Non-NATO Ally | ಪಾಕಿಸ್ತಾನಕ್ಕೆ ಮತ್ತೊಂದು ಸಂಕಟ! ಕಳಚಲಿದೆಯಾ ಅಮೆರಿಕದ ನ್ಯಾಟೋಯೇತರ ಮಿತ್ರ ರಾಷ್ಟ್ರ ಪಟ್ಟ? - Vistara News

ಪ್ರಮುಖ ಸುದ್ದಿ

Non-NATO Ally | ಪಾಕಿಸ್ತಾನಕ್ಕೆ ಮತ್ತೊಂದು ಸಂಕಟ! ಕಳಚಲಿದೆಯಾ ಅಮೆರಿಕದ ನ್ಯಾಟೋಯೇತರ ಮಿತ್ರ ರಾಷ್ಟ್ರ ಪಟ್ಟ?

ಆರ್ಥಿಕ ಸಂಕಟವನ್ನು ಎದುರಿಸುತ್ತಿರುವ ಪಾಕಿಸ್ತಾನವು ಭದ್ರತೆಯ ದೃಷ್ಟಿಯಿಂದಲೂ ಸಮಸ್ಯೆಯನ್ನು ಎದುರಿಸುವ ಸಾಧ್ಯತೆ ಇದೆ. ನ್ಯಾಟೋಯೇತರ ಪ್ರಮುಖ ಮಿತ್ರ ರಾಷ್ಟ್ರ (Non-NATO Ally) ಪಟ್ಟ ಕಳೆದುಕೊಳ್ಳಬಹುದಾಗಿದೆ.

VISTARANEWS.COM


on

Non-Nato Ally
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್: ಆರ್ಥಿಕ ಸಂಕಟದಿಂದ ತತ್ತರಿಸುತ್ತಿರುವ ಪಾಕಿಸ್ತಾನಕ್ಕೆ ಈಗ ಮತ್ತೊಂದು ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಹಿಂದೆಯೇ ಅಮೆರಿಕವು, ಪಾಕಿಸ್ತಾನಕ್ಕೆ ಆರ್ಥಿಕ ನೆರವು ಒದಗಿಸುವುದನ್ನು ನಿಲ್ಲಿಸಿದೆ. ಹಾಗಿದ್ದೂ, ಪಾಕಿಸ್ತಾನವು ಅಮೆರಿಕದ ನಾನ್-ನ್ಯಾಟೋ (NATO) ಪ್ರಮುಖ ಮಿತ್ರ ರಾಷ್ಟ್ರಗಳ ಪಟ್ಟಿಯಲ್ಲಿ ಜಾಗ ಪಡೆದುಕೊಂಡಿತ್ತು. ಇದೀಗ, ಅಮೆರಿಕದ ಸಂಸದರೊಬ್ಬರು ನ್ಯಾನ್-ನ್ಯಾಟೋ ಪ್ರಮುಖ ಮಿತ್ರ (Non-NATO Ally) ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಕೈ ಬಿಡುವ ಬಗ್ಗೆ ವಿಧೇಯಕವನ್ನು ಮಂಡಿಸಿದ್ದಾರೆ.

ಅರಿಝೋನಾದ ಫಿಫ್ತ್ ಡಿಸ್ಟ್ರಿಕ್ಟ್ ಪ್ರತಿನಿಧಿಸುವ ಸಂಸದ ಆ್ಯಂಡಿ ಬಿಗ್ಸ್ ಅವರು ಈ ವಿಧೇಯಕವನ್ನು ಮಂಡಿಸಿದ್ದಾರೆ. ನ್ಯಾಟೋಯೇತರ ಪ್ರಮುಖ ಮಿತ್ರ ರಾಷ್ಟ್ರವಾಗಿ ಪಾಕಿಸ್ತಾನವನ್ನು ಕೈ ಬಿಡುವ ಬಗ್ಗೆ ಯೋಚಿಸಲಾಗುತ್ತಿದೆ. ಈಗ ವಿಧೇಯಕವನ್ನು ಮಂಡಿಸಲಾಗಿದೆಯಷ್ಟೇ. ಅಮೆರಿಕ ಅಧ್ಯಕ್ಷರು ಈ ವಿಧೇಯಕಕ್ಕೆ ಅಂಕಿತ ಹಾಕುವ ಮುನ್ನ ಅಮೆರಿಕ ಕಾಂಗ್ರೆಸ್‌ನ ಸೆನೆಟ್ ಹಾಗೂ ಜನಪ್ರತಿನಿಧಿಗಳ ಸಭೆ ತನ್ನ ಒಪ್ಪಿಗೆಯನ್ನು ನೀಡಬೇಕಾಗುತ್ತದೆ. ಆ ಮೇಲಷ್ಟೇ ಅದು ಕಾನೂನು ಆಗಿ ಜಾರಿಯಾಗಲಿದೆ.

ಸಾಮಾನ್ಯವಾಗಿ ವೈಯಕ್ತಿಕವಾಗಿ ಮಂಡಿಸಲಾದ ಈ ರೀತಿ ವಿಧೇಯಕಗಳು ಕಾನೂನು ಆಗಿ ಬದಲಾಗುವುದು ಬಹಳ ವಿರಳ. ಆದರೆ, ಪಾಕಿಸ್ತಾನದ ಕಡೆಗೆ ಅಮೆರಿಕ ಜನರು ಯಾವ ಭಾವನೆಗಳನ್ನು ಹೊಂದಿದ್ದಾರೆಂಬುದನ್ನು ಈ ವಿಧೇಯಕ ಸಾಂಕೇತಿಸುತ್ತದೆ. ಪಾಕಿಸ್ತಾನವು ಭಯೋತ್ಪಾದನೆಯ ಕೇಂದ್ರ ಬಿಂದುವಾಗಿದ್ದು, ಸರ್ಕಾರಿ ಪ್ರಾಯೋಜಿತ ಉಗ್ರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪವನ್ನು ಹೊತ್ತಿವೆ.

ಇದನ್ನೂ ಓದಿ | Shehbaz Sharif | ಪಾಕಿಸ್ತಾನ ಪಾಠ ಕಲಿತಿದೆ, ನಮಗೆ ಭಾರತದ ಜತೆ ಯುದ್ಧ ಬೇಡ: ಪಾಕ್‌ ಪಿಎಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಐಪಿಎಲ್ 2024

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Virat Kohli: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ರೀಲಿ ರುಸ್ಸೊ ಅವರು ಗನ್‌ ಶಾಟ್‌ ರೀತಿಯ ಭಂಗಿ ಮೂಲಕ ಸಂಭ್ರಮಾಚರಿಸಿದರು. ಆದರೆ, ಅರ್ಧಶತಕದ ಬಳಿಕ ಕರಣ್‌ ಶರ್ಮಾ ಎಸೆತದಲ್ಲಿ ವಿಲ್‌ ಜಾಕ್ಸ್‌ಗೆ ಕ್ಯಾಚಿತ್ತು ರೀಲಿ ರುಸ್ಸೋ ಔಟಾದರು. ರುಸ್ಸೋ ಔಟಾಗುತ್ತಲೇ ವಿರಾಟ್‌ ಕೊಹ್ಲಿ ಅವರೂ ಗನ್‌ನಿಂದ ಶೂಟ್‌ ಮಾಡುವ ರೀತಿ ಸಂಭ್ರಮಿಸುವ ಮೂಲಕ ಅವರಿಗೆ ತಿರುಗೇಟು ನೀಡಿದರು.

