Border dispute : ಹುತಾತ್ಮ ದಿನ ಆಚರಿಸಿದ MES; ಮಾನೆಗೆ ನಿರ್ಬಂಧ ವಿಧಿಸಿದ ಜಿಲ್ಲಾಧಿಕಾರಿ ಕ್ರಮಕ್ಕೆ ಪ್ರಶಂಸೆ - Vistara News

ಬೆಳಗಾವಿ

Border dispute : ಹುತಾತ್ಮ ದಿನ ಆಚರಿಸಿದ MES; ಮಾನೆಗೆ ನಿರ್ಬಂಧ ವಿಧಿಸಿದ ಜಿಲ್ಲಾಧಿಕಾರಿ ಕ್ರಮಕ್ಕೆ ಪ್ರಶಂಸೆ

Border dispute : ಪದೇ ಪದೆ ಕ್ಯಾತೆ ತೆಗೆಯುತ್ತಲೇ ಬಂದಿರುವ ಎಂಇಎಸ್‌ ಹುತಾತ್ಮ ದಿನವನ್ನು ಆಚರಿಸಿದೆ. ಅಲ್ಲದೆ, ಮೆರವಣಿಗೆ ನಡೆಸಿ, ಬೆಳಗಾವಿ, ಖಾನಾಪುರ ಸೇರಿದಂತೆ ವಿವಿಧ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ವಿಧಾನಸಭೆ ಚುನಾವಣೆ ‌ಸಮೀಪಿಸುತ್ತಿದ್ದಂತೆ ನಾಡದ್ರೋಹಿ ಎಂಇಎಸ್ ಮತ್ತೆ ಕ್ಯಾತೆ ಆರಂಭಿಸಿದೆ. ಮಂಗಳವಾರ (ಜ.೧೭) ನಗರದಲ್ಲಿ ಗಡಿ ವಿವಾದ ಹೋರಾಟದಲ್ಲಿ ಗಲಭೆ ಸೃಷ್ಟಿಸಿ ಗೋಲಿಬಾರ್‌ಗೆ ತುತ್ತಾಗಿ ಮೃತಪಟ್ಟಿದ್ದವರ ಸ್ಮರಣಾರ್ಥ ಹುತಾತ್ಮ ದಿನಕ್ಕೆ ಚಾಲನೆ ನೀಡಿದ್ದು, ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದೆ. ಇದಕ್ಕೆ ಶಿವಸೇನೆಯ ಠಾಕ್ರೆ ಬಣ ಸಾಥ್ ನೀಡಿದೆ.

ಬೆಳಗಾವಿಯ ಹುತಾತ್ಮ ಚೌಕ್‌ನಲ್ಲಿ ಎಂಇಎಸ್ ವತಿಯಿಂದ ಹುತಾತ್ಮ ದಿನಾಚರಣೆ ಆಚರಿಸಿದ್ದು, ಕೈಯಲ್ಲಿ ಭಗವಾ ಧ್ವಜ ಹಿಡಿದು ಮೆರವಣಿಗೆ ನಡೆಸಿದರು. ಅಲ್ಲದೆ, ಬೆಳಗಾವಿ, ಖಾನಾಪುರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರ್ಪಡೆ ಆಗಬೇಕೆಂದು ಘೋಷಣೆ ಕೂಗಿದರು. ರಹೆಂಗೇ ತೋ ಮಹಾರಾಷ್ಟ್ರ ಮೇ ನಹೀ ತೋ ಜೈಲ್ ಮೇ ಎಂದೂ ಘೋಷಣೆಯನ್ನು ಕೂಗಿದ್ದಾರೆ.

