Horoscope Today : ಇಂದು ನಾಲ್ಕು ರಾಶಿಯವರಿಗೆ ಶುಭ ದಿನ; ನಿಮ್ಮ ಭವಿಷ್ಯ ಹೇಗಿದೆ? - Vistara News

ಪ್ರಮುಖ ಸುದ್ದಿ

Horoscope Today : ಇಂದು ನಾಲ್ಕು ರಾಶಿಯವರಿಗೆ ಶುಭ ದಿನ; ನಿಮ್ಮ ಭವಿಷ್ಯ ಹೇಗಿದೆ?

ಶುಭಕೃತ ನಾಮ ಸಂವತ್ಸರ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷದ ಅಷ್ಟಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (29-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ.

ತಿಥಿ: ಅಷ್ಟಮಿ 09:04 ವಾರ: ಭಾನುವಾರ
ನಕ್ಷತ್ರ: ಭರಣಿ 20:19 ಯೋಗ: ಶುಭ 11:03
ಕರಣ: ಭವ 09:04 ಇಂದಿನ ವಿಶೇಷ: ಭೀಷ್ಮಾಷ್ಟಮಿ
ಅಮೃತಕಾಲ: ಮಧ್ಯಾಹ್ನ 03 ಗಂಟೆ 18 ನಿಮಿಷದಿಂದ 04 ಗಂಟೆ 59 ನಿಮಿಷದವರೆಗೆ.

ಸೂರ್ಯೋದಯ: 06 : 46    ಸೂರ್ಯಾಸ್ತ: 0೬ :19

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲದಿಂದ ನೀವಂದುಕೊಂಡ ಫಲಿತಾಂಶವನ್ನು ಪಡೆಯುತ್ತೀರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚು. ಉದ್ಯೋಗದ ಸ್ಥಳದಲ್ಲಿ ಹೆಚ್ಚಿನ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಷಭ: ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕವಾಗಿ ಸುಧಾರಣೆ ಆಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ. ಆರ್ಥಿಕವಾಗಿ ಪ್ರಗತಿ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಕಟಕ: ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ. ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಕಷ್ಟಪಟ್ಟು ಮಾಡುವ ಕೆಲಸಗಳು ಇಂದು ನಿಮಗೆ ಫಲ ನೀಡಲಿವೆ. ನಿಮ್ಮ ಮಕ್ಕಳು ನಿಮಗೆ ಶುಭ ಸುದ್ದಿಯನ್ನು ನೀಡುವ ಸಾಧ್ಯತೆ. ಆರೋಗ್ಯ ಉತ್ತಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ತುಲಾ: ಆರೋಗ್ಯ ಪರಿಪೂರ್ಣ ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಖರ್ಚು ಹೆಚ್ಚು. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ. ಉದ್ಯೋಗದ ಸ್ಥಳದಲ್ಲಿಯೂ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು. ಹಿರಿಯರಿಂದ ಮಾರ್ಗದರ್ಶನ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ನೀವು ಇಂದು ಹಿಡಿದ ಕೆಲಸದಲ್ಲಿ ಯಶಸ್ವಿಯಾಗುವಿರಿ. ಮದುವೆಯ ನಿರೀಕ್ಷೆಯಲ್ಲಿರುವವರಿಗೆ ಶುಭ ಸುದ್ದಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ.
ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

Lok Sabha Election 2024: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಉಂಟಾಗಿದ್ದ ಗೊಂದಲ ಕೊನೆಗೂ ಬಗೆಹರಿದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮನವೊಲಿಕೆ ಮಾಡಲಾಗಿದೆ. ಹೀಗಾಗಿ ಹೈಕಮಾಂಡ್‌ ಯಾರಿಗೇ ಟಿಕೆಟ್‌ ಕೊಟ್ಟರೂ ಕೆಲಸ ಮಾಡುವುದಾಗಿ ಎರಡೂ ಬಣದವರು ಒಪ್ಪಿದ್ದಾರೆನ್ನಲಾಗಿದೆ. ಆದರೆ, ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಣ ರಾಜಕೀಯವನ್ನು ತಣ್ಣಗೆ ಮಾಡಬೇಕಿದೆ.

VISTARANEWS.COM


on

Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ಕಾಂಗ್ರೆಸ್‌ಗೆ ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಅದರಲ್ಲಿ ಬಹುಮುಖ್ಯವಾಗಿ ಕೋಲಾರ ಲೋಕಸಭೆ ಕ್ಷೇತ್ರ (Kolar Lok Sabha constituency) ಹಾಗೂ ಪಕ್ಕದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ತಲೆನೋವು ತಂದಿದೆ. ಎರಡೂ ಕ್ಷೇತ್ರಗಳಲ್ಲಿ ಬಣ ರಾಜಕೀಯ ಜೋರಾಗಿಯೇ ಇದೆ. ಕೋಲಾರದಲ್ಲಿ ಕೆ.ಎಚ್.‌ ಮುನಿಯಪ್ಪ (K.H. Muniyappa) ಅವರ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಒಲವು ತೋರಿದೆ ಎಂದು ಮಾಜಿ ಸಚಿವ ರಮೇಶ್ ಕುಮಾರ್ (Ramesh Kumar) ಟೀಮ್ ಕೆರಳಿತ್ತು. ಆದರೆ, ಈಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಎಂದು ಎರಡೂ ಬಣದ ನಾಯಕರು ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸಭೆ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಬೈರತಿ ಸುರೇಶ್‌, ಕೋಲಾರದ ಸಮಸ್ಯೆ ಬಗೆಹರಿದಿದೆ. ಹೈಕಮಾಂಡ್‌ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಹೈಕಮಾಂಡ್‌ ಯಾರನ್ನು ಅಭ್ಯರ್ಥಿಯನ್ನಾಗಿಸಬೇಕು ಎಂದು ತೀರ್ಮಾನ ಮಾಡುತ್ತದೆಯೋ ಅದಕ್ಕೆ ನಾವು ಬದ್ಧ‌ ಎಂದು ರಮೇಶ್‌ ಕುಮಾರ್‌ ಬಣ ಹಾಗೂ ಕೆ.ಎಚ್.‌ ಮುನಿಯಪ್ಪ ಅವರ ಬಣ ಒಪ್ಪಿಕೊಂಡಿದೆ ಎಂದು ಹೇಳಿದರು.

