Vishnuvardhan: ವಿಷ್ಣುವರ್ಧನ್ ಸ್ಮಾರಕವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ: ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಆಗ್ರಹಿಸಿದ ಅಭಿಮಾನಿಗಳು - Vistara News

ಪ್ರಮುಖ ಸುದ್ದಿ

Vishnuvardhan: ವಿಷ್ಣುವರ್ಧನ್ ಸ್ಮಾರಕವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ: ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಆಗ್ರಹಿಸಿದ ಅಭಿಮಾನಿಗಳು

ಸಾಹಸ ಸಿಂಹ ವಿಷ್ಣುವರ್ಧನ್ (Vishnuvardhan ) ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದ್ದಾರೆ. ನಂತರ ಫೋಟೊ ಗ್ಯಾಲರಿ ವೀಕ್ಷಣೆ ಮಾಡಿ ವಿಷ್ಣುವರ್ಧನ್ ಅವರ 7 ಅಡಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದ್ದಾರೆ .

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಮೈಸೂರಿನ ಎಚ್‌.ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಿರುವ ಸಾಹಸ ಸಿಂಹ ವಿಷ್ಣುವರ್ಧನ್ ( Vishnuvardhan ) ಅವರ ಸ್ಮಾರಕವನ್ನು ಭಾನುವಾರ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನಂತರ ಫೋಟೊ ಗ್ಯಾಲರಿ ವೀಕ್ಷಣೆ ಮಾಡಿ ವಿಷ್ಣುವರ್ಧನ್ ಅವರ 7 ಅಡಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು . ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್, ಪುತ್ರಿ ಕೀರ್ತಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

ವಿಷ್ಣು ಸ್ಮಾರಕ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಾತನಾಡಿ ʻʻವಿಷ್ಣುವರ್ಧನ್ ಒಬ್ಬ ಮೇರು ನಟ. ಹಲವಾರು ಭಾಷೆಗಳಲ್ಲಿ ನಟಿಸಿರುವ ನಟ. 200ಕ್ತಿಂತಲೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಗಲಿಕೆ ನಂತರ ಸ್ಮಾರಕಕ್ಕೆ ಸ್ವಲ್ಪ ಗೊಂದಲಗಳು ಉಂಟಾಗಿತ್ತು. ಕೊನೆಗೆ ಮೈಸೂರಿನಲ್ಲಿ ಮಾಡಿದ್ದೇವೆ. ಈಗ 10 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣವಾಗಿದೆ. ಅವರ ಕುಟುಂಬ ಬಯಸಿದಂತೆ ಆಗಿದೆ. ಕಲೆ ಸಂಸ್ಕೃತಿ ಚಿತ್ರರಂಗ ಅದರ ಬಗ್ಗೆ ಆಸಕ್ತಿ ಇರುವವರು ಬಂದು ಅದನ್ನ ನೋಡಿ ಬಂದು ಕಲಿಯಲಿ ಎಂದು ಆಶಿಸುತ್ತೇನೆʼʼ ಎಂದು ಹೇಳಿಕೆ ನೀಡಿದರು.

ಇದನ್ನೂ ಓದಿ: Vishnuvardhan: ಸ್ಮಾರಕ ಜಾಗದಲ್ಲಿಆಲ್ ಇಂಡಿಯಾ ಫಿಲ್ಮ್ ಇನ್ಸ್‌ಟಿಟ್ಯೂಟ್ ಶಾಖೆ ತೆರೆಯುವುದರ ಬಗ್ಗೆ ಪ್ರಸ್ತಾಪಿಸಿದ ಅನಿರುದ್ಧ

ಮಾತು ಮುಂದುವರಿಸಿ ʻʻನಾನು ವಿಷ್ಣುವರ್ಧನ್ ಅಭಿಮಾನಿಯಾಗಿ ಬಂದಿದ್ದೇನೆ.‌ ನಾಗರಹಾವು ಸಿನಿಮಾ ನೋಡಿದವರು ವಿಷ್ಣುವರ್ಧನ್ ಅಭಿಮಾನಿ ಆಗುತ್ತಾರೆ. ಯುವಕರು, ಸಾಹಸ, ಪೌರಾಣಿಕ ಪಾತ್ರ ಮಾಡಿದ್ದಾರೆ.
ನಾಲ್ಕು ದಶಕಗಳ ಕಾಲ ಸಾಹಸ ಸಿಂಹ ಆಗಿ ಮೆರೆದಿದ್ದಾರೆ. ಯಾವುದೇ ಪಾತ್ರ ನೀಡಿದರೂ ನೈಜವಾಗಿ ನಟಿಸಿದ್ದಾರೆ.
ವಿಷ್ಣು ಒಬ್ಬ ಭಾವುಕ ಜೀವಿ. ಮಾನವೀಯತೆ ಮೆರೆದವರು. ಕೊನೆಯ ಕಾಲದಲ್ಲಿ ಆಧ್ಯಾತ್ಮಿಕವಾಗಿ ಆಸಕ್ತಿ ಬೆಳೆಸಿಕೊಂಡರು. ಸ್ಮಾರಕ ನಿರ್ಮಿಸುವ ಸಂದರ್ಭದಲ್ಲಿ ದೊಡ್ಡ ವಿವಾದ ಆಯ್ತು. ಭಾರತಿಯವರು ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನ ಕೈಗೊಂಡರು. ಯಡಿಯೂರಪ್ಪ ಸಿಎಂ ಆಗಿದ್ದಾಗ 11 ಕೋಟಿ ರೂ. ನೀಡಿದರು.‌
ಇದಕ್ಕಾಗಿ ಯಡಿಯೂರಪ್ಪ, ಬಿಜೆಪಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ: Vishnuvardhan: ಸ್ಮಾರಕ ಸರ್ಕಾರದ ಯೋಜನೆ, ಲಾಭ, ನಷ್ಟ ಎರಡೂ ಸರ್ಕಾರಕ್ಕೆ ಸೇರಿದ್ದು: ನಟ ಅನಿರುದ್ಧ

