DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ - Vistara News

ಉದ್ಯೋಗ

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಖಾಲಿ ಇರುವ ವಿವಿಧ 96 ಹುದ್ದೆಗಳ ನೇಮಕಕ್ಕೆ (DCC Bank Recruitment 2023) ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

DCC Bank Recruitment 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತವು ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ 96 ಹುದ್ದೆಗಳ ನೇಮಕಕ್ಕೆ (DCC Bank Recruitment 2023) ಅಧಿಸೂಚನೆ ಹೊರಡಿಸಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವಾಗಿರುತ್ತದೆ. ಲಿಖಿತ ಪರೀಕ್ಷೆ, ಸಂದರ್ಶನ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಖುದ್ದಾಗಿ/ಅಂಚೆ/ಕೊರಿಯಾರ್‌ ಇತ್ಯಾದಿಗಳ ಮೂಲಕ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬ್ಯಾಂಕ್‌ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ.

ಶಾಖಾ ವ್ಯವಸ್ಥಾಪಕರರು (Branch Managers) ನಾಲ್ಕು ಹುದ್ದೆ, ಹಿರಿಯ ಸಹಾಯಕರು (senior assistants) 19 ಹುದ್ದೆ, ಶೀಘ್ರಲಿಪಿಗಾರರು (stenographer) ಒಂದು ಹುದ್ದೆ, ಕಿರಿಯ ಸಹಾಯಕರು (junior assistants) 43 ಹುದ್ದೆ, ಕಂಪ್ಯೂಟರ್‌ ಆಪರೇಟರ್‌ ಎರಡು ಹುದ್ದೆ ಹಾಗೂ ವಾಹನ ಚಾಲಕರು ನಾಲ್ಕು ಹುದ್ದೆ ಮತ್ತು ನಾಲ್ಕನೇ ದರ್ಜೆ ನೌಕರರು 23 ಹುದ್ದೆಗಳಿಗೆ ಈ ನೇಮಕ ನಡೆಯಲಿದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-02-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 28-02-2023
ಸಹಾಯವಾಣಿ ಸಂಖ್ಯೆ: 9036377735
ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿ ಸಲ್ಲಿಸಲು ವೆಬ್‌ ವಿಳಾಸ:
http://recruitapp.in/bangalore_dccb2023

ವಿದ್ಯಾರ್ಹತೆ ಏನು?

ಶಾಖಾ ವ್ಯವಸ್ಥಾಪಕರ ಹುದ್ದೆ : ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಮತ್ತು ಕಂಪ್ಯೂಟರ್ ಆಪರೇಷನ್ಸ್ ಹಾಗೂ ಅಪ್ಲಿಕೇಷನ್‌ನಲ್ಲಿ ಜ್ಞಾನ ಹೊಂದಿರಬೇಕು.

ಹಿರಿಯ ಸಹಾಯಕರು: ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆ ಯುವಿಕೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಮತ್ತು ಕಂಪ್ಯೂಟರ್ ಆಪರೇಷನ್ಸ್ ಹಾಗೂ ಅಪ್ಲಿಕೇಷನ್‌ನಲ್ಲಿ ಜ್ಞಾನ ಹೊಂದಿರಬೇಕು.

ಶೀಘ್ರಲಿಪಿಗಾರರು: ದ್ವಿತೀಯ ಪಿ.ಯು.ಸಿ.ಯಲ್ಲಿ ಅಥವಾ 3 ವರ್ಷಗಳ ಡಿಪ್ಲೋಮೊ ಇನ್ ಕಮರ್ಷಿಯಲ್ ಪ್ರಾಕ್ಟಿಸ್‌ನಲ್ಲಿ ಉತ್ತೀರ್ಣರಾಗಿರಬೇಕು, ಸೀನಿಯರ್ ಕನ್ನಡ ಮತ್ತು ಇಂಗ್ಲಿಷ್ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಟೈಪಿಂಗ್, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ಸ್‌ನಲ್ಲಿ ಜ್ಞಾನವಿರಬೇಕು ಮತ್ತು ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.

