Assault Case: ಚಿಕ್ಕತ್ತೂರಿನಲ್ಲಿ ರಾಜಕೀಯ ದ್ವೇಷಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ - Vistara News

ಕರ್ನಾಟಕ

Assault Case: ಚಿಕ್ಕತ್ತೂರಿನಲ್ಲಿ ರಾಜಕೀಯ ದ್ವೇಷಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ

Assault Case: ಮಡಿಕೇರಿ ರಾಜಕೀಯ ದ್ವೇಷಕ್ಕೆ ವೇದಿಕೆ ಆಗುತ್ತಿದೆಯೇ? ಎಂಬ ಅನುಮಾನ ಮೂಡಿದೆ. ಒಂದೇ ಊರಿನ ಎರಡು ಗುಂಪುಗಳು ಹೊಡೆದಾಡಿಕೊಂಡಿದ್ದು, ರಾಜಕೀಯ ಪಕ್ಷದ ವಿಚಾರವಾಗಿ ಗಲಾಟೆ ನಡೆದಿರುವುದೇ ಈ ಅನುಮಾನಕ್ಕೆ ಕಾರಣವಾಗಿದೆ.

VISTARANEWS.COM


on

Assault Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಡಗು: ಇಲ್ಲಿನ ಕುಶಾಲನಗರ ತಾಲೂಕಿನ ಚಿಕ್ಕತ್ತೂರಿನಲ್ಲಿ ಎರಡು ಗುಂಪುಗಳ ನಡುವೆ (Assault Case) ಹೊಡೆದಾಟ ನಡೆದಿದ್ದು, ರಾಜಕೀಯ ದ್ವೇಷಕ್ಕೆ ಮಡಿಕೇರಿಯು ವೇದಿಕೆ ಆಗುತ್ತಿದೆಯೇ ಎಂಬ ಅನುಮಾನ ಮೂಡಿದೆ. ಜೆಡಿಎಸ್ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಚಿಕ್ಕತ್ತೂರಿನಲ್ಲಿ ಶುಕ್ರವಾರ ರಾತ್ರಿ ಒಂದೇ ಊರಿನ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಗ್ರಾಮದ ಅನುಕುಮಾರ್ ಮೇಲೆ ಅನಿಲ್‌ ಎಂಬಾತ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಗಾಯಗಳಾಗಿದ್ದು, ಗಾಯಾಳು ಅನುಕುಮಾರ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಲಾಟೆಯಲ್ಲಿ ಅನಿಲ್‌ಗೂ ಪೆಟ್ಟಾಗಿದ್ದು ಈತನನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅನುಕುಮಾರ್‌ ಚಾಲಕ ವೃತ್ತಿಯನ್ನು ಮಾಡಿಕೊಂಡಿದ್ದು, ಶುಕ್ರವಾರ ರಾತ್ರಿ ಸುಮಾರು 8.30ರ ಹೊತ್ತಿಗೆ ವೈನ್‌ ಶಾಪ್‌ನಿಂದ ಬಿಯರ್‌ ಬಾಟೆಲ್‌ ಪರ್ಸಲ್‌ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಅಲ್ಲಿಗೆ ಬಂದ ಅನಿಲ್‌ ಮತ್ತು ದಿಲೀಪ್‌, ಜೆಡಿಎಸ್‌ ನಡೆಸುತ್ತಿರುವ ಪಂಚಯಾತ್ರೆ ವಾಹನವನ್ನು ನೀನು ಯಾಕೆ ಓಡಿಸುತ್ತಿದ್ದೀಯಾ? ಎಂದು ಪ್ರಶ್ನೆ ಮಾಡಿದ್ದಾರೆ.

ಬಳಿಕ ಏಕಾಏಕಿ ಬಿಯರ್‌ ಬಾಟಲ್‌ನಿಂದ ಅನುಕುಮಾರ್‌ ತಲೆಗೆ ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇತ್ತ ಹಲ್ಲೆಗೆ ಕುಮ್ಮಕ್ಕು ನೀಡಿದ ದಿನೇಶ್‌ ಎಂಬಾತನ ಮೇಲೆ ಕಾನೂನು ರೀತಿಯ ಕ್ರಮಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ಲಾಸ್ಟಿಕ್‌ ಬುಟ್ಟಿಯಲ್ಲಿತ್ತು 10 ದಿನದ ಗಂಡು ಮಗು; ನಡುರಸ್ತೆಯಲ್ಲಿ ಬಿಟ್ಟು ಹೋದ ಮಹಾತಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

Lok Sabha Election 2024: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಉಂಟಾಗಿದ್ದ ಗೊಂದಲ ಕೊನೆಗೂ ಬಗೆಹರಿದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮನವೊಲಿಕೆ ಮಾಡಲಾಗಿದೆ. ಹೀಗಾಗಿ ಹೈಕಮಾಂಡ್‌ ಯಾರಿಗೇ ಟಿಕೆಟ್‌ ಕೊಟ್ಟರೂ ಕೆಲಸ ಮಾಡುವುದಾಗಿ ಎರಡೂ ಬಣದವರು ಒಪ್ಪಿದ್ದಾರೆನ್ನಲಾಗಿದೆ. ಆದರೆ, ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಣ ರಾಜಕೀಯವನ್ನು ತಣ್ಣಗೆ ಮಾಡಬೇಕಿದೆ.

