Flower Show: ಜ.26ರಿಂದ 29ರವರೆಗೆ ಶಿವಮೊಗ್ಗದಲ್ಲಿ ಫಲಪುಷ್ಪ ಪ್ರದರ್ಶನ - Vistara News

ಕರ್ನಾಟಕ

Flower Show: ಜ.26ರಿಂದ 29ರವರೆಗೆ ಶಿವಮೊಗ್ಗದಲ್ಲಿ ಫಲಪುಷ್ಪ ಪ್ರದರ್ಶನ

Flower Show: ಗಣರಾಜ್ಯೋತ್ಸವದ ಪ್ರಯುಕ್ತ ತೋಟಗಾರಿಕೆ ಇಲಾಖೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ.

VISTARANEWS.COM


on

Horticulture Department flower show shivamogga
ಫಲ, ಪುಷ್ಪ ಪ್ರದರ್ಶನದ ಕುರಿತು ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರಕಾಶ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಗಣರಾಜ್ಯೋತ್ಸವದ ಪ್ರಯುಕ್ತ ಜ.26ರಿಂದ 29ರವರೆಗೆ ನಾಲ್ಕು ದಿನಗಳ ಕಾಲ ನಗರದ ತೋಟಗಾರಿಕೆ ಇಲಾಖೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ಫಲಪುಷ್ಪ ಪ್ರದರ್ಶನ (Flower Show) ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರಕಾಶ್ ತಿಳಿಸಿದರು.

61ನೇ ಫಲಪುಷ್ಪ ಪ್ರದರ್ಶನದ ಕುರಿತು ಮಾಹಿತಿ ನೀಡಲು ತೋಟಗಾರಿಕೆ ಇಲಾಖೆಯ ಕಚೇರಿಯಲ್ಲಿ ಸೋಮವಾರ (ಜ.೨೩) ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ತೋಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘ, ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳು ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಈ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಶೇಷತೆಗಳೆಂದರೆ ಜಿಲ್ಲೆಯ ಸಸ್ಯ ಸಂಪತ್ತು ಮತ್ತು ವನ್ಯಜೀವಿ ಆಕೃತಿಗಳು ಹಾಗೂ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಹೂವಿನ ಕಲಾಕೃತಿ ‘ಗಂಧದ ಗುಡಿ’ ಶಿವಮೊಗ್ಗ ವಿಮಾನ ನಿಲ್ದಾಣ ಮಾದರಿ, ‘ಶಿವಮೊಗ್ಗ, ಸ್ಮಾರ್ಟ್ ಸಿಟಿ’ ಮಾದರಿ, ಹೂವಿನ ಫೋಟೊ ಫ್ರೇಮ್‍ಗಳು ಹಾಗೂ ಮಕ್ಕಳನ್ನು ಆಕರ್ಷಿಸುವ ಹೂವಿನ ಗೊಂಬೆಗಳು ಇರಲಿವೆ. ಫಲಪುಷ್ಪ ಪ್ರದರ್ಶನದಲ್ಲಿ ರೈತರಿಗಾಗಿ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶಿಕೆಗಳ ಸ್ಪರ್ಧೆ, ಮಹಿಳೆಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ (ವಿವಿಧ ಸಸ್ಯ ಭಾಗಗಳನ್ನು, ಹೂ, ಮೊಗ್ಗು, ಎಲೆ, ಹಣ್ಣು, ಬೀಜ, ಧಾನ್ಯಗಳನ್ನು ಬಳಸಿ ರಂಗೋಲಿ ರಚನೆ), ಮನೆ/ಶಾಲೆ/ಅಂಗನವಾಡಿ ಕಚೇರಿ/ಖಾಸಗಿ ಸಂಸ್ಥೆಗಳಿಗೆ ಕೈತೋಟ, ತಾರಸಿ ತೋಟ ಮತ್ತು ಉದ್ಯಾನವನಗಳ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.

ಇದನ್ನೂ ಓದಿ KR Market Flyover: ನೋಟು ಎಸೆದವನಿಗೆ ಪೊಲೀಸ್‌ ನೋಟಿಸ್‌; ಇಷ್ಟೆಲ್ಲ ಮಾಡಿದ್ದಕ್ಕೆ ನೂರೇ ರೂಪಾಯಿ ದಂಡ!

