C.M. Ibrahim | ನಗರದಲ್ಲಿ ನಾಯಿ ರೂಂ ಎಸಿಗೆ ಕರೆಂಟ್‌ ಇದೆ; ರೈತರ ಪಂಪ್‌ಸೆಟ್‌ಗೆ ಇಲ್ಲ: ಸಿ.ಎಂ. ಇಬ್ರಾಹಿಂ ವಾಗ್ದಾಳಿ - Vistara News

ಬೆಂಗಳೂರು

C.M. Ibrahim | ನಗರದಲ್ಲಿ ನಾಯಿ ರೂಂ ಎಸಿಗೆ ಕರೆಂಟ್‌ ಇದೆ; ರೈತರ ಪಂಪ್‌ಸೆಟ್‌ಗೆ ಇಲ್ಲ: ಸಿ.ಎಂ. ಇಬ್ರಾಹಿಂ ವಾಗ್ದಾಳಿ

ಉಚಿತ ವಿದ್ಯುತ್‌ ನೀಡುವ ಕಾಂಗ್ರೆಸ್‌ ಘೋಷಣೆಯು ಬೋಗಸ್‌ ಆಗಿದ್ದು, ಮುಂದಿನ ಚುನಾವಣೆಯಲ್ಲಿ ಆ ಪಕ್ಷ ಐವತ್ತು ಸಂಖ್ಯೆಗೆ ಕುಸಿಯುತ್ತದೆ ಎಂದಿದ್ದಾರೆ.

VISTARANEWS.COM


on

c-m-ibrahim-says priority should be on farmers and not on urban voters
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಧೀಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ಘೋಷಣೆ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಜೆಡಿಎಸ್‌ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ನಗರ ಪ್ರದೇಶದಲ್ಲಿ ನಾಯಿಗಳ ರೂಮ್‌ನಲ್ಲಿ ಎಸಿಗೆ ಕರೆಂಟ್‌ ಇದ್ದರೆ ಅತ್ತ ರೈತನ ಪಂಪ್‌ಸೆಟ್‌ಗಳಿಗೆ ಕರೆಂಟ್‌ ಇಲ್ಲದೆ ಬವಣೆ ಪಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯಿಸಿ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಸರ್ಕಾರವಿದೆಯಲ್ಲ ಮಾಡುತ್ತಾರೆಯೇ? ಜನರಿಗೆ ಟೋಪಿ ಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಹೋಗಿ ಕ್ಯಾಂಪೇನ್ ಮಾಡಿದರು, ಏನಾಯಿತು ಅಲ್ಲಿ? ಊರಿನಲ್ಲಿ ನಡೆದಿಲ್ಲ ಎಂದರೆ ಪರರ ಊರಲ್ಲಿ ನಡೆಯುತ್ತಾ?

ರೈತರಿಗೆ 8 ಗಂಟೆ 3 ಫೇಸ್ ಕರೆಂಟ್ ಕೊಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರೈತರ ಬಗ್ಗೆ ಆ ಯಮ್ಮ ಮಾತನಾಡಿಲ್ಲ. ರೈತರ ಬಗ್ಗೆ ಅವರಿಗೆ ಗೊತ್ತೆ ಇಲ್ಲ. ಕನಿಷ್ಠ ರೈತರ ಕಷ್ಟದ ಬಗ್ಗೆ ಡಿ.ಕೆ. ಶಿವಕುಮಾರ್ ಆದರೂ ಹೇಳಿ ಕೊಡಬೇಕಿತ್ತು. ಸಿಟಿಯಲ್ಲಿರುವ ಮನೆಗೆ ಕರೆಂಟ್ ಕೊಟ್ಟರೆ ಸಾಕು, ರೈತರ ಮನೆಯಲ್ಲಿ ದೀಪ ಹಚ್ಚಬಾರದಾ? ಸಿಟಿಯಲ್ಲಿ ನಾಯಿ ಏರ್ ಕಂಡಿನಷ್ಡ್ ರೂಂಗೆ ಕರೆಂಟ್ ಇದೆ, ರೈತರ ಪಂಪಸೆಟ್‌‌ಗಳಿಗೆ ವಿದ್ಯುತ್ ಇಲ್ಲ.

ಜನರಿಗೆ ಉಡಾಫೆ ಘೋಷಣೆ ಕೊಡುತ್ತಿದ್ದಾರೆ ಎಂದರೆ, ಕಾಂಗ್ರೆಸ್‌ನವರು ಈಗಿನ 78 ರಿಂದ 50ಕ್ಕೆ ಹೋಗುತ್ತಾರೆ. ಛತ್ತೀಸ್‌ಗಢ, ರಾಜಸ್ಥಾನದಲ್ಲಿ ಇದೇ ಘೋಷಣೆ ಜಾರಿ ಮಾಡಲಿ. ರಾಜ್ಯದಲ್ಲಿ ಕಾಂಗ್ರೆಸ್ ಇದ್ದರೂ ದರಿದ್ರ ಲಕ್ಷ್ಮಿನೆ, ಬಿಜೆಪಿ ಇದ್ರೂ ದರಿದ್ರ ಲಕ್ಷ್ಮಿನೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಾತ್ರ ಅಷ್ಟಲಕ್ಷ್ಮಿಯರು ಬರುತ್ತಾರೆ ಎಂದರು.

ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಪ್ರವಾಸ ಮಾಡುವ ಕುರಿತು ಪ್ರತಿಕ್ರಿಯಿಸಿ, ನಾವು ಮನೆಯವರು. ಹೊರಗಿನವರು ಬರುತ್ತಾರೆ, ಹೋಗುತ್ತಾರೆ. ಮನೆಯಲ್ಲಿದ್ದವರು ನಾವು, ದೇವೆಗೌಡರು. ನಮಗೆ ಯಾರೂ ಹೈಕಮಾಂಡ್ ಇಲ್ಲ. ನಾವು ಇಲ್ಲೇ ಇರುತ್ತೇವೆ, ಕೆರೆಯ ನೀರನ್ನು ಕೆರೆಗೆ ಚೆಲ್ಲುತ್ತೇವೆ ಎಂದರು.

