Kshatriya Samavesha: ಜ.29ರ ಕರ್ನಾಟಕ ಕ್ಷತ್ರಿಯ ಒಕ್ಕೂಟ ಸಮಾವೇಶ ಬೆಂಬಲಿಸಿ ರಾಮ ಕ್ಷತ್ರಿಯ ಸಂಘಟನೆಯ ಬೃಹತ್ ಬೈಕ್ ರ‍್ಯಾಲಿ - Vistara News

ಉತ್ತರ ಕನ್ನಡ

Kshatriya Samavesha: ಜ.29ರ ಕರ್ನಾಟಕ ಕ್ಷತ್ರಿಯ ಒಕ್ಕೂಟ ಸಮಾವೇಶ ಬೆಂಬಲಿಸಿ ರಾಮ ಕ್ಷತ್ರಿಯ ಸಂಘಟನೆಯ ಬೃಹತ್ ಬೈಕ್ ರ‍್ಯಾಲಿ

Kshatriya Samavesha: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.29ರಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದಿಂದ ಬೃಹತ್‌ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಮಂಕಿಯವರೆಗೆ ಬೃಹತ್ ಬೈಕ್ ರ‍್ಯಾಲಿ ಭಾನುವಾರ ನಡೆಯಿತು.

VISTARANEWS.COM


on

A massive bike rally of Rama Kshatriya Sangathan in support of Karnataka Kshatriya Okkoota convention on Jan. 29
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾಮಾಜಿಕ ಮತ್ತು ರಾಜಕೀಯ ಸಂಘಟನೆ ಬಲಪಡಿಸಲು ಕರ್ನಾಟಕ ಕ್ಷತ್ರಿಯ ಒಕ್ಕೂಟದಿಂದ ಬೆಂಗಳೂರಿನಲ್ಲಿ ಜ.29ರಂದು ಬೃಹತ್‌ ಸಮಾವೇಶ ನಡೆಯಲಿದೆ. ಈ ಸಮಾವೇಶವನ್ನು (Kshatriya Samavesha) ಬೆಂಬಲಿಸಿ ರಾಮ ಕ್ಷತ್ರಿಯ ಸಮುದಾಯದವರಿಂದ ಭಾನುವಾರ ಬೃಹತ್ ಬೈಕ್ ರ‍್ಯಾಲಿ ನಡೆಯಿತು. ಸಾವಿರಾರು ಮಂದಿ ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನದಿಂದ ಬೈಕ್‌ ರ‍್ಯಾಲಿ ಆರಂಭವಾಯಿತು. ಮಂಕಿಯ ಶ್ರೀ ಕೊಕ್ಕೇಶ್ವರದ ರಾಮ ಕ್ಷತ್ರಿಯ ಸಭಾ ಭವನದವರೆಗೆ ಬೈಕ್ ರ‍್ಯಾಲಿ ಮುಂದುವರಿಯಿತು. ಬಳಿಕ ರಾಮ ಕ್ಷತ್ರಿಯ ಸಭಾಭವನದಲ್ಲಿ ನಡೆದ ಸಭೆಯಲ್ಲಿ, ಕರ್ನಾಟಕ ಕ್ಷತ್ರಿಯ ಒಕ್ಕೂಟದ ಸಮಾವೇಶಕ್ಕೆ ಬೆಂಬಲ ವ್ಯಕ್ತಪಡಿಸಲಾಯಿತು.

ಇದನ್ನೂ ಓದಿ | Vote for OPS: ಶಿವಮೊಗ್ಗದಲ್ಲಿ ಒಪಿಎಸ್‌ ಜಾರಿಗೆ ಆಗ್ರಹಿಸಿ ಬೃಹತ್‌ ಬೈಕ್ ರ‍್ಯಾಲಿ; 3 ಸಾವಿರಕ್ಕೂ ಹೆಚ್ಚು ನೌಕರರು ಭಾಗಿ

ಈ ಸಂದರ್ಭದಲ್ಲಿ ಮಾತನಾಡಿದ ರಾಮ ಕ್ಷತ್ರಿಯ ಮಹಾ ಸಂಘದ ಅಧ್ಯಕ್ಷ ಎಸ್‌ ಕೆ ನಾಯ್ಕ್‌ ಅವರು, ಬೈಕ್ ರ‍್ಯಾಲಿಯನ್ನು ಯಶಸ್ವಿಗೊಳಿಸಿದ ಯುವ ಜನರಿಗೆ ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶಕ್ಕೆ ಬೆಂಬಲ ನೀಡಬೇಕಾದ ಅಗತ್ಯವನ್ನು ಅವರು ಒತ್ತಿ ಹೇಳಿದರು. ಎಲ್ಲ ಕ್ಷತ್ರಿಯ ಪಂಗಡಗಳು ಒಂದುಗೂಡಬೇಕು.‌ ಹೀಗೆ ಒಂದಾಗಿ ಹೋರಾಡಿದರೆ ಮಾತ್ರ ರಾಜಕೀಯ ಮತ್ತು ಸಾಮಾಜಿಕ ಸ್ಥಾನಮಾನ ಸಿಗಲು ಸಾಧ್ಯ ಎಂದವರು ವಿವರಿಸಿದರು.

