Netflix Password Sharing : ನೆಟ್‌ಫ್ಲಿಕ್ಸ್‌ ಪಾಸ್‌ ವರ್ಡ್‌ ಶೇರ್‌ ಮಾಡುವ ಪದ್ಧತಿ ಶೀಘ್ರ ಅಂತ್ಯ - Vistara News

ಪ್ರಮುಖ ಸುದ್ದಿ

Netflix Password Sharing : ನೆಟ್‌ಫ್ಲಿಕ್ಸ್‌ ಪಾಸ್‌ ವರ್ಡ್‌ ಶೇರ್‌ ಮಾಡುವ ಪದ್ಧತಿ ಶೀಘ್ರ ಅಂತ್ಯ

ಮುಂಬರುವ ಏಪ್ರಿಲ್‌ನಿಂದ ನೆಟ್‌ ಫ್ಲಿಕ್ಸ್‌ ತನ್ನ ಗ್ರಾಹಕರಿಗೆ ಪಾಸ್‌ ವರ್ಡ್‌ ಹಂಚಿಕೆಗೆ ಶುಲ್ಕ ವಿಧಿಸುವ ನಿರೀಕ್ಷೆ ಇದೆ. ಭಾರತೀಯ ಬಳಕೆದಾರರಿಗೆ ಪರಿಣಾಮ ( Netflix Password) ಬೀರುವ ಸಾಧ್ಯತೆ ಇದೆ.

VISTARANEWS.COM


on

Netflix Password Sharing Ends India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನೆಟ್‌ಫ್ಲಿಕ್ಸ್‌ ಬಳಕೆದಾರರಿಗೆ ಶೀಘ್ರದಲ್ಲಿಯೇ (Netflix Password Sharing) ಪಾಸ್‌ ವರ್ಡ್‌ ಶೇರ್‌ ಮಾಡುವ ಸೌಲಭ್ಯ ಅಂತ್ಯವಾಗಲಿದೆ.

ವಿಡಿಯೊ ಸ್ಟ್ರೀಮಿಂಗ್‌ ಆ್ಯಪ್ ಮುಂಬರುವ ಏಪ್ರಿಲ್‌ನಿಂದ ಹೊಸ ಪಾಸ್‌ ವರ್ಡ್‌ ಹಂಚಿಕೆ ನಿಯಮಾವಳಿಗಳನ್ನು ಜಾರಿಗೊಳಿಸಲಿದೆ. ಹಾಗೂ ಪಾಸ್‌ ವರ್ಡ್‌ ಶೇರ್‌ ಮಾಡಲು ಶುಲ್ಕ ಸಂಗ್ರಹಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ನೆಟ್‌ ಫ್ಲಿಕ್ಸ್‌ ಅನ್ನು ಇತರರಿಗೆ ಹಂಚಿಕೊಳ್ಳಲು ಬಯಸುವುದಿದ್ದರೆ, ಹೆಚ್ಚಿನ ಹಣ ಪಾವತಿಸಿ ಸೇವೆ ವಿತರಿಸಲು ಕಂಪನಿ ಸೂಕ್ತ ಯೋಜನೆಯನ್ನು ಏಪ್ರಿಲ್‌ನಿಂದ ಜಾರಿಗೊಳಿಸಲಿದೆ ಎಂದು ವರದಿಯಾಗಿದೆ. ನೆಟ್‌ಫ್ಲಿಕ್ಸ್‌ನ ಸಹ ಸಂಸ್ಥಾಪಕ ರೀಡ್‌ ಹೇಸ್ಟಿಂಗ್ಸ್‌ ಅವರು ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದು, ಟೆಡ್‌ ಸರಾನಡೋಸ್‌ ಹೊಸ ಯೋಜನೆಯ ವಿವರಗಳನ್ನು ನೀಡುವ ನಿರೀಕ್ಷೆ ಇದೆ.