ರಾಜೀನಾಮೆ ಕೊಡುವ ಹಂತಕ್ಕೆ ಹೋಗಿದ್ದ ಕೋಲಾರ ಗಲಾಟೆ

ಇದು ಸಹಿತ ದಲಿತ ಎಡಗೈ ಸಮುದಾಯಕ್ಕೇ ಟಿಕೆಟ್‌ ನೀಡುವುದನ್ನು ವಿರೋಧಿಸಿ ರಾಜೀನಾಮೆ ನೀಡುವ ಹಂತಕ್ಕೂ ಹೋಗಿತ್ತು. ಈಗ ಒಂದು ಹಂತ ಕೆಳಕ್ಕೆ ಇಳಿಯಲು ಮುಂದಾಗಿರುವ ಈ ಬಣವು ಎಡಗೈ ಸಮುದಾಯಕ್ಕೆ ಟಿಕೆಟ್‌ ಕೊಟ್ಟರೂ ಸರಿ. ಕೆ.ಎಚ್‌. ಮುನಿಯಪ್ಪ ಅವರ ಕುಟುಂಬಕ್ಕೆ ಬೇಡ ಎಂದು ಪಟ್ಟು ಹಿಡಿದು ಕುಳಿತಿತ್ತು. ಮುನಿಯಪ್ಪ ಸಹ ತಾವು ಹೇಳಿದವರಿಗೇ ಬೇಕು ಎಂದು ಕುಳಿತಿದ್ದಾರೆ. ಈ ಸಂಬಂಧ ಈಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಸಂಧಾನ ಸಭೆಯನ್ನು ನಡೆಸಲಾಗಿದ್ದು, ಯಶಸ್ವಿಯಾಗಿದೆ.

Lok Sabha Election 2024 Kolar Congress Dilemma Resolved CM DCM mediation meeting Success

ಡಿಕೆಶಿ ಗುಡುಗಿಗೆ ಬೆದರಿದರೇ?

ಗುರುವಾರ ಬೆಳಗ್ಗೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, ಪಕ್ಷ ಯಾರಿಗೆ ಟಿಕೆಟ್‌ ಕೊಡುತ್ತದೆಯೋ ಅದನ್ನು ಒಪ್ಪಿಕೊಂಡು ಕೆಲಸ ಮಾಡಬೇಕು ಎಂದು ಖಡಕ್‌ ಸಂದೇಶವನ್ನು ರವಾನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್‌ ಕುಮಾರ್‌ ಬಣವು ನಿಲುವು ಬದಲು ಮಾಡಿದ್ದು, ಕೆ.ಎಚ್. ಮುನಿಯಪ್ಪ ಫ್ಯಾಮಿಲಿಗೆ ಬಿಟ್ಟು ಬೇರೆ ಯಾರಿಗೆ ಬೇಕಿದ್ದರೂ ಕೊಡಿ. ದಲಿತ ಎಡಗೈ ಸಮುದಾಯಕ್ಕೆ ಕೊಟ್ಟರೂ ಸರಿ, ಬಲಗೈ ಸಮುದಾಯಕ್ಕಾದರೂ ಸರಿ ಎಂದು ಪಟ್ಟು ಹಿಡಿದು ಕುಳಿತಿದೆ. ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮುಂದೆ ಹೇಳಿತ್ತು.

ಸಿಎಂ ಕಾರಿನಲ್ಲೂ ಸಭೆ!

ಇನ್ನು ಕೋಲಾರ ರಾಜಕೀಯ ಕಗ್ಗಂಟು ವಿಚಾರದ ಬಗ್ಗೆ ಚರ್ಚೆ ಮಾಡುವ ಸಂಬಂಧ ಸಚಿವ ಎಂ ಸಿ ಸುಧಾಕರ್ ಮತ್ತು ಕೊತ್ತನೂರು ಮಂಜುನಾಥ್ ಅವರು ರಾಮನಗರಕ್ಕೆ ಬಂದಿದ್ದರು. ಅಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್‌ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಆ ಕಾರ್ಯಕ್ರಮ ಮುಗಿದ ಕೂಡಲೇ ಸಿಎಂ ಅವರನ್ನು ಉಭಯ ನಾಯಕರು ಭೇಟಿ ಮಾಡಿದ್ದಾರೆ. ಆಗ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ ಅವರು ಈ ಇಬ್ಬರನ್ನೂ ತಮ್ಮ ಕಾರಿನಲ್ಲಿ ಕೂರಿಸಿಕೊಂಡು ಹೊರಟಿದ್ದರು.

ಆಗ ಸಚಿವ ಎಂ ಸಿ ಸುಧಾಕರ್ ಮತ್ತು ಕೊತ್ತನೂರು ಮಂಜುನಾಥ್ ಅವರು ರಾಮನಗರದಿಂದ ಬೆಂಗಳೂರಿನವರೆಗೂ ಸಿಎಂಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಮುನಿಯಪ್ಪ ಸೂಚಿಸಿದವರಿಗೆ ಮಾತ್ರ ಟಿಕೆಟ್ ಕೊಡಬಾರದು ಎಂದು ಸಿಎಂಗೆ ಹೇಳಿದ್ದಾರೆ. ಕಳೆದ ಚುನಾವಣೆಗಳಲ್ಲಿ ಮುನಿಯಪ್ಪ ಮಾಡಿದ ಕೆಲಸದ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಲ್ಲಿನ ನಾಯಕರನ್ನು ಕೂರಿಸಿ ಇಂದು ಮಾತನಾಡುತ್ತೇನೆ. ಇಲ್ಲಿ ಯಾರೂ ನಾಟಕ ಮಾಡುತ್ತಿಲ್ಲ. ಒಂದೊಂದು ಬಣದವರು ಒಂದೊಂದು ರೀತಿ ಹೇಳಿಕೆಯನ್ನು ಕೊಡುತ್ತಿದ್ದಾರೆ. ಕೋಲಾರ ಸಮಸ್ಯೆ ಸಹ ಬಗೆಹರಿಯುತ್ತದೆ ಎಂದು ಹೇಳಿದ್ದರು.

