Swiggy lays off : ಸ್ವಿಗ್ಗಿಯಲ್ಲಿ ಸಾಮೂಹಿಕ ಉದ್ಯೋಗ ಕಡಿತ, 380 ಉದ್ಯೋಗಿಗಳಿಗೆ ಗೇಟ್‌ಪಾಸ್ - Vistara News

ಪ್ರಮುಖ ಸುದ್ದಿ

Swiggy lays off : ಸ್ವಿಗ್ಗಿಯಲ್ಲಿ ಸಾಮೂಹಿಕ ಉದ್ಯೋಗ ಕಡಿತ, 380 ಉದ್ಯೋಗಿಗಳಿಗೆ ಗೇಟ್‌ಪಾಸ್

ಆನ್‌ಲೈನ್‌ ಆಹಾರ ವಲಯದ ಸ್ವಿಗ್ಗಿಯಲ್ಲಿ 380 ಉದ್ಯೋಗಿಗಳಿಗೆ ಪಿಂಕ್‌ ಸ್ಲಿಪ್‌ ನೀಡಲಾಗಿದೆ. ಸ್ಟಾರ್ಟಪ್‌ಗಳಲ್ಲಿ ಉದ್ಯೋಗ ನಷ್ಟದ ಸರದಿಗೆ ಇದೀಗ ಸ್ವಿಗ್ಗಿಯ (Swiggy lays off) ಬೆಳವಣಿಗೆ ಸೇರಿದೆ.

VISTARANEWS.COM


on

swiggy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆನ್‌ಲೈನ್‌ ಆಹಾರ ವಲಯದ ಸ್ವಿಗ್ಗಿಯಲ್ಲಿ 380 ಉದ್ಯೋಗಿಗಳನ್ನು (Swiggy lays off) ವಜಾಗೊಳಿಸಲಾಗಿದೆ.

ಸ್ವಿಗ್ಗಿಯಲ್ಲಿ 6,000 ಸಿಬ್ಬಂದಿಯಿದ್ದು, ಅದರಲ್ಲಿ 3 ಪರ್ಸೆಂಟ್‌ನಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಉದ್ಯೋಗ ಕಡಿತದ ಬಗ್ಗೆ ಶುಕ್ರವಾರ ಸಿಬ್ಬಂದಿಗೆ ತಿಳಿಸಲಾಗಿದೆ. ಸ್ಟಾರ್ಟಪ್‌ ಕ್ಷೇತ್ರದಲ್ಲಿ ಉದ್ಯೋಗ ನಷ್ಟವನ್ನು ಇದು ಬಿಂಬಿಸಿದೆ.

ಕಂಪನಿಯ ಪುನಾರಚನೆಯ ಭಾಗವಾಗಿ ಉದ್ಯೋಗ ಕಡಿತದ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ವಿಗ್ಗಿ ಸ್ಥಾಪಕ ಮತ್ತು ಸಿಇಒ ಶ್ರೀಹರ್ಷ ಮೆಜೆಟಿ ತಿಳಿಸಿದ್ದಾರೆ. ಉದ್ಯೋಗ ಕಳೆದುಕೊಳ್ಳಲಿರುವ ಸಿಬ್ಬಂದಿಗೆ 3ರಿಂದ 6 ತಿಂಗಳಿನ ವೇತನವನ್ನು ಪರಿಹಾರವಾಗಿ ನೀಡಲಾಗುವುದು ಎಂದು ಕಂಪನಿ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

