Viral News : ಮಗನ ಹೆಂಡತಿಯನ್ನೇ ಕದ್ದುಮುಚ್ಚಿ ಮದುವೆಯಾದ 70ರ ಮುದುಕ! - Vistara News

ವೈರಲ್ ನ್ಯೂಸ್

Viral News : ಮಗನ ಹೆಂಡತಿಯನ್ನೇ ಕದ್ದುಮುಚ್ಚಿ ಮದುವೆಯಾದ 70ರ ಮುದುಕ!

70 ವರ್ಷದ ವ್ಯಕ್ತಿಯೊಬ್ಬ ತನ್ನ ಮಗನ ಹೆಂಡತಿಯನ್ನೇ ಮದುವೆಯಾಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral News) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: 20-30 ವರ್ಷಗಳ ವಯಸ್ಸಿನ ಅಂತರವಿರುವವರೂ ಮದುವೆಯಾಗುವುದು ಆಗಾಗ (Viral News) ಸುದ್ದಿಯಾಗುತ್ತಿರುತ್ತದೆ. ಇದೀಗ ಉತ್ತರ ಪ್ರದೇಶದಲ್ಲಿ 70 ವರ್ಷದ ವ್ಯಕ್ತಿಯೊಬ್ಬ 28 ವರ್ಷದ ಮಹಿಳೆಯನ್ನು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಅಂದ ಹಾಗೆ ಆಕೆ ಬೇರೆ ಯಾರೋ ಅಲ್ಲ, ಆ ವ್ಯಕ್ತಿಯ ಮಗನ ಹೆಂಡತಿಯೇ!

ಗೋರಖ್‌ಪುರ ಜಿಲ್ಲೆಯ ಛಪಿಯಾ ಉಮರೊ ಗ್ರಾಮದಲ್ಲಿ ಇಂತಹ ಘಟನೆ ವರದಿಯಾಗಿದೆ. ಬರ್ಹಲ್‌ಗಂಜ್ ಪೋಲೀಸ್ ಠಾಣೆಯಲ್ಲಿ ಚೌಕಿದಾರ ಆಗಿ ಕೆಲಸ ಮಾಡುವ ಕೈಲಾಶ್‌ ಯಾದವ್‌ ಪತ್ನಿ 12 ವರ್ಷಗಳ ಹಿಂದೆಯೇ ಸಾವನ್ನಪ್ಪಿದ್ದಾರೆ. ಆತನಿಗೆ ಮೂವರು ಗಂಡು ಮಕ್ಕಳಿದ್ದು, ಮೂವರಿಗೂ ಮದುವೆಯಾಗಿದೆ. ಕೈಲಾಶ್‌ನ ಮೂರನೇ ಮಗ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ: Viral Video: ಉಜ್ಜಯಿನಿ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಇ ರಿಕ್ಷಾ ಸೀಟ್​​ಗಾಗಿ ಬಡಿದಾಡಿಕೊಂಡ ಭಕ್ತರು
ಕೈಲಾಶ್‌ನ ಮಗ ಸತ್ತಾಗಿನಿಂದ ಆತನ ಹೆಂಡತಿ ಒಬ್ಬಂಟಿಯಾಗಿ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಳು. ಇತ್ತೀಚೆಗೆ ಕೈಲಾಶ್‌ ಆಕೆಯನ್ನು ಮದುವೆಯಾಗಿದ್ದು, ಇಬ್ಬರೂ ಒಂದೇ ಮನೆಯಲ್ಲಿ ಸಂಸಾರ ನಡೆಸಿದ್ದಾರೆ. ಅದರಲ್ಲೂ ಊರಿನ ಯಾರೊಬ್ಬರಿಗೂ ತಿಳಿಯದಂತೆ ಕದ್ದುಮುಚ್ಚಿ ವಿವಾಹವಾಗಿದ್ದಾರೆ. ಮದುವೆಯಾದ ಕೆಲ ದಿನಗಳಲ್ಲೇ ಆ ಮಹಿಳೆ ಕೈಲಾಶ್‌ನಿಂದ ಬೇರಾಗಿದ್ದು, ತೀರಿಕೊಂಡಿರುವ ತನ್ನ ಮೊದಲನೇ ಗಂಡನ ಮನೆಗೆ ತೆರಳಿ ಅಲ್ಲಿಯೇ ವಾಸ ಮಾಡುತ್ತಿದ್ದಾಳೆ. ಈ ಜೋಡಿಯ ಗೌಪ್ಯ ವಿವಾಹದ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ ಆಗಿದೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಐಪಿಎಲ್ 2024

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

IPL 2024: IPL 2024: ಹೈದರಾಬಾದ್‌ನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಇದರ ಮಧ್ಯೆಯೇ, ಹೈದರಾಬಾದ್‌ ಫ್ಯಾನ್ಸ್‌ಗೆ ಆರ್‌ಸಿಬಿ ಫ್ಯಾನ್ಸ್‌ ತಿರುಗೇಟು ನೀಡಿದ್ದಾರೆ.

