Road accident: ರಸ್ತೆ ದಾಟುತ್ತಿದ್ದ ಪಾದಚಾರಿ ಹಿಟ್ ಅಂಡ್ ರನ್‌ಗೆ ಬಲಿ - Vistara News

ಕ್ರೈಂ

Road accident: ರಸ್ತೆ ದಾಟುತ್ತಿದ್ದ ಪಾದಚಾರಿ ಹಿಟ್ ಅಂಡ್ ರನ್‌ಗೆ ಬಲಿ

ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಹಿಟ್ ಅಂಡ್ ರನ್‌ಗೆ ಬಲಿಯಾಗಿದ್ದಾರೆ. ಸದಾಶಿವನಗರ ಸಮೀಪ ಮೇಖ್ರಿ ಸರ್ಕಲ್‌ನ ಬಳಿ ಖಾಸಗಿ ಹೋಟೆಲ್ ಮುಂಭಾಗದಲ್ಲಿ ಘಟನೆ ನಡೆದಿದೆ.

VISTARANEWS.COM


on

road accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಹಿಟ್ ಅಂಡ್ ರನ್‌ಗೆ ಬಲಿಯಾಗಿದ್ದಾರೆ. ಸದಾಶಿವನಗರ ಸಮೀಪ ಮೇಖ್ರಿ ಸರ್ಕಲ್‌ನ ಬಳಿ ಖಾಸಗಿ ಹೋಟೆಲ್ ಮುಂಭಾಗದಲ್ಲಿ ಘಟನೆ ನಡೆದಿದೆ.

ಕಾರು ಗುದ್ದಿದ ರಭಸಕ್ಕೆ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಮಾರು 40 ವರ್ಷದ ಇವರು ಕೈಯಲ್ಲಿ ವಯೋವೃದ್ಧರೊಬ್ಬರ ಫೋಟೊ ಹಿಡಿದು ರಸ್ತೆ ದಾಟುತ್ತಿದ್ದರು. ಅಪಘಾತವಾದ ಕೂಡಲೇ ಅಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನದ ಮಾಹಿತಿಯನ್ನು ಸಿಟಿ ಟಿವಿ ಮೂಲಕ ಪತ್ತೆ ಹಚ್ಚಲಾಗುತ್ತಿದೆ. ಕಪ್ಪು ಬಣ್ಣದ ಬೆಂಝ್‌ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Road Accident: ಟ್ಯಾಂಕರ್-ಕ್ಯಾಂಟರ್ ವಾಹನಗಳ ನಡುವೆ ಭೀಕರ ಅಪಘಾತ; ಚಾಲಕನ ಎರಡೂ ಕಾಲು ತುಂಡು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

Theft Case : ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಆ್ಯಕ್ಟಿವ್! ಒಂಟಿ ಮಹಿಳೆಯರೇ ಟಾರ್ಗೆಟ್‌

Theft Case : ಬೆಳಗಾವಿಯಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್‌ ಮಾಡುವ ಇರಾನಿ ಗ್ಯಾಂಗ್‌ ಆ್ಯಕ್ಟಿವ್ ಆಗಿದೆ. ಚಿತ್ರದುರ್ಗದಲ್ಲಿ ಎಟಿಎಂ ಕಳ್ಳತನಕ್ಕೆ ಕಳ್ಳನೊಬ್ಬ ವಿಫಲ ಯತ್ನ ನಡೆಸಿದ್ದರೆ, ವೃದ್ಧೆಯ ಚಿನ್ನದ ಸರ ಕದ್ದ ಮುಸುಕುಧಾರಿಗಳು ಎಸ್ಕೇಪ್‌ ಆಗಿದ್ದಾರೆ. ಚಿಕ್ಕಮಗಳೂರಲ್ಲಿ ಕಳ್ಳರು ಕೈ ಚಳಕ ತೋರಿದ್ದರೆ, ದೇವನಹಳ್ಳಿಯಲ್ಲಿ ಬೈಕ್‌ ಕಳ್ಳನೊಬ್ಬ ಅರೆಸ್ಟ್‌ ಆಗಿದ್ದಾನೆ.