ವಿಷ್ಣುವರ್ಧನ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಆಗ್ರಹ
ವಿಷ್ಣು ಸ್ಮಾರಕ ಉದ್ಘಾಟನೆ ವೇಳೆ ಭಿತ್ತಿಪತ್ರ ಪ್ರದರ್ಶನ ವೇಳೆ ಬೋರ್ಡ್ ಹಿಡಿದು ವಿಷ್ಣು ಅಭಿಮಾನಿಗಳು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಆಗ್ರಹಿಸಿದ್ದಾರೆ . ಅನಿರುದ್ಧ್ ಅವರ ಭಾಷಣಕ್ಕೂ ಅಭಿಮಾನಿಗಳು ಅವಕಾಶ ನೀಡದ ಪರಿಸ್ಥಿತಿ ಉಂಟಾಗಿದೆ. ನಿಮ್ಮ ಭಿತ್ತಿಪತ್ರ ಮುಖ್ಯಮಂತ್ರಿಗಳ ಗಮನಕ್ಕೆ ಬಂದಿದೆ ಎಂದು ಅನಿರುದ್ಧ್‌ ಎಷ್ಟೇ ಕೇಳಿಕೊಂಡರು ಅಭಿಮಾನಿಗಳು ಭಿತ್ತಿಪತ್ರ ಕೆಳಗಿಳಿಸದೆ ಕಿರುಚಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ ನಾನಾ ಕಾರಣಗಳಿಂದ ನನೆಗುದಿಯಲ್ಲಿತ್ತು. ಕೊನೆಗೂ ಮೈಸೂರಿನಲ್ಲಿ ಅನಾವರಣಗೊಂಡಿದೆ.ಇದೀಗ ದಾದಾ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಬೈರ್​ಸ್ಟೋವ್​ ಸ್ಫೋಟಕ ಶತಕ; ಕೆಕೆಆರ್​ ವಿರುದ್ಧ ಪಂಜಾಬ್​​ಗೆ ವಿಶ್ವ ದಾಖಲೆಯ ವಿಜಯ

IPL 2024 : ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಕೋಲ್ಕೊತಾ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 261 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 18.4 ಓವರ್​ಗಳಲ್ಲಿ ಕೇವಲ 2 ವಿಕೆಟ್ ನಷ್ಟ ಮಾಡಿಕೊಂಡು 262 ರನ್ ಬಾರಿಸಿ ಗೆಲುವು ಸಾಧಿಸಿತು.

VISTARANEWS.COM


on

IPL 2024
Koo

ಕೋಲ್ಕೊತಾ: ಇಲ್ಲಿನ ಐತಿಹಾಸಿಕ ಈಡನ್​ ಗಾರ್ಡನ್ಸ್​ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಮತ್ತೊಂದು ಐಪಿಎಲ್ (IPL 2024)​ ದಾಖಲೆ ಸೃಷ್ಟಿಯಾಗಿದೆ. ಐಪಿಎಲ್​ ಇತಿಹಾಸದಲ್ಲಿ ಗರಿಷ್ಠ ರನ್​ಗಳನ್ನು ಚೇಸ್ ಮಾಡಿದ ಖ್ಯಾತಿಯನ್ನು ಪಂಜಾಬ್ ಕಿಂಗ್ಸ್​​ ತಂಡ ತನ್ನದಾಗಿಸಿಕೊಂಡಿದೆ. ಆತಿಥೇಯ ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ನೀಡಿದ್ದ 262 ರನ್​​ಗಳನ್ನು ಗುರಿಯನ್ನು ಇನ್ನೂ 8 ಎಸೆತಗಳು ಬಾಕಿ ಇರುವಂತೆಯೇ ಮೀರಿದ ಪಂಜಾಬ್ ತಂಡ 8 ವಿಕೆಟ್​ಗಳ ವಿಶ್ವ ದಾಖಲೆಯ ವಿಜಯವನ್ನು ತನ್ನದಾಗಿಸಿಕೊಂಡಿದೆ. ಆರಂಭಿಕ ಬ್ಯಾಟರ್​ ಜಾನ್​ ಬೈರ್​ಸ್ಟೋವ್ 49 ಎಸೆತಗಳಲ್ಲಿ ಅಜೇಯ 108 ರನ್​ (ಶತಕ) ಬಾರಿಸಿದರೆ ಶಶಾಂಕ್ ಸಿಂಗ್ ಮತ್ತೊಂದು ಬಾರಿ ಅಬ್ಬರದ ಪ್ರದರ್ಶನ ನೀಡಿ 28 ಎಸೆತಕ್ಕೆ 68 ರನ್ ಬಾರಿಸಿ ​ (ಅರ್ಧ ಶತಕ) ತಂಡಕ್ಕೆ ಗೆಲುವು ತಂದುಕೊಟ್ಟರು. ಪಂದ್ಯಾವಳಿಯ ಅತ್ಯಂತ ಬಲಿಷ್ಠ ತಂಡ ಎನಿಸಿಕೊಂಡಿದ್ದ ಕೋಲ್ಕೊತಾ ಇದೀಗ ದುರ್ಬಲ ಎಂದು ಕರೆಸಿಕೊಂಡಿದ್ದ ಪಂಜಾಬ್ ವಿರುದ್ಧ ಹೀನಾಯ ಸೋಲಿಗೆ ಒಳಗಾಗಿದೆ.

ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಕೋಲ್ಕೊತಾ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 261 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 18.4 ಓವರ್​ಗಳಲ್ಲಿ ಕೇವಲ 2 ವಿಕೆಟ್ ನಷ್ಟ ಮಾಡಿಕೊಂಡು 262 ರನ್ ಬಾರಿಸಿ ಗೆಲುವು ಸಾಧಿಸಿತು. ಇದು ಪಂಜಾಬ್ ತಂಡಕ್ಕೆ ಹಾಲಿ ಆವೃತ್ತಿಯ 9 ಪಂದ್ಯಗಳಲ್ಲಿ ದೊರಕಿದ ಮೂರನೇ ಗೆಲುವಾಗಿದೆ. ಇದೇ ವೇಳೆ ಕೆಕೆಆರ್​ ತಂಡಕ್ಕೆ 8 ರಲ್ಲಿ ಮೂರು ಸೋಲು ಎದುರಾಯಿತು.

2020ರ ಆವೃತ್ತಿಯ ಐಪಿಎಲ್​ನಲ್ಲಿ ಪಂಜಾಬ್ ತಂಡ ನೀಡಿದ್ದ 224 ರನ್​ಗಳ ಗುರಿಯನ್ನು ರಾಜಸ್ಥಾನ್ ರಾಯಲ್ಸ್​ ತಂಡ ಮೀರಿದ್ದು ಇದುವರೆಗಿನ ಗರಿಷ್ಠ ರನ್​ಗಳ ಚೇಸಿಂಗ್​ ದಾಖಲೆಯಾಗಿತ್ತು. ತನ್ನ ವಿರುದ್ಧ ಮಾಡಿದ್ದ ದಾಖಲೆಯನ್ನು ಪಂಜಾಬ್ ಬೇರೊಂದು ತಂಡವನ್ನು ಸೋಲಿಸುವ ಮೂಲಕ ತನ್ನ ಹೆಸರು ಬರೆದುಕೊಂಡಿತು. ಆ ಪಂದ್ಯವು ಯುಎಇನ ಶಾರ್ಜಾದಲ್ಲಿ ನಡೆದಿತ್ತು.

ಅನಿರೀಕ್ಷಿತ ಫಲಿತಾಂಶ

ಬ್ಯಾಟಿಂಗ್​ನಲ್ಲಿ ಅಷ್ಟೇನೂ ಬಲಿಷ್ಠ ಎನಿಸಕೊಳ್ಳದ ಪಂಜಾಬ್ ಈ ಪಂದ್ಯವನ್ನು ಗೆಲ್ಲುವುದು ಅಸಾಧ್ಯ ಎಂದು ಅಂದುಕೊಳ್ಳಲಾಗಿತ್ತು. ಆದರೆ, ಆರಂಭದಲ್ಲಿಯೇ ಪಂಜಾಬ್ ತಂಡದ ಆಟಗಾರರು ಅಬ್ಬರಿಸಿದರು. ಪ್ರಭ್ ಸಿಮ್ರಾನ್ ಸಿಂಗ್​ 20 ಎಸೆತಗಳಲ್ಲಿ 54 ರನ್ ಬಾರಿಸಿ ದೊಡ್ಡ ಮೊತ್ತಕ್ಕೆ ಅಡಿಪಾಯ ಹಾಕಿಕೊಟ್ಟರೆ ಬೈರ್​ಸ್ಟೋವ್ ಅದನ್ನು ಮುಂದುವರಿಸಿದರು. ಪ್ರಭ್​ ಸಿಮ್ರಾನ್ ಸಿಂಗ್​ ಅನಗತ್ಯ ರನ್​ಔಟ್​ಗೆ ಬಲಿಯಾದ ಬಳಿಕ ಬಂದ ರೀಲೀ ರೊಸ್ಸೊ 26 ರನ್ ಬಾರಿಸಿ ನಿರ್ಗಮಿಸಿದರು.

