Wipro layoffs | ವಿಪ್ರೋದಿಂದ 500 ಹೊಸ ಉದ್ಯೋಗಿಗಳ ವಜಾ - Vistara News

ದೇಶ

Wipro layoffs | ವಿಪ್ರೋದಿಂದ 500 ಹೊಸ ಉದ್ಯೋಗಿಗಳ ವಜಾ

ಭಾರತದ ಅಗ್ರ ಐದು ಐಟಿ ಕಂಪನಿಗಳಲ್ಲಿ ಒಂದಾದ ವಿಪ್ರೋ, ಸುಮಾರು 500 ಹೊಸ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದೆ. ಆಂತರಿಕ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ನೀಡಿದ್ದಕ್ಕಾಗಿ ಹೀಗೆ ಮಾಡಲಾಗಿದೆ ಎಂದಿದೆ.

VISTARANEWS.COM


on

Wipro announces salary hike of financial year 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದ ಅಗ್ರ ಐದು ಐಟಿ ಕಂಪನಿಗಳಲ್ಲಿ ಒಂದಾದ ವಿಪ್ರೋ, ಸುಮಾರು 500 ಹೊಸ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದೆ. ಆಂತರಿಕ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ನೀಡಿದ್ದಕ್ಕಾಗಿ ಹೀಗೆ ಮಾಡಲಾಗಿದೆ ಎಂದಿದೆ.

ವಿಪ್ರೋದಲ್ಲಿ ನಾವು ಅತ್ಯುನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳಲು ನಾವು ಬಯಸುತ್ತೇವೆ. ನಾವು ಸಾಧಿಸಬೇಕಾದ ಗುರಿಯ ಮಾನದಂಡಗಳಿಗೆ ಅನುಗುಣವಾಗಿ, ಪ್ರತಿಯೊಬ್ಬ ಹೊಸ ಉದ್ಯೋಗಿಯೂ ತಮ್ಮ ಕೆಲಸದ ಕ್ಷೇತ್ರದಲ್ಲಿ ನಿರ್ದಿಷ್ಟ ಮಟ್ಟದ ಪ್ರಾವೀಣ್ಯ ಹೊಂದಿರಬೇಕೆಂದು ನಾವು ನಿರೀಕ್ಷಿಸುತ್ತೇವೆ. ಸಂಸ್ಥೆಯ ವ್ಯವಹಾರ ಉದ್ದೇಶಗಳು ಮತ್ತು ನಮ್ಮ ಗ್ರಾಹಕರ ಅಗತ್ಯಗಳೊಂದಿಗೆ ಉದ್ಯೋಗಿಗಳಿ ಮಿಳಿತಗೊಳ್ಳಲು ಮೌಲ್ಯಮಾಪನ ಪ್ರಕ್ರಿಯೆ ನಮ್ಮಲ್ಲಿದೆ. ಈ ವ್ಯವಸ್ಥಿತ ಮತ್ತು ಸಮಗ್ರ ಕಾರ್ಯಕ್ಷಮತೆಯ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಮಾರ್ಗದರ್ಶನ, ಮರುತರಬೇತಿಗಳಿದ್ದು, ಕೆಲವು ಸಂದರ್ಭಗಳಲ್ಲಿ ಕಂಪನಿಯಿಂದ ಕೆಲವು ಉದ್ಯೋಗಿಗಳನ್ನು ತೆಗೆಯಬೇಕಾಗುತ್ತದೆ ಎಂದು ಕಂಪನಿ ತಿಳಿಸಿದೆ.

ಸುಮಾರು 800 ಮಂದಿಯನ್ನು ತೆಗೆಯಲಾಗಿದೆ ಎಂದು ಕೆಲವು ಮೂಲಗಳು ಹೇಳಿದ್ದರೂ, ವಜಾಗೊಳಿಸಿದ ಉದ್ಯೋಗಿಗಳ ಸಂಖ್ಯೆ 500ಕ್ಕಿಂತ ಕಡಿಮೆ ಎಂದು ಸಂಸ್ಥೆ ಹೇಳಿದೆ. ವಜಾಗೊಳಿಸಲಾದ ಉದ್ಯೋಗಿಗಳಿಗೆ ಸಂಸ್ಥೆ ನೀಡಿದ ಪತ್ರದಲ್ಲಿ, ʼʼನಿಮ್ಮ ತರಬೇತಿಗೆ ನಾವು ವೆಚ್ಚ ಮಾಡಿದ ಹಣವಾದ 75,000 ರೂ.ಗಳನ್ನು ನೀವು ಪಾವತಿಸಬೇಕಿತ್ತು. ಆದರೆ ನಾವು ಅದನ್ನು ರದ್ದು ಮಾಡುತ್ತಿದ್ದೇವೆʼʼ ಎಂದಿದೆ.

ಇದನ್ನೂ ಓದಿ | Microsoft Layoffs | 21 ವರ್ಷ ದುಡಿದ ಭಾರತ ಮೂಲದ ಉದ್ಯೋಗಿಯನ್ನು ವಜಾಗೊಳಿಸಿದ ಮೈಕ್ರೋಸಾಫ್ಟ್‌, ಉದ್ಯೋಗಿ ಪೋಸ್ಟ್ ವೈರಲ್

ಈ ತಿಂಗಳ ಆರಂಭದಲ್ಲಿ ವಿಪ್ರೋ ತ್ರೈಮಾಸಿಕ ವರದಿಯನ್ನು ಬಿಡುಗಡೆ ಮಾಡಿತ್ತು. ವಾರ್ಷಿಕ ಲಾಭದಲ್ಲಿ ಈ ಬಾರಿ ಕಂಪನಿಗೆ 2.8% ಹೆಚ್ಚಳವಾಗಿದೆ. ಐಟಿ ಸೇವೆಗಳ ಆದಾಯದಲ್ಲಿ 12%ದಷ್ಟು ಹೆಚ್ಚಳವನ್ನು ಗಳಿಸಿದೆ.