ಬೆಂಗಳೂರಿನಲ್ಲಿ ಸಮಾವೇಶ
ರಾಜ್ಯದಲ್ಲಿರುವ ಎಲ್ಲ ಕ್ಷತ್ರಿಯ ಪಂಗಡಗಳನ್ನು ಒಟ್ಟಾಗಿ ಸೇರಿಸಿ ಉದಯ್‌ ಸಿಂಗ್‌ ಅವರ ನೇತೃತ್ವದಲ್ಲಿ ಕರ್ನಾಟಕ ಕ್ಷತ್ರಿಯ ಒಕ್ಕೂಟ ರಚಿಸಲಾಗಿದೆ. ರಾಜ್ಯದಲ್ಲಿ ಒಟ್ಟು 38 ಕ್ಷತ್ರಿಯ ಪಂಗಡಗಳಿದ್ದು, 1.5 ಕೋಟಿಗಿಂತ ಹೆಚ್ಚು ಕ್ಷತ್ರಿಯ ಸಮುದಾಯದವರಿದ್ದಾರೆ. ರಾಜ್ಯದ ಹಲವು ವಿಧಾನಸಭೆ ಕ್ಷೇತ್ರಗಳಲ್ಲಿ ಈ ಕ್ಷತ್ರಿಯ ಪಂಗಡಗಳ ಮತಗಳು ನಿರ್ಣಾಯಕವಾಗಿವೆ. ಈ ಎಲ್ಲ ಪಂಗಡಗಳನ್ನು ಈಗ ಒಟ್ಟಾಗಿ ಸೇರಿಸಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಸಂಘಟಿಸುವ ಉದ್ದೇಶದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.29ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ಇದನ್ನೂ ಓದಿ | Kshatriya Samavesha | ಜ.29ರ ಕರ್ನಾಟಕ ಕ್ಷತ್ರಿಯ ಒಕ್ಕೂಟ ಸಮಾವೇಶಕ್ಕೆ ರಾಮ ಕ್ಷತ್ರಿಯ ಸಂಘಟನೆಯ ಬೆಂಬಲ

ಕ್ಷತ್ರಿಯ ಸಮಾಜದ ಒಗ್ಗಟ್ಟನ್ನು ಸಮಾವೇಶದಲ್ಲಿ ತೋರಿಸಬೇಕಾಗಿದೆ. ಹಾಗಾಗಿ ರಾಮ ಕ್ಷತ್ರಿಯ ಸಮುದಾಯದ ಸಂಘಟನೆಗಳು ಈ ಸಮಾವೇಶವನ್ನು ಬೆಂಬಲಿಸಲು ನಿರ್ಧರಿಸಿವೆ. ಈ ಸಮಾವೇಶದಲ್ಲಿ ರಾಮ ಕ್ಷತ್ರಿಯ ಸಮಾಜದದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಎಸ್ ಕೆ ನಾಯ್ಕ್ ಅವರು ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Karnataka Weather Forecast : ಶನಿವಾರ ಹಲವಡೆ ಸುರಿದ ಮಳೆಯು (Rain News) ಸಾವು-ನೋವಿಗೆ ಕಾರಣವಾಗಿದೆ. ಭಾನುವಾರವೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗಾಳಿ ಜತೆಗೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದೆಡೆ ಗಾಳಿ ಜತೆಗೆ ಮಳೆಯಾಗಲಿದೆ.

