ಅಫ್ಘಾನಿಸ್ತಾನದಲ್ಲಿ ಮತ್ತೆ ಹೆಣ್ಣುಮಕ್ಕಳ ಭೂಗತ ಶಾಲೆಗಳು ಚಾಲೂ: ಹೇಗೆ ನಡೀತಿದೆ? - Vistara News

ಮಹಿಳೆ

ಅಫ್ಘಾನಿಸ್ತಾನದಲ್ಲಿ ಮತ್ತೆ ಹೆಣ್ಣುಮಕ್ಕಳ ಭೂಗತ ಶಾಲೆಗಳು ಚಾಲೂ: ಹೇಗೆ ನಡೀತಿದೆ?

ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಕಣ್ಣಿಗೆ ಬೀಳದಂತೆ ಕೆಲವು ಹೆಣ್ಣುಮಕ್ಕಳು ಭೂಗತವಾಗಿ ಶಾಲೆಗಳನ್ನು ನಡೆಸುತ್ತಿದ್ದಾರೆ. ಅವು ಹೇಗೆ ನಡೆಯುತ್ತಿವೆ ನಿಮಗೆ ಗೊತ್ತೆ?

VISTARANEWS.COM


on

afghanisthan school
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಕ್ಸಾನಾ ಸುಲ್ತಾನಾ ಎಂಬಾಕೆ ಅಫ್ಘಾನಿಸ್ತಾನದವಳು. 1990ರ ದಶಕದಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ತಮ್ಮ ಕ್ರೂರ ಆಡಳಿತವನ್ನು ದೇಶದಲ್ಲಿ ಹರಡಿದಾಗ, ಹೆಣ್ಣುಮಕ್ಕಳ ಶಿಕ್ಷಣವನ್ನು ನಿಷೇಧಿಸಿದರು. ಆಗ ಕಲಿಕೆಯ ಹಂಬಲ ಹೊಂದಿದ್ದ ಕೆಲವು ಹೆಣ್ಣುಮಕ್ಕಳು ಸೇರಿಕೊಂಡು, ರಹಸ್ಯವಾಗಿ ಶಿಕ್ಷಣ ಪಡೆಯುವ ದಾರಿ ಕಂಡುಕೊಂಡರು. ಹೀಗೆ ಕಲಿತಾಕೆ ಅಕ್ಸಾನಾ ಸುಲ್ತಾನಾ. ಈಗ ಮತ್ತದೇ ರೀತಿಯ ಭೂಗತ ಶಾಲೆಗಳು ಅಸ್ತಿತ್ವಕ್ಕೆ ಬಂದಿವೆ. ಅವು ಹೇಗೆ ನಡೆಯುತ್ತಿವೆ ಎನ್ನುವುದನ್ನು ಆಕ್ಸಾನಾ ಸುಲ್ತಾನಾ ಮಾತುಗಳಲ್ಲೇ ಕೇಳಿ:

ನಾನು 1990ರ ದಶಕದಲ್ಲಿ ಅಫ್ಘಾನಿಸ್ತಾನದಲ್ಲಿ ಬೆಳೆದೆ. ಆಗಿನ ತಾಲಿಬಾನ್‌ ಆಡಳಿತ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಕ್ರೂರವಾಗಿತ್ತು. ಎಲ್ಲ ಬಗೆಯ ಸ್ತ್ರೀ ಸ್ವಾತಂತ್ರ್ಯ, ಸಮಾನತೆಗಳನ್ನು ಹತ್ತಿಕ್ಕಲಾಗಿತ್ತು. ಹೆಣ್ಣು ಮಗು ಓದು ಬರಹ ಕಲಿಯಲು ಮುಂದಾದರೆ ಆಕೆಯನ್ನೂ ಆಕೆಯ ಹೆತ್ತವರನ್ನೂ ಅತ್ಯಂತ ಕಠಿಣವಾಗಿ ಶಿಕ್ಷಿಸಲಾಗುತ್ತಿತ್ತು.

ನನ್ನ ಸಹೋದರರು ಪ್ರತಿ ಮುಂಜಾನೆ ಬ್ಯಾಗ್‌ ಹೆಗಲಿಗೇರಿಸಿಕೊಂಡು ಶಾಲೆಗೆ ಹೋಗುತ್ತಿದ್ದರು. ನಾನು ಅಸಹಾಯಕವಾಗಿ ಅವರನ್ನೇ ನೋಡುತ್ತ, ಮನೆಯಲ್ಲಿ ಅವರಿಗಾಗಿ ಅಡುಗೆ ಮಾಡುತ್ತ ಇರುತ್ತಿದ್ದೆ. ನನ್ನಲ್ಲಿ ಮೂಡುತ್ತಿದ್ದ ಕಲಿಕೆಯ ಹಂಬಲವನ್ನು ನನ್ನ ಹೆತ್ತವರು ಗುರುತಿಸಿದರು.

ಆಕ್ಸಾನಾ ಸುಲ್ತಾನ್

ನನ್ನ ತಾಯಿ ಧೈರ್ಯಶಾಲಿಯಾಗಿದ್ದಳು. ನನಗೆ 7 ವರ್ಷ ತುಂಬಿದಾಗ ಅವಳು ನನ್ನ ಪುಸ್ತಕಗಳನ್ನು ಒಂದು ದಿನಸಿ ಸಾಮಗ್ರಿಯ ಬ್ಯಾಗಿನಲ್ಲಿ ತುಂಬಿ, ನನ್ನ ಅಣ್ಣದ ಉಡುಪನ್ನು ನನಗೆ ತೊಡಿಸಿ, ಹೆಣ್ಣುಮಕ್ಕಳಿಗಾಗಿ ನಡೆಯುತ್ತಿದ್ದ ಒಂದು ಭೂಗತ ಶಾಲೆಗೆ ನನ್ನನ್ನು ಕಳಿಸಿದಳು.

ರಹಸ್ಯವಾದ ಸ್ಕೂಲು

ಆ ಶಾಲೆ ಹೊರಜಗತ್ತಿನ ಕಣ್ಣಿಗೆ ಕಾಣದಂತೆ ರಹಸ್ಯವಾಗಿತ್ತು. ಕಪ್ಪು ಪರದೆಗಳು ಅದರ ಕಿಟಕಿಗಳನ್ನು ಮುಚ್ಚಿದ್ದವು. ಅದೊಂದು ನೆಲಮಹಡಿಯಲ್ಲಿತ್ತು. ಕಿಟಕಿಗಳು, ಬಾಗಿಲುಗಳನ್ನು ಭದ್ರವಾಗಿ ಸರಪಳಿಗಳಿಂದ ಬಂಧಿಸಲಾಗಿತ್ತು. ಫಾರ್ಸಿ ಕಲಿಸುತ್ತಿದ್ದ ಟೀಚರ್‌ ಇದ್ದರು. ನನ್ನ ತಾಯಿ ಕೂಡ ಆಗಾಗ ಕಲಿಸಲು ಬರುತ್ತಿದ್ದರು. ಆ ನೆಲಮಹಡಿ, ತಮ್ಮ ಜೀವವನ್ನೇ ಪಣಕ್ಕಿಟ್ಟು ಕಲಿಯಲು ಬರುತ್ತಿದ್ದ ಸುಮಾರು 50 ಹೆಣ್ಣು ಮಕ್ಕಳಿಗೆ ನೆಲೆಯಾಗಿತ್ತು. ಅಲ್ಲಿ ಕುರ್ಚಿ, ಡೆಸ್ಕು ಯಾವುದೂ ಇರಲಿಲ್ಲ. ವೃತ್ತಾಕಾರವಾಗಿ ನೆಲದಲ್ಲಿ ಕೂರುತ್ತಿದ್ದೆವು.

