ಕ್ಯಾಲಿಫೋರ್ನಿಯಾದಲ್ಲಿ ಮನೆಗೇ ನುಗ್ಗಿ ಗುಂಡಿನ ದಾಳಿ; 6 ತಿಂಗಳ ಮಗು, ಅದರ ಅಮ್ಮ ಸೇರಿ 6 ಮಂದಿ ಬಲಿ - Vistara News

ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಮನೆಗೇ ನುಗ್ಗಿ ಗುಂಡಿನ ದಾಳಿ; 6 ತಿಂಗಳ ಮಗು, ಅದರ ಅಮ್ಮ ಸೇರಿ 6 ಮಂದಿ ಬಲಿ

ಕ್ಯಾಲಿಫೋರ್ನಿಯಾದ ತುಲಾರೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಮನೆಯೊಳಗೆ ನುಗ್ಗಿದ ಬಂದೂಕು ಧಾರಿಗಳು ಒಂದೇ ಸಮ ಗುಂಡು ಹಾರಿಸಿದ್ದಾರೆ.

VISTARANEWS.COM


on

California Home
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕ್ಯಾಲಿಫೋರ್ನಿಯಾ: ಯುಎಸ್​​​ನಲ್ಲಿ ಫೈರಿಂಗ್​​ ಹೊಸದಲ್ಲ. ಸಾರ್ವಜನಿಕ ಪ್ರದೇಶಗಳಲ್ಲಿ, ಮಳಿಗೆಗಳಲ್ಲಿ ಆಗಾಗ ಗನ್​ಮೆನ್​​​ಗಳು ಶೂಟ್​ ಮಾಡಿ, ಅಮಾಯಕರ ಪ್ರಾಣ ತೆಗೆಯುವುದು ಅಮೆರಿಕದಲ್ಲಿ ಪದೇಪದೆ ನಡೆಯುತ್ತಲೇ ಇರುತ್ತದೆ. ಕ್ಯಾಲಿಫೋರ್ನಿಯಾದಲ್ಲಿ ಈಗ ಮತ್ತೊಂದು ಶೂಟೌಟ್​ ಆಗಿದೆ. ಆದರೆ ಈ ಸಲ ಆಗಿದ್ದು ಸಾರ್ವಜನಿಕ ಪ್ರದೇಶದಲ್ಲಿ ಅಲ್ಲ. ಒಂದಷ್ಟು ದುಷ್ಕರ್ಮಿಗಳು ಮನೆಯೊಂದಕ್ಕೆ ನುಗ್ಗಿ, ಗುಂಡು ಹಾರಿಸಿದ್ದಾರೆ. ಇವರ ಗುಂಡಿನ ದಾಳಿಗೆ ಆರು ತಿಂಗಳ ಮಗು, ಅದರ ತಾಯಿ ಸೇರಿ ಒಟ್ಟು 6 ಮಂದಿ ಬಲಿಯಾಗಿದ್ದಾರೆ.

ಕ್ಯಾಲಿಫೋರ್ನಿಯಾದ ತುಲಾರೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಮನೆಯೊಳಗೆ ನುಗ್ಗಿದ ಬಂದೂಕು ಧಾರಿಗಳು ಒಂದೇ ಸಮ ಗುಂಡು ಹಾರಿಸಿದ್ದಾರೆ. ಅದನ್ನು ನೋಡಿದ ಪಕ್ಕದ ಮನೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಬಹುತೇಕ ಜನರ ಜೀವ ಹೋಗಿತ್ತು. ಈ ಕೇಸ್​​ಗೆ ಡ್ರಗ್ಸ್​ ಲಿಂಕ್​ ಇರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

ತುಲಾರೆಯ ಪೊಲೀಸ್ ಅಧಿಕಾರಿ ಮೈಕ್ ಬೌಡ್ರೆಕ್ಸ್ ಅವರು ಘಟನೆ ಬಗ್ಗೆ ಮಾಹಿತಿ ನೀಡಿ ‘ಸೋಮವಾರ ಮಧ್ಯಾಹ್ನ 3.30ರ ಹೊತ್ತಿಗೆ ಈ ದಾಳಿಯಾಗಿದೆ. ಇಬ್ಬರು ದಾಳಿಕೋರರು ಇರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆ ಕಾರ್ಯ ನಡೆಸುತ್ತಿದ್ದೇವೆ. ಮೃತಪಟ್ಟ ಮಗು 6ತಿಂಗಳದ್ದಾಗಿದ್ದು, ಅದರ ತಾಯಿಗೆ 17 ವರ್ಷ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯುಎಸ್‌ನಲ್ಲಿ ಮತ್ತೊಮ್ಮೆ ಶೂಟೌಟ್‌; ಮೂವರನ್ನು ಕೊಂದ ಹಂತಕನನ್ನು ಹತ್ಯೆಗೈದ ನಾಗರಿಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Nirav Modi: ನೀರವ್‌ ಮೋದಿಗೆ ಲಂಡನ್‌ ಜೈಲೇ ಗತಿ; 5ನೇ ಬಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Nirav Modi: ನೀರವ್‌ ಮೋದಿ ಜಾಮೀನು ಅರ್ಜಿಯನ್ನು ನ್ಯಾಯಾಧೀಶ ಜಾನ್‌ ಜಾನಿ ಕೈಗೆತ್ತಿಕೊಂಡರು. “ನೀರವ್‌ ಮೋದಿಗೆ ಜಾಮೀನು ನೀಡಿದರೆ ಅವರು ಮತ್ತೆ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಹಾಗೆಯೇ, ಪ್ರಭಾವಿಯಾಗಿರುವ ಕಾರಣ ಅವರು ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆಯೂ ಇದೆ ಎಂದು ತಿಳಿಸಿ ನೀರವ್‌ ಮೋದಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