ಇದನ್ನೂ ಓದಿ: Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

ಮುತ್ತತ್ತಿಗೆ ಪ್ರವಾಸಿಗರ ನಿಷೇಧ

ಮಂಡ್ಯ: ಭಾರಿ ಮಳೆಯಿಂದಾಗಿ (Karnataka Rain) ಕಾವೇರಿ ನದಿಯಲ್ಲಿ ನಿರೀಕ್ಷೆಗೂ ಮೀರಿ ನೀರಿನ ಪ್ರಮಾಣ ಹರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿಗೆ (muthathi temple) ಪ್ರವಾಸಿಗರು, ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಕೆಆರ್‌ಎಸ್‌ನಿಂದ 1.22 ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಮುತ್ತತ್ತಿಗೆ ಪ್ರವಾಸಿಗರಿಗೆ ನಿಷೇಧಾಜ್ಞೆ ಜಾರಿ ಮಾಡಿ ಮಳವಳ್ಳಿ ತಹಸೀಲ್ದಾರ್ ಕೆ.ಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಪ್ರವಾಹ ಕಡಿಮೆಯಾಗುವವರೆಗೂ ನಿಷೇಧ ಜಾರಿಯಲ್ಲಿ ಇರಲಿದೆ. ಹೀಗಾಗಿ ಪೊಲೀಸರು ಕಾವೇರಿ ನದಿ ದಡದಲ್ಲಿ ಅಪಾಯದ ಸೂಚನಾ ಫಲಕ ಹಾಕಿದ್ದಾರೆ.

ಇದನ್ನೂ ಓದಿ: land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಕಾವೇರಿ ‌ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ಹೀಗಾಗಿ ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್ ಹಾಕಲಾಗಿದೆ. ನದಿಗೆ ಇಳಿಯದಂತೆ ಜಿಲ್ಲಾಡಳಿತ ಕಬ್ಬಿಣದ ರಾಡ್‌ಗಳನ್ನು ಬಳಸಿ ತಡೆಗೋಡೆ‌ ನಿರ್ಮಿಸಿದೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಬಂದು ತಮ್ಮ‌ಪೂರ್ವಿಕರು, ಸಂಬಂಧಿಕರ ಅಸ್ತಿ ವಿಸರ್ಜನೆ ಜತೆಗೆ ಪಿಂಡ ಪ್ರಧಾನ ಮಾಡುತ್ತಿದ್ದರು. ಈಗ ಕಾವೇರಿ‌ ನದಿಯಲ್ಲಿ ಪ್ರವಾಹ ಹಿನ್ನೆಲೆ ನದಿ ದಂಡೆಯಲ್ಲಿ ಕುಳಿತು ಪೂಜೆ ಮಾಡುವ ಅವಕಾಶ ಇಲ್ಲ. ಜನರು ಪಿಂಡ ಪ್ರದಾನಕ್ಕೆ ಬಂದು ವಾಪಸ್‌ ಹೋಗುತ್ತಿದ್ದಾರೆ.

ನಿಮಿಷಾಂಭ ದೇಗುಲದ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ

ನಿಮಿಷಾಂಭ ದೇಗುಲದ ಭಕ್ತರಿಗೂ ಕಾವೇರಿ ಪ್ರವಾಹ ಬಿಸಿ ತಟ್ಟಿದೆ. ಕೆಆರ್‌ಎಸ್‌ನಿಂದ ನದಿಗೆ ಅಧಿಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ಪ್ರಸಿದ್ಧ ನಿಮಿಷಾಂಭ ದೇವಾಲಯದ ಬಳಿ ಪ್ರವಾಹದ ಆತಂಕ ಎದುರಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ದೇವಸ್ಥಾನದ ಬಳಿಯ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ರಂಗನತಿಟ್ಟು ಪಕ್ಷಿಧಾಮ ವಾಕಿಂಗ್‌ ಪಾಥ್‌ ಮುಳುಗಡೆ

ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರು ಕಾವೇರಿ ನದಿಯಿಂದಾಗಿ ರಂಗನತಿಟ್ಟು ಪಕ್ಷಿಧಾಮಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಕಾವೇರಿ ನೀರು ನುಗ್ಗಿದೆ. ಇದರಿಂದಾಗಿ ವಾಕಿಂಗ್ ಪಾಥ್, ಅರಣ್ಯ ಇಲಾಖೆ ಕಚೇರಿ ಜಲಾವೃತಗೊಂಡಿದೆ. ಈಗಾಗಲೇ ‌ಪಕ್ಷಿಧಾಮಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ. ಜತೆಗೆ ಬೋಟಿಂಗ್ ವ್ಯವಸ್ಥೆ ಕೂಡ ಸ್ಥಗಿತ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Karnataka Rain : ಭಾರಿ ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿದ ಮನೆ ಯಜಮಾನ ಹೃದಯಾಘಾತದಿಂದ ಮೃತಪಟ್ಟರೆ, ಮತ್ತೊಂದು ಕಡೆ ಕಾಲು ಜಾರಿ ಬಿದ್ದ ವೃದ್ಧೆ ಕೊಚ್ಚಿ ಹೋಗಿದ್ದಾರೆ.

