Actress Abhinaya | `ಹಿಟ್ಲರ್‌ ಕಲ್ಯಾಣ' ಧಾರಾವಾಹಿಯ ಅಭಿನಯಾ ಪಾತ್ರಕ್ಕೆ ಹೊಸ ನಟಿ ಎಂಟ್ರಿ! - Vistara News

ಕಿರುತೆರೆ

Actress Abhinaya | `ಹಿಟ್ಲರ್‌ ಕಲ್ಯಾಣ’ ಧಾರಾವಾಹಿಯ ಅಭಿನಯಾ ಪಾತ್ರಕ್ಕೆ ಹೊಸ ನಟಿ ಎಂಟ್ರಿ!

ನಟಿ ಅಭಿನಯಾ (Actress Abhinaya) ಹಿಟ್ಲರ್‌ ಕಲ್ಯಾಣ ಧಾರಾವಾಹಿಯಿಂದ ಹೊರ ಹೋಗಿದ್ದಾರೆ. ಈ ಘಟನೆ ಆದ ಬಳಿಕ ಧಾರಾವಾಹಿಯಲ್ಲಿ ಅವರ ಪಾತ್ರವನ್ನು ಯಾರು ನಿರ್ವಹಿಸುತ್ತಾರೆ ಎಂದು ನೋಡುಗರಿಗೆ ಕುತೂಹಲವಿತ್ತು.

VISTARANEWS.COM


on

Actress Abhinaya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ‘ಅನುಭವʼ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಾಗೆ (Actress Abhinaya ) ಎರಡು ವರ್ಷದ ಜೈಲು ಶಿಕ್ಷೆ ಪ್ರಕಟವಾಗಿದೆ. ವರದಕ್ಷಿಣೆ ನೀಡುವಂತೆ ಪೋಷಕರ ಜತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಕೋರ್ಟ್‌ ಜೈಲು ಶಿಕ್ಷೆ ವಿಧಿಸಿದೆ. ಇದೀಗ ಅವರು ನಟಿಸುತ್ತಿರುವ ಹಿಟ್ಲರ್‌ ಕಲ್ಯಾಣ ಧಾರಾವಾಹಿಯಿಂದ ಹೊರ ಹೋಗಿದ್ದಾರೆ. ಈ ಘಟನೆ ಆದ ಬಳಿಕ ಧಾರಾವಾಹಿಯಲ್ಲಿ ಅವರ ಪಾತ್ರವನ್ನು ಯಾರು ನಿರ್ವಹಿಸುತ್ತಾರೆ ಎಂದು ನೋಡುಗರಿಗೆ ಕುತೂಹಲವಿತ್ತು. ಇದೀಗ ಅಭಿನಯಾ ನಟಿಸುತ್ತಿದ್ದ ಪಾತ್ರಕ್ಕೆ ನಟಿ ವಾಣಿಶ್ರೀ ಎಂಟ್ರಿ ಕೊಟ್ಟಿದ್ದಾರೆ.

ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ, ಕಿರುಕುಳ ನೀಡಿದ ಆರೋಪದಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿದ ಶಿಕ್ಷೆ ಪ್ರಕಟಿಸಿದೆ. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ. ಇದರ ಬೆನ್ನಲ್ಲೇ ಅಭಿನಯಾ ನಟಿಸುತ್ತಿದ್ದ ಪಾತ್ರಕ್ಕೆ ನಟಿ ವಾಣಿಶ್ರೀ ಎಂಟ್ರಿ ಕೊಡುತ್ತಿದ್ದಾರೆ. ಸಿನಿಮಾರಂಗದಲ್ಲಿ 25 ವರ್ಷಗಳನ್ನ ಪೂರೈಸಿರುವ ವಾಣಿಶ್ರೀ 300ಕ್ಕೂ ಅಧಿಕ ಸೀರಿಯಲ್, 90ಕ್ಕೂ ಹೆಚ್ಚು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ | Tunisha Sharma Death Case | ತುನಿಶಾ ಆತ್ಮಹತ್ಯೆಗೆ ಶರಣಾಗಿದ್ದ ಸ್ಥಳದಲ್ಲಿ ಪೂಜೆ ಮಾಡಿ, ಚಿತ್ರೀಕರಣ ಆರಂಭಿಸಿದ ಧಾರಾವಾಹಿ ತಂಡ

Actress Abhinaya

ಅಭಿನಯಾ ಕೇಸಿಗೆ ಸಂಬಂಧಪಟ್ಟಂತೆ ಎ1- ಶ್ರೀನಿವಾಸ್ ಹಾಗೂ ಎ-2 ರಾಮಕೃಷ್ಣ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಉಳಿದ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ನಟಿ ಅಭಿನಯ ಅವರ ತಾಯಿ ಎ-3 ಜಯಮ್ಮಗೆ 5 ವರ್ಷ ಕಾರಾಗೃಹ ಶಿಕ್ಷೆ, ಎ-4 ಚೆಲುವರಾಜ್, ಎ-5 ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಲಾಗಿದೆ. ಸರ್ಕಾರದ ಪರ ವಕೀಲ ಹೆಚ್.ವಿ. ವಿನಾಯಕ್‌ ವಾದ ಮಂಡಿಸಿದ್ದರು.