VISTARANEWS.COM


on

Virat Kohli
Koo

ಧರ್ಮಶಾಲಾ: ಮೈದಾನದಲ್ಲಿ ವಿರಾಟ್‌ ಕೊಹ್ಲಿ (Virat Kohli) ಇರುವುದೇ ಹಾಗೆ. ಅದು ಗೌತಮ್‌ ಗಂಭೀರ್‌ ಇರಲಿ, ಸ್ಟ್ರೈಕ್‌ ರೇಟ್‌ ಕುರಿತು ಕಾಮೆಂಟರಿ ನೀಡಿದ ಸುನೀಲ್‌ ಗವಾಸ್ಕರ್ ಇರಲಿ, ಹೆಲ್ಮೆಟ್‌ ಬಿಸಾಡಿದ ಆವೇಶ್‌ ಖಾನ್‌ ಇರಲಿ, ನವೀನ್‌ ಹುಲ್‌ ಹಕ್‌ ಇರಲಿ. ಅವರು ಮೈದಾನದಲ್ಲಿಯೇ ತಿರುಗೇಟು ನೀಡದೆ ಬಿಡುವುದಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಪ್ರಸಕ್ತ ಐಪಿಎಲ್‌ ಆವೃತ್ತಿಯ (IPL 2024) ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ ನಡೆದ ಐಪಿಎಲ್‌ ಪಂದ್ಯದಲ್ಲಿ ರೀಲಿ ರುಸ್ಸೊ (Rilee Rossouw) ಅವರಿಗೆ ಅವರದ್ದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ.

ಆರ್‌ಸಿಬಿ ನೀಡಿದ 242 ರನ್‌ಗಳ ಬೃಹತ್‌ ಮೊತ್ತ ಬೆನ್ನತ್ತುವಾಗ ರೀಲಿ ರುಸ್ಸೊ ಅವರು ಬಿರುಸಿನ ಅರ್ಧಶತಕ ಬಾರಿಸಿದರು. ಅರ್ಧಶತಕ ಬಾರಿಸಿದ ಬಳಿಕ ಅವರು ಗನ್‌ ಶಾಟ್‌ ರೀತಿಯ ಭಂಗಿ ಮೂಲಕ ಸಂಭ್ರಮಾಚರಿಸಿದರು. ಆದರೆ, ಅರ್ಧಶತಕದ ಬಳಿಕ ಕರಣ್‌ ಶರ್ಮಾ ಎಸೆತದಲ್ಲಿ ವಿಲ್‌ ಜಾಕ್ಸ್‌ಗೆ ಕ್ಯಾಚಿತ್ತು ರೀಲಿ ರುಸ್ಸೊ ಔಟಾದರು. ರುಸ್ಸೊ ಔಟಾಗುತ್ತಲೇ ವಿರಾಟ್‌ ಕೊಹ್ಲಿ ಅವರೂ ಗನ್‌ನಿಂದ ಶೂಟ್‌ ಮಾಡುವ ರೀತಿ ಸಂಭ್ರಮಿಸುವ ಮೂಲಕ ಅವರಿಗೆ ತಿರುಗೇಟು ನೀಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಆರ್​ಸಿಬಿಯನ್ನು ಬ್ಯಾಟ್ ಮಾಡಲು ಆಹ್ವಾನಿಸಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ರೆಡ್ ಆರ್ಮಿ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ಗೆ 241 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಂಜಾಬ್ ಬಳಗ 17 ಓವರ್​ಗಳಲ್ಲಿ 181 ರನ್​ಗಳಿಗೆ ಆಲ್​ಔಟ್ ಆಯಿತು. ಇದರೊಂದಿಗೆ ಆರ್‌ಸಿಬಿಯು ಸತತ ನಾಲ್ಕನೇ ಜಯ ದಾಖಲಿಸಿತು.

ಕೊಹ್ಲಿಯ ಪ್ರದರ್ಶನ ‘ಕಿಂಗ್’

ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಫಾಫ್​ ಡು ಪ್ಲೆಸಿಸ್​ ಮತ್ತೊಂದು ಬಾರಿ ಕಳಪೆ ಪ್ರದರ್ಶನ ನೀಡಿದರು. 9 ರನ್​ಗೆ ಅವರು ಔಟಾದರು. ಹೀಗಾಗಿ 19 ರನ್​ಗೆ ಒಂದು ವಿಕೆಟ್​ ಕಳೆದುಕೊಂಡ ಆರ್​ಸಿಬಿಗೆ ಸಂಕಷ್ಟ ಶುರುವಾಯಿತು. ಬಳಿಕ ಬಂದ ವಿಲ್​ ಜ್ಯಾಕ್ಸ್​ ಕೂಡ 12 ರನ್​ಗೆ ಸೀಮಿತಗೊಂಡರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಇನಿಂಗ್ಸ್ ಕಟ್ಟಲು ಆರಂಭಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಇವರಿಗೆ ಜತೆಯಾದ ರಜತ್​ ಪಾಟೀದರ್ ಮತ್ತೊಂದು ವಿಸ್ಫೋಟಕ ಆಟ ಆಡಿದರು. ಅವರು 23 ಎಸೆತಕ್ಕೆ 55 ರನ್ ಬಾರಿಸಿದ್ದ ಕಾರಣ ಆರ್​ಸಿಬಿಯ ರನ್​ ಗಳಿಕೆ ಏರುಗತಿಯಲ್ಲಿ ಸಾಗಿತು.

ವಿರಾಟ್​ ಕೊಹ್ಲಿ ಜತೆ ಮತ್ತೊಂದು ಉತ್ತಮ ಜತೆಯಾಟ ನೀಡಿದ ವಿಲ್ ಜ್ಯಾಕ್ಸ್​ 46 ರನ್​ ಬಾರಿಸಿದರು. ಕೊಹ್ಲಿ 6 ಫೋರ್ ಹಾಗೂ 4 ಸಿಕ್ಸರ್ ಸಮೇತ ಭರ್ಜರಿ ಆಟವಾಡಿ ಶತಕದ ಹಾದಿಯಲ್ಲಿದ್ದರು. ಆದರೆ, ಕೊನೇ ಹಂತದಲ್ಲಿ ರನ್ ಬಾಚುವ ಒತ್ತಡಕ್ಕೆ ಬಿದ್ದ ಅವರು 8 ರನ್​ಗಳಿಂದ ಶತಕ ವಂಚಿತರಾದರು.

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಪಂಜಾಬ್ ಹೀನಾಯ ಪ್ರದರ್ಶನ ನೀಡಿತು. ಪ್ರಭ್​ ಸಿಮ್ರಾನ್ ಸಿಂಗ್ 6 ರನ್​ಗೆ ಜಾಗ ಖಾಲಿ ಮಾಡಿದರು. ಬೈರ್​ಸ್ಟೋವ್ 27 ರನ್​ ಬಾರಿಸಿ ಔಟಾದರು. ಆದರೆ, ಮೂರನೇ ಕ್ರಮಾಂಕದಲ್ಲಿ ಆಡಲು ಇಳಿದ ರೀಲಿ ರೊಸ್ಸೊ 27 ಎಸೆತಕ್ಕೆ 61 ರನ್ ಬಾರಿಸಿ ಗೆಲುವಿನ ಹುಮ್ಮಸ್ಸು ತಂದರು. ಆದರೆ, ತಲೆಗೆ ಚೆಂಡು ಬಡಿಸಿಕೊಂಡ ಮರು ಎಸೆತದಲ್ಲಿಯೇ ಸ್ಪಿನ್ನರ್​ ಕರಣ್ ಶರ್ಮಾ ಬೌಲಿಂಗ್​ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಅಲ್ಲಿಂ ದ ಪಂಜಾಬ್ ಇನಿಂಗ್ಸ್ ಕುಸಿಯಿತು. ನಡುವೆ ಶಶಾಂಕ್​ ಶರ್ಮಾ 37 ರನ್ ಬಾರಿಸಿದರು. ಆದರೆ, ಕೊಹ್ಲಿ ಮಾಡಿದ ಅದ್ಭುತ ರನ್​ಔಟ್​ಗೆ ಅವರು ಬಲಿಯಾದರು. ಸ್ಯಾಮ್​ ಕರ್ರನ್​ 22 ರನ್​ ಕೊಡುಗೆ ಕೊಟ್ಟರು. ಆರ್​ಸಿಬಿ ಪರ ಮೊಹಮ್ಮಸ್ ಸಿರಾಜ್​ 3 ವಿಕೆಟ್​, ಸ್ವಪ್ನಿಲ್ ಸಿಂಗ್, ಲಾಕಿ ಫರ್ಗ್ಯೂಸನ್​ ಹಾಗೂ ಕರಣ್ ಶರ್ಮಾ ತಲಾ 1 ವಿಕೆಟ್ ಉರುಳಿಸಿದರು.