VISTARANEWS.COM


on

By

karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಹೃದಯಾಘಾತದಿಂದ (Heart attack) ಮನೆ ಯಜಮಾನ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ನಿನ್ನೆ ಶನಿವಾರ ಸಂಜೆ ಮನೆಗೆ ನೀರು ಬರುವ ವಿಚಾರ ತಿಳಿದು ದಶರಥ ಬಂಡಿ (80) ಎಂಬುವವರು ಅಘಾತಕ್ಕೆ ಒಳಗಾಗಿ, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇತ್ತ ದಶರಥ ಕುಟುಂಬಸ್ಥರು ರಾತ್ರಿ ಅಂತ್ಯಸಂಸ್ಕಾರ ಮಾಡಿ ಮನೆಗೆ ಹೋಗುವಷ್ಟರಲ್ಲಿ ಮನೆಯೇ ಮುಳುಗಿ ಹೋಗಿದೆ. ರಾತ್ರೋರಾತ್ರಿ ಉಟ್ಟಬಟ್ಟೆಯಲ್ಲೇ ಹೊರ ಬಂದಿದ್ದೇವೆ ಎಂದು ಗೋಕಾಕ್ ನಗರದ ಉಪ್ಪಾರ ಗಲ್ಲಿ ನಿವಾಸಿ‌ ಲಕ್ಷ್ಮಿ ಅಳಲು ತೋಡಿಕೊಂಡಿದ್ದಾರೆ. ಸದ್ಯ ಮಕ್ಕಳು, ನಾಯಿ ಮರಿಗಳ ಜತೆಗೆ ಕಾಳಜಿ ಕೇಂದ್ರಕ್ಕೆ ಶಿಫ್ಟ್‌ ಆಗಿದ್ದಾರೆ. ಮನೆ ಯಜಮಾನ ಮೃತಪಟ್ಟ ಬಳಿಕ ಕಾರ್ಯಗಳನ್ನೂ ಮಾಡಲಾಗದೇ ಕುಟುಂಬ ಕಂಗಲಾಗಿದ್ದಾರೆ.

ಕಾಲು ಜಾರಿ ನದಿಗೆ ಬಿದ್ದ ವೃದ್ಧೆ ಸಾವು

ಅಪರಿಚಿತ ವೃದ್ಧೆ ಕುಮದ್ವತಿ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದು, ವೃದ್ದೆ ಜೀವ ಉಳಿಸಲು ತುಂಬಿದ ನದಿಗೆ ಬಸ್‌ ಚಾಲಕ ನದಿಗೆ ಹಾರಿದ್ದರು. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ತಿಪ್ಪಾಯಿಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ನದಿಗೆ ಬಿದ್ದ ಅಪರಿಚಿತ ವೃದ್ಧೆ ಕಂಡು ಜೀವ ಉಳಿಸಲು ಮುಂದಾದರು. ಆದರೆ ಉಸಿರಾಟದ ತೊಂದರೆಯಿಂದ ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಜೀವದ ಹಂಗು ತೊರೆದು ವೃದ್ದೆ ಕಾಪಾಡಲು ಮುಂದಾದ ಚಾಲಕ ಮಜೀದ್ ಸಾಬ್ ಗುಬ್ಬಿ ಅವರ ಪ್ರಯತ್ನ ವಿಫಲವಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

ಪ್ರವಾಹ ಭೀತಿ 10ಕ್ಕೂ ಹೆಚ್ಚು ಗರ್ಭಿಣಿಯರ ಸ್ಥಳಾಂತರ

ರಾಯಚೂರಲ್ಲಿ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಗರ್ಭಿಣಿಯರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಆಂಬ್ಯುಲೆನ್ಸ್‌ ಮೂಲಕ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಕಡದರಗಡ್ಡಿ, ಮ್ಯಾದರಗಡ್ಡಿ, ಹಂಚಿನಾಳ, ಯರಗೋಡಿ, ವಕ್ಕಂಗಡ್ಡಿ ಸೇರಿದಂತೆ ಇನ್ನಿತರ ನಡುಗಡ್ಡೆ ಗ್ರಾಮಗಳಲ್ಲಿ ಇದ್ದ 15 ಮಂದಿ ಗರ್ಭಿಣಿಯರನ್ನು ಹಂಚಿನಾಳ ಗ್ರಾಮದ ಹೆಲ್ತ್ ಸೆಂಟರ್ ಶಿಫ್ಟ್‌ ಮಾಡಲಾಗಿದೆ. ಕೃಷ್ಣಾ ನದಿಯಿಂದಾಗಿ ಪ್ರವಾಹ ಹೆಚ್ಚಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ.