ನಾವು ಶಾಲೆಗೆ ಹೋಗುತ್ತಿದ್ದ ಸಮಯ ಪ್ರತಿದಿನವೂ ಭಿನ್ನವಾಗಿರುತ್ತಿತ್ತು. ನಾನೂ ಹಾಗೂ ನನ್ನ ತಂಗಿ ಜೊತೆಯಾಗಿ ಹೋಗುತ್ತಿರಲಿಲ್ಲ. ಯಾರೂ ಒಂದೇ ಸಮಯಕ್ಕೆ ಬರುತ್ತಿರಲಿಲ್ಲ. ಕೈಯಲ್ಲಿ ಪುಸ್ತಕದ ಬ್ಯಾಗು ಹಿಡಿದಿರುತ್ತಿರಲಿಲ್ಲ. ತಾಲಿಬಾನಿಗಳ ಗಮನ ಸೆಳೆಯದೆ ಇರಲು ಇದು ಮುಖ್ಯವಾಗಿತ್ತು. ಪತ್ತೆಯಾದರೆ ನಮಗೆ ಕಠಿಣ ಶಿಕ್ಷೆಯಾಗುವುದು ಮಾತ್ರವಲ್ಲ, ಶಾಲೆ ನಡೆಸುತ್ತಿದ್ದವರಿಗೆ ಮರಣ ದಂಡನೆಯೇ ಗತಿಯಾಗಿತ್ತು. ನನ್ನ ತಾಯಿಯ ಧೈರ್ಯಕ್ಕೆ ಎಣೆಯೇ ಇಲ್ಲ. ʼಕಲಿತ ನಾರಿ ಅತ್ಯಂತ ಶಕ್ತಿವಂತೆʼ ಎನ್ನುತ್ತಿದ್ದಳು ಅವಳು.

ಆದರೆ, ಪರಿಸ್ಥಿತಿ ಬಿಗಡಾಯಿಸಿತು. ಸುತ್ತಮುತ್ತ ಇದ್ದವರಿಗೆ ಅನುಮಾನದ ವಾಸನೆ ಬಡಿಯಿತು. ಇದು ನಮ್ಮ ಹೆತ್ತವರಿಗೂ ಗೊತ್ತಾಯಿತು. ಹೆಣ್ಣುಮಕ್ಕಳ ಶಿಕ್ಷಣದಲ್ಲಿ ದೃಢ ನಂಬಿಕೆ ಇಟ್ಟಿದ್ದ ನನ್ನ ತಂದೆ ತಾಯಿ, ಕೈಯಲ್ಲಿ ಮೂರು ಕಾಸು ಸಹ ಇಲ್ಲದೆ, ನಮ್ಮನ್ನು ಕರೆದುಕೊಂಡು ತಜಿಕಿಸ್ತಾನದ ಗಡಿಗೆ ಬಂದುಬಿಟ್ಟರು. ನಾವು ನಿರಾಶ್ರಿತರಾಗಿದ್ದೆವು. ಅಲ್ಲೂ ಶಾಲೆಗಳಿರಲಿಲ್ಲ. ಕಿತ್ತು ತಿನ್ನುವ ಬಡತನ. ಕಾಯಿಲೆಗಳು. ಡಾಕ್ಟರ್‌ ಇರಲಿಲ್ಲ. ಕುಡಿಯುವ ನೀರೂ ಇಲ್ಲ, ಸ್ವಚ್ಛತೆಯೂ ಇಲ್ಲ.

ನಂತರದ ಹಲವು ವರ್ಷ ನಾವು ತಜಿಕಿಸ್ತಾನ, ಉಜ್ಬೆಕಿಸ್ತಾನಗಳಲ್ಲಿ ಕಳೆದೆವು. ನನಗೆ 13 ವರ್ಷವಾದಾಗ ವಿಶ್ವಸಂಸ್ಥೆ ಮೂಲಕ ನಾವು ಅಮೆರಿಕಕ್ಕೆ ಪ್ರವೇಶ ಪಡೆದೆವು. ನನ್ನ ಬದುಕು ಬದಲಾಯಿತು. ಈಗ ನಾನು ಬಡಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಇತ್ಯಾದಿಗಳ ಬಗ್ಗೆ ಕೆಲಸ ಮಾಡುವ ಸಂಸ್ಥೆ ಸ್ಥಾಪಿಸಿ ನಡೆಸುತ್ತಿದ್ದೇನೆ.

ಇದನ್ನೂ ಓದಿ: ಬಿಸಿಬಿಸಿ ದೃಶ್ಯಗಳಿಗೆ ಹೊಸ ಟ್ರೇನರ್!

ಇಂದು ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವುದೂ ಅಂದಿನಿಂತೆಯೇ ಇದೆ. ಶಾಲೆಗೆ ಹೋಗುವ ಹೆಣ್ಣುಮಕ್ಕಳನ್ನು ಮರಳಿ ಕಳಿಸಲಾಗುತ್ತಿದೆ. ಅಲ್ಲಿರುವ ನನ್ನ ಕಸಿನ್‌ ಒಬ್ಬಳು ಫೋನ್‌ ಮಾಡಿದ್ದಳು. ʼʼಅಕ್ಕಾ ಏನು ಮಾಡಬೇಕು ಅಂತ ಗೊತ್ತಾಗ್ತಿಲ್ಲ. ತಾಲಿಬಾನಿಗಳು ಸಣ್ಣ ಸಣ್ಣ ಹೆಣ್ಣುಮಕ್ಕಳನ್ನು ನಮಗೆ ಮದುವೆ ಮಾಡಿ ಕೊಡಬೇಕು ಎಂದು ಆರ್ಡರ್‌ ಮಾಡಿದಾರೆ.ʼʼ ಎಂದು ಅತ್ತಳು. ಅಷ್ಟರಲ್ಲಿ ಫೋನ್‌ ಕಟ್ಟಾಯಿತು. ಅಂದರೆ ಹೆಣ್ಣು ಮಕ್ಕಳ ಭವಿಷ್ಯ ಇನ್ನಷ್ಟು ಭಯಂಕರವಾಗಿದೆ. ಬಹುಶಃ ಅವರಿಗೆ ಭೂಗತ ಸ್ಕೂಲುಗಳಿಗೆ ಹೋಗಲೂ ಈಗ ಕಷ್ಟವಾಗಬಹುದು.

ಆದರೆ ನಾವು ಪ್ರಪಂಚದ ಸ್ತ್ರೀಯರು, ಇಷ್ಟಕ್ಕೆಲ್ಲ ಸೋಲುವವರಲ್ಲ. ಮತ್ತೆ ಮೇಲೆದ್ದೇ ಏಳುತ್ತೇವೆ. ನಮ್ಮ ಜ್ಞಾನದ ಹಸಿವನ್ನು ನಾವು ಹೇಗಾದರೂ ಹಿಂಗಿಸಿಕೊಳ್ಳಲಿದ್ದೇವೆ. ಅಲ್ಲಿನ ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡುವ ಪ್ರಯತ್ನಗಳು ಈಗಾಗಲೇ ಜಾರಿಯಲ್ಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಮಹಿಳೆಗೆ ಮಾತ್ರ ಅಸಾಧ್ಯವಾದುದನ್ನು ಸಾಧಿಸುವ ಶಕ್ತಿಯಿದೆ; ದಿವ್ಯಾ ರಂಗೇನಹಳ್ಳಿ

Bengaluru News: ಮಹಿಳೆಗೆ ಮಾತ್ರ ಎಲ್ಲವನ್ನೂ ನಿಭಾಯಿಸುವ ಶಕ್ತಿಯಿದೆ. ಆಕೆ ಎಲ್ಲಾ ಕ್ಷೇತ್ರಗಳಲ್ಲೂ ಇಂದು ತಲೆ ಎತ್ತಿ ನಿಂತಿದ್ದಾಳೆ. ಮಹಿಳೆಯರ ಸ್ಥೈರ್ಯ, ಸ್ಫೂರ್ತಿಯೇ ಇಂದು ಆಕೆಯ ಶಕ್ತಿಯನ್ನು ಜಗತ್ತಿಗೆ ಪರಿಚಯಿಸುವಂತೆ ಮಾಡಿದೆ. ಇದೊಂದು ಉತ್ತಮ ಅವಕಾಶಗಳನ್ನು ಒದಗಿಸುವ ಉಪಯುಕ್ತ ವೇದಿಕೆಯಾಗಲಿ ಎಂದು ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ ಹೇಳಿದರು.

VISTARANEWS.COM


on

Glittering Entrepreneurs vedike inauguration in bengaluru
Koo

ಬೆಂಗಳೂರು: ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಮುಂದುವರಿದಿದ್ದಾಳೆ. ಆಕೆಗೆ ಮಾತ್ರ ಎಲ್ಲವನ್ನೂ ನಿಭಾಯಿಸುವ ಶಕ್ತಿಯಿದೆ ಎಂದು ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ (Bengaluru News) ಹೇಳಿದರು.

