ವಿಸ್ತಾರ ಅಂಕಣ : ಅಭಿವೃದ್ಧಿಗೆ ನಮ್ಮದೇ ಮಾದರಿಯತ್ತ ನೋಡಲು ಮಡಿವಂತಿಕೆ ಏಕೆ? - Vistara News

ಅಂಕಣ

ವಿಸ್ತಾರ ಅಂಕಣ : ಅಭಿವೃದ್ಧಿಗೆ ನಮ್ಮದೇ ಮಾದರಿಯತ್ತ ನೋಡಲು ಮಡಿವಂತಿಕೆ ಏಕೆ?

ನನಗೆ ಯಾವುದೋ ಪಕ್ಷ ಬಿಟ್ಟಿಯಾಗಿ ಏನನ್ನೋ ಕೊಡುತ್ತದೆ ಎಂದರೆ ಅದು ನನ್ನ ಅಭಿವೃದ್ಧಿಯೇ? ಅಥವಾ ನನ್ನ ಮಕ್ಕಳಿಗೆ ಕೆಲಸ ಕೊಟ್ಟರೆ ಅಭಿವೃದ್ಧಿಯೇ? ಎಂದು ಆಲೋಚಿಸುವ ಸಂಯಮವನ್ನು ಸಮಾಜವೇ ಬೆಳೆಸಿಕೊಳ್ಳಬೇಕಿದೆ. ಅಭಿವೃದ್ಧಿಗೆ ಭಾರತೀಯ ಮಾದರಿಗಳನ್ನು ಇನ್ನಷ್ಟು ಅಧ್ಯಯನ ನಡೆಸುವ, ವಿಕಸಿತಗೊಳಿಸುವ ಕಾರ್ಯವನ್ನು ಮಾಡಬೇಕಿದೆ.

VISTARANEWS.COM


on

development vistara column
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Column @ Hariprakash Konemane
Vistara Column @ Hariprakash Konemane

ಅಭಿವೃದ್ಧಿ ಎಂದ ಕೂಡಲೆ ಅನೇಕರ ಕಿವಿಗಳು ನಿಮಿರುತ್ತವೆ. ಅದಕ್ಕೆ ಅನೇಕ ಕಾರಣಗಳಿವೆ. ಸಾಮಾನ್ಯ ಜನರು ತಮ್ಮ ಜೀವನ ಹಸನಾಗುತ್ತದೆ ಎಂಬ ಬೆರಗುಗಣ್ಣಿನಿಂದ ನೋಡುತ್ತಾರೆ. ಇಷ್ಟು ದಿನ ಕಳೆದ ಕಷ್ಟದ ದಿನಗಳು ಇನ್ನು ಮುಂದೆ ಸ್ವಲ್ಪಮಟ್ಟಿಗಾದರೂ ಇಲ್ಲವಾಗುತ್ತವೆ ಎಂದು ಭಾವಿಸುತ್ತಾರೆ. ನಮ್ಮ ಊರಿಗೊಂದು ಉತ್ತಮ ರಸ್ತೆಯಾದರೆ ದಿನನಿತ್ಯ ವ್ಯಾಪಾರಕ್ಕೆ, ಉದ್ಯೋಗಕ್ಕೆ ಸರಾಗವಾಗಿ ಹೋಗಿಬರಬಹುದು. ಅನಾರೋಗ್ಯದ ಸಂದರ್ಭದಲ್ಲಿ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯಲು ಸಲೀಸಾಗುತ್ತದೆ. ನಮ್ಮೂರಿನ ಶಾಲೆಗೆ ಆಗಮಿಸಲು ಶಿಕ್ಷಕರು ಹಿಂದೇಟು ಹಾಕುವುದಿಲ್ಲ… ಹೀಗೆ ಹತ್ತಾರು ಕನಸುಗಳು ಚಿಗುರುತ್ತವೆ.

ಆದರೆ ಇನ್ನೊಂದು ಕಡೆ ಹಾಗಿರುವುದಿಲ್ಲ. ಅಭಿವೃದ್ಧಿ ಎಂದ ಕೂಡಲೆ ತಮ್ಮ ರಿಯಲ್ ಎಸ್ಟೇಟ್ ಕಂಪನಿಗೆ ಲಾಭವಾಗುತ್ತದೆ, ತಮ್ಮ ಗುತ್ತಿಗೆ ಕಂಪನಿಗೆ ಕೆಲಸ ಸಿಗುತ್ತದೆ, ಇದರಿಂದ ತಮಗೆ ಇನ್ನಷ್ಟು ಹಣ ಲಭಿಸುತ್ತದೆ ಎಂಬ ಲೆಕ್ಕಾಚಾರ ಮಾಡುವವರೂ ಇರುತ್ತಾರೆ. ಅಭಿವೃದ್ಧಿಯನ್ನು ಒಂದು ಸಹಜ ಪ್ರಕ್ರಿಯೆಯಾಗಿ ನೋಡಿದರೆ ಇದು ತಪ್ಪಲ್ಲ. ಆದರೆ ಹಾಗೆ ಸಹಜವಾಗಿ ಇದು ಆಗುತ್ತಿಲ್ಲ.

ಒಂದು ಕಾಲದಲ್ಲಿ ಇಡೀ ದೇಶದ ಜನಕ್ಕೆ ಮೆಟ್ರೊ ರೈಲಿನ ಕನಸನ್ನು ಬಿತ್ತಲಾಯಿತು. ಆಂಧ್ರಪ್ರದೇಶದ ವಿಜಯವಾಡ ಹಾಗೂ ವಿಶಾಖಪಟ್ಟಣಂನಲ್ಲಿ ಮೆಟ್ರೊ ಪ್ರಸ್ತಾಪನೆ, ಯೋಜನೆ ಜಾರಿಯಲ್ಲಿದೆ. ಈ ಹಿಂದೆ ಸ್ನೇಹಿತರೊಬ್ಬರ ಜತೆಗೆ ಮಾತನಾಡುವಾಗ, ತಿರುಪತಿಯಲ್ಲೂ ಮೆಟ್ರೊ ರೈಲು ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಹೊಂದಿದೆ ಎಂದರು. ವಿಶಾಖಪಟ್ಟಣಂ ಹಾಗೂ ವಿಜಯವಾಡ ಉದ್ಯಮ ನಗರಗಳಾಗಿ ಬೆಳೆದಿವೆ. ನಗರೀಕರಣದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ, ಅಲ್ಲಿಗೆ ಮೆಟ್ರೊ ಮಾಡುವುದು ಸರಿ. ತಿರುಪತಿಗೂ ಮೆಟ್ರೊ ಅವಶ್ಯಕತೆ ಇದೆಯೇ? ಅಲ್ಲಿನ ಆರ್ಥಿಕತೆಗೆ ಈ ದೊಡ್ಡ ಮಟ್ಟದ ಹೂಡಿಕೆಯ ‘ಬಿಳಿಯಾನೆʼಯನ್ನು ಸಾಕಲು ಶಕ್ತಿ ಇದೆಯೇ? ಎಂದು ಕುತೂಹಲಕ್ಕೆ ಕೇಳಿದೆ. ಅದಕ್ಕೆ ಆ ಸ್ನೇಹಿತರು ತುಸು ಅಸಮಾಧಾನಗೊಂಡವರಂತೆ, ಹಾಗಾದರೆ ತಿರುಪತಿಯ ಜನರಿಗೆ ಅಭಿವೃದ್ಧಿಯ ಫಲ ಸಿಗಬಾರದೆ? ದೊಡ್ಡ ದೊಡ್ಡ ನಗರದ ಜನರಿಗೆ ಮಾತ್ರ ಸಿಗುತ್ತಿರುವ ಅಂತಾರಾಷ್ಟ್ರೀಯ ಮಟ್ಟದ ಸಂಚಾರಿ ವ್ಯವಸ್ಥೆಯು ತಿರುಪತಿಗೂ ಸಿಗುವುದರಲ್ಲಿ ತಪ್ಪೇನು? ಎನ್ನುತ್ತಾ ಮಾತನಾಡತೊಡಗಿದರು.

