Leopard Attack: ನಿಲ್ಲದ ಚಿರತೆ ಹಾವಳಿ; ದಾವಣಗೆರೆ, ಕುಮಟಾ, ರಾಮನಗರದಲ್ಲಿ ಪ್ರತ್ಯಕ್ಷ - Vistara News

ಉತ್ತರ ಕನ್ನಡ

Leopard Attack: ನಿಲ್ಲದ ಚಿರತೆ ಹಾವಳಿ; ದಾವಣಗೆರೆ, ಕುಮಟಾ, ರಾಮನಗರದಲ್ಲಿ ಪ್ರತ್ಯಕ್ಷ

Leopard Attack: ರಾಜ್ಯದ ವಿವಿಧೆಡೆ ಚಿರತೆಗಳು ಪ್ರತ್ಯಕ್ಷವಾಗುತ್ತಿದ್ದು ಜನರು ಭೀತಿಯಿಂದಲೇ ಓಡಾಡುವಂತಾಗಿದೆ. ದಾವಣಗೆರೆ ಹಾಗೂ ರಾಮನಗರದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ/ರಾಮನಗರ/ಕಾರವಾರ: ದಾವಣಗೆರೆಯ ಚನ್ನಗಿರಿ ತಾಲೂಕಿನ ಬಸವಾಪುರ ಗ್ರಾಮದ ಕೆರೆ ಬಳಿ ಚಿರತೆಯೊಂದು (Leopard Attack) ಪ್ರತ್ಯಕ್ಷವಾಗಿದೆ. ಚಿರತೆ ಓಡಾಡುವ ದೃಶ್ಯವನ್ನು ಗ್ರಾಮದ ಕೆಲವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಚನ್ನಗಿರಿ ತಾಲೂಕಿನ ಹಂಚಿನ ಸಿದ್ದಾಪುರ, ಗುರುರಾಜಪುರ, ಬಿಆರ್ ಟಿ ಕಾಲೋನಿ, ಮಾವಿನಕಟ್ಟೆ ಗ್ರಾಮಗಳ ರಸ್ತೆಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಚಿರತೆ ಸೆರೆ ಹಿಡಿಯಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಾಮನಗರದಲ್ಲಿ ಮತ್ತೆ ಚಿರತೆ ಭೀತಿ

ರಾಮನಗರದ ಮಾಗಡಿ ತಾಲೂಕಿನ ಬಂಟರಗುಪ್ಪೆಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಗ್ರಾಮದ ಬಳಿ ಚಿರತೆ ಪ್ರತ್ಯಕ್ಷವಾಗಿ ಗ್ರಾಮಸ್ಥರು ಆತಂಕದಲ್ಲಿಯೇ ದಿನದೂಡುವಂತಾಗಿದೆ. ಗ್ರಾಮದಿಂದ 200 ಮೀ. ಅಂತರದಲ್ಲಿರುವ ಬಂಡೆ ಮೇಲೆ ಕಾಣಿಸಿಕೊಂಡಿದೆ. ಬಂಟರಗುಪ್ಪೆ ಅರಣ್ಯ ಪ್ರದೇಶದಿಂದ ಗ್ರಾಮದ ಕಡೆ ಚಿರತೆ ಬಂದಿದ್ದು, ಶುಕ್ರವಾರ ಸಂಜೆ 6ರ ಸಮಯದಲ್ಲಿ ಕಾಣಿಸಿಕೊಂಡಿದೆ. ಚಿರತೆ ಕಂಡು ಭಯಭೀತರಾಗಿರುವ ಜನರು, ಅರಣ್ಯಾಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಎಷ್ಟೇ ಮನವಿ ಮಾಡಿದರೂ ಚಿರತೆ ಸೆರೆ ಹಿಡುಯುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಊರಿನ ಬಳಿ ಚಿರತೆ ಕಾಣಿಸಿಕೊಂಡ ಪರಿಣಾಮ ಗ್ರಾಮದಲ್ಲಿ ಅರಣ್ಯಾಧಿಕಾರಿಗಳು ಬೀಡುಬಿಟ್ಟಿದ್ದಾರೆ.