ಕಂಪ್ಯೂಟರ್ ಆಪರೇಟರ್: ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅಥವಾ 3 ವರ್ಷಗಳ ಡಿಪ್ಲಮೊ ಇನ್ ಕಮರ್ಷಿಯಲ್ ಪ್ರಾಕ್ಟಿಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಸೀನಿಯರ್ ಕನ್ನಡ ಮತ್ತು ಇಂಗ್ಲಿಷ್ ಟೈಪ್‌ರೈಟಿಂಗ್‌ನಲ್ಲಿ ಉತ್ತೀರ್ಣರಾಗಿದ್ದು, ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ಸ್‌ನಲ್ಲಿ ಜ್ಞಾನವಿರಬೇಕು ಮತ್ತು ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.

ವಾಹನ ಚಾಲಕರು: ಎಸ್.ಎಸ್.ಎಲ್.ಸಿ. ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಕಾನೂನಿನನ್ವಯ ಲಘು ಮತ್ತು ಭಾರೀ ವಾಹನ ಚಾಲನೆ ಪರವಾನಗಿ ಹೊಂದಿರಬೇಕು.

ನಾಲ್ಕನೇ ದರ್ಜೆ ನೌಕರರು (CLASS-IV): ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸೂಚಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿರಬೇಕು. ನಿಗದಿ ಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬ್ಯಾಂಕ್‌ ಹೇಳಿದೆ.

ವಯೋಮಿತಿ ಎಷ್ಟು?

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು. ಗರಿಷ್ಠ ವಯೋಮಿತಿಯಲ್ಲಿ 2ಎ,2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಮೂರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ ನೀಡಲಾಗಿರುತ್ತದೆ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 1,500 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 750 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಲು ಅವಕಾಶ ನೀಡಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಇದನ್ನೂ ಓದಿ: India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳಿಗೆ ನೇಮಕ; ರಾಜ್ಯದಲ್ಲಿದೆ 3,036 ಹುದ್ದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Labour Day 2024: ಕಾರ್ಮಿಕರು ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

ಇ-ಶ್ರಮ ಕಾರ್ಡ್ ಮೂಲಕ ಅವರಿಗೆ (Labour Day 2024) ಸರ್ಕಾರಗಳ ಕಲ್ಯಾಣ ಯೋಜನೆಗಳನ್ನು ತಲುಪಿಸಿ, ಸಾಮಾಜಿಕ ಭದ್ರತೆ ಕಲ್ಪಿಸಲಾಗುತ್ತಿದೆ. 2021ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಇ-ಶ್ರಮ ಯೋಜನೆ ಮೂಲಕ ದೇಶದ ಸುಮಾರು 38 ಕೋಟಿ ಅಸಂಘಟಿತ ಕಾರ್ಮಿಕರಿಗೆ ನೆರವಾಗುವ ಗುರಿ ಹೊಂದಿದೆ. ರಾಜ್ಯದಲ್ಲೂ ಇ-ಶ್ರಮ ಕಾರ್ಡ್ ವಿತರಿಸಲಾಗುತ್ತಿದೆ. ಕಾರ್ಮಿಕ ದಿನಾಚರಣೆ (ಮೇ 1) ಹಿನ್ನೆಲೆಯಲ್ಲಿ ಈ ಯೋಜನೆಯ ವಿವರ ಇಲ್ಲಿ ನೀಡಲಾಗಿದೆ.

VISTARANEWS.COM


on

Labour Day 2024
Koo

ಅಸಂಘಟಿತ ವಲಯ(Unorganised sectors)ದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ (Labour Day 2024) ಸಲುವಾಗಿ ಕೇಂದ್ರ ಸರ್ಕಾರ ಇ-ಶ್ರಮ (e-Shram) ಯೋಜನೆ ಜಾರಿಗೆ ತಂದಿದೆ. ಇ-ಶ್ರಮ ಕಾರ್ಡ್ ಮೂಲಕ ಅವರಿಗೆ ಸರ್ಕಾರಗಳ ಕಲ್ಯಾಣ ಯೋಜನೆಗಳನ್ನು ತಲುಪಿಸಿ, ಸಾಮಾಜಿಕ ಭದ್ರತೆ ಕಲ್ಪಿಸಲಾಗುತ್ತಿದೆ. 2021ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಇ-ಶ್ರಮ ಯೋಜನೆ ಮೂಲಕ ದೇಶದ ಸುಮಾರು 38 ಕೋಟಿ ಅಸಂಘಟಿತ ಕಾರ್ಮಿಕರಿಗೆ ನೆರವಾಗುವ ಗುರಿ ಹೊಂದಿದೆ. ರಾಜ್ಯದಲ್ಲೂ ಇ-ಶ್ರಮ ಕಾರ್ಡ್ ವಿತರಿಸಲಾಗುತ್ತಿದೆ. ಹಾಗಾದರೆ ಇ-ಶ್ರಮ ಕಾರ್ಡ್‌ ಎಂದರೇನು? ಹೆಸರು ನೋಂದಾಯಿಸುವುದು ಹೇಗೆ? ಯಾರೆಲ್ಲ ಅರ್ಹರು? ಮುಂತಾದ ವಿವರ ಇಲ್ಲಿದೆ.