ಬಿಜೆಪಿಗೆ ಪರಿಣಾಮ ಬೀರಲ್ಲವಾ?

10 ಹಾಲಿ ಸಂಸದರಿಗೆ ಬಿಜೆಪಿಯಲ್ಲಿ ಟಿಕೆಟ್ ಕೊಟ್ಟಿಲ್ಲ. ಹಾಗಾದರೆ ಅದು ಪರಿಣಾಮ ಬೀರಲ್ಲವಾ? ನಮ್ಮಲ್ಲಿ ಮಾತ್ರ ಪರಿಣಾಮ ಬೀರುತ್ತಾ? ಜಿಲ್ಲೆಯವರ ಅಭಿಪ್ರಾಯ ಕೇಳಿ ತೀರ್ಮಾನ ಮಾಡ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಯಾರಿಗೆ ಟಿಕೆಟ್‌ ಕೊಡಬೇಕೆಂದು ನಮಗೆ ಗೊತ್ತು

ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿ, ಕೋಲಾರದ ನಾಯಕರು ಯಾರಿಗೋ ಟಿಕೆಟ್‌ ಕೊಡಲಾಗಿದೆ ಎಂದು ಕಲ್ಪನೆ ಮಾಡಿಕೊಂಡು ಗಾಬರಿ ಮಾಡಿಕೊಂಡಿದ್ದಾರೆ. ಎಲ್ಲರೂ ಪಾರ್ಟಿ ಲೈನ್‌ನಲ್ಲಿ ಇರಬೇಕು. ಯಾರಿಗೆ ಟಿಕೆಟ್ ಕೊಡಬೇಕು ಎಂದು ನಮಗೆ ಗೊತ್ತಿದೆ. ಮುನಿಯಪ್ಪ‌ ಅವರು ಹಿರಿಯರು ಇದ್ದಾರೆ. ಅವರ ಅಭಿಪ್ರಾಯ ಪಡೆಯುತ್ತೇವೆ. ಅಲ್ಲಿಯ ಶಾಸಕರ ಅಭಿಪ್ರಾಯವನ್ನೂ ಪಡೆಯುತ್ತೇವೆ ಎಂದು ಹೇಳಿದ್ದರು.

ಈ ಬಗ್ಗೆ ಸಚಿವ ಕೆ.ಎಚ್.‌ ಮುನಿಯಪ್ಪ ಪ್ರತಿಕ್ರಿಯೆ ನೀಡಿ, ರಾಜೀನಾಮೆ ಕೊಡುವ ಡ್ರಾಮಾ ಶುರುವಾಗಿದೆ ಅಷ್ಟೇ. ಇದೊಂದು ಆಶ್ಚರ್ಯಕರ ಬೆಳವಣಿಗೆಯಾಗಿದೆ. ಯಾರೂ ರಾಜೀನಾಮೆ ಕೊಡಲ್ಲ. ಮುನಿಯಪ್ಪಗೆ ಟಿಕೆಟ್ ಕೊಟ್ಟರೆ ಗೆದ್ದುಕೊಂಡು ಬರ್ತಾರೆ ಅನ್ನೋ ಭಯ. ನಾನು ಯಾರ ಕೆಲಸಕ್ಕೂ ಅಡ್ಡ ಹೋಗಿಲ್ಲ, ನಾನಾಯ್ತು ನನ್ನ ಕೆಲಸ ಆಯ್ತು ಅಷ್ಟೇ. ಯಾರು ಏನೇನು ಮಾಡಿದ್ದಾರೋ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಿಳಿದುಕೊಳ್ತಾರೆ ಎಂದು ಹೇಳಿದ್ದರು.

ಚಿಕ್ಕಬಳ್ಳಾಪುರದಲ್ಲೂ ಬಂಡಾಯ ಬಿಸಿ

ಕಾಂಗ್ರೆಸ್‌ ಪಕ್ಷಕ್ಕೆ ಕೋಲಾರದೊಂದಿಗೆ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ ಕೂಡ ಒತ್ತಡ ಸೃಷ್ಟಿಸಿದೆ. ರಕ್ಷಾ ರಾಮಯ್ಯ ಮತ್ತು ಶಿವಶಂಕರ ರೆಡ್ಡಿ ನಡುವೆ ಟಿಕೆಟ್‌ಗಾಗಿ ಕಾದಾಟವಿದೆ. ಈ ನಡುವೆ ಮಾಜಿ ಸಿಎಂ ವೀರಪ್ಪ ಮೊಯಿಲಿ ಕೂಡ ಆಕಾಂಕ್ಷಿಯಾಗಿದ್ದಾರೆ. ಈ ಕ್ಷೇತ್ರದ ಮಾಜಿ ಸಂಸದರೂ ಆದ ಮೊಯಿಲಿ ತಮಗೇ ಟಿಕೆಟ್‌ ನೀಡುವಂತೆ ದಿಲ್ಲಿಯಲ್ಲಿ ಸೋನಿಯಾ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.