Leopard Attack
Leopard Attack

ಮಹಡಿ ಮೇಲೆ ಮಲಗಿದ್ದ ನಾಯಿಯನ್ನು ಹೊತ್ತೊಯ್ದಿದ ಚಿರತೆ

ಮನೆಯೊಂದರ ಮಹಡಿ ಮೇಲೆ ಮಲಗಿದ್ದ ನಾಯಿಯನ್ನು ಚಿರತೆಯೊಂದು ಹೊತ್ತೊಯ್ದಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ. ತಾಲೂಕಿನ ಮಿರ್ಜಾನ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮನಗರದಲ್ಲಿ ಇದೀಗ ಚಿರತೆ ಪ್ರತ್ಯಕ್ಷವಾಗಿದ್ದು, ನಾಯಿಯನ್ನು ಹೊತ್ತೊಯ್ದಿರುವ ದೃಶ್ಯಗಳು ಮನೆಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಮನಗರದ ನಿವಾಸಿ ಅಗೊಸ್ತಿನೊ ಸಾಲೀಸ್ ರೊಡ್ರಿಗಿಸ್ ಎಂಬುವವರ ಮನೆಯ ಮಹಡಿಯ ಮೇಲೇರಿ ಅಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಕಚ್ಚಿಕೊಂಡು ಹೊತ್ತೊಯ್ದಿದೆ. ಸಿಸಿಕ್ಯಾಮೆರಾದಲ್ಲಿನ ಚಿರತೆ ಓಡಾಟದ ದೃಶ್ಯಗಳನ್ನು ಕಂಡು ಮನೆಯವರು ಆತಂಕಗೊಂಡಿದ್ದು, ಕೂಡಲೇ ಮಿರ್ಜಾನ ಉಪ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಿಮಿಸಿದ ಅಧಿಕಾರಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ಮಿರ್ಜಾನ ವಲಯದ ಅರಣ್ಯ ಪ್ರದೇಶದಲ್ಲಿ ಚಿರತೆ, ಹಂದಿಗಳ ಓಡಾಟ ಇದೆ. ಬಲಿಷ್ಠ ಚಿರತೆಗಳು ಕಾಡಿನಲ್ಲಿಯೇ ಬೇಟೆಯಾಡುತ್ತವೆ. ಆದರೆ, ವಯಸ್ಸಾದ ಚಿರತೆಗೆ ಬೇಟೆಯಾಡುವ ಶಕ್ತಿ ಕುಂಠಿತವಾಗಿರುತ್ತದೆ. ಆಗ ಅವು ನಾಡಿಗೆ ಬಂದು ನಾಯಿ, ಆಕಳನ್ನು ಬೇಟೆಯಾಡುತ್ತವೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂತಹ ಚಿರತೆಗಳು ರಾತ್ರಿ 7ರ ಸಮಯ ಮನೆಯಿರುವ ಕಡೆ ಸಂಚರಿಸುತ್ತವೆ. ಆದರೆ ಮನುಷ್ಯನ ಮೇಲೆ ಎರಗುವ ಸಾಧ್ಯತೆ ಕಡಿಮೆ. ಇಂಥ ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹುಡುಗಿಯ ಜತೆ ಆಟವಾಡಿದ್ದಕ್ಕೆ ನಾಯಿಮರಿಯನ್ನೇ ಕೊಂದ ಪಾಪಿಗಳು; ವಿಡಿಯೊ ವೈರಲ್‌ ಬಳಿಕ ಬಿತ್ತು ಕೇಸ್‌

ಜನವಸತಿ ಪ್ರದೇಶದ ಬಳಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯ ನಿವಾಸಿಗಳಿಗೆ ಆತಂಕ ಉಂಟುಮಾಡಿದ್ದು, ಸಂಜೆ ವೇಳೆ ಮನೆಯಿಂದ ಹೊರಗೆ ಓಡಾಡಲು ಭಯಪಡುವಂತಾಗಿದೆ. ಹೀಗಾಗಿ ಆದಷ್ಟು ಬೇಗ ಚಿರತೆಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೋಲಾರ

