Pariksha pe charcha 2023: ಹಾರ್ಡ್​ ವರ್ಕ್​​ ಮುಖ್ಯವೋ? ಸ್ಮಾರ್ಟ್​ ವರ್ಕ್​ ಮುಖ್ಯವೋ?; ಪ್ರಧಾನಿ ಮೋದಿ ಕೊಟ್ಟ ಉತ್ತರ ಹೀಗಿದೆ - Vistara News

ದೇಶ

Pariksha pe charcha 2023: ಹಾರ್ಡ್​ ವರ್ಕ್​​ ಮುಖ್ಯವೋ? ಸ್ಮಾರ್ಟ್​ ವರ್ಕ್​ ಮುಖ್ಯವೋ?; ಪ್ರಧಾನಿ ಮೋದಿ ಕೊಟ್ಟ ಉತ್ತರ ಹೀಗಿದೆ

ಪಾಲಕರು ಮಕ್ಕಳ ಮೇಲೆ ನಿರೀಕ್ಷೆ ಇಡುವುದು ತಪ್ಪಲ್ಲ. ಆದರೆ ಅವರು ತಮ್ಮ ಸಾಮಾಜಿಕ ಗೌರವ, ಘನತೆಗಾಗಿ ಮಕ್ಕಳ ಮೇಲೆ ಒತ್ತಡ ಹೇರುವುದು ಒಳ್ಳೆಯದಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.

VISTARANEWS.COM


on

Pariksha pe charcha 2023 PM Modi reply to question Over hard word and Smartk work
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಕ್ಕಳ ಮೇಲೆ ಯಾವುದೇ ಕಾರಣಕ್ಕೂ ಒತ್ತಡ ಹೇರಬೇಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಲಕರಿಗೆ ಹೇಳಿದರು. ಅವರು ಇಂದು ನವದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ‘ಪರೀಕ್ಷಾ ಪೆ ಚರ್ಚಾ’ (Pariksha pe charcha 2023) ಸಂವಾದದಲ್ಲಿ ಮಾತನಾಡಿದರು. ಬೋರ್ಡ್​ ಪರೀಕ್ಷೆ ಎದುರಿಸಲಿರುವ, ಆಯ್ದ ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರೊಂದಿಗೆ ಚರ್ಚೆ ನಡೆಸಿದ ಅವರು, ಮುಂಬರುವ ಪರೀಕ್ಷೆ ದೃಷ್ಟಿಯಿಂದ ಮಕ್ಕಳು, ಪಾಲಕರು, ಶಿಕ್ಷಕರಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

‘ಪಾಲಕರು ತಮ್ಮ ಮಕ್ಕಳ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಚೆನ್ನಾಗಿ ಓದಲಿ, ಒಳ್ಳೆ ಅಂಕ ತೆಗೆದುಕೊಳ್ಳಲಿ ಎಂದು ಅವರು ನಿರೀಕ್ಷಿಸುವುದು ತಪ್ಪಲ್ಲ. ಆದರೆ ಪಾಲಕರು ಸಮಾಜದಲ್ಲಿ ತಮ್ಮ ಘನತೆ ಕಡಿಮೆಯಾಗಬಾರದು ಎಂಬ ಕಾರಣಕ್ಕಷ್ಟೇ ಮಕ್ಕಳ ಓದಿನ ವಿಚಾರದಲ್ಲಿ ಒತ್ತಡ ಹೇರುವುದು, ಅವರಿಂದ ಹೆಚ್ಚೆಚ್ಚು ಅಂಕ ನಿರೀಕ್ಷೆ ಮಾಡುವುದು ಕಳವಳಕಾರಿ’ ಎಂದು ಹೇಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ‘ಮಕ್ಕಳೂ ಕೂಡ ತಮ್ಮ ಸಾಮರ್ಥ್ಯದ ಬಗ್ಗೆ ಅಪನಂಬಿಕೆ ಇಟ್ಟುಕೊಳ್ಳಬಾರದು. ಹೆಚ್ಚಿನ ಅಂಕ ಗಳಿಕೆ ನನ್ನಿಂದ ಸಾಧ್ಯವಿಲ್ಲ ಎಂದು ಭಾವಿಸಬಾರದು ಎಂದೂ ಹೇಳಿದರು.

