Kannada New Movie: ಸಿಂಪಲ್ ಸುನಿ-ವಿನಯ್ ರಾಜ್‌ಕುಮಾರ್‌ ಕಾಂಬಿನೇಶನ್‌ ಚಿತ್ರಕ್ಕೆ ಧಾರವಾಡದ ಸ್ವತಿಷ್ಠ ಕೃಷ್ಣನ್ ನಾಯಕಿ - Vistara News

ಸಿನಿಮಾ

Kannada New Movie: ಸಿಂಪಲ್ ಸುನಿ-ವಿನಯ್ ರಾಜ್‌ಕುಮಾರ್‌ ಕಾಂಬಿನೇಶನ್‌ ಚಿತ್ರಕ್ಕೆ ಧಾರವಾಡದ ಸ್ವತಿಷ್ಠ ಕೃಷ್ಣನ್ ನಾಯಕಿ

ವಿನಯ್ ರಾಜ್ ಕುಮಾರ್ (vinay rajkumar), ಸಿಂಪಲ್ ಸುನಿ (simple suni) ಕಾಂಬಿನೇಶನ್‌ನಲ್ಲಿ ‘ಒಂದು ಸರಳ ಪ್ರೇಮಕಥೆ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಧಾರವಾಡ ಮೂಲದ ಕನ್ನಡತಿ ನಟಿ ಸ್ವತಿಷ್ಠ ಕೃಷ್ಣನ್ ಅವರನ್ನು ಕನ್ನಡ ಚಿತ್ರರಂಗಕ್ಕೆ (Kannada New Movie ) ಕರೆ ತಂದಿದ್ದಾರೆ ಸಿಂಪಲ್ ಸುನಿ

VISTARANEWS.COM


on

Dharwad's Swatishtha Krishnan is the female lead for Simple Suni-Vinay Rajkumar combination.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನಿರ್ದೇಶಕ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ನೂತನ ಚಿತ್ರಕ್ಕೆ (Kannada New Movie) ನಾಯಕಿ ಆಯ್ಕೆ ಆಗಿದ್ದಾರೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು ಸರಳ ಪ್ರೇಮಕಥೆ’ ಚಿತ್ರದ ಮೂಲಕ ‘ವಿಕ್ರಮ್’ ಚಿತ್ರದಲ್ಲಿ ನಟಿಸಿರುವ ಸ್ವತಿಷ್ಠ ಕೃಷ್ಣನ್ (swathishta krishnan) ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.

ವಿನಯ್ ರಾಜ್ ಕುಮಾರ್ (vinay rajkumar), ಸಿಂಪಲ್ ಸುನಿ (simple suni) ಕಾಂಬಿನೇಶನ್‌ನಲ್ಲಿ ‘ಒಂದು ಸರಳ ಪ್ರೇಮಕಥೆ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಧಾರವಾಡ ಮೂಲದ ಕನ್ನಡತಿ ನಟಿ ಸ್ವತಿಷ್ಠ ಕೃಷ್ಣನ್ ಅವರನ್ನು ಕನ್ನಡ ಚಿತ್ರರಂಗಕ್ಕೆ ಕರೆ ತಂದಿದ್ದಾರೆ ಸಿಂಪಲ್ ಸುನಿ . ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಸ್ವತಿಷ್ಠ ಕೃಷ್ಣನ್ ಅವರು ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ವಿನಯ್ ರಾಜ್ ಕುಮಾರ್ ಅವರಿಗೆ ನಾಯಕಿಯಾಗುವ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Ashika Ranganath | ಗತವೈಭವದಲ್ಲಿ ದೇವಕನ್ಯೆಯಾಗಿ ಆಶಿಕಾ: ಜನುಮದಿನದ ಮೊದಲೇ ಭರ್ಜರಿ ಗಿಫ್ಟ್‌ ಕೊಟ್ಟ ಸುನಿ

Kannada New Movie  Dharwad's Swatishtha Krishnan is the female lead for Simple Suni-Vinay Rajkumar combination

ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಸಿಂಪಲ್ ಸುನಿ ʻʻನನಗೆ ಕನ್ನಡದ ಹುಡುಗಿಯೇ ನಾಯಕಿಯಾಗಿ ಬೇಕಿತ್ತು. ನನ್ನ ಎಲ್ಲ ಸಿನಿಮಾಗಳಲ್ಲೂ ಅದು ಮೊದಲ ಆದ್ಯತೆಯಾಗಿರುತ್ತದೆ. ವಿಕ್ರಮ್ ಸಿನಿಮಾದಲ್ಲಿ ಸ್ವತಿಷ್ಠ ಪಾತ್ರ ನೋಡಿ ಇಷ್ಟವಾಗಿತ್ತು. ಸ್ವತಿಷ್ಠ ಮೂಲತಃ ಉತ್ತರ ಕರ್ನಾಟಕದವರು. ನಮ್ಮ ಸಿನಿಮಾ ಪಾತ್ರಕ್ಕೆ ಅವರು ಸೂಕ್ತ ಎನಿಸಿತು. ಅವರು ಕೂಡ ಕಥೆ ಕೇಳಿ ಇಷ್ಟ ಪಟ್ಟು ನಮ್ಮ ಚಿತ್ರತಂಡ ಸೇರಿಕೊಂಡಿದ್ದಾರೆʼʼ ಎಂದು ಹೇಳಿದರು.

ಇದನ್ನೂ ಓದಿ: Kannada New Movie | ಅಪ್ಪು ಹುಟ್ಟಿದ ಹಬ್ಬದಂದೇ ತೆರೆಗೆ ಬರಲಿದೆ ರಿಯಲ್‌ ಸ್ಟಾರ್‌ ನಟನೆಯ ಕಬ್ಜ

ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಸಿನಿಮಾ ತಾರಾಬಳಗ ಎಲ್ಲದರ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಸಭಾ ಛಾಯಾಗ್ರಾಹಣ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ (81) (Actor Dwarakish) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ (ಏಪ್ರಿಲ್‌ 81) ನಿಧನರಾಗಿದ್ದಾರೆ. ಇವರ ನಿಧನಕ್ಕೆ ಗಣ್ಯರು, ಸ್ಯಾಂಡಲ್‌ವುಡ್‌ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

VISTARANEWS.COM


on

Actor Dwarakish
Koo

ಬೆಂಗಳೂರು: ಕರುನಾಡ ಕುಳ್ಳ, ಮನೋಜ್ಞ ನಟನೆಯ ಮೂಲಕ ಮನೆಮಾತಾಗಿದ್ದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ (81) (Actor Dwarakish) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ (ಏಪ್ರಿಲ್‌ 16) ನಿಧನರಾಗಿದ್ದಾರೆ. ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ದ್ವಾರಕೀಶ್‌ ಅವರ ಅಗಲಿಕೆಗೆ ಸ್ಯಾಂಡಲ್‌ವುಡ್‌ ನಟರು ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

1942ರ ಆಗಸ್ಟ್‌ 19ರಂದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಜನಸಿದ ಅವರು ನಟನೆಯ ಮೂಲಕವೇ ಮನೆಮಾತಾಗಿದ್ದರು. ಇವರ ತಂದೆ ಶಾಮರಾವ್‌ ಹಾಗೂ ತಾಯಿ ಜಯಮ್ಮ. ಶಾರದಾ ವಿಲಾಸ್‌ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ ಇವರು ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮಾಡಿದರು. ಆರಂಭದಲ್ಲಿ ಸಹೋದರನ ಜತೆಗೂಡಿ ಭಾರತ್ ಆಟೋ ಸ್ಪೇರ್ ಸ್ಟೋರ್ ಪ್ರಾರಂಭಿಸಿದರು. ಆದರೆ, ಅವರ ಆಸಕ್ತಿ ಸಿನಿಮಾ ಕಡೆಗೆ ಇತ್ತು.

