ಅದಾನಿ ಕಂಪನಿ ಕುಸಿತ: ಎಲ್‌ಐಸಿ, ಎಸ್‌ಬಿಐಯಲ್ಲಿ ನೀವು ಮಾಡಿರುವ ಹೂಡಿಕೆಗೂ ಅಪಾಯ ಇದೆಯಾ? - Vistara News

ದೇಶ

ಅದಾನಿ ಕಂಪನಿ ಕುಸಿತ: ಎಲ್‌ಐಸಿ, ಎಸ್‌ಬಿಐಯಲ್ಲಿ ನೀವು ಮಾಡಿರುವ ಹೂಡಿಕೆಗೂ ಅಪಾಯ ಇದೆಯಾ?

ಷೇರು ಮಾರುಕಟ್ಟೆಯಲ್ಲಿ ಗೌತಮ್‌ ಅದಾನಿ ಅವರ ಕಂಪನಿ ಷೇರುಗಳ ಮೌಲ್ಯ ಶುಕ್ರವಾರ ನೆಲಕಚ್ಚಿದ ಹಿನ್ನೆಲೆಯಲ್ಲಿ, ಎಸ್‌ಬಿಐ, ಎಲ್‌ಐಸಿ ಮುಂತಾದ ಸಾರ್ವಜನಿಕ ವಲಯದ ಹಲವು ಕಂಪನಿಗಳಲ್ಲಿ ಹೂಡಿಕೆ ಮಾಡಿರುವವರು ಕೂಡ ಭೀತರಾಗಿದ್ದಾರೆ. ಈ ಸಂಸ್ಥೆಗಳು ಕೂಡ ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಿರುವುದು ಇದಕ್ಕೆ ಕಾರಣ.

VISTARANEWS.COM


on

Hindenburg an unethical short-seller, profited from stock trading: Adani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಷೇರು ಮಾರುಕಟ್ಟೆಯಲ್ಲಿ ಗೌತಮ್‌ ಅದಾನಿ ಅವರ ಕಂಪನಿ ಷೇರುಗಳ ಮೌಲ್ಯ ಶುಕ್ರವಾರ ನೆಲಕಚ್ಚಿದ ಹಿನ್ನೆಲೆಯಲ್ಲಿ, ಎಸ್‌ಬಿಐ, ಎಲ್‌ಐಸಿ ಮುಂತಾದ ಸಾರ್ವಜನಿಕ ವಲಯದ ಹಲವು ಕಂಪನಿಗಳಲ್ಲಿ ಹೂಡಿಕೆ ಮಾಡಿರುವವರು ಕೂಡ ಭೀತರಾಗಿದ್ದಾರೆ. ಈ ಸಂಸ್ಥೆಗಳು ಕೂಡ ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಿರುವುದು ಇದಕ್ಕೆ ಕಾರಣ.

ಕೋಟ್ಯಂತರ ಭಾರತೀಯರು ಹೂಡಿಕೆ ಮಾಡಿರುವ ಈ ಸಾರ್ವಜನಿಕ ಸಂಸ್ಥೆಗಳಿಂದ ಅದಾನಿ ಗ್ರೂಪ್‌ ಸಾಕಷ್ಟು ಹಣ ಪಡೆದಿರುವುದರಿಂದ, ಈ ಹಣಕಾಸಿನ ಸ್ಥಿರತೆಯ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು, ಹಿಂಡೆನ್‌ಬರ್ಗ್‌ ವರದಿಯ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ʼʼಅದಾನಿ ಗ್ರೂಪ್‌ ಒಂದು ಸಾಮಾನ್ಯ ಸಂಸ್ಥೆಯಲ್ಲ. ಅದು ನರೇಂದ್ರ ಮೋದಿಯವರು ಗುಜರಾತ್‌ ಮುಖ್ಯಮಂತ್ರಿ ಆಗಿದ್ದ ಕಾಲದಿಂದಲೂ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದೆʼʼ ಎಂದು ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌ ಆರೋಪಿಸಿದ್ದಾರೆ.

ಈ ಸಂಸ್ಥೆಗಳು ಅದಾನಿ ಗ್ರೂಪ್‌ಗೆ ಉದಾರವಾಗಿ ಹಣಕಾಸು ಒದಗಿಸಿವೆ. ಎಲ್‌ಐಸಿಯ ಈಕ್ವಿಟಿ ಆಸ್ತಿಯ 8 ಪ್ರತಿಶತದಷ್ಟು ಅಂದರೆ ಸುಮಾರು ₹ 74,000 ಕೋಟಿಯಷ್ಟು ಬೃಹತ್ ಮೊತ್ತ ಅದಾನಿ ಕಂಪನಿಗಳಲ್ಲಿದೆ. ಮತ್ತು ಇದು ಅದಾನಿ ಗ್ರೂಪ್‌ನಲ್ಲಿರುವ ಎರಡನೇ ಅತಿ ದೊಡ್ಡ ಹಿಡುವಳಿದಾರ ಆಗಿದೆ ಎಂದು ಕಾಂಗ್ರೆಸ್‌ ಹೇಳಿಕೆ ತಿಳಿಸಿದೆ. ಇದು ಕೋಟ್ಯಂತರ ಭಾರತೀಯರ ಹೂಡಿಕೆಯನ್ನು ನಾಶ ಮಾಡಲಿದೆ ಎಂದು ಸಿಪಿಎಂ ಮುಖಂಡ ಸೀತಾರಾಮ್‌ ಯೆಚೂರಿ ಆತಂಕಪಟ್ಟಿದ್ದಾರೆ.

ಶುಕ್ರವಾರ ಅದಾನಿ ಗ್ರೂಪ್ ಷೇರುಗಳು ಕುಸಿಯುವುದರ ಜತೆಗೆ ಅವುಗಳಿಗೆ ಸಾಲ ನೀಡಿದ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಷೇರುಗಳೂ ಕುಸಿತ ಕಂಡವು. ಆದರೆ ಅದಾನಿ ಗ್ರೂಪ್‌ನಲ್ಲಿ ತಮ್ಮ ಹೂಡಿಕೆ ಭಾರತೀಯ ರಿಸರ್ವ್ ಬ್ಯಾಂಕ್ ಸೂಚಿಸಿದ ಮಿತಿಯಲ್ಲಿದೆ ಎಂದು ಈ ಕಂಪನಿಗಳು ಹೇಳಿವೆ. ಯಾವುದೇ ಒಂದು ಕಂಪನಿಗಳ ಗ್ರೂಪ್‌ಗೆ ತಮ್ಮ ಅರ್ಹ ಬಂಡವಾಳದ 25%ಕ್ಕಿಂತ ಹೆಚ್ಚಿನ ಮೊತ್ತವನ್ನು ಹೂಡಿಕೆ ಮಾಡಲು ಆರ್‌ಬಿಐ ಅನುಮತಿಸುವುದಿಲ್ಲ.