ಮಕ್ಕಳಿಗೆ ಓದಿನಲ್ಲಿ ಏಕಾಗ್ರತೆ-ಗಮನ ಹೇಗಿರಬೇಕು ಎಂಬುದಕ್ಕೆ ಕ್ರಿಕೆಟ್​ ಆಟದ ಸಾದೃಶ್ಯ ಕೊಟ್ಟ ಪ್ರಧಾನಿ ಮೋದಿ ‘ಕ್ರಿಕೆಟ್​ ಪಂದ್ಯಾವಳಿ ನಡೆಯುತ್ತಿದ್ದಾಗ, ನೆರೆದಿದ್ದ ಜನರೆಲ್ಲ ದೊಡ್ಡದಾಗಿ ಕೂಗುತ್ತಿರುತ್ತಾರೆ. ತಮ್ಮ ನೆಚ್ಚಿನ ಆಟಗಾರನ ಹೆಸರನ್ನು ಒಂದೇ ಸಮ ಕೂಗುತ್ತಾರೆ. ಆದರೆ ಬ್ಯಾಟ್ಸ್​ಮೆನ್​ ತನ್ನ ಗಮನವನ್ನು ಆ ಕೂಗು, ಗಲಾಟೆಯ ಮೇಲೆ ಕೇಂದ್ರೀಕರಿಸುವುದಿಲ್ಲ. ತನ್ನೆಡೆಗೆ ಬರುತ್ತಿರುವ ಬಾಲ್​ ಮೇಲೆ ಗಮನ ಹರಿಸಿ, ಏಕಾಗ್ರತೆಯಿಂದ ಆಟವಾಡುತ್ತಾನೆ. ಹಾಗೇ ಮಾಡದೆ ಇದ್ದರೆ, ಆತ ಔಟ್​ ಆಗಬಹುದು. ಅದರಂತೆ ವಿದ್ಯಾರ್ಥಿಗಳೂ ಕೂಡ ನಿಮ್ಮ ಓದು-ಬರಹದ ಕಡೆಗೆ ಸಂಪೂರ್ಣ ಗಮನವಹಿಸಬೇಕು. ಪಾಲಕರು ನಿರಂತರವಾಗಿ ಒತ್ತಡ ಹೇರುತ್ತಿದ್ದರೆ, ಅದು ಮಾಡು-ಇದು ಮಾಡು ಎಂದು ನಿರೀಕ್ಷೆಗಳನ್ನೆಲ್ಲ ನಿಮ್ಮ ಮೇಲೆ ಹೇರುತ್ತಿದ್ದರೆ, ಅದರ ಬಗ್ಗೆ ತುಂಬ ತಲೆಕೆಡಿಸಿಕೊಳ್ಳಬೇಡಿ. ಒತ್ತಡಕ್ಕೆ ಒಳಗಾಗಿ ಮನಸು ಹಾಳುಮಾಡಿಕೊಳ್ಳಬೇಡಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಓದಿ-ಪರೀಕ್ಷೆ ಬರೆಯಿರಿ’ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Viral Video: ಪ್ರಧಾನಿ ಮೋದಿಯವರ ಚಿನ್ನದ ಪ್ರತಿಮೆ ನಿರ್ಮಿಸಿದ ಸೂರತ್ ​​​ಆಭರಣ ವ್ಯಾಪಾರಿ; 156 ಗ್ರಾಂ ಬಂಗಾರವನ್ನೇ ಬಳಸಿದ್ದೇಕೆ?