ರಕ್ಷಾ ರಾಮಯ್ಯ ಅವರಿಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಹೀಗಾಗಿ ಪಟ್ಟಿಯಲ್ಲಿ ಹೆಸರಿಲ್ಲದವರಿಗೆ ಟಿಕೆಟ್ ಕೊಡಬೇಡಿ. ಜಿಲ್ಲಾ ಸಮಿತಿ ಕಳುಹಿಸಿದ ವೀರಪ್ಪ ಮೊಯ್ಲಿ ಇಲ್ಲವೇ, ಶಿವಶಂಕರರೆಡ್ಡಿ ಹೆಸರು ಅಂತಿಮ ಮಾಡುವಂತೆ ಸ್ಥಳೀಯ ನಾಯಕರು ಒತ್ತಾಯಿಸಿದ್ದಾರೆ.

ಆದರೆ, ಹೈಕಮಾಂಡ್‌ ಈಗಾಗಲೇ ರಕ್ಷಾ ರಾಮಯ್ಯ ಹೆಸರು ಅಂತಿಮ ಮಾಡಿದೆ. ಅಧಿಕೃತ ಘೋಷಣೆ ಒಂದೇ ಬಾಕಿಯಾಗಿದೆ. ಆದರೆ ಇದನ್ನು ವಿರೋಧಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಪತ್ರ ಬರೆದಿದ್ದು, ನಿಮ್ಮ ನಿರ್ಧಾರ ಪುನರ್ ಪರಿಶೀಲನೆ ಮಾಡಿ ಎಂದಿದ್ದಾರೆ. ತಮ್ಮ ಮನವಿಗೆ ಮಣಿಯದಿದ್ದರೆ ಕೋಲಾರದ ಮಾದರಿಯಲ್ಲಿ ಸಾಮೂಹಿಕ ರಾಜೀನಾಮೆ ನೀಡಬೇಕಾಗುತ್ತದೆ ಎಂದೂ ಹೇಳಿದ್ದಾರೆ.

ಶಿವಶಂಕರ ರೆಡ್ಡಿ ಏನು ಹೇಳುತ್ತಾರೆ?

ವಿಸ್ತಾರ ನ್ಯೂಸ್‌ಗೆ ಶಿವಶಂಕರರೆಡ್ಡಿ ಪ್ರತಿಕ್ರಿಯೆ ನೀಡಿ, ನಾನು ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಜಿಲ್ಲಾ ಸಮಿತಿ ಶಿಫಾರಸು ಮಾಡುವಾಗ ನನ್ನ ಹೆಸರು ಕಳಿಸಿದ್ದಾರೆ. ನನ್ನ ಮತ್ತು ವೀರಪ್ಪ ಮೊಯ್ಲಿ ಹೆಸರನ್ನು ಶಿಫಾರಸು ಮಾಡಿದ್ದರು. ವೀರಪ್ಪ ಮೊಯ್ಲಿ ಅವರು ವಯಸ್ಸು ಆಗಿದೆ ಅಂತ ಹಿಂದೆ ಸರಿದಿದ್ದಾರೆ. ಹೀಗಾಗಿ ನಾನು ಆಕಾಂಕ್ಷಿ ಅಂತ ಹೇಳಿದ್ದೇನೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೂ ಹೇಳಿದ್ದೇನೆ. ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯದವರಿಗೆ ಟಿಕೆಟ್‌ ನೀಡಿದ್ದಾರೆ. ಕಾಂಗ್ರೆಸ್‌ನಲ್ಲೂ ಒಕ್ಕಲಿಗ ಸಮುದಾಯಕ್ಕೆ ಟಿಕೆಟ್ ಕೊಡಬೇಕು. ಇಲ್ಲದಿದ್ದರೆ ಬಿಜೆಪಿಗೆ ಲಾಭವಾಗುತ್ತದೆ. ಎರಡು ಬಿರಿಯಾನಿ ಹಂಚಿದರೆ ಸಂಘಟನೆ ಆಗಲ್ಲ ಎಂದು ರಕ್ಷಾ ರಾಮಯ್ಯ ಅವರಿಗೆ ಪರೋಕ್ಷ ಟಾಂಗ್‌ ನೀಡಿದ್ದಾರೆ.

ನಮ್ಮನ್ನು ಪಕ್ಷ ಪರಿಗಣಿಸಿದರೆ ನಾವು ಪಕ್ಷದಲ್ಲಿ ಇರುತ್ತೇವೆ. ಹಣಬಲ ಮಾತ್ರ ಅಂದರೆ ನಮ್ಮ ಜನಬಲದ ಶಕ್ತಿ ತೋರಿಸಬೇಕಾಗುತ್ತದೆ. ಒಕ್ಕಲಿಗ ಸಮುದಾಯಕ್ಕೆ ಬಿಟ್ಟು ಬೇರೆ ಸಮುದಾಯಕ್ಕೆ ಟಿಕೆಟ್ ಕೊಟ್ಟರೆ ಗೆಲ್ಲೋದಿಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾನು ಪಕ್ಷದಲ್ಲಿ ಇರಲ್ಲ ಎಂದು ಶಿವಶಂಕರ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

Continue Reading

ಕ್ರೀಡೆ

Anurag Thakur : 2036ರಲ್ಲಿ ಭಾರತದಲ್ಲಿ ಒಲಿಂಪಿಕ್ಸ್​​; ಅನುರಾಗ್ ಠಾಕೂರ್​

Anurag Thakur :ಭವಿಷ್ಯದಲ್ಲಿ ಪ್ರಮುಖ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಿಗೆ ಭಾರತ ಆತಿಥ್ಯ ವಹಿಸುವ ಯೋಜನೆಗಳನ್ನು ಠಾಕೂರ್​ ಇದೇ ವೇಳೆ ತಿಳಿಸಿ ಅದುವೇ ಒಲಿಂಪಿಕ್ಸ್ ಆಚರಣೆಗೆ ಮಾನದಂಡವಾಗಲಿದೆ ಎಂದು ವಿವರಿಸಿದರು.