ಡಿಕೆಶಿ ಸಂತಾಪ, ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ

ದ್ವಾರಕೀಶ್‌ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ನಟಿ ಗಿರಿಜಾ ಲೋಕೇಶ್‌ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. “ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಶ್ರೀ ದ್ವಾರಕೀಶ್‌ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1964ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಅವರು, ಹಾಸ್ಯ ಕಲಾವಿದ, ನಾಯಕ ಹಾಗೂ ಪೋಷಕ ನಟನಾಗಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕನ್ನಡ ಚಿತ್ರರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ದ್ವಾರಕೀಶ್‌ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಡಿಕೆಶಿ ಪೋಸ್ಟ್‌ ಮಾಡಿದ್ದಾರೆ. ಇನ್ನು, ದ್ವಾರಕೀಶ್‌ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇರಿಸಲು ತೀರ್ಮಾನಿಸಲಾಗಿದೆ.

ಡಾ.ರಾಜಕುಮಾರ್‌ ಸೇರಿ ಹಲವು ಗಣ್ಯರೊಂದಿಗೆ ನಟಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ ಸಿನಿಮಾ ಜಗತ್ತಿನ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಅವರು 1963ರಲ್ಲಿ ವೀರಸಂಕಲ್ಪ ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು. ಅದರಲ್ಲೂ, 1966ರಲ್ಲಿ ಡಾ.ರಾಜಕುಮಾರ್‌ ಅಭಿನಯದ ಮೇಯರ್‌ ಮುತ್ತಣ್ಣ ಸಿನಿಮಾ ನಿರ್ಮಾಣ ಮಾಡಿದರು. ಅಲ್ಲಿಂದ ಡಾ.ರಾಜಕುಮಾರ್‌ ಅವರ ಜತೆ ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು.

1985ರಲ್ಲಿ ಸಿನಿಮಾ ನಿರ್ದೇಶನಕ್ಕೆ ಕಾಲಿಟ್ಟ ದ್ವಾರಕೀಶ್‌ ಅವರು ಅಲ್ಲೂ ಯಶಸ್ವಿಯಾದರು. ಡಾ.ವಿಷ್ಣುವರ್ಧನ್‌ ಅಭಿನಯದ ನೀ ಬರೆದ ಕಾದಂಬರ್‌ ಸೂಪರ್‌ ಹಿಟ್‌ ಆಯಿತು. ಕಿಟ್ಟು-ಪುಟ್ಟು, ಸಿಂಗಾಪುರದಲ್ಲಿ ರಾಜಕುಳ್ಳ, ಭಾಗ್ಯವಂತರು, ಗುರು ಶಿಷ್ಯರು, ಪೆದ್ದ-ಗೆದ್ದ, ಆಪ್ತಮಿತ್ರ ಸೇರಿದಂತೆ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟ ಹೆಗ್ಗಳಿಕೆ ದ್ವಾರಕೀಶ್‌ ಅವರದ್ದಾಗಿದೆ. ಚೌಕ ಇವರ ಕೊನೆಯ ಸಿನಿಮಾ ಆಗಿದೆ. ʼದ್ವಾರಕೀಶ್‌ ಚಿತ್ರʼ ಇವರ ನಿರ್ಮಾಣ ಸಂಸ್ಥೆಯಾಗಿತ್ತು. ಇವರು ಸುಮಾರು 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು.

ಕುಳ್ಳ ಏಜೆಂಟ್‌ 000, ಕಿಟ್ಟು ಪುಟ್ಟು, ಕಳ್ಳ-ಕುಳ್ಳ, ಕುಳ್ಳ-ಕುಳ್ಳಿ, ಗುರು-ಶಿಷ್ಯರು, ಮಂಕು ತಿಮ್ಮ, ಪ್ರಚಂಡ ಕುಳ್ಳ, ನ್ಯಾಯ ಎಲ್ಲಿದೆ, ಹೊಸ ಕಳ್ಳ, ಹಳೇ ಕುಳ್ಳ, ಆಪ್ತಮಿತ್ರ ಇವರು ನಟಿಸಿದ ಪ್ರಮುಖ ಚಿತ್ರಗಳು. ನಾಯಕ ನಟನಾಗಿ, ಹಾಸ್ಯ ಕಲಾವಿದನಾಗಿ ಅಲ್ಲದೆ ಪೋಷಕ ಪಾತ್ರಗಳ ಮೂಲಕವೂ ಅವರು ಗಮನ ಸೆಳೆದಿದ್ದರು.

19 ಸಿನಿಮಾಗಳ ನಿರ್ದೇಶನ

ಡಾ.ವಿಷ್ಣುವರ್ಧನ್‌ ಹಾಗೂ ದ್ವಾರಕೀಶ್‌ ಜೋಡಿಯು ರಾಜ್ಯಾದ್ಯಂತ ಮೋಡಿ ಮಾಡಿತು. ಈ ಜೋಡಿಯು ಕಳ್ಳ-ಕುಳ್ಳ ಎಂದೇ ಖ್ಯಾತಿಯಾಯಿತು. ನೀ ಬರೆದ ಕಾದಂಬರಿ ಮೂಲಕ ನಿರ್ದೇಶನಕ್ಕೆ ಕಾಲಿಟ್ಟ ದ್ವಾರಕೀಶ್‌ ಅವರು 19 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಾಯರು ಬಂದರು ಮಾವನ ಮನೆಗೆ ಡಾನ್ಸ್‌ ರಾಜ ಡಾನ್ಸ್‌, ಶ್ರುತಿ ಹಾಕಿದ ಹೆಜ್ಜೆ ನಿರ್ದೇಶನ ಮಾಡಿದ ಪ್ರಮುಖ ಚಿತ್ರಗಳಾಗಿವೆ. ಕನ್ನಡದ ಜತೆಗೆ ಹಿಂದಿ, ತಮಿಳು, ತೆಲುಗು ಸಿನಿಮಾಗಳನ್ನೂ ನಿರ್ಮಾಣ ಮಾಡಿದ ಕೀರ್ತಿ ಇವರದ್ದು. ಇವರು 52 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

ಇದನ್ನೂ ಓದಿ: Meera Jasmine: ʻಮೌರ್ಯʼ, ʻಅರಸುʼ ಖ್ಯಾತಿ ನಟಿಯ ತಂದೆ ಇನ್ನಿಲ್ಲ

Continue Reading

ಸಿನಿಮಾ

Movie release: ಹಾರರ್, ಥ್ರಿಲರ್, ಆ್ಯಕ್ಷನ್.. ಒಟಿಟಿಯಲ್ಲಿ ಬರಲಿವೆ ಸೂಪರ್ ಹಿಟ್ ಮೂವಿಗಳು

Movie release: ಸುಮಾರು ಎರಡು ವಾರಗಳ ಬಳಿಕ ಈ ವಾರದಲ್ಲಿ ಹಲವಾರು ಚಿತ್ರಗಳು ಒಟಿಟಿಯಲ್ಲಿ ಬರಲು ಸಜ್ಜಾಗಿದೆ. ಹಾರರ್, ಥ್ರಿಲರ್, ಆಕ್ಷನ್, ರೋಮ್ಯಾಂಟಿಕ್ ಸೇರಿದಂತೆ ಸೂಪರ್ ಹಿಟ್ ಮೂವಿಗಳು ಈ ವಾರ ತೆರೆ ಕಾಣಲಿದೆ.