ಪರೀಕ್ಷಾ ಪೆ ಚರ್ಚೆ ವೇಳೆ ವಿದ್ಯಾರ್ಥಿಯೊಬ್ಬ ಪ್ರಧಾನಿ ಮೋದಿ ಬಳಿ ‘ಕಠಿಣ ಶ್ರಮ ವಹಿಸಿ ಕೆಲಸ (Hard Work) ಮಾಡುವುದು ಮುಖ್ಯವೋ? ಕೆಲಸವನ್ನು ಬುದ್ಧವಂತಿಕೆಯಿಂದ (Smart Work) ಮಾಡುವುದು ಮುಖ್ಯವೋ? ಎಂದು ಪ್ರಶ್ನಿಸಿದ. ಅದಕ್ಕೆ ತಮಾಷೆಯಾಗಿಯೇ, ನಗುತ್ತ ಉತ್ತರಿಸಿದ ಪ್ರಧಾನಿ ಮೋದಿ ‘ಕೆಲವು ಜನರು ತುಂಬ ಕಷ್ಟಪಟ್ಟು, ಬುದ್ಧಿವಂತಿಕೆಯಿಂದ ಕೆಲಸ ಮಾಡುತ್ತಾರೆ. ಹಾಗೇ, ಇನ್ನೂ ಕೆಲವರು ಅತ್ಯಂತ ಸ್ಮಾರ್ಟ್​ ಆಗಿ, ಕಷ್ಟಪಟ್ಟುಕೊಂಡು ಕೆಲಸ ಮಾಡುತ್ತಾರೆ’ ಎಂದು ಹೇಳಿದರು. ಆದರೆ ಬಳಿಕ ಅದಕ್ಕೊಂದು ಸ್ಪಷ್ಟ ಉತ್ತರ ನೀಡಿದ ಮೋದಿ ‘ಯಾವಾಗಲೂ ನಾವು ಪರಿಶ್ರಮ ವಹಿಸಿ ಕೆಲಸ ಮಾಡಬೇಕು ಮತ್ತು ಆ ಕೆಲಸವನ್ನು ಬುದ್ಧಿವಂತಿಕೆಯಿಂದಲೇ ಮಾಡಬೇಕು. ಬುದ್ಧಿವಂತಿಕೆ ಉಪಯೋಗಿಸದೆ ಎಷ್ಟೇ ಕಷ್ಟಪಟ್ಟು, ಇಡೀ ದಿನ ಕೆಲಸ ಮಾಡಿದರೂ, ಅದು ಪ್ರಯೋಜನಕ್ಕೆ ಬರುವುದಿಲ್ಲ’ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

Lok Sabha election 2024: ಆಮ್‌ ಆದ್ಮಿ ಪಕ್ಷದ ಜೊತೆ ಪಕ್ಷದ ಮೈತ್ರಿಯಿಂದ ಬೇಸರಗೊಂಡಿರುವ ದಿಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ್‌ ಸಿಂಗ್‌ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ

VISTARANEWS.COM


on

By

Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha election 2024) ಹಿನ್ನೆಲೆ ಆಮ್‌ ಆದ್ಮಿ ಪಕ್ಷದ ಜೊತೆ ಪಕ್ಷ(AAP)ದ ಮೈತ್ರಿಯಿಂದ ಬೇಸರಗೊಂಡಿರುವ ದಿಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ್‌ ಸಿಂಗ್‌ ಲವ್ಲಿ (Arvinder Singh Lovely) ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಈ ಕುರಿತು ಸವಿಸ್ತಾರವಾದ ಪತ್ರ ಬರೆದಿರುವ ಅರವಿಂದ್‌ ಸಿಂಗ್‌ ಲವ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸುವ ಏಕೈಕ ಆಧಾರದ ಮೇಲೆ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಗೆ ದೆಹಲಿ ಕಾಂಗ್ರೆಸ್ ಘಟಕ(Delhi Congress Unit)ವು ವಿರುದ್ಧವಾಗಿತ್ತು. ಅದರ ಹೊರತಾಗಿಯೂ, ದೆಹಲಿಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಪಕ್ಷವು ನಿರ್ಧರಿಸಿತು. ಇದರಿಂದ ತೀವ್ರ ಬೇಸರವಾಗಿದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಶತಾಯ-ಗತಾಯ ಸೋಲಿಸಬೇಕು ಎಂಬ ದೃಷ್ಟಿಯಿಂದ ಪಕ್ಷದದಲ್ಲಿ ವಿರೋಧ ವ್ಯಕ್ತವಾಗಿದ್ದರೂ ಅದನ್ನು ಮೀರಿ ಕಾಂಗ್ರೆಸ್‌ ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿತ್ತು. ಎರಡೂ ಪಕ್ಷಗಳ ನಡುವೆ ನಡುವಿನ ಸೀಟು ಹಂಚಿಕೆ ಮಾತುಕತೆಯು ಮುಕ್ತಾಯಗೊಂಡಿದೆ. ಆಪ್‌ 4 ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಕಾಂಗ್ರೆಸ್‌ 3 ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಒಪ್ಪಂದದ ಪ್ರಕಾರ, ದೆಹಲಿಯ ಪೂರ್ವ, ಚಾಂದಿನಿ ಚೌಕ್‌ ಹಾಗೂ ಈಶಾನ್ಯ ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ. ಇನ್ನು, ನವದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಹಾಗೂ ವಾಯವ್ಯ ಲೋಕಸಭೆ ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಕ್ಷವು ಸ್ಪರ್ಧಿಸಲಿದೆ.

