Sonam Wangchuk: 3 ಈಡಿಯಟ್ಸ್‌ ಸಿನಿಮಾಗೆ ಸ್ಫೂರ್ತಿಯಾದ ಸೋನಂ ವಾಂಗ್ಚುಕ್‌ ಗೃಹಬಂಧನ, ಏನಿದಕ್ಕೆ ಕಾರಣ? - Vistara News

ದೇಶ

Sonam Wangchuk: 3 ಈಡಿಯಟ್ಸ್‌ ಸಿನಿಮಾಗೆ ಸ್ಫೂರ್ತಿಯಾದ ಸೋನಂ ವಾಂಗ್ಚುಕ್‌ ಗೃಹಬಂಧನ, ಏನಿದಕ್ಕೆ ಕಾರಣ?

Sonam Wangchuk: ಲಡಾಕ್‌ ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಿರುವ ಸೋನಂ ವಾಂಗ್ಚುಕ್‌ ಅವರು ಲಡಾಕ್‌ ಪರಿಸರ ರಕ್ಷಣೆಗಾಗಿ ಉಪವಾಸ ಆರಂಭಿಸಿದ್ದಾರೆ. ಆದರೆ, ಅವರನ್ನು ಗೃಹಬಂಧನದಲ್ಲಿರಿಸುವ ಮೂಲಕ ಲೆಫ್ಟಿನೆಂಟ್‌ ಗವರ್ನರ್‌ ದರ್ಪ ಮೆರೆದಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಡಾಕ್‌: ತ್ರೀ ಈಡಿಯಟ್ಸ್‌ (3 Idiots) ಸಿನಿಮಾ ನೋಡಿದವರಿಗೆ ಫುನ್ಸುಕ್‌ ವಾಂಗ್ಡು (ಆಮೀರ್‌ ಖಾನ್‌) ಪಾತ್ರ ನೆನಪಿರುತ್ತದೆ. ಹಾಗೆಯೇ, ಆಲ್‌ ಈಸ್‌ ವೆಲ್‌ (All Is Well) ಎಂಬ ಡೈಲಾಗ್‌ ಕೂಡ ಮನಸ್ಸಿನಲ್ಲಿ ಉಳಿದಿರುತ್ತದೆ. ಯಾವ ತ್ರೀ ಈಡಿಯಟ್ಸ್‌ ಸಿನಿಮಾದ ಫುನ್ಸುಕ್‌ ವಾಂಗ್ಡು ಪಾತ್ರಕ್ಕೆ ಸ್ಫೂರ್ತಿಯಾಗಿದ್ದರೋ, ಲಡಾಕ್‌ನಲ್ಲಿ ಶಿಕ್ಷಣ, ಪರಿಸರ ಪ್ರಜ್ಞೆ ಮೂಡಿಸುತ್ತಿದ್ದಾರೋ ಆ ಸೋನಂ ವಾಗ್ಚುಕ್‌ ಅವರೀಗ ಆಲ್‌ ಈಸ್‌ ನಾಟ್‌ ವೆಲ್‌ ಇನ್‌ ಲಡಾಕ್‌ ಎನ್ನುತ್ತಿದ್ದಾರೆ. ಅಲ್ಲದೆ, ಇವರ ಮೇಲೆ ಜಮ್ಮು-ಕಾಶ್ಮೀರ ಆಡಳಿತವು ಅಧಿಕಾರದ ಗುರಾಣಿ ಬಳಸಿದ್ದು, ಗೃಹಬಂಧನದಲ್ಲಿರಿಸಲಾಗಿದೆ.

ಕೇಂದ್ರಾಡಳಿತ ಪ್ರದೇಶವಾದ ಲಡಾಕ್‌ಅನ್ನು ಸಂವಿಧಾನದ 6ನೇ ಪರಿಚ್ಛೇದಕ್ಕೆ ಸೇರಿಸಬೇಕು, ಆ ಮೂಲಕ ಲಡಾಕ್‌ ಪರಿಸರ ರಕ್ಷಣೆಗೆ ಕ್ರಮ ತೆಗೆದುಕೊಳ್ಳಬೇಕು, ಲಡಾಕ್‌ನಲ್ಲಿ ಗಣಿಗಾರಿಕೆ ನಿಲ್ಲಿಸಬೇಕು ಎಂದು ಸೋನಂ ವಾಂಗ್ಚುಕ್‌ ಅವರು ಗಣರಾಜ್ಯೋತ್ಸವದ ದಿನದಿಂದಲೇ ಅವರು ತಮ್ಮ ಹಿಮಾಲಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಅಲ್ಟರ್‌ನೇಟಿವ್‌ ಲಡಾಕ್‌ನ ಚಾವಣಿ ಮೇಲೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಹಾಗೆಯೇ, ಲಡಾಕ್‌ ದುಸ್ಥಿತಿ ಬಗ್ಗೆ, ಕೇಂದ್ರ ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಮಾತನಾಡಿದ ವಿಡಿಯೊ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಹಾಗೆಯೇ, ತಮ್ಮ ಸಂಸ್ಥೆಯಲ್ಲಿಯೇ ಜಮ್ಮು-ಕಾಶ್ಮೀರ ಆಡಳಿತವು ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ. ಈ ಕುರಿತು ಅವರೇ ಜಾಲತಾಣದಲ್ಲಿ ವಿಡಿಯೊ ಪೋಸ್ಟ್‌ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

“ನನ್ನ ಸಂಸ್ಥೆಯಲ್ಲಿಯೇ ಗೃಹಬಂಧನದಲ್ಲಿರಿಸಲಾಗಿದೆ. ನಾನು ಎಲ್ಲಿಗೂ ಹೋಗಲು, ಬರಲು, ಯಾವುದೇ ಚಟುವಟಿಕೆಯಲ್ಲಿ ತೊಡಗುವಂತಿಲ್ಲ ಎಂದು ನಿರ್ಬಂಧಿಸಲಾಗಿದೆ. ಪೊಲೀಸರು ನನ್ನ ಸುತ್ತ ಸುತ್ತುವರಿದಿದ್ದಾರೆ, ನನ್ನ ಸಂಸ್ಥೆ ಸುತ್ತ ಗಸ್ತು ಕಾಯುತ್ತಿದ್ದಾರೆ. ಆದರೆ, ಪೊಲೀಸರು ನನ್ನನ್ನು ಹೀಗೆ ಏಕೆ ನಿರ್ಬಂಧಿಸಲಾಗಿದೆ ಎಂಬುದು ಗೊತ್ತಿಲ್ಲ. ಕೇಳಿದರೂ ಮಾಹಿತಿ ನೀಡಿಲ್ಲ” ಎಂದು ಹೇಳಿದ್ದಾರೆ. ವಿಡಿಯೊ ಸಮೇತ ಪೊಲೀಸರ ವಾಹನಗಳು ಇರುವುದನ್ನು ಬಹಿರಂಗಪಡಿಸಿದ್ದಾರೆ.