ಹೀಗೆ, ಅಭಿವೃದ್ಧಿ ಹೆಸರಿಗೆ ಕೆಲವು ಯೋಜನೆಗಳು ಸೇರಿಕೊಂಡುಬಿಟ್ಟಿವೆ. ಅವುಗಳನ್ನು ಪ್ರಶ್ನೆ ಮಾಡಿದ ಕೂಡಲೆ ಅಭಿವೃದ್ಧಿ ವಿರೋಧಿ ಎಂಬ ಹಣೆಪಟ್ಟಿಯನ್ನು ಕಟ್ಟಲಾಗುತ್ತದೆ. ನಿಜವಾಗಿಯೂ ನಮ್ಮ ಊರಿಗೆ ಮೆಟ್ರೊ ಬೇಕೆ, ನೂರು ಅಡಿ ರಸ್ತೆಯ ಅಗತ್ಯವಿದೆಯೇ? ಈ ದೊಡ್ಡ ಯೋಜನೆಗಳಿಂದ ಸಣ್ಣ ನಗರದ ಸಣ್ಣ ವ್ಯಾಪಾರಿಗಳು ನೆಲಕಚ್ಚುತ್ತಾರೆ. ದೊಡ್ಡ ಮಾಲ್‌ಗಳು, ಶೋರೂಂಳು ತಲೆಯೆತ್ತುತ್ತವೆ. ಭಾರತದ ವ್ಯಾಪಾರ ಜಗತ್ತಿನ ವಿಕೇಂದ್ರೀಕರಣ ನಾಶವಾಗಿ ಏಕಸ್ವಾಮ್ಯತೆ ಮೂಡುತ್ತದೆ ಎಂದು ಯಾರಾದರೂ ತಜ್ಞರು ಹೇಳಿದರೆ ಅವರೂ ಅಭಿವೃದ್ಧಿ ವಿರೋಧಿಗಳೆಂದು ಬಿಂಬಿಸಲ್ಪಡುತ್ತಾರೆ.

development
development

ಸಾರ್ವಜನಿಕ ಆರೋಗ್ಯದ ದೊಡ್ಡ ಬೆದರಿಕೆಗಳಲ್ಲಿ ತಂಬಾಕು ಸೇವನೆಯೂ ಒಂದು. ಇದು ವಿಶ್ವದಾದ್ಯಂತ ವರ್ಷಕ್ಕೆ 80 ಲಕ್ಷಕ್ಕೂ ಹೆಚ್ಚೂ ಜನರನ್ನು ಕೊಲ್ಲುತ್ತಿದೆ. ಪ್ರತ್ಯಕ್ಷ ಧೂಮಪಾನ ಮಾಡುವುದರಿಂದ ಹೆಚ್ಚಿನ ಜನರು ಸಾವಿಗೀಡಾಗುತ್ತಿದ್ದಾರೆ. ಆದರೆ ಧೂಮಪಾನ ಮಾಡದೆ, ಸ್ವಚ್ಛ ಜೀವನಶೈಲಿ ರೂಪಿಸಿಕೊಂಡಿರುವವರೂ ಪರೋಕ್ಷ ಧೂಮಪಾನಕ್ಕೆ ಬಲಿಯಾಗುತ್ತಿದ್ದಾರೆ. ಯಾವುದೇ ಧೂಮಪಾನದ ದುಶ್ಚಟ ಇಲ್ಲದ 12 ಲಕ್ಷ ಜನರು ವರ್ಷಕ್ಕೆ ಸಾಯುತ್ತಿದ್ದಾರೆ. ವಿಶ್ವಾದಾದ್ಯಂತ ಇರುವ ನೂರು ಕೋಟಿಗೂ ಹೆಚ್ಚಿನ ಧೂಮಪಾನಿಗಳಲ್ಲಿ ಸುಮಾರು 80%ರಷ್ಟು ಜನರು ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ವಾಸಿಸುತ್ತಿದ್ದಾರೆ. ಇದರಲ್ಲಿ ಭಾರತವೂ ಸೇರಿದೆ. ಇಲ್ಲಿ ತಂಬಾಕು ಸಂಬಂಧಿತ ಕಾಯಿಲೆ ಮತ್ತು ಸಾವಿನ ಪ್ರಮಾಣ ಹೆಚ್ಚಾಗಿದೆ. ಮನೆಯ ದೈನಂದಿನ ಆಹಾರ ಮತ್ತು ಮೂಲಭೂತ ಅಗತ್ಯಗಳಿಗೆ ವೆಚ್ಚಗಳನ್ನು ಮಾಡುವ ಬದಲಾಗಿ ತಂಬಾಕಿಗೆ ಖರ್ಚು ಮಾಡುವ ಮೂಲಕ ತಂಬಾಕು ಬಳಕೆಯು ಬಡತನಕ್ಕೆ ಕಾರಣವಾಗಿದೆ ಎಂದು ಅಂತಾರಾಷ್ಟ್ರೀಯ ವರದಿಗಳು ಹೇಳುತ್ತವೆ.

ಸರ್ಕಾರದ ವತಿಯಿಂದ ಧೂಮಪಾನ ತಡೆಗೆ ತಂಡಗಳನ್ನು, ಸಮಿತಿಗಳನ್ನು ರಚಿಸಲಾಗಿದೆ. ಈ ರೀತಿ ಸಮಿಯಲ್ಲಿರುವ ಸದಸ್ಯರ ಕ್ರಿಯಾಶೀಲತೆಯಿಂದಾಗಿ ಮೈಸೂರು ಜಿಲ್ಲೆಯ ನಗುವಿನಹಳ್ಳಿ ಗ್ರಾಮವನ್ನು ತಂಬಾಕು ಮಾರಾಟ ಮುಕ್ತ ಗ್ರಾಮ ಎಂದು ಘೋಷಣೆ ಮಾಡಲಾಗಿದೆ. ಸುಮಾರು ಎರಡೂವರೆ ಸಾವಿರ ಜನರಿರುವ ಈ ಗ್ರಾಮದ ಅಂಗಡಿಗಳಲ್ಲಿ ಸಿಗರೇಟ್, ಬೀಡಿ ಸೇರಿ ಯಾವುದೇ ತಂಬಾಕು ಉತ್ಪನ್ನವನ್ನು ಮಾರಾಟ ಮಾಡುವುದಿಲ್ಲ. ಜತೆಗೆ ಪ್ರತಿ ಅಂಗಡಿಯಲ್ಲೂ ತಂಬಾಕು ಸೇವನೆಯಿಂದ ಆಗುವ ದುಶ್ಚಟಗಳ ಮಾಹಿತಿ ಅಳವಡಿಸಲಾಗಿದೆ. ಇದೇ ರೀತಿ ಮಂಡ್ಯ ಜಿಲ್ಲೆ, ಉಡುಪಿ ಜಿಲ್ಲೆಗಳಲ್ಲೂ ತಂಬಾಕು ಮಾರಾಟ ಮುಕ್ತ ಗ್ರಾಮಗಳನ್ನು ಘೋಷಣೆ ಮಾಡಲಾಗಿದೆ. ಹಾಗೆಂದು ಈ ಗ್ರಾಮಗಳಲ್ಲಿರುವ ಯಾರೂ ತಂಬಾಕು ಸೇವನೆ ಮಾಡುವುದಿಲ್ಲ ಎಂದಲ್ಲ. ಮೊದಲ ಹಂತದಲ್ಲಿ ಮಾರಾಟವನ್ನು ನಿಲ್ಲಿಸಲಾಗಿದೆ. ಹೊಸದಾಗಿ ಸೇವನೆ ಮಾಡುವವರ ಸಂಖ್ಯೆ ಇದರಿಂದ ಗಣನೀಯವಾಗಿ ತಗ್ಗುತ್ತದೆ. ಗ್ರಾಮದಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳ ಮೂಲಕ, ಈಗಾಗಲೆ ಸೇವಿಸುತ್ತಿರುವವರನ್ನು ವಿಮುಕ್ತರಾಗಿಸುವ ಕೆಲಸ ನಡೆಯುತ್ತದೆ ಎಂದು ಅಲ್ಲಿನವರು ಹೇಳುತ್ತಾರೆ. ಇದೇ ರೀತಿ ಭಾರತದ ಗ್ರಾಮಗಳು ತಂಬಾಕು ಮುಕ್ತವಾದರೆ ಅದು ಅಭಿವೃದ್ಧಿ ಅಲ್ಲವೇ?

ನಮ್ಮ ಸರ್ಕಾರಗಳು ರೂಪಿಸಿರುವ ಅಭಿವೃದ್ಧಿ ಎನ್ನುವ ಜಾಲದಲ್ಲಿ ಈ ವಿಚಾರ ಸೇರುವುದೇ ಇಲ್ಲ. ಜಿಲ್ಲಾಧಿಕಾರಿಗಳೇನಾದರೂ ತಂಬಾಕು ಮುಕ್ತ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿದರೆ ಅದಕ್ಕೆ ರಾಜಕೀಯ ಬಾಸ್‌ಗಳ ಬೆಂಬಲ ಸಿಗುತ್ತದೆಯೇ? ನಗರದಲ್ಲಿ ಆಗಬೇಕಿರುವ ಫ್ಲೈ ಓವರ್, ರಸ್ತೆ ಅಗಲ ಮಾಡುವಿಕೆ, ಹೊಸ ಲೇಔಟ್‌ಗಳಿಗೆ ಒಪ್ಪಿಗೆ ಪಡೆಯುವಂತಹ ʼಅಭಿವೃದ್ಧಿʼ ಕಾರ್ಯಗಳ ನಡುವೆ ಇಂತಹದ್ದಕ್ಕೆ ಜಿಲ್ಲಾಧಿಕಾರಿ ತೊಡಗಿಕೊಳ್ಳಲು ಅವಕಾಶ ನೀಡಲಾಗುತ್ತದೆಯೇ?

