Shubhman Gill | ದ್ವಿಶತಕ ಬಾರಿಸಿದ್ದು ಶುಭ್​ಮನ್​​ ಗಿಲ್​, ಟ್ರೆಂಡ್​ ಆಗಿದ್ದು ಸಾರಾ ತೆಂಡೂಲ್ಕರ್​! - Vistara News

ಕ್ರಿಕೆಟ್

Shubhman Gill | ದ್ವಿಶತಕ ಬಾರಿಸಿದ್ದು ಶುಭ್​ಮನ್​​ ಗಿಲ್​, ಟ್ರೆಂಡ್​ ಆಗಿದ್ದು ಸಾರಾ ತೆಂಡೂಲ್ಕರ್​!

ಶುಭ್​ಮನ್ ಗಿಲ್​ (Shubhman Gill) ಹಿಂದೆ ಸಚಿನ್​ ಪುತ್ರಿ ಸಾರಾ ತೆಂಡೂಲ್ಕರ್​ ಜತೆ ಡೇಟಿಂಗ್​ ಮಾಡುತ್ತಿದ್ದರು ಎಂಬ ಗಾಸಿಪ್​ಗಳು ಹರಡಿದ್ದವು. ಅದೇ ಕಾರಣಕ್ಕೆ ಅವರು ಟ್ರೆಂಡ್​ ಆದರು.

VISTARANEWS.COM


on

sara tendulkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಭಾರತ ತಂಡದ ಆರಂಭಿಕ ಬ್ಯಾಟರ್ ಶುಭ್​ಮನ್​ ಗಿಲ್ (Shubhman Gill)​ ಪ್ರವಾಸಿ ನ್ಯೂಜಿಲ್ಯಾಂಡ್​ ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ 208 ರನ್​ ಬಾರಿಸುವ ಮೂಲಕ ಚೊಚ್ಚಲ ದ್ವಿ ಶತಕದ ಸಾಧನೆ ಮಾಡಿದ್ದಾರೆ. ಅವರ ರನ್​ ಶಿಖರದ ನೆರವಿನಿಂದ ನಿಗದಿತ 50 ಓವರ್​ಗಳಲ್ಲಿ 349 ರನ್​ ಪೇರಿಸಿದ ಭಾರತ ತಂಡ ಬಳಿಕ ಎದುರಾಳಿ ತಂಡವನ್ನು 337 ರನ್​ಗಳಿಗೆ ಆಲ್​ಔಟ್​ ಮಾಡಿ 12 ರನ್​ಗಳ ವಿಜಯ ದಾಖಲಿಸಿತ್ತು. ಆದರೆ, ಭಾರತ ತಂಡದ ಇನಿಂಗ್ಸ್​ನಲ್ಲಿ 23 ವರ್ಷದ ಯುವ ಬ್ಯಾಟರ್​ ಶುಭ್​ಮನ್​ ಗಿಲ್​ ದ್ವಿಶತಕ ದಾಖಲಿಸುತ್ತಿದ್ದಂತೆ ದಿಗ್ಗಜ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್​ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್​ ಆದರು.

ಶುಭ್​ಮನ್ ಗಿಲ್​ ಹಾಗೂ ಸಾರಾ ತೆಂಡೂಲ್ಕರ್ ಕೆಲವು ವರ್ಷಗಳ ಹಿಂದೆ ಡೇಟಿಂಗ್ ಮಾಡುತ್ತಿದ್ದರು ಎಂಬ ಗಾಸಿಪ್​ಗಳು ಹರಿದಾಡಿದ್ದವು. ಅವರಿಬ್ಬರು ಜತೆಯಾಗಿ ಸುತ್ತಾಡುತ್ತಿದ್ದಾರೆ ಎಂಬ ಸುದ್ದಿಗಳೂ ಅಲ್ಲಲ್ಲಿ ಕೇಳಿ ಬಂದಿದ್ದವು. ಆದರೆ, ಅದಕ್ಕೆ ಸೂಕ್ತ ಸಾಕ್ಷಿಗಳು ಇನ್ನೂ ಸಿಕ್ಕಿಲ್ಲ. ಇದೇ ಕಾರಣಕ್ಕೆ ಶುಭ್​ಮನ್​ ದ್ವಿ ಶತಕದ ಸಾಧನೆ ಮಾಡುತ್ತಿದ್ದಂತೆ ಸಾರಾ ತೆಂಡೂಲ್ಕರ್​ ಟ್ರೆಂಡ್​ ಆದರು. ನೆಟ್ಟಿಗರು ನಾನಾ ರೀತಿಯ ಮೀಮ್ಸ್​ಗಳೂ, ಮೆಸೇಜ್​ಗಳನ್ನು ಹಾಕುತ್ತಾ ಮತ್ತೆ ಗಾಸಿಫ್​ ಹರಡಲು ಶುರು ಮಾಡಿದ್ದರು.

