿನಿಮಾದ ಪ್ರಚಾರ ಕೆಲಸ ಪ್ರಾರಂಭವಾಗಿದೆ. ಇತ್ತೀಚೆಗೆ ಮುಂಬೈನಲ್ಲಿ ಚಿತ್ರದ ಟ್ರೈಲರ್ ರಿಲೀಸ್ ಆಗಿ ಬಹಳ ಸದ್ದು ಮಾಡಿತ್ತು. ಈ ಸಿನಿಮಾ ಬಗ್ಗೆ ಇತ್ತೀಚೆಗೆ, ಕಮಲ್ ಹಾಸನ್ ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ಈ ವೇಳೆ ಅವರು ತಮ್ಮ ಹಾಗೂ ರಜನಿಕಾಂತ್ ಅವರ ನಡುವಿನ ಒಡನಾಟದ ಬಗ್ಗೆ ತಿಳಿಸಿದ್ದಾರೆ. ಹಾಗೂ ತಾವು ಒಟ್ಟಿಗೆ ಚಿತ್ರ ಮಾಡದಿರಲು ಕಾರಣವೇನು ಎಂಬುದಕ್ಕೆ ವಿವರಣೆ ನೀಡಿದ್ದಾರೆ. ಚಿತ್ರರಂಗದಲ್ಲಿ ಯಶಸ್ಸು ಕಂಡ ನಂತರ ಅವರು ಮತ್ತು ರಜನಿಕಾಂತ್ ಇಬ್ಬರೂ ಚಲನಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡದಿರಲು ನಿರ್ಧರಿಸಿದ್ದರು. ಆದರೆ ಅವರಿಬ್ಬರ ಮಾರ್ಗದರ್ಶಕರು ಪ್ರಸಿದ್ಧ ತಮಿಳು ಚಲನಚಿತ್ರ ನಿರ್ಮಾಪಕ ಕೆ. ಬಾಲಚಂದರ್ ಎಂಬುದು ಎಲ್ಲರಿಗೂ ತಿಳಿದಿದೆ ಎಂಬುದಾಗಿ ತಿಳಿಸಿದ್ದಾರೆ.

“ನಾವು ಆರಂಭದಲ್ಲಿ ಒಟ್ಟಿಗೆ ಅನೇಕ ಚಲನಚಿತ್ರಗಳನ್ನು ಮಾಡಿದ್ದೇವೆ. ನಂತರ ನಾವು ಒಟ್ಟಿಗೆ ಕೆಲಸ ಮಾಡದಿರಲು ನಿರ್ಧರಿಸಿದ್ದೇವೆ. ನಾವು ಇಬ್ಬರು ಕಾಂಪಿಟೇಟರ್‌ಗಳಲ್ಲ. ನಮಗೆ ಒಂದೇ ಮಾರ್ಗದರ್ಶಕರಿದ್ದರು. ನಮ್ಮ ನಡುವೆ ಯಾವುದೇ ಅಸೂಯೆ ಇಲ್ಲ ಮತ್ತು ನಮ್ಮ ದಾರಿ ಬೇರೆ ಬೇರೆ. ನಾವು ಎಂದಿಗೂ ಪರಸ್ಪರರ ಬಗ್ಗೆ ಕೀಳುಮಟ್ಟದ ಟೀಕೆಗಳನ್ನು ಮಾಡುವುದಿಲ್ಲ. ನಾವು ನಮ್ಮ 20ರ ಹರೆಯದಲ್ಲಿದ್ದಾಗಲೇ ಈ ಬಗ್ಗೆ ಪ್ರಾಮಿಸ್ ಮಾಡಿದ್ದೇವೆ. ಇಂಥದ್ದೇ ಎಂಬ ಕಾರಣವನ್ನು ಹೇಳಲು ಆಗುವುದಿಲ್ಲ. ಆದರೆ ನಾವು ಒಂದು ಹಂತಕ್ಕೆ ಬಂದ ಮೇಲೆ ನಮ್ಮ ನಮ್ಮ ಅಭಿರುಚಿಗಳು ಬೇರೆ ಬೇರೆಯಾದವು. ಹಾಗಾಗಿ ಒಟ್ಟಿಗೆ ಚಿತ್ರ ಮಾಡದಿರಲು ನಿರ್ಧರಿಸಿದೆವು” ಎಂಬುದಾಗಿ ಕಮಲ್‌ ಹಾಸನ್‌ ಅವರು ಹೇಳಿದ್ದಾರೆ.