VISTARANEWS.COM


on

Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ಕಾಂಗ್ರೆಸ್‌ಗೆ ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಅದರಲ್ಲಿ ಬಹುಮುಖ್ಯವಾಗಿ ಕೋಲಾರ ಲೋಕಸಭೆ ಕ್ಷೇತ್ರ (Kolar Lok Sabha constituency) ಹಾಗೂ ಪಕ್ಕದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ತಲೆನೋವು ತಂದಿದೆ. ಎರಡೂ ಕ್ಷೇತ್ರಗಳಲ್ಲಿ ಬಣ ರಾಜಕೀಯ ಜೋರಾಗಿಯೇ ಇದೆ. ಕೋಲಾರದಲ್ಲಿ ಕೆ.ಎಚ್.‌ ಮುನಿಯಪ್ಪ (K.H. Muniyappa) ಅವರ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಒಲವು ತೋರಿದೆ ಎಂದು ಮಾಜಿ ಸಚಿವ ರಮೇಶ್ ಕುಮಾರ್ (Ramesh Kumar) ಟೀಮ್ ಕೆರಳಿತ್ತು. ಆದರೆ, ಈಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಎಂದು ಎರಡೂ ಬಣದ ನಾಯಕರು ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸಭೆ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಬೈರತಿ ಸುರೇಶ್‌, ಕೋಲಾರದ ಸಮಸ್ಯೆ ಬಗೆಹರಿದಿದೆ. ಹೈಕಮಾಂಡ್‌ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಹೈಕಮಾಂಡ್‌ ಯಾರನ್ನು ಅಭ್ಯರ್ಥಿಯನ್ನಾಗಿಸಬೇಕು ಎಂದು ತೀರ್ಮಾನ ಮಾಡುತ್ತದೆಯೋ ಅದಕ್ಕೆ ನಾವು ಬದ್ಧ‌ ಎಂದು ರಮೇಶ್‌ ಕುಮಾರ್‌ ಬಣ ಹಾಗೂ ಕೆ.ಎಚ್.‌ ಮುನಿಯಪ್ಪ ಅವರ ಬಣ ಒಪ್ಪಿಕೊಂಡಿದೆ ಎಂದು ಹೇಳಿದರು.

ರಾಜೀನಾಮೆ ಕೊಡುವ ಹಂತಕ್ಕೆ ಹೋಗಿದ್ದ ಕೋಲಾರ ಗಲಾಟೆ

ಇದು ಸಹಿತ ದಲಿತ ಎಡಗೈ ಸಮುದಾಯಕ್ಕೇ ಟಿಕೆಟ್‌ ನೀಡುವುದನ್ನು ವಿರೋಧಿಸಿ ರಾಜೀನಾಮೆ ನೀಡುವ ಹಂತಕ್ಕೂ ಹೋಗಿತ್ತು. ಈಗ ಒಂದು ಹಂತ ಕೆಳಕ್ಕೆ ಇಳಿಯಲು ಮುಂದಾಗಿರುವ ಈ ಬಣವು ಎಡಗೈ ಸಮುದಾಯಕ್ಕೆ ಟಿಕೆಟ್‌ ಕೊಟ್ಟರೂ ಸರಿ. ಕೆ.ಎಚ್‌. ಮುನಿಯಪ್ಪ ಅವರ ಕುಟುಂಬಕ್ಕೆ ಬೇಡ ಎಂದು ಪಟ್ಟು ಹಿಡಿದು ಕುಳಿತಿತ್ತು. ಮುನಿಯಪ್ಪ ಸಹ ತಾವು ಹೇಳಿದವರಿಗೇ ಬೇಕು ಎಂದು ಕುಳಿತಿದ್ದಾರೆ. ಈ ಸಂಬಂಧ ಈಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಸಂಧಾನ ಸಭೆಯನ್ನು ನಡೆಸಲಾಗಿದ್ದು, ಯಶಸ್ವಿಯಾಗಿದೆ.

Lok Sabha Election 2024 Kolar Congress Dilemma Resolved CM DCM mediation meeting Success

ಡಿಕೆಶಿ ಗುಡುಗಿಗೆ ಬೆದರಿದರೇ?

ಗುರುವಾರ ಬೆಳಗ್ಗೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, ಪಕ್ಷ ಯಾರಿಗೆ ಟಿಕೆಟ್‌ ಕೊಡುತ್ತದೆಯೋ ಅದನ್ನು ಒಪ್ಪಿಕೊಂಡು ಕೆಲಸ ಮಾಡಬೇಕು ಎಂದು ಖಡಕ್‌ ಸಂದೇಶವನ್ನು ರವಾನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್‌ ಕುಮಾರ್‌ ಬಣವು ನಿಲುವು ಬದಲು ಮಾಡಿದ್ದು, ಕೆ.ಎಚ್. ಮುನಿಯಪ್ಪ ಫ್ಯಾಮಿಲಿಗೆ ಬಿಟ್ಟು ಬೇರೆ ಯಾರಿಗೆ ಬೇಕಿದ್ದರೂ ಕೊಡಿ. ದಲಿತ ಎಡಗೈ ಸಮುದಾಯಕ್ಕೆ ಕೊಟ್ಟರೂ ಸರಿ, ಬಲಗೈ ಸಮುದಾಯಕ್ಕಾದರೂ ಸರಿ ಎಂದು ಪಟ್ಟು ಹಿಡಿದು ಕುಳಿತಿದೆ. ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮುಂದೆ ಹೇಳಿತ್ತು.