ಇತ್ತೀಚೆಗೆ ಹಲವು ಐಟಿ ಕಂಪನಿಗಳು ಸಾಮೂಹಿಕ ಉದ್ಯೋಗ ಕಡಿತ ಆರಂಭಿಸಿವೆ. 2023ರಲ್ಲಿ ಭಾರಿ ಆರ್ಥಿಕ ಹಿನ್ನಡೆ ಉಂಟಾಗಲಿದೆ ಎಂದು ತಜ್ಞರು ಭವಿಷ್ಯ ಹೇಳಿದ್ದು, ಮೈಕ್ರೋಸಾಫ್ಟ್‌ ಮುಂತಾದ ಕಂಪನಿಗಳು ಸಾಮೂಹಿಕ ಉದ್ಯೀಗ ಕಡಿತಕ್ಕೆ ಮುಂದಾಗಿವೆ.

ಇದನ್ನೂ ಓದಿ | Tech layoffs | ‌ಗ್ರೇಟ್‌ ರಿಸೆಶನ್ ಮಟ್ಟವನ್ನೂ ಮೀರಿದ ಐಟಿ ಉದ್ಯೋಗ ಕಡಿತ, 2023ರಲ್ಲಿ ಮತ್ತಷ್ಟು ಜಾಬ್‌ ಕಟ್?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Divorce Case: ಪತಿ, ಕುಟುಂಬದ ವಿರುದ್ಧದ ಸುಳ್ಳು ಕೇಸು ಕ್ರೌರ್ಯಕ್ಕೆ ಸಮಾನ; ಬಾಂಬೆ ಹೈಕೋರ್ಟ್

Divorce Case: ವಿಚ್ಛೇದನ ಪ್ರಕರಣದಲ್ಲಿ ಸಿವಿಲ್ ಪ್ರಕರಣಗಳನ್ನು ಹೊರತುಪಡಿಸಿ ಪತಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸುಳ್ಳು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವುದು ಕ್ರೌರ್ಯಕ್ಕೆ ಸಮಾನವಾಗಿರುತ್ತದೆ ಎಂದು ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠ ಹೇಳಿದೆ.

VISTARANEWS.COM


on

By

Divorce Case
Koo

ಮುಂಬಯಿ: ಪತಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ವಿವಿಧ ಸುಳ್ಳು (fake) ಕ್ರಿಮಿನಲ್ ಪ್ರಕರಣಗಳನ್ನು (criminal case) ದಾಖಲಿಸುವುದು ಕ್ರೌರ್ಯಕ್ಕೆ ಸಮಾನವಾಗಿದೆ ಎಂದು ಬಾಂಬೆ ಹೈಕೋರ್ಟ್‌ನ (bombay high court) ಔರಂಗಾಬಾದ್ ಪೀಠ (Aurangabad bench) ಹೇಳಿದೆ. ವಿಚ್ಛೇದನಕ್ಕೆ ದಂಪತಿ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಪತಿ ಸಲ್ಲಿಸಿದ ಮನವಿಯ ಮೇರೆಗೆ ಕೆಳ ನ್ಯಾಯಾಲಯವು ದಂಪತಿಗೆ ವಿಚ್ಛೇದನವನ್ನು ನೀಡಿದರೆ, ವೈವಾಹಿಕ ಹಕ್ಕುಗಳನ್ನು ಮರುಸ್ಥಾಪಿಸಲು ಪತ್ನಿ ಸಲ್ಲಿಸಿದ ಮೇಲ್ಮನವಿಯನ್ನು ನ್ಯಾಯಮೂರ್ತಿ ವೈ.ಜಿ. ಖೋಬ್ರಾಗಡೆ ಅವರ ಪೀಠವು ವಿಚಾರಣೆ ನಡೆಸುತ್ತಿದೆ. ದಂಪತಿಗೆ ನೀಡಿರುವ ವಿಚ್ಛೇದನವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. 2004 ರಲ್ಲಿ ಪರ್ಭಾನಿಯಲ್ಲಿ ವಿವಾಹವಾದ ದಂಪತಿ 2012 ರವರೆಗೆ ಒಟ್ಟಿಗೆ ವಾಸಿಸುತ್ತಿದ್ದರು. ಅವರಿಗೆ ಒಬ್ಬ ಮಗಳು ಇದ್ದಾಳೆ.

ಇದನ್ನೂ ಓದಿ: Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

2012ರಲ್ಲಿ ಹೆಂಡತಿ ತನ್ನನ್ನು ತೊರೆದು ಮಗಳೊಂದಿಗೆ ತವರು ಮನೆಯಲ್ಲಿ ಹೆತ್ತವರೊಂದಿಗೆ ವಾಸಿಸುತ್ತಿದ್ದಾಳೆ ಎಂದು ವ್ಯಕ್ತಿ ನ್ಯಾಯಾಲಯದ ಮುಂದೆ ಹೇಳಿಕೊಂಡಿದ್ದಾನೆ. ಇದಾದ ಬಳಿಕ 2015ರಲ್ಲಿ ವೈವಾಹಿಕ ಹಕ್ಕುಗಳ ಮರುಸ್ಥಾಪನೆಗಾಗಿ ಪತ್ನಿ ಮನವಿ ಸಲ್ಲಿಸಿದ್ದು, ನ್ಯಾಯಾಲಯವು ಅವರ ಪರವಾಗಿ ತೀರ್ಪು ನೀಡಿದ್ದರಿಂದ ಪತ್ನಿ ಗಂಡನೊಂದಿಗೆ ವಾಸಿಸಲು ಹೋಗಿದ್ದರು. ಆದರೆ ಆತ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಪತ್ನಿ ಗಂಡನ ವಿರುದ್ಧ ನಾಪತ್ತೆ ದೂರನ್ನು ದಾಖಲಿಸಿದ್ದರು. ಅವರು ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಕಾನೂನು ಹೋರಾಟವನ್ನು ಪ್ರಾರಂಭಿಸಿದರು.