ಅಲ್ಲದೇ ಕಮಲ್ ಹಾಸನ್ 1981ರಲ್ಲಿ ‘ಏಕ್ ದುಜೆ ಕೆ ಲಿಯೆ’ ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಇದು ಕೆ ಬಾಲಚಂದರ್ ನಿರ್ದೇಶನದ ಅವರ ತೆಲುಗು ಚಿತ್ರ ‘ಮರೋ ಚರಿತ್ರ’ದ ರಿಮೇಕ್ ಆಗಿದೆ. ಈ ವೇಳೆ ಕಮಲ್ ಹಾಸನ್ ತಮಗೆ ಹಿಂದಿ ಚಿತ್ರರಂಗದಲ್ಲಿ ಬೆಂಬಲ ನೀಡಿದ ಅಭಿಮಾನಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ:ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

ಪ್ರಸ್ತುತ, ಕಮಲ್ ಹಾಸನ್ ಅವರು ಕಲ್ಕಿ 2898ಎಡಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಇದರಲ್ಲಿ ಅವರು ಕೇವಲ ಕೆಲವು ನಿಮಿಷಗಳ ಕಾಲ ಮಾತ್ರ ಪರದೆಯ ಮೇಲೆ ಕಾಣಿಸಿಕೊಳ್ಳುವಂತಹ ಚಿಕ್ಕ ಪಾತ್ರವನ್ನು ಮಾಡಿದ್ದಾರೆ. ಈ ಚಿತ್ರದ ಮುಂದಿನ ಭಾಗದಲ್ಲಿ ಈ ಪಾತ್ರ ಮಹತ್ವದ್ದಾಗಿದೆ ಎನ್ನಲಾಗಿದೆ.

Continue Reading

Latest

Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

Thalapathy Vijay ಸಿನಿಮಾ ತಾರೆಯರು ಎಂದರೆ ಎಲ್ಲರೂ ಇಷ್ಟಪಡುತ್ತಾರೆ. ಅವರ ಜೊತೆ ನಿಂತು ಸೆಲ್ಫಿ ತೆಗೆದುಕೊಲ್ಳುವುದು, ಅವರ ಜೊತೆ ಮಾತನಾಡುವುದು ಎಂದರೆ ಅಭಿಮಾನಿಗಳಿಗೆ ಹಬ್ಬ. ಆದರೆ ಇಲ್ಲೊಬ್ಬಳು ಹುಡುಗಿ ತಮಿಳು ನಟ ದಳಪತಿ ವಿಜಯ್ ಹೆಗಲ ಮೇಲೆ ಕೈಯನ್ನು ತೆಗೆಯುವಂತೆ ವಿಜಯ್‌ಗೆ ಕೇಳಿಕೊಂಡ ವಿಡಿಯೊವೊಂದು ಸಖತ್ ವೈರಲ್ ಆಗಿದೆ. ಸಮಾರಂಭದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿತ್ತು. ಆ ವೇಳೆ ಉತ್ತಮ ಅಂಕ ಪಡೆದು ಗೌರವಿಸಲ್ಪಟ್ಟ ಹುಡುಗಿಯೊಬ್ಬಳ ಭುಜದ ಮೇಲೆ ನಟ ವಿಜಯ್ ಕೈ ಹಾಕಿದ್ದು, ತಕ್ಷಣ ಆ ಹುಡುಗಿ ತನ್ನ ಭುಜದ ಸುತ್ತಲಿನ ಕೈಯನ್ನು ತೆಗೆಯುವಂತೆ ವಿಜಯ್‌ಗೆ ಹೇಳಿದ್ದಾಳಂತೆ.