ಜಿಲ್ಲೆಯ ಎಲ್ಲ ತಾಲೂಕುಗಳ ರೈತರು ಬೆಳೆದ ವಿಶೇಷ ರೀತಿಯ ಹೂ, ಹಣ್ಣು, ತರಕಾರಿ ಮತ್ತಿತರ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಜಿಲ್ಲಾ ಪಂಚಾಯಿತಿ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(ಎನ್‍ಆರ್‌ಎಲ್‍ಎಂ)- ಸಂಜೀವಿನಿ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳ ವೈವಿಧ್ಯಮಯ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಇಲ್ಲಿ ಆಯೋಜಿಸಲಾಗಿದೆ.

ಕೃಷಿ, ಪಶುಸಂಗೋಪನೆ, ರೇಷ್ಮೆ, ಮೀನುಗಾರಿಕೆ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಸ್ತ್ರೀಶಕ್ತಿ ಸಂಘಗಳು, ಕೃಷಿ ಮತ್ತು ತೋಟಗಾರಿಕೆ ಯಂತ್ರೋಪಕರಣಗಳು, ಹನಿ ನೀರಾವರಿ ಉಪಕರಣಗಳು, ಅಲಂಕಾರಿಕ ಹೂ ಗಿಡಗಳ ನರ್ಸರಿ ಇತ್ಯಾದಿ ಒಟ್ಟು ವಿವಿಧ ರೀತಿಯ 80 ಮಳಿಗೆಗಳು ಪ್ರದರ್ಶನದಲ್ಲಿರುತ್ತವೆ. ಅರಣ್ಯ ಇಲಾಖೆ ಮತ್ತು ಮೃಗಾಲಯ ಪ್ರಾಧಿಕಾರದ ಹುಲಿ ಮತ್ತು ಸಿಂಹಧಾಮದ ವತಿಯಿಂದ ವಿವಿಧ ವನ್ಯಜೀವಿ ಲೋಕದ ಪರಿಚಯ ಹಾಗೂ ವಿವಿಧ ಪ್ರಾತ್ಯಕ್ಷಿಕೆಗಳಾದ ಕೈತೋಟದ ಪ್ರಾತ್ಯಕ್ಷತೆ, ವಿವಿಧ ಆಲಂಕಾರಿಕ ಹೂಗಳು, ಕುಬ್ಜಗಿಡಗಳು (ಬೋನ್ಸಾಯ್), ಅಣಬೆ ಪ್ರಾತ್ಯಕ್ಷತೆ ಹಾಗೂ ಜೇನು ಕೃಷಿ ಕುರಿತಾದ ಪ್ರಾತ್ಯಕ್ಷತೆ ಹಾಗೂ ಸುಮಾರು 5 ಸಾವಿರ ವಿವಿಧ ಜಾತಿಯ ಆಕರ್ಷಕ ಹೂಕುಂಡಗಳ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.