ಶುಭ್​ಮನ್​ ಗಿಲ್​ ಸಾರಾ ತೆಂಡೂಲ್ಕರ್ ಅವರ ಜತೆ ಡೇಟಿಂಗ್ ಮುಂದುವರಿಸಿದ್ದಾರೆ ಎಂಬುದಕ್ಕೆ ಯಾವ ಪುರಾವೆಯೂ ಇಲ್ಲ .ಯಾಕೆಂದರೆ ಅವರು ಇತ್ತೀಚೆಗೆ ಬಾಲಿವುಡ್​ ನಟಿ ಸಾರಾ ಅಲಿ ಖಾನ್ ಜತೆ ಹೆಚ್ಚು ಕಾಣಿಸಿಕೊಂಡಿದ್ದರು. ರೆಸ್ಟೋರೆಂಟ್​ನಲ್ಲಿ, ವಿಮಾನದಲ್ಲಿ ಅವರಿಬ್ಬರು ಜತೆಯಾಗಿ ಇರುವುದನ್ನು ಪ್ಯಾಪರಾಜಿಗಳು ನೋಡಿದ್ದರು. ಹೀಗಾಗಿ ಅವರಿಬ್ಬರು ವಿಡಿಯೊಗಳು ಹಾಗೂ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ.

ಇದನ್ನೂ ಓದಿ | Sara Ali Khan | ಬಾಲಿವುಡ್‌ ನಟಿ ಸಾರಾ ಜತೆ ಡೇಟಿಂಗ್ ; ಶುಬ್ಮನ್‌ ಗಿಲ್ ಕೊಟ್ಟ ಉತ್ತರ ಹೀಗಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

T20 World Cup 2024: ಆಸ್ಟ್ರೇಲಿಯಾದಿಂದ ತರಿಸಲಾದ ಡ್ರಾಪ್ ಇನ್ ಪಿಚ್ ಬಳಸಗಾಗುತ್ತದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆಯಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಇನ್ನು ಕೆಲವೇ ಇಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಇದೇ ಮೊದಲ ಬಾರಿಗೆ ಅಮೆರಿಕ ಐಸಿಸಿ ಪಂದ್ಯಾವಳಿ ಆತಿಥ್ಯ ವಹಿಸಿಕೊಂಡಿದೆ. ಸುಸಜ್ಜಿತ ಪಿಚ್ ಇಲ್ಲದ ಕಾರಣ ಆಸ್ಟ್ರೇಲಿಯಾದಿಂದ ಡ್ರಾಪ್ ಇನ್ ಪಿಚ್‌ಗಳನ್ನು(Drop-In Pitches) ತರಿಸಿಕೊಂಡಿದೆ. ವಿಶ್ವಕಪ್​ ಪಂದ್ಯಾವಳಿಗಳು ಜೂನ್​ 1ರಿಂದ 29ರ ತನಕ ಸಾಗಲಿದೆ.

ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ. ಈ ಮೈದಾನಕ್ಕೆ ಆಸ್ಟ್ರೇಲಿಯಾದಿಂದ ತರಿಸಲಾದ ಡ್ರಾಪ್ ಇನ್ ಪಿಚ್ ಬಳಸಗಾಗುತ್ತದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿದೆ.

ಮೂರು ಪಿಚ್‌ಗಳನ್ನು ಈಗಾಗಲೇ ಫ್ಲೋರಿಡಾ, ಟೆಕ್ಸಾಸ್ ಹಾಗೂ ನ್ಯೂಯಾರ್ಕ್ ಕ್ರೀಡಾಂಗಣಗಳಿಗೆ ಅಡವಡಿಸಲಾಗಿದೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ಇದನ್ನೂ ಓದಿ T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

