ರೈಡ್ ಕ್ಯಾನ್ಸಲ್​ ಮಾಡಲು ಉಬರ್​ ಚಾಲಕ ಕೊಟ್ಟ ಕಾರಣವನ್ನು ಮೆಚ್ಚಿಕೊಂಡ ಯುವತಿ; ನೆಟ್ಟಿಗರಿಂದಲೂ ಹೊಗಳಿಕೆ - Vistara News

ವೈರಲ್ ನ್ಯೂಸ್

ರೈಡ್ ಕ್ಯಾನ್ಸಲ್​ ಮಾಡಲು ಉಬರ್​ ಚಾಲಕ ಕೊಟ್ಟ ಕಾರಣವನ್ನು ಮೆಚ್ಚಿಕೊಂಡ ಯುವತಿ; ನೆಟ್ಟಿಗರಿಂದಲೂ ಹೊಗಳಿಕೆ

ಕ್ಯಾಬ್​ ಡ್ರೈವರ್​ಗಳಿಗೂ ಈ ಕ್ಯಾನ್ಸಲ್​ ಎಂಬ ಆಯ್ಕೆ ಇರುತ್ತದೆ. ಅವರೂ ಕೂಡ ಒಮ್ಮೊಮ್ಮೆ ನಮ್ಮ ರೈಡ್​ ರಿಕ್ವೆಸ್ಟ್​​ನ್ನು ಒಪ್ಪಿಕೊಂಡು ಸ್ವಲ್ಪ ಸಮಯದ ಬಳಿಕ ಅದನ್ನು ರದ್ದುಗೊಳಿಸುವುದನ್ನು ನೋಡಿದ್ದೇವೆ.

VISTARANEWS.COM


on

Uber Driver Refuses Ride Because He is Sleepy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಬರ್​, ಓಲಾ ಕ್ಯಾಬ್​​ಗಳನ್ನು ಬುಕ್ ಮಾಡಿಯಾದ ಮೇಲೆ ಕೆಲವೊಮ್ಮೆ ನಾವು ಅದನ್ನು ಕ್ಯಾನ್ಸಲ್​ ಮಾಡುತ್ತೇವೆ. ಈ ಕ್ಯಾಬ್​​ಗಳನ್ನು ಬುಕ್ ಮಾಡಿಯಾದ ಮೇಲೆ ನಾವು ಆ್ಯಪ್​ ನೋಡಿ ಡ್ರೈವರ್ ನಮ್ಮ ಲೊಕೇಶನ್​ ತಲುಪುವ ಸಮಯ ಸೇರಿ, ಚಾಲಕ ಬರುತ್ತಿರುವ ಮಾರ್ಗವನ್ನೆಲ್ಲ ತಿಳಿದುಕೊಳ್ಳಬಹುದು. ಹೀಗೆ ಕೆಲವೊಮ್ಮ ವಾಹನ ಬುಕ್ ಮಾಡಿಯಾದ ಮೇಲೆ, ಚಾಲಕನ ಸಮಯ ನಮಗೆ ಸರಿ ಹೊಂದದೆ ಇದ್ದರೆ, ಆತ ಬರಲು ವಿಳಂಬ ಮಾಡಿದರೆ ಅಥವಾ ಲೊಕೇಶನ್​ ತಲುಪಿದ ಮೇಲೆ ನಾವು ಹತ್ತಬೇಕಾದ ಕ್ಯಾಬ್​ ಸ್ವಚ್ಛವಾಗಿಲ್ಲದೆ ಇದ್ದರೆ, ನಾವು ಬುಕ್ಕಿಂಗ್​ನ್ನು ಕ್ಯಾನ್ಸಲ್​ ಮಾಡುತ್ತೇವೆ ಮತ್ತು ನಾವೇಕೆ ಕ್ಯಾಬ್​ ಕ್ಯಾನ್ಸಲ್​ ಮಾಡುತ್ತಿದ್ದೇವೆ ಎಂಬುದಕ್ಕೆ ಕಾರಣವನ್ನೂ ಕೊಡುತ್ತೇವೆ.

ಇನ್ನೊಂದು ಕಡೆ ಕ್ಯಾಬ್​ ಡ್ರೈವರ್​ಗಳಿಗೂ ಈ ಕ್ಯಾನ್ಸಲ್​ ಎಂಬ ಆಯ್ಕೆ ಇರುತ್ತದೆ. ಅವರೂ ಕೂಡ ಒಮ್ಮೊಮ್ಮೆ ನಮ್ಮ ರೈಡ್​ ರಿಕ್ವೆಸ್ಟ್​​ನ್ನು ಒಪ್ಪಿಕೊಂಡು ಸ್ವಲ್ಪ ಸಮಯದ ಬಳಿಕ ಅದನ್ನು ರದ್ದುಗೊಳಿಸುವುದನ್ನು ನೋಡಿದ್ದೇವೆ. ಕೆಲವು ಡ್ರೈವರ್​ಗಳು ತಮ್ಮ ಕಸ್ಟಮರ್​ಗೆ ಕರೆ ಮಾಡಿಕೊಂಡು, ಹೋಗಬೇಕಾದ ಸ್ಥಳ ಯಾವುದೆಂದು ಕೇಳಿ ಬಳಿಕ ಕ್ಯಾನ್ಸಲ್​ ಮಾಡುತ್ತಾರೆ. ಅವರೇಕೆ ನಮ್ಮ ರೈಡ್​ ಮನವಿ ತಿರಸ್ಕರಿಸಿದರು ಎಂಬುದೇ ನಮಗೆ ಅರ್ಥವಾಗುವುದಿಲ್ಲ.