ಇದನ್ನೂ ಓದಿ | Women’s IPL: ಮಹಿಳಾ ಐಪಿಎಲ್​; ಬುಧವಾರ ನಡೆಯಲಿದೆ ತಂಡಗಳ ಹರಾಜು

ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಶುಚಿಯಾದ ಮತ್ತು ರುಚಿಯಾದ ಆಹಾರೋತ್ಪನ್ನಗಳ ಆಹಾರ ಮೇಳವನ್ನು ಸಹ ಏರ್ಪಡಿಸಲಾಗಿದೆ. ಪ್ರವೇಶ ಶುಲ್ಕ ವಯಸ್ಕರಿಗೆ 10 ರೂ. ಮತ್ತು ಮಕ್ಕಳಿಗೆ 5 ರೂ. ನಿಗದಿಗೊಳಿಸಿದ್ದು ಶಿಕ್ಷಕರ ಜತೆ ಬರುವ ಶಾಲಾ ಮಕ್ಕಳಿಗೆ ಪ್ರವೇಶ ಉಚಿತವಾಗಿರುತ್ತದೆ. ಜ.27 ಮತ್ತು 28ರಂದು ಸಂಜೆ 6ರಿಂದ 8ರವರೆಗೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವಿರುತ್ತದೆ. ಜ.29ರಂದು ಸಮಾರೋಪ ಸಮಾರಂಭವಿದ್ದು ಫಲಪುಷ್ಪ ಪ್ರದರ್ಶನದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮತ್ತು ಭಾಗವಹಿಸಿದ ಎಲ್ಲ ಸರ್ಕಾರಿ/ಸರ್ಕಾರೇತರ ಸಂಘ ಸಂಸ್ಥೆಗಳನ್ನು ಅಭಿನಂದಿಸಲಾಗುವುದು ಎಂದು ಮಾಹಿತಿ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಉದ್ಯಾನ ಕಲಾ ಸಂಘದ ಉಪಾಧ್ಯಕ್ಷ ಹರಳೆಣ್ಣೆ ಸಿದ್ದಪ್ಪ, ಖಜಾಂಚಿ ರಘು ದುಮ್ಮಳ್ಳಿ, ನಿರ್ದೇಶಕರಾದ ಚಂದ್ರಕಾಂತ ಅಸಗೋಡು, ಚಂದ್ರಕಲಾ, ಆಶಾ ಶೇಷಾದ್ರಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ವನಮಾಲಾ ಇದ್ದರು.

ಇದನ್ನೂ ಓದಿ | Karnataka Election: ಮಾಜಿ ಸಿಎಂ ಸಿದ್ದರಾಮಯ್ಯಗೆ ಅವರ ಹಗರಣಗಳೇ ಕುಣಿಕೆಯಾಗಲಿದೆ; ಕಟೀಲ್‌ ಸರಣಿ ಟ್ವೀಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

NEET UG result 2024: ಜೂನ್‌ 4ರಂದು ನೀಟ್‌ ಯುಜಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌ ಆಗಿದ್ದಾರೆ.

VISTARANEWS.COM


on

By

NEET UG Result 2024
Koo

ಬೆಂಗಳೂರು/ನವದೆಹಲಿ: ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟಗೊಂಡಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಮೊದಲ ರ‍್ಯಾಂಕ್‌ ಪಡೆದಿದ್ದಾರೆ.

ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪಟ್ಟಿಯಲ್ಲಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್‌, ಅರ್ಜುನ್ ಕಿಶೋರ್, ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ಎಂಬ ವಿದ್ಯಾರ್ಥಿಗಳು ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಸ್ಥಾನದಲ್ಲಿದ್ದಾರೆ.

NEET UG Result 2024 Out of the 100 students who secured the first rank six from Karnataka are NEET toppers
NEET UG Result 2024 Out of the 100 students who secured the first rank six from Karnataka are NEET toppers
NEET UG Result 2024 Out of the 100 students who secured the first rank six from Karnataka are NEET toppers

ಅಂದಹಾಗೇ, ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಉತ್ತರ ಪತ್ರಿಕೆಗಳ ಮರುಪರಿಶೀಲನೆ ಅಥವಾ ಮರುಮೌಲ್ಯಮಾಪನಕ್ಕೆ ಅವಕಾಶವಿಲ್ಲ ಎನ್ನಲಾಗಿದೆ. ಇನ್ನೂ ನೀಟ್‌ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮೇ 29 ರಂದು ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಜೂನ್ 3 ರಂದು ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಬಿಡುಗಡೆಯಾಗಿರುವ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ನೀಟ್ ಯುಜಿ 2024ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Mysore Election Result 2024: ಮೈಸೂರು-ಕೊಡಗು ಲೋಕಸಭಾ ಚುನಾವಣೆ; ಯಾವ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತ?