VISTARANEWS.COM


on

By

Movie release
Koo

ಬೆಂಗಳೂರು: ಹೊರಗೆ ಬಿಸಿಲು ತೀವ್ರವಾಗಿದೆ. ಹೀಗಿರುವಾಗ ಮನೆಯೊಳಗೆ ಕುಳಿತು ತಂಪಾದ ಜ್ಯೂಸು ಕುಡಿಯುತ್ತಾ, ತಿಂಡಿಗಳನ್ನು ಮೆಲ್ಲುತ್ತಾ ಇಷ್ಟವಾದ ಸಿನಿಮಾಗಳನ್ನು ನೋಡುತ್ತಾ ರಜೆ ಕಳೆಯಬಹುದು. ಯಾಕೆಂದರೆ ಈ ವಾರ ಹಲವು ಹೊಸ ಚಿತ್ರಗಳು ಒಟಿಟಿಯಲ್ಲಿ (OTT) ಬಿಡುಗಡೆಯಾಗಲಿದೆ. ಅತ್ಯಂತ ನಿರೀಕ್ಷಿತ ಚಿತ್ರಗಳಾದ ಯನಿವನ್ ಬಟ್ ಯು (Anyone But You), ಡ್ಯೂನ್: ಪಾರ್ಟ್ 2 (Dune: Part 2), ಡ್ರೀಮ್ ಸಿನಾರಿಯೊ (Dream Scenario) ಮತ್ತು ಝಾಕ್ ಸ್ನೈಡರ್ಸ್ ರೆಬೆಲ್ ಮೂನ್ – ಪಾರ್ಟ್ 2: ದಿ ಸ್ಕಾರ್ಗಿವರ್ (Zack Snyder’s Rebel Moon – Part Two: The Scargiver) ಕೂಡ ಸೇರಿದೆ.

ಇನ್ನು ವಿದ್ಯಾ ಬಾಲನ್ (Vidya Balan) ಅವರ ಅಭಿಮಾನಿಗಳಿಗೆ ಸಂತಸದ ಸುದ್ದಿ. ದೋ ಔರ್ ದೋ ಪ್ಯಾರ್ (Do Aur Do Pyaar ) ಕೂಡ ಈ ವಾರ ಥಿಯೇಟರ್‌ಗಳಿಗೆ ಆಗಮಿಸಲಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಸಾಕಷ್ಟು ಮಂದಿಯ ಗಮನ ಸೆಳೆದಿದೆ. ಹೀಗಾಗಿ ಮನೆಯಿಂದ ಹೊರಬಂದು ದೊಡ್ಡ ಪರದೆಯ ಮೇಲೆ ಈ ಚಿತ್ರ ನೋಡಬಹುದು.

ಇಷ್ಟೇ ಅಲ್ಲದೇ ಸೀ ಯು ಇನ್ ಅನದರ್ ಲೈಫ್, ದಿ ಗ್ರಿಮ್ ವೇರಿಯೇಷನ್ಸ್, ದಿ ಟೂರಿಸ್ಟ್: ಸೀಸನ್ 2 ಮತ್ತು ಚೀಫ್ ಡಿಟೆಕ್ಟಿವ್ 1958 ಸರಣಿಯು ತೆರೆಗೆ ಬರಲು ಕಾಯುತ್ತಿದೆ. ಈ ವಾರ ನೆಟ್ ಫ್ಲಿಕ್ಸ್, ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಸೇರಿದಂತೆ ಒಟಿಟಿಯಲ್ಲಿ ಬರಲು ಸಿದ್ದವಾಗಿರುವ ಚಿತ್ರಗಳು ಇಂತಿದೆ.

ಇದನ್ನೂ ಓದಿ: Priyanka Chopra: ʻಅಮರ್ ಸಿಂಗ್ ಚಮ್ಕಿಲಾʼ ಸಿನಿಮಾವನ್ನು ಹೊಗಳಿದ ಪ್ರಿಯಾಂಕಾ ಚೋಪ್ರಾ!

ಡ್ಯೂನ್: ಪಾರ್ಟ್ ಟು

ಬುಕ್ ಮೈ ಶೋ (BookMyShow ) ನಲ್ಲಿ ಡೆನಿಸ್ ವಿಲ್ಲೆನ್ಯೂವ್ ನಿರ್ದೇಶನದ ತಿಮೋತಿ ಚಲಾಮೆಟ್, ಝೆಂಡಯಾ, ಜೇವಿಯರ್ ಬಾರ್ಡೆಮ್, ರೆಬೆಕಾ ಫರ್ಗುಸನ್, ಜೋಶ್ ಬ್ರೋಲಿನ್, ಫ್ಲಾರೆನ್ಸ್ ಪಗ್, ಆಸ್ಟಿನ್ ಬಟ್ಲರ್, ಲಿಯಾ ಸೆಡೌಕ್ಸ್, ಕ್ರಿಸ್ಟೋಫರ್ ವಾಕೆನ್ ಮೊದಲಾದವರು ಅಭಿನಯಿಸಿರುವ ಚಿತ್ರ ಡ್ಯೂನ್: ಪಾರ್ಟ್ ಟು ಏಪ್ರಿಲ್ 16ರಂದು ಬಿಡುಗಡೆಯಾಗಲಿದೆ. ಸಾಹಸಮಯ ದೃಶ್ಯಗಳಿಂದಾಗಿಯೇ ಈ ಚಿತ್ರದ ಟ್ರೇಲರ್ ಸಾಕಷ್ಟು ಮಂದಿಯ ಗಮನ ಸೆಳೆದಿದೆ.