ಎಂಇಎಸ್ ಅಧ್ಯಕ್ಷ ದೀಪಕ್ ದಳವಿ, ಎಂಇಎಸ್ ಮಹಿಳಾ ಘಟಕ ಅಧ್ಯಕ್ಷೆ ರೇಣು ಕಿಲ್ಲೇಕರ್, ಮಾಜಿ ಮೇಯರ್ ಸರಿತಾ ಪಾಟೀಲ್, ಎಂಇಎಸ್ ಬೆಂಬಲಿತ ಕಾರ್ಪೊರೇಟರ್‌ಗಳಾದ ರವಿ ಸಾಳುಂಕೆ, ಶಿವಾಜಿ ಮಂಡೋಳಕರ್, ವೈಶಾಲಿ ಭಾತ್ಕಾಂಡೆ, ಎಂಇಎಸ್ ಯುವ ಸಮಿತಿ ಅಧ್ಯಕ್ಷ ಶುಭಂ ಶೆಳಕೆ, ಶಿವಾನಿ ಪಾಟೀಲ್, ಎನ್‌ಸಿಪಿ ಮುಖಂಡರಾದ ಅಮೋಲ್ ದೇಸಾಯಿ, ಶಿವಸೇನೆ ಮುಖಂಡ ಪ್ರಕಾಶ್ ಶಿರೋಳಕರ್ ಸೇರಿ ಹಲವರು ಭಾಗಿಯಾಗಿದ್ದರು.

ಸಾಮರಸ್ಯಕ್ಕೆ ಧಕ್ಕೆ ತರಲು ಯತ್ನ
ಎಂಇಎಸ್‌ ವತಿಯಿಂದ ಹುತಾತ್ಮ ದಿನ ಆಚರಣೆ ಮಾಡುವ ಮೂಲಕ ಭಾಷಾ ಸಾಮರಸ್ಯಕ್ಕೆ ಧಕ್ಕೆ ತರಲು ಯತ್ನವಾಗಿದ್ದಲ್ಲದೆ, ಮರಾಠಿಗರನ್ನು ಪ್ರಚೋದಿಸಲು ಮುಂದಾಗಿದೆ ಎನ್ನಲಾಗಿದೆ. ಕಳೆದ ವಿಧಾನಸಭೆ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಂಇಎಸ್ ನೆಲಕಚ್ಚಿತ್ತು. ಬರುವ ವಿಧಾನಸಭೆ ‌ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಎಂಇಎಸ್ ಹೆಣಗಾಟ ನಡೆಸುತ್ತಿದೆ. ಈಗ ರಾಜಕೀಯ ಲಾಭಕ್ಕಾಗಿ ಚುನಾವಣೆ ಹೊಸ್ತಿಲಲ್ಲಿ ಹುತಾತ್ಮ ದಿನ ಆಚರಣೆಗೆ ಮುಂದಾಗಿದೆ ಎಂದೇ ಹೇಳಲಾಗುತ್ತಿದೆ.

ಧೈರ್ಯಶೀಲ್ ಮಾನೆ ಪ್ರವೇಶ ನಿರ್ಬಂಧ
ಎಂಇಎಸ್‌ನ ಹುತಾತ್ಮ ದಿನ ಆಚರಣೆಗೆ ಶಿವಸೇನೆ ಸಂಸದ, ಮಹಾರಾಷ್ಟ್ರದ ಗಡಿ ಸಮನ್ವಯ ಸಮಿತಿ ಅಧ್ಯಕ್ಷ ಧೈರ್ಯಶೀಲ್ ಮಾನೆ ಬೆಳಗಾವಿಗೆ ಆಗಮಿಸುವವರಿದ್ದರು. ಹೀಗಾಗಿ ಅವರ ಗಡಿ ಪ್ರವೇಶಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸೋಮವಾರ (ಜ.೧೬) ರಾತ್ರಿಯೇ ಆದೇಶಿಸಿದ್ದರು. ಇದು ಸಾರ್ವಜನಿಕವಾಗಿ ವ್ಯಾಪಕ ಪ್ರಶಂಸೆಗೂ ಪಾತ್ರವಾಗಿತ್ತು. ಸಿಆರ್‌ಪಿಸಿ 1997, ಕಲಂ 144 (3) ಅನ್ವಯ ವಿಶೇಷ ಅಧಿಕಾರ ಬಳಸಿ ಧೈರ್ಯಶೀಲ್ ಮಾನೆಗೆ ನಿರ್ಬಂಧ ವಿಧಿಸಿ ಡಿಸಿ ಆದೇಶಿಸಿದ್ದರು. ಪ್ರಚೋದನಾತ್ಮಕ ಭಾಷಣ ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮವನ್ನು ಜಿಲ್ಲಾಧಿಕಾರಿಗಳು ಕೈಗೊಂಡಿದ್ದರು.