ಇದನ್ನೂ ಓದಿ: Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

2019ರ ಲೋಕಸಭೆ ಚುನಾವಣೆಯಲ್ಲಿ ದೆಹಲಿ ಎಲ್ಲ 7 ಲೋಕಸಭೆ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್‌ ಹಾಗೂ ಆಪ್‌ ಒಂದು ಕ್ಷೇತ್ರದಲ್ಲಿ ಕೂಡ ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ಬಾರಿ ಇಂಡಿಯಾ ಒಕ್ಕೂಟದ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಆಪ್‌ ಪರಸ್ಪರ ಬೆಂಬಲದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದು, ಕೆಲ ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿವೆ ಎಂದು ತಿಳಿದುಬಂದಿದೆ. ಇದರ ಮಧ್ಯೆಯೇ, ಬಿಹಾರ, ಪಂಜಾಬ್‌, ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಒಕ್ಕೂಟ ಛಿದ್ರವಾಗಿದ್ದು, ಆಯಾ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿವೆ.

Continue Reading

ಪ್ರಮುಖ ಸುದ್ದಿ

Girl Saved Mother: ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯ ಜೀವ ಕಾಪಾಡಿತು ಪುತ್ರಿ ಶಾಲೆಯಲ್ಲಿ ಕಲಿತ ಪಾಠ!

ಅಲ್ಲಿನ ಅಭಯಂ 181 ಸಹಾಯವಾಣಿ ಅಧಿಕಾರಿಗಳ ಪ್ರಕಾರ, ಮಣಿಕಟ್ಟು ಸೀಳಿ ಬಿದ್ದಿರುವ ನಂತರ ತಾಯಿಗೆ ತೀವ್ರ ರಕ್ತಸ್ರಾವವಾಗುತ್ತಿದೆ ಎಂದು ಬಾಲಕಿಯೊಬ್ಬಳು ಕರೆ ಮಾಡಿದ್ದಾಳೆ. ತಕ್ಷಣ ಅವರ ಅಲ್ಲಿಗೆ ಹೋಗಿದ್ದಾಗ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಅವರು ಮಹಿಳೆಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ್ದಾರೆ.

VISTARANEWS.COM


on

girl Saved Mother
Koo

ಅಹಮದಾಬಾದ್​​: ಅಪ್ಪನ ದೌರ್ಜನ್ಯಕ್ಕೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತನ್ನ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಸಮಯ ಪ್ರಜ್ಞೆ ಹಾಗೂ ಚಾತುರ್ಯದ (Girl Saved Mother ) ಮೂಲಕ ಬದುಕುಳಿಸಿದ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ. ಅಂದ ಹಾಗೆ ಬಾಲಕಿಗೆ ನೆರವಾಗಿದ್ದು ಆಕೆ ತರಗತಿಯಲ್ಲಿ ಕಲಿತ ಪಾಠ. ಅಂದರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿಗೆ ಕರೆ ಮಾಡಬೇಕು ಎಂಬ ಶಿಕ್ಷಕರ ಹಿತನುಡಿ. ಹಾಗೆಯೇ ಕೈಯ ರಕ್ತನಾಳ ಕತ್ತರಿಸಿಕೊಂಡು ಅಸ್ವಸ್ಥಗೊಂಡು ಬಿದ್ದಿದ್ದ ತಾಯಿಯನ್ನು ನೋಡಿಯೂ ಗಾಬರಿಯಾಗದ ಆಕೆ ಸಹಾಯವಾಣಿಗೆ ಕರೆ ಮಾಡಿ ಆಂಬ್ಯುಲೆನ್ಸ್ ಕರೆಸಿ ಪ್ರಾಣ ಉಳಿಸಿದ್ದಾಳೆ.

ಕಳೆದ ಗುರುವಾರ ರಾತ್ರಿ ಘಟನೆ ನಡೆದಿದೆ ಎಂದು ಗುಜರಾತ್​ನ ಅಭಯಂ 181 ಸಹಾಯವಾಣಿ ಅಧಿಕಾರಿಗಳು ಹೇಳಿದ್ದಾರೆ. ಮಣಿಕಟ್ಟು ಸೀಳಿ ಬಿದ್ದಿರುವ ತಾಯಿಗೆ ತೀವ್ರ ರಕ್ತಸ್ರಾವವಾಗುತ್ತಿದೆ ಎಂದು ಬಾಲಕಿಯೊಬ್ಬಳು ಕರೆ ಅವರಿಗೆ ಕರೆ ಮಾಡಿದ್ದರು ತಕ್ಷಣ ಅವರ ಅಲ್ಲಿಗೆ ಹೋಗಿದ್ದಾಗ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಅವರು ಮಹಿಳೆಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ್ದಾರೆ.