ನಗರದಲ್ಲಿ ವರ್ಲ್ಡ್‌ ಆರ್ಯವೈಶ್ಯ ಮಹಸಭಾ ವತಿಯಿಂದ ಆಯೋಜಿಸಲಾದ ಗ್ಲಿಟರಿಂಗ್‌ ಎಂಟರ್‌ಪ್ರಿನರ್ಸ್‌ ವೇದಿಕೆಯ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಮಹಿಳೆಗೆ ಮಾತ್ರ ಎಲ್ಲವನ್ನು ನಿಭಾಯಿಸುವ ಶಕ್ತಿಯಿದೆ. ಆಕೆ ಎಲ್ಲಾ ಕ್ಷೇತ್ರಗಳಲ್ಲೂ ಇಂದು ತಲೆ ಎತ್ತಿ ನಿಂತಿದ್ದಾಳೆ. ಮಹಿಳೆಯರ ಸ್ಥೈರ್ಯ, ಸ್ಫೂರ್ತಿಯೇ ಇಂದು ಆಕೆಯ ಶಕ್ತಿಯನ್ನು ಜಗತ್ತಿಗೆ ಪರಿಚಯಿಸುವಂತೆ ಮಾಡಿರುವುದು. ಇದೊಂದು ಉತ್ತಮ ಅವಕಾಶಗಳನ್ನು ಒದಗಿಸುವ ಉಪಯುಕ್ತ ವೇದಿಕೆಯಾಗಲಿ ಎಂದು ಆಶಿಸಿದರು.

ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ಶಂಕರ್‌ ಮಾತನಾಡಿ, ಮಹಿಳೆಯರು ಬೆಳೆಯುವುದನ್ನು ನಾವು ಪ್ರೋತ್ಸಾಹಿಸುತ್ತೇವೆ. ನೀವು ಯಾವುದೇ ರೀತಿಯ ಸಹಾಯಗಳನ್ನು ಕೋರಿದ್ದಲ್ಲಿ ಖಂಡಿತಾ ನಾವು ಸಹಾಯ ಮಾಡಲು ಸಿದ್ಧರಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಕಾರ್ಯಕ್ರಮದಲ್ಲಿ ವರ್ಲ್ಡ್‌ ಆರ್ಯವೈಶ್ಯ ಮಹಾಸಭಾ ಸಮಾಜದ ಜಾಗತಿಕ ಅಧ್ಯಕ್ಷ ರಾಮಕೃಷ್ಣ ಟಂಗುಟೂರಿ ಮಾತನಾಡಿ, ಇಂದಿನ ಯುಗದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿದಿದ್ದಾಳೆ. ಪುರುಷರಿಗಿಂತ ಮಹಿಳಾ ಉದ್ಯಮಿಗಳೇ ಹೆಚ್ಚಾಗಿದ್ದಾರೆ. ಅವರ ಆತ್ಮಸ್ಥೈರ್ಯದಿಂದ ಇಂದು ಜಗತ್ತಿನೆಲ್ಲೆಡೆ ದಾಪುಗಲನ್ನು ಇಟ್ಟಿದ್ದಾರೆ. ಇದಕ್ಕೆ ವರ್ಲ್ಡ್‌ ಆರ್ಯವೈಶ್ಯ ಮಹಾಸಭಾ ಕೂಡ ಪ್ರೋತ್ಸಾಹಿಸುತ್ತಾ ಬಂದಿದೆ. ಈ ವೇದಿಕೆ ಮಹಿಳಾ ಉದ್ಯಮಿಗಳಿಗೆ ಇನ್ನಷ್ಟು ಭರವಸೆಗಳನ್ನು ನೀಡಲು ಎಂದು ಹೇಳಿದರು.

ಇದನ್ನೂ ಓದಿ: Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

ಈ ಸಂದರ್ಭದಲ್ಲಿ ವರ್ಲ್ಡ್‌ ಆರ್ಯವೈಶ್ಯ ಮಹಸಭಾ ಅಧ್ಯಕ್ಷೆ ಲಕ್ಷ್ಮಿ ಸಿ.ಪಿ, ಕಾರ್ಯದರ್ಶಿ ಪ್ರತಿಭಾ ಪ್ರಸಾದ್, ಪ್ರವೀಣ, ಅಶ್ವಿನಿ, ದೀಪಶ್ರೀ, ಶಿಲ್ಪಾ ಉಮೇಶ್, ಕವಿತಾ ಪಣಿರಾಜ್, ಸ್ನೇಹಾ ಕಾರ್ತಿಕ್, ಗೌರಿ ದತ್ತ, ಸುಬ್ಬಲಕ್ಷ್ಮಿ, ಸುನಿತಾ ಪ್ರಸಾದ್, ಸಿಂಧು ಸಫರಂ ಮತ್ತು ವರ್ಲ್ಡ್‌ ಆರ್ಯವೈಶ್ಯ ಮಹಸಭಾ ಸದಸ್ಯರು ಉಪಸ್ಥಿತರಿದ್ದರು.

Continue Reading

ಲೈಫ್‌ಸ್ಟೈಲ್

Tips For Happy Mother: ತಾಯ್ತನವನ್ನು ಸಂಭ್ರಮಿಸಿ; ನಿರಂತರ ಸಂತೋಷವಾಗಿರಲು ಈ 10 ಅಭ್ಯಾಸಗಳನ್ನು ಪಾಲಿಸಿ

ತಾಯಂದಿರು ದೈನಂದಿನ ಜಂಜಾಟದಲ್ಲಿ ಸಿಕ್ಕಿಹಾಕಿಕೊಳ್ಳುವುದು ಮತ್ತು ಸ್ವಂತ ಸಂತೋಷವನ್ನು ಕಳೆದುಕೊಳ್ಳುವುದು ಸುಲಭ. ಈ ಸರಳ ಅಭ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ತಾಯಂದಿರು ಸಂತೋಷವನ್ನು (Tips For Happy Mother) ಬೆಳೆಸಿಕೊಳ್ಳಬಹುದು ಮತ್ತು ತಮಗಾಗಿ, ತಮ್ಮ ಮನೆಯವರಿಗಾಗಿ ತಾಯ್ತನದ ಸಂಪೂರ್ಣ ಅನುಭವವನ್ನು ಕೊಡಬಹುದು.

VISTARANEWS.COM


on

By

Tips For Happy Mother
Koo

ತಾಯಿತನ (Tips For Happy Mother) ಎನ್ನುವುದು ಅತ್ಯಂತ ಸುಂದರ ಅನುಭವ. ಆದರೆ ಇದರ ಜೊತೆಜೊತೆಗೆ ಬರುವ ಜವಾಬ್ದಾರಿಗಳು ಎಷ್ಟೋ ಬಾರಿ ಮಹಿಳೆಯರನ್ನು (mother) ಹೈರಾಣಾಗಿಸುತ್ತದೆ. ಒಂದು ಕಡೆ ಮಗುವಿನ (baby) ಸಂಪೂರ್ಣ ಜವಾಬ್ದಾರಿ ಹೊತ್ತು ಮನೆ ಕೆಲಸ, ಮನೆ ಮಂದಿಯ ಬೇಕು, ಬೇಡಗಳನ್ನು ನಿರ್ವಹಿಸುವುದು ಸುಲಭದ ಮಾತಲ್ಲ. ಇದರ ನಡುವೆ ಮಹಿಳೆ ತನ್ನ ಸಂತೋಷವನ್ನು ಕಳೆದುಕೊಂಡು ಬಿಡುತ್ತಾಳೆ. ಅವಳ ಜೀವನ ನೀರಸವಾಗುವುದು. ಅದು ಮುಂದೆ ಮೊತ್ತೊಂದು ಸಮಸ್ಯೆಗಳನ್ನು ತಂದೊಡ್ಡಬಹುದು.

ತಾಯಂದಿರು ದೈನಂದಿನ ಜಂಜಾಟದಲ್ಲಿ ಸಿಕ್ಕಿಹಾಕಿಕೊಳ್ಳುವುದು ಮತ್ತು ಸ್ವಂತ ಸಂತೋಷವನ್ನು ಕಳೆದುಕೊಳ್ಳುವುದು ಸುಲಭ. ಈ ಸರಳ ಅಭ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ತಾಯಂದಿರು ಸಂತೋಷವನ್ನು ಬೆಳೆಸಿಕೊಳ್ಳಬಹುದು ಮತ್ತು ತಮಗಾಗಿ, ತಮ್ಮ ಮನೆಯವರಿಗಾಗಿ ತಾಯ್ತನದ ಸಂಪೂರ್ಣ ಅನುಭವವನ್ನು ಕೊಡಬಹುದು.