ಅವರ್ ಲಿವಿಂಗ್ ವರ್ಲ್ಡ್

ಜೇಮ್ಸ್ ಹನಿಬೋರ್ನ್ ನಿರ್ದೇಶನದ ಈ ಚಿತ್ರ ನೆಟ್‌ಫ್ಲಿಕ್ಸ್ ನಲ್ಲಿ ಏಪ್ರಿಲ್ 17ರಂದು ತೆರೆಗೆ ಬರಲಿದೆ. ಪ್ರಮುಖ ಪಾತ್ರಧಾರಿಯಾಗಿ ಕೇಟ್ ಬ್ಲಾಂಚೆಟ್ ಕಾಣಿಸಿಕೊಂಡಿದ್ದು,ಇದರಲ್ಲಿ ಎಮ್ಮಿ ಪ್ರಶಸ್ತಿ ವಿಜೇತ ತಂಡವು ಜೀವಂತ ಜಗತ್ತನ್ನು ಪುನಃಸ್ಥಾಪಿಸಲು ಮತ್ತು ಉಳಿಸಿಕೊಳ್ಳಲು ಪ್ರಯತ್ನಿಸುವ ಸಾಹಸಗಾಥೆಯನ್ನು ಒಳಗೊಂಡ ಚಿತ್ರವಿದು. ಅತ್ಯಂತ ರೋಮಾಂಚಕ ದೃಶ್ಯಗಳು ಮನ ಸೆಳೆಯುತ್ತದೆ.


ಸೀ ಯು ಇನ್ ಅನೆದರ್ ಲೈಫ್

ಜಾರ್ಜ್ ಸ್ಯಾಂಚೆಜ್-ಕಾಬೆಜುಡೊ, ಬೋರ್ಜಾ ಸೋಲರ್ ನಿರ್ದೇಶನದ ಈ ಚಿತ್ರದಲ್ಲಿ ರಾಬರ್ಟೊ ಗುಟೈರೆಜ್, ಪೋಲ್ ಲೋಪೆಜ್, ತಮಾರಾ ಕ್ಯಾಸೆಲ್ಲಾಸ್, ಕ್ವಿಮ್ ಅವಿಲಾ, ಮೌರಾದ್ ಔವಾನಿ, ಜೈಮ್ ಜಟಾರಿನ್ ಮುಖ್ಯ ಪಾತ್ರಧಾರಿಗಳಾಗಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 17 ರಂದು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಈ ಚಿತ್ರ ತೆರೆಗೆ ಬರಲಿದೆ. ಮ್ಯಾನುಯೆಲ್ ಜಬೋಯಿಸ್ ಅವರ ಪುಸ್ತಕವನ್ನು ಆಧರಿಸಿ ನಿರ್ಮಿಸಿರುವ ಈ ಕಿರುಸರಣಿಯು 11M ರೈಲು ಬಾಂಬ್ ದಾಳಿಯ ಹಿನ್ನೆಲೆಯನ್ನು ಹೊಂದಿದೆ.


ದಿ ಗ್ರಿಮ್ಮ್ ವರಿಯೇಷನ್ಸ್

ಯೊಕೊ ಕನೆಮೊರಿ, ಯಸುಹಿರೊ ಅಕಮಾಟ್ಸು, ಜುನಿಚಿರೊ ಹಶಿಗುಚಿ, ಯುಮಿ ಕಾಮಮುರಾ, ಮಸಾಟೊ ಟಕೆಯುಚಿ, ಶಿಂಟಾರೊ ನಕಾಜವಾ ನಿರ್ದೇಶಿಸರುವ ಅನಿಮೇಷನ್ ಚಿತ್ರ ಏಪ್ರಿಲ್ 17ರಂದು ನೆಟ್‌ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಲಿದೆ. ತತ್ಸುಹಿಸಾ ಸುಜುಕಿ, ಕೆಂಜಿ ನೊಜಿಮಾ, ಮಿಸಾಟೊ ಫುಕುಯೆನ್ ಧ್ವನಿ ನೀಡಿರುವ ಚಿತ್ರದಲ್ಲಿ ಜಪಾನೀಸ್ ಮೂಲ ನೆಟ್ ಅನಿಮೇಷನ್ (ONA) ಸಂಕಲನ ಸರಣಿಯು ಸಹೋದರರಾದ ಜಾಕೋಬ್ ಮತ್ತು ವಿಲ್‌ಹೆಲ್ಮ್ ಮತ್ತು ಅವರ ಕಿರಿಯ ಸಹೋದರಿ, ಮುಗ್ಧ ಮತ್ತು ಕುತೂಹಲಕಾರಿ ಚಾರ್ಲೆಟ್ ಸುತ್ತ ಸುತ್ತುತ್ತದೆ.


ದಿ ಸೀಕ್ರೆಟ್ ಸ್ಕೋರ್

ಜುವಾನ್ ಕಾರ್ಲೋಸ್ ಡಿ ಲಾಕಾ ನಿರ್ದೇಶಿಸಿದ ಈ ಚಿತ್ರದಲ್ಲಿ ವಾಲ್ ಡೊರಾಂಟೆಸ್, ಜುವಾನ್ಮಾ ಪಿಯಾನೋ, ಜೋಸ್ ಪೆರಾಲ್ಟಾ, ಡೇನಿಯಲ್ ಅಬ್ರೆಗೊ, ಮೊನಿಕಾ ಪ್ಲೆಹ್ನ್, ಡಿಯಾಗೋ ಸ್ಯಾಂಡೋವಲ್, ಪಾವೊಲಾ ಗೊಮೆಜ್, ಮಿಚೆಲ್ ಅಲ್ಮಾಗುರ್, ಸೀಸರ್ ಅಕೋಸ್ಟಾ, ಡೇವಿಡ್ ಅಂಗುಲೋ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಏಪ್ರಿಲ್ 17ರಂದು ಚಿತ್ರ ತೆರೆಗೆ ಬರಲಿದೆ.


ಸುಗಾ: ಅಗಸ್ಟ್ ಡಿ ಟೂರ್ ಡಿ-ಡೇ ದಿ ಮೂವಿ

ಜುನ್-ಸೂ ಪಾರ್ಕ್ ನಿರ್ದೇಶನದ ಸುಗಾ, ಜಿಮಿನ್, ಜಂಗ್‌ಕುಕ್ ಅಭಿನಯಿಸಿರುವ ಈ ಚಿತ್ರ ಏಪ್ರಿಲ್ 18ರಂದು ಚಿತ್ರ ಮಂದಿರಗಳಲ್ಲಿ ತೆರೆಗೆ ಬರಲಿದೆ. ಎನ್‌ಕೋರ್ ಸಂಗೀತ ಕಛೇರಿಗಾಗಿ ಪ್ರಪಂಚದಾದ್ಯಂತ ಪ್ರಯಾಣಿಸುವ ತಂಡದ ಸುತ್ತ ಚಿತ್ರದ ಕಥೆ ಹೆಣೆಯಲಾಗಿದೆ.


ಆರ್ಟಿಕಲ್ 370

ಆದಿತ್ಯ ಸುಹಾಸ್ ಜಂಬಾಳೆ ನಿರ್ದೇಶನದ ಯಾಮಿ ಗೌತಮ್, ಪ್ರಿಯಾಮಣಿ, ಸ್ಕಂದ ಠಾಕೂರ್, ಅಶ್ವಿನಿ ಕೌಲ್, ವೈಭವ್ ತತ್ವವಾದಿ, ಅರುಣ್ ಗೋವಿಲ್, ಕಿರಣ್ ಕರ್ಮಾರ್ಕರ್ ಅಭಿನಯದ ಚಿತ್ರ ಜಿಯೋ ಸಿನಿಮಾದಲ್ಲಿ ಏಪ್ರಿಲ್ 19ರಂದು ತೆರೆ ಕಾಣಲಿದೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಮೇಲೆ ಚಿತ್ರ ಕೇಂದ್ರೀಕರಿಸಿದೆ. ಈಗಾಗಲೇ ಈ ಚಿತ್ರ ತೆರೆಗೆ ಬಂದಿದ್ದು, ನೋಡಲಾಗದೇ ಇದ್ದರೆ ಈ ವಾರ ಓಟಿಟಿಯಲ್ಲಿ ಕಾಣಬಹುದು.