ಟಿ20 ವಿಶ್ವಕಪ್​ಗಾಗಿಯೇ ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium) ನಿರ್ಮಾಣ ಮಾಡಲಾಗಿದೆ. ಬಹುತೇಕ ಇದರ ಕಾಮಗಾರಿ ಮುಕ್ತಾಯ ಕಂಡಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಿನ ಹೈ-ವೋಲ್ಟೇಜ್ ಘರ್ಷಣೆ ಸೇರಿದಂತೆ ಭಾರತದ ಎಲ್ಲಾ ಗುಂಪು-ಹಂತದ ಪಂದ್ಯಗಳಿಗೆ ಈ ಕ್ರೀಡಾಂಗಣವು ಅಣಿಯಾಗಿದೆ. ಅಚ್ಚರಿ ಎಂದರೆ ಈ ಸ್ಟೇಡಿಯಂ ಅನ್ನು ನಿರ್ಮಾಣ ಮಾಡಿದ್ದೇ ಭಾರತ ಮತ್ತು ಪಾಕಿಸ್ತಾನ ಎದುರಿನ ಪಂದ್ಯಕ್ಕಾಗಿ.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

Continue Reading

ಕ್ರೀಡೆ

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

T20 World Cup 2024: ಕ್ರಿಕ್​ ಇನ್ಫೋ ವರದಿಯ ಪ್ರಕಾರ, ಆಯ್ಕೆ ಸಮಿತಿಯು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್(Sanju Samson) ಅವರನ್ನು ಟೀಮ್ ಇಂಡಿಯಾಕ್ಕೆ ತಮ್ಮ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಪರಿಗಣಿಸಲಿದೆ, ಪಂತ್​ ದ್ವಿತೀಯ ಆಯ್ಕೆಯ ಕೀಪರ್​ ಆಗಿದ್ದಾರೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ(T20 World Cup 2024) ಸೋಮವಾರ ನ್ಯೂಜಿಲ್ಯಾಂಡ್ ತನ್ನ ತಂಡವನ್ನು ಪ್ರಕಟಗೊಳಿಸಿದೆ. ಭಾರತ ತಂಡ ಯಾವಾಗ ಪ್ರಕಟಗೊಳ್ಳಿದೆ ಎಂದು ಕಾಯುತ್ತಿರುವಾಗಲೇ ಅಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ.​

ಕಾರು ಅಪಘಾತದಿಂದ ಗಾಯಗೊಂಡು ಐಪಿಎಲ್​ ಮೂಲಕ 14 ತಿಂಗಳ ಬಳಿಕ ಕ್ರಿಕೆಟ್​ ಆಡಲಿಳಿದರೂ ಕೂಡ ರಿಷಭ್​ ಪಂತ್(Rishabh Pant)​ ಅವರ ಕೀಪಿಂಗ್​ ಮತ್ತು ಬ್ಯಾಟಿಂಗ್​ ಫಾರ್ಮ್​ನಲ್ಲಿ ಯಾವುದೇ ಕೊರತೆ ಕಂಡುಬಂದಿರಲಿಲ್ಲ. ಈ ಹಿಂದಿನಂತೆ ಅವರ ಫಾರ್ಮ್​ ಕಂಡುಬಂದಿತ್ತು. ಹೀಗಾಗಿ ಪಂತ್​ ಟಿ20 ವಿಶ್ವಕಪ್​ಗೆ ಮೊದಲ ಕೀಪರ್​ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಪಂತ್​ ಮೊದಲ ಆಯ್ಕೆಯ ಕೀಪರ್​ ಎಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.

ಕ್ರಿಕ್​ ಇನ್ಫೋ ವರದಿಯ ಪ್ರಕಾರ, ಆಯ್ಕೆ ಸಮಿತಿಯು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್(Sanju Samson) ಅವರನ್ನು ಟೀಮ್ ಇಂಡಿಯಾಕ್ಕೆ ತಮ್ಮ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಪರಿಗಣಿಸಲಿದೆ, ಪಂತ್​ ದ್ವಿತೀಯ ಆಯ್ಕೆಯ ಕೀಪರ್​ ಆಗಿದ್ದಾರೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ T20 World Cup 2024: ಸಭೆ ನಡೆಸಿದ ರೋಹಿತ್​, ಅಗರ್ಕರ್​; ಈ ಆಟಗಾರನಿಗೆ ಅವಕಾಶವಿಲ್ಲ!

