Actor Nani: ನ್ಯಾಚುರಲ್ ಸ್ಟಾರ್ ನಾನಿ 'ದಸರಾ' ಟೀಸರ್ ಬಿಡುಗಡೆಗೆ ಡೇಟ್ ಫಿಕ್ಸ್ - Vistara News

ಟಾಲಿವುಡ್

Actor Nani: ನ್ಯಾಚುರಲ್ ಸ್ಟಾರ್ ನಾನಿ ‘ದಸರಾ’ ಟೀಸರ್ ಬಿಡುಗಡೆಗೆ ಡೇಟ್ ಫಿಕ್ಸ್

ನಾನಿ ಹಾಗೂ ಕೀರ್ತಿ ಸುರೇಶ್ ಜೋಡಿಯಾಗಿರುವ ‘ದಸರಾ’ ಚಿತ್ರಕ್ಕೆ ಶ್ರೀಕಾಂತ್ ಒಡೆಲಾ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮಾರ್ಚ್ 30ರಂದು ಸಿನಿಮಾ ಗ್ರ್ಯಾಂಡ್ ಆಗಿ ತೆರೆ ಕಾಣುತ್ತಿದೆ. ಈಗಾಗಲೇ ಹಾಡುಗಳ ಮೂಲಕ ಕ್ರೇಜ್ ಸೃಷ್ಟಿಸಿರುವ ಚಿತ್ರತಂಡ ಟೀಸರ್ ಝಲಕ್ ಮೂಲಕ ಪ್ರೇಕ್ಷಕರ ಮನ ಸೆಳೆಯಲು ಸಜ್ಜಾಗಿದೆ.

VISTARANEWS.COM


on

Nani’s Dasara Gets U/A Certificate Before 36 Cuts
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನ್ಯಾಚುರಲ್ ಸ್ಟಾರ್ ನಾನಿ (Actor Nani) ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ “ದಸರಾ’ ಟೀಸರ್ ಬಿಡುಗಡೆಗೆ ಒಂದೇ‌ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ 30 ಟೀಸರ್ ಬಿಡುಗಡೆಯ ವಿಶೇಷತೆಯನ್ನು ಚಿತ್ರತಂಡ ರಿವೀಲ್ ಮಾಡಿದ್ದು ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯ ಸ್ಟಾರ್ ನಟರು ಟೀಸರ್ ಬಿಡುಗಡೆ ಮಾಡಲಿದ್ದಾರೆ.

ಮಾಸ್ ಆ್ಯಕ್ಷನ್ ಸಬ್ಜೆಕ್ಟ್ ಒಳಗೊಂಡ ‘ದಸರಾ’ ಈಗಾಗಲೇ ಸಿನಿ ಪ್ರಿಯರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿ ಬರುತ್ತಿರುವ ಚಿತ್ರದಲ್ಲಿ ನಾನಿ ಮಾಸ್ ಅವತಾರದಲ್ಲಿ ರಂಜಿಸಲು ರೆಡಿಯಾಗಿದ್ದು, ಮಾರ್ಚ್ 30ರಂದು ಬಿಡುಗಡೆಯಾಗುತ್ತಿರುವ ಚಿತ್ರದ ಟೀಸರ್ ಝಲಕ್ ನಾಳೆ ಬಿಡುಗಡೆಯಾಗುತ್ತಿದೆ. ಬಾಲಿವುಡ್ ನಟ ಶಾಹಿದ್ ಕಪೂರ್, ಧನುಷ್, ರಕ್ಷಿತ್ ಶೆಟ್ಟಿ, ದುಲ್ಕರ್ ಸಲ್ಮಾನ್ ಚಿತ್ರದ ಮ್ಯಾಸಿವ್ ಟೀಸರ್ ಬಿಡುಗಡೆ ಮಾಡಲಿದ್ದಾರೆ ಎಂದು ಚಿತ್ರತಂಡ ವಿಶೇಷ ವಿಡಿಯೊ ಮುಖಾಂತರ ಹಂಚಿಕೊಂಡಿದೆ.

ಇದನ್ನೂ ಓದಿ: Vishnuvardhan: ಸ್ಮಾರಕ ಜಾಗದಲ್ಲಿಆಲ್ ಇಂಡಿಯಾ ಫಿಲ್ಮ್ ಇನ್ಸ್‌ಟಿಟ್ಯೂಟ್ ಶಾಖೆ ತೆರೆಯುವುದರ ಬಗ್ಗೆ ಪ್ರಸ್ತಾಪಿಸಿದ ಅನಿರುದ್ಧ

ನಾನಿ ಹಾಗೂ ಕೀರ್ತಿ ಸುರೇಶ್ ಜೋಡಿಯಾಗಿರುವ ‘ದಸರಾ’ ಚಿತ್ರಕ್ಕೆ ಶ್ರೀಕಾಂತ್ ಒಡೆಲಾ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮಾರ್ಚ್ 30ರಂದು ಸಿನಿಮಾ ಗ್ರ್ಯಾಂಡ್ ಆಗಿ ತೆರೆ ಕಾಣುತ್ತಿದೆ. ಈಗಾಗಲೇ ಹಾಡುಗಳ ಮೂಲಕ ಕ್ರೇಜ್ ಸೃಷ್ಟಿಸಿರುವ ಚಿತ್ರತಂಡ ಟೀಸರ್ ಝಲಕ್ ಮೂಲಕ ಪ್ರೇಕ್ಷಕರ ಮನ ಸೆಳೆಯಲು ಸಜ್ಜಾಗಿದೆ.

