Viral Video: ಪಠಾಣ್‌ ಹಾಡಿಗೆ ಹುಚ್ಚೆದ್ದು ಕುಣಿದ ಜರ್ಮನಿ ಮಹಿಳೆ, ವೈರಲ್‌ ಆಯ್ತು ವಿಡಿಯೊ - Vistara News

ವೈರಲ್ ನ್ಯೂಸ್

Viral Video: ಪಠಾಣ್‌ ಹಾಡಿಗೆ ಹುಚ್ಚೆದ್ದು ಕುಣಿದ ಜರ್ಮನಿ ಮಹಿಳೆ, ವೈರಲ್‌ ಆಯ್ತು ವಿಡಿಯೊ

Viral Video: ಜರ್ಮನಿಯಲ್ಲಿ ಶಾರುಖ್‌ ಖಾನ್‌ ಅವರ ಪಠಾಣ್‌ ಸಿನಿಮಾ ಪ್ರದರ್ಶನ ಕಾಣುತ್ತಿದ್ದು, ಅಲ್ಲಿನ ಅಭಿಮಾನಿಯೊಬ್ಬರು ಸಿನಿಮಾದ ಹಾಡಿಗೆ ಥಿಯೇಟರ್‌ನಲ್ಲಿಯೇ ಮನಸ್ಸು ಬಿಚ್ಚಿ ಕುಣಿದಿದ್ದಾರೆ. ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Pathaan Film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ನಟ ಶಾರುಖ್‌ ಖಾನ್‌ ನಟನೆಯ ʼಪಠಾಣ್‌ʼ ಸಿನಿಮಾ ಭಾರತ ಮಾತ್ರವಲ್ಲದೆ ವಿಶ್ವದ 100ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಶಾರುಖ್‌ ಅಭಿಮಾನಿಗಳಂತೂ ನಾಲ್ಕು ವರ್ಷದ ನಂತರ ನೆಚ್ಚಿನ ನಟನನ್ನು ಹಿರಿತೆರೆ ಮೇಲೆ ನೋಡಿರುವ ಸಂತಸದಲ್ಲಿದ್ದಾರೆ. ಭಾರತದಲ್ಲಿರುವ ಅಭಿಮಾನಿಗಳ ಸಂಭ್ರಮವೇನೋ ಸಾಮಾನ್ಯವೆನ್ನಬಹುದು. ಆದರೆ ಜರ್ಮನಿಯಲ್ಲಿ ಜರ್ಮನಿ ಮಹಿಳೆಯೊಬ್ಬರು ಥಿಯೇಟರ್‌ ಒಳಗೆ ಪಠಾಣ್‌ ಸಿನಿಮಾದ ಹಾಡಿಗೆ ಹುಚ್ಚೆದ್ದು ಕುಣಿದಿದ್ದಾರೆ. ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

ಇದನ್ನೂ ಓದಿ: viral video: ಮಕ್ಕಳಿಂದಲೇ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ ಹನೂರಿನ ಕೌದಳ್ಳಿ ಸರ್ಕಾರಿ ಶಾಲೆ ಶಿಕ್ಷಕರು
ಥಿಯೇಟರ್‌ನ ತೆರೆ ಮೇಲೆ ಪಠಾಣ್‌ ಸಿನಿಮಾದ ʼಜೂಮೆ ಜೋ ಪಠಾಣ್‌ʼ ಹಾಡು ಪ್ರಸಾರವಾಗುತ್ತಿದೆ. ತೆರೆಯ ಮುಂದೆಯೇ ನಿಂತ ಮಹಿಳೆ ಆ ಹಾಡಿಗೆ ಮನಸ್ಸು ಬಿಚ್ಚಿ ಹೆಜ್ಜೆ ಹಾಕುತ್ತಿದ್ದಾರೆ. ಹಾಡಿನ ಹುಕ್‌ ಅಪ್‌ ಸ್ಟೆಪ್‌ ಅನ್ನು ಚಾಚೂ ತಪ್ಪದೆ ಕುಣಿಯುತ್ತಿದ್ದಾರೆ. ಇಂತದ್ದೊಂದು ವಿಡಿಯೊವನ್ನು ನೆಟ್ಟಿಗರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಭಾರತವನ್ನು ಬಿಟ್ಟುಬಿಡಿ, ಜರ್ಮನಿಯ ಜನರೂ ಕೂಡ ಪಠಾಣ್‌ ನೋಡಿ ಖುಷಿಯಲ್ಲಿ ಕುಣಿಯಲಾರಂಭಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.