MS Dhoni : ಮಹೇಂದ್ರ ಸಿಂಗ್​ ಧೋನಿಗೆ ಗಾಯ, ಆಂತರಿಕ ಮಾಹಿತಿ ಬಹಿರಂಗ

MS Dhoni: ‘ಯೆಲ್ಲೊ ಆರ್ಮಿ’ ಗೆ ಪೂರಕವಾಗಿರದ ವಿಷಯವೆಂದರೆ ಗಾಯದ ಸಮಸ್ಯೆಗಳು. ಋತುರಾಜ್​ ನೇತೃತ್ವದ ಶಿಬಿರವು ಈ ಋತುವಿನಲ್ಲಿ ಗಾಯಗಳ ಸರಮಾಲೆಯನ್ನು ಎದುರಿಸುತ್ತಿದೆ. ಪಂದ್ಯಾವಳಿಯ ಆರಂಭಿಕ ಹಂತದಲ್ಲಿ, ಅವರು ಗಾಯಗೊಂಡ ಡೆವೊನ್ ಕಾನ್ವೇ ಅವರನ್ನು ಕಳೆದುಕೊಂಡಿದ್ದರು. ನಂತರ ದೀಪಕ್ ಚಾಹರ್, ಮಥೀಶಾ ಪತಿರಾನಾ ಅವರ ಸೇವೆಯಿಂದ ವಂಚಿತವಾಯಿತು.

VISTARANEWS.COM


on

MS Dhoni
Koo

ಚೆನ್ನೈ: ಹೊಸ ನಾಯಕ ಋತುರಾಜ್ ಗಾಯಕ್ವಾಡ್ ಅವರ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಪ್ರಶಂಸನೀಯ ಅಭಿಯಾನ ನಡೆಸುತ್ತಿದೆ. ತಂಡವು ಹನ್ನೊಂದು ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆದ್ದಿದೆ ಮತ್ತು 12 ಅಂಕಗಳೊಂದಿಗೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಪ್ಲೇಆಫ್​ಗೆ ಪ್ರವೇಶ ಪಡೆಯುವ ಎಲ್ಲ ಅವಕಾಶಗಳನ್ನು ಹೊಂದಿದೆ. ಆದರೆ, ಧೋನಿಗೂ (MS Dhoni) ಗಾಯವಾಗಿದೆ ಎಂಬ ವಿಚಾರ ಆ ಬಳಗವನ್ನು ಆತಂಕ್ಕೆ ತಳ್ಳಿದೆ.

‘ಯೆಲ್ಲೊ ಆರ್ಮಿ’ ಗೆ ಪೂರಕವಾಗಿರದ ವಿಷಯವೆಂದರೆ ಗಾಯದ ಸಮಸ್ಯೆಗಳು. ಋತುರಾಜ್​ ನೇತೃತ್ವದ ಶಿಬಿರವು ಈ ಋತುವಿನಲ್ಲಿ ಗಾಯಗಳ ಸರಮಾಲೆಯನ್ನು ಎದುರಿಸುತ್ತಿದೆ. ಪಂದ್ಯಾವಳಿಯ ಆರಂಭಿಕ ಹಂತದಲ್ಲಿ, ಅವರು ಗಾಯಗೊಂಡ ಡೆವೊನ್ ಕಾನ್ವೇ ಅವರನ್ನು ಕಳೆದುಕೊಂಡಿದ್ದರು. ನಂತರ ದೀಪಕ್ ಚಾಹರ್, ಮಥೀಶಾ ಪತಿರಾನಾ ಅವರ ಸೇವೆಯಿಂದ ವಂಚಿತವಾಯಿತು. ಬಳಿಕ ಮುಸ್ತಾಫಿಜುರ್ ರಹಮಾನ್ ಪಂದ್ಯಾವಳಿಯ ಎರಡನೇ ಹಂತದಲ್ಲಿ ಗಾಯದಿಂದಾಗಿ ಐಪಿಎಲ್ 2024 ರಿಂದ ಹೊರಗುಳಿದಿದ್ದರು. ನಂತರ ತಂಡಕ್ಕೆ ಪ್ರವೇಶ ಪಡೆದರೂ ರಾಷ್ಟ್ರೀಯ ಬದ್ಧತೆಗಾಗಿ ತವರಿಗೆ ಮರಳಿದ್ದರು.

ಮಹತ್ವದ ಬೆಳವಣಿಗೆಯೊಂದರಲ್ಲಿ, ಎಂಎಸ್ ಧೋನಿ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಸಮಯದಲ್ಲಿ ಸ್ವಲ್ಪ ಸಮಯದವರೆಗೆ ಗಾಯವನ್ನು ಎದುರಿಸಿದರು. ಆದರೆ ಲೆಜೆಂಡರಿ ಕ್ರಿಕೆಟಿಗ ಆಟವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ ಮತ್ತು ವಿರಾಮ ತೆಗೆದುಕೊಳ್ಳದಿರಲು ನಿರ್ಧರಿಸಿದ್ದಾರೆ ಎಂಬುದಾಗಿ ವರದಿಯಾಗಿದೆ.