ಚೀಫ್ ಡಿಟೆಕ್ಟಿವ್ 1958

ಕಿಮ್ ಸಿಯೋಂಗ್-ಹೂನ್ ನಿರ್ದೇಶನದ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಲೀ ಜೆ-ಹೂನ್, ಲೀ ಡಾಂಗ್-ಹ್ವಿ, ಚೋಯ್ ವೂ-ಸಂಗ್, ಯೂನ್ ಹ್ಯುನ್-ಸೂ ಕಾಣಿಸಿಕೊಂಡಿದ್ದಾರೆ. Disney+ Hotstar ನಲ್ಲಿ ಈ ಚಿತ್ರ ಏಪ್ರಿಲ್ 19ರಂದು ತೆರೆ ಕಾಣಲಿದೆ. ಚೀಫ್ ಇನ್ಸ್‌ಪೆಕ್ಟರ್ (1971) ಸರಣಿಯ ಪೂರ್ವಭಾವಿ ಕಥೆಯನ್ನು ಅಂದರೆ 1950 ರಿಂದ 1960 ರ ದಶಕದ ಕಥೆಯನ್ನು ಇದು ಒಳಗೊಂಡಿದೆ.


ಡ್ರೀಮ್ ಸಿನಾರಿಯೋ

ಕ್ರಿಸ್ಟೋಫರ್ ಬೋರ್ಗ್ಲಿ ನಿರ್ದೇಶನದ ಈ ಚಿತ್ರದಲ್ಲಿ ನಿಕೋಲಸ್ ಕೇಜ್, ಜೂಲಿಯಾನ್ನೆ ನಿಕೋಲ್ಸನ್, ಮೈಕೆಲ್ ಸೆರಾ, ಟಿಮ್ ಮೆಡೋಸ್, ಡೈಲನ್ ಗೆಲುಲಾ, ಡೈಲನ್ ಬೇಕರ್ ಮುಖ್ಯ ಭೂಮಿಕಾಯಲ್ಲಿ ಕಾಣಿಸಿಕೊಂಡಿದ್ದಾರೆ. ಲಯನ್ಸ್‌ಗೇಟ್ ಪ್ಲೇ ನಲ್ಲಿ ಏಪ್ರಿಲ್ 19ರಂದು ಪ್ರದರ್ಶನ ಕಾಣಲಿದೆ.


ರೆಬೆಲ್ ಮೂನ್- ಪಾರ್ಟ್ ಟು: ದಿ ಸ್ಕ್ಯಾರ್ಗಿವೆರ್

ಝಾಕ್ ಸ್ನೈಡರ್ ನಿರ್ದೇಶನದ ಈ ಚಿತ್ರದಲ್ಲಿ ಸೋಫಿಯಾ ಬೌಟೆಲ್ಲಾ, ಚಾರ್ಲಿ ಹುನ್ನಮ್, ಮೈಕೆಲ್ ಹುಯಿಸ್ಮನ್, ಜಿಮನ್ ಹೌನ್ಸೌ, ಡೂನಾ ಬೇ, ರೇ ಫಿಶರ್, ಕ್ಲಿಯೋಪಾತ್ರ ಕೋಲ್ಮನ್, ಜೆನಾ ಮ್ಯಾಲೋನ್, ಫ್ರಾ ಫೀ, ಎಡ್ ಸ್ಕ್ರೇನ್, ಆಂಥೋನಿ ಹಾಪ್ಕಿನ್ಸ್ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 19 ರಂದು ನೆಟ್‌ಫ್ಲಿಕ್ಸ್ ಚಿತ್ರ ತೆರೆ ಕಾಣಲಿದೆ.


ಸೀರೆನ್

ಆಂಟೋನಿ ಭಾಗ್ಯರ ನಿರ್ದೇಶನದ ಈ ಚಿತ್ರದಲ್ಲಿ ಜಯಂ ರವಿ, ಕೀರ್ತಿ ಸುರೇಶ್, ಅನುಪಮಾ ಪರಮೇಶ್ವರನ್, ಯೋಗಿ ಬಾಬು ಮತ್ತು ಸಮುದ್ರಕನಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. Disney+ Hotstar ನಲ್ಲಿ ಏಪ್ರಿಲ್ 19ರಂದು ಚಿತ್ರ ತೆರೆ ಕಾಣಲಿದೆ. ಆಕ್ಷನ್ ಥ್ರಿಲ್ಲರ್ ಚಿತ್ರಗಳನ್ನು ಇಷ್ಟಪಡುವವರಿಗೆ ಇದೊಂದು ಒಳ್ಳೆಯ ಸಿನೆಮಾ.


ದಿ ಟೂರಿಸ್ಟ್ : ಸೀಸನ್ 2

ಕ್ರಿಸ್ ಸ್ವೀನಿ ನಿರ್ದೇಶನದ ಈ ಚಿತ್ರದಲ್ಲಿ ಜೇಮೀ ಡೋರ್ನಾನ್, ಡೇನಿಯಲ್ ಮ್ಯಾಕ್ಡೊನಾಲ್ಡ್, ಓಲ್ವೆನ್ ಫೌರೆ, ಗ್ರೆಗ್ ಲಾರ್ಸೆನ್, ವಿಕ್ಟೋರಿಯಾ ಹರಾಲಾಬಿಡೌ, ಕಾನರ್ ಮ್ಯಾಕ್‌ನೀಲ್, ಮಾರ್ಕ್ ಮೆಕೆನ್ನಾ, ನೆಸ್ಸಾ ಮ್ಯಾಥ್ಯೂಸ್, ಡೈರ್ಮೇಡ್ ಮುರ್ತಾಗ್, ಫ್ರಾನ್ಸಿಸ್ ಮ್ಯಾಗೀ ಮುಖ್ಯ ಪಾತ್ರಧಾರಿಗಳು. ಏಪ್ರಿಲ್ 19 ರಂದು ಲಯನ್ಸ್‌ಗೇಟ್ ಪ್ಲೇ ನಲ್ಲಿ ಈ ಚಿತ್ರ ತೆರೆ ಕಾಣಲಿದೆ.