ಇದನ್ನೂ ಓದಿ | Karnataka Election : ರೆಡ್ಡಿ ಹೊಸ ಪಕ್ಷದ ಪ್ರಥಮ ಜಿಲ್ಲಾಧ್ಯಕ್ಷರ ಘೋಷಣೆ; ಆಪ್ತ ರಾಜಶೇಖರ ಗೌಡಗೆ ಪಟ್ಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Double Murder: ಮಗಳ ಹಿಂದೆ ಬಿದ್ದಿದ್ದಕ್ಕೆ ಸಹೋದರರನ್ನೇ ಚಾಕುವಿನಿಂದ ಇರಿದು ಕೊಂದ ಫಕೀರಪ್ಪ!

Double Murder: ಆರೋಪಿ ಫಕೀರಪ್ಪನ‌ ಪುತ್ರಿಯನ್ನು ಪ್ರೀತಿಸುವಂತೆ ಯಲ್ಲಪ್ಪ ಹಳೇಗೋಡಿ ಬೆನ್ನುಬಿದ್ದಿದ್ದ ಎಂದು ತಿಳಿದುಬಂದಿದೆ. ಆದರೆ, ಪುತ್ರಿಯ ತಂಟೆಗೆ ಬರಬೇಡ ಎಂದು ಯುವಕನಿಗೆ ವಾರ್ನ್ ಮಾಡಲು ಕಾರಿಮನಿಗೆ ಫಕೀರಪ್ಪ ಹೋಗಿದ್ದ ಎನ್ನಲಾಗಿದೆ. ಈ ವೇಳೆ ಫಕೀರಪ್ಪ ಹಾಗೂ ಯಲ್ಲಪ್ಪ ಹಳೇಗೋಡಿ ಮಧ್ಯೆ ವಾಗ್ವಾದ ನಡೆದಿದೆ. ಮಾತು ವಿಕೋಪಕ್ಕೆ ಹೋಗಿದೆ. ಆಗ ಯಲ್ಲಪ್ಪನಿಗೆ ಚಾಕುವಿನಿಂದ ‌ಫಕೀರಪ್ಪ ಇರಿದಿದ್ದಾನೆ. ಬಿಡಿಸಲು ಬಂದ ಸಹೋದರನಿಗೂ ಇರಿದು ಕೊಂದಿದ್ದಾನೆ.

VISTARANEWS.COM


on

Double Murder Fakirappa stabs brothers to death for falling behind daughter
Koo

ಬೆಳಗಾವಿ: ಪ್ರೀತಿಸುವಂತೆ ಬೆನ್ನು ಬಿದ್ದ ಯುವಕ ಹಾಗೂ ಆತನ ಸಹೋದರನ್ನು ಯುವತಿಯ ತಂದೆಯೇ ಬರ್ಬರವಾಗಿ ಹತ್ಯೆ (Double Murder) ಮಾಡಿದ್ದಾನೆ. ಚಾಕುವಿನಿಂದ ಇರಿದು ಇಬ್ಬರನ್ನೂ ಕೊಂದು ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದಲ್ಲಿ ‌ನಡೆದಿದೆ.

ಕಾರಿಮನಿ ಗ್ರಾಮದ ಯಲ್ಲಪ್ಪ ಹಳೇಗೋಡಿ (22) ಮಾಯಪ್ಪ ಹಳೇಗೋಡಿ (22) ಕೊಲೆಯಾದವರು. ಸವದತ್ತಿ ತಾಲೂಕಿನ ದುಂಡನಕೊಪ್ಪ ಗ್ರಾಮದ ಫಕೀರಪ್ಪ ಭಾಂವಿಹಾಳ (50) ಎಂಬಾತ ಕೃತ್ಯ ಎಸಗಿದ್ದಾನೆ.