ಹೀಗಿರುವಾಗ ಬೆಂಗಳೂರಿನ ಉಬರ್​ ಡ್ರೈವರ್​​ ಒಬ್ಬ ಅತ್ಯಂತ ಪ್ರಾಮಾಣಿಕವಾಗಿ ಕಾರಣ ಕೊಟ್ಟು ಯುವತಿಯೊಬ್ಬಳ ರೈಡ್​ ರಿಕ್ವೆಸ್ಟ್​​ನ್ನು ರದ್ದುಗೊಳಿಸಿದ್ದಾನೆ. ಆ ಯುವತಿಯ ಹೆಸರು ಅಶ್ಮಿತಾ ಎಂದಾಗಿದ್ದು, ತಮಗಾದ ಅನುಭವವನ್ನು ಹೇಳಿಕೊಂಡಿದ್ದಾರೆ ಮತ್ತು ಚಾಲಕನ ಪ್ರಾಮಾಣಿಕತೆ ಮೆಚ್ಚುವಂಥದ್ದು ಎಂದಿದ್ದಾರೆ. ನಾನು ಊಬರ್​​ನಲ್ಲಿ ಕ್ಯಾಬ್​ ಬುಕ್​ ಮಾಡಿದಾಗ ಭರತ್​ ಎಂಬ ಚಾಲಕ ಅದನ್ನು ಸ್ವೀಕರಿಸಿದ. ಆದರೆ ಕೆಲವೇ ಹೊತ್ತಲ್ಲಿ ಆ್ಯಪ್​​ ಮೂಲಕ ನನಗೆ ಸಂದೇಶ ಕಳಿಸಿ, ‘ನಾನು ಈ ರೈಡ್​​ ಕ್ಯಾನ್ಸಲ್​ ಮಾಡುತ್ತಿದ್ದೇನೆ. ಯಾಕೆಂದರೆ ನನಗೆ ತುಂಬ ನಿದ್ದೆ ಬರುತ್ತಿದೆ’ ಎಂದು ಹೇಳಿದ. ಆತ ಪ್ರಾಮಾಣಿಕವಾದ ಕಾರಣವನ್ನೇ ಕೊಟ್ಟು ಕ್ಯಾನ್ಸಲ್​ ಮಾಡಿಕೊಂಡ ಎಂದಿದ್ದಾರೆ. ಹಾಗೇ, ಆತನ ಸಂದೇಶದ ಸ್ಕ್ರೀನ್​ಶಾಟ್​​ಗಳನ್ನೂ ಕಳಿಸಿದ್ದಾರೆ.

ಇದನ್ನೂ ಓದಿ: ವೈರಲ್‌ ನ್ಯೂಸ್ | ಅಧ್ಯಾಪಕರ ಮನೆಗೆ ಕನ್ನ ಹಾಕಿದ ಕಳ್ಳನ ಗುರುಭಕ್ತಿ ಹೀಗಿತ್ತು!

ಇದನ್ನು ನೋಡಿದ ನೆಟ್ಟಿಗರು ಆ ಡ್ರೈವರ್ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಹಾಗೇ, ತಮಗೆ ಆದ ಕೆಲವು ಕೆಟ್ಟ ಅನುಭವಗಳನ್ನೂ ಹಂಚಿಕೊಂಡಿದ್ದಾರೆ. ‘ನನಗೊಂದು ಕೆಟ್ಟ ಅನುಭವ ಆಗಿತ್ತು. ತಡರಾತ್ರಿ 3ಗಂಟೆ ಹೊತ್ತಿಗೆ ನಾನು ಕ್ಯಾಬ್​​ನಲ್ಲಿ ಹೋಗುತ್ತಿದ್ದೆ. ಆ ಡ್ರೈವರ್​ ಮಾರ್ಗ ಮಧ್ಯೆ ಗಾಡಿ ನಿಲ್ಲಿಸಿ, ನನಗೆ ನಿದ್ದೆ ಬರುತ್ತಿದೆ, ಮುಂದೆ ಹೋಗಲು ಸಾಧ್ಯವೇ ಆಗುತ್ತಿಲ್ಲ ಎಂದು ಗಾಡಿ ನಿಲ್ಲಿಸಿಯೇ ಬಿಟ್ಟಿದ್ದ. ಆದರೆ ಈ ಡ್ರೈವರ್ ಪ್ರಾಮಾಣಿಕ’ ಎಂದು ಒಬ್ಬರು ಕಮೆಂಟ್ ಬರೆದಿದ್ದಾರೆ. ಹಾಗೇ ಇನ್ನೊಬ್ಬರು ಕಮೆಂಟ್ ಮಾಡಿ, ‘ನಾನೊಂದು ದಿನ ಕ್ಯಾಬ್​ ಬುಕ್​ ಮಾಡಿದೆ. ಕ್ಯಾಬ್​ ಬುಕ್​ ಆಗಿ ಐದು ನಿಮಿಷವಾದರೂ ಆ ಚಾಲಕ ತನ್ನ ಜಾಗದಿಂದ ಕದಲಲಿಲ್ಲ. ನಾನು ಆತನಿಗೆ ಕರೆ ಮಾಡಿ ಪ್ರಶ್ನಿಸಿದರೆ, ನಾನು ನಿಮ್ಮ ಕರೆಗಾಗಿಯೇ ಕಾಯುತ್ತಿದ್ದೆ ಎಂದು ಹೇಳಿದ, ತೀರ ಬಾಲಿಶ ಅನ್ನಿಸಿಬಿಟ್ಟಿತು’ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