ಏನಿದು ಇ-ಶ್ರಮ ಕಾರ್ಡ್‌?

ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟೀಯ ದತ್ತಾಂಶವೇ ಈ ಇ-ಶ್ರಮ ಕಾರ್ಡ್. ಅಂದರೆ ಅಸಂಘಟಿತ ವಲಯದ ಕಾರ್ಮಿಕರಿಗೆ ವಿವಿಧ ಪ್ರಯೋಜನಗಳನ್ನು ಒದಗಿಸಲು ಕೇಂದ್ರ ಸರ್ಕಾರ ಪ್ರಾರಂಭಿಸಿದ ಡಿಜಿಟಲ್ ವೇದಿಕೆ ಇದಾಗಿದೆ. ಇದು ವಿಶಿಷ್ಟ 12-ಅಂಕಿಯ ಗುರುತಿನ ಸಂಖ್ಯೆಯನ್ನು ಒಳಗೊಂಡಿದೆ. ಇದರಲ್ಲಿ ಹೆಸರು, ವಯಸ್ಸು, ಲಿಂಗ, ಉದ್ಯೋಗ ಮತ್ತು ಕೆಲಸಗಾರನ ಕುರಿತು ಇತರ ಅಗತ್ಯ ಮಾಹಿತಿ ಇರುತ್ತದೆ.

ಯಾರೆಲ್ಲ ಅರ್ಹರು?

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‌ಗಳು, ಬೀದಿಬದಿ ವ್ಯಾಪಾರಿಗಳು, ಪತ್ರಿಕೆ ಮಾರಾಟಗಾರರು, ಇಟ್ಟಿಗೆ ಗೂಡು ಕೆಲಸಗಾರರು, ವಲಸೆ ಕಾರ್ಮಿಕರು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ತಮ್ಮ ಹೆಸರನ್ನು ಇದರಲ್ಲಿ ನೋಂದಾಯಿಸಬಹುದು. ಜತೆಗೆ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು ʼಇತರೆ ವರ್ಗʼಗಳಡಿ ನೋಂದಾಯಿಸಬಹುದು. 16ರಿಂದ 59 ವಯೋಮಾನದವರು, ಆದಾಯ ತೆರಿಗೆ ಪಾವತಿಸದವರು, ಭವಿಷ್ಯನಿಧಿ ಹಾಗೂ ಇಎಸ್​ಐ ಫಲಾನುಭವಿಯಾಗಿರದವರು ಇದಕ್ಕೆ ಅರ್ಹರು.

ಪ್ರಯೋಜನಗಳೇನು?

  • ನೋಂದಾಯಿಸಿಕೊಂಡ ಕಾರ್ಮಿಕರು ಭಾಗಶಃ ಅಂಗವೈಕಲ್ಯಕ್ಕೆ ಒಳಗಾದರೆ 1 ಲಕ್ಷ ರೂ.ಗಿಂತ ಪರಿಹಾರ ಲಭ್ಯ.
    ಆಕಸ್ಮಿಕವಾಗಿ ಮೃತಪಟ್ಟರೆ 2 ಲಕ್ಷ ರೂ. ಪರಿಹಾರ ಲಭ್ಯ.
  • ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿದರೆ ಸಾಮಾಜಿಕ ಭದ್ರತಾ ಯೋಜನೆಯ ಲಾಭ ದೊರೆಯುತ್ತದೆ.
    ಪಿಂಚಣಿ ವ್ಯವಸ್ಥೆಯೂ ಲಭ್ಯವಿದ್ದು, ತಿಂಗಳಿಗೆ 3,000 ರೂ. ಸಿಗುತ್ತದೆ.