13 ಸೆಕೆಂಡುಗಳ ಈ ವಿಡಿಯೊವನ್ನು ಶುಕ್ರವಾರದಂದು ಟ್ವಿಟರ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೊ ಒಂದೇ ದಿನದಲ್ಲಿ ಲಕ್ಷಾಂತರ ಜನರಿಂದ ವೀಕ್ಷಣೆ ಪಡೆದುಕೊಂಡಿದೆ. ಸಾವಿರಾರು ಮಂದಿ ವಿಡಿಯೊಗೆ ಮೆಚ್ಚುಗೆಯ ಕಾಮೆಂಟ್‌ಗಳನ್ನು ಮಾಡಲಾರಂಭಿಸಿದ್ದಾರೆ. ಸಿನಿಮಾದ ಅಂತ್ಯದಲ್ಲಿ ಬರುವ ಈ ಹಾಡಿಗೆ ಗಾಯಕರಾಗಿರುವ ಅರಿಜಿತ್ ಸಿಂಗ್, ಸುಕೃತಿ ಕಾಕರ್, ವಿಶಾಲ್ ದದ್ಲಾನಿ ಮತ್ತು ಶೇಖರ್ ರಾವ್ಜಿಯಾನಿ ಧ್ವನಿ ನೀಡಿದ್ದಾರೆ. ಈ ಟ್ರೆಂಡಿಂಗ್‌ ಹಾಡನ್ನು ಕುಮಾರ್ ಬರೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Viral Video: ಐಪಿಎಲ್​​ ಪಂದ್ಯದ ವೇಳೆ ಪಾಕಿಸ್ತಾನ ಟಿ20 ವೀಕ್ಷಿಸಿದ ಅಭಿಮಾನಿ

Viral Video: ಅಭಿಮಾನಿಯೊಬ್ಬ ಐಪಿಎಲ್​ ಪಂದ್ಯವನ್ನು ವೀಕ್ಷಿಸುವ ಮಧ್ಯೆಯೂ ಪಾಕ್​ ಮತ್ತು ಕಿವೀಸ್​ ನಡುವಣ ಟಿ20 ಪಂದ್ಯವನ್ನು ವೀಕ್ಷಿಸಿ ಕ್ರಿಕೆಟ್​ ಮೇಲಿರುವ ಪ್ರೀತಿಯನ್ನು ತೋರಿಸಿಕೊಟ್ಟಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

VISTARANEWS.COM


on

Viral Video
Koo

ಜೈಪುರ: ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಸನ್​ರೈಸರ್ಸ್ ಹೈದರಾಬಾದ್(SRH vs DC)​ ತಂಡಗಳು ಏಪ್ರಿಲ್​ 20ರಂದು ಐಪಿಎಲ್​ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದ ವೇಳೆ ಕ್ರಿಕೆಟ್​ ಅಭಿಮಾನಿಯೊಬ್ಬ ಗ್ಯಾಲರಿಯಲ್ಲಿ ಕುಳಿತು ತನ್ನ ಮೊಬೈಲ್​ನಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್(PAK vs NZ)​ ನಡುವಣ 2ನೇ ಟಿ20 ಪಂದ್ಯವನ್ನು ವೀಕ್ಷಿಸಿದ್ದಾನೆ. ಈ ವಿಡಿಯೊ 3 ದಿನಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