ಭಾರತೀಯ ಬಳಕೆದಾರರ ಮೇಲೆ ಪರಿಣಾಮ?: ಹೊಸ ನಿಯಮಾವಳಿಗಳ ವಿವರಗಳು ಇನ್ನೂ ಪ್ರಕಟವಾಗಿಲ್ಲ. ಆದರೆ ಏಪ್ರಿಲ್‌ ಬಳಿಕ ನೆಟ್‌ ಫ್ಲಿಕ್ಸ್‌ ಬಳಕೆದಾರರು ಪಾಸ್‌ ವರ್ಡ್‌ ಶೇರ್‌ ಮಾಡಲು ಶುಲ್ಕ ಪಾವತಿಸಬೇಕಾಗಿ ಬರಬಹುದು ಎಂದು ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bomb Threat: ದಿಲ್ಲಿಯ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ, ಮಕ್ಕಳ ತೆರವು

Bomb Threat: ಬಾಂಬ್ ಸ್ಕ್ವಾಡ್ ಮತ್ತು ಶ್ವಾನ ದಳ ಶಾಲೆಗಳ ಆವರಣದಲ್ಲಿ ಪರಿಶೀಲನೆ ನಡೆಸುತ್ತಿವೆ. ಬಾಂಬ್ ಪತ್ತೆ ಘಟಕ, ಬಾಂಬ್ ನಿಷ್ಕ್ರಿಯ ತಂಡ ಮತ್ತು ದೆಹಲಿ ಅಗ್ನಿಶಾಮಕ ಸೇವೆಯ ತಂಡವನ್ನು ಶಾಲೆಗಳಿಗೆ ಕಳುಹಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

VISTARANEWS.COM


on

delhi schools bomb threat
Koo

ಹೊಸದಿಲ್ಲಿ: ದೆಹಲಿ- ಎನ್‌ಸಿಆರ್ (Delhi NCR) ಪ್ರದೇಶದ 12 ಕನಿಷ್ಠ ಪ್ರತಿಷ್ಠಿತ ಶಾಲೆಗಳಿಗೆ (Schools) ಬುಧವಾರ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ (Bomb Threat) ಬಂದಿದೆ. ಬುಧವಾರ ಬೆಳಗ್ಗೆ ದೆಹಲಿಯ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕ್ಷಿಪ್ರವಾಗಿ ಸ್ಥಳಾಂತರಿಸಲಾಯಿತು.

ಬಾಂಬ್ ಬೆದರಿಕೆ ಇ-ಮೇಲ್ ಸ್ವೀಕರಿಸಿದ ಶಾಲೆಗಳೆಂದರೆ – ಚಾಣಕ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಸ್ಕೃತಿ ಶಾಲೆ, ಪೂರ್ವ ದೆಹಲಿಯ ಮಯೂರ್ ವಿಹಾರ್, ದ್ವಾರಕಾ ಜಿಲ್ಲೆಯ ಡಿಪಿಎಸ್ ಶಾಲೆ, ದಕ್ಷಿಣದ ಬಸಂತ್ ಕುಂಜ್ ಪ್ರದೇಶದಲ್ಲಿರುವ ಡಿಎವಿ ಶಾಲೆ, ಅಮಿಟಿ ಸ್ಕೂಲ್, ಸಾಕೇತ್, ನವದೆಹಲಿಯ ಸಂಸ್ಕೃತಿ ಶಾಲೆ ಮುಂತಾದವು. ಸಂಸ್ಕೃತಿಯು ದೆಹಲಿಯ ಅತ್ಯಂತ ಉನ್ನತ ಮಟ್ಟದ ಶಾಲೆಗಳಲ್ಲಿ ಒಂದಾಗಿದೆ. ಬೆದರಿಕೆ ಹಿನ್ನೆಲೆಯಲ್ಲಿ ಶಾಲಾ ಆವರಣವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಶಾಲೆಗಳಲ್ಲಿ ನೋಯ್ಡಾದ ದೆಹಲಿ ಪಬ್ಲಿಕ್ ಸ್ಕೂಲ್ ಕೂಡ ಒಂದಾಗಿದೆ. ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಕೂಡಲೇ ನೋಯ್ಡಾ ಪೊಲೀಸರಿಗೆ ಎಚ್ಚರಿಕೆ ನೀಡಲಾಯಿತು. ಬಾಂಬ್ ಸ್ಕ್ವಾಡ್ ಮತ್ತು ಶ್ವಾನ ದಳ ಶಾಲೆಗಳ ಆವರಣದಲ್ಲಿ ಪರಿಶೀಲನೆ ನಡೆಸುತ್ತಿವೆ. ಬಾಂಬ್ ಪತ್ತೆ ಘಟಕ, ಬಾಂಬ್ ನಿಷ್ಕ್ರಿಯ ತಂಡ ಮತ್ತು ದೆಹಲಿ ಅಗ್ನಿಶಾಮಕ ಸೇವೆಯ ತಂಡವನ್ನು ಶಾಲೆಗಳಿಗೆ ಕಳುಹಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಹಿಂದೆ ಎಂಟು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು ಎಂದು ವರದಿಯಾಗಿತ್ತು. ನಂತರ ಇತರ ಮೂರು ಶಾಲೆಗಳ ಆಡಳಿತ ಅಧಿಕಾರಿಗಳು ಸ್ವಲ್ಪ ಸಮಯದ ನಂತರ ದೆಹಲಿ ಪೊಲೀಸ್ ನಿಯಂತ್ರಣ ಕೊಠಡಿಗೆ ಬಾಂಬ್ ಬೆದರಿಕೆಯ ಬಗ್ಗೆ ಮಾಹಿತಿ ನೀಡಿದರು. ಸಂಖ್ಯೆ ಒಟ್ಟು 12ಕ್ಕೆ ತಲುಪಿದೆ.