VISTARANEWS.COM


on

IPL 2024
Koo

ಹೈದರಾಬಾದ್:‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2024) ಎಂದರೆ, ಅದು ಸ್ಟೇಡಿಯಂನಲ್ಲಿ ಕೇವಲ ಆಟಗಾರರ ನಡುವಿನ ಕಾಳಗ ಅಲ್ಲ. ಮೈದಾನದಲ್ಲಿ ಪಂದ್ಯ ಕುತೂಹಲ ಹಂತ ತಲುಪಿದಾಗ, ಯಾವುದೇ ತಂಡ ಸೋತಾಗ ಎದುರಾಳಿ ತಂಡದ ಅಭಿಮಾನಿಗಳು ಕೂಡ ತಿರುಗೇಟು ನೀಡುತ್ತಾರೆ. ಅದರಲ್ಲೂ, ಆರ್‌ಸಿಬಿ ಅಭಿಮಾನಿಗಳ ಅಬ್ಬರ ಮೈದಾನದಲ್ಲೂ ಅಥವಾ ಹೊರಗೂ ಜೋರಾಗಿರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು (RCB Fans) ಎಸ್‌ಆರ್‌ಎಚ್‌ ಅಭಿಮಾನಿಗಳ (SRH Fans) ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡಿದ್ದಾರೆ.

ಹೌದು, ಪ್ರಸಕ್ತ ಆವೃತ್ತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಎಸ್‌ಆರ್‌ಎಚ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಸೋಲನುಭವಿಸಿದ್ದಾಗ ಎಸ್‌ಆರ್‌ಎಚ್‌ ಅಭಿಮಾನಿಗಳು ಸುಮ್ಮನಿರಿ, ಬಾಯಿಮುಚ್ಚಿ ಎಂಬ ರೀತಿಯಲ್ಲಿ ಸನ್ನೆ ಮಾಡಿದ್ದರು. ಇದು ಸಹಜವಾಗಿಯೇ ಆರ್‌ಸಿಬಿ ಅಭಿಮಾನಿಗಳನ್ನು ಕೆರಳಿಸಿತ್ತು. ಆದರೆ, ಗುರುವಾರ (ಏಪ್ರಿಲ್‌ 25) ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. ಇದಾದ ಬಳಿಕ ಆರ್‌ಸಿಬಿ ಅಭಿಮಾನಿಗಳು ಕೂಡ ಗಪ್‌ ಚುಪ್‌ ಎಂಬ ಸನ್ನೆ ಮಾಡುವ ಮೂಲಕ ಎಸ್‌ಆರ್‌ಎಚ್‌ ಅಭಿಮಾನಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಈ ಗೆಲುವಿನೊಂದಿಗೆ ಆರ್​ಸಿಬಿಗೆ ಒಟ್ಟು ನಾಲ್ಕು ಅಂಕಗಳು ದೊರಕಿದವು.

ಕೊಹ್ಲಿ, ಪಾಟೀದಾರ್ ಅರ್ಧ ಶತಕ

ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿಯ ಪ್ರದರ್ಶನವೇನೂ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್​ ವಿರಾಟ್ ಕೊಹ್ಲಿ ಮತ್ತೆ ಸ್ಟ್ರೈಕ್​ ರೇಟ್​ ಟೀಕೆಯನ್ನು ಮರೆತು 43 ಎಸೆತಕ್ಕೆ 51 ರನ್ ಬಾರಿಸಿದರು. ಅದಕ್ಕೆ ಅವರು ಟೀಕೆಯನ್ನೂ ಎದುರಿಸಿದರು. ಆದರೆ, ರಜತ್ ಪಾಟೀದಾರ್​ 20 ಎಸೆತಕ್ಕೆ 50 ರನ್ ಬಾರಿಸಿ ತಂಡಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾದರು. ಕ್ಯಾಮೆರೂನ್ ಗ್ರೀನ್​ 37 ರನ್ ಬಾರಿಸಿದರೆ ಫಾಫ್​​ ಡು ಪ್ಲೆಸಿಸ್​ 25 ಕೊಡುಗೆ ಕೊಟ್ಟರು. ಹೀಗಾಗಿ ಪೇಚಾಡಿ 200 ರನ್​ಗಳ ಗಡಿ ದಾಟಿತು. ಬೌಲಿಂಗ್‌ನಲ್ಲಿ ಪರಾಕ್ರಮ ತೋರಿದ ಆರ್‌ಸಿಬಿ ಬೌಲರ್‌ಗಳು ತಂಡಕ್ಕೆ 35 ರನ್‌ಗಳ ಗೆಲುವು ತಂದುಕೊಟ್ಟರು.

ಇದನ್ನೂ ಓದಿ: Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Continue Reading

ವೈರಲ್ ನ್ಯೂಸ್

Viral News: ವಾಟರ್‌ ಪ್ಯೂರಿಫೈಯರ್‌ನಿಂದ ನೀರು ಕುಡಿದ ಬುದ್ಧಿವಂತ ಮಂಗ; ವಿಡಿಯೊ ನೀವೂ ನೋಡಿ

Viral News: ದಿನದಿಂದ ದಿನಕ್ಕೆ ವಾತಾವರಣದ ಉಷ್ಣತೆ ಹೆಚ್ಚಾಗುತ್ತಿದೆ. ಜತೆಗೆ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ಈ ಬಿಸಿ ಪ್ರಾಣಿಗಳಿಗೂ ತಟ್ಟಿದೆ. ದಾಹದಿಂದ ಕುಡಿಯುವ ನೀರನ್ನು ಅರಸಿಕೊಂಡು ಬಂದ ಮಂಗವೊಂದು ಮನೆಯೊಂದಕ್ಕೆ ನುಗ್ಗಿ ಅಡುಗೆ ಮನೆಗೆ ತೆರಳಿದೆ. ಅಲ್ಲಿ ವಾಟರ್‌ ಪ್ಯೂರಿಫೈಯರ್‌ನಿಂದ ನೀರು ಕುಡಿಯಲು ಪ್ರಯತ್ನಿಸುತ್ತಿರುವ ದೃಶ್ಯ ಸೆರೆಯಾಗಿದೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ. ಕೋತಿಯ ಬುದ್ಧಿವಂತಿಕೆಗೆ ಅನೇಕರು ತಲೆ ತೂಗಿದ್ದಾರೆ.