VISTARANEWS.COM


on

Nirav modi
Koo

ಲಂಡನ್‌: ದೇಶಭ್ರಷ್ಟ ಆರ್ಥಿಕ ಅಪರಾಧಿ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ (Punjab National Bank) ಸಾವಿರಾರು ಕೋಟಿ ರೂ. ವಂಚಿಸಿ ದೇಶ ತೊರೆದಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿ (Nirav Modi) ಸಲ್ಲಿಸಿದ ಜಾಮೀನು ಅರ್ಜಿಯನ್ನು ಲಂಡನ್‌ ಕೋರ್ಟ್‌ ತಿರಸ್ಕರಿಸಿದೆ. ಇದರಿಂದಾಗಿ ನೀರವ್‌ ಮೋದಿಯು ಹಿಸ್‌ ಮೆಜೆಸ್ಟೀಸ್‌ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ. ನೀರವ್‌ ಮೋದಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ಲಂಡನ್‌ನಲ್ಲಿರುವ ವೆಸ್ಟ್‌ ಮಿನಿಸ್ಟರ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ (Westminster Magistrates Court) ನಿರಾಕರಿಸಿತು. ಇದರೊಂದಿಗೆ ಸತತ ಐದನೇ ಬಾರಿಯೂ ನೀರವ್‌ ಮೋದಿ ಜಾಮೀನು ಅರ್ಜಿಯು ತಿರಸ್ಕೃತಗೊಂಡಂತಾಗಿದೆ.

ನೀರವ್‌ ಮೋದಿ ಜಾಮೀನು ಅರ್ಜಿಯನ್ನು ನ್ಯಾಯಾಧೀಶ ಜಾನ್‌ ಜಾನಿ ಕೈಗೆತ್ತಿಕೊಂಡರು. “ನೀರವ್‌ ಮೋದಿಗೆ ಜಾಮೀನು ನೀಡಿದರೆ ಅವರು ಮತ್ತೆ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಹಾಗೆಯೇ, ಪ್ರಭಾವಿಯಾಗಿರುವ ಕಾರಣ ಅವರು ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆಯೂ ಇದೆ. ಹಾಗಾಗಿ, ನೀರವ್‌ ಮೋದಿಗೆ ಯಾರೂ ಜಾಮೀನು ನೀಡಲು ಸಾಧ್ಯವಿಲ್ಲ. ಅವರ ಅರ್ಜಿಯನ್ನು ತಿರಸ್ಕರಿಸಲಾಗಿದೆ” ಎಂದು ತಿಳಿಸಿದರು. ಇದು ನೀರವ್‌ ಮೋದಿಗೆ ಮತ್ತಷ್ಟು ಸಂಕಷ್ಟ ತಂದಿದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಸುಮಾರು 13,500 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಸಿಲುಕಿರುವ ನೀರವ್‌ ಮೋದಿ, 2018ರಲ್ಲಿ ವಿದೇಶಕ್ಕೆ ಪರಾರಿಯಾಗಿದ್ದಾರೆ. ಇವರ ವಿರುದ್ಧ ಸಿಬಿಐ ಹಾಗೂ ಇ.ಡಿ ತನಿಖೆ ನಡೆಸುತ್ತಿದ್ದು, ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಕೇಂದ್ರ ಸರ್ಕಾರವು ಬ್ರಿಟನ್‌ ಸರ್ಕಾರಕ್ಕೆ ಮನವಿ ಮಾಡಿದೆ. ಇವರನ್ನು ಭಾರತವು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಿದ್ದು, ಭಾರತದ ಮನವಿ ಮೇರೆಗೆ 2019ರಲ್ಲಿ ನೀರವ್‌ ಮೋದಿ ಅವರನ್ನು ಬ್ರಿಟನ್‌ನಲ್ಲಿ ಬಂಧಿಸಲಾಗಿದೆ. ಅಂದಿನಿಂದ ಇದುವರೆಗೆ ನೀರವ್‌ ಮೋದಿಯು ಜೈಲಿನಲ್ಲೇ ಇದ್ದಾರೆ. ಇದಕ್ಕೂ ಮೊದಲು ಅವರನ್ನು ವಿಂಡ್ಸ್‌ವರ್ತ್‌ ಜೈಲಿನಲ್ಲಿ ಇರಿಸಲಾಗಿತ್ತು.

