Anganawadi Workers: ನಾ ಕೊಡೆ ನೀ ಬಿಡೆ ಪರಿಸ್ಥಿತಿ; 7ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ - Vistara News

ಕರ್ನಾಟಕ

Anganawadi Workers: ನಾ ಕೊಡೆ ನೀ ಬಿಡೆ ಪರಿಸ್ಥಿತಿ; 7ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ

Anganawadi Workers: ವಾರ ಕಳೆದರೂ ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ರಾಜ್ಯ ಸರ್ಕಾರ ವರ ನೀಡುತ್ತಿಲ್ಲ, ಇವರು ಬಿಡುತ್ತಿಲ್ಲ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದೆ.

VISTARANEWS.COM


on

Anganwadi workers protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾನಾ ಬೇಡಿಕೆ ಈಡೇರಿಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ (Anganawadi Workers) ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದೆ. ನಗರದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಲಭ್ಯ ಇಲ್ಲದೇ ಪರದಾಡುತ್ತಿದ್ದಾರೆ.

ಮೈ ಕೊರೆಯುವ ಚಳಿಯಲ್ಲಿ ರಸ್ತೆಯಲ್ಲೇ ಹಗಲು ರಾತ್ರಿಯೆನ್ನದೆ ಹೋರಾಟ ಮಾಡುತ್ತಿದ್ದು, ಹಲವರು ಅನಾರೋಗ್ಯ ಪೀಡಿತರಾಗುತ್ತಿದ್ದಾರೆ. ಊಟ, ತಿಂಡಿಗೂ ಮಹಿಳೆಯರ ಪರದಾಡುತ್ತಿದ್ದು, ವಾರ ಕಳೆದರೂ ಯಾವ ಜನಪ್ರತಿನಿಧಿಗಳು ಸುಳಿದಿಲ್ಲ. ಸರ್ಕಾರದ ನಡೆಗೆ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

10 ದಿನದೊಳಗೆ ಬೇಡಿಕೆ ಈಡೇರಿಸುವಂತೆ ಎಚ್ಚರಿಕೆ

ಭಾನುವಾರಕ್ಕೆ 7ನೇ ದಿನಕ್ಕೆ ಕಾರ್ಯಕರ್ತೆಯರ ಹೋರಾಟ ಕಾಲಿಟ್ಟಿದ್ದು, 10ದಿನದೊಳಗೆ ಬೇಡಿಕೆ ಈಡೇರಿಸಿ ಇಲ್ಲವಾದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ. ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕಾಳಿದಾಸ ರಸ್ತೆ ಹಾಗೂ ಶೇಷಾದ್ರಿ ರಸ್ತೆಯ ಒಂದು ಭಾಗವನ್ನು ಬಂದ್ ಮಾಡಿ ವಿರೋಧಿಸಲಾಗಿದೆ. ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಅಥವಾ ಯಾವುದೇ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸರ್ಕಾರ ಲಿಖಿತ ರೂಪದ ಆದೇಶ ನೀಡುವವರೆಗೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಾರ್ಯಕರ್ತೆಯರ ಬೇಡಿಕೆಗಳೇನು?

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಕಾಯಂ ಮಾಡಬೇಕು. ಜತೆಗೆ ರಾಷ್ಟ್ರೀಯ ಶಿಕ್ಷಣ ಯೋಜನೆಯಾದ NEP ಅನ್ನು ರಾಜ್ಯದಲ್ಲಿ ಜಾರಿ ಮಾಡಿದರೆ ಅಂಗನವಾಡಿ ಕಾರ್ಯಕರ್ತೆಯರಿಗೆ 31 ಸಾವಿರ ವೇತನ ನೀಡಿ ಶಾಲಾ ಶಿಕ್ಷಕರ ಸ್ಥಾನಮಾನ ನೀಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ತಕ್ಷಣ ಮೇಲ್ದರ್ಜೆಗೆ ಏರಿಸಬೇಕು.

ಇದನ್ನೂ ಓದಿ: Paper Leak: ಪ್ರಶ್ನೆ ಪತ್ರಿಕೆ ಸೋರಿಕೆ, ಗುಜರಾತ್ ಕಿರಿಯ ಗುಮಾಸ್ತ ಹುದ್ದೆ ಪರೀಕ್ಷೆ ರದ್ದು!