ಸಂತೋಷವಾಗಿರುವ ತಾಯಿ ಮನೆಯನ್ನು ಸಂತೋಷವಾಗಿ ಇಡುತ್ತಾಳೆ ಎಂಬುದು ನೆನಪಿರಲಿ. ತಾಯ್ತನದ ಪ್ರಯಾಣಕ್ಕೆ ಸಂತೋಷ ಮತ್ತು ಯೋಗಕ್ಷೇಮವನ್ನು ತುಂಬಲು ಈ ಹತ್ತು ಸರಳ ಅಭ್ಯಾಸಗಳನ್ನು ಪಾಲಿಸಿ.


ನಿಮಗಾಗಿ ಸಮಯ

ನಿಮಗಾಗಿ ಸ್ವಲ್ಪ ಸಮಯವೂ ಸಹ ಪ್ರತಿದಿನ ದೊಡ್ಡ ವ್ಯತ್ಯಾಸವನ್ನು ಮಾಡಬಹುದು. ಪುಸ್ತಕವನ್ನು ಓದಿ, ವಿಶ್ರಾಂತಿ, ಸ್ನಾನ ಮಾಡಿ ಅಥವಾ ಸ್ನೇಹಿತರೊಂದಿಗೆ ಕಾಫಿಯನ್ನು ಆನಂದಿಸಿ. ಇದು ನಿಮ್ಮ ಕುಟುಂಬಕ್ಕೆ ನಿಮ್ಮ ತಾಳ್ಮೆ ಮತ್ತು ಶಕ್ತಿಯ ಇಂಧನವಾಗಿರುತ್ತದೆ. ಒತ್ತಡದ ಕರ್ತವ್ಯಗಳಿಂದ ಸ್ವಲ್ಪ ಸಮಯ ದೂರವಿರುವುದು ಮನಸ್ಸಿಗೆ ಒಳ್ಳೆಯದು.

ಉತ್ಸಾಹ ಕಂಡುಕೊಳ್ಳಿ

ಮಾತೃತ್ವವು ನಿಮ್ಮ ಉತ್ಸಾಹವನ್ನು ನಂದಿಸಲು ಬಿಡಬೇಡಿ. ಹವ್ಯಾಸವನ್ನು ಅನುಸರಿಸಿ, ಹೊಸ ಕೌಶಲವನ್ನು ಕಲಿಯಿರಿ ಅಥವಾ ನೀವು ಕಾಳಜಿ ವಹಿಸುವ ಕಾರಣಕ್ಕಾಗಿ ಸ್ವಯಂ ಸೇವಕರಾಗಿರಿ. ಮಾತೃತ್ವದ ಹೊರಗೆ ಹೊಂದಿರುವ ಅನನ್ಯ ಆಸಕ್ತಿಗಳನ್ನು, ಅವಕಾಶಗಳನ್ನು ಹುಡುಕಿ. ಇದು ನಿಮ್ಮನ್ನು ನಿರಂತರ ಸಂತೋಷವಾಗಿರುವಂತೆ ಮಾಡುತ್ತದೆ.

ಸರಳ ವಿಷಯಗಳಿಗೆ ಕೃತಜ್ಞತೆ ಸಲ್ಲಿಸಿ

ಮಗುವಿನ ನಗು, ಬೆಚ್ಚಗಿನ ಅಪ್ಪುಗೆ ಮತ್ತು ರುಚಿಕರವಾದ ಊಟದಂತಹ ಚಿಕ್ಕ ವಿಷಯಗಳನ್ನು ಪ್ರಶಂಸಿಸಲು ಪ್ರತಿದಿನ ಸ್ವಲ್ಪ ಸಮಯ ತೆಗೆದುಕೊಳ್ಳಿ. ಕೃತಜ್ಞತೆಯು ಸಕಾರಾತ್ಮಕ ದೃಷ್ಟಿಕೋನವನ್ನು ಬೆಳೆಸುತ್ತದೆ ಮತ್ತು ಮಾತೃತ್ವದ ಸಂತೋಷವನ್ನು ಆನಂದಿಸಲು ನಿಮಗೆ ಸಹಾಯ ಮಾಡುತ್ತದೆ. ಜೀವನವು ತರುವ ಪ್ರೀತಿಯನ್ನು ಪ್ರಶಂಸಿಸಲು ಈ ವಿಷಯಗಳು ನಿಮಗೆ ಸಹಾಯ ಮಾಡುತ್ತವೆ!

ನಿದ್ರೆಗೆ ಆದ್ಯತೆ ನೀಡಿ

ನಿದ್ರಾಹೀನತೆಯು ಸಂತೋಷದ ಕೊಲೆಗಾರ. ಸ್ಥಿರವಾದ ನಿದ್ರೆಯ ವೇಳಾಪಟ್ಟಿಯನ್ನು ಗುರಿಯಾಗಿರಿಸಿಕೊಳ್ಳಿ, ಕೆಲವೊಮ್ಮೆ ಮಕ್ಕಳಿಗಿಂತ ಮುಂಚೆಯೇ ಮಲಗುವುದು ಎಂದರ್ಥ. ಉತ್ತಮ ನಿದ್ದೆ ಮಾಡುವುದರಿಂದ ತಾಯಂದಿರಿಗೆ ಬಹು ಮುಖ್ಯವಾಗಿರುತ್ತದೆ. ಇದರಿಂದ ಎಲ್ಲರನ್ನು ಉತ್ತಮವಾಗಿ ನೋಡಿಕೊಳ್ಳಲು ಹೆಚ್ಚು ತಾಳ್ಮೆಯನ್ನು ನಿಮ್ಮಲ್ಲಿ ಬೆಳೆಸುತ್ತದೆ.

ಸಂಬಂಧಗಳನ್ನು ಪೋಷಿಸಿ

ಸ್ನೇಹಿತರು ಮತ್ತು ಕುಟುಂಬದೊಂದಿಗೆ ಬಲವಾದ ಸಂಪರ್ಕಗಳು ಭಾವನಾತ್ಮಕ ಬೆಂಬಲ ಮತ್ತು ಸೇರಿದ ಭಾವನೆಯನ್ನು ನೀಡುತ್ತದೆ. ಮಗುವನ್ನು ನೋಡಿಕೊಳ್ಳಲು ಅಮ್ಮಂದಿರು ತಮ್ಮ ಸ್ನೇಹವನ್ನು ಕಳೆದುಕೊಳ್ಳುವುದು ತುಂಬಾ ಸುಲಭ. ಪ್ರೀತಿಪಾತ್ರರ ಜೊತೆಗೆ ಸಂಪರ್ಕದಲ್ಲಿರಲು ನಿಯಮಿತ ಪ್ರವಾಸಗಳು, ಫೋನ್ ಕರೆಗಳು ಅಥವಾ ವಿಡಿಯೋ ಚಾಟ್‌ಗಳನ್ನು ಮಾಡಿ.

ಅಪೂರ್ಣತೆಗಳನ್ನು ಸ್ವೀಕರಿಸಿ

ಚಿತ್ರ ಪರಿಪೂರ್ಣ ಜೀವನಕ್ಕಾಗಿ ಶ್ರಮಿಸಬೇಡಿ. ಗೊಂದಲಮಯ ಕ್ಷಣಗಳು, ಕೋಪೋದ್ರೇಕಗಳು ಜೀವನದಲ್ಲಿ ಇದ್ದೇ ಇರುತ್ತದೆ. ಒಳ್ಳೆಯ ತಾಯಿಯಾಗಿರುವುದು ಪರಿಪೂರ್ಣವಾಗಿರುವುದು ಎಂದರ್ಥವಲ್ಲ ಎಂಬುದನ್ನು ಒಪ್ಪಿಕೊಳ್ಳಿ. ಗೊಂದಲದಲ್ಲಿ ನಗುವುದನ್ನು ಕಲಿಯಿರಿ ಮತ್ತು ಪ್ರಯಾಣವನ್ನು ಆನಂದಿಸಿ.

ವ್ಯಾಯಾಮ

ವ್ಯಾಯಾಮವು ಎಂಡಾರ್ಫಿನ್‌ಗಳನ್ನು ಬಿಡುಗಡೆ ಮಾಡುತ್ತದೆ ಮತ್ತು ನೈಸರ್ಗಿಕ ಮೂಡ್ ಬೂಸ್ಟರ್‌ಗಳನ್ನು ನೀಡುತ್ತದೆ. ಚುರುಕಾದ ನಡಿಗೆ, ನೃತ್ಯ ತರಗತಿ ಅಥವಾ ಯೋಗ ಸೆಶನ್ ದೈಹಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರಿಂದ ಮಾನಸಿಕ ಯೋಗಕ್ಷೇಮವೂ ಸುಧಾರಿಸುತ್ತದೆ.