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಕುರಿತು ಪ್ರತಿಕ್ರಿಯಿಸಿ, ದೇವರು ಹೇಳುವ ಮುನ್ನವೇ ನಾನು ಹೇಳಿದ್ದೆ. ಸಿದ್ದರಾಮಯ್ಯನವರಿಗೆ 20 ವರ್ಷದಿಂದ ಜಾತಕ ಹೇಳಿ ಬಾದಾಮಿಗೆ ನಾನು ಕರೆದುಕೊಂಡು ಹೋಗಿದ್ದೆ. ಚಿಕ್ಕಯ್ಯಮ್ಮನವರು ಹೇಳೋಕೆ ಮುಂಚೆನೇ ನಾನು ಹೇಳಿದ್ದೆ. ಕೋಲಾರದಲ್ಲಿ ಸಿದ್ದರಾಮಯ್ಯ ನಿಂತರೆ ಕಡಿಮೆ ಮತ ತೆಗೆದುಕೊಳ್ಳುತ್ತಾರೆ. ಅಲ್ಲಿ ಸಿದ್ದರಾಮಯ್ಯ ಅವರಿಗೆ ಎರಡನೇ ಸ್ಥಾನ. ವರ್ತೂರು ಪ್ರಕಾಶ್ ಅಲ್ಲಿ ಲೋಕಲ್‌. ವರ್ತೂರು ಪ್ರಕಾಶ್ 2ನೇ ಸ್ಥಾನ, ಸಿದ್ದರಾಮಯ್ಯ ಮೂರನೇ ಸ್ಥಾನ ಬರುತ್ತಾರೆ. ವರ್ತೂರು ಪ್ರಕಾಶ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ಆಗುತ್ತದೆ. ವರ್ತೂರು ಪ್ರಕಾಶ್ ಭಂಡ, ಅವನು ಸಿದ್ದರಾಮಯ್ಯ ಅವರನ್ನು ಎದುರಿಸುತ್ತಾನೆ ಎಂದರು.

ಸ್ಯಾಂಟ್ರೊ ರವಿ ಪ್ರಕರಣದ ಕುರಿತು ಮಾತನಾಡಿ, ಯಾವ ಯಾವ ಅಧಿಕಾರಿ ವರ್ಗಾವಣೆ ಆಗಿದೆಯೋ ಅವರನ್ನು ಅಮಾನತು ಮಾಡಿ. ಮಂತ್ರಿಗಳಿಂದ ರಾಜೀನಾಮೆ ತೆಗೆದುಕೊಳ್ಳಿ. ಸಚಿವರು ಸ್ಟೇ ತೆಗೆದುಕೊಂಡಿರುವುದನ್ನು ವೆಕೆಟ್ ಮಾಡಿಸಿ. ಆ ಸಿಡಿ ರಹಸ್ಯ ಏನಿದೆ ಬಯಲು ಮಾಡಿ ಎಂದು ಉತ್ತರಿಸಿದರು.

ಕೋಲಾರದಲ್ಲಿ ಜೆಡಿಎಸ್ ಬಿಜೆಪಿ ಒಳಮೈತ್ರಿ ಎಂಬ ಚರ್ಚೆ ವಿಚಾರಕ್ಕೆ ಮಾತನಾಡಿ, ಲೆಹರ್ ಸಿಂಗ್ ಗೆಲ್ಲಿಸುವುದಕ್ಕೆ ಒಳ ಒಪ್ಪಂದ ಮಾಡಿಕೊಂಡವರು ಯಾರು? ಒಳ ಒಪ್ಪಂದ ಮಾಡಿಕೊಂಡು ಲೆಹರ್ ಸಿಂಗ್ ಗೆಲ್ಲಿಸಿದ್ದು ಯಾರು? ಒಬ್ಬ ಮಾರ್ವಾಡಿ ಗೆಲ್ಲಿಸುವುದಕ್ಕೆ ಕರ್ನಾಟಕದ ಕುಪೇಂದ್ರ ರೆಡ್ಡಿಯನ್ನು ಸೋಲಿಸಿದಿರಿ. ನಾವು ರೈತರ ಮಕ್ಕಳು ಒಪ್ಪಂದ ಮಾಡಿಕೊಂಡರೆ ಮಾಡಿಕೊಂಡಿದ್ದೇವೆ ಎಂದು ಹೇಳುತ್ತೇವೆ. ಗುಬ್ಬಿ ವಾಸು, ಕೋಲಾರದ ಶ್ರೀನಿವಾಸ್ ಗೌಡರಿಗೆ ಹಣ ಕೊಟ್ಟಿದ್ದು ಯಾರು? ಎಂದು ಮರುಪ್ರಶ್ನೆ ಮಾಡಿದರು.

ಇದನ್ನೂ ಓದಿ | ಕಾಸು ಕೊಡದಿದ್ರೆ ಜನ ವೋಟ್‌ ಮಾಡಲ್ಲ: ವರ್ತೂರು ಪ್ರಕಾಶ್‌ ವಿವಾದಾತ್ಮಕ ಹೇಳಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

ರೇಣುಕಾಸ್ವಾಮಿ ಕೊಲೆ (Renuka Swamy Murder) ಕೇಸ್‌ನಲ್ಲಿ ನಟ ದರ್ಶನ್ (Actor Darshan) ಗ್ಯಾಂಗ್‌ ಬಂಧಿತರಾಗಿದ್ದಾರೆ. ಇದೀಗ ದರ್ಶನ್‌ ಹಲ್ಲೆ ನಡೆಸಿದ್ದನ್ನು ವಿಡಿಯೋ ಮಾಡಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Renuka swamy Murder case
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renuka Swamy Murder) ಸಂಬಂಧಿಸಿದ್ದಂತೆ ಪೊಲೀಸರ ತನಿಖೆಯು ತೀವ್ರಗೊಳ್ಳುತ್ತಿದೆ. ಈ ನಡುವೆ ನಟ ದರ್ಶನ್ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿದಾಗ ಅದನ್ನೂ ವಿಡಿಯೋ ಮಾಡಿಕೊಂಡಿದ್ದ ಮೂವರು ಹುಡುಗರನ್ನು ವಶಕ್ಕೆ ಪಡೆಯಲಾಗಿದೆ.