ಇದನ್ನೂ ಓದಿ: Adani stocks : ಹಿಂಡೆನ್‌ಬರ್ಗ್‌ ವರದಿ ಎಫೆಕ್ಟ್‌, ಅದಾನಿ ಹೆಚ್ಚುವರಿ ಷೇರು ಬಿಡುಗಡೆ ನೀರಸ, ಮೊದಲ ದಿನ ಕೇವಲ 1% ಷೇರು ಖರೀದಿ

ನಮ್ಮ ಹೂಡಿಕೆಗೆ ಸದ್ಯ ಯಾವುದೇ ಅಪಾಯವಿಲ್ಲ ಎಂದು ಎಸ್‌ಬಿಐ ಚೇರ್‌ಮನ್‌ ದಿನೇಶ್‌ ಕುಮಾರ್‌ ಖಾರಾ ಹೇಳಿದ್ದಾರೆ. ಇತ್ತೀಚೆಗೆ ಅದಾನಿ ಗ್ರೂಪ್‌ ನಮ್ಮಿಂದ ಯಾವುದೇ ಸಾಲ ಪಡೆದಿಲ್ಲ. ಮುಂದಿನ ದಿನಗಳಲ್ಲಿ ಅಂಥ ಬೇಡಿಕೆ ಬಂದರೆ ವಿವೇಚನೆಯಿಂದ ಪರಿಗಣಿಸುತ್ತೇವೆ ಎಂದು ಖಾರಾ ಹೇಳಿದ್ದಾರೆ.

ಅದಾನಿ ಗ್ರೂಪನ್ನು ಎಸ್‌ಬಿಐ ಸಂಪರ್ಕಿಸಿದ್ದು, ಬೆಳವಣಿಗೆಯ ಬಗ್ಗೆ ವಿವರಣೆ ಕೇಳಿದ್ದೇವೆ. ಅದರ ನಂತರ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಎಸ್‌ಬಿಐನ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಮ್ಮ ಎಲ್ಲ ಸಾಲ ನೀಡಿಕೆಯೂ ಆರ್‌ಬಿಐ ನಿಗದಿಪಡಿಸಿದ ಮಿತಿಯೊಳಗೇ ಇದೆ. ಕಳೆದ ತಿಂಗಳವರೆಗೂ ಅದಾನಿ ಗುಂಪಿನ ಮರುಪಾವತಿ ಸಮರ್ಪಕವಾಗಿಯೇ ಇತ್ತು ಎಂದವರು ತಿಳಿಸಿದ್ದಾರೆ.

ಎಲ್‌ಐಸಿ ಕೂಡ ಅದಾನಿ ಗ್ರೂಪ್‌ನ ಮೇಲಿನ ವಂಚನೆ ಆರೋಪಗಳಿಂದ ವಿಚಲಿತಗೊಂಡಿಲ್ಲ. ಈ ಸಂದರ್ಭದಲ್ಲಿ ಅದು ಅದಾನಿ ಗುಂಪಿನ ನೆರವಿಗೆ ಬಂದಿದ್ದು, 301 ಕೋಟಿ ರೂ.ಗಳನ್ನು ಒದಗಿಸುತ್ತಿದೆ. ಅದಾನಿ ಸಂಸ್ಥೆಗಳ ನೂತನ 20,000 ಕೋಟಿ ಮೌಲ್ಯದ ಷೇರು ಮಾರಾಟದಲ್ಲಿ ಎಲ್‌ಐಸಿ ಈ ಹೂಡಿಕೆಗೆ ಮುಂದಾಗಿದೆ. ಎಲ್‌ಐಸಿಯು ಅದಾನಿ ಸಂಸ್ಥೆಗಳಲ್ಲಿ ಶೇ.4.23ರಷ್ಟು ಮೌಲ್ಯದ ಹೂಡಿಕೆ ಹೊಂದಿದೆ.

ಅದಾನಿ ಗ್ರೂಪ್‌ನಲ್ಲಿ ಅದಾನಿ ಎಂಟರ್‌ಪ್ರೈಸಸ್‌ ಲಿ., ಅದಾನಿ ಪೋರ್ಟ್ಸ್‌ ಆಂಡ್‌ ಎಕಾನಮಿಕ್‌ ಜೋನ್ಸ್‌ ಲಿ., ಅದಾನಿ ಗ್ರೀನ್‌ ಎನರ್ಜಿ ಲಿ., ಅದಾನಿ ಟ್ರಾನ್ಸ್‌ಮಿಶನ್‌ ಲಿ. ಇವೆ. ಹಿಂಡೆನ್‌ಬರ್ಗ್‌ ಸಂಸ್ಥೆಯ ಮೇಲೆ ಮಾನಹಾನಿ ಮೊಕದ್ದಮೆ ಹೂಡುವುದಾಗಿ ಅದಾನಿ ಗ್ರೂಪ್‌ ಹೇಳಿದೆ. ತನ್ನ ಬಳಿ ವರದಿಗೆ ದಾಖಲೆಗಳಿವೆ ಎಂದು ಹಿಂಡೆನ್‌ಬರ್ಗ್‌ ಪ್ರತ್ಯುತ್ತರಿಸಿದೆ.

ಇದನ್ನೂ ಓದಿ: Adani Stocks : ವಂಚನೆಯ ಆರೋಪ, ಅದಾನಿ ಗ್ರೂಪ್‌ ಷೇರುಗಳಿಗೆ 46,000 ಕೋಟಿ ರೂ. ನಷ್ಟ, ಸಮೂಹ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

ರಾಜಮಾರ್ಗ ಅಂಕಣ: ಕ್ಯಾಂಡಿಡೇಟ್ಸ್ ಟೂರ್ನಿ ಗೆದ್ದು ನಿಂತು ಆತ ಇಡೀ ಜಗತ್ತಿನ ಕಣ್ಮಣಿಯಾಗಿ ಮೂಡಿ ಬಂದಿದ್ದಾನೆ. ವಿಶ್ವನಾಥನ್ ಆನಂದ್ ನಂತರ ಆ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯನಾಗಿ ಆತ ಇತಿಹಾಸಕ್ಕೆ ಸೇರಿ ಹೋಗಿದ್ದಾನೆ. ಆ ಹುಡುಗನ ಹೆಸರು ಡಿ.ಗುಕೇಶ್.

VISTARANEWS.COM


on

gukesh dommaraju rajamarga column
Koo

17ರ ಹರೆಯದ ಈ ಹುಡುಗನ ಸಾಧನೆಗೆ ವಿಶ್ವವೇ ತಲೆದೂಗುತ್ತಿದೆ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಚೆನ್ನೈ ಮೂಲದ ಗುಕೇಶ್ (Gukesh Dommaraju) ವಿಶ್ವ ಚಾಂಪಿಯನ್ (World Champion) ಆಗಲು ಇನ್ನೊಂದೇ ಮೆಟ್ಟಿಲು ಬಾಕಿ ಇದೆ! ಈತನ ವಯಸ್ಸು ಇನ್ನೂ 17 ವರ್ಷ. ಮೌನದ ಮೂಲಕ ಜಗತ್ತನ್ನು ಗೆಲ್ಲಲು ಹೊರಟ ಆತನ ತೀಕ್ಷ್ಣ ಕಣ್ಣುಗಳು ಈಗಲೇ ವಿಶ್ವ ವಿಜಯಿಯಾಗುವ ಕನಸಿನಿಂದ ತುಂಬಿವೆ. ಹಿಂದೊಮ್ಮೆ ವಿಶ್ವ ಚಾಂಪಿಯನ್ ಚೆಸ್ ಆಟಗಾರ (Chess) ಮ್ಯಾಗ್ನಸ್ ಕಾರ್ಲಸನ್ (Magnus Carlson) ಅವರನ್ನು ಇದೇ ಹುಡುಗ ಸೋಲಿಸಿದಾಗ ಇಡೀ ಜಗತ್ತು ನಿಬ್ಬೆರಗಾಗಿ ಆತನನ್ನು ಗಮನಿಸಿತ್ತು.