ಸಹಾನುಭೂತಿ

ನಿಮ್ಮ ಮೇಲೆ ನಿನಗೆ ಅನುಕಂಪವಿರಲಿ. ನಿಮ್ಮ ತಪ್ಪುಗಳಿಗಾಗಿ ನಿಮ್ಮನ್ನು ಕ್ಷಮಿಸಿ. ನಿಮ್ಮ ಸಾಧನೆಗಳನ್ನು ಸಂಭ್ರಮಿಸಿ. ನಿಮ್ಮ ಸವಾಲುಗಳನ್ನು ಒಪ್ಪಿಕೊಳ್ಳಿ. ಅತಿಯಾಗಿ ಸ್ವಯಂ-ವಿಮರ್ಶಾತ್ಮಕವಾಗಿರುವುದು ನಿಮ್ಮನ್ನು ಪ್ರೇರೇಪಿಸದಂತೆ ಮತ್ತು ಕೆಟ್ಟದಾಗಿ, ಅಸಂತೋಷಿತರನ್ನಾಗಿ ಮಾಡಬಹುದು. ಯಾವುದೇ ಕೆಲಸವಿರಲಿ ನಿಮ್ಮ ಕೈಲಾದಷ್ಟು ಮಾಡಿದರೆ ಸಾಕು. ಅಗತ್ಯವಿದ್ದಾಗ ಬೇರೆಯವರ ಸಹಾಯ ಪಡೆಯಲು ಹಿಂಜರಿಯಬೇಡಿ.


ಇದನ್ನೂ ಓದಿ: 12 Tips for Better Life: ನಿಮ್ಮ ಬದುಕು ಬದಲಾಗಬೇಕೇ?; ಈ 12 ಸೂತ್ರಗಳನ್ನು ಶಿಸ್ತಾಗಿ ಪಾಲಿಸಿ!

ಗಡಿ ಗುರುತಿಸಿ

ಬೇಡ ಎಂದರೂ ಪರವಾಗಿಲ್ಲ ಎಲ್ಲವನ್ನೂ ತೆಗೆದುಕೊಳ್ಳುವ ಜವಾಬ್ದಾರಿ ಹೊತ್ತುಕೊಳ್ಳಬೇಡಿ. ಗಡಿಗಳನ್ನು ಹೊಂದಿಸುವುದು ನಿಮ್ಮ ಸಮಯ ಮತ್ತು ಶಕ್ತಿಯನ್ನು ರಕ್ಷಿಸುತ್ತದೆ. ನೀವು ನಿಮ್ಮ ಮಕ್ಕಳೊಂದಿಗೆ ಇರುವಾಗ ನೀವು ಸಂಪೂರ್ಣವಾಗಿ ಇರಲು ಅನುವು ಮಾಡಿಕೊಡುತ್ತದೆ.

ಅಗತ್ಯವಿದ್ದರೆ ಬೆಂಬಲವನ್ನು ಪಡೆಯಿರಿ

ಅಗತ್ಯವಿರುವಾಗ ಸಹಾಯವನ್ನು ಕೇಳಲು ಹಿಂಜರಿಯದಿರಿ. ನಿಮ್ಮ ಸಂಗಾತಿ, ಕುಟುಂಬ, ಸ್ನೇಹಿತರು ಅಥವಾ ಚಿಕಿತ್ಸಕರೊಂದಿಗೆ ಮಾತನಾಡಿ. ಬೆಂಬಲ ವ್ಯವಸ್ಥೆಯನ್ನು ಹೊಂದಿರುವುದು ಮಾತೃತ್ವದ ಸವಾಲುಗಳನ್ನು ಎದುರಿಸಲು ಸಹಾಯ ಮಾಡುತ್ತದೆ ಮತ್ತು ಸಮುದಾಯದ ಪ್ರಜ್ಞೆಯನ್ನು ಬೆಳೆಸುತ್ತದೆ.

Continue Reading

ಪ್ರಮುಖ ಸುದ್ದಿ

Menstrual Leave: ಋತುಸ್ರಾವದ ರಜೆ ಬಗ್ಗೆ ಮಾದರಿ ನೀತಿ ರೂಪಿಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್​​​ ನಿರ್ದೇಶನ

Menstrual Leave: ವೇತನ ಸಹಿ ಋತುಸ್ರಾವದ ರಜೆ ನೀಡಲು ನಿರ್ದೇಶಿಸುವಂತೆ ಕೋರ್ಟ್​ಗೆ ಮನವಿ ಸಲ್ಲಿಸಿದ ಅರ್ಜಿದಾರರು ಮತ್ತು ವಕೀಲ ಶೈಲೇಂದ್ರ ತ್ರಿಪಾಠಿ ಅವರ ಪರವಾಗಿ ಹಾಜರಾದ ವಕೀಲ ರಾಕೇಶ್ ಖನ್ನಾ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಸಂಪರ್ಕಿಸಲು ನ್ಯಾಯಪೀಠ ಸಲಹೆ ನೀಡಿತು.

VISTARANEWS.COM


on

Koo

ನವದೆಹಲಿ: ರಾಜ್ಯ ಸರ್ಕಾರ ಮತ್ತು ಇತರ ಪಾಲುದಾರರ ಜತೆ ಮಾಲೋಚನೆ ನಡೆಸಿ ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ (Menstrual Leave) ಕುರಿತು ಮಾದರಿ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಈ ನಿರ್ದೇಶನ ಕೊಟ್ಟಿದೆ. ಇದು ಸರ್ಕಾರದ ನೀತಿಗೆ ಸಂಬಂಧಿಸಿದ್ದು ಹಾಗೂ ನ್ಯಾಯಾಲಯಗಳು ಪರಿಶೀಲಿಸಬೇಕಾದ ವಿಷಯವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ವೇತನ ಸಹಿ ಋತುಸ್ರಾವದ ರಜೆ ನೀಡಲು ನಿರ್ದೇಶಿಸುವಂತೆ ಕೋರ್ಟ್​ಗೆ ಮನವಿ ಸಲ್ಲಿಸಿದ ಅರ್ಜಿದಾರರು ಮತ್ತು ವಕೀಲ ಶೈಲೇಂದ್ರ ತ್ರಿಪಾಠಿ ಅವರ ಪರವಾಗಿ ಹಾಜರಾದ ವಕೀಲ ರಾಕೇಶ್ ಖನ್ನಾ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಸಂಪರ್ಕಿಸಲು ನ್ಯಾಯಪೀಠ ಸಲಹೆ ನೀಡಿತು.

ಇದನ್ನೂ ಓದಿ: Rain Affected areas: ಮಳೆ ಸಂತ್ರಸ್ತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿಗಳಿಗೆ ಸಿಎಂ ಸೂಚನೆ

ನೀತಿ ನಿರೂಪಣೆ ಮಟ್ಟದಲ್ಲಿ ಈ ವಿಷಯವನ್ನು ಪರಿಶೀಲಿಸಬೇಕಾಗಿದೆ. ಸಂಬಂಧಪಟ್ಟ ಎಲ್ಲರ ಜತೆ ಸಮಾಲೋಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಮಾದರಿ ನೀತಿಯನ್ನು ರೂಪಿಸಬಹುದೇ ಎಂದು ಪರಿಶೀಲಿಸಲು ಕೇಂದ್ರ ಸರ್ಕಾರದ ಕಾರ್ಯದರ್ಶಿಯನ್ನು ವಿನಂತಿಸುತ್ತೇವೆ ಎಂದು ಕೋರ್ಟ್​ ಹೇಳಿದೆ. ಇದೇ ವೇಳೆ ಕೋರ್ಟ್​​ ಈ ನಿಟ್ಟಿನಲ್ಲಿ ರಾಜ್ಯಗಳು ಯಾವುದೇ ಕ್ರಮಗಳನ್ನು ತೆಗೆದುಕೊಂಡರೆ ಕೇಂದ್ರದ ಸಮಾಲೋಚನಾ ಪ್ರಕ್ರಿಯೆಯು ಅಡ್ಡಿಯಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈಗಾಗಲೇ ಮುಟ್ಟಿನ ರಜೆ ನೀಡುವ ಕಂಪನಿಗಳ ಪಟ್ಟಿ ಇಲ್ಲಿದೆ

ಭಾರತದಲ್ಲಿ ಹಲವಾರು ಕಂಪನಿಗಳು ತಮ್ಮ ಮಹಿಳಾ ಉದ್ಯೋಗಿಗಳನ್ನು ಬೆಂಬಲಿಸಲು ಮುಟ್ಟಿನ ರಜೆ ನೀತಿಗಳನ್ನು ಜಾರಿಗೆ ತಂದಿವೆ. ಕೆಲವು ಜನಪ್ರಿಯ ಕಂಪನಿಗಳ ಹೆಸರನ್ನು ಇಲ್ಲಿ ನೀಡಲಾಗಿದೆ.

