777 ಚಾರ್ಲಿ: ಚಾರ್ಲಿನಾ ಭೇಟಿ ಮಾಡಿದ್ರಾ ಸಾಯಿಪಲ್ಲವಿ? ಚಿತ್ರಕ್ಕೆ ಸಿಗುತ್ತಿದೆ ಭರ್ಜರಿ ರೆಸ್ಪಾನ್ಸ್‌ - Vistara News

ಪ್ರಮುಖ ಸುದ್ದಿ

777 ಚಾರ್ಲಿ: ಚಾರ್ಲಿನಾ ಭೇಟಿ ಮಾಡಿದ್ರಾ ಸಾಯಿಪಲ್ಲವಿ? ಚಿತ್ರಕ್ಕೆ ಸಿಗುತ್ತಿದೆ ಭರ್ಜರಿ ರೆಸ್ಪಾನ್ಸ್‌

777 ಚಾರ್ಲಿ ಜೂನ್‌ 10ರಂದು ರಿಲೀಸ್‌ ಆಗುತ್ತಿದೆ. ಪ್ರೀಮಿಯರ್‌ ಶೋ ನೋಡಿದ ಬಳಿಕ ಅಭಿಮಾನಿಗಳು ಹ್ಯಾಷ್‌ಟ್ಯಾಗ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ದೇಶ-ವಿದೇಶಗಳಲ್ಲಿ ಬಿಡುಗಡೆಗೆ ಚಿತ್ರ ಸರ್ವ ರೀತಿಯಲ್ಲೂ ಸಜ್ಜಾಗಿದೆ.

VISTARANEWS.COM


on

777 ಚಾರ್ಲಿ karnataka-budget-2023-online portal to street dog adoptation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ತೆರೆಗೆ ಬರಲು ಕೌಂಟ್‌ಡೌನ್‌ ಶುರುವಾಗಿದೆ. ಪ್ಯಾನ್‌ ಇಂಡಿಯಾ ಲೆವಲ್‌ನಲ್ಲಿ ಸಿನಿಮಾ ರಂಗೇರಲು ಸಜ್ಜಾಗಿದೆ. ಪ್ರೀಮಿಯರ್‌ ಶೋ ನೋಡಿದ ಬಳಿಕ ಜನ ಈಗಾಗಲೇ ಸೋಷಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವುದರ ಮೂಲಕ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಸಾಯಿ ಪಲ್ಲವಿಯ New Best Friend

ಪರವಃ ಪೇಜ್‌ನಲ್ಲಿ ಸಾಯಿ ಪಲ್ಲವಿಯ ಮಡಿಲಲ್ಲಿ ಚಾರ್ಲಿ ಮಲಗಿರುವ ಕ್ಯೂಟ್‌ ಪೋಟೋವನ್ನು ಹಂಚಿಕೊಂಡಿದ್ದಾರೆ. ಪ್ಯಾನ್‌ ಇಂಡಿಯಾದಲ್ಲಿ ರಿಲೀಸ್‌ ಆಗಲಿರುವ ಚಾರ್ಲಿ ಸಿನಿಮಾಗೇ ಸೆಲೆಬ್ರಿಟಿಗಳಿಂದ ಪಾಸಿಟಿವ್‌ ರೆಸ್ಪಾನ್ಸ್‌ ಬರುತ್ತಿದೆ. 777 ಚಾರ್ಲಿ ಟ್ರೇಲರ್‌ನ್ನು ಈ ಹಿಂದೆ ಸಾಯಿಪಲ್ಲವಿ ಡಿಜಿಟಲ್‌ ಲಾಂಚ್‌ ಮಾಡಿದ್ದರು. ಚಿತ್ರವನ್ನು ಮಳಯಾಳಂನಲ್ಲಿ ಫೃಥ್ವಿರಾಜ್‌ ಸುಕುಮಾರ್‌ ಮತ್ತು ತಮಿಳಿನಲ್ಲಿ ಕಾರ್ತಿಕ್‌ ಸುಬ್ಬರಾಜ್‌ ವಿತರಿಸಿದ್ದಾರೆ. ತೆಲುಗುವಿನಲ್ಲಿ ರಾಣಾ ದಗ್ಗುಪಾಟಿ ವಿತರಿಸಿದ್ದು, ಚಿತ್ರವನ್ನು 100-150 ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಕನ್ನಡ ಭಾಷೆಯ ಪ್ರಸಾರ ಹಕ್ಕುಗಳು ₹ 21 ಕೋಟಿಗೆ ಕಲರ್ಸ್‌ ಕನ್ನಡಕ್ಕೆ ಸೇಲ್‌ ಆಗಿರೋದು ಗಮನಾರ್ಹ.

ಇದನ್ನೂ ಓದಿ | 777 Charlie : ಕ್ಯೂಟ್‌ ಜರ್ನಿ ಬಗ್ಗೆ ಇಲ್ಲಿದೆ ನೋಡಿ ಫುಲ್‌ ಡಿಟೇಲ್ಸ್‌

ಚಾರ್ಲಿಗೆ ಭರ್ಜರಿ ರೆಸ್‌ಪಾನ್ಸ್‌ :

ಚಾರ್ಲಿ ತುಂಬಾ ಭಾವನಾತ್ಮಕವಾಗಿದ್ದು, ಸೆಕೆಂಡ್‌ ಹಾಫ್‌ ಎಮೋಷನ್‌ ಜತೆ, ವಿಷ್ಯುವಲ್‌ ಹಾಗೂ BGM ತುಂಬಾ ಚೆನ್ನಾಗಿದೆ. ರಕ್ಷಿತ್‌ ಶೆಟ್ಟಿ ಅವರ ಅಭಿನಯ ಟಾಪ್‌ ಕ್ಲಾಸ್‌ ಆಗಿ ಮೂಡಿ ಬಂದಿದೆ ಎಂದು ಜನರು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಈಗಾಗಲೇ ಟಿಕೆಟ್‌ ಬೆಂಗಳೂರಿನಲ್ಲಿ ಸೋಲ್ಡ್‌ ಔಟ್‌ ಆಗಿದ್ದು, ಲವ್ಲಿ ಕ್ಯಾರೆಕ್ಟ್‌ರ್‌ ಧರ್ಮ ಎಂದು ಬರೆದುಕೊಳ್ಳುತ್ತಿದ್ದಾರೆ.

ಚಿತ್ರಮಂದಿರಗಳಲ್ಲಿ ಬ್ಯಾನರ್‌, ಪೋಸ್ಟರ್‌ ಮೂಲಕ ಜನರನ್ನು ಸೆಳೆಯುತ್ತಿರುವ ಚಾರ್ಲಿ ಪೋಸ್ಟ್‌ ಅನ್ನು ಸೋಷಿಯಲ್‌ ಮಿಡಿಯಾ ಮೂಲಕ ಶೇರ್‌ ಮಾಡಿಕೊಳ್ಳುತ್ತಿದ್ದಾರೆ ಅಭಿಮಾನಿಗಳು.

ಇದನ್ನೂ ಓದಿ | 777 Charlie: ಶಾರ್ವರಿ ಹಾಗೂ ಚಾರ್ಲಿಯ Friendship ಕಥೆ ಹೇಳುವ ʼಸಹಪಾಠಿʼ ಸಾಂಗ್‌

777 ಚಾರ್ಲಿಯ ಅಟ್ರ್ಯಾಕ್ಟಿವ್‌ ಕಟೌಟ್‌

777 ಚಾರ್ಲಿ ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಇದು ಕನ್ನಡ ಮಾತ್ರವಲ್ಲದೇ, ವಿವಿಧ ಭಾಷೆಗಳಲ್ಲಿ ಸಹ ಬಿಡುಗಡೆಯಾಗುತ್ತಿದೆ. ಈ ತಮಿಳುನಾಡಿನಲ್ಲಿ ಸಹ ಚಿತ್ರ ರಿಲೀಸ್ ಆಗುತ್ತಿದ್ದು, ಚೈನ್ನೈನ ಸತ್ಯಂ ಸಿನಿಮಾಸ್​ ಎದುರು ಚಾರ್ಲಿ ಶ್ವಾನದ ಬೃಹತ್ ಕಟೌಟ್​ ನಿಲ್ಲಿಸಲಾಗಿದೆ. ಸದ್ಯ ಅದರ ಫೋಟೋವನ್ನು ಚಿತ್ರತಂಡ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಈಗ ಆ ಫೋಟೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್​ ಆಗುತ್ತಿದೆ.