ನೀರವ್‌ ಮೋದಿಯು ಹಾಂಕಾಂಗ್‌ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿದ್ದ 253.62 ಕೋಟಿ ರೂಪಾಯಿ, ವಿವಿಧ ಬಗೆಯ ರತ್ನಗಳು, ಆಭರಣಗಳನ್ನು ಇಡಿ ಜಪ್ತಿಮಾಡಿದೆ. ಹಾಗೆಯೇ, ದೇಶಭ್ರಷ್ಟ ಆರ್ಥಿಕ ಅಪರಾಧಿಯನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರವು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇಲ್ಲಿಯವರೆಗೆ ದೇಶ-ವಿದೇಶ ಸೇರಿ ನೀರವ್‌ ಮೋದಿಯ 2,396.45ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇ.ಡಿ. ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ನೀರವ್‌ ಬ್ಯಾಂಕ್‌ ಅಕೌಂಟ್‌ಗಳನ್ನೂ ಸೀಲ್‌ ಮಾಡಲಾಗಿದೆ. 

ಇದನ್ನೂ ಓದಿ: IPL 2024 : ಆರ್​ಸಿಬಿ ತಂಡಕ್ಕೆ ಸವಾಲೆಸೆದ ವಿಜಯ್​ ಮಲ್ಯ; ಏನದು ಚಾಲೆಂಜ್​​?

Continue Reading

ಫ್ಯಾಷನ್

Met Gala 2024: ಮೆಟ್ ಗಾಲಾದಲ್ಲಿ 200 ಕ್ಯಾರಟ್ ವಜ್ರ ಧರಿಸಿ ಗಮನ ಸೆಳೆದ ಸುಧಾ ರೆಡ್ಡಿ! ಯಾರಿವರು?

ಎಂಇಐಎಲ್ ಗ್ರೂಪ್‌ನ ನಿರ್ದೇಶಕಿ ಸುಧಾ ರೆಡ್ಡಿ ಅವರು ಮೆಟ್ ಗಾಲಾ 2024 ರಲ್ಲಿ (Met Gala 2024) ರೆಡ್ ಕಾರ್ಪೆಟ್ ನಲ್ಲಿ ನಡೆದು ಎಲ್ಲರ ಹುಬ್ಬೇರುವಂತೆ ಮಾಡಿದರು. ಅಮೋರ್ ಎಟರ್ನೊ ಎಂಬ 180 ಕ್ಯಾರೆಟ್ ನ ವಜ್ರದ ನೆಕ್ಲೇಸ್ ಧರಿಸಿದ್ದ ಅವರು ತಮ್ಮ ಉಡುಗೆಯ ಮೂಲಕ ಎಲ್ಲರ ಗಮನ ಸೆಳೆದರು.

VISTARANEWS.COM


on

By

Met Gala 2024
Koo

ಮೆಟ್ ಗಾಲಾ 2024ರಲ್ಲಿ (Met Gala 2024) 180 ಕ್ಯಾರಟ್ ಡೈಮಂಡ್ ನೆಕ್ಲೇಸ್‌ನೊಂದಿಗೆ (diamond necklace) 200 ಕ್ಯಾರಟ್ ವಜ್ರಗಳನ್ನು ಧರಿಸಿದ ಭಾರತೀಯ ಉದ್ಯಮಿ ಮತ್ತು ಬಿಲಿಯನೇರ್ (billionaire) ಸುಧಾ ರೆಡ್ಡಿ ( Sudha Reddy) ಎಲ್ಲರ ಗಮನ ಸೆಳೆದಿದ್ದಾರೆ. ಅವರ ಅತ್ಯಾಕರ್ಷಕ ಉಡುಗೆಗಳು ಮೆಟ್ ಗಾಲಾದಲ್ಲಿ ನೆರೆದಿದ್ದ ಎಲ್ಲರ ದೃಷ್ಟಿ ಅವರತ್ತ ನೋಡುವಂತೆ ಮಾಡಿತ್ತು.

ಎಂಇಐಎಲ್ ಗ್ರೂಪ್‌ನ ನಿರ್ದೇಶಕಿ ಸುಧಾ ರೆಡ್ಡಿ ಅವರು ಮೆಟ್ ಗಾಲಾ 2024ರಲ್ಲಿ ರೆಡ್ ಕಾರ್ಪೆಟ್ ನಲ್ಲಿ ನಡೆದು ಎಲ್ಲರ ಹುಬ್ಬೇರುವಂತೆ ಮಾಡಿದರು. ಅಮೋರ್ ಎಟರ್ನೊ ಎಂಬ 180 ಕ್ಯಾರೆಟ್‌ನ ವಜ್ರದ ನೆಕ್ಲೇಸ್ ಧರಿಸಿದ್ದ ಅವರು ತಮ್ಮ ಉಡುಗೆಯ ಮೂಲಕ ಎಲ್ಲರ ಗಮನ ಸೆಳೆದರು.