ಇದನ್ನೂ ಓದಿ: IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Continue Reading

ಪ್ರಮುಖ ಸುದ್ದಿ

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024: ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

VISTARANEWS.COM


on

Akshaya Tritiya 2024
Koo

ಅಕ್ಷಯ ತೃತೀಯ (Akshaya Tritiya 2024) ಅಂದರೆ ಚಿನ್ನ- ಬೆಳ್ಳಿ (gold, silver) ಖರೀದಿಸಬೇಕು ಎಂಬುದು ಸಾಮಾನ್ಯ ನಂಬಿಕೆ. ಆದರೆ ಇದು ಮಾತ್ರವಲ್ಲ. ಸಂಪತ್ತು ಎಂದು ಕರೆಸಿಕೊಳ್ಳುವ ಯಾವುದನ್ನೇ ಆದರೂ ಇಂದು ನೀವು ಖರೀದಿಸಬಹುದು ಅಥವಾ ಹೊಂದಬಹುದು. ಅದರಿಂದ ಆ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ. ಈ ಹಿಂದಿನ ಕಾಲದಲ್ಲಿ ಕೃಷಿಪ್ರಧಾನ ಸಮಾಜದಲ್ಲಿ ಅಕ್ಕಿ ರಾಗಿ ಗೋಧಿಯಂಥ ಧಾನ್ಯಗಳನ್ನು ಮನೆ ತುಂಬಿಸಿಕೊಳ್ಳುತ್ತಿದ್ದರು.

ಹಿಂದೂಗಳಿಗೆ ಸಂಪತ್ತಿನ ಪುಣ್ಯ ಫಲ ನೀಡುವ ಹಬ್ಬ. ಅಕ್ಷಯ ತೃತೀಯದಂದು (Akshaya Tritiya 2024) ಶುಭ, ಅಶುಭ ಮುಹೂರ್ತಗಳನ್ನು ನೋಡದೇ ಯಾವುದೇ ಕಾರ್ಯವನ್ನು ಪ್ರಾರಂಭಿಸಬಹುದು ಎಂಬ ಮಾತಿದೆ. ಉತ್ತರ ಭಾರತದಲ್ಲಿ ಅಖಾ ತೀಜ್ ಎಂದೂ ಕರೆಯಲ್ಪಡುವ ಈ ಮಂಗಳಕರ ದಿನ ಅಪಾರ ಪ್ರಾಮುಖ್ಯತೆ ಹೊಂದಿದೆ. ಈ ದಿನದಂದು ಪ್ರಾರಂಭಿಸಿದ ಯಾವುದೇ ಕಾರ್ಯ ಯಾವಾಗಲೂ ಯಶಸ್ವಿಯಾಗುತ್ತದೆ ಎಂಬ ನಂಬಿಕೆ. ಖರೀದಿಸಿದ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ.

ಈ ದಿನವು ಅದೃಷ್ಟ, ಯಶಸ್ಸು ಮತ್ತು ಅದೃಷ್ಟದ ಲಾಭದ ಸಂಕೇತವಾಗಿದೆ. ಅಕ್ಷಯ ತೃತೀಯದಂದು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಈ ದಿನ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖರೀದಿಸುವುದು ವಾಡಿಕೆ. ಅಕ್ಷಯ ತೃತೀಯವನ್ನು ಭಾರತ ಮತ್ತು ನೇಪಾಳದ ಅನೇಕ ಪ್ರದೇಶಗಳಲ್ಲಿ ಹಿಂದೂಗಳು ಮತ್ತು ಜೈನರು ಹೊಸ ಉದ್ಯಮಗಳು, ಮದುವೆಗಳು, ದಾನ, ಮತ್ತು ಚಿನ್ನ ಅಥವಾ ಇತರ ಆಸ್ತಿಯಂತಹ ಹೂಡಿಕೆಗಳಿಗೆ ಮಂಗಳಕರವೆಂದು ಪರಿಗಣಿಸುತ್ತಾರೆ. ಅಂದು ಚಿನ್ನ, ಬೆಳ್ಳಿ, ವಾಹನ ಖರೀದಿಸಿ ತಂದರೆ ಸಂಪತ್ತು ಮತ್ತು ಸಮೃದ್ಧಿ ಬರುತ್ತದೆ ಎಂದು ಹಲವರು ನಂಬುತ್ತಾರೆ.

ಸಂಸ್ಕೃತದಲ್ಲಿ ಅಕ್ಷಯ ಪದವು “ಅಭ್ಯುದಯ, ಭರವಸೆ, ಸಂತೋಷ, ಯಶಸ್ಸು” ಎಂಬ ಅರ್ಥದಲ್ಲಿ “ಎಂದಿಗೂ ಕಡಿಮೆಯಾಗುವುದಿಲ್ಲ” ಎಂಬ ಅರ್ಥವನ್ನು ಸೂಚಿಸುತ್ತದೆ. ಈ ದಿನದಂದು ಸೂರ್ಯ ಮತ್ತು ಚಂದ್ರ ಇಬ್ಬರೂ ತಮ್ಮ ಗ್ರಹಗಳ ಅತ್ಯುತ್ತಮ ನೆಲೆಯಲ್ಲಿರುತ್ತಾರೆ ಎಂದು ನಂಬಲಾಗಿದೆ.

ಅಕ್ಷಯ ತೃತೀಯ ಆಚರಣೆಯ ಇತಿಹಾಸದ ಪ್ರಕಾರ ಅಕ್ಷಯ ತೃತೀಯ ದಿನದಂದು ನಾಲ್ಕು ಯುಗಗಳಲ್ಲಿ ಎರಡನೇ ಯುಗವಾದ ತ್ರೇತಾಯುಗವು ಪ್ರಾರಂಭವಾಯಿತು ಎಂದು ಹೇಳಲಾಗುತ್ತದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನು ಅಕ್ಷಯ ತೃತೀಯ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ. ಹೀಗಾಗಿ ಭಕ್ತರು ಅಕ್ಷಯ ತೃತೀಯವನ್ನು ಪರಶುರಾಮನ ಜನ್ಮ ದಿನವಾಗಿ ಆಚರಿಸುತ್ತಾರೆ. ಅಕ್ಷಯ ತೃತೀಯದ ಆಚರಣೆಗಳು ಅಕ್ಷಯ ತೃತೀಯದಂದು ಭಕ್ತರು ಪವಿತ್ರ ಸ್ನಾನ ಮಾಡುವ ಮೂಲಕ ಮತ್ತು ಹಳದಿ ವೇಷಭೂಷಣದಲ್ಲಿ ತಮ್ಮನ್ನು ತಾವು ಅಲಂಕರಿಸಿಕೊಳ್ಳುವುದರೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ. ಈ ದಿನ ವಿಶೇಷವಾಗಿ ವಿಷ್ಣು ಸಹಸ್ರನಾಮ ಮತ್ತು ವಿಷ್ಣು ಚಾಲೀಸಾದ ಪಠಣಗಳೊಂದಿಗೆ ಭಗವಾನ್ ವಿಷ್ಣುವಿಗೆ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ.

ಚಿನ್ನ, ಬೆಳ್ಳಿ ಏಕೆ ಖರೀದಿಸಬೇಕು?

ದಂತಕಥೆಯ ಪ್ರಕಾರ, ಅಕ್ಷಯ ತೃತೀಯದಲ್ಲಿ, ಸಂಪತ್ತಿನ ದೇವತೆಯಾದ ಕುಬೇರನು ಭಗವಾನ್ ಶಿವ ಮತ್ತು ಬ್ರಹ್ಮನಿಂದ ಆಶೀರ್ವಾದವನ್ನು ಪಡೆದನು, ಅಲಕಾಪುರಿ ಎಂದು ಕರೆಯಲ್ಪಡುವ ಲೋಕವನ್ನು ಸ್ವಾಧೀನಪಡಿಸಿಕೊಂಡ. ಪರಿಣಾಮವಾಗಿ, ಈ ದಿನ ಕುಬೇರನ ಹೆಸರಿನಲ್ಲಿ ಚಿನ್ನದ ಆಭರಣಗಳು ಮತ್ತು ಆಸ್ತಿಗಳನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೊಸ ವ್ಯಾಪಾರ, ಉದ್ಯಮಗಳು, ನಿರ್ಮಾಣ ಕಾರ್ಯಗಳನ್ನು ಈ ವಿಶೇಷ ದಿನದಂದು ಪ್ರಾರಂಭಿಸಲಾಗುತ್ತದೆ. ಉದ್ಯಮಿಗಳು ಮುಂದಿನ ಆರ್ಥಿಕ ವರ್ಷಕ್ಕೆ ಹೊಸ ಆಡಿಟ್ ಪುಸ್ತಕವನ್ನು ಪ್ರಾರಂಭಿಸುವ ಮೊದಲು ಅಕ್ಷಯ ತೃತೀಯ ದಿನದಂದು ಗಣೇಶ ಮತ್ತು ಲಕ್ಷ್ಮೀ ದೇವಿಯನ್ನು ಪೂಜಿಸುತ್ತಾರೆ. ಇದನ್ನು ಹಲ್ಖಾತಾ ಎಂದು ಕರೆಯುತ್ತಾರೆ.