ಕೇಂದ್ರದಿಂದ ಹುಸಿ ಭರವಸೆ

“ಲಡಾಕ್‌ನ ಮೂರನೇ ಎರಡಷ್ಟು ಪ್ರದೇಶವು ನೀರ್ಗಲ್ಲುಗಳಿಂದ ಕೂಡಿದೆ. ಗಣಿಕಾರಿಕೆಯು ಎಗ್ಗಿಲ್ಲದೆ ನಡೆಯುತ್ತಿದೆ. ಕೇಂದ್ರ ಸರ್ಕಾರವು ಕಾರ್ಪೊರೇಟ್‌ ವಿಸ್ತರಣೆ ಮಾಡುತ್ತಿದೆ. ಕೇಂದ್ರ ಸರ್ಕಾರವು 370ನೇ ವಿಧಿ ರದ್ದುಗೊಳಿಸಿದ ಬಳಿಕ ಇಲ್ಲಿನ ಯಾವುದೇ ಪರಿಸ್ಥಿತಿ ಸುಧಾರಿಸಿಲ್ಲ. 12 ಸಾವಿರ ಉದ್ಯೋಗ ನೀಡುವ ಭರವಸೆ ಹುಸಿಯಾಗಿದೆ. ಕೇವಲ 800 ಜನರಿಗೆ ಉದ್ಯೋಗ ನೀಡಲಾಗಿದ್ದು, ಅದೂ ಪೊಲೀಸ್‌ ಹುದ್ದೆ ನೀಡಲಾಗಿದೆ. ಗಣಿಗಾರಿಕೆಯಿಂದಾಗಿ ಪರಿಸರ ಹಾಳಾಗುತ್ತಿದೆ. ವಿಧಿ ರದ್ದುಗೊಳಿಸಿದ ಬಳಿದ ಮೂರು ವರ್ಷದಲ್ಲಂತೂ ಪರಿಸ್ಥಿತಿ ಹದಗೆಟ್ಟಿದೆ” ಎಂದು ಮಾಹಿತಿ ನೀಡಿದ್ದಾರೆ.

6 ಸಾವಿರ ಕೋಟಿ ರೂ. ವ್ಯಯ ಆಗುತ್ತಿಲ್ಲ

“ಲಡಾಕ್‌ ಅಭಿವೃದ್ಧಿಗೆ ಬಜೆಟ್‌ನಲ್ಲಿ 6 ಕೋಟಿ ರೂ. ಮೀಸಲಿಡಲಾಗಿದೆ. ಆದರೆ, ಲೆಫ್ಟಿನೆಂಟ್‌ ಗವರ್ನರ್‌ ಅವರು ಹಣ ಬಿಡುಗಡೆ ಮಾಡದ ಕಾರಣ, ಅಷ್ಟೂ ಹಣ ವಾಪಸ್‌ ಹೋಗುತ್ತಿದೆ. ಇದರಿಂದ ಅಭಿವೃದ್ಧಿ ಮರೀಚಿಕೆಯಾಗುತ್ತಿದೆ. ಆರನೇ ಪರಿಚ್ಛೇದದ ಕುರಿತು ಮಾತನಾಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುತ್ತಿದೆ. ಪ್ರಜಾಪ್ರಭುತ್ವದ ಅಂಶಗಳು ಲಡಾಕ್‌ನಲ್ಲಿ ಮರೀಚಿಕೆಯಾಗಿವೆʼ ಎಂದು ತಿಳಿಸಿದ್ದಾರೆ.

ಮೋದಿ, ಅಮಿತ್‌ ಶಾ ಅವರೇ ಇಲ್ಲಿ ಕೇಳಿ…

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಸೋನಂ ವಾಂಗ್ಚುಕ್‌ ಅವರು ಹಲವು ಆಗ್ರಹ ಮಾಡಿದ್ದಾರೆ. “ಮೋದಿ ಅವರೇ, ಅಮಿತ್‌ ಶಾ ಅವರೇ, ನಿಮಗೆ ಇದೆಲ್ಲ ಗೊತ್ತಾಗಬೇಕು ಎಂದು ವಿಡಿಯೊ ಮಾಡಿದ್ದೇನೆ. ಲಡಾಕ್‌ ಜನ ತೊಂದರೆಗೆ ಸಿಲುಕಿದ್ದಾರೆ. ಸಂಕಷ್ಟದಲ್ಲಿ ಕಾಲ ಕಳೆಯುತ್ತಿದ್ದಾರೆ. ದಯಮಾಡಿ, ಇಲ್ಲಿನ ಸಮಸ್ಯೆ ಬಗೆಹರಿಸಿ” ಎಂದು ಆಗ್ರಹಿಸಿದ್ದಾರೆ.