ಪತ್ನಿ ತನ್ನ ಮತ್ತು ತನ್ನ ಕುಟುಂಬ ಸದಸ್ಯರ ವಿರುದ್ಧ ಸುಳ್ಳು ಕ್ರಿಮಿನಲ್ ದೂರುಗಳು ಸೇರಿದಂತೆ ವಿವಿಧ ಕೇಸುಗಳನ್ನು ದಾಖಲಿಸಿದ್ದಾರೆ. ಈ ಸುಳ್ಳು ದೂರುಗಳಿಂದಾಗಿ ತಾನು ಮತ್ತು ತನ್ನ ಕುಟುಂಬ ಸದಸ್ಯರು ಮಾನಸಿಕ ಕ್ರೌರ್ಯವನ್ನು ಅನುಭವಿಸಿರುವುದಾಗಿ ವ್ಯಕ್ತಿ ನ್ಯಾಯಾಲಯದ ಮುಂದೆ ಹೇಳಿದ್ದಾರೆ. ಅಲ್ಲದೇ ಪತ್ನಿ ತನ್ನ ತಂದೆ ಮತ್ತು ಸಹೋದರನ ವಿರುದ್ಧವೂ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಕಲಿ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ . ಅನಂತರ ಅವರನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಲಾಯಿತು, ಆದರೆ ಪತ್ನಿಯಿಂದಾಗಿ ತನ್ನ ಕುಟುಂಬ ಸದಸ್ಯರು ಆಘಾತವನ್ನು ಅನುಭವಿಸಿದ್ದಾರೆ ಮತ್ತು ಸಮಾಜದಲ್ಲಿ ಅವರ ಖ್ಯಾತಿಯನ್ನು ಕಳೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ತನಗೆ ಅತ್ತೆಯಂದಿರು ಕಿರುಕುಳ ನೀಡಿರುವುದಾಗಿ ಪ್ರಕರಣ ದಾಖಲಿಸಿಸಿರುವುದಾಗಿ ಮಹಿಳೆ ನ್ಯಾಯಾಲಯದ ಮುಂದೆ ತಿಳಿಸಿದ್ದಾರೆ.


ನ್ಯಾ. ಖೋಬ್ರಗಡೆ ಅವರು ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಿದ ಅನಂತರ, ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿಯಲ್ಲಿ ವಿಚಾರಣೆಯನ್ನು ಪ್ರಾರಂಭಿಸುವುದು ಮತ್ತು ದಾಂಪತ್ಯದ ಹಕ್ಕುಗಳನ್ನು ಮರುಸ್ಥಾಪಿಸುವುದು ಕ್ರೌರ್ಯವಲ್ಲ. ಆದರೆ, ಪತಿ, ಅವರ ತಂದೆ, ಸಹೋದರ ಮತ್ತು ಇತರ ಕುಟುಂಬ ಸದಸ್ಯರ ವಿರುದ್ಧ ಪೊಲೀಸ್ ಅಧಿಕಾರಿಗಳಿಗೆ ವಿವಿಧ ಸುಳ್ಳು, ಆಧಾರರಹಿತ ದೂರುಗಳನ್ನು ಸಲ್ಲಿಸುವುದು ಖಂಡಿತವಾಗಿಯೂ ಕ್ರೌರ್ಯದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಹೇಳಿದ್ದಾರೆ.

ಮಹಿಳೆಯ ಕಡೆಯಿಂದ ಕ್ರೌರ್ಯವಿದೆ ಎಂದು ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪೀಠ ಒಪ್ಪಿತು. ದಂಪತಿಗೆ ವಿಚ್ಛೇದನ ನೀಡುವ ಕೆಳ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿ ಹೈಕೋರ್ಟ್ ಮಹಿಳೆಯ ಅರ್ಜಿಯನ್ನು ವಜಾಗೊಳಿಸಿದೆ.

Continue Reading

ವೈರಲ್ ನ್ಯೂಸ್

‍Viral News: ಚಂದದ ಪ್ರೊಫೈಲ್‌ ಫೋಟೋಗೆ ಫಿದಾ ಆಗಿದ್ದವನಿಗೆ ಕಾದಿತ್ತು ಶಾಕ್‌; ಮುಂದೆ ನಡೆದಿದ್ದೇ ಬೇರೆ!

Viral News: ದೀಪೇಂದ್ರ ಸಿಂಗ್‌ ಎಂಬ ಯುವಕನಿಗೆ ಇನ್‌ಸ್ಟಾಗ್ರಾಂನಲ್ಲಿ ಮಹಿಳೆಯೊಬ್ಬಳು ಪರಿಚಯ ಆಗಿದ್ದಳು. ಆಕೆ ಪ್ರೊಫೈಲ್‌ ಪಿಕ್ಚರ್‌ಗೆ ಮನಸೋತಿದ್ದ. ಬಹಳ ಖುಷಿಯಿಂದ ಪ್ರೇಯಸಿಯನ್ನು ಭೇಟಿಯಾಗಲು ಬಂದಿದ್ದ ದೀಪೇಂದ್ರ ಸಿಂಗ್‌ಗೆ ಶಾಕ್‌ ಕಾದಿತ್ತು. ಪ್ರೊಫೈಲ್‌ ಪೋಟೋಗೂ ಅಲ್ಲಿ ಬಂದಿದ್ದಾಕೆಗೂ ಅಜಗಜಾಂತರ ವ್ಯತ್ಯಾಸ ಇತ್ತು. ಅಲ್ಲದೇ ಆಕೆ 45ವರ್ಷದ ಮಹಿಳೆ ಆಗಿದ್ದಳು.