VISTARANEWS.COM


on

Viral News
Koo

ಬೆಂಗಳೂರು: ಬಾಯಾರಿದ ಕಾಗೆಯೊಂದು ಬುದ್ಧಿವಂತಿಕೆಯಿಂದ ಪಾತ್ರೆಯ ತಳ ಭಾಗದಲ್ಲಿದ್ದ ನೀರು ಕುಡಿದ ಕಥೆಯನ್ನು ನಾವೆಲ್ಲ ಕೇಳಿದ್ದೇವೆ. ಕಾಗೆ ಚಿಕ್ಕ ಚಿಕ್ಕ ಕಲ್ಲುಗಳನ್ನು ತಂದು ಹಾಕಿ ನೀರು ಪಾತ್ರೆಯಿಂದ ಮೇಲೆ ಬರುವಂತೆ ಮಾಡಿ ದಾಹ ನೀಗಿಸಿಕೊಂಡಿತ್ತು ಎನ್ನುವುದು ಕಥೆ. ಬಾಲ್ಯದಲ್ಲಿ ಶಾಲೆಯಲ್ಲಿ, ಅಜ್ಜಿಯ ಬಳಿ ಈ ಕಥೆ ಕೇಳಿ ನಾವೆಲ್ಲ ಕಾಗೆಯ ಬುದ್ಧಿವಂತಿಕೆಗೆ ತಲೆ ಆಡಿಸಿದ್ದೇವೆ. ಆದರೆ ಅದು ಕಥೆ. ನಿಜವಾಗಿಯೂ ಹೀಗೆ ನಡೆಯಬಹುದಾ? ಎಂಬ ಪ್ರಶ್ನೆಗೆ ಹೌದು ಎನ್ನುತ್ತದೆ ಈ ದೃಶ್ಯ. ಆದರೆ ಇಲ್ಲಿ ಪಾತ್ರ ಕೊಂಚ ಬದಲಾಗಿದೆ. ಕಾಗೆಯ ಬದಲು ಮಂಗವೊಂದು ಬಂದಿದೆ. ಏನಿದು ಘಟನೆ? ನಿಮ್ಮ ಪ್ರಶ್ನೆಗೆ ಈ ವೈರಲ್‌ ವಿಡಿಯೊದಲ್ಲಿದೆ (Viral News) ಉತ್ತರ. ಅದೇನು ಎನ್ನುವುದನ್ನು ತಿಳಿದುಕೊಳ್ಳಲು ಮುಂದೆ ಓದಿ.

ಹೇಳಿ ಕೇಳಿ ಇದು ಬಿರು ಬೇಸಗೆಯ ಕಾಲ. ವಾತಾವಣದ ತಾಪಮಾನ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಜತೆಗೆ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಯಾಕೋ ವರುಣ ದೇವ ಬೆಂಗಳೂರಿನ ಮೇಲೆ ಮುನಿದಿದ್ದಾನೆ. ಹೀಗಾಗಿ ಹನಿ ನೀರಿಗಾಗಿ ಪರದಾಡುವ ಸ್ಥಿತಿ ಎದುರಾಗಿದೆ. ನಮಗೇ ಹೀಗಾದರೆ ಪಾಪ ಪ್ರಾಣಿ-ಪಕ್ಷಿಗಳ ಮೂಕ ವೇದನೆ ಯಾರಿಗೂ ಬೇಡ. ಈ ಮಧ್ಯೆ ದಾಹದಿಂದ ಕಂಗೆಟ್ಟ ಮಂಗವೊಂದು ಪ್ರದರ್ಶಿಸಿದ ಚಾಣಾಕ್ಷ ನಡೆ ನೆಟ್ಟಿಗರ ಗಮನ ಸೆಳೆದಿದೆ. ಮನೆಯೊಂದರ ಅಡುಗೆ ಕೋಣೆಗೆ ನುಗ್ಗಿದ ಮಂಗವೊಂದು ವಾಟರ್‌ ಪ್ಯೂರಿಫೈಯರ್‌ನಿಂದ ನೀರು ಕುಡಿಯಲು ಪ್ರಯತ್ನಿಸಿದೆ. ಸದ್ಯ ಇದರ ಸಾಹಸದ ವಿಡಿಯೊ ನೆಟ್ಟಿಗರ ಗಮನ ಸೆಳೆದಿದೆ.