ಬಾಂಡ್‌ ಕಳುಹಿಸಿದ ಲೆಫ್ಟಿನೆಂಟ್‌ ಗವರ್ನರ್‌

ಲಡಾಕ್‌ನಲ್ಲಿ ಪರಿಸರ ರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ಸೋನಂ ವಾಂಗ್ಚುಕ್‌ ಅವರಿಗೆ ಲೆಫ್ಟಿನೆಂಟ್‌ ಗವರ್ನರ್‌ ಅವರು ಬಾಂಡ್‌ ಕಳುಹಿಸಿದ್ದು, ಪ್ರತಿಭಟನೆ ನಡೆಸುವುದಿಲ್ಲ ಎಂಬುದಾಗಿ ಬರೆದುಕೊಡಿ ಎಂಬುದಾಗಿ ಉಲ್ಲೇಖಿಸಲಾಗಿದೆ. “ಲಡಾಕ್‌ನಲ್ಲಿ ಪ್ರತಿಭಟನೆ ನಡೆಸುವುದಿಲ್ಲ, ಜನರನ್ನು ಒಗ್ಗೂಡಿಸುವುದಿಲ್ಲ ಎಂಬುದಾಗಿ ಬರೆದಿರುವ ಬಾಂಡ್‌ ಮೇಲೆ ಸಹಿ ಹಾಕಬೇಕು” ಎಂದು ಲೆಫ್ಟಿನೆಂಟ್‌ ಗವರ್ನರ್‌ ರಾಧಾಕೃಷ್ಣ ಮಾಥುರ್‌ ಪತ್ರ ಬರೆದಿದ್ದಾರೆ ಎಂಬುದಾಗಿ ಸೋನಂ ಹೇಳಿದ್ದಾರೆ. ಹಾಗೆಯೇ, “ನಾನು ಯಾವುದೇ ಕಾರಣಕ್ಕೂ ಇದಕ್ಕೆ ಸಹಿ ಹಾಕುವುದಿಲ್ಲ. ನನ್ನನ್ನು ಜೈಲಿಗೆ ಹಾಕುತ್ತೀರಾ, ಹಾಕಿ, ತೊಂದರೆ ಇಲ್ಲ. ನಾನು ಹಿಂಜರಿಯುವುದಿಲ್ಲ” ಎಂಬುದಾಗಿ ಹೇಳಿದ್ದಾರೆ.

ಯಾರಿವರು ಸೋನಂ ವಾಂಗ್ಚುಕ್‌?

ವೃತ್ತಿಯಲ್ಲಿ ಎಂಜಿನಿಯರ್‌ ಆಗಿರುವ ಸೋನಂ ವಾಂಗ್ಚುಕ್‌ ಅವರು ಲಡಾಕ್‌ನಲ್ಲಿ ಶಿಕ್ಷಣ ಕ್ರಾಂತಿಗೆ ಕಾರಣರಾಗಿದ್ದಾರೆ. ತ್ರೀ ಈಡಿಯಟ್ಸ್‌ ಸಿನಿಮಾದಂತೆಯೇ, ಲಡಾಕ್‌ನ ಪರಿವರ್ತನೆಗೆ ಶ್ರಮಿಸಿದ್ದಾರೆ. ಇವರು ಹಿಮಾಲಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಅಲ್ಟರ್‌ನೇಟಿವ್ಸ್‌ ಲಡಾಕ್‌ (HIAL) ಸಂಸ್ಥೆಯ ನಿರ್ದೇಶಕರಾಗಿದ್ದಾರೆ. ಮಕ್ಕಳಿಗೆ ಕೌಶಲಾಧಾರಿತ ಶಿಕ್ಷಣ, ಸೋಲಾರ್‌ ವಿದ್ಯುತ್‌ ಬಳಕೆ ಸೇರಿ ಹಲವು ರೀತಿಯ ಬದಲಾವಣೆ ತರುತ್ತಿದ್ದಾರೆ, ಮಕ್ಕಳಿಗೆ ಜಾಗೃತಿ ಮೂಡಿಸಿದ್ದಾರೆ. ಹಾಗಾಗಿ ಇವರಿಗೆ 2018ರಲ್ಲಿ ಏಷ್ಯಾದ ನೊಬೆಲ್‌ ಎಂದೇ ಖ್ಯಾತಿಯಾದ ಮ್ಯಾಗ್ಸೆಸ್ಸೆ ಪ್ರಶಸ್ತಿ ನೀಡಲಾಗಿದೆ. ಈಗ ಲಡಾಕ್‌ ಪರಿಸರ ಸಂರಕ್ಷಣೆಗಾಗಿ ಜನವರಿ 26ರಿಂದ -20 ಡಿಗ್ರಿ ಚಳಿಯಲ್ಲೂ ಉಪವಾಸ ಆರಂಭಿಸಿದ್ದಾರೆ.

ಇದನ್ನೂ ಓದಿ: Adventure tour: ಲಡಾಕ್‌ನಲ್ಲಿ ಪ್ರವಾಸಿಗರಿಗೆ ಝಂಸ್ಕಾರ್‌ ಸಾಹಸ ಕ್ರೀಡಾ ಉತ್ಸವ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಅಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Dolly Chaiwala: ತಮ್ಮ ವಿಶಿಷ್ಟ ಶೈಲಿಯಿಂದಲೇ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿರುವ ನಾಗ್ಪುರದ ಡಾಲಿ ಚಾಯ್‌ವಾಲಾ ಸದ್ಯ ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರು ಸ್ಥಳೀಯರೊಂದಿಗೆ ಪೋಸ್‌ ನೀಡುತ್ತಿರುವ ಫೋಟೊ ವೈರಲ್‌ ಆಗಿದೆ.