Lok Sabha Election 2024: ಕರುನಾಡಿನೆಲ್ಲೆಡೆ ಸಂಭ್ರಮದ ಚುನಾವಣೆ ನಡೆಯುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ವಧು-ವರರಿಂದಲೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಕ್ಕು ಚಲಾವಣೆ ಮಾಡಿದ್ದಾರೆ. ಚಾಮರಾಜನಗರದಲ್ಲಿ ವರನೊಬ್ಬ ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಬಂದರೆ, ಇತ್ತ ಚಿಕ್ಕಮಗಳೂರಲ್ಲಿ ವಧು ಹಸೆಮಣೆ ಏರುವ ಮುನ್ನ ಮತದಾನ ಮಾಡಿದ್ದಾರೆ.

VISTARANEWS.COM


on

By

Lok sabha election 2024
Koo

ಚಾಮರಾಜನಗರ/ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok sabha Election 2024) ಹಿನ್ನೆಲೆಯಲ್ಲಿ ಮತದಾನದ ಹಬ್ಬ ಬಿರುಸಿನ ನಡೆಯುತ್ತಿದೆ. ವಿಶೇಷ ಚೇನತರು, ವೃದ್ಧರೆನ್ನದೆ ಎಲ್ಲರೂ ಸಂಭ್ರಮದಿಂದ ಮತಗಳನ್ನು ಚಲಾವಣೆ ಮಾಡುತ್ತಿದ್ದಾರೆ. ಎಲ್ಲರ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ, ನೂತನ ವರ- ವಧುಗಳೂ ಸಹ ವಿವಾಹಕ್ಕೂ ಮುಂಚೆ ಮತಗಟ್ಟೆಗೆ ಬಂದು ಮತವನ್ನು ಚಲಾಯಿಸುವ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಈ ಮೂಲಕ ಎಲ್ಲರೂ ಮತದಾನ ಮಾಡುವಂತೆ ಕರೆ ಕೊಟ್ಟಿದ್ದಾರೆ.

ಮತ ಚಲಾವಣೆ ಮಾಡಿದ ವರ ಚೇತನ್‌

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ವರನೊಬ್ಬ ಮತಗಟ್ಟೆಗೆ ಓಡೋಡಿ ಬಂದು ಮತ ಚಲಾಯಿಸಿದ್ದಾರೆ. ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಮತಕೇಂದ್ರಕ್ಕೆ ಓಡೋಡಿ ಹೋದ ವರ ವೋಟ್‌ ಹಾಕಿ ನಿರಾಳರಾದರು. ವರ ಚೇತನ್ ಎಂಬುವವರು ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆದರು. ಚೇತನ್‌ ಅವರು ದೀಪಿಕಾ ಎಂಬುವರ ಜತೆಗೆ ವಿವಾಹವಾಗುತ್ತಿದ್ದು, ತಮ್ಮ ಮುಹೂರ್ತದ ವಸ್ತ್ರದಲ್ಲೇ ಬಂದು ವೋಟ್‌ ಹಾಕಿದ್ದಾರೆ.

ಮುಹೂರ್ತಕ್ಕೂ ಮುನ್ನ ವಧುವಿನ ಮತದಾನ

ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕೊತ್ತುಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧುವೊಬ್ಬರು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ. ಬಳಿಕ ಹಸೆಮಣೆ ಏರಿದ್ದಾರೆ.

ಈ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಕುಂದೂರಿನ ತಳವಾರದ ಸೌಮ್ಯ ಅವರು ಮೂಡಿಗೆರೆಯ ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Lok Sabha Election 2024: ಆಪರೇಷನ್‌ಗೂ ಮುನ್ನ ಆಂಬ್ಯುಲೆನ್ಸ್‌ನಲ್ಲಿ ಬಂದು ವೋಟ್‌ ಮಾಡಿದ ಉತ್ಸಾಹಿ ಮತದಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಉತ್ಸಾಹಿ ಮತದಾರರೊಬ್ಬರು ಶಸ್ತ್ರಚಿಕಿತ್ಸೆಗೂ ಮುನ್ನ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಮುರಳಿಧರ್‌ ಎಂಬುವವರು ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆಗಿದೆ. 39 ವರ್ಷದ ಎಚ್‌.ಎನ್ ಮುರಳಿಧರ್ ಶುಕ್ರವಾರ ಮಧ್ಯಾಹ್ನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅನಾರೋಗ್ಯದ ನಡುವೆಯೂ ನೋವಿನಲ್ಲೂ ಮತಕೇಂದ್ರಕ್ಕೆ ಬಂದು ಮತವನ್ನು ಚಲಾಯಿಸಿದ್ದಾರೆ.