ಬೆಂಗಳೂರಿನ ಅಕ್ಷತ್ ಎನ್ನುವವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಅಪರೂಪದ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಸಾಮಾನ್ಯವಾಗಿ ಮಂಗಗಳನ್ನು ಬುದ್ಧಿವಂತ ಪ್ರಾಣಿ ಎಂದೇ ಕರೆಯಲಾಗುತ್ತದೆ. ಪ್ರವಾಸಿ ತಾಣ, ದೇವಸ್ಥಾನದ ಪರಿಸರ ಮುಂತಾದೆಡೆ ಇರುವ ಕೋತಿಗಳು ಪ್ರವಾಸಿಗರ ಬಾಟಲಿ ಕಸಿದು ಮುಚ್ಚಳ ತೆರೆದು ನೀರು, ಜ್ಯೂಸ್‌ ಕುಡಿಯುವುದನ್ನು ನೋಡಿದ್ದೇವೆ. ಆದರೆ ಇಲ್ಲಿ ಅದಕ್ಕಿಂತ ಭಿನ್ನವಾಗಿ ವಾಟರ್‌ ಪ್ಯೂರಿಫೈಯರ್‌ನಿಂದ ನೀರು ಕುಡಿಯಲು ಪ್ರಯತ್ನಿಸುತ್ತಿರುವುದು ಕಂಡು ಬಂದಿದೆ.

ವಿಡಿಯೊದಲ್ಲಿ ಏನಿದೆ?

ನೀರು ಹುಡುಕಿಕೊಂಡು ಕಿಟಕಿ ಮೂಲಕ ಅಡುಗೆ ಕೋಣೆಗೆ ಮಂಗವೊಂದು ಬಂದಿತ್ತು. ಬಳಿಕ ಅದು ನೇರ ವಾಟರ್‌ ಪ್ಯೂರಿಫೈಯರ್‌ ಬಳಿಗೆ ತೆರಳಿತು. ಅದರ ಕೆಳಗೆ ಕುಳಿತು ನಳ‍್ಳಿಗೆ ಬಾಯಿ ಇಟ್ಟಿತು. ನೀರು ಬರದೆ ಇದ್ದಾಗ ಆನ್‌ ಮಾಡಲು ಪ್ರಯತ್ನಿಸಿತು. ಈ ದೃಶ್ಯವನ್ನು ಮನೆಯವರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ತನ್ನ ಸರದಿಗಾಗಿ ನಿರೀಕ್ಷೆಯಿಂದ ಕಿಟಕಿಯಲ್ಲಿ ಕಾಯುತ್ತ ಕುಳಿತ ಇನ್ನೊಂದು ಮಂಗವನ್ನೂ ವಿಡಿಯೊದಲ್ಲಿ ಕಾಣಬಹುದು. ಸದ್ಯ ಈ ವಿಡಿಯೊ ನೋಡಿದವರ ಹೃದಯ ತುಂಬಿ ಬಂದಿದೆ. ನೀರಿಗಾಗಿ ಮಂಗ ಪಡುತ್ತಿರುವ ಕಷ್ಟ ನೋಡಿ ಅನೇಕರು ಮರುಗಿದ್ದಾರೆ.

ಇದನ್ನೂ ಓದಿ: Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

ʼʼಕೋತಿಗಳಿಗೆ ಬಾಯಾರಿಕೆ: ನೀರಿಗಾಗಿ ಅಡುಗೆ ಮನೆಯ ಕಿಟಕಿಗಳ ಮೂಲಕ ಮಂಗಗಳು ಲಗ್ಗೆ ಇಡುತ್ತಿವೆ. ಬೆಂಗಳೂರು ನೀರಿನ ಬಿಕ್ಕಟ್ಟು ಮನುಷ್ಯರಿಗಿಂತ ಪ್ರಾಣಿಗಳಿಗೆ ಹೆಚ್ಚು ಹೊಡೆತ ನೀಡಿದೆ. ಪ್ರಾಣಿ-ಪಕ್ಷಿಗಳಿಗೆ ಸಹಾಯ ಮಾಡಲು ನೀರನ್ನು ಸಂರಕ್ಷಿಸೋಣ” ಎಂಬ ಕ್ಯಾಪ್ಶನ್‌ ನೀಡಿ ವಿಡಿಯೊ ಶೇರ್‌ ಮಾಡಲಾಗಿದೆ. ಸದ್ಯ ಈ ಪೋಸ್ಟ್‌ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ.

Continue Reading

ವೈರಲ್ ನ್ಯೂಸ್

Viral Video: ಮಕ್ಕಳ ಮುಗ್ಧ ನಗುವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಶಿಕ್ಷಕಿ ಏನು ಮಾಡಿದ್ದಾರೆ ನೋಡಿ…

Viral Video: ಮಕ್ಕಳ ಮುಗ್ದ ನಗು ಯಾರಿಗೆ ಇಷ್ಟವಾಗಲ್ಲ ಹೇಳಿ. ಆ ನಗುವನ್ನು ಮೊಬೈಲ್ ಕೆಮರಾದಲ್ಲಿ ಸೆರೆ ಹಿಡಿಯಲು ತಮಿಳುನಾಡಿನ ಶಿಕ್ಷಕಿಯೊಬ್ಬರು ಮಾಡಿದ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಹಾಗಿದ್ದರೆ ಆ ಟೀಚರ್ ಏನು ಮಾಡಿದ್ದಾರೆ ಎಂಬುದನ್ನು ನೀವು ನೋಡಿ.