VISTARANEWS.COM


on

Anurag Thakur
Koo

ಬೆಂಗಳೂರು: 2036ರ ಒಲಿಂಪಿಕ್ಸ್​ ಆಯೋಜಿಸಲು ಭಾರತ ಸಿದ್ಧವಿದೆ ಎಂಬುದಾಗಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ (Anurag Thakur) ಹೇಳಿದ್ದಾರೆ. ಈ ವೇಳೆ ಅವರು ಭಾರತದ ಮಹತ್ವಾಕಾಂಕ್ಷೆಯ ಒಲಿಂಪಿಕ್ ಆಕಾಂಕ್ಷೆಗಳನ್ನು ಹಲವು ಕ್ರೀಡಾಕೂಟಗಳ ಆಯೋಜನೆ ಮೂಲಕ ಹೇಗೆ ಸಾಧಿಸಬಹುದು ಎಂಬುದನ್ನು ವಿವರಿಸಿದ್ದಾರೆ. 2024ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics) ಭಾರತದ ಪದಕಗಳ ಸಂಖ್ಯೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಠಾಕೂರ್, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರದರ್ಶನವನ್ನು ಹೆಚ್ಚಿಸಲು ದೃಢ ಬದ್ಧತೆ ವ್ಯಕ್ತಪಡಿಸಿದರು. ಅದೇ ರೀತಿ ಭವಿಷ್ಯದಲ್ಲಿ ಪ್ರಮುಖ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಿಗೆ ಭಾರತ ಆತಿಥ್ಯ ವಹಿಸುವ ಯೋಜನೆಗಳನ್ನು ಠಾಕೂರ್​ ಇದೇ ವೇಳೆ ತಿಳಿಸಿ ಅದುವೇ ಒಲಿಂಪಿಕ್ಸ್ ಆಚರಣೆಗೆ ಮಾನದಂಡವಾಗಲಿದೆ ಎಂದು ಹೇಳಿದರು.

2024ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ನಾವು ನಮ್ಮ ಪದಕಗಳ ಸಂಖ್ಯೆಯನ್ನು ಹೆಚ್ಚಿಸುತ್ತೇವೆ. 2030ರ ಯೂತ್ ಒಲಿಂಪಿಕ್ಸ್ ಮತ್ತು 2036ರ ಬೇಸಿಗೆ ಒಲಿಂಪಿಕ್ಸ್ ಆತಿಥ್ಯವನ್ನು ಭಾರತದಲ್ಲಿ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ. ಈ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ಮುಂಬೈನಲ್ಲಿ ನಡೆದ ಐಒಸಿ ಅಧಿವೇಶನದಲ್ಲಿ 2036 ರ ಒಲಿಂಪಿಕ್ಸ್ ಆತಿಥ್ಯ ವಹಿಸುವ ಭಾರತದ ಆಸಕ್ತಿಯನ್ನು ವ್ಯಕ್ತಪಡಿಸಿದ್ದರು ಎಂದು ಠಾಕೂರ್ ನುಡಿದರು.

ಲಾಸ್ ಏಂಜಲೀಸ್ ಒಲಿಂಪಿಕ್ಸ್​ಗೆ ಕ್ರಿಕೆಟ್ ಸೇರ್ಪಡೆ

ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಲಾಸ್ ಏಂಜಲೀಸ್​​ನಲ್ಲಿ ನಡೆಯಲಿರುವ 2028 ರ ಒಲಿಂಪಿಕ್​​ನಲ್ಲಿ ಕ್ರಿಕೆಟ್ ಆಟವನ್ನು ಸ್ಪರ್ಧೆಗಳ ಪಟ್ಟಿಗೆ ಸೇರಿಸಲು ಸಜ್ಜಾಗಿದೆ. ವರದಿಗಳ ಪ್ರಕಾರ, ಈವೆಂಟ್ ಅನ್ನು 20 ಓವರ್​ಗಳ ಸ್ವರೂಪದಲ್ಲಿ ನಡೆಸಲಾಗುತ್ತದೆ ಆದಾಗ್ಯೂ, ಚತುಷ್ಕೋನ ಪಂದ್ಯಾವಳಿಯಲ್ಲಿ ಕ್ರೀಡೆಯನ್ನು ಆಯೋಜಿಸಲು ಟಿ 10 ಸ್ವರೂಪವನ್ನು ಸಹ ಪರಿಗಣಿಸಬಹುದು ಎಂಬ ವದಂತಿಗಳು ಹೆಚ್ಚಾಗಿವೆ.

ಇದನ್ನೂ ಓದಿ : Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

ಇದಕ್ಕೂ ಮೊದಲು 2023 ರಲ್ಲಿ, ಅಂತಾರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರು ಲಾಸ್ ಏಂಜಲೀಸ್​​ನಲ್ಲಿ ನಡೆಯಲಿರುವ ಕ್ರೀಡಾಕೂಟದ ಭಾಗವಾಗಿ ಕ್ರಿಕೆಟ್​ ಆಟವನ್ನು ಸೇರಿಸಲು ಅಂತಾರರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ (ಐಒಸಿ) ಅನುಮೋದನೆ ನೀಡಿದೆ ಎಂಬ ಮಾಹಿತಿ ಹಂಚಿಕೊಂಡಿದ್ದರು.

“ಎಲ್ಎ 28 ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಸೇರ್ಪಡೆಯನ್ನು ಐಒಸಿ ಅಧಿವೇಶನವು ಒಪ್ಪಿದೆ. ಎಲ್ಎ 28 ಕ್ರೀಡಾಕೂಟದಲ್ಲಿ ನಮ್ಮ ಶ್ರೇಷ್ಠ ಕ್ರೀಡೆಯನ್ನು ಪ್ರದರ್ಶಿಸುವ ಅವಕಾಶ ನಮಗಿದೆ ಎಂದು ಹೇಳಿದ್ದರು.