ಅಭಿಮಾನಿಯೊಬ್ಬ ಐಪಿಎಲ್​ ಪಂದ್ಯವನ್ನು ವೀಕ್ಷಿಸುವ ಮಧ್ಯೆಯೂ ಪಾಕ್​ ಮತ್ತು ಕಿವೀಸ್​ ನಡುವಣ ಟಿ20 ಪಂದ್ಯವನ್ನು ವೀಕ್ಷಿಸಿ ಕ್ರಿಕೆಟ್​ ಮೇಲಿರುವ ಪ್ರೀತಿಯನ್ನು ತೋರಿಸಿಕೊಟ್ಟಿದ್ದಾನೆ. ಈ ವಿಡಿಯೊವನ್ನು ಪಾಕಿಸ್ತಾನ ಮೂಲದ ನವಾಝ್​​ ಎನ್ನುವಾತ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡು ‘ಸಹೋದರ ಕ್ರೀಡಾಂಗಣದಲ್ಲಿ ಕುಳಿತು ಐಪಿಎಲ್​ ಪಂದ್ಯದ ಬದಲು ಪಾಕಿಸ್ತಾನ-ನ್ಯೂಜಿಲ್ಯಾಂಡ್​ ಪಂದ್ಯ ವೀಕ್ಷಿಸುತ್ತಿದ್ದಾನೆ’ ಎಂದು ಬರೆದುಕೊಂಡಿದ್ದಾರೆ. ಈ ಪಂದ್ಯವನ್ನು ಪಾಕಿಸ್ತಾನ 7 ವಿಕೆಟ್​ ಅಂತರದಿಂದ ಗೆದ್ದು ಬೀಗಿತ್ತು.

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದಿದ್ದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಹೈದರಾಬಾದ್​ ತಂಡಕ್ಕೆ ಆರಂಭಿಕರಾದ ಟ್ರಾವಿಸ್​ ಹೆಡ್​(89) ಮತ್ತು ಅಭಿಷೇಕ್​ ಶರ್ಮ(46) ಜಿದ್ದಿಗೆ ಬಿದ್ದವರಂತೆ ಬ್ಯಾಟ್ ಬೀಸಿ ಅಮೋಘ ಆರಂಭ ಒದಗಿಸಿದರು. ಇವರ ಈ ಬ್ಯಾಟಿಂಗ್​ ಪರಾಕ್ರಮದಿಂದ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 266 ರನ್​ ಬಾರಿಸಿತು. ಸವಾಲಿನ ಮೊತ್ತವನ್ನು ದಿಟ್ಟ ರೀತಿಯಲ್ಲಿ ಬೆನ್ನಟ್ಟಿಕೊಂಡು ಹೋದ ಡೆಲ್ಲಿ ಕ್ಯಾಪಿಟಲ್ಸ್​ ಅಂತಿಮವಾಗಿ 19.1 ಓವರ್​ಗಳಲ್ಲಿ 199 ರನ್​ಗೆ ಸರ್ವಪತನ ಕಂಡಿತ್ತು.

ಇದನ್ನೂ ಓದಿ SRH vs DC: ಬೃಹತ್​ ಮೊತ್ತದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಹೈದರಾಬಾದ್

ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್​ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದ್ದು. ಈಗಾಗಲೇ ಮೂರು ಪಂದ್ಯಗಳು ಮುಕ್ತಾಯ ಕಂಡಿದೆ. ಉಭಯ ತಂಡಗಳು ಕೂಡ ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿವೆ. ಮೊದಲ ಪಂದ್ಯ ಮಳೆಯಿಂದ ರದ್ದುಗೊಂಡಿತ್ತು. ನಾಲ್ಕನೇ ಪಂದ್ಯ ಏಪ್ರಿಲ್​ 25ರಂದು ನಡೆಯಲಿದೆ.

3ನೇ ಪಂದ್ಯದಲ್ಲಿ ಕಿವೀಸ್​ಗೆ ಗೆಲುವು


ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್​ ತಂಡ 7 ವಿಕೆಟ್​ಗಳಿಂದ ಪಾಕಿಸ್ತಾನವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ. ಭಾನುವಾರ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಾಕಿಸ್ತಾನ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 178 ರನ್​ ಬಾರಿಸಿತು. ಇದನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್​ 18.2 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 179 ರನ್​ ಬಾರಿಸಿ ಗೆಲುವು ಸಾಧಿಸಿತ್ತು.

Continue Reading

ಬೆಳಗಾವಿ

Drought In Karnataka : ಭೀಕರ ಬರ; ಆಹಾರ ಸಿಗದೆ ಪ್ಲಾಸ್ಟಿಕ್, ನಟ್ಟು ಬೋಲ್ಟು ತಿನ್ನುತ್ತಿರುವ ಹಸುಗಳು!