ರಾಜ್ಯದಲ್ಲಿ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ. 500ಕ್ಕೂ ಹೆಚ್ಚು ವಿದೇಶಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಜೂನ್‌ 10ರಂದು ಬಿಡುಗಡೆ ಆಗುತ್ತಿದೆ.

ಈ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಗೆ ಸಂಗೀತಾ ಶೃಂಗೇರಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ರಾಜ್ ಬಿ. ಶೆಟ್ಟಿ, ದಾನೀಶ್ ಸೇಠ್, ಬಾಬಿ ಸಿಂಹ, ಗೋಪಾಲ್ ದೇಶಪಾಂಡೆ, ಬೇಬಿ ಶಾರ್ವರಿ ಸೇರಿದಂತೆ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ | 777 ಚಾರ್ಲಿ: ಸಾಲು ಸಾಲು ಪ್ರೀಮಿಯರ್‌ ಶೋ, ಸೆಲೆಬ್ರಿಟಿಗಳು ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

IND vs PAK:

VISTARANEWS.COM


on

IND VS PAK
Koo

ನ್ಯೂಯಾರ್ಕ್: : ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024ರ (T20 World Cup) ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು(IND vs PAK) ಮಣಿಸಿದೆ. ಇದರೊಂದಿಗೆ ಟಿ20 ವಿಶ್ವ ಕಪ್​ ಟೂರ್ನಿಯಲ್ಲಿ ತನ್ನ ಪ್ರಾಬಲ್ಯವನ್ನು 8-1ರ ಮುನ್ನಡೆಗೆ ಕೊಂಡೊಯ್ದಿದೆ. ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್​​ ಇಳಿಯುವುದರೊಂದಿಗೆ ಆಟ ಪ್ರಾರಂಭವಾಯಿತು. ಮೊದಲ ಇನ್ನಿಂಗ್ಸ್ ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ಕೇವಲ 119 ರನ್ ಗಳಿಸಲಷ್ಟೇ ಶಕ್ತವಾಯಿತು. ಆದಾಗ್ಯೂ, ಮೆನ್ ಇನ್ ಬ್ಲೂ (Men In Blue) ತಂಡವು ಬೌಲಿಂಗ್​ ಸಾಮರ್ಥ್ಯವನ್ನು ಬಂಡವಾಳ ಮಾಡಿಕೊಂಡಿತು. ಒಂದು ಹಂತದಲ್ಲಿ ಕೈ ಜಾರುತ್ತಿರುವಂತೆ ಕಂಡುಬಂದರೂ ಭಾರತವು ಚೇತರಿಕೆಯ ನಂತರ ಅದನ್ನು ಮರಳಿ ತರುವಲ್ಲಿ ಯಶಸ್ವಿಯಾಯಿತು.

ಪಂದ್ಯದ ನಂತರ, ದೆಹಲಿ ಪೊಲೀಸರ ಅಧಿಕೃತ ಎಕ್ಸ್ ಹ್ಯಾಂಡಲ್ ತಮಾಷೆಯೊಂದನ್ನು ಮಾಡಿತು. ಪೊಲೀಸರ ಬಳಗ ಸಾಮಾಜಿಕ ಮಾಧ್ಯಮದ ಮೂಲಕ ನ್ಯೂಯಾರ್ಕ್​​ ಸಿಟಿ ಪೊಲೀಸರಿಗೆ ಸಂದೇಶವೊಂದನ್ನು ಟ್ಯಾಗ್ ಮಾಡಿತು “ಹೇ, @NYPDnews, ನಾವು ಎರಡು ದೊಡ್ಡ ಶಬ್ದಗಳನ್ನು ಕೇಳಿದ್ದೇವೆ. ಒಂದು “ಇಂಡಿಯಾ ಎ.. ಭಾರತ!” ಇನ್ನೊಂದು ಬಹುಶಃ ಮುರಿದ ಟಿವಿಗಳಾಗಿದ್ದರಬಹುದು. ದಯವಿಟ್ಟು ದೃಢೀಕರಿಸುವಿರಾ?” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪಂದ್ಯ ನಡೆದ ನ್ಯೂಯಾರ್ಕ್​ ಸಿಟಿಯ ನಸ್ಸೌ ಸ್ಟೇಡಿಯಮ್​ನಲ್ಲಿ ಸುಮಾರು 125 ಡೆಸಿಬಲ್​ನಷ್ಟು ಸದ್ದು ಭಾರತೀಯ ಕ್ರಿಕೆಟ್​ ಪ್ರೇಮಿಗಳಿಂದ ಕೇಳಿ ಬಂದಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ಸೋತ ಕಾರಣ ಯಥಾವತ್ ಅಲ್ಲಿನ ಪ್ರೇಕ್ಷಕರು ಟಿವಿ ಒಡೆದು ಹಾಕಿರಬಹುದು ಎಂದು ಡೆಲ್ಲಿ ಪೊಲೀಸರು ತಮಾಷೆ ಮಾಡಿದ್ದಾರೆ.

ಭಾರತಕ್ಕೆ ಸತತ ಎರಡನೇ ವಿಜಯ

ರೋಹಿತ್ ಶರ್ಮಾ 13 ಹಾಗೂ ವಿರಾಟ್ ಕೊಹ್ಲಿ 4 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ 20 ರನ್ ಗಳಿಸಿ ನಿರ್ಗಮಿಸಿದರೆ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಕ್ರಮವಾಗಿ ಕೇವಲ 7 ಮತ್ತು 3 ರನ್ ಸೇರಿಸಿದರು.

ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಗಳಿಸುವ ಮೂಲಕ ಭಾರತ ಇನ್ನಿಂಗ್ಸ್ ಅನ್ನು ಸ್ಥಿರಗೊಳಿಸಲು ಸಹಾಯ ಮಾಡಿದರು. ಅವರ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ ಒಟ್ಟು 119 ರನ್ ಗಳಿಸಲು ಸಹಾಯ ಮಾಡಿತು. ಪಾಕಿಸ್ತಾನದ ಪರ ನಸೀಮ್ ಶಾ ಹಾಗೂ ಹ್ಯಾರಿಸ್ ರವೂಫ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಭಾರತದ ಪರ ಮೊಹಮ್ಮದ್ ಅಮೀರ್ 2 ವಿಕೆಟ್ ಕಿತ್ತರೆ, ಶಾಹೀನ್ ಅಫ್ರಿದಿ 1 ವಿಕೆಟ್ ಪಡೆದರು.

ಇದನ್ನೂ ಓದಿ: T20 World Cup : ಪಾಕಿಸ್ತಾನಕ್ಕೆ ಸಂಕಷ್ಟ ತಂದಿಟ್ಟ ಭಾರತ; ಸೂಪರ್ 8 ಹಂತ ಪ್ರವೇಶವೂ ಕಷ್ಟ!

ಗುರಿ ಬೆನ್ನಟ್ಟಿದ ಪಾಕಿಸ್ತಾನ ಪರ ಆರಂಭಿಕ ಆಟಗಾರರಾದ ಬಾಬರ್ ಅಜಮ್ 13 ಮತ್ತು ಮೊಹಮ್ಮದ್ ರಿಜ್ವಾನ್ 31 ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಉಸ್ಮಾನ್ ಖಾನ್, ಫಖರ್ ಜಮಾನ್ ಮತ್ತು ಇಮಾದ್ ವಾಸಿಮ್ ಕ್ರಮವಾಗಿ 13, 13 ಮತ್ತು 15 ರನ್ ಗಳಿಸಿದರು.

ಪಂದ್ಯದ ಒಂದು ಹಂತದಲ್ಲಿ, ಪಾಕಿಸ್ತಾನವು ಪ್ರತಿ ಎಸೆತಕ್ಕೆ ಒಂದು ರನ್ ಗಳಿಸಬೇಕಾಗಿತ್ತು. ಆದರೆ ನಂತರದಲ್ಲಿ ಭಾರತವು ಪಂದ್ಯದಲ್ಲಿಹಿಡಿದ ಸಾಧಿಸಿತು. ಭಾರತದ ಪರ ಜಸ್ಪ್ರೀತ್ ಬುಮ್ರಾ 3, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ಅರ್ಷ್ದೀಪ್ ಸಿಂಗ್ ತಲಾ 1 ವಿಕೆಟ್ ಪಡೆದರು.