ಸಿಎಂ ಕಾರಿನಲ್ಲೂ ಸಭೆ!

ಇನ್ನು ಕೋಲಾರ ರಾಜಕೀಯ ಕಗ್ಗಂಟು ವಿಚಾರದ ಬಗ್ಗೆ ಚರ್ಚೆ ಮಾಡುವ ಸಂಬಂಧ ಸಚಿವ ಎಂ ಸಿ ಸುಧಾಕರ್ ಮತ್ತು ಕೊತ್ತನೂರು ಮಂಜುನಾಥ್ ಅವರು ರಾಮನಗರಕ್ಕೆ ಬಂದಿದ್ದರು. ಅಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್‌ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಆ ಕಾರ್ಯಕ್ರಮ ಮುಗಿದ ಕೂಡಲೇ ಸಿಎಂ ಅವರನ್ನು ಉಭಯ ನಾಯಕರು ಭೇಟಿ ಮಾಡಿದ್ದಾರೆ. ಆಗ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ ಅವರು ಈ ಇಬ್ಬರನ್ನೂ ತಮ್ಮ ಕಾರಿನಲ್ಲಿ ಕೂರಿಸಿಕೊಂಡು ಹೊರಟಿದ್ದರು.

ಆಗ ಸಚಿವ ಎಂ ಸಿ ಸುಧಾಕರ್ ಮತ್ತು ಕೊತ್ತನೂರು ಮಂಜುನಾಥ್ ಅವರು ರಾಮನಗರದಿಂದ ಬೆಂಗಳೂರಿನವರೆಗೂ ಸಿಎಂಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಮುನಿಯಪ್ಪ ಸೂಚಿಸಿದವರಿಗೆ ಮಾತ್ರ ಟಿಕೆಟ್ ಕೊಡಬಾರದು ಎಂದು ಸಿಎಂಗೆ ಹೇಳಿದ್ದಾರೆ. ಕಳೆದ ಚುನಾವಣೆಗಳಲ್ಲಿ ಮುನಿಯಪ್ಪ ಮಾಡಿದ ಕೆಲಸದ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಲ್ಲಿನ ನಾಯಕರನ್ನು ಕೂರಿಸಿ ಇಂದು ಮಾತನಾಡುತ್ತೇನೆ. ಇಲ್ಲಿ ಯಾರೂ ನಾಟಕ ಮಾಡುತ್ತಿಲ್ಲ. ಒಂದೊಂದು ಬಣದವರು ಒಂದೊಂದು ರೀತಿ ಹೇಳಿಕೆಯನ್ನು ಕೊಡುತ್ತಿದ್ದಾರೆ. ಕೋಲಾರ ಸಮಸ್ಯೆ ಸಹ ಬಗೆಹರಿಯುತ್ತದೆ ಎಂದು ಹೇಳಿದ್ದರು.

ಬಿಜೆಪಿಗೆ ಪರಿಣಾಮ ಬೀರಲ್ಲವಾ?

10 ಹಾಲಿ ಸಂಸದರಿಗೆ ಬಿಜೆಪಿಯಲ್ಲಿ ಟಿಕೆಟ್ ಕೊಟ್ಟಿಲ್ಲ. ಹಾಗಾದರೆ ಅದು ಪರಿಣಾಮ ಬೀರಲ್ಲವಾ? ನಮ್ಮಲ್ಲಿ ಮಾತ್ರ ಪರಿಣಾಮ ಬೀರುತ್ತಾ? ಜಿಲ್ಲೆಯವರ ಅಭಿಪ್ರಾಯ ಕೇಳಿ ತೀರ್ಮಾನ ಮಾಡ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಯಾರಿಗೆ ಟಿಕೆಟ್‌ ಕೊಡಬೇಕೆಂದು ನಮಗೆ ಗೊತ್ತು

ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿ, ಕೋಲಾರದ ನಾಯಕರು ಯಾರಿಗೋ ಟಿಕೆಟ್‌ ಕೊಡಲಾಗಿದೆ ಎಂದು ಕಲ್ಪನೆ ಮಾಡಿಕೊಂಡು ಗಾಬರಿ ಮಾಡಿಕೊಂಡಿದ್ದಾರೆ. ಎಲ್ಲರೂ ಪಾರ್ಟಿ ಲೈನ್‌ನಲ್ಲಿ ಇರಬೇಕು. ಯಾರಿಗೆ ಟಿಕೆಟ್ ಕೊಡಬೇಕು ಎಂದು ನಮಗೆ ಗೊತ್ತಿದೆ. ಮುನಿಯಪ್ಪ‌ ಅವರು ಹಿರಿಯರು ಇದ್ದಾರೆ. ಅವರ ಅಭಿಪ್ರಾಯ ಪಡೆಯುತ್ತೇವೆ. ಅಲ್ಲಿಯ ಶಾಸಕರ ಅಭಿಪ್ರಾಯವನ್ನೂ ಪಡೆಯುತ್ತೇವೆ ಎಂದು ಹೇಳಿದ್ದರು.