ಧೋನಿಗೆ ಆಗಿರುವ ಗಾಯದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ವೈದ್ಯರು ಧೋನಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂಬುದಾಗಿ ಹೇಳಲಾಗಿದೆ. ಸಿಎಸ್​ಕೆ ಮಾಜಿ ನಾಯಕನಿಗೆ ಐಪಿಎಲ್​​ನಿಂದ ವಿರಾಮ ತೆಗೆದುಕೊಳ್ಳಲು ಬಯಸಿಲ್ಲ. , ಬದಲಿಗೆ, ಪಂದ್ಯಾವಳಿಯ ಉಳಿದ ಭಾಗಕ್ಕೆ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಲು ಅವರು ಔಷಧಗಳ ಮೂಲಕ ನೋವಿನಿಂದ ಮುಕ್ತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಆಟಕ್ಕೆ ಬದ್ಧತೆ

ಎಂಎಸ್ ಧೋನಿ ಗಾಯವನ್ನು ಎದುರಿಸುವ ಬದಲು ತಮ್ಮ ಆಟ ಮುಂದುವರಿಸಲು ಬಯಸುತ್ತಾರೆ ಎಂದು
ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಸಿಎಸ್​ಕೆ ಮಾಜಿ ನಾಯಕ ಈ ಪ್ರಸ್ತುತ ಐಪಿಎಲ್ ಋತುವಿನಲ್ಲಿ ಈ ಗಾಯವನ್ನು ಎದುರಿಸಿದ್ದಾರೆ. ಆದರೆ ದಂತಕಥೆ ನೋವಿನ ನಡುವೆಯೂ ಆಡಲು ಹಠಮಾರಿ ಮತ್ತು ದೃಢನಿಶ್ಚಯ ತೆಗೆದುಕೊಂಡಿರುವುದು ಅಚ್ಚರಿ.

ಇದನ್ನೂ ಓದಿ: ICC Ban : ಮ್ಯಾಚ್​ ಫಿಕಿ ವೆಸ್ಟ್ ಇಂಡೀಸ್​ ಆಟಗಾರನಿಗೆ ಐದು ವರ್ಷ ಬ್ಯಾನ್​

ಐಪಿಎಲ್ ಪ್ರಾರಂಭವಾದಾಗಿನಿಂದ ಎಂಎಸ್ ಧೋನಿ ಚರ್ಚೆಯ ವಿಷಯವಾಗಿದ್ದಾರೆ. ಈ ಆಟಗಾರ ಕೆಲವೊಂದು ಬಾರಿ ಗಮನಾರ್ಹ ಫಾರ್ಮ್​ ತೋರಿದ್ದಾರೆ. ಆದರೆ ತೀರಾ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬರುತ್ತಿದ್ದಾರೆ. ಇತ್ತೀಚೆಗೆ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಧೋನಿ 9 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದರು.

ಈ ಕ್ರಮವನ್ನು ಭಾರತದ ಮಾಜಿ ಕ್ರಿಕೆಟಿಗರು ತೀವ್ರವಾಗಿ ಟೀಕಿಸಿದರು. ಎಂಎಸ್ ಧೋನಿ ಅವರ ಬ್ಯಾಟಿಂಗ್ ಕ್ರಮಾಂಕವು ಸಿಎಸ್​ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿಲ್ಲ ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ. ಹರ್ಭಜನ್ ಸಿಂಗ್ ಸಿಎಸ್​ಕೆ ಹೆಚ್ಚುವರಿ ಬ್ಯಾಟರ್​​ ಮೂಲಕ ಆಡಬಹುದು ಎಂದು ಸಲಹೆ ನೀಡಿದೆ.