ಮನಿಪಾಲ್ ಆಸ್ಪತ್ರೆ ವೈಟ್‌ಫೀಲ್ಡ್‌ನ ಯೂರೋಲಾಜಿ, ರೋಬೋಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮುರಳಿಧರ್‌ಗೆ ಮೂತ್ರದ್ವಾರದಲ್ಲಿ 6 MM ಕಲ್ಲಿದೆ. ಹೀಗಾಗಿ ಮಧ್ಯಾಹ್ನ ಡಿಜೆ ಸ್ಟೆಂಟಿಂಗ್ ಸರ್ಜರಿ ಮಾಡಬೇಕಿದೆ. ಸರ್ಜರಿಗೂ ಮುನ್ನ ಖುದ್ದು ಆಂಬ್ಯುಲೆನ್ಸ್‌ ಮೂಲಕ ಬಂದ ಮುರಳಿಧರ್‌ ಅವರು ಮತದಾನ ಮಾಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದರೂ, ಡೋಂಟ್‌ ಕೇರ್‌ ಮಾಡದ ಮುರಳಿಧರ್‌ ಶಸ್ತ್ರಚಿಕಿತ್ಸೆಗೂ ಮುನ್ನ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಮಾದರಿ ಆಗಿದ್ದಾರೆ.

ಇದನ್ನೂ ಓದಿ: Lok Sabha Election 2024: ಮತದಾರರು ಜಸ್ಟ್‌ ಮಿಸ್‌; ಮತಗಟ್ಟೆ ಸಮೀಪವೇ ನೆಲಕ್ಕುರುಳಿದ ಬೃಹತ್ ಮರ, ಕಾರು ಜಖಂ

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

Narendra Modi: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಜನ ಮತದಾನ ಮಾಡುತ್ತಿದ್ದಾರೆ. ಇದರ ಮಧ್ಯೆಯೇ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿ, ಅಜ್ಜಿಯೊಬ್ಬರು ಕನ್ನಡದಲ್ಲಿ ಹಾಡು ಬರೆದು, ಅದನ್ನು ರಾಗವಾಗಿ ಹಾಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Narendra Modi
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಭರಾಟೆ ಜೋರಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪರವಾದ ಅಲೆ ಇದೆ ಎಂದು ಹೇಳಲಾಗುತ್ತಿದೆ. ಚುನಾವಣೆ ಇರಲಿ, ಇಲ್ಲದಿರಲಿ, ಮಕ್ಕಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರು ಅಚ್ಚುಮೆಚ್ಚಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಕರ್ನಾಟಕದಲ್ಲಿ ಅಜ್ಜಿಯೊಬ್ಬರು ನರೇಂದ್ರ ಮೋದಿ ಅವರಿಗಾಗಿ ಹಾಡೊಂದನ್ನು ಬರೆದು, ಹಾಡಿದ್ದಾರೆ. ಕರ್ನಾಟಕ ಬಿಜೆಪಿ (Karnataka BJP) ಘಟಕವು ಅಜ್ಜಿಯ ಈ ವಿಡಿಯೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿಡಿಯೊ (Viral Video) ವೈರಲ್‌ ಆಗಿದೆ.

“ಮೋದಿಯ ನಿಂದಿಸದಿರೋ ಅಣ್ಣಗಳಿರಾ…” ಎಂಬುದಾಗಿ ಅಜ್ಜಿಯು ಹಾಡು ಬರೆದಿದ್ದು, ರಾಗವಾಗಿ ಮೋದಿ ಅವರನ್ನು ಮೆಚ್ಚಿ ಹಾಡು ಹಾಡಿದ್ದಾರೆ. ನರೇಂದ್ರ ಮೋದಿ ಅವರು ದೊರೆ, ಉತ್ತಮ ಆಡಳಿತಗಾರ, ಭ್ರಷ್ಟಾಚಾರವನ್ನು ನಿಗ್ರಹಿಸಿದವರು, ಭಯೋತ್ಪಾದಕರನ್ನು ಓಡಿಸಿದವರು, ವಿವೇಕಾನಂದರಿಗೆ ಸಮಾನವಾದವರು, ಭಾರತೀಯರ ಮೇಲೆ ಮೋದಿ ಹೊಂದಿರುವ ಪ್ರೇಮ, ದೇಶದ ಮೇಲೆ ಅಭಿಮಾನ ಸೇರಿ ಹಲವು ಅಂಶಗಳನ್ನು ಉಲ್ಲೇಖಿಸಿ ಅಜ್ಜಿಯೊಬ್ಬರು ಹಾಡು ಹಾಡಿದ್ದಾರೆ.