ಇದನ್ನೂ ಓದಿ: ವಿಸ್ತಾರ ಅಂಕಣ | ರಾಜಕಾರಣಿಗಳು ನಮಗೆ ಹೇಳುತ್ತಿರುವ ʼಅಭಿವೃದ್ಧಿʼ, ನಿಜವಾಗಿಯೂ ಸಮಾಜದ ʼಅಧೋಗತಿʼ

ಇದಕ್ಕಾಗಿಯೇ, ಭಾರತದಲ್ಲಿ ಅಭಿವೃದ್ಧಿ ಮಾದರಿಗಳನ್ನು ಪ್ರಾಚೀನ ಕಾಲದಲ್ಲೇ ತಿಳಿಸಲಾಗಿದೆ. ಅದಕ್ಕೆ, ʼಅಭಿವೃದ್ಧಿʼ ಎಂಬ ಲೇಬಲ್ ಕೊಟ್ಟಿರಲಿಲ್ಲ ಅಷ್ಟೆ. ಧರ್ಮ-ಅರ್ಥ-ಕಾಮ-ಮೋಕ್ಷಗಳು ನಮಗೆ ಅಭಿವೃದ್ಧಿ ಮಾದರಿಯಂತೆ ಕಾಣುವುದೇ ಇಲ್ಲ. ಇದು ಅಧ್ಯಾತ್ಮದ ವಿಚಾರ ಎಂದು ಪಕ್ಕಕ್ಕೆ ಇಡಲಾಗುತ್ತದೆ. ಅದರಲ್ಲಿ ಅರ್ಥವನ್ನು ಮಾತ್ರ ಪಡೆದುಕೊಳ್ಳಲಾಗುತ್ತದೆ. ಉಳಿದ ಮೂರಕ್ಕೂ, ಸರ್ಕಾರಕ್ಕೂ ಸಂಬಂಧವಿಲ್ಲ ಎನ್ನಲಾಗುತ್ತದೆ. ಅದೇ ರೀತಿ, ʼಸರ್ವೇ ಭವಂತು ಸುಖಿನಃʼ ಎಂದು ಹೇಳುವ ಭಾರತೀಯ ಚಿಂತನೆಯಲ್ಲಿ ಎಲ್ಲವನ್ನೂ ಒಳಗೊಳ್ಳಲಾಗಿದೆ. ಸರ್ವೇ ಎಂದರೆ ಕೇವಲ ಮನುಷ್ಯನದಲ್ಲ. ಪ್ರಾಣಿ ಪಕ್ಷಿಗಳು, ಕ್ರಿಮಿ ಕೀಟಗಳೂ ಸೇರಿವೆ. ಪ್ರಕೃತಿಯ ಯಾವುದೂ ನಿರುಪಯುಕ್ತವಲ್ಲ. ಅದಕ್ಕೆ ಅದರದ್ದೇ ಆದ ಸ್ಥಾನವಿದೆ, ಕೆಲಸವಿದೆ. ಒಂದು ಕೊಂಡಿ ಕಳಚಿದರೂ ಮತ್ತೊಂದರ ಮೇಲೆ ಪರಿಣಾಮ ಬೀರುವುದು ನಿಶ್ಚಿತ.

development
development

ಈ ರೀತಿ ಭಾರತೀಯ ತತ್ವ ಚಿಂತನೆಯ ಆಧಾರದಲ್ಲಿ ಡಾ. ಭಜರಂಗಲಾಲ್ ಗುಪ್ತ ಅವರು ʼಸುಮಂಗಲಂʼ ಎನ್ನುವ ಅಭಿವೃದ್ಧಿ ಮಾದರಿಯನ್ನು ಪ್ರಸ್ತಾಪಿಸಿದ್ದರು. ಸರ್ವೇ ಭವಂತು ಸುಖಿನಃ ಎಂಬ ಚಿಂತನೆಯ ಆಧಾರದಲ್ಲೇ ರೂಪಿತಗೊಂಡ ಸುಮಂಗಲಂ ಮಾದರಿಯಲ್ಲಿ ದೇಶದ ಭೌತಿಕ ಅಭಿವೃದ್ಧಿ ಮಾತ್ರ ಇರಲಿಲ್ಲ. ಪ್ರತಿ ವ್ಯಕ್ತಿಯ ದೈಹಿಕ, ಮಾನಸಿಕ, ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿಯನ್ನು ಒಟ್ಟಾಗಿ ಸೇರಿಸಿ ಅದನ್ನು ಅಭಿವೃದ್ಧಿ ಎಂದು ಹೇಳಲಾಯಿತು. ಇದರಲ್ಲಿ, ಅವಕಾಶ ವಂಚಿತರಿಗೆ ಸಮಾನ ವೇದಿಕೆಗಳನ್ನು ಒದಗಿಸುವ ಸಾಮಾಜಿಕ ಸುಧಾರಣೆಗೂ ಒತ್ತು ನೀಡಲಾಗಿತ್ತು. ಈ ಕುರಿತು ಹೆಚ್ಚಿನ ಸಂಶೋಧನೆಗಳು ಹಾಗೂ ಸರ್ಕಾರದ ಆಡಳಿತದಲ್ಲಿ ಅಳವಡಿಸಿಕೊಂಡಿದ್ದನ್ನು ಇತ್ತೀಚಿನ ವರ್ಷದಲ್ಲಿ ನಾನಂತೂ ಕೇಳಿಲ್ಲ.

ಇನ್ನು, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ತಿಳಿಸಿದ ಏಕಾತ್ಮ ಮಾನವತಾವಾದ ಸಾಕಷ್ಟು ಜನರಿಗೆ ಪರಿಚಿತ. ವ್ಯಕ್ತಿ. ಸಮಾಜ, ಸೃಷ್ಟಿ ಹಾಗೂ ಸಮಷ್ಟಿಯು ಒಂದಕ್ಕೊಂದು ಪೂರಕವಾದದ್ದು. ಒಂದರ ನಂತರ ಇನ್ನೊಂದಿಲ್ಲ. ಪಾಶ್ಚಾತ್ಯ ಪರಿಕಲ್ಪನೆಯಲ್ಲಿ ಮನುಷ್ಯನೇ ಅಭಿವೃದ್ಧಿಯ ಕೇಂದ್ರ. ಆದರೆ ಭಾರತದ ಪರಿಕಲ್ಪನೆಯು, ರಾಷ್ಟ್ರಕವಿ ಕುವೆಂಪು ಅವರು ಹೇಳುವಂತೆ. ʼಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲʼ ಎನ್ನುವ ಚಿಂತನೆ. ಇಂತಹ ಏಕಾತ್ಮ ಮಾನವ ದರ್ಶನದ ಕುರಿತು ಪ್ರತಿ ವರ್ಷ ವಿಚಾರ ಸಂಕಿರಣಗಳು ನಡೆಯುತ್ತವೆ. ಆದರೆ ದೀನದಯಾಳ್ ಉಪಾಧ್ಯಾಯ ಅವರ ಚಿಂತನೆಗಳ ಆಧಾರದಲ್ಲೆ ರಾಜಕಾರಣ ಮಾಡುತ್ತೇವೆ ಎನ್ನುವ ಬಿಜೆಪಿ ಸರ್ಕಾರಗಳಲ್ಲೂ ಇದನ್ನು ಅನ್ವಯ ಮಾಡಲಾಗಿದೆಯೇ ಎನ್ನುವುದಕ್ಕೆ ಉತ್ತರವಿಲ್ಲ. ಸಾಮಾನ್ಯ ರೀತಿಯ ಕಲ್ಯಾಣ ಕಾರ್ಯಕ್ರಮಗಳಿಗೇ ದೀನದಯಾಳರ ಹೆಸರಿಟ್ಟರೆ ಅದು ಏಕಾತ್ಮಮಾನವತೆ ಆಗುತ್ತದೆಯೇ?

ಇದನ್ನೂ ಓದಿ: ವಿಸ್ತಾರ ಅಂಕಣ | ಬ್ರಿಟಿಷರು ನಮ್ಮನ್ನು ಬರ್ಬಾದ್ ಮಾಡುವವರೆಗೆ ಭಾರತದ ಆರ್ಥಿಕತೆ ವಿಶ್ವದಲ್ಲೇ ನಂ.1 ಆಗಿತ್ತು ಎನ್ನುವುದು ಎಷ್ಟು ಜನರಿಗೆ ಗೊತ್ತು?