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಹಣ ನೀಡಿ ಪೆನ್‌ಷನ್ ಜಾರಿ ಮಾಡಬೇಕು. ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆರೋಗ್ಯ ವಿಮೆಯಾದ ಇ.ಎಸ್.ಐ ಜಾರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok sabha Election 2024: ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ನೇರವಾಗಿ ಮತಗಟ್ಟೆಗೆ ಬಂದ ನಾರಾಯಣ ಮೂರ್ತಿ

Lok sabha Election 2024: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ಫೋಸಿಸ್‌ ಸಹ ಸಂಸ್ಥಾಪಕರಾದ ನಾರಾಯಣ ಮೂರ್ತಿ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಮತ ಚಲಾಯಿಸಿದರು. ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ 77 ವರ್ಷದ ನಾರಾಯಣ ಮೂರ್ತಿ ಇಂದು ಆಸ್ಪತ್ರೆಯಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು. ಆ ಮೂಲಕ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ.

VISTARANEWS.COM


on

By

Koo

ಬೆಂಗಳೂರು: ದೇಶಾದ್ಯಂತ ಲೋಕಸಭಾ ಚುನಾವಣೆಯ (Lok sabha Election 2024) ಎರಡನೇ ಹಂತದ (Second phase) ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಜನ ಸಾಮಾನ್ಯರಿಂದು ಹಿಡಿದು ಗಣ್ಯಾತಿಗಣ್ಯರು ಬಹಳ ಉತ್ಸುಕರಾಗಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮೊದಲ ಹಂತದ ಚುನಾವಣೆ ನಡೆಯುತ್ತಿರುವ ಕರ್ನಾಟಕದಲ್ಲೂ ಮತದಾರರು ಬೆಳ್ಳಂ ಬೆಳಗ್ಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವ ಮೂಲಕ ತಮ್ಮ ಕರ್ತವ್ಯ ಮೆರೆದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ಫೋಸಿಸ್‌ ಸಹ ಸಂಸ್ಥಾಪಕರಾದ ನಾರಾಯಣ ಮೂರ್ತಿ (Narayana Murthy) ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ (Sudha Murty) ಮತ ಚಲಾಯಿಸಿದರು. ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ 77 ವರ್ಷದ ನಾರಾಯಣ ಮೂರ್ತಿ ಇಂದು ಆಸ್ಪತ್ರೆಯಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು. ಆ ಮೂಲಕ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿ ಸುಧಾ ಮೂರ್ತಿ, ನಾರಾಯಣ ಮೂರ್ತಿಯವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ನಾವು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಿ ನೇರವಾಗಿ ಮತಗಟ್ಟೆಗೆ ಕರೆದುಕೊಂಡು ಬಂದಿದ್ದೇವೆ. ಮತದಾನದ ಬಳಿಕ ಅವರನ್ನು ನಾವು ಮನೆಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೇ ತಮಗೂ ತುರ್ತಾಗಿ ಬೇರೆ ಕಡೆ ಪ್ರಯಾಣ ಬೆಳೆಸಬೇಕಿತ್ತು. ಆದರೆ ಮತದಾನ ಮಾಡಿದ ಬಳಿಕವಷ್ಟೇ ಹೋಗಬೇಕೆಂದು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.

ಐದು ವರ್ಷಗಳಲ್ಲಿ ಕೇವಲ ಒಂದು ಬಾರಿ ನಮಗೆ ನಮ್ಮ ಹಕ್ಕು ಚಲಾಯಿಸಿ ಸೂಕ್ತ ನಾಯಕನನ್ನು ಆಯ್ಕೆ ಮಾಡುವ ಅವಕಾಶ ಸಿಗುತ್ತದೆ. ಹೀಗಾಗಿ ಎಲ್ಲರೂ ತಮ್ಮ ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸಿ ಎಂದು ಅವರು ಈ ವೇಳೆ ಮನವಿ ಮಾಡಿದರು.