ಇದಲ್ಲದೇ ಅಕ್ಕಿ ಕೊಳ್ಳುವವರು, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವವರು, ಯಾವುದೇ ರೀತಿಯ ಹೊಸ ವಸ್ತುಗಳು ಅಥವಾ ಪಾತ್ರೆಗಳನ್ನು ಖರೀದಿಸುವವರು- ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

ಇದನ್ನೂ ಓದಿ: Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

Continue Reading

ಧಾರ್ಮಿಕ

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

ವೈಶಾಖ ಮಾಸದ – ಶುಕ್ಲ ಪಕ್ಷದ – ಮೂರನೇ ದಿನವೇ ‘ಅಕ್ಷಯ ತೃತೀಯ’ (Akshaya Tritiya 2024). ಹಿಂದುಗಳ ಪವಿತ್ರ ದಿನಗಳಲ್ಲಿ (Akshaya Tritiya 2024) ಅತ್ಯಂತ ಪವಿತ್ರವಾದ ನಾಲ್ಕು “ಪೂರ್ಣ ಮುಹೂರ್ತʼಗಳಲ್ಲಿ (ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಹಬ್ಬದ ದಿನಗಳು) ಇದು ಒಂದು. ಈ ದಿನಗಳಲ್ಲಿ ಒಳ್ಳೆಯ ಕೆಲಸ ಮಾಡಲು ಪಂಚಾಂಗ ನೋಡುವ ಅವಶ್ಯಕತೆ ಇರುವುದಿಲ್ಲ ಎಂದು ನಮ್ಮ ಹಿರಿಯರು ಹೇಳಿದ್ದಾರೆ.

VISTARANEWS.COM


on

Akshaya Tritiya 2024
Koo
Prof. Vidwan Navinashastri Ra. Puranika (writers, Sanskrit lecturers, culture thinkers and astrologers)

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)
ಭವ್ಯ ಭಾರತದ ಸಾಂಸ್ಕೃತಿಕ ಪರಂಪರೆಯ (Akshaya Tritiya 2024) ಶ್ರೇಷ್ಠತೆಯನ್ನು ಸಾರುವ ಮೂಲಕ ಈ ಹಬ್ಬ ಹರಿದಿನಗಳು ಮನುಷ್ಯರ ಮನಸ್ಸನ್ನೂ ಸದಾ ನೆಮ್ಮದಿ ಮತ್ತು ಸಂತೋಷವಾಗಿ ಇರಲೆಂದು, ಕಾಲಕಾಲಕ್ಕೆ ಬದಲಾಗುವ ಋತು ನಿಯಮಗಳಿಗೆ ಅನುಗುಣವಾಗಿ ನಮ್ಮ ಹಿರಿಯರು ಭಗವಂತನ ಪ್ರತಿರೂಪವನ್ನು ಸೃಷ್ಟಿಯಲ್ಲಿ ದೃಷ್ಟಿಯಿಟ್ಟು ಮಾನವ ಜನಾಂಗದ ಏಳಿಗೆಗೆ ಶ್ರಮಿಸಿದ್ದಾರೆ. ಪಂಚಭೂತಗಳಲ್ಲಿ ದೇವರನ್ನು ಹುಡುಕಿದ್ದಾರೆ.ಹಿಗಾಗಿ ಭಾರತ ಪ್ರತ್ಯಕ್ಷ ಸಂಸ್ಕೃತಿಯ ಜೀವಂತ ಸ್ವರ್ಗದ ಪ್ರತಿ ರೂಪ. ಭಾರತೀಯರು ಆಚರಿಸುವ ಯಾವುದೇ ಹಬ್ಬ-ಹರಿದಿನಗಳು, ಸಮಾರಂಭ, ಜಯಂತಿ, ಉತ್ಸವಗಳು, ಆರಾಧನೆ ಇತ್ಯಾದಿ ಸಾಮಾನ್ಯವಾಗಿ ಅಮರವಾಗಿ ಉಳಿದಿರುವ ಯಾವುದೋ ಗತ ವ್ಯಕ್ತಿಯ, ಶಕ್ತಿಯ ಅಥವಾ ಪ್ರಾಚೀನತೆಯ ಪ್ರತೀಕಗಳಾಗಿರುತ್ತವೆ. ನಮ್ಮ ಈ ಪುಣ್ಯ ಭೂಮಿ ಭಾರತದಲ್ಲಿ ಎಲ್ಲಾ ಜನರು ಅತ್ಯಂತ ಪ್ರೀತಿಯಿಂದ, ಸಂತೋಷದಿಂದ ಬೆಸೆದುಕೊಂಡು ಇರಲು ಮುಖ್ಯ ಕಾರಣವೇನೆಂದರೆ, ನಮ್ಮ ಪೂರ್ವಜರು ಹಾಕಿಕೊಟ್ಟಂತಹ ಸಂಸ್ಕೃತಿ, ಪರಂಪರೆ ಹಾಗೂ ಕಾಲಕಾಲಕ್ಕೆ ಆಚರಿಸುವ ಹಬ್ಬ – ಹರಿದಿನಗಳು.
ಭಾರತ ಸಂಪ್ರದಾಯವನ್ನು ಪಾಲಿಸುವ ಮತ್ತು ಧರ್ಮವನ್ನು ಗೌರವಿಸುವ ದೇಶ. ಇದು ಈ ನೆಲದ ಸಂಸ್ಕಾರ. ಇಲ್ಲಿಯ ಪ್ರತಿ ಹಬ್ಬಕ್ಕೂ ಒಂದೊಂದು ಬಗೆಯ ಮಹತ್ವವನ್ನು ಹಾಗೂ ಹಿರಿಯರು ಹಾಕಿಕೊಟ್ಟ ನಿಯಮಗಳನ್ನು ಇನ್ನೂ ಪಾಲಿಸುತ್ತಾ ಬರುತ್ತಿದ್ದೇವೆ ಎಂಬುದೇ ಸಂಪ್ರದಾಯ. ಹಬ್ಬಗಳೇ ನಮ್ಮ ಭಾರತದ ಉಸಿರು ಎಂದರೂ ತಪ್ಪಾಗಲಿಕ್ಕಿಲ್ಲ.
ಸನಾತನ ವೈದಿಕ ಹಿಂದೂ ಧರ್ಮದಲ್ಲಿ ಸಾಕಷ್ಟು ಹಬ್ಬ-ಹರಿದಿನಗಳು ಉತ್ಸವಗಳು ಆಚರಣೆಯಲ್ಲಿವೆ.
ವೈಶಾಖ ಮಾಸದ – ಶುಕ್ಲ ಪಕ್ಷದ – ಮೂರನೇ ದಿನವೇ ‘ಅಕ್ಷಯ ತೃತೀಯ’. ಹಿಂದುಗಳ ಪವಿತ್ರ ದಿನಗಳಲ್ಲಿ ಅತ್ಯಂತ ಪವಿತ್ರವಾದ ನಾಲ್ಕು “ಪೂರ್ಣ ಮುಹೂರ್ತ” ಗಳಲ್ಲಿ (ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಹಬ್ಬದ ದಿನಗಳು) ಇದು ಒಂದು. ಈ ದಿನಗಳಲ್ಲಿ ಒಳ್ಳೆಯ ಕೆಲಸ ಮಾಡಲು ಪಂಚಾಂಗ ನೋಡುವ ಅವಶ್ಯಕತೆ ಇರುವುದಿಲ್ಲ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಈ ದಿವಸ ಸಾಮಾನ್ಯವಾಗಿ ಯಾವುದೇ ಒಳ್ಳೆ ಕೆಲಸವನ್ನು ಮಾಡಿದರೆ, ಅಕ್ಷಯವಾಗಿ ಪರಿಣಮಿಸುವುದು. ಈ ದಿವಸ ಜೀವನದ ಹೊಸ ಉದ್ಯೋಗಗಳನ್ನು ಪ್ರಾರಂಭಿಸುವುದು ಶುಭಕರ. ಈ ತೃತೀಯ ತಿಥಿಯ ಜೊತೆ ರೋಹಿಣಿ ನಕ್ಷತ್ರವಿದ್ದರೆ, ಮಹಾ ಪುಣ್ಯಕರವೆಂದು ಪುರಾಣಗಳಲ್ಲಿ ಉಲ್ಲೇಖವಿದೆ.