VISTARANEWS.COM


on

Viral News
Koo

ಉತ್ತರಪ್ರದೇಶ: ಸೋಶಿಯಲ್‌ ಮೀಡಿಯಾ(Social Media)ದಲ್ಲಿ ಪ್ರೊಫೈಲ್‌ ಫೋಟೋ(Fake profile) ನೋಡಿ ಯಾಮಾರೋದು ಹೊಸ ವಿಚಾರವೇನಲ್ಲ. ಚಂದ ಫೋಟೋ ನೋಡಿ ಅದನ್ನೇ ನಿಜ ಎಂದು ಭಾವಿಸಿ ಚಾಟಿಂಗ್‌ ಮಾಡಿ ಬಳಿಕ ಹಣ ಕಳೆದುಕೊಂಡವರು ಅದೆಷ್ಟೋ ಜನರಿದ್ದಾರೆ. ಆಗಾಗ ಇಂತಹ ಘಟನೆ(Viral News)ಗಳು ಬೆಳಕಿಗೆ ಬರುತ್ತಿರುತ್ತವೆ. ಇದೀಗ ಅಂತಹದೇ ಮತ್ತೊಂದು ಘಟನೆ ಉತ್ತರಪ್ರದೇಶ(Uttar pradesh)ದ ಕಾನ್ಪುರದಲ್ಲಿ ನಡೆದಿದೆ. 20ವರ್ಷದ ಯುವಕನೋರ್ವ ಸೋಶಿಯಲ್‌ ಮೀಡಿಯಾದಲ್ಲಿ ಪರಿಚಯ ಆಗಿದ್ದ ಮಹಿಳೆಯನ್ನು ನಂಬಿ ಮೋಸ ಹೋಗಿದ್ದಾನೆ. ಪ್ರೊಫೈಲ್‌ ಫೋಟೋ ಕಂಡು ಪ್ರೀತಿಯಲ್ಲಿ ಬಿದ್ದಿದ್ದ ಆ ಯುವಕನಿಗೆ ನೇರವಾಗಿ ಆಕೆಯನ್ನು ನೋಡಿ ಶಾಕ್‌ ಆಗಿದೆ ಇದರಿಂದ ಕೋಪಗೊಂಡ ಆತನ ಆಕೆಯನ್ನು ಚೆನ್ನಾಗಿ ಥಳಿಸಿದ್ದಾನೆ.

ಘಟನೆ ವಿವರ

20 ವರ್ಷದ ದೀಪೇಂದ್ರ ಸಿಂಗ್‌ ಎಂಬ ಯುವಕನಿಗೆ ಇನ್‌ಸ್ಟಾಗ್ರಾಂನಲ್ಲಿ ಮಹಿಳೆಯೊಬ್ಬಳು ಪರಿಚಯ ಆಗಿದ್ದಳು. ಆಕೆ ಪ್ರೊಫೈಲ್‌ ಪಿಕ್ಚರ್‌ಗೆ ಮನಸೋತಿದ್ದ. ಹಲವು ದಿನಗಳಿಂದ ಆಕೆಯ ಜೊತೆ ಚಾಟಿಂಗ್‌ ಮಾಡುತ್ತಿದ್ದ ಆತ ಪ್ರೇಮ ನಿವೇದನೆಯನ್ನೂ ಮಾಡಿದ್ದ. ಮುಂದೆ ಮದುವೆ ಆಗಬೇಕೆಂದೂ ಇಬ್ಬರೂ ನಿರ್ಧರಿಸಿದ್ದರು. ಇಷ್ಟೆಲ್ಲಾ ಬರೀ ಚಾಟಿಂಗ್‌ನಲ್ಲೇ ನಡೆದಿತ್ತು. ಹೀಗೆ ನಡೆಯುತ್ತಿದ್ದಾಗ ಮುಖಾಮುಖಿ ಭೇಟಿಯಾಗುವಂತೆ ದೀಪೇಂದ್ರ ಸಿಂಗ್‌ ಆಕೆಯನ್ನು ಕೇಳಿದ್ದಾಳೆ. ಅದಕ್ಕೆ ಒಪ್ಪಿದ ಆಕೆ ದೀಪೇಂದ್ರ ಸಿಂಗ್‌ನನ್ನು ಭೇಟಿ ಆಗಲು ಬಂದಿದ್ದಳು. ಆದರೆ ಇವರಿಬ್ಬರ ಈ ಇನ್‌ಸ್ಟಾಗ್ರಾಂ ಪ್ರೇಮ ಕತೆಯಲ್ಲಿ ಒಂದು ಟ್ವಿಸ್ಟ್‌ ಇತ್ತು. ಬಹಳ ಖುಷಿಯಿಂದ ಪ್ರೇಯಸಿಯನ್ನು ಭೇಟಿಯಾಗಲು ಬಂದಿದ್ದ ದೀಪೇಂದ್ರ ಸಿಂಗ್‌ಗೆ ಶಾಕ್‌ ಕಾದಿತ್ತು. ಪ್ರೊಫೈಲ್‌ ಪೋಟೋಗೂ ಅಲ್ಲಿ ಬಂದಿದ್ದಾಕೆಗೂ ಅಜಗಜಾಂತರ ವ್ಯತ್ಯಾಸ ಇತ್ತು. ಅಲ್ಲದೇ ಆಕೆ 45ವರ್ಷದ ಮಹಿಳೆ ಆಗಿದ್ದಳು.