VISTARANEWS.COM


on

By

Irani gang active in Belagavi Single women are the target
Koo

ಬೆಳಗಾವಿ: ಇರಾನಿ ಗ್ಯಾಂಗ್ ಬೆಳಗಾವಿ ಜನರ ನೆಮ್ಮದಿಯ ನಿದ್ದೆಗೆ ಭಂಗ ತಂದಿದೆ. ಇರಾನಿ ಗ್ಯಾಂಗ್ (Irani gang) ಮಹಿಳೆಯರು ಧೈರ್ಯದಿಂದ ಬೀದಿಯಲ್ಲಿ ಓಡಾಡದ ಪರಿಸ್ಥಿತಿಗೆ ತಂದಿದೆ. ಬೀದಿಯಲ್ಲಿ ಸಂಚರಿಸುವ ಒಂಟಿ ಮಹಿಳೆಯರು ಹಾಗೂ ಖಾಲಿ ಮನೆಗಳೆ ಈ ಗ್ಯಾಂಗ್ (Theft Case) ಟಾರ್ಗೆಟ್ ಆಗಿದೆ.

ರಾತ್ರಿ ಹೊತ್ತು ಮನೆಗಳ ಮುಂಭಾಗ ಬೀಗ ಹಾಕಿದ್ದರೆ, ಹಗಲು ಹೊತ್ತು ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಾರೆ. ಮಹಾಂತೇಶ ನಗರ, ಅಮನ್ ನಗರದಲ್ಲಿ ಸೇರಿದಂತೆ ವಿವಿಧೆಡೆ ಮನೆಗಳ್ಳತನ ಮಾಡಿದ್ದಾರೆ. 2.5 ಲಕ್ಷ ರೂ. ಚಿನ್ನಾಭರಣ, 50 ಸಾವಿರ ಮೌಲ್ಯದ ಬೆಳ್ಳಿ ಹಾಗೂ 2.20 ಲಕ್ಷ ‌ನಗದು ಸೇರಿ 7 ಲಕ್ಷ ಮೌಲ್ಯದ ವಸ್ತು ಎಗರಿಸಿ ಖದೀಮರು ಕಾಲ್ಕಿತ್ತಿದ್ದಾರೆ. ಜತೆಗೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಬೈಕ್‌ ಕದ್ದು ಹೋಗುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಿತ್ರದುರ್ಗದಲ್ಲಿ ಎಟಿಎಂ ಕಳ್ಳತನಕ್ಕೆ ಕಳ್ಳನ ಯತ್ನ

ಚಿತ್ರದುರ್ಗ ನಗರದಲ್ಲಿ ಎಟಿಎಂ (ATM) ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ನಗರದ ಸರಸ್ವತಿ ಪುರಂ ಶಾಲೆಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕೃತ್ಯ ನಡೆದಿದ್ದು, ಚಾಲಾಕಿ ಕಳ್ಳನ ಚಲನವಲನ ಸಿಸಿ ಕ್ಯಾಮೆರಾದಲ್ಲಿ (CCTV) ಸೆರೆಯಾಗಿದೆ. ಮಂಕಿ ಕ್ಯಾಪ್, ಕೈಗೆ ಗ್ಲೌಸ್ ಧರಿಸಿ ಬಂದಿದ್ದ ಖತರ್ನಾಕ್ ಕಳ್ಳ ಬಳಿಕ ಸಿಸಿಕ್ಯಾಮೆರಾ ಗಳಿಗೆ ಕಪ್ಪು ಮಸಿ ಸ್ಪ್ರೇ ಮಾಡಿದ್ದಾನೆ. ಕಬ್ಬಿಣದ ರಾಡ್‌ನಿಂದ ಎಟಿಎಂಗೆ ಹೊಡೆದು ಹಣ ಎಗರಿಸಲು ಯತ್ನಿಸಿದ್ದಾನೆ. ಮಿಷನ್ ಸೇಪ್ ಲಾಕ್ ಡೋರ್ ಡ್ಯಾಮೇಜ್ ಮಾಡಿ ಎಸ್ಕೇಪ್ ಆಗಿದ್ದಾನೆ. ಸದ್ಯ ಬ್ಯಾಂಕ್ ಮ್ಯಾನೇಜರ್ ಮೋಹನ್ ರಾವ್ ಅವರಿಂದ ದೂರು ದಾಖಲಾಗಿದೆ. ಸ್ಥಳಕ್ಕೆ ಚಿತ್ರದುರ್ಗ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೃದ್ಧೆಯ ಚಿನ್ನದ ಸರ ಕದ್ದ ಮುಸುಕುಧಾರಿಗಳು