ಇದನ್ನೂ ಓದಿ: TPL | ಟೆಲಿವಿಷನ್ ಪ್ರೀಮಿಯರ್ ಲೀಗ್ : ನಡೆಯಲಿದೆ ಮೂರು ದಿನಗಳ ಕಾಲ ಕಿರುತೆರೆ ಕಲಾವಿದರ ಕ್ರಿಕೆಟ್

ಬಹು ದೊಡ್ಡ ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾಬಳಗವಿದೆ. ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಟಾಲಿವುಡ್

Aditi Rao Hydari: ಎಂಗೇಜ್‌ ಆಗಿರುವ ಫೋಟೊ ಶೇರ್‌ ಮಾಡಿದ ಅದಿತಿ ರಾವ್ ಹೈದರಿ!

Aditi Rao Hydari: ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ್ (Siddharth) ಎಂಗೇಜ್‌ ಆಗಿರುವ ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ಜೋಡಿಗೆ ಫ್ಯಾನ್ಸ್‌ ಶುಭಹಾರೈಸುತ್ತಿದ್ದಾರೆ.

VISTARANEWS.COM


on

Aditi Rao Hydari engaged to Siddharth
Koo

ಬೆಂಗಳೂರು:  ಅದಿತಿ ರಾವ್ ಹೈದರಿ (Aditi Rao Hydari) ಮತ್ತು ಸಿದ್ಧಾರ್ಥ್ (Siddharth) ಅಧಿಕೃತವಾಗಿ ಎಂಗೇಜ್‌ ಆಗಿದ್ದಾರೆ. ಎಂಗೇಜ್ಡ್ ಎಂದು ಜೋಡಿ ಉಂಗುರ ತೋರಿಸಿ ಇನ್‌ಸ್ಟಾ ಪೋಸ್ಟ್‌ ಮಾಡಿದೆ. ತೆಲಂಗಾಣದ ಶ್ರೀರಂಗಾಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಅದಿತಿ ಮತ್ತು ಸಿದ್ಧಾರ್ಥ್ ವಿವಾಹವಾದರು ಎಂದು ತೆಲುಗು ಮಾಧ್ಯಮಗಳು ಮಾ.27ರಂದು ವರದಿ ಮಾಡಿದ್ದವು. ಇದೀಗ ಅದಿತಿ ಪೋಸ್ಟ್ ನೋಡಿ ಮದುವೆ ಅಲ್ಲ ಎಂಗೇಜ್‌ಮೆಂಟ್‌ ಆಗಿದ್ದಾರೆ ಎಂದು ಮೂಲ ತಿಳಿಸಿದೆ.

ಈ ಹಿಂದೆ ರಾಜಕುಮಾರ್‌ ರಾವ್‌ ಅವರ ಮದುವೆಯಲ್ಲಿ ಇವರಿಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಸಿದ್ಧಾರ್ಥ್‌ ಹುಟ್ಟುಹಬ್ಬಕ್ಕೆ ಅತ್ಯಂತ ಪ್ರೀತಿಯಿಂದ ಹಾರೈಸಿದ್ದರು ಅದಿತಿ. ಈ ಮೊದಲು ಅದಿತಿ ರಾವ್​ ಹೈದರಿ ಅವರು ನಟ ಸತ್ಯದೀಪ್​ ಮಿಶ್ರಾ ಜತೆ ಮದುವೆ ಆಗಿದ್ದರು. ಆದರೆ 2013ರಲ್ಲಿ ಅವರು ವಿಚ್ಛೇದನ ಪಡೆದರು. ಅದೇ ರೀತಿ, ಸಿದ್ಧಾರ್ಥ್​ ಕೂಡ ಮೇಘನಾ ನಾರಾಯಣ್​ ಜತೆ 2003ರಲ್ಲಿ ಮದುವೆಯಾಗಿ 2007ರಲ್ಲಿ ಡಿವೋರ್ಸ್​ ಪಡೆದರು.

ಅರುಣ್ ಕುಮಾರ್ ನಿರ್ದೇಶನದ “ಚಿತ್ತಾʼ ಚಿತ್ರದಲ್ಲಿ ಸಿದ್ಧಾರ್ಥ್ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ನಿಮಿಷಾ ಸಜಯನ್, ಅಂಜಲಿ ನಾಯರ್ ಮತ್ತು ಸಹಸ್ರ ಶ್ರೀ ಪ್ರಮುಖ ಪಾತ್ರಗಳಲ್ಲಿದ್ದಾರೆ. ಎಟಕಿ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಸಿದ್ಧಾರ್ಥ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮುಂದೆ ನಟ ಎಸ್ ಶಂಕರ್ ನಿರ್ದೇಶನದ ಇಂಡಿಯನ್ 2 ಚಿತ್ರದಲ್ಲಿ ಕಮಲ್ ಹಾಸನ್ ಜತೆಗೆ ಕಾಣಿಸಿಕೊಳ್ಳಲು ಸಹ ಸಿದ್ಧರಾಗಿದ್ದಾರೆ.

ಸಿದ್ಧಾರ್ಥ್ ಇಂಡಿಯನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ.