ಮಹಿಳೆಗೆ ಥಳಿಸಿ, ಎಸ್ಕೇಪ್

ಎದುರಿಗೆ ನಿಂತಿದ್ದ ಮಹಿಳೆಯನ್ನು ಕಂಡು ಕೋಪಗೊಂಡಿದ್ದ ದೀಪೇಂದ್ರ ಸಿಂಗ್‌ ಆಕೆಯನ್ನು ಮುಖಾಮೂತಿ ನೋಡದೇ ಚಚ್ಚಿದ್ದಾನೆ. ನೆಲಕ್ಕೆ ಹಾಕಿ ಆಕೆಯ ತಲೆಗೆ ಒದ್ದು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ. ಬಳಿಕ ಆಕೆಯ ಮೊಬೈಲ್‌ ಅನ್ನೂ ಕಸಿದು ಅಲ್ಲಿಂದ ಎಸ್ಕೇಪ್‌ ಆಗಿದ್ದಾನೆ. ಅಲ್ಲಿಂದ ಹೇಗೋ ಪೊಲೀಸ್‌ ಠಾಣೆಗೆ ಬಂದ ಮಹಿಳೆ ದೀಪೇಂದ್ರ ಸಿಂಗ್‌ ವಿರುದ್ಧ ದೂರು ದಾಖಲಿಸಿದ್ದಾಳೆ. ದೂರಿನಾಧಾರದಲ್ಲಿ ತನಿಖೆ ಆರಂಭಿಸಿದ್ದ ಪೊಲೀಸರು ದೀಪೇಂದ್ರ ಸಿಂಗ್‌ನನ್ನು ಅರೆಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Columbia University: ಕೊಲಂಬಿಯಾ ವಿವಿ ಪ್ರವೇಶಿಸಿದ ನ್ಯೂಯಾರ್ಕ್‌ ಪೊಲೀಸರು; ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಬಂಧನ

ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲೂ ಇಂತಹದ್ದೇ ಪ್ರಕರಣವಂದು ಬೆಳಕಿಗೆ ಬಂದಿತ್ತು. ಲೊಕ್ಯಾಂಟೋ ಆ್ಯಪ್ (Locanto App) ಬಳಸುವವರನ್ನೇ ಟಾರ್ಗೆಟ್‌ ಮಾಡಿ ಸುಲಿಗೆ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನದೀಂ ಪಾಷ ಹಾಗೂ ನಾಗೇಶ್ ಎಂಬ ಖದೀಮರು ಹುಡುಗಿ ಹೆಸರಲ್ಲಿ ಲೊಕ್ಯಾಂಟೋ ಆ್ಯಪ್‌ನಲ್ಲಿ ಚೆಂದದ ಫೋಟೊ ಹಾಕಿ ಫೇಕ್‌ ಪ್ರೊಫೈಲ್ ಕ್ರಿಯೇಟ್‌ ಮಾಡುತ್ತಿದ್ದರು. ಬಳಿಕ ಆ ಅಕೌಂಟ್‌ನಿಂದ‌ ತಾವೇ ಮೊದಲು ಮೆಸೇಜ್ ಮಾಡುತ್ತಿದ್ದರು. ಸಲುಗೆಯಿಂದ ಮಾತಾಡುತ್ತಾ ನಂಬಿಕೆಯನ್ನು ಗಿಟ್ಟಿಸಿಕೊಂಡು ಮರುಳು ಮಾಡುತ್ತಿದ್ದರು.

Continue Reading

ಪ್ರಮುಖ ಸುದ್ದಿ

Bomb Threat: ದಿಲ್ಲಿಯ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ, ಮಕ್ಕಳ ತೆರವು

Bomb Threat: ಬಾಂಬ್ ಸ್ಕ್ವಾಡ್ ಮತ್ತು ಶ್ವಾನ ದಳ ಶಾಲೆಗಳ ಆವರಣದಲ್ಲಿ ಪರಿಶೀಲನೆ ನಡೆಸುತ್ತಿವೆ. ಬಾಂಬ್ ಪತ್ತೆ ಘಟಕ, ಬಾಂಬ್ ನಿಷ್ಕ್ರಿಯ ತಂಡ ಮತ್ತು ದೆಹಲಿ ಅಗ್ನಿಶಾಮಕ ಸೇವೆಯ ತಂಡವನ್ನು ಶಾಲೆಗಳಿಗೆ ಕಳುಹಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

VISTARANEWS.COM


on

delhi schools bomb threat
Koo

ಹೊಸದಿಲ್ಲಿ: ದೆಹಲಿ- ಎನ್‌ಸಿಆರ್ (Delhi NCR) ಪ್ರದೇಶದ 12 ಕನಿಷ್ಠ ಪ್ರತಿಷ್ಠಿತ ಶಾಲೆಗಳಿಗೆ (Schools) ಬುಧವಾರ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ (Bomb Threat) ಬಂದಿದೆ. ಬುಧವಾರ ಬೆಳಗ್ಗೆ ದೆಹಲಿಯ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕ್ಷಿಪ್ರವಾಗಿ ಸ್ಥಳಾಂತರಿಸಲಾಯಿತು.