ಈ ಬಗ್ಗೆ ಸಚಿವ ಕೆ.ಎಚ್.‌ ಮುನಿಯಪ್ಪ ಪ್ರತಿಕ್ರಿಯೆ ನೀಡಿ, ರಾಜೀನಾಮೆ ಕೊಡುವ ಡ್ರಾಮಾ ಶುರುವಾಗಿದೆ ಅಷ್ಟೇ. ಇದೊಂದು ಆಶ್ಚರ್ಯಕರ ಬೆಳವಣಿಗೆಯಾಗಿದೆ. ಯಾರೂ ರಾಜೀನಾಮೆ ಕೊಡಲ್ಲ. ಮುನಿಯಪ್ಪಗೆ ಟಿಕೆಟ್ ಕೊಟ್ಟರೆ ಗೆದ್ದುಕೊಂಡು ಬರ್ತಾರೆ ಅನ್ನೋ ಭಯ. ನಾನು ಯಾರ ಕೆಲಸಕ್ಕೂ ಅಡ್ಡ ಹೋಗಿಲ್ಲ, ನಾನಾಯ್ತು ನನ್ನ ಕೆಲಸ ಆಯ್ತು ಅಷ್ಟೇ. ಯಾರು ಏನೇನು ಮಾಡಿದ್ದಾರೋ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಿಳಿದುಕೊಳ್ತಾರೆ ಎಂದು ಹೇಳಿದ್ದರು.

ಚಿಕ್ಕಬಳ್ಳಾಪುರದಲ್ಲೂ ಬಂಡಾಯ ಬಿಸಿ

ಕಾಂಗ್ರೆಸ್‌ ಪಕ್ಷಕ್ಕೆ ಕೋಲಾರದೊಂದಿಗೆ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ ಕೂಡ ಒತ್ತಡ ಸೃಷ್ಟಿಸಿದೆ. ರಕ್ಷಾ ರಾಮಯ್ಯ ಮತ್ತು ಶಿವಶಂಕರ ರೆಡ್ಡಿ ನಡುವೆ ಟಿಕೆಟ್‌ಗಾಗಿ ಕಾದಾಟವಿದೆ. ಈ ನಡುವೆ ಮಾಜಿ ಸಿಎಂ ವೀರಪ್ಪ ಮೊಯಿಲಿ ಕೂಡ ಆಕಾಂಕ್ಷಿಯಾಗಿದ್ದಾರೆ. ಈ ಕ್ಷೇತ್ರದ ಮಾಜಿ ಸಂಸದರೂ ಆದ ಮೊಯಿಲಿ ತಮಗೇ ಟಿಕೆಟ್‌ ನೀಡುವಂತೆ ದಿಲ್ಲಿಯಲ್ಲಿ ಸೋನಿಯಾ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.

ರಕ್ಷಾ ರಾಮಯ್ಯ ಅವರಿಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಹೀಗಾಗಿ ಪಟ್ಟಿಯಲ್ಲಿ ಹೆಸರಿಲ್ಲದವರಿಗೆ ಟಿಕೆಟ್ ಕೊಡಬೇಡಿ. ಜಿಲ್ಲಾ ಸಮಿತಿ ಕಳುಹಿಸಿದ ವೀರಪ್ಪ ಮೊಯ್ಲಿ ಇಲ್ಲವೇ, ಶಿವಶಂಕರರೆಡ್ಡಿ ಹೆಸರು ಅಂತಿಮ ಮಾಡುವಂತೆ ಸ್ಥಳೀಯ ನಾಯಕರು ಒತ್ತಾಯಿಸಿದ್ದಾರೆ.

ಆದರೆ, ಹೈಕಮಾಂಡ್‌ ಈಗಾಗಲೇ ರಕ್ಷಾ ರಾಮಯ್ಯ ಹೆಸರು ಅಂತಿಮ ಮಾಡಿದೆ. ಅಧಿಕೃತ ಘೋಷಣೆ ಒಂದೇ ಬಾಕಿಯಾಗಿದೆ. ಆದರೆ ಇದನ್ನು ವಿರೋಧಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಪತ್ರ ಬರೆದಿದ್ದು, ನಿಮ್ಮ ನಿರ್ಧಾರ ಪುನರ್ ಪರಿಶೀಲನೆ ಮಾಡಿ ಎಂದಿದ್ದಾರೆ. ತಮ್ಮ ಮನವಿಗೆ ಮಣಿಯದಿದ್ದರೆ ಕೋಲಾರದ ಮಾದರಿಯಲ್ಲಿ ಸಾಮೂಹಿಕ ರಾಜೀನಾಮೆ ನೀಡಬೇಕಾಗುತ್ತದೆ ಎಂದೂ ಹೇಳಿದ್ದಾರೆ.

ಶಿವಶಂಕರ ರೆಡ್ಡಿ ಏನು ಹೇಳುತ್ತಾರೆ?