VISTARANEWS.COM


on

By

Viral Video
Koo

ಸೇಲಂ: ಮಕ್ಕಳ ಮುಗ್ಧ ನಗುವನ್ನು ಸೆರೆ ಹಿಡಿಯಲು ಶಿಕ್ಷಕಿಯೊಬ್ಬರು (Teacher’s) ಮಾಡಿದ ಪ್ರಯತ್ನದ ವಿಡಿಯೊವೊಂದು (Viral Video) ಸಾಮಾಜಿಕ ಜಾಲತಾಣದಲ್ಲಿ (Social media) ವೈರಲ್ ಆಗಿದೆ. ಶಿಕ್ಷಕಿಯ ಕಾರ್ಯಕ್ಕೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ಕೇಳಿ ಬಂದಿದೆ. ತಮಿಳುನಾಡಿನ (Tamilnadu) ಮಾಂಟೆಸ್ಸರಿ ಶಾಲೆಯ (Montessori school) ಶಿಕ್ಷಕಿಯೊಬ್ಬರು ತಮ್ಮ ತರಗತಿಯ ಮಕ್ಕಳ ವಿಡಿಯೊವನ್ನು ವಿಶಿಷ್ಟ ರೀತಿಯಲ್ಲಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸರಳ ಮತ್ತು ಸ್ಪರ್ಶದ ಶೀರ್ಷಿಕೆಯೊಂದಿಗೆ ಹಂಚಿಕೊಂಡಿರುವ ವಿಡಿಯೊದಲ್ಲಿ “ಈ ಮುದ್ದಾದ ಸ್ಮೈಲ್‌ಗಳಿಗಾಗಿ ಮಾತ್ರ” ಎಂದು ಹೇಳಲಾಗಿದೆ. ವಿಡಿಯೊದಲ್ಲಿ ಸಣ್ಣ ಮೆಟ್ಟಿಲುಗಳ ಮೇಲೆ ಪುಟ್ಟಪುಟ್ಟ ಮಕ್ಕಳು ಮತ್ತು ಶಿಕ್ಷಕರು ಕುಳಿತುಕೊಂಡಿರುತ್ತಾರೆ. ಈ ಅಮೂಲ್ಯ ಕ್ಷಣವನ್ನು ಸೆರೆಹಿಡಿಯಲು ಮತ್ತೊಬ್ಬ ಶಿಕ್ಷಕಿ ಬಳಸಿದ ಚತುರ ವಿಧಾನವೇ ಈ ವಿಡಿಯೊವನ್ನು ಮತ್ತಷ್ಟು ವಿಶೇಷಗೊಳಿಸಿದೆ.

ಸಾಂಪ್ರದಾಯಿಕ ವಿಧಾನದ ಬದಲಿಗೆ ಶಿಕ್ಷಕಿ ನೆಲದ ಮೇಲೆ ಮಲಗುತ್ತಾರೆ. ಇನ್ನೊಬ್ಬ ಶಿಕ್ಷಕಿ ಅವರನ್ನು ಎಳೆಯುತ್ತಾರೆ. ಇದನ್ನು ನೋಡಿ ಮಕ್ಕಳು ಸಂತೋಷದಿಂದ ನಗುತ್ತಾರೆ. ಮಕ್ಕಳ ಮುಗ್ದ ನಗುವನ್ನು ಸೆರೆ ಹಿಡಿಯಲು ಶಿಕ್ಷಕಿ ಸ್ವತಃ ಕ್ಯಾಮೆರಾ ಮೆನ್‌ನ ಕೆಲಸ ಮಾಡಿರುವುದು ಭಾರೀ ಶ್ಲಾಘನೆಗೆ ಕಾರಣವಾಗಿದೆ.

ಇದನ್ನೂ ಓದಿ: Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

ಕೆಲವು ದಿನಗಳ ಹಿಂದೆ ಈ ವಿಡಿಯೊವನ್ನು ಪೋಸ್ಟ್ ಮಾಡಿದ್ದು, ಅಂದಿನಿಂದ ಸುಮಾರು 19.2 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಸಾಕಷ್ಟು ಮಂದಿ ಪ್ರೀತಿ ತುಂಬಿದ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಾರೆ.

ನೆಟ್ಟಿಗರೊಬ್ಬರು, ಶಿಕ್ಷಕರಿಗೆ ಹ್ಯಾಟ್ಸ್ ಆಫ್. ಮಕ್ಕಳ ನಗುವಿಗಾಗಿ ಮಾಡಿರುವ ಒಂದು ಸೆಕೆಂಡಿನ ಈ ವಿಡಿಯೊ ತುಂಬಾ ಸುಂದರವಾಗಿದೆ. ಶಿಕ್ಷಕರನ್ನು ನೋಡಿದ ಮಕ್ಕಳ ನಗು ಈ ವಿಡಿಯೊವನ್ನು ಮತ್ತಷ್ಟು ಸುಂದರಗೊಳಿಸಿದೆ ಎಂದು ಹೇಳಿದ್ದಾರೆ.


ಶೂಟಿಂಗ್ ಮಾಡುತ್ತಿರುವ ಮಹಿಳೆ ನಿಜವಾಗಿಯೂ ಶಿಕ್ಷಕಿಯೇ? ಹೌದಾದರೆ ನೀವೊಬ್ಬ ಸ್ವೀಟ್ ಟೀಚರ್ ಎಂದು ಮತ್ತೊಬ್ಬರು ಹೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಶಿಕ್ಷಕಿ, ಹೌದು, ನಾನೇ. ತುಂಬಾ ಧನ್ಯವಾದಗಳು ಎಂದು ಹೇಳಿದ್ದಾರೆ.
ಮತ್ತೊಬ್ಬರು ಕಾಮೆಂಟ್ ಮಾಡಿ, ನಾನು ಅಂತಹ ಶಿಕ್ಷಕರನ್ನು ಎಲ್ಲಿ ಪಡೆಯಬಹುದು ಎಂದು ಹೇಳಿದ್ದಾರೆ. ವರ್ಷದ ಅತ್ಯುತ್ತಮ ಶಿಕ್ಷಕ ಎಂದು ಇನ್ನೊಬ್ಬರು ಹೇಳಿದ್ದಾರೆ.