ಹಲ್ಲೆ ವಿಡಿಯೋವನ್ನು ಬೇರೆ ಯಾರಿಗೋ ಫಾರ್ವರ್ಡ್ ಮಾಡಿದ್ದು, ಇದಾದ ನಂತರವೇ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಕೊಲೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮೂವರು ನಾಪತ್ತೆಯಾಗಿದ್ದರು. ಗುರುವಾರ ಮಧ್ಯಾಹ್ನ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ವಿಡಿಯೋ ಮಾಡಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೊಬೈಲ್ ಪರಿಶೀಲನೆ ವೇಳೆ ವಿಡಿಯೋ ಡಿಲೀಟ್ ಮಾಡಿರುವುದು ತಿಳಿದುಬಂದಿದೆ. ಸದ್ಯ ಪೊಲೀಸರು ವಿಡಿಯೋ ರಿಟ್ರೀವ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ವಿಡಿಯೊ ರಿಟ್ರೀವ್ ಆದರೆ ಕೇಸ್‌ಗೆ ಮತ್ತೊಂದು ಮಹತ್ವದ ಸಾಕ್ಷ್ಯ ಆಗಲಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

ದರ್ಶನ್‌ ಗ್ಯಾಂಗ್‌ನಿಂದ ಪೊಲೀಸ್‌ ಮೇಲೂ ಹಲ್ಲೆ! ಹೊರಬರ್ತಿದೆ ರಾಕ್ಷಸ ಪಡೆಯ ಒಂದೊಂದೇ ಕರಾಳ ಕೃತ್ಯ

ಮಂಡ್ಯ: ಬೀಭತ್ಸವಾಗಿ ರೇಣುಕಾಸ್ವಾಮಿ ಕೊಲೆ (Renuka Swamy Murder) ನಡೆಸಿದ ನಟ ದರ್ಶನ್ (Actor Darshan) ಗ್ಯಾಂಗ್‌ ಪೊಲೀಸರನ್ನೂ ಬಿಟ್ಟಿಲ್ಲ. ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಮೇಲೂ ದರ್ಪ ಮೆರೆದಿರುವ ಡಿ ಬಾಸ್‌ ಗ್ಯಾಂಗ್‌, ತೀವ್ರ ಹಲ್ಲೆ (Assault case) ನಡೆಸಿರುವುದು ಬೆಳಕಿಗೆ ಬಂದಿದೆ. ಗಾಯಗೊಂಡ ಪೊಲೀಸ್‌ ಪೇದೆ ಸರ್ಕಾರಿ ಆಸ್ಪತ್ರೆಯಲ್ಲಿ ಇದಕ್ಕಾಗಿ ಚಿಕಿತ್ಸೆ ಪಡೆದ ದಾಖಲೆಯೂ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಇದು ನಡೆದಿರುವುದು ಬೇರೆಲ್ಲೂ ಅಲ್ಲ, ಮದ್ದೂರು ಶಾಸಕರ ಮನೆಯಲ್ಲಿಯೇ ಹಲ್ಲೆ ನಡೆದಿತ್ತು ಎನ್ನಲಾಗಿದೆ. ಶಾಸಕ ಕದಲೂರು ಉದಯ್ ಅವರ ಗನ್ ಮ್ಯಾನ್ ಆಗಿದ್ದ ಡಿಎಆರ್ ಪೇದೆ ನಾಗೇಶ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಮದ್ದೂರಿನಲ್ಲಿ ದರ್ಶನ್‌ ಲೋಕಸಭಾ ಚುನಾವಣೆ ಕಣದ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ.

ಏಪ್ರಿಲ್ 22ರಂದು ಮದ್ದೂರು ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಪರ ದರ್ಶನ್ ಕ್ಯಾಂಪೇನ್ ನಡೆದಿತ್ತು. ಆ ವೇಳೆ ಗನ್ ಮ್ಯಾನ್ ನಾಗೇಶ್ ಜೊತೆ ದರ್ಶನ್ ಪಟಾಲಂ ಗಲಾಟೆ ತೆಗೆದಿದೆ. ಮುಖಂಡರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳುವ ವಿಚಾರದಲ್ಲಿ ಡಿ ಗ್ಯಾಂಗ್‌ಗ ಲಕ್ಷ್ಮಣ್, ನಾಗರಾಜು ಹಾಗೂ ಇತರರು ಜಗಳ ತೆಗೆದಿದ್ದರು. ನಂತರ ಇದೇ ಜಗಳ ಮುಂದುವರೆಸಿ ಕದಲೂರು ಉದಯ್ ಮನೆ ಮುಂದೆ ಪೇದೆ ನಾಗೇಶ್‌ಗೆ ಹಲ್ಲೆ ನಡೆಸಿದ್ದರು.

ಹಲ್ಲೆ ಮಾಡುವುದರೊಂದಿಗೆ, ʼಪೊಲೀಸರು ನಮ್ಮನ್ನೂ ಏನೂ ಮಾಡಲು ಆಗಲ್ಲ, ನಮ್ಮತ್ರ ಏನೂ ಕಿತ್ಕೊಳೋಕೆ ಆಗಲ್ಲʼ ಎಂದು ಧಮಕಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತು ಪೇದೆ ನಾಗೇಶ್ ಕೆಸ್ತೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ನಂತರ ರಾಜಿ ಸಂಧಾನದ ಮೂಲಕ ನಾಗೇಶರನ್ನು ಶಾಸಕ ಉದಯ್ ಮರಳಿ ಕಳುಹಿಸಿದ್ದರು.