ಇದನ್ನೂ ಓದಿ: Aditi Rao Hydari: ʻಹೀರಾಮಂಡಿʼ ಕಾರ್ಯಕ್ರಮದಲ್ಲಿ ನಟಿ ಗೈರು; ಸಿದ್ಧಾರ್ಥ್ ಜತೆ ಮದುವೆ ಕನ್ಫರ್ಮ್‌!

ಮತ್ತೊಂದೆಡೆ, ಅದಿತಿ ರಾವ್ ಹೈದರಿ ಕೊನೆಯದಾಗಿ ವಿಕ್ರಮಾದಿತ್ಯ ಮೋಟ್ವಾನಿ ನಿರ್ದೇಶಿಸಿದ ಜುಬಿಲಿ ವೆಬ್ ಸಿರೀಸ್‌ನಲ್ಲಿ ಕಾಣಿಸಿಕೊಂಡರು. ಈ ಸಿರೀಸ್‌ನಲ್ಲಿ ಅಪರಶಕ್ತಿ ಖುರಾನಾ, ವಾಮಿಕಾ ಗಬ್ಬಿ, ಸಿದ್ದಾಂತ್ ಗುಪ್ತಾ ಮತ್ತು ಇನ್ನೂ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ನಟಿ ಮುಂದಿನ ಸಂಜಯ್ ಲೀಲಾ ಬನ್ಸಾಲಿಯವರ ನೆಟ್‌ಫ್ಲಿಕ್ಸ್ ಸಿರೀಸ್‌ ಹೀರಾಮಂಡಿಯಲ್ಲಿ ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ ಮತ್ತು ಇನ್ನೂ ಅನೇಕರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಕಜ್ರಿ ಬಬ್ಬರ್ ನಿರ್ದೇಶನದ ಲಯನೆಸ್ ಎಂಬ ಇಂಗ್ಲಿಷ್ ಚಲನಚಿತ್ರದಲ್ಲಿ ನಟಿಸುತ್ತಿದ್ದಾರೆ.

Continue Reading

ಟಾಲಿವುಡ್

Aditi Rao Hydari: ʻಹೀರಾಮಂಡಿʼ ಕಾರ್ಯಕ್ರಮದಲ್ಲಿ ನಟಿ ಗೈರು; ಸಿದ್ಧಾರ್ಥ್ ಜತೆ ಮದುವೆ ಕನ್ಫರ್ಮ್‌!

Aditi Rao Hydari: ತೆಲಂಗಾಣದ ಶ್ರೀರಂಗಾಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಅದಿತಿ ಮತ್ತು ಸಿದ್ಧಾರ್ಥ್ ವಿವಾಹವಾದರು ಎಂದು ತೆಲುಗು ಮಾಧ್ಯಮಗಳು ಮಾ.27ರಂದು ವರದಿ ಮಾಡಿವೆ.

VISTARANEWS.COM


on

Aditi Rao Hydari
Koo

ಬೆಂಗಳೂರು: ಅದಿತಿ ರಾವ್ ಹೈದರಿ (Aditi Rao Hydari) ಮತ್ತು ಸಿದ್ಧಾರ್ಥ್ (Siddharth) 2021ರ ʻಮಹಾ ಸಮುದ್ರಂʼ (Maha Samudram) ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆ ಬಳಿಕ ಇಬ್ಬರು ಒಬ್ಬರಿಗೊಬ್ಬರು ಪರಿಚಯವಾಗಿ, ಡೇಟಿಂಗ್ ಮಾಡಲು ಶುರು ಮಾಡಿದರು. ಇದೀಗ ಈ ಜೋಡಿ ಮದುವೆಯಾಗಿದೆ ಎಂದು ವರದಿಯಾಗಿದೆ. ಇನ್ನೂ ವಿಶೇಷ ಎಂದರೆ ʻಹೀರಾಮಂಡಿʼ (Heeramandi event) ಕಾರ್ಯಕ್ರಮವೊಂದರಲ್ಲಿ ನಟಿ ಗೈರಾಗಿದ್ದರು. ಹೀಗಾಗಿ ನಟಿ ಮದುವೆಯಾಗಿದ್ದು ಖಚಿತ ಎನ್ನುತ್ತಿದೆ ಮೂಲ.

ಸಚಿನ್ ವಿ ಕುಂಬಾರ್ ಅವರು ಮುಂಬೈನಲ್ಲಿ ʻಹೀರಾಮಂಡಿʼಗಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಬಳಿಕ ಮಾಧ್ಯಮದ ಜತೆ ಮಾತನಾಡಿ ʻಅದಿತಿ ಏಕೆ ಇಲ್ಲಿಲ್ಲ ಎಂದು ನಮಗೆ ತಿಳಿದಿದೆ. ಒಂದು ಕಾರಣವಿದೆ, ಏಕೆಂದರೆ ಅವರು ಇಂದು ಮದುವೆಯಾಗುತ್ತಿದ್ದಾರೆ. ಆದ್ದರಿಂದ, ನಾವೆಲ್ಲರೂ ಅವರನ್ನು ಅಭಿನಂದಿಸೋಣ” ಎಂದು ಹೇಳಿಕೆ ನೀಡಿದ್ದಾರೆ.