ಆರೋಪಿ ಫಕೀರಪ್ಪನ‌ ಪುತ್ರಿಯನ್ನು ಪ್ರೀತಿಸುವಂತೆ ಯಲ್ಲಪ್ಪ ಹಳೇಗೋಡಿ ಬೆನ್ನುಬಿದ್ದಿದ್ದ ಎಂದು ತಿಳಿದುಬಂದಿದೆ. ಆದರೆ, ಪುತ್ರಿಯ ತಂಟೆಗೆ ಬರಬೇಡ ಎಂದು ಯುವಕನಿಗೆ ವಾರ್ನ್ ಮಾಡಲು ಕಾರಿಮನಿಗೆ ಫಕೀರಪ್ಪ ಹೋಗಿದ್ದ ಎನ್ನಲಾಗಿದೆ. ಈ ವೇಳೆ ಫಕೀರಪ್ಪ ಹಾಗೂ ಯಲ್ಲಪ್ಪ ಹಳೇಗೋಡಿ ಮಧ್ಯೆ ವಾಗ್ವಾದ ನಡೆದಿದೆ. ಮಾತು ವಿಕೋಪಕ್ಕೆ ಹೋಗಿದೆ. ಆಗ ಯಲ್ಲಪ್ಪನಿಗೆ ಚಾಕುವಿನಿಂದ ‌ಫಕೀರಪ್ಪ ಇರಿದಿದ್ದಾನೆ.

ಯಲ್ಲಪ್ಪನನ್ನು‌ ಬಿಡಿಸಿಕೊಳ್ಳಲು ಬಂದ ಸಹೋದರ ಮಾಯಪ್ಪನಿಗೂ ಚಾಕುವಿನಿಂದ ‌ಫಕೀರಪ್ಪ ಚಾಕುವಿನಿಂದ ಇರಿದಿದ್ದಾಣೆ. ತೀವ್ರ ರಕ್ತಸ್ರಾವದಿಂದ ಯಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಗಾಯಗೊಂಡ ‌ಮಾಯಪ್ಪನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ‌ಫಲಿಸದೇ ಮೃತಪಟ್ಟಿದ್ದಾನೆ.

ಘಟನೆ ಬಳಿಕ ಫಕೀರಪ್ಪ ಭಾಂವಿಹಾಳ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ‌ರಾಮದುರ್ಗ ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Self Harming: ಅಪ್ಪನಿಗೆ ಗುಡ್ ಬೈ ಹೇಳಿಸಿ ಮಗುವನ್ನು ಕೊಂದ ತಾಯಿ!

ಟೆಕ್ಸಾಸ್: ಮಗುವಿನಿಂದ ತಂದೆಗೆ ವಿದಾಯ ಹೇಳಿಸಿದ ಬಳಿಕ ಮಹಿಳೆಯೊಬ್ಬಳು ಮಗುವನ್ನು ಗುಂಡಿಕ್ಕಿ (shot) ಕೊಂದು ತಾನು ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ನ್ಯೂಯಾರ್ಕ್ ನ (New York) ಟೆಕ್ಸಾಸ್ ನ (Texas) ಸ್ಯಾನ್ ಆಂಟೋನಿಯೊದ ಉದ್ಯಾನವನದಲ್ಲಿ ಮಾರ್ಚ್ 19ರಂದು ನಡೆದಿದೆ. ಸವನ್ನಾ ಕ್ರಿಗರ್ (32) ಮತ್ತು ಆಕೆಯ ಮಗ ಕೈಡೆನ್ (3) ಮೃತರು.