VISTARANEWS.COM


on

Dolly Chaiwala
Koo

ನವದೆಹಲಿ: ಅದೃಷ್ಟ ಯಾವಾಗ ಯಾರಿಗೆ ಒಲಿಯುತ್ತದೆ ಎನ್ನುವುದನ್ನು ಹೇಳಲು ಸಾಧ್ಯವಿಲ್ಲ. ತನ್ನ ವಿಶಿಷ್ಟ ಉಡುಗೆ, ಹೇರ್‌ ಸ್ಟೈಲ್‌, ಚಹಾ ಮಾಡುವ ರೀತಿಯಿಂದಲೇ ಸೋಷಿಯಲ್‌ ಮೀಡಿಯಾದಲ್ಲಿ ಜನಪ್ರಿಯರಾಗಿದ್ದ ನಾಗ್ಪುರದ ಡಾಲಿ ಚಾಯ್‌ವಾಲಾ (Dolly Chaiwalla) ಅವರನ್ನು ಇತ್ತೀಚೆಗೆ ಮೈಕ್ರೋಸಾಫ್ಟ್‌ನ (Microsoft) ಸಹ-ಸಂಸ್ಥಾಪಕ, ಕೋಟ್ಯಧಿಪತಿ ಮತ್ತು ಸಮಾಜಸೇವಕ ಬಿಲ್ ಗೇಟ್ಸ್ (Bill Gates) ಭೇಟಿಯಾಗಿದ್ದರು. ಡಾಲಿ ಚಾಯ್‌ವಾಲಾ ಅವರ ಚಹಾ ಅಂಗಡಿಗೆ ಬಿಲ್‌ ಗೇಟ್ಸ್‌ ಆಗಮಿಸಿದ ವಿಡಿಯೊ ಭಾರೀ ವೈರಲ್‌ ಆಗಿತ್ತು. ಆ ಮೂಲಕ ಡಾಲಿ ಚಾಯ್‌ವಾಲಾ ಹೆಸರು ಮತ್ತಷ್ಟು ಜನಪ್ರಿಯವಾಗಿತ್ತು. ಇದೀಗ ಅವರ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಡಾಲಿ ಚಾಯ್‌ವಾಲಾ ಸದ್ಯ ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಬಾಲಿವುಡ್ ನಟ ಸೊಹೈಲ್ ಖಾನ್ ಅವರೊಂದಿಗೆ ಫೋಟೊಕ್ಕೆ ಪೋಸ್‌ ನೀಡಿದ್ದು, ಮತ್ತೊಮ್ಮೆ ವೈರಲ್‌ ಆಗಿದ್ದಾರೆ (Viral News).

ಪ್ರವಾಸಿಗರೊಂದಿಗೆ ಪೋಸ್‌

ಇದರ ಜತೆಗೆ ಡಾಲಿ ಚಾಯ್‌ವಾಲಾ ದ್ವೀಪ ರಾಷ್ಟ್ರದ ನಿವಾಸಿಗಳೊಂದಿಗೆ ಪೋಸ್‌ ನೀಡುತ್ತಿರುವ ಫೋಟೊಗಳು ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ. ಅನೇಕರು ಈ ಪೋಟೊಗಳಿಗೆ ಕಮೆಂಟ್‌ ಕೂಡ ಮಾಡಿದ್ದಾರೆ. ಕೆಲವರು ಡಾಲಿಯ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದರೆ, ಕೆಲವರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಡಾಲಿ ಸದ್ಯದಲ್ಲೇ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ” ಎಂದು ಒಬ್ಬರು ಹೇಳಿದ್ದಾರೆ. ಇನ್ನೊಬ್ಬರು “ಡಾಲಿ ಚಾಯ್‌ವಾಲಾ ಮತ್ತು ಬಿಲ್ ಗೇಟ್ಸ್ ಸ್ನೇಹಿತರು” ಎಂದು ಬರೆದಿದ್ದಾರೆ.

“ದೇವರು ನಿಮಗೆ ಹೆಚ್ಚಿನ ಯಶಸ್ಸನ್ನು ನೀಡಲಿ, ಸಹೋದರ” ಎಂದು ನೆಟ್ಟಿಗರೊಬ್ಬರು ಹಾರೈಸಿದ್ದಾರೆ. “ಡಾಲಿಯ ಯಶಸ್ಸು ನನಗೆ ಖುಷಿ ತಂದುಕೊಟ್ಟಿದೆ. ಸಣ್ಣ ವ್ಯಾಪಾರಿಯೊಬ್ಬ ಈ ಮಟ್ಟಕ್ಕೆ ಬೆಳೆದಾಗ ಅದನ್ನು ನೋಡಲು ನನಗೆ ತುಂಬಾ ಸಂತೋಷವಾಗುತ್ತದೆʼʼ ಎಂದು ಮತ್ತೊಬ್ಬರು ತಿಳಿಸಿದ್ದಾರೆ. ನಿಮ್ಮ ಬಗ್ಗೆ ಹೆಮ್ಮೆ ಎನಿಸುತ್ತದೆ ಎಂದು ಮಗದೊಬ್ಬರು ಹೇಳಿದ್ದಾರೆ. ʼʼಡಾಲಿ ಚಾಯ್‌ವಾಲಾ ಅಸಾಧಾರಣ ಪ್ರತಿಭೆ ಹೊಂದಿದ್ದಾರೆ. ಆದ್ದರಿಂದ ಅವರು ಈಗ ಇಲ್ಲಿದ್ದಾರೆ. ಚಹಾದಿಂದಾಗಿ ಅಲ್ಲ, ತಮ್ಮ ವಿಶಿಷ್ಟ ಶೈಲಿಯಿಂದಾಗಿ ಅವರು ಇಷ್ಟು ಯಶಸ್ಸು ದಾಖಲಿಸಿದ್ದಾರೆ” ಎಂದು ನೆಟ್ಟಿಗರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಡಾಲಿ ಚಾಯ್‌ವಾಲಾ ಹಿನ್ನೆಲೆ