Drought In Karnataka : ಭೀಕರ ಬರದಿಂದ ಜನರು ತತ್ತರಿಸಿ ಹೋಗಿದ್ದಾರೆ. ಜನರು ಮಾತ್ರವಲ್ಲ ಜಾನುವಾರುಗಳು ಆಹಾರ ಸಿಗದೆ ಪರದಾಡುವಂತಾಗಿದೆ. ಬೀದಿ ಹಸುಗಳು ಪ್ಲಾಸ್ಟಿಕ್, ನಟ್ಟು ಬೋಲ್ಟು ತಿಂದು ಆಸ್ಪತ್ರೆ ಪಾಲಾಗುತ್ತಿವೆ.

VISTARANEWS.COM


on

By

Drought In Karnataka
Koo

ಬೆಳಗಾವಿ: ರಾಜ್ಯದಲ್ಲಿ ಬೇಸಿಗೆ ಶುರುವಾಗುವ ಮುನ್ನವೇ ತಾಪಮಾನ ಹೆಚ್ಚಾಗಿತ್ತು, ಈ ಸಲದ ಬೇಸಿಗೆ ಗರಿಷ್ಠ ಬಿಸಿಯಾಗಿರುವ ಅನುಭವ ಆಗುತ್ತಿದೆ. ಜನರು ಹೊರಗಡೆ ಹೋಗಲು ಹಿಂದೆಟ್ಟು ಹಾಕುವಷ್ಟು ಸುಡುಬಿಸಿಲು ಸುಡುತ್ತಿದೆ. ಅರೆ ಕ್ಷಣವು ಹೊರಗೆ ಹೋಗಿ ಬರಲು ಆಗದಷ್ಟು ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಜನರು ಅಕ್ಷರಶಃ ಬಿಲಿಸಿನ ಬೇಗೆಯಿಂದ ಬಳಲುತ್ತಿದ್ದಾರೆ.

ಕ್ಷಾಮಕ್ಕೆ ತುತ್ತಾಗಿರುವ ಕರುನಾಡಿನಲ್ಲಿ ನದಿಗಳು ಬತ್ತಲಾರಂಭಿಸಿವೆ. ಬಹಳಷ್ಟು ಜಿಲ್ಲೆಗಳು ಗರಿಷ್ಠ ತಾಪಮಾನವನ್ನು ದಾಖಲಿಸಿವೆ. ಪರಿಸ್ಥಿತಿಯು ಹೀಗೆಯೇ ಮುಂದುವರಿದರೆ ಮುಂದಿನ ದಿನಗಳು ಇನ್ನಷ್ಟು ಬರ್ಬರವಾಗಿರಲಿವೆ. ಇದರ ಬೆನ್ನಿಗೇ, ಈ ಬಾರಿ ಬರಗಾಲ (Drought In Karnataka) ತೀವ್ರವಾಗಿ ಆವರಿಸಿದ್ದು, ಪರಿಸ್ಥಿತಿ ಹದಗೆಟ್ಟಿದೆ. ಅದರಲ್ಲೂ ಜಾನುವಾರುಗಳು ಮೇವು ಸಿಗದೆ ಪರದಾಡುತ್ತಿರುವ ದೃಶ್ಯ ಮನಕಲುಕುವಂತೆ ಮಾಡಿದೆ.

ಮಾತು ಬಾರದ ಮೂಕಪ್ರಾಣಿಗಳು ಮೇವು ಸಿಗದೆ ಏದುಸಿರಿನಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಭೀಕರ ಬರ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬೀದಿಬದಿ ಹಸುಗಳು ಮೇವು, ನೀರು ಸಿಗದೇ ಮೂಕರೋಧನೆ ಅನುಭವಿಸುತ್ತಿವೆ. ಆಹಾರ ಸಿಗದೆ ಕೆ.ಜಿ ಗಟ್ಟಲೇ ಪ್ಲಾಸ್ಟಿಕ್, ನಟ್ಟು- ಬೋಲ್ಟ್, ಕಬ್ಬಿಣದ ಚೂರು ತಿಂದು ರಾಸುಗಳು ಬೀದಿ ಹೆಣವಾಗುತ್ತಿವೆ.