ಈಗ ಕ್ಯಾಂಡಿಡೇಟ್ಸ್ ಟೂರ್ನಿ ಗೆದ್ದು ನಿಂತಾಗ ಆತ ಇಡೀ ಜಗತ್ತಿನ ಕಣ್ಮಣಿಯಾಗಿ ಮೂಡಿ ಬಂದಿದ್ದಾನೆ. ವಿಶ್ವನಾಥನ್ ಆನಂದ್ ನಂತರ ಆ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯನಾಗಿ ಆತ ಇತಿಹಾಸಕ್ಕೆ ಸೇರಿ ಹೋಗಿದ್ದಾನೆ.

ಆ ಹುಡುಗನ ಹೆಸರು ಡಿ.ಗುಕೇಶ್

ಆತ ಚೆನ್ನೈಯ ಪ್ರತಿಭೆ. ವಿಶ್ವನಾಥನ್ ಆನಂದ್ ಐದು ಬಾರಿ ವಿಶ್ವ ಚಾಂಪಿಯನ್ ಆದ ನಂತರ ನಿವೃತ್ತಿ ಪಡೆದು ಚೆನ್ನೈಯಲ್ಲಿ ವಿಶ್ವನಾಥನ್ ಆನಂದ ಚೆಸ್ ಆಕಾಡೆಮಿ (WACA)ಯನ್ನು ಸ್ಥಾಪನೆ ಮಾಡಿದ್ದರು. ಅದರಿಂದ ಸ್ಫೂರ್ತಿ ಪಡೆದು ಚೆನ್ನೈಯಲ್ಲಿ ಈಗ 60ಕ್ಕಿಂತ ಅಧಿಕ ಚೆಸ್ ಅಕಾಡೆಮಿಗಳು ಇವೆ. ಅದರ ಪರಿಣಾಮವಾಗಿ ಇದೀಗ ಚೆನ್ನೈ ನಗರವು ಭಾರತದ ಚೆಸ್ ರಾಜಧಾನಿ ಆಗಿ ಬೆಳೆದಿದೆ. ಅತೀ ಸಣ್ಣ ವಯಸ್ಸಿನಲ್ಲಿ ಗ್ರಾನ್ ಮಾಸ್ಟರ್ ಆದ ಆರ್ ಪ್ರಜ್ಞಾನಂದ, ಆರ್ ವೈಶಾಲಿ, ಸುಬ್ಬರಾಮನ್ ವಿಜಯಲಕ್ಷ್ಮಿ ಇವರೆಲ್ಲರೂ ಚೆನ್ನೈಯವರು. ಈ ಪಟ್ಟಿಗೆ ಈಗ ಹೊಳೆಯುವ ಪ್ರತಿಭೆ ಸೇರ್ಪಡೆ ಆಗಿದೆ. ಆತ ಡಿ ಗುಕೇಶ್. ಭಾರತದ ಒಟ್ಟು ಚೆಸ್ ಗ್ರಾನ್ ಮಾಸ್ಟರಗಳಲ್ಲಿ 35% ಆಟಗಾರರು ಚೆನ್ನೈಗೆ ಸೇರಿದವರು ಅನ್ನುವಾಗ ಆ ನಗರದ ಬಗ್ಗೆ ಹೆಮ್ಮೆ ಮೂಡುತ್ತದೆ.

ಬಾಲ್ಯದಿಂದಲೇ ಚೆಸ್ ಆಟಕ್ಕೆ ಸಮರ್ಪಣೆ ಆಗಿ ಬೆಳೆದ ಹುಡುಗ ಆತ .ಅದಕ್ಕಾಗಿ ತನ್ನ ಬಾಲ್ಯದ ಆಟ, ಶಾಲೆ, ತುಂಟಾಟ ಎಲ್ಲವನ್ನೂ ಬದಿಗೆ ಇಟ್ಟು ಹೋರಾಟಕ್ಕೆ ಇಳಿದವನು.

ಮಗನಿಗಾಗಿ ಅಪ್ಪ, ಅಮ್ಮ ಮಾಡಿದ ತ್ಯಾಗ

ಅವನ ತಂದೆ ಡಾ.ರಜಿನಿಕಾಂತ್ ನಗರದ ಪ್ರಸಿದ್ಧ ENT ಸರ್ಜನ್. ತಾಯಿ ಡಾ. ಪದ್ಮಕುಮಾರಿ ಕೂಡ ಮೈಕ್ರೋಬಯೊಲಜಿ ತಜ್ಞರು. ಇಬ್ಬರೂ ತಮ್ಮ ಮಗನಿಗಾಗಿ ತಮ್ಮ ಪ್ರಾಕ್ಟೀಸ್ ಮರೆತು ಜಗತ್ತಿನಾದ್ಯಂತ ಓಡಾಡಿದ್ದಾರೆ. ತರಬೇತಿಗಾಗಿ ತುಂಬಾ ದುಡ್ಡು ಖರ್ಚು ಮಾಡಿದ್ದಾರೆ. ತುಂಬಾ ಸಮಯ ಕೊಟ್ಟಿದ್ದಾರೆ. ಮಗನ ಚೆಸ್ ಭವಿಷ್ಯಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದರಾಗಿ ನಿಂತಿದ್ದಾರೆ.

ಹುಡುಗನೂ ನಾಲ್ಕನೇ ತರಗತಿಯಿಂದ ಶಾಲೆಗೇ ಹೋಗದೇ ಚೆಸ್ ಆಟದಲ್ಲಿ ಮೈ ಮರೆತಿದ್ದಾನೆ. ಶಾಲಾ ಶಿಕ್ಷಣಕ್ಕೆ ಸಮಯ ದೊರೆಯದ ಬಗ್ಗೆ ಹೆತ್ತವರಿಗೆ ಬೇಸರ ಇದೆ. ಆದರೆ ಆತನು 12ನೆಯ ವಯಸ್ಸಿಗೇ ಚೆಸ್ ಗ್ರಾನ್ ಮಾಸ್ಟರ್ ಹುದ್ದೆಗೆ ಏರಿದಾಗ ಅವರು ಆನಂದ ಭಾಷ್ಪ ಸುರಿಸಿದ್ದಾರೆ. ಮುಂದೆ ಚೆಸ್ ವಿಶ್ವ ಚಾಂಪಿಯನ್ ಮ್ಯಾಗ್ನೆಸ್ ಕಾರ್ಲಸನ್ ಅವರನ್ನು ಆತನು ಸೋಲಿಸಿದಾಗ ತುಂಬಾ ಖುಷಿ ಪಟ್ಟಿದ್ದಾರೆ. ಮ್ಯಾಗ್ನೆಸನನ್ನು ಸೋಲಿಸಿದ ವಿಶ್ವದ ಅತ್ಯಂತ ಕಿರಿಯ ಆಟಗಾರ ಗುಕೇಶ್ ಅನ್ನುವುದು ಸದ್ಯಕ್ಕೆ ಅಳಿಸಲಾಗದ ದಾಖಲೆ!

ಸಾಂಪ್ರದಾಯಕ ಚೆಸ್ ಕಲಿಕೆ, ಅಹಂಕಾರದಿಂದ ದೂರ!