ಅಜ್ಜಿ ಹಾಡಿನ ಸ್ಯಾಂಪಲ್

ಮೋದಿಯ ನಿಂದಿಸದಿರೋ ಅಣ್ಣಗಳಿರಾ
ಸಂತಾನ ನಿಂತಿಸದಿರೋ
ಧರೆಯನುದ್ಧರಿಸಲು ಬಂದ
ದೊರೆಯ ನಿಂದಿಸದರಿ ಅಣ್ಣಗಳಿರಾ
ಮೋದಿಯ ನಿಂದಿಸದಿರೋ…

ಅಜ್ಜಿಯ ವಿಡಿಯೊವನ್ನು ಹಂಚಿಕೊಂಡಿರುವ ಬಿಜೆಪಿಯು, ಕಾಂಗ್ರೆಸ್‌ಗೆ ತಿರುಗೇಟು ನೀಡಿದೆ. “ಸ್ಟುಡಿಯೋದಲ್ಲಿ ರೆಕಾರ್ಡಿಂಗ್‌ ಮಾಡಿಸಿ ಪ್ರಚಾರ ಪಡೆದುಕೊಂಡು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುವುದಲ್ಲ ಸಿದ್ದರಾಮಯ್ಯನವರೇ, ಈ ಇಳಿ ವಯಸ್ಸಿನಲ್ಲೂ ತಂತ್ರ‌ಜ್ಞಾನ ಬಳಸದೆ ಮೋದಿಯವರ ಸಾಧನೆಯನ್ನು ವೃದ್ಧೆ ಓರ್ವರು ಹಾಡಿರುವ ಹಾಡನ್ನೊಮ್ಮೆ ಕೇಳಿ” ಎಂಬುದಾಗಿ ಸಿದ್ದರಾಮಯ್ಯ ಅವರು ಹಂಚಿಕೊಂಡ ವಿಡಿಯೊಗೆ ಬಿಜೆಪಿ ತಿರುಗೇಟು ನೀಡಿದೆ.

ಕಾಂಗ್ರೆಸ್‌ಅನ್ನು ಟೀಕಿಸಿದ ಅಜ್ಜಿ

ಅಜ್ಜಿಯು ಹಾಡು ಹಾಡುವ ಮುನ್ನ ಕಾಂಗ್ರೆಸ್ಸಿಗರನ್ನು ಟೀಕಿಸಿದ್ದಾರೆ. “500 ವರ್ಷದಿಂದ ದೇಶದಲ್ಲಿ ರಾಮಮಂದಿರ ನಿರ್ಮಾಣ ಆಗಿರಲಿಲ್ಲ. ಅದನ್ನು ನರೇಂದ್ರ ಮೋದಿ ಅವರು ಸಾಕಾರಗೊಳಿಸಿದ್ದಾರೆ. ಈಗ ಮೋದಿ ಬಗ್ಗೆ ಇಲ್ಲಸಲ್ಲದ ಮಾತನಾಡುತ್ತಾರೆ. ರಾಮ ಎದೆಯಲ್ಲಿದ್ದಾನೆ ಎಂದೆಲ್ಲ ಹೇಳುತ್ತಿದ್ದಾರೆ. ಇವರು ಇಷ್ಟು ದಿನ ಎಲ್ಲಿದ್ದರು” ಎಂಬುದಾಗಿ ಅಜ್ಜಿಯು ಟೀಕಿಸಿದ್ದಾರೆ. ಇದಾದ ಬಳಿಕ ಮೋದಿ ಕುರಿತು ಹಾಡುಹಾಡಿದ್ದಾರೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

Continue Reading

ವೈರಲ್ ನ್ಯೂಸ್

Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

Viral News: ತನ್ನನ್ನು ತಾನು ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ ಭೂಪನನ್ನು ಅರೆಸೈನಿಕ ಪಡೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಉತ್ತರ ಪ್ರದೇಶ ಮೂಲದ 24 ವರ್ಷದ ಸಂಗೀತ್‌ ಸಿಂಗ್‌ ಬಂಧಿತ ಆರೋಪಿ.

VISTARANEWS.COM


on

By

Koo

ನವದೆಹಲಿ: ವಿನಾಃಕಾರಣ ಬೂಟಾಟಿಕೆ ಮಾಡೋಕೆ ಹೋಗಿ ಕೆಲವರು ಪೇಚಿಗೆ ಸಿಲುಕುವ ಘಟನೆ ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ನವದೆಹಲಿ (New delhi) ಯಲ್ಲಿ ನಡೆದಿದೆ. ತನ್ನನ್ನು ತಾನು ಸಿಂಗಾಪುರ ಏರ್‌ಲೈನ್ಸ್‌ (Singalore Airlines) ಪೈಲಟ್‌ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ ಭೂಪನನ್ನು ಅರೆಸೈನಿಕ ಪಡೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Indira Gandhi International Airport) ದಲ್ಲಿ ಬಂಧಿಸಿದೆ. ಉತ್ತರ ಪ್ರದೇಶ ಮೂಲದ 24 ವರ್ಷದ ಸಂಗೀತ್‌ ಸಿಂಗ್‌ (Sangeeth Sing) ಬಂಧಿತ ಆರೋಪಿಯಾಗಿದ್ದಾನೆ.