ಧೋನಿಯು ಅನುಭವಿಸುತ್ತಿರುವ ಗಾಯದ ಬಗ್ಗೆ ನಿಜವಾದ ವಿಚಾರ ಯಾರಿಗೂ ತಿಳಿದಿರಲಿಲ್ಲ. ಸಿಎಸ್ಕೆ ಮಾಜಿ ನಾಯಕ 11 ಪಂದ್ಯಗಳಲ್ಲಿ 224.49 ಸ್ಟ್ರೈಕ್ ರೇಟ್ನೊಂದಿಗೆ 110 ರನ್ ಗಳಿಸಿದ್ದಾರೆ.

Continue Reading

ಕರ್ನಾಟಕ

Lok Sabha Election 2024: ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?

Lok Sabha Election 2024: ರಾಜ್ಯದ 14 ಕ್ಷೇತ್ರಗಳಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆವರೆಗೆ ಚಿಕ್ಕೋಡಿ ಕ್ಷೇತ್ರದಲ್ಲಿ ಗರಿಷ್ಠ ಶೇ.59.65 ಮತದಾನವಾಗಿದ್ದು, ಕಲಬುರಗಿಯಲ್ಲಿ ಕನಿಷ್ಠ ಶೇ.47.67 ವೋಟಿಂಗ್‌ ಆಗಿದೆ.

VISTARANEWS.COM


on

Lok Sabha Election 2024
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕುರ್ವೆಯ ಮೋಹನ್ ಮತ್ತು ಸವಿತಾ ದಂಪತಿ ಸ್ವಂತ ದೋಣಿಯ ಮೂಲಕ ದಂಡೆಭಾಗದ ಶಾಲೆ ಮತಗಟ್ಟೆಗೆ ತೆರಳಿ ಸಂತಸದಿಂದ ಮತ ಚಲಾಯಿಸಿದರು.
Koo

ಬೆಂಗಳೂರು: ರಾಜ್ಯದಲ್ಲಿ ಬೆಳಗಾವಿ ಸೇರಿ 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ (lok sabha election 2024) ಮಂಗಳವಾರ ನಡೆಯುತ್ತಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಧ್ಯಾಹ್ನ 3ಗಂಟೆವರೆಗೆ ಅಂದಾಜು ಶೇ.54.20 ಮತದಾರರು (Voter Turnout) ಹಕ್ಕು ಚಲಾಯಿಸಿದ್ದಾರೆ. ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ಎಂಬ ಮಾಹಿತಿ ಇಲ್ಲಿದೆ.

14 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದ ಮತದಾನ ಸಂಜೆ 6ಗಂಟೆವರೆಗೆ ನಡೆಯಲಿದೆ. ಬೆಳಗ್ಗೆ ಮೊದಲ ಎರಡು ಗಂಟೆಗಳಲ್ಲಿ ಅಂದರೆ 9 ಗಂಟೆವರೆಗೆ ಶೇ.9.45% ಮತದಾನ ದಾಖಲಾಗಿತ್ತು. ಬಳಿಕ 11 ಗಂಟೆಗೆ ಶೇ.24.48 ಹಾಗೂ 1 ಗಂಟೆವರೆಗೆ ಶೇ.41.59 ಮತದಾನ ವರದಿಯಾಗಿತ್ತು. ಅದೇ ರೀತಿ ಮಧ್ಯಾಹ್ನ 3ಗಂಟೆವರೆಗೆ ಶೇ.54.20 ವೋಟಿಂಗ್‌ ನಡೆದಿದೆ. ಚಿಕ್ಕೋಡಿ ಕ್ಷೇತ್ರದಲ್ಲಿ ಗರಿಷ್ಠ ಶೇ.59.65 ಮತದಾನವಾಗಿದ್ದು, ಕಲಬುರಗಿಯಲ್ಲಿ ಕನಿಷ್ಠ ಶೇ.47.67 ವೋಟಿಂಗ್‌ ಆಗಿದೆ.