ಇದು ಆ ಒಂದು ಪಕ್ಷಕ್ಕೆ ತೆಗಳುವ ಮಾತಲ್ಲ. ನಮ್ಮ ಒಟ್ಟಾರೆ ಆಲೋಚನೆಯೇ ಹಾಗೆ ಆಗಿದೆ. ಕಳೆದ 75 ವರ್ಷಗಳಲ್ಲಿ, ಅಭಿವೃದ್ಧಿ ಎಂದರೆ ಇಂಥದ್ದೇ ಎನ್ನುವುದನ್ನು ತಲೆಗೆ ತುಂಬಲಾಗಿದೆ. ಅಭಿವೃದ್ಧಿ ಎಂದರೆ ಮಾನವನ ಏಳಿಗೆ. ಮನುಷ್ಯನ ಜೀವನವನ್ನು ಸುಂದರವಾಗಿಸಲು ಕೆಲಸ ಮಾಡುವುದೇ ಅಭಿವೃದ್ಧಿ ಎಂದು ಹೇಳಲಾಗಿದೆ. ಹೀಗಾಗಿ ಅಭಿವೃದ್ಧಿ ಹೆಸರಿನಲ್ಲಿ ಏನೇ ಮಾಡಿದರೂ ಜನರಿಂದ ಸಮರ್ಥನೆ ಸಿಗುತ್ತದೆ. ನಮ್ಮ ಊರಿನಲ್ಲಿ ಕಟ್ಟಿದ ರಸ್ತೆ, ಫ್ಲೈ ಓವರ್, ಮೆಟ್ರೊ ರೈಲುಗಳನ್ನು ಕಾಣುವ ನಾಗರಿಕ ಸಮಾಜ, ಅದೇ ಊರಿನಲ್ಲಿ ತಂಬಾಕು ಸೇವನೆ ಕಡಿಮೆ ಆಗಿರುವುದು, ಜನರು ನೈತಿಕತೆಯಿಂದ ಬದುಕುತ್ತಿರುವುದು, ಕಡಿಮೆ ಕಾಯಿಲೆಗಳಿಂದ ಬಳಲುತ್ತಿರುವುದನ್ನು ಸರಿಯಾಗಿ ನೋಡಲಾರರು ಮತ್ತು ಅದು ಒಂದು ರೀತಿಯ ಅಭಿವೃದ್ಧಿ ಎಂದು ಭಾವಿಸಲಾರರು. ಇದೇ ಕಾರಣಕ್ಕೆ, ರಾಜಕಾರಣಿಗಳೂ ಚುನಾವಣೆ ಸಮಯದಲ್ಲಿ ಬೇಕಾಬಿಟ್ಟಿ ಘೋಷಣೆಗಳ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ನನಗೆ ಯಾವುದೋ ಪಕ್ಷ ಬಿಟ್ಟಿಯಾಗಿ ಏನನ್ನೋ ಕೊಡುತ್ತದೆ ಎಂದರೆ ಅದು ನನ್ನ ಅಭಿವೃದ್ಧಿಯೇ? ಅಥವಾ ನನ್ನ ಮಕ್ಕಳಿಗೆ ಕೆಲಸ ಕೊಟ್ಟರೆ ಅಭಿವೃದ್ಧಿಯೇ? ಎಂದು ಆಲೋಚಿಸುವ ಸಂಯಮವನ್ನು ಸಮಾಜವೇ ಬೆಳೆಸಿಕೊಳ್ಳಬೇಕಿದೆ. ಅಭಿವೃದ್ಧಿಗೆ ಭಾರತೀಯ ಮಾದರಿಗಳನ್ನು ಇನ್ನಷ್ಟು ಅಧ್ಯಯನ ನಡೆಸುವ, ವಿಕಸಿತಗೊಳಿಸುವ ಕಾರ್ಯವನ್ನು ಮಾಡಬೇಕಿದೆ.

development

ಒಮ್ಮೆ ಉತ್ತರ ಕರ್ನಾಟಕ ಬಾಗಲಕೋಟೆ ಪ್ರವಾಸದಲ್ಲಿದ್ದಾಗ, ಹೆದ್ದಾರಿಯಲ್ಲಿ ನೂರಾರು ಕುರಿಗಳನ್ನು ಒಗ್ಗೂಡಿಸಿಕೊಂಡು ಹೋಗಲು ಪರದಾಡುತ್ತಿದ್ದ ಕುರಿಗಾಹಿಗಳನ್ನು ಗಮನಿಸಿದೆ. ವಾಹನಗಳ ಸಂಚಾರ ಆರ್ಭಟದಲ್ಲಿ ಅವರು ತಮ್ಮ ಕುರಿಮಂದೆ ನಿಯಂತ್ರಿಸಲು ಪರದಾಡುತ್ತಿದ್ದರು. ಮಾತನಾಡಬೇಕು ಎನಿಸಿ ಕೆಳಗಿಳಿದು, ಅವರೊಂದಿಗೆ ಕುಶಲೋಪರಿಗೆ ಇಳಿದೆ. “ಹೆದ್ದಾರಿಯಲ್ಲಿ 5 ಕಿ. ಮೀ. ದೂರ ಸಾಗಿದರೆ ಸಿಗುವ ಹಳ್ಳಿಯ ಜಮೀನ್ದಾರ್ ತೋಟಕ್ಕೆ ಕುರಿಮಂದೆ ಹೋಗುವುದಿತ್ತು. ಆ ಹೆದ್ದಾರಿ ನಿರ್ಮಾಣಕ್ಕೆ ಪೂರ್ವದಲ್ಲಿ ಕುರಿಮಂದೆ ಸಾಗಿಸುವುದು ಕಷ್ಟವಾಗಿರಲಿಲ್ಲ. ಆದರೆ, ಈಗ ಆ ರಸ್ತೆಯಲ್ಲಿ ಕುರಿ ಮಂದೆ ಸಾಗಿಸುವುದೇ ಕಷ್ಟವಾಗಿದೆ,” ಎಂದರು. ಹೆದ್ದಾರಿ ಮಾಡಿದ್ದೇ ತಪ್ಪಾಯಿತೇ ಎಂದೆ. ಅದಕ್ಕವರು “ಈ ರಸ್ತೆ ಬದಿಯಲ್ಲಿ ಮರಗಿಡಗಳು ಇರೋದಿಲ್ಲ. ಆಡು ಕುರಿ ಮುಟ್ಟಲು ಸೊಪ್ಪು ಸೆದೆ ಕೇಳೊದೆಂತು? ಟಾರ್ ರಸ್ತೆಯಲ್ಲಿ ಬರಿಗಾಲಲ್ಲಿ ನಾವೇ ಹೆಜ್ಜೆ ಹಾಕೋದು ಬಹಳ ಕಷ್ಟ. ಮೂಕ ಪ್ರಾಣಿಗಳು ಮ್ಯಾಮ್ಯಾ ಅಂತಾವೆ, ಅವಕ್ಕೇನು ಕಷ್ಟವೋ? ಏನ್ ಸುಡುಗಾಡು ರಸ್ತೆನೊ, ಅದೇನು ಹೆದ್ದಾರಿಯೋ, ಇಂಥಾ ರೋಡು ಇಲ್ಲಿಗ್ಯಾಕೆ ಸ್ವಾಮಿ? ಇದೇನು ಬೆಂಗ್ಳೂರಾ? ನಮ್ಮ ಕುರಿಗಳು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ,” ಎಂದರು!

ನೂರಾರು ಕಾರುಗಳು ಶರವೇಗದಲ್ಲಿ ಚಲಿಸಲು ಯೋಗ್ಯವಾದುದು ಒಳ್ಳೆಯ ಹೆದ್ದಾರಿಯಲ್ಲ. ಬದಲಿಗೆ, ಯಾವ ಹೆದ್ದಾರಿಯ ಫುಟ್ ಪಾತಿನಲ್ಲಿ ಪಾದಚಾರಿಯೊಬ್ಬ, ವಾಹನಗಳ ಭಯವಿಲ್ಲದೇ ಓಡಾಡುವನೋ, ಅದು ಒಳ್ಳೆಯ ಹೆದ್ದಾರಿ!

ಇದನ್ನೂ ಓದಿ: ವಿಸ್ತಾರ ಅಂಕಣ | ಈ ಇಬ್ಬರು ಭಾರತದ ಸಾಮಾಜಿಕ ಬದುಕಿನ ರಾಯಭಾರಿಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಅಂಕಣ

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ದಶಮುಖ ಅಂಕಣ: ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ?

VISTARANEWS.COM


on

dashamukha column madness
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

dashamukha column logo

ದಶಮುಖ ಅಂಕಣ: ʻಹುಚ್ಚುʼ (madness) ಎಂಬ ಶಬ್ದ ಕಿವಿಗೆ ಬೀಳುತ್ತಿದ್ದಂತೆ ನೆನಪಾಗುವ ಚಿತ್ರಗಳ ಬಗ್ಗೆ ಹೆಚ್ಚು ಹೇಳುವುದು ಬೇಡವಲ್ಲ. ಯಾವುದೇ ದೇಶ, ಭಾಷೆ, ಸಂಸ್ಕೃತಿಗಳಲ್ಲಿ ನೋಡಿದರೂ ʻಹುಚ್ಚಿಗೆʼ ಹೆಚ್ಚಿಗೆ ಅರ್ಥಗಳಿಲ್ಲ… ಅದೊಂದೇ ಅರ್ಥ! ಹಾಗಾಗಿಯೇ ʻಅದೊಂಥರಾ ಹುಚ್ಚು, ಅವನಿಗೊಂದು ಹುಚ್ಚುʼ ಎಂಬಿತ್ಯಾದಿ ಮಾತುಗಳ ಬೆನ್ನಿಗೇ ʻಅಲ್ಲೇನೋ ಒಂದು ಅತಿರೇಕವಿದೆʼ ಎಂಬ ಭಾವ ಬಂದುಬಿಡುತ್ತದೆ. ಅದಕ್ಕಾಗಿಯೇ ʻಹುಚ್ಚು ಸಾಹಸ, ಹುಚ್ಚು ಪ್ರೀತಿʼ ಮುಂತಾದ ಪ್ರಯೋಗಗಳನ್ನು ಮಾಡುತ್ತಾ, ಬೈಯ್ಯುವುದಕ್ಕೆ, ವ್ಯಂಗ್ಯಕ್ಕೆ, ಕುಹಕಕ್ಕೆ, ಟೀಕೆಗೆ, ತಮಾಷೆಗೆ… ಅಥವಾ ಇಂಥದ್ದೇ ಋಣಾತ್ಮಕ ಎನ್ನಬಹುದಾದ ಛಾಯೆಗಳಲ್ಲಿ ಈ ಶಬ್ದವನ್ನು ಬಳಸುತ್ತೇವೆ. ನಿಜಕ್ಕೂ ಈ ಶಬ್ದವನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಬದುಕಿನಲ್ಲಿ ಪ್ರೀತಿ, ಸೌಖ್ಯ, ಖುಷಿಯನ್ನು ಅರಸುವವರಿಗೂ ಇದನ್ನು ಬಳಸಬಹುದೇ? ಸಾಹಿತ್ಯ-ಸಿನೆಮಾಗಳಲ್ಲಿ ಕಾಣುವ ಪ್ರೀತಿ, ಪ್ರೇಮಗಳಿಗೆ ಹುಚ್ಚನ್ನು ಪರ್ಯಾಯವಾಗಿ ಬಳಸುವುದು ಹೊಸದೇನಲ್ಲ. ಆದರೆ ಇಲ್ಲೀಗ ಅಂಥ ಹರೆಯದ ಪ್ರೀತಿಯ ಬಗ್ಗೆಯಲ್ಲ ಹೇಳುತ್ತಿರುವುದು. ಇತರರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವವರಿಗೂ ಈ ಶಬ್ದ ಸಲ್ಲುತ್ತದೆಯೇ?