ವಿಸ್ತಾರ ನ್ಯೂಸ್‌ಗೆ ಶಿವಶಂಕರರೆಡ್ಡಿ ಪ್ರತಿಕ್ರಿಯೆ ನೀಡಿ, ನಾನು ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಜಿಲ್ಲಾ ಸಮಿತಿ ಶಿಫಾರಸು ಮಾಡುವಾಗ ನನ್ನ ಹೆಸರು ಕಳಿಸಿದ್ದಾರೆ. ನನ್ನ ಮತ್ತು ವೀರಪ್ಪ ಮೊಯ್ಲಿ ಹೆಸರನ್ನು ಶಿಫಾರಸು ಮಾಡಿದ್ದರು. ವೀರಪ್ಪ ಮೊಯ್ಲಿ ಅವರು ವಯಸ್ಸು ಆಗಿದೆ ಅಂತ ಹಿಂದೆ ಸರಿದಿದ್ದಾರೆ. ಹೀಗಾಗಿ ನಾನು ಆಕಾಂಕ್ಷಿ ಅಂತ ಹೇಳಿದ್ದೇನೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೂ ಹೇಳಿದ್ದೇನೆ. ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯದವರಿಗೆ ಟಿಕೆಟ್‌ ನೀಡಿದ್ದಾರೆ. ಕಾಂಗ್ರೆಸ್‌ನಲ್ಲೂ ಒಕ್ಕಲಿಗ ಸಮುದಾಯಕ್ಕೆ ಟಿಕೆಟ್ ಕೊಡಬೇಕು. ಇಲ್ಲದಿದ್ದರೆ ಬಿಜೆಪಿಗೆ ಲಾಭವಾಗುತ್ತದೆ. ಎರಡು ಬಿರಿಯಾನಿ ಹಂಚಿದರೆ ಸಂಘಟನೆ ಆಗಲ್ಲ ಎಂದು ರಕ್ಷಾ ರಾಮಯ್ಯ ಅವರಿಗೆ ಪರೋಕ್ಷ ಟಾಂಗ್‌ ನೀಡಿದ್ದಾರೆ.

ನಮ್ಮನ್ನು ಪಕ್ಷ ಪರಿಗಣಿಸಿದರೆ ನಾವು ಪಕ್ಷದಲ್ಲಿ ಇರುತ್ತೇವೆ. ಹಣಬಲ ಮಾತ್ರ ಅಂದರೆ ನಮ್ಮ ಜನಬಲದ ಶಕ್ತಿ ತೋರಿಸಬೇಕಾಗುತ್ತದೆ. ಒಕ್ಕಲಿಗ ಸಮುದಾಯಕ್ಕೆ ಬಿಟ್ಟು ಬೇರೆ ಸಮುದಾಯಕ್ಕೆ ಟಿಕೆಟ್ ಕೊಟ್ಟರೆ ಗೆಲ್ಲೋದಿಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾನು ಪಕ್ಷದಲ್ಲಿ ಇರಲ್ಲ ಎಂದು ಶಿವಶಂಕರ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

Continue Reading

ಬೆಂಗಳೂರು

Health Tips : ಬೇಸಿಗೆಯಲ್ಲಿ ಲೈಫ್‌ಸ್ಟೈಲ್‌ ಹೇಗಿರಬೇಕು? ಆರೋಗ್ಯ ಇಲಾಖೆಯಿಂದ ಸರಳ ಸೂತ್ರ

Summer Hot : ಬೆಂಗಳೂರು ಸೇರಿ ಕರ್ನಾಟಕವೇ ಕಾದ ಕಾವಲಿಯಂತಾಗಿದೆ. ಬಿಸಿಲ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಅತಿಯಾದ ತಾಪಮಾನದಿಂದ ಅನಾರೋಗ್ಯ ಸಮಸ್ಯೆಗಳು ಸಂಭವಿಸಬಹುದು. ಹೀಗಾಗಿ ಆರೋಗ್ಯ ಇಲಾಖೆಯು ಸಲಹೆ-ಸೂಚನೆಯ ಮಾರ್ಗಸೂಚಿಯನ್ನು (Health Tips) ಪ್ರಕಟಿಸಿದೆ.

VISTARANEWS.COM


on

By

Health Tips
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆಯು (Health Department) ಕೆಲವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಸಲಹೆಗಳನ್ನೂ ನೀಡಲಾಗಿದೆ. ಜತೆಗೆ ಮಾಲೀಕರು ಹಾಗೂ ಕೆಲಸಗಾರರಿಗೂ ಒಂದಷ್ಟು ಮುಂಜಾಗ್ರತಾ ಕ್ರಮಗಳನ್ನು (Health Tips) ಕೈಗೊಳ್ಳಲಾಗಿದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಇದನ್ನೂ ಓದಿ: Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಅಗ್ನಿ ಅವಘಡದ ಕುರಿತು ಎಚ್ಚರಿಕೆ ವಹಿಸಿ