ಕೃಷ್ಣಾ ನದಿಯ ಪ್ರವಾಹಕ್ಕೆ ಕೊಳ್ಳುರು ಸೇತುವೆ ಸಂಪೂರ್ಣ ಜಲಾವೃತ

ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೊಳ್ಳುರು ಸೇತುವೆ ಮುಳುಗಡೆಯಾಗಿದೆ. ಕೃಷ್ಣಾ ನದಿಯ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಸೇತುವೆಗೆ ಜಲದಿಗ್ಭಂಧನ ಹಾಕಲಾಗಿದೆ. ಕೊಳ್ಳುರು ಸೇತುವೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ಎತ್ತರ ನಿರ್ಮಾಣ ಮಾಡಬೇಕೆಂದು ಬಹು ವರ್ಷಗಳ ಬೇಡಿಕೆ ಇದೆ. ಸಾಕಷ್ಟು ಜನ ಪ್ರತಿನಿಧಿ ಅಧಿಕಾರಿಗಳು ಸೇತುವೆ ಎತ್ತರ ನಿರ್ಮಾಣ ಮಾಡುತ್ತೆವೆಂದು ಕೇವಲ ಭರವಸೆ ನೀಡಿ ಹೋಗಿದ್ದಾರೆ.

ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಮೇಕೆಗಳು ಸಾವು

ಭಾರಿ ಮಳೆಗೆ ಮನೆ ಗೋಡೆ ಕುಸಿದು 7 ಮೇಕೆಗಳು ಮೃತಪಟ್ಟಿವೆ. ಚಿತ್ರದುರ್ಗದ ಭೀಮಸಮುದ್ರ ಬಳಿ ತೊರೆ ಬಯಲು ಗ್ರಾಮದಲ್ಲಿ ಘಟನೆ ನಡೆದಿದೆ. ತೊರೆ ಬಯಲು ಗ್ರಾಮದ ಜಯಣ್ಣ ಎಂಬುವವರ ಮನೆ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಜಯಣ್ಣ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆ ಗೋಡೆ ಮಣ್ಣಿನಡಿ ಸಿಲುಕಿ ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ.

ಕಾರು, ಆಟೋ ಮೇಲೆ ಉರುಳಿ ಬಿದ್ದ ಮರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮರಗಳ ಧರಶಾಹಿ ಮುಂದುವರಿದಿದೆ. ಯಾವುದೇ ಮಳೆ ಇಲ್ಲದೆ ಇದ್ದರೂ ದಿಢೀರ್ ಬೃಹತ್‌ ಗಾತ್ರದ ಮರವೊಂದು ಉರುಳಿದೆ. ಪರಿಣಾಮ 2 ಕಾರುಗಳು, ಆಟೋವೊಂದು ಜಖಂಗೊಂಡಿದೆ. ಕ್ವೀನ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಆಟೋ ಡ್ರೈವರ್‌ ದಿವಾಕರ್‌, ಪ್ರಯಾಣಿಕ ಸ್ಟಾಲಿನ್ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಸಹಾಯದಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮರ ಬಿದ್ದ ಪರಿಣಾಮ ರಸ್ತೆ ಬಂದ್ ಮಾಡಬೇಕಾಯಿತು.

ಮನೆ ಮೇಲೆ ಬಿದ್ದ ತೆಂಗಿನಮರ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ಗಾಬಿತವಾಡದಲ್ಲಿ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಗಾಬಿತವಾಡದ ಆಶಾ ಪಟೇ ಎಂಬುವವರ ಮನೆಯ ಚಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಭಟ್ಕಳದ ಹಾಡುವಳ್ಳಿ ಪಂಚಾಯತ ವ್ಯಾಪ್ತಿಯ ಹೇರಿಬಿಳ್ಳೂರು ಗ್ರಾಮದಲ್ಲಿ ಮಂಜುನಾಥ ನಾಯ್ಕ, ಕುಪ್ಪಯ್ಯ ನಾಯ್ಕ ಸೇರಿ ಹಲವರ ಅಡಿಕೆ ತೋಟಕ್ಕೆ ಹಾನಿಯಾಗಿದೆ. ಅಡಿಕೆ ಮರ ಬಿದ್ದು ಸುಮಾರು 8 ಎಕರೆ ತೋಟಕ್ಕೆ ಹಾನಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

Karnataka Rain: ಮಳೆಯು ನಾನಾ ಅವಾಂತರವನ್ನೇ ಸೃಷ್ಟಿಸಿರುವುದು ಮಾತ್ರವಲ್ಲದೇ ಸಾವು-ನೋವಿಗೂ ಕಾರಣವಾಗಿದೆ. ಚಲಿಸುತ್ತಿದ್ದ ಬೈಕ್‌ ಮೇಲೆ ಮರ ಬಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿ ಚಾಲಕ ಪರದಾಡುವಂತಾಯಿತು.