ಇದನ್ನೂ ಓದಿ | Dowry harassment | ʻಅನುಭವʼ ಖ್ಯಾತಿಯ ನಟಿ ಅಭಿನಯಗೆ 2 ವರ್ಷ ಜೈಲು, 20 ವರ್ಷ ಹಿಂದಿನ ವರದಕ್ಷಿಣೆ ಪ್ರಕರಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Udho Udho Shri Renuka Yellamma : ಬಾಲ್ಯದಿಂದ ತಾರುಣ್ಯದ ಕಡೆಗೆ ರೇಣುಕಾ-ಯಲ್ಲಮ್ಮ, ಕಾದಿವೆ ಹಲವು ರೋಚಕ ಕತೆಗಳು

Udho Udho Shri Renuka Yellamma: ಅಪ್ಪಟ ಕನ್ನಡ ಮಣ್ಣಿನ ಪೌರಾಣಿಕ ಕಥಾವಸ್ತುವನ್ನಿಟ್ಟುಕೊಂಡು ಶುರುವಾದ ಈ ಧಾರಾವಾಹಿ ಆರಂಭದಿಂದಲೂ ಕಿರುತೆರೆಯಲ್ಲಿ ಹೊಸ ಸಂಚಲನವನ್ನು ಮೂಡಿಸುತ್ತಿತ್ತು. ರೇಣುಕೆ ಹಾಗು ಯಲ್ಲಮ್ಮನ ಪಾತ್ರಕ್ಕೆ ಜೀವ ತುಂಬಿದ ಮಕ್ಕಳು ಅದ್ಭುತವಾಗಿ ನಟಿಸಿ ಕರುನಾಡಿನ ಮನೆಮಾತಾಗಿದ್ದರು.

VISTARANEWS.COM


on

Udho Udho Shri Renuka Yellamma
Koo

ಬೆಂಗಳೂರು: ಕನ್ನಡ ಕಿರುತೆರೆ ಕ್ಷೇತ್ರದ ಜನಪ್ರಿಯ ವಾಹನಿ ಸ್ಟಾರ್ ಸುವರ್ಣ ತನ್ನ ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನಿರಂತರವಾಗಿ ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ” (Udho Udho Shri Renuka Yellamma) ಧಾರಾವಾಹಿ ಪ್ರೇಕ್ಷಕರ ಮನಗೆದ್ದು ಯಶಸ್ಸಿನಿಂದ ಸಾಗುತ್ತಿದೆ. ಇದೀಗ “ಸಮಯದ ಕುದುರೆಯನ್ನೇರಿ ಉರುಳಿವೆ ಋತುಗಳು” ಆರಂಭಗೊಂಡಿದ್ದು. ಇನ್ಮುಂದೆ ಹೊಸ ಅಧ್ಯಾಯದೊಂದಿಗೆ ಧಾರಾವಾಹಿಯಲ್ಲಿ ಅನೇಕ ರೋಚಕ ತಿರುವುಗಳು ವೀಕ್ಷಕರಿ ಮನ ಸೆಳೆಯಲಿದೆ.

ಅಪ್ಪಟ ಕನ್ನಡ ಮಣ್ಣಿನ ಪೌರಾಣಿಕ ಕಥಾವಸ್ತುವನ್ನಿಟ್ಟುಕೊಂಡು ಶುರುವಾದ ಈ ಧಾರಾವಾಹಿ ಆರಂಭದಿಂದಲೂ ಕಿರುತೆರೆಯಲ್ಲಿ ಹೊಸ ಸಂಚಲನವನ್ನು ಮೂಡಿಸುತ್ತಿತ್ತು. ರೇಣುಕೆ ಹಾಗು ಯಲ್ಲಮ್ಮನ ಪಾತ್ರಕ್ಕೆ ಜೀವ ತುಂಬಿದ ಮಕ್ಕಳು ಅದ್ಭುತವಾಗಿ ನಟಿಸಿ ಕರುನಾಡಿನ ಮನೆಮಾತಾಗಿದ್ದರು. ಆದರೆ ಇದೀಗ ಕಥೆಯಲ್ಲಿ ವರ್ಷಗಳುರುಳಿ ರೇಣುಕಾ-ಯಲ್ಲಮ್ಮ ಬಾಲ್ಯದಿಂದ ತಾರುಣ್ಯದ ಕಡೆಗೆ ಕಾಲಿಡುತ್ತಿದ್ದಾರೆ. ಹೀಗಾಗಿ ಕಥೆಯಲ್ಲಿನ ರೋಚಕತೆ ಹೆಚ್ಚಾಗಿದೆ.

ಬಾಲ್ಯದಿಂದಲೂ ಕಷ್ಟಗಳನ್ನೇ ಎದುರಿಸುತ್ತಾ ಬಂದಿರುವ ರೇಣುಕಾ-ಯಲ್ಲಮ್ಮರ ಬಾಳಿನಲ್ಲಿ 10 ವರ್ಷಗಳ ಬಳಿಕ ಏನೆಲ್ಲಾ ಆಗಲಿದೆ ? ದುಷ್ಟರಿಂದ ಇನ್ನೆಷ್ಟು ಕಷ್ಟಗಳನ್ನು ಎದುರಿಸಬೇಕಾಗಬಹುದು? ಇವರಿಬ್ಬರ ಬಾಳಿನಲ್ಲಿ ಪ್ರೀತಿಯ ಹೂವು ಅರಳಲಿದೆಯೇ ? ರೇಣುಕಾ ಹಾಗು ಜಮದಗ್ನಿಯ ವಿವಾಹವು ಯಾವಾಗ ? ಲೋಕ ಕಲ್ಯಾಣಕ್ಕಾಗಿ ಹಾಗೂ ದುಷ್ಟ ಸಂಹಾರಕ್ಕಾಗಿ ದೇವಿ ಅಂಶದ ಎರಡು ಶಕ್ತಿಗಳು ಒಂದಾಗಿ ಕಷ್ಟ ಕೋಟಲೆಗಳನ್ನು ಹೇಗೆ ಎದುರಿಸುತ್ತಾರೆ? ಎಂಬುದು ಈ ಧಾರಾವಾಹಿಯ ಮುಂದಿನ ರೋಚಕ ಕಥಾಹಂದರ.