VISTARANEWS.COM


on

Thalapathy Vijay
Koo

ಚೆನ್ನೈ : ಸಿನಿಮಾ ತಾರೆಯರು ಎಂದರೆ ಎಲ್ಲರಿಗೂ ತುಂಬಾ ಇಷ್ಟ. ಅವರು ಒಂದು ವೇಳೆ ಕಣ್ಣಮುಂದೆ ಬಂದರೆ ಉತ್ಸಾಹದಲ್ಲಿ ಅವರ ಜೊತೆ ಸೆಲ್ಫಿ ತೆಗೆಯುವುದು, ಅವರನ್ನು ಹಗ್, ಕಿಸ್ ಮಾಡುವುದು ಹೀಗೆ ವಿಚಿತ್ರವಾಗಿ ವರ್ತಿಸುತ್ತಾರೆ ಜನ. ಆದರೆ ಇಲ್ಲೊಂದು ಹುಡುಗಿ ತನ್ನ ಭುಜದ ಮೇಲೆ ಕೈ ಹಾಕಿದ ಸೂಪರ್ ಸ್ಟಾರ್‌ಗೆ ಕೈ ತೆಗೆಯುವಂತೆ ಹೇಳಿದ್ದಾಳೆ. ಈ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್ (Thalapathy Vijay) ಆಗಿದೆ.

ತಮಿಳು ನಟ ವಿಜಯ್ ಎಂದರೆ ಯಾರಿಗೆ ಗೊತ್ತಿಲ್ಲ ಹೇಳಿ. ಕಾಲಿವುಡ್ ಚಿತ್ರರಂಗದಲ್ಲಿ ಹೆಸರಾಂತ ನಟ ದಳಪತಿ ವಿಜಯ್. ಕಾಲಿವುಡ್ ಚಿತ್ರರಂಗದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಈ ನಟನಿಗೆ ಅಪಾರ ಅಭಿಮಾನಿ ಬಳಗವೂ ಇದೆ. ನಟ‌ ವಿಜಯ್‌ ಜೂನ್ 28ರಂದು, ಚೆನ್ನೈನಲ್ಲಿ ತಮಿಳಗ ವೆಟ್ರಿ ಕಳಗಂ ಆಯೋಜಿಸಿದ್ದ ಎರಡನೇ ವಾರ್ಷಿಕ ಶಿಕ್ಷಣ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ಸಮಾರಂಭದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿತ್ತು. ಆ ವೇಳೆ ಉತ್ತಮ ಅಂಕ ಪಡೆದು ಗೌರವಿಸಲ್ಪಟ್ಟ ಹುಡುಗಿಯೊಬ್ಬಳ ಭುಜದ ಮೇಲೆ ನಟ ವಿಜಯ್ ಕೈ ಹಾಕಿದ್ದು, ತಕ್ಷಣ ಆ ಹುಡುಗಿ ತನ್ನ ಭುಜದ ಸುತ್ತಲಿನ ಕೈಯನ್ನು ತೆಗೆಯುವಂತೆ ವಿಜಯ್‌ಗೆ ಹೇಳಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಹುಡುಗಿ ತನ್ನ ಭುಜದ ಸುತ್ತಲಿನ ಕೈಯನ್ನು ತೆಗೆಯುವಂತೆ ನಟ ವಿಜಯ್‌ನನ್ನು ಕೇಳುತ್ತಿರುವುದನ್ನು ತೋರಿಸುತ್ತದೆ. ಈ ವಿಡಿಯೊ ಶೀರ್ಷಿಕೆಯಲ್ಲಿ ನಟನನ್ನು ಟೀಕಿಸಲಾಗಿತ್ತು.