BEML Factory: ಬೆಮೆಲ್‌ ಕಾರ್ಖಾನೆ ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ವಿರೋಧಿಸಿ ಸಾವಿರಾರು ಕಾರ್ಮಿಕರಿಂದ ಮುಷ್ಕರ

BEML Factory KGF: ಕೋಲಾರ (Kolar news) ಜಿಲ್ಲೆಯ ಕೆಜಿಎಫ್ ನಗರದಲ್ಲಿರುವ ಬೆಮೆಲ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಅನ್ಯಾಯ ಮಾಡಿ ಉತ್ತರ ಭಾರತದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಬೆಮೆಲ್ ಆಡಳಿತ ಮಂಡಳಿ ವಿರುದ್ಧ ನಿನ್ನೆ ಮಧ್ಯಾಹ್ನ ಕನ್ನಡದ ಕಾರ್ಮಿಕರು ಬಂಡೆದ್ದಿದ್ದರು. ಧರಣಿ ಪ್ರತಿಭಟನೆ ಕೈಗೊಂಡಿದ್ದಾರೆ.

VISTARANEWS.COM


on

beml factory kgf
Koo

ಕೋಲಾರ: ಬೆಮೆಲ್ ಕಾರ್ಖಾನೆಯ (BEML Factory KGF) ನೇಮಕಾತಿಯಲ್ಲಿ (Employments) ಸ್ಥಳೀಯರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಸಾವಿರಾರು ಕನ್ನಡಿಗ ಕಾರ್ಮಿಕರು (labourers) ಧರಣಿ ಪ್ರತಿಭಟನೆ (Workers protest) ನಡೆಸಿದ್ದಾರೆ. ಸುಮಾರು 2500 ಕಾರ್ಮಿಕರಿಂದ ಪ್ರತಿಭಟನೆ ಮುಂದುವರಿದಿದೆ.

ಕೋಲಾರ (Kolar news) ಜಿಲ್ಲೆಯ ಕೆಜಿಎಫ್ ನಗರದಲ್ಲಿರುವ ಬೆಮೆಲ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಅನ್ಯಾಯ ಮಾಡಿ ಉತ್ತರ ಭಾರತದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಬೆಮೆಲ್ ಆಡಳಿತ ಮಂಡಳಿ ವಿರುದ್ಧ ನಿನ್ನೆ ಮಧ್ಯಾಹ್ನ ಕನ್ನಡದ ಕಾರ್ಮಿಕರು ಬಂಡೆದ್ದಿದ್ದರು. ಧರಣಿ ಪ್ರತಿಭಟನೆ ಕೈಗೊಂಡಿದ್ದಾರೆ.

ಕಾಂಟ್ರಾಕ್ಟ್ ಆಪರೇಟರ್ಸ್ ಸೇರಿ ವಿವಿಧ ಗುತ್ತಿಗೆ ನೌಕರರಿಂದ ಪ್ರತಿಭಟನೆ ನಡೆಯುತ್ತಿದೆ. ಬೆಮೆಲ್ ಕಾರ್ಖಾನೆ ಎದುರು ಜಮಾಯಿಸಿರುವ ಸೆಕೆಂಡ್ ಶಿಫ್ಟ್ ಹಾಗೂ ರಾತ್ರಿ ಪಾಳಯದ ನೌಕರರು, ಕೆಲಸಕ್ಕೆ ಹೋಗದೆ ಮುಷ್ಕರ ನಡೆಸಿದ್ದಾರೆ. ಆಡಳಿತ ಮಂಡಳಿ ನೌಕರರ ಮನವೊಲಿಸಲು‌ ಮುಂದಾಗಿದೆ. ಕೆಜಿಎಫ್ ಪೊಲೀಸರಿಂದ ಸಂಸ್ಥೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು ಸ್ಥಳದಲ್ಲಿ ನಾಲ್ಕು ಡಿಎಆರ್ ವ್ಯಾನ್, ನೂರಾರು ಪೊಲೀಸರು ಬೀಡು ಬಿಟ್ಟಿದ್ದಾರೆ.

ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ ಪ್ರಕರಣದಲ್ಲಿ ಜಲಸಮಾಧಿಯಾಗಿರುವ ಲಾರಿ ಹಾಗೂ ಅದರ ಚಾಲಕ ಅರ್ಜುನ ಶೋಧ ಕಾರ್ಯ ನಿನ್ನೆ ವಿಫಲಗೊಂಡಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡಕ್ಕೂ ಇವರ ಪತ್ತೆ ಹಿಡಿಯುವುದು ಸಾಧ್ಯವಾಗಿಲ್ಲ.

ಮುಳುಗುತಜ್ಞರ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ನಿನ್ನೆ ಸಂಜೆ ಮಾಹಿತಿ ನೀಡಿದ್ದಾರೆ. ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ. ಸಂಜೆಯಾದ ಹಿನ್ನಲೆ‌ ನಾಳೆ ಉಳಿದ ಒಂದು ಪ್ರದೇಶದ ಪರಿಶೀಲನೆ ನಡೆಯಲಿದೆ ಎಂದಿದ್ದಾರೆ.

ಮೂರು ಜಾಗಗಳಲ್ಲಿ ಪರಿಶೀಲಿಸಿದಾಗ ಕಲ್ಲು, ಮಣ್ಣು, ಮರದ ತುಂಡು ಹೆಚ್ಚಾಗಿ ಪತ್ತೆಯಾಗಿದೆ. ಇವುಗಳನ್ನ ತೆರವುಗೊಳಿಸಿ ಆಳದಲ್ಲಿ ಪರಿಶೀಲನೆ ನಡೆಸಬೇಕಿದೆ. ನೀರಿನ ಹರಿವು 10 ನಾಟ್ಸ್‌ಗಿಂತ ಹೆಚ್ಚಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ನಾಳೆ ಒಮ್ಮೆ ಕೊನೆಯ ಪ್ರಯತ್ನವನ್ನ ಮಾಡುತ್ತೇವೆ. ಇದುವರೆಗೆ ಪರಿಶೀಲಿಸಿದ ಜಾಗದಲ್ಲಿ ಯಾವುದೇ ಮೆಟಲ್ ಡಿಟೆಕ್ಟ್ ಆಗಿಲ್ಲ. ನಾಳೆ ಪ್ರಮುಖ ಒಂದು ಸ್ಥಳದ ಪರಿಶೀಲನೆ ಇದೆ. ಇದರೊಂದಿಗೆ ನೌಕಾಪಡೆ, ಸೇನೆಯವರು ಸೋನಾರ್ ಡಿಟೆಕ್ಷನ್ ಕೂಡಾ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕಲ್ಲು, ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಲಾರಿ ಇದೆ ಎನ್ನಲಾದ ಸ್ಥಳದಲ್ಲಿ ಬೃಹತ್ ಗಾತ್ರದ ಬಂಡೆಗಲ್ಲು ಕಂಡುಬಂದಿದೆ. ಬಂಡೆಗಲ್ಲಿನ ಕೆಳಗೆ ಲಾರಿ ಇರುವ ಸಾಧ್ಯತೆ ಇದೆ. ಈ ಕುರಿತು ಮತ್ತೊಮ್ಮೆ ಸಭೆ ನಡೆಸಿ ನಾಳೆ ಕಾರ್ಯಾಚರಣೆ ಮುಂದುವರೆಸುತ್ತೇವೆ. ನಾವು ಇದುವರೆಗೂ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದೇ ಶೋಧ ನಡೆಸುತ್ತಿದ್ದೇವೆ. ಯಾರೂ ಸಹ ಮೃತಪಟ್ಟಿದ್ದಾರೆ ಎಂದು ನಾವು ಪರಿಗಣನೆ ಮಾಡಿಲ್ಲ. ಸಾಧ್ಯವಾದ ಎಲ್ಲ ಕಡೆ ಕಣ್ಮರೆಯಾಗಿರುವವರಿಗೆ ಶೋಧ ನಡೆಸಲಾಗುತ್ತಿದೆ. ಸಾರ್ವಜನಿಕರು ಸಹ ಯಾವುದೇ ಮಾಹಿತಿ ಸಿಕ್ಕಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿ ಎಂದು ಶಿರೂರಿನಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Tomato Price: ದಿಢೀರ್‌ ಕುಸಿದ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ತಳಮಳ

Continue Reading

ಪ್ರಮುಖ ಸುದ್ದಿ

Uttara Kannada landslide: ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

Uttara Kannada landslide: ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ.