ಕ್ಷೇತ್ರವಾರು ಮತದಾನ ಮಾಹಿತಿ

ಬಾಗಲಕೋಟೆ- ಶೇ. 54.95
ಬೆಳಗಾವಿ- ಶೇ.53.85
ಬಳ್ಳಾರಿ-ಶೇ.56.76
ಬೀದರ್-‌ ಶೇ. 49.89
ವಿಜಯಪುರ-ಶೇ.49.88
ಚಿಕ್ಕೋಡಿ-ಶೇ. 59.65
ದಾವಣಗೆರೆ- ಶೇ. 57.31
ಧಾರವಾಡ- ಶೇ. 55
ಕಲಬುರಗಿ-ಶೇ.47.67
ಹಾವೇರಿ-ಶೇ. 58.45
ಕೊಪ್ಪಳ- ಶೇ. 55.06
ರಾಯಚೂರು-ಶೇ.49.49
ಶಿವಮೊಗ್ಗ-ಶೇ.57.96
ಉತ್ತರ ಕನ್ನಡ-ಶೇ.55.98

ಇದನ್ನೂ ಓದಿ | Lok Sabha Election 2024: ಮತ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ

Continue Reading

ದೇಶ

ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

ಎಎನ್‌ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಲಾಲು ಪ್ರಸಾದ್‌ ಯಾದವ್‌, “ಮುಸ್ಲಿಮರಿಗೆ ಮೀಸಲಾತಿ ಸಿಗಬೇಕು. ಅದರಲ್ಲೂ, ಎಲ್ಲ ಮೀಸಲಾತಿಯೂ ಮುಸ್ಲಿಮರಿಗೆ ಸಿಗಬೇಕು” ಎಂದು ಹೇಳಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತಿರುಗೇಟು ನೀಡಿದ್ದಾರೆ. ಲಾಲು ಪ್ರಸಾದ್‌ ಯಾದವ್‌ ಹೇಳಿದ್ದೇನು? ಮೋದಿ ಕುಟುಕಿದ್ದು ಹೇಗೆ? ಇಲ್ಲಿದೆ ವಿವರ.

VISTARANEWS.COM


on

Lalu Prasad Yadav
Koo

ಪಟನಾ: ಲೋಕಸಭೆ ಚುನಾವಣೆ (Lok Sabha Election) ಪ್ರಚಾರದ ಭರಾಟೆಯ ಜತೆಗೆ ರಾಜಕೀಯ ನಾಯಕರು ಪ್ರಸ್ತಾಪಿಸುತ್ತಿರುವ ವಿಷಯಗಳು ಕೂಡ ಸಾರ್ವಜನಿಕವಾಗಿ ಭಾರಿ ಚರ್ಚೆ, ವಿವಾದ, ಟೀಕೆಗಳಿಗೆ ಗುರಿಯಾಗುತ್ತಿವೆ. ಅದರಲ್ಲೂ, ಮುಸ್ಲಿಂ ಮೀಸಲಾತಿಯು (Muslim Reservation) ಪ್ರಮುಖ ವಿಷಯವಾಗಿದ್ದು, ಒಬಿಸಿ ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡುವುದಿಲ್ಲ ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಇದರ ಬೆನ್ನಲ್ಲೇ, “ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ನೀಡಬೇಕು” ಎಂದು ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ (Lalu Prasad Yadav) ಹೇಳಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.

ಎಎನ್‌ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಲಾಲು ಪ್ರಸಾದ್‌ ಯಾದವ್‌, “ಮುಸ್ಲಿಮರಿಗೆ ಮೀಸಲಾತಿ ಸಿಗಬೇಕು. ಅದರಲ್ಲೂ, ಎಲ್ಲ ಮೀಸಲಾತಿಯೂ ಮುಸ್ಲಿಮರಿಗೆ ಸಿಗಬೇಕು” ಎಂದು ಹೇಳಿದ್ದಾರೆ. “ಬಿಹಾರದಲ್ಲಿ ಬಿಜೆಪಿಯನ್ನು ಜನ ದೂರ ಇಟ್ಟಿದ್ದಾರೆ. ಅವರ ಮತಗಳು ಕೂಡ ಆರ್‌ಜೆಡಿಗೇ ಬರುತ್ತವೆ. ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಜಂಗಲ್‌ ರಾಜ್‌ ಆಡಳಿತ ಜಾರಿಗೆ ತರುತ್ತಾರೆ. ಇದರಿಂದಾಗಿ ಅವರನ್ನು ಜನ ನಂಬುತ್ತಿಲ್ಲ” ಎಂದು ಕೂಡ ಲಾಲು ಪ್ರಸಾದ್‌ ಯಾದವ್‌ ಹೇಳಿದ್ದಾರೆ.