ಅಂಗಡಿಗೆ ತೆರಳುತ್ತಿದ್ದ ವೃದ್ದೆ ಕೊರಳಲ್ಲಿದ್ದ ಚಿನ್ನದ ಸರ ಕದ್ದು ಕಳ್ಳರು ಎಸ್ಕೇಪ್ ಆಗಿದ್ದಾರೆ. ಚಿತ್ರದುರ್ಗದ ಎಸ್‌ಪಿ ಕಚೇರಿ ಸಮೀಪದಲ್ಲೇ ಘಟನೆ ನಡೆದಿದೆ. ಇಬ್ಬರು ಮುಸುಕು ಧಾರಿ ಬೈಕ್ ಸವಾರರಿಂದ ಕೃತ್ಯ ನಡೆದಿದೆ. ಮುನ್ಸಿಪಲ್ ಕಾನೋನಿ ನಿವಾಸಿ ಅನ್ನಪೂರ್ಣಮ್ಮ ಎಂಬುವವರು 45 ಗ್ರಾಂ ತೂಕದ ಚಿನ್ನಾಭರಣ ಕಳೆದುಕೊಂಡವರು. ಸ್ಥಳಕ್ಕೆ ಚಿತ್ರದುರ್ಗ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

ಚಿಕ್ಕಮಗಳೂರಲ್ಲಿ ಕಳ್ಳರ ಕೈ ಚಳಕ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಿನಿಮೀಯ ಶೈಲಿಯಲ್ಲಿ ಏಕಕಾಲದಲ್ಲಿ ನಾಲ್ಕು ಮನೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ.‌ ನಾಲ್ಕು ಮನೆಯವರು ತುರ್ತು ಕೆಲಸದ ನಿಮಿತ್ತ ವಿವಿಧೆಡೆ ತೆರಳಿದ್ದರು. ಇದನ್ನು ಗಮನಿಸಿದ ಕಳ್ಳರು ಬಾಗಿಲನ್ನು ಮುರಿದು ಒಳನುಗ್ಗಿದ್ದಾರೆ. ಮನೆಯಲ್ಲಿದ್ದ ಹಣ, ಚಿನ್ನ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದಾರೆ. ದೇವನೂರು ಗ್ರಾಮದಲ್ಲಿ ಸರಣಿ ಕಳ್ಳತನಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ದೇವನಹಳ್ಳಿಯಲ್ಲಿ ಬೈಕ್‌ ಕಳ್ಳ ಅರೆಸ್ಟ್‌

ದ್ವಿಚಕ್ರ ವಾಹನಗಳನ್ನೇ ಕಳವು ಮಾಡುತ್ತಿದ್ದ ಖತರ್ನಾಕ್ ಬೈಕ್ ಕಳ್ಳನ ಬಂಧನವಾಗಿದೆ. ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸರಿಂದ ಚಿಕ್ಕಬಳ್ಳಾಪುರದ ನೆಲಮಾಕನಹಳ್ಳಿ ಗ್ರಾಮದ ಸಾಗರ್ ( 25) ಬಂಧಿತ ಆರೋಪಿ ಆಗಿದ್ದಾನೆ.