ಅದಿತಿ-ಸಿದ್ಧಾರ್ಥ್ ಮದುವೆ

ತೆಲಂಗಾಣದ ಶ್ರೀರಂಗಾಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಅದಿತಿ ಮತ್ತು ಸಿದ್ಧಾರ್ಥ್ ವಿವಾಹವಾದರು ಎಂದು ತೆಲುಗು ಮಾಧ್ಯಮಗಳು ಮಾ.27ರಂದು ವರದಿ ಮಾಡಿವೆ. ಆದರೆ ಇದುವರೆಗೆ ಜೋಡಿ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.

ಇದನ್ನೂ ಓದಿ: Aditi Rao Hydari: ಸಿದ್ಧಾರ್ಥ್ ಪೋಸ್ಟ್‌ ಹಂಚಿಕೊಂಡು ʻಜಸ್ಟ್‌ ಲುಕಿಂಗ್‌ ಲೈಕ್‌ ಎ ವಾವ್‌ʼ ಎಂದ ಅದಿತಿ!

ಈ ಹಿಂದೆ ರಾಜಕುಮಾರ್‌ ರಾವ್‌ ಅವರ ಮದುವೆಯಲ್ಲಿ ಇವರಿಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಸಿದ್ಧಾರ್ಥ್‌ ಹುಟ್ಟುಹಬ್ಬಕ್ಕೆ ಅತ್ಯಂತ ಪ್ರೀತಿಯಿಂದ ಹಾರೈಸಿದ್ದರು ಅದಿತಿ. ಈ ಮೊದಲು ಅದಿತಿ ರಾವ್​ ಹೈದರಿ ಅವರು ನಟ ಸತ್ಯದೀಪ್​ ಮಿಶ್ರಾ ಜತೆ ಮದುವೆ ಆಗಿದ್ದರು. ಆದರೆ 2013ರಲ್ಲಿ ಅವರು ವಿಚ್ಛೇದನ ಪಡೆದರು. ಅದೇ ರೀತಿ, ಸಿದ್ಧಾರ್ಥ್​ ಕೂಡ ಮೇಘನಾ ನಾರಾಯಣ್​ ಜತೆ 2003ರಲ್ಲಿ ಮದುವೆಯಾಗಿ 2007ರಲ್ಲಿ ಡಿವೋರ್ಸ್​ ಪಡೆದರು.

ಅರುಣ್ ಕುಮಾರ್ ನಿರ್ದೇಶನದ “ಚಿತ್ತಾʼ ಚಿತ್ರದಲ್ಲಿ ಸಿದ್ಧಾರ್ಥ್ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ನಿಮಿಷಾ ಸಜಯನ್, ಅಂಜಲಿ ನಾಯರ್ ಮತ್ತು ಸಹಸ್ರ ಶ್ರೀ ಪ್ರಮುಖ ಪಾತ್ರಗಳಲ್ಲಿದ್ದಾರೆ. ಎಟಕಿ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಸಿದ್ಧಾರ್ಥ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮುಂದೆ ನಟ ಎಸ್ ಶಂಕರ್ ನಿರ್ದೇಶನದ ಇಂಡಿಯನ್ 2 ಚಿತ್ರದಲ್ಲಿ ಕಮಲ್ ಹಾಸನ್ ಜತೆಗೆ ಕಾಣಿಸಿಕೊಳ್ಳಲು ಸಹ ಸಿದ್ಧರಾಗಿದ್ದಾರೆ.

ಇದನ್ನೂ ಓದಿ: Aditi Rao Hydari: ʻಲವ್ಲಿ ಜೋಡಿ’ ಎನ್ನುತ್ತಿದ್ದಂತೆ ನಾಚಿ ನೀರಾದ ಅದಿತಿ ರಾವ್ ಹೈದರಿ

ಸಿದ್ಧಾರ್ಥ್ ಇಂಡಿಯನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ.

ಮತ್ತೊಂದೆಡೆ, ಅದಿತಿ ರಾವ್ ಹೈದರಿ ಕೊನೆಯದಾಗಿ ವಿಕ್ರಮಾದಿತ್ಯ ಮೋಟ್ವಾನಿ ನಿರ್ದೇಶಿಸಿದ ಜುಬಿಲಿ ವೆಬ್ ಸಿರೀಸ್‌ನಲ್ಲಿ ಕಾಣಿಸಿಕೊಂಡರು. ಈ ಸಿರೀಸ್‌ನಲ್ಲಿ ಅಪರಶಕ್ತಿ ಖುರಾನಾ, ವಾಮಿಕಾ ಗಬ್ಬಿ, ಸಿದ್ದಾಂತ್ ಗುಪ್ತಾ ಮತ್ತು ಇನ್ನೂ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ನಟಿ ಮುಂದಿನ ಸಂಜಯ್ ಲೀಲಾ ಬನ್ಸಾಲಿಯವರ ನೆಟ್‌ಫ್ಲಿಕ್ಸ್ ಸಿರೀಸ್‌ ಹೀರಾಮಂಡಿಯಲ್ಲಿ ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ ಮತ್ತು ಇನ್ನೂ ಅನೇಕರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಕಜ್ರಿ ಬಬ್ಬರ್ ನಿರ್ದೇಶನದ ಲಯನೆಸ್ ಎಂಬ ಇಂಗ್ಲಿಷ್ ಚಲನಚಿತ್ರದಲ್ಲಿ ನಟಿಸುತ್ತಿದ್ದಾರೆ.