Mysore Election Result 2024: ಮೈಸೂರು-ಕೊಡಗು ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾದರೂ ಜನರ ಒಲವು ಬಿಜೆಪಿ ಕಡೆಗೇ ಇರುವುದು ಕಂಡುಬಂದಿದೆ. ವಿಧಾನಸಭಾ ಕ್ಷೇತ್ರವಾರು ಯಾವ ಅಭ್ಯರ್ಥಿಗೆ ಎಷ್ಟು ಮತಗಳು ಬಂದಿವೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Mysore election results 2024
Koo

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ (Mysore Election Result 2024) ಬಿಜೆಪಿಯ ಅಭ್ಯರ್ಥಿ ಯದುವೀರ್​ ಒಡೆಯರ್ (Yaduveer Wadiyar) ಅವರು 7,95,503 ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,39,262 ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ. ಇದರಿಂದ ಅಭ್ಯರ್ಥಿ ಬದಲಾದರೂ ಜನರ ಒಲವು ಬಿಜೆಪಿ ಕಡೆಗೇ ಇರುವುದು ಕಂಡುಬಂದಿದೆ. ಇನ್ನು ಇಲ್ಲಿನ ವಿಧಾನಸಭಾ ಕ್ಷೇತ್ರವಾರು ಯಾವ ಅಭ್ಯರ್ಥಿಗೆ ಎಷ್ಟು ಮತಗಳು ಬಂದಿವೆ ಎಂಬ ಮಾಹಿತಿ ಇಲ್ಲಿದೆ.

ಕ್ಷೇತ್ರದಲ್ಲಿ ಎರಡು ಬಾರಿಯ ಸಂಸದ ಪ್ರತಾಪ್‌ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ತಪ್ಪಿತ್ತು. ಅವರ ಬದಲಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭ್ಯರ್ಥಿಯಾಗಿದ್ದರು. ಆದರೆ, ಅಭ್ಯರ್ಥಿ ಬದಲಾದರೂ ಕ್ಷೇತ್ರದಲ್ಲಿ ಬಿಜೆಪಿಗೇ ಅತಿ ಹೆಚ್ಚಿನ ಜನಬೆಂಬಲ ವ್ಯಕ್ತವಾಗಿದೆ.

ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶದ ವಿವರ

1) ಮಡಿಕೇರಿ ವಿಧಾನ ಸಭಾ ಕ್ಷೇತ್ರ
ಬಿಜೆಪಿ : 92949
ಕಾಂಗ್ರೆಸ್ : 56490
ಬಿಜೆಪಿ ಲೀಡ್: 36459

2) ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ
ಬಿಜೆಪಿ : 87310
ಕಾಂಗ್ರೆಸ್ : 59932
ಬಿಜೆಪಿ ಲಿಡ್: 27378

3) ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರ
ಬಿಜೆಪಿ : 71237
ಕಾಂಗ್ರೆಸ್ : 82981
ಕಾಂಗ್ರೆಸ್ ಲೀಡ್: 11744

04) ಹುಣಸೂರು ವಿಧಾನ ಸಭಾ ಕ್ಷೇತ್ರ
ಬಿಜೆಪಿ : 84436
ಕಾಂಗ್ರೆಸ್ : 80340
ಕಾಂಗ್ರೆಸ್ ಲೀಡ್: 4096

5) ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರ
ಬಿಜೆಪಿ : 103112
ಕಾಂಗ್ರೆಸ್ :- 64968
ಬಿಜೆಪಿ ಲೀಡ್ 38144

6) ಕೃಷ್ಣರಾಜ ವಿಧಾನಸಭಾ ಕ್ಷೇತ್ರ
ಬಿಜೆಪಿ :-92449
ಕಾಂಗ್ರೆಸ್ :-45703
ಬಿಜೆಪಿ ಲೀಡ್ 46746

7) ಚಾಮರಾಜ ವಿಧಾನ ಸಭಾ ಕ್ಷೇತ್ರ
ಬಿಜೆಪಿ : 101166
ಕಾಂಗ್ರೆಸ್ : 47434
ಬಿಜೆಪಿ ಲೀಡ್: 53732

8) ನರಸಿಂಹರಾಜ ವಿಧಾನ ಸಭಾ ಕ್ಷೇತ್ರ
ಬಿಜೆಪಿ :- 40784
ಕಾಂಗ್ರೆಸ್ :-121739
ಕಾಂಗ್ರೆಸ್ ಲೀಡ್ 80955

ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾಂಗ್ರೆಸ್‌ ಅಭ್ಯರ್ಥಿ ಸುಮಾರು 1,39,262 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

ಇದನ್ನೂ ಓದಿ: Mandya Election Result 2024 : ಮಂಡ್ಯದಲ್ಲಿ ಕುಮಾರ ಸ್ವಾಮಿಗೆ ಭರ್ಜರಿ ಗೆಲುವು

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿತ್ತು.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅಡಗೂರು ಎಚ್.ವಿಶ್ವನಾಥ್ ಅವರು ಬಿಜೆಪಿಯ ಸಿ.ಎಚ್.ವಿಜಯಶಂಕರ್ ಅವರನ್ನು 7,691 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 36.42% ಮತಗಳನ್ನು ಪಡೆದಿತ್ತು.