ಜೊಮ್ಯಾಟೊ: ಋತುಚಕ್ರದ ಸಮಸ್ಯೆಯನ್ನು ಕಡಿಮೆ ಮಹಿಳಾ ಮತ್ತು ತೃತೀಯ ಲಿಂಗಿ ಉದ್ಯೋಗಿಗಳಿಗೆ ವಾರ್ಷಿಕವಾಗಿ 10 ದಿನಗಳವರೆಗೆ ವೇತನ ಸಹಿತ ಅವಧಿಯ ರಜೆಯನ್ನು ನೀಡುತ್ತದೆ.

ಬೈಜೂಸ್: ಮಹಿಳಾ ಉದ್ಯೋಗಿಗಳನ್ನು ಬೆಂಬಲಿಸಲು ಮುಟ್ಟಿನ ರಜೆಯನ್ನು ಒದಗಿಸುತ್ತದೆ.

ಸ್ವಿಗ್ಗಿ: ಉತ್ತಮ ಕೆಲಸದ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಇತ್ತೀಚೆಗೆ ಇದೇ ರೀತಿಯ ನೀತಿಯನ್ನು ಪರಿಚಯಿಸಿತ್ತು.

ಮ್ಯಾ್ಗ್​ಸ್ಟರ್​:ಈ ಡಿಜಿಟಲ್ ನಿಯತಕಾಲಿಕ ವೇದಿಕೆ ವೇತನ ಸಹಿತ ರಜೆ ನೀಡುತ್ತದೆ.

ಓರಿಯಂಟ್ ಎಲೆಕ್ಟ್ರಿಕ್: ಈ ಕಂಪನಿಯೂ ಇತ್ತೀಚೆಗೆ ಸಂಬಳ ಸಮೇತ ಮುಟ್ಟಿನ ರಜೆ ಕೊಟ್ಟಿದೆ.

ಕಲ್ಚರ್ ಮೆಷಿನ್: ಮಹಿಳಾ ಉದ್ಯೋಗಿಗಳಿಗೆ ತಮ್ಮ ಋತುಚಕ್ರದ ಮೊದಲ ದಿನದಂದು ಒಂದು ದಿನ ರಜೆ ತೆಗೆದುಕೊಳ್ಳಲು ಅನುವು ಮಾಡಿದೆ.

ಗೋಜೂಪ್ ಆನ್ಲೈನ್ ಪ್ರೈವೇಟ್ ಲಿಮಿಟೆಡ್: ಮುಟ್ಟಿನ ಮೊದಲ ದಿನದಂದು ವೇತನ ಸಹಿತ ರಜೆ ಮತ್ತು ಮನೆಯಿಂದ ಕೆಲಸ ಮಾಡುವ ಆಯ್ಕೆ ಡಿಜಿಟಲ್ ಮಾಧ್ಯಮ ಕಂಪನಿ ನೀಡಿದೆ.

ಐವಿಪನನ್: ವರ್ಷಕ್ಕೆ 12 ದಿನಗಳ ಅವಧಿಯ ಮುಟ್ಟಿನ ರಜೆಯನ್ನು ಒದಗಿಸುವ ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಇದಾಗಿದೆ.

ಇಂಡಸ್ಟ್ರಿಎಆರ್ ಸಿ: ಮಹಿಳೆಯರಿಗೆ ಒಂದು ಅಥವಾ ಎರಡು ದಿನ ರಜೆ ತೆಗೆದುಕೊಳ್ಳಲು ಅನುಮತಿ ನೀಡುತ್ತದೆ. ಆದರೆ ನಂತರ ರಜೆಯನ್ನು ಸರಿದೂಗಿಸಬೇಕು.

Continue Reading

ಅಂಕಣ

ರಾಜಮಾರ್ಗ ಅಂಕಣ: ಮುಖವೇ ಇಲ್ಲದ ಆಕೆಗೆ ತನ್ನ ಹೆಸರೇ ಮರೆತು ಹೋಗಿತ್ತು!

ರಾಜಮಾರ್ಗ ಅಂಕಣ: ಮದುವೆಯ ನಂತರ ಆಕೆಗೆ ಇನ್ನೂ ಕೆಲವು ಐಡೆಂಟಿಟಿಗಳು ಸೇರಿದವು. ಇಂತವನ ಹೆಂಡತಿ, ಇಂತವನ ಅತ್ತಿಗೆ, ಇಂತವರ ಸೊಸೆ, ಇಂತವರ ತಾಯಿ, ಇಂತವರ ನಾದಿನಿ……. ಹೀಗೆ! ಅಲ್ಲಿಯೂ ಯಾರೂ ಆಕೆಯ ಹೆಸರು ಹಿಡಿದು ಕರೆಯಲಿಲ್ಲ. ಸಂಪ್ರದಾಯಸ್ಥರ ಮನೆ ಎಂಬ ನೆಪದಲ್ಲಿ ತಿಂಗಳ ಮೂರು ದಿನ ಹೊರಗೆ ಕುಳಿತುಕೊಳ್ಳುವುದು ತಪ್ಪಲಿಲ್ಲ.

VISTARANEWS.COM


on

ರಾಜಮಾರ್ಗ ಅಂಕಣ she 1
Koo

ಈಗಲೂ ಆಕೆಗೆ ಕಾಡುವ ಪ್ರಶ್ನೆ – ನಾನು ಯಾರು?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮನೆಯೊಳಗೆ ಆಕೆಯನ್ನು (she) ಎಲ್ಲರೂ ಅತ್ತಿಗೆ, ಮಾಮಿ, ಅಕ್ಕ ಎಂದೆಲ್ಲ ಕರೆಯುತ್ತಾರೆ. ಆಕೆಯ ಮಕ್ಕಳು (children) ಅಮ್ಮ (mother) ಎಂದು ಕರೆಯುತ್ತಾರೆ. ಮೊಮ್ಮಕ್ಕಳು ಅವರನ್ನು ಅಜ್ಜಿ ಎನ್ನುತ್ತಾರೆ. ಮೊಮ್ಮಕ್ಕಳ ಗೆಳೆಯರು ಮನೆಗೆ ಬಂದರೆ ಅವರೂ ಅಜ್ಜಿ ಎನ್ನುತ್ತಾರೆ. ಹೊರಗಿನವರು ಯಾರು ಬಂದರೂ ಆಕೆಯನ್ನು ಆಂಟಿ (Aunty) ಎಂದೇ ಕರೆಯುತ್ತಾರೆ. ಕೈ ಹಿಡಿದ ಗಂಡ (Husband) ಆಕೆಯನ್ನು ‘ಓ ಇವಳೇ’ ಎಂದು ಕರೆಯುತ್ತಾನೆ. ಮನೆಯ ಹೊರಗೆ ಬಂದರೆ ಅಲ್ಲಿ ಕೂಡ ಆಕೆಯು ಇಂತವನ ಹೆಂಡತಿ (wife) ಎಂದೇ ರಿಜಿಸ್ಟರ್ ಆಗಿದ್ದಾಳೆ. ಅವಳಿಗೆ ತನ್ನ ಸ್ವಂತ ಹೆಸರೇ ಮರೆತು ಹೋಗಿದೆ! ಅವಳಿಗೆ ಸ್ವಂತ ಐಡೆಂಟಿಟಿಯು (Identity) ಇಲ್ಲದೆ ಎಷ್ಟೋ ವರ್ಷಗಳೇ ಆಗಿ ಹೋಗಿವೆ.

ಆಕೆಯ ಬಾಲ್ಯವೂ ಹಾಗೇ ಇತ್ತು!

ಆಕೆ ಮೊದಲ ಬಾರಿಗೆ ಕಣ್ಣು ತೆರೆದು ಈ ಜಗತ್ತಿಗೆ ಬಂದಾಗ ಕೇಳಿದ ಮೊದಲ ಉದ್ಗಾರ – ಛೇ! ಈ ಬಾರಿಯೂ ಹೆಣ್ಣು! ಆಗ ಅದು ಅವಳಿಗೆ ಅರ್ಥ ಆಗದ ವಯಸ್ಸು.