VISTARANEWS.COM


on

By

karnataka Rain
Koo

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಗಾಳಿ ಜತೆಗೆ ವ್ಯಾಪಕ (Karnataka Rain) ಮಳೆಯಾಗುತ್ತಿದೆ. ಶಿವಮೊಗ್ಗದಲ್ಲಿ ಭಾರಿ ಮಳೆಗೆ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೀನ್ಮನೆಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ರಾಮಪ್ಪ (26) ಮೃತ ದುರ್ದೈವಿ.

ಚಿಕ್ಕಮಗಳೂರಲ್ಲಿ ಮೊಬೈಲ್ ಚಾರ್ಜ್ ಮಾಡಲು ಜನರೇಟರ್ ಮೊರೆ!

ಗಾಳಿ ಮಳೆ ಅಬ್ಬರಕ್ಕೆ ಚಿಕ್ಕಮಗಳೂರಿನ ಬಹುತೇಕ ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಒಂದು ವಾರದಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಕಳಸ,ಮೂಡಿಗೆರೆ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ತಾಲೂಕು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದೆ. ಮೊಬೈಲ್ ಚಾರ್ಜ್ ಮಾಡಲು ಹಾಗೂ ಮನೆ ಬಳಕೆಗೆ ಜನರೇಟರ್ ಮೊರೆ ಹೋಗಿದ್ದಾರೆ. ಡೀಸೆಲ್ ಜನರೇಟರ್ ಬಳಸಿ ಮೊಬೈಲ್ ಚಾರ್ಜಿಂಗ್ ಮಾಡಿಕೊಳ್ಳುತ್ತಿದ್ದಾರೆ.

ಕೋಡಿ ಬಿದ್ದು ಅಚ್ಚರಿ ಮೂಡಿಸಿದ ಅಯ್ಯನಕೆರೆ

ನಿನ್ನೆ ಶುಕ್ರವಾರ ಮದಗದ ಕೆರೆ ಕೋಡಿ ಬಿದ್ದ ಬೆನ್ನಲ್ಲೆ ಇಂದು ಶನಿವಾರ ಅಯ್ಯನಕೆರೆ ಕೋಡಿ ಬಿದ್ದಿದೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದ ಕೆರೆಗಳು ಕೋಡಿ ಬಿದ್ದು ಜಲಪಾತದಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಇನ್ನೂ ಶನಿವಾರವೇ ಅಯ್ಯನಕೆರೆ ಕೋಡಿ ಬೀಳುವುದು ಪ್ರತೀತಿ. ಮತ್ತೆ ಶನಿವಾರವೇ ಕೋಡಿಬಿದ್ದು ಅಚ್ಚರಿ ಮೂಡಿಸಿದೆ. ಹತ್ತಾರು ಹಳ್ಳಿ, ಸಾವಿರಾರು ಎಕರೆ ಜಮೀನು, ಜನ-ಜಾನುವರಗಳಿಗೆ ಆಶ್ರಯವಾಗಿದೆ.

ಇನ್ನೂ ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆ ಕೋಡಿ ಬಿದ್ದು ಭಾರೀ ಪ್ರಮಾಣದ ನೀರು ಹರಿದುಹೋಗಿದೆ. ಕೋಡಿ ಬಿದ್ದ ಕೆರೆ ನೀರಿನಿಂದ ಹೊಲಗದ್ದೆ-ತೋಟಗಳು ಜಲಾವೃತಗೊಂಡಿದೆ. ಇತ್ತ ಸೇತುವೆಗಳು ಜಲಾವೃತಗೊಂಡು ಹಳ್ಳಿಗಳ‌ ಸಂಪರ್ಕ ಕಡಿತಗೊಂಡಿದೆ. ನೀರಿನ ವೇಗಕ್ಕೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಇತ್ತ ಭದ್ರಾ ನದಿ ಅಬ್ಬರಕ್ಕೆ ರಾಜ್ಯ ಹೆದ್ದಾರಿ ಜಲಾವೃತಗೊಂಡಿದೆ. ಬಾಳೆಹೊನ್ನೂರು-ಕೊಟ್ಟಿಗೆಹಾರ- ಕಳಸ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ನೀರು ಏರಿಕೆ ಆಗುತ್ತಿದೆ. ಬಾಳೆಹೊನ್ನೂರು ಕಳಸ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ:Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