ಸಿಂಗಾಪುರ ಪೈಲಟ್‌ ಸಮವಸ್ತ್ರ ಧರಿಸಿ, ಕುತ್ತಿಗೆ ಐಡಿ ಕಾರ್ಡ್‌ ಹಾಕಿಕೊಂಡು ದೆಹಲಿ ಮೆಟ್ರೋದ ಸ್ಕೈವಾಕ್‌ ಪ್ರದೇಶದಲ್ಲಿ ತಿರುಗಾಡುತ್ತಿದ್ದ ಸಂಗೀತ್‌, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF) ಕಣ್ಣಿಗೆ ಬಿದ್ದಿದ್ದ. ಈತ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನ್ನು ಗಮನಿಸಿದ ಸಿಬ್ಬಂದಿ ಆತನನ್ನು ತಡೆದು ವಿಚಾರಿಸಿದರು. ವಿಚಾರಣೆ ವೇಳೆ ಆತನ ಬಳಿ ಇದ್ದ ಐಡಿ ಕಾರ್ಡ್‌ ನಕಲಿ ಎಂಬುದು ಬಯಲಾಗಿದೆ. ಅಷ್ಟೇ ಅಲ್ಲದೇ ಆತನ ಬಳಿ ಇದ್ದ ಎಲ್ಲಾ ದಾಖಲೆಗಳು ಕೂಡ ನಕಲಿಯಾಗಿದ್ದವು. ತನ್ನನ್ನು ತಾನು ಸಿಂಗಾಪುರ ಏರ್‌ಲೈನ್ಸ್‌ ಸಿಬ್ಬಂದಿ ಎಂಬುದನ್ನು ಬಿಂಬಿಸಿಕೊಳ್ಳಲು ಆನ್‌ಲೈನ್‌ ಆಪ್‌ ಬ್ಯುಸಿನೆಸ್‌ ಕಾರ್ಡ್‌ ಮೇಕರ್‌ ಸಹಾಯದಿಂದ ನಕಲಿ ಐಡಿ ತಯಾರು ಮಾಡಿದ್ದ. ಅಲ್ಲದೇ ದ್ವಾರಕಾದಿಂದ ಸಮವಸ್ತ್ರವನ್ನು ಖರೀದಿ ಮಾಡಿದ್ದ ಎಂಬುದು ವಿಚಾರಣೆ ವೇಳೆ ಬಟಾಬಯಲಾಗಿತ್ತು.

ಇನ್ನು ಸಂಗೀತ್‌ ಸಿಂಗ್‌ 2020ರಲ್ಲಿ ಮುಂಬೈನಲ್ಲಿ ಒಂದು ವರ್ಷದ ಏವಿಯೇಷನ್‌ ಕೋರ್ಸ್‌ ಮಾಡಿದ್ದ. ಬಳಿಕ ತನಗೆ ಸಿಂಗಾಪುರ ಏರ್‌ಲೈನ್ಸ್‌ನಲ್ಲಿ ಪೈಲಟ್‌ ಆಗಿ ಕೆಲಸ ಸಿಕ್ಕಿದೆ ಎಂದು ತನ್ನ ಕುಟುಂಬಸ್ಥರಿಗೆ ಸುಳ್ಳು ಹೇಳಿ ನಂಬಿಸಿದ್ದ. ಇದೀಗ ಸಂಗೀತ್‌ನನ್ನು ಅರೆಸ್ಟ್‌ ಮಾಡಿರುವ ಪೊಲೀಸರು ಆತನ ವಿರುದ್ಧ ಕೇಸ್‌ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ 420(ವಂಚನೆ), 468( ವಂಚನೆ ಉದ್ದೇಶದಿಂದ ಪೋರ್ಜರಿ) ಹಾಗೂ 471(ನಕಲಿ ದಾಖಲೆಗಳನ ಬಳಕೆ) ಸೆಕ್ಷನ್‌ಗಳ ಅಡಿಯಲ್ಲಿ ಸಂಗೀತ್‌ ಸಿಂಗ್‌ ವಿರುದ್ಧ ಕೇಸ್‌ ದಾಖಲಿಸಲಾಗಿದೆ.

ಇದನ್ನೂ ಓದಿ: Viral News: ವಾಟರ್‌ ಪ್ಯೂರಿಫೈಯರ್‌ನಿಂದ ನೀರು ಕುಡಿದ ಬುದ್ಧಿವಂತ ಮಂಗ; ವಿಡಿಯೊ ನೀವೂ ನೋಡಿ