Continue Reading

ಟಾಲಿವುಡ್

Ram Charan: ರಾಮ್‌ಚರಣ್‌ ಅಭಿನಯದ ʻಗೇಮ್ ಚೇಂಜರ್ʼ ಮೊದಲ ಸಾಂಗ್‌ ಔಟ್‌!

Ram Charan: ನಟ ರಾಮ್ ಚರಣ್ ನಟನೆಯ ʻಗೇಮ್ ಚೇಂಜರ್ʼ ಮೊದಲ ಹಾಡು ಬಿಡುಗಡೆಯಾಗಿದೆ. ʻಜರಗಂಡಿʼ (Game Changer Song Jaragandi) ಎಂಬ ಶೀರ್ಷಿಕೆಯ ಹಾಡು ಸಖತ್‌ ಟ್ರೆಂಡ್‌ನಲ್ಲಿದೆ.

VISTARANEWS.COM


on

Ram Charan Game Changer Song Jaragandi
Koo

ಬೆಂಗಳೂರು: ಇಂದು ಟಾಲಿವುಡ್‌ ನಟ ರಾಮ್ ಚರಣ್ (Ram Charan) ಅವರ 39ನೇ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ರಾಮ್ ಚರಣ್ ನಟನೆಯ ʻಗೇಮ್ ಚೇಂಜರ್ʼ ಚಿತ್ರತಂಡ ಫ್ಯಾನ್ಸ್‌ಗೆ ಸರ್‌ಪ್ರೈಸ್‌ ಕೊಟ್ಟಿದೆ. ʻಗೇಮ್ ಚೇಂಜರ್ʼ ಸಿನಿಮಾ ತಂಡ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ʻಜರಗಂಡಿʼ (Game Changer Song Jaragandi) ಎಂಬ ಶೀರ್ಷಿಕೆಯ ಈ ಹಾಡನ್ನು ಪಂಜಾಬಿ ಪಾಪ್ ಗಾಯಕ ದಲೇರ್ ಮೆಹಂದಿ ( Daler Mehndi) ಮತ್ತು ಸುನಿಧಿ ಚೌಹಾನ್ (Sunidhi Chauhan) ಹಾಡಿದ್ದಾರೆ. ಈ ಹಾಡನ್ನು ಸಂಗೀತ ನಿರ್ದೇಶಕ ಥಮನ್ ಎಸ್ ರಚಿಸಿದ್ದಾರೆ. ಇದೀಗ ಈ ಲಿರಿಕಲ್ ವಿಡಿಯೊ ಔಟ್‌ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಾಡಿನಲ್ಲಿ ಕಿಯಾರಾ ಆಡ್ವಾಣಿ ಹಾಗೂ ರಾಮ್ ಚರಣ್ ಡ್ಯಾನ್ಸ್‌ ಮಾಡಿರುವ ಸಣ್ಣ ಕ್ಲಿಪ್ಸ್‌ ಕೂಡ ಇದೆ. ಕಿಯಾರ ಅವರು ಮಾಸ್‌ ಆಗಿ ಕುಣಿದಿದ್ದಾರೆ. ಪ್ರಭುದೇವ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ.

ರಾಮ್ ಚರಣ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಟ್ರೀಟ್ ನೀಡುವುದಾಗಿ ಚಿತ್ರತಂಡ ಈ ಮುಂಚೆ ಬಹಿರಂಗಪಡಿಸಿತ್ತು. ಅದರಂತೆ ಈಗ ʻಗೇಮ್ ಚೇಂಜರ್‌ʼ ಹೊಸ ಪೋಸ್ಟರ್ ಜತೆಗೆ ಹಾಡನ್ನು ಶೇರ್‌ ಮಾಡಿಕೊಂಡಿದೆ. ಪೋಸ್ಟರ್‌ನಲ್ಲಿ, ರಾಮ್ ಚರಣ್‌ ನೇರಳೆ ಬಣ್ಣದ ಕುರ್ತಾವನ್ನು ಧರಿಸಿದ್ದಾರೆ.

ಚಿತ್ರದಲ್ಲಿ ರಾಮ್ ಚರಣ್ ಹಿಂದೆಂದೂ ಕಾಣದ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಶಂಕರ್ ಷಣ್ಮುಖಂ ನಿರ್ದೇಶನದ ಈ ಚಿತ್ರದಲ್ಲಿ ಕಿಯಾರಾ ಆಡ್ವಾಣಿ ಕೂಡ ಕಾಣಿಸಿಕೊಳ್ಳಲಿದ್ದಾರೆ. ರಾಮ್ ಚರಣ್ ಅವರ ‘ಗೇಮ್ ಚೇಂಜರ್’ ಈ ವರ್ಷದ ಆರಂಭದಲ್ಲಿ ಘೋಷಣೆಯಾದಾಗಿನಿಂದ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: Ram Charan Birthday: ಹುಟ್ಟುಹಬ್ಬದ ದಿನ ಕುಟುಂಬ ಸಮೇತ ತಿರುಪತಿಗೆ ಭೇಟಿ ಕೊಟ್ಟ ರಾಮ್‌ಚರಣ್‌!