ಈತ ಕೊಯಿರಾ ಗ್ರಾಮದ ಮನೋಜ್ ಎಂಬಾತನ‌ ಮನೆ ಮುಂದೆ ನಿಲ್ಲಿಸಿದ್ದ ಆರ್ ಎಕ್ಸ್ ಬೈಕ್ ಕದ್ದು‌ ಎಸ್ಕೇಪ್‌ ಆಗಿದ್ದ. ಈ ಬಗ್ಗೆ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಯ ಮುಂದೆ ಬೈಕ್‌ಗಳ ಕದಿಯುತ್ತಿದ್ದ ಸಾಗರ್‌ನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 4 ಆರ್ ಎಕ್ಸ್ ಬೈಕ್, 2 ಆಕ್ಟಿವ್ ಹೊಂಡಾ ಸೇರಿದಂತೆ 6 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

Road Accident : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸವಾರ ಮೃತಪಟ್ಟರೆ, ಶಿವಮೊಗ್ಗದಲ್ಲಿ ವೃದ್ಧೆಯೊಬ್ಬರು ವಿದ್ಯುತ್‌ ಪ್ರವಹಿಸಿ ಸ್ಥಳದಲ್ಲೇ ಜೀವ ಬಿಟ್ಟಿದ್ದಾರೆ.

VISTARANEWS.COM


on

By

Bike rider in deadly accident Elderly woman dies of electric shock
Koo

ಬೆಂಗಳೂರು: ಬೆಂಗಳೂರಿನಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ (Road Accident) ಬೈಕ್‌ ಸವಾರ ಸ್ಪಾಟ್‌ ಡೆತ್‌ ಆಗಿದ್ದಾನೆ. ಬೆಂಗಳೂರಿನ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ನಲ್ಲೂರು ಹಳ್ಳಿ ಮುಖ್ಯರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂರು ದಿನದ ಹಿಂದೆ ನಡೆದ ಅಪಘಾತ ತಡವಾಗಿ ಬೆಳಕಿಗೆ ಬಂದಿದೆ.

ನಲ್ಲೂರು ಹಳ್ಳಿಯ ನಿವಾಸಿಯಾಗಿದ್ದ 19 ವರ್ಷದ ಯುವಕ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಸ್ಕೂಟರ್‌ನಲ್ಲಿ ವೇಗವಾಗಿ ಬರುತ್ತಿದ್ದ ಯುವಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಗುದ್ದಿದ್ದಾನೆ. ಬಳಿಕ ಕಂಟ್ರೊಲ್ ಕಳೆದುಕೊಂಡ ಸವಾರ ವಾಟರ್ ಟ್ಯಾಂಕರ್ ಚಕ್ರಕ್ಕೆ ಸಿಲುಕಿದ್ದಾನೆ.

ಟ್ಯಾಂಕರ್ ಚಕ್ರ ಹರಿದು ಗಂಭೀರ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಸ್ಥಳೀಯರು ಸೇರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾನೆ. ಘಟನೆ ಸಂಬಂಧ ವೈಟ್ ಫೀಲ್ಡ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

ವಿದ್ಯುತ್‌ ಪ್ರವಹಿಸಿ ವೃದ್ಧೆ ಸಾವು

ಶಿವಮೊಗ್ಗ : ವಿದ್ಯುತ್ ತಗುಲಿ ವೃದ್ಧೆ ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನಪೇಟೆಯ ಮಲ್ಲಾಪುರದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ದೈವಿ. ಭಾನುವಾರ ಬೆಳಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಒದ್ದಾಡಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ರಿಪ್ಪನಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Bike rider in deadly accident Elderly woman dies of electric shock
Bike rider in deadly accident Elderly woman dies of electric shock

ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಲಾರಿ!