ಇದಾದ ಬಳಿಕ ನೊಂದಿದ್ದ ನಾಗೇಶ್‌, ಶಾಸಕ ಉದಯ್ ಗನ್‌ ಮ್ಯಾನ್ ಕೆಲಸದಿಂದ ಹೊರಬಂದಿದ್ದರು. ಇದೀಗ ಡಿಎಆರ್ ತುಕಡಿಯಲ್ಲಿ ನಾಗೇಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲ್ಲೆ ನಡೆದ ಬಳಿಕ ನಾಗೇಶ್‌ ಮದ್ದೂರಿನ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

CM Siddaramaiah: ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: 27% ವೇತನ ಹೆಚ್ಚಳಕ್ಕೆ ಮುಂದಾದ ಸಿಎಂ

CM Siddaramaiah: ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16ರಂದು ಅಂತಿಮ ವರದಿ ಸಲ್ಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ, ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು.

VISTARANEWS.COM


on

cm Siddaramaiah
Koo

ಬೆಂಗಳೂರು: ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ (Government employees) ಬಂಪರ್‌ ಸಿಹಿ ಸುದ್ದಿಯನ್ನು ನೀಡಲು ಸಿಎಂ ಮುಂದಾಗಿದ್ದಾರೆ. ನೌಕರರಿಗೆ ಶೇಕಡಾ 27ರಷ್ಟು ವೇತನ ಹೆಚ್ಚಳ (Salary hike) ಮಾಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (cabinet meeting) ಸಚಿವರ ಸಲಹೆಯನ್ನೂ ಮೀರಿ ವೇತನ ಹೆಚ್ಚಳ ಮಾಡಲು ಸಿಎಂ ಒಲವು ತೋರಿದ್ದಾರೆ. ವೇತನ ಆಯೋಗದ ಶಿಫಾರಸುಗಳನ್ನು ಪೂರ್ಣಗೊಳಿಸುವ ಮಾತನ್ನಾಡಿರುವ ಸಿಎಂ ಸಿದ್ದರಾಮಯ್ಯ, 27%ರಷ್ಟು ವೇತನ ಹೆಚ್ಚಳ ಮಾಡಲು ಸೈ ಎಂದಿದ್ದಾರೆ. ನೌಕರರು ನಿರೀಕ್ಷೆ ಮಾಡಿದ ಹೆಚ್ಚಳ ಜಾರಿಯಾಗುವ ಸಾಧ್ಯತೆಯಿದ್ದು, ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸಂಪುಟ ಸಭೆ ಸಿಎಂಗೆ ಬಿಟ್ಟಿದೆ.

ಈ ಕುರಿತು ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16ರಂದು ಅಂತಿಮ ವರದಿ ಸಲ್ಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ, ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು.

ವೇತನ ಹೆಚ್ಚಳಕ್ಕೆ ಷಡಾಕ್ಷರಿ ಸ್ವಾಗತ

ವೇತನ ಹೆಚ್ಚಳ ಪ್ರಸ್ತಾವವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಸ್ವಾಗತಿಸಿದ್ದಾರೆ. “ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ವೇತನ ಆಯೋಗ ನೀಡಿರುವ ಶಿಫಾರಸನ್ನು ಒಪ್ಪಿರುವ ಸಿಎಂ ನಡೆ ಸ್ವಾಗತಾರ್ಹವಾದುದು. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚಿನ ಹೊರೆ ಆಗುವುದಿಲ್ಲ. ರಾಜ್ಯದ ಖಜಾನೆಗೆ ಹೆಚ್ಚಿನ ಸಂಪನ್ಮೂಲದ ಒದಗಣೆ ಮತ್ತು ಹಂಚಿಕೆ ಸರ್ಕಾರಿ ನೌಕರರಿಂದಲೇ ಆಗುತ್ತದೆ” ಎಂದು ಷಡಾಕ್ಷರಿ ಹೇಳಿದ್ದಾರೆ.

ಸಂಪುಟ ಸಭೆಯಲ್ಲಿ ಏನೇನು ನಿರ್ಣಯ?

ಸಚಿವ ಸಂಪುಟ ಸಭೆಯಲ್ಲಿ ಒಟ್ಟು 20 ವಿಷಯಗಳ ಮೇಲೆ ಚರ್ಚೆ ನಡೆದು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಎಚ್. ಕೆ ಪಾಟೀಲ್ ತಿಳಿಸಿದ್ದಾರೆ.