Continue Reading

ಕ್ರೀಡೆ

Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

Hardik Pandya : ಹಾರ್ದಿಕ್ ಪಾಂಡ್ಯ ಅವರನ್ನು ಮುಂಬಯಿ ತಂಡದ ನಾಯಕನನ್ನಾಗಿ ಮಾಡಿದ ಬಳಿಕ ಕ್ರಿಕೆಟ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

Hardik Pandya
Koo

ಹೈದರಾಬಾದ್​: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ (Hardik Pandya) 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (mumbai Indians) ಮತ್ತು ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad) ತಂಡಗಳು ಮುಖಾಮುಖಿಯಾಗಿದ್ದವು. ಬ್ಯಾಟಿಂಗ್ ಪರಾಕ್ರಮದ ರೋಮಾಂಚಕ ಪ್ರದರ್ಶನದ ಹೊರತಾಗಿಯೂ, ಮುಂಬೈ ಇಂಡಿಯನ್ಸ್ ಪ್ರಸ್ತುತ ನಡೆಯುತ್ತಿರುವ ಮೆಗಾ ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಸೋಲನ್ನು ಅನುಭವಿಸಿತು. ಆದರೆ, ಸೋಲಿನ ಬೇಸರದ ಹೊರತಾಗಿಯೂ ಪ್ರೇಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದು ಹಾರ್ದಿಕ್ ಪಾಂಡ್ಯ. (Hardik Pandya)

ಕುತೂಹಲಕಾರಿ ಸಂಗತಿಯೆಂದರೆ, ಐಪಿಎಲ್ 2024 ಋತುವಿನ ಪ್ರಾರಂಭದಿಂದಲೂ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕ್ರೀಡಾಂಗಣದಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಕೆಟ್​ ಅಭಿಮಾನಿಗಳಿಂದ ಟೀಕೆಗಳು ಹಾಗೂ ಅಪಹಾಸ್ಯವನ್ನು ಎದುರಿಸುತ್ತಿದ್ದಾರೆ. ಅಂತೆಯೇ ಎಸ್​ಆರ್​​ಎಚ್​ ವಿರುದ್ಧದ ಪಂದ್ಯದಲ್ಲಿ, ಹಾರ್ದಿಕ್ 20 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದ ನಂತರ, ಅಭಿಮಾನಿಗಳು “ರೋಹಿತ್ ರೋಹಿತ್” ಎಂದು ಜಪಿಸಲು ಪ್ರಾರಂಭಿಸಿದ್ದರು. ಹಾರ್ದಿಕ್ ಡ್ರೆಸ್ಸಿಂಗ್ ರೂಮ್ಗೆ ಹಿಂದಿರುಗುತ್ತಿದ್ದಂತೆ ಅವರನ್ನು ಅಪಹಾಸ್ಯ ಮಾಡಿದ್ದರು. ಬಳಕೆದಾರರೊಬ್ಬರು ಈ ಘಟನೆಯ ವೀಡಿಯೊವನ್ನು ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದಾರೆ. ಇದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆದವು.

ಇದನ್ನೂ ಓದಿ : IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

277 ರನ್ ಗಳಿಸುವ ಸವಾಲನ್ನು ಗುರುತಿಸಿದ ಹಾರ್ದಿಕ್ ಪಾಂಡ್ಯ, ಎದುರಾಳಿ ತಂಡದ ಬ್ಯಾಟಿಂಗ್ ಅನ್ನು ಶ್ಲಾಘಿಸಿದರು ಮತ್ತು ಬ್ಯಾಟಿಂಗ್ ಸ್ನೇಹಿ ಪಿಚ್​ನಲ್ಲಿ ತಮ್ಮ ತಂಡದ ಬೌಲರ್​ಗಳು ಎದುರಿಸುತ್ತಿದ್ದ ಕಷ್ಟವನ್ನು ಒಪ್ಪಿಕೊಂಡರು. ಅವರು ತಮ್ಮ ಯುವ ಬೌಲಿಂಗ್ ದಾಳಿಯ ಸುಧಾರಿಸುವ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಪದಾರ್ಪಣೆ ಆಟಗಾರ್ತಿ ಕ್ವೆನಾ ಮಾಫಕಾ ಅವರ ಪ್ರದರ್ಶನವನ್ನು ಶ್ಲಾಘಿಸಿದರು.

” ಎಸ್​ಅರ್​​​ಎಚ್​​ 277 ರನ್ ಗಳಿಸುತ್ತದೆ ಎಂದೇ ಭಾವಿಸಲಾಗಿತ್ತು. ಪಿಚ್ ಬ್ಯಾಟಿಂಗ್​ಗೆ ಪೂರಕವಾಗಿತ್ತು. ವೇಳೆ ಎಷ್ಟೇ ಕೆಟ್ಟದಾಗಿರಲಿ ಅಥವಾ ಉತ್ತಮವಾಗಿರಲಿ, ಎದುರಾಳಿ ತಂಡವು ಅಷ್ಟು ಸ್ಕೋರ್ ಮಾಡಬೇಕಾದರೆ ಅವರು ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಆ ತಂಡದ ಬೌಲರ್​ಗಳು ಉತ್ತಮವಾಗಿದ್ದರು. ಎರಡೂ ತಂಡಗಳು ಸುಮಾರು 500 ರನ್ ಬಾರಿಸಿದ್ದೇವೆ ಎಂದು ಪಾಂಡ್ಯ ಹೇಳಿಕೊಂಡಿದ್ದಾರೆ.

Continue Reading

ಕ್ರೀಡೆ

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

IPL 2024 : ಐಪಿಎಲ್​ನ 17 ನೇ ಸೀಸನ್ ಐಪಿಎಲ್ ಆರಂಭಿಕ ದಿನದಂದು ಅತಿ ಹೆಚ್ಚು ಟಿವಿ ವೀಕ್ಷಣೆಗೆ ಸಾಕ್ಷಿಯಾಯಿತು. ಡಿಸ್ನಿ ಸ್ಟಾರ್ ನೆಟ್ವರ್ಕ್​ನಲ್ಲಿ ಏಕಕಾಲದಲ್ಲಿ ಪ್ರಸಾರವನ್ನು 6.1 ಕೋಟಿ ವೀಕ್ಷಕರು ವೀಕ್ಷಿಸಿದರು.