ಕೆ.ಎಲ್​ ರಾಹುಲ್(KL Rahul)​, ದಿನೇಶ್​ ಕಾರ್ತಿಕ್​ ಮತ್ತು ಜಿತೇಶ್ ಶರ್ಮಾ ಕೂಡ ಕೀಪಿಂಗ್​ ರೇಸ್​ನಲ್ಲಿದ್ದರು. ಈ ಪೈಕಿ ಜಿತೇಶ್​ ಶರ್ಮ ಈ ಬಾರಿಯ ಐಪಿಎಲ್​ನಲ್ಲಿ ಅಷ್ಟಾಗಿ ಉತ್ತಮ ಪ್ರದರ್ಶನ ತೋರಿಲ್ಲ. ಹೀಗಾಗಿ ಅವರಿಗೆ ಸ್ಥಾನ ಸಿಗುವುದು ಅನುಮಾನ ಎನ್ನಲಾಗಿದೆ. ಆರಂಭಿಕರಾಗಿ ರೋಹಿತ್ ಶರ್ಮಾ ಜತೆ ಇನಿಂಗ್ಸ್​ ಆರಂಭಿಸಲು ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್ ಮತ್ತು ಋತುರಾಜ್​ ಗಾಯಕ್ವಾಡ್​ ಮಧ್ಯೆ ತೀವ್ರ ಪೈಪೋಟಿ ಇದ್ದರೂ ಎಡಗೈ ಬ್ಯಾಟರ್​​ ಆಗಿರುವ ಜೈಸ್ವಾಲ್​ಗೆ ಈ ಅವಕಾಶ ಸಿಗುವು ಸಾಧ್ಯತೆ ಅಧಿಕವಾಗಿದೆ.

ವಿಶ್ವಕಪ್​ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ವಿಂಡೀಸ್​ ನೆಲದಲ್ಲಿ ಈಗಾಗಕಲೇ ಜೈಸ್ವಾಲ್​ ಉತ್ತಮ ದಾಖಲೆ ಹೊಂದಿದ್ದಾರೆ. ಚೊಚ್ಚಲ ಟೆಸ್ಟ್​ ಪಂದ್ಯದಲ್ಲಿಯೇ ಬಿರುಸಿನ ಬ್ಯಾಟಿಂಗ್​ ಮೂಲಕ ಶತಕ ಬಾರಿಸಿ ಮಿಂಚಿದ್ದರು. ನಿಧಾನಗತಿಯ ಪಿಚ್​ನಲ್ಲಿಯೂ ಜೈಸ್ವಾಲ್​ ಉತ್ತಮ ರನ್​ ಗಳಿಸುವಲ್ಲಿ ಸಮರ್ಥರಿದ್ದಾರೆ. ಹೀಗಾಗಿ ಅವರಿಗೆ ಈ ಅವಕಾಶ ಸಿಗುವುದು ಪಕ್ಕಾ ಆಗಿದೆ.

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ, ಅವರು ಆಯ್ಕೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕೋಚಿಂಗ್ ಸ್ಟಾಫ್‌ ನ ಪ್ರಭಾವಿ ಸದಸ್ಯರಿಗೆ ಚಾಹಲ್ ಆದ್ಯತೆಯ ಆಯ್ಕೆಯಾಗಿಲ್ಲ ಎಂದು ವರದಿಯಾಗಿದೆ. ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಸ್ಪಿನ್ ವಿಭಾಗದಲ್ಲಿ ಮೊದಲ ಆಯ್ಕೆಯಾಗಿದ್ದು, ಮೂರನೇ ಸ್ಪಿನ್ನರ್ ಸ್ಥಾನಕ್ಕೆ ಅಕ್ಷರ್ ಪಟೇಲ್ ಅಥವಾ ರವಿ ಬಿಷ್ಣೋಯಿ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Continue Reading

ಕ್ರೀಡೆ

IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

IPL 2024 Points Table: ಆರ್​ಸಿಬಿ(Royal Challengers Bengaluru) ಗೆದ್ದರೂ ಈ ತಂಡಕ್ಕೆ ಯಾವುದೇ ಲಾಭವಾಗಲಿಲ್ಲ. ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನದಲ್ಲೇ ಮುಂದುವರಿಯಿತು. ಆದರೆ, ಚೆನ್ನೈ ತಂಡದ ಗೆಲುವಿನಿಂದ ಲಕ್ನೋ, ಹೈದರಾಬಾದ್​ ಮತ್ತು ಡೆಲ್ಲಿ ತಂಡಗಳು ತಲಾ ಒಂದು ಸ್ಥಾನ ಕುಸಿತ ಕಂಡಿತು.