ಇಮೇಲ್‌ನ IP ವಿಳಾಸವು ಅದು ದೇಶದ ಹೊರಗಿನಿಂದ ಬಂದಿದೆ ಎಂದು ಸೂಚಿಸಿದೆ. ವಿಪಿಎನ್ ಮೂಲಕ ಐಪಿ ವಿಳಾಸವನ್ನು ಮರೆಮಾಚಿರಬಹುದು ಎಂದು ದೆಹಲಿ ಪೊಲೀಸರು ಶಂಕಿಸಿದ್ದಾರೆ. “ನಿನ್ನೆಯಿಂದ ಹಲವು ಸ್ಥಳಗಳಿಗೆ ಇಮೇಲ್‌ಗಳು ಬಂದಿವೆ. ಒಂದೇ ಮಾದರಿಯಲ್ಲಿ ಇವೆ. ಮೇಲ್ ಡೇಟ್‌ಲೈನ್ ಅಥವಾ BCC ಅನ್ನು ಉಲ್ಲೇಖಿಸಿಲ್ಲ. ಅಂದರೆ ಒಂದೇ ಸಂದೇಶವನ್ನು ಹಲವು ಸ್ಥಳಗಳಿಗೆ ಕಳುಹಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Taliban Writing: ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

Continue Reading

ದೇಶ

Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

Heat Wave: ದೇಶದಲ್ಲಿನ ಬಿರು ಬೇಸಿಗೆ ಜನರನ್ನು ಹೂರಾಣಾಗಿಸಿದೆ. ದೇಶದ ಹೆಚ್ಚಿನ ಭಾಗಗಳು ಉಷ್ಣಗಾಳಿಯ ಹೊಡೆತಕ್ಕೆ ಸಿಲುಕಿ ತತ್ತರಿಸಿವೆ. ಭಾರತದಲ್ಲಿನ ಈ ತಾಪಮಾನವು ಏಪ್ರಿಲ್‌ನಲ್ಲಿ ಹಲವು ದಾಖಲೆಗಳನ್ನು ಮುರಿದಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಕೇಂದ್ರ ಮತ್ತು ಉತ್ತರ ಭಾರತದ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಉಷ್ಣ ಅಲೆ ಹೆಚ್ಚಿರುತ್ತದೆ. ಆದರೆ ಅದಕ್ಕೆ ವಿರುದ್ಧವಾಗಿ ಈ ಬಾರಿ ದಕ್ಷಿಣ ಮತ್ತು ನೈಋತ್ಯ ಕರಾವಳಿಯಲ್ಲೂ ಬಿಸಿಲಿನ ಧಗೆ ಹೆಚ್ಚಾಗಿದೆ. 1901ರ ಬಳಿಕ ರಾತ್ರಿ ತಾಪಮಾನದ ದೃಷ್ಟಿಯಿಂದ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಇದು ಅತ್ಯಂತ ಬೆಚ್ಚಗಿನ ಏಪ್ರಿಲ್ ಎನಿಸಿಕೊಂಡಿದೆ. ಜತೆಗೆ ಮೂರನೇ ಅತಿ ಹೆಚ್ಚಿನ ಸರಾಸರಿ ತಾಪಮಾನವಾಗಿದೆ. ಹವಾಮಾನ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಗರಿಷ್ಠ, ಕನಿಷ್ಠ ಮತ್ತು ಸರಾಸರಿ ತಾಪಮಾನದ ದೃಷ್ಟಿಯಿಂದ ಇದು ದೇಶದ ಎರಡನೇ ಅತಿ ಹೆಚ್ಚು ಬೆಚ್ಚಗಿನ ಏಪ್ರಿಲ್ ಆಗಿದೆ.