ಅವಳನ್ನು ತೊಟ್ಟಿಲಲ್ಲಿ ಮಲಗಿಸಿ ಆಕೆಯ ಕಿವಿಯಲ್ಲಿ ಯಾವುದೋ ಒಂದು ಹೆಸರನ್ನು ಹೆತ್ತವರು ಉಸಿರಿದ್ದರು. ಅದೂ ಅವಳಿಗೆ ನೆನಪಿಲ್ಲ. ಮನೆಯವರು ಅಪ್ಪ, ಅಮ್ಮ ಎಲ್ಲರೂ ಆಕೆಯನ್ನು ಪೂರ್ತಿ ಹೆಸರಿನಿಂದ ಕರೆದದ್ದು ಇಲ್ಲವೇ ಇಲ್ಲ. ಅಮ್ಮಿ, ಅಮ್ಮು, ಪುಟ್ಟಿ, ಚಿನ್ನು…. ಹೀಗೆ ತರಹೇವಾರಿ ಹೆಸರುಗಳು. ಮನೆಯಲ್ಲಿ ತುಂಬಾ ಹೆಣ್ಣು ಮಕ್ಕಳಿದ್ದ ಕಾರಣ ಆಕೆಗೇ ಕೆಲವು ಬಾರಿ ಗೊಂದಲ ಆದದ್ದು ಇದೆ.

ಶಾಲೆಯಲ್ಲಿಯೂ ಆಕೆಗೆ ಐಡೆಂಟಿಟಿ ಇರಲಿಲ್ಲ!

ಆಕೆಯನ್ನು ಶಾಲೆಗೆ ಸೇರಿಸುವಾಗ ಯಾವುದೋ ಒಂದು ಹೆಸರು ಇಟ್ಟಿದ್ದರು. ಆದರೆ ಆ ಹೆಸರು ಶಾಲೆಯಲ್ಲಿ ಬಳಕೆ ಆದದ್ದು ಕಡಿಮೆ. ಹಾಜರಿಯನ್ನು ಕರೆಯುವಾಗ ಟೀಚರ್ ನಂಬರ್ ಕರೆಯುತ್ತಿದ್ದರು. ಪೇಪರ್ ಕೊಡುವಾಗಲೂ ನಂಬರ್. ಅಸೆಂಬ್ಲಿಯಲ್ಲಿಯೂ ನಂಬರ್. ಅಲ್ಲಿ ಕೂಡ ಟೀಚರ್ ಇಂತವರ ಮಗಳು, ಇಂತವರ ತಂಗಿ ಎಂದು ಪರಿಚಯ ಮಾಡುತ್ತಿದ್ದರು. ಸ್ಪರ್ಧೆಗೆ ಹೆಸರು ಕೊಟ್ಟಾಗಲೂ ನಂಬರ್ ಕರೆಯುತ್ತಿದ್ದರು. ಆಕೆಯು ಅವಳ ಅಣ್ಣನಷ್ಟು, ಅಕ್ಕನಷ್ಟು ಪ್ರತಿಭಾವಂತೆ ಆಗಿರಲಿಲ್ಲ. ಮಾರ್ಕ್ಸ್ ಕಡಿಮೆ ಬಂದಾಗ ಶಿಕ್ಷಕರು ‘ ನಿನಗೆ ಅಣ್ಣನಷ್ಟು ಯಾಕೆ ಮಾರ್ಕ್ ಬಂದಿಲ್ಲ? ಅಕ್ಕನ ಹಾಗೆ ಯಾಕೆ ಮಾರ್ಕ್ ಬರೋದಿಲ್ಲ?’ ಎಂದು ಕೇಳಿದಾಗ ಆಕೆಗೆ ಸಿಟ್ಟು ಬರುತ್ತಿತ್ತು.

‘ನಾನು ನಾನೇ ‘ಎಂದು ಕಿರುಚಿ ಹೇಳಬೇಕು ಎಂದು ಹಲವು ಬಾರಿ ಅನ್ನಿಸುತ್ತಿತ್ತು. ಆದರೆ ಆಗುತ್ತಲೇ ಇರಲಿಲ್ಲ. ಆಗಲೇ ಆಕೆಯು ಐಡೆಂಟಿಟಿ ಕಳೆದುಕೊಂಡಾಗಿತ್ತು.

ರಾಜಮಾರ್ಗ ಅಂಕಣ she 1
ರಾಜಮಾರ್ಗ ಅಂಕಣ she 1

ಮುಂದೆ ಹೈಸ್ಕೂಲಿಗೆ ಬಂದಾಗಲೂ ಐಡೆಂಟಿಟಿ ಇರಲಿಲ್ಲ!

ಹೈಸ್ಕೂಲ್ ವಿದ್ಯಾಬ್ಯಾಸಕ್ಕೆ ಆಕೆ ಬಂದಾಗ ಇನ್ನೂ ಕೆಲವು ಕಿರುಕುಳಗಳು ಆರಂಭ ಆದವು. ಮೂರು ದಿನ ಹೊರಗೆ ಕೂರಲೇಬೇಕು ಎಂದು ಅಮ್ಮ ಅಪ್ಪಣೆ ಕೊಡಿಸಿದರು. ಆಗ ಶಾಲೆಗೆ ಬಂದಾಗಲೂ ಆಕೆಯು ಮೈಯನ್ನು ಮುದ್ದೆ ಮಾಡಿ ಕುಳಿತುಕೊಳ್ಳುತ್ತಿದ್ದಳು. ಆಗೆಲ್ಲ ಕೀಳರಿಮೆ ಹೆಚ್ಚಾಯಿತು. ಭಯ ಹೆಚ್ಚಾಯಿತು. ಮಾರ್ಕ್ ಮತ್ತೂ ಕಡಿಮೆ ಆಯಿತು.

ಒಮ್ಮೆ ಒಬ್ಬ ಓರಗೆಯ ಹುಡುಗ ಟಿಫಿನ್ ಬಾಕ್ಸನಲ್ಲಿ ಒಂದು ಲವ್ ಲೆಟರ್ ಇಟ್ಟು ನನ್ನನ್ನು ಪ್ರೀತಿ ಮಾಡುತ್ತಿಯಾ? ಎಂದು ಬರೆದಿದ್ದ. ಆಗ ಇನ್ನೂ ಭಯವು ಹೆಚ್ಚಾಯಿತು. ಮದುವೆ ಆಗ್ತೀಯಾ ಎಂದು ಕೇಳಿದಾಗ ಅವನು ʼಅದೆಲ್ಲ ಬೇಡ, ಪ್ರೀತಿ ಮಾತ್ರ ಮಾಡೋಣ’ ಅಂದನು. ಆಕೆಗೆ ಅದೆಲ್ಲ ಅರ್ಥವೇ ಆಗಲಿಲ್ಲ. ಮನೆಗೆ ಬಂದಾಗ ಅಮ್ಮ ಪ್ರತೀ ದಿನ ಆಕೆಯ ಶಾಲೆಯ ಬ್ಯಾಗ್ ಚೆಕ್ ಮಾಡುತ್ತಾ ಇದ್ದರು. ಜೋರಾಗಿ ಪ್ರತಿಭಟಿಸಬೇಕು ಅನ್ನಿಸಿದರೂ ಆಕೆಗೆ ಧ್ವನಿಯೇ ಬರಲಿಲ್ಲ.

ಎಲ್ಲರೂ ಡಾಮಿನೇಟ್ ಮಾಡುವವರು!

ಆಕೆಯ ತಿಂಗಳ ಆ ಡೇಟ್ ಆಕೆಗೆ ಮರೆತು ಹೋದರೂ ಅಮ್ಮನಿಗೆ ನೆನಪು ಇರುತ್ತಿತ್ತು. ಆಕೆಯ ತಂಗಿ, ತಮ್ಮ ಕೂಡ ಆಕೆಯ ಮೇಲೆ ಡಾಮಿನೇಟ್ ಮಾಡ್ತಾ ಇದ್ದರು. ಆಕೆಗೆ ಸ್ವಾಭಿಮಾನ ಎಂಬ ಶಬ್ದದ ಅರ್ಥವೇ ಮರೆತುಹೋಗಿತ್ತು.