VISTARANEWS.COM


on

IPL 2024 Points Table
Koo

ಬೆಂಗಳೂರು: ಭಾನುವಾರ ನಡೆದ ಐಪಿಎಲ್​ನ ಡಬಲ್​ ಹೆಡರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ಗುಜರಾತ್(Gujarat Titans)​ ವಿರುದ್ಧ ಗೆಲುವು ಸಾಧಿಸಿದರೆ, ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಬಲಿಷ್ಠ ಸನ್​ರೈಸರ್ಸ್(Sunrisers Hyderabad)​ ವಿರುದ್ಧ ಅಮೋಘ ಗೆಲುವು ಸಾಧಿಸಿತು. ಆರ್​ಸಿಬಿ(Royal Challengers Bengaluru) ಗೆದ್ದರೂ ಈ ತಂಡಕ್ಕೆ ಯಾವುದೇ ಲಾಭವಾಗಲಿಲ್ಲ. ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನದಲ್ಲೇ ಮುಂದುವರಿಯಿತು. ಆದರೆ, ಚೆನ್ನೈ ತಂಡದ ಗೆಲುವಿನಿಂದ ಲಕ್ನೋ, ಹೈದರಾಬಾದ್​ ಮತ್ತು ಡೆಲ್ಲಿ ತಂಡಗಳು ತಲಾ ಒಂದು ಸ್ಥಾನ ಕುಸಿತ ಕಂಡಿತು.

ಚೆನ್ನೈ ತಂಡ ಈ ಪಂದ್ಯಕ್ಕೂ ಮುನ್ನ 6ನೇ ಸ್ಥಾನಿಯಾಗಿತ್ತು. ಗೆಲುವಿನೊಂದಿಗೆ ಮೂರು ಸ್ಥಾನಗಳ ಜಿಗಿತ ಕಂಡು ಮೂರನೇ ಸ್ಥಾನಕ್ಕೇರಿದೆ. ಮೂರನೇ ಸ್ಥಾನದಲ್ಲಿದ್ದ ಹೈದರಾಬಾದ್​ 4ನೇ ಸ್ಥಾನಕ್ಕೆ, 4ನೇ ಸ್ಥಾನದಲ್ಲಿದ್ದ ಲಕ್ನೋ 5ಕ್ಕೆ, 5ನೇ ಸ್ಥಾನದಲ್ಲಿದ್ದ ಡೆಲ್ಲಿ 6ನೇ ಸ್ಥಾನಕ್ಕೆ ಕುಸಿಯಿತು. ಆರ್​ಸಿಬಿ ವಿರುದ್ಧ ಸೋತರೂ ಕೂಡ ಗುಜರಾತ್​ 7ನೇ ಸ್ಥಾನದಲ್ಲೇ ಮುಂದುವರಿದಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​85310 (+0.972)
ಚೆನ್ನೈ​​95410 (+0.810)
ಹೈದರಾಬಾದ್​95410 (+0.075)
ಲಕ್ನೋ95410 (+0.059)
ಡೆಲ್ಲಿ105510 (-0.276)
ಗುಜರಾತ್​10468 (-1.113)
ಪಂಜಾಬ್9368 (-0.187)
ಮುಂಬೈ9366 (-0.261)
ಆರ್​ಸಿಬಿ10376 (-0.415)

ಚೆನ್ನೈಗೆ ಅಮೋಘ ಗೆಲುವು


ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಐಪಿಎಲ್​(IPL 2024) ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಚೆನ್ನೈ(Chennai Super Kings) ತಂಡ ನಾಯಕ ಋತುರಾಜ್​ ಗಾಯಕ್ವಾಡ್​, ಡೇರಿಯಲ್​ ಮಿಚೆಲ್​ ಮತ್ತು ಶಿವಂ ದುಬೆ ಅವರ ಆಕ್ರಮಣಕಾರಿ ಬ್ಯಾಟಿಂಗ್​ ಸಾಹಸದಿಂದ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ ನಷ್ಟಕ್ಕೆ 212 ರನ್​ ಬಾರಿಸಿತು. ಈ ಹಿಂದಿನ ಪಂದ್ಯಗಳಲ್ಲಿ ಸಲೀಸಾಗಿ ಮೂರು ಬಾರಿ 250ರ ಗಡಿ ದಾಟಿದ್ದ ಸನ್​ರೈಸರ್ಸ್​ ತಂಡಕ್ಕೆ ಈ ಮೊತ್ತ ಎಲ್ಲಿಂದಲೂ ಸಾಲದು ಎಂದು ನಿರೀಕ್ಷೆ ಮಾಡಿದ್ದವರಿಗೆ ಚೆನ್ನೈ ತಂಡದ ಮಧ್ಯಮ ವೇಗಿ ತುಷಾರ್​ ದೇಶ್​ಪಾಂಡೆ ಘಾತಕ ಸ್ಫೆಲ್ ಮೂಲಕ ಕಟ್ಟಿಹಾಕಿದರು. ಅಂತಿಮವಾಗಿ ಹೈದರಾಬಾದ್​ 18.5 ಓವರ್​ಗಳಲ್ಲಿ 134 ರನ್​ಗೆ ಸರ್ವಪತನ ಕಂಡು ಹೀನಾಯವಾಗಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