ಆತ್ಮಹತ್ಯೆ ಮಾಡಲು ಮುಂದಾಗಿರುವ ಮಹಿಳೆಯ ಗಂಡ ಅಪರಾಧವೊಂದರಲ್ಲಿ ಜೈಲು ಸೇರಿದ್ದ. ಅಲ್ಲಿಂದ ಬಿಡುಗಡೆಯಾಗಿ ಬಂದ ಬಳಿಕವೂ ಸಣ್ಣ ವಿಷಯಗಳಿಗೆ ಜಗಳವಾಡಲು ಪ್ರಾರಂಭಿಸಿದ್ದ. ಆಗಾಗ್ಗೆ ನಡೆಯುವ ಜಗಳಗಳಿಂದ ಬೇಸತ್ತ ಮಹಿಳೆ ತನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದಳು. ಪುತ್ರಿಯ ಸಮಯೋಚಿತ ಕರೆಯಿಂದ ಅವರೀಗ ಬದುಕಿದ್ದರೆ. ಶಾಲೆಯಲ್ಲಿ ಪಡೆದ ತರಬೇತಿಯನ್ನು ನೆನಪು ಮಾಡಿಕೊಂಡ ಬಾಲಕಿ ನಮ್ಮ ಸಹಾಯವಾಣಿ ಮತ್ತು 108 ಆಂಬ್ಯುಲೆನ್ಸ್ ಸೇವೆಗಳ ತುರ್ತು ಸಂಖ್ಯೆಗಳನ್ನು ನೆನಪಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಲಿಬಿಲಿಗೊಳ್ಳದ ಬಾಲಕಿ

ಸಾಮಾನ್ಯವಾಗಿ ಸಣ್ಣ ಮಕ್ಕಳು ಕಠಿಣ ಪರಿಸ್ಥಿತಿಯಲ್ಲಿ ಹೆಚ್ಚು ಗಲಿಬಿಲಿಗೆ ಒಳಗಾಗುತ್ತಾರೆ. ಅವರಿಗೆ ಮುಂದೇನು ಮಾಡಬೇಕು ಎಂಬ ಯೋಚನೆಯೇ ಇರುವುದಿಲ್ಲ. ಅಲ್ಲದೆ ಪರಿಸ್ಥಿತಿಯನ್ನು ನಿಯಂತ್ರಣ ಮಾಡಲು ಸಾಧ್ಯವಾಗದೇ ಜೋರಾಗಿ ಅಳುವುದಕ್ಕೆ ಆರಂಭಿಸುತ್ತಾರೆ. ಆದರೆ ಈ ಏಳು ವರ್ಷದ ಬಾಲಕಿ ಆ ರೀತಿ ಮಾಡಿಲ್ಲ. ತಾಯಿ ರಕ್ತ ಸಿಕ್ತ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿಯೂ ತಕ್ಷಣವೇ ಸಹಾಯವಾಣಿಗೆ ಕರೆ ಮಾಡಿದ್ದಾಳೆ. ಆಕೆಯ ಕರೆಯಿಂದಾಗಿ ಜೀವವೊಂದು ಉಳಿದಿದೆ.

ಬದುಕಿನ ಪಾಠ ಅಗತ್ಯ

ಆಧುನಿಕ ಜಗತ್ತಿನಲ್ಲಿ ಜನರಿಗೆ ತುರ್ತು ಪರಿಸ್ಥಿತಿಗಳು ಹೆಚ್ಚಾಗಿ ಎದುರಾಗುತ್ತವೆ. ಆದರೆ, ಬಹುತೇಕ ಸಂದರ್ಭದಲ್ಲಿ ಅವುಗಳನ್ನು ನಿರ್ವಹಿಸಲು ಸಾಧ್ಯವಾಗದೇ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತವೆ. ಹೀಗಾಗಿ ತುರ್ತು ಸಂದರ್ಭದಲ್ಲಿ ಪ್ರಾಣ ಉಳಿಸಲು ಅಥವಾ ಆ ಕ್ಷಣದಿಂದ ಬಚಾವಾಗಲು ಏನು ಮಾಡಬೇಕು ಎಂಬ ತರಬೇತಿ ಅಗತ್ಯವಾಗಿದೆ. ಅದರಲ್ಲೂ ಶಾಲಾ ಮಕ್ಕಳಿಗೆ ಈ ನಿಟ್ಟಿನಲ್ಲಿ ತರಬೇತಿ ಕಡ್ಡಾಯ.