Continue Reading

ಮಳೆ

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Rain News : ಬೆಂಗಳೂರಲ್ಲಿ ವರುಣ ಬ್ರೇಕ್‌ ಕೊಟ್ಟಿದ್ದು, ಕರಾವಳಿಯಲ್ಲಿ ಅಬ್ಬರಿಸುತ್ತಿದ್ದಾನೆ. ಮುಂದಿನ 24 ಗಂಟೆಯಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ (Karnataka Weather Forecast) ಮಳೆಯಾಗಿತ್ತು. ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ (Rain News) ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಯಿಂದಾಗಿ (Heavy Rain Alert) ಹೆದ್ದಾರಿಯಲ್ಲಿ ನೀರು ನಿಂತಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು.

ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಎಡಬಿಡದೆ ಮಳೆ ಸುರಿದಿದೆ. ಕಳೆದೊಂದು ವಾರದಿಂದ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಸುರಿದಿತ್ತು. ಇದೀಗ ಕರಾವಳಿ ತಾಲೂಕುಗಳಲ್ಲಿ ವರುಣಾರ್ಭಟ ಆರಂಭವಾಗಿದೆ. ಲೋಕಸಭೆ ಚುನಾವಣೆಯ ಮತ ಎಣಿಕೆಗೂ ಮಳೆ ಅಡ್ಡಿ ಆಯಿತು. ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿ, ಸಿಬ್ಬಂದಿ ಮಳೆಯಲ್ಲಿ ನೆನೆದುಕೊಂಡೆ ಬರುವಂತಾಯಿತು.

karnataka weather Forecast

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಇದನ್ನೂ ಓದಿ: Bellary VIMS Hospital : ಲೇಡಿ ಡಾಕ್ಟರ್‌ ಜುಟ್ಟು ಹಿಡಿದು ಎಳೆದಾಡಿ ಹೊಡೆದ; ವಿಮ್ಸ್‌ ಆಸ್ಪತ್ರೆಯಲ್ಲಿ ದಿಢೀರ್‌ ಪ್ರತಿಭಟನೆ

ಜೂನ್‌ 5ಕ್ಕೂ ಹಲವೆಡೆ ಮಳೆ ಅಬ್ಬರ

ಜೂ 5ರಂದು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು ಸೇರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗಾಳಿಯ ವೇಗವು 30-40 ಕಿಮೀ ಇರಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುಲಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Election Results 2024: ಮೋದಿ ಜನಪ್ರಿಯತೆ ಕಡಿಮೆ ಆಗಿದೆ, ಕಾಂಗ್ರೆಸ್‌ ವೋಟ್‌ ಶೇರ್ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

Karnataka Election Results 2024: ಬಿಜೆಪಿ ವೋಟಿಂಗ್ ಶೇರ್ ಶೇ. 5 ರಷ್ಟು ಕಡಿಮೆ ‌ಆಗಿದೆ, ಆದರೆ, ವೋಟಿಂಗ್‌ ಶೇರ್ ಜಾಸ್ತಿ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸೀಟ್‌ ಬಂದಿಲ್ಲ. ಇದರಿಂದ ಎಲ್ಲೂ ಮೋದಿ ಅಲೆ ಇರಲಿಲ್ಲ ಎಂಬುವುದು ತಿಳಿಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Karnataka Election Results 2024
Koo