ಎನಿ ಒನ್ ಬಟ್ ಯು

ವಿಲ್ ಗ್ಲುಕ್ ನಿರ್ದೇಶನದ ಈ ಚಿತ್ರದಲ್ಲಿ ಸಿಡ್ನಿ ಸ್ವೀನಿ, ಗ್ಲೆನ್ ಪೊವೆಲ್, ಅಲೆಕ್ಸಾಂಡ್ರಾ ಶಿಪ್, ಗಾಟಾ, ಹ್ಯಾಡ್ಲಿ ರಾಬಿನ್ಸನ್, ಮಿಚೆಲ್ ಹರ್ಡ್, ಡರ್ಮಟ್ ಮುಲ್ರೋನಿ, ಡ್ಯಾರೆನ್ ಬಾರ್ನೆಟ್ ಮತ್ತು ರಾಚೆಲ್ ಗ್ರಿಫಿತ್ಸ್. ಕಾಣಿಸಿಕೊಂಡಿದ್ದಾರೆ. ನೆಟ್‌ಫ್ಲಿಕ್ಸ್ ನಲ್ಲಿ ಏಪ್ರಿಲ್ 19ರಂದು ಈ ಚಿತ್ರ ತೆರೆ ಕಾಣಲಿದೆ.


ಲವ್ ಸೆಕ್ಸ್ ಔರ್ ಧೋಖಾ 2

ದಿಬಾಕರ್ ಬ್ಯಾನರ್ಜಿ ನಿರ್ದೇಶನದ ಈ ಚಿತ್ರದಲ್ಲಿ ನಿಮೃತ್ ಕೌರ್ ಅಹ್ಲುವಾಲಿಯಾ, ಅನುಪಮ್ ಜೋರ್ದಾರ್, ರೊಸಾನಾ ಎಲ್ಸಾ ಸ್ಕುಗಿಯಾ, ಉರ್ಫಿ ಜಾವೇದ್, ಅನು ಮಲಿಕ್ ಮುಖ್ಯ ಪಾತ್ರಧಾರಿಗಳಾಗಿದ್ದರೆ. ಏಪ್ರಿಲ್ 19ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದೆ. ಸಾಮಾಜಿಕ ಜಾಲತಾಣದಲ್ಲಿ ಬೆಳೆದ ಪ್ರೀತಿ ಹೇಗಿರುತ್ತದೆ ಎನ್ನುವುದನ್ನು ಈ ಚಿತ್ರ ವಿವರಿಸುತ್ತದೆ.


ಸಿವಿಲ್ ವಾರ್

ಅಲೆಕ್ಸ್ ಗಾರ್ಲ್ಯಾಂಡ್ ನಿರ್ದೇಶನ ನಿರ್ದೇಶನದ ಕರ್ಸ್ಟನ್ ಡನ್ಸ್ಟ್, ವ್ಯಾಗ್ನರ್ ಮೌರಾ, ಕೈಲೀ ಸ್ಪೇನಿ, ಸ್ಟೀಫನ್ ಮೆಕಿನ್ಲೆ ಹೆಂಡರ್ಸನ್, ನಿಕ್ ಆಫರ್ಮನ್ ಅವರು ಅಭಿನಯಿಸಿರುವ ಚಿತ್ರ ಏಪ್ರಿಲ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮಿಲಿಟರಿ-ಎಂಬೆಡೆಡ್ ಪತ್ರಕರ್ತರ ತಂಡವು ಯುನೈಟೆಡ್ ಸ್ಟೇಟ್ಸ್‌ನಾದ್ಯಂತ ವೇಗವಾಗಿ ಉಲ್ಬಣಗೊಳ್ಳುತ್ತಿರುವ ಎರಡನೇ ಅಮೇರಿಕನ್ ಅಂತರ್ಯುದ್ಧದ ಸಮಯದಲ್ಲಿ ಪ್ರಯಾಣಿಸುವ ಕಥೆಯನ್ನು ಇದು ಒಳಗೊಂಡಿದೆ.


ದೋ ಔರ್ ದೋ ಪ್ಯಾರ್

ಶಿರ್ಷಾ ಗುಹಾ ಠಾಕುರ್ತಾ ಅವರ ನಿರ್ದೇಶನದ ಈ ಚಿತ್ರದಲ್ಲಿ ವಿದ್ಯಾ ಬಾಲನ್, ಪ್ರತೀಕ್ ಗಾಂಧಿ, ಇಲಿಯಾನಾ ಡಿ’ಕ್ರೂಜ್, ಸೆಂಧಿಲ್ ರಾಮಮೂರ್ತಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 19ರಂದು ಚಿತ್ರಮಂದಿರಗಳಲ್ಲಿ ಈ ಚಿತ್ರ ತೆರೆ ಕಾಣಲಿದೆ. 2017 ರ ರೊಮ್ಯಾಂಟಿಕ್ ಕಾಮಿಡಿ ದಿ ಲವರ್ಸ್‌ನ ಅಧಿಕೃತ ರೂಪಾಂತರ ವಾದ ಈ ಚಿತ್ರದಲ್ಲಿ ದಂಪತಿ ದೂರವಾಗಿ ಮತ್ತೆ ತಮ್ಮ ಹೊಸ ಸಂಗಾತಿಗಾಗಿ ಹುಡುಕುವ ಕಥೆಯನ್ನು ಇದು ಒಳಗೊಂಡಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಚಿತ್ರೀಕರಣ ಆರಂಭಿಸಿದ ಬಹುನಿರೀಕ್ಷಿತ ಚಿತ್ರ ʼಉತ್ತರಕಾಂಡʼ

Kannada New Movie: ಉತ್ತರಕಾಂಡ” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಪದಕಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದು, ಚಿತ್ರವನ್ನು ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ನಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ನಿರ್ಮಿಸಲಿದ್ದಾರೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ.

VISTARANEWS.COM


on

Kannada New Movie uttarakhanda started shooting
Koo

ಬೆಂಗಳೂರು: ಬಹುನಿರೀಕ್ಷಿತ ಕನ್ನಡ ಚಿತ್ರ (Kannada New Movie) “ಉತ್ತರಕಾಂಡ” ಚಿತ್ರೀಕರಣವನ್ನು ಇಂದು (ಏ. 15) ಆರಂಭಿಸಲಾಗಿದೆ. 15 ದಿನಗಳ ಶೂಟಿಂಗ್‌ ವಿಜಯಪುರದಲ್ಲಿ ಚಿತ್ರೀಕರಣಗೊಳ್ಳಲಿದೆ.

“ಉತ್ತರಕಾಂಡ”ದ ಮುಹೂರ್ತ 2022ರಲ್ಲಿ‌ ಆಗಿದ್ದು, ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ, ಹಾಗೂ ಚಿತ್ರವು ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲಾನಿಂಗ್ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ,‌ ಇದೀಗ ಸರ್ವ ಸಿದ್ಧತೆಗಳೊಂದಿಗೆ ಇಂದು ಚಿತ್ರೀಕರಣ ಆರಂಭಗೊಂಡಿದ್ದು, ಚಿತ್ರ ತಂಡದವರು ಉತ್ಸುಕರಾಗಿದ್ದಾರೆ.