ಇದನ್ನೂ ಓದಿ: Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

ಈಗಾಗಲೇ ನೂತನ ಅಧ್ಯಾಯದ ಚಿತ್ರೀಕರಣ ಶುರುವಾಗಿದ್ದು, ರೇಣುಕೆಯಾಗಿ ಮಹತಿ, ಯಲ್ಲಮ್ಮನ ಪಾತ್ರದಲ್ಲಿ ಅನನ್ಯ ಮೈಸೂರ್ ಅಭಿನಯಿಸುತ್ತಿದ್ದಾರೆ. ಅಮೋಘ ವಿನ್ಯಾಸದ ಸೆಟ್‌ ಮತ್ತು ಗ್ರಾಫಿಕ್ಸ್‌ನಿಂದ ಪ್ರಸಾರವಾಗುತ್ತಿರುವ ಧಾರಾವಾಹಿಯ ಪ್ರೋಮೋಗಳು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಹೊಸ ಸವಾಲುಗಳನ್ನು ಎದುರಿಸಲು, ಹೊಸ ಉತ್ಸಾಹದೊಂದಿಗೆ ಬರ್ತಿದ್ದಾರೆ ರೇಣುಕಾ-ಯಲ್ಲಮ್ಮ.”ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ” ಇದೇ ಸೋಮವಾರದಿಂದ ರಾತ್ರಿ 8.30 ಕ್ಕೆ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

Continue Reading

ಕಿರುತೆರೆ

Amruthadhaare Serial: ಜೋಡಿ ಜೀವಗಳ ಒಲವಧಾರೆ; ಭೂಮಿಗೆ ʻಐಲವ್‌ಯೂʼ ಎಂದ ಡುಮ್ಮ ಸರ್‌!

Amruthadhaare Serial: ಇದೀಗ ಜೀ ಕನ್ನಡ ವಾಹಿನಿ ಹೊಸ ಪ್ರೋಮೊ ಹಂಚಿಕೊಂಡಿದೆ. ಭೂಮಿಕಾ ಕಾಫಿ ಫ್ಯಾಕ್ಟರಿ ಭೇಟಿ ಆದ ಬಳಿಕ, ಗೌತಮ್‌ ಮಾರನೇ ದಿನ ಸರ್‌ಪ್ರೈಸ್‌ಆಗಿ ಭೂಮಿಕಾಳನ್ನು ಕರೆದುಕೊಂಡು ಪ್ರೀತಿ ವ್ಯಕ್ತಪಡಿಸಿಲು ಹೋಗುತ್ತಾರೆ. ಅಲ್ಲಿ ಗೌತಮ್‌ ಅವರು ಭೂಮಿಕಾಗೆ ಐಲವ್‌ಯೂ ಎಂದು ಪ್ರಪೋಸ್‌ ಮಾಡಿದ್ದಾರೆ. ಪ್ರೀತಿ ಹೇಳಿಕೊಳ್ಳುವ ಮುಂಚೆ ಗೌತಮ್‌ ಚಡಪಡಿಸುತ್ತಾರೆ. ಅಂತೂ ಗೌತಮ್‌, ಭೂಮಿ ನೀವು ಎಂದರೆ ಇಷ್ಟ ಎಂದು ಹೇಳಿಯೇ ಬಿಡುತ್ತಾನೆ. ಭೂಮಿಕಾ ಕೂಡ ನಾಚಿ ನೀರಾಗುತ್ತಾಳೆ.

VISTARANEWS.COM


on

Amruthadhaare Serial Gautham Propose Bhoomika
Koo

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪ್ರೇಕ್ಷಕರ ಮೆಚ್ಚಿನ ಸೀರಿಯಲ್‌ ಅಂದರೆ ಅದುವೇ ʻಅಮೃತಧಾರೆʼ (Amruthadhaare Serial). ಇದರಲ್ಲಿ ಛಾಯಾ ಸಿಂಗ್ ನಾಯಕ ನಟಿಯ ಪಾತ್ರವನ್ನು ಅಭಿನಯಿಸುತ್ತಿದ್ದಾರೆ. ನಾಯಕ ನಟನಾಗಿ ನಟರಾಜ ನಟ ರಂಗ ನಟಿಸುತ್ತಿದ್ದಾರೆ. ಇಷ್ಟು ದಿನ ಡುಮ್ಮ ಸರ್‌ (ಗೌತಮ್‌ ದಿವಾನ್‌) ಭೂಮಿಕಾಗೆ ಯಾವಾಗ ತಮ್ಮ ಪ್ರೀತಿಯನ್ನು ಹೇಳುತ್ತಾರೋ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಇತ್ತು. ಆ ಸಮಯ ಇದೀಗ ಬಂದಾಗಿದೆ. ಜೋಡಿ ಜೀವಗಳ ಒಲವಧಾರೆ ಶುರುವಾಗಿದೆ. ಭೂಮಿ ಎದುರು ಪ್ರೀತಿ ಹೇಳಿಕೊಂಡೇ ಬಿಟ್ಟರು ಡುಮ್ಮ ಸರ್‌.