Continue Reading

ಪ್ರಮುಖ ಸುದ್ದಿ

Stock Market News: ಮೋದಿ ಪ್ರಮಾಣ ವಚನದ ಬಳಿಕ ಷೇರು ಮಾರುಕಟ್ಟೆ ಜಿಗಿತ; ಸೆನ್ಸೆಕ್ಸ್‌ ಹೊಸ ದಾಖಲೆ

ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದು ಸಂಭವಿಸಿದೆ. ಎನ್‌ಎಸ್‌ಇ ನಿಫ್ಟಿ 50 ತಾಜಾ ಗರಿಷ್ಠ 23,411.90 ಕ್ಕೆ ಏರಿತು ಮತ್ತು ಸೆನ್ಸೆಕ್ಸ್ ಜೀವಿತಾವಧಿಯ ದಾಖಲೆ 77,079.04 ಕ್ಕೆ ಏರಿತು.

VISTARANEWS.COM


on

Narendra Modi And stock market news
Koo

ಮುಂಬಯಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಐತಿಹಾಸಿಕ ಮೂರನೇ ಅವಧಿಗೆ ಪ್ರಮಾಣ ವಚನ (Oath taking) ಸ್ವೀಕರಿಸಿದ ನಂತರ ಬೆಂಚ್‌ಮಾರ್ಕ್ ಷೇರು ಮಾರುಕಟ್ಟೆ (Stock Market News) ಸೂಚ್ಯಂಕಗಳು ಸೋಮವಾರ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದವು. ಸೆನ್ಸೆಕ್ಸ್ (Sensex) ಮೊದಲ ಬಾರಿಗೆ ದಾಖಲೆ 77,000 ಗಡಿಯನ್ನು ಮೀರಿದೆ. ನಿಫ್ಟಿ 50 (Nifty 50) ಸಹ ಹೊಸ ಶಿಖರವನ್ನು ತಲುಪಿತು.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ನೇತೃತ್ವದಲ್ಲಿ ಷೇರುಗಳ ಬೆಲೆಗಳು ಇಂದು ಮುಂಜಾನೆಯಿಂದ ಮುನ್ನುಗ್ಗಿ ಸೂಚ್ಯಂಕಗಳು ಹೊಸ ಗರಿಷ್ಠ ಮಟ್ಟವನ್ನು ತಲುಪಿದವು. ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದು ಸಂಭವಿಸಿದೆ. ಎನ್‌ಎಸ್‌ಇ ನಿಫ್ಟಿ 50 ತಾಜಾ ಗರಿಷ್ಠ 23,411.90 ಕ್ಕೆ ಏರಿತು ಮತ್ತು ಸೆನ್ಸೆಕ್ಸ್ ಜೀವಿತಾವಧಿಯ ದಾಖಲೆ 77,079.04 ಕ್ಕೆ ಏರಿತು.

ನಿಫ್ಟಿಯಲ್ಲಿ ಅದಾನಿ ಪೋರ್ಟ್ಸ್, ಪವರ್ ಗ್ರಿಡ್ ಕಾರ್ಪ್, ಬಜಾಜ್ ಆಟೋ, ಕೋಲ್ ಇಂಡಿಯಾ ಮತ್ತು ಶ್ರೀರಾಮ್ ಫೈನಾನ್ಸ್ ಪ್ರಮುಖ ಲಾಭ ಗಳಿಸಿದವು. ನಿಫ್ಟಿಯಲ್ಲಿ ಟೆಕ್ ಮಹೀಂದ್ರಾ, ಇನ್ಫೋಸಿಸ್, ಡಾ ರೆಡ್ಡೀಸ್ ಲ್ಯಾಬ್ಸ್, ಎಲ್‌ಟಿಐಮಿಂಡ್‌ಟ್ರೀ ಮತ್ತು ಹಿಂಡಾಲ್ಕೊ ಅತಿ ಹೆಚ್ಚು ನಷ್ಟ ಅನುಭವಿಸಿದವು.

ಐಟಿ ಮತ್ತು ಲೋಹವನ್ನು ಹೊರತುಪಡಿಸಿ ಎಲ್ಲಾ ವಲಯದ ಸೂಚ್ಯಂಕಗಳು ಏರಿಕೆಯ ಬೆಲೆಗಳಲ್ಲಿ ವಹಿವಾಟಾಗುತ್ತಿವೆ. ಶುಕ್ರವಾರದಂದು (ಜೂನ್ 7), 30-ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 1,720.8 ಪಾಯಿಂಟ್‌ಗಳು ಅಥವಾ 2.29 ಶೇಕಡಾ ಜಿಗಿದು 76,795.31 ರ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದವು.

ಯುರೋಪಿಯನ್ ಪಾರ್ಲಿಮೆಂಟ್ ಚುನಾವಣೆಗಳ ನಂತರ ಕೌಂಟಿಯಲ್ಲಿ ಕ್ಷಿಪ್ರ ಚುನಾವಣೆಯನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಕರೆದಿದ್ದರಿಂದ ಯುರೋ ತುಸು ದುರ್ಬಲವಾಗಿದೆ. ಚೀನಾ, ಹಾಂಗ್ ಕಾಂಗ್, ತೈವಾನ್ ಮತ್ತು ಆಸ್ಟ್ರೇಲಿಯಾದ ಮಾರುಕಟ್ಟೆಗಳು ಸೋಮವಾರ ಮುಚ್ಚಲ್ಪಟ್ಟಿವೆ. US ಉದ್ಯೋಗಗಳ ವರದಿಯು ಫೆಡರಲ್ ರಿಸರ್ವ್ ಬಡ್ಡಿದರ ಕಡಿತದ ಬಗ್ಗೆ ಮರುಚಿಂತನೆಗೆ ಮುಂದಾದ ನಂತರ ಮಾರುಕಟ್ಟೆಯಲ್ಲಿ ಇಳಿಕೆ ಉಂಟಾಗಿದೆ. ಹೂಡಿಕೆದಾರರು ಪ್ರಮುಖ ಉದ್ಯಮ ವರದಿಗಳು ಮತ್ತು ಫೆಡ್‌ನ ದರ ನಿರ್ಧಾರವನ್ನು ಎದುರು ನೋಡುವುದರಿಂದ, ಒಂದು ವಾರದಿಂದ ತೈಲ ದರ ಕುಸಿಯುತ್ತಾ ಹೋಗಿ ಇಂದು ಸ್ಥಿರವಾಗಿದೆ.

ಇಂದು ನರೇಂದ್ರ ಮೋದಿ ಹೊಸ ಸಂಪುಟದ ಮೊದಲ ಸಭೆ

ಹೊಸದಿಲ್ಲಿ: ಇಂದು ಸಂಜೆ 5 ಗಂಟೆಗೆ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅವಧಿಯ ಸರ್ಕಾರದ (Modi 3.0) ಮೊದಲ ಸಂಪುಟ ಸಭೆ (Cabinet meeting) ನಡೆಯಲಿದೆ. ಪ್ರಧಾನಿಯವರ ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಸಭೆ ಆಯೋಜನೆಗೊಂಡಿದೆ.

ನಿನ್ನೆ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಪ್ರಧಾನಿಯಾಗಿ ಮೋದಿ ಇನ್ನಿತರ 72 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಕರ್ನಾಟಕದ ಐವರೂ ಸೇರಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರೊಂದಿಗೆ ಇಂದು ಮೋದಿ ಸಭೆ ನಡೆಸಲಿದ್ದಾರೆ.

ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆ ಇದಾಗಿದೆ. ಇದೇ ಸಂದರ್ಭದಲ್ಲಿ ನೂತನ ಸಚಿವರಿಗೆ ಔತಣಕೂಟವನ್ನೂ ಮೋದಿ ಏರ್ಪಡಿಸಿದ್ದಾರೆ. ಇದೇ ಸಭೆಯಲ್ಲಿ ಖಾತೆ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮಿತ್ರ ಪಕ್ಷಗಳು ನಿರ್ದಿಷ್ಟ ಖಾತೆಗೆ ಡಿಮ್ಯಾಂಡ್ ಮಾಡಿವೆ.