ಎರಡು ವಿಕೆಟ್​ಗಳು ಪತನಗೊಂಡ ಬಳಿಕ ರನ್​ ಗಳಿಕೆ ಕುಗ್ಗಬಹುದು ಎಂಬ ಅಂದಾಜು ಕೂಡ ಸರಿಯಾಗಲಿಲ್ಲ .ಪಂಜಾಬ್​ ಪರ ಆಪತ್ಬಾಂಧವ ಎನಿಸಿಕೊಂಡಿರುವ ಶಶಾಂಕ್ ಸಿಂಗ್ ಮತ್ತೊಂದು ಸೂಪರ್ ಇನಿಂಗ್ಸ್ ಆಡಿದರು. 23 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದಾಗ ಪಂಜಾಬ್​ ಗೆಲುವಿನ ಸನಿಹಕ್ಕೆ ಬಂತು. ಶಶಾಂಕ್ 8 ಸಿಕ್ಸರ್​ಗಳನ್ನು ಬಾರಿಸಿ ಪ್ರೇಕ್ಷಕರನ್ನು ರಂಜಿಸಿದರು. ಅದಕ್ಕಿಂತ ಮೊದಲು 45 ಎಸೆತಗಳಲ್ಲಿ ಶತಕ ಬಾರಿಸಿ ಬೈರ್​ಸ್ಟೋವ್ ಗೆಲುವಿನ ರೂವಾರಿ ಎನಿಸಿಕೊಂಡರು. ಅವರ ಇನಿಂಗ್ಸ್​ನಲ್ಲಿ 9 ಸಿಕ್ಸರ್ ಹಾಗೂ 8 ಫೋರ್​ಗಳಿದ್ದವು. ಇಬ್ಬರೂ ಅಜೇಯರಾಗಿ ಉಳಿದರು.

ಇದನ್ನೂ ಓದಿ: Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

ಕೋಲ್ಕೊತಾದ ಅಬ್ಬರ

ಮೊದಲು ಬ್ಯಾಟ್​ ಮಾಡಿದ ಕೋಲ್ಕತಾ ತಂಡವೂ ಎಕ್ಸ್​ಪ್ರೆಸ್​ ವೇಗದಲ್ಲಿ ರನ್ ಗಳಿಸಿತು. ಫಿಲ್ ಸಾಲ್ಟ್​ 37 ಎಸೆತಕ್ಕೆ 75 ರನ್ ಗಳಿಸಿದರೆ ಸುನಿಲ್ ನರೈನ್​ 32 ಎಸೆತಕ್ಕೆ 71 ರನ್ ಬಾರಿಸಿದರು. ಈ ಜೋಡಿ ಮೊದಲ ವಿಕೆಟ್​​ಗೆ 138 ರನ್ ಬಾರಿಸಿತು. ವೆಂಕಟೇಶ್ ಅಯ್ಯರ್​ 39, ಆ್ಯಂಡ್ರೆ ರಸೆಲ್​ 24 ಹಾಗೂ ಶ್ರೇಯಸ್​ ಅಯ್ಯರ್​ 28 ರನ್ ಹೊಡೆದರು. ದೊಡ್ಡ ಮೊತ್ತವು ಕೋಲ್ಕೊತಾ ತಂಡಕ್ಕೆ ಬಹುತೇಕ ಜಯನ್ನು ನೀಡಿತ್ತು. ಆದರೆ, ಅದು ಸುಳ್ಳಾಯಿತು.

Continue Reading

Lok Sabha Election 2024

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Lok Sabha Election: ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

VISTARANEWS.COM


on

lok sabha election
Koo

ಬೆಂಗಳೂರು : ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ. ಎಂದು ಚುನಾವಣಾ ಆಯೋಗ ಹೇಳಿದೆ. 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ಬಿಸಿ ಹವಾಮಾನ ಪರಿಸ್ಥಿತಿಗಳನ್ನು ಲೆಕ್ಕಿಸದೆ ತಮ್ಮ ಮತಗಟ್ಟೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸಿದರು. ನವವಿವಾಹಿತರಿಂದ ಹಿಡಿದು ಹಿರಿಯ ನಾಗರಿಕರವರೆಗೆ, ಬುಡಕಟ್ಟು ಜನಾಂಗದವರಿಂದ ಐಟಿ ವೃತ್ತಿಪರರು, ಅಂಗವಿಕಲರು, ಮಹಿಳೆಯರು ಮತ್ತು ಯುವಕರು ಎಲ್ಲರೂ ತಮ್ಮ ಮತ ಚಲಾಯಿಸಿದರು. 2024ರ ಲೋಕಸಭಾ ಚುನಾವಣೆಗೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪೂರ್ಣಗೊಂಡಿದೆ.

ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

ಬಿಹಾರದಲ್ಲಿ ಮತದಾನದ ಶೇಕಡಾವಾರು ಮೊದಲ ಹಂತಕ್ಕಿಂತ ಹೆಚ್ಚಾಗಿದ್ದರೆ, ಇದು ಉತ್ತರ ಪ್ರದೇಶಕ್ಕಿಂತ 53.03% ಹೆಚ್ಚಾಗಿದೆ. ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ 52.74% ಮತದಾನ ದಾಖಲಾಗಿದೆ. ಎರಡನೇ ಹಂತದಲ್ಲಿ ಮತದಾನ ನಡೆದ ರಾಜಸ್ಥಾನದ 13 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಸರಾಸರಿ ಶೇಕಡಾ 59.19 ರಷ್ಟು ಮತದಾನವಾಗಿತ್ತು. ಕೆಲವು ಘಟನೆಗಳ ಹೊರತಾಗಿಯೂ, ಮತದಾನವು ಶಾಂತಿಯುತವಾಗಿ ನಡೆಯಿತು.

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

ಮಧ್ಯಪ್ರದೇಶದ ಆರು ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಕನಿಷ್ಠ 54.83% ಮತದಾನವಾಗಿದೆ. ಕರ್ನಾಟಕದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಎರಡನೇ ಹಂತದಲ್ಲಿ ಮತದಾನ ನಡೆದಿದೆ. ಕರ್ನಾಟಕ 69. 23 ಶೇಕಡಾ ಮತದಾನವಾಗಿದೆ.

ಬಹುತೇಕ ಶಾಂತಿಯುತ ಮತದಾನ

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯಿತು. ಸಿಇಸಿ ಶ್ರೀ ರಾಜೀವ್ ಕುಮಾರ್ ನೇತೃತ್ವದ ಆಯೋಗವು ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಮತ್ತು ಶ್ರೀ ಸುಖ್ಬೀರ್ ಸಿಂಗ್ ಸಂಧು ಅವರೊಂದಿಗೆ ಬೆಳಿಗ್ಗೆಯಿಂದ ಮತದಾನ ಪ್ರಕ್ರಿಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಯಿತು. ಮತದಾರರು ಭಯ ಅಥವಾ ಬೆದರಿಕೆಯಿಲ್ಲದೆ ಮತ ಚಲಾಯಿಸಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸಲಾಯಿತು. 1 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದೆ.

ಬಿಹಾರದ ಬಂಕಾ, ಮಾಧೇಪುರ, ಖಗರಿಯಾ ಮತ್ತು ಮುಂಗೇರ್ ಕ್ಷೇತ್ರಗಳ ಅನೇಕ ಮತಗಟ್ಟೆಗಳಲ್ಲಿ ಮತದಾನದ ಸಮಯವನ್ನು ಸಂಜೆ 6 ಗಂಟೆಯ ಬಳಿಕವೂ ವಿಸ್ತರಿಸಲಾಗಿತ್ತು. ಎರಡನೇ ಹಂತದಲ್ಲಿ, ಛತ್ತೀಸ್​​ಗಢದ ಬಸ್ತಾರ್ ಮತ್ತು ಕಂಕೇರ್ ಪಿಸಿಗಳ 46 ಗ್ರಾಮಗಳ ಮತದಾರರು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಸ್ವಂತ ಗ್ರಾಮದಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಗ್ರಾಮಸ್ಥರ ಅನುಕೂಲಕ್ಕಾಗಿ ಈ ಪಿಸಿಗಳಲ್ಲಿ ಮೊದಲ ಬಾರಿಗೆ 102 ಹೊಸ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಯಿತು

ಕ್ರಿಕೆಟ್ ತಾರೆಗಳಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಮತ್ತು ಜಾವಗಲ್ ಶ್ರೀನಾಥ್ ಅವರು ಬೆಂಗಳೂರಿನ ವಿವಿಧ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು. ಶಾಯಿ ಹಾಕಿದ ಬೆರಳುಗಳಿಂದ ಪೋಸ್ ನೀಡಿದ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮಹತ್ವದ ಸಂದೇಶವನ್ನು ಯುವಕರಿಗೆ ತಲುಪಿಸಿದರು.

Continue Reading

ಕರ್ನಾಟಕ

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Lok Sabha Election 2024: ರಾಜ್ಯದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತಗಳಲ್ಲೂ ಒಟ್ಟು ಶೇ. 68.96 ಮತದಾನ ನಡೆದಿತ್ತು. ಈ ಬಾರಿ ಮೊದಲ ಹಂತದಲ್ಲಿ ಶೇ.69.23 ವೋಟಿಂಗ್‌ ನಡೆದಿದೆ, ಇನ್ನು ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಬಹುತೇಕ ಶಾಂತಿಯುತವಾಗಿ ಶುಕ್ರವಾರ ಮತದಾನವಾಗಿದೆ.