ಇದೀಗ ಜೀ ಕನ್ನಡ ವಾಹಿನಿ ಹೊಸ ಪ್ರೋಮೊ ಹಂಚಿಕೊಂಡಿದೆ. ಭೂಮಿಕಾ ಕಾಫಿ ಫ್ಯಾಕ್ಟರಿ ಭೇಟಿ ಆದ ಬಳಿಕ, ಗೌತಮ್‌ ಮಾರನೇ ದಿನ ಸರ್‌ಪ್ರೈಸ್‌ಆಗಿ ಭೂಮಿಕಾಳನ್ನು ಕರೆದುಕೊಂಡು ಪ್ರೀತಿ ವ್ಯಕ್ತಪಡಿಸಿಲು ಹೋಗುತ್ತಾರೆ. ಅಲ್ಲಿ ಗೌತಮ್‌ , ಭೂಮಿಕಾಗೆ ಐಲವ್‌ಯೂ ಎಂದು ಪ್ರಪೋಸ್‌ ಮಾಡಿದ್ದಾನೆ. ಪ್ರೀತಿ ಹೇಳಿಕೊಳ್ಳುವ ಮುಂಚೆ ಗೌತಮ್‌ ಚಡಪಡಿಸುತ್ತಾನೆ. ಅಂತೂ ಗೌತಮ್‌, ಭೂಮಿ ನೀವು ಎಂದರೆ ಇಷ್ಟ ಎಂದು ಹೇಳಿಯೇ ಬಿಡುತ್ತಾನೆ. ಭೂಮಿಕಾ ಕೂಡ ನಾಚಿ ನೀರಾಗುತ್ತಾಳೆ. ʻʻಭೂಮಿಕಾ ನನಗೆ ಗೊತ್ತಿಲ್ಲದ ಹಾಗೇ ನಿಮ್ಮ ಮೇಲೆ ಪ್ರೀತಿ ಹುಟ್ಟಿದೆ. ಅದು ಯಾವ ರೀತಿ ಪ್ರೀತಿ ಗೊತ್ತಿಲ್ಲ. ನನ್ನಲ್ಲಿನ ತುಂಬ ಚೇಂಜಸ್‌ಗೆ ನೀವು ಕಾರಣರಾದ್ರಿ. ಐಲವ್‌ಯೂʼʼಎಂದು ಪ್ರಪೋಸ್‌ ಮಾಡಿಯೇ ಬಿಟ್ಟ ಗೌತಮ್‌.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಇನ್ನೊಂದೆಡೆ ಇದರಲ್ಲಿ ಛಾಯಾ ಸಿಂಗ್ ಗರ್ಭಿಣಿ ಮಲ್ಲಿಯನ್ನು ಸದಾ ಕಾಯುತ್ತಿರುತ್ತಾಳೆ. ಆದರೀಗ ಗೌತಮ್‌ ಭೂಮಿಕಾ ಚಿಕ್ಕಮಗಳೂರಿನಲ್ಲಿ ಇರೋದರಿಂದ ಈ ಚಾನ್ಸ್ ಬಳಸಿಕೊಂಡ ಜಯದೇವ್, ತನ್ನ ಹೆಂಡ್ತಿ ಮಲ್ಲಿಯನ್ನು ಕೊಲ್ಲಲು ಪ್ಲ್ಯಾನ್ ಹಾಕಿ ಮೊದಲು ಸೋಲುತ್ತಾನೆ. ಮಲ್ಲಿಯನ್ನು ನೀನೆ ನೋಡಿಕೊಳ್ಳಬೇಕು ಅಂತ ಭೂಮಿ, ಮಹಿಮಾಗೆ ಹೇಳಿದ್ದಳು. ಹೀಗಾಗಿ ಮಹಿಮಾ, ಮಲ್ಲಿ ಜತೆ ಇದ್ದಾಳೆ. ಆದರೀಗ ಹೊಸ ಪ್ರೋಮೊದಲ್ಲಿ ಮಹಿಮಾ ಮಲ್ಲಿಗೆ ಕೊಟ್ಟ ಊಟವನ್ನು ತಾನೇ ಮಾಡುತ್ತೇನೆ ಎಂದು ಕೂತಿದ್ದಾಳೆ. ಆದರೆ ಆ ಊಟದಲ್ಲಿ ಜೈ ದೇವ ವಿಷ ಹಾಕಿದ್ದಾನೆ. ಇದೀಗ ಈ ಊಟ ಮಹಿಮಾ ಪಾಲಾಗತ್ತಾ ಎಂದು ನೋಡಬೇಕಿದೆ.

ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ, ಭೂಮಿಕಾ ಸದಾಶಿವ ಪಾತ್ರದಲ್ಲಿ ಛಾಯಾ ಸಿಂಗ್, ಜಯದೇವ್ ಪತ್ನಿ ಮಲ್ಲಿ ಪಾತ್ರದಲ್ಲಿ ರಾಧಾ ಭಗವತಿ, ಜಯದೇವ್ ಪಾತ್ರದಲ್ಲಿ ರಾಣವ್ ಗೌಡ ಅವರು ನಟಿಸುತ್ತಿದ್ದಾರೆ.