VISTARANEWS.COM


on

IPL 2024-CSKRCB
Koo

ಮುಂಬೈ ಐಪಿಎಲ್ ನ 2024ರ (IPL 2024) ಅಧಿಕೃತ ಪ್ರಸಾರಕ ಡಿಸ್ನಿ ಸ್ಟಾರ್ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ದಾಖಲೆಯೊಂದಿಗೆ ಆರಂಭಿಸಿದೆ. ಐಪಿಎಲ್ 2024 ರ ಮೊದಲ ದಿನದಂದು 16.8 ಕೋಟಿ ವಿಶಿಷ್ಟ ವೀಕ್ಷಕರು 1276 ಕೋಟಿ ನಿಮಿಷಗಳ ವೀಕ್ಷಣೆಯ ಸಮಯವನ್ನು ದಾಖಲಿಸಿದೆ. ಐಪಿಎಲ್​ನ 17 ನೇ ಸೀಸನ್ ಐಪಿಎಲ್ ಆರಂಭಿಕ ದಿನದಂದು ಅತಿ ಹೆಚ್ಚು ಟಿವಿ ವೀಕ್ಷಣೆಗೆ (TV viewers) ಸಾಕ್ಷಿಯಾಯಿತು. ಡಿಸ್ನಿ ಸ್ಟಾರ್ ನೆಟ್ವರ್ಕ್​ನಲ್ಲಿ ಏಕಕಾಲದಲ್ಲಿ ಪ್ರಸಾರವನ್ನು 6.1 ಕೋಟಿ ವೀಕ್ಷಕರು ವೀಕ್ಷಿಸಿದರು.

ಸ್ಟಾರ್ ಸ್ಪೋರ್ಟ್ಸ್ ವಕ್ತಾರರು “ಇದು ಒಂದು ಸ್ಮರಣೀಯ ಸಾಧನೆಯಾಗಿದ್ದು, ಸ್ಟಾರ್ ಸ್ಪೋರ್ಟ್ಸ್ ಮೇಲಿನ ಅಭಿಮಾನಿಗಳ ಪ್ರೀತಿಯ ಪ್ರತಿಫಲನವಾಗಿದೆ. ಇದು ನೆಟ್ವರ್ಕ್​ ಅಚಲ ಬದ್ಧತೆಗೆ ಸಾಧ್ಯವಾಗಿದೆ. ಕ್ರಿಕೆಟ್ ಮತ್ತು ಐಪಿಎಲ್ ಅನ್ನು ಬೆಳೆಸಲು ಸ್ಟಾರ್ ಸ್ಪೋರ್ಟ್ಸ್ ನಿರಂತರವಾಗಿ ಕೈಗೊಂಡಿರುವ ವ್ಯಾಪಕ ಶ್ರೇಣಿಯ ಉಪಕ್ರಮಗಳಿಗೆ ಬೆಂಬಲ ನೀಡಿದ್ದಕ್ಕಾಗಿ ನಾವು ನಮ್ಮ ಎಲ್ಲಾ ಪಾಲುದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಮತ್ತು ಬಿಸಿಸಿಐಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ವೇಗವನ್ನು ಮುಂದುವರಿಸಲು ಮತ್ತು ಅಭೂತಪೂರ್ವ ವೀಕ್ಷಕರನ್ನು ತಲುಪಲು ನಾವು ವಿಶ್ವದ ಅತಿದೊಡ್ಡ ಕ್ರೀಡಾಕೂಟದಲ್ಲಿ ನಮ್ಮ ಸಾಮರ್ಥ್ಯವನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ವೀಕ್ಷಕ ವಿವರಣೆ ತಂಡದಲ್ಲಿರುವ ಸ್ಟಾರ್​ಗಳು ಇವರು

ನವಜೋತ್ ಸಿಂಗ್ ಸಿಧು ಅವರು ಭಾರತದ ವಿಶ್ವ ಚಾಂಪಿಯನ್ ಹರ್ಭಜನ್ ಸಿಂಗ್, ಇರ್ಫಾನ್ ಪಠಾಣ್, ರವಿ ಶಾಸ್ತ್ರಿ, ಸುನಿಲ್ ಗವಾಸ್ಕರ್ ಮತ್ತು ಕ್ರಿಸ್ ಶ್ರೀಕಾಂತ್. ಸ್ಟೀವ್ ಸ್ಮಿತ್ ಮತ್ತು ಸ್ಟುವರ್ಟ್ ಬ್ರಾಡ್, ಬ್ರಿಯಾನ್ ಲಾರಾ, ಮ್ಯಾಥ್ಯೂ ಹೇಡನ್, ಕೆವಿನ್ ಪೀಟರ್ಸನ್, ಜಾಕ್ ಕಾಲಿಸ್ ಮತ್ತು ಡೇಲ್ ಸ್ಟೇನ್ ಅವರೊಂದಿಗೆ ಟಾಟಾ ಐಪಿಎಲ್ 2024 ಅನ್ನು ಪ್ರಸ್ತುತಪಡಿಸಿದರು. ಸಿಎಸ್ಕೆಯ ಮಾಜಿ ತಾರೆಗಳಾದ ಅಂಬಾಟಿ ರಾಯುಡು, ಮುರಳಿ ವಿಜಯ್, ಎಲ್ ಬಾಲಾಜಿ ಮತ್ತು ಸುಬ್ರಮಣ್ಯಂ ಬದ್ರಿನಾಥ್, ಐಪಿಎಲ್ ಚಾಂಪಿಯನ್​ಗಳಾದ ವಿನಯ್ ಕುಮಾರ್ ಮತ್ತು ವೇಣುಗೋಪಾಲ್ ರಾವ್ ಅವರು ಡಿಸ್ನಿ ಸ್ಟಾರ್​ನ 9 ಭಾಷೆಗಳಲ್ಲಿ ಪ್ರಾದೇಶಿಕ ಫೀಡ್​ನ ಮುಂಚೂಣಿಯಲ್ಲಿದ್ದರು.