ಟೆಕ್ಸಾಸ್ ನಲ್ಲಿ ಮಗು ಕೈಡೆನ್ ಜೊತೆ ವಾಸವಿದ್ದ ಸವಾನ್ನಾ ಕ್ರಿಗರ್ ಇದಕ್ಕೂ ಮೊದಲು ತನ್ನ ಮದುವೆಯ ಫೋಟೋಗಳನ್ನು ಚಿತ್ರೀಕರಿಸುವುದು, ಮಾಜಿ ಗಂಡನ ನಿವಾಸವನ್ನು ಧ್ವಂಸಗೊಳಿಸುವುದು, ವೀಡಿಯೊಗಳು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಿ ಮಾಜಿ ಗಂಡನಿಗೆ ಬೆದರಿಕೆ ಒಡ್ಡಿದ್ದಳು.

ಮಾರ್ಚ್ 18ರ ಮಧ್ಯಾಹ್ನ ಕ್ರಿಗರ್ ಕೆಲಸ ತೊರೆದು ತನ್ನ ಮಾಜಿ ಗಂಡನ ಮನೆಗೆ ಹೋಗಿದ್ದು, ಆತ ಕೆಲಸಕ್ಕೆ ಹೋಗಿದ್ದ. ಬಳಿಕ ಆಕೆ ಅವರ ನಿವಾಸಕ್ಕೆ ಹಾನಿ ಮಾಡಿದ್ದಳು.

ಬಳಿಕ ತನ್ನ ಮನೆಗೆ ಮರಳಿ ತನ್ನ ಮದುವೆಯ ಉಡುಪು ಮತ್ತು ಭಾವಚಿತ್ರಗಳನ್ನು ಹಾಸಿಗೆಯ ಮೇಲೆ ಜೋಡಿಸಿದಳು. ಅದರ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು. ಒಂದು ಸಂದೇಶದಲ್ಲಿ, ಆಕೆ ನೀನು ಈಗ ಮನೆಗೆ ಹೋಗಲು ಏನೂ ಇಲ್ಲ. ನೀವು ನಿಜವಾಗಿಯೂ ಇಲ್ಲ. ದಿನದ ಕೊನೆಯಲ್ಲಿ ನೀವು ಏನನ್ನೂ ಹೊಂದಿರುವುದಿಲ್ಲ ಎಂದು ಕ್ರಿಗರ್ ಹೇಳಿದ್ದು, ಮಾಜಿ ಪತಿಗೆ ಕಳುಹಿಸಿದ ಕೊನೆಯ ಸಂದೇಶದಲಿ ನಿಮ್ಮ ಮಗನಿಗೆ ವಿದಾಯ ಹೇಳಿ ಎಂದು ಬರೆದಿದ್ದಳು.

ಇದನ್ನು ನೋಡಿ ಆಕೆಯ ಮಾಜಿ ಪತಿ ಕೂಡಲೇ ಧಾವಿಸಿ ಬಂದಾಗ ಕ್ರಿಗರ್ ಮತ್ತು ಆಕೆಯ ಮಗನ ಮೃತದೇಹ ಉದ್ಯಾನವನದ ಕಂದಕದಲ್ಲಿ ಪತ್ತೆಯಾಗಿವೆ.

ಇದನ್ನೂ ಓದಿ: Human trafficking: ಕೆಲಸ ಕೊಡಿಸೋದಾಗಿ ನಂಬಿಸಿ ರಷ್ಯಾ-ಉಕ್ರೇನ್‌ ಯುದ್ಧ ಪೀಡಿತ ಪ್ರದೇಶಕ್ಕೆ ರವಾನೆ-ಇಬ್ಬರು ಅರೆಸ್ಟ್‌