ಶಿಕ್ಷಕಿ ತಮಿಳುನಾಡಿನ ಸೇಲಂ ಮೂಲದವರಾಗಿದ್ದು, ವೃಕ್ಷ ಮಾಂಟೆಸ್ಸರಿ ಇಂಟರ್‌ನ್ಯಾಶನಲ್‌ನಲ್ಲಿ ಬೋಧಿಸುತ್ತಿದ್ದಾರೆ. ಅವರು ನಿಯಮಿತವಾಗಿ ತಮ್ಮ ವೈಯಕ್ತಿಕ ಇನ್ ಸ್ಟಾ ಗ್ರಾಮ್ ಮತ್ತು ಫೇಸ್ ಬುಕ್ ಪುಟಗಳಲ್ಲಿ ವಿವಿಧ ಮೆಹೆಂದಿ ವಿನ್ಯಾಸಗಳನ್ನು ಚಿತ್ರಿಸುತ್ತಿರುವ ವಿಡಿಯೊಗಳನ್ನು ಹಂಚಿಕೊಳ್ಳುತ್ತಾರೆ.

Continue Reading

ವೈರಲ್ ನ್ಯೂಸ್

Viral Video: ಸ್ಕೂಟರ್‌ನಲ್ಲೇ ಆನ್‌ಲೈನ್‌ ಮೀಟಿಂಗ್‌ ನಡೆಸಿದ ಮಹಿಳೆ; ಇದು ವರ್ಕ್‌ ಫ್ರಮ್‌ ಟ್ರಾಫಿಕ್‌ ಬ್ರೋ!

Viral Video: ಬೆಂಗಳೂರು ಟ್ರಾಫಿಕ್‌ ಎಂಬ ಹೆಸರು ಕೇಳಿದರೆ ಸಾಕು ಹಲವರ ಕುತೂಹಲ ಗರಿಗೆದರುತ್ತದೆ. ಯಾಕೆಂದರೆ ಬೆಂಗಳೂರು ಟ್ರಾಫಿಕ್‌ನಲ್ಲಿ ಹಲವು ಆಸಕ್ತಿದಾಯಕ ಸಂಗತಿಗಳು ಜರಗುತ್ತವೆ. ಒಂದಲ್ಲ ಒಂದು ವಿಶಿಷ್ಟ ಘಟನೆಗೆ ಬೆಂಗಳೂರು ಟ್ರಾಫಿಕ್‌ ಸಾಕ್ಷಿಯಾಗುತ್ತದೆ. ಇದೂ ಕೂಡ ಅಂತಹದ್ದೆ ಆಸಕ್ತಿದಾಯಕ ಘಟನೆ. ಟ್ರಾಫಿಕ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಸ್ಕೂಟರ್‌ ಸವಾರ ಮಹಿಳೆಯೊಬ್ಬರು ಆನ್‌ಲೈನ್‌ ಮೀಟಿಂಗ್‌ ಅಟೆಂಡ್‌ ಆಗುತ್ತಾರೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Viral Video
Koo

ಬೆಂಗಳೂರು: ಸಿಲಿಕಾನ್‌ ಸಿಟಿ, ಗಾರ್ಡನ್‌ ಸಿಟಿ, ಐಟಿ ಸಿಟಿ ಎಂದೆಲ್ಲ ಕರೆಯಿಸಿಕೊಳ್ಳುವ ಬೆಂಗಳೂರು ಬಹುತೇಕ ಎಲ್ಲರಿಗೂ ಪ್ರಿಯ. ಹೀಗೆ ಎಲ್ಲರ ನೆಚ್ಚಿನ ನಮ್ಮ ಬೆಂಗಳೂರು ಬಗ್ಗೆ ಹಲವರ ಆಕ್ಷೇಪ ಇರುವುದು ಟ್ರಾಫಿಕ್‌ ವಿಚಾರದಲ್ಲಿ. ಟ್ರಾಫಿಕ್‌ ಸಮಸ್ಯೆ ಬೆಂಗಳೂರಿಗರನ್ನು ಹೆಚ್ಚಿನ ಸಂದರ್ಭಗಳಲ್ಲಿ ಹೈರಾಣಾಗಿಸುತ್ತದೆ (Bengaluru Traffic). ಬೆಂಗಳೂರಿನ ಈ ಟ್ರಾಫಿಕ್‌ ಸಮಸ್ಯೆಗೆ ಪರಿಹಾರವೇ ಇಲ್ಲ ಎನ್ನುವಂತಾಗಿದೆ. ಬೆಂಗಳೂರು ಟ್ರಾಫಿಕ್‌ ಬಗ್ಗೆ ತಹೇವಾರಿ ಕಥೆ ಹುಟ್ಟಿಕೊಳ್ಳುತ್ತದೆ. ಟ್ರಾಫಿಕ್‌ಗೆ ಸಿಲುಕಿ ಅನೇಕ ವಿಶಿಷ್ಟ ಸಂಗತಿ ಜರಗುತ್ತವೆ. ಅದಕ್ಕೆ ತಕ್ಕ ಉದಾಹರಣೆ ಎನ್ನುವಂತಿದೆ ಈ ವೈರಲ್‌ ವಿಡಿಯೊ (Viral Video). ಅಷ್ಟಕ್ಕೂ ಈ ವಿಡಿಯೊದಲ್ಲಿ ಏನಿದೆ? ಇಲ್ಲಿದೆ ವಿವರ.