VISTARANEWS.COM


on

Koo

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ (Lok Sabha Election 2024) ಮೊದಲ ಹಂತದ ಮತದಾನ ಶುಕ್ರವಾರ ಮುಕ್ತಾಯವಾಗಿದೆ. ಒಂದೆರಡು ಕಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ಹೊರತುಪಡಿಸಿದರೆ ಎಲ್ಲೆಡೆ ಬಹುತೇಕ ಶಾಂತಿಯುತವಾಗಿ ಮತದಾನ ಜರುಗಿದ್ದು, 14 ಕ್ಷೇತ್ರಗಳಲ್ಲಿ ಸಂಜೆ 6 ಗಂಟೆವರೆಗೆ ಒಟ್ಟು ಶೇ.69.23 ಮತದಾನ ದಾಖಲಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.81.48 ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 52.81 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇನ್ನು ಮೊದಲ ಹಂತದಲ್ಲಿ ಒಟ್ಟು 2,88,08,182 ಮತದಾರರು ಮತ ಚಲಾಯಿಸಿದ್ದು, 14 ಕ್ಷೇತ್ರಗಳಲ್ಲಿ 118 ಪಕ್ಷೇತರ ಅಭ್ಯರ್ಥಿಗಳು ಸೇರಿ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇದರಲ್ಲಿ 226 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಜೂನ್‌ 4ರಂದು ಫಲಿತಾಂಶ ಹೊರಬೀಳಲಿದೆ.

14 ಕ್ಷೇತ್ರಗಳ ಶೇಕಡಾವಾರು ಮತದಾನ ಪಟ್ಟಿ

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಕ್ಷೇತ್ರಲೋಕಸಭಾ ಚುನಾವಣೆ-2024ಲೋಕಸಭಾ ಚುನಾವಣೆ-2019
ಉಡುಪಿ-ಚಿಕ್ಕಮಗಳೂರುಶೇ. 76.06ಶೇ. 76.07
ಹಾಸನಶೇ. 77.51ಶೇ. 77.35
ದಕ್ಷಿಣ ಕನ್ನಡ
ಶೇ. 77.43ಶೇ. 77.99
ಚಿತ್ರದುರ್ಗ
ಶೇ. 73.11ಶೇ. 70.80
ತುಮಕೂರು
ಶೇ. 77.70ಶೇ. 77.43
ಮಂಡ್ಯಶೇ. 81.48ಶೇ. 80.59
ಮೈಸೂರುಕೊಡಗು
ಶೇ. 70.45ಶೇ. 69.51
ಚಾಮರಾಜನಗರ
ಶೇ. 76.59ಶೇ. 75.35
ಬೆಂಗಳೂರು ಗ್ರಾಮಾಂತರ
ಶೇ.67.29ಶೇ. 64.98
ಬೆಂಗಳೂರು ಉತ್ತರ
ಶೇ.54.42ಶೇ. 54.76
ಬೆಂಗಳೂರು ಸೆಂಟ್ರಲ್‌
ಶೇ. 52.81ಶೇ. 54.32
ಬೆಂಗಳೂರು ದಕ್ಷಿಣ
ಶೇ. 53.15ಶೇ. 53.70
ಚಿಕ್ಕಬಳ್ಳಾಪುರ
ಶೇ. 76.82ಶೇ. 76.74
ಕೋಲಾರಶೇ. 78.07
ಶೇ. 77.25
ಒಟ್ಟು ಶೇಕಡಾವಾರು ಮತದಾನ 69.23

2019ರ ಲೋಕಸಭಾ ಚುನಾವಣೆಯ ಒಟ್ಟು ಮತದಾನ ಎಷ್ಟು?
2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತ ಸೇರಿ ಒಟ್ಟು ಶೇ. 68.96 ಮತದಾನ ನಡೆದಿತ್ತು. ಮಂಡ್ಯದಲ್ಲಿ ಅತಿಹೆಚ್ಚು ಶೇ. 80.59, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 53.70 ಮತದಾನ ದಾಖಲಾಗಿತ್ತು.

ಇದನ್ನೂ ಓದಿ | Lok Sabha Election 2024: ಮತ ಹಾಕದವರನ್ನು ಮತ ಪಟ್ಟಿಯಿಂದ ತೆಗೆದುಹಾಕಬೇಕು: ಅನಂತ್ ನಾಗ್ ಸಲಹೆಗೆ ಏನಂತೀರಿ?

ಇಂಡಿಗನತ್ತ ಮತಗಟ್ಟೆಯಲ್ಲಿ ಮರು ಮತದಾನ ಸಾಧ್ಯತೆ

ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಮರು ಮತದಾನ ನಡೆಯುವ ಸಾಧ್ಯತೆ ಇದೆ. ಶುಕ್ರವಾರ ಕೇವಲ 10 ಮತದಾರರು ಮಾತ್ರ ಹಕ್ಕು ಚಲಾವಣೆ ಮಾಡಿದ್ದಾರೆ. ಮತಗಟ್ಟೆಯಲ್ಲಿ ಮೂಲಸೌಕರ್ಯ ಇಲ್ಲ ಎಂದು ಮತದಾರರು ಅಸಮಾಧಾನ ಹೊರಹಾಕಿ ಮತದಾನ ಬಹಿಷ್ಕರಿಸಿದ್ದರು. ಹೀಗಾಗಿ 2 ದಿನಗಳೊಳಗೆ ಅಧಿಕಾರಿಗಳು ಮಾತುಕತೆ ನಡೆಸಿ ಮರು ಮತದಾನ ಮಾಡಿಸುವ ಸಾಧ್ಯತೆ ಇದೆ.

ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಅಂತ್ಯಗೊಂಡಿತು. ನಿಗದಿತ ಸಮಯವಾಗುತ್ತಿದ್ದಂತೆ ಅಧಿಕಾರಿಗಳು ಮತಗಟ್ಟೆಯ ಪ್ರಮುಖ ದ್ವಾರಗಳನ್ನು ಮುಚ್ಚಿದರು. ಸಂಜೆ ಐದು ಗಂಟೆಯ ವೇಳೆಗೆ ಶೇ 63.90 ಮತದಾನ ದಾಖಲಾಗಿತ್ತು. ಮತದಾನ ಅವಧಿ ಮುಕ್ತಾಯಗೊಂಡ ಬಳಿಕ 6 ಗಂಟೆ ವೇಳೆಗೆ ಸಾಲಿನಲ್ಲಿದ್ದವರಿಗೆ ಮಾತ್ರ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇವಿಎಂಗಳಿಗೆ ಸೀಲ್​

ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಗೇಟ್​ ಮುಚ್ಚಿದರು. ಈ ವೇಳೆ ಮೊದಲೇ ಬಂದು ಸರತಿಯಲ್ಲಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ನೀಡಲಾಯಿತು. ಕೆಲವರು ಅ ಬಳಿಕ ಬಂದರೂ ಅವರಿಗೆ ಅವಕಾಶ ನೀಡಲು ಹಿರಿಯ ಅಧಿಕಾರಿಗಳು ಒಪ್ಪಲಿಲ್ಲ. ಎಲ್ಲರೂ ಮತ ಚಲಾವಣೆ ಮಾಡಿದ ಬಳಿಕ ಹಿರಿಯ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದರು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅವರು ಮತ ಯಂತ್ರಗಳನ್ನು ಪ್ಯಾಕ್ ಮಾಡಿದರು. ಈ ಮತಪೆಟ್ಟಿಗಳು ಇನ್ನು ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಲಿವೆ.

ಇದನ್ನೂ ಓದಿ | Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

ಭರ್ಜರಿ ಪ್ರತಿಕ್ರಿಯೆ

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಮುಂಜಾನೆಯಿಂದಲೇ ಜನರು ಅತ್ಯಂತ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಬೇಸಿಗೆ ಬಿಸಿಲು ಹೆಚ್ಚಿರಬಹುದು ಎಂಬ ಕಾರಣಕ್ಕೆ ಮುಂಜಾನೆ ಅವಧಿಯಲ್ಲಿ ಮತಗಟ್ಟೆಗಳ ಬಳಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಕಂಡು ಬಂದರು. ಕೆಲವೊಂದು ಜನನಿಬಿಡ ಮತಗಟ್ಟೆಗಳಲ್ಲಿ 2 ಗಂಟೆಗಳಷ್ಟು ಕಾಲ ಜನ ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದರು.

Continue Reading

ಪ್ರಮುಖ ಸುದ್ದಿ

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Mohammad Shami: ಮೊಹಮ್ಮದ್ ಶಮಿ ಅವರನ್ನು ಶಸ್ತ್ರಚಿಕಿತ್ಸೆಗಾಗಿ ಯುನೈಟೆಡ್ ಕಿಂಗ್​ಡಮ್​​​ಗೆ ಕಳುಹಿಸಲಾಗಿತ್ತು. ಇದೀಗ ಹೆಚ್ಚಿನ ಪುನಶ್ಚೇತನಕ್ಕಾಗಿ ಶಮಿ ಭಾರತಕ್ಕೆ ಮರಳಿದ್ದಾರೆ. ವಿಶೇಷವೆಂದರೆ, ಗಾಯವು ಸರಿಯಾಗಿ ಗುಣವಾಗಲು ಕನಿಷ್ಠ 4-5 ತಿಂಗಳುಗಳು ಬೇಕಾಗುವುದರಿಂದ ವೇಗಿ ಮುಂಬರುವ ಟಿ 20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

VISTARANEWS.COM


on

Mohammad Shami
Koo

ಲಖನೌ: ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ (Mohammad Shami) ಶುಕ್ರವಾರ (ಏಪ್ರಿಲ್​ 26ರಂದು) ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಮತ ಚಲಾಯಿಸಿದರು. 2023 ರ ಐಸಿಸಿ ಏಕದಿನ ವಿಶ್ವಕಪ್​​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಮೊಹಮ್ಮದ್ ಶಮಿ, ಪಂದ್ಯಾವಳಿಯ ಸಮಯದಲ್ಲಿ ಹಿಮ್ಮಡಿ ಗಾಯದಿಂದ ಬಳಲುತ್ತಿದ್ದರು. ಇದೀಗ ಸರ್ಜರಿಗೆ ಒಳಗಾಗಿದ್ದು ಅದರ ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ಅವರು ಮತದಾನ ಮಾಡಿದ್ದಾರೆ.