VISTARANEWS.COM


on

Uttara Kannada landslide
Koo

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ (Uttara Kannada landslide, Shiruru Landslide) ಪ್ರಕರಣದಲ್ಲಿ ಜಲಸಮಾಧಿಯಾಗಿರುವ ಲಾರಿ ಹಾಗೂ ಅದರ ಚಾಲಕ ಅರ್ಜುನ ಶೋಧ ಕಾರ್ಯ (Search Operation) ನಿನ್ನೆ ವಿಫಲಗೊಂಡಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡಕ್ಕೂ ಇವರ ಪತ್ತೆ ಹಿಡಿಯುವುದು ಸಾಧ್ಯವಾಗಿಲ್ಲ.

ಮುಳುಗುತಜ್ಞರ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ನಿನ್ನೆ ಸಂಜೆ ಮಾಹಿತಿ ನೀಡಿದ್ದಾರೆ. ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ. ಸಂಜೆಯಾದ ಹಿನ್ನಲೆ‌ ನಾಳೆ ಉಳಿದ ಒಂದು ಪ್ರದೇಶದ ಪರಿಶೀಲನೆ ನಡೆಯಲಿದೆ ಎಂದಿದ್ದಾರೆ.

ಮೂರು ಜಾಗಗಳಲ್ಲಿ ಪರಿಶೀಲಿಸಿದಾಗ ಕಲ್ಲು, ಮಣ್ಣು, ಮರದ ತುಂಡು ಹೆಚ್ಚಾಗಿ ಪತ್ತೆಯಾಗಿದೆ. ಇವುಗಳನ್ನ ತೆರವುಗೊಳಿಸಿ ಆಳದಲ್ಲಿ ಪರಿಶೀಲನೆ ನಡೆಸಬೇಕಿದೆ. ನೀರಿನ ಹರಿವು 10 ನಾಟ್ಸ್‌ಗಿಂತ ಹೆಚ್ಚಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ನಾಳೆ ಒಮ್ಮೆ ಕೊನೆಯ ಪ್ರಯತ್ನವನ್ನ ಮಾಡುತ್ತೇವೆ. ಇದುವರೆಗೆ ಪರಿಶೀಲಿಸಿದ ಜಾಗದಲ್ಲಿ ಯಾವುದೇ ಮೆಟಲ್ ಡಿಟೆಕ್ಟ್ ಆಗಿಲ್ಲ. ನಾಳೆ ಪ್ರಮುಖ ಒಂದು ಸ್ಥಳದ ಪರಿಶೀಲನೆ ಇದೆ. ಇದರೊಂದಿಗೆ ನೌಕಾಪಡೆ, ಸೇನೆಯವರು ಸೋನಾರ್ ಡಿಟೆಕ್ಷನ್ ಕೂಡಾ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕಲ್ಲು, ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಲಾರಿ ಇದೆ ಎನ್ನಲಾದ ಸ್ಥಳದಲ್ಲಿ ಬೃಹತ್ ಗಾತ್ರದ ಬಂಡೆಗಲ್ಲು ಕಂಡುಬಂದಿದೆ. ಬಂಡೆಗಲ್ಲಿನ ಕೆಳಗೆ ಲಾರಿ ಇರುವ ಸಾಧ್ಯತೆ ಇದೆ. ಈ ಕುರಿತು ಮತ್ತೊಮ್ಮೆ ಸಭೆ ನಡೆಸಿ ನಾಳೆ ಕಾರ್ಯಾಚರಣೆ ಮುಂದುವರೆಸುತ್ತೇವೆ. ನಾವು ಇದುವರೆಗೂ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದೇ ಶೋಧ ನಡೆಸುತ್ತಿದ್ದೇವೆ. ಯಾರೂ ಸಹ ಮೃತಪಟ್ಟಿದ್ದಾರೆ ಎಂದು ನಾವು ಪರಿಗಣನೆ ಮಾಡಿಲ್ಲ. ಸಾಧ್ಯವಾದ ಎಲ್ಲ ಕಡೆ ಕಣ್ಮರೆಯಾಗಿರುವವರಿಗೆ ಶೋಧ ನಡೆಸಲಾಗುತ್ತಿದೆ. ಸಾರ್ವಜನಿಕರು ಸಹ ಯಾವುದೇ ಮಾಹಿತಿ ಸಿಕ್ಕಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿ ಎಂದು ಶಿರೂರಿನಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಹೇಳಿಕೆ ನೀಡಿದ್ದಾರೆ.