ಆನ್‌ಲೈನ್‌ ಮೂಲಕ ಮಾಡುವ ವಿಧಾನ

  • ಅಧಿಕೃತ ವೆಬ್‌ಸೈಟ್‌ https://register.eshram.gov.in/#/user/selfಗೆ ಭೇಟಿ ನೀಡಿ.
  • ಮುಖಪುಟದ ವಿವರಗಳನ್ನು ಪರಿಶೀಲಿಸಿ ಮತ್ತು ಸ್ವಯಂ ನೋಂದಣಿ (Self Registration) ಆಯ್ಕೆ ಕ್ಲಿಕ್‌ ಮಾಡಿ.
  • ಆಧಾರ್‌ ಲಿಂಕ್‌ ಮಾಡಲಾದ ಮೊಬೈಲ್‌ ಸಂಖ್ಯೆ ನಮೂದಿಸಿ.
  • ಕ್ಯಾಪ್ಚಾ ಕೋಡ್‌ ನಮೂದಿಸಿ.
  • ಇಪಿಎಫ್‌ಒ ಮತ್ತು ಇಎಸ್ಐಸಿ ಹೌದು ಅಥವಾ ಇಲ್ಲ ಆಯ್ಕೆಯನ್ನು ಆರಿಸಿ.
  • Send OTP ಬಟನ್‌ ಮೇಲೆ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ತೆರೆದು ಅಗತ್ಯ ವಿವರಗಳನ್ನು ನೀಡಿ ಭರ್ತಿ ಮಾಡಿ.
  • ಕೇಳಿರುವ ಎಲ್ಲ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • Submit ಬಟನ್‌ ಕ್ಲಿಕ್‌ ಮಾಡಿ. ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಆಫ್‌ಲೈನ್‌ನಲ್ಲಿ ನೋಂದಣಿ ಮಾಡುವ ವಿಧಾನ

ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (CSC)ಕ್ಕೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಯಶಸ್ವಿ ನೋಂದಣಿಯ ಬಳಿಕ ಫಲಾನುಭವಿಗೆ ಸ್ಥಳದಲ್ಲಿಯೇ ಗುರುತಿನ ಚೀಟಿ ವಿತರಿಸಲಾಗುತ್ತದೆ. ಗಮನಿಸಿ ನೋಂದಣಿಗೆ ಹೆಸರು, ವಿಳಾಸ ಪುರಾವೆ, ವೃತ್ತಿ, ಶೈಕ್ಷಣಿಕ ಮಾಹಿತಿ, ಕುಟುಂಬದ ವಿವರ, ಆಧಾರ್‌ ಕಾರ್ಡ್‌, ವಿದ್ಯುತ್‌ ಬಿಲ್‌, ಜನನ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್‌ ಪಾಸ್‌ಬುಕ್‌ ಮಾಹಿತಿ, ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡಿದ ಮೊಬೈಲ್‌ ಸಂಖ್ಯೆ ಇದ್ಯಾದಿ ದಾಖಲೆ ಒದಗಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌-14434ಕ್ಕೆ ಕರೆ ಮಾಡಿ. ಇಮೇಲ್‌ ಐಡಿ- eshramcare-mole@gov.in ಸಂಪರ್ಕಿಸಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

Labour Day 2024: ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದಾದ್ಯಂತ ಮೇ 1ರಂದು ಕಾರ್ಮಿಕರ ದಿನವನ್ನು ಆಚರಿಸಲಾಗುತ್ತದೆ. ಇದು ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಈ ದಿನದ ಹಿನ್ನೆಲೆಯ ವಿವರ ಇಲ್ಲಿದೆ.