ಎರಡು ತಿಂಗಳ ಹಿಂದೆಐೂ ಇಂತಹದ್ದೇ ಒಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿತ್ತು. ಪಾತೂರ್ ಪಟ್ಟಣದ ಶಹಬಾಬು ಉರ್ದು ಪ್ರೌಢಶಾಲೆಯಲ್ಲಿ 12 ನೇ ತರಗತಿ ಮೊದಲ ಪರೀಕ್ಷೆಯ ಸಮಯದಲ್ಲಿ ಈ ಘಟನೆ ನಡೆದಿತ್ತು. ಪಂಗ್ರಾ ಬಂಡಿ ಮೂಲದ ಅನುಪಮ್ ಮದನ್ ಖಂಡ್ರೆ ಎಂಬಾತ ತನ್ನ ಸಹೋದರಿಯ ಮೋಸಕ್ಕೆ ಸಹಾಯ ಮಾಡಲು ಉತ್ತರ ಪ್ರತಿಗಳನ್ನು ಕಳ್ಳಸಾಗನೆ ಮಾಡಲು ‘ನಕಲಿ’ ಪೊಲೀಸ್ ಆಗಿ ಮಾರ್ಪಟ್ಟಿದ್ದ. ಈ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಕಿಶೋರ್ ಶೆಲ್ಕೆ ಮತ್ತು ಅವರ ತಂಡ ಭದ್ರಗೆಗಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿತ್ತು. ತನ್ನ ‘ಹಿರಿಯ ಅಧಿಕಾರಿಗಳನ್ನು’ ನೋಡಿದ ಖಂಡ್ರೆ ಅವರಿಗೆ ಸೆಲ್ಯೂಟ್ ಹೊಡೆದಿದ್ದ. ಆದರೆ ಪೊಲೀಸರಂತೆ ಸೆಲ್ಯೂಟ್ ಹೊಡೆಯಲು ಆತನಿಗೆ ಸಾಧ್ಯವಾಗಿರಲಿಲ್ಲ. ಆತ ತಪ್ಪಾಗಿ ಸೆಲ್ಯೂಟ್​ ಹೊಡೆದಾಗ ಹಿರಿಯ ಅಧಿಕಾರಿಗಳಿಗೆ ಅನುಮಾನ ಹುಟ್ಟು ಹಾಕಿತ್ತು. ಆತನ ಸೆಲ್ಯೂಟ್ ಪ್ರೋಟೋಕಾಲ್​ಗೆ ಅನುಗುಣವಾಗಿರಲಿಲ್ಲ. ಜತೆಗೆ ಸಮವಸ್ತ್ರದ ನಾಮಫಲಕವು ತಪ್ಪಾಗಿತ್ತು. ತಕ್ಷಣವೇ ಅವರು ರೆಡ್ ಹ್ಯಾಂಡ್​ ಆಗಿ ಹಿಡಿದಿದ್ದರು.

Continue Reading

ಐಪಿಎಲ್ 2024

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

IPL 2024: IPL 2024: ಹೈದರಾಬಾದ್‌ನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಇದರ ಮಧ್ಯೆಯೇ, ಹೈದರಾಬಾದ್‌ ಫ್ಯಾನ್ಸ್‌ಗೆ ಆರ್‌ಸಿಬಿ ಫ್ಯಾನ್ಸ್‌ ತಿರುಗೇಟು ನೀಡಿದ್ದಾರೆ.

VISTARANEWS.COM


on

IPL 2024
Koo

ಹೈದರಾಬಾದ್:‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2024) ಎಂದರೆ, ಅದು ಸ್ಟೇಡಿಯಂನಲ್ಲಿ ಕೇವಲ ಆಟಗಾರರ ನಡುವಿನ ಕಾಳಗ ಅಲ್ಲ. ಮೈದಾನದಲ್ಲಿ ಪಂದ್ಯ ಕುತೂಹಲ ಹಂತ ತಲುಪಿದಾಗ, ಯಾವುದೇ ತಂಡ ಸೋತಾಗ ಎದುರಾಳಿ ತಂಡದ ಅಭಿಮಾನಿಗಳು ಕೂಡ ತಿರುಗೇಟು ನೀಡುತ್ತಾರೆ. ಅದರಲ್ಲೂ, ಆರ್‌ಸಿಬಿ ಅಭಿಮಾನಿಗಳ ಅಬ್ಬರ ಮೈದಾನದಲ್ಲೂ ಅಥವಾ ಹೊರಗೂ ಜೋರಾಗಿರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು (RCB Fans) ಎಸ್‌ಆರ್‌ಎಚ್‌ ಅಭಿಮಾನಿಗಳ (SRH Fans) ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡಿದ್ದಾರೆ.

ಹೌದು, ಪ್ರಸಕ್ತ ಆವೃತ್ತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಎಸ್‌ಆರ್‌ಎಚ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಸೋಲನುಭವಿಸಿದ್ದಾಗ ಎಸ್‌ಆರ್‌ಎಚ್‌ ಅಭಿಮಾನಿಗಳು ಸುಮ್ಮನಿರಿ, ಬಾಯಿಮುಚ್ಚಿ ಎಂಬ ರೀತಿಯಲ್ಲಿ ಸನ್ನೆ ಮಾಡಿದ್ದರು. ಇದು ಸಹಜವಾಗಿಯೇ ಆರ್‌ಸಿಬಿ ಅಭಿಮಾನಿಗಳನ್ನು ಕೆರಳಿಸಿತ್ತು. ಆದರೆ, ಗುರುವಾರ (ಏಪ್ರಿಲ್‌ 25) ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. ಇದಾದ ಬಳಿಕ ಆರ್‌ಸಿಬಿ ಅಭಿಮಾನಿಗಳು ಕೂಡ ಗಪ್‌ ಚುಪ್‌ ಎಂಬ ಸನ್ನೆ ಮಾಡುವ ಮೂಲಕ ಎಸ್‌ಆರ್‌ಎಚ್‌ ಅಭಿಮಾನಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಈ ಗೆಲುವಿನೊಂದಿಗೆ ಆರ್​ಸಿಬಿಗೆ ಒಟ್ಟು ನಾಲ್ಕು ಅಂಕಗಳು ದೊರಕಿದವು.