ಇದನ್ನೂ ಓದಿ: OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

ಹೀಗಾಗಿ ಸಾಮಾಜಿಕ ಕಾರ್ಯಕರ್ತ ಅಭಯ್ ಹಿಶೋಭಕರ್ ಹಾಗೂ ಪಶುವೈದ್ಯ ಡಾ.ಹೆಚ್‌.ಬಿ.ಸಣ್ಣಕ್ಕಿ ಅವರು ಹಲವು ಹಸುಗಳಿಗೆ ಶಸ್ತ್ರಚಿಕಿತ್ಸೆ ಮಾಡಿಸಿ ಜೀವ ಉಳಿಸಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿಸಿದ ಹಸುವಿನ ಹೊಟ್ಟೆಯಲ್ಲಿ ಅರ್ಧ ಟನ್‌ನಷ್ಟು ಪ್ಲಾಸ್ಟಿಕ್, ಕಬ್ಬಿಣ ತ್ಯಾಜ್ಯ ಪತ್ತೆಯಾಗಿದೆ. ಈಗಾಗಲೇ ಸುಮಾರು 10ಕ್ಕೂ ಹೆಚ್ಚು ಹಸುಗಳಿಗೆ ಶಸ್ತ್ರಚಿಕಿತ್ಸೆ ಮಾಡಿ ರಕ್ಷಿಸಲಾಗಿದೆ.

ಪ್ಲಾಸ್ಟಿಕ್, ಕೈಗಾರಿಕಾ ತ್ಯಾಜ್ಯ ಸಮರ್ಪಕ ವಿಲೇವಾರಿಗೆ ಕ್ರಮ ಕೈಗೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಅಂತಿದ್ದಾರೆ. ಕೂಡಲೇ ಬೆಳಗಾವಿ ಜಿಲ್ಲಾಡಳಿತ ಕ್ರಮಕೈಗೊಂಡು, ಮೇವು ಬ್ಯಾಂಕ್ ಸ್ಥಾಪಿಸಿ ಬೀದಿ ಹಸುಗಳ ರಕ್ಷಣೆಗೆ ಧಾವಿಸಬೇಕು ಎಂದು ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಬೀದಿ ಹಸುಗಳ ಕಿವಿಗೆ ಟ್ಯಾಗ್ ಹಾಕಿ ಕಣ್ಮುಚ್ಚಿ ಕುಳಿತರೆ ಯಾವುದೇ ಪ್ರಯೋಜನವಿಲ್ಲ. ಅವುಗಳ ರಕ್ಷಣೆಗೆ ಅಧಿಕಾರಿಗಳು ಧಾವಿಸಿ, ಸರಿಯಾದ ರೀತಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral video: ಸೇನಾ ಹೆಲಿಕಾಪ್ಟರ್‌ಗಳ ಭಯಾನಕ ಡಿಕ್ಕಿ; 10 ಸಾವು

Viral video: ಮಧ್ಯ ಆಕಾಶದಲ್ಲಿ ಉಂಟಾದ ಘರ್ಷಣೆಯ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿತು. ಮಿಲಿಟರಿ ಹೆಲಿಕಾಪ್ಟರ್‌ಗಳ ವಾಯು ಹಾರಾಟದ ಕುಶಲತೆಯನ್ನು ಪ್ರದರ್ಶಿಸುತ್ತಿರುವಾಗ ಅವುಗಳಲ್ಲಿ ಎರಡು ಡಿಕ್ಕಿ ಹೊಡೆದುಕೊಂಡವು. ಎರಡು ಹೆಲಿಕಾಪ್ಟರ್‌ಗಳಲ್ಲಿದ್ದವರಲ್ಲಿ ಯಾರೂ ಅಪಘಾತದಲ್ಲಿ ಬದುಕುಳಿಯಲಿಲ್ಲ.