VISTARANEWS.COM


on

By

Labor Day-2024
Koo

ಬದುಕಿನ ಬಹುಪಾಲು ದಿನಗಳನ್ನು ದುಡಿಮೆಯಲ್ಲೇ ಕಳೆಯುವವರು ಕಾರ್ಮಿಕರು (Labour Day 2024). ಇವರಲ್ಲಿ ಕೆಲವರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ. ಹೀಗಾಗಿ ಅವರ ಬದುಕು ನಿತ್ಯವೂ ಹೋರಾಟದಲ್ಲೇ ಕಳೆಯುತ್ತದೆ. ನಿತ್ಯದ ಕೆಲಸದ ಕೂಲಿಗಾಗಿ ಯಾವುದೇ ವಿಶೇಷ ಸವಲತ್ತುಗಳಿಲ್ಲದೆ ಹಗಲು, ರಾತ್ರಿ ಎನ್ನದೆ ದುಡಿಯುವ ಜೀವಗಳು ಲಕ್ಷಾಂತರ. ಇವರ ಹೋರಾಟ, ತ್ಯಾಗಗಳನ್ನು ಸ್ಮರಿಸಲು ಪ್ರತಿ ವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು (International Labour Day-2024) ಆಚರಿಸಲಾಗುತ್ತದೆ. ಇದನ್ನು ಮೇ ದಿನ (may day) ಎಂದೂ ಕರೆಯಲಾಗುತ್ತದೆ.

ಕಾರ್ಮಿಕರ ದಿನಾಚರಣೆಯ ಮೂಲ 19ನೇ ಶತಮಾನದ ಉತ್ತರಾರ್ಧ ಎಂದು ಹೇಳಬಹುದು. ಈ ಸಂದರ್ಭದಲ್ಲಿ ಜಗತ್ತಿನಾದ್ಯಂತ ಕಾರ್ಮಿಕರು ಉತ್ತಮ ಕೆಲಸದ ಪರಿಸ್ಥಿತಿಗಳು, ನ್ಯಾಯಯುತ ವೇತನ ಮತ್ತು ಕಡಿಮೆ ಕೆಲಸದ ಸಮಯಕ್ಕಾಗಿ ಒತ್ತಾಯಿಸಲು ಪ್ರಾರಂಭಿಸಿದರು.

ಭಾರತ (india), ಕ್ಯೂಬಾ (cuba) ಮತ್ತು ಚೀನಾ (china) ಸೇರಿದಂತೆ 80ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸ್ತುತ ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ದುಡಿಯುವ ವರ್ಗದ ಜನರ ಹಕ್ಕುಗಳನ್ನು ಉತ್ತೇಜಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದ ವಿವಿಧ ಭಾಗಗಳಲ್ಲಿನ ಜನರು ಈ ದಿನದಂದು ಮೆರವಣಿಗೆಗಳನ್ನು ನಡೆಸುತ್ತಾರೆ, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ನಿತ್ಯದ ಕೆಲಸದಲ್ಲಿ ಸಾಧನೆ ಮಾಡಿರುವ ಕೆಲವು ಕಾರ್ಮಿಕರನ್ನು ಗುರುತಿಸಿ ಸಮ್ಮಾನವನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

ಇದರ ಇತಿಹಾಸ ಹೀಗಿದೆ

19ನೇ ಶತಮಾನದಲ್ಲಿ ಕಾರ್ಮಿಕ ದಿನಾಚರಣೆಯ ಪ್ರಾರಂಭವಾಯಿತು. ಅಮೆರಿಕದ ಚಿಕಾಗೋದಲ್ಲಿ 1886ರ ಮೇ 1 ರಂದು ಕಾರ್ಮಿಕರು ಕೆಲಸದ ದಿನವನ್ನು ಎಂಟು ಗಂಟೆಗೆ ನಿಗದಿ ಪಡಿಸುವಂತೆ ಒತ್ತಾಯಿಸಿ ಮುಷ್ಕರವನ್ನು ಆಯೋಜಿಸಿದ್ದರು. ಹೇಮಾರ್ಕೆಟ್ ಸ್ಕ್ವೇರ್‌ನಲ್ಲಿ ನಡೆದ ಕಾರ್ಮಿಕ ರ್ಯಾಲಿಯ ವೇಳೆ ಬಾಂಬ್ ಸ್ಫೋಟಗೊಂಡ ಅನಂತರ ಅಮೆರಿಕದಾದ್ಯಂತ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗಾಗಿ ಹೋರಾಡಲು ಒಗ್ಗೂಡಿದರು.