ಇತ್ತೀಚೆಗೆ ಭೇಟಿ ಮಾಡಿದ ಒಂದಿಬ್ಬರು ವ್ಯಕ್ತಿಗಳು ಇಂಥದ್ದೊಂದು ಮಂಥನವನ್ನು ಹುಟ್ಟು ಹಾಕಿದ್ದು ಹೌದು. ಎಲ್ಲರಿಗಿಂತ ಭಿನ್ನವಾದ ಬದುಕನ್ನು ಆಯ್ದುಕೊಳ್ಳುವವರು, ತಮ್ಮ ಜೀವನದ ರೀತಿ-ನೀತಿಗಳನ್ನು ಅಥವಾ ಧ್ಯೇಯ-ಆದರ್ಶಗಳನ್ನು ʻಹುಚ್ಚುʼ ಎನ್ನುವಷ್ಟು ಪ್ರೀತಿಸದಿದ್ದರೆ, ಖುಷಿಯಿಂದ ಬದುಕುವುದು ಸಾಧ್ಯವೇ? ಎಷ್ಟೇ ಸುಭಿಕ್ಷವಾದ ಬದುಕನ್ನೂ ಹಳಿಯುತ್ತಲೇ ಬದುಕುವ ಇಂದಿನ ದಿನಗಳಲ್ಲಿ, ಇರುವ ಬದುಕಲ್ಲಿ ಸುಭಿಕ್ಷವನ್ನು ಸೃಷ್ಟಿಸುವ ಅವರನ್ನು ಹುಚ್ಚರೆಂದರೆ ಅತಿರೇಕವಾದೀತೇ? ಬದುಕನ್ನು ಕೊರಗಿನಲ್ಲೇ ಕಳೆಯುವುದು ಹುಚ್ಚೋ ಅಥವಾ ಇತರರ ಕೊರಗನ್ನು ಕಳೆಯುವುದು ಹುಚ್ಚೋ?

ಹೀಗೆನ್ನುವಾಗ ಅನಂತ್‌ ಸರ್‌ ನೆನಪಾಗುತ್ತಾರೆ. ಬದುಕಲ್ಲಿ ವಿದ್ಯೆ ದೊರೆಯದ ಮಕ್ಕಳನ್ನು ಶಿಕ್ಷಣದ ಹಾದಿಗೆ ಹಚ್ಚಿ, ನೆಲೆ ಕಾಣಿಸುವ ಅವರ ಸಾಹಸವನ್ನು ವರ್ಣಿಸುವುದಕ್ಕೆ ಬೇರೆ ಪದಗಳಿಗೆ ಸಾಧ್ಯವಿಲ್ಲ. ಮನೆ ಇದ್ದೂ ಇಲ್ಲದಂತಾದವರು, ಮನೆಯೇ ಇಲ್ಲದವರು, ಪಾಲಕರು ಇಲ್ಲದವರು, ಪಾಲಕರು ಯಾಕಾದರೂ ಇದ್ದಾರೋ ಎನ್ನುವಂಥ ಹಲವು ನಮೂನೆಯ ವಾತಾವರಣದಿಂದ ಬಂದ ಮಕ್ಕಳಿಗೆ ಊಟ, ವಸತಿಯ ಜೊತೆಗೆ ವಿದ್ಯೆ ನೀಡುವುದನ್ನೇ ಧ್ಯೇಯವಾಗಿಸಿಕೊಂಡವರು. ಹತ್ತು-ಹನ್ನೆರಡು ವರ್ಷಗಳವರೆಗೆ ಶಾಲೆಯ ಮುಖವನ್ನೂ ಕಾಣದವರು, ಎಂದೊ ಶಾಲೆಗೆ ಹೋಗಿ ನಡುವಲ್ಲೇ ಕಳೆದುಹೋದವರು- ಇಂಥ ನೂರಾರು ಮುಖಗಳಲ್ಲಿ ನಗು ಅರಳಿಸುವುದಕ್ಕೆ ಇರಬೇಕಾದ ಅದಮ್ಯ ಪ್ರೀತಿಯೂ ಒಂದು ಬಗೆಯ ಹುಚ್ಚೇ ತಾನೇ? ಹಾಗಿಲ್ಲದಿದ್ದರೆ, ಇಂಥ ಸಾಹಸಿಗಳು ಲೋಕದಲ್ಲಿ ನಮಗೆ ವಿರಳವಾಗಿ ಕಾಣುವುದೇಕೆ?

ಆರೇಳು ವರ್ಷದವರನ್ನು ಒಂದನೇ ಕ್ಲಾಸಿಗೆ ಕೂರಿಸುವಲ್ಲಿ ಅಷ್ಟೇನು ಸಮಸ್ಯೆಯಾಗಲಿಕ್ಕಿಲ್ಲ. ವರ್ಷದ ಆಧಾರದ ಮೇಲೆಯೇ ತಾನೆ ನಮ್ಮ ಶಿಕ್ಷಣ ವ್ಯವಸ್ಥೆ ರೂಪುಗೊಂಡಿರುವುದು. ಆದರೆ ಹದಿಹರೆಯಕ್ಕೆ ಕಾಲಿಟ್ಟವರು ಇನ್ನೂ ಶಾಲೆಯ ಮೆಟ್ಟಿಲನ್ನೇ ಹತ್ತದಿರುವಾಗ ಅವರನ್ನೂ ಒಂದನೇ ಕ್ಲಾಸಿಗೆ ಕೂರಿಸುವುದು ಹೇಗೆ? ʻಹಾಗಾಗಿಯೇ ದೈಹಿಕ ವಯಸ್ಸಿನ ಆಧಾರದ ಮೇಲಲ್ಲದೆ, ಮಕ್ಕಳ ಬೌದ್ಧಿಕ ವಯಸ್ಸಿಗೆ ಅನುಗುಣವಾಗಿ ಕಲಿಯುವ ಗುಂಪುಗಳನ್ನಾಗಿ ವಿಂಗಡಿಸಿಕೊಳ್ಳುತ್ತೇವೆ. ಹಾಗೆಯೇ ಅವರ ಕಲಿಕೆ ಮುಂದುವರಿಯುತ್ತದೆʼ ಎನ್ನುವುದು ಅನಂತ್‌ ಸರ್‌ ಹೇಳುವ ಮಾತು. ದೂರದ ಅಸ್ಸಾಂ, ಬಿಹಾರಗಳಿಂದ ಬಂದ ಮಕ್ಕಳಿಗೆ ಶಾಲೆಯ ಕಲ್ಪನೆಯೂ ಇಲ್ಲದಿರುವಾದ, ಇವರ ಭಾಷೆ ಅವರಿಗೆ-ಅವರ ಭಾಷೆ ಇವರಿಗೆ ತಿಳಿಯದಿರುವಾಗ, ವಿದ್ಯೆಯ ಶ್ರೀಕಾರ ಆಗುವುದು ಹೇಗೆ? ʻಇದೊಂಥರಾ ಹುಚ್ಚು. ಇದೂ ಆಗತ್ತೆʼ ಎನ್ನುವಾಗಿನ ಇವರ ಮುಖದ ನಗುವನ್ನು ಏನೆಂದು ಅರ್ಥ ಮಾಡಿಕೊಳ್ಳುವುದು?