ಟ್ರಾಫಿಕ್‌ನಲ್ಲಿ ಸಿಕ್ಕಿಹಾಕಿಕೊಂಡ ಸ್ಕೂಟರ್‌ ಚಲಾಯಿಸುತ್ತಿದ್ದ ಮಹಿಳೆಯೊಬ್ಬರು ಅಲ್ಲೇ ಆನ್‌ಲೈನ್‌ ಮೀಟಿಂಗ್‌ನಲ್ಲಿ ಭಾಗಿಯಾಗುತ್ತಾರೆ. ʼವರ್ಕ್‌ ಫ್ರಮ್‌ ಟ್ರಾಫಿಕ್‌ʼ ಎನ್ನುವ ಶೀರ್ಷಿಕೆಯಡಿ ವಿಡಿಯೊವನ್ನು ಶೇರ್‌ ಮಾಡಲಾಗಿದೆ. ಬೆಂಗಳೂರಿನಲ್ಲಿ ಇದು ಸಾಮಾನ್ಯ ಎಂದೂ ಬರೆಯಲಾಗಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೊ ನೆಟ್ಟಿಗರ ಗಮನ ಸೆಳೆದಿದೆ.

ವಿಡಿಯೊದಲ್ಲಿ ಏನಿದೆ?

ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ಮಹಿಳೆ ಸ್ಕೂಟರ್‌ ಅನ್ನು ಒಂದು ಬದಿಗೆ ನಿಲ್ಲಿಸಿ ಆನ್‌ಲೈನ್‌ ಮೀಟಿಂಗ್‌ಗೆ ಹಾಜರಾಗುತ್ತಾರೆ. ಕ್ಯಾಮೆರಾವನ್ನು ಮಹಿಳೆಯ ಮೊಬೈಲ್‌ಗೆ ಝೂಮ್‌ ಮಾಡಿದಾಗ ಅವರು ಮೀಟಿಂಗ್‌ನಲ್ಲಿ ಭಾಗವಹಿಸಿರುವುದು ಸ್ಪಷ್ಟವಾಗುತ್ತದೆ. ಜತೆಗೆ ವಿಡಿಯೊ ಹಲವು ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್‌ ಜಾಮ್‌ ಆಗಿರುವುದನ್ನು ತೋರಿಸುತ್ತದೆ. ಮಹಿಳೆಗೆ ಕರ್ತವ್ಯ ಪ್ರಜ್ಞೆಗೆ ಹಲವರು ಶಬ್ಬಾಶ್‌ಗಿರಿ ತಿಳಿಸಿದ್ದಾರೆ.

ಆಧುನಿಕ ಯುಗದಲ್ಲಿ ವೈಯಕ್ತಿಕ ಬದುಕು ಮತ್ತು ಉದ್ಯೋಗವನ್ನು ಸಮತೋಲನಗೊಳಿಸಲೇಬೇಕಾದ ಅನಿವಾರ್ಯತೆಯನ್ನು ಇದು ಒತ್ತಿ ಹೇಳುತ್ತದೆ. ಜತೆಗೆ ಡಿಜಿಟಲ್‌ ಫ್ಲಾಟ್‌ಫಾರ್ಮ್‌ಗಳ ಮೇಲೆ ಹೆಚ್ಚುತ್ತಿರುವ ಅವಲಂಬನೆಯನ್ನೂ ಇದು ಪ್ರತಿನಿಧಿಸುತ್ತದೆ.