ಮಹಾರಾಷ್ಟ್ರ ನಾಗಪುರದ ಸರ್ದಾರ್‌ ಏರಿಯಾದ ಹಳೆ ವಿಸಿಎ ಮೈದಾನ (Old VCA stadium)ದ ಬಳಿ ಬೀದಿ ಬದಿಯ ಚಹಾ ಗಾಡಿ ಇಟ್ಟುಕೊಂಡಿರುವ ಡಾಲಿ ಚಾಯ್‌ವಾಲಾ ತಮ್ಮ ವಿಶಿಷ್ಟ ಶೈಲಿಯ ಚಹಾ ತಯಾರಿಯ ಮೂಲಕವೇ ಜನಪ್ರಿಯರಾಗಿದ್ದಾರೆ. ಅವರ ನಿಜ ಹೆಸರು ಯಾರಿಗೂ ತಿಳಿದಿಲ್ಲ. ಆದರೆ ಅವರ ವಿಡಿಯೊಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಲಕ್ಷಗಟ್ಟಲೆ ಮಂದಿ ವೀಕ್ಷಿಸುತ್ತಾರೆ. ತಮ್ಮದೇ ಅನನ್ಯ ಶೈಲಿಯಲ್ಲಿ ಚಹಾ ಮಾಡುವ ವಿಡಿಯೊಗಳನ್ನು ಅವರು ಆಗಾಗ ಅಪ್‌ಲೋಡ್‌ ಮಾಡುತ್ತಿರುತ್ತಾರೆ. ಚಹಾ ಮಾತ್ರವಲ್ಲ ಡಾಲಿ ಚಾಯ್‌ವಾಲಾ ಅಂಗಡಿಯಲ್ಲಿ ಸಿಗರೇಟ್‌ ಕೂಡ ಲಭ್ಯ. ಹೀಗಾಗಿಯೇ ಅವರ ಅಂಗಡಿ ಮುಂದೆ ಯಾವಾಗಲೂ ಜನ ಸಂದಣಿ ಕಂಡು ಬರುತ್ತದೆ. ಇತ್ತೀಚೆಗೆ ಭಾರತದ ಪ್ರವಾಸ ಕೈಗೊಂಡಿದ್ದ ಬಿಲ್ ಗೇಟ್ಸ್ ಅವರು ಬೀದಿ ಬದಿಯ ಡಾಲಿ ಚಾಯ್‌ವಾಲಾ ಅವರ ಚಹಾ ಗಾಡಿ ಬಳಿ ಚಹಾ ಮಾಡಿಸಿಕೊಂಡು ಸವಿಯುತ್ತಿರುವ ವಿಡಿಯೊ ಎಲ್ಲೆಡೆ ಹರಿದಾಡಿ ಸಂಚಲನ ಸೃಷ್ಟಿಸಿತ್ತು. ಅಂದಿನಿಂದ ಅವರ ಅದೃಷ್ಟ ಖುಲಾಯಿಸಿತ್ತು.

ಇದನ್ನೂ ಓದಿ: Viral News: ಬಿಲ್‌ ಗೇಟ್ಸ್ ಮನಗೆದ್ದ ಈ ಡಾಲಿ ಚಾಯ್‌ವಾಲಾ ಯಾರು? ಏನಿವರ ಕಥೆ?

Continue Reading

ಪ್ರಮುಖ ಸುದ್ದಿ

Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

Mukhtar Ansari : 14 ಗಂಟೆಗಳ ಕಾಲ ಆಸ್ಪತ್ರೆಯಲ್ಲಿದ್ದು ಬಿಡುಗಡೆಗೊಂಡ ಬಳಿಕ ಮುಖ್ತಾರ್ ಅನ್ಸಾರಿಗೆ ಹೃದಯಾಘಾತ ಉಂಟಾಗಿತ್ತು.

VISTARANEWS.COM


on

Mukthar Ansari
Koo

ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಸೇರಿದ್ದ ಗ್ಯಾಂಗ್​ಸ್ಟರ್​ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ (Mukhtar Ansari ) ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾನೆ. ಬಾಂಡಾ ಜೈಲಿನಲ್ಲಿದ್ದ ಅನ್ಸಾರಿಗೆ ಹೃದಯಾಘಾತವಾಗಿ ಬ್ಯಾರಕ್ ನಲ್ಲಿ ಬಿದ್ದಿದ್ದ ಎಂದು ಮೂಲಗಳು ತಿಳಿಸಿವೆ. ಆತನನ್ನು ಅಲ್ಲಿಂದ ಬಾಂಡಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾನೆ. ಸಾವಿನ ಹಿನ್ನೆಯಲ್ಲಿ ಲಖನೌ ಮತ್ತು ಮೌ ಸದರ್​ ಮತ್ತು ಗಾಜಿಪುರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಎರಡು ದಿನಗಳಲ್ಲಿ ಎರಡನೇ ಬಾರಿಗೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅನ್ಸಾರಿಯನ್ನು ಮಂಗಳವಾರ ಬಾಂಡಾದಲ್ಲಿ ಸುಮಾರು 14 ಗಂಟೆಗಳ ಕಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆತನನ್ನು ಬಿಡುಗಡೆ ಮಾಡಲಾಗಿತ್ತು. ಏತನ್ಮಧ್ಯೆ. ತನ್ನ ಸಹೋದರನಿಗೆ ಜೈಲಿನಲ್ಲಿ ವಿಷಪ್ರಾಷನ ಮಾಡಲಾಗುತ್ತಿದೆ ಎಂದು ಮುಖ್ತಾರ್ ಸಹೋದರ ಅಫ್ಜಲ್ ಅನ್ಸಾರಿ ಅರೋಪಿಸಿದ್ದಾರೆ.

60 ಹೆಚ್ಚು ಪ್ರಕರಣಗಳ ಆರೋಪಿ, ಎಂಟರಲ್ಲಿ ಅಪರಾಧಿ

ಮೌ ಸದರ್ ಕ್ಷೇತ್ರದಿಂದ ಐದು ಬಾರಿ ಶಾಸಕನಾಗಿದ್ದ ಮುಖ್ತಾರ್ ಅನ್ಸಾರಿ 2005ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್ ನಲ್ಲಿ ಜೈಲಿನಲ್ಲಿದ್ದ. ಆತನ ವಿರುದ್ಧ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಸೆಪ್ಟೆಂಬರ್ 2022 ರಿಂದ ಯುಪಿಯ ವಿವಿಧ ನ್ಯಾಯಾಲಯಗಳು ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿದ್ದು, ಅವರನ್ನು ಬಾಂಡಾ ಜೈಲಿನಲ್ಲಿರಿಸಲಾಗಿತ್ತು.

ಕಳೆದ ವರ್ಷ ಉತ್ತರ ಪ್ರದೇಶ ಪೊಲೀಸರು ಬಿಡುಗಡೆ ಮಾಡಿದ 66 ದರೋಡೆಕೋರರ ಪಟ್ಟಿಯಲ್ಲಿ ಅನ್ಸಾರಿ ಹೆಸರು ಇತ್ತು. ಮುಖ್ತಾರ್ ಅನ್ಸಾರಿಯನ್ನು ನಕಲಿ ಎನ್​ಕೌಂಟರ್ ಮೂಲಕ ಕೊಲ್ಲಬಹುದು ಎಂದು ಅವರ ಕುಟುಂಬ ಸದಸ್ಯರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು.