Akshaya Tritium

ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತ

ಪಂಚಾಂಗದಲ್ಲಿ ಅಕ್ಷಯ ತೃತೀಯದಂದು ಸೂರ್ಯ ಮತ್ತು ಚಂದ್ರರು ಏಕಕಾಲದಲ್ಲಿ ತಮ್ಮ ತಮ್ಮ ಶಕ್ತಿಯುತಸ್ಥಾನ – ಉಚ್ಚರಾಶಿಯಲ್ಲಿ (ಸೂರ್ಯ-ಮೇಷರಾಶಿಯಲ್ಲಿ ಮತ್ತು ಚಂದ್ರ – ವೃಷಭರಾಶಿಯಲ್ಲಿ) ಇರುವದರಿಂದ ಎಲ್ಲಾ ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತವಾಗಿರುತ್ತದೆ. ಸೂರ್ಯನು ಆತ್ಮ ಮತ್ತು ದೇಹ ಪ್ರತಿಬಿಂಬಿಸಿದರೆ, ಚಂದ್ರನು ಮನಸ್ಸು ಮತ್ತು ಬುದ್ದಿ ಮೇಲೆ ಪ್ರಭಾವ ಬೀರುತ್ತಾನೆ. ಈ ರೀತಿಯಾಗಿ ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಎಂದು ಹೇಳುವರು. ಅಕ್ಷಯ ತೃತೀಯವು ಇಡೀ ವರ್ಷದಲ್ಲಿ ಬರುವ ಒಂದು ಅತ್ಯಂತ ಶುಭದಿನವಾಗಿದೆ.ಹಾಗಾಗಿ‌ ಮನೆಯಲ್ಲಿ ಪೂಜೆ ಹೋಮ ಹವನಾದಿಗಳನ್ನು ಮಾಡುವುದಾದರೆ ಅಥವಾ ಚಿನ್ನ ಖರೀದಿ ಮಾಡುವುದಾದರೆ ಇದು ಸೂಕ್ತವಾದ ದಿನ.ಇದರಿಂದ ಮತ್ತಷ್ಟು ನಮ್ಮಲ್ಲಿ ಸುಖ ಸಮೃದ್ದಿ ಸಂಪತ್ತು ಹೇರಳವಾಗುತ್ತದೆ.ಅಲ್ಲದೇ ಈ ದಿನದಂದು ವಿಷ್ಣು, ಲಕ್ಷ್ಮಿ ಹಾಗೂ ಕುಬೇರನನ್ನು ಜನರು ಭಕ್ತಿಯಿಂದ ಪೂಜಿಸುತ್ತಾರೆ. ಅಲ್ಲದೇ ಹಿಂದೂ ಪುರಾಣದ ಪ್ರಕಾರ ತ್ರೇತಾಯುಗವು ಆರಂಭವಾದದ್ದು ಈ ಅಕ್ಷಯ ತೃತೀಯದ ಶುಭದಿನದಂದೇ ಎನ್ನುವ ಉಲ್ಲೇಖವಿದೆ.

ಅಕ್ಷಯ ತೃತೀಯಕ್ಕೆ ಪುರಾಣದ ನಂಟು

ವೈಶಾಖ ಮಾಸಕ್ಕೆ ಸೂರ್ಯ ಅಭಿಮಾನಿ ದೇವತೆ. ಸೂರ್ಯನು ಬೆಳಕು ಮತ್ತು ಶಕ್ತಿಯ ಉಗಮ ಸ್ಥಾನ. ಸೂರ್ಯ ಜಗದ ಕಣ್ಣು. ಸೂರ್ಯ ಜಗವನ್ನು ಬೆಳಗುವವನು ಹೌದು. ಅವನ ಆಂತರ್ಯದಲ್ಲಿರುವುದೇ ಪ್ರಬಲವಾದ ಅಗ್ನಿ. ಅಗ್ನಿಯ ಮೊದಲ ಮಗನೇ ಹಿರಣ್ಯ (ಬಂಗಾರ). ಸೂರ್ಯ-ಅಗ್ನಿ-ಬಂಗಾರದ ಸಂಬಂಧ ಹೀಗಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನೇ ವೈಶ್ವಾನರಾಗ್ನಿಯ ರೂಪದಲ್ಲಿ ನಾನು ಎಲ್ಲರ ಹೃದಯದಲ್ಲಿರುತ್ತೇನೆ ಎಂದು. ವಿಸ್ತರಿಸಿ ಅರ್ಥೈಸುವುದಾದರೆ ನಾವು ಬಂಗಾರವನ್ನು ಧರಿಸಿಕೊಂಡಾಗ ನಮ್ಮ ಹೃದಯವಾಸಿಯಾದ ಅಗ್ನಿಯನ್ನು ಅವನ ಮಗ ಹಿರಣ್ಯ (ಬಂಗಾರ)ನಿಂದಲೇ ಅಲಂಕರಿಸದಂತಾಗುವುದು.
ಅಕ್ಷಯವೆಂದರೆ ಕ್ಷಯವಿಲ್ಲದ್ದು, ಕಡಿಮೆ ಇಲ್ಲದ್ದು, ಕ್ಷೀಣವಾಗದ್ದು, ಕೊನೆಯಿಲ್ಲದ್ದು, ನ್ಯೂನವಿಲ್ಲದ್ದು. ಇದು ಸಮದ್ಧಿಯ ಸಂಕೇತ, ಶುಭಾರಂಭದ ದ್ಯೋತಕ, ನಿರಂತತೆಯ ಪ್ರತೀಕ.ಧರ್ಮವು ಕರ್ತವ್ಯವನ್ನು, ಆಧ್ಯಾತ್ಮಿಕತೆಯನ್ನು ಅರ್ಥವು ಸಂಪತ್ತನ್ನು, ಕಾಮವು ಭೌತಿಕ ಸಂತೋಷವನ್ನು ಸೂಚಿಸುವ ಆಕಾಂಕ್ಷೆಗಳನ್ನು ಸಂಕೇತಿಸಿದರೆ, ಮೋಕ್ಷ ಈ ಭವಬಂಧನದಿಂದ ಮುಕ್ತವಾಗಿ ಏಕತ್ವದಲ್ಲಿ ಲೀನವಾಗುವುದರ ಸಂಕೇತವಾಗಿದೆ. ಈ ನಾಲ್ಕು ಪುರುಷಾರ್ಥಗಳ ಪೈಕಿ ಯಾವುದಾದರೊಂದರ ಆರಂಭ ಮಾಡುವುದಿದ್ದರೂ ಅದಕ್ಕೆ ಎಲ್ಲ ರೀತಿಯಿಂದಲೂ ಅನುಕೂಲಕರವಾದ ಶುಭ ದಿನವೇ ಈ ಅಕ್ಷಯ ತೃತೀಯ.

ಅಕ್ಷಯ ತೃತೀಯ ಮಹತ್ವ ಏನು?