ಈ ಚೌಕಟ್ಟಿನಾಚೆಯ ಮನೆಯಲ್ಲಿ ಕಲಿತು ಹೊರಬಿದ್ದು, ದುಡಿದು ಸಂಪಾದಿಸಿ ಬದುಕುತ್ತಿರುವ ತಮ್ಮ ಮಕ್ಕಳ ಬಗ್ಗೆ ಹೇಳುವಾಗ ಅವರ ಮುಖದ ನಗುವಿಗಿರುವ ಅರ್ಥದ ಅರಿವಾಗುತ್ತದೆ ನಮಗೆ. ಹುಚ್ಚಿಗೂ ಎಷ್ಟೊಂದು ಸುಂದರ, ಸಲ್ಲಕ್ಷಣಗಳಿವೆ ಎಂಬುದನ್ನು ತಿಳಿಯುವುದಕ್ಕೆ ಅದೊಂದು ನಗು ಸಾಕು. ಕೊರಗಿ ಕಳೆಯುವುದಕ್ಕಿಂತ, ಹೀಗೆ ಕೊರಗು ಕಳೆಯುವ ಹುಚ್ಚು ಒಳ್ಳೆಯದಲ್ಲವೇ? ನಮಗಿರುವ ಹುಚ್ಚು ಯಾವುದು ಎಂದು ಎಂದಾದರೂ ಯೋಚಿಸಿದ್ದೇವೆಯೇ?

ಈ ಎಲ್ಲ ಮಾತಿನ ನಡುವೆ ಪ್ರದೀಪ ಎನ್ನುವ ಆ ವ್ಯಕ್ತಿ ನೆನಪಾಗುತ್ತಾನೆ. ಕಪ್ಪು ಬಣ್ಣದ ಸಾಧಾರಣ ಮೈಕಟ್ಟಿನ ಆತ ಪುಟ್ಟ ದ್ವೀಪ ರಾಷ್ಟ್ರವೊಂದರ ನಿವಾಸಿ. ಅರಳಿದಂತಿರುವ ಕನ್ನಡಿಗಣ್ಣು, ಅವನದ್ದೇ ಆದ ವಿಶಿಷ್ಟ ಲಯದ ಇಂಗ್ಲಿಷ್‌ ಭಾಷೆಯ ಆತ ನಮಗೆ ಪರಿಚಯವಾಗಿದ್ದು ಪ್ರವಾಸವೊಂದರ ಭಾಗವಾಗಿ. ಅಲೆಯುವ ಹುಚ್ಚಿರುವ ಜನ ಲೋಕದಲ್ಲಿ ಎಷ್ಟೋ ಮಂದಿ ಇದ್ದಾರೆ. ಆದರೆ ಜೊತೆಗೆ ತಿರುಗಾಡುವವರ ಸೌಖ್ಯವೇ ತನಗೆ ಪ್ರೀತಿ ಎನ್ನುವವರೂ ಇದ್ದಾರೆಂಬುದು ತಿಳಿದಿದ್ದು ಆಗಲೇ. ಈತ ವೃತ್ತಿಯಲ್ಲಿ ಪ್ರವಾಸಿ ಗೈಡ್‌. ನಮ್ಮ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಅಲ್ಲಿ ʻಗೈಡ್‌ ಬೇಕೆ?ʼ ಎಂದು ಮುತ್ತಿಗೆ ಹಾಕುವ ಗುಂಪಿನಲ್ಲಿ ಆತನೂ ಇರಬಹುದಾಗಿದ್ದವ. ಆದರೆ ತಮಗೆ ತಿಳಿದಷ್ಟನ್ನು ತೋಚಿದಂತೆ ಒದರಿ, ಬಂದವರಿಂದ ದುಡ್ಡು ಕಿತ್ತು ಕಳಿಸುವ ಗೈಡ್‌ಗಳ ಸಾಲಿನಿಂದ ಗಾವುದಗಟ್ಟಲೆ ದೂರದಲ್ಲಿ ಇರುವವ ಈತ.

ʻತಿರುಗಾಡಿದಷ್ಟೇ, ತಿರುಗಾಡಿಸುವುದೂ ನನಗಿಷ್ಟʼ ಎನ್ನುವ ಈತ, ತನ್ನ ಕಾರು ಓಡುವ ಪ್ರತಿಯೊಂದು ರಸ್ತೆಯ ಪರಿಚಯವನ್ನೂ ಮಾಡಿಕೊಡಬಲ್ಲ. ಯಾವ ಊರಿನ ಮಳೆ-ಬೆಳೆ ಹೇಗೆ ಎಂಬುದರಿಂದ ಹಿಡಿದು ಅಲ್ಲಿನ ಡೆಮಗ್ರಾಫಿಕ್‌ ವಿಶ್ಲೇಷಣೆಯನ್ನೂ ನೀಡಬಲ್ಲ. ʻಈ ಭಾಗದಲ್ಲಿ ತುಂಬಾ ಎಮ್ಮೆ ಸಾಕುತ್ತಾರೆ. ಮಣ್ಣಿನ ಗಡಿಗೆಯಲ್ಲಿ ಹಾಲು ಹೆಪ್ಪಾಕಿ, ಮೊಸರು ಮಾರುತ್ತಾರೆ. ಅದನ್ನೊಮ್ಮೆ ತಿನ್ನದಿದ್ದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡಿದ್ದೇ ವ್ಯರ್ಥʼ ಎಂದು ಸರಕ್ಕನೆ ಗಾಡಿ ನಿಲ್ಲಿಸಿ, ಎರಡು ಪುಟ್ಟ ಗಡಿಗೆಗಳನ್ನು ಹಿಡಿದು ತರುತ್ತಾನೆ. ʻಇಷ್ಟು ದೂರ ಬಂದವರು ಈ ಸಿಹಿ ತಿನ್ನದಿದ್ದರೆ, ನಿಮ್ಮ ತಿರುಗಾಟವೇ ಅಪೂರ್ಣʼ ಎನ್ನುತ್ತಾ ಯಾವುದೋ ಸಿಹಿ ಎದುರಿಗಿಡುತ್ತಾನೆ. ʻಇಲ್ಲಿ ಭರಪೂರ ತರಕಾರಿ ಬೆಳೆಯುತ್ತಾರೆ. ಇದರಲ್ಲೊಂದು ಸಲಾಡ್‌ ಮಾಡುತ್ತೇನೆ ನೋಡಿ, ತಿನ್ನುವುದಕ್ಕೆ ಪುಣ್ಯ ಬೇಕುʼ ಎಂದು ಉಪಚಾರ ಮಾಡುತ್ತಾನೆ. ಇಂಥ ಯಾವುದನ್ನೂ ಮಾಡಬೇಕಾದ ಅಗತ್ಯ ಆತನಿಗಿಲ್ಲ. ನಮ್ಮ ಜಾಗಕ್ಕೆ ಕರೆದೊಯ್ದರೆ ಅವನ ಕೆಲಸ ಮುಗಿಯಿತು; ಅವನ ದುಡ್ಡು ಅವನ ಕೈ ಸೇರುತ್ತದೆ. ʻತಿರುಗಾಡುವುದು, ತಿರುಗಾಡಿಸುವುದು ನಂಗೊಂಥರಾ ಹುಚ್ಚು. ಹೊಸ ಜನರೊಂದಿಗೆ ನಂಟು ಬೆಸೆಯುವುದು, ಅವರನ್ನು ಖುಷಿಯಾಗಿಡುವುದು ನಂಗಿಷ್ಟʼ ಎನ್ನುತ್ತಾ ಹಿಂದಿ ನಟ ದೇವಾನಂದ್‌ ರೀತಿಯಲ್ಲಿ ನಗೆ ಬೀರುತ್ತಾನೆ.

ಇದನ್ನೂ ಓದಿ: ದಶಮುಖ ಅಂಕಣ: ಮೌನವೆಂಬ ಭಾವಸೇತು

ಗುರಿ ತಲುಪುವುದಕ್ಕಿಂತ ಖುಷಿ ನೀಡುವುದು ಗಮ್ಯದೆಡೆಗಿನ ದಾರಿಗಳಲ್ಲವೇ? ಯಾವುದೇ ದಾರಿಯಲ್ಲಿ ಎದುರಾಗುವ ಊರೊಂದರ ಹೆಸರಿನ ಹಿಂದಿನ ಗಮ್ಮತ್ತು ತಿಳಿಸುವುದು, ಯಾವುದೋ ದೇಶದಿಂದ ಬರುವ ಚಿತ್ರವಿಚಿತ್ರ ಅಲೆಮಾರಿಗಳ ಜಾಯಮಾನ ವಿಸ್ತರಿಸುವುದು- ಇವೆಲ್ಲ ತನ್ನ ಪ್ರಯಾಣಿಕರ ದಾರಿಯನ್ನು ಬೋರಾಗದಂತೆ ಕಳೆಯುವ ಮತ್ತು ಅವರೊಂದಿಗೆ ನಂಟು ಬೆಸೆಯುವ ಆತನ ಉದ್ದೇಶಕ್ಕೆ ಒದಗುವಂಥವು. ವಿಹಾರಕ್ಕೆ, ವಿರಾಮಕ್ಕೆ, ಅಧ್ಯಯನಕ್ಕೆ ಮುಂತಾದ ಹಲವು ಕಾರಣಗಳನ್ನು ಹೊತ್ತು ಬರುವ ಜನರ ಕಥೆಗಳು ಆತನ ಸಂಚಿಯಲ್ಲಿವೆ. ಎಲ್ಲರಿಗೂ ಅವರವರ ಉದ್ದೇಶ ಈಡೇರುವಂತೆ ಶ್ರಮಿಸುವುದು ತನಗೆ ಪ್ರಿಯವಾದ ಸಂಗತಿ ಎನ್ನುವ ಇಂಥವರು ಜೊತೆಗಿದ್ದರೆ, ಅಲ್ಲಾವುದ್ದೀನನ ಮಾಂತ್ರಿಕ ಚಾಪೆಯ ಮೇಲೆ ತೇಲಿದಂತೆ ದಾರಿ ಸಾಗುತ್ತದೆ. ಇಂಥವರನ್ನು ನೋಡಿದಾಗ, ಇನ್ನೊಬ್ಬರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವ ಸ್ವಭಾವದ ಬಗ್ಗೆ ಬೇರೆ ಶಬ್ದಗಳು ನೆನಪಾಗುತ್ತಿಲ್ಲ.