ಅವರು ಧರಿಸಿದ್ದ ನೆಕ್‌ಪೀಸ್ ನಲ್ಲಿ 25 ಕ್ಯಾರಟ್ ಹೃದಯದ ಆಕಾರದ ವಜ್ರ ಮತ್ತು ಮೂರು 20 ಕ್ಯಾರಟ್‌ನ ಹೃದಯ ಆಕಾರದ ವಜ್ರಗಳಿದ್ದವು. ಇದು ಅವರ ಪತಿ ಮತ್ತು ಇಬ್ಬರು ಮಕ್ಕಳನ್ನು ಪ್ರತಿನಿಧಿಸುತ್ತವೆ ಎಂದು ಹೇಳಿದ್ದಾರೆ.
ಈ ನೆಕ್ಲೇಸ್ ಅನ್ನು 23 ಕ್ಯಾರಟ್ ಡೈಮಂಡ್ ಸಾಲಿಟೇರ್ ರಿಂಗ್ ಮತ್ತು ಮತ್ತೊಂದು 20 ಕ್ಯಾರಟ್ ಡೈಮಂಡ್ ಸಾಲಿಟೇರ್ ಉಂಗುರದೊಂದಿಗೆ ಜೋಡಿಸಿದ್ದು, ಇದು 20 ಮಿಲಿಯನ್ ಡಾಲರ್ ಮೌಲ್ಯದ್ದಾಗಿದೆ.

ಸುಧಾ ರೆಡ್ಡಿ ಯಾರು?

ಕೃಷ್ಣಾ ರೆಡ್ಡಿಯವರ ಪತ್ನಿ ಸುಧಾ ರೆಡ್ಡಿ MEIL ನಲ್ಲಿ ನಿರ್ದೇಶಕರಾಗಿದ್ದಾರೆ. ಇವರಿಗೆ ಮಾನಸ್ ಮತ್ತು ಪ್ರಣವ್ ಎಂಬ ಇಬ್ಬರು ಮಕ್ಕಳಿದ್ದಾರೆ. ಸುಧಾ ರೆಡ್ಡಿ ಫೌಂಡೇಶನ್‌ನ ಮುಖ್ಯಸ್ಥರಾಗಿರುವ ಅವರು ಕಂಪೆನಿಯ ದತ್ತಿ ಚಟುವಟಿಕೆಗಳನ್ನು ನಿರ್ವಹಿಸುತ್ತಿದ್ದಾರೆ.
ಮೂಲತಃ ವಿಜಯವಾಡದವರಾದ ಅವರು 19 ವರ್ಷದವರಾಗಿದ್ದಾಗ ಕೃಷ್ಣಾ ರೆಡ್ಡಿ ಅವರನ್ನು ವಿವಾಹವಾದರು. ಅವರಿಬ್ಬರೂ ಒಟ್ಟಿಗೆ ಬೆಳೆದಿರುವ ಕಾರಣ ಸಾಧನೆ ಮಾಡುವುದು ಸಾಧ್ಯವಾಯಿತು ಎಂಬುದು ಅವರ ನಂಬಿಕೆ.
ಹೈದರಾಬಾದ್ ರಾಣಿ ಜೇನುನೊಣ ಎಂದೇ ಪ್ರಶಂಸಿಸಲ್ಪಡುವ ಸುಧಾ ರೆಡ್ಡಿ 2021ರಲ್ಲಿ ಮೆಟ್ ಗಾಲಾದಲ್ಲಿ ಭಾಗವಹಿಸಿದ್ದರು.


ತರುಣ್ ತಹಿಲಿಯಾನಿ ಸಿದ್ಧಪಡಿಸಿದ ಉಡುಗೆ

ಎರಡನೇ ಬಾರಿಗೆ ಮೆಟ್ ಗಾಲಾ ರೆಡ್ ಕಾರ್ಪೆಟ್‌ನಲ್ಲಿ ಹೆಜ್ಜೆ ಹಾಕಿದ ಸುಧಾ ರೆಡ್ಡಿ ಅವರು ತರುಣ್ ತಹಿಲಿಯಾನಿ ಅವರ ಆಫ್-ಶೋಲ್ಡರ್ ಗೌನ್ ಮತ್ತು ತಮ್ಮ ಸಂಗ್ರಹದ ಕೋಟಿಗಟ್ಟಲೆ ಮೌಲ್ಯದ ನೆಕ್ಲೇಸ್‌ ಧರಿಸಿ ಭಾಗವಹಿಸಿದ್ದರು.

ರೀವೇಕನಿಂಗ್ ಫ್ಯಾಶನ್ ಎಂಬ ಶೀರ್ಷಿಕೆಯ ಕಾಸ್ಟ್ಯೂಮ್ ಇನ್‌ಸ್ಟಿಟ್ಯೂಟ್‌ನಲ್ಲಿ ತರುಣ್ ತಹಿಲಿಯಾನಿ ವಿನ್ಯಾಸಗೊಳಿಸಿದ ಐವರಿ ಸಿಲ್ಕ್ ಗೌನ್ ಅನ್ನು 4,500 ಗಂಟೆಗಳ ಅವಧಿಯಲ್ಲಿ 80 ಕುಶಲಕರ್ಮಿಗಳ ತಂಡ ಸಿದ್ಧಪಡಿಸಿದೆ. ವಿನ್ಯಾಸಕಾರರ ಪ್ರಕಾರ ಈ ಧಿರಿಸು ಹಳೆಯ ಮೊಘಲ್ ಉದ್ಯಾನಗಳಿಂದ ಪ್ರೇರಿತವಾಗಿದೆ. ಕಾರ್ಸೆಟ್ ಅನ್ನು ತಹಿಲಿಯಾನಿಯ ಸಿಗ್ನೇಚರ್ ಮ್ಯೂಟ್, ಬೀಜ್-ಗೋಲ್ಡ್ ಬಣ್ಣದ ಪ್ಯಾಲೆಟ್‌ನಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ವರ್ಷದ ಮೆಟ್ ಗಾಲಾ ಥೀಮ್‌ಗೆ ಅನುಗುಣವಾಗಿ ರಚಿಸಲಾಗಿದೆ. ಗೌತಮ್ ಕಲ್ರಾ ಅವರ ಶೈಲಿಯಲ್ಲಿ ರೆಡ್ಡಿ ಅವರು ಮಿಯೋಡ್ರಾಗ್ ಗುಬೆರಿನಿಕ್ ವಿನ್ಯಾಸಗೊಳಿಸಿದ ಸ್ಫಟಿಕ ಪರಿಕರವನ್ನು ಇದರೊಂದಿಗೆ ಸೇರಿಸಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ.

