Rahul Gandhi: ಲಾಲ್‌ ಚೌಕ್‌ನಲ್ಲಿ ಧ್ವಜಾರೋಹಣ ವೇಳೆ ರಾಷ್ಟ್ರಧ್ವಜಕ್ಕಿಂತ ರಾಹುಲ್‌ ಗಾಂಧಿ ಕಟೌಟ್‌ ಎತ್ತರ, ಟೀಕಿಸಿದ ಜನ - Vistara News

ದೇಶ

Rahul Gandhi: ಲಾಲ್‌ ಚೌಕ್‌ನಲ್ಲಿ ಧ್ವಜಾರೋಹಣ ವೇಳೆ ರಾಷ್ಟ್ರಧ್ವಜಕ್ಕಿಂತ ರಾಹುಲ್‌ ಗಾಂಧಿ ಕಟೌಟ್‌ ಎತ್ತರ, ಟೀಕಿಸಿದ ಜನ

Rahul Gandhi: ರಾಹುಲ್‌ ಗಾಂಧಿ ಅವರು ಶ್ರೀನಗರ ಲಾಲ್‌ಚೌಕ್‌ನಲ್ಲಿ ತಿರಂಗಾ ಹಾರಿಸಿದ್ದಾರೆ. ಆದರೆ, ದೇಶದ ಧ್ವಜಕ್ಕಿಂತ ರಾಹುಲ್‌ ಗಾಂಧಿ ಕಟೌಟ್‌ ಎತ್ತರದಲ್ಲಿರುವುದರಿಂದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rahul Gandhi's Bharat Jodo Yatra will conclude today at srinagar, Kashmir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಭಾರತ್‌ ಜೋಡೊ ಯಾತ್ರೆಯ ಕೊನೆಯ ಹಂತದಲ್ಲಿರುವ ರಾಹುಲ್‌ ಗಾಂಧಿ (Rahul Gandhi) ಅವರು ಭಾನುವಾರ ಶ್ರೀನಗರದ ಲಾಲ್‌ ಚೌಕ್‌ನಲ್ಲಿ ತಿರಂಗಾ ಹಾರಿಸಿದ್ದಾರೆ. ಇದೇ ವೇಳೆ ರಾಷ್ಟ್ರಧ್ವಜಕ್ಕಿಂತ ರಾಹುಲ್‌ ಗಾಂಧಿ ಕಟೌಟ್‌ ಎತ್ತರದಲ್ಲಿರುವುದು ವಿವಾದಕ್ಕೆ ಕಾರಣವಾಗಿದೆ. ಈ ವಿಡಿಯೊ ಈಗ ವೈರಲ್‌ ಆಗಿದ್ದು, ಜನ ರಾಹುಲ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧ್ವಜಾರೋಹಣದ ಸ್ತಂಭಕ್ಕಿಂತ ಎತ್ತರದಲ್ಲಿ ರಾಹುಲ್‌ ಗಾಂಧಿ ಅವರ ಕಟೌಟ್‌ ಎತ್ತರದಲ್ಲಿದೆ. ಈ ವಿಡಿಯೊ ವೈರಲ್‌ ಆಗುತ್ತಲೇ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ದೇಶದ ಧ್ವಜಕ್ಕಿಂತ ರಾಹುಲ್‌ ಗಾಂಧಿ ಮಿಗಿಲಾದರೇ’ ಎಂದು ವ್ಯಕ್ತಿಯೊಬ್ಬರು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು, “ನರೇಂದ್ರ ಮೋದಿ ಸರ್ಕಾರವು 370ನೇ ವಿಧಿ ರದ್ದುಗೊಳಿಸಿದ ಕಾರಣಕ್ಕಾಗಿಯೇ ರಾಹುಲ್‌ ಗಾಂಧಿ ಲಾಲ್‌ ಚೌಕ್‌ನಲ್ಲಿ ತಿರಂಗಾ ಹಾರಿಸಲು ಸಾಧ್ಯವಾಗಿದೆ” ಎಂದು ಕುಟುಕಿದ್ದಾರೆ. “ಇದು ಕಾನೂನಿನ ಉಲ್ಲಂಘನೆ” ಎಂದೂ ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ರಾಹುಲ್‌ ಗಾಂಧಿ ಅವರು ಕೈಗೊಂಡ ಭಾರತ್‌ ಜೋಡೋ ಯಾತ್ರೆಯು ಸೋಮವಾರ (ಜನವರಿ 30) ಕಾಶ್ಮೀರದಲ್ಲಿ ಸಮಾರೋಪಗೊಳ್ಳಲಿದೆ. ಇದಕ್ಕೂ ಮೊದಲೇ ಅವರು ವಿವಾದಕ್ಕೆ ಗುರಿಯಾಗಿದ್ದಾರೆ.

ಇದನ್ನೂ ಓದಿ: Surgical Strike | ಸೇನೆ ಸಾಕ್ಷ್ಯ ಕೊಡಬೇಕಿಲ್ಲ, ಸ್ವಪಕ್ಷದ ದಿಗ್ವಿಜಯ್‌ ಸಿಂಗ್‌ಗೆ ರಾಹುಲ್‌ ಗಾಂಧಿ ತಿರುಗೇಟು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

X Server Down: ದೇಶಾದ್ಯಂತ ಎಕ್ಸ್‌ ಜಾಲತಾಣದ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

X Server Down: ಎಕ್ಸ್‌ ಸಾಮಾಜಿಕ ಜಾಲತಾಣದ ಸರ್ವರ್‌ ಡೌನ್‌ ಆಗಿದ್ದು, ಬಳಕೆದಾರರು ಪರದಾಡುತ್ತಿದ್ದಾರೆ. ಭಾರತದಲ್ಲಿ ಮಾತ್ರ ಸರ್ವರ್‌ ಡೌನ್‌ ಆಗಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಇದರ ಕುರಿತು ಎಕ್ಸ್‌ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ, ಸರ್ವರ್‌ ಡೌನ್‌ ಆಗಿರುವ ಬಗ್ಗೆ ಜಾಲತಾಣಗಳಲ್ಲಿ ಟ್ರೋಲ್‌ಗಳು, ಮೀಮ್‌ಗಳು ಹರಿದಾಡುತ್ತಿವೆ.