ವಿಷ್ಣು ಅಲಂಕಾರ ಪ್ರಿಯ. ಆತನಿಗೆ ಪ್ರಿಯವಾದ ಹೇಮ (ಚಿನ್ನ) ರಜತಾದಿ ಒಡವೆಗಳನ್ನು ಖರೀದಿಸಿ ಅರ್ಪಿಸಿ ಕೃತಾರ್ಥರಾಗುವರು ಭಾರತೀಯ ಆಸ್ತಿಕರು. ವಿಷ್ಣು ಸಹಸ್ರನಾಮದಲ್ಲಿ ಹೇಳಿದಂತೆ ವಿಷ್ಣು ಸುವರ್ಣ ವರ್ಣದವನು. ಮಾತ್ರವಲ್ಲ, ಅಷ್ಟಶ್ವರ್ಯಗಳ ಅಧಿಪತಿ ಕುಬೇರ. ಈ ಒಂದು ದಿನ ಸ್ವತಃ ಐಶ್ವರ್ಯ ದೇವತೆ ಲಕ್ಷ್ಮಿಯನ್ನು ಪೂಜಿಸುತ್ತಾನೆ ಎಂದು ಲಕ್ಷ್ಮೀತಂತ್ರದಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ದೈವಭಕ್ತರಿಗೆ ಇದೊಂದೇ ದಿನ ಕುಬೇರ ಲಕ್ಷ್ಮೀ ಪೂಜೆ ಮಾಡಲು ಅವಕಾಶ. ವಿಶೇಷವಾಗಿ ತುಪ್ಪದ ದೀಪ ಹಚ್ಚಿ ಪೂಜಿಸಲಾಗುತ್ತದೆ.

Akshaya Tritium photo

ಪುರಾಣ ಪುಣ್ಯ ಕಥೆಗಳಲ್ಲಿ ಅಕ್ಷಯ ತೃತೀಯದ ವಿಶೇಷತೆ

ಈ ದಿನ ಹಲವು ಮಹತ್ಕಾರ್ಯಗಳು ಶುರುವಾದ ದಿನ ಕೃತಯುಗ (ಸತ್ಯ ಯುಗ) ಶುರುವಾದ ದಿನ ಎಂದು ಹೇಳಲಾಗುತ್ತದೆ. ವೇದವ್ಯಾಸರು ಗಣಪತಿ ಆಶೀರ್ವಾದ ಪಡೆದು ಮಹಾಭಾರತ ಬರೆಯಲು ಪ್ರಾರಂಭಿಸಿದ ದಿನ. ಗಂಗಾ ಮಾತೆ ಕೈಲಾಸದಿಂದ ಭೂಮಿಗೆ ಇಳಿದ ದಿನ ಎಂದು ಹೇಳಲಾಗುತ್ತದೆ. ಈ ದಿನ ಹಲವು ಮಹಾತ್ಮರು ಹುಟ್ಟಿದ ದಿನ ಜಗಜ್ಯೋತಿ ಬಸವಣ್ಣ ಹುಟ್ಟಿದ ದಿನ. ಬಲರಾಮ ಜಯಂತಿ ಅನ್ನೂ ಇಂದು ಆಚರಿಸಲಾಗುತ್ತದೆ. ವಿಷ್ಣು ಪರಶುರಾಮನಾಗಿ ಅವತಾರವೆತ್ತಿದ ದಿನ. ಇನ್ನೂ ಹಲವು ಮಹತ್ ಘಟನೆಗಳು ಈ ದಿನ ನಡೆದಿವೆ ಎಂದು ಪುರಾಣಗಳು ಹೇಳುತ್ತವೆ. ಚಾಮುಂಡೇಶ್ವರಿ ರಾಕ್ಷಸರನ್ನು ಸಂಹರಿಸಿದ ದಿನ. ಪಾಂಡವರು ವನವಾಸದಲ್ಲಿದ್ದಾಗ ಕೃಷ್ಣನ ಆದೇಶದಂತೆ ಸೂರ್ಯನನ್ನು ಪ್ರಾರ್ಥಿಸಿ, ದ್ರೌಪದಿ ಅಕ್ಷಯ ಪಾತ್ರೆಯನ್ನು ಪಡೆದಿದ್ದು ಈ ಅಕ್ಷಯ ತೃತೀಯದ ದಿನವೇ. ಪಾಂಡವರು ತಮ್ಮ ವನವಾಸ, ಅಜ್ಞಾತವಾಸದ ನಂತರ ಶಸ್ತ್ರಾಸ್ತ್ರಗಳನ್ನು ಪುನಃ ಪಡೆದ ದಿನ.
ಈ ದಿನ ವಿಷ್ಣು ಮತ್ತು ಲಕ್ಷ್ಮಿ ಗಂಗಾಸ್ನಾನ ಮಾಡಿ, ಗಂಗೆಯನ್ನು ಪುಜಿಸಿದ್ದರೆಂದು. ಅಂದಿನಿಂದ ಗಂಗಾ ಸ್ನಾನ ಮಾಡಿದರೆ ಸಕಲ ದೋಷ ಪರಿಹಾರವಾಗುತ್ತದೆ ಎಂಬ ರೂಢಿ ಬಂದಿತು ಎಂದು ಹೇಳಲಾಗುತ್ತದೆ. ಕೃಷ್ಣನು ಕುಚೇಲನನ್ನು ಸತ್ಕರಿಸಿದ ಪುಣ್ಯ ದಿನ. ಈ ಎಲ್ಲ ವಿಶೇಷತೆಗಳು ನಡೆದದ್ದು ಈ ಅಕ್ಷಯ ತೃತೀಯ ದಿನದಂದೇ ಎಂದು ಪುರಾಣಗಳ ಕಥೆಗಳು ಹೇಳುತ್ತವೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಜ್ಯೋತಿಷ ಶಾಸ್ತ್ರದ ಮೂಲಕ ಅಕ್ಷಯ ತೃತೀಯ

ಅಕ್ಷಯ ತೃತೀಯ ಯಾವ ನಕ್ಷತ್ರದಲ್ಲಿ ಬಂದರೆ ಹೆಚ್ಚು ಶ್ರೇಷ್ಠ?
ಈ ಹಬ್ಬ ‘ತೃತೀಯ ತಿಥಿ’ (ತದಿಗೆಯ ದಿನ) ಯಲ್ಲಿ ಮತ್ತು ‘ವೃಷಭ ರಾಶಿ’ಯ ದಿನ ಆಚರಣೆ ಮಾಡುತ್ತಾರೆ. ಆದರೆ ಈ ವೃಷಭ ರಾಶಿ ಮತ್ತು ತೃತೀಯ ತಿಥಿ ಎರಡೂ ಜೊತೆಯಲ್ಲಿ ಬರುವಾಗ ಅಂದು ಮೂರು ನಕ್ಷತ್ರಗಳಲ್ಲಿ (ಕೃತಿಕಾ, ರೋಹಿಣಿ, ಮೃಗಶಿರ) ಯಾವುದಾದರೊಂದು ಬರುವ ಸಾಧ್ಯತೆ ಇದೆ. ಅಕ್ಷಯ ತೃತೀಯ, ಶುಕ್ಲ ಪಕ್ಷದ ಮೂರನೇ ದಿನ / ತೃತೀಯ ತಿಥಿ ಯಲ್ಲಿ ಬರುತ್ತದೆ.

7 ಗ್ರಹಗಳು 360 ಡಿಗ್ರಿ ವೃತ್ತದ ಯಾವ ಯಾವ ಡಿಗ್ರಿ ಯಲ್ಲಿ ಉಚ್ಚರಾಗಿರುತ್ತಾರೆ.
ಸೂರ್ಯ: ಮೇಷದ 19ನೇ ಡಿಗ್ರಿ (ಅಂದರೆ 18°00′ – 18°59′); (ಪೂರ್ಣ ವೃತ್ತದ 19ನೆ ಡಿಗ್ರಿ)
ಚಂದ್ರ: ವೃಷಭರಾಶಿಯ 3ನೇ ಡಿಗ್ರಿ; (ಪೂರ್ಣ ವೃತ್ತದ 33ನೆ ಡಿಗ್ರಿ);
ಗುರು: ಕಟಕ ರಾಶಿಯ 15ನೆ ಡಿಗ್ರಿ; (ಪೂರ್ಣ ವೃತ್ತದ 105ನೆ ಡಿಗ್ರಿ);
ಬುಧ: ಕನ್ಯಾ ರಾಶಿಯ 15ನೆ ಡಿಗ್ರಿ; (ಪೂರ್ಣ ವೃತ್ತದ 165ನೆ ಡಿಗ್ರಿ);
ಶನಿ: ತುಲಾ ರಾಶಿಯ 21ನೆ ಡಿಗ್ರಿ; (ಪೂರ್ಣ ವೃತ್ತದ 201ನೆ ಡಿಗ್ರಿ);
ಮಂಗಳ: ಮಕರ ರಾಶಿಯ 28ನೆ ಡಿಗ್ರಿ; (ಪೂರ್ಣ ವೃತ್ತದ 298ನೆ ಡಿಗ್ರಿ);
ಶುಕ್ರ: ಕುಂಭ ರಾಶಿಯ 27ನೆ ಡಿಗ್ರಿ; (ಪೂರ್ಣ ವೃತ್ತದ 327ನೆ ಡಿಗ್ರಿ);