Continue Reading

ಕಿರುತೆರೆ

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

Ninagagi Kannada Serial: ದಿವ್ಯಾ ಉರುಡುಗ ಇದೀಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ.‌ ರಚನಾ ಪಾತ್ರದಲ್ಲಿ ದಿವ್ಯಾ ನಟಿಸುತ್ತಿದ್ದಾರೆ. ‘ನಿನಗಾಗಿ’ ಧಾರಾವಾಹಿಯ ಕಥೆ ಸೂಪರ್ ಸ್ಟಾರ್ ರಚನಾ ಸುತ್ತ ಸುತ್ತಲಿದೆ. ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ರಚನಾಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿ, ಆಶೀರ್ವಾದ ಇದೆ. ಆದರೆ, ಅದ್ಯಾಕೋ ರಚನಾಗೆ ಅಮ್ಮನ ಪ್ರೀತಿ ಇಲ್ಲ. ಸೂಪರ್ ಸ್ಟಾರ್ ಆಗಿದ್ದರೂ, ಅಮ್ಮನ ಪ್ರೀತಿ ಕಾಣದ ನಟಿಯ ಕಥೆ ‘ನಿನಗಾಗಿ’.

VISTARANEWS.COM


on

Ninagagi Kannada Serial Ritvvikk Mathad Playing Lead In Divya Uruduga
Koo

ಬೆಂಗಳೂರು: ಕನ್ನಡ ಕಿರುತೆರೆ ಲೋಕದಲ್ಲಿ ಕಲರ್ಸ್ ಕನ್ನಡ ವಾಹಿನಿ (Ninagagi Kannada Serial) ವಿಭಿನ್ನ ಬಗೆಯ ಸೀರಿಯಲ್‌ಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದೆ. ಇದೀಗ ಮತ್ತೊಂದು ಹೊಸ ಕಥೆ ಮೂಲಕ ಕಿರುತೆರೆ ಪ್ರೇಕ್ಷಕರ ಎದುರು ಬರುತ್ತಿದೆ. ಬೇರೆ ಬೇರೆ ವ್ಯಕ್ತಿತ್ವದ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಸಾಗುವ ಮನ ಮಿಡಿಯ ಧಾರಾವಾಹಿ ʻನಿನನಾಗಿʼ ಇದೇ 27ನೇ ತಾರೀಖಿನಿಂದ ಶುರುವಾಗುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ನಿನಗಾಗಿ ಸೀರಿಯಲ್ ಪ್ರಸಾರವಾಗಲಿದೆ. ಈ ಹಿನ್ನೆಲೆ ಇಡೀ ತಂಡ ಮಾಧ್ಯಮದರೊಂದಿಗೆ ಮಾಹಿತಿ ಹಂಚಿಕೊಂಡಿತು.

ಬೆಂಗಳೂರಿನ ಅಕ್ಷಯ್ ಸ್ಟುಡಿಯೋದಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ನಿರ್ದೇಶಕ ಸಂಪಥ್ವಿ ಮಾತನಾಡಿ, ʻʻತುಂಬಾ ಎಕ್ಸೈಟ್ ಆಗಿದ್ದೇನೆ. ಯಾಕೆಂದರೆ ಹೆಮ್ಮೆಯಿಂದ ಹೇಳುತ್ತೇನೆ.‌ ಒಂದೊಳ್ಳೆ ಪ್ರಾಜೆಕ್ಟ್ ತೆಗೆದುಕೊಂಡು ಬಂದಿದ್ದೇನೆ. ನಿನಗಾಗಿ ಶೋ ಬಂದ‌ ಮೇಲೆ ತುಂಬಾ ಸ್ಕೋರ್ ಮಾಡುತ್ತದೆ. ಯಾಕೆಂದರೆ ನನ್ನ ಬೆಂಬಲವಾಗಿ ನಿಂತಿರುವವರು ಜೈ ಮಾತಾ ಕಂಬೈನ್ಸ್ ನ ಅಶ್ವಿನಿ‌ ಮೇಡಂ. ಇಡೀ‌ ಕಲರ್ಸ್ ತಂಡ. ಪ್ರತಿಯೊಬ್ಬರಿಗೂ ಸಪೋರ್ಟಿವ್ ಆಗಿತು. ಈ ಪ್ರಾಜೆಕ್ಟ್ ಮಾಡಿಸಿದ್ದಾರೆ. ಈ ಪ್ರಾಜೆಕ್ಟ್ ಕಲರ್ಸ್‌ಗೆ ಗೆಲುವು ತಂದುಕೊಡುತ್ತದೆ. ನಾಯಕ ಒಂದು ಪಡೆಯಾದರೆ, ನಾಯಕಿ ಕೂಡ ಒಂದು ಪಡೆ. ಇವರೆಲ್ಲಾ ಬಲ ತಂದುಕೊಡುತ್ತಿದ್ದಾರೆ. ಪ್ರೋವೋ ನೋಡಿ ಇಷ್ಟಪಟ್ಟಿದ್ದೀರಾ. ನಾನು ಈ ಹಿಂದೆ ನಮ್ಮನೆ ಯುವರಾಣಿ ಸೀರಿಯಲ್ ಮಾಡಿದ್ದೇನೆ. ಈ ಬಾರಿ ಒಂದು ಹೊಸ ಕಥೆ ಹೇಳಲು ಬರುತ್ತಿದ್ದೇವೆʼʼ ಎಂದರು.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

ನಾಯಕ ಋತ್ವಿಕ್ ಮಠದ್ ಮಾತನಾಡಿ, ʻʻಶಿವರಾಮ್ ಮಾಸ್‌ನಲ್ಲಿ‌ ನೋಡಿದ್ದೀರಾ. ಆದರೆ ಆ ಮಾಸ್ ಜೀವನ್‌ನಲ್ಲಿ ಇರುವುದಿಲ್ಲ. ತುಂಬಾ ಸರಳ ವ್ಯಕ್ತಿ.‌ಒಬ್ಬ ಮಗುವಿನ ತಂದೆ. ದುಡ್ಡಿನ ಹಿಂದೆ ಹೋಗುವ ಮನುಷ್ಯ ಅಲ್ಲ. ಆ ರೀತಿ ಪಾತ್ರ ಮಾಡುತ್ತಿದ್ದೇನೆʼʼ ಎಂದು ಮಾಹಿತಿ ನೀಡಿದರು.