ಸಾಮಾನ್ಯವಾಗಿ ಇತ್ತೀಚಿನ ಚೆಸ್ ಕಲಿಯುವ ಮಕ್ಕಳು ಕಂಪ್ಯೂಟರ್ ಜೊತೆ ಕೂತು ಚೆಸ್ ಆಡುತ್ತಾರೆ. ಆದರೆ ಗುಕೇಶ್ ಚೆಸ್ ಕಲಿತದ್ದು ಸಾಂಪ್ರದಾಯಿಕ ವಿಧಾನದಲ್ಲಿ. ಗುರುಗಳು ಹೇಳಿದ್ದನ್ನು ನೂರಕ್ಕೆ ನೂರರಷ್ಟು ಪಾಲಿಸುವ ಅವನ ಶ್ರದ್ಧೆ, ಏಕಾಗ್ರತೆ, ಬದ್ಧತೆ ಅವನನ್ನು ಪ್ರತೀ ಹೆಜ್ಜೆಯಲ್ಲಿಯೂ ಗೆಲ್ಲಿಸುತ್ತಿವೆ. ಯಾರಾದರೂ ಸನ್ಮಾನಕ್ಕೆ, ಸಂವಾದಕ್ಕೆ ಕರೆದರೆ ಆತನು ನಯವಾಗಿ ನೋ ಅನ್ನುವುದನ್ನು ಕಲಿತಿದ್ದಾನೆ. ಪ್ರಚಾರದಿಂದ ಆತ ಗಾವುದ ದೂರ ಓಡುತ್ತಾನೆ. ತಾನಾಯಿತು, ತನ್ನ ಅಭ್ಯಾಸವಾಯಿತು ಎಂದು ಚೆಸ್ ಆಟದಲ್ಲಿ ಮುಳುಗಿ ಬಿಡುವ ನಾಚಿಕೆಯ ಹುಡುಗ ಗುಕೇಶ್.

ಪ್ರಶಸ್ತಿ ಗೆದ್ದಾಗ ನಿನಗೆ ಹೇಗನ್ನಿಸಿತು ಹುಡುಗ? ಎಂದು ಕೇಳಿದಾಗ “ನನ್ನ ಗೆಲುವಿಗಿಂತ ದೇಶವನ್ನು ರೆಪ್ರೆಸೆಂಟ್ ಮಾಡುವ ಅವಕಾಶ ದೊರೆತದ್ದು ನನಗೆ ಹೆಚ್ಚು ಖುಷಿ ಕೊಟ್ಟಿದೆ” ಅನ್ನುತ್ತಾನೆ.

ನಿನ್ನ ಭವಿಷ್ಯದ ಗುರಿ ಏನು ಎಂದು ಯಾರೋ ಕೇಳಿದಾಗ “ನನಗೆ ವಿಶಿ ಸರ್ (ವಿಶ್ವನಾಥನ್ ಆನಂದ್) ಅವರು ಏನು ಹೇಳುತ್ತಾರೆಯೋ ಆ ಪ್ರಕಾರ ಮಾಡುತ್ತೇನೆ. ನನಗೆ ಏನು ಬೇಕು ಎಂದು ಅವರಿಗೆ ಚೆನ್ನಾಗಿ ಗೊತ್ತಿದೆ” ಅನ್ನುತ್ತಾನೆ.

ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ತನಗೆ ಈಗ ಒಳ್ಳೆಯ ಶಿಷ್ಯ ದೊರೆತ ಖುಷಿಯಲ್ಲಿ ಇದ್ದಾರೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

Continue Reading

ದೇಶ

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

ರಫ್ತು ಮಾತ್ರವಲ್ಲ, ರಕ್ಷಣಾ ಸಾಮಗ್ರಿಗಳಲ್ಲಿ ಆತ್ಮನಿರ್ಭರತೆ ಕೂಡ ನಮ್ಮಿಂದ ಸಾಧ್ಯವಾಗುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ ತುಮಕೂರಿನ ಗುಬ್ಬಿಯಲ್ಲಿ ಪ್ರಧಾನಿ ಉದ್ಘಾಟಿಸಿರುವ ಹಿಂದೂಸ್ತಾನ್‌ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್ಎಎಲ್) ನೂತನ ಹೆಲಿಕಾಪ್ಟರ್ ಉತ್ಪಾದನಾ ಘಟಕ. ಇದು ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್‌ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಯನ್ನು ಹೊಂದಿದೆ.

VISTARANEWS.COM


on

vistara Editorial ವಿಸ್ತಾರ ಸಂಪಾದಕೀಯ
Koo

ಫಿಲಿಪ್ಪೀನ್ಸ್‌ಗೆ (Philippines) ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ (BrahMos missiles) ಭೂ ಆವೃತ್ತಿಯ ನಾಲ್ಕನೇ ʼಬ್ಯಾಟರಿ’ಯನ್ನು ಭಾರತ ಕಳುಹಿಸುತ್ತಿದೆ. ಬ್ರಹ್ಮೋಸ್ ಕ್ಷಿಪಣಿಗಳ ಮೂರು ‘ಬ್ಯಾಟರಿ’ಗಳನ್ನು ಈಗಾಗಲೇ ದ್ವೀಪ ರಾಷ್ಟ್ರಕ್ಕೆ ಹಸ್ತಾಂತರಿಸಲಾಗಿದೆ. ಪ್ರತಿ ಬ್ಯಾಟರಿಯೂ ನಾಲ್ಕು ಲಾಂಚರ್‌ಗಳನ್ನು ಒಳಗೊಂಡಿರುತ್ತದೆ. ಪ್ರತಿ ಲಾಂಚರ್‌ನಲ್ಲೂ 290 ಕಿಮೀ ವ್ಯಾಪ್ತಿಯ ಮೂರು ಕ್ಷಿಪಣಿಗಳಿರುತ್ತವೆ. ಈ ಕ್ಷಿಪಣಿ ಸೂಪರ್‌ಸಾನಿಕ್ ವೇಗವನ್ನು ಹೊಂದಿರುತ್ತದೆ. ಇದನ್ನು ಭೂಮಿ ಅಥವಾ ಹಡಗು ಆಧಾರಿತ ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMDs) ವ್ಯವಸ್ಥೆಗಳಿಂದಲೂ ಎದುರಿಸುವುದು ತುಂಬಾ ಕಷ್ಟ. 2022ರಲ್ಲಿ ಭಾರತ- ಫಿಲಿಪ್ಪೀನ್ಸ್‌ ಸಹಿ ಮಾಡಿದ USD 375 ಮಿಲಿಯನ್ ಒಪ್ಪಂದದ ಭಾಗವಿದು. ಸದ್ಯ ಭಾರತದ ಬ್ರಹ್ಮೋಸ್ ದಾಖಲೆ ಮಾರಾಟ ಕಂಡಿದೆ. ಮುಂದಿನ ದಿನಗಳಲ್ಲಿ ಭಾರತವು ಈ ಸೂಪರ್‌ಸಾನಿಕ್ ಕ್ಷಿಪಣಿಗಳ ಹೆಚ್ಚಿನ ಆರ್ಡರ್‌ಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ.