ಇದನ್ನೂ ಓದಿ:Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

ಇನ್ನು ಅನಾರೋಗ್ಯದ ನಡುವೆಯೂ ಮತದಾನ ಮಾಡಿರುವ ನಾರಾಯಣ ಮೂರ್ತಿ ಅವರಿಗೆ ರಾಜ್ಯ ಚುನಾವಣಾ ಆಯೋಗ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತಪಡಿಸಿದೆ. ಎಕ್ಸ್‌ನಲ್ಲಿ ನಾರಾಯಣ ಮೂರ್ತಿಯವರ ವಿಡಿಯೋ ಹಂಚಿಕೊಂಡಿರುವ ಮುಖ್ಯ ಚುನಾವಣಾಧಿಕಾರಿ, ಅನಾರೋಗ್ಯವನ್ನೂ ಲೆಕ್ಕಿಸದೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುವ ಮೂಲಕ ನಾರಾಯಣ ಮೂರ್ತಿಯವರು ದೇಶದ ಬಗೆಗಿನ ತಮ್ಮ ಬದ್ಧತೆ ಎಷ್ಟರ ಮಟ್ಟಿಗೆ ಇದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಅವರು ಎಲ್ಲರಿಗೂ ಸ್ಪೂರ್ತಿ ಎಂದು ಬರೆದುಕೊಂಡಿದ್ದಾರೆ.

Continue Reading

ಕರ್ನಾಟಕ

Lok Sabha Election: ರಾಜ್ಯಾದ್ಯಂತ 1 ಗಂಟೆ ವೇಳೆಗೆ 38.23% ಮತದಾನ; ಎಲ್ಲಿ ಹೆಚ್ಚು? ಎಲ್ಲಿ ಕಡಿಮೆ?

Lok Sabha Election: ಮೊದಲ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಬಿಸಿಲನ್ನೂ ಲೆಕ್ಕಿಸದೆ ಜನ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಮತದಾನಕ್ಕೆ ಸಾಥ್‌ ನೀಡುತ್ತಿರುವುದು ಪ್ರಮುಖ ಸಂಗತಿಯಾಗಿದೆ.

VISTARANEWS.COM


on

Lok Sabha Election 2024: Karnataka records 38.23% voter turnout; highest in Dakshina Kannda
Koo

ಬೆಂಗಳೂರು: ಕರ್ನಾಟಕದಲ್ಲಿ (Karnataka) ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಬಿಸಿಲನ್ನೂ ಲೆಕ್ಕಿಸದೆ ಮತದಾರರು ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸೆಲೆಬ್ರಿಟಿಗಳು, ಸಿನಿಮಾ ತಾರೆಯರು, ರಾಜಕಾರಣಿಗಳು ಕೂಡ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುವ ಜತೆಗೆ, ಸಾಮಾನ್ಯರೂ ಮತದಾನ ಮಾಡಲು ಜಾಗೃತಿ ಮೂಡಿಸುತ್ತಿದ್ದಾರೆ. ಹಾಗಾಗಿ, ಮಧ್ಯಾಹ್ನ 1 ಗಂಟೆ ವೇಳೆಗೆ ಕರ್ನಾಟಕದಾದ್ಯಂತ ಶೇ.38.23ರಷ್ಟು ಮತದಾನ ದಾಖಲಾಗಿದೆ.

ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ಮಧ್ಯಾಹ್ನ 1 ಗಂಟೆ ವೇಳಗೆ ಶೇ.38.23ರಷ್ಟು ಮತದಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.48.10ರಷ್ಟು ಮತದಾನ ದಾಖಲಾಗಿದ್ದು, ಇದೇ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಶೇ.30.10ರಷ್ಟು ಮತದಾನ ನಡೆದಿದ್ದು, ಅತಿ ಕಡಿಮೆ ಮತದಾನ ದಾಖಲಾದ ಜಿಲ್ಲೆ ಎನಿಸಿದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರಿನಲ್ಲೂ ಹೆಚ್ಚಿನ ಜನ ಮತದಾನ ಮಾಡಿದ್ದಾರೆ.

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಮತ ಚಲಾವಣೆ ಮಾಡಿದ ವರ ಚೇತನ್‌

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ವರನೊಬ್ಬ ಮತಗಟ್ಟೆಗೆ ಓಡೋಡಿ ಬಂದು ಮತ ಚಲಾಯಿಸಿದ್ದಾರೆ. ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಮತಕೇಂದ್ರಕ್ಕೆ ಓಡೋಡಿ ಹೋದ ವರ ವೋಟ್‌ ಹಾಕಿ ನಿರಾಳರಾದರು. ವರ ಚೇತನ್ ಎಂಬುವವರು ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆದರು. ಚೇತನ್‌ ಅವರು ದೀಪಿಕಾ ಎಂಬುವರ ಜತೆಗೆ ವಿವಾಹವಾಗುತ್ತಿದ್ದು, ತಮ್ಮ ಮುಹೂರ್ತದ ವಸ್ತ್ರದಲ್ಲೇ ಬಂದು ವೋಟ್‌ ಹಾಕಿದ್ದಾರೆ.