ಚಿತ್ರದ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ “ಚಿತ್ರವನ್ನು ಆರಂಭಿಸಲು ನಾನು ಉತ್ಸಾಹಿಯಾಗಿದ್ದೇನೆ. ಈ ಚಿತ್ರಕ್ಕೆ ನಿಖರವಾದ ಪ್ಲಾನಿಂಗ್, ತಯಾರಿ ಮತ್ತು ಸಂಶೋಧನೆ ಅಗತ್ಯವಿತ್ತು. ನಾನು ಮತ್ತು ನಿರ್ಮಾಪಕರು ನಿದ್ದೆಗೆಟ್ಟು ಇದನ್ನು ಕಾರ್ಯರೂಪಕ್ಕೆ ತರವುದರಲ್ಲಿ ಶ್ರಮಿಸಿದ್ದೇವೆ. ಶಿವಣ್ಣ ಮತ್ತು ಧನಂಜಯ್ ಪಾತ್ರ ವಹಿಸಿರುವ ಬಹು ದೊಡ್ಡ ತಾರಾಗಣದ ಚಿತ್ರಕಥೆಯನ್ನು ಸಿನಿ ಪ್ರೇಕ್ಷಕರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ಈ‌ ಕುರಿತು ಕುಂದು ಕೊರತೆ ಬರದಂತೆ ನಾನು ಮತ್ತು ಕೆ.ಆರ್.ಜಿ ಕೆಲಸ ಮಾಡಲಿದ್ದೇವೆ” ಎಂದರು.

ಇದನ್ನೂ ಓದಿ: Kannada New Movie: ಕಾಸಿನ ಹಿಂದೆ ಬಿದ್ದವರ ಕನಸಿನ ಕಥೆ `ಪುಕ್ಸಟ್ಟೆ ಪೈಸ’ ಥಿಯೇಟರಿನತ್ತ

ಚಿತ್ರದ ನಿರ್ಮಾಪಕ, ಕಾರ್ತಿಕ್ ಗೌಡ ಮಾತನಾಡಿ “ಉತ್ತರಕಾಂಡ ಚಿತ್ರವು ಕೆ.ಆರ್.ಜಿ.ಯ ಹೆಮ್ಮೆ ಎಂದರೆ ಉತ್ಪ್ರೇಕ್ಷೆಯಲ್ಲ. ಕೇವಲ ನಾವಷ್ಟೇ ಅಲ್ಲದೆ ಇಡೀ ಕನ್ನಡ ಚಿತ್ರರಂಗವೇ ಹೆಮ್ಮೆ ಪಡುವಂತೆ ಉತ್ತರಕಾಂಡ ಮುಂಬರಲಿದೆ” ಎಂದು ಭರವಸೆ ನೀಡಿದರು.

“ಉತ್ತರಕಾಂಡ” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಪದಕಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದು, ಚಿತ್ರವನ್ನು ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ನಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ನಿರ್ಮಿಸಲಿದ್ದಾರೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ.

ಚಿತ್ರಕ್ಕೆ ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ (ಡಿಸೈನ್)ಮಾಡಲಿದ್ದಾರೆ. ಬಹು ದೊಡ್ಡ ತಾರಾಬಳಗವನ್ನು ಹೊಂದಿರುವ ಈ ಚಿತ್ರ, ತಾರಾಬಳಗವನ್ನು ಈ ವಾರ ಘೋಷಿಸಲಿದೆ.

Continue Reading

ಕಾಲಿವುಡ್

Actress Nayanthara: ನಿವಿನ್ ಪೌಲ್‌-ನಯನತಾರಾ ಹೊಸ ಸಿನಿಮಾ ಅನೌನ್ಸ್‌!

Actress Nayanthara: ಈ ಸಿನಿಮಾ ಮೊದಲು ನಯನತಾರಾ ಮತ್ತು ನಿವಿನ್ ಪೌಲ್‌ 2019 ರಲ್ಲಿ ‘ಲವ್ ಆ್ಯಕ್ಷನ್ ಡ್ರಾಮಾ’ ನಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾಗೆ ಧ್ಯಾನ್ ಶ್ರೀನಿವಾಸನ್ ನಿರ್ದೇಶನವಿತ್ತು. ಇದೀಗ ಮತ್ತೆ ತೆರೆ ಮೇಲೆ ಮಿಂಚಲು ಜೋಡಿ ರೆಡಿಯಾಗಿದೆ.

VISTARANEWS.COM


on

Dear Students Nayanthara and Nivin Pauly reunite after five years
Koo

ಬೆಂಗಳೂರು: ನಟಿ ನಯನತಾರಾ (Actress Nayanthara ) ಮತ್ತು ನಿವಿನ್ ಪೌಲ್‌ ಮುಂಬರುವ ಮಲಯಾಳಂ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’ಗ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಏಪ್ರಿಲ್ 14ರಂದು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಸಂದೀಪ್ ಕುಮಾರ್ ಮತ್ತು ಜಾರ್ಜ್ ಫಿಲಿಪ್ ಜೋಡಿ ಈ ಸಿನಿಮಾ ನಿರ್ದೇಶಿಸಲಿದ್ದಾರೆ. ನಯನತಾರಾ ಮತ್ತು ನಿವಿನ್ ಪೌಲಿ ಅವರು ಚಿತ್ರದಲ್ಲಿ ನಟಿಸಿರುವುದಲ್ಲದೇ ತಮ್ಮ ನಿರ್ಮಾಣ ಸಂಸ್ಥೆಗಳ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾ ಮೊದಲು ನಯನತಾರಾ ಮತ್ತು ನಿವಿನ್ ಪೌಲ್‌ 2019 ರಲ್ಲಿ ‘ಲವ್ ಆ್ಯಕ್ಷನ್ ಡ್ರಾಮಾ’ ನಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾಗೆ ಧ್ಯಾನ್ ಶ್ರೀನಿವಾಸನ್ ನಿರ್ದೇಶನವಿತ್ತು. ಇದೀಗ ಮತ್ತೆ ತೆರೆ ಮೇಲೆ ಮಿಂಚಲು ಜೋಡಿ ರೆಡಿಯಾಗಿದೆ. “ಆತ್ಮೀಯ ವಿದ್ಯಾರ್ಥಿಗಳ ಮೋಜಿನ ಜಗತ್ತಿನಲ್ಲಿʼʼ ಎಂದು ಸಣ್ಣ ವಿಡಿಯೊ ಹಂಚಿಕೊಂಡಿದ್ದಾರೆ ನಯನತಾರಾ.

ಮಲಯಾಳಂನಲ್ಲಿ, ನಯನತಾರಾ ಕೊನೆಯ ಬಾರಿಗೆ ನಿರ್ದೇಶಕ ಅಲ್ಫೋನ್ಸ್ ಪುತ್ರೇನ್ ಅವರ ‘ಗೋಲ್ಡ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್ ಸುಕುಮಾರನ್ ನಾಯಕರಗಿದ್ದರು. ಸಿನಿಮಾ ನೆಗೆಟಿವ್‌ ವಿಮರ್ಶೆಯನ್ನು ಪಡೆದುಕೊಂಡಿತ್ತು.

ಇದನ್ನೂ ಓದಿ: Nayanthara and Vignesh: ಪತಿಯನ್ನು ಅನ್‌ಫಾಲೋ ಮಾಡಿ ಭಾವುಕ ಪೋಸ್ಟ್‌ ಹಂಚಿಕೊಂಡ ನಯನತಾರ!