ಹಣ, ಸಂಪತ್ತು, ಖ್ಯಾತಿ, ಅಧಿಕಾರಗಳ ಹುಚ್ಚು ಅಂಟಿಸಿಕೊಂಡವರು ನಮ್ಮೆದುರಿಗೆ ಮೆರವಣಿಗೆ ಹೊರಟಿದ್ದಾರೆ ಈಗ. ಚುನಾವಣೆಯ ಕಣದಲ್ಲಿಳಿದು ಅಧಿಕಾರ ದಕ್ಕಿಸಿಕೊಳ್ಳಲು, ದಕ್ಕದಿದ್ದರೆ ಯಾವ ಮಟ್ಟಕ್ಕೂ ಇಳಿಯುವಷ್ಟು ಹುಚ್ಚರಾಗಿದ್ದಾರೆ ಇಂದು. ಯಾರಿಗಾಗಿ ತಾವು ಆಯ್ಕೆಯಾಗುತ್ತಿದ್ದೇವೆಯೋ ಅವರ ಸೌಖ್ಯವನ್ನು ಗಮನಿಸುವುದೇ ಮರುಳು ಎನಿಸುತ್ತಿದೆ ಅಭ್ಯರ್ಥಿಗಳಿಗೆ. ಇಂಥವುಗಳನ್ನು ನೋಡಿದಾಗ ಮತ್ತದೇ ಪ್ರಶ್ನೆಗಳು ಮೂಡುತ್ತವೆ. ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ? ಹುಚ್ಚಿಗೆ ಹೆಚ್ಚಿಗೆ ಅರ್ಥಗಳಿಲ್ಲವೆಂದು ಈಗಲೂ ಹೇಳಬಹುದೇ?

ಇದನ್ನೂ ಓದಿ: ದಶಮುಖ ಅಂಕಣ: “ಮಧುಮಾಸವೆ ಅಡಿ ಇಡುತಿದೆ ಹೊಸವರ್ಷದ ಬೆಳಗೆ”

Continue Reading

ಅಂಕಣ

ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

ರಾಜಮಾರ್ಗ ಅಂಕಣ: ಕ್ಯಾಂಡಿಡೇಟ್ಸ್ ಟೂರ್ನಿ ಗೆದ್ದು ನಿಂತು ಆತ ಇಡೀ ಜಗತ್ತಿನ ಕಣ್ಮಣಿಯಾಗಿ ಮೂಡಿ ಬಂದಿದ್ದಾನೆ. ವಿಶ್ವನಾಥನ್ ಆನಂದ್ ನಂತರ ಆ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯನಾಗಿ ಆತ ಇತಿಹಾಸಕ್ಕೆ ಸೇರಿ ಹೋಗಿದ್ದಾನೆ. ಆ ಹುಡುಗನ ಹೆಸರು ಡಿ.ಗುಕೇಶ್.

VISTARANEWS.COM


on

gukesh dommaraju rajamarga column
Koo

17ರ ಹರೆಯದ ಈ ಹುಡುಗನ ಸಾಧನೆಗೆ ವಿಶ್ವವೇ ತಲೆದೂಗುತ್ತಿದೆ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಚೆನ್ನೈ ಮೂಲದ ಗುಕೇಶ್ (Gukesh Dommaraju) ವಿಶ್ವ ಚಾಂಪಿಯನ್ (World Champion) ಆಗಲು ಇನ್ನೊಂದೇ ಮೆಟ್ಟಿಲು ಬಾಕಿ ಇದೆ! ಈತನ ವಯಸ್ಸು ಇನ್ನೂ 17 ವರ್ಷ. ಮೌನದ ಮೂಲಕ ಜಗತ್ತನ್ನು ಗೆಲ್ಲಲು ಹೊರಟ ಆತನ ತೀಕ್ಷ್ಣ ಕಣ್ಣುಗಳು ಈಗಲೇ ವಿಶ್ವ ವಿಜಯಿಯಾಗುವ ಕನಸಿನಿಂದ ತುಂಬಿವೆ. ಹಿಂದೊಮ್ಮೆ ವಿಶ್ವ ಚಾಂಪಿಯನ್ ಚೆಸ್ ಆಟಗಾರ (Chess) ಮ್ಯಾಗ್ನಸ್ ಕಾರ್ಲಸನ್ (Magnus Carlson) ಅವರನ್ನು ಇದೇ ಹುಡುಗ ಸೋಲಿಸಿದಾಗ ಇಡೀ ಜಗತ್ತು ನಿಬ್ಬೆರಗಾಗಿ ಆತನನ್ನು ಗಮನಿಸಿತ್ತು.

ಈಗ ಕ್ಯಾಂಡಿಡೇಟ್ಸ್ ಟೂರ್ನಿ ಗೆದ್ದು ನಿಂತಾಗ ಆತ ಇಡೀ ಜಗತ್ತಿನ ಕಣ್ಮಣಿಯಾಗಿ ಮೂಡಿ ಬಂದಿದ್ದಾನೆ. ವಿಶ್ವನಾಥನ್ ಆನಂದ್ ನಂತರ ಆ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯನಾಗಿ ಆತ ಇತಿಹಾಸಕ್ಕೆ ಸೇರಿ ಹೋಗಿದ್ದಾನೆ.

ಆ ಹುಡುಗನ ಹೆಸರು ಡಿ.ಗುಕೇಶ್

ಆತ ಚೆನ್ನೈಯ ಪ್ರತಿಭೆ. ವಿಶ್ವನಾಥನ್ ಆನಂದ್ ಐದು ಬಾರಿ ವಿಶ್ವ ಚಾಂಪಿಯನ್ ಆದ ನಂತರ ನಿವೃತ್ತಿ ಪಡೆದು ಚೆನ್ನೈಯಲ್ಲಿ ವಿಶ್ವನಾಥನ್ ಆನಂದ ಚೆಸ್ ಆಕಾಡೆಮಿ (WACA)ಯನ್ನು ಸ್ಥಾಪನೆ ಮಾಡಿದ್ದರು. ಅದರಿಂದ ಸ್ಫೂರ್ತಿ ಪಡೆದು ಚೆನ್ನೈಯಲ್ಲಿ ಈಗ 60ಕ್ಕಿಂತ ಅಧಿಕ ಚೆಸ್ ಅಕಾಡೆಮಿಗಳು ಇವೆ. ಅದರ ಪರಿಣಾಮವಾಗಿ ಇದೀಗ ಚೆನ್ನೈ ನಗರವು ಭಾರತದ ಚೆಸ್ ರಾಜಧಾನಿ ಆಗಿ ಬೆಳೆದಿದೆ. ಅತೀ ಸಣ್ಣ ವಯಸ್ಸಿನಲ್ಲಿ ಗ್ರಾನ್ ಮಾಸ್ಟರ್ ಆದ ಆರ್ ಪ್ರಜ್ಞಾನಂದ, ಆರ್ ವೈಶಾಲಿ, ಸುಬ್ಬರಾಮನ್ ವಿಜಯಲಕ್ಷ್ಮಿ ಇವರೆಲ್ಲರೂ ಚೆನ್ನೈಯವರು. ಈ ಪಟ್ಟಿಗೆ ಈಗ ಹೊಳೆಯುವ ಪ್ರತಿಭೆ ಸೇರ್ಪಡೆ ಆಗಿದೆ. ಆತ ಡಿ ಗುಕೇಶ್. ಭಾರತದ ಒಟ್ಟು ಚೆಸ್ ಗ್ರಾನ್ ಮಾಸ್ಟರಗಳಲ್ಲಿ 35% ಆಟಗಾರರು ಚೆನ್ನೈಗೆ ಸೇರಿದವರು ಅನ್ನುವಾಗ ಆ ನಗರದ ಬಗ್ಗೆ ಹೆಮ್ಮೆ ಮೂಡುತ್ತದೆ.

ಬಾಲ್ಯದಿಂದಲೇ ಚೆಸ್ ಆಟಕ್ಕೆ ಸಮರ್ಪಣೆ ಆಗಿ ಬೆಳೆದ ಹುಡುಗ ಆತ .ಅದಕ್ಕಾಗಿ ತನ್ನ ಬಾಲ್ಯದ ಆಟ, ಶಾಲೆ, ತುಂಟಾಟ ಎಲ್ಲವನ್ನೂ ಬದಿಗೆ ಇಟ್ಟು ಹೋರಾಟಕ್ಕೆ ಇಳಿದವನು.