ಡಿಗ್ರಿ ಲೆಕ್ಕಾಚಾರ

ಒಂದು ಪೂರ್ಣ ವೃತ್ತ = 360 ಡಿಗ್ರಿ. ಈ 360 ಡಿಗ್ರಿ ವೃತ್ತವನ್ನ 12 (ರಾಶಿಗಳು) ಭಾಗಗಳಾಗಿ ಮಾಡಿದಾಗ ಒಂದೊಂದು ರಾಶಿಗೆ 30 ಡಿಗ್ರಿ ಆಗುತ್ತದೆ. ಈ 360 ಡಿಗ್ರಿ ವೃತ್ತವನ್ನ 27 ನಕ್ಷತ್ರಗಳಿಗೆ ಹಂಚಿದರೆ ಒಂದೊಂದು ನಕ್ಷತ್ರಕ್ಕೆ 13° 20′ ಬರುತ್ತದೆ. 27 ನಕ್ಷತ್ರಗಳನ್ನ 12 ರಾಶಿಗಳಿಗೆ ಹಂಚಿದರೆ ಒಂದೊಂದು ರಾಶಿಗೆ ಎರಡೂವರೆ ನಕ್ಷತ್ರಗಳು ಬರುತ್ತವೆ. ಒಂದು ನಕ್ಷತ್ರದಲ್ಲಿ ನಾಲ್ಕು ಪಾದಗಳಿರುತ್ತವೆ ಹಾಗಾಗಿ ಒಂದೊಂದು ಪಾದ 3° 20′ ಜಾಗವನ್ನಾಕ್ರಮಿಸುತ್ತದೆ.
ಒಂದು ರಾಶಿಗೆ ಎರಡೂವರೆ ನಕ್ಷತ್ರಗಳಾದ್ದರಿಂದ ಮತ್ತು ಒಂದು ನಕ್ಷತ್ರಕ್ಕೆ 4 ಪಾದಗಳಾದ್ದರಿಂದ ಒಂದು ರಾಶಿಗೆ 9 ಪಾದಗಳು. ಇದು 13° 20′ ಆಗುತ್ತದೆ. ಉದಾಹರಣೆ: ಮೇಷರಾಶಿಯಲ್ಲಿನ 10 ಪಾದ (ಎರಡೂವರೆ ನಕ್ಷತ್ರ) ಗಳು = 4 ಅಶ್ವಿನಿ + 4 ಭರಣಿ + 2 ಕೃತ್ತಿಕಾ = 4×3° 20′ + 4×3° 20’+ 1×3° 20′ = 30ಡಿಗ್ರಿ

ಉದಾಹರಣೆಯಲ್ಲಿ ಹೇಳಿದಂತೆ

  • ಅಶ್ವಿನಿ ಭರಣಿ ಕೃತ್ತಿಕಾ ಪಾದಂ ಮೇಷಃ। ಎಂಬುದು ಹೀಗೆ ಏಲ್ಲಾ ನಕ್ಷತ್ರ ಹಾಗೂ ದ್ವಾದಶ ರಾಶಿಗಳಿಗೂ ಸಹ ಈ ರೀತಿಯಾದ ಶ್ಲೋಕಗಳು ಇವೆ.
  • ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರ, ಭರಣಿ ನಕ್ಷತ್ರ ಮತ್ತು ಕೃತ್ತಿಕಾದ ಮೊದಲ ಪಾದ ಬರುತ್ತವೆ. ವೃಷಭ ರಾಶಿಯಲ್ಲಿ ಕೃತಿಕಾ ನಕ್ಷತ್ರದ ಮೂರು ಮತ್ತು ನಾಲ್ಕನೇ ಪಾದಗಳು ಮತ್ತು ರೋಹಿಣಿ, ಮೃಗಶಿರ ನಕ್ಷತ್ರಗಳು ಬರುತ್ತವೆ. ನಾವು ಮಾತಿನಲ್ಲಿ ಸೂರ್ಯ ಮೇಷರಾಶಿಯಲ್ಲಿ ಉಚ್ಚನಾಗಿರುತ್ತಾನೆ ಅಂತ ಹೇಳಿದರೂ, ಇನ್ನೂ ಆಳಕ್ಕಿಳಿದು ನೋಡಿದರೆ ಈ ಸೂರ್ಯ ಮೇಷ ರಾಶಿಯ ಭರಣಿ ನಕ್ಷತ್ರ (13° 20′ ರಿಂದ 26° 40′) ದಲ್ಲಿ ಮಾತ್ರ ನಿಜವಾಗಿ ಉಚ್ಚ (19 ಡಿಗ್ರಿ – ಭರಣಿ 3 ನೆ ಪಾದ) ನಾಗಿರುತ್ತಾನೆ ಅಂತ ತಿಳಿಯುತ್ತದೆ.
  • ಸರಳೀಕರಿಸಿ ನಾವು ಚಂದ್ರನು ವೃಷಭರಾಶಿಯಲ್ಲಿ ಉಚ್ಚನಾಗಿರುತ್ತಾನೆ ಅಂತ ಹೇಳಿದರೂ ಸಹ, ಸರಿಯಾಗಿ ಲೆಕ್ಕ ಹಾಕಿದರೆ ಈ ಚಂದ್ರ ವೃಷಭ ರಾಶಿಯ ಕೃತಿಕಾ ನಕ್ಷತ್ರದ 3 ನೇ ಪಾದದಲ್ಲಿ ತನ್ನ ನಿಜ ಉಚ್ಚ ಸ್ಥಾನದಲ್ಲಿರುತ್ತಾನೆ.
  • ಇನ್ನೊಂದು ಪುರಾಣ ಕತೆಯ ಮೂಲಕ ಯೋಚನೆ ಮಾಡೋದಾದರೆ, ಚಂದ್ರನಿಗೆ 27 ಜನ ( ಇವೇ 27 ನಕ್ಷತ್ರಗಳು) ಹೆಂಡತಿಯರು ಅನ್ನುತ್ತಾರೆ. ಚಂದ್ರ ತನ್ನ ಪ್ರತಿ ಹೆಂಡತಿಯ ಜೊತೆ ಒಂದೊಂದು ದಿನ ಇರುತ್ತಾನೆ ಎನ್ನುವ ಕತೆ ಇದು. ಈ 27 ಹೆಂಡತಿಯರಲ್ಲಿ ರೋಹಿಣಿ ಚಂದ್ರನಿಗೆ ಪ್ರಿಯವಾದ ಹೆಂಡತಿ ಅಂತೆ. ಹಾಗಾಗಿ ಕೆಲ ಕತೆಗಳು ರೋಹಿಣಿ ನಕ್ಷತ್ರದ ದಿನ ಬಂದರೆ (ಅಂದರೆ ಚಂದ್ರ ರೋಹಿಣಿ ನಕ್ಷತ್ರದಲ್ಲಿದ್ದಾಗ) ಅಕ್ಷಯ ತೃತೀಯ ಹೆಚ್ಚು ಶ್ರೇಷ್ಠ ಅನ್ನುವ ನಂಬಿಕೆ ಹೊಂದಿದ್ದಾರೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವುದು?