ಜಿಯೊಗೆ 11.3 ಕೋಟಿ ವೀಕ್ಷಕರು

ಡಿಜಿಟಲ್​ನಲ್ಲಿ ಜಿಯೋ ಸಿನೆಮಾ ಐಪಿಎಲ್​ನ ಮೊದಲ ದಿನದಂದು 11.3 ಕೋಟಿ ವೀಕ್ಷಕರನ್ನು ಗಳಿಸಿದೆ. ಐಪಿಎಲ್ 2023 ರ ಮೊದಲ ದಿನಕ್ಕಿಂತ ಇದು 51% ಜಿಗಿತವನ್ನು ದಾಖಲಿಸಿದೆ ಎಂದು ಜಿಯೊ ಹೇಳಿಕೊಂಡಿದೆ. ಮೊದಲ ದಿನ ಜಿಯೋ ಸಿನೆಮಾದಲ್ಲಿ ಒಟ್ಟು ವೀಕ್ಷಣೆಯ ಸಮಯ 660 ಕೋಟಿ ನಿಮಿಷಗಳು.

ಇದನ್ನೂ ಓದಿ : IPL 2024 : ಅಪ್ಪನ ಸಿಕ್ಸರ್​​ಗೆ ಚಿಯರ್ಸ್ ಹೇಳಿದ ಕ್ಲಾಸೆನ್ ಪುತ್ರಿ, ಇಲ್ಲಿದೆ ವಿಡಿಯೊ

ಸ್ಟಾರ್ ಸ್ಪೋರ್ಟ್ಸ್ ಪ್ರಮುಖ ಡಿಟಿಎಚ್ ಪ್ಲಾಟ್ ಫಾರ್ಮ್ ಗಳಲ್ಲಿ ಅಟ್ಮೋಸ್ ಸೌಂಡ್ ನೊಂದಿಗೆ 4 ಕೆ ನಲ್ಲಿ ಐಪಿಎಲ್ ಪ್ರಸಾರ ಪ್ರಾರಂಭಿಸಿದೆ.

ಸ್ಟಾರ್ ಸ್ಪೋರ್ಟ್ಸ್ ವಿಶೇಷ ಚೇತನರಿಗಾಗಿ, ದೃಷ್ಟಿಹೀನರು, ಕಿವುಡರು ಅಥವಾ ಶ್ರವಣದೋಷವುಳ್ಳ ಅಭಿಮಾನಿಗಳಿಗಾಗಿ ಕಾಮೆಂಟರಿ ಮತ್ತು ಸಂಜ್ಞೆ ಭಾಷೆಯ ವಿಶೇಷ ಫೀಡ್ ಅನ್ನು ಪ್ರಾರಂಭಿಸಿದೆ. ಇದು ಈ ಐಪಿಎಲ್ ಅನ್ನು ನಿಜವಾಗಿಯೂ ಒಳಗೊಳ್ಳುವಂತೆ ಮಾಡುತ್ತದೆ. ವಿಶ್ವದ ಯಾವುದೇ ಪ್ರಮುಖ ಕ್ರೀಡಾಕೂಟವು ವಿಕಲಚೇತನರಿಗೆ ಲೈವ್ ಫೀಡ್ ಹೊಂದಿರುವುದು ಇದೇ ಮೊದಲು.

Continue Reading
Advertisement
Lok Sabha Election 202410 mins ago

Lok Sabha Election 2024: ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

Health Tips
ಬೆಂಗಳೂರು14 mins ago

Health Tips : ಬೇಸಿಗೆಯಲ್ಲಿ ಲೈಫ್‌ಸ್ಟೈಲ್‌ ಹೇಗಿರಬೇಕು? ಆರೋಗ್ಯ ಇಲಾಖೆಯಿಂದ ಸರಳ ಸೂತ್ರ

Anurag Thakur
ಕ್ರೀಡೆ18 mins ago

Anurag Thakur : 2036ರಲ್ಲಿ ಭಾರತದಲ್ಲಿ ಒಲಿಂಪಿಕ್ಸ್​​; ಅನುರಾಗ್ ಠಾಕೂರ್​

Side Effects Of Pillow
ಆರೋಗ್ಯ31 mins ago

Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

Naveen Polishetty
ಸಿನಿಮಾ35 mins ago

Naveen Polishetty: ಅಮೆರಿಕದಲ್ಲಿ ಬೈಕ್‌ ಅಪಘಾತ; ಅನುಷ್ಕಾ ಶೆಟ್ಟಿ ಜತೆ ತೆರೆ ಹಂಚಿಕೊಂಡಿದ್ದ ನಟನಿಗೆ ಗಾಯ

Hardik Pandya
ಕ್ರೀಡೆ50 mins ago

Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

money guide
ಮನಿ-ಗೈಡ್1 hour ago

Money Guide: ಗಮನಿಸಿ; ಏ. 1ರಿಂದ ಬದಲಾಗುತ್ತವೆ ಈ ಎಲ್ಲ ಹಣಕಾಸು ನಿಯಮಗಳು

IPL 2024-CSKRCB
ಕ್ರೀಡೆ1 hour ago

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

Prithviraj Sukumaran
ಸಿನಿಮಾ1 hour ago

Prithviraj Sukumaran: ಪೃಥ್ವಿರಾಜ್ ಸುಕುಮಾರನ್‌ ಅಭಿನಯದ ‘ಆಡುಜೀವಿತಂ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ!

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Lok Sabha Election 20241 hour ago

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20245 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20246 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ14 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