180 ಕ್ಯಾರಟ್‌ ನ ನೆಕ್ಲೆಸ್

ಸುಧಾ ರೆಡ್ಡಿ ಅವರು ಕೇವಲ ಧಿರಸಿನಿಂದ ಮಾತ್ರವಲ್ಲ ಪ್ರತಿಷ್ಠಿತ ಆಭರಣದಿಂದ ಗಮನ ಸೆಳೆದರು. ‘ಅಮೋರ್ ಎಟರ್ನೊ’ ನೆಕ್ಲೇಸ್ 25 ಸಾಲಿಟೇರ್‌ಗಳನ್ನು ಒಳಗೊಂಡಿದ್ದು ಇದು ಒಟ್ಟು 180 ಕ್ಯಾರೆಟ್‌ಗಳು. ಇದನ್ನು ಭವಿಷ್ಯದ ಪೀಳಿಗೆಗೆ ಹಸ್ತಾಂತರಿಸಲು ರೆಡ್ಡಿ ಕುಟುಂಬದ ಪರಂಪರೆಯ ಗುರುತಾಗಿ ರಚಿಸಲಾಗಿದೆ.

ಇದನ್ನೂ ಓದಿ: Met Gala Fashion: ಮೆಟ್‌ ಗಾಲಾದಲ್ಲಿ ಹೈಲೈಟಾದ ಭಾರತೀಯ ಫ್ಯಾಷೆನಬಲ್‌ ತಾರೆಯರಿವರು!

ಹಾರದ ಮಧ್ಯಭಾಗದಲ್ಲಿ ನಾಲ್ಕು ದೊಡ್ಡ ಹೃದಯದ ಆಕಾರದ ವಜ್ರಗಳಿಂದ ರಚಿಸಲಾದ ಸಾಂಕೇತಿಕವಾಗಿ ಕುಟುಂಬದ ಮರವನ್ನು ಇಡಲಾಗಿದೆ. ಅತಿದೊಡ್ಡ ವಜ್ರ, 25 ಕ್ಯಾರೆಟ್ ಕಿಂಗ್ ಆಫ್ ಹಾರ್ಟ್ಸ್, ರೆಡ್ಡಿಯ ಪತಿ ಕೃಷ್ಣನನ್ನು ಗೌರವಿಸುತ್ತದೆ. ಆದರೆ ಹೃದಯದ ರಾಣಿ 20 ಕ್ಯಾರೆಟ್ ಹೃದಯದ ವಜ್ರವು ಸುಧಾ ರೆಡ್ಡಿಯನ್ನು ಸಂಕೇತಿಸುತ್ತದೆ. ಜ್ಞಾನದ ರಾಜಕುಮಾರ ಮತ್ತು ಸಂಪತ್ತಿನ ರಾಜಕುಮಾರ ಎಂದು ಕರೆಯಲ್ಪಡುವ ಎರಡು ಹೆಚ್ಚುವರಿ 20 ಕ್ಯಾರಟ್ ಹೃದಯಗಳು ಅವರ ಪುತ್ರರಾದ ಪ್ರಣವ್ ಮತ್ತು ಮಾನಸ್ ಅವರನ್ನು ಪ್ರತಿನಿಧಿಸುತ್ತವೆ.

ಈ ನೆಕ್ಲೇಸ್ ಅನ್ನು ಪೂರ್ಣಗೊಳಿಸುವುದು 21 ಹೊಳೆಯುವ ಸುತ್ತಿನ ವಜ್ರಗಳು. ಇದು ಸುಧಾ ಮತ್ತು ಕೃಷ್ಣರ ಪ್ರೇಮಕಥೆಯ ಹಂಚಿಕೊಂಡ ಅನುಭವಗಳು ಮತ್ತು ಪಾಲಿಸಬೇಕಾದ ಕ್ಷಣಗಳನ್ನು ಸಂಕೇತಿಸುತ್ತದೆ. 20 ಕ್ಯಾರೆಟ್ ಹೃದಯದ ಆಕಾರದ ವಜ್ರದ ಉಂಗುರ ಮತ್ತು 23 ಕ್ಯಾರೆಟ್ ಹಳದಿ ಡೈಮಂಡ್ ರಿಂಗ್ ಇದನ್ನು ಪೂರ್ಣಗೊಳಿಸುತ್ತದೆ. ಇದನ್ನು ರಚಿಸಲು 100 ಗಂಟೆಗಳು ಬೇಕಾಗಿತ್ತು.