ಬ್ರಹ್ಮೋಸ್‌ನ ಫಿಲಿಪ್ಪೀನ್ಸ್ ಒಪ್ಪಂದದ ಮೂಲಕ, 2023-2024ರಲ್ಲಿ ಭಾರತದ ರಕ್ಷಣಾ ರಫ್ತು ₹21083 ಕೋಟಿಗಳನ್ನು ಮುಟ್ಟಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇ.32.5ರಷ್ಟು ರಫ್ತು ಬೃಹತ್ ಬೆಳವಣಿಗೆಯಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಕಾರ, 2026ರ ವೇಳೆಗೆ ರಕ್ಷಣಾ ರಫ್ತನ್ನು 40 ಸಾವಿರ ಕೋಟಿ ರೂ. ದಾಟಿಸುವ ಗುರಿ ಹೊಂದಲಾಗಿದೆ. ಅನೇಕ ಕಾರಣಗಳಿಂದಾಗಿ ಇದೊಂದು ಮೈಲುಗಲ್ಲು. ಬಾಹ್ಯಾಕಾಶ ಸಂಶೋಧನೆ ಹಾಗೂ ರಕ್ಷಣಾ ರಫ್ತುಗಳು ಭಾರತದ ಜಿಡಿಪಿ ಬೆಳವಣಿಗೆ, ವಿದೇಶಾಂಗ ನೀತಿಯ ವರ್ಧನೆ ಇತ್ಯಾದಿಗಳಲ್ಲಿ ಗರಿಷ್ಠತೆ ಸಾಧಿಸಲು ಕಾರಣವಾಗುತ್ತಿರುವ ಬೆಳವಣಿಗೆಗಳು. ಈ ಹಿಂದೆ ಪ್ರತಿಯೊಂದು ಶಸ್ತ್ರಕ್ಕೂ ಭಾರತ ವಿದೇಶಗಳನ್ನು ಅವಲಂಬಿಸಿತ್ತು. ಆದರೆ ಈಗ ರಕ್ಷಣಾ ಶಸ್ತ್ರಾಸ್ತ್ರಗಳ ಉತ್ಪಾದನೆಯಲ್ಲಿ ದಿನೇದಿನೆ ಸ್ವಾವಲಂಬನೆ ಸಾಧಿಸುತ್ತಿದೆ. ಶಸ್ತ್ರಾಸ್ತ್ರಗಳಿಂದ ಹಿಡಿದು ಯುದ್ಧ ನೌಕೆಗಳನ್ನೂ ಭಾರತದಲ್ಲೇ ತಯಾರಿಸಲಾಗುತ್ತಿದೆ. ಪಾಕಿಸ್ತಾನ ಹೊರತುಪಡಿಸಿ ಇತರ ಹಲವು ನೆರೆದೇಶಗಳಿಗೆ ಭಾರತ ಯಥೇಚ್ಛವಾಗಿ ಶಸ್ತ್ರಾಸ್ತ್ರ ರಫ್ತು ಮಾಡುತ್ತಿದೆ. ಮಿಲಿಟರಿ ಸಾಧನಗಳಿಗಾಗಿ ಭಾರತ ಪ್ರತಿವರ್ಷ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದೆ. ಈ ನಿಟ್ಟಿನಲ್ಲಿ ಈಗಿನ ಶಸ್ತ್ರಾಸ್ತ್ರ ರಫ್ತು ದಾಖಲೆ ದೇಶದ ಪ್ರಗತಿ ಮತ್ತು ಸ್ವಾವಲಂಬನೆಯ ದೃಷ್ಟಿಯಿಂದ ಮಹತ್ವದ್ದಾಗಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಚೀನಾವನ್ನೂ ಹಿಂದಿಕ್ಕಿದ ಭಾರತದ ಆರ್ಥಿಕತೆಯ ಬೆಳವಣಿಗೆ ಐತಿಹಾಸಿಕ

ಈಗಾಗಲೇ ಭಾರತ ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌ ಕ್ಷಿಪಣಿಗಳನ್ನು, ಮಾರಿಷಸ್‌ಗೆ ಹಗುರ ಯುದ್ಧ ವಿಮಾನಗಳನ್ನು, ವಿಯೆಟ್ನಾಂಗೆ ಅತಿವೇಗದ ರಕ್ಷಣಾ ಬೋಟ್‌ಗಳನ್ನು, ಆರ್ಮೇನಿಯಾಕ್ಕೆ ಆಯುಧಶೋಧಕ ರೇಡಾರ್‌ಗಳನ್ನು, ಇಟಲಿ, ಮಾಲ್ದೀವ್ಸ್‌, ಶ್ರೀಲಂಕಾ, ಮಲೇಷಿಯಾ ಮುಂತಾದ ಹಲವು ದೇಶಗಳಿಗೆ ಪಿನಾಕ ರಾಕೆಟ್‌ ಲಾಂಚರ್‌ಗಳನ್ನು ಹಾಗೂ ಇತರ ಹಲವು ತಂತ್ರಜ್ಞಾನಗಳನ್ನು ರಫ್ತು ಮಾಡುತ್ತಿದೆ. ರಕ್ಷಣಾ ಸಾಮಗ್ರಿಗಳ ರಫ್ತು ಜತಜತೆಗೇ ನೋಡಬೇಕಾದ ಇನ್ನೊಂದು ಸಂಗತಿ ಎಂದರೆ, ಇಸ್ರೋ ಸಂಸ್ಥೆಯು ಉಡಾಯಿಸುತ್ತಿರುವ ಉಪಗ್ರಹಗಳು. ಸ್ಥಳೀಯ ತಂತ್ರಜ್ಞಾನದ ಉಪಗ್ರಹ ವಾಹಕಗಳನ್ನು (ಎಸ್‌ಎಲ್‌ವಿ) ನಾವು ತಯಾರಿಸಿದ್ದು, ಅವುಗಳ ಮೂಲಕ ಅಕ್ಕಪಕ್ಕದ ದೇಶಗಳ ಉಪಗ್ರಹಗಳನ್ನೂ ಕಕ್ಷೆಗೆ ಉಡಾಯಿಸುವ ಉದ್ಯಮವನ್ನು ಯಶಸ್ವಿಯಾಗಿ ನಡೆಸುತ್ತಿದ್ದೇವೆ. ನಮ್ಮ ದೇಶದ ಇಂಥ ಸಾಧನೆಗೆ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ), ಎಚ್‌ಎಎಲ್‌, ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ಮಹತ್ವದ ಕೊಡುಗೆ ನೀಡುತ್ತಿವೆ. ಡಿಆರ್‌ಡಿಒ ಅಭಿವೃದ್ಧಿಪಡಿಸುತ್ತಿರುವ ಡ್ರೋನ್‌ಗಳು ನಮ್ಮ ಗಡಿಯನ್ನು ಕಾಯುತ್ತಿರುವ ಯೋಧರಿಗೆ ಅತ್ಯುತ್ತಮ ಜತೆಗಾರರಾಗಿವೆ.