ಆದರೆ ಪೋಸ್ಟ್ ಮಾಡಿದ ಈ ವಿಡಿಯೊ ಕೇವಲ ಭಾಗಶಃ ಕ್ಲಿಪ್ ಆಗಿದೆ. ವಿಜಯ್ ಅವರ ಕೈಯನ್ನು ತೆಗೆಯುವಂತೆ ಕೇಳಿದ ನಂತರ, ಹುಡುಗಿ ಕ್ಯಾಮೆರಾಗಳಿಗೆ ಪೋಸ್ ನೀಡುವಾಗ ಅವರ ತೋಳನ್ನು ಹಿಡಿದಿದ್ದಾಳೆ ಎನ್ನಲಾಗಿದೆ. ಅರ್ಧ ವಿಡಿಯೊ ಹಂಚಿಕೊಳ್ಳುವ ಮೂಲಕ ನಟ ವಿಜಯ್ ಅವರ ಬಗ್ಗೆ ತಪ್ಪು ಮಾಹಿತಿಯನ್ನು ಹರಡಿದ್ದಕ್ಕಾಗಿ ನೆಟ್ಟಿಗರು ಕಿಡಿಕಾರಿದ್ದಾರೆ.

ಈ ಸಮಾರಂಭದಲ್ಲಿ ನಟ ವಿಜಯ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುವ ಮೂಲಕ ಅವರನ್ನು ಶಿಕ್ಷಣದ ಕಡೆಗೆ ಪ್ರೇರೆಪಿಸಿದ್ದಾರೆ. ಕೆಟ್ಟ ಚಟಗಳಿಂದ ದೂರವಿರಲು ಒತ್ತಾಯಿಸಿದ್ದಾರೆ. ಮತ್ತು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಹಾಗೂ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಗದಿದ್ದರೆ ಅದೇ ಕೊನೆ ಅವಕಾಶವೆಂದು ಅಂದುಕೊಳ್ಳಬಾರದು. ಯಶಸ್ಸು ಎಂದಿಗೂ ಕೊನೆಗೊಳ್ಳುವುದಿಲ್ಲ ಮತ್ತು ವೈಫಲ್ಯವು ಎಂದಿಗೂ ಅಂತಿಮವಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Viral Video

ವಿಜಯ್ ತಮ್ಮ ಮುಂದಿನ ಚಿತ್ರ “ಗ್ರೇಟೆಸ್ಟ್ ಆಫ್ ಆಲ್ ಟೈಮ್ (ಜಿಒಎಟಿ) ಗಾಗಿ ಸಜ್ಜಾಗುತ್ತಿದ್ದಾರೆ. ಪ್ರಶಾಂತ್, ಪ್ರಭುದೇವ, ಸ್ನೇಹಾ, ಅಜ್ಮಲ್ ಅಮೀರ್, ವೈಭವ್, ಲೈಲಾ, ಮೋಹನ್, ಅರವಿಂದ್ ಆಕಾಶ್, ಅಜಯ್ ರಾಜ್ ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಲಿದ್ದಾರೆ.

ಈ ಚಿತ್ರದಲ್ಲಿ ವಿಜಯ್ ನಾಯಕ ಮತ್ತು ಖಳನಾಯಕನಾಗಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 5, 2024ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಕಾಲಿವುಡ್

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

Jayam Ravi: ಜಯಂ ರವಿ ಅವರು ಮಣಿರತ್ನಂ ಅವರ ಪೊನ್ನಿಯನ್ ಸೆಲ್ವನ್ – 1 ಮತ್ತು 2 ರಲ್ಲಿ ಚೋಳ ಚಕ್ರವರ್ತಿ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ನಟನೆಗೆ ಮೊದಲು, ಜಯಂ ಅವರು ಕಮಲ್ ಹಾಸನ್ ನಟಿಸಿದ ಆಳವಂದನ್ (2001) ನಲ್ಲಿ ಸುರೇಶ್ ಕೃಷ್ಣ ಅವರಿಗೆ ಸಹಾಯಕ ನಿರ್ದೇಶಕರಾಗಿದ್ದರು.