1889ರಲ್ಲಿ ಸಮಾಜವಾದಿ ಪಕ್ಷಗಳ ಅಂತಾರಾಷ್ಟ್ರೀಯ ಕಾಂಗ್ರೆಸ್ ಪ್ಯಾರಿಸ್ ನಲ್ಲಿ ಸಭೆ ಸೇರಿತು. ಮೇ 1ರಂದು ಕಾರ್ಮಿಕರ ದಿನ ಅಥವಾ ಕಾರ್ಮಿಕರ ದಿನವನ್ನು ಆಚರಿಸಲು ನಿರ್ಧಾರ ಕೈಗೊಂಡಿತು.


ಚೆನ್ನೈನಲ್ಲಿ ಮೊದಲ ಕಾರ್ಯಕ್ರಮ

ಭಾರತದಲ್ಲಿ ಮೊದಲ ಬಾರಿಗೆ ಕಾರ್ಮಿಕ ದಿನವನ್ನು 1923ರ ಮೇ 1ರಂದು ಚೆನ್ನೈನಲ್ಲಿ ಆಚರಿಸಲಾಯಿತು. ಮೊದಲ ಮೇ ದಿನಾಚರಣೆಯನ್ನು ಲೇಬರ್ ಕಿಸಾನ್ ಪಾರ್ಟಿ ಆಫ್ ಹಿಂದೂಸ್ತಾನ್ ಆಯೋಜಿಸಿತ್ತು. ಪಕ್ಷದ ನಾಯಕ ಕಾಮ್ರೇಡ್ ಸಿಂಗರವೇಲರ್ ಈ ಕಾರ್ಯಕ್ರಮವನ್ನು ಆಚರಿಸಲು ಎರಡು ಸಭೆಗಳನ್ನು ಆಯೋಜಿಸಿದ್ದರು.
ಕಾರ್ಮಿಕರ ದಿನವನ್ನು ವಿವಿಧ ಭಾರತೀಯ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ಅತ್ಯಂತ ಜನಪ್ರಿಯ ಹೆಸರು ಮೇ ದಿನವಾಗಿದೆ.

ಕಾರ್ಮಿಕರ ದಿನವನ್ನು ಹಿಂದಿಯಲ್ಲಿ ಕಾಮ್‌ಗರ್ ದಿನ್, ಕನ್ನಡದಲ್ಲಿ ಕಾರ್ಮಿಕ ದಿನಚರಣೆ, ತೆಲುಗಿನಲ್ಲಿ ಕಾರ್ಮಿಕ ದಿನೋತ್ಸವ, ಮರಾಠಿಯಲ್ಲಿ ಕಾಮ್‌ಗರ್ ದಿವಸ್, ತಮಿಳಿನಲ್ಲಿ ಉಜೈಪಾಲರ್ ದೀನಂ, ಮಲಯಾಳಂನಲ್ಲಿ ಥೋಝಿಲಾಲಿ ದಿನಂ ಮತ್ತು ಬಂಗಾಳಿಯಲ್ಲಿ ಶ್ರೋಮಿಕ್ ದಿಬೋಶ್ ಎಂದು ಕರೆಯಲಾಗುತ್ತದೆ.

ಈ ದಿನದ ಉದ್ದೇಶ ಏನು?

ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ಕಾರ್ಮಿಕರ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಇದು ನಮ್ಮ ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಕಾರ್ಮಿಕರ ಶ್ರಮವನ್ನು ಗೌರವಿಸುವುದು ಮತ್ತು ಅವರ ಘನತೆಯನ್ನು ಎತ್ತಿ ಹಿಡಿಯುವುದು ಈ ದಿನದ ವಿಶೇಷವಾಗಿದೆ.