ಆರ್​ಸಿಬಿಗೆ 9 ವಿಕೆಟ್​ ಗೆಲುವು

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಗುಜರಾತ್​ ಟೈಟಾನ್ಸ್​ ಸಾಯಿ ಸುದರ್ಶನ್​(84*) ಮತ್ತು ಶಾರೂಖ್​ ಖಾನ್​(58) ಅರ್ಧಶತಕದ ಉಪಯುಕ್ತ ಬ್ಯಾಟಿಂಗ್​ ನೆರವಿನಿಂದ 20 ಓವರ್​ಗೆ 3 ವಿಕೆಟ್​ ಕಳೆದುಕೊಂಡು ಭರ್ತಿ 200 ರನ್​ ಪೇರಿಸಿತು. ಜವಾಬಿತ್ತ ಆರ್​ಸಿಬಿ ಫುಲ್​ ಬ್ಯಾಟಿಂಗ್​ ಜೋಶ್​ನೊಂದಿಗೆ ಕೇವಲ 16 ಓವರ್​ಗಳಲ್ಲಿ 1 ವಿಕೆಟ್​ನಷ್ಟಕ್ಕೆ 206 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

Continue Reading

ಪ್ರಮುಖ ಸುದ್ದಿ

Virat kohli : ಕಾಮೆಂಟ್ರಿ ಬಾಕ್ಸ್​​ನಲ್ಲಿ ಕುಳಿತು ವಿಮರ್ಶೆ ಮಾಡುವುದು ಸುಲಭ; ಕೊಹ್ಲಿ ತಿರುಗೇಟು ಕೊಟ್ಟಿದ್ದು ಯಾರಿಗೆ?

Virat kohli: ಮಾತನಾಡುವವರು ಕೂಡ ತಂಡಕ್ಕಾಗಿ ಆಡಿದವರೇ ಆಗಿದ್ದಾರೆ. ಅವರು ಪಂದ್ಯಗಳನ್ನು ಗೆದ್ದಿದ್ದಾರೆ. ನೀವು ಸ್ವತಃ ಆ ಪರಿಸ್ಥಿತಿಯಲ್ಲಿಲ್ಲದಿದ್ದರೆ ಏನು ಮಾಡುತ್ತಿರಿ. ಕಾಮೆಂಟ್​ ಬಾಕ್ಸ್​ನಲ್ಲಿ ಕುಳಿತು ಆಟದ ಬಗ್ಗೆ ಮಾತನಾಡುವುದು ಸುಲಭವಲ್ಲ ಎಂದು ಹೇಳಿದರು.

VISTARANEWS.COM


on

Virat kohli
Koo

ಅಹ್ಮದಾಬಾದ್: ಗುಜರಾತ್ ವಿರುದ್ಧದ ಪಂದ್ಯದಲ್ಲಿ 44 ಎಸೆತಗಳಲ್ಲಿ 70 ರನ್ ಬಾರಿಸಿದ ವಿರಾಟ್ ಕೊಹ್ಲಿ (Virat kohli) ಆರ್​ಸಿಬಿಗೆ 9 ವಿಕೆಟ್​​ಗಳ ಭರ್ಜರಿ ಜಯಕ್ಕೆ ಕಾರಣರಾಗಿದ್ದಾರೆ. ವಿಲ್​ ಜಾಕ್ಸ್​​ ಜತೆಗಿನ 166 ರನ್​​ಗಳ ಜೊತೆಯಾಟದಲ್ಲಿ ಕೊಹ್ಲಿ 3 ಸಿಕ್ಸರ್ ಮತ್ತು 6 ಬೌಂಡರಿಗಳನ್ನು ಬಾರಿಸಿದರು, ವಿಲ್ ಜಾಕ್ಸ್ 41 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿದ್ದಾರೆ. ಆರ್​​ಸಿಬಿ ಕೇವಲ 16 ಓವರ್​ಗಳಲ್ಲಿ 201 ರನ್​ಗಳ ಗುರಿ ಬೆನ್ನಟ್ಟಿತು.