ʻಜರಗಂಡಿʼ ಲಿರಿಕಲ್ ವಿಡಿಯೊ

ವರದಿ ಪ್ರಕಾರ, ರಾಮ್ ಚರಣ್ ಈ ಸಿನಿಮಾದಲ್ಲಿ ಐಎಎಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸಿಲಿದ್ದಾರೆ. ಚಿತ್ರದ ನಾಯಕಿಯಾಗಿ ಕಿಯಾರಾ ಆಡ್ವಾಣಿ ಆಯ್ಕೆಯಾಗಿದ್ದಾರೆ. ‘ಗೇಮ್ ಚೇಂಜರ್’ ಒಂದು ರಾಜಕೀಯ ಥ್ರಿಲ್ಲರ್ ಸಿನಿಮಾವಾಗಿದ್ದು ಎಸ್ ಶಂಕರ್ ನಿರ್ದೇಶಿಸಿದ್ದಾರೆ.

ಗೇಮ್ ಚೇಂಜರ್‌ಗಾಗಿ ನಿರ್ದೇಶಕ ಎಸ್‌ ಶಂಕರ್ ಚಿತ್ರದ ಹಾಡುಗಳಿಗೆ 90 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ವರದಿಯಾಗಿದೆ. ಎಸ್ ಥಮನ್ ಈ ಚಿತ್ರದ ಐದು ಹಾಡುಗಳನ್ನು ಸಂಯೋಜಿಸಿದ್ದಾರೆ. ಈ ಹಿಂದೆ ‘ವಿನಯಾ ವಿಧೇಯ ರಾಮ’ ಸಿನಿಮಾದಲ್ಲಿ ಚರಣ್-ಕಿಯಾರಾ ಜೋಡಿಯಾಗಿ ನಟಿಸಿದ್ದರು. ಇದೀಗ ಗೇಮ್ ಚೇಂಜರ್‌ಗಾಗಿ ಮತ್ತೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Vistara News Polling Booth: ಉತ್ತರ ಕನ್ನಡದಲ್ಲಿ ಬಿಜೆಪಿಯೇ ಪ್ರಬಲ; ಜೆಡಿಎಸ್‌ ಬಂಡಾಯ ಅಭ್ಯರ್ಥಿಗೆ ಗಣನೀಯ ಮತ!

ಕಾರ್ತಿಕ್ ಸುಬ್ಬರಾಜ್ ಚಿತ್ರದ ಕಥೆ ಬರೆದಿದ್ದಾರೆ. ಚಿತ್ರದಲ್ಲಿ ರಾಮ್ ಚರಣ್, ಕಿಯಾರಾ ಆಡ್ವಾಣಿ ಮತ್ತು ಎಸ್‌ಜೆ ಸೂರ್ಯ ಮುಖ್ಯ ಭೂಮಿಕೆಯಲ್ಲಿದ್ದಾರೆ. ದಿಲ್ ರಾಜು ಮತ್ತು ಸಿರಿಶ್ ನಿರ್ಮಾಣದ ಈ ಚಿತ್ರ 2024ರಲ್ಲಿ ಬಿಡುಗಡೆಯಾಗಲಿದೆ. ಅಂಜಲಿ, ಜಯರಾಮ್, ನವೀನ್ ಚಂದ್ರ, ಸುನೀಲ್, ಶ್ರೀಕಾಂತ್, ಸಮುದ್ರಕನಿ ಮತ್ತು ನಾಸರ್ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎಸ್ ಥಮನ್ ಸಂಯೋಜನೆ, ಶಮೀರ್ ಮುಹಮ್ಮದ್ ಸಂಕಲನ ಮತ್ತು ತಿರ್ರು ಛಾಯಾಗ್ರಹಣವಿದೆ. ಅಮೆಜಾನ್ ಪ್ರೈಮ್‌ ಚಿತ್ರದ ಸ್ಟ್ರೀಮಿಂಗ್ ಹಕ್ಕುಗಳನ್ನು ಖರೀದಿಸಿದೆ.

Continue Reading

ಟಾಲಿವುಡ್

Bengaluru Water Crisis: ಬೆಂಗಳೂರು ನೀರಿನ ಸಮಸ್ಯೆ; ಕನ್ನಡದಲ್ಲೇ ಪರಿಹಾರ ಕೊಟ್ಟ ಮೆಗಾಸ್ಟಾರ್ ಚಿರಂಜೀವಿ!

Bengaluru Water Crisis: ಸಿಲಿಕಾನ್ ಸಿಟಿಯ ನೀರಿನ ಸಮಸ್ಯೆ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ ಬಹಳ ಮುಖ್ಯ ಎಂದಿದ್ದಾರೆ ನಟ ಚಿರಂಜೀವಿ.

VISTARANEWS.COM


on

Bengaluru Water Crisis chiranjeevi post
Koo

ಬೆಂಗಳೂರು: ಕರ್ನಾಟಕವು ಹಿಂದೆಂದೂ (Bengaluru Water Crisis) ಕಂಡರಿಯದ ಭೀಕರ ಬರಗಾಲಕ್ಕೆ ತುತ್ತಾಗಿದೆ. ಎಲ್ಲೆಲ್ಲೂ ನೀರಿಗೆ ಹಾಹಾಕಾರ (Water Crisis) ಶುರುವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಈ ಸಮಸ್ಯೆ (Bangalore Water Problem) ಮತ್ತಷ್ಟು ಉಲ್ಬಣಿಸಿದೆ. ಇದೀಗ ಸಿಲಿಕಾನ್ ಸಿಟಿಯ ನೀರಿನ ಸಮಸ್ಯೆ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ (actor chiranjeevi) ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ ಬಹಳ ಮುಖ್ಯ ಎಂದಿದ್ದಾರೆ ನಟ ಚಿರಂಜೀವಿ.