ಇತ್ತೀಚೆಗೆ ನಿರ್ದೇಶಕ ವಿನೀತ್ ಶ್ರೀನಿವಾಸನ್ ಅವರ ‘ವರ್ಷಂಗಲ್ಕ್ಕು ಶೇಷಂ’ ಚಿತ್ರದಲ್ಲಿ ನಿವಿನ್ ಪೌಲಿ ಕಾಣಿಸಿಕೊಂಡಿದ್ದರು. ಚಿತ್ರಮಂದಿರಗಳಲ್ಲಿ ಈ ಸಿನಿಮಾ ಇನ್ನೂ ಯಶಸ್ವಿಯಾಗಿ ಓಡುತ್ತಿದೆ.

‘ಬೈಜು ಬವ್ರಾ’ ಚಿತ್ರದಲ್ಲಿ ನಟಿಸುತ್ತಾರಾ ನಯನತಾರಾ?

ಸದ್ಯ ಕೇಳಿ ಬಂದಿರುವ ಸುದ್ದಿಯ ಪ್ರಕಾರ ನಯನತಾರಾ ಅವರು ಸಂಜಯ್ ಲೀಲಾ ಬನ್ಸಾಲಿ ಅವರ ಬಹು ನಿರೀಕ್ಷಿತ ‘ಬೈಜು ಬವ್ರಾ’ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ರಣವೀರ್‌ ಸಿಂಗ್‌ ಮತ್ತು ಆಲಿಯಾ ಭಟ್‌ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಬಹಳ ಹಿಂದಿನಿಂದಲೇ ಕೇಳಿ ಬರುತ್ತಿತ್ತು. ಇದೀಗ ಈ ಬಹು ನಿರೀಕ್ಷಿತ ಪ್ರಾಜೆಕ್ಟ್‌ನಲ್ಲಿ ನಯನತಾರಾ ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.

ತಮ್ಮ ಎರಡನೇ ಬಾಲಿವುಡ್‌ ಚಿತ್ರದ ಬಗ್ಗೆ ಸಂಜಯ್‌ ಲೀಲಾ ಬನ್ಸಾಲಿ ಜತೆ ಈಗಾಗಲೇ ನಯನತಾರಾ ಚರ್ಚೆ ನಡೆಸಿ ನಟಿಸಲು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಣವೀರ್‌ ಸಿಂಗ್‌ ಟೈಟಲ್‌ ರೋಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು 1952ರಲ್ಲಿ ತೆರೆಕಂಡ ‘ಬೈಜು ಬವ್ರಾ’ ಚಿತ್ರದ ರಿಮೇಕ್‌ ಎನ್ನಲಾಗಿದ್ದು, ಮೂಲ ಚಿತ್ರದಲ್ಲಿ ಭರತ್ ಭೂಷಣ್-ಮೀನಾ ಕುಮಾರಿ ನಟಿಸಿದ್ದರು. ಸಂಗೀತಗಾರನೊಬ್ಬನ ಜೀವನದ ಬಗ್ಗೆ ಈ ಚಿತ್ರ ಬೆಳಕು ಚೆಲ್ಲಿತ್ತು. ಈ ಚಿತ್ರದ ಪ್ರಮುಖ ಪಾತ್ರ ನಿರ್ವಹಿಸುವಂತೆ ನಯನತಾರಾ ಅವರನ್ನು ಸಂಪರ್ಕಿಸಲಾಗಿದೆ. ಅವರು ಇನ್ನೂ ತಮ್ಮ ನಿರ್ಧಾರವನ್ನು ಅಂತಿಮಗೊಳಿಸಿಲ್ಲ. ಮಾರ್ಚ್‌ನಲ್ಲಿ ನಯನತಾರಾ, ಪತಿ ವಿಘ್ನೇಶ್‌ ಶಿವನ್‌ ಜತೆ ಸಂಜಯ್‌ ಲೀಲಾ ಬನ್ಸಾಲಿ ಅವರನ್ನು ಭೇಟಿಯಾಗಿ ಈ ಸಿನಿಮಾ ಕುರಿತು ಮಾತುಕತೆ ನಡೆಸಿದ್ದರು ಎಂದು ಮೂಲಗಳು ವರದಿ

Continue Reading
Advertisement
RR vs KKR
ಕ್ರೀಡೆ3 mins ago

RR vs KKR: ಅಗ್ರಸ್ಥಾನಕ್ಕೆ ಇಂದು ಕೆಕೆಆರ್​-ರಾಜಸ್ಥಾನ್ ಮಧ್ಯೆ ಹೈವೋಲ್ಟೇಜ್ ಕದನ

Toyota Kirloskar Motor Launches New Innova Hicross Petrol GX (O) Grade
ದೇಶ5 mins ago

Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

Lok Sabha Election 2024 IT companies to remain closed in Bengaluru on April 26 BBMP order
Lok Sabha Election 202417 mins ago

Lok Sabha Election 2024: ಏಪ್ರಿಲ್‌ 26ರಂದು ಬೆಂಗಳೂರಲ್ಲಿ ಐಟಿ ಕಂಪನಿಗಳಿಗೆ ಕಡ್ಡಾಯ ರಜೆ; ತುಷಾರ್ ಗಿರಿನಾಥ್ ಆದೇಶ

NEET PG-2024
ಶಿಕ್ಷಣ38 mins ago

NEET PG-2024: ನೀಟ್‌ ಪಿಜಿ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ; ಇಲ್ಲಿದೆ ನೋಂದಣಿ ಮಾಹಿತಿ

Auto Fare in Bengaluru
ಬೆಂಗಳೂರು39 mins ago

Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

Dinesh Karthik
ಕ್ರೀಡೆ45 mins ago

Dinesh Karthik: ಕಾರ್ತಿಕ್​ಗೆ ಟಿ20 ವಿಶ್ವಕಪ್​ನಲ್ಲಿ ಅವಕಾಶ ನೀಡಿ; ದಿಗ್ಗಜ ಕ್ರಿಕೆಟಿಗರ ಒತ್ತಾಯ

gold rate today tapasi
ಚಿನ್ನದ ದರ48 mins ago

Gold Rate Today: ಏರಿಕೆಯಲ್ಲಿ ದಾಖಲೆ ಬರೆಯುತ್ತಲೇ ಇದೆ ಚಿನ್ನದ ದರ! ಇಂದಿನ ಬೆಲೆ ₹74,130 !

Actor Dwarakish
ಪ್ರಮುಖ ಸುದ್ದಿ55 mins ago

Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

Theft Case in Bengaluru
ಬೆಂಗಳೂರು1 hour ago

Theft Case : ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

actor prakash Rai
ವೈರಲ್ ನ್ಯೂಸ್2 hours ago

Actor Prakash Rai: “ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ; ನಿರ್ದಿಗಂತಕ್ಕೆ ಹಣದ ಹೊಳೆ!” ಸಿಡಿದೆದ್ದ ಜೆಡಿಎಸ್‌ನಿಂದ ನಟ ಪ್ರಕಾಶ್‌ ರೈಗೆ ಚಾಟಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ8 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