ನಾಯಕಿ ದಿವ್ಯಾ ಉರುಡುಗ ಮಾತನಾಡಿ, ʻʻನನಗೆ ಹೆಮ್ಮೆ ಅನಿಸುತ್ತದೆ. ಪ್ರತಿ ವಿಷಯದಲ್ಲಿಯೂ ಯೂನಿಕ್ ಆಗಿ ಮಾಡುತ್ತಿದ್ದೇವೆ. ರಚ್ಚು ಎಂಬ ಮುದ್ದಾದ ಹುಡುಗಿ ಪಾತ್ರ ಮಾಡುತ್ತಿದ್ದೇನೆ. ರಚ್ಚು ಎಂಬ ಸೂಪರ್ ಸ್ಟಾರ್ ಸಿಂಪಲ್ ಆಗಿ ಲೈಫ್ ಲೀಡ್ ಮಾಡುವ ಕನಸು ಕಾಣುತ್ತಾ ಇರುತ್ತಾಳೆ. ಅಮ್ಮನ ಮಾತೇ ವೇದ ವಾಕ್ಯ.‌ ಆ ರೀತಿ ಪಾತ್ರ ನನ್ನದು. ಅವಳ ವೈಯಕ್ತಿಕ ಜೀವನ, ಅವಳ ಆಸೆ ನೆರವೇರುತ್ತಾ? ಅನ್ನೋದನ್ನು ನೀವು ನೋಡ್ಬೇಕು.‌ಒಂದೊಳ್ಳೆ ತಂಡದ ಜೊತೆ ಕೆಲಸ‌ ಮಾಡುತ್ತಿರುವ ಖುಷಿ ಇದೆ. ಸಿನಿಮಾ ರೀತಿಯೇ ಸೀರಿಯಲ್ ಶೂಟ್ ಮಾಡಲಾಗುತ್ತಿದೆʼʼ ಎಂದರು.

ದಿವ್ಯಾ ಉರುಡುಗ ಇದೀಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ.‌ ರಚನಾ ಪಾತ್ರದಲ್ಲಿ ದಿವ್ಯಾ ನಟಿಸುತ್ತಿದ್ದಾರೆ. ‘ನಿನಗಾಗಿ’ ಧಾರಾವಾಹಿಯ ಕಥೆ ಸೂಪರ್ ಸ್ಟಾರ್ ರಚನಾ ಸುತ್ತ ಸುತ್ತಲಿದೆ. ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ರಚನಾಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿ, ಆಶೀರ್ವಾದ ಇದೆ. ಆದರೆ, ಅದ್ಯಾಕೋ ರಚನಾಗೆ ಅಮ್ಮನ ಪ್ರೀತಿ ಇಲ್ಲ. ಸೂಪರ್ ಸ್ಟಾರ್ ಆಗಿದ್ದರೂ, ಅಮ್ಮನ ಪ್ರೀತಿ ಕಾಣದ ನಟಿಯ ಕಥೆ ‘ನಿನಗಾಗಿ’.

ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ತಾರಾಗಣದಲ್ಲಿ ಪ್ರಿಯಾಂಕ ಕಾಮತ್, ಕಿಶನ್ ಬೆಳಗಲಿ, ವಿಜಯ್ ಕೌಂಡಿನ್ಯ, ಸಿರಿ ಸಿಂಚನ ಮುಂತಾದವರಿದ್ದಾರೆ.

ನಮ್ಮನೆ ಯುವರಾಣಿಯನ್ನು ನಿರ್ದೇಶಿಸಿದ್ದ ಸಂಪೃಥ್ವಿ ‘ನಿನಗಾಗಿʼಯ ಸೂತ್ರಧಾರಿ. ಭಾಗ್ಯಲಕ್ಷ್ಮಿ, ನಮ್ಮನೆ ಯುವರಾಣಿ, ಕನ್ನಡತಿಯಂಥ ಸುಪರ್ ಹಿಟ್ ಧಾರಾವಾಹಿಗಳನ್ನು ನಿರ್ಮಿಸಿದ ಜೈ ಮಾತಾ ಕಂಬೈನ್ಸ್ ‘ನಿನಗಾಗಿʼಯ ನಿರ್ಮಾಣದ ಹೊಣೆ ಹೊತ್ತಿದೆ.

Continue Reading

ಕಿರುತೆರೆ

Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

Pavithra Jayaram: ಘಟನೆಯಿಂದ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪವಿತ್ರಾ ಮಗಳು ಅಮ್ಮ ಹಾಗೂ ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಬೇರೆ ಯಾವುದೇ ರೀತಿಯ ಸಂಬಂಧ ಇರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಚಂದ್ರಕಾಂತ್‌ ಅವರ ಪತ್ನಿ ಶಿಲ್ಪಾ ಪ್ರೇಮಾ ಇಬ್ಬರ ಮಧ್ಯೆ ಸಂಬಂಧ ಇತ್ತು ಎಂದು ಹೇಳಿಕೆ ನೀಡಿದ್ದಾರೆ.