VISTARANEWS.COM


on

malasia helicopter crash viral video
Koo

ಮಲೇಷ್ಯಾ: ಮಲೇಷ್ಯಾದಿಂದ (Malasia) ವರದಿಯಾದ ದುರಂತ ಘಟನೆಯೊಂದರಲ್ಲಿ (Helicopter Crash) ಮಂಗಳವಾರ ಮಲೇಷ್ಯಾ ಸಶಸ್ತ್ರ ಪಡೆಗಳ ಎರಡು ಹೆಲಿಕಾಪ್ಟರ್‌ಗಳು ಗಾಳಿಯಲ್ಲಿ ಡಿಕ್ಕಿ (Air Accident) ಹೊಡೆದು ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತ ಇಂದು ಬೆಳಿಗ್ಗೆ ಲುಮುಟ್‌ನಲ್ಲಿರುವ ರಾಯಲ್ ಮಲೇಷಿಯನ್ ನೇವಿ (ಆರ್‌ಎಂಎನ್) ನೆಲೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಸೋಶೀಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಘಟನೆಯ ವೀಡಿಯೊ (Viral video), ದುರಂತದ ಕ್ಷಣಗಳನ್ನು ತೋರಿಸಿದೆ.

ಮಧ್ಯ ಆಕಾಶದಲ್ಲಿ ಉಂಟಾದ ಘರ್ಷಣೆಯ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿತು. ಮಿಲಿಟರಿ ಹೆಲಿಕಾಪ್ಟರ್‌ಗಳ ವಾಯು ಹಾರಾಟದ ಕುಶಲತೆಯನ್ನು ಪ್ರದರ್ಶಿಸುತ್ತಿರುವಾಗ ಅವುಗಳಲ್ಲಿ ಎರಡು ಡಿಕ್ಕಿ ಹೊಡೆದುಕೊಂಡವು. ಸ್ಥಳೀಯ ಸುದ್ದಿವಾಹಿನಿಗಳ ಆರಂಭಿಕ ದೃಢೀಕೃತ ವರದಿಗಳ ಪ್ರಕಾರ, ಎರಡು ಹೆಲಿಕಾಪ್ಟರ್‌ಗಳಲ್ಲಿದ್ದವರಲ್ಲಿ ಯಾರೂ ಅಪಘಾತದಲ್ಲಿ ಬದುಕುಳಿಯಲಿಲ್ಲ.

ಎರಡೂ ಹೆಲಿಕಾಪ್ಟರ್‌ಗಳಲ್ಲಿದ್ದ ಚಾಲಕರು ತರಬೇತಿ ಪಡೆಯುತ್ತಿದ್ದವರಾಗಿದ್ದರು. ಕೆಲವು ತರಬೇತಿ ವಿದ್ಯಾರ್ಥಿಗಳು ಹಾಗೂ ತರಬೇತಿದಾರರು ಇವುಗಳಲ್ಲಿದ್ದರು. ಸ್ಥಳೀಯ ವರದಿಗಳ ಪ್ರಕಾರ, M503-3 ಮಾರಿಟೈಮ್ ಆಪರೇಷನ್ಸ್ ಹೆಲಿಕಾಪ್ಟರ್ (HOM) ಏಳು ಸಿಬ್ಬಂದಿಯನ್ನು ಹೊಂದಿತ್ತು. ಆದರೆ ಇನ್ನೊಂದು, M502-6, ಮೂರು ಸದಸ್ಯರನ್ನು ಹೊಂದಿತ್ತು. ಎರಡೂ ಹೆಲಿಕಾಪ್ಟರ್‌ಗಳು ಮೇ 3-5ರಿಂದ ನಡೆಯಲಿರುವ ನೌಕಾಪಡೆಯ ದಿನ ಆಚರಣೆಗೆ ಸಂಬಂಧಿಸಿದ ತಾಲೀಮನ್ನು ಪಡೆಯುತ್ತಿದ್ದವು.