ವಾಣಿಜ್ಯ ಕೈಗಾರಿಕೆ ಇಲಾಖೆಗೆ ಸಂಬಂಧಿಸಿ- ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ. ನಿಷ್ಕ್ರಿಯವಾಗಿದ್ದ 1304 ಎಕರೆ ಪ್ರದೇಶದಲ್ಲಿ ಗಣಿ ಗುತ್ತಿಗೆ ಚಟುವಟಿಕೆ ಮುಂದುವರಿಸಲು ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಮ್ಮತಿ. ಗಣಿ ಚಟುವಟಿಕೆಗಳ ಪ್ರಾರಂಭಕ್ಕೆ ಅನುಮತಿ ನೀಡಲು ಸಂಪುಟ ಗ್ರೀನ್ ಸಿಗ್ನಲ್. ಟೇನಿಂಗ್ ಡಂಪ್ಸ್ ಬಳಸಿಕೊಂಡು ಗಣಿ ಚಟುವಟಿಕೆ ಮುಂದುವರಿಸಲು ಅವಕಾಶ. 2230 ಎಕರೆ ಭೂಮಿಯನ್ನು ಸರ್ಕಾರಕ್ಕೆ ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ಕೆಜಿಎಫ್‌ನಿಂದ ಸರ್ಕಾರಕ್ಕೆ ನೀಡಬೇಕು. 25.24 ಕೋಟಿ ಸರ್ಕಾರಕ್ಕೆ ಪಾವತಿ ಮಾಡುವುದು ಬಾಕಿ ಇದೆ. ಅದನ್ನೂ ಭರಿಸುವಂತೆ ಭಾರತ್ ಮೈನಿಂಗ್ಸ್‌ಗೆ ಸೂಚನೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಡಿಯಲ್ಲಿ- ಸಂವಿಧಾನ ದಿನಾಚರಣೆ, ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಗಾಂಧಿ ಜಯಂತಿಯಂದು ಕೇವಲ ಗಾಂಧಿ ಭಾವಚಿತ್ರ ಮಾತ್ರ ಇರುತ್ತಿತ್ತು. ಇನ್ನು ಮುಂದೆ ಈ ಎಲ್ಲ ಸಂದರ್ಭದಲ್ಲಿ ಅಂಬೇಡ್ಕರ್ ಭಾವ ಚಿತ್ರ ಇಡುವುದು ಕೂಡ ಕಡ್ಡಾಯ. ವಿಶ್ವ ವಿದ್ಯಾಲಯಗಳ ಅಭಿವೃದ್ದಿಗೆ 297.77 ಕೋಟಿ ಬಿಡುಗಡೆಗೆ ಕ್ಯಾಬಿನೆಟ್ ಅನುಮೋದನೆ.

ಶಿಕ್ಷಣ ಇಲಾಖೆಯ ಅಡಿಯಲ್ಲಿ- ಎಲ್ಲ ಸರ್ಕಾರಿ ಶಾಲೆ ಹಾಗೂ ಪದವಿ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಕೆಗೆ ನಿರ್ಧಾರ. 29.15 ಕೋಟಿ ಅಂದಾಜು ವೆಚ್ಚದಲ್ಲಿ 46,829 ಸರ್ಕಾರಿ ಶಾಲೆ, 1434 ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್, ಉಚಿತ ನೀರಿನ ಸೌಲಭ್ಯ. ಕ್ರೈಸ್ತ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಕ್ಕೆ ಅನುಮತಿ. ರೋಟರಿ ಸಂಸ್ಥೆಗೆ ಇದರ ಜವಾಬ್ದಾರಿ.

ಉಭಯ ಸದನಗಳ ಮಳೆಗಾಲದ ಅಧಿವೇಶನದ ದಿನಾಂಕವನ್ನು ನಿಗದಿ ಮಾಡುವ ವಿಚಾರ ಸಿಎಂ ವಿವೇಚನೆಗೆ ಬಿಡಲಾಗಿದೆ.

ಇದನ್ನೂ ಓದಿ: GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

Continue Reading

ಕ್ರೈಂ

Actor Darshan: ದರ್ಶನ್‌ ಗ್ಯಾಂಗ್‌ನಿಂದ ಪೊಲೀಸ್‌ ಮೇಲೂ ಹಲ್ಲೆ! ಹೊರಬರ್ತಿದೆ ರಾಕ್ಷಸ ಪಡೆಯ ಒಂದೊಂದೇ ಕರಾಳ ಕೃತ್ಯ

Actor Darshan: ಪೊಲೀಸ್‌ ಕಾನ್‌ಸ್ಟೇಬಲ್‌ ನಾಗೇಶ್‌ ಅವರಿಗೆ ಹಲ್ಲೆ ಮಾಡುವುದರೊಂದಿಗೆ, ʼಪೊಲೀಸರು ನಮ್ಮನ್ನೂ ಏನೂ ಮಾಡಲು ಆಗಲ್ಲ, ನಮ್ಮತ್ರ ಏನೂ ಕಿತ್ಕೊಳೋಕೆ ಆಗಲ್ಲʼ ಎಂದು ಧಮಕಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

VISTARANEWS.COM


on

Actor Darshan case Renukaswamy put the dead body first in security guard room
Koo

ಮಂಡ್ಯ: ಬೀಭತ್ಸವಾಗಿ ರೇಣುಕಾಸ್ವಾಮಿ ಕೊಲೆ (Renuka Swamy Murder) ನಡೆಸಿದ ನಟ ದರ್ಶನ್ (Actor Darshan) ಗ್ಯಾಂಗ್‌ ಪೊಲೀಸರನ್ನೂ ಬಿಟ್ಟಿಲ್ಲ. ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಮೇಲೂ ದರ್ಪ ಮೆರೆದಿರುವ ಡಿ ಬಾಸ್‌ ಗ್ಯಾಂಗ್‌, ತೀವ್ರ ಹಲ್ಲೆ (Assault case) ನಡೆಸಿರುವುದು ಬೆಳಕಿಗೆ ಬಂದಿದೆ. ಗಾಯಗೊಂಡ ಪೊಲೀಸ್‌ ಪೇದೆ ಸರ್ಕಾರಿ ಆಸ್ಪತ್ರೆಯಲ್ಲಿ ಇದಕ್ಕಾಗಿ ಚಿಕಿತ್ಸೆ ಪಡೆದ ದಾಖಲೆಯೂ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಇದು ನಡೆದಿರುವುದು ಬೇರೆಲ್ಲೂ ಅಲ್ಲ, ಮದ್ದೂರು ಶಾಸಕರ ಮನೆಯಲ್ಲಿಯೇ ಹಲ್ಲೆ ನಡೆದಿತ್ತು ಎನ್ನಲಾಗಿದೆ. ಶಾಸಕ ಕದಲೂರು ಉದಯ್ ಅವರ ಗನ್ ಮ್ಯಾನ್ ಆಗಿದ್ದ ಡಿಎಆರ್ ಪೇದೆ ನಾಗೇಶ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಮದ್ದೂರಿನಲ್ಲಿ ದರ್ಶನ್‌ ಲೋಕಸಭಾ ಚುನಾವಣೆ ಕಣದ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ.