ಮೋದಿ ತಿರುಗೇಟು

ಎಲ್ಲ ಮೀಸಲಾತಿ ಮುಸ್ಲಿಮರಿಗೆ ಸಿಗಬೇಕು ಎಂದು ಲಾಲು ಪ್ರಸಾದ್‌ ಯಾದವ್‌ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. “ಇಂಡಿಯಾ ಒಕ್ಕೂಟದ ನಾಯಕರೊಬ್ಬರು ಸಂಪೂರ್ಣ ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಬೇಕು ಎಂದಿದ್ದಾರೆ. ಇವರು ಮೇವು ಹಗರಣದಲ್ಲಿ ನ್ಯಾಯಾಲಯದಿಂದ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಜಾಮೀನು ಪಡೆದು ಹೊರಬಂದಿದ್ದಾರೆ. ಇವರು ಇಂತಹ ಹೇಳಿಕೆ ನೀಡಿದರೂ ಕಾಂಗ್ರೆಸ್‌ ಸುಮ್ಮನಿದೆ ಎಂದರೆ ಇಂಡಿಯಾ ಒಕ್ಕೂಟದ ಆಶಯವೂ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯದವರಿಗೆ (ಮುಸ್ಲಿಮರಿಗೆ) ನೀಡುವುದಾಗಿದೆ” ಎಂದು ಕುಟುಕಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ತೆಲಂಗಾಣದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ್ದ ಮೋದಿ, ಧರ್ಮದ ಆಧಾರದ ಮೇಲೆ ನೀಡುವ ಮೀಸಲಾತಿಯನ್ನು ವಿರೋಧಿಸಿದ್ದರು. “ನಾನು ಬದುಕಿರುವವರೆಗೂ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಸಿಗುತ್ತಿರುವ ಮೀಸಲಾತಿಯ ಪಾಲನ್ನು ಧರ್ಮದ ಆಧಾರದಲ್ಲಿ ಮುಸ್ಲಿಮರಿಗೆ ಕೊಡಲು ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದರು. ಕಾಂಗ್ರೆಸ್​ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದನ್ನು ಪ್ರೇರೇಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Narendra Modi : ನಾನು ಬದುಕಿರುವವರೆಗೂ ಮುಸ್ಲಿಮರಿಗೆ ಧರ್ಮದ ಆಧಾರದ ಮೀಸಲಾತಿ ಇಲ್ಲ ಎಂದ ಮೋದಿ

Continue Reading

ಕ್ರೀಡೆ

ICC Ban : ಮ್ಯಾಚ್​ ಫಿಕಿ ವೆಸ್ಟ್ ಇಂಡೀಸ್​ ಆಟಗಾರನಿಗೆ ಐದು ವರ್ಷ ಬ್ಯಾನ್​

ICC Ban: ಐಸಿಸಿ ಜನರಲ್ ಮ್ಯಾನೇಜರ್ ಅಲೆಕ್ಸ್ ಮಾರ್ಷಲ್ ಸಾರ್ವಜನಿಕ ಹೇಳಿಕೆಯಲ್ಲಿ, ಡೆವೊನ್ ಹಲವಾರು ಭ್ರಷ್ಟಾಚಾರ ವಿರೋಧಿ ಅರಿವು ಮೂಡಿಸುವ ಅಧಿವೇಶನಗಳಲ್ಲಿ ಭಾಗವಹಿಸಿದ್ದರು. ಸಂಹಿತೆಗಳ ಅಡಿಯಲ್ಲಿ ಅವರ ಬಾಧ್ಯತೆಗಳ ಬಗ್ಗೆ ತಿಳಿದಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ವೆಸ್ಟ್ ಇಂಡೀಸ್ ಕ್ರಿಕೆಟಿಗ ಡೆವೊನ್ ಥಾಮಸ್ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC Ban) ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ಐದು ವರ್ಷಗಳ ನಿಷೇಧ ಹೇರಿದೆ. ಕೆಲವು ಪ್ರಮುಖ ಟಿ 20 ಫ್ರ್ಯಾಂಚೈಸ್ ಲೀಗ್​​ಗಳ ಭ್ರಷ್ಟಾಚಾರ ವಿರೋಧಿ ಸಂಹಿತೆಗಳ ಏಳು ಸಂಹಿತೆಗಳನ್ನು ಉಲ್ಲಂಘಿಸಲು 34 ವರ್ಷದ ಆಟಗಾರ ಒಪ್ಪಿಕೊಂಡ ನಂತರ ಮೇ 2 ರಂದು ಉನ್ನತ ಸಂಸ್ಥೆ ತನ್ನ ನಿರ್ಧಾರ ದೃಢಪಡಿಸಿದೆ.