ಇದನ್ನೂ ಓದಿ: Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಛಾಟಿತ ನಾಯಕ ಅರೆಸ್ಟ್‌

ಜನಜಂಗುಳಿ ತುಂಬಿರುವ ಪೇಟೆ ಮತ್ತು ಏಕಾಂಗಿಯಾಗಿರುವ ವೇಳೆ ನಾನಾ ಆತಂಕಗಳನ್ನು ಇಂದಿನ ಮಕ್ಕಳು ಎದುರಿಸುತ್ತಾರೆ. ಆದರೆ, ಅದನ್ನು ನಿಭಾಯಿಸಲು ಸಾಧ್ಯವಾಗದೇ ಮಕ್ಕಳು ದುರ್ಘಟನೆಗಳ ಬಲಿಪಶು ಆಗುತ್ತಾರೆ. ಹೀಗಾಗಿ ಶಾಲಾ ಹಂತದಲ್ಲಿಯೇ ಇಂಥ ಸಂದರ್ಭಗಳನ್ನು ನಿಭಾಯಿಸುವ ತಂತ್ರಗಳನ್ನು ಹೇಳಿಕೊಡಬೇಕಾಗುತ್ತದೆ.

ಶಾಲಾ ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಈಗ ಲೈಂಗಿಕ ದೌರ್ಜನ್ಯದ ವಿರುದ್ಧ ಹೇಗೆ ಹೋರಾಡಬೇಕು ಎಂಬ ಪಾಠವನ್ನು ಹೇಳಿಕೊಡಲಾಗುತ್ತದೆ. ಅದು ಬಹುತೇಕ ಸಾಫಲ್ಯ ಕಾಣುತ್ತಿದೆ. ಆದರೆ, ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಕೆಲವು ತಂತ್ರಗಳನ್ನು ಕೆಲವೊಂದು ಶಾಲೆಗಳಲ್ಲಿ ಮಾತ್ರ ಕಲಿಸಲಾಗುತ್ತದೆ. ಇಲ್ಲಿ ಗಂಡು ಹಾಗೂ ಹೆಣ್ಣು ಎಂಬ ಭೇದವಿಲ್ಲದೇ ಎಲ್ಲ ಮಕ್ಕಳಿಗೂ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಪಾಠ ಹೇಳಿಕೊಡಬೇಕಾದ ಅಗತ್ಯವಿದೆ.

ಮೇಲಿನ ಪ್ರಕರಣದಲ್ಲಿ ಬಾಲಕಿಗೆ ಸಹಾಯವಾಣಿಗೆ ಕರೆ ಮಾಡಬೇಕು ಎಂದು ಶಾಲೆಯಲ್ಲಿ ಹೇಳಿಕೊಟ್ಟಿದ್ದ ಕಾರಣ ಆಕೆಯ ತಾಯಿಯ ಪ್ರಾಣ ಉಳಿದಿದೆ. ಒಂದು ವೇಳೆ ಆಕೆ ಅಂಥದ್ದೊಂದು ಪರಿಸ್ಥಿತಿಯನ್ನು ಎದುರಿಸಲು ಸಿದ್ಧಗೊಳ್ಳದೇ ಹೋಗಿದ್ದರೆ ತಬ್ಬಲಿಯಾಗಬೇಕಾಗಿತ್ತು.

Continue Reading

ಪ್ರಮುಖ ಸುದ್ದಿ

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Narendra Modi: ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ.

VISTARANEWS.COM


on

Modi in Karnataka stay in Belagavi tomorrow and Huge gatherings at five places
Koo

ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅಂತೆಯೇ ಮೊದಲು ಬೆಳಗಾಗಿಯಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಮಾತನಾಡಿದ್ದಾರೆ. ಈ ಸಭೆಯ ನೇರ ಪ್ರಸಾರವನ್ನು (Narendra Modi Live) ಇಲ್ಲಿ ವೀಕ್ಷಿಸಿ.