VISTARANEWS.COM


on

Heat Wave
Koo

ನವದೆಹಲಿ: ದಿನದಿಂದ ದಿನಕ್ಕೆ ವಾತಾವರಣದ ಬಿಸಿ ಏರಿಕೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಜನ ಹೈರಾಣಾಗಿದ್ದಾರೆ. ದೇಶದ ಹೆಚ್ಚಿನ ಭಾಗಗಳು ಉಷ್ಣಗಾಳಿ (Heat Wave)ಯ ಹೊಡೆತಕ್ಕೆ ಸಿಲುಕಿ ತತ್ತರಿಸಿವೆ. ಭಾರತದಲ್ಲಿನ ಈ ತಾಪಮಾನವು ಏಪ್ರಿಲ್‌ನಲ್ಲಿ ಹಲವು ದಾಖಲೆಗಳನ್ನು ಮುರಿದಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಕೇಂದ್ರ ಮತ್ತು ಉತ್ತರ ಭಾರತದ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಉಷ್ಣ ಅಲೆ ಹೆಚ್ಚಿರುತ್ತದೆ. ಆದರೆ ಅದಕ್ಕೆ ವಿರುದ್ಧವಾಗಿ ಈ ಬಾರಿ ದಕ್ಷಿಣ ಮತ್ತು ನೈಋತ್ಯ ಕರಾವಳಿಯಲ್ಲೂ ಬಿಸಿಲಿನ ಧಗೆ ಹೆಚ್ಚಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಕೇರಳ, ಜಾರ್ಖಂಡ್, ಬಿಹಾರ್, ಸಿಕ್ಕಿಂ, ಪಶ್ಚಿಮ ಬಂಗಾಳದಲ್ಲಿ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.

1901ರ ಬಳಿಕ ರಾತ್ರಿ ತಾಪಮಾನದ ದೃಷ್ಟಿಯಿಂದ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಇದು ಅತ್ಯಂತ ಬೆಚ್ಚಗಿನ ಏಪ್ರಿಲ್ ಎನಿಸಿಕೊಂಡಿದೆ. ಜತೆಗೆ ಮೂರನೇ ಅತಿ ಹೆಚ್ಚಿನ ಸರಾಸರಿ ತಾಪಮಾನವಾಗಿದೆ. ಹವಾಮಾನ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಗರಿಷ್ಠ, ಕನಿಷ್ಠ ಮತ್ತು ಸರಾಸರಿ ತಾಪಮಾನದ ದೃಷ್ಟಿಯಿಂದ ಇದು ದೇಶದ ಎರಡನೇ ಅತಿ ಹೆಚ್ಚು ಬೆಚ್ಚಗಿನ ಏಪ್ರಿಲ್ ಆಗಿದೆ.

ಕಾರಣವೇನು?

ʼʼಕೆಲವು ರಾಜ್ಯಗಳಲ್ಲಿ ಕಂಡು ಬರುವ ಇಂತಹ ಅಸಾಮಾನ್ಯ ಹೆಚ್ಚಿನ ತಾಪಮಾನಕ್ಕೆ ಪ್ರಮುಖ ಕಾರಣವೆಂದರೆ ಎಲ್ ನಿನೊ ಮತ್ತು ಹವಾಮಾನ ಬದಲಾವಣೆ” ಎಂದು ಹವಾಮಾನ ಕಚೇರಿಯ ಹವಾಮಾನ ಮೇಲ್ವಿಚಾರಣೆಯ ಮುಖ್ಯಸ್ಥ ಒ.ಪಿ.ಶ್ರೀಜಿತ್ ಹೇಳಿದ್ದಾರೆ. “ದುರದೃಷ್ಟವಶಾತ್, ಶಾಖದಿಂದ ಸಂಭವಿಸಿದ ಸಾವುಗಳ ಬಗ್ಗೆ ನಮ್ಮಲ್ಲಿ ಇನ್ನೂ ಯಾವುದೇ ಅಂಕಿ-ಅಂಶಗಳಿಲ್ಲ. ಅತಿಯಾದ ಉಷ್ಣತೆಯಿಂದ ವರದಿಯಾಗುವ ಸಾವುಗಳನ್ನು ಮುಖ್ಯವಾಗಿ ದಾಖಲಿಸಲಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ. ಇದು ದೇಶದ ಒಟ್ಟಾರೆ ಒಂಬತ್ತನೇ ಅತಿ ಹೆಚ್ಚಿನ ತಾಪಮಾನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