ಬಿಹಾರದ ನಿತೀಶ್‌ ಕುಮಾರ್‌ ಅವರು ಜೆಡಿಯುಗೆ ಕೃಷಿ ಖಾತೆ ನೀಡುವಂತೆ ಡಿಮ್ಯಾಂಡ್‌ ಮಾಡಿದ್ದಾರೆ. ಆದರೆ ಕರ್ನಾಟಕದ ಎಚ್‌.ಡಿ ಕುಮಾರಸ್ವಾಮಿ ಅವರೂ ಕೃಷಿ ಖಾತೆ ನೀಡಿದರೆ ನಿರ್ವಹಿಸಲು ತಾನು ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ. ತೆಲುಗು ದೇಶಂನ ಚಂದ್ರಬಾಬು ನಾಯ್ಡು ಅವರೂ ಮಹತ್ವದ ಖಾತೆಗಳನ್ನು ಕೇಳಿದ್ದಾರೆ.

ಆದರೆ ಈಗ ಪ್ರಮಾಣ ವಚನ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ನೋಡಿದರೆ, ಕ್ಯಾಬಿನೆಟ್‌ ದರ್ಜೆಯ 11 ಸ್ಥಾನಗಳನ್ನು ಬಿಜೆಪಿ ತನ್ನ ಜೊತೆಗೇ ಇಟ್ಟುಕೊಂಡಿದೆ. ಟಿಡಿಪಿಗೆ 2, ಜೆಡಿಯುಗೆ 2, ಜೆಡಿಎಸ್‌, ಶಿವಸೇನೆ, ಎಲ್‌ಜೆಪಿ, ಆರ್‌ಎಲ್‌ಡಿ ಮುಂತಾದ ಪಕ್ಷಗಳಿಗೆ ತಲಾ ಒಂದೊಂದು ಸ್ಥಾನಗಳನ್ನು ನೀಡಿದೆ. ಈಗ ಯಾವ ಖಾತೆ ಯಾರಿಗೆ ಎಂಬ ನಿರ್ಣಯ ಇನ್ನು ಆಗಬೇಕಿದೆ. ಮಿತ್ರಪಕ್ಷಗಳು ಮಹತ್ವದ ಖಾತೆಗಾಗಿ ಪಟ್ಟು ಹಿಡಿಯುತ್ತವೆಯೇ ಅಥವಾ ಕೊಟ್ಟದ್ದಕ್ಕೆ ತೃಪ್ತವಾಗುತ್ತವೆಯೇ ಎಂದು ನೋಡಬೇಕಿದೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಮಹಾಪೂರ !

Continue Reading

ಪ್ರಮುಖ ಸುದ್ದಿ

Personality Development: ಈ 10 ಸೂತ್ರ ಪಾಲಿಸಿದರೆ ನೆಮ್ಮದಿಯ ಬದುಕು ಗ್ಯಾರಂಟಿ!

ಯಾವ ರೀತಿ ಕುದಿಯುವ ನೀರಿನಲ್ಲಿ ನಮ್ಮ ಮುಖ ನಮಗೆ ಕಾಣುವುದಿಲ್ಲವೋ ಹಾಗೆಯೇ ಸಿಟ್ಟಿನಲ್ಲಿದ್ದಾಗ ಮನುಷ್ಯ ತನ್ನ ತಪ್ಪನ್ನು ಅರಿತುಕೊಳ್ಳುವುದಿಲ್ಲ. ಶಾಂತವಾದ ಮತ್ತು ಶುದ್ಧವಾದ ಪರಿಸರದಲ್ಲಿ ತನ್ನ ತನು, ಮನಗಳನ್ನು ಶುದ್ಧೀಕರಿಸಿಕೊಳ್ಳಲು ಆ ಮೂಲಕ ತನ್ನನ್ನು ತಾನು ತಿದ್ದಿಕೊಳ್ಳಲು ಈ ಕೆಲವು ವಿಷಯಗಳು ಮನುಷ್ಯನಿಗೆ ಸಹಾಯಕವಾಗುತ್ತವೆ. ನಮ್ಮ ವ್ಯಕ್ತಿತ್ವ ವಿಕಸನಗೊಳಿಸುವ (Personality Development) ಹತ್ತು ಸೂತ್ರಗಳು ಇಲ್ಲಿವೆ.

VISTARANEWS.COM


on

Personality Development
Koo
Veena Hemant Gowda Patil Mundaragi, Gadag

-ವೀಣಾ ಹೇಮಂತ್ ಗೌಡ ಪಾಟೀಲ್ ಮುಂಡರಗಿ, ಗದಗ
ನಮ್ಮ ದೇಹವು (Personality Development) ಪಂಚಭೂತಗಳಾದ ಪೃಥ್ವಿ, ಆಕಾಶ, ವಾಯು, ಜಲ ಮತ್ತು ಅಗ್ನಿ ತತ್ವಗಳಿಂದ ಕೂಡಿದೆ. ಹುಟ್ಟಿದಾಗ ನಾವು ಪರಿಶುದ್ಧರಾಗಿಯೇ ಇದ್ದು ಜೀವಿತಾವಧಿಯಲ್ಲಿ ಸಿಟ್ಟು ಸೆಡವು ಕೋಪ ತಾಪ ದ್ವೇಷ ಅಸೂಯೆ, ಸುಖ ಸಂತೋಷ ನೆಮ್ಮದಿ ರಾಗ ಮುಂತಾದ ಎಲ್ಲಾ ರೀತಿಯ ಭಾವಗಳಿಗೆ ಸ್ಪಂದಿಸುತ್ತ ಬೆಳೆಯುತ್ತೇವೆ. ಒಟ್ಟಿನಲ್ಲಿ ಮನುಷ್ಯ ಜೀವಿ ಕಾರ್ಕೋಟಕ ವಿಷಕ್ಕಿಂತಲೂ ಕಡೆ ಎಂದು ಭಾವಿಸುವಂತೆ ತನ್ನ ಜೀವಿತಾವಧಿಯನ್ನು ಮನುಷ್ಯ ಕಳೆಯುತ್ತಾನೆ. ಯಾವ ರೀತಿ ಅಗರ ಬತ್ತಿಯು ತನ್ನನ್ನು ತಾನು ಸುಟ್ಟು ಕೊಳ್ಳುವುದೋ ಹಾಗೆಯೇ ನಮ್ಮಲ್ಲಿ ಉಂಟಾಗುವ ದ್ವೇಷ, ಅಸೂಯೆ, ಮದ, ಮತ್ಸರಗಳು ನಮ್ಮನ್ನು ನಮಗರಿವಿಲ್ಲದೆಯೇ ಸುಟ್ಟು ಹಾಕುತ್ತವೆ. ಯಾವ ರೀತಿ ಕುದಿಯುವ ನೀರಿನಲ್ಲಿ ನಮ್ಮ ಮುಖ ನಮಗೆ ಕಾಣುವುದಿಲ್ಲವೋ ಹಾಗೆಯೇ ಸಿಟ್ಟಿನಲ್ಲಿದ್ದಾಗ ಮನುಷ್ಯ ತನ್ನ ತಪ್ಪನ್ನು ಅರಿತುಕೊಳ್ಳುವುದಿಲ್ಲ. ಶಾಂತವಾದ ಮತ್ತು ಶುದ್ಧವಾದ ಪರಿಸರದಲ್ಲಿ ತನ್ನ ತನು, ಮನಗಳನ್ನು ಶುದ್ಧೀಕರಿಸಿಕೊಳ್ಳಲು ಆ ಮೂಲಕ ತನ್ನನ್ನು ತಾನು ತಿದ್ದಿಕೊಳ್ಳಲು ಈ ಕೆಲವು ವಿಷಯಗಳು ಮನುಷ್ಯನಿಗೆ ಸಹಾಯಕವಾಗುತ್ತವೆ. ನೀರಿನ ಸೇವನೆಯಿಂದ….. ದೇಹವು ಶುದ್ದವಾಗುತ್ತದೆ. ಹೆಚ್ಚು ನೀರು ಸೇವನೆ ಮಾಡುವುದರಿಂದ ಮನುಷ್ಯನ ದೇಹದಲ್ಲಿರುವ ಕಶ್ಮಲಗಳು ಮೂತ್ರ, ಮಲ ಮತ್ತು ಬೆವರಿನ ರೂಪದಲ್ಲಿ ಹೊರಹಾಕಲ್ಪಡುತ್ತದೆ. ಯೋಗಾಸನವನ್ನು ಮಾಡುವುದರಿಂದ ಮನುಷ್ಯ ತನ್ನ ಆಂತರಿಕ ಮತ್ತು ಮಾನಸಿಕ ಕಶ್ಮಲಗಳನ್ನು ಹೊರ ಹಾಕುತ್ತಾನೆ, ಇದರಿಂದ ಮನಸ್ಸು ಪ್ರಶಾಂತವಾಗಿ ಪ್ರಪುಲಿತವಾಗಿರುತ್ತದೆ. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶವಿರುವುದಿಲ್ಲ.

Pranayama Yoga Poses For Bright And Glowing Skin

ಪ್ರಾಣಾಯಾಮ ಸೂಕ್ತ

ಪ್ರಾಣಾಯಾಮ ಮಾಡುವುದರಿಂದ ಉಸಿರಾಟ ಶುದ್ಧವಾಗುತ್ತದೆ. ಪ್ರತಿನಿತ್ಯ ಪ್ರಾಣಾಯಾಮದ ಅಭ್ಯಾಸ ಮಾಡುವುದು ಅನೇಕ ಮನೋ ದೈಹಿಕ ಕಾಯಿಲೆಗಳಿಗೆ ರಾಮಬಾಣದಂತೆ. ಕನಿಷ್ಠ ಮೂರು ನಿಮಿಷದಿಂದ ಗರಿಷ್ಠ ಮುಕ್ಕಾಲು ಗಂಟೆಯವರೆಗೆ ಪ್ರಾಣಾಯಾಮದ ಅಭ್ಯಾಸ ಮಾಡಿದಾಗ ಮನಸ್ಸು ಸಂಪೂರ್ಣ ನಿರಾಳವಾಗಿ ಜಂಜಡಗಳಿಂದ ಮುಕ್ತವಾಗುತ್ತದೆ. ಯಾವುದೇ ರೀತಿಯ ಆತಂಕ ಭಯಗಳಿಂದ ಮುಕ್ತವಾಗುತ್ತದೆ. ಸತತವಾಗಿ ಪ್ರಾಣಾಯಾಮದ ಅಭ್ಯಾಸ ಮಾಡುವುದರಿಂದ ವ್ಯಕ್ತಿಯು ಮಾನಸಿಕ ಒತ್ತಡ, ರಕ್ತದೊತ್ತಡ,
ಹೃದ್ರೋಗ ಮುಂತಾದ ಕಾಯಿಲೆಗಳಿಂದ ಮುಕ್ತನಾಗುತ್ತಾನೆ.

Meditation Yoga Poses For Bright And Glowing Skin

ಧ್ಯಾನ ಉತ್ತಮ ಅಭ್ಯಾಸ

ಧ್ಯಾನ ಮಾಡುವುದರಿಂದ ಮನಸ್ಸು ಶುದ್ದವಾಗುತ್ತದೆ. ಧ್ಯಾನವು ಮನಸ್ಸನ್ನು ಒಂದು ನಿಶ್ಚಿತ ಏಕಾಗ್ರತೆಯತ್ತ ಕೊಂಡೊಯ್ಯುವ ಸಾಧನ. ಸರಳವಾದ ಬಟ್ಟೆಯನ್ನು ತೊಟ್ಟು ಅನುಕೂಲಕರ ಆಸನದಲ್ಲಿ ಕುಳಿತು ಕತ್ತು, ಬೆನ್ನು ಮತ್ತು ತಲೆಯನ್ನು ನೇರವಾಗಿ ಇಟ್ಟುಕೊಂಡು ಕಣ್ಣು ಮುಚ್ಚಿ ಧ್ಯಾನಮಗ್ನ ರಾಗುವ ವ್ಯಕ್ತಿಗಳಿಗೆ ಅಪಾರವಾದ ಮಾನಸಿಕ ಶಾಂತಿ ಮತ್ತು ತನ್ಮೂಲಕ ಸ್ಥಿತಪ್ರಜ್ಞತೆ ಲಭಿಸುತ್ತದೆ. ಇಂದಿನ ಒತ್ತಡಭರಿತ ದೈನಂದಿನ ಜೀವನದಲ್ಲಿ ಧ್ಯಾನವನ್ನು ಅಭ್ಯಾಸ ಮಾಡುವುದು ಅತ್ಯಂತ ಸೂಕ್ತವಾದದ್ದು.

ಜ್ಞಾನ ಸಂಪಾದಿಸುವುದರಿಂದ…

ಇದರಿಂದ ಜಾಣ್ಮೆ, ಉನ್ನತ ವಿಚಾರಧಾರೆಗಳ ಹರಿವು ಹೆಚ್ಚುತ್ತದೆ. ಜ್ಞಾನ ಸಂಪಾದನೆಯು ಎಲ್ಲಾ ಚಟುವಟಿಕೆಗಳಲ್ಲಿಯೇ ಮಹತ್ತರವಾದ ಕ್ರಿಯೆ. ತಿಳಿದವರಿಂದ, ಪಂಡಿತರಿಂದ, ಜ್ಞಾನಿಗಳಿಂದ ಪುಸ್ತಕಗಳಿಂದ ಅನುಭವಗಳಿಂದ ಸಂಪಾದಿಸುವ ಜ್ಞಾನ ನಮ್ಮ ಜೀವಿತದ ಕೊನೆಯವರೆಗೂ ನಮ್ಮೊಂದಿಗೆ ಇರುತ್ತದೆ ಯಾರು ಕದಿಯಲಾರದ ವಿದ್ಯೆ ಜ್ಞಾನ. ಅರಿವಿನ ಕೊರತೆ ನಮ್ಮ ಎಷ್ಟೋ ಸಮಸ್ಯೆಗಳಿಗೆ ಮೂಲ ಕಾರಣವಾಗಿರುತ್ತದೆ ಅಂತಹ ಸಮಯದಲ್ಲಿ ಸೂಕ್ತವಾದ ಪ್ರಾಪಂಚಿಕ ಜ್ಞಾನವು ಕೂಡ ಎಷ್ಟೋ ಸಮಸ್ಯೆಗಳನ್ನು ನಿವಾರಿಸುತ್ತದೆ. ಐಹಿಕ ಜೀವನದ ಎಷ್ಟೋ ತೊಂದರೆಗಳಿಗೆ ಆಧ್ಯಾತ್ಮದಲ್ಲಿ ಉತ್ತರವಿದೆ.

Personality development activities

ಚಿಂತನ ಮಂಥನದಿಂದ

ಇದರಿಂದ ಅಜ್ಞಾನ ತೊಲಗಿ ಸುಜ್ಞಾನ ದೊರೆಯುತ್ತದೆ. ಸರಿ-ತಪ್ಪು,
ಒಳಿತು-ಕೆಡುಕು, ಧರ್ಮ-ಅಧರ್ಮ ಇವುಗಳ ಕುರಿತು ಸೂಕ್ತವಾದ ಚಿಂತನೆ ಮಾಡಿ ವಿಚಾರವೆಂಬ ಕಡೆಗೋಲಿನಿಂದ ಮಂಥನ ಮಾಡಿ ಒಳ್ಳೆಯ ನಿರ್ಧಾರಕ್ಕೆ ಬರುವುದು ಕೂಡ ಅತ್ಯಂತ ಒಳ್ಳೆಯ ಕಾರ್ಯ. ಸರಿ ತಪ್ಪುಗಳ ಪರಾಮರ್ಶೆಯಿಂದ ಮನುಷ್ಯ ತಪ್ಪು ವಿಷಯಗಳಿಂದ ದೂರ ಸರಿದು ಒಳ್ಳೆಯ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಾನೆ. ಚಿಂತನೆ ಮಾಡಿದರೆ ಕಾರ್ಯಾಕಾರ್ಯಗಳ ಅರಿವು ಆಗುವುದಿಲ್ಲ. *ಸರಿ ತಪ್ಪುಗಳ ಮೊಸರನ್ನು ಅರಿವು ಮತ್ತು ವಿಮರ್ಶೆಗಳ ಮಂಥನದ ಮೂಲಕ ಕಡೆದು ಉತ್ತಮ ವಿಚಾರಗಳ ಬೆಣ್ಣೆ ತೆಗೆದು ಉತ್ತಮ ವ್ಯಕ್ತಿತ್ವವೆಂಬ ಕಾಯಿಸಿದ ತುಪ್ಪವನ್ನು ಈ ಸಮಾಜಕ್ಕೆ ಬಡಿಸುವುದು ಸಮಾಜ ಜೀವಿಯಾಗಿ ನಮ್ಮ ಕರ್ತವ್ಯ.