ಬಾಂಬ್ ಬೆದರಿಕೆ ಇ-ಮೇಲ್ ಸ್ವೀಕರಿಸಿದ ಶಾಲೆಗಳೆಂದರೆ – ಚಾಣಕ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಸ್ಕೃತಿ ಶಾಲೆ, ಪೂರ್ವ ದೆಹಲಿಯ ಮಯೂರ್ ವಿಹಾರ್, ದ್ವಾರಕಾ ಜಿಲ್ಲೆಯ ಡಿಪಿಎಸ್ ಶಾಲೆ, ದಕ್ಷಿಣದ ಬಸಂತ್ ಕುಂಜ್ ಪ್ರದೇಶದಲ್ಲಿರುವ ಡಿಎವಿ ಶಾಲೆ, ಅಮಿಟಿ ಸ್ಕೂಲ್, ಸಾಕೇತ್, ನವದೆಹಲಿಯ ಸಂಸ್ಕೃತಿ ಶಾಲೆ ಮುಂತಾದವು. ಸಂಸ್ಕೃತಿಯು ದೆಹಲಿಯ ಅತ್ಯಂತ ಉನ್ನತ ಮಟ್ಟದ ಶಾಲೆಗಳಲ್ಲಿ ಒಂದಾಗಿದೆ. ಬೆದರಿಕೆ ಹಿನ್ನೆಲೆಯಲ್ಲಿ ಶಾಲಾ ಆವರಣವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಶಾಲೆಗಳಲ್ಲಿ ನೋಯ್ಡಾದ ದೆಹಲಿ ಪಬ್ಲಿಕ್ ಸ್ಕೂಲ್ ಕೂಡ ಒಂದಾಗಿದೆ. ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಕೂಡಲೇ ನೋಯ್ಡಾ ಪೊಲೀಸರಿಗೆ ಎಚ್ಚರಿಕೆ ನೀಡಲಾಯಿತು. ಬಾಂಬ್ ಸ್ಕ್ವಾಡ್ ಮತ್ತು ಶ್ವಾನ ದಳ ಶಾಲೆಗಳ ಆವರಣದಲ್ಲಿ ಪರಿಶೀಲನೆ ನಡೆಸುತ್ತಿವೆ. ಬಾಂಬ್ ಪತ್ತೆ ಘಟಕ, ಬಾಂಬ್ ನಿಷ್ಕ್ರಿಯ ತಂಡ ಮತ್ತು ದೆಹಲಿ ಅಗ್ನಿಶಾಮಕ ಸೇವೆಯ ತಂಡವನ್ನು ಶಾಲೆಗಳಿಗೆ ಕಳುಹಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಹಿಂದೆ ಎಂಟು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು ಎಂದು ವರದಿಯಾಗಿತ್ತು. ನಂತರ ಇತರ ಮೂರು ಶಾಲೆಗಳ ಆಡಳಿತ ಅಧಿಕಾರಿಗಳು ಸ್ವಲ್ಪ ಸಮಯದ ನಂತರ ದೆಹಲಿ ಪೊಲೀಸ್ ನಿಯಂತ್ರಣ ಕೊಠಡಿಗೆ ಬಾಂಬ್ ಬೆದರಿಕೆಯ ಬಗ್ಗೆ ಮಾಹಿತಿ ನೀಡಿದರು. ಸಂಖ್ಯೆ ಒಟ್ಟು 12ಕ್ಕೆ ತಲುಪಿದೆ.

ಇಮೇಲ್‌ನ IP ವಿಳಾಸವು ಅದು ದೇಶದ ಹೊರಗಿನಿಂದ ಬಂದಿದೆ ಎಂದು ಸೂಚಿಸಿದೆ. ವಿಪಿಎನ್ ಮೂಲಕ ಐಪಿ ವಿಳಾಸವನ್ನು ಮರೆಮಾಚಿರಬಹುದು ಎಂದು ದೆಹಲಿ ಪೊಲೀಸರು ಶಂಕಿಸಿದ್ದಾರೆ. “ನಿನ್ನೆಯಿಂದ ಹಲವು ಸ್ಥಳಗಳಿಗೆ ಇಮೇಲ್‌ಗಳು ಬಂದಿವೆ. ಒಂದೇ ಮಾದರಿಯಲ್ಲಿ ಇವೆ. ಮೇಲ್ ಡೇಟ್‌ಲೈನ್ ಅಥವಾ BCC ಅನ್ನು ಉಲ್ಲೇಖಿಸಿಲ್ಲ. ಅಂದರೆ ಒಂದೇ ಸಂದೇಶವನ್ನು ಹಲವು ಸ್ಥಳಗಳಿಗೆ ಕಳುಹಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Taliban Writing: ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

Continue Reading

ದೇಶ

Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

Heat Wave: ದೇಶದಲ್ಲಿನ ಬಿರು ಬೇಸಿಗೆ ಜನರನ್ನು ಹೂರಾಣಾಗಿಸಿದೆ. ದೇಶದ ಹೆಚ್ಚಿನ ಭಾಗಗಳು ಉಷ್ಣಗಾಳಿಯ ಹೊಡೆತಕ್ಕೆ ಸಿಲುಕಿ ತತ್ತರಿಸಿವೆ. ಭಾರತದಲ್ಲಿನ ಈ ತಾಪಮಾನವು ಏಪ್ರಿಲ್‌ನಲ್ಲಿ ಹಲವು ದಾಖಲೆಗಳನ್ನು ಮುರಿದಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಕೇಂದ್ರ ಮತ್ತು ಉತ್ತರ ಭಾರತದ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಉಷ್ಣ ಅಲೆ ಹೆಚ್ಚಿರುತ್ತದೆ. ಆದರೆ ಅದಕ್ಕೆ ವಿರುದ್ಧವಾಗಿ ಈ ಬಾರಿ ದಕ್ಷಿಣ ಮತ್ತು ನೈಋತ್ಯ ಕರಾವಳಿಯಲ್ಲೂ ಬಿಸಿಲಿನ ಧಗೆ ಹೆಚ್ಚಾಗಿದೆ. 1901ರ ಬಳಿಕ ರಾತ್ರಿ ತಾಪಮಾನದ ದೃಷ್ಟಿಯಿಂದ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಇದು ಅತ್ಯಂತ ಬೆಚ್ಚಗಿನ ಏಪ್ರಿಲ್ ಎನಿಸಿಕೊಂಡಿದೆ. ಜತೆಗೆ ಮೂರನೇ ಅತಿ ಹೆಚ್ಚಿನ ಸರಾಸರಿ ತಾಪಮಾನವಾಗಿದೆ. ಹವಾಮಾನ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಗರಿಷ್ಠ, ಕನಿಷ್ಠ ಮತ್ತು ಸರಾಸರಿ ತಾಪಮಾನದ ದೃಷ್ಟಿಯಿಂದ ಇದು ದೇಶದ ಎರಡನೇ ಅತಿ ಹೆಚ್ಚು ಬೆಚ್ಚಗಿನ ಏಪ್ರಿಲ್ ಆಗಿದೆ.