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ದೇಶ

Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

Usman Ghani: ರಾಜಸ್ತಾನದ ಬಾನಸ್ವರಾದಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಪ್ರಧಾನಿ ಮೋದಿಯವರು ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದ್ದ ಉಸ್ಮಾನ್‌ ಘನಿಯನ್ನು ಬಂಧಿಸಲಾಗಿದೆ.

VISTARANEWS.COM


on

By

Koo

ರಾಜಸ್ಥಾನ:ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿ(Usman Ghani)ಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಇತ್ತೀಚೆಗೆ ರಾಜಸ್ತಾನದ ಬಾನಸ್ವರಾದಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಪ್ರಧಾನಿ ಮೋದಿ(Narendra Modi) ಯವರು ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಅವರನ್ನು ಪಕ್ಷದಿಂದ ಉಚ್ಛಾಟನೆ(Expelled) ಗೊಳಿಸಲಾಗಿತ್ತು. ಇದೀಗ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದ ಮುಕ್ತ ಪ್ರಸಾದ್‌ ನಗರ ಪೊಲೀಸ್‌ ಠಾಣಾಧಿಕಾರಿ ಧೀರೇಂದ್ರೆ ಶೆಖಾವತ್‌, ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ದಿನವೇ ಅವರ ಬಂಧನಕ್ಕೆ ನಾವು ತೆರಳಿದ್ದೆವು. ಆದರೆ ಅವರು ದಿಲ್ಲಿಯಲ್ಲಿದ್ದರು. ಶನಿವಾರ ಅವರು ವಾಪಾಸ್ಸಾಗ್ತಿದ್ದಂತೆ ಅವರು ನೇರವಾಗಿ ಠಾಣೆಗೆ ಬಂದು ತಮ್ಮ ಬಂಧನಕ್ಕೆ ಪೊಲೀಸ್‌ ವಾಹನ ಕಳುಹಿಸಲು ನಿಮಗೆಷ್ಟು ಧೈರ್ಯ ಎಂದು ತಗಾದೆ ತೆಗೆದಿದ್ದರು. ನಮಗೆ ಅವರು ಯಾರೆಂಬುದೇ ಗೊತ್ತಿರಲಿಲ್ಲ. ಪೊಲೀಸ್‌ ಠಾಣೆಯ ಎದುರು ತಮ್ಮ ನೂರಾರು ಬೆಂಬಲಿಗರ ಜೊತೆಗೆ ಬಂದಿದ್ದ ಉಸ್ಮಾನ್‌ ಘನಿ, ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದರು. ಪೊಲೀಸ್‌ ಠಾಣೆ ಎದುರು ನಡೆಯುತ್ತಿದ್ದ ಹೈಡ್ರಾಮಾ ತಾರಕಕ್ಕೇರುತ್ತಿದ್ದಂತೆ ನಾವು ಅವರನ್ನು ಬಂಧಿಸಿದ್ದೇವೆ. ಅಲ್ಲದೇ ಸೆಕ್ಷನ್‌ 151 (ಶಾಂತಿ ಕದಲುವ ಯತ್ನ) ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಎದುರು ಅವರನ್ನು ಹಾಜರು ಪಡಿಸುತ್ತೇವೆ ಎಂದು ಮಾಹಿತಿ ಕೊಟ್ಟರು.

ಉಸ್ಮಾನ್‌ ಘನಿ ಹೇಳಿದ್ದೇನು?

ಪತ್ರಕರ್ತರ ಜೊತೆ ಮಾತನಾಡುತ್ತಾ ಮುಸ್ಲಿಮರ ಬಳಿ ಹೋಗಿ ಬಿಜೆಪಿಗೆ ಮತ ನೀಡುವಂತೆ ಕೇಳೋಕೆ ಹೋದರೆ ಅವರು ಪ್ರಧಾನಿ ಮೋದಿ ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗಳ ಕುರಿತು ಕೇಳುತ್ತಾರೆ. ಅವರಿಗೆ ಕೊಡಲು ನನ್ನ ಬಳಿ ಉತ್ತರ ಇಲ್ಲ. ಅಲ್ಲದೇ ರಾಜಸ್ಥಾನದಲ್ಲಿ ಜಾಟ್‌ ಸಮುದಾಯ ಕೂಡ ಬಿಜೆಪಿ ವಿರುದ್ಧ ಕೋಪಗೊಂಡಿದೆ. ಚುರು ಮತ್ತು ಇತರೆ ಲೋಕಸಭಾ ಕ್ಷೇತ್ರಗಳಲ್ಲಿ ಜಾಟ್‌ ಸಮುದಾಯಗಳು ಬಿಜೆಪಿ ವಿರುದ್ಧ ಮತ ಚಲಾಯಿಸಿದೆ. ನನ್ನ ಈ ಹೇಳಿಕೆಗೆ ನನ್ನ ವಿರುದ್ಧ ಕ್ರಮ ಜರುಗಿಸಿದರೂ ತಲೆಗೆಡಿಸಿಕೊಳ್ಳಲ್ಲ ಎಂದು ಅವರು ಹೇಳಿಕೆ ಕೊಟ್ಟಿದ್ದರು.