VISTARANEWS.COM


on

Pavitra Jayaram Relationship With Chandu Shilpa Prema statement
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡರು. ಇದಾದ ಬಳಿಕ ಈ ಘಟನೆಯಿಂದ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪವಿತ್ರಾ ಮಗಳು ಅಮ್ಮ ಹಾಗೂ ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಬೇರೆ ಯಾವುದೇ ರೀತಿಯ ಸಂಬಂಧ ಇರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಚಂದ್ರಕಾಂತ್‌ ಅವರ ಪತ್ನಿ ಶಿಲ್ಪಾ ಪ್ರೇಮಾ ಇಬ್ಬರ ಮಧ್ಯೆ ಸಂಬಂಧ ಇತ್ತು ಎಂದು ಹೇಳಿಕೆ ನೀಡಿದ್ದಾರೆ.

ಶಿಲ್ಪಾ ಪ್ರೇಮಾ ಈ ಬಗ್ಗೆ ಮಾತನಾಡಿ ʻʻಇಬ್ಬರ ಮಧ್ಯೆ ಸಂಬಂಧ ಇರುವುದು 5 ವರ್ಷ ಮುಂಚೆಯೇ ತಿಳಿದಿತ್ತು. ನನಗೆ ಗೊತ್ತಾದ ಮೇಲೆ ರಾತ್ರಿಯೆಲ್ಲ ಕುಡಿದು ನನಗೆ ಚಂದ್ರಕಾಂತ್‌ ಹೊಡೆಯುತ್ತಿದ್ದರು. ಒಮ್ಮೆ ಪವಿತ್ರಾ ಕೂಡ ನನಗೆ ನೇರವಾಗಿ ಕೆರೆ ಮಾಡಿ ಅವನು ನನ್ನ ಗಂಡ, ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಹೇಳಿದ್ದಳು. ಈ ವಿಚಾರ ಪವಿತ್ರಾ ಮಕ್ಕಳಿಗೂ ಗೊತ್ತಿತ್ತು. ಅವರ ಲೈಫ್ ಅವರದ್ದು ಅವರ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಲ್ಲ ಎಂದು ಪವಿತ್ರಾ ಮಗ ಹೇಳಿದ್ದ. ಮನೆಗೆ ಬಂದರೂ ಪವಿತ್ರಾ ಫೋಟೊವನ್ನು ಚಂದ್ರಕಾಂತ್‌ ನೋಡುತ್ತಿದ್ದರು. ಇವರೂ ನನಗೆ ಸಹಾಯ ಮಾಡದೇ ಇದ್ದರೂ ನನ್ನ ಮಕ್ಕಳನ್ನು ನಾನೇ ಸಲುಹಿದೆʼʼ ಎಂದರು.

ಮಾಧ್ಯಮವೊಂದಕ್ಕೆ ಚಂದ್ರಕಾಂತ್‌ ತಾಯಿ ಕೂಡ ಮಾತನಾಡಿ ʻʻಪವಿತ್ರಾ ನನ್ನ ಮಗನನ್ನು ಮನೆಗೆ ಬರದೇ ಇರುವ ರೀತಿ ಮಾಡಿದ್ದಾಳೆ. ನನ್ನ ಎಲ್ಲಾ ಸರ್ವಸ್ವ ಪವಿತ್ರಾ, ಅವಳೇ ನನ್ನ ಹೆಂಡತಿ ಎನ್ನುತ್ತಿದ್ದ. ಮನೆಗೆ ಕುಡಿದು ಬಂದು ಹೆಂಡತಿಯನ್ನು ಹೊಡೆಯುತ್ತಿದ್ದ. ಅವಳ ಸಹವಾಸ ಮಾಡಬೇಡ ಎಂದು ಹೇಳಿದರೂ ಕೇಳುತ್ತಿರಲಿಲ್ಲʼʼ ಎಂದರು.

ಇದನ್ನೂ ಓದಿ: Pavithra Jayaram: ಚಂದ್ರಕಾಂತ್‌ ಹಾಗೂ ನನ್ನ ಅಮ್ಮ ಜಸ್ಟ್‌ ಫ್ರೆಂಡ್ಸ್‌, ಪವಿತ್ರಾ ಮಗಳ ಸ್ಪಷ್ಟನೆ!

ಪವಿತ್ರಾ ಮಗಳ ಸ್ಪಷ್ಟನೆ ಏನು?