ಐಸಿಸಿ ಜನರಲ್ ಮ್ಯಾನೇಜರ್ ಅಲೆಕ್ಸ್ ಮಾರ್ಷಲ್ ಸಾರ್ವಜನಿಕ ಹೇಳಿಕೆಯಲ್ಲಿ, ಡೆವೊನ್ ಹಲವಾರು ಭ್ರಷ್ಟಾಚಾರ ವಿರೋಧಿ ಅರಿವು ಮೂಡಿಸುವ ಅಧಿವೇಶನಗಳಲ್ಲಿ ಭಾಗವಹಿಸಿದ್ದರು. ಸಂಹಿತೆಗಳ ಅಡಿಯಲ್ಲಿ ಅವರ ಬಾಧ್ಯತೆಗಳ ಬಗ್ಗೆ ತಿಳಿದಿದ್ದರು. ಆದರೂ ಅವರು ತಪ್ಪು ಮಾಡಿದ್ದಾರೆ ಎಂದು ಹೇಳಿದ್ದಾರೆ. ಲಂಕಾ ಪ್ರೀಮಿಯರ್ ಲೀಗ್ (ಎಲ್​ಪಿಎಲ್), ಅಭಿ ಧಾಬಿ ಟಿ 10 ಮತ್ತು ಕ್ಯಾರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) ಎಂಬ ಮೂರು ವಿಭಿನ್ನ ಫ್ರ್ಯಾಂಚೈಸ್ ಲೀಗ್​​ಗಳ ಕ್ರಿಕೆಟಿಗ ತನ್ನ ಬಾಧ್ಯತೆಗಳನ್ನು ಪೂರೈಸಲು ವಿಫಲರಾಗಿದ್ದಾರೆ ಎಂದು ಮಾರ್ಷಲ್ ದೃಢಪಡಿಸಿದರು.

ಥಾಮಸ್ ಅವರನ್ನು ಎಲ್ಲಾ ರೀತಿಯ ಸ್ಪರ್ಧಾತ್ಮಕ ಕ್ರಿಕೆಟ್​​ನಿಂದ ಐದು ವರ್ಷಗಳ ನಿಷೇಧವನ್ನು ವಿಧಿಸಲಾಗಿದೆ ಎಂದು ಐಸಿಸಿ ಗುರುವಾರ ದೃಢಪಡಿಸಿದೆ. ಆಂಟಿಗುವಾ ಬ್ಯಾಟರ್​ 2009 ರಲ್ಲಿ ಬಾಸೆಟೆರೆಯಲ್ಲಿ ಬಾಂಗ್ಲಾದೇಶ ವಿರುದ್ಧದ ಟಿ 20 ಐ ಪಂದ್ಯದ ಮೂಲಕ ವೆಸ್ಟ್ ಇಂಡೀಸ್ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅವರು ಒಂದು ಟೆಸ್ಟ್, 21 ಏಕದಿನ ಮತ್ತು 12 ಟಿ 20 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ 34 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕೊನೆಯದ್ದು ಡಿಸೆಂಬರ್ 2022 ರಲ್ಲಿ ಅಡಿಲೇಡ್ ಓವಲ್​ನಲ್ಲಿ ನಡೆದಿತ್ತು.