Continue Reading

ಉದ್ಯೋಗ

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 1. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 1 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ಉಳಿಕೆ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೈದರಾಬಾದ್‌-ಕರ್ನಾಟಕ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಗಮನಿಸಿ ಮೇ 2ರ ಬಳಿಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಇದನ್ನೂ ಓದಿ: Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರೆಕ್ಟ್‌ ಲಿಂಕ್‌

Continue Reading

ಉದ್ಯೋಗ

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 506 ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (Central Armed Police Forces)ಗಳಲ್ಲಿನ ಅಸಿಸ್ಟಂಟ್‌ ಕಮಾಂಡೆಂಟ್‌ಗಳು (ಎ ಹುದ್ದೆಗಳು) ಹುದ್ದೆ ಇದಾಗಿದೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF), ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF), ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF), ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ (ITBP) ಮತ್ತು ಸಶಸ್ತ್ರ ಸೀಮಾ ಬಲ್‌ (SSB)ಗಳಲ್ಲಿ 506 ಹುದ್ದೆಗಳಿವೆ (UPSC CAPF Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ

ಗಡಿ ಭದ್ರತಾ ಪಡೆ (ಬಿಎಸ್ಎಫ್)-186, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌)- 120, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)- 100, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)- 58, ಸಶಸ್ತ್ರ ಸೀಮಾ ಬಲ್ (ಎಸ್ಎಸ್‌ಬಿ)- 42 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (Physical Efficiency Test) ಅಥವಾ ದೈಹಿಕ ಮಾಪನ ಪರೀಕ್ಷೆ (Physical Measurement Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

UPSC CAPF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ ಮೇಲ್‌ ಐಡಿ ನಮೂದಿಸಿ.
  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.
  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading
Advertisement
jammu kashmir flash flood
ದೇಶ19 mins ago

Jammu Kashmir Flash Flood: ಜಮ್ಮ- ಕಾಶ್ಮೀರದಲ್ಲಿ ಭೂಕುಸಿತ, ಹಠಾತ್ ಪ್ರವಾಹ: 5 ಸಾವು

Love Jihad
ದೇಶ29 mins ago

‌Love Jihad: ಲವ್‌ ಜಿಹಾದ್‌ಗೆ ಮತ್ತೊಂದು ಬಲಿ? ಹೋಟೆಲ್ ರೂಮ್ ನಲ್ಲಿ ಹಿಂದೂ ಯುವತಿ ಶವ ಪತ್ತೆ; ಮುಸ್ಲಿಂ ಯುವಕ ಎಸ್ಕೇಪ್‌

T20 World Cup 2024
ಕ್ರಿಕೆಟ್29 mins ago

T20 World Cup 2024: ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ಕನ್ನಡಿಗ ರಾಹುಲ್​ಗೆ ಕೊಕ್​

Hassan Pen Drive Case I gave video only to Devaraje Gowda says Karthik
ಹಾಸನ32 mins ago

Hassan Pen Drive Case: ನಾನು ವಿಡಿಯೊ ಕೊಟ್ಟಿದ್ದು ದೇವರಾಜೇಗೌಡರಿಗೆ ಮಾತ್ರ; ಅವರೇ ಲೀಕ್‌ ಮಾಡಿರಬೇಕು ಎಂದ ಕಾರ್ತಿಕ್!

Jai Shri Ram Slogan
ವಿದೇಶ50 mins ago

Jai Shri Ram Slogan: ಪ್ಯಾಲೆಸ್ತೇನ್ ವಿರುದ್ಧ ಜೈಶ್ರೀರಾಮ್ ಘೋಷಣೆ ಕೂಗಿದ ಇಸ್ರೇಲ್ ಬೆಂಬಲಿಗರು!

Amit Shah doctored video case
ದೇಶ1 hour ago

Amit Shah: ಅಮಿತ್‌ ಶಾ ತಿರುಚಿದ ವಿಡಿಯೋ ಪ್ರಕರಣ: ಆಪ್‌, ಕಾಂಗ್ರೆಸ್‌ ಪಕ್ಷದ ಮೂವರ ಬಂಧನ

National Commission for Women enters Prajwal Hassan Pen Drive Case Letter to DG to submit report within 3 days
ಕ್ರೈಂ1 hour ago

Hassan Pen Drive Case: ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಇಂಗ್ಲೆಂಡ್​, ದಕ್ಷಿಣ ಆಫ್ರಿಕಾ

America Shootout
ವಿದೇಶ1 hour ago

America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

Hassan Pen Drive Case does not work as a discharge petal says DK Shivakumar
ರಾಜಕೀಯ3 hours ago

Hassan Pen Drive Case: ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಅಸೆಂಬ್ಲಿಗೆ ಬರುವಂತೆ ಎಚ್‌ಡಿಕೆಗೆ ಡಿಕೆಶಿ ಸವಾಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ11 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