ನಟ ಚಿರಂಜೀವಿ ಟ್ವೀಟ್‌ನಲ್ಲಿ ʻʻಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ… ಬಹಳ ಮುಖ್ಯವಾದದ್ದು. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು. ನೀರಿನ ಕೊರತೆಯು ದೈನಂದಿನ ಜೀವನವನ್ನು ಕಷ್ಟಕರವಾಗಿಸುತ್ತದೆ. ಇಂದು ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಿದೆ. ನಾಳೆ ಎಲ್ಲಿ ಬೇಕಾದರೂ ಈ ರೀತಿಯ ಸಮಸ್ಯೆ ಸಂಭವಿಸಬಹುದು. ಆದ್ದರಿಂದ ನೀರನ್ನು ಸಂರಕ್ಷಿಸಲು ಸಹಾಯ ಮಾಡುವ ಮನೆಗಳನ್ನು ನಿರ್ಮಿಸುವ ಅಗತ್ಯವನ್ನು ಹೇಳಲು ಬಯಸುತ್ತೇನೆ. ಬೆಂಗಳೂರಿನ ನನ್ನ ಫಾರ್ಮ್ ಹೌಸ್‌ಗಾಗಿ ನಾನು ಮಾಡಿದ್ದನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ,” ಎಂದಿದ್ದಾರೆ.

ಇದನ್ನೂ ಓದಿ: Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್, ರಾಜ್ಯದ 60 ಕಡೆ ದಾಳಿ

ಚಿರಂಜೀವಿ ಟ್ವೀಟ್‌

20-36 ಅಡಿ ಆಳದ ರೀಚಾರ್ಜ್ ಬಾವಿಗಳನ್ನು ಸೈಟ್‌ನಾದ್ಯಂತ ಆಯಕಟ್ಟಿನ ಕಡೆಗಳಲ್ಲಿ ಸ್ಥಾಪಿಸಲಾಗಿದೆ. ರೀಚಾರ್ಜ್ ಬಾವಿಗಳಿಗೆ ಮೇಲ್ಮೈ ನೀರಿನ ಹರಿವನ್ನು ನಿರ್ದೇಶಿಸಲು ಸಾಕಷ್ಟು ಇಳಿಜಾರು ದಾರಿಗಳಿವೆ. ಪ್ರತಿಯೊಂದು ಬಾವಿಯೂ ಫಿಲ್ಟರ್ ವ್ಯವಸ್ಥೆಯನ್ನು ಹೊಂದಿದೆ. ನೀರನ್ನು ಸೋಸುವ ವ್ಯವಸ್ಥೆ , ಅಂದರೆ ವಿವಿಧ ಗಾತ್ರದ ಕಲ್ಲಿನ ಲೇಯರ್‌ಗಳು ಮತ್ತು ಮರಳಿನ ಪದರಗಳ ಮೂಲಕ ನೀರಿನ ಇಂಗುವಿಕೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ.

ರೀಚಾರ್ಜ್ ಬಾವಿ- ರೀಚಾರ್ಜ್ ಪಿಟ್‌ಗೆ ಹೋಲಿಸಿದರೆ – ಹೆಚ್ಚು ನೀರನ್ನು ಸಂಗ್ರಹಿಸಬಹುದು. ಮತ್ತು ಹೆಚ್ಚು ಆಳವಾದ ನೀರಿನಲ್ಲಿ ವಾಸಿಸುವ ಜಲಚರಗಳನ್ನು ಸಾಕುತ್ತದೆ. ತಳಾಧಾರದಲ್ಲಿನ ಸರಂಧ್ರ ಪದರಗಳ ಮೂಲಕ ನೀರನ್ನು ನಿಧಾನವಾಗಿ ಹರಿಯುವಂತೆ ಮಾಡುತ್ತದೆ.

ನಾನು ಫರ್ಮಾಕಲ್ಚರ್ ತತ್ವಗಳನ್ನು ಸಹ ಜಾರಿಗೆ ತಂದಿದ್ದೇನೆ. ಫರ್ಮಾಕಲ್ಚರ್ ಪರಿಸರವನ್ನು ಪುನರುಜ್ಜೀವನಗೊಳಿಸುವ ವೃತ್ತಾಕಾರದ ತತ್ತ್ವದ ಮೇಲೆ ಕಾರ್ಯನಿರ್ವಹಿಸುತ್ತದೆ. ಸ್ವಾವಲಂಬಿಯನ್ನಾಗಿ ಮಾಡುತ್ತದೆ. ಫರ್ಮಾಕಲ್ಚರ್‌ನ ಪ್ರಮುಖ ಫಲಿತಾಂಶವೆಂದರೆ ನೀರಿನ ಬೇಡಿಕೆಯಲ್ಲಿನ ಕಡಿತ. ಮಣ್ಣಿನಿಂದ ಆವಿಯಾಗುವ ನೀರಿನ ಪ್ರಮಾಣವನ್ನು ಕಡಿಮೆ ಮಾಡಲು ತೋಟದಲ್ಲಿ ಬಿದ್ದ ಎಲೆಗಳು ಮತ್ತು ಮರದ ತೊಗಟೆಗಳನ್ನು ಬಳಸಿ ಮಲ್ಚಿಂಗ್ ಮಾಡುವ ಮೂಲಕ ಇದನ್ನು ಸಾಧಿಸಲಾಗುತ್ತದೆ.