VISTARANEWS.COM


on

Heat Wave
Koo

ನವದೆಹಲಿ: ದಿನದಿಂದ ದಿನಕ್ಕೆ ವಾತಾವರಣದ ಬಿಸಿ ಏರಿಕೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಜನ ಹೈರಾಣಾಗಿದ್ದಾರೆ. ದೇಶದ ಹೆಚ್ಚಿನ ಭಾಗಗಳು ಉಷ್ಣಗಾಳಿ (Heat Wave)ಯ ಹೊಡೆತಕ್ಕೆ ಸಿಲುಕಿ ತತ್ತರಿಸಿವೆ. ಭಾರತದಲ್ಲಿನ ಈ ತಾಪಮಾನವು ಏಪ್ರಿಲ್‌ನಲ್ಲಿ ಹಲವು ದಾಖಲೆಗಳನ್ನು ಮುರಿದಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಕೇಂದ್ರ ಮತ್ತು ಉತ್ತರ ಭಾರತದ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಉಷ್ಣ ಅಲೆ ಹೆಚ್ಚಿರುತ್ತದೆ. ಆದರೆ ಅದಕ್ಕೆ ವಿರುದ್ಧವಾಗಿ ಈ ಬಾರಿ ದಕ್ಷಿಣ ಮತ್ತು ನೈಋತ್ಯ ಕರಾವಳಿಯಲ್ಲೂ ಬಿಸಿಲಿನ ಧಗೆ ಹೆಚ್ಚಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಕೇರಳ, ಜಾರ್ಖಂಡ್, ಬಿಹಾರ್, ಸಿಕ್ಕಿಂ, ಪಶ್ಚಿಮ ಬಂಗಾಳದಲ್ಲಿ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.

1901ರ ಬಳಿಕ ರಾತ್ರಿ ತಾಪಮಾನದ ದೃಷ್ಟಿಯಿಂದ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಇದು ಅತ್ಯಂತ ಬೆಚ್ಚಗಿನ ಏಪ್ರಿಲ್ ಎನಿಸಿಕೊಂಡಿದೆ. ಜತೆಗೆ ಮೂರನೇ ಅತಿ ಹೆಚ್ಚಿನ ಸರಾಸರಿ ತಾಪಮಾನವಾಗಿದೆ. ಹವಾಮಾನ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಗರಿಷ್ಠ, ಕನಿಷ್ಠ ಮತ್ತು ಸರಾಸರಿ ತಾಪಮಾನದ ದೃಷ್ಟಿಯಿಂದ ಇದು ದೇಶದ ಎರಡನೇ ಅತಿ ಹೆಚ್ಚು ಬೆಚ್ಚಗಿನ ಏಪ್ರಿಲ್ ಆಗಿದೆ.

ಕಾರಣವೇನು?

ʼʼಕೆಲವು ರಾಜ್ಯಗಳಲ್ಲಿ ಕಂಡು ಬರುವ ಇಂತಹ ಅಸಾಮಾನ್ಯ ಹೆಚ್ಚಿನ ತಾಪಮಾನಕ್ಕೆ ಪ್ರಮುಖ ಕಾರಣವೆಂದರೆ ಎಲ್ ನಿನೊ ಮತ್ತು ಹವಾಮಾನ ಬದಲಾವಣೆ” ಎಂದು ಹವಾಮಾನ ಕಚೇರಿಯ ಹವಾಮಾನ ಮೇಲ್ವಿಚಾರಣೆಯ ಮುಖ್ಯಸ್ಥ ಒ.ಪಿ.ಶ್ರೀಜಿತ್ ಹೇಳಿದ್ದಾರೆ. “ದುರದೃಷ್ಟವಶಾತ್, ಶಾಖದಿಂದ ಸಂಭವಿಸಿದ ಸಾವುಗಳ ಬಗ್ಗೆ ನಮ್ಮಲ್ಲಿ ಇನ್ನೂ ಯಾವುದೇ ಅಂಕಿ-ಅಂಶಗಳಿಲ್ಲ. ಅತಿಯಾದ ಉಷ್ಣತೆಯಿಂದ ವರದಿಯಾಗುವ ಸಾವುಗಳನ್ನು ಮುಖ್ಯವಾಗಿ ದಾಖಲಿಸಲಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ. ಇದು ದೇಶದ ಒಟ್ಟಾರೆ ಒಂಬತ್ತನೇ ಅತಿ ಹೆಚ್ಚಿನ ತಾಪಮಾನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

1901ರ ನಂತರ ಭಾರತದಲ್ಲಿ ಅತ್ಯಂತ ಬೆಚ್ಚಗಿನ ಏಪ್ರಿಲ್ 2016ರಲ್ಲಿ ದಾಖಲಾಗಿತ್ತು. ಅದು ಎಲ್ ನಿನೋ ವರ್ಷವಾಗಿತ್ತು. ಎಲ್ ನಿನೊ ಎನ್ನುವುದು ಉಷ್ಣವಲಯದ ಪೆಸಿಫಿಕ್ ಮಹಾಸಾಗರದಲ್ಲಿನ ಹವಾಮಾನ ವೈಪರೀತ್ಯವಾಗಿದ್ದು, ಇದು ಭಾರತದಲ್ಲಿ ದುರ್ಬಲ ಮಾನ್ಸೂನ್ ಮತ್ತು ಶುಷ್ಕ ಹವಾಮಾನಕ್ಕೆ ಕಾರಣವಾಗುತ್ತದೆ.