ಏಪ್ರಿಲ್ 22ರಂದು ಮದ್ದೂರು ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಪರ ದರ್ಶನ್ ಕ್ಯಾಂಪೇನ್ ನಡೆದಿತ್ತು. ಆ ವೇಳೆ ಗನ್ ಮ್ಯಾನ್ ನಾಗೇಶ್ ಜೊತೆ ದರ್ಶನ್ ಪಟಾಲಂ ಗಲಾಟೆ ತೆಗೆದಿದೆ. ಮುಖಂಡರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳುವ ವಿಚಾರದಲ್ಲಿ ಡಿ ಗ್ಯಾಂಗ್‌ಗ ಲಕ್ಷ್ಮಣ್, ನಾಗರಾಜು ಹಾಗೂ ಇತರರು ಜಗಳ ತೆಗೆದಿದ್ದರು. ನಂತರ ಇದೇ ಜಗಳ ಮುಂದುವರೆಸಿ ಕದಲೂರು ಉದಯ್ ಮನೆ ಮುಂದೆ ಪೇದೆ ನಾಗೇಶ್‌ಗೆ ಹಲ್ಲೆ ನಡೆಸಿದ್ದರು.

ಹಲ್ಲೆ ಮಾಡುವುದರೊಂದಿಗೆ, ʼಪೊಲೀಸರು ನಮ್ಮನ್ನೂ ಏನೂ ಮಾಡಲು ಆಗಲ್ಲ, ನಮ್ಮತ್ರ ಏನೂ ಕಿತ್ಕೊಳೋಕೆ ಆಗಲ್ಲʼ ಎಂದು ಧಮಕಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತು ಪೇದೆ ನಾಗೇಶ್ ಕೆಸ್ತೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ನಂತರ ರಾಜಿ ಸಂಧಾನದ ಮೂಲಕ ನಾಗೇಶರನ್ನು ಶಾಸಕ ಉದಯ್ ಮರಳಿ ಕಳುಹಿಸಿದ್ದರು.

ಇದಾದ ಬಳಿಕ ನೊಂದಿದ್ದ ನಾಗೇಶ್‌, ಶಾಸಕ ಉದಯ್ ಗನ್‌ ಮ್ಯಾನ್ ಕೆಲಸದಿಂದ ಹೊರಬಂದಿದ್ದರು. ಇದೀಗ ಡಿಎಆರ್ ತುಕಡಿಯಲ್ಲಿ ನಾಗೇಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲ್ಲೆ ನಡೆದ ಬಳಿಕ ನಾಗೇಶ್‌ ಮದ್ದೂರಿನ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು.

ದರ್ಶನ್‌ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder Case) ಪ್ರಕರಣಕ್ಕೆ ಸಂಬಂಧಿಸಿ ಎ2 ನಟ ದರ್ಶನ್‌ (Actor Darshan) ಸೇರಿದಂತೆ 9 ಆರೋಪಿಗಳಿಗೆ ಡಿಎನ್‌ಎ ಪರೀಕ್ಷೆ (DNA test) ನಡೆಸಲು ಪೊಲೀಸರು ಮುಂದಾಗಿದ್ದಾರೆ. ಪವಿತ್ರಾ ಗೌಡ (Pavithra Gowda) ಡಿಎನ್‌ಎ ಟೆಸ್ಟ್‌ ಕೂಡ ನಡೆಯಲಿದೆ.

ಇದಕ್ಕಾಗಿ ಆರೋಪಿಗಳ ರಕ್ತ, ಕೂದಲಿನ ಮಾದರಿ ಸಂಗ್ರಹಿಸಲಾಗಿದೆ. ಕೊಲೆ ನಡೆದ ಜಾಗದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗೂ ಇದಕ್ಕೂ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯಲಿದೆ. ಎಫ್ಎಸ್ಎಲ್‌ಗೆ ಈ ಕೂದಲು, ರಕ್ತದ ಮಾದರಿ ಕಳುಹಿಸಿ ತಾಳೆ ನೋಡಲಾಗುತ್ತದೆ. ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗಳು ಒಂದೇ ಆದಲ್ಲಿ ಕೊಲೆಗೆ ಮತ್ತಷ್ಟು ಸಾಕ್ಷ್ಯ ಲಭ್ಯವಾಗಲಿದೆ. ಹೀಗಾಗಿ ಆರೋಪಿಗಳ ಡಿಎನ್ಎ ಟೆಸ್ಟ್‌ಗೆ ಪೊಲೀಸರು ತೊಡಗಿದ್ದಾರೆ.