1901ರ ನಂತರ ಭಾರತದಲ್ಲಿ ಅತ್ಯಂತ ಬೆಚ್ಚಗಿನ ಏಪ್ರಿಲ್ 2016ರಲ್ಲಿ ದಾಖಲಾಗಿತ್ತು. ಅದು ಎಲ್ ನಿನೋ ವರ್ಷವಾಗಿತ್ತು. ಎಲ್ ನಿನೊ ಎನ್ನುವುದು ಉಷ್ಣವಲಯದ ಪೆಸಿಫಿಕ್ ಮಹಾಸಾಗರದಲ್ಲಿನ ಹವಾಮಾನ ವೈಪರೀತ್ಯವಾಗಿದ್ದು, ಇದು ಭಾರತದಲ್ಲಿ ದುರ್ಬಲ ಮಾನ್ಸೂನ್ ಮತ್ತು ಶುಷ್ಕ ಹವಾಮಾನಕ್ಕೆ ಕಾರಣವಾಗುತ್ತದೆ.

ಮಂಗಳವಾರ (ಏಪ್ರಿಲ್‌ 30) ಪಶ್ಚಿಮ ಬಂಗಾಳದ ಬಹುತೇಕ ಎಲ್ಲ ಕೇಂದ್ರಗಳಲ್ಲಿ ತೀವ್ರ ಶಾಖದ ಅಲೆಗಳು ದಾಖಲಾಗಿವೆ. ಪನಗರ್‌ನಲ್ಲಿ 45.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 10 ಡಿಗ್ರಿ ಹೆಚ್ಚಾಗಿದೆ ಮತ್ತು ಕಲೈಕುಂಡದಲ್ಲಿ 47.2 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ. ಜಾರ್ಖಂಡ್‌ನ ಪೂರ್ವ ಸಿಂಗ್ಭುಮ್ ಜಿಲ್ಲೆಯ ಬಹರಗೋರಾದಲ್ಲಿ ಗರಿಷ್ಠ ತಾಪಮಾನವು 47.1 ಡಿಗ್ರಿಗಳಿಗೆ ಏರಿದೆ. ಇದು ಸಾಮಾನ್ಯಕ್ಕಿಂತ 7.7 ಡಿಗ್ರಿ ಸೆಲ್ಸಿಯಸ್ ಹೆಚ್ಚು ಎನ್ನುವುದು ಗಮನಾರ್ಹ.

ಇದನ್ನೂ ಓದಿ: Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

ಇನ್ನು ದಕ್ಷಿಣ ಭಾರತದ ಆಂಧ್ರಪ್ರದೇಶದ ಅನಂತಪುರದಲ್ಲಿ 44.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಆರೋಗ್ಯಾವರಂನಲ್ಲಿ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಎರಡನೇ ಗರಿಷ್ಠ ತಾಪಮಾನವಾಗಿದೆ. ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ 44.2 ಡಿಗ್ರಿ ತಾಪಮಾನ ದಾಖಲಾಗಿದೆ. ಉದಕಮಂಡಲಂನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ.

Continue Reading

ಪ್ರಮುಖ ಸುದ್ದಿ

Lok Sabha Election 2024: ಎರಡು ಹಂತದ ಚುನಾವಣೆ ವೇಳೆ ಶೇ.84ರಷ್ಟು ಕ್ಷೇತ್ರಗಳಲ್ಲಿ ಮತದಾನ ಕುಸಿತ; ಎಫೆಕ್ಟ್ ಏನು?

Lok Sabha Election 2024: ಮಂಗಳವಾರ ಬಿಡುಗಡೆಯಾದ ECI ಅಂಕಿಅಂಶಗಳ ಪ್ರಕಾರ, ಹಂತ 1ರಲ್ಲಿ 66.14%ರಷ್ಟು ಮತದಾನವಾಗಿದ್ದು, 2ನೇ ಹಂತದಲ್ಲಿ 66.71% ರಷ್ಟು ಮತದಾನವಾಗಿದೆ. 2019ರಲ್ಲಿ, ಈ ಹಂತಗಳ ಅಂಕಿಅಂಶಗಳು ಕ್ರಮವಾಗಿ 69.4% ಮತ್ತು 69.6% ಆಗಿದ್ದವು. ಒಟ್ಟು ಮತ ಎಣಿಕೆಗೆ ಅಂಚೆ ಮತಪತ್ರಗಳನ್ನು ಸೇರಿಸಿದ ನಂತರವೇ ಅಂತಿಮ ಮತದಾನದ ಪ್ರಮಾಣ ಲಭ್ಯವಾಗಲಿದೆ ಎಂದು ಚುನಾವಣಾ ಸಂಸ್ಥೆ ತಿಳಿಸಿದೆ.