ಬೇಸಿಗೆ ಸಮಯದಲ್ಲಿ ಅತಿಯಾದ ತಾಪಮಾನದಿಂದ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅನಾಹುತಗಳಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತೆಯನ್ನು ವಹಿಸುವಂತೆ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್‌ ಎಲ್ಲಾ ಆಸ್ಪತ್ರೆಗಳಿಗೂ ಸೂಚನೆ ನೀಡಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿದಂತೆ ಎಲ್ಲಾ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ, ಬೆಂಕಿ ನಂದಿಸುವ ಉಪಕರಣಗಳ ಲಭ್ಯತೆ ಇರಬೇಕು. ಅಗ್ನಿಶಾಮಕ ದಳದಿಂದ No Objection Certificate ಅನ್ನು ಹೊಂದಿರಬೇಕು. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡು ಆರೋಗ್ಯ ಸಂಸ್ಥೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Lok Sabha Election 2024: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ವೇಳೆ ನೀಡಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಇದರಂತೆ ಡಿ.ಕೆ. ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂಪಾಯಿ ಆಗಿದೆ. ಆದರೆ, ಅವರಿಗೆ ಒಟ್ಟು 207 ಕೋಟಿ ರೂಪಾಯಿ ಸಾಲ ಇದೆ ಹೇಳಿಕೊಂಡಿದ್ದಾರೆ. ಜತೆಗೆ ಕುಟುಂಬದವರಿಗೆ 43 ಕೋಟಿ ರೂಪಾಯಿ ಸಾಲವನ್ನೂ ನೀಡಿದ್ದಾರೆ. ಒಂದೂ ಕಾಲು ಕೆಜಿ ಚಿನ್ನ, ಸುಮಾರು 5 ಕೆಜಿಯಷ್ಟು ಬೆಳ್ಳಿಯನ್ನು ಹೊಂದಿರುವ ಇವರು ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಇನ್ನು ಲುಲು ಮಾಲ್‌ಗೆ 3 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವುದಾಗಿ ಡಿ.ಕೆ. ಸುರೇಶ್‌ ಅವರು ತಮ್ಮ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ (Bangalore Rural Lok Sabha constituency) ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh) ಅವರು ನಾಮಪತ್ರ ಸಲ್ಲಿಸಿದ್ದು, ಒಟ್ಟು ಆಸ್ತಿ ಮೌಲ್ಯ 598 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಇವರ ಹೆಸರಲ್ಲಿ ಒಟ್ಟು 207 ಕೋಟಿ ರೂಪಾಯಿ ಸಾಲವಿದ್ದು, ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯವು ಹೆಚ್ಚಳಗೊಂಡಿದೆ.

ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ವೇಳೆ ನೀಡಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಇದರಂತೆ ಡಿ.ಕೆ. ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂಪಾಯಿ ಆಗಿದೆ.

207 ಕೋಟಿ ರೂಪಾಯಿ ಸಾಲದಲ್ಲಿರುವ ಡಿಕೆಸು

ಡಿ.ಕೆ. ಸುರೇಶ್ ಹೆಸರಿನಲ್ಲಿ ಒಟ್ಟು 207 ಕೋಟಿ ರೂಪಾಯಿ ಸಾಲ ಇದೆ ಎಂದು ಅಫಿಡವಿಟ್‌ನಲ್ಲಿ ತೋರಿಸಲಾಗಿದೆ. ಇಷ್ಟಾದರೂ ಇದರಲ್ಲಿ ತಾಯಿ ಗೌರಮ್ಮ, ಅಣ್ಣ ಡಿ.ಕೆ. ಶಿವಕುಮಾರ್‌, ಅಣ್ಣನ ಮಕ್ಕಳಾದ ಐಶ್ವರ್ಯ ಹಾಗೂ ಮಗ ಆಕಾಶ್‌ ಕೆಂಪೇಗೌಡ ಅವರಿಗೂ ಸಾಲವನ್ನು ನೀಡಿದ್ದಾರೆ.

Lok Sabha Election 2024 DK Brothers hold roadshow in Ramanagara and DK Suresh file nomination

ಕುಟುಂಬದವರಿಗೆ ನೀಡಿದ ಸಾಲು ಎಷ್ಟು?

  • ತಾಯಿ ಗೌರಮ್ಮಗೆ ನಾಲ್ಕೂ ಮುಕ್ಕಾಲು ಕೋಟಿ ರೂಪಾಯಿ ಸಾಲ
  • ಅಣ್ಣ ಡಿಕೆ ಶಿವಕುಮಾರ್‌ಗೆ 30 ಕೋಟಿ ರೂಪಾಯಿ ಸಾಲ ಕೊಟ್ಟಿರುವ ಸುರೇಶ್
  • ಅಣ್ಣನ ಮಗಳು ಐಶ್ವರ್ಯಾಗೆ 8 ಕೋಟಿ ರೂಪಾಯಿ ಸಾಲ ನೀಡಿರುವ ಸುರೇಶ್
  • ಡಿಕೆಶಿ ಮಗ ಆಕಾಶ್‌ ಕೆಂಪೇಗೌಡಗೆ 1 ಕೋಟಿ ರೂಪಾಯಿ ಸಾಲವನ್ನು ಡಿ.ಕೆ. ಸುರೇಶ್ ನೀಡಿದ್ದಾರೆ

ಡಿ.ಕೆ. ಸುರೇಶ್‌ ಬಳಿ ಇದೆ ಒಂದೂ ಕಾಲು ಕೆಜಿ ಚಿನ್ನ!

ಚರಾಸ್ತಿ 106.71 ಕೋಟಿ ರೂಪಾಯಿ, ಸ್ಥಿರಾಸ್ತಿ 486.33 ಕೋಟಿ ರೂಪಾಯಿ, ಒಂದೂ ಕಾಲು ಕೆಜಿ ಚಿನ್ನ, ಸುಮಾರು 5 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ.

ರಾಮನಗರ ಜಿಲ್ಲಾಧಿಕಾರಿಗೆ ಸಂಸದ ಡಿ.ಕೆ. ಸುರೇಶ್‌ ಸಲ್ಲಿಸಿರುವ ಅಫಿಡವಿಟ್‌ ಪ್ರತಿ ಇಲ್ಲಿದೆ. ಪೂರ್ಣ ವಿವರ ಓದಲು ಡೌನ್ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

ಇವರ ಬಳಿ ಸ್ವಂತ ಕಾರೂ ಇಲ್ಲ!