ದಾವಣಗೆರೆಯ ಕುರ್ಕಿ ಗ್ರಾಮದ ಮನೆಯೊಂದರ ಒಳಗೆಯೇ ಲಾರಿ ನುಗ್ಗಿದೆ. ಮಧ್ಯರಾತ್ರಿ 12 ಗಂಟೆಗೆ ಬೀರೂರು ಸಮ್ಮಸಗಿ ರಸ್ತೆಯಲ್ಲಿ ಚಲಿಸುತ್ತಿದ್ದ ಗೂಡ್ ಶೆಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದೆ. ಹಾಲುವರ್ತಿ ರಾಮಣ್ಣ ಹಾಗು ಜಯಪ್ಪನ ಕುಟುಂಬ ಸದಸ್ಯರು ಮನೆಯಲ್ಲಿದ್ದ ವೇಳೆ ಲಾರಿ ನುಗ್ಗಿದೆ. ಮನೆಯ ಚಾವಣಿಗೆ ತಾಗಿ ಹಠಾತ್‌ ಲಾರಿ ನಿಂತಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಂಬಾಗಿಲಿಗೆ ಲಾರಿ ಮುಖ ಮಾಡಿ ನಿಂತಿದ್ದರಿಂದ ಮನೆಯಿಂದ ಹೊರಬರಲಾಗದೇ‌ ಒಳಗಿದ್ದವರು ಪರದಾಡಿದರು. ಗ್ರಾಮಸ್ಥರ ನೆರವಿನಿಂದ ಏಣಿ ಮೂಲಕ ಹೊರಬಂದರು. ಲಾರಿ ‌ನುಗ್ಗಿದ ರಭಸಕ್ಕೆ ಮನೆ ಮುಂದೆ ಲೈಟ್ ಕಂಬಗಳು ಜಖಂಗೊಂಡಿದೆ. ರಾಜ್ಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದಾರೆ ಎಂದು ಗ್ರಾಮಸ್ಥರು ಪ್ರತಿಭಟ‌ನೆ ನಡೆಸಿದರು. ಸ್ಥಳಕ್ಕೆ ಹದಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಪರಿಚಿತ ವಾಹನ ಡಿಕ್ಕಿ ಸವಾರ ಸಾವು

ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈರಣ್ಣ (35) ಮೃತ ದುರ್ದೈವಿ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಮಿಡಿಗೇಶಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಂಡ್ಯ

Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Mandya News : ಯುವಕರ ಹುಡುಕಾಟಕ್ಕೆ ವಿದ್ಯಾರ್ಥಿನಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂದು ಗಾಳಿ ಸುದ್ದಿ ಹಬ್ಬಿಸಿದ್ದರು. ಇದರಿಂದ ಊರಿನಲ್ಲಿ ತನ್ನ ಮಾರ್ಯಾದೆ ಹೋಯ್ತು ಅಂತ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

VISTARANEWS.COM


on

By

Girl commits suicide after being fed up with rumours of love
Koo

ಮಂಡ್ಯ: ನಾಲ್ವರು ಯುವಕರಿಂದ ಪ್ರೀತಿ, ಪ್ರೇಮದ ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಮಂಡ್ಯದ (Mandya News) ಹನಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಇಂಪನಾ (14) ಆತ್ಮಹತ್ಯೆ ಮಾಡಿಕೊಂಡವಳು.

ಗಗನ್, ಸಂಜಯ್ ,ಮಹೇಂದ್ರ ಹಾಗೂ ಲೋಹಿತ್ ಎಂಬ ಯುವಕರಿಂದ ಕಿರುಕುಳದ ಆರೋಪ ಕೇಳಿ ಬಂದಿದೆ. ಹನಕೆರೆ ಗ್ರಾಮದ ಗಗನ್ ಮತ್ತು ಸ್ನೇಹಿತರು ಸೇರಿ ಇಂಪನಾ- ಮಹೇಂದ್ರ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಗಾಳಿ ಸುದ್ದಿ ಹಬ್ಬಿಸಿದ್ದರು.

ಅಲ್ಲದೆ ಆಕೆ ಮಾತಾಡುವುದನ್ನು ರೆಕಾರ್ಡ್ ಮಾಡಿಕೊಂಡು ವೈರಲ್ ಮಾಡಿದ್ದರು. ಇದರಿಂದ ಬೇಸತ್ತ ಇಂಪನಾ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದೇ ಗ್ರಾಮದ ಖಾಸಗಿ ಶಾಲೆಯಲ್ಲಿ ಇಂಪನಾ 9ನೇ ತರಗತಿ ಓದುತ್ತಿದ್ದಳು.