ಮಾಡುವ ಕೆಲಸಕ್ಕೆ ಶುಭ ಫಲ

ಅಕ್ಷಯ ತೃತೀಯ ದಿನದಂದು ಈ ಶುಭ ಮುಹೂರ್ತದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಅದರಿಂದ ನೀವು ಶುಭ ಫಲವನ್ನು ಪಡೆದುಕೊಳ್ಳುವಿರಿ. ಅಕ್ಷಯ ತೃತೀಯದಂದು ರೂಪುಗೊಳ್ಳುವ ಈ ಶುಭ ಸಂಯೋಗವು ನಿಮ್ಮ ಜೀವನದಲ್ಲಿ ಶುಭವನ್ನೇ ತರುತ್ತದೆ. ಅಕ್ಷಯ ತೃತೀಯದಂದು ಶುಭಕಾರ್ಯಗಳನ್ನು ಮಾಡಿದರೆ ಹಾಗೂ ದಾನ ಮಾಡಿದರೆ ಹೆಚ್ಚಿನ ಪ್ರತಿಫಲ ಉಂಟಾಗುವುದೆಂಬ ಪ್ರತೀತಿಯಿದೆ. ನಮ್ಮ ಹೆಣ್ಣುಮಕ್ಕಳು ಒಡವೆಯನ್ನು ಖರೀದಿಸಲು ತುಂಬಾ ಇಷ್ಟ ಪಡುತ್ತಾರೆ. ಏಕೆಂದರೆ ಅದು ಕೂಡ ಅಪತ್ಕಾಲಕ್ಕೆ ನೆರವಾಗುವ ಆಸ್ತಿಯಲ್ಲವೇ.!? ಹಾಗೇ ಹೆಣ್ಣಿನ ಸೌಂದರ್ಯದ ಮತ್ತು ಹೆಮ್ಮೆಯ ಪ್ರತೀಕ ಈ ಒಡವೆ. ಅಲ್ಲದೇ ಈ ನಂಬಿಕೆ ತಲಾಂತರಗಳಿಂದ ಇಷ್ಟು ಗಟ್ಟಿಯಾಗಿ ಜನರು ನಂಬಿಕೊಂಡು ಬಂದಿದ್ದಾರೆಂದರೆ ಏನು ಅರ್ಥ? ಆ ದಿನದ ಮಹಿಮೆಯಿಂದ ನಂಬಿದವರ ಜೀವನದಲ್ಲಿ ಒಳ್ಳೆಯದು ಆಗಿದೆ ಎಂದೇ ಅರ್ಥ, ಅಲ್ಲವೇ? ನಮ್ಮ ಭಾರತೀಯ ಪಂಚಾಂಗ ಸುಮ್ಮನೆ ಬಂದಿಲ್ಲ ಅದು ಒಂದು ವಿಜ್ಞಾನ ಎನ್ನುವುದಕ್ಕೆ ಇದು ಕೂಡ ಒಂದು ಸಾಕ್ಷಿ. ಈ ರೀತಿಯಾದ ವೈಜ್ಞಾನಿಕ ಸಂತ್ಯಾಂಶವುಳ್ಳ ಅಕ್ಷಯ ತೃತೀಯ ನಾಡಿನ ಜನತೆಗೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಉಜ್ವಲತೆಯನ್ನು, ಎಲ್ಲ ಜೀವಿಗಳಿಗೂ ಹಚ್ಚ ಹಸುರಾದ ಸುಖ ಶಾಂತಿಯನ್ನು ನೀಡುವಂತಹ ಪುಣ್ಯಮಯವಾದ ಮಹಾನ್ ಪರ್ವವಾಗಲಿ ಎಂದು ಪ್ರಾರ್ಥಿಸುತ್ತಾ ಈ ರೀತಿಯಾಗಿ ನಾವೇಲ್ಲರೂ
ಅಕ್ಷಯ ತೃತೀಯ ದಿನದ ನಿಜ ಅರ್ಥವನ್ನು ತಿಳಿದು ಆಚರಿಸೋಣ ಸಂಭ್ರಮಿಸೋಣ.
ಲೋಕಾಃ ಸಮಸ್ತಾಃ ಸುಖಿನೋ ಭವಂತು.

Continue Reading

ಕ್ರೈಂ

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

Prajwal Revanna case: ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ದೂರು ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ವಕೀಲ ದೇವರಾಜೇಗೌಡ ಮೇಲೂ ಲೈಂಗಿಕ ದೌರ್ಜನ್ಯ ದೂರು

ಪೆನ್ ಡ್ರೈವ್ ಪ್ರಕರಣದಲ್ಲಿ (Prajwal Revanna Case) ಹೋರಾಟ ನಡೆಸುತ್ತಿದ್ದ ವಕೀಲ ದೇವರಾಜೇಗೌಡ (Devaraje Gowda) ವಿರುದ್ದ ಎಫ್ಐಆರ್ ದಾಖಲಾಗಿದೆ. ಮಹಿಳೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಹತ್ತು ತಿಂಗಳ ಹಿಂದೆ ಪರಿಚಯವಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ವಾಟ್ಸ್​ಆ್ಯಪ್​ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ದೇವರಾಜ್ ವಿರುದ್ಧ ಕೇಳಿ ಬಂದಿದೆ. ಅದೇ ರೀತಿ ಬಳಿಕ ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪವೂ ಕೇಳಿ ಬಂದಿದೆ.

ಮಹಿಳೆಗೆ ಫೋನ್ ಮಾಡಿ ತಾವು ಜೊತೆಯಲ್ಲಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ ಆರೋಪವೂ ದಾಖಲಾಗಿದೆ. ಅದೇ ರೀತಿ ಮಹಿಳೆಗೆ ವಿಡಿಯೋ ಕಾಲ್‌ ಮಾಡಿ‌ ಖಾಸಗಿ ಅಂಗಗಳನ್ನು ಪ್ರದರ್ಶನದ ಮಾಡಿರುವ ಆರೋಪವೂ ದಾಖಲಾಗಿದೆ.

ತಾನು ಹೇಳಿದ ಹಾಗೆ ಕೇಳಬೇಕು.ಇಲ್ಲದೇ ಹೋದರೆ ಪತಿಯ ಜೀವಕ್ಕೆ ಪಾಯ ತಂದೊಡ್ಡುವುದಾಗಿ ದೇವರಾಜೇಗೌಡ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ತನ್ನ ಬೆಂಬಲಿಗರನ್ನು ಕಳುಹಿಸಿ ಜೀವ ಬೆದರಿಕೆ ಹಾಕಿದ ಅರೋಪವೂ ಕೇಳಿ ಬಂದಿದೆ. ಹಲವಾರು ಆರೋಪಗಳ ಮೇಲೆ ದೂರು ದಾಖಲಾಗಿದೆ. ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೂ ನಿನ್ನೆಯೂ ಸಹ ಜಾಮೀನು ಸಿಕ್ಕಿಲ್ಲ. ಸಾಕಷ್ಟು ವಾದ – ಪ್ರತಿವಾದದ ಬಳಿಕ ಜನಪ್ರತಿನಿಧಿಗಳ ಕೋರ್ಟ್, ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದಿದೆ.

ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಮಾಡಿದ್ದು, ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ
ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Continue Reading
Advertisement
Aravind Kejriwal
ದೇಶ25 mins ago

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

drowned in tank jindal bellary
ಕ್ರೈಂ35 mins ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

IPL 2024
ಐಪಿಎಲ್ 202438 mins ago

IPL 2024: ಆರ್‌ಸಿಬಿಯ ಪ್ಲೇ ಆಫ್ ಕನಸು ಜೀವಂತ; ಸೋಲಿನೊಂದಿಗೆ ರೇಸ್‌ನಿಂದ ಹೊರಬಿದ್ದ ಪಂಜಾಬ್‌: ಹೀಗಿದೆ ಹೊಸ ಅಂಕಪಟ್ಟಿ

Virat Kohli
ಐಪಿಎಲ್ 202448 mins ago

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Akshaya Tritiya 2024
ಪ್ರಮುಖ ಸುದ್ದಿ53 mins ago

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024
ಧಾರ್ಮಿಕ1 hour ago

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

America v/s Russia
ವಿದೇಶ1 hour ago

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Actor Prabhas
ಸಿನಿಮಾ1 hour ago

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Prajwal Revanna Case
ಕ್ರೈಂ2 hours ago

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

karnataka SSLC result 2024
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: SSLC Result 2024: ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತದ ಜೊತೆಗೆ ಸಿಹಿ ಸುದ್ದಿಯೂ ಇದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ11 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ12 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ13 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ20 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು20 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