VISTARANEWS.COM


on

X Server Down
Koo

ಬೆಂಗಳೂರು: ಕರ್ನಾಟಕ (Karnataka) ಸೇರಿ ದೇಶಾದ್ಯಂತ ಎಕ್ಸ್‌ (ಮೊದಲು ಟ್ವಿಟರ್)‌ ಸಾಮಾಜಿಕ ಜಾಲತಾಣದ ಸರ್ವರ್‌ ಡೌನ್‌ (X Server Down) ಆಗಿದೆ. ಅದರಲ್ಲೂ, ವೆಬ್‌ ಯೂಸರ್‌ಗಳು (ಲ್ಯಾಪ್‌ಟಾಪ್‌, ಕಂಪ್ಯೂಟರ್ ಬಳಕೆದಾರರು)‌ ಹೆಚ್ಚಿನ ತೊಂದರೆ ಅನುಭವಿಸಿದ್ದು, ಬಳಕೆದಾರರು ಪರದಾಡುವಂತಾಗಿದೆ. ಕೆಲವರಿಗೆ ಅಪ್ಲಿಕೇಶನ್‌ನಲ್ಲೂ ಸಮಸ್ಯೆಯಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ (ಏಪ್ರಿಲ್‌ 26) ಮಧ್ಯಾಹ್ನ 3.23ರ ಸುಮಾರಿಗೆ ಟ್ವಿಟರ್‌ ಸರ್ವರ್‌ ಡೌನ್‌ ಆಗಿದೆ ಎಂದು ಡೌನ್‌ಡಿಟೆಕ್ಟರ್‌ ಮಾಹಿತಿ ನೀಡಿದೆ. ಶೇ.53ರಷ್ಟು ಜನ ವೆಬ್‌ನಲ್ಲಿ ಸಮಸ್ಯೆ ಎದುರಿಸಿದರೆ, ಶೇ.29ರಷ್ಟು ಮಂದಿಗೆ ಸರ್ವರ್‌ನಲ್ಲಿ ಸಮಸ್ಯೆ ಎದುರಾಗಿದೆ ಹಾಗೂ ಶೇ.18ರಷ್ಟು ಬಳಕೆದಾರರು ಅಪ್ಲಿಕೇಶನ್‌ನಲ್ಲಿ (App) ಸಮಸ್ಯೆ ಎದುರಿಸಿದ್ದಾರೆ. ಒಂದಷ್ಟು ಜನರಿಗೆ ಪೋಸ್ಟ್‌ಗಳು, ಅಪ್‌ಡೇಟ್‌ಗಳು ಕಾಣಿಸಿಲ್ಲ. ಇನ್ನೂ ಒಂದಷ್ಟು ಜನರ ಖಾತೆಗಳು ಲಾಗೌಟ್‌ ಆಗಿವೆ. ಕೆಲವೊಂದಿಷ್ಟು ಮಂದಿಗೆ ತಮ್ಮ ಪೋಸ್ಟ್‌ಗಳು ಅಪ್‌ಲೋಡ್‌ ಆಗಿಲ್ಲ.

ಎಕ್ಸ್‌ ಸಾಮಾಜಿಕ ಜಾಲತಾಣದ ಸರ್ವರ್‌ ಡೌನ್‌ ಆಗುತ್ತಲೇ ಬೇರೆ ಸಾಮಾಜಿಕ ಜಾಲತಾಣಗಳಲ್ಲಿ ಸರ್ವರ್‌ ಡೌನ್‌ ಕುರಿತು ದೂರುಗಳು, ಮೀಮ್‌ಗಳು ಹರಿದಾಡಿವೆ. ಇನ್ನೊಂದಿಷ್ಟು ಜನ ಎಕ್ಸ್‌ನಲ್ಲೂ ಟ್ರೋಲ್‌ ಮಾಡಿದ್ದಾರೆ. ಸರ್ವರ್‌ ಡೌನ್‌ ಆಗಿರುವ ಕುರಿತು ಇದುವರೆಗೆ ಟ್ವಿಟರ್‌ ಯಾವುದೇ ಮಾಹಿತಿ ನೀಡಿಲ್ಲ. ಬೇರೆ ದೇಶಗಳಲ್ಲೂ ಸಮಸ್ಯೆಯಾಗಿದೆ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಕೆಲ ತಿಂಗಳ ಹಿಂದಷ್ಟೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಹಾಗೂ ಯುಟ್ಯೂಬ್‌ ಸರ್ವರ್‌ಗಳು ಒಂದೇ ಕಾಲಕ್ಕೆ ಡೌನ್‌ ಆಗಿದ್ದವು. ಇಂಟರ್‌ನೆಟ್‌ ಟ್ರಾಫಿಕ್‌ ಮೇಲೆ ನಿಗಾ ಇರಿಸುವ ಡೌನ್‌ ಡಿಟೆಕ್ಟರ್‌ ಸಂಸ್ಥೆಯು ಯುಟ್ಯೂಬ್‌ ಬಳಕೆದಾರರ