Continue Reading

ದೇಶ

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

Maldives: ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಾಗಿ ಫೆಬ್ರವರಿ 1ರಂದು ಮಂಡಿಸಿದ ಬಜೆಟ್‌ನಲ್ಲೂ ಘೋಷಿಸಲಾಗಿದೆ. “ದೇಶದ ಪ್ರವಾಸೋದ್ಯಮಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಬಂದರು ಸಂಪರ್ಕ, ಪ್ರವಾಸೋದ್ಯಮ ಮೂಲ ಸೌಕರ್ಯಗಳ ಅಭಿವೃದ್ಧಿ, ಲಕ್ಷದ್ವೀಪ ಸೇರಿ ದೇಶದ ಎಲ್ಲ ದ್ವೀಪಗಳನ್ನು ಅಭಿವೃದ್ಧಿಗೊಳಿಸಲಾಗುವುದು” ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದರು. ಭಾರತದ ಆಂತರಿಕ ವಿಚಾರದಲ್ಲಿ ಸುಖಾಸುಮ್ಮನೆ ಮೂಗು ತೂರಿಸಿದ್ದ ಮಾಲ್ಡೀವ್ಸ್‌ಗೆ ಇದರಿಂದ ಭಾರಿ ಹಿನ್ನಡೆಯಾಗಿದೆ. ಹಾಗಾಗಿ, ಮಾಲ್ಡೀವ್ಸ್‌ ಈಗ ಭಾರತೀಯರ ಮನವೊಲಿಸಲು ಯತ್ನಿಸುತ್ತಿದೆ.

VISTARANEWS.COM


on

Narendra Modi
Koo

ನವದೆಹಲಿ/ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಭಾರತ ಹಾಗೂ ಮೋದಿ ಕುರಿತು ಮಾಲ್ಡೀವ್ಸ್‌ ಅಸಮಾಧಾನದ ಹೇಳಿಕೆ ನೀಡಿದ ಬಳಿಕ ದೇಶದಲ್ಲಿ ಬಾಯ್ಕಾಟ್‌ ಮಾಲ್ಡೀವ್ಸ್‌ ಅಭಿಯಾನ ಶುರುವಾದ ಕಾರಣ ಆ ದೇಶಕ್ಕೆ ತೆರಳುವವರ ಸಂಖ್ಯೆ ಭಾರಿ ಕುಸಿದಿದೆ. ಭಾರತೀಯರ ಬಾಯ್ಕಾಟ್‌ ಏಟಿಗೆ ಈಗ ಮಾಲ್ಡೀವ್ಸ್‌ ಥಂಡಾ ಹೊಡೆದಿದ್ದು, “ಭಾರತೀಯರೇ, ದಯಮಾಡಿ ಮಾಲ್ಡೀವ್ಸ್‌ ಪ್ರವಾಸಕ್ಕೆ ಬನ್ನಿ” ಎಂದು ಅಲ್ಲಿನ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್‌ (Ibrahim Faisal) ಮನವಿ ಮಾಡಿದ್ದಾರೆ.

“ಭಾರತ ಹಾಗೂ ಮಾಲ್ಡೀವ್ಸ್‌ ಸಂಬಂಧಕ್ಕೆ ಉತ್ತಮ ಇತಿಹಾಸವಿದೆ. ನಮ್ಮ ನೂತನ ಸರ್ಕಾರವೂ ಭಾರತದ ಜತೆ ಕೆಲಸ ಮಾಡಲು ಬಯಸುತ್ತದೆ. ನಾವು ಎಂದಿಗೂ ಸ್ನೇಹಯುತ ವಾತಾವರಣ, ಸಂಬಂಧ ಇಟ್ಟುಕೊಳ್ಳಲು ಬಯಸುತ್ತೇವೆ. ಹಾಗಾಗಿ, ಭಾರತೀಯರನ್ನು ನಮ್ಮ ಸರ್ಕಾರ ಹಾಗೂ ಇಲ್ಲಿನ ಜನರು ಆತ್ಮೀಯವಾಗಿ ಸ್ವಾಗತಿಸುತ್ತಾರೆ. ನಾನೊಬ್ಬ ಪ್ರವಾಸೋದ್ಯಮ ಸಚಿವನಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ, ದಯಮಾಡಿ ಮಾಲ್ಡೀವ್ಸ್‌ಗೆ ಬನ್ನಿ. ಮಾಲ್ಡೀವ್ಸ್‌ ಪ್ರವಾಸೋದ್ಯಮದ ಭಾಗವಾಗಿ” ಎಂಬುದಾಗಿ ಅಂಗಲಾಚಿಕೊಂಡಿದ್ದಾರೆ.

narendra modi maldives president mohammed Muizzu

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಇದನ್ನೂ ಓದಿ: Maldives Minister: ಭಾರತದ ತಿರಂಗಾಕ್ಕೆ ಅವಮಾನ; ಕ್ಷಮೆ ಕೇಳಿದ ಮಾಲ್ಡೀವ್ಸ್‌ ಸಚಿವೆ!