ಮುಹೂರ್ತಕ್ಕೂ ಮುನ್ನ ವಧುವಿನ ಮತದಾನ

ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕೊತ್ತುಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧುವೊಬ್ಬರು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ. ಬಳಿಕ ಹಸೆಮಣೆ ಏರಿದ್ದಾರೆ. ಈ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಕುಂದೂರಿನ ತಳವಾರದ ಸೌಮ್ಯಾ ಅವರು ಮೂಡಿಗೆರೆಯ ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Gold Rate Today: ಮತದಾನದ ದಿನ ಬಂಗಾರದ ದರ ತೇಜಿ, ಬೆಂಗಳೂರಿನಲ್ಲಿ 24K ಚಿನ್ನಕ್ಕೆ ₹440 ಏರಿಕೆ

Continue Reading

Lok Sabha Election 2024

Lok Sabha Election 2024: ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok Sabha Election 2024: ನನಗೆ ಇರುವ ಮಾಹಿತಿ ಪ್ರಕಾರ 14 ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ರೀತಿ ಮತದಾನ ನಡೆಯುತ್ತಿದೆ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಕಪ್ಪು ಚುಕ್ಕೆ ರೀತಿ ಪ್ರಕ್ರಿಯೆಗಳು ನಡೆಯುತ್ತಿವೆ. ನಿನ್ನೆ ಸಹ ಕನಕಪುರದಲ್ಲೂ ಧೈರ್ಯದಿಂದ ಎದರಿಸುವ ವಾತಾವರಣ ನಿರ್ಮಾಣವಾಗಿದೆ. ಆದರೆ, ಕನಕಪುರದ ಸೊರಕಾಯಿ ದೊಡ್ಡಿ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ‌. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕುಣಿಗಲ್ ಸೇರಿದಂತೆ ಹಲವು ಭಾಗದಲ್ಲಿ ಬೆಳಗಿನ ಜಾವ ಐದು ಗಂಟೆಗೆ ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ಕೊಟ್ಟು 4 ರಿಂದ 5 ಸಾವಿರ ರೂಪಾಯಿಯ ಕೂಪನ್ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations
Koo

ಬೆಂಗಳೂರು: ಈ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬೆಂಗಳೂರು ಗ್ರಾಮಾಂತರ ಕ್ಷೇತ್ರದ (Bangalore Rural Constituency) ಕನಕಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಕಣ್ಣು ಮುಚ್ಚಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

ಕೇತಗಾನಹಳ್ಳಿಯಲ್ಲಿ ಕುಟುಂಬ ಸಮೇತ ಬಂದು ಮತಚಲಾಯಿಸಿದ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಇರುವ ಮಾಹಿತಿ ಪ್ರಕಾರ 14 ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ರೀತಿ ಮತದಾನ ನಡೆಯುತ್ತಿದೆ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಕಪ್ಪು ಚುಕ್ಕೆ ರೀತಿ ಪ್ರಕ್ರಿಯೆಗಳು ನಡೆಯುತ್ತಿವೆ. ನಿನ್ನೆ ಸಹ ಕನಕಪುರದಲ್ಲೂ ಧೈರ್ಯದಿಂದ ಎದರಿಸುವ ವಾತಾವರಣ ನಿರ್ಮಾಣವಾಗಿದೆ. ಆದರೆ, ಕನಕಪುರದ ಸೊರಕಾಯಿ ದೊಡ್ಡಿ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ‌. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕುಣಿಗಲ್ ಸೇರಿದಂತೆ ಹಲವು ಭಾಗದಲ್ಲಿ ಬೆಳಗಿನ ಜಾವ ಐದು ಗಂಟೆಗೆ ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ಕೊಟ್ಟು 4 ರಿಂದ 5 ಸಾವಿರ ರೂಪಾಯಿಯ ಕೂಪನ್ ಕೊಟ್ಟಿದ್ದಾರೆ. ಈ ಹಿಂದೆ ಕುಕ್ಕರ್ ಎಲ್ಲ ಕೊಟ್ಟಿದ್ದಾರೆ. ಈಗ ಕಾರ್ಡ್ ಮತ್ತು ಕೂಪನ್ ಕೊಟ್ಟಿದ್ದಾರೆ. ಈಗ ಎಲ್ಲ ಕಡೆ ಇದನ್ನು ಶುರು ಮಾಡಿದ್ದಾರೆ. ಹಾಲಿ ಶಾಸಕರ ಫೋಟೋ ಹಾಕಿ 10 ಸಾವಿರದ ರೂಪಾಯಿಯ ಕೂಪನ್ ಕೊಡುತ್ತಿದ್ದಾರೆ. ಕ್ಯೂ ಆರ್ ಕೋಡ್ ಕೊಡುವ ಚಾಳಿಯನ್ನು ಶುರು ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದರು.