ಈಶ್ವರ ಮಲ್ಪೆ ತಂಡದ ಸದಸ್ಯನಿಗೆ ಗಾಯ

ಕಾರ್ಯಾಚರಣೆಗೆ ಆಗಮಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ತಂಡದ ಓರ್ವ ಸದಸ್ಯನಿಗೆ ಗಾಯವಾಗಿದೆ. ಈಶ್ವರ ಮಲ್ಪೆ ತಂಡದ ದೀಪು ಎನ್ನುವವರು ಸ್ಥಳದಲ್ಲಿ ಡೈವಿಂಗ್ ಕಾರ್ಯಾಚರಣೆ ಮಾಡುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈಶ್ವರ ಮಲ್ಪೆ ಯಾರು?

ಮೂಲತಃ ಈಶ್ವರ್ ಮಲ್ಪೆ ಆಂಬ್ಯುಲೆನ್ಸ್ ಡ್ರೈವರ್ ಆಗಿದ್ದು, ಸಾಕಷ್ಟು ಜನರ ಪ್ರಾಣ ಉಳಿಸಿದ್ದಾರೆ. ನದಿಯ ಆಳಕ್ಕೆ ಇಳಿದು ನಾಪತ್ತೆಯಾದ ಮೃತದೇಹಗಳನ್ನು ಪತ್ತೆ ಹಚ್ಚುವ ಸಾಹಸಿ ಇವರು. ಅದೆಷ್ಟೇ ಆಳವಿರಲಿ, ಅಪಾಯಕಾರಿ ಸ್ಥಳವಿರಲಿ ಅಲ್ಲಿಗೆ ಇಳಿದು ಮೃತದೇಹಗಳನ್ನು ತೆಗೆದಿದ್ದಾರೆ. ಎಂಥದ್ದೇ ಪರಿಸ್ಥಿತಿ ಇದ್ದರೂ ಕರೆ ಬಂದ ತಕ್ಷಣ ಓಡಿ ಬರುತ್ತಾರೆ. ಕಳೆದ ವರ್ಷ ಜುಲೈ 23ರಂದು ಅರಿಶಿನ ಗುಂಡಿ ಜಲಪಾತದಲ್ಲಿ ಭದ್ರಾವತಿ ಮೂಲದ ಶರತ್ ಎಂಬಾತ ಕಾಲು ಜಾರಿ ನೀರಿಗೆ ಬಿದ್ದು ಸೌಪರ್ಣಿಕಾ ನದಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದ. ಮರದ ಬೇರಿಗೆ ಸಿಲುಕಿ ದೇಹ ಅಲ್ಲಿಯೇ ಇತ್ತು. ಆರು ದಿನಗಳ ಬಳಿಕ ಆ ಮೃತದೇಹವನ್ನು ಈಶ್ವರ್ ಮಲ್ಪೆ ಹೊರಕ್ಕೆ ತೆಗೆದಿದ್ದರು.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡಕುಸಿತ; ಅರ್ಜುನ್‌ ಶೋಧಕ್ಕೆ ಸಿಎಂ ಸಿದ್ದರಾಮಯ್ಯಗೆ ಪಿಣರಾಯಿ ಮೊರೆ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಹೆಚ್ಚಲಿದೆ ಗಾಳಿ ವೇಗ; ಕರಾವಳಿ, ಮಲೆನಾಡಿನಲ್ಲಿ ಭಯಂಕರ ಮಳೆ