ಈ ಕ್ರಮಗಳನ್ನು ಕೈಗೊಳ್ಳುವ ಮೂಲಕ ನಾವು ನೀರನ್ನು ಸಂರಕ್ಷಿಸಬಹುದು ಮತ್ತು ಮಳೆ ನೀರು ಕೊಯ್ಲು ಉತ್ತಮಗೊಳಿಸಬಹುದು ಮತ್ತು ಪರಿಸರ ಸ್ನೇಹಿ ಮನೆಗಳನ್ನು ನಿರ್ಮಿಸಬಹುದು. ಆ ದೃಶ್ಯಗಳನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ.

1.05 ಲಕ್ಷ ದಂಡ ವಸೂಲಿ ಮಾಡಿದ ಜಲಮಂಡಳಿ

ಕುಡಿಯುವ ನೀರಿನ ಅಭಾವದ ಹಿನ್ನಲೆ ಕಾವೇರಿ ನೀರು ದುರುಪಯೋಗ ಮಾಡದಂತೆ ಜಲಮಂಡಳಿ ಸೂಚನೆ ನೀಡಿತ್ತು. ಆದಾಗ್ಯೂ ಹಲವೆಡೆ ನೀರಿನ ದುಂದುವೆಚ್ಚ ಮಾಡುವುದು ಕಂಡುಬರುತ್ತಿದೆ. ಕಾವೇರಿ ನೀರಿನಿಂದ ಕಾರು ತೊಳೆಯುವುದು, ಸ್ವಚ್ಛತೆ ಸೇರಿ ಅನ್ಯ ಉದ್ದೇಶಗಳಿಂದ ಕಾವೇರಿ ನೀರು ದುರುಪಯೋಗ ಮಾಡಿದವರಿಗೆ ಜುಲ್ಮಾನೆ ವಿಧಿಸಲಾಗಿದೆ.

ನೀರಿನ ದುರ್ಬಳಕೆ ಮಾಡಿದರೆ ಮೊದಲು ಕನಿಷ್ಠ 5,000 ರೂಪಾಯಿ ದಂಡವನ್ನು ವಿಧಿಸಲಾಗುವುದು. ಇದೇ ತಪ್ಪನ್ನು ಮತ್ತೆ ಮತ್ತೆ ಮಾಡಿದರೆ ಕನಿಷ್ಠ ದಂಡ ಶುಲ್ಕದ ಮೇಲೆ 500 ರೂಪಾಯಿ ಹೆಚ್ಚುವರಿ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಚ್ಚರಿಕೆ ನೀಡಿದೆ.

ಬೆಂಗಳೂರು ಜಲ ಮಂಡಳಿಯ ಎಚ್ಚರಿಕೆ ಏನು?

ಈ ಬಗ್ಗೆ ಬೆಂಗಳೂರು ಜಲ ಮಂಡಳಿ ಪ್ರಕಟಣೆಯನ್ನು ಹೊರಡಿಸಿದ್ದು, ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ. “ಬೆಂಗಳೂರು ಮಹಾನಗರದಲ್ಲಿ ಕಾಯಂ ನಿವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆ ಇದೆ ಎಂದು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯಕವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿತ ಕಂಡಿದೆ. ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ.

Continue Reading
Advertisement
Side Effects Of Pillow
ಆರೋಗ್ಯ2 mins ago

Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

Naveen Polishetty
ಸಿನಿಮಾ7 mins ago

Naveen Polishetty: ಅಮೆರಿಕದಲ್ಲಿ ಬೈಕ್‌ ಅಪಘಾತ; ಅನುಷ್ಕಾ ಶೆಟ್ಟಿ ಜತೆ ತೆರೆ ಹಂಚಿಕೊಂಡಿದ್ದ ನಟನಿಗೆ ಗಾಯ

Hardik Pandya
ಕ್ರೀಡೆ22 mins ago

Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

money guide
ಮನಿ-ಗೈಡ್32 mins ago

Money Guide: ಗಮನಿಸಿ; ಏ. 1ರಿಂದ ಬದಲಾಗುತ್ತವೆ ಈ ಎಲ್ಲ ಹಣಕಾಸು ನಿಯಮಗಳು

IPL 2024-CSKRCB
ಕ್ರೀಡೆ45 mins ago

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

Prithviraj Sukumaran
ಸಿನಿಮಾ56 mins ago

Prithviraj Sukumaran: ಪೃಥ್ವಿರಾಜ್ ಸುಕುಮಾರನ್‌ ಅಭಿನಯದ ‘ಆಡುಜೀವಿತಂ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ!

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Lok Sabha Election 202460 mins ago

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Summer Fashion
ಫ್ಯಾಷನ್1 hour ago

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!

job alert
ಉದ್ಯೋಗ1 hour ago

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Aditi Rao Hydari engaged to Siddharth
ಟಾಲಿವುಡ್1 hour ago

Aditi Rao Hydari: ಎಂಗೇಜ್‌ ಆಗಿರುವ ಫೋಟೊ ಶೇರ್‌ ಮಾಡಿದ ಅದಿತಿ ರಾವ್ ಹೈದರಿ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20244 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20246 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ13 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