ಬೆಂಗಳೂರು: ರಾಜ್ಯದಲ್ಲಿ ನಾವು 15 ರಿಂದ 20 ಕಡೆ ಗೆಲ್ಲುತ್ತೇವೆ ಎಂದುಕೊಂಡಿದ್ದೆವು. ಆದರೆ ನಮ್ಮ ನಿರೀಕ್ಷೆಯಂತೆ ಫಲಿತಾಂಶ (Karnataka Election Results 2024) ಬರಲಿಲ್ಲ. ಈ ಬಾರಿ ರಾಜ್ಯದಲ್ಲಿ 9 ಕಡೆ ಗೆಲುವು ಸಿಕ್ಕಿದೆ. ಕಳೆದ ಬಾರಿ ಕಾಂಗ್ರೆಸ್‌ ಒಂದು ಸೀಟ್‌ ಮಾತ್ರ ಗೆದ್ದಿತ್ತು. ಈ ಬಾರಿ 2019ಕ್ಕಿಂತ ನಮ್ಮ ಓಟಿಂಗ್ ಶೇರ್ ಜಾಸ್ತಿ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವೋಟಿಂಗ್ ಶೇರ್ ಶೇ. 5 ರಷ್ಟು ಕಡಿಮೆ ‌ಆಗಿದೆ, ಆದರೆ, ಓಟಿಂಗ್‌ ಶೇರ್ ಜಾಸ್ತಿ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸೀಟ್‌ ಬಂದಿಲ್ಲ. ದೇಶದಲ್ಲಿ ಕಾಂಗ್ರೆಸ್‌ಗೆ ಶೇ. 3 ರಷ್ಟು ಓಟಿಂಗ್ ಜಾಸ್ತಿ ಆಗಿದೆ. ಬಿಜೆಪಿ 2019ರಲ್ಲಿ 303 ಗೆದ್ದಿತ್ತು. ಈಗ, 246 ಗೆದ್ದಿದೆ. ಬಿಜೆಪಿ ಅತಿ ದೊಡ್ಡ ಪಾರ್ಟಿ ಆಗಿ ಬಂದಿದೆ. ಆದರೆ, ಎಲ್ಲೂ ಮೋದಿ ಅಲೆ ಇರಲಿಲ್ಲ. ಮೋದಿಯವರ ಜನಪ್ರಿಯತೆ ಕಡಿಮೆ ಆಗಿದೆ ಎಂದು ಸಿಎಂ ಹೇಳಿದರು.

ಯಾರು ಸರ್ಕಾರ ರಚಿಸುತ್ತಾರೋ ಗೊತ್ತಿಲ್ಲ

ಯಾರು ಸರ್ಕಾರ ರಚಿಸುತ್ತಾರೋ ಅಂತ ನನಗೆ ಗೊತ್ತಿಲ್ಲ ಆದರೆ ಬಿಜೆಪಿಗೆ ಮೆಜಾರಿಟಿ ಸೀಟ್ ಅಂತೂ ಬಂದಿಲ್ಲ.
ಮೋದಿ ಸೋಲುತ್ತೇವೆ ಅಂತ ಗೊತ್ತಾಗಿ ಧರ್ಮದ ಆಧಾರದ ಮೇಲೆ ಮತ ಕೇಳಲು ಶುರು ಮಾಡಿದರು. ಕೋಮುವಾದದ ಮೇಲೆ ಮತ ಕೇಳಿದ್ದು ವರ್ಕ್‌ಔಟ್‌ ಆಗಿಲ್ಲ, ಎನ್‌ಡಿಎಗೆ 60 ಸ್ಥಾನ ಕಡಿಮೆ ಆಗಿವೆ

ನರೇಂದ್ರ ಮೋದಿ ಪ್ರಧಾನಿ ಆಗಲು ನೈತಿಕ ಹಕ್ಕಿಲ್ಲ. ಇ.ಡಿ. ದುರ್ಬಳಕೆ ಮಾಡಿಕೊಂಡು ದೆಹಲಿ ಮುಖ್ಯಮಂತ್ರಿಯನ್ನು ಜೈಲಿಗೆ ಕಳುಹಿಸಲಾಯಿತು. ಅಯೋಧ್ಯೆಯಲ್ಲಿ ಬಿಜೆಪಿ ಸೋತಿದೆ, ಅಲ್ಲಿ ಎಸ್‌ಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಒಟ್ಟಾರೆ ಬಿಜೆಪಿಗೆ ದೊಡ್ಡ ಹಿನ್ನಡೆ ಆಗಿದೆ.

ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ದೇಶದಲ್ಲಿ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿಯವರು ಮಾಡಿದ ಯಾತ್ರೆಯಿಂದ ಇಂಡಿ ಮೈತ್ರಿ ಕೂಟಕ್ಕೆ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿಯವರು ಎರಡೂ ಕಡೆ ಗೆಲುವು ಸಾಧಿಸಿದ್ದಾರೆ, ಹೀಗಾಗಿ ಅವರಿಗೆ ನಾನು ವೈಯಕ್ತಿಕವಾಗಿ ಅಭಿನಂದನೆ ತಿಳಿಸುವೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸಿಕೊಳ್ಳಲು ಜನರು ಮತದಾನ ಮಾಡಿದ್ದಾರೆ. ನಮಗೆ ಗೆಲುವು ಆಗಿಲ್ಲ ನಿಜ, ಆದರೆ ಶೇಕಡಾವಾರು ಮತ ಪ್ರಮಾಣ ಜಾಸ್ತಿ ಆಗಿದೆ ಎಂದು ತಿಳಿಸಿದರು.

ಹಳೆ ಮೈಸೂರು ಹಿನ್ನಡೆಗೆ ಕಾರಣ ತಿಳಿಸಿದ ಸಿಎಂ, ಎರಡು ಪಾರ್ಟಿ ಒಂದಾಗಿ ಚುನಾವಣೆ ಮಾಡಿದರು. ಹೀಗಾಗಿ ನಮ್ಮ ನಿರೀಕ್ಷೆಯಂತೆ ಗೆಲುವು ಸಾಧಿಸಿಲ್ಲ. ನಾವು ಗೆದ್ದೇ ಬಿಟ್ಟಿದ್ದೀವಿ ಅಂತ ಹೇಳಿಲ್ಲ. ನಾವು ಗೆದ್ದಿಲ್ಲ ಎಂದು ಒಪ್ಪಿಕೊಂಡಿದ್ದೇವೆ. ಪ್ರಧಾನಿಯಾಗಿದ್ದವರು ಯಾರು ಯಾರ ಹೆಸರಲ್ಲಿ ಓಟು ಕೇಳಿದರು ಎಂದು ಪ್ರಶ್ನಿಸಿದರು.

ಗ್ಯಾರಂಟಿ ವರ್ಕೌಟ್ ಆಗಿದ್ಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ವರ್ಕ್ ಆಗಿದೆಯೋ, ಇಲ್ಲವೋ ಎನ್ನುವುದನ್ನು ವಿಶ್ಲೇಷಣೆ ಮಾಡಬೇಕು. ಮೇಲ್ನೋಟಕ್ಕೆ ವರ್ಕೌಟ್ ಆಗಿದೆ ಎಂಬುವುದು ತಿಳಿಯುತ್ತದೆ ಎಂದು ಹೇಳಿದರು.

ಮತದಾನ ಮತ್ತು ಎಣಿಕೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಮೊದಲಿಗೆ ಕರ್ನಾಟಕ ಮತ್ತು ದೇಶದ ಮತದಾರರಿಗೆ ಧನ್ಯವಾದ ಹೇಳಲು ಬಯಸುವೆ. ಹಾಗೆಯೇ ರಾಜ್ಯದಿಂದ ಗೆದ್ದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು ತಿಳಿಸುವೆ ಎಂದು ಹೇಳಿದರು.

ರಾಹುಲ್ ಗಾಂಧಿಯನ್ನು ದೇಶ ಒಪ್ಪಿಕೊಂಡಿದೆ

ರಾಹುಲ್ ಗಾಂಧಿಯವರ ಎರಡು ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದರು.

ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ ಎಂದರು.

ಮೋದಿಯವರು ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು, ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಮೋದಿಯವರಿಗೆ ಬಹುಮತ ಬರಲಿಲ್ಲ. ರಾಮನ ಹೆಸರಲ್ಲಿ, ರಾಮ ಮಂದಿರದ ಹೆಸರಲ್ಲಿ ಅಯೋಧ್ಯೆಯಲ್ಲೂ ಬಿಜೆಪಿ ಸೋತಿದೆ. ಇದು ಬಿಜೆಪಿಯ ಸೋಲು ಎಂದರು.