ಚುನಾವಣಾ ಆಯೋಗದ ವಿರುದ್ಧ ಎಚ್‌ಡಿಕೆ ಗರಂ

ಚುನಾವಣಾ ಆಯೋಗವು ಈ ರೀತಿ ಚುನಾವಣೆಯನ್ನು ನಡೆಸುವ ಬದಲು ನೇರವಾಗಿ ಹಣ ಕೊಡುವ ವ್ಯವಸ್ಥೆಯನ್ನು ಜಾರಿಗೆ ತರಬಹುದು. ಆಯಾಯ ಅಭ್ಯರ್ಥಿಗಳು ತಮ್ಮ ಶಕ್ತಿ ಅನುಸಾರ ಹಣ ನೀಡುತ್ತಾರೆ. ದೇಶದಲ್ಲಿ ಈ ರೀತಿಯ ವ್ಯವಸ್ಥೆಯನ್ನು ತಂದರೆ ಒಳ್ಳೆಯದು ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಇದನ್ನು ಚುನಾವಣಾ ಅಂತ ಕರೆಯುತ್ತಾರಾ? ಪ್ರಜಾಪ್ರಭುತ್ವದ ಹಬ್ಬ ಎಂದು ಹೇಳಲಾಗುತ್ತದೆಯೇ? ದುಡ್ಡು ಇರುವವರಿಗೆ, ಲೂಟಿ ಮಾಡುವವರಿಗೆ ಮಾತ್ರ ಇದು ಹಬ್ಬ. ಜನಸಾಮಾನ್ಯರಿಗೆ ಅಲ್ಲ. ಈ ರೀತಿಯಾಗಿ ಮತ ಪಡೆಯೋದು ಅಂದರೆ ಹೇಗೆ? ಮಹಾನಭಾವರು ಬುದ್ಧಿ ಹೇಳಿದ್ದೇ ಹೇಳಿದ್ದು ಎಂದು ಡಿ.ಕೆ. ಸಹೋದರರ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಮತಗಟ್ಟೆ ಮುಂದೆ ಡಿಕೆ ಶಿವಕುಮಾರ್‌ ರಿಯಾಕ್ಷನ್;‌ ಇಲ್ಲಿದೆ ವಿಡಿಯೊ

ಜ್ಯೋತಿಷಿ ಹೇಳಿದಂತೆ ಹಣ ಹಂಚಿಕೆ

ಕನಕಪುರದಲ್ಲಿ ಜ್ಯೋತಿಷಿ ಹೇಳಿದಂತೆ ಹಣ ಹಂಚಿದ್ದಾರೆ. ಯಾರೋ ಶಾಸ್ತ್ರದವರು ಹೇಳಿದ್ದಾರೆ ಎಂದು 505 ರೂಪಾಯಿ, ಮಲೆ ಮಹದೇಶ್ವರ ದೇವರ ಲಾಡು ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ರಾತ್ರಿಯಲ್ಲ ಹಂಚಿದ್ದಾರೆ. ಈ ಬಗ್ಗೆ ನಮ್ಮ ಡಿಸಿ ಮತ್ತು ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮುಕ್ತವಾದ ಚುನಾವಣೆ ನಡೆಯುತ್ತಿಲ್ಲ. ಇವತ್ತು ಸೋಲಿನ ಭೀತಿಯಿಂದ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ. ಚುನಾವಣಾ ಅಕ್ರಮಗಳ ಮೂಲಕ ಗೆಲ್ಲುತ್ತೇವೆ ಎಂದು ಹೋಗುತ್ತಿದ್ದಾರೆ. ಅಕ್ರಮ ಮಾಡಿದರೂ ಜನತೆ ಬಲಿಯಾಗಿದೆ ನ್ಯಾಯಯುತವಾಗಿ ಮತದಾನ ಮಾಡಿ ಎಂದು ಮನವಿ ಮಾಡುತ್ತೇನೆ. ಚುನಾವಣಾ ಆಯೋಗ ಬಾಗಿಲು ಹಾಕಿಕೊಳ್ಳೋದು ಒಳ್ಳೆಯದು. ಚುನಾವಣಾ ಆಯೋಗ ತನ್ನ ವ್ಯವಸ್ಥೆಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.