ಎರಡನೇ ಬಾರಿ ಅನಾರೋಗ್ಯ

ಅಫ್ಜಲ್ ಅನ್ಸಾರಿ ಮಂಗಳವಾರ ಹೇಳಿಕೊಂಡಿದ್ದು, “ಜೈಲಿನಲ್ಲಿ ಆಹಾರದಲ್ಲಿ ವಿಷಕಾರಿ ವಸ್ತುವನ್ನು ನೀಡಲಾಗಿದೆ ಎಂದು ಮುಖ್ತಾರ್ ಹೇಳಿದ್ದಾರೆ. ಇದು ಎರಡನೇ ಬಾರಿಗೆ ಸಂಭವಿಸಿದೆ. ಸುಮಾರು 40 ದಿನಗಳ ಹಿಂದೆಯೂ ಅವರಿಗೆ ವಿಷ ನೀಡಲಾಯಿತು. ಮಾರ್ಚ್ 19 ರಂದು ಮಾರ್ಚ್ 22 ರಂದು, ಅವರಿಗೆ ಮತ್ತೆ ಈ (ವಿಷ) ನೀಡಲಾಗಿತ್ತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ :Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

ಮಾರ್ಚ್ 21 ರಂದು ಬಾರಾಬಂಕಿ ನ್ಯಾಯಾಲಯದಲ್ಲಿ ನಡೆದ ಪ್ರಕರಣದ ವರ್ಚುವಲ್ ವಿಚಾರಣೆಯ ಸಮಯದಲ್ಲಿ, ಮುಖ್ತಾರ್​ನ ವಕೀಲರು ತಮ್ಮ ಕಕ್ಷಿದಾರರಿಗೆ ಜೈಲಿನಲ್ಲಿ “ನಿಧಾನ ವಿಷ” ನೀಡಲಾಗುತ್ತಿದೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

1963 ರಲ್ಲಿ ಜನಿಸಿದ ಅನ್ಸಾರಿ ಅವರು ಮೌ ಕ್ಷೇತ್ರದಿಂದ ಐದು ಬಾರಿ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಕೊನೆಯ ಬಾರಿಗೆ ೨೦೧೭ ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ.

Continue Reading

ಕ್ರೈಂ

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Crime News: ಇಡೀ ದೆಹಲಿ ನಗರವೇ ಹೋಳಿ ಆಚರಣೆಯ ಸಿದ್ಧತೆಯಲ್ಲಿ ತೊಡಗಿದ್ದಾಗ ಘೋರ ಘಟನೆಯೊಂದು ನಡೆದಿತ್ತು. ಪಾಪಿಯೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದು ಪರಾರಿಯಾಗಿದ್ದ. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಆತನ ಹೆಡೆಮುರಿ ಕಟ್ಟಿ ಬಂಧಿಸಿದ್ದಾರೆ.

VISTARANEWS.COM


on

crime news
Koo

ನವದೆಹಲಿ: ಹೋಳಿ ಹಬ್ಬದ ಮುನ್ನಾ ದಿನ (ಮಾರ್ಚ್‌ 24) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬವಾನಾ ಪ್ರದೇಶದಲ್ಲಿ 5 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿ ಕೊಲೆ ಮಾಡಿ, ಪರಾರಿಯಾಗುವ ಮೊದಲು ಮಗುವಿನ ಶವವನ್ನು ಕಾರ್ಖಾನೆಯಲ್ಲಿ ಬಚ್ಚಿಟ್ಟಿದ್ದ. ಸದ್ಯ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ (Crime News). 

ಘಟನೆ ಹಿನ್ನೆಲೆ

ಮಾರ್ಚ್ 24ರಂದು ಎಲ್ಲರೂ ಹೋಳಿ ಪೂರ್ವದ ಆಚರಣೆ (ಹೋಲಿಕಾ ದಹನ್)ಯಲ್ಲಿ ತೊಡಗಿದ್ದಾಗ ದೆಹಲಿಯ ಬವಾನಾ ಪೊಲೀಸ್ ಠಾಣೆಗೆ ಬಾಲಕಿ ನಾಪತ್ತೆಯಾಗಿದ್ದಾಳೆ ಎಂದು ರಾತ್ರಿ 10.27ರ ಸುಮಾರಿಗೆ ಕರೆ ಬಂದಿತ್ತು. ಬವಾನಾ ಸೆಕ್ಟರ್ 1ರಿಂದ 5 ವರ್ಷದ ಬಾಲಕಿಯನ್ನು ಅಪಹರಿಸಲಾಗಿದೆ ಎಂದು ಕರೆ ಮಾಡಿದ ವ್ಯಕ್ತಿ ತಿಳಿಸಿದ್ದ. ಚಹಾ ಅಂಗಡಿ ನಡೆಸುತ್ತಿರುವ ಬಾಲಕಿಯ ಪೋಷಕರು, ಸಂಜೆ 5 ಗಂಟೆ ಸುಮಾರಿಗೆ ಬಾಲಕಿಯನ್ನು ಕೊನೆಯದಾಗಿ ನೋಡಿದ್ದಾಗಿಯೂ ಬಳಿಕ ಅವಳನ್ನು ಹುಡುಕಲು ಪ್ರಯತ್ನಿಸಿದರೂ ಕಂಡಿ ಬಂದಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದರು.