ತಮ್ಮ ಬಳಿ ಸ್ವಂತ ಕಾರು ಸಹ ಇಲ್ಲ ಎಂಬ ಮಾಹಿತಿಯನ್ನು ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ ಹೇಳಿದ್ದಾರೆ. 70 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣವನ್ನು ಸುರೇಶ್ ಹೊಂದಿದ್ದಾರೆ.

5 ವರ್ಷಗಳಲ್ಲಿ 259.19 ಕೋಟಿ ರೂ. ಹೆಚ್ಚಳ

2019ರಲ್ಲಿ ಸುರೇಶ್ ಆಸ್ತಿ ಮೌಲ್ಯ 333.86 ಕೋಟಿ ರೂಪಾಯಿ ಆಗಿತ್ತು. 5 ವರ್ಷಗಳಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಈ ವೇಳೆ ಲುಲು ಮಾಲ್‌ಗೆ 3 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವುದಾಗಿ ಡಿ.ಕೆ. ಸುರೇಶ್‌ ಉಲ್ಲೇಖಿಸಿದ್ದಾರೆ. ಇನ್ನು ಅವರು ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾಗಿ ತಿಳಿಸಿದ್ದಾರೆ.

Continue Reading

ಬೆಂಗಳೂರು

SSLC Students Fight: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹೊಡಿಬಡಿ; ಮೂವರಿಗೆ ಚಾಕು ಇರಿತ

SSLC Students Fight: ಬ್ಯಾಗ್‌ ಇಡುವ ವಿಚಾರಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಪರೀಕ್ಷೆ ಮುಗಿಸಿ ಮನೆಗೆ ಹೋಗುವಾಗ ಮೂವರು ವಿದ್ಯಾರ್ಥಿಗಳಿಗೆ ಚಾಕು (Attempt to Murder Case) ಇರಿಯಲಾಗಿದೆ.

VISTARANEWS.COM


on

By

SSLC Students Fighting
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಎಸ್ಎಸ್ಎಲ್‌ಸಿ ಹುಡುಗರ ಮಾರಾಮಾರಿ ನಡೆದಿದ್ದು, ಮೂವರು ವಿದ್ಯಾರ್ಥಿಗಳು ಚಾಕು (SSLC Students Fight) ಇರಿತಕ್ಕೊಳಗಾಗಿದ್ದಾರೆ. ಪರೀಕ್ಷಾ ಕೊಠಡಿಯ ಹೊರಗೆ ಬ್ಯಾಗ್ ಇಡುವ ವಿಚಾರಕ್ಕೆ ರಾಗಿ ಗುಡ್ಡ ಹಾಗೂ ಸಾರಕ್ಕಿ ಬಳಿ ಇರುವ ಶಾಲಾ ವಿದ್ಯಾರ್ಥಿಗಳ ನಡುವೆ ಕಿರಿಕ್ ನಡೆದಿದೆ. ಪರೀಕ್ಷೆ ಮಗಿಸಿ ಮನೆಗೆ ಹೋಗುವಾಗ ಎರಡು ಶಾಲೆಗಳ ಮಕ್ಕಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಖಾಸಗಿ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಂದಿದ್ದ ಎರಡು ಶಾಲೆಯ ಮಕ್ಕಳು, ಪರೀಕ್ಷಾ ಕೇಂದ್ರದಲ್ಲಿ ಜಗಳ ನಡೆಸಿದ್ದಾರೆ. ಒಳಗೆ ಜಗಳವಾಡಿ ಅದೇ ದ್ವೇಷದಿಂದ ಹಿಂಬಾಲಿಸಿ ಬಂದಿದ್ದ ರಾಗಿ ಗುಡ್ಡ ಬಳಿ ಇರುವ ಶಾಲಾ ಬಾಲಕರು, ನಂತರ ಸಾರಕ್ಕಿ ಬಳಿ ಇರುವ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದು ಪರಾರಿ ಆಗಿದ್ದಾರೆ.

ನಿನ್ನೆ ಬುಧವಾರ ಮಧ್ಯಾಹ್ನ 1-45ಕ್ಕೆ ಘಟನೆ ನಡೆದಿದ್ದು, ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎಲ್ಲ ಬಾಲಕರ ಮೇಲೂ ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿದ್ದಾರೆ. ಪುಸ್ತಕ ಹಿಡಿಯಬೇಕಿದ್ದ ಕೈಗಳಿಗೆ ಈಗ ಕೋಳ ಬಿದ್ದಿದೆ.

ಇದನ್ನೂ ಓದಿ:Toll Hike: ಮತ್ತೆ ಟೋಲ್‌ ಬರೆ; ಬೆಂಗಳೂರು-ಮೈಸೂರು ಓಡಾಟ ಇನ್ನಷ್ಟು ದುಬಾರಿ

ಕುಡಿಯುವ ನೀರಿಗಾಗಿ ಚಿಮ್ಮಿತು ರಕ್ತ; ಚಾಕು ಇರಿದು ಯುವಕನ ಕೊಲೆ

ಯಾದಗಿರಿ: ಎಲ್ಲೆಡೆ ಕುಡಿಯುವ ನೀರಿಗಾಗಿ ಹಾಹಾಕರ (Water Crisis) ಶುರುವಾಗಿದೆ. ಗಂಟೆಗಟ್ಟಲೇ ಕಾಯುತ್ತಾ, ಹಗಲಿರುಳು ಎನ್ನದೇ ನಲ್ಲಿ ಮುಂದೆ ಕೂರುವಂತಾಗಿದೆ. ಬರಗಾಲವು ತೀವ್ರವಾಗಿ ಆವರಿಸಿದೆ. ಈ ಮಧ್ಯೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಸಂಬಂಧಿಕರೇ ಕಿತ್ತಾಡಿಕೊಂಡಿದ್ದು, ರಕ್ತವನ್ನೇ (Murder Case) ಹರಿಸಿದ್ದಾರೆ.