Girl commits suicide after being fed up with rumours of love
Girl commits suicide after being fed up with rumours of love

ಒಬ್ಬಳೇ ಮಗಳನ್ನು ಕಳೆದುಕೊಂಡು ಇಂಪನಾ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಗಗನ್ ಸೇರಿ ನಾಲ್ವರು ತನ್ನ ಮಗಳಿಗೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

ಶಿವಮೊಗ್ಗದಲ್ಲಿ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ನರ್ತಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ಎನ್.ಟಿ. ತಿಮ್ಮಪ್ಪ (52) ಆತ್ಮಹತ್ಯೆಗೆ ಶರಣಾದ ರೈತ. ತನ್ನ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ‌ ಶರಣಾಗಿದ್ದಾರೆ. ಸುಮಾರು 6 ಲಕ್ಷ 50 ಸಾವಿರ ಸಾಲ ಪಡೆದಿದ್ದರು. ಬ್ಯಾಂಕ್ ಸೇರಿದಂತೆ ವಿವಿಧ ಸಂಘ ಸಂಸ್ಥೆ ಸಾಲ ಮಾಡಿದ್ದರು. ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲು ಸಿಬ್ಬಂದಿ ಬ್ಯಾರಕ್‌ಗೆ ಹೋಗಿ ಅಂದರೆ ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ದರಂತೆ.

VISTARANEWS.COM


on

By

Do you know when Darshan got royalty in Central Jail
Koo

ಬೆಂಗಳೂರು: ಸೆಂಟ್ರಲ್‌ ಜೈಲಿನಲ್ಲಿ ನಟ ದರ್ಶನ್‌ (Actor Darshan) ಫೋಟೊ ವೈರಲ್‌ ಆಗಿದ್ದೆ ತಡ ಈಗ ಒಂದೊಂದೆ ವಿಚಾರಗಳು ಹೊರಬರುತ್ತಿವೆ. ಇಷ್ಟಕ್ಕೂ ಜೈಲು ಸೇರಿದ್ದ ನಟ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲುಪಾಲಾದ ಮೂರೇ ದಿನ ಸಾಮಾನ್ಯ ಕೈದಿಯಂತಿದ್ದ ದರ್ಶನ್, ಬಳಿಕ ನಾಲ್ಕನೇ ದಿನದಿಂದ ರಾಜಾತಥ್ಯ ಸಿಗುತಿತ್ತಂತೆ. ಇನ್ನು ಜೈಲು ಸಿಬ್ಬಂದಿ ನಿಮ್ಮ ಬ್ಯಾರಕ್‌ಗೆ ತೆರಳಿ ಎಂದು ಸೂಚಿಸುತ್ತಿದ್ದರಂತೆ. ಈ ವೇಳೆ ಫಿಲ್ಮಿ ಸ್ಟೈಲ್‌ನಲ್ಲೇ ದರ್ಶನ್‌ ಆವಾಜ್ ಹಾಕಿ ‘ಬಿಸ್ಕತ್ ಹಾಕಿಲ್ವಾ’ ಸುಮ್ಮನಿರು ಅಂತಿದ್ದರಂತೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಒಂದೊಂದೆ ಸತ್ಯ ಹೊರಗೆ ಬರುತ್ತಿದೆ.