ಹಿಂಸೆಯ ಕರಾಳತೆಗೆ ಬೆಚ್ಚಿದ ಪೊಲೀಸರು

ಪ್ರಕರಣದಲ್ಲಿ ದಿನೇ ‌ದಿನೆ ಹೊರಬರುತ್ತಿರುವ, ರೇಣುಕಾಸ್ವಾಮಿಗೆ ನೀಡಿದ ಚಿತ್ರಹಿಂಸೆಯ ಕರಾಳತೆ ಎಲ್ಲರನ್ನೂ ಬೆಚ್ಚಿಬೀಳಿಸುವಂತಿದೆ. ರೇಣುಕಾಸ್ವಾಮಿ ದೇಹವೆಲ್ಲಾ ಛಿದ್ರಛಿದ್ರವಾಗುವಂತೆ ಹಿಂಸಿಸಲಾಗಿದೆ. ಬಾಸುಂಡೆಗಳು ಎದ್ದು ಕಾಣುವಂತಿದ್ದು, ರಕ್ತ ಮೈಮೇಲೆ ಹೆಪ್ಪುಗಟ್ಟಿತ್ತು. ಆರಂಭದಲ್ಲಿ ಒದ್ದು, ಹೊಡೆದು ಕೊಲ್ಲಲಾಯಿತು ಎಂದಿದ್ದ ಪ್ರಕರಣದಲ್ಲಿ ಮುಂದೆ ಮರ್ಮಾಂಗಕ್ಕೆ ಬಿದ್ದ ಹೊಡೆತ, ದೇಹದಲ್ಲಿ ಹರಿದ ಕರೆಂಟ್‌ನ ಮಾಹಿತಿ ಹೊರಬರುತ್ತಾ ಹೋಯಿತು, ದೊಣ್ಣೆ, ಬೂಟು, ರಿಪೀಸ್ ಪಟ್ಟಿಗಳಿಂದ ರೇಣುಕಾಸ್ವಾಮಿಯ ದೇಹದ ಮೇಲೆ ಬಿದ್ದ ಹೊಡೆತದಿಂದ ಬೆನ್ನಿನ ಮೇಲಿನ ಒಂದಡಿ ಜಾಗದ ಚರ್ಮವೇ ಕಾಣದಂತಾಗಿದೆ. ಸಿಗರೇಟ್‌ನಿಂದ ಸುಟ್ಟಂತಿರುವ ಗಾಯಗಳು, ತಲೆ, ಮುಖ, ಹೊಟ್ಟೆಯ ಭಾಗಗಳಿಗೆ ಬಿದ್ದ ಹೊಡೆತ ಮತ್ತು ಗಾಯದ ಗುರುತುಗಳು ರೇಣುಕಾಸ್ವಾಮಿ ಮೇಲೆ ಆದ ಹಲ್ಲೆಯ ತೀವ್ರತೆಯನ್ನು ಸಾರಿ ಸಾರಿ ಹೇಳಿವೆ.

ಇದನ್ನೂ ಓದಿ: Pavithra Gowda: ಪವಿತ್ರಾ ಗೌಡಳ ಸಮಪಾಲು- ಸಮಬಾಳು ಪಾಲಿಸಿ! ದರ್ಶನ್ ಪತ್ನಿ ಜತೆ ಇರುವುದೆಲ್ಲ ಇವಳಿಗೂ ಬೇಕಿತ್ತು!

Continue Reading

ಬೆಂಗಳೂರು

Renuka Swamy Murder : ಕೊಲೆ ಕೇಸ್‌ನಲ್ಲಿ ಸರೆಂಡರ್‌ ಆಗಲು ಯಾರ‍್ಯಾರ ಕೈ-ಕಾಲು ಹಿಡಿದ್ರು ಡೆವಿಲ್‌ ಗ್ಯಾಂಗ್?

Renuka Swamy Murder : ಕೊಲೆ ಕೇಸ್‌ನಲ್ಲಿ ಸರೆಂಡರ್‌ ಆಗು ಬೇಕಾದಷ್ಟು ಹಣವನ್ನು ಕೊಡುತ್ತೇವೆ ಎಂದು ಕಾರು ಚಾಲಕ ರವಿಗೆ ಡೆವಿಲ್‌ ಗ್ಯಾಂಗ್‌ ಆಮಿಷವೊಡ್ಡಿತ್ತು. ಆದರೆ ಇದರಿಂದ ಹೆದರಿದ ರವಿ ವಾಪಸ್‌ ಚಿತ್ರದುರ್ಗಕ್ಕೆ ಮರಳಿದ್ದ ಎನ್ನಲಾಗಿದೆ.

VISTARANEWS.COM


on

By

Renuka swamy Murder
Koo

ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ (Renuka Swamy Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಶರಣಾಗಲು ಡೆವಿಲ್‌ ಗ್ಯಾಂಗ್‌ ಹಲವರಿಗೆ ಆಮಿಷ ತೋರಿಸಿದ್ದರು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಬಳಿಕ ವಿನಯ್, ಲಕ್ಷ್ಮಣ್, ನಾಗರಾಜ್ ಸೇರಿ ಇಟಿಯಾಸ್ ಕಾರು ಚಾಲಕ ರವಿ ಅಲಿಯಾಸ್ ರವಿಶಂಕರ್‌ಗೆ ಆಮಿಷವೊಡ್ಡಿದ್ದರಂತೆ.

ನೀನು ಪೊಲೀಸರ ಎದುರು ಸರೆಂಡರ್ ಆಗು ಬೇಕಾದಷ್ಟು ಹಣವನ್ನು ಕೊಡುತ್ತೇವೆ ಎಂದಿದ್ದರಂತೆ. ಈ ವೇಳೆ ಹೆದರಿಕೊಂಡ ರವಿ ತಾನು ಬಂದಿದ್ದ ಇಟಿಯಾಸ್ ಕಾರಿನಲ್ಲೆ ಜಗದೀಶ್ ಅಲಿಯಾಸ್ ಜಗ್ಗ ಮತ್ತು ಅನುಕುಮಾರ್ ಜತೆಗೆ ಚಿತ್ರದುರ್ಗಕ್ಕೆ ತೆರಳಿದ್ದ. ಆದರೆ ಹೀಗೆ ಚಿತ್ರದುರ್ಗಕ್ಕೆ ತೆರಳುವಾಗ ದಾರಿ ಮಧ್ಯೆ ಜಗ್ಗ ಮತ್ತು ಅನು ಮೃತ ರೇಣುಕಾಸ್ವಾಮಿ ಧರಿಸಿದ್ದ ಚಿನ್ನಾಭರಣ ತಂದಿರುವುದು ಪತ್ತೆಯಾಗಿದೆ.