ತೆಪ್ಪದಲ್ಲಿ ತೆರಳಿದ ಲೈನ್‌ಮ್ಯಾನ್‌

ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ವಿದ್ಯುತ್ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ಲೈನ್ ಸರಿಪಡಿಸಲು ಮೆಸ್ಕಾಂ ಸಿಬ್ಬಂದಿ ಪ್ರಾಣ ಪಣಕಿಟ್ಟು ಕೆಲಸ ಮಾಡುತ್ತಿದ್ದಾರೆ. ಉಕ್ಕಿ ಹರಿಯುವ ನೀರಿನಲ್ಲಿ ತೆಪ್ಪದಲ್ಲಿ ತೆರಳಿ ವಿದ್ಯುತ್ ಲೈನ್ ಸರಿಪಡಿಸಿದ್ದಾರೆ. ಬಾಳೆಹೊನ್ನೂರು-ಗಡಿಗೇಶ್ವರದ ಬಳಿ ವಿದ್ಯುತ್ ತಂತಿಗಳು ಹೊಳೆಯಲ್ಲಿ ಮುಳುಗಿ ಹೋಗಿದೆ. ಜೆ.ಇ ಗಣೇಶ್, ಕಾಂತರಾಜು, ಶಿವಕುಮಾರ್ ಸರಿಪಡಿಸುತ್ತಿದ್ದಾರೆ. ಮಲೆನಾಡಲ್ಲಿ ವಿದ್ಯುತ್ ಸಂಪರ್ಕ ಸರಿಪಡಿಸುವುದೇ ದೊಡ್ಡ ಸಾಹಸವಾಗಿದೆ. ಜಿಲ್ಲೆಯಾದ್ಯಂತ 2,400ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

ಮರ ಬಿದ್ದು ಮನೆ ಜಖಂ

ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿಗೆ ಸುಂಟಿಕೊಪ್ಪದ ಪನ್ಯ ಬಳಿ ಸಿಲ್ವರ್‌ ಮರ ಧರೆಗುರುಳಿತ್ತು. ಇದರಿಂದಾಗಿ ಸುಂಟಿಕೊಪ್ಪ ಮಾದಾಪುರ ಸೋಮವಾರಪೇಟೆ ರಸ್ತೆ ಬಂದ್ ಆಗಿತ್ತು. ಮಡಿಕೇರಿ ಹೊರವಲಯದ ಕರ್ಣಗೇರಿಯಲ್ಲಿ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿತ್ತು. ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ವಾಸದ ಮನೆ ಜಖಂಗೊಂಡಿತ್ತು.

ನೀರಿನಲ್ಲಿ ಸಿಲುಕಿದ ಕಾರು

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ತಡರಾತ್ರಿ ನೀರಿನಲ್ಲಿ ಕಾರುವೊಂದು ಸಿಲುಕಿತ್ತು. ನೀರಿನಲ್ಲಿ ಸಿಲುಕಿ ಕಾರು ಚಾಲಕ ಪರದಾಡಿದರು. ಬೇಲೂರು ತಾಲೂಕಿನ ಬಿರಡಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಬಂದು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಮತ್ತೊಂದು ವಾಹನ ತಂದು ನೀರಿನಲ್ಲಿ ಸಿಲುಕಿದ್ದ ಕಾರನ್ನು ಹೊರಗೆ ಎಳೆದು ತಂದರು. ಬಿರಡಹಳ್ಳಿ ಬಳಿಯ ಸೇತುವೆ ಮುಳುಗಡೆಯಾಗಿ ಸುಮಾರು ಹದಿನೈದು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಸಕಲೇಶಪುರದ ತಾಲೂಕಿನ ಹಾನುಬಾಳು ಹೋಬಳಿಯಲ್ಲಿ ರಸ್ತೆ ಜಲಾವೃತಗೊಂಡು ಹಾನುಬಾಳು-ವೆಂಕಟಹಳ್ಳಿ-ರಾಗಿಗುಂಡಿ-ಅಗ್ನಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಇತ್ತ ಸಕಲೇಶಪುರ ಹೊಳೆಮಲ್ಲೇಶ್ವರ ದೇಗುಲ ಜಲಾವೃತಗೊಂಡಿತ್ತು. ಗರ್ಭಗುಡಿಯೊಳಗೆ ಅಪಾರ ಪ್ರಮಾಣದ ನೀರು ನುಗ್ಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

land slide: ಹಾಸನದ ಸಕಲೇಶಪುರ (Sakaleshpur) ತಾಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಗುಡ್ಡದ ಮಣ್ಣು ಕುಸಿದಿದೆ. ಹೀಗಾಗಿ ಇಂದಿನಿಂದ ಜು.29ರವರೆಗೆ ಮಂಗಳೂರು-ವಿಜಯಪುರ ಎಕ್ಸ್‌ಪ್ರೆಸ್‌, ಬೆಂಗಳೂರು -ಮುರುಡೇಶ್ವರ ಎಕ್ಸ್‌ಪ್ರೆಸ್‌, ಬೆಂಗಳೂರು-ಕಾರಾವರ ಎಕ್ಸ್‌ಪ್ರೆಸ್‌ ರೈಲುಗಳು ಸೇರಿದಂತೆ ಹಲವು ರೈಲುಗಳ ಓಡಾಟ ರದ್ದಾಗಿದೆ.