“ಇದು ಆಶ್ಚರ್ಯಕರ ವಿಚಾರ. ಸ್ಟ್ರೈಕ್ ರೇಟ್ ಕಡಿಮೆ ಮತ್ತು ನಾನು ಸ್ಪಿನ್ ಬೌಲಿಂಗ್​ಗೆ ಚೆನ್ನಾಗಿ ಆಡದಿರುವ ಬಗ್ಗೆ ಎಲ್ಲರೂ ಮಾತನಾಡಲು ಇಷ್ಟಪಡುತ್ತಾರೆ ಎಂದು ನಾನು ಭಾವಿಸುತ್ತೇನೆ. ಆದರೆ ನನಗೆ ತಂಡಕ್ಕಾಗಿ ಪಂದ್ಯ ಗೆಲ್ಲುವುದು ಪ್ರಮುಖ. ನಾನು 15 ವರ್ಷಗಳಿಂದ ಇದನ್ನು ಮಾಡಲು ಒಂದು ಕಾರಣವಿದೆ” ಎಂದು ವಿರಾಟ್ ಕೊಹ್ಲಿ ಗುಜರಾತ್ ವಿರುದ್ಧದ ಪಂದ್ಯದ ಗೆಲುವಿನ ನಂತರ ಹೇಳಿದರು.

ಮಾತನಾಡುವವರು ಕೂಡ ತಂಡಕ್ಕಾಗಿ ಆಡಿದವರೇ ಆಗಿದ್ದಾರೆ. ಅವರು ಪಂದ್ಯಗಳನ್ನು ಗೆದ್ದಿದ್ದಾರೆ. ನೀವು ಸ್ವತಃ ಆ ಪರಿಸ್ಥಿತಿಯಲ್ಲಿಲ್ಲದಿದ್ದರೆ ಏನು ಮಾಡುತ್ತಿರಿ. ಕಾಮೆಂಟ್​ ಬಾಕ್ಸ್​ನಲ್ಲಿ ಕುಳಿತು ಆಟದ ಬಗ್ಗೆ ಮಾತನಾಡುವುದು ಸುಲಭವಲ್ಲ ಎಂದು ಹೇಳಿದರು.

ಇದು ಒಂದೇ ವಿಷಯ ಎಂದು ನಾನು ಭಾವಿಸುವುದಿಲ್ಲ. ಇದು ತಂಡಕ್ಕಾಗಿ ಆಡುವ ಬಗ್ಗೆ. ಜನರು ಕುಳಿತು ತಮ್ಮದೇ ಆದ ಆಲೋಚನೆಗಳು ಮತ್ತು ಊಹೆಗಳ ಬಗ್ಗೆ ಮಾತನಾಡಬಹುದು. ಆದರೆ ಹಗಲು ರಾತ್ರಿ ತಂಡಕ್ಕೆ ಕೆಲಸ ಮಾಡಿದವರಿಗೆ ಎಲ್ಲವೂ ತಿಳಿದಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: MS Dhoni : ಐಪಿಎಲ್​ನಲ್ಲಿ 150 ಪಂದ್ಯಗಳನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರರಾದ ಧೋನಿ; ಅವರ ಬಳಿಕ ಯಾರಿದ್ದಾರೆ?

ಕಳೆದ ವಾರ ಎಸ್​​ಆರ್​ಎಚ್​​ ​​ವಿರುದ್ಧ ಆರ್​ಸಿಬಿ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಅವರ ಸ್ಟ್ರೈಕ್ ರೇಟ್​​ಗಾಗಿ ಪ್ರಶ್ನಿಸಲಾಗಿತ್ತು. ಮಯಾಂಕ್ ಮಾರ್ಕಂಡೆ ಮತ್ತು ಶಹಬಾಜ್ ಅಹ್ಮದ್ ಅವರಂತಹ ಸ್ಪಿನ್​ ಬೌಲರ್​ ವಿರುದ್ಧ ಹೋರಾಡಿದ ಕೊಹ್ಲಿ 43 ಎಸೆತಗಳಲ್ಲಿ ಕೇವಲ 51 ರನ್ ಗಳಿಸಿದ್ದರು.