ಸೇವೆ ಮಾಡುವುದರಿಂದ

ಇದರಿಂದ ಅಹಮ್ಮಿಗೆ ಸಂತೃಪ್ತಿ ದೊರೆಯುತ್ತದೆ. ಎಷ್ಟೋ ಜನ ಶ್ರೀಮಂತರು ಅಲ್ಲಲ್ಲಿ ನಡೆಯುವ ಪ್ರಸಾದ ಸೇವಾ ಕಾರ್ಯಗಳಲ್ಲಿ ಪ್ರವಾಹ, ಸುನಾಮಿ ಚಂಡಮಾರುತ ಮುಂತಾದ ಪ್ರಾಕೃತಿಕ ವಿಕೋಪಗಳಿಂದ ಸಂತ್ರಸ್ತರಾದ ಜನರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ. ಹೀಗೆ ತೊಡಗಿಸಿಕೊಳ್ಳುವ ಮೂಲಕ ಅವರು ನಾನು ಶ್ರೀಮಂತ, ಉನ್ನತ ವರ್ಗದವನು ಎಲ್ಲರಿಗಿಂತ ಮೇಲು ಎಂಬ ಮೇಲರಿಮೆಯನ್ನು ತೊಡೆದು ಕೊಳ್ಳುತ್ತಾರೆ. ನಮ್ಮದೇ ಅಹಮ್ಮಿನ ಕೋಟೆಯೊಳಗೆ ಬಂಧಿಯಾದಾಗ ಇತರರ ಸಂಕಟಗಳು ನಮಗೆ ಕಾಣುವುದಿಲ್ಲ. ಆದರೆ ಸೇವೆಯ ಮೂಲಕ ಮನುಷ್ಯ ತನ್ನನ್ನು ಸಮಾಜಕ್ಕೆ ಅರ್ಪಿಸಿಕೊಳ್ಳುವ ಮನುಷ್ಯ ಪರಿಶುದ್ಧನಾಗುತ್ತಾನೆ. ಅಹಮ್ಮಿನ ಸಂತೃಪ್ತಿಗೆ ಕಾರಣವಾಗುತ್ತಾನೆ. ಎನಗಿಂತ ಕಿರಿಯರಿಲ್ಲ ಶಿವ ಭಕ್ತರಿಗಿಂತ ಹಿರಿಯರಿಲ್ಲ ಎಂಬ ಬಸವಣ್ಣನವರ ಉಕ್ತಿ ಸದಾ ಸರ್ವದ ನಮ್ಮ ಮನದಲ್ಲಿ ನೆಲೆ ಮಾಡಿರಬೇಕು.

Photo of Man Wearing Hooded Jacket in Front of Body of Water

ಮೌನದಿಂದ…

ಇದರಿಂದ ನಾನು ಮತ್ತು ನನ್ನದು ಎಂಬ ವೈಯಕ್ತಿಕತೆ ಸ್ವಾರ್ಥತೆಯು ಶುದ್ಧವಾಗುತ್ತದೆ. ಪ್ರಶಾಂತವಾಗಿರುವ ಮೌನವೆಂಬ ಕೊಳದಲ್ಲಿ ಒಂದೇ ಸಮನೆ ನಿರರ್ಥಕವಾದ ಒಣ ಮಾತುಗಳನ್ನಾಡಿ ಬಗ್ಗಡ ಮಾಡುವುದಕ್ಕಿಂತ ಹಿತವಾದ ಮೌನ ಲೇಸು. ಮೌನವು ನಮಗೆ ಆತ್ಮ ಚಿಂತನೆಗೆ ದಾರಿ ಮಾಡಿಕೊಡುತ್ತದೆ. ಸರಿ ತಪ್ಪುಗಳ ವಿಮರ್ಶೆ, ಒಳಿತು ಕೆಡುಕುಗಳ ಪರಾಮರ್ಶೆಯನ್ನು ನಾವು ಮೌನಾನುಸಂಧಾನದಲ್ಲಿ ಪಡೆಯಬಹುದು. ಮೌನದ ಶಕ್ತಿ ಅಪಾರ. ಮಾತು ನಮ್ಮನ್ನು ಹಗುರಗೊಳಿಸಿದರೆ ಮೌನವು ನಮ್ಮನ್ನು ಆಂತರಿಕವಾಗಿ ಬಲಿಷ್ಠವಾಗಿಸುತ್ತದೆ. ಆದ್ದರಿಂದಲೇ ಋಷಿ ಮುನಿಗಳು, ಜ್ಞಾನಿಗಳು ಸದಾ ಮೌನದ ಮೊರೆ ಹೋಗುತ್ತಾರೆ. ಇನ್ನು ಹಲವು ಜನ ಸಂತರು ವಾರಕ್ಕೊಂದು ದಿನ, ಪ್ರತಿದಿನ ಸ್ನಾನ ಪೂಜೆ ಮುಗಿಯುವವರೆಗೆ ಮತ್ತೆ ಹಲವಾರು ದಿನಗಳ ಕಾಲದ ಮೌನಾನುಷ್ಠಾನವನ್ನು ಮಾಡುತ್ತಾರೆ. ಮೌನವು ನಮ್ಮ ಆಂತರಿಕ ಶಕ್ತಿಯನ್ನು ಹೆಚ್ಚಿಸಿ ಮಾನಸಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಗಟ್ಟಿಗೊಳಿಸುತ್ತದೆ.

ಉನ್ನತ ಆಲೋಚನೆಗಳಿಂದ…

ಇದರಿಂದ ತಿನ್ನುವ ಆಹಾರ ಸಾತ್ವಿಕವಾಗುತ್ತದೆ. ಒಳ್ಳೆಯ ವಿಚಾರಗಳು, ಒಳ್ಳೆಯ ಕಾರ್ಯಗಳು, ಒಳ್ಳೆಯ ದುಡಿಮೆಯನ್ನು ಪ್ರೋತ್ಸಾಹಿಸುತ್ತದೆ. ಒಳ್ಳೆಯ ಮತ್ತು ಉನ್ನತ ವಿಚಾರಧಾರೆಗಳು ನಮ್ಮ ಆಹಾರದ ಮೇಲೂ ಪರಿಣಾಮ ಬೀರುತ್ತವೆ. ನಾವು ಆಹಾರವನ್ನು ತಯಾರಿಸುವಾಗ ಒಳ್ಳೆಯ ಆಲೋಚನೆ ಮಾಡಬೇಕು.ಸ್ವಚ್ಛ,ಶುದ್ಧವಾದ ಪ್ರಶಾಂತ ಪರಿಸರದಲ್ಲಿ ಅಡುಗೆಯನ್ನು ಮಾಡುವುದರ ಹಿಂದಿನ ಗುಟ್ಟು ಇದೇ. ವ್ಯವಹಾರವೇ ಮುಖ್ಯವಾಗಿರುವ ಹೋಟೆಲ್, ರೆಸ್ಟೋರೆಂಟ್ ಮುಂತಾದವುಗಳಲ್ಲಿ ನಾವು ಸೇವಿಸುವ ಆಹಾರ ತಾಮಸಿಕ ಮತ್ತು ರಾಜಸಿಕ ಗುಣವನ್ನು ಹೊಂದಿದ್ದು ಅಂತಹ ಆಹಾರವನ್ನು ಸೇವಿಸಿದಾಗ ನಮಗೆ ಅಜೀರ್ಣ, ಹುಳಿತೇಗು ಹೊಟ್ಟೆ ಉಬ್ಬರ ಮುಂತಾದ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಆದರೆ ಸೇವೆಯೇ ಪ್ರಧಾನವಾಗಿರುವ ದೇವಸ್ಥಾನಗಳಲ್ಲಿ, ಮಠಗಳಲ್ಲಿ, ಸೇವಾ ಸದನಗಳಲ್ಲಿ ತಯಾರಿಸುವ ಆಹಾರಗಳಲ್ಲಿ ಸಾತ್ವಿಕ ಗುಣವೇ ತುಂಬಿದ್ದು ಮನಸ್ಸನ್ನು ಅರಳಿಸುವ ಮತ್ತು ಚೇತನ ಕೊಡುವ ಶಕ್ತಿ ಇರುತ್ತದೆ. ಒಳ್ಳೆಯ ಆಹಾರ ಸೇವನೆ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬಡಿದೆಬ್ಬಿಸಿ ನಮ್ಮನ್ನು ಉತ್ತಮ ಕಾರ್ಯಗಳತ್ತ ಪ್ರೇರೇಪಿಸುತ್ತದೆ.