ಇದನ್ನೂ ಓದಿ | Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ

ಬಿಜೆಪಿ ಜನಪ್ರಿಯತೆ ಕುಸಿದಿದೆ

ಇಡೀ ದೇಶದಲ್ಲಿ ರಾಜ್ಯದಲ್ಲಿ 2019ಕ್ಕಿಂತ ಬಿಜೆಪಿ ಪ್ರಭಾವ ವಿಪರೀತ ಕುಸಿದಿದೆ ಎಂದು ಸಿಎಂ ವಿವರಿಸಿದರು. ಕೇಂದ್ರದಲ್ಲಿ ಯಾರು ಸರ್ಕಾರ ರಚಿಸುತ್ತಾರೆ ಎನ್ನುವುದು ಅನಿಶ್ಚಿತವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಚಿವ ಎಂ.ಸಿ. ಸುಧಾಕರ್, ಎಂಎಲ್‌ಸಿ ಸಲೀಂ ಅಹ್ಮದ್, ಗೋವಿಂದರಾಜು ಉಪಸ್ಥಿತರಿದ್ದರು.

Continue Reading
Advertisement
NEET UG Result 2024
ಕರ್ನಾಟಕ5 mins ago

NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

Mysore election results 2024
ಕರ್ನಾಟಕ6 mins ago

Mysore Election Result 2024: ಮೈಸೂರು-ಕೊಡಗು ಲೋಕಸಭಾ ಚುನಾವಣೆ; ಯಾವ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತ?

Election Results 2024
Lok Sabha Election 202411 mins ago

Election Results 2024: ಶಶಿ ತರೂರ್‌ ವಿರುದ್ಧ ವೀರೋಚಿತ ಸೋಲು ಕಂಡ ಬಿಜೆಪಿಯ ರಾಜೀವ್‌ ಚಂದ್ರಶೇಖರ್‌

Election Results 2024
ಕ್ರಿಕೆಟ್25 mins ago

Election Results 2024: ಪಶ್ಚಿಮ ಬಂಗಾಳದಲ್ಲಿ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್​ಗೂ ಜಯಭೇರಿ

Election Results 2024
ದೇಶ26 mins ago

Election results 2024: ʼಎಲ್ಲಾ ಪಕ್ಷಗಳೂ ಹ್ಯಾಪಿ ಆಗಿವೆ..ಕಾರಣ ಇಲ್ಲಿದೆ ನೋಡಿʼ- ಫನ್ನಿ ಮೀಮ್ಸ್‌ಗೆ ನೆಟ್ಟಿಗರು ಫಿದಾ!

Narendra Modi Election Live
ದೇಶ32 mins ago

Narendra Modi Election Live: ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಮೋದಿ ಭಾಷಣ; ಲೈವ್‌ ಇಲ್ಲಿ ವೀಕ್ಷಿಸಿ

Karnataka weather Forecast
ಮಳೆ37 mins ago

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Narendra Modi Election
ದೇಶ50 mins ago

Narendra Modi Election: 3ನೇ ಸಲ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ; ರಿಸಲ್ಟ್ ಬಳಿಕ ಮೋದಿ ಭಾವುಕ ಪೋಸ್ಟ್

AP Election Results 2024
ದೇಶ1 hour ago

AP Election Results 2024: ಆಂಧ್ರದಲ್ಲಿ ಮತ್ತೊಮ್ಮೆ ಟಿಡಿಪಿ ಮ್ಯಾಜಿಕ್‌; ಆಡಳಿತ ವಿರೋಧಿ ಅಲೆಗೆ ಕೊಚ್ಚಿಹೋದ ಜಗನ್ ಮೋಹನ್ ರೆಡ್ಡಿ

Venu Swamy Wrong Prediction on Jagan in AP Polls
ಟಾಲಿವುಡ್1 hour ago

Venu Swamy: ನನ್ನ ಹೇಳಿಕೆ ಸುಳ್ಳಾಯ್ತು, ಟಿಡಿಪಿ ಪಕ್ಷ ಗೆದ್ದಿತು; ಇನ್ನೆಂದೂ ಭವಿಷ್ಯ ನುಡಿಯಲಾರೆ ಎಂದ ಖ್ಯಾತ ಜ್ಯೋತಿಷಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ14 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