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಭಾನುವಾರವೂ (Rain News) ಮುಂದುವರಿಯಲಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯು (Karnataka Weather Forecast) ಜನರ ನಿದ್ದೆಗೆಡಿಸಿದೆ. ಅದರಲ್ಲೂ ನದಿ ಪಾತ್ರದ ಜನರು ಗಂಟುಮೂಟೆ ಕಟ್ಟಿಕೊಂಡು ಮನೆ ಖಾಲಿ ಮಾಡಿದ್ದಾರೆ. ಸದ್ಯ ಭಾನುವಾರವೂ ಗಾಳಿ ಜತೆಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಪ್ರತ್ಯೇಕವಾಗಿ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

ಬೆಂಗಳೂರಿನಲ್ಲಿ ರಭಸವಾಗಿ ಬೀಸಲಿದೆ ಗಾಳಿ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ

ಆರೆಂಜ್‌ ಅಲರ್ಟ್‌

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಉಡುಪಿ, ಬೀದರ್,ಕಲಬುರಗಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Karnataka Weather Forecast : ಶನಿವಾರ ಹಲವಡೆ ಸುರಿದ ಮಳೆಯು (Rain News) ಸಾವು-ನೋವಿಗೆ ಕಾರಣವಾಗಿದೆ. ಭಾನುವಾರವೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗಾಳಿ ಜತೆಗೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದೆಡೆ ಗಾಳಿ ಜತೆಗೆ ಮಳೆಯಾಗಲಿದೆ.

ಇದನ್ನೂ ಓದಿ: Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

ಮುತ್ತತ್ತಿಗೆ ಪ್ರವಾಸಿಗರ ನಿಷೇಧ

ಮಂಡ್ಯ: ಭಾರಿ ಮಳೆಯಿಂದಾಗಿ (Karnataka Rain) ಕಾವೇರಿ ನದಿಯಲ್ಲಿ ನಿರೀಕ್ಷೆಗೂ ಮೀರಿ ನೀರಿನ ಪ್ರಮಾಣ ಹರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿಗೆ (muthathi temple) ಪ್ರವಾಸಿಗರು, ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಕೆಆರ್‌ಎಸ್‌ನಿಂದ 1.22 ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಮುತ್ತತ್ತಿಗೆ ಪ್ರವಾಸಿಗರಿಗೆ ನಿಷೇಧಾಜ್ಞೆ ಜಾರಿ ಮಾಡಿ ಮಳವಳ್ಳಿ ತಹಸೀಲ್ದಾರ್ ಕೆ.ಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಪ್ರವಾಹ ಕಡಿಮೆಯಾಗುವವರೆಗೂ ನಿಷೇಧ ಜಾರಿಯಲ್ಲಿ ಇರಲಿದೆ. ಹೀಗಾಗಿ ಪೊಲೀಸರು ಕಾವೇರಿ ನದಿ ದಡದಲ್ಲಿ ಅಪಾಯದ ಸೂಚನಾ ಫಲಕ ಹಾಕಿದ್ದಾರೆ.

ಇದನ್ನೂ ಓದಿ: land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಕಾವೇರಿ ‌ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ಹೀಗಾಗಿ ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್ ಹಾಕಲಾಗಿದೆ. ನದಿಗೆ ಇಳಿಯದಂತೆ ಜಿಲ್ಲಾಡಳಿತ ಕಬ್ಬಿಣದ ರಾಡ್‌ಗಳನ್ನು ಬಳಸಿ ತಡೆಗೋಡೆ‌ ನಿರ್ಮಿಸಿದೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಬಂದು ತಮ್ಮ‌ಪೂರ್ವಿಕರು, ಸಂಬಂಧಿಕರ ಅಸ್ತಿ ವಿಸರ್ಜನೆ ಜತೆಗೆ ಪಿಂಡ ಪ್ರಧಾನ ಮಾಡುತ್ತಿದ್ದರು. ಈಗ ಕಾವೇರಿ‌ ನದಿಯಲ್ಲಿ ಪ್ರವಾಹ ಹಿನ್ನೆಲೆ ನದಿ ದಂಡೆಯಲ್ಲಿ ಕುಳಿತು ಪೂಜೆ ಮಾಡುವ ಅವಕಾಶ ಇಲ್ಲ. ಜನರು ಪಿಂಡ ಪ್ರದಾನಕ್ಕೆ ಬಂದು ವಾಪಸ್‌ ಹೋಗುತ್ತಿದ್ದಾರೆ.