ಕುಡಿಯುವ ನೀರಿಗಾಗಿ ಶುರುವಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ನಂದಕುಮಾರ ಕಟ್ಟಿಮನಿ (21)ಕೊಲೆಯಾದವನು. ಹಣಮಂತ ಹಾಗೂ ಹಣಮವ್ವ ಕೊಲೆ ಆರೋಪಿಗಳಾಗಿದ್ದಾರೆ. ನೀರಿನ ವಿಚಾರವಾಗಿ ನಂದಕುಮಾರನ ಅಜ್ಜಿ ಜತೆ ಆರೋಪಿಗಳು ಜಗಳವಾಡಿದ್ದರು.

ಹೊರಹೋಗಿ ಮನೆಗೆ ವಾಪಸ್‌ ಬಂದ ನಂದಕುಮಾರಗೆ ಗಲಾಟೆ ವಿಚಾರವನ್ನು ಅಜ್ಜಿ ತಿಳಿಸಿದ್ದರು. ಹೀಗಾಗಿ ಅಜ್ಜಿ ಜತೆ ನೀವೂ ಯಾಕೆ ಜಗಳ ಮಾಡಿದ್ದೀರಿ ಎಂದು ಮೊಮ್ಮಗ ನಂದಕುಮಾರ್‌ ಸಂಬಂಧಿಗಳಾದ ಹಣಮಂತ ಮತ್ತು ಹಣಮವ್ವರಿಗೆ ಪ್ರಶ್ನೆ ಮಾಡಿದ್ದ. ಇದೇ ವೇಳೆ ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿದೆ. ಜಗಳವು ವಿಕೋಪಕ್ಕೆ ತಿರುಗಿದ್ದು, ನಂದಕುಮಾರ್‌ಗೆ ಹಾಗೂ ಈತನ ತಾಯಿಗೂ ಹಲ್ಲೆ ನಡೆಸಿದ್ದಾರೆ.

murder case Youth killed over drinking water dispute
ಕೊಲೆಯಾದ ನಂದಕುಮಾರ ಕಟ್ಟಿಮನಿ

ಇಷ್ಟಕ್ಕೆ ಸುಮ್ಮನಾಗದೆ ಹಣಮಂತ ಹಾಗೂ ಹಣಮವ್ವ ಎಂಬುವವರು ನಂದಕುಮಾರಗೆ ಚಾಕು ಇರಿದು ಕೊಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ಸಂಬಂಧ ಹುಣಸಗಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಹಣಮಂತ ಹಾಗೂ ಹಣಮವ್ಬ ಇಬ್ಬರನ್ನು ಬಂಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Lok Sabha Election 202413 mins ago

Lok Sabha Election 2024: ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

Health Tips
ಬೆಂಗಳೂರು18 mins ago

Health Tips : ಬೇಸಿಗೆಯಲ್ಲಿ ಲೈಫ್‌ಸ್ಟೈಲ್‌ ಹೇಗಿರಬೇಕು? ಆರೋಗ್ಯ ಇಲಾಖೆಯಿಂದ ಸರಳ ಸೂತ್ರ

Anurag Thakur
ಕ್ರೀಡೆ21 mins ago

Anurag Thakur : 2036ರಲ್ಲಿ ಭಾರತದಲ್ಲಿ ಒಲಿಂಪಿಕ್ಸ್​​; ಅನುರಾಗ್ ಠಾಕೂರ್​

Side Effects Of Pillow
ಆರೋಗ್ಯ34 mins ago

Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

Naveen Polishetty
ಸಿನಿಮಾ39 mins ago

Naveen Polishetty: ಅಮೆರಿಕದಲ್ಲಿ ಬೈಕ್‌ ಅಪಘಾತ; ಅನುಷ್ಕಾ ಶೆಟ್ಟಿ ಜತೆ ತೆರೆ ಹಂಚಿಕೊಂಡಿದ್ದ ನಟನಿಗೆ ಗಾಯ

Hardik Pandya
ಕ್ರೀಡೆ54 mins ago

Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

money guide
ಮನಿ-ಗೈಡ್1 hour ago

Money Guide: ಗಮನಿಸಿ; ಏ. 1ರಿಂದ ಬದಲಾಗುತ್ತವೆ ಈ ಎಲ್ಲ ಹಣಕಾಸು ನಿಯಮಗಳು

IPL 2024-CSKRCB
ಕ್ರೀಡೆ1 hour ago

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

Prithviraj Sukumaran
ಸಿನಿಮಾ1 hour ago

Prithviraj Sukumaran: ಪೃಥ್ವಿರಾಜ್ ಸುಕುಮಾರನ್‌ ಅಭಿನಯದ ‘ಆಡುಜೀವಿತಂ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ!

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Lok Sabha Election 20242 hours ago

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20245 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20246 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ14 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