VISTARANEWS.COM


on

lok sabha election 2024 voting
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ (first phase voting) ಹನ್ನೊಂದು ದಿನಗಳ ನಂತರ ಮತ್ತು ಎರಡನೇ ಹಂತದ (second phase voting) ನಾಲ್ಕು ದಿನಗಳ ನಂತರ, ಭಾರತೀಯ ಚುನಾವಣಾ ಆಯೋಗ (Election commission of India – ECI) ಮಂಗಳವಾರ ಅಧಿಕೃತವಾಗಿ ಮತದಾನ ಮಾಹಿತಿಯನ್ನು (Voting data) ಬಿಡುಗಡೆ ಮಾಡಿದೆ. ಶೇ.84ರಷ್ಟು ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ಕುಸಿತವಾಗಿರುವುದು ಕಂಡುಬಂದಿದೆ.

ಮಂಗಳವಾರ ಬಿಡುಗಡೆಯಾದ ECI ಅಂಕಿಅಂಶಗಳ ಪ್ರಕಾರ, ಹಂತ 1ರಲ್ಲಿ 66.14%ರಷ್ಟು ಮತದಾನವಾಗಿದ್ದು, 2ನೇ ಹಂತದಲ್ಲಿ 66.71% ರಷ್ಟು ಮತದಾನವಾಗಿದೆ. 2019ರಲ್ಲಿ, ಈ ಹಂತಗಳ ಅಂಕಿಅಂಶಗಳು ಕ್ರಮವಾಗಿ 69.4% ಮತ್ತು 69.6% ಆಗಿದ್ದವು. ಒಟ್ಟು ಮತ ಎಣಿಕೆಗೆ ಅಂಚೆ ಮತಪತ್ರಗಳನ್ನು ಸೇರಿಸಿದ ನಂತರವೇ ಅಂತಿಮ ಮತದಾನದ ಪ್ರಮಾಣ ಲಭ್ಯವಾಗಲಿದೆ ಎಂದು ಚುನಾವಣಾ ಸಂಸ್ಥೆ ತಿಳಿಸಿದೆ.

ಅಂಕಿಅಂಶಗಳ ಪ್ರಕಾರ 102 ಕ್ಷೇತ್ರಗಳಲ್ಲಿ 1ನೇ ಹಂತದಲ್ಲಿ ಮತದಾನ ಮಾಡಲು ಅರ್ಹತೆ ಪಡೆದ 16.63 ಕೋಟಿ ಜನರಲ್ಲಿ ಸುಮಾರು 11.0 ಕೋಟಿ ಜನರು ಮತ ಚಲಾಯಿಸಿದ್ದಾರೆ. ಆದರೆ ಹಂತ 2ರಲ್ಲಿ 88 ಕ್ಷೇತ್ರಗಳಲ್ಲಿ ಮತ ಚಲಾಯಿಸಲು ಅರ್ಹತೆ ಪಡೆದ 15.88 ಕೋಟಿ ಜನರಲ್ಲಿ ಸುಮಾರು 10.6 ಕೋಟಿ ಜನರು ಮತ ಚಲಾಯಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯೊಂದಿಗೆ ಮತದಾನದ ಹೋಲಿಕೆ ಸಾಧ್ಯವಿರುವ 176 ಸ್ಥಾನಗಳಲ್ಲಿ 148ರಲ್ಲಿ ವಿವಿಧ ಹಂತದ ಕುಸಿತವನ್ನು ಗಮನಿಸಲಾಗಿದೆ ಎಂದು ಡೇಟಾ ತೋರಿಸಿದೆ. ಉಳಿದವು ಡಿಲಿಮಿಟೇಶನ್‌ಗೆ ಒಳಗಾಗಿವೆ. 2019ರ ಲೋಕಸಭಾ ಚುನಾವಣೆಯ ನಂತರ 12 ಕ್ಷೇತ್ರಗಳಿಗೆ (ಅಸ್ಸಾಂನಲ್ಲಿ 10 ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು) ಹೋಲಿಕೆ ಸಾಧ್ಯವಿಲ್ಲ. ಇವು ಕ್ಷೇತ್ರ ಮರುಹಂಚಿಕೆಗೆ ಒಳಗಾಗಿವೆ. ಔಟರ್ ಮಣಿಪುರ ಪಿಸಿಯ ಹೋಲಿಕೆ ಸಾಧ್ಯವಿಲ್ಲ. ಏಕೆಂದರೆ ಅದು ಎರಡೂ ಹಂತಗಳಲ್ಲಿ ಭಾಗಶಃ ಮತದಾನ ಕಂಡಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ, 2019ರೊಂದಿಗೆ ಹೋಲಿಕೆ ಸಾಧ್ಯವಿರುವ ಮೊದಲ ಹಂತದಲ್ಲಿ ಮತದಾನ ಮಾಡಿದ 19 ರಾಜ್ಯಗಳು ಮತ್ತು ಯುಟಿಗಳಲ್ಲಿ, 16 ಕುಸಿತವನ್ನು ಕಂಡಿದೆ. ಎರಡನೇ ಹಂತದಲ್ಲಿ 11 ಪ್ರಾಂತ್ಯಗಳಲ್ಲಿ ಎಂಟರಲ್ಲಿ ಮತದಾನವು ಕುಸಿದಿದೆ. ಖಚಿತವಾಗಿ ಹೇಳುವುದಾದರೆ, ಅಂಚೆ ಮತಪತ್ರಗಳನ್ನು ಎಣಿಸಿದಾಗ ಮತದಾನದಲ್ಲಿ ಸಣ್ಣ ಇಳಿಕೆಯನ್ನು ಸರಿದೂಗಿಸಬಹುದು. 2024ರ ಮತದಾನದ ಸಂಖ್ಯೆಯಲ್ಲಿ ಇದನ್ನು ಇನ್ನೂ ಸೇರಿಸಿಲ್ಲ.