ಇದನ್ನೂ ಓದಿ: Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Continue Reading

ಕ್ರೀಡೆ

Rohit Sharma: ರೋಹಿತ್​ ಕೆನ್ನೆಗೆ ಕಿಸ್​ ಕೊಡಲು ಬಂದ ರಾಜಸ್ಥಾನ್​ ಕೋಚ್​; ವಿಡಿಯೊ ವೈರಲ್

Rohit Sharma: ರೋಹಿತ್​ ಶರ್ಮ ಅವರು ಅಶ್ವಿನ್​ ಜತೆ ಮಾತುಕತೆಯಲ್ಲಿ ನಿರತರಾಗಿದ್ದರು. ಈ ವೇಳೆ ಹಿಂದಿನಿಂದ ಬಂದ ಶೇನ್​ ಬಾಂಡ್ ಅವರು ರೋಹಿತ್​ ಕೆನ್ನೆಗೆ ಕಿಸ್​ ಕೊಡಲು ಮುಂದಾದರು. ಇದನ್ನು ಕಂಡ ರೋಹಿತ್​ ಒಂದು ಕ್ಷಣ ಗಾಬರಿಯಾದರು. ಬಳಿಕ ನಗುತ್ತಾ ಕುಶಲೋಪರಿ ನಡೆಸಿದರು.

VISTARANEWS.COM


on

Rohit Sharma
Koo

ಜೈಪುರ: ಮುಂಬೈ ಇಂಡಿಯನ್ಸ್(Mumbai Indians) ಮತ್ತು ರಾಜಸ್ಥಾನ್ ರಾಯಲ್ಸ್(Rajasthan Royals)​ ನಡುವಣ ಪಂದ್ಯಕ್ಕೂ ಮುನ್ನ ರೋಹಿತ್​ ಶರ್ಮ(Rohit Sharma) ಅವರಿಗೆ ರಾಜಸ್ಥಾನ್ ರಾಯಲ್ಸ್​ ತಂಡದ ಬೌಲಿಂಗ್​ ಕೋಚ್​ ಶೇನ್​ ಬಾಂಡ್(Shane Bond)​ ಕಿಸ್​ ಕೊಡಲು ಬಂದ ಘಟನೆಯೊಂದು ನಡೆದಿದೆ. ಕಿಸ್​ ಕೊಡಲು ಬಂದ ಬಾಂಡ್​ ಕಂಡು ರೋಹಿತ್​ ಒಂದು ಕ್ಷಣ ತಬ್ಬಿಬ್ಬಾದರು. ಈ ವಿಡಿಯೊವನ್ನು ಮುಂಬೈ ಇಂಡಿಯನ್ಸ್​ ತನ್ನ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ.

ಉಭಯ ತಂಡಗಳ ಪಂದ್ಯಕ್ಕೂ ಮುನ್ನ ಆಟಗಾರರು ಅಭ್ಯಾಸ ನಡೆಸುತ್ತಿದ್ದರು. ರೋಹಿತ್​ ಶರ್ಮ ಅವರು ಅಶ್ವಿನ್​ ಜತೆ ಮಾತುಕತೆಯಲ್ಲಿ ನಿರತರಾಗಿದ್ದರು. ಈ ವೇಳೆ ಹಿಂದಿನಿಂದ ಬಂದ ಶೇನ್​ ಬಾಂಡ್ ಅವರು ರೋಹಿತ್​ ಕೆನ್ನೆಗೆ ಕಿಸ್​ ಕೊಡಲು ಮುಂದಾದರು. ಇದನ್ನು ಕಂಡ ರೋಹಿತ್​ ಒಂದು ಕ್ಷಣ ಗಾಬರಿಯಾದರು. ಬಳಿಕ ನಗುತ್ತಾ ಕುಶಲೋಪರಿ ನಡೆಸಿದರು. ಶೇನ್​ ಬಾಂಡ್ ಅವರು ಈ ಹಿಂದೆ ಮುಂಬೈ ತಂಡದ ಬೌಲಿಂಗ್​ ಕೋಚ್​ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹೀಗಾಗಿ ರೋಹಿತ್​ ಜತೆ ಆತ್ಮೀಯತೆ ಇದೆ. ಇದೇ ಕಾರಣದಿಂದ ಅವರು ಫನ್​ ಮಾಡುವ ನಿಟ್ಟಿನಲ್ಲಿ ಕಿಸ್​ ಕೊಟ್ಟಂತೆ ಸನ್ನೆ ಮಾಡಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಇದನ್ನೂ ಓದಿ IPL 2024 Points Table: ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ರಾಜಸ್ಥಾನ್​