ಕಡಿಮೆ ಮಾರ್ಕ್ ಬಂದ ಕಾರಣ ಆಕೆಯು ಕಾಲೇಜಿನ ಮೆಟ್ಟಲು ಹತ್ತಲಿಲ್ಲ. ‘ಗಂಡನ ಮನೆಗೆ ಹೋದ ನಂತರ ಅಡುಗೆ ಮಾಡಬೇಕಲ್ಲ’ ಎಂದು ಆಕೆಯ ಅಮ್ಮ ಅದನ್ನೇ ಚಂದ ಮಾಡಿ ಕಲಿಸಿದರು. ಮನೆಯ ನಾಲ್ಕು ಕೋಣೆಗಳ ನಡುವೆ ಆಕೆಯ ಧ್ವನಿ ಮತ್ತು ಐಡೆಂಟಿಟಿಗಳು ನಿರಂತರ ಉಸಿರುಗಟ್ಟುತ್ತಿದ್ದವು.

ಮದುವೆಯ ನಂತರ…

ಮದುವೆಯ ನಂತರ ಆಕೆಗೆ ಇನ್ನೂ ಕೆಲವು ಐಡೆಂಟಿಟಿಗಳು ಸೇರಿದವು. ಇಂತವನ ಹೆಂಡತಿ, ಇಂತವನ ಅತ್ತಿಗೆ, ಇಂತವರ ಸೊಸೆ, ಇಂತವರ ತಾಯಿ, ಇಂತವರ ನಾದಿನಿ……. ಹೀಗೆ! ಅಲ್ಲಿಯೂ ಯಾರೂ ಆಕೆಯ ಹೆಸರು ಹಿಡಿದು ಕರೆಯಲಿಲ್ಲ. ಸಂಪ್ರದಾಯಸ್ಥರ ಮನೆ ಎಂಬ ನೆಪದಲ್ಲಿ ತಿಂಗಳ ಮೂರು ದಿನ ಹೊರಗೆ ಕುಳಿತುಕೊಳ್ಳುವುದು ತಪ್ಪಲಿಲ್ಲ.

ಚಂದ ಅಡುಗೆ ಮಾಡ್ತೀ ಎಂಬ ಪ್ರಶಸ್ತಿ ಕೊಟ್ಟು ಆಕೆಯನ್ನು ಅಡುಗೆ ಮನೆಯ ಮಹಾರಾಣಿಯನ್ನಾಗಿ ಮಾಡಿಬಿಟ್ಟರು. ‘ಅನ್ನಪೂರ್ಣೆ ‘ ಎಂಬ ಬಿರುದು ಆಕೆಗೆ ಮುಳ್ಳಿನ ಕಿರೀಟ ಆಗಿ ಬಿಟ್ಟಿತು. ಇಡೀ ದಿನ ಊಟ, ತಿಂಡಿ, ಪಾತ್ರೆ, ಬಟ್ಟೆ, ಸ್ವಚ್ಛತೆ, ಒಂದಿಷ್ಟು ನೆಂಟರು, ಹಬ್ಬಗಳು, ಮದುವೆ, ಮುಂಜಿ, ಗೃಹ ಪ್ರವೇಶ, ಸೀಮಂತ ಇಷ್ಟರಲ್ಲಿ ಆಕೆಯ ದಿನಚರಿಯು ಮುಗಿದು ಹೋಗುತ್ತಿತ್ತು. ಒಂದೆರಡು ಧಾರಾವಾಹಿಗಳು ಸ್ವಲ್ಪ ರಿಲೀಫ್ ಕೊಡುತ್ತಿದ್ದವು. ಆಗೆಲ್ಲ ನನ್ನ ಬದುಕು ಆ ಧಾರಾವಾಹಿಗಳ ಕಥೆಯ ಹಾಗೆ ಇಲ್ಲವಲ್ಲ ಎಂಬ ದುಃಖವೂ ಆಕೆಯನ್ನು ಕಾಡುತ್ತಿತ್ತು.

ರಾಜಮಾರ್ಗ ಅಂಕಣ she 1
ರಾಜಮಾರ್ಗ ಅಂಕಣ she 1

ಈಗಲೂ ಆಕೆಗೆ ಐಡೆಂಟಿಟಿ ಇಲ್ಲ!

ಮೊಮ್ಮಕ್ಕಳು ಅಜ್ಜಿ ಅಂತ ಕರೆದು ತಿಂಡಿಗಾಗಿ ಓಡಿ ಬರುತ್ತಾರೆ. ಈ ಪಾಠ ಹೇಳಿಕೊಡು, ಈ ಪಾಠ ಹೇಳಿಕೊಡು ಎಂದು ದುಂಬಾಲು ಬೀಳುತ್ತಾರೆ. ಆಗ ಆಕೆಗೆ ಅರ್ಥ ಆಗದೆ ಹೋದಾಗ ‘ ಏನಜ್ಜಿ? ನಿನಗೆ ಏನೂ ಗೊತ್ತಿಲ್ಲ. ಹೋಗಜ್ಜಿ’ ಎಂದು ಅಣಕಿಸಿದಾಗ ನೋವಾಗುತ್ತದೆ. ನೆರೆಹೊರೆಯವರ ಜೊತೆಗೆ ಮಾತಿಗೆ ನಿಂತರೆ ಸಿನೆಮಾ, ಗಾಸಿಪ್, ಫ್ಯಾಷನ್ ಎಂದೆಲ್ಲ ಮಾತಾಡುತ್ತಾರೆ. ಆಗೆಲ್ಲ ಆಕೆಯ ಅಜ್ಞಾನವು ಆಕೆಯನ್ನು ಅಣಕಿಸುತ್ತದೆ. ಆಕೆ ಈಗ ಮನೆಯಿಂದ ಹೊರಗೆ ಹೋಗೋದನ್ನು ಬಿಟ್ಟಿದ್ದಾರೆ. ತವರು ಮನೆಗೆ ಹೋಗದೆ ಎಷ್ಟೋ ವರ್ಷಗಳು ಕಳೆದಿವೆ.

ಆಕೆಯ ಗಂಡ ವಿ ಆರ್ ಎಸ್ ತೆಗೆದುಕೊಂಡು ಈಗ ಮನೆಯಲ್ಲಿಯೇ ಇದ್ದಾರೆ. ಪ್ರತೀ ಅರ್ಧ ಘಂಟೆಗೆ ಒಮ್ಮೆ ‘ ಓ ಇವಳೇ, ಒಂದು ಲೋಟ ಟೀ ಮಾಡಿ ಕೊಡು’ ಎಂದು ಕರೆಯುತ್ತಲೆ ಇರುತ್ತಾರೆ. ಮಗ, ಸೊಸೆ ಸಂಜೆ ಆಫೀಸ್ ಮುಗಿಸಿ ಬಂದು ಲ್ಯಾಪ್ ಟಾಪ್ ಕುಟ್ಟುತ್ತಾ ಕೂರುತ್ತಾರೆ. ಸೊಸೆ ಒಮ್ಮೆ ಕೂಡ ತಿಂಗಳಲ್ಲಿ ಮೂರು ದಿನ ಹೊರಗೆ ಕೂತದ್ದು ಅವಳು ನೋಡಲೇ ಇಲ್ಲ! ಆಗೆಲ್ಲ ನಾನೆಷ್ಟು ಕಳೆದುಕೊಂಡೆ ಎಂಬ ದುಃಖ ಆಕೆಯನ್ನು ಆವರಿಸುತ್ತದೆ. ಮೊಮ್ಮಕ್ಕಳು ಹೊಮ್ ವರ್ಕ್, ಪ್ರಾಜೆಕ್ಟ್, ವಿಡಿಯೋ ಗೇಮ್ ಎಂದು ಮುಳುಗಿರುತ್ತಾರೆ.

ಆಕೆ ʼಇವತ್ತಿನ ಊಟ, ತಿಂಡಿಯ ಮೆನು ಮುಗಿಯಿತು, ನಾಳೆ ಎಂತ ಅಡಿಗೆ ಮಾಡುವುದು?’ ಎಂದು ಲೆಕ್ಕ ಹಾಕುತ್ತ ತಡರಾತ್ರಿ ಹಾಸಿಗೆಗೆ ಒರಗುತ್ತಾರೆ.

ಆಗಲೂ ಆಕೆಗೆ ಕಾಡುವ ಪ್ರಶ್ನೆ – ನಾನು ಯಾರು?

ಇದನ್ನೂ ಓದಿ: ರಾಜಮಾರ್ಗ ಅಂಕಣ : ನನ್ನ ಬದುಕೇ ಬೇರೆ, ನನ್ನ ಸಿನಿಮಾನೇ ಬೇರೆ ಅಂದರೆ ಹೀಗೇ ಆಗೋದು!

Continue Reading
Advertisement
Vaccin for Hiv
ಆರೋಗ್ಯ30 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ39 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ54 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ56 mins ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ57 mins ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ2 hours ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

ದೇಶ2 hours ago

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