2019ರಲ್ಲಿ ಹಿಂದುಳಿದಿರುವ 148 ಕ್ಷೇತ್ರಗಳಲ್ಲಿ, 124 ಶೇಕಡಾ ಕ್ಷೇತ್ರಗಳಲ್ಲಿ ಎರಡು ಅಂಕಗಳಿಗಿಂತ ಹೆಚ್ಚು ಕುಸಿತ ದಾಖಲಿಸಿದೆ. ಈ 124 ಸ್ಥಾನಗಳಲ್ಲಿ, 57 ಕಡೆ ಶೇಕಡಾ ಐದಕ್ಕಿಂತ ಅಧಿಕ ಮತ್ತು 7 ಕಡೆ ಶೇಕಡಾ 10ಕ್ಕಿಂತ ಹೆಚ್ಚಿನ ಶೇಕಡಾವಾರು ಅಂಕಗಳ ಮತದಾನದ ಕುಸಿತವನ್ನು ದಾಖಲಿಸಿದೆ.

ಮತದಾನದಲ್ಲಿ ಅತಿ ಹೆಚ್ಚು ಕುಸಿತ ಕಂಡ ಏಳು ಸ್ಥಾನಗಳೆಂದರೆ: ನಾಗಾಲ್ಯಾಂಡ್ (2019ಕ್ಕೆ ಹೋಲಿಸಿದರೆ ಶೇಕಡಾ 25.2 ಕುಸಿತ); ಮಧ್ಯಪ್ರದೇಶದಲ್ಲಿ ಸಿಧಿ (ಶೇಕಡಾ 13); ಉತ್ತರ ಪ್ರದೇಶದ ಮಥುರಾ (ಶೇಕಡಾ 11.6); ಮಧ್ಯಪ್ರದೇಶದ ಖಜುರಾಹೊ (ಶೇ. 11.31), ಮಧ್ಯಪ್ರದೇಶದ ರೇವಾ (ಶೇ. 10.9); ಕೇರಳದ ಪತ್ತನಂತಿಟ್ಟ (ಶೇಕಡಾ 10.9 ಅಂಕಗಳು); ಮತ್ತು ಮಧ್ಯಪ್ರದೇಶದ ಶಾಧೋಲ್ (10.1 ಶೇಕಡಾ ಅಂಕಗಳು).