Continue Reading

Latest

Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

ಏಷ್ಯಾದ 31 ದೇಶಗಳ ಪೈಕಿ 26 ದೇಶಗಳಲ್ಲಿ ಪತ್ರಿಕಾ ಸ್ವಾತಂತ್ರ್ಯವು (Press Freedom) ಅವನತಿಯಲ್ಲಿದೆ ಎಂದು ಆರ್‌ಎಸ್‌ಎಫ್ ವರದಿ ಮಾಡಿದ್ದು, ಪತ್ರಕರ್ತರಿಗೆ ಸುರಕ್ಷಿತವಲ್ಲದ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

VISTARANEWS.COM


on

By

Press Freedom
Koo

ಬೀಜಿಂಗ್: ಪತ್ರಕರ್ತರಿಗೆ (journalists) ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ (dangerous countries) ಚೀನಾ (china) ಕೂಡ ಒಂದಾಗಿದೆ ಎಂದು ವಾಯ್ಸ್ ಆಫ್ ಅಮೆರಿಕ (VOA) ವರದಿ ಮಾಡಿದೆ. 2024ರ ಶ್ರೇಯಾಂಕ ಪ್ರಕಟಿಸಿರುವ ಗ್ಲೋಬಲ್ ಮೀಡಿಯಾ ವಾಚ್‌ಡಾಗ್ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (RSF) ಏಷ್ಯಾದಲ್ಲಿ ಪತ್ರಿಕಾ ಸ್ವಾತಂತ್ರ್ಯವು ಅವನತಿಯಾಗುತ್ತಿದೆ. ಇದರಲ್ಲಿ ಒಟ್ಟು 31 ದೇಶಗಳಲ್ಲಿ 26 ವಾರ್ಷಿಕ ಸೂಚ್ಯಂಕದಲ್ಲಿದೆ ಎಂದು ಹೇಳಿದೆ.

ಪತ್ರಿಕಾ ಸ್ವಾತಂತ್ರ್ಯ (Press Freedom) ಸೂಚ್ಯಂಕದ ಪ್ರಕಾರ, ಏಷ್ಯಾವು ಪತ್ರಿಕೋದ್ಯಮ ವೃತ್ತಿ ನಡೆಸಲು ಎರಡನೇ ಅತ್ಯಂತ ಕಷ್ಟಕರವಾದ ಪ್ರದೇಶವಾಗಿದೆ. ಈ ಪ್ರದೇಶದ ಐದು ದೇಶಗಳಾದ ಮ್ಯಾನ್ಮಾರ್ ( Myanmar), ಚೀನಾ (China), ಉತ್ತರ ಕೊರಿಯಾ (North Korea) ಮತ್ತು ವಿಯೆಟ್ನಾಂ (Vietnam) ಸೇರಿದೆ. 2024ರ ಶ್ರೇಯಾಂಕದಲ್ಲಿ ಮಾಧ್ಯಮ ವೃತ್ತಿಪರರಿಗೆ ವಿಶ್ವದ 10 ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಮ್ಯಾನ್ಮಾರ್, ಚೀನಾ, ಉತ್ತರ ಕೊರಿಯಾ ಮತ್ತು ವಿಯೆಟ್ನಾಂ ಕೂಡ ಸೇರಿದೆ.


ಏಷ್ಯಾ-ಪೆಸಿಫಿಕ್ ಪ್ರದೇಶದ ಯಾವುದೇ ದೇಶಗಳು ಪತ್ರಿಕಾ ಸ್ವಾತಂತ್ರ್ಯದ ಟಾಪ್ 15 ರಾಂಕ್‌ನಲ್ಲಿ ಇಲ್ಲ. ವಿಶ್ವದ ಮೂರು ಕಮ್ಯುನಿಸ್ಟ್ ಸರ್ಕಾರಗಳು ಚೀನಾ, ಉತ್ತರ ಕೊರಿಯಾ ಮತ್ತು ವಿಯೆಟ್ನಾಂ 180 ದೇಶಗಳ ಆರ್ ಎಸ್ ಎಫ್ ನ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ ಶ್ರೇಯಾಂಕದ ಕೆಳಭಾಗದಲ್ಲಿ ಬಹಳ ಹಿಂದಿನಿಂದಲೂ ಇವೆ. ಈ ವರ್ಷ ಚೀನಾ 172, ವಿಯೆಟ್ನಾಂ 174 ಮತ್ತು ಉತ್ತರ ಕೊರಿಯಾ 177ನೇ ಸ್ಥಾನದಲ್ಲಿದೆ.

ಈ ದೇಶಗಳು ಮತ್ತು ಪ್ರಾಂತ್ಯಗಳು ಇತ್ತೀಚಿನ ವರ್ಷಗಳಲ್ಲಿ ಪತ್ರಿಕಾ ಸ್ವಾತಂತ್ರ್ಯದಲ್ಲಿ ಕುಸಿತವನ್ನು ತೋರಿಸಿವೆ. ಪೂರ್ವ ಏಷ್ಯಾದಲ್ಲಿ ಮಾಧ್ಯಮವು ಕಾರ್ಯನಿರ್ವಹಿಸಲು ಕಷ್ಟಕರವಾದ ಸ್ಥಳವಾಗಿದೆ. ಹೆಚ್ಚುವರಿಯಾಗಿ, ಹಾಂಗ್ ಕಾಂಗ್ ಒಮ್ಮೆ ಏಷ್ಯಾ ಪ್ರದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಮಾದರಿಯಾಗಿತ್ತು. ಆದರೆ ರಾಜಕೀಯ ಅಶಾಂತಿ ಮತ್ತು ಮಾಧ್ಯಮ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವ ಹೊಸ ಕಾನೂನುಗಳ ಅನಂತರ ನಗರದ ಶ್ರೇಯಾಂಕವು ಇತ್ತೀಚೆಗೆ 80 ರಿಂದ 148ಕ್ಕೆ ಇಳಿಯಿತು. ಅಂದಹಾಗೆ ಭಾರತ 162ನೇ ರ್ಯಾಂಕ್‌ನಲ್ಲಿದೆ.