ಮಂಗಳವಾರ (ಏಪ್ರಿಲ್‌ 30) ಪಶ್ಚಿಮ ಬಂಗಾಳದ ಬಹುತೇಕ ಎಲ್ಲ ಕೇಂದ್ರಗಳಲ್ಲಿ ತೀವ್ರ ಶಾಖದ ಅಲೆಗಳು ದಾಖಲಾಗಿವೆ. ಪನಗರ್‌ನಲ್ಲಿ 45.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 10 ಡಿಗ್ರಿ ಹೆಚ್ಚಾಗಿದೆ ಮತ್ತು ಕಲೈಕುಂಡದಲ್ಲಿ 47.2 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ. ಜಾರ್ಖಂಡ್‌ನ ಪೂರ್ವ ಸಿಂಗ್ಭುಮ್ ಜಿಲ್ಲೆಯ ಬಹರಗೋರಾದಲ್ಲಿ ಗರಿಷ್ಠ ತಾಪಮಾನವು 47.1 ಡಿಗ್ರಿಗಳಿಗೆ ಏರಿದೆ. ಇದು ಸಾಮಾನ್ಯಕ್ಕಿಂತ 7.7 ಡಿಗ್ರಿ ಸೆಲ್ಸಿಯಸ್ ಹೆಚ್ಚು ಎನ್ನುವುದು ಗಮನಾರ್ಹ.

ಇದನ್ನೂ ಓದಿ: Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

ಇನ್ನು ದಕ್ಷಿಣ ಭಾರತದ ಆಂಧ್ರಪ್ರದೇಶದ ಅನಂತಪುರದಲ್ಲಿ 44.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಆರೋಗ್ಯಾವರಂನಲ್ಲಿ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಎರಡನೇ ಗರಿಷ್ಠ ತಾಪಮಾನವಾಗಿದೆ. ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ 44.2 ಡಿಗ್ರಿ ತಾಪಮಾನ ದಾಖಲಾಗಿದೆ. ಉದಕಮಂಡಲಂನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ.

Continue Reading
Advertisement
Ambedkar Statue in kalaburagi news
ಕಲಬುರಗಿ3 mins ago

Ambedkar Statue: ಅಂಬೇಡ್ಕರ್‌ ಪ್ರತಿಮೆ ಅಪಮಾನ ಕೇಸ್‌; ಜಾಮೀನು ಪಡೆದ ಆರೋಪಿ ಮನೆಗೆ ಕಲ್ಲು ತೂರಾಟ

gold rate today 18
ಚಿನ್ನದ ದರ21 mins ago

Gold Rate Today: ಬಂಗಾರ‌ ಇಂದೇ ತಗೊಳ್ಳಿ! ಚಿನ್ನದ ಬೆಲೆ ಭಾರೀ ಇಳಿಕೆ; ಇಂದು ಇಷ್ಟಿದೆ ನೋಡಿ

Delhi Congress
ರಾಜಕೀಯ24 mins ago

Delhi Congress: ದಿಲ್ಲಿ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಪಕ್ಷಕ್ಕೆ ಗುಡ್‌ಬೈ ಹೇಳಿದ ಮಾಜಿ ಶಾಸಕರು

Duniya Vijay Visited Kolluru Shri Mookambika Devi Temple
ಸಿನಿಮಾ26 mins ago

Duniya Vijay: ಕೊಲ್ಲೂರಿನಲ್ಲಿ ʼಸ್ಯಾಂಡಲ್‌ವುಡ್‌ ಸಲಗʼವನ್ನು ಮುತ್ತಿಕೊಂಡ ಅಭಿಮಾನಿಗಳು!

Vettaiyan Movie Anirudh Ravichander to make a special appearance in Rajinikanth
ಕಾಲಿವುಡ್36 mins ago

Vettaiyan Movie: ರಜನಿಕಾಂತ್ ಸಿನಿಮಾದಲ್ಲಿ ಅನಿರುದ್ಧ್ ರವಿಚಂದರ್; ಲೀಕ್‌ ಆಯ್ತು ಫೋಟೊ!

Divorce Case
ಕ್ರೈಂ1 hour ago

Divorce Case: ಪತಿ, ಕುಟುಂಬದ ವಿರುದ್ಧದ ಸುಳ್ಳು ಕೇಸು ಕ್ರೌರ್ಯಕ್ಕೆ ಸಮಾನ; ಬಾಂಬೆ ಹೈಕೋರ್ಟ್

Hassan Pen Drive Case Prajwal Revanna
ಕ್ರೈಂ1 hour ago

Hassan Pen Drive Case: ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

Mokshita Pai realistic morning routine With special Child brother
ಕಿರುತೆರೆ1 hour ago

Mokshitha Pai: ವಿಶೇಷ ಚೇತನ ತಮ್ಮನನ್ನು ಅಮ್ಮನಂತೆ ಆರೈಕೆ ಮಾಡುತ್ತಿರುವ ʻಪಾರುʼ

Suspicious Death in Mandya
ಮಂಡ್ಯ1 hour ago

Suspicious Death : ಗೃಹಿಣಿಯ ಕುತ್ತಿಗೆಯಲ್ಲಿತ್ತು ರಕ್ತ ಹೆಪ್ಪುಗಟ್ಟಿರುವ ಕಲೆ; ಈ ಸಾವು ಕೊಲೆಯೋ, ಆತ್ಮಹತ್ಯೆಯೋ

Viral News
ವೈರಲ್ ನ್ಯೂಸ್1 hour ago

‍Viral News: ಚಂದದ ಪ್ರೊಫೈಲ್‌ ಫೋಟೋಗೆ ಫಿದಾ ಆಗಿದ್ದವನಿಗೆ ಕಾದಿತ್ತು ಶಾಕ್‌; ಮುಂದೆ ನಡೆದಿದ್ದೇ ಬೇರೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