ಮಗಳು ಪ್ರತೀಕ್ಷಾ ಮಾತನಾಡಿ ʻ ಚಂದ್ರಕಾಂತ್‌ ಅವರ ಸಾವಿನ‌ ಸುದ್ದಿ ನಮಗೆ ಟಿವಿಯಲ್ಲಿ ನೋಡಿ ಗೊತ್ತಾಯ್ತು. ಚಂದ್ರಕಾಂತ್‌ ಮತ್ತು ನಮ್ಮಮ್ಮ‌ ಉತ್ತಮ ಸ್ನೇಹಿತರಾಗಿದ್ದರು. ಅವರ ಸಂಬಂಧದ ಬಗ್ಗೆ ಟಿವಿಯಲ್ಲಿ ಏನೇನೋ ಮಾತಾಡ್ತಿದ್ದಾರೆ. ಅಮ್ಮನ ಅಂತ್ಯಕ್ರಿಯೆ ಆಗೋವವರೆಗೂ ಚಂದ್ರಕಾಂತ್‌ ಇದ್ದು ಹೋಗಿದ್ದರು. ಚಂದ್ರಕಾಂತ್‌ ಅವರು ಹೈದರಾಬಾದ್‌ಗೆ ಹೋದ ನಂತರವೂ ನನಗೆ ಪೋನ್ ಮಾಡಿ ಮಾತನಾಡುತ್ತಿದ್ದರು. ಆರೋಗ್ಯ ಚೆನ್ನಾಗಿ ನೋಡ್ಕೊ, ಪರೀಕ್ಷೆ ಇದೆ ತಯಾರಿ ಮಾಡ್ಕೊ ಎಂದೆಲ್ಲಾ ಧೈರ್ಯ ಹೇಳ್ತಿದ್ದರು. ಆದರೆ ಈಗ ಹೀಗಾಗಿದೆ. ಅಮ್ಮ ಮತ್ತು ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಅಮ್ಮ ಹೈದರಾಬಾದ್‌ಗೆ ತೆರಳಿ ಆರು ವರ್ಷ ಆಯ್ತು. ಆಗನಿಂದಲೂ ಚಂದ್ರಕಾಂತ್‌ ಅಮ್ಮನಿಗೆ ಪರಿಚಯ. ಒಂದೇ ಸಿರೀಯಲ್ ನಲ್ಲಿ ನಟನೆ ಮಾಡುವ ಸಹ ನಟರ ಜತೆಗಿನ ಸಂಬಂಧ ಹೇಗಿರೋತ್ತೊ ಅಮ್ಮ ಮತ್ತು ಚಂದ್ರಕಾಂತ್‌ ಅವರ ಸಂಬಂಧವೂ ಹಾಗೆ ಇತ್ತುʼʼ‌ ಎಂದರು.

ಮಾತು ಮುಂದುವರಿಸಿ ʻʻನನ್ನ ಅಮ್ಮ ಮತ್ತು ಅಪ್ಪ ಅವರ ಸಂಬಂಧ ಕೂಡ ಚೆನ್ನಾಗಿಯೇ ಇತ್ತು. ನಾನು, ಅಣ್ಣ ಇಬ್ಬರೂ ಕಳೆದ ಎರಡು ವರ್ಷಗಳಿಂದ ಅಮ್ಮನ ಜತೆಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದೆವು. ಈಗ ನಾವು ನಮ್ಮ ಅಮ್ಮನನ್ನು ಕಳೆದುಕೊಂಡಿದ್ದೇವೆ. ಅವರು ನಮ್ಮ ಕುಟುಂಬದ ದೊಡ್ಡ ಪಿಲ್ಲರ್‌. ನಾವಿನ್ನ ಚಿಕ್ಕವರು. ನಮಗೂ ಭವಿಷ್ಯವಿದೆ. ಯಾರೂ ಅಮ್ಮನ ಸಂಬಂಧ ಬಗೆಗೆ ತಪ್ಪಾಗಿ ಮಾತಾಡಬೇಡಿ. ನಮ್ಮಷ್ಟಕ್ಕೆ ನಮ್ಮನ್ನು ಬದುಕಲು ಬಿಡಿʼʼ ಎಂದಿದ್ದಾರೆ ಪ್ರತೀಕ್ಷಾ.

Continue Reading
Advertisement
road Accident
ತುಮಕೂರು3 mins ago

Road Accident: ಬೈಕ್‌ಗಳ ಅಪಘಾತ; ಮಗನ ಕಣ್ಣೆದುರೇ ರಕ್ತಕಾರಿ ತಾಯಿ ಮೃತ್ಯು; ಮೂವರು ಗಂಭೀರ

lok sabha election 2024 supreme court
ಪ್ರಮುಖ ಸುದ್ದಿ6 mins ago

Lok Sabha Election 2024: ಬೂತ್‌ವಾರು ಮತದಾನ ವಿವರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್‌

meghana Goankar
ಸಿನಿಮಾ11 mins ago

Meghana Gaonkar : ಮೇಘನಾ ಗಾಂವ್ಕರ್​ಗೆ ಖುಷಿಗೆ ʼದಿ ಜಡ್ಜ್‌ಮೆಂಟ್‌ʼ ಕಾರಣ, ಯಾಕೆ ಗೊತ್ತಾ?

Hardik Pandya & Natasa Stankovic
ಕ್ರೀಡೆ23 mins ago

Hardik Pandya & Natasa Stankovic: ಹಾರ್ದಿಕ್​ ಪಾಂಡ್ಯಗೆ ಕೈ ಕೊಟ್ಟರೇ ಪತ್ನಿ ನತಾಶಾ!

Sandalwood Movie
ಪ್ರಮುಖ ಸುದ್ದಿ31 mins ago

Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

Bank fraud Scam in Urban Co operative Bank of Karwar
ಕರ್ನಾಟಕ59 mins ago

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

RR vs SRH
ಕ್ರೀಡೆ1 hour ago

RR vs SRH: ಹೈದರಾಬಾದ್-ರಾಜಸ್ಥಾನ್ ನಡುವಣ ಇಂದಿನ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇದೆಯೇ?

COMEDK UGET Result 2024 Out
ಶಿಕ್ಷಣ1 hour ago

COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

Rotary June Run
ಪ್ರಮುಖ ಸುದ್ದಿ2 hours ago

Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

Flight Turbulence
ವಿದೇಶ3 hours ago

Flight Turbulence: ನೀವಿದ್ದ ವಿಮಾನ ಪ್ರಕ್ಷುಬ್ಧತೆಗೊಳಗಾದರೆ ಏನು ಮಾಡುತ್ತೀರಿ? ಇಲ್ಲಿದೆ ಪೈಲಟ್‌ಗಳ ಸಲಹೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