VISTARANEWS.COM


on

By

Landslide on railway track in Edakumeri Express trains suspended till July 29
Koo

ಬೆಂಗಳೂರು: ಹಾಸನ ಜಿಲ್ಲೆಯ (Hassan news) ಮಲೆನಾಡು ‌ಭಾಗದಲ್ಲಿ ಮಳೆಯ ಆರ್ಭಟ (Karnataka Rain News) ಮುಂದುವರಿದಿದೆ. ಶಿರಾಡಿ ಘಾಟಿಯ (Shiradi Ghat) ರೈಲ್ವೆ ಹಳಿಯ (Railway Track) ಮೇಲೆ ಮಣ್ಣು ಕುಸಿತ (landslide) ಆಗಿದೆ. ಸಕಲೇಶಪುರ (Sakaleshpur) ತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದಿದೆ. ಹೀಗಾಗಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಸಂಭವಿಸಿದೆ. ಈ ಕಾರಣ ಕೆಲವು ರೈಲುಗಳನ್ನು ಮರು ನಿಗದಿಪಡಿಸಲಾಗಿದೆ ಜತೆಗೆ ರದ್ದುಪಡಿಸಲಾಗಿದೆ.

ಮೈಸೂರು ವಿಭಾಗದ ಹಾಸನ ಮತ್ತು ಶಾಂತಿಗ್ರಾಮ ನಡುವೆ ಭೂಕುಸಿತದಿಂದಾಗಿ ಮಾರ್ಗ ಬದಲಿಸಲಾದ ಪ್ಯಾರಿಂಗ್ ರೈಲು ತಡವಾಗಿ ಚಲಿಸಲಿದೆ. ಹೀಗಾಗಿ ರೈಲು ಸಂಖ್ಯೆ 06920 ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ಮಧ್ಯಾಹ್ನ 12 ಗಂಟೆ ಬದಲಿಗೆ ಸಂಜೆ 06:30ಕ್ಕೆ ವಿಜಯಪುರದಿಂದ ಹೊರಡಲಿದೆ (ನಿಗದಿತ ನಿರ್ಗಮನ ದಿನಾಂಕ 27.07.2024ರ 12.00 ಗಂಟೆ)

ಇದನ್ನೂ ಓದಿ: Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

ಯಾವ್ಯಾವ ರೈಲು ಸೇವೆಗಳು ರದ್ದು

  1. 1.ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  2. 2.ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  3. 3.ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  4. 4. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  5. 5.ರೈಲು ಸಂಖ್ಯೆ 06567 ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  6. 6.ರೈಲು ಸಂಖ್ಯೆ 06568 ಕಾರವಾರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  7. 7.ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  8. 8.ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  9. 9.ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ದಿನಾಂಕ 29.07.2024 ರಂದು ರದ್ದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ind vs sl
ಪ್ರಮುಖ ಸುದ್ದಿ17 mins ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ26 mins ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ37 mins ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Infiltration
ದೇಶ46 mins ago

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ICW 2024
ಫ್ಯಾಷನ್1 hour ago

ICW 2024: ಮುಂಬರುವ ವೆಡ್ಡಿಂಗ್‌ ಸೀಸನ್‌ ಮೆನ್ಸ್ ವೇರ್‌ ಅನಾವರಣಗೊಳಿಸಿದ ಇಂಡಿಯಾ ಕೌಚರ್‌ ವೀಕ್‌ 2024

Indian Army
ದೇಶ2 hours ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ2 hours ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ2 hours ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Aishwarya Rai Bachchan
ಸಿನಿಮಾ2 hours ago

Aishwarya Rai Bachchan: ಐಶ್ವರ್ಯಾ ರೈ ಧರಿಸಿರುವ V ಆಕಾರದ ಈ ವಜ್ರದುಂಗುರದ ವಿಶೇಷತೆ ಗೊತ್ತೆ?

Mukesh Ambani
ವಾಣಿಜ್ಯ3 hours ago

Mukesh Ambani: ಮುಕೇಶ್ ಅಂಬಾನಿಯ ಒಂದು ದಿನದ ಆದಾಯ 163 ಕೋಟಿ ರೂ! ಒಟ್ಟು ಸಂಪತ್ತೆಷ್ಟು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ8 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ9 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