ರಫ್ತು ಮಾತ್ರವಲ್ಲ, ರಕ್ಷಣಾ ಸಾಮಗ್ರಿಗಳಲ್ಲಿ ಆತ್ಮನಿರ್ಭರತೆ ಕೂಡ ನಮ್ಮಿಂದ ಸಾಧ್ಯವಾಗುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ ತುಮಕೂರಿನ ಗುಬ್ಬಿಯಲ್ಲಿ ಪ್ರಧಾನಿ ಉದ್ಘಾಟಿಸಿರುವ ಹಿಂದೂಸ್ತಾನ್‌ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್ಎಎಲ್) ನೂತನ ಹೆಲಿಕಾಪ್ಟರ್ ಉತ್ಪಾದನಾ ಘಟಕ. ಇದು ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್‌ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದು, 3 ಟನ್‌ನಿಂದ 12 ಟನ್ ತೂಕದ ತನಕ ವಿವಿಧ ಶ್ರೇಣಿಗಳ ಹೆಲಿಕಾಪ್ಟರ್‌ಗಳನ್ನು ನಿರ್ಮಿಸುತ್ತದೆ. ಇಲ್ಲಿ ಉತ್ಪಾದನೆಗೊಳ್ಳಲಿರುವ ಹಗುರ ಹೆಲಿಕಾಪ್ಟರ್‌ಗಳು (ಎಲ್‌ಯುಎಚ್) ದೇಶದ ಮಿಲಿಟರಿ ಮತ್ತು ನಾಗರಿಕ ಅಗತ್ಯಗಳನ್ನು ಪೂರೈಸಲಿವೆ. ಇದರಿಂದ ಭಾರತದ ವಾಯುಪಡೆ ಹಾಗೂ ವಾಯುಸಾರಿಗೆ ಇನ್ನಷ್ಟು ಸಮೃದ್ಧವಾಗಲಿವೆ. ಇದು ಒಂದು ಉದಾಹರಣೆ ಮಾತ್ರ. ಇನ್ನೊಂದು ಉದಾಹರಣೆ ಎಂದರೆ ಇತ್ತೀಚೆಗೆ ಪ್ರಯೋಗಾರ್ಥ ಉಡಾಯಿಸಲಾದ ಅಣ್ವಸ್ತ್ರ ಸಿಡಿತಲೆಯನ್ನು 5000 ಕಿಲೋಮೀಟರ್‌ ದೂರ ಹೊತ್ತೊಯ್ಯಬಲ್ಲ ಸಾಮರ್ಥ್ಯ ಹೊಂದಿರುವ ಅಗ್ನಿ-5 ಖಂಡಾಂತರ ಕ್ಷಿಪಣಿಯ ಅಭಿವೃದ್ಧಿ. ಈ ಕ್ಷಿಪಣಿ ಚೀನಾದ ಉತ್ತರ ತುದಿಯಿಂದ ಹಿಡಿದು ಯುರೋಪಿನ ಬಹುತೇಕ ಭಾಗಗಳಿಗೂ ಗುರಿ ಇಟ್ಟು ದಾಳಿ ಮಾಡುವ ಸಾಮರ್ಥ್ಯ ಹೊಂದಿರುವುದು ಭಾರತದ ರಕ್ಷಣಾ ದೃಷ್ಟಿಯಿಂದ ಮಹತ್ವದ್ದು. ಹಾಗೆಯೇ ಕಳೆದ ತಿಂಗಳು ಪರೀಕ್ಷಿಸಲಾದ ಮಿಷನ್‌ ದಿವ್ಯಾಸ್ತ್ರ. ಇದು ಏಕಕಾಲಕ್ಕೆ ಹಲವು ಸಿಡಿತಲೆಗಳನ್ನು ಉಡಾಯಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ತಂತ್ರಜ್ಞಾನ ಕಾಲದಲ್ಲೂ ಐಪಿಎಲ್​ ಅಂಪೈರ್ ಗಳ ಸೋಮಾರಿತನ ಆಕ್ಷೇಪಾರ್ಹ

ಇದೆಲ್ಲದರ ಹಿನ್ನೆಲೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಮತ್ತು ಆತ್ಮ ನಿರ್ಭರ ಭಾರತ ಅಭಿಯಾನ ಫಲ ಕೊಡಲಾರಂಭಿಸಿದೆ ಎನ್ನಬಹುದು. ಆದರೂ ಭಾರತ ತರಿಸಿಕೊಳ್ಳುತ್ತಿರುವ ಶಸ್ತ್ರಾಸ್ತ್ರಗಳ ಪ್ರಮಾಣ ಸಾಕಷ್ಟಿದೆ. ಅತಿ ಹೆಚ್ಚು ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಭಾರತವೂ ಒಂದು. ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಹೆಚ್ಚಿದಷ್ಟು ಆಮದು ಕಡಿಮೆಯಾಗಬಹುದು. ರಫ್ತು ಹೆಚ್ಚಾದಷ್ಟು ನಮ್ಮ ಗಣ್ಯತೆ, ಜಿಡಿಪಿ, ವಿದೇಶಾಂಗ ಸಾಮರ್ಥ್ಯವೂ ಅಧಿಕವಾಗುತ್ತದೆ.

Continue Reading

Lok Sabha Election 2024

Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

Lok Sabha Election 2024: ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿರುವಂತೆ ರಾಜಕೀಯ ನಾಯಕರ ಮಾತು ಹದ್ದು ಮೀರ ತೊಡಗಿದೆ. ಕೇರಳದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಸಿಪಿಎಂ ಬೆಂಬಲಿತ ಸ್ವತಂತ್ರ ಶಾಸಕ ಪಿ.ವಿ.ಅನ್ವರ್‌ ಆಡಿರುವ ಲೇವಡಿಯ ಮಾತು ಭಾರೀ ವಿವಾದಕ್ಕೆ ಕಾರಣವಾಗಿದೆ. ”ರಾಹುಲ್‌ ಗಾಂಧಿ ಅವರು ಗಾಂಧಿ ಎಂಬ ಸರ್‌ನೇಮ್‌ ಅನ್ನೂ ಬಳಸಲಾಗದ ನಾಲ್ಕನೇ ದರ್ಜೆಯ ವ್ಯಕ್ತಿ. ನೆಹರೂ ವಂಶದ ವ್ಯಕ್ತಿಗೆ ಈ ರೀತಿ ಮಾತನಾಡಲು ಸಾಧ್ಯವೇ? ಆ ವಿಚಾರದಲ್ಲಿ ನನಗೆ ಸಂಶಯವಿದೆʼʼ ಎಂದು ಅನ್ವರ್‌ ಹೇಳಿದ್ದಾರೆ. ಅವರ ಈ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

VISTARANEWS.COM


on

Lok Sabha Election 2024
Koo

ತಿರುವನಂತಪುರಂ: ಲೋಕಸಭಾ ಚುನಾವಣೆಯ (Lok Sabha Election 2024) ಕಾವು ಹೆಚ್ಚಾಗುತ್ತಿದ್ದಂತೆ ವೈಯಕ್ತಿಕ ಟೀಕೆಯೂ ಹದ್ದು ಮೀರುತ್ತಿದೆ. ಇದೀಗ ಕೇರಳದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಸಿಪಿಎಂ ಬೆಂಬಲಿತ ಸ್ವತಂತ್ರ ಶಾಸಕ ಪಿ.ವಿ.ಅನ್ವರ್‌ (PV Anwar) ಆಡಿರುವ ಲೇವಡಿಯ ಮಾತು ಭಾರೀ ವಿವಾದ ಸೃಷ್ಟಿಸಿದೆ. ʼʼನೆಹರೂ ವಂಶಸ್ಥರಿಂದ ನಿರೀಕ್ಷಿಸುವ ಗುಣಮಟ್ಟವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರದರ್ಶಿಸುತ್ತಿಲ್ಲ. ಹೀಗಾಗಿ ಅವರ ಡಿಎನ್‌ಎಯನ್ನು ಪರೀಕ್ಷಿಸಬೇಕುʼʼ ಎಂದು ಪಿ.ವಿ.ಅನ್ವರ್‌ ಹೇಳಿದ್ದಾರೆ.