2020ರಲ್ಲಿ ರಾಷ್ಟ್ರೀಯ ಭದ್ರತಾ ಕಾನೂನನ್ನು ಹೇರಲು ಬೀಜಿಂಗ್‌ನ ಕ್ರಮದಿಂದ ಕನಿಷ್ಠ 12ಕ್ಕೂ ಹೆಚ್ಚು ಮಾಧ್ಯಮಗಳು ಮುಚ್ಚಲ್ಪಟ್ಟಿವೆ. 2019ರಲ್ಲಿ ಸಾಮೂಹಿಕ ರಾಜಕೀಯ ಅಶಾಂತಿಯ ಅನಂತರ ನಗರವನ್ನು ಸ್ಥಿರಗೊಳಿಸಲು ಕಾನೂನು ಅಗತ್ಯವಾಗಿದೆ ಎಂದು ಬೀಜಿಂಗ್ ಹೇಳಿದೆ ಎಂದು VOA ವರದಿ ಮಾಡಿದೆ.

ಇದನ್ನೂ ಓದಿ: Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

ಹಾಂಗ್ ಕಾಂಗ್‌ನ ಮಾಧ್ಯಮ ಸ್ವಾತಂತ್ರ್ಯಗಳು ಇನ್ನೂ ಸುಧಾರಿಸಿಲ್ಲ ಎಂದು ಆರ್‌ಎಸ್‌ಎಫ್‌ನ ವಕೀಲ ಅಲೆಕ್ಸಾಂಡ್ರಾ ಬಿಲಾಕೋವ್ಸ್ಕಾ ಹೇಳಿದ್ದಾರೆ. ಹಾಂಗ್ ಕಾಂಗ್‌ಗೆ ಕೆಟ್ಟದ್ದು ರಾಜಕೀಯ ಮತ್ತು ಕಾನೂನು ಅಂಶಗಳಾಗಿವೆ. ಹಾಂಗ್ ಕಾಂಗ್‌ನ ಸ್ಥಾನವು ತುಂಬಾ ಕಡಿಮೆಯಾಗಿದೆ. ಇಲ್ಲಿನ ಪರಿಸ್ಥಿತಿಯು ತುಂಬಾ ಕಷ್ಟಕರವಾಗಿದೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
toilet video shooting in mangalore
ಕ್ರೈಂ20 mins ago

Toilet Video: ಮೆಡಿಕಲ್‌ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣ!

Ranveer Singh Wedding Pics With Deepika Padukone
ಸ್ಯಾಂಡಲ್ ವುಡ್22 mins ago

Ranveer Singh: ಮಗುವಿನ ನಿರೀಕ್ಷೆ ಹೊಸ್ತಿಲಲ್ಲೇ ಮದುವೆ ಫೋಟೊಗಳು ಡಿಲಿಟ್‌! ದೀಪಿಕಾ ಜತೆ ರಣವೀರ್ ಕಿರಿಕ್‌?

EVMs damage
ದೇಶ30 mins ago

EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

Manali Tour
ಪ್ರವಾಸ54 mins ago

Manali Tour: ಭೂಲೋಕದ ಸ್ವರ್ಗ ಮನಾಲಿಗೆ ಪ್ರವಾಸ ಮಾಡಲು ಯಾವ ಸಮಯ ಸೂಕ್ತ?

Akshaya Tritiya 2024
ಧಾರ್ಮಿಕ55 mins ago

Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

Prajwal Revanna Case HD Revanna bail plea to be heard tomorrow Jail or Bela
ಕ್ರೈಂ1 hour ago

Prajwal Revanna Case: ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

woman murder case divya
ಕ್ರೈಂ1 hour ago

Murder Case: ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

Uttarakhand Wildfire
ದೇಶ1 hour ago

Uttarakhand Wild fire:5 ತಿಂಗಳು.. 910 ಕಾಡ್ಗಿಚ್ಚು ಪ್ರಕರಣ;ಸುಪ್ರೀಂಕೋರ್ಟ್‌ನಲ್ಲಿ ಇಂದು ತುರ್ತು ವಿಚಾರಣೆ

nanna desha nanna dani column
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

Ghee Testing Method
ಆಹಾರ/ಅಡುಗೆ2 hours ago

Ghee Testing Method: ನಾವು ತಿನ್ನುವ ತುಪ್ಪ ಶುದ್ಧವಾಗಿದೆಯೇ ಎಂದು ಪರೀಕ್ಷಿಸುವುದು ಹೇಗೆ? ಇಲ್ಲಿದೆ ವಿಧಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ12 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ15 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ17 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