ಮೊದಲ ಸುತ್ತಿನ ಮತದಾನದಲ್ಲಿ 66.22% ಪುರುಷ ಮತದಾರರು ತಮ್ಮ ಹಕ್ಕು ಚಲಾಯಿಸಿದರೆ, 66.07% ಮಹಿಳಾ ಮತದಾರರು ಮತದಾನ ಮಾಡಿದರು. 31.32% ಅರ್ಹ ತೃತೀಯ ಲಿಂಗಿ ಮತದಾರರು ಮತ ಚಲಾಯಿಸಿದ್ದಾರೆ ಎಂದು ಡೇಟಾ ತೋರಿಸಿದೆ. ಎರಡನೇ ಹಂತದಲ್ಲಿ, 66.99% ಅರ್ಹ ಪುರುಷ ಮತದಾರರು ಮತ ಚಲಾಯಿಸಿದರೆ, ಈ ಅಂಕಿ ಅಂಶವು ಮಹಿಳಾ ಮತದಾರರಿಗೆ 66.42% ಆಗಿತ್ತು. ಸುಮಾರು 24% ತೃತೀಯ ಲಿಂಗಿಗಳು ಮತ ಚಲಾಯಿಸಿದರು. 85 ವರ್ಷಕ್ಕಿಂತ ಮೇಲ್ಪಟ್ಟ ಜನರು ಅಥವಾ ಅಂಗವಿಕಲರ ಬಗ್ಗೆ ಡೇಟಾವನ್ನು ಇಸಿ ಬಿಡುಗಡೆ ಮಾಡಿ. ಇವರು ಮನೆಯಿಂದ ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಈ ಲೋಕಸಭಾ ಚುನಾವಣೆ ಭಾರತದ ಸುವರ್ಣ ಯುಗಕ್ಕೆ ನಾಂದಿ: ಪ್ರಲ್ಹಾದ್‌ ಜೋಶಿ

Continue Reading

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading
Advertisement
Divorce Case
ಕ್ರೈಂ9 mins ago

Divorce Case: ಪತಿ, ಕುಟುಂಬದ ವಿರುದ್ಧದ ಸುಳ್ಳು ಕೇಸು ಕ್ರೌರ್ಯಕ್ಕೆ ಸಮಾನ; ಬಾಂಬೆ ಹೈಕೋರ್ಟ್

Hassan Pen Drive Case Prajwal Revanna
ಕ್ರೈಂ12 mins ago

Hassan Pen Drive Case: ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

Mokshita Pai realistic morning routine With special Child brother
ಕಿರುತೆರೆ14 mins ago

Mokshitha Pai: ವಿಶೇಷ ಚೇತನ ತಮ್ಮನನ್ನು ಅಮ್ಮನಂತೆ ಆರೈಕೆ ಮಾಡುತ್ತಿರುವ ʻಪಾರುʼ

Suspicious Death in Mandya
ಮಂಡ್ಯ19 mins ago

Suspicious Death : ಗೃಹಿಣಿಯ ಕುತ್ತಿಗೆಯಲ್ಲಿತ್ತು ರಕ್ತ ಹೆಪ್ಪುಗಟ್ಟಿರುವ ಕಲೆ; ಈ ಸಾವು ಕೊಲೆಯೋ, ಆತ್ಮಹತ್ಯೆಯೋ

Viral News
ವೈರಲ್ ನ್ಯೂಸ್23 mins ago

‍Viral News: ಚಂದದ ಪ್ರೊಫೈಲ್‌ ಫೋಟೋಗೆ ಫಿದಾ ಆಗಿದ್ದವನಿಗೆ ಕಾದಿತ್ತು ಶಾಕ್‌; ಮುಂದೆ ನಡೆದಿದ್ದೇ ಬೇರೆ!

Bengaluru Weather
ಕರ್ನಾಟಕ28 mins ago

Bengaluru Weather: ಬೆಂಗಳೂರು ಈಗ ʼಹಾಟ್‌ʼಸ್ಪಾಟ್‌; 1983ರ ನಂತರ ಮೊದಲ ಬಾರಿ ಏಪ್ರಿಲ್‌ನಲ್ಲಿ ಶೂನ್ಯ ಮಳೆ

delhi schools bomb threat
ಪ್ರಮುಖ ಸುದ್ದಿ1 hour ago

Bomb Threat: ದಿಲ್ಲಿಯ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ, ಮಕ್ಕಳ ತೆರವು

Columbia University
ವಿದೇಶ1 hour ago

Columbia University: ಕೊಲಂಬಿಯಾ ವಿವಿ ಪ್ರವೇಶಿಸಿದ ನ್ಯೂಯಾರ್ಕ್‌ ಪೊಲೀಸರು; ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಬಂಧನ

High-tec Gadget
ತಂತ್ರಜ್ಞಾನ2 hours ago

High-tech Gadget: ಸೆಕೆಗೆ ಎಸಿ, ಫ್ಯಾನ್‌, ಕೂಲರ್‌ ಸಾಕಾಗ್ತಿಲ್ವಾ..? ಹಾಗಿದ್ರೆ ಇಲ್ಲಿದೆ ನೋಡಿ ಹೈಟೆಕ್‌ ಗ್ಯಾಜೆಟ್‌

hassan pen drive case hd revanna prajwal revanna
ಕ್ರೈಂ2 hours ago

Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