ಮರುದಿನ ಮಾಧ್ಯಮಗಳಲ್ಲಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಬಂಧನವಾಗಿರುವ ವಿಚಾರವನ್ನು ರವಿ ನೋಡಿದ್ದ. ಬಳಿಕ ನೇರವಾಗಿ ಚಿತ್ರದುರ್ಗ ಡಿವೈಎಸ್‌ಪಿ ಕಛೇರಿಗೆ ಆಗಮಿಸಿದ ಆರೋಪಿ ರವಿ ಅಲಿಯಾಸ್ ರವಿಶಂಕರ್ ಪೊಲೀಸರಿಗೆ ಶರಣಾಗಿದ್ದ.

ಇದನ್ನೂ ಓದಿ: Actor Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಪವಿತ್ರಾ ಗೌಡ ಮಾಜಿ ಪತಿಯಿಂದ ಕೇಸ್!

ದರ್ಶನ್ ಪರ ಇನ್ನೂ ಯಾಕೆ ಬೇಲ್‌‌ಗೆ ಅರ್ಜಿ ಸಲ್ಲಿಕೆ ಮಾಡಿಲ್ಲ? ವಕೀಲರು ಹೇಳೋದು ಏನು?

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ (Renuka Swamy Murder) ಪ್ರಕರಣದಲ್ಲಿ ಇಂದು ಮತ್ತೆ ನ್ಯಾಯಾಲಯದ ಮುಂದೆ ನಟ ದರ್ಶನ್‌ (Actor Darshan) ಸೇರಿ ಎಲ್ಲ ಬಂಧಿತ 17 ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ನ್ಯಾಯಾಲಯ (Court) ಆರೋಪಿಯನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ (Police custody) ನೀಡಲಿದೆಯೇ ಅಥವಾ ನ್ಯಾಯಾಂಗ ಬಂಧನ (Judicial custody) ವಿಧಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲಿದೆಯೇ ಎಂದು ತಿಳಿದುಬರಲಿದೆ. ನಟ ದರ್ಶನ್ ಪರ ವಕೀಲ ರಂಗನಾಥ್ ರೆಡ್ಡಿ, ಅನಿಲ್ ಬಾಬು ಆರೋಪಿಗಳ ಭೇಟಿಗೆ ಪೊಲೀಸ್‌ ಠಾಣೆಗೆ ಬಂದಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಹೀಗೆ.

ʻʻಇವತ್ತು ಆರೋಪಿಗಳನ್ನು ಐದು ಗಂಟೆಗಳ ಒಳಗಡೆ ಪ್ರೊಡ್ಯೂಸ್ ಮಾಡಬೇಕು. ಬಹುತೇಕ ತನಿಖೆ ಮುಗಿದಿರಬಹುದು. ಬೇಲ್ ಸಂಬಂಧ ನಾವು ಚರ್ಚೆ ಮಾಡಿದ್ದೇವೆ. ದರ್ಶನ್‌ ಜತೆ ಮಾತಾಡಿದ್ದೇವೆ. ಅವರ ಆರೋಗ್ಯ ಚೆನ್ನಾಗಿದೆ‌. ಜಾಮೀನು ಅರ್ಜಿ ಹಾಕೋದಕ್ಕೆ ಇನ್ನೂ ಸಮಯ ಇದೆ. ಇನ್ನೂ ಕೆಲವು ದಿನ ಸಮಯ ಹಿಡಿಯುತ್ತೆ. ಒಂದು ವಾರ ಬೇಕಾಗಬಹುದು. ನಾವು ಚರ್ಚೆ ಮಾಡಿ ನಂತರ ಮೂವ್ ಮಾಡುತ್ತೇವೆʼʼಎಂದು ಅನಿಲ್ ಬಾಬು ಹೇಳಿಕೆ ನೀಡಿದರು

ದರ್ಶನ್ ಪರ ವಕೀಲ ರಂಗನಾಥ್ ರೆಡ್ಡಿ ಮಾತನಾಡಿ ʻʻಕಸ್ಟಡಿಗೆ ಕೇಳೋದು ತನಿಖಾಧಿಕಾರಿಗಳ ನಿರ್ಧಾರ. ಆದರೆ ಬಹುತೇಕ ತನಿಖೆ ಮುಗಿದಿರಬಹುದು. ನಿನ್ನೆ ಆರೋಪಿಗಳಿಗೆ ಡಿಎನ್ಎ ಟೆಸ್ಟ್ ಮಾಡಿದ್ದಾಗಿದೆ. ಪರೀಕ್ಷೆಗೆ ಕೋರ್ಟ್ ಅನುಮತಿ ಬೇಕು, ಸ್ಯಾಂಪಲ್ ಪಡೆಯಲು ಬೇಕಾಗುತ್ತದೆ. ಆದರೆ ಪೊಲೀಸರು ತಗೊಂಡಿದ್ದಾರಾ ಇಲ್ವೊ ಗೊತ್ತಿಲ್ಲ. ಡಿಎನ್ಎ ಟೆಸ್ಟ್ ಮಾಡಿದ್ರಾ ಇಲ್ವೊ ಅನ್ನೋದು ನಮಗೆ ಗೊತ್ತಿಲ್ಲ. ಅದೇಲ್ಲಾ ಚಾರ್ಜ್‌ಶೀಟ್‌ನಲ್ಲಿ ಇರುತ್ತದೆ. ಅಲ್ಲಿ ನಮಗೆ ಗೊತ್ತಾಗುತ್ತೆʼʼಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Renuka swamy Murder case
ಬೆಂಗಳೂರು35 seconds ago

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

International Yoga Day 2024
ಫ್ಯಾಷನ್11 mins ago

International Yoga Day 2024: ಯೋಗಾಭ್ಯಾಸಕ್ಕೆ ಪುರುಷರ ಉಡುಗೆಗಳು ಹೀಗಿರಬೇಕು

Amithab Bacchan
Latest24 mins ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ26 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್29 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ34 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು36 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ41 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest54 mins ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Manish Pandey
ಕ್ರೀಡೆ1 hour ago

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