ಟೀಕಾಕಾರರು ತಪ್ಪು ಎಂದ ಕೊಹ್ಲಿ

ಭಾನುವಾರ, ವಿರಾಟ್ ಕೊಹ್ಲಿ ಪವರ್​ಪ್ಲೇನ್​ನಲ್ಲಿ ಸ್ಪಿನ್ನರ್​​ಗಳನ್ನು ಎದುರಿಸಲು ಪ್ರಯತ್ನ ಮಾಡಿದರು. ಅವರು ಗುಜರಾತ್ ಬೌಲಿಂಗ್ ದಾಳಿಯನ್ನು ಕೈಗೆತ್ತಿಕೊಂಡರು. ಆರ್ ಸಾಯಿ ಕಿಶೋರ್ ಅವರಿಗೆ ಎರಡು ಸಿಕ್ಸರ್​ ಬಾರಿಸಿದರು. ಪವರ್​ ಪ್ಲೇ ಓವರ್​ಗಳ ನಂತರ ಸ್ಪಿನ್ ವಿರುದ್ಧ ನಿಧಾನವಾಗಿ ಆಡಿದರು. ಈ ರೀತಿಯ ನಿಧಾನಗತಿಯ ಆಟಕ್ಕಾಗಿ ಅವರು ಕೊಹ್ಲಿ ಆಗಾಗ್ಗೆ ಟೀಕೆಗಳನ್ನು ಎದುರಿಸಿದ್ದಾರೆ. ಆದರೆ ಅವರು ಅಫ್ಘಾನ್ ಸ್ಪಿನ್ ಜೋಡಿ ರಶೀದ್ ಖಾನ್ ಮತ್ತು ನೂರ್ ಅಹ್ಮದ್ ಅವರನ್ನು ಸೋಲಿಸುವ ಮೂಲಕ ತಮ್ಮ ಟೀಕಾಕಾರರು ತಪ್ಪು ಎಂದು ಸಾಬೀತುಪಡಿಸಿದರು.

ಕೇವಲ 32 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ನಂತರ ಕೊಹ್ಲಿ ಉತ್ಸಾಹದಿಂದ ಆಡಿದರು. ವಿಲ್ ಜಾಕ್ಸ್ ಸಿಕ್ಸರ್ ಬಾರಿಸಲು ಆರಂಭಿಸಿದಾಗ ವಿರಾಟ್​ ಕೊಹ್ಲಿ ನಿಧಾನವಾಗಿ ಆಡಿದರು. ಐಪಿಎಲ್ 2024 ರಲ್ಲಿ ಕೊಹ್ಲಿ 10 ಇನ್ನಿಂಗ್ಸ್​ಗಳಲ್ಲಿ 500 ರನ್ ಗಳಿಸಿದ್ದಾರೆ. ಆರೆಂಜ್ ಕ್ಯಾಪ್ ಪಡೆದಿರುವ ಅವರು ಈ ಋತುವಿನಲ್ಲಿ 147 ಸ್ಟ್ರೈಕ್ ರೇಟ್ ಹೊಂದಿದ್ದಾರೆ

Continue Reading
Advertisement
Cleric
ದೇಶ9 mins ago

Cleric: ಮಸೀದಿಯಲ್ಲಿ ಮಲಗಿದ್ದ 30 ವರ್ಷದ ಮೌಲ್ವಿಯನ್ನು ಬಡಿದು ಕೊಂದರು; ಹತ್ಯೆಗೆ ಕಾರಣ?

Congress fears defeat over EVMs Congress will not win a single seat in Karnataka says PM Narendra Modi
ರಾಜಕೀಯ9 mins ago

Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

T20 World Cup 2024
ಕ್ರೀಡೆ19 mins ago

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

Revanth Reddy
ದೇಶ27 mins ago

Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Prajwal Revanna Hassan Pen Drive Case What will SIT probe look like
ಕ್ರೈಂ31 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Drown in Mekedatu
ಕರ್ನಾಟಕ41 mins ago

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಬೆಂಗಳೂರಿನ ಐವರು ಪ್ರವಾಸಿಗರ ಸಾವು

T20 World Cup 2024
ಕ್ರೀಡೆ48 mins ago

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

S M Krishna
ಕರ್ನಾಟಕ1 hour ago

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ವೈರಲ್ ನ್ಯೂಸ್1 hour ago

Viral Video: ಪಾಪಿ ಮಗನಿಂದ ತಂದೆ ಮೇಲೆ ಇದೆಂಥಾ ಕ್ರೌರ್ಯ! ವಿಡಿಯೋ ನೋಡಿ

WhatsApp Exit India facebook instagram
ಪ್ರಮುಖ ಸುದ್ದಿ1 hour ago

WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20243 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202424 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