ಮೊಹಮ್ಮದ್ ಶಮಿ ಅವರನ್ನು ಶಸ್ತ್ರಚಿಕಿತ್ಸೆಗಾಗಿ ಯುನೈಟೆಡ್ ಕಿಂಗ್​ಡಮ್​​​ಗೆ ಕಳುಹಿಸಲಾಗಿತ್ತು. ಇದೀಗ ಹೆಚ್ಚಿನ ಪುನಶ್ಚೇತನಕ್ಕಾಗಿ ಶಮಿ ಭಾರತಕ್ಕೆ ಮರಳಿದ್ದಾರೆ. ವಿಶೇಷವೆಂದರೆ, ಗಾಯವು ಸರಿಯಾಗಿ ಗುಣವಾಗಲು ಕನಿಷ್ಠ 4-5 ತಿಂಗಳುಗಳು ಬೇಕಾಗುವುದರಿಂದ ವೇಗಿ ಮುಂಬರುವ ಟಿ 20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

ಮೊಹಮ್ಮದ್ ಶಮಿ ಮೈದಾನದಿಂದ ಹೊರಗಿರುವುದರಿಂದ ಅವರು ಭಾರತೀಯ ಪ್ರಜೆಯಾಗಿ ತಮ್ಮ ಕರ್ತವ್ಯವನ್ನು ಪೂರೈಸಲು ಮರೆಯಲಿಲ್ಲ. ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತ ಚಲಾಯಿಸಲು ಮತಗಟ್ಟೆಗೆ ಬಂದಿದ್ದರು.

ಇದನ್ನೂ ಓದಿ: IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

ಶಮಿ ಅವರ ಕ್ಷೇತ್ರವಾದ ಅಮ್ರೋಹಾ ಸೇರಿದಂತೆ ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಿತು. , ಅವರು ಗಾಯದ ಹಿನ್ನಡೆಯಿಂದ ಬಳಲುತ್ತಿದ್ದರೂ ಮತ ಚಲಾಯಿಸಲು ಬಂದರು. ಪ್ರತಿಯೊಬ್ಬ ಭಾರತೀಯ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಬಳಸಿಕೊಳ್ಳಬೇಕು ಮತ್ತು ತಮ್ಮ ಆಯ್ಕೆಯ ಸರ್ಕಾರವನ್ನು ಆಯ್ಕೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಹೊರಬರಬೇಕು ಎಂದು ಮೊಹಮ್ಮದ್ ಶಮಿ ಅಭಿಪ್ರಾಯಪಟ್ಟರು.

ವಿಶೇಷವೆಂದರೆ, ಸೆಪ್ಟೆಂಬರ್​ನಲ್ಲಿ ಬಾಂಗ್ಲಾದೇಶ ವಿರುದ್ಧ ನಿಗದಿಯಾಗಿರುವ ತವರು ಸರಣಿಯ ಸಮಯದಲ್ಲಿ ಶಮಿ ಈ ವರ್ಷದ ಕೊನೆಯಲ್ಲಿ ಮೈದಾನಕ್ಕೆ ಮರಳುವ ನಿರೀಕ್ಷೆಯಿಲ್ಲ. ಅವರ ಅನುಪಸ್ಥಿತಿಯು ಮುಂಬರುವ ಟಿ 20 ವಿಶ್ವಕಪ್​​ಗೆ ಭಾರತೀಯ ಸಂಯೋಜನೆಗೆ ಖಂಡಿತವಾಗಿಯೂ ಹಾನಿ ಮಾಡುತ್ತದೆ. ಏಕೆಂದರೆ ಆಯ್ಕೆದಾರರು ವೇಗದ ಬೌಲಿಂಗ್ ಆಯ್ಕೆಗಳ ಕೊರತೆಯನ್ನು ಹೊಂದಿದ್ದಾರೆ.

ಜಸ್ಪ್ರೀತ್ ಬುಮ್ರಾ ಬೌಲಿಂಗ್ ದಾಳಿಯನ್ನು ಮುನ್ನಡೆಸುವ ನಿರೀಕ್ಷೆಯಿದ್ದರೆ, ಅವರ ಉಳಿದ ಪಡೆಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ.

Continue Reading
Advertisement
Neha Murder Case
ಕರ್ನಾಟಕ5 mins ago

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

IPL 2024
ಪ್ರಮುಖ ಸುದ್ದಿ6 mins ago

IPL 2024 : ಬೈರ್​ಸ್ಟೋವ್​ ಸ್ಫೋಟಕ ಶತಕ; ಕೆಕೆಆರ್​ ವಿರುದ್ಧ ಪಂಜಾಬ್​​ಗೆ ವಿಶ್ವ ದಾಖಲೆಯ ವಿಜಯ

Bike Accident
ಕರ್ನಾಟಕ42 mins ago

Bike Accident: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಬೈಕ್‌ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

lok sabha election
Lok Sabha Election 202446 mins ago

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Hassan News
ಕರ್ನಾಟಕ1 hour ago

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Pandya brothers
ಕ್ರೀಡೆ1 hour ago

Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

ಕರ್ನಾಟಕ2 hours ago

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Mohammad Shami
ಪ್ರಮುಖ ಸುದ್ದಿ3 hours ago

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Narendra modi
ಪ್ರಮುಖ ಸುದ್ದಿ3 hours ago

Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಹೀಗಿತ್ತು

Udupi Sri Krishna Temple
ಕರ್ನಾಟಕ3 hours ago

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ12 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202412 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202413 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ19 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