ಸ್ಕೂಟರ್‌ ರೈಡಿಂಗ್‌ ಮಾಡ್ತಾ ಲ್ಯಾಪ್‌ಟಾಪ್‌ನಲ್ಲಿ ವಿಡಿಯೊ ಕಾಲ್‌

ಈ ರೀತಿಯ ಘಟನೆ ಹಿಂದೆಯೂ ನಡೆದಿತ್ತು. ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಸ್ಕೂಟರ್‌ ಓಡಿಸುತ್ತ ಲ್ಯಾಪ್‌ಟಾಪ್‌ನಲ್ಲಿ ವಿಡಿಯೊ ಕಾಲ್‌ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿತ್ತು. ಟೆಕ್ಕಿಯಂತೆ ಕಾಣುವ ವ್ಯಕ್ತಿಯೊಬ್ಬರು ಬೆಂಗಳೂರಿನ ರಸ್ತೆಯಲ್ಲಿ ಸ್ಕೂಟರ್‌ ಓಡಿಸುತ್ತಿದ್ದಾರೆ. ಅವರ ಮುಂದುಗಡೆ ಲ್ಯಾಪ್‌ಟಾಪ್‌ ಓಪನ್‌ ಆಗಿದ್ದು, ವಿಡಿಯೊ ಕಾನ್ಫರೆನ್ಸ್‌ ನಡೆಯುತ್ತಿದೆ. ಅದರಲ್ಲಿ ಈ ವ್ಯಕ್ತಿಯೂ ಭಾಗಿಯಾಗಿದ್ದಾರೆ ಎಂಬುದು ಗೊತ್ತಾಗುತ್ತದೆ. ಬೆಂಗಳೂರಿನ ವಾಹನನಿಬಿಡ ರಸ್ತೆಯಲ್ಲಿ ಸ್ಕೂಟರ್‌ ಚಲಾವಣೆಯನ್ನೂ ಕಚೇರಿ ಕೆಲಸವನ್ನೂ ಬ್ಯಾಲೆನ್ಸ್‌ ಮಾಡುತ್ತಿರುವ ಈ ವ್ಯಕ್ತಿಯ ಚಾಕಚಕ್ಯತೆ ಹಲವರಲ್ಲಿ ಬೆರಗು ಮೂಡಿಸಿತ್ತು. ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಉಲ್ಲಾಸದ, ಟೀಕೆಯ, ವಿನೋದದ ಪ್ರತಿಕ್ರಿಯೆಗಳನ್ನು ಹುಟ್ಟು ಹಾಕಿತ್ತು. ಕೆಲವು ಬಳಕೆದಾರರು ರಸ್ತೆ ಸುರಕ್ಷತೆ ಮತ್ತು ಕೆಲಸದ ಒತ್ತಡದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Bengaluru Traffic: ಟ್ರಾಫಿಕ್‌ ಚಕ್ರವ್ಯೂಹಕ್ಕೆ ಸಿಲುಕಿ 12 ಕಿ.ಮೀ ನಡೆದು ಮನೆ ತಲುಪಿದ ವ್ಯಕ್ತಿ!

ಅದಕ್ಕೂ ಹಿಂದೆ ಆನ್‌ಲೈನ್‌ ಫುಡ್‌ ಡೆಲಿವರಿ ಮಾಡುವವರು ಬೆಂಗಳೂರಿನ ಟ್ರಾಫಿಕ್‌ನಲ್ಲೇ ಆರ್ಡರ್‌ ಮಾಡಿದ ವ್ಯಕ್ತಿಗೆ ಆಹಾರ ವಿತರಿಸಿ ಸುದ್ದಿಯಾಗಿದ್ದರು. ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿಕೊಂಡಿದ್ದ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಿಶಿವತ್ಸ್‌ ಡೊಮಿನೋಸ್‌ನಿಂದ ಆಹಾರ ಆರ್ಡರ್‌ ಮಾಡಿದ್ದರು. ಅವರ ಲೈವ್‌ ಲೊಕೇಷನ್‌ ಟ್ರ್ಯಾಕ್‌ ಮಾಡಿದ ಫುಡ್‌ ಡೆಲಿವರಿ ಏಜೆಂಟ್‌ಗಳು ಕಾರಿನ ಬಳಿಗೇ ಬಂದು ಡೆಲಿವರಿ ಮಾಡಿದ್ದರು. ರಿಶಿವತ್ಸ್‌ ಟ್ರಾಫಿಕ್‌ ಜಾಮ್‌ನಲ್ಲಿ ಸಿಕ್ಕಿ ಹಾಕಿಕೊಂಡಾಗ ಡೊಮಿನೋಸ್‌ನ ಏಜೆಂಟ್‌ಗಳಿಬ್ಬರು ಸ್ಕೂಟರ್‌ನಲ್ಲಿ ಆಗಮಿಸಿದ್ದರು. ಬಳಿಕ ಅವರು ತಮ್ಮ ವಾಹನವನ್ನು ರಸ್ತೆ ಬದಿ ನಿಲ್ಲಿ ಕಾರಿನ ಬಳಿಗೆ ಬಂದು ಆರ್ಡರ್‌ ನೀಡಿದ್ದರು. ಈ ದೃಶ್ಯ ವೈರಲ್‌ ಆಗಿತ್ತು.

Continue Reading
Advertisement
Lok Sabha Election 2024 Ganesh vote by que prakash raj Cast His Vote
Lok Sabha Election 202429 mins ago

Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

IPL 2024
ಐಪಿಎಲ್ 202434 mins ago

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

ರಾಜಕೀಯ35 mins ago

Lok sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರೋ ಅತ್ಯಂತ ಸಿರಿವಂತ, ಬಡ ಅಭ್ಯರ್ಥಿಗಳು ಯಾರ್ಯಾರು ಗೊತ್ತಾ?

Kiran Raj Met Jon Abraham
ಸ್ಯಾಂಡಲ್ ವುಡ್58 mins ago

Kiran Raj : ʻ777 ಚಾರ್ಲಿʼ ನಿರ್ದೇಶಕ ಬಾಲಿವುಡ್‌ ನಟ ಜಾನ್ ಅಬ್ರಹಾಂ ಭೇಟಿ ಮಾಡಿದ್ದೇಕೆ?

Tech Mahindra
ದೇಶ58 mins ago

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Pune Police 60 Hours Operation; Drugs worth more than Rs 1300 crore seized
ಕ್ರೈಂ1 hour ago

Physical Abuse: ಹಿಟಾಚಿ ಕೆಳಗೇ 7 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಪಿಶಾಚಿ

Lok Sabha Election 2024 sandalwood celebs where do cast their votes
ರಾಜಕೀಯ1 hour ago

Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

China Road
ದೇಶ2 hours ago

China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

Lok sabha election 2024
ದೇಶ2 hours ago

Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

Crime Scene
ಕ್ರೈಂ2 hours ago

UDR Case: ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ5 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ18 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ18 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ21 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202423 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು4 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