VISTARANEWS.COM


on

Jayam Ravi married to superstar rajinikanth daughter
Koo

ತಮಿಳು ಸ್ಟಾರ್‌ ಜಯಂ ರವಿ ಮತ್ತು ಪತ್ನಿ ಆರತಿ ದಂಪತಿ ವಿಚ್ಛೇದನ ಪಡೆಯಲಿದ್ದಾರೆ ಎಂದು ವರದಿಯಾಗಿದೆ (Jayam Ravi’s wife Aarti Ravi). ಇತ್ತಿಚೆಗೆ ರವಿ ಹಾಗೂ ಆರತಿ ಅವರು ಫ್ಯಾಮಿಲಿ ಫೋಟೊಗಳನ್ನು ಇನ್‌ಸ್ಟಾದಲ್ಲಿ ಡಿಲೀಟ್‌ ಮಾಡಿದ್ದರು. ಹೀಗಾಗಿ ಜೋಡಿ ಬೇರ್ಪಟ್ಟಿದೆ ಎಂದು ವರದಿಯಾಗಿದೆ. ಆರತಿಯನ್ನು ಮದುವೆಯಾಗದೇ ಇದ್ದಿದ್ದರೆ ಜಯಂ ರವಿ ಸೂಪರ್ ಸ್ಟಾರ್ ರಜನಿಕಾಂತ್ ಅವರ ಮಗಳನ್ನು ಮದುವೆಯಾಗುತ್ತಿದ್ದರು ಎಂದು ಖ್ಯಾತ ಪತ್ರಕರ್ತೆ ಸಬಿತಾ ಜೋಸೆಫ್ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಆರತಿ ರವಿ ಅವರು ಜಯಂ ರವಿ ಅವರೊಂದಿಗಿನ ಎಲ್ಲಾ ಫೋಟೋಗಳನ್ನು ಡಿಲಿಟ್‌ ಮಾಡಿದ್ದಾರೆ. ಜಯಂ ರವಿ ಅವರು 2009ರಲ್ಲಿ ನಿರ್ಮಾಪಕಿ ಸುಜಾತಾ ವಿಜಯಕುಮಾರ್ ಅವರ ಮಗಳು ಆರತಿಯನ್ನು ವಿವಾಹವಾದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ . ಮಗ ಆರವ್‌ ಇತ್ತೇಚೆಗೆ ಟಿಕ್‌ ಟಿಕ್‌ ಸಿನಿಮಾದಲ್ಲಿ ನಟಿಸಿದ್ದ. ಇಬ್ಬರೂ ಮುದ್ದಾದ ಜೋಡಿ ಎಂದೇ ಗುರುತಿಸಿಕೊಂಡಿತ್ತು. ಇದೀಗ ಇಬ್ಬರೂ ಒಂದು ವರ್ಷಗಳಿಂದ ದೂರ ಇದ್ದಾರೆ ಎನ್ನಲಾಗಿದೆ.

ಆರತಿಯನ್ನು ಮದುವೆಯಾಗದೇ ಇದ್ದಿದ್ದರೆ ಜಯಂ ರವಿ ಸೂಪರ್ ಸ್ಟಾರ್ ರಜನಿಕಾಂತ್ ಅವರ ಮಗಳನ್ನು ಮದುವೆಯಾಗುತ್ತಿದ್ದರು ಎಂದು ಖ್ಯಾತ ಪತ್ರಕರ್ತೆ ಸಬಿತಾ ಜೋಸೆಫ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜಯಂ ರವಿ ಹಾಗೂ ಆರತಿ ಪ್ರೀತಿಗೆ ನಟಿ ಖುಷ್ಪು ಕಾರಣ. ಆ ಸಮಯದಲ್ಲಿ ರಜನಿಕಾಂತ್ ಅವರ ಮಗಳು ಜಯಂ ರವಿ ಅವರನ್ನು ಮದುವೆಯಾಗಲು ಪ್ರಯತ್ನಿಸಿದ್ದರು ಎಂದು ಹೇಳಿದ್ದಾರೆ. ಜಯಂ ರವಿ ಆರತಿಯನ್ನು ಪ್ರೀತಿಸುತ್ತಿದ್ದ ಕಾರಣ, ಆರತಿಯ ತಾಯಿ ಇಬ್ಬರಿಗೂ ಮದುವೆ ಮಾಡುವ ಆತುರದಲ್ಲಿದ್ದರು. ತಕ್ಷಣ ಮದುವೆ ಮಾಡಿಸಿಬಿಟ್ಟರು ಎಂದು ವರದಿಯಾಗಿದೆ.