ಕೊಹ್ಲಿ, ಪಾಟೀದಾರ್ ಅರ್ಧ ಶತಕ

ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿಯ ಪ್ರದರ್ಶನವೇನೂ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್​ ವಿರಾಟ್ ಕೊಹ್ಲಿ ಮತ್ತೆ ಸ್ಟ್ರೈಕ್​ ರೇಟ್​ ಟೀಕೆಯನ್ನು ಮರೆತು 43 ಎಸೆತಕ್ಕೆ 51 ರನ್ ಬಾರಿಸಿದರು. ಅದಕ್ಕೆ ಅವರು ಟೀಕೆಯನ್ನೂ ಎದುರಿಸಿದರು. ಆದರೆ, ರಜತ್ ಪಾಟೀದಾರ್​ 20 ಎಸೆತಕ್ಕೆ 50 ರನ್ ಬಾರಿಸಿ ತಂಡಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾದರು. ಕ್ಯಾಮೆರೂನ್ ಗ್ರೀನ್​ 37 ರನ್ ಬಾರಿಸಿದರೆ ಫಾಫ್​​ ಡು ಪ್ಲೆಸಿಸ್​ 25 ಕೊಡುಗೆ ಕೊಟ್ಟರು. ಹೀಗಾಗಿ ಪೇಚಾಡಿ 200 ರನ್​ಗಳ ಗಡಿ ದಾಟಿತು. ಬೌಲಿಂಗ್‌ನಲ್ಲಿ ಪರಾಕ್ರಮ ತೋರಿದ ಆರ್‌ಸಿಬಿ ಬೌಲರ್‌ಗಳು ತಂಡಕ್ಕೆ 35 ರನ್‌ಗಳ ಗೆಲುವು ತಂದುಕೊಟ್ಟರು.

ಇದನ್ನೂ ಓದಿ: Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Continue Reading
Advertisement
Congress election camapaign meeting in haliyala
ರಾಜಕೀಯ11 mins ago

Lok Sabha Election 2024: ಬಿಜೆಪಿಯವರಿಂದ ಹಿಂದೂ ಧರ್ಮಕ್ಕೆ ಅಪಾಯ ಎಂದ ಅಂಜಲಿ ನಿಂಬಾಳ್ಕರ್

Modi in Karnataka PM Modi to address rally in Bengaluru Here live video
ಪ್ರಮುಖ ಸುದ್ದಿ16 mins ago

PM Narendra Modi: “ಇವಿಎಂ ಅಪಪ್ರಚಾರ ಮಾಡುವವರಿಗೆ ಕಪಾಳಮೋಕ್ಷ…” ಸುಪ್ರೀಂ ಕೋರ್ಟ್‌ ತೀರ್ಪಿಗೆ ಪ್ರಧಾನಿ ಸ್ವಾಗತ

Palki Sharma
ದೇಶ29 mins ago

Palki Sharma: ಬ್ರಿಟನ್‌ನಲ್ಲಿ ಭಾರತದ ಏಳಿಗೆ ಬಿಚ್ಚಿಟ್ಟ ಪತ್ರಕರ್ತೆ ಪಾಲ್ಕಿ ಶರ್ಮಾಗೆ ಮೋದಿ ಮೆಚ್ಚುಗೆ!

Lok sabha Election 2024
Lok Sabha Election 202432 mins ago

Lok Sabha Election 2024: ದುಬೈ, ಫಿಲಿಫೈನ್ಸ್‌ನಿಂದ ಬಂದು ಹಕ್ಕು ಚಲಾಯಿಸಿದ ಮತದಾರರು

Lok Sabha Election 2024 sandalwood celebrities reaction
Lok Sabha Election 202439 mins ago

Lok Sabha Election 2024: ಬುದ್ಧಿ ಇರೋರು ವೋಟ್‌ ಹಾಕ್ತಿದ್ದಾರೆ ಎಂದ ಕಿಚ್ಚ! ಉಳಿದ ತಾರೆಗಳು ಹೇಳಿದ್ದೇನು?

ಕರ್ನಾಟಕ47 mins ago

Lok sabha Election 2024: ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ನೇರವಾಗಿ ಮತಗಟ್ಟೆಗೆ ಬಂದ ನಾರಾಯಣ ಮೂರ್ತಿ

Lok Sabha Election 2024: Karnataka records 38.23% voter turnout; highest in Dakshina Kannda
ಕರ್ನಾಟಕ1 hour ago

Lok Sabha Election: ರಾಜ್ಯಾದ್ಯಂತ 1 ಗಂಟೆ ವೇಳೆಗೆ 38.23% ಮತದಾನ; ಎಲ್ಲಿ ಹೆಚ್ಚು? ಎಲ್ಲಿ ಕಡಿಮೆ?

Lok Sabha Election 2024 Kannada Celeb vote Pictures
ಸ್ಯಾಂಡಲ್ ವುಡ್1 hour ago

Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations
Lok Sabha Election 20241 hour ago

Lok Sabha Election 2024: ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok sabha election 2024
Lok Sabha Election 20242 hours ago

Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20243 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20244 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ10 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ23 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ23 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