ರೋಹಿತ್​ ಶರ್ಮ ಅವರು ರಾಜಸ್ಥಾನ್​ ವಿರುದ್ಧದ ಪಂದ್ಯದಲ್ಲಿ ಕೇವಲ 6 ರನ್​ ಗಳಿಸಿ ನಿರಾಸೆ ಮೂಡಿಸಿದರು. ಮುಂಬೈ ತಂಡ 9 ವಿಕೆಟ್​ಗಳ ಅಂತರದ ಹೀನಾಯ ಸೋಲು ಕಂಡಿತು. ಇಲ್ಲಿನ ಸವಾಯ್​ ಮಾನ್​ಸಿಂಗ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಮುಂಬೈ ತಂಡ ಮೊದಲು ಬ್ಯಾಟ್​ ಮಾಡಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 179 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ತಂಡ ಇನ್ನೂ 8 ಎಸೆತಗಳು ಉಳಿದಿರುವಂತೆಯೇ 1 ವಿಕೆಟ್ ನಷ್ಟಕ್ಕೆ 183 ರನ್ ಬಾರಿಸಿ ಗೆಲುವು ಕಂಡಿತು.

ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಆರ್​ಆರ್​ ತಂಡಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ನೆರವಾದರು. ಬಟ್ಲರ್​ 25 ಎಸೆತಕ್ಕೆ 35 ರನ್ ಬಾರಿಸ ಔಟಾದರೆ ಜೈಸ್ವಾಲ್ ಅಮೋಘ ಪ್ರದರ್ಶನ ನೀಡಿ 60 ಎಸೆತಕ್ಕೆ ಅಜೇಯ 104 ರನ್ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ನಾಯಕ ಸಂಜು ಸ್ಯಾಮ್ಸನ್​ 28 ಎಸೆತಕ್ಕೆ 38 ರನ್​ ಬಾರಿಸಿ ಕೊನೇ ತನಕ ಉಳಿದರು. ಬೌಲಿಂಗ್​ನಲ್ಲಿ 4 ಓವರ್​​ ದಾಳಿ ನಡೆಸಿದ ಸಂದೀಪ್​ 18 ರನ್​ಗೆ 5 ವಿಕೆಟ್​ ಕೆಡವಿದರು. ಈ ಸಾಧನೆಗಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತು.

Continue Reading
Advertisement
MDH everest spices row
ದೇಶ2 mins ago

Spices Row: ಸಿಂಗಾಪುರ, ಹಾಂಕಾಂಗ್‌ ಬಳಿಕ ಭಾರತದಲ್ಲೂ ಎವರೆಸ್ಟ್, ಎಂಡಿಎಚ್‌ ಮಸಾಲೆ ಪರಿಶೀಲನೆ ಶುರು

Narendra Modi and Siddaramaiah
ರಾಜಕೀಯ12 mins ago

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Gukesh D
ಕ್ರೀಡೆ12 mins ago

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

baba ramdev supreme court
ಪ್ರಮುಖ ಸುದ್ದಿ13 mins ago

Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Murder Case in raichur
ರಾಯಚೂರು17 mins ago

Murder Case : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

Lok Sabha Election-2024
Latest22 mins ago

Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

Lok Sabha Election 2024 KP Nanjundi resigns from Legislative Council
Lok Sabha Election 202442 mins ago

Lok Sabha Election 2024: ವಿಧಾನ ಪರಿಷತ್‌ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ; ಕಾಂಗ್ರೆಸ್‌ ಸೇರ್ಪಡೆ?

gold rate today kajal
ಚಿನ್ನದ ದರ48 mins ago

Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Bengaluru Karaga 2024
ಬೆಂಗಳೂರು55 mins ago

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

balakot airstrike RKS bhadauria
ಪ್ರಮುಖ ಸುದ್ದಿ1 hour ago

Balakot Airstrike: ನಮ್ಮ ಯೋಧರ ಕೂದಲೂ ಕೊಂಕದಂತೆ ಪಾಕ್‌ ವಾಯುಪಡೆ ಭೇದಿಸಿ ದಾಳಿ ನಡೆಸಲಾಗಿತ್ತು: ಮಾಜಿ ಐಎಎಫ್‌ ಮುಖ್ಯಸ್ಥ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು20 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ21 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು23 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