ಬದಲಾದ ಬೆಂಗಳೂರು ಸೆಂಟ್ರೆಲ್‌ ಜೈಲ್‌ ಚಿತ್ರಣ

ಬೆಂಗಳೂರು: ದರ್ಶನ್ ಸಿಗರೇಟ್‌ ಸೇದುವ ಫೋಟೊ ವೈರಲ್ ಆದ ಬಳಿಕ ಪರಪ್ಪನ ಅಗ್ರಹಾರ ಜೈಲಿನ ಚಿತ್ರಣವೇ ಬದಲಾಗಿದೆ. ಒಂದೆಡೆ ಜೈಲು ಸಿಬ್ಬಂದಿ ಪ್ರತಿಭಟಿಸುತ್ತಿದ್ದರೆ, ಮತ್ತೊಂದೆಡೆ ಕೈದಿಗಳಿಂದಲೂ ಧರಣಿ ನಡೆದಿದೆ ಎನ್ನಲಾಗಿದೆ. ನಮಗೆ ಬೀಡಿ, ಸಿಗರೇಟ್ ಸಿಗುತ್ತಿಲ್ಲ. ನಮ್ಗೆ ಇರೋದಕ್ಕೆ ಆಗುತ್ತಿಲ್ಲ ಎಂದು ನಿನ್ನೆ ಶನಿವಾರ ಪ್ರತಿಭಟಿಸಿದ್ದಾರೆ. ಫೋಟೊ ವೈರಲ್ ಬಳಿಕ ಜೈಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಬೀಡಿ, ಸಿಗರೇಟ್ ಸಂಪೂರ್ಣ ಬಂದ್ ಆಗಿದೆ.

ಇದನ್ನೂ ಓದಿ: Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

ಹಿಂಡಲಗಾ ಜೈಲಿನಲ್ಲಿ ಸಿಗರೇಟ್‌ಗಾಗಿ ಕೈದಿಗಳಿಂದಲ್ಲೂ ಡಿಮ್ಯಾಂಡ್‌

ಬೆಂಗಳೂರು ಜೈಲಲ್ಲಿ ದರ್ಶನ್ ಸಿಗರೇಟ್ ಸೇದಿದ ಎಫೆಕ್ಟ್ ಇತರ ಕೈದಿಗಳಿಂದಲೂ ಡಿಮ್ಯಾಂಡ್ ಬಂದಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ವಿಶೇಷ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆದಿದೆ. ಬೀಡಿ, ಸಿಗರೇಟ್, ತಂಬಾಕು ಕೊಡುವವರಗೆ ನಾವು ತಿಂಡಿ ತಿನ್ನಲ್ಲ ಎನ್ನುತ್ತಿದ್ದಂತೆ. ಬೆಳಗಿನ ಉಪಹಾರ ಮಾಡದೆ ಪ್ರೊಟ್ಟೆಸ್ಟ್‌ ಮಾಡುತ್ತಿದ್ದರಂತೆ. ಇದೀಗ ಈ ಬೇಡಿಕೆ ಜೈಲಧಿಕಾರಿಗಳಿಗೆ ತಲೆ ನೋವಾಗಿದೆ. ಸದ್ಯ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಜೈಲಾಧಿಕಾರಿಗಳು ಇದ್ದಾರೆ. ಬೀಡಿ ಸಿಗರೇಟ್ ನೀಡದಿದ್ದರೆ ಮಧ್ಯಾಹ್ನ ಊಟವನ್ನೂ ಮಾಡಲ್ಲ ಎಂದು ಬೆದರಿಕೆ ಹಾಕುತ್ತಿದ್ದರಂತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pot holes
ಬೆಂಗಳೂರು30 mins ago

Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

I will become CM if Siddaramaiah gives permission RV Deshpande
ಮೈಸೂರು2 hours ago

RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

Irani gang active in Belagavi Single women are the target
ಬೆಳಗಾವಿ2 hours ago

Theft Case : ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಆ್ಯಕ್ಟಿವ್! ಒಂಟಿ ಮಹಿಳೆಯರೇ ಟಾರ್ಗೆಟ್‌

Yettinahole project lift work to be inaugurated on September 6 Gowri festival
ಬೆಂಗಳೂರು4 hours ago

Yettinahole Project: ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ; ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ- ಡಿಸಿಎಂ

Rain News
ಮಳೆ4 hours ago

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Bike rider in deadly accident Elderly woman dies of electric shock
ಬೆಂಗಳೂರು5 hours ago

Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

Girl commits suicide after being fed up with rumours of love
ಮಂಡ್ಯ5 hours ago

Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Do you know when Darshan got royalty in Central Jail
ಸಿನಿಮಾ6 hours ago

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor Darshan shifted back to Bengaluru from Ballari
ಬಳ್ಳಾರಿ6 hours ago

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

police Firing
ಕಲಬುರಗಿ7 hours ago

Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 day ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