Continue Reading

Lok Sabha Election 2024

Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

Lok Sabha Election 2024: ಕರುನಾಡಿನೆಲ್ಲೆಡೆ ಸಂಭ್ರಮದ ಚುನಾವಣೆ ನಡೆಯುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ವಧು-ವರರಿಂದಲೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಕ್ಕು ಚಲಾವಣೆ ಮಾಡಿದ್ದಾರೆ. ಚಾಮರಾಜನಗರದಲ್ಲಿ ವರನೊಬ್ಬ ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಬಂದರೆ, ಇತ್ತ ಚಿಕ್ಕಮಗಳೂರಲ್ಲಿ ವಧು ಹಸೆಮಣೆ ಏರುವ ಮುನ್ನ ಮತದಾನ ಮಾಡಿದ್ದಾರೆ.

VISTARANEWS.COM


on

By

Lok sabha election 2024
Koo

ಚಾಮರಾಜನಗರ/ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok sabha Election 2024) ಹಿನ್ನೆಲೆಯಲ್ಲಿ ಮತದಾನದ ಹಬ್ಬ ಬಿರುಸಿನ ನಡೆಯುತ್ತಿದೆ. ವಿಶೇಷ ಚೇನತರು, ವೃದ್ಧರೆನ್ನದೆ ಎಲ್ಲರೂ ಸಂಭ್ರಮದಿಂದ ಮತಗಳನ್ನು ಚಲಾವಣೆ ಮಾಡುತ್ತಿದ್ದಾರೆ. ಎಲ್ಲರ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ, ನೂತನ ವರ- ವಧುಗಳೂ ಸಹ ವಿವಾಹಕ್ಕೂ ಮುಂಚೆ ಮತಗಟ್ಟೆಗೆ ಬಂದು ಮತವನ್ನು ಚಲಾಯಿಸುವ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಈ ಮೂಲಕ ಎಲ್ಲರೂ ಮತದಾನ ಮಾಡುವಂತೆ ಕರೆ ಕೊಟ್ಟಿದ್ದಾರೆ.

ಮತ ಚಲಾವಣೆ ಮಾಡಿದ ವರ ಚೇತನ್‌

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ವರನೊಬ್ಬ ಮತಗಟ್ಟೆಗೆ ಓಡೋಡಿ ಬಂದು ಮತ ಚಲಾಯಿಸಿದ್ದಾರೆ. ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಮತಕೇಂದ್ರಕ್ಕೆ ಓಡೋಡಿ ಹೋದ ವರ ವೋಟ್‌ ಹಾಕಿ ನಿರಾಳರಾದರು. ವರ ಚೇತನ್ ಎಂಬುವವರು ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆದರು. ಚೇತನ್‌ ಅವರು ದೀಪಿಕಾ ಎಂಬುವರ ಜತೆಗೆ ವಿವಾಹವಾಗುತ್ತಿದ್ದು, ತಮ್ಮ ಮುಹೂರ್ತದ ವಸ್ತ್ರದಲ್ಲೇ ಬಂದು ವೋಟ್‌ ಹಾಕಿದ್ದಾರೆ.

ಮುಹೂರ್ತಕ್ಕೂ ಮುನ್ನ ವಧುವಿನ ಮತದಾನ

ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕೊತ್ತುಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧುವೊಬ್ಬರು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ. ಬಳಿಕ ಹಸೆಮಣೆ ಏರಿದ್ದಾರೆ.