ಸಾಲಬಾಧೆಯಿಂದ ಗೃಹಿಣಿ ಆತ್ಮಹತ್ಯೆ

ತುಮಕೂರು: ಸಾಲಬಾಧೆ ತಾಳಲಾರದೇ ಗೃಹಿಣಿಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಅರಳಗುಪ್ಪೆಯಲ್ಲಿ ಇತ್ತೀಚೆಗೆ ನಡೆದಿತ್ತು. ಭಾಗ್ಯಮ್ಮ (50) ಮೃತರು.
ಭಾಗ್ಯಮ್ಮ ಮೈಕ್ರೋ ಫೈನಾನ್ಸ್ ಕಂಪೆನಿಯಲ್ಲಿ 5 ಲಕ್ಷ ಸಾಲ ಪಡೆದಿದ್ದರು. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತೀವ್ರ ಬರಗಾಲ ಹಿನ್ನೆಲೆಯಲ್ಲಿ ಹಣ ಕಟ್ಟಲು ಸಾಧ್ಯವಾಗದೇ ಅವರು ಆತ್ಮಹತ್ಯೆ ದಾರಿ ತುಳಿದಿದ್ದಾರೆ. ಈ ಕುರಿತು ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಮತದಾನಕ್ಕೆ ಬಂದು ಇವಿಎಂಗೆ ಬೆಂಕಿ ಹಾಕಿದ ಯುವಕ; ಸುರಪುರದಲ್ಲಿ ಕಲ್ಲು ತೂರಾಟ

Lok Sabha Election 2024 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲವು ಕಡೆಗಳಲ್ಲಿ ಗದ್ದಲ ಗಲಾಟೆಗಳು ವರದಿ ಆಗಿವೆ. ಸುರಪುರ ಉಪಚುನಾವಣೆ ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ ನಡೆದಿದೆ. ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.

VISTARANEWS.COM


on

By

Lok sabha Election 2024
Koo

ಯಾದಗಿರಿ/ಬೆಳಗಾವಿ: ಯಾದಗಿರಿಯ ಸುರಪುರ ಉಪಚುನಾವಣೆ ಮತದಾನದ (Lok Sabha Election 2024) ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದ್ದು, ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟದ ವೇಳೆ ಓರ್ವನ ತಲೆಗೆ ಗಂಭೀರ ಗಾಯವಾಗಿದೆ.

ಮತದಾನದ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಕೈ-ಕಮಲ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ಹಿನ್ನೆಲೆ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ‌ ದೌಡಾಯಿಸಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ಸುರಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇವಿಎಂಗೆ ಬೆಂಕಿ ಹಾಕಿದ ಯುವಕ

ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಅಲ್ಲಿದ್ದ ಸಿಬ್ಬಂದಿ ನೀರು ಹಾಕಿ ಬೆಂಕಿ ಹರಿಸಿದ್ದಾರೆ. ಮರಾಠಾ ಆಕರ್ಷಣ ವಿಚಾರಕ್ಕೆ ಆಕ್ರೋಶಗೊಂಡಿದ್ದ ಎನ್ನಲಾಗಿದೆ. ಇನ್ನೂ ಈ ಮತಗಟ್ಟೆಯಲ್ಲಿ ಸುಮಾರು 1300 ಮತದಾರರಿರುವ ಕೇಂದ್ರವಾಗಿದೆ. ಸದ್ಯ ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Lok Sabha Election 2024: ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ; ಮತದಾನಕ್ಕೆ ಬಂದು ಟ್ರೀಟ್‌ ಮಾಡಿದ ಡಾಕ್ಟರ್‌

ವಿಜಯನಗರದಲ್ಲಿ ಮತದಾನ ಬಹಿಷ್ಕಾರ

ವಿಜಯನಗರ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಚಿಲಕನಹಟ್ಟಿ ಗ್ರಾಮದಲ್ಲಿ ಪ್ರತ್ಯೇಕ ಮತಗಟ್ಟೆ ವಿಂಗಡಣೆ ಮಾಡಿದ್ದಕ್ಕೆ ಮತದಾನ ಬಹಿಷ್ಕಾರ ಹಾಕಲಾಯಿತು. ಹಾರುವನಹಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ 78ರಲ್ಲಿ, ಚಿಲಕನಹಟ್ಟಿಯ ಮಾರುತಿ ನಗರದಲ್ಲಿ ಪ್ರತ್ಯೇಕ ಮತದಾನ ಕೇಂದ್ರ ಮಾಡುವಂತೆ ಮತದಾರರು ಪಟ್ಟು ಹಿಡಿದರು. ಕಳೆದ ಹಲವು ವರ್ಷದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯವಿತ್ತು. ಚಿಲಕನಹಟ್ಟಿಯಿಂದ ಹಾರುವನಹಳ್ಳಿ ಗ್ರಾಮಕ್ಕೆ 3 ಕಿ.ಮೀ ಅಂತರವಿದೆ. ಅದಕ್ಕೆ ರಾಷ್ಟ್ರೀಯ ಹೆದ್ದಾರಿ 50 ದಾಟಬೇಕಿದ್ದು, ಅಪಘಾತ ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆ ಗ್ರಾಮಸ್ಥರದ್ದು.