The concept of sharing

ದಾನ ಮಾಡುವುದರಿಂದ…

ಇದರಿಂದ ಸಂಪತ್ತಿನ ಸದ್ವಿನಿಯೋಗವಾಗುವುದು. ಕೊಟ್ಟದ್ದು ತನಗೆ ಬಚ್ಚಿಟ್ಟದ್ದು ಪರರಿಗೆ ಎಂದು ಹೇಳುತ್ತಾರಲ್ಲವೇ. ಕೊಡುವುದರ ಮೂಲಕ ವ್ಯಕ್ತಿ ತನ್ನೊಳಗಿನ ಎಲ್ಲ ನಕಾರಾತ್ಮಕ ಚಿಂತನೆಗಳನ್ನು ಕಳೆದುಕೊಳ್ಳುತ್ತಾನೆ. ದಾನ ನೀಡುವ ಮೂಲಕ ತನ್ನಲ್ಲಿರುವ ಸಿಟ್ಟು ಸೆಡವು ಹಟಗಳನ್ನು ಕಳೆದುಕೊಳ್ಳುತ್ತಾನೆ. ಬೇಡುವ ಕೈಗಳಿಗಿಂತ ಕೊಡುವ ಕೈಗಳು ಶ್ರೇಷ್ಠ ಎಂದು ಹಿರಿಯರು ಹೇಳಿರುವುದು ಇದಕ್ಕೆ ಇರಬಹುದು. ದಾನಮಾಡುವ ಶಕ್ತಿಯನ್ನು ನೀಡಿರುವ ಆ ದೇವರಿಗೆ ಕೃತಾರ್ಥರಾಗಿರೋಣ.

ಇದನ್ನೂ ಓದಿ: Eating Style: ಉಣ್ಣುವ ರೀತಿ ನಾವು ಎಂಥವರು ಎನ್ನುವುದನ್ನು ಬಯಲು ಮಾಡುತ್ತದೆ! ಅದು ಹೇಗೆ?

ಪ್ರೀತಿ ಮತ್ತು ಸಮರ್ಪಣಾ ಭಾವದಿಂದ

ಇದರಿಂದ ಭಾವನೆಗಳು ಶುದ್ಧವಾಗುತ್ತವೆ. ವ್ಯಕ್ತಿಯನ್ನು ಆತನ ದೈಹಿಕ,ಮಾನಸಿಕ ಮತ್ತು ಇತರ ಒಳಿತು ಮತ್ತು ಕೆಡುಕುಗಳೊಂದಿಗೆ ಪ್ರೀತಿಸುವುದು ನಿಜವಾದ ಪ್ರೀತಿ. ಅಂತಹ ಪ್ರೀತಿಯಲ್ಲಿ ಯಾವುದೇ ಸ್ವಾರ್ಥ, ಆಕಾಂಕ್ಷೆಗಳು ಇರುವುದಿಲ್ಲ. ನೀನು ಹೀಗಿದ್ದರೆ ಮಾತ್ರ ನಾನು ನಿನ್ನನ್ನು ಪ್ರೀತಿಸಬಲ್ಲೆ ಎಂಬ ಶರತ್ತುಬದ್ಧ ಪ್ರೀತಿ ಸ್ವಾರ್ಥ ಎಂದೆನಿಸಿಕೊಳ್ಳುತ್ತದೆ. ಪ್ರೀತಿಗೆ ಬೇಕಾಗಿರುವುದು ಶುದ್ಧ ಅಂತಃಕರಣ ಮತ್ತು ಸಮರ್ಪಣಾ ಮನೋಭಾವ ಮಾತ್ರ. ಆದ್ದರಿಂದಲೇ ನಿಸ್ವಾರ್ಥವಾದ, ಕಲ್ಮಶವಿಲ್ಲದ ಮಾತೆಯ ಮಮತೆಯನ್ನು ಎಲ್ಲರೂ ಕೊಂಡಾಡುತ್ತಾರೆ. ಶುದ್ಧವಾದ ಪ್ರೀತಿ ವ್ಯಕ್ತಿಯ ಅಂದ ಚಂದಗಳನ್ನು ನೋಡದೆ ತನ್ನ ಎದುರಿರುವ ವ್ಯಕ್ತಿಯನ್ನು ಅವನಿರುವ ಹಾಗೆಯೇ ಅಂಗೀಕರಿಸುತ್ತದೆ.

ಮೇಲಿನ ದಶಗುಣಗಳನ್ನು ನಮ್ಮಲ್ಲಿ ನಾವು ಅಳವಡಿಸಿಕೊಳ್ಳುವ ಮೂಲಕ ನಮ್ಮಲ್ಲಿರುವ ಕೋಪ,ಅಸಹನೆ,ಉದ್ರೇಕ ಮುಂತಾದ ಗುಣಗಳನ್ನು ಕಳೆದುಕೊಂಡು ಪ್ರೀತಿ ವಿಶ್ವಾಸ ಭ್ರಾತೃತ್ವ, ಸಹನೆ, ಒಳ್ಳೆಯತನ ಮುಂತಾದ ಉನ್ನತ ಗುಣಗಳನ್ನು ಆವಾಹಿಸಿಕೊಳ್ಳುತ್ತಾ ವಿಶ್ವಮಾನವರಾಗುವ ಮೂಲಕ ರಾಷ್ಟ್ರಕವಿ ಕುವೆಂಪುರವರ ವಿಶ್ವಮಾನವ ಸಂದೇಶವನ್ನು ಜಗತ್ತಿನಲ್ಲಿ ಬಿತ್ತರಿಸೋಣ ಎಂಬ ಆಶಯದೊಂದಿಗೆ

Continue Reading

ಪ್ರಮುಖ ಸುದ್ದಿ

Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

Terror Attack: ಪೋನಿ ಪ್ರದೇಶದ ತೇರ್ಯತ್ ಗ್ರಾಮದ ಮೂಲಕ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಚಾಲಕ ದಾಸನೂ ರಾಜ್‌ಬಾಗ್, ಭಯೋತ್ಪಾದಕರು ತನ್ನ ಮೇಲೆ ಬುಲೆಟ್‌ಗಳನ್ನು ಹಾರಿಸಿದಾಗ ಅಪಾರ ಧೈರ್ಯ ತಂದುಕೊಂಡು ಬಸ್ಸನ್ನು ವೇಗವಾಗಿ ಚಲಾಯಿಸಿ ಅಲ್ಲಿಂದ ಪಾರಾಗಲು ಯತ್ನಿಸಿದ.

VISTARANEWS.COM


on

reasi terror attack
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ನಡೆದ ಭಯೋತ್ಪಾದಕರ ಗುಂಡಿನ ದಾಳಿಯ (Reasi terror Attack) ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಸತ್ತಿದ್ದಾರೆ. ಕ್ರೂರಿ ಭಯೋತ್ಪಾದಕರು (Terrorists) ಪುಟ್ಟ ಮಗುವೆಂದೂ ನೋಡದೆ ಗುಂಡು ಹಾರಿಸಿ ಕೊಂದಿದ್ದಾರೆ. ಈ ನಡುವೆ, ಉಗ್ರರು ಮೈಕೈ ತುಂಬೆಲ್ಲಾ ಗುಂಡು (bullets) ಜಡಿದರೂ ಪ್ರಯಾಣಿಕರನ್ನು (tourists) ಉಳಿಸಲು ಚಾಲಕ (Bus driver) ಯತ್ನಿಸಿದ್ದಾನೆ ಎಂದು ಗೊತ್ತಾಗಿದೆ.