ನಿಮಿಷಾಂಭ ದೇಗುಲದ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ

ನಿಮಿಷಾಂಭ ದೇಗುಲದ ಭಕ್ತರಿಗೂ ಕಾವೇರಿ ಪ್ರವಾಹ ಬಿಸಿ ತಟ್ಟಿದೆ. ಕೆಆರ್‌ಎಸ್‌ನಿಂದ ನದಿಗೆ ಅಧಿಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ಪ್ರಸಿದ್ಧ ನಿಮಿಷಾಂಭ ದೇವಾಲಯದ ಬಳಿ ಪ್ರವಾಹದ ಆತಂಕ ಎದುರಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ದೇವಸ್ಥಾನದ ಬಳಿಯ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ರಂಗನತಿಟ್ಟು ಪಕ್ಷಿಧಾಮ ವಾಕಿಂಗ್‌ ಪಾಥ್‌ ಮುಳುಗಡೆ

ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರು ಕಾವೇರಿ ನದಿಯಿಂದಾಗಿ ರಂಗನತಿಟ್ಟು ಪಕ್ಷಿಧಾಮಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಕಾವೇರಿ ನೀರು ನುಗ್ಗಿದೆ. ಇದರಿಂದಾಗಿ ವಾಕಿಂಗ್ ಪಾಥ್, ಅರಣ್ಯ ಇಲಾಖೆ ಕಚೇರಿ ಜಲಾವೃತಗೊಂಡಿದೆ. ಈಗಾಗಲೇ ‌ಪಕ್ಷಿಧಾಮಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ. ಜತೆಗೆ ಬೋಟಿಂಗ್ ವ್ಯವಸ್ಥೆ ಕೂಡ ಸ್ಥಗಿತ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
sunil bose savitha viral news
ವೈರಲ್ ನ್ಯೂಸ್2 mins ago

Viral News: ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು!

Geyser Blast
ತಂತ್ರಜ್ಞಾನ5 mins ago

Geyser Blast: ಬಾಂಬ್‌‌ನಂತೆ ಬ್ಲಾಸ್ಟ್ ಆಗಬಹುದು ಗೀಸರ್! ಮಳೆಗಾಲದಲ್ಲಿ ಈ ಮುನ್ನೆಚ್ಚರಿಕೆ ಇರಲಿ

Mysuru News
ಕ್ರೈಂ26 mins ago

Mysuru News : ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ

Actor Darshan case Police Serve Notice To Siddarudha Who Claimed To Met Darshan
ಸ್ಯಾಂಡಲ್ ವುಡ್30 mins ago

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

hd kumaraswamy nanjanagudu
ಪ್ರಮುಖ ಸುದ್ದಿ33 mins ago

HD Kumaraswamy: ಎಚ್‌ಡಿ ಕುಮಾರಸ್ವಾಮಿ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ, ಕೇಂದ್ರ ಸಚಿವರಿಗೆ ಅವಮಾನ

RRB Recruitment 2024
ಉದ್ಯೋಗ34 mins ago

RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Paris 2024 Olympics
ಕ್ರೀಡೆ36 mins ago

Paris 2024 Olympics: ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ತರುಣ್‌ ವಿರುದ್ಧ ಟೀಕೆಗಳ ಸುರಿಮಳೆ

road Accident
ರಾಯಚೂರು50 mins ago

Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

Delhi Floods
ದೇಶ58 mins ago

Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

dog meat abdul razak
ಕ್ರೈಂ1 hour ago

Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ22 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ23 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