ದಾವಣಗೆರೆಯಲ್ಲಿ ಗೌಪ್ಯ ಮತದಾನ ವೈರಲ್‌

ದಾವಣಗೆರೆ: ಎಷ್ಟೇ ಕಟ್ಟುನಿಟ್ಟಾಗಿ ಗೌಪ್ಯ ಮತದಾನ ಮಾಡಿದರೂ ಫೋಟೋ ತೆಗೆದುಕೊಂಡು ಪಬ್ಲಿಕ್‌ ಮಾಡುತ್ತಿರುವವರು ಕಂಡುಬಂದಿದ್ದಾರೆ. ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ಗೆ ಮತ ಹಾಕಿದ್ದನ್ನು ಬಿಜೆಪಿ ಕಾರ್ಯಕರ್ತನೊಬ್ಬ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಅದನ್ನು ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಮತಗಟ್ಟೆಗೆ ಮೊಬೈಲ್ ನಿಷೇಧ ಮಾಡಿದರೂ ಮೊಬೈಲ್ ತೆಗೆದುಕೊಂಡು ಹೋಗಲಾಗಿದೆ.

ಬೆಳಗಾವಿಯಲ್ಲಿ ಬಿಜೆಪಿ- ಕಾಂಗ್ರೆಸ್‌ ಕಾರ್ಯಕರ್ತ ವಾಗ್ವಾದ

ಬೆಳಗಾವಿ: ಕೆಲವೆಡೆ ಬಿಜಪಿ- ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬೆಳಗಾವಿಯ ಹನುಮಾನ್ ನಗರದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಮತಗಟ್ಟೆಯಲ್ಲೇ ನಿಂತು ಮತದಾರರು ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರಭಾವ ಬೀರುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು. ಈ ವೇಳೆ ಕಾಂಗ್ರೆಸ್ ‌ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ21 mins ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ51 mins ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Hindu Girl
ದೇಶ1 hour ago

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Monty Panesar
ಕ್ರಿಕೆಟ್1 hour ago

Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

Murder Case
ಕರ್ನಾಟಕ1 hour ago

Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Virat Kohli
ಕ್ರೀಡೆ2 hours ago

Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Poonch Terrorists
ದೇಶ2 hours ago

Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Prajwal Revanna Case
ಕರ್ನಾಟಕ2 hours ago

Prajwal Revanna Case: ಎಸ್‌ಐಟಿ ಮೇಲೆ ಕೇಸ್‌ ಹಾಕ್ತೇನೆ, ಶೀಘ್ರವೇ ಪೆನ್‌ಡ್ರೈವ್‌ ಪ್ರೊಡ್ಯುಸರ್‌ ಹೆಸರು ಹೇಳ್ತೇನೆ ಎಂದ ದೇವರಾಜೇಗೌಡ

Lok Sabha Election 2024 Pralhada Joshi who came out of the election frenzy
ಹುಬ್ಬಳ್ಳಿ2 hours ago

Lok Sabha Election 2024: ಅಬ್ಬಾ! ಅಂತೂ ಮುಗೀತು ಪುಟ್ಟಾ ಮಹಾಯುದ್ಧ ಎಂದ ಪ್ರಲ್ಹಾದ್‌ ಜೋಶಿ!

Dogs Attack
ದೇಶ3 hours ago

Dogs Attack: ನಾಯಿಗಳು ದಾಳಿ ಮಾಡಲು ಬಂದರೆ ಏನು ಮಾಡಬೇಕು? ಹೇಗೆ ರಕ್ಷಿಸಿಕೊಳ್ಳಬೇಕು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ18 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