ಇದನ್ನೂ ಓದಿ: India’s Jersey T20 World Cup: ಭಾರತ ತಂಡದ ಹೊಸ ಜೆರ್ಸಿ ಕಂಡು ಟ್ರೋಲ್​ ಮಾಡಿದ ನೆಟ್ಟಿಗರು

ಮೂರು ಫ್ರಾಂಚೈಸಿ ಲೀಗ್​ಗಳ ಮ್ಯಾಚ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದಕ್ಕಾಗಿ ಕ್ರಿಕೆಟಿಗನನ್ನು ಐಸಿಸಿ ಈಗಾಗಲೇ ಮೇ 2023 ರಲ್ಲಿ ಅಮಾನತುಗೊಳಿಸಿತ್ತು. ಎಲ್ಪಿಎಲ್​​ನಲ್ಲಿ 2021 ರ ಆವೃತ್ತಿಯಲ್ಲಿ, ಥಾಮಸ್ ಗಂಭೀರ ಆರೋಪವನ್ನು ಎದುರಿಸಿದ್ದರು.

2021ರ ಅಬುಧಾಬಿ ಟಿ 10 ಲೀಗ್​ನಲ್ಲಿ ಪುಣೆ ಡೆವಿಲ್ಸ್​​ ತಂಡದಲ್ಲಿದ್ದಾಗ ಮಾಡಿದ ವಿಧಾನದ ವಿವರಗಳನ್ನು ವರದಿ ಮಾಡಲು ಅವರು ವಿಫಲರಾಗಿದ್ದಾರೆ.

Continue Reading
Advertisement
MS Dhoni
ಪ್ರಮುಖ ಸುದ್ದಿ6 mins ago

MS Dhoni : ಮಹೇಂದ್ರ ಸಿಂಗ್​ ಧೋನಿಗೆ ಗಾಯ, ಆಂತರಿಕ ಮಾಹಿತಿ ಬಹಿರಂಗ

Lok sabha Election 2024
Lok Sabha Election 20249 mins ago

Lok Sabha Election 2024: ಮತದಾನಕ್ಕೆ ಬಂದು ಇವಿಎಂಗೆ ಬೆಂಕಿ ಹಾಕಿದ ಯುವಕ; ಸುರಪುರದಲ್ಲಿ ಕಲ್ಲು ತೂರಾಟ

Lok Sabha Election 2024
ಕರ್ನಾಟಕ10 mins ago

Lok Sabha Election 2024: ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?

viral news
ಕ್ರೀಡೆ13 mins ago

Viral News: ದೆಹಲಿ To ಗೋವಾ ವಿಮಾನ ಟಿಕೆಟ್​​ ಬೆಲೆಗಿಂತ ದುಬಾರಿ ಟೀಮ್​ ಇಂಡಿಯಾದ ಟಿ20 ವಿಶ್ವಕಪ್​ ಜೆರ್ಸಿ

Met Gala Fashion
ಫ್ಯಾಷನ್13 mins ago

Met Gala Fashion: ಮೆಟ್‌ ಗಾಲಾದಲ್ಲಿ ಹೈಲೈಟಾದ ಭಾರತೀಯ ಫ್ಯಾಷೆನಬಲ್‌ ತಾರೆಯರಿವರು!

Lalu Prasad Yadav
ದೇಶ13 mins ago

ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

IPL 2024
ಕ್ರೀಡೆ28 mins ago

ICC Ban : ಮ್ಯಾಚ್​ ಫಿಕಿ ವೆಸ್ಟ್ ಇಂಡೀಸ್​ ಆಟಗಾರನಿಗೆ ಐದು ವರ್ಷ ಬ್ಯಾನ್​

lok sabha Election 2024
Lok Sabha Election 202432 mins ago

Lok Sabha Election 2024: ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ; ಮತದಾನಕ್ಕೆ ಬಂದು ಟ್ರೀಟ್‌ ಮಾಡಿದ ಡಾಕ್ಟರ್‌

West Bengal
ದೇಶ58 mins ago

West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ59 mins ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ59 mins ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ22 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ23 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ4 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

ಟ್ರೆಂಡಿಂಗ್‌