ಪ್ರಕರಣ ದಾಖಲಿಸಿದ ಪೊಲೀಸರು ಪೋಷಕರೊಂದಿಗೆ ಶೋಧವನ್ನು ಪ್ರಾರಂಭಿಸಿದ್ದರು. ಬಾಲಕಿಯನ್ನು ಕೊನೆಯದಾಗಿ ನೋಡಿದ ಪ್ರದೇಶಗಳ ಸುತ್ತಲೂ ಇಡೀ ರಾತ್ರಿ ಹುಡಕಾಡಿದರೂ ಪತ್ತೆಯಾಗಿರಲಿಲ್ಲ. ಮಾರನೇ ದಿನ ಮಾರ್ಚ್ 25ರಂದು ಬೆಳಗ್ಗೆ ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಅದರಲ್ಲಿ ಆ ಬಾಲಕಿ ಒಬ್ಬ ವ್ಯಕ್ತಿಯೊಂದಿಗೆ ನಡೆದುಕೊಂಡು ಹೋಗುತ್ತಿರುವುದನ್ನು ಕಂಡುಬಂತು. ಹುಡುಗಿಯ ಪೋಷಕರು ಆ ವ್ಯಕ್ತಿಯನ್ನು ಗುರುತಿಸಿದ್ದರು ತೋಟಾನ್ ಎಂದು ಗುರುತಿಸಿದ್ದರು.

ಕೂಡಲೇ ಪೊಲೀಸರು ತೋಟಾನ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದರು. ಆದರೆ ಆತ ಅಲ್ಲಿಂದ ತಪ್ಪಿಸಿಕೊಂಡಿದ್ದ. ಅಲ್ಲಿದ್ದವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆತ ನವದೆಹಲಿ ರೈಲ್ವೆ ನಿಲ್ದಾಣದಿಂದ ಹೌರಾಗೆ ತೆರಳುವ ಪೂರ್ವಾ ಎಕ್ಸ್‌ಪ್ರೆಸ್‌ ರೈಲಿಗಾಗಿ ಹೋಗಿದ್ದಾನೆ ಎನ್ನುವುದು ತಿಳಿದು ಬಂತು.

ತಕ್ಷಣ ಪೊಲೀಸರು ಕಾರ್ಯ ಪ್ರವೃತ್ತರಾದರೂ ಅವರು ಅಲ್ಲಿಗೆ ತಲುಪುವಾಗ ರೈಲು ಹೊರಟಿತ್ತು. ಬಳಿಕ ಮಾರ್ಚ್ 26ರ ಬೆಳಗ್ಗೆ ಪೊಲೀಸ್ ತಂಡವೊಂದು ಕೋಲ್ಕತಾ ವಿಮಾನ ನಿಲ್ದಾಣಕ್ಕೆ ತೆರಳಿತು. ನಂತರ ಪೊಲೀಸರು ಅಸನ್ಸೋಲ್ ರೈಲ್ವೆ ನಿಲ್ದಾಣಕ್ಕೆ ತಲುಪಿದರು. ಪೂರ್ವಾ ಎಕ್ಸ್‌ಪ್ರೆಸ್‌ ಅನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ಅದರಲ್ಲಿ ಆರೋಪಿ ಪತ್ತೆಯಾಗಿದ್ದ. ಮಾರ್ಚ್ 27ರಂದು ಆತನನ್ನು ದೆಹಲಿಗೆ ಕರೆತರಲಾಯಿತು.

ಇದನ್ನೂ ಓದಿ: ಮರೆಯಾದ ಮಾನವೀಯತೆ: ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮೆರವಣಿಗೆ; ನಾಲ್ವರು ಮಹಿಳೆಯರ ಬಂಧನ

ತಪ್ಪೊಪ್ಪಿಗೆ

ವಿಚಾರಣೆ ವೇಳೆ ಆರೋಪಿ ತೋಟಾನ್ ತಪ್ಪೊಪ್ಪಿಕೊಂಡಿದ್ದಾನೆ. ಮಾರ್ಚ್ 24ರಂದು ಸಂಜೆ 7.30ರ ಸುಮಾರಿಗೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಂದು ಶವವನ್ನು ಬವಾನಾದ ಕಾರ್ಖಾನೆಯಲ್ಲಿ ಎಸೆದಿದ್ದಾಗಿ ತಿಳಿಸಿದ್ದಾನೆ. ಪರಿಶೋಧನೆ ಬಳಿಕ ಬಾಲಕಿಯ ದೇಹವು ಬ್ಲೇಡ್ ಮತ್ತು ಇಟ್ಟಿಗೆಯೊಂದಿಗೆ ಪತ್ತೆಯಾಗಿದೆ. ಹೋಳಿ ಆಚರಣೆ ಹಿನ್ನೆಲೆಯಲ್ಲಿ ಕಾರ್ಖಾನೆಗೆ ರಜೆ ಸಾರಿದ್ದು ಆತನಿಗೆ ಅನುಕೂಲವಾಗಿ ಮಾರ್ಪಟ್ಟಿತ್ತು. ಸದ್ಯ ತೋಟಾನ್ ವಿರುದ್ಧ ಪೋಕ್ಸೊ ಕಾಯ್ದೆಯ ಸೆಕ್ಷನ್ 302 (ಕೊಲೆ) ಮತ್ತು 376 (ಅತ್ಯಾಚಾರ) ದಾಖಲಿಸಲಾಗಿದೆ. ಪೊಲೀಸರು ಪ್ರಕರಣದ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Women Slapped : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Women Slapped
Koo

ಬೆಂಗಳೂರು: ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ (PTI) ಮಹಿಳಾ ವರದಿಗಾರರ (Female Journalist) ಮೇಲೆ ಮತ್ತೊಂದು ಸುದ್ದಿ ಸಂಸ್ಥೆ ಎಎನ್ಐನಲ್ಲಿ (ANI) ಕೆಲಸ ಮಾಡುತ್ತಿರುವ ಪತ್ರಕರ್ತನೊಬ್ಬ (Male Journalist) ದೈಹಿಕವಾಗಿ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. ಉಪ ಮುಖ್ಯಮಂತ್ರಿ ಡಿ . ಕೆ. ಶಿವಕುಮಾರ್ ಅವರು ನಡೆಸಿದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಇಬ್ಬರೂ ವರದಿಗಾರರು ತೀವ್ರ ವಾಗ್ವಾದ ನಡೆಸಿದ್ದು, ಅಂತಿಮವಾಗಿ ಎಎನ್ಐ ವರದಿಗಾರ ಪಿಟಿಐ ವರದಿಗಾರ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇತರ ಸುದ್ದಿ ಸಂಸ್ಥೆಗೆ ಸೇರಿದವರು ಎಎನ್ಐ ವರದಿಗಾರನನ್ನು ದೂರ ತಳ್ಳಿ ಇನ್ನಷ್ಟು ಗಲಾಟೆಯಾಗದಂತೆ ನೋಡಿಕೊಂಡಿದ್ದಾರೆ. ಇವೆಲ್ಲವು ವಿಡಿಯೊದಲ್ಲಿ ದಾಖಲಾಗಿದೆ.

“ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಿಟಿಐ ಯುವ ವರದಿಗಾರ್ತಿಯೊಬ್ಬರ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಲೈಂಗಿಕ ಕಿರುಕುಳ ನೀಡಲಾಗಿದೆ. ಇದು ಎಎನ್ಐ ವರದಿಗಾರನ ಅಸಹ್ಯಕರ ವರ್ತನೆ. ಎಎನ್ಐ ತನ್ನ ಸಿಬ್ಬಂದಿಯ ಇಂತಹ ನಡವಳಿಕೆಯನ್ನು ಖಂಡಿಸುತ್ತದೆಯೇ? ಎಂದು ಪಿಟಿಐ ವಿಡಿಯೊ ಸಮೇತ ಟ್ವೀಟ್ ಮಾಡಿದೆ.

ಪಿಟಿಐ ಈ ಘಟನೆಯನ್ನು ಖಂಡಿಸಿದೆ ಮತ್ತು ವೀಡಿಯೊದಲ್ಲಿ ಕಾಣಿಸಿಕೊಂಡ ತಮ್ಮ ಉದ್ಯೋಗಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಎನ್ಐ ಆಡಳಿತ ಮಂಡಳಿಗೆ ಮನವಿ ಮಾಡಿದೆ. ಎಫ್ಐಆರ್ ಕೂಡ ದಾಖಲಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡುವುದಾಗಿ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ : Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

“ನಮ್ಮ ಆಡಳಿತ ಮಂಡಳಿ ಮತ್ತು ಪತ್ರಕರ್ತೆಯ ಸಹೋದ್ಯೋಗಿಗಳು ಆಕ್ರೋಶಗೊಂಡಿದ್ದಾರೆ ಮತ್ತು ಈ ಅಪ್ರಚೋದಿತ ಹಲ್ಲೆಯನ್ನು ಬಲವಾಗಿ ಖಂಡಿಸಿದ್ದಾರೆ. ಪಿಟಿಐ ತನ್ನ ಉದ್ಯೋಗಿಗಳನ್ನು ರಕ್ಷಿಸಲು ಬದ್ಧವಾಗಿದೆ. ಆಘಾತಕಾರಿ ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ. ಪಿಟಿಐ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ದೂರು ಸಲ್ಲಿಸಿದ್ದೇವೆ” ಎಂದು ಪಿಟಿಐ ಹೇಳಿಕೆ ಬಿಡುಗಡೆ ಮಾಡಿದೆ.

ಘಟನೆಯ ಬಗ್ಗೆ ಅನೇಕ ನಾಯಕರು ಕಳವಳ ವ್ಯಕ್ತಪಡಿಸಿದರು ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬೂ ಸುಂದರ್, “ಇಂದು ಬೆಂಗಳೂರಿನಲ್ಲಿ ಪಿಟಿಐ ಪತ್ರಕರ್ತೆಯನ್ನು ದೈಹಿಕವಾಗಿ ಮತ್ತು ಮೌಖಿಕವಾಗಿ ನಿಂದಿಸಿದ ಪುರುಷ ಪತ್ರಕರ್ತನ ನಡವಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಯಸುತ್ತೇನೆ ಎಂದು ಬರೆದಿದ್ದಾರೆ.

ಏತನ್ಮಧ್ಯೆ, ಎಎನ್ಐ ವರದಿಗಾರ ತನ್ನ ಮೇಲೆ ಮೊದಲು ಮಹಿಳಾ ಪತ್ರಕರ್ತೆ ಹಲ್ಲೆ ನಡೆಸಿದ್ದರು ಎಂದು ಪ್ರತಿ ಎಫ್ಐಆರ್ ದಾಖಲಿಸಲಿದ್ದಾರೆ. ಅದಕ್ಕೆ ಪೂರಕವಾಗಿ ಪರಚಿದ ಮುಖದ ಚಿತ್ರ ಹಾಕಿದ್ದಾರೆ. ಆದಾಗ್ಯೂ, ಎಎನ್ಐ ಪತ್ರಕರ್ತ ನವೀನ್ ಕಪೂರ್ ನೀಡಿದ ಸ್ಪಷ್ಟೀಕರಣದ ಪ್ರಕಾರ, ಉದ್ಯೋಗದಾತರು ಅವರನ್ನು ತಾತ್ಕಾಲಿಕವಾಗಿ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

Continue Reading
Advertisement
Dolly Chaiwala
ವೈರಲ್ ನ್ಯೂಸ್12 mins ago

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಅಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Mukthar Ansari
ಪ್ರಮುಖ ಸುದ್ದಿ24 mins ago

Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

Former DCM Govinda Karajola pressmeet
ಬೆಂಗಳೂರು38 mins ago

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

crime news
ಕ್ರೈಂ50 mins ago

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Women Slapped
ಪ್ರಮುಖ ಸುದ್ದಿ54 mins ago

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Tata Ace vehicle overturned Two persons dead five seriously injured
ಕರ್ನಾಟಕ1 hour ago

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Xiaomi Car in China
ಪ್ರಮುಖ ಸುದ್ದಿ2 hours ago

Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

viral video
ವೈರಲ್ ನ್ಯೂಸ್2 hours ago

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನಿಗೆ ʼಪಾಠʼ ಕಲಿಸಿದ ವಿದ್ಯಾರ್ಥಿಗಳು; ಹೇಗೆಂದು ನೀವೇ ನೋಡಿ

BJP State Vice President Malavika Avinash latest statement
ಬೆಂಗಳೂರು2 hours ago

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Lok Sabha Election 2024 Prajwal Revanna gets Rs 40 crore worth asset
Lok Sabha Election 20242 hours ago

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20249 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202411 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ18 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