ಇದನ್ನೂ ಓದಿ: Yogi Adityanath:”ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮುಸ್ಲಿಮರಿಗೆ ಬೀಫ್‌ ಸೇವನೆ ಹಕ್ಕು”- ಮತ್ತೆ ಗುಡುಗಿದ ಯೋಗಿ

ಇತ್ತೀಚೆಗೆ ದೆಹಲಿಯಲ್ಲೂ ಉಸ್ಮಾನ್‌ ಘನಿ ಪಕ್ಷ ವಿರೋಧಿ ಹೇಳಿಕೆ ಕೊಟ್ಟಿದ್ದರು. ಈ ಬಾರಿ ಬಿಜೆಪಿ ರಾಜಸ್ಥಾನದ ೨೫ ಸ್ಥಾನಗಳಲ್ಲಿ ಮೂರು-ನಾಲ್ಕು ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಮುಸ್ಲಿಂರು, ಜಾಟ್‌ ಸಮುದಾಯದ ಜನ ಪ್ರಧಾನಿ ಮೋದಿ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ಉಸ್ಮಾನ್‌ ಘನಿ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಘನಿ ಹೇಳಿಕೆಯಿಂದ ತೀವ್ರ ಮುಜುಗರಕ್ಕೀಡಾಗಿದ್ದ ಬಿಜೆಪಿ ಅವರನ್ನು ಉಚ್ಛಾಟಿಸಿತ್ತು.

Continue Reading
Advertisement
Congress MLA
ಪ್ರಮುಖ ಸುದ್ದಿ11 mins ago

Congress MLA : ಕಾಂಗ್ರೆಸ್​ ಶಾಸಕರಿಗೆ ಘೇರಾವ್ ಕೂಗಿದ ಬಿಜೆಪಿ ಕಾರ್ಯಕರ್ತರು; ಮಾತಿನ ಚಕಮಕಿ

Prajwal Revanna Pen Drive Case Prajwal Revanna accused of sex scandal No interference in SIT probe says Parameshwara
Lok Sabha Election 202426 mins ago

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ರಾಜಕೀಯ38 mins ago

Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

777 Charlie
ಸ್ಯಾಂಡಲ್ ವುಡ್39 mins ago

777 Charlie: ಜಪಾನಿನಲ್ಲಿ `777 ಚಾರ್ಲಿ ಹವಾ’: ವರ್ಲ್ಡ್​​ ಟೂರ್‌ಗೆ ಧರ್ಮ ಹಾಗೂ ಚಾರ್ಲಿ ರೆಡಿ!

Food Poisoning
ಪ್ರಮುಖ ಸುದ್ದಿ49 mins ago

Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ

Manjummel Boys
ಮಾಲಿವುಡ್1 hour ago

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

girl Saved Mother
ಪ್ರಮುಖ ಸುದ್ದಿ1 hour ago

Girl Saved Mother: ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯ ಜೀವ ಕಾಪಾಡಿತು ಪುತ್ರಿ ಶಾಲೆಯಲ್ಲಿ ಕಲಿತ ಪಾಠ!

ವಿದೇಶ2 hours ago

TikTok star: ಇರಾಕ್‌ನಲ್ಲಿ ಗುಂಡಿಕ್ಕಿ ಟಿಕ್‌ಟಾಕ್‌ ಸ್ಟಾರ್‌ನ ಭೀಕರ ಹತ್ಯೆ

Sahil Khan Arrested in Mahadev Betting App Case
ಬಾಲಿವುಡ್2 hours ago

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ2 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ2 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202419 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ24 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