ಪೋನಿ ಪ್ರದೇಶದ ತೇರ್ಯತ್ ಗ್ರಾಮದ ಮೂಲಕ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಚಾಲಕ ದಾಸನೂ ರಾಜ್‌ಬಾಗ್, ಭಯೋತ್ಪಾದಕರು ತನ್ನ ಮೇಲೆ ಬುಲೆಟ್‌ಗಳನ್ನು ಹಾರಿಸಿದಾಗ ಅಪಾರ ಧೈರ್ಯ ತಂದುಕೊಂಡು ಬಸ್ಸನ್ನು ವೇಗವಾಗಿ ಚಲಾಯಿಸಿ ಅಲ್ಲಿಂದ ಪಾರಾಗಲು ಯತ್ನಿಸಿದ. ಆದರೆ ಮೈಗೆ ಗುಂಡು ಬಿದ್ದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳವಾದ ಕಮರಿಗೆ ಬಿತ್ತು. ಘಟನೆಯಲ್ಲಿ ಚಾಲಕನೂ ಮೃತಪಟ್ಟಿದ್ದಾನೆ.

ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ ಹತ್ತು ಮಂದಿ ಈ ದಾಳಿಯಲ್ಲಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಸ್ಥಳಕ್ಕೆ ತಲುಪಿ ಪೊಲೀಸರಿಗೆ ಸಹಾಯ ಮಾಡುತ್ತಿದೆ. ಭಾನುವಾರದ ದಾಳಿಯ ನಂತರ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಯೋತ್ಪಾದಕರನ್ನು ಹುಡುಕಲು ಭದ್ರತಾ ಪಡೆಗಳು ಡ್ರೋನ್‌ಗಳನ್ನು ಬಳಸುತ್ತಿವೆ.

ರಿಯಾಸಿ ದಾಳಿಯ ನಂತರ, ಭಾರತೀಯ ಸೇನೆಯ ಹತ್ತಿರದ ನೆಲೆಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಯಿತು. ಭದ್ರತಾ ಕ್ರಮಗಳನ್ನು ಬಲಪಡಿಸಲು ವಿವಿಧ ಸ್ಥಳಗಳಿಂದ ಪಡೆಗಳನ್ನು ಕಳುಹಿಸಲಾಗಿದೆ. ಸದ್ಯ ಉಗ್ರರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಭಾನುವಾರವೇ ತ್ವರಿತ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಸೌಲಭ್ಯಗಳಿಗೆ ತ್ವರಿತವಾಗಿ ಸಾಗಿಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಭದ್ರತಾ ಪಡೆಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದರು. ಪ್ರದೇಶವನ್ನು ಸುತ್ತುವರೆದು ತನಿಖೆ ಪ್ರಾರಂಭಿಸಿದರು.

“ಶಿವ್ ಖೋರಿಯಿಂದ ಕತ್ರಾಗೆ ಹೋಗುತ್ತಿದ್ದ ಪ್ರಯಾಣಿಕರ ಬಸ್‌ನ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಿಂದಾಗಿ ಬಸ್ ಚಾಲಕನ ಸಮತೋಲನ ತಪ್ಪಿ ಬಸ್ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ 33 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಪ್ರಯಾಣಿಕರ ಗುರುತು ಇನ್ನೂ ದೃಢಪಟ್ಟಿಲ್ಲ. ಅವರು ಸ್ಥಳೀಯರಲ್ಲ. ಶಿವ ಖೋರಿ ದೇವಾಲಯವನ್ನು ಭದ್ರಪಡಿಸಲಾಗಿದೆ” ಎಂದು ರಿಯಾಸಿಯ ಎಸ್‌ಎಸ್‌ಪಿ ಮೋಹಿತಾ ಶರ್ಮಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಕೇಳಿಕೊಂಡಿದ್ದಾರೆ. “ರಿಯಾಸಿಯಲ್ಲಿ ಯಾತ್ರಾರ್ಥಿಗಳ ಮೇಲೆ ನಡೆದ ದಾಳಿಯ ಘಟನೆಯಿಂದ ಆಳವಾದ ನೋವಾಗಿದೆ. ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಡಿಜಿಪಿ ಜೊತೆ ಘಟನೆಯ ಬಗ್ಗೆ ವಿಚಾರಿಸಿದ್ದೇನೆ. ಈ ಭೀಕರ ದಾಳಿಯ ಅಪರಾಧಿಗಳನ್ನು ಬಿಡಲಾಗುವುದಿಲ್ಲ. ದಾಳಿಕೋರರು ಕಾನೂನಿನ ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್‌ನಲ್ಲಿ ಹೇಳಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಲ್ಲಾ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಘಟನೆಯನ್ನು ‘ಹೇಡಿತನ’ ಎಂದು ಕರೆದಿರುವ ಅವರು, ಜಮ್ಮು ಮತ್ತು ಕಾಶ್ಮೀರದ ಆತಂಕಕಾರಿ ಭದ್ರತಾ ಪರಿಸ್ಥಿತಿಯ ನೈಜ ಚಿತ್ರಣವನ್ನು ಈ ಘಟನೆ ತೆರೆದಿಡುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

Continue Reading
Advertisement
IND VS PAK
ಕ್ರೀಡೆ4 mins ago

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

HSRP Number Plate
ಬೆಂಗಳೂರು8 mins ago

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಡೆಡ್‌ಲೈನ್‌! ಇನ್ನೂ ಎರಡೇ ದಿನ ಬಾಕಿ

Narendra Modi And stock market news
ಪ್ರಮುಖ ಸುದ್ದಿ10 mins ago

Stock Market News: ಮೋದಿ ಪ್ರಮಾಣ ವಚನದ ಬಳಿಕ ಷೇರು ಮಾರುಕಟ್ಟೆ ಜಿಗಿತ; ಸೆನ್ಸೆಕ್ಸ್‌ ಹೊಸ ದಾಖಲೆ

Anirudh Jatkar again rise on voice jote joteyali serial issue
ಸ್ಯಾಂಡಲ್ ವುಡ್24 mins ago

Anirudh Jatkar: ʻಜೊತೆ ಜೊತೆಯಲಿ’ ಧಾರಾವಾಹಿಯ ವಿವಾದದ ಬಗ್ಗೆ ಬೇಸರ ಹೊರ ಹಾಕಿದ ಅನಿರುದ್ಧ್!

NEET UG
ಪ್ರೇಮಿಗಳ ದಿನಾಚರಣೆ36 mins ago

NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

Personality Development
ಪ್ರಮುಖ ಸುದ್ದಿ38 mins ago

Personality Development: ಈ 10 ಸೂತ್ರ ಪಾಲಿಸಿದರೆ ನೆಮ್ಮದಿಯ ಬದುಕು ಗ್ಯಾರಂಟಿ!

reasi terror attack
ಪ್ರಮುಖ ಸುದ್ದಿ1 hour ago

Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

T20 World Cup
Latest1 hour ago

T20 World Cup : ಪಾಕಿಸ್ತಾನಕ್ಕೆ ಸಂಕಷ್ಟ ತಂದಿಟ್ಟ ಭಾರತ; ಸೂಪರ್ 8 ಹಂತ ಪ್ರವೇಶವೂ ಕಷ್ಟ!

Kangana Ranaut Looks Gorgeous In A White Saree
ಬಾಲಿವುಡ್1 hour ago

Kangana Ranaut: ಪ್ರಮಾಣ ವಚನ ಸಮಾರಂಭದಲ್ಲಿ ಬಿಳಿ ಸೀರೆಯಲ್ಲಿ ಮಿಂಚಿದ ಕಂಗನಾ!

IND vs PAK
ಪ್ರಮುಖ ಸುದ್ದಿ2 hours ago

IND vs PAK : ಪಾಕಿಸ್ತಾನದ ಬೌಲರ್​ ವಿರುದ್ಧ ವಿಶೇಷ ದಾಖಲೆ ಮಾಡಿದ ರೋಹಿತ್ ಶರ್ಮಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