ಮಗನಿಗಾಗಿ ಅಪ್ಪ, ಅಮ್ಮ ಮಾಡಿದ ತ್ಯಾಗ

ಅವನ ತಂದೆ ಡಾ.ರಜಿನಿಕಾಂತ್ ನಗರದ ಪ್ರಸಿದ್ಧ ENT ಸರ್ಜನ್. ತಾಯಿ ಡಾ. ಪದ್ಮಕುಮಾರಿ ಕೂಡ ಮೈಕ್ರೋಬಯೊಲಜಿ ತಜ್ಞರು. ಇಬ್ಬರೂ ತಮ್ಮ ಮಗನಿಗಾಗಿ ತಮ್ಮ ಪ್ರಾಕ್ಟೀಸ್ ಮರೆತು ಜಗತ್ತಿನಾದ್ಯಂತ ಓಡಾಡಿದ್ದಾರೆ. ತರಬೇತಿಗಾಗಿ ತುಂಬಾ ದುಡ್ಡು ಖರ್ಚು ಮಾಡಿದ್ದಾರೆ. ತುಂಬಾ ಸಮಯ ಕೊಟ್ಟಿದ್ದಾರೆ. ಮಗನ ಚೆಸ್ ಭವಿಷ್ಯಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದರಾಗಿ ನಿಂತಿದ್ದಾರೆ.

ಹುಡುಗನೂ ನಾಲ್ಕನೇ ತರಗತಿಯಿಂದ ಶಾಲೆಗೇ ಹೋಗದೇ ಚೆಸ್ ಆಟದಲ್ಲಿ ಮೈ ಮರೆತಿದ್ದಾನೆ. ಶಾಲಾ ಶಿಕ್ಷಣಕ್ಕೆ ಸಮಯ ದೊರೆಯದ ಬಗ್ಗೆ ಹೆತ್ತವರಿಗೆ ಬೇಸರ ಇದೆ. ಆದರೆ ಆತನು 12ನೆಯ ವಯಸ್ಸಿಗೇ ಚೆಸ್ ಗ್ರಾನ್ ಮಾಸ್ಟರ್ ಹುದ್ದೆಗೆ ಏರಿದಾಗ ಅವರು ಆನಂದ ಭಾಷ್ಪ ಸುರಿಸಿದ್ದಾರೆ. ಮುಂದೆ ಚೆಸ್ ವಿಶ್ವ ಚಾಂಪಿಯನ್ ಮ್ಯಾಗ್ನೆಸ್ ಕಾರ್ಲಸನ್ ಅವರನ್ನು ಆತನು ಸೋಲಿಸಿದಾಗ ತುಂಬಾ ಖುಷಿ ಪಟ್ಟಿದ್ದಾರೆ. ಮ್ಯಾಗ್ನೆಸನನ್ನು ಸೋಲಿಸಿದ ವಿಶ್ವದ ಅತ್ಯಂತ ಕಿರಿಯ ಆಟಗಾರ ಗುಕೇಶ್ ಅನ್ನುವುದು ಸದ್ಯಕ್ಕೆ ಅಳಿಸಲಾಗದ ದಾಖಲೆ!

ಸಾಂಪ್ರದಾಯಕ ಚೆಸ್ ಕಲಿಕೆ, ಅಹಂಕಾರದಿಂದ ದೂರ!

ಸಾಮಾನ್ಯವಾಗಿ ಇತ್ತೀಚಿನ ಚೆಸ್ ಕಲಿಯುವ ಮಕ್ಕಳು ಕಂಪ್ಯೂಟರ್ ಜೊತೆ ಕೂತು ಚೆಸ್ ಆಡುತ್ತಾರೆ. ಆದರೆ ಗುಕೇಶ್ ಚೆಸ್ ಕಲಿತದ್ದು ಸಾಂಪ್ರದಾಯಿಕ ವಿಧಾನದಲ್ಲಿ. ಗುರುಗಳು ಹೇಳಿದ್ದನ್ನು ನೂರಕ್ಕೆ ನೂರರಷ್ಟು ಪಾಲಿಸುವ ಅವನ ಶ್ರದ್ಧೆ, ಏಕಾಗ್ರತೆ, ಬದ್ಧತೆ ಅವನನ್ನು ಪ್ರತೀ ಹೆಜ್ಜೆಯಲ್ಲಿಯೂ ಗೆಲ್ಲಿಸುತ್ತಿವೆ. ಯಾರಾದರೂ ಸನ್ಮಾನಕ್ಕೆ, ಸಂವಾದಕ್ಕೆ ಕರೆದರೆ ಆತನು ನಯವಾಗಿ ನೋ ಅನ್ನುವುದನ್ನು ಕಲಿತಿದ್ದಾನೆ. ಪ್ರಚಾರದಿಂದ ಆತ ಗಾವುದ ದೂರ ಓಡುತ್ತಾನೆ. ತಾನಾಯಿತು, ತನ್ನ ಅಭ್ಯಾಸವಾಯಿತು ಎಂದು ಚೆಸ್ ಆಟದಲ್ಲಿ ಮುಳುಗಿ ಬಿಡುವ ನಾಚಿಕೆಯ ಹುಡುಗ ಗುಕೇಶ್.

ಪ್ರಶಸ್ತಿ ಗೆದ್ದಾಗ ನಿನಗೆ ಹೇಗನ್ನಿಸಿತು ಹುಡುಗ? ಎಂದು ಕೇಳಿದಾಗ “ನನ್ನ ಗೆಲುವಿಗಿಂತ ದೇಶವನ್ನು ರೆಪ್ರೆಸೆಂಟ್ ಮಾಡುವ ಅವಕಾಶ ದೊರೆತದ್ದು ನನಗೆ ಹೆಚ್ಚು ಖುಷಿ ಕೊಟ್ಟಿದೆ” ಅನ್ನುತ್ತಾನೆ.

ನಿನ್ನ ಭವಿಷ್ಯದ ಗುರಿ ಏನು ಎಂದು ಯಾರೋ ಕೇಳಿದಾಗ “ನನಗೆ ವಿಶಿ ಸರ್ (ವಿಶ್ವನಾಥನ್ ಆನಂದ್) ಅವರು ಏನು ಹೇಳುತ್ತಾರೆಯೋ ಆ ಪ್ರಕಾರ ಮಾಡುತ್ತೇನೆ. ನನಗೆ ಏನು ಬೇಕು ಎಂದು ಅವರಿಗೆ ಚೆನ್ನಾಗಿ ಗೊತ್ತಿದೆ” ಅನ್ನುತ್ತಾನೆ.

ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ತನಗೆ ಈಗ ಒಳ್ಳೆಯ ಶಿಷ್ಯ ದೊರೆತ ಖುಷಿಯಲ್ಲಿ ಇದ್ದಾರೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

Continue Reading
Advertisement
Virender Sehwag
ಕ್ರೀಡೆ6 mins ago

Virender Sehwag: ಬಡ ದೇಶದ ಕ್ರಿಕೆಟ್​ ಲೀಗ್​ ಆಡಲ್ಲ ಎಂದ ವೀರೇಂದ್ರ ಸೆಹವಾಗ್; ಕಾರಣವೇನು?

Guru Raghavendra and Vasishta Co operative Bank fraud handed over to SIT says DK Shivakumar
ಬೆಂಗಳೂರು9 mins ago

Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

Shakhahaari Movie In OTT amzon Prime
ಸ್ಯಾಂಡಲ್ ವುಡ್14 mins ago

Shakhahaari Movie: ಒಟಿಟಿಗೆ ಎಂಟ್ರಿ ಕೊಡ್ತಿದೆ ʻಶಾಖಾಹಾರಿʼ ಸಿನಿಮಾ! ಸ್ಟ್ರೀಮಿಂಗ್‌ ಎಲ್ಲಿ? ಯಾವಾಗ?

Xiaomi EV
ಆಟೋಮೊಬೈಲ್16 mins ago

Xiaomi EV: ತಿಂಗಳಲ್ಲಿ 75 ಸಾವಿರ ಆರ್ಡರ್ ಸ್ವೀಕರಿಸಿದ ಕ್ಸಿಯೋಮಿ ಎಸ್‌ಯು 7 ಎಲೆಕ್ಟ್ರಿಕ್‌ ಕಾರು; ಟೆಸ್ಲಾಗಿಂತ ಅಗ್ಗ!

Nilkrishna Gajare JEE main 2024 result AIR 1
ಅಂಕಣ24 mins ago

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

Aircraft Crash
ದೇಶ29 mins ago

Aircraft Crash: ಭಾರತೀಯ ವಾಯುಪಡೆಯ ವಿಮಾನ ಪತನ; ಭಾಗಗಳು ಸುಟ್ಟು ಭಸ್ಮ

Lok Sabha Election 2024 vote for better future and 98 year old woman dies when returning officer arrives at home to cast her vote
ಪ್ರಮುಖ ಸುದ್ದಿ40 mins ago

Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

Horlicks Label
ದೇಶ43 mins ago

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Salaar Movie In star suvarna
ಕಿರುತೆರೆ44 mins ago

Salaar Movie: ಕಿರುತೆರೆಗೆ ಬಂದೇ ಬಿಡ್ತು ಬ್ಲಾಕ್ ಬಸ್ಟರ್ ಸಿನಿಮಾ ‘ಸಲಾರ್’!

Ranbir Kapoor trainer shares transformation Of Ranbir
ಬಾಲಿವುಡ್46 mins ago

Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20242 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

ಟ್ರೆಂಡಿಂಗ್‌