ಇದನ್ನೂ ಓದಿ: Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

ಜಯಂ ರವಿ ಅವರು ಮಣಿರತ್ನಂ ಅವರ ಪೊನ್ನಿಯನ್ ಸೆಲ್ವನ್ – 1 ಮತ್ತು 2 ರಲ್ಲಿ ಚೋಳ ಚಕ್ರವರ್ತಿ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ನಟನೆಗೆ ಮೊದಲು, ಜಯಂ ಅವರು ಕಮಲ್ ಹಾಸನ್ ನಟಿಸಿದ ಆಳವಂದನ್ (2001) ನಲ್ಲಿ ಸುರೇಶ್ ಕೃಷ್ಣ ಅವರಿಗೆ ಸಹಾಯಕ ನಿರ್ದೇಶಕರಾಗಿದ್ದರು.

ಇದಕ್ಕೂ ಮೊದಲು ಜಯಂ ರವಿ ಅವರು ʼಜೀನಿʼ (Genie) ಚಿತ್ರದಲ್ಲಿ ಮಿಂಚಿದ್ದರು. ಅರ್ಜುನನ್ ಜೂನಿಯರ್ ( ʼಜೀನಿʼ ಫ್ಯಾಂಟಸಿ ಸಿನಿಮಾ. ಇದೇ ಮೊದಲ ಬಾರಿಗೆ ಜಯಂ ರವಿ ಫ್ಯಾಂಟಸಿ ಕಥೆಯಲ್ಲಿ ಬಣ್ಣ ಹಚ್ಚಿದ್ದರು. ಹೀಗಾಗಿ ಫಸ್ಟ್ ಲುಕ್ ಕೂಡ ವಿಭಿನ್ನವಾಗಿತ್ತು. ಸರಪಣಿಯಲ್ಲಿ ಬಂಧಿಯಾಗಿರುವ ಜಯಂ ರವಿ, ಜುಟ್ಟು ಕಟ್ಟಿ ಸ್ಟೈಲೀಶ್ ಲುಕ್‌ನಲ್ಲಿ ಮಿಂಚಿದ್ದರು.

ಇದೀಗ ಸೌತ್‌ನಲ್ಲಿ ಸಮಂತಾ ನಾಗಚೈತನ್ಯ ಜೋಡಿ ಬೇರೆಯಾಗಿಯೇ ಅಭಿಮಾನಿಗಳು ಬೇಸರದಲ್ಲಿದ್ದರು. ಇದಾದ ಬಳಿಕ ಧನುಷ್‌ ಹಾಗೂ ಐಶ್ವರ್ಯಾ, ಸಂಗೀತ ನಿರ್ದೇಶಕ ಜೀವಿ ಪ್ರಕಾಶ್‌ ಕೂಡ ಬೇರೆಯಾದರು. ಸ್ಯಾಂಡಲ್‌ವುಡ್‌ನಲ್ಲಿ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಬೇರ್ಪಟ್ಟರು.

Continue Reading

ಕಾಲಿವುಡ್

Kanguva vs Alia Bhatt: ಕಂಗುವ- ಮಾರ್ಟಿನ್‌ ಜತೆ ಆಲಿಯಾ ಭಟ್‌ ಸಿನಿಮಾ ಕೂಡ ಕ್ಲ್ಯಾಶ್‌!