ಪಾಲಕ್ಕಾಡ್‌ನಲ್ಲಿ ಸಿಪಿಐ(ಎಂ) ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪಿ.ವಿ.ಅನ್ವರ್, ”ರಾಹುಲ್‌ ಗಾಂಧಿ ಅವರು ಗಾಂಧಿ ಎಂಬ ಸರ್‌ನೇಮ್‌ ಅನ್ನೂ ಬಳಸಲಾಗದ ನಾಲ್ಕನೇ ದರ್ಜೆಯ ವ್ಯಕ್ತಿ. ನೆಹರೂ ವಂಶದ ವ್ಯಕ್ತಿಗೆ ಈ ರೀತಿ ಮಾತನಾಡಲು ಸಾಧ್ಯವೇ? ಆ ವಿಚಾರದಲ್ಲಿ ನನಗೆ ಸಂಶಯವಿದೆʼʼ ಎಂದು ನಾಲಿಗೆ ಹರಿಯಬಿಟ್ಟಿದ್ದಾರೆ. “ನಾನು ರಾಹುಲ್ ಗಾಂಧಿ ಅವರ ಕ್ಷೇತ್ರವಾದ ವಯನಾಡ್‌ನ ಭಾಗವಾಗಿದ್ದೇನೆ. ನಾನು ಅವರನ್ನು ಗಾಂಧಿ ಎಂಬ ಉಪನಾಮದಿಂದ ಕರೆಯಲು ಸಾಧ್ಯವಿಲ್ಲ. ಅವರು ಗಾಂಧಿ ಉಪನಾಮದಿಂದ ಕರೆಯಲು ಅರ್ಹರಲ್ಲದ ನಾಗರಿಕನಾಗಿ ಮಾರ್ಪಟ್ಟಿದ್ದಾರೆ. ಇದನ್ನು ನಾನು ಹೇಳುತ್ತಿಲ್ಲ. ಕಳೆದ ಎರಡು ದಿನಗಳಿಂದ ಭಾರತದ ಜನರು ಇದನ್ನು ಹೇಳುತ್ತಿದ್ದಾರೆʼʼ ಎಂದು ನಿಲಂಬೂರು ಕ್ಷೇತ್ರದ ಶಾಸಕ ಅನ್ವರ್ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ರಾಹುಲ್‌ ಗಾಂಧಿ ಮತನಾಡಿ, ʼʼಪಿಣರಾಯಿ ವಿಜಯನ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದರೂ, ಕೇಂದ್ರ ಏಜೆನ್ಸಿಗಳು ಅವರನ್ನು ಏಕೆ ವಿಚಾರಣೆ ನಡೆಸುತ್ತಿಲ್ಲ?ʼʼ ಎಂದು ಪ್ರಶ್ನಿಸಿದ್ದರು. ಇದರಿಂದ ಕೆರಳಿದ ಅನ್ವರ್ ಈ ರೀತಿ ವೈಕ್ತಿಕ ತೇಜೋವಧೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನಿಂದ ಖಂಡನೆ

ಸದ್ಯ ಅನ್ವರ್‌ ಹೇಳಿಕೆ ಕೋಲಾಹಲ ಎಬ್ಬಿಸಿದೆ. ಅವರ ವಿರುದ್ಧ ಕಾಂಗ್ರೆಸ್‌ ಕೆಂಡಾಮಂಡಲವಾಗಿದ್ದು, ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸಿಪಿಎಂ ಹಾಗೂ ಬೆಂಬಲಿತ ನಾಯಕರು ರಾಹುಲ್ ಗಾಂಧಿ ಅವರ ವಿರುದ್ಧ ವೈಯಕ್ತಿಕ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಜನರು ಉತ್ತರ ನೀಡಲಿದ್ದಾರೆ ಎಂದಿದೆ.

ರಾಜ್ಯ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಎಂ.ಎಂ.ಹಸನ್ ಮಾತನಾಡಿ, ʼʼಅನ್ವರ್‌ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕುʼʼ ಎಂದು ಆಗ್ರಹಿಸಿದ್ದಾರೆ. “ಪಿ.ವಿ.ಅನ್ವರ್ ಗೋಡ್ಸೆಯ ಹೊಸ ಅವತಾರ. ಗಾಂಧೀಜಿಯನ್ನು ಕೊಂದ ಗೋಡ್ಸೆಯ ಗುಂಡುಗಳಿಗಿಂತ ಅನ್ವರ್ ಅವರ ಮಾತುಗಳು ಮಾರಕವಾಗಿವೆ. ಅನ್ವರ್ ಅವರು ಜನಪ್ರತಿನಿಧಿಯೊಬ್ಬರು ಆಡಬಾರದ ಮಾತುಗಳನ್ನು ಆಡಿದ್ದಾರೆʼʼ ಎಂದು ಹೇಳಿದ್ದಾರೆ.

ʼʼರಾಹುಲ್ ಗಾಂಧಿಯನ್ನು ನಿರಂತರವಾಗಿ ಟೀಕಿಸುತ್ತಿರುವ ಪಿಣರಾಯಿ ವಿಜಯನ್ ಅವರು ಇದೀಗ ಪಿ.ವಿ.ಅನ್ವರ್ ಅವರನ್ನು ಕಾಂಗ್ರೆಸ್ ವಿರುದ್ಧ ಮಾತನಾಡುವಂತೆ ತಯಾರು ಮಾಡಿದ್ದಾರೆ. ಅನ್ವರ್ ಮುಖ್ಯಮಂತ್ರಿಯ ಆತ್ಮಹತ್ಯಾ ದಳವಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಹಸನ್ ಟೀಕಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

ಇತ್ತ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಷ್ಟೇ ಅಲ್ಲ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿದ್ದಾರೆ. ರಾಹುಲ್ ಗಾಂಧಿ ಗಂಭೀರ ರಾಜಕಾರಣಿ ಅಲ್ಲ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

Continue Reading

Lok Sabha Election 2024

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Lok Sabha Election 2024: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಆಸ್ತಿ ಮರು ಹಂಚಿಕೆ ಮಾಡುವ ಬಗ್ಗೆ ಪ್ರಸ್ತಾವಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಳಿಕ ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೂ ಆರೋಪಿಸಿದ್ದಾರೆ. ʼʼಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ‘ಶರಿಯಾ ಕಾನೂನನ್ನು’ ಜಾರಿಗೆ ತರುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆʼʼ ಎಂದು ಹೇಳಿದ್ದಾರೆ. ಉತ್ತರ ಪ್ರದೇಶದ ಅಮ್ರೋಹದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಅವರು ಮಾತನಾಡಿ ಈ ವಿಚಾರ ಪ್ರಸ್ತಾವಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಲಕ್ನೋ: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿನ ಸಂಪತ್ತು ಮರು ಹಂಚಿಕೆ ವಿಚಾರವನ್ನು ಪ್ರಸ್ತಾವಿಸಿದೆ ಎಂದು ಆರೋಪಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೈ ಪಡೆಯ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರ ಸರದಿ. ಯೋಗಿ ಆದಿತ್ಯನಾಥ್ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ, ʼʼಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ‘ಶರಿಯಾ ಕಾನೂನನ್ನು’ ಜಾರಿಗೆ ತರುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆʼʼ ಎಂದು ಹೇಳಿದ್ದಾರೆ (Lok Sabha Election 2024).