ಈ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಕುಂದೂರಿನ ತಳವಾರದ ಸೌಮ್ಯ ಅವರು ಮೂಡಿಗೆರೆಯ ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Lok Sabha Election 2024: ಆಪರೇಷನ್‌ಗೂ ಮುನ್ನ ಆಂಬ್ಯುಲೆನ್ಸ್‌ನಲ್ಲಿ ಬಂದು ವೋಟ್‌ ಮಾಡಿದ ಉತ್ಸಾಹಿ ಮತದಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಉತ್ಸಾಹಿ ಮತದಾರರೊಬ್ಬರು ಶಸ್ತ್ರಚಿಕಿತ್ಸೆಗೂ ಮುನ್ನ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಮುರಳಿಧರ್‌ ಎಂಬುವವರು ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆಗಿದೆ. 39 ವರ್ಷದ ಎಚ್‌.ಎನ್ ಮುರಳಿಧರ್ ಶುಕ್ರವಾರ ಮಧ್ಯಾಹ್ನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅನಾರೋಗ್ಯದ ನಡುವೆಯೂ ನೋವಿನಲ್ಲೂ ಮತಕೇಂದ್ರಕ್ಕೆ ಬಂದು ಮತವನ್ನು ಚಲಾಯಿಸಿದ್ದಾರೆ.

ಮನಿಪಾಲ್ ಆಸ್ಪತ್ರೆ ವೈಟ್‌ಫೀಲ್ಡ್‌ನ ಯೂರೋಲಾಜಿ, ರೋಬೋಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮುರಳಿಧರ್‌ಗೆ ಮೂತ್ರದ್ವಾರದಲ್ಲಿ 6 MM ಕಲ್ಲಿದೆ. ಹೀಗಾಗಿ ಮಧ್ಯಾಹ್ನ ಡಿಜೆ ಸ್ಟೆಂಟಿಂಗ್ ಸರ್ಜರಿ ಮಾಡಬೇಕಿದೆ. ಸರ್ಜರಿಗೂ ಮುನ್ನ ಖುದ್ದು ಆಂಬ್ಯುಲೆನ್ಸ್‌ ಮೂಲಕ ಬಂದ ಮುರಳಿಧರ್‌ ಅವರು ಮತದಾನ ಮಾಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದರೂ, ಡೋಂಟ್‌ ಕೇರ್‌ ಮಾಡದ ಮುರಳಿಧರ್‌ ಶಸ್ತ್ರಚಿಕಿತ್ಸೆಗೂ ಮುನ್ನ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಮಾದರಿ ಆಗಿದ್ದಾರೆ.

ಇದನ್ನೂ ಓದಿ: Lok Sabha Election 2024: ಮತದಾರರು ಜಸ್ಟ್‌ ಮಿಸ್‌; ಮತಗಟ್ಟೆ ಸಮೀಪವೇ ನೆಲಕ್ಕುರುಳಿದ ಬೃಹತ್ ಮರ, ಕಾರು ಜಖಂ

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Lok Sabha Election 2024 sandalwood celebrities reaction
Lok Sabha Election 20246 mins ago

Lok Sabha Election 2024: ಬುದ್ಧಿ ಇರೋರು ವೋಟ್‌ ಹಾಕ್ತಿದ್ದಾರೆ ಎಂದ ಕಿಚ್ಚ! ಉಳಿದ ತಾರೆಗಳು ಹೇಳಿದ್ದೇನು?

ಕರ್ನಾಟಕ14 mins ago

Lok sabha Election 2024: ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ನೇರವಾಗಿ ಮತಗಟ್ಟೆಗೆ ಬಂದ ನಾರಾಯಣ ಮೂರ್ತಿ

Lok Sabha Election 2024: Karnataka records 38.23% voter turnout; highest in Dakshina Kannda
ಕರ್ನಾಟಕ29 mins ago

Lok Sabha Election: ರಾಜ್ಯಾದ್ಯಂತ 1 ಗಂಟೆ ವೇಳೆಗೆ 38.23% ಮತದಾನ; ಎಲ್ಲಿ ಹೆಚ್ಚು? ಎಲ್ಲಿ ಕಡಿಮೆ?

Lok Sabha Election 2024 Kannada Celeb vote Pictures
ಸ್ಯಾಂಡಲ್ ವುಡ್52 mins ago

Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations
Lok Sabha Election 202456 mins ago

Lok Sabha Election 2024: ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok sabha election 2024
Lok Sabha Election 20241 hour ago

Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

Narendra Modi
ಕರ್ನಾಟಕ1 hour ago

Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

Chocolate industry
ಪರಿಸರ1 hour ago

Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

ವೈರಲ್ ನ್ಯೂಸ್1 hour ago

Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

Lok Sabha Election 2024 Woman casts her vote with the help of oxygen elderly woman dies after casting her vote
Lok Sabha Election 20242 hours ago

Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20243 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20243 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ9 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ22 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ22 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