Kanguva vs Alia Bhatt: ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Kanguva vs Alia Bhatt Kanguva finally set a date
Koo

ಬೆಂಗಳೂರು: ಈಗಾಗಲೇ ಸೂರ್ಯ ಅಭಿನಯದ ಕಂಗುವ ಸಿನಿಮಾ (Kanguva vs Alia Bhatt) ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. ಇದೇ ಸಮಯಕ್ಕೆ ಅಂದರೆ ಆಲಿಯಾ ಭಟ್ ಅವರ ʻಜಿಗ್ರಾʼ ಸಿನಿಮಾ ಕೂಡ ರಿಲೀಸ್‌ ಆಗುತ್ತಿದೆ. ಮಾತ್ರವಲ್ಲ ಕನ್ನಡದ ಧ್ರುವ ಸರ್ಜಾ ಅವರ ಮಾರ್ಟಿನ್‌ ಕೂಡ ಬಿಡುಗಡೆಯಾಗುತ್ತಿದೆ. ಈ ಮೂರು ಸಿನಿಮಾಗಳು ಅಕ್ಟೋಬರ್‌ 10ರಂದು ಕ್ಲ್ಯಾಶ್‌ ಆಗುತ್ತಿವೆ.

ಕಂಗುವ- ಮಾರ್ಟಿನ್‌-ಜಿಗ್ರಾ

ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ ಆಗಲಿದೆ . ಧ್ರುವ ಸರ್ಜಾ ಅಭಿನಯದ 5ನೇ ಚಿತ್ರ ಮಾರ್ಟಿನ್. ಎ.ಪಿ.ಅರ್ಜುನ್ ನಿರ್ದೇಶನದ ಮಾರ್ಟಿನ್ 5 ಭಾಷೆಯಲ್ಲಿ ರಿಲೀಸ್ ಆಗಲಿದೆ. ಆ ಮೂಲಕ 2024 ರ ಹೈವೋಲ್ಟೇಜ್ ಸಿನಿಮಾ ಇದಾಗಲಿದೆ. ಪೊಗರು ಸಿನಿಮಾ ಬಳಿಕ 3 ವರ್ಷಗಳ ನಂತರ ಬೆಳ್ಳಿತೆರೆ ಮೇಲೆ ಧ್ರುವ ಸರ್ಜಾ ಅವರ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ. ಮಾರ್ಟಿನ್ ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಅರ್ಜುನ್‌ ಸರ್ಜಾ ಕಥೆ ಬರೆದಿದ್ದು, ವಾಸವಿ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ. ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ.

ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದ ತಾರಾಬಳಗದಲ್ಲಿ ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.

ಹಿಂದಿಯಲ್ಲಿ ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾ ಕೂಡ ಅಕ್ಟೋಬರ್​ನಲ್ಲಿ ಬಿಡುಗಡೆ ಆಗಲಿದೆ. ಇದಲ್ಲದೆ ರಾಜ್​ಕುಮಾರ್ ರಾವ್ ಹಾಗೂ ತೃಪ್ತಿ ದಮ್ರಿ ನಟನೆಯ ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಹಾಗೂ ಶಾಹಿದ್ ಕಪೂರ್-ಪೂಜಾ ಹೆಗ್ಡೆ ನಟನೆಯ ‘ದೇವ’ ಕೂಡ ಇದೇ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ.

Continue Reading
Advertisement
Physical Abuse
ಕರ್ನಾಟಕ15 mins ago

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Narendra Modi
ದೇಶ21 mins ago

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Double Ismart Steppa Maar electrifies with mass beats
ಟಾಲಿವುಡ್24 mins ago

Double Ismart: ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’: ಮೊದಲ ಹಾಡು ರಿಲೀಸ್!

Actor Darshan
ಕರ್ನಾಟಕ48 mins ago

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

IPL 2025
ಕ್ರೀಡೆ54 mins ago

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

Kannada New Movie kannnajaru teaser teaser Out
ಸಿನಿಮಾ57 mins ago

Kannada New Movie: ‘ಕಣಂಜಾರು’ ಟೀಸರ್ ಮೆಚ್ಚಿದ ಚಂದನವನ!

viral news signboard
ವೈರಲ್ ನ್ಯೂಸ್1 hour ago

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Hijab Row
ದೇಶ1 hour ago

Hijab Row: ಹಿಬಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Stray Dogs Attack
ಕರ್ನಾಟಕ1 hour ago

Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Gold Rate Today
ಚಿನ್ನದ ದರ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಷ್ಟಿದೆ ಇಂದಿನ ಬೆಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