ಉತ್ತರ ಪ್ರದೇಶದ ಅಮ್ರೋಹದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ ಮತ್ತು ಮತ್ತೊಮ್ಮೆ ತಮ್ಮ ತಪ್ಪಾದ ಪ್ರಣಾಳಿಕೆಯೊಂದಿಗೆ ನಿಮ್ಮ ಬಳಿಗೆ ಬಂದಿವೆ. ನೀವು ಕಾಂಗ್ರೆಸ್ ಪ್ರಣಾಳಿಕೆಯನ್ನು ಗಮನಿಸಿದರೆ ಅದರಲ್ಲಿ ಅವರು ತಾವು ಸರ್ಕಾರ ರಚಿಸಿದರೆ, ಶರಿಯಾ ಕಾನೂನನ್ನು ಜಾರಿಗೆ ತರುತ್ತೇವೆ ಎಂದು ಹೇಳುತ್ತಾರೆ. ನೀವು ಹೇಳಿ ಈ ದೇಶವನ್ನು ಡಾ.ಬಿ.ಆರ್‌.ಅಂಬೇಡ್ಕರ್ ರಚಿಸಿದ ಸಂವಿಧಾನದ ಆಧಾರದಲ್ಲಿ ನಡೆಸಬೇಕೆ ಅಥವಾ ಶರಿಯತ್‌ನಿಂದ ನಡೆಸಬೇಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಅವರು ಈ ಹಿಂದೆ ತಮ್ಮ ಚುನಾವಣಾ ರ‍್ಯಾಲಿಗಳಲ್ಲಿ ಮಾತನಾಡಿ, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜನರ ಆಸ್ತಿಯ ಮರು ಹಂಚಿಕೆಯನ್ನು ಸೇರಿಸಿದೆ ಎಂದು ಆರೋಪಿಸಿದ್ದರು.

ಯೋಗಿ ಆದಿತ್ಯನಾಥ್ ಹೇಳಿದ್ದೇನು?

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ವ್ಯಕ್ತಿಗತ ಕಾನೂನು (Vyaktigat kanoon) ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದೆ. ಶರಿಯಾ ಕಾನೂನು ಜಾರಿ ಎನ್ನುವುದೇ ಇದರ ಅರ್ಥ. ಯಾಕೆಂದರೆ ಮೋದಿ ತ್ರಿವಳಿ ತಲಾಖ್‌ ಕಾನೂನನ್ನು ದೇಶದಲ್ಲಿ ನಿಷೇಧಿಸಿದ್ದಾರೆʼʼ ಎಂದು ಆದಿತ್ಯನಾಥ್‌ ಹೇಳಿದ್ದಾರೆ. ಮುಂದುವರಿದು, ʼʼಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಜನರ ಆಸ್ತಿಯನ್ನು ವಶಪಡಿಸಿಕೊಂಡು ಹಂಚುವ ಬಗ್ಗೆ ಪ್ರಸ್ತಾವಿಸಲಾಗಿದೆ. ಕಾಂಗ್ರೆಸ್‌ ಮತ್ತು ಸಮಾಜವಾದಿ ಪಾರ್ಟಿಗಳು ನಿಮ್ಮ ಆಸ್ತಿಯನ್ನು ಕೊಳ್ಳೆ ಹೊಡೆಯಲು ಅನುಮತಿ ನೀಡುತ್ತೀರಾ? ಅವರ ಇಬ್ಬಗೆಯ ನೀತಿಯತ್ತ ಗಮನ ಹರಿಸಿ. ಅವರು ಒಂದು ಕಡೆ ನಿಮ್ಮ ಆಸ್ತಿಯ ಮೇಲೆ ಕಣ್ಣಿಡುತ್ತಾರೆ. ಇನ್ನೊಂದು ಕಡೆ ಮಾಫಿಯಾ ಮತ್ತು ಅಪರಾಧಿಗಳಿಗೆ ನೆರವು ನೀಡುತ್ತಿದ್ದಾರೆʼʼ ಎಂದು ವಾಗ್ದಾಳಿ ನಡೆಸಿದ್ದಾರೆ.

2006ರಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಯೋಗಿ ಆದಿತ್ಯನಾಥ್, “ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಹೇಳಿದ್ದರು. ಹಾಗಾದರೆ ನಮ್ಮ ದಲಿತರು, ಹಿಂದುಳಿದ ವರ್ಗಗಳು, ಬಡವರು ಮತ್ತು ರೈತರು ಎಲ್ಲಿಗೆ ಹೋಗುತ್ತಾರೆ? ತಾಯಂದಿರು ಮತ್ತು ಸಹೋದರಿಯರು ಎಲ್ಲಿಗೆ ಹೋಗುತ್ತಾರೆ? ಯುವಕರು ಎಲ್ಲಿಗೆ ಹೋಗುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲ; ಮತ್ತೆ ಸಂಪತ್ತು ಹಂಚಿಕೆ ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಭಯೋತ್ಪಾದನೆ ಕೊನೆಗೊಂಡಿದೆ ಎಂದು ಅವರು ಹೇಳಿದ್ದಾರೆ. “10 ವರ್ಷಗಳ ಹಿಂದೆ ದೇಶದಲ್ಲಿ ಭಯದ ವಾತಾವರಣವಿತ್ತು. 2014ರ ನಂತರ ಭಯೋತ್ಪಾದನೆಯನ್ನು ನಿಯಂತ್ರಿಸಲಾಯಿತು ಮತ್ತು 2019ರ ಹೊತ್ತಿಗೆ ಮೋದಿ ಭಯೋತ್ಪಾದನೆಯ ಮೂಲವನ್ನು ಜಮ್ಮು ಕಾಶ್ಮೀರದ 370ನೇ ವಿಧಿಯನ್ನು ರದ್ದುಗೊಳಿಸಿದರು. ಇಂದು ಭಾರತದಲ್ಲಿ ಭಯೋತ್ಪಾದನೆ ನಾಶವಾಗಿದೆ” ಎಂದು ಅವರು ಹೇಳಿದ್ದಾರೆ. ಅಮ್ರೋಹಾದಲ್ಲಿ ಏಪ್ರಿಲ್ 26ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

Continue Reading
Advertisement
bengaluru karaga in darga
ಬೆಂಗಳೂರು4 mins ago

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

gukesh dommaraju rajamarga column
ಅಂಕಣ7 mins ago

ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

, Dr. Rajkumar's birthday
ಪ್ರಮುಖ ಸುದ್ದಿ12 mins ago

Rajkumar Birthday : ಇಂದು ಡಾ. ರಾಜ್​ಕುಮಾರ್ ಜನುಮದಿನ; ವರನಟನಿಗೆ ಕನ್ನಡಿಗರ ನಮನ

Karnataka Weather Forecast
ಮಳೆ42 mins ago

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Benefits of Bamboo Shoots
ಆರೋಗ್ಯ1 hour ago

Benefits of Bamboo Shoots: ಮೂಳೆಗಳ ನೋವು, ಮಲಬದ್ಧತೆ ನಿವಾರಣೆಗೆ ಎಳೆಯ ಬಿದಿರು ಸೇವನೆ ಮದ್ದು

Dina Bhavishya
ಭವಿಷ್ಯ2 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Bengaluru karaga
ಕರ್ನಾಟಕ5 hours ago

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಅದ್ಧೂರಿ ಚಾಲನೆ; ಉತ್ಸವ ವೀಕ್ಷಿಸಲು ಹರಿದು ಬಂದ ಜನಸಾಗರ

vistara Editorial ವಿಸ್ತಾರ ಸಂಪಾದಕೀಯ
ದೇಶ7 hours ago

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

IPL 2024
ಪ್ರಮುಖ ಸುದ್ದಿ7 hours ago

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

Voters' Pledge
ಬೆಂಗಳೂರು8 hours ago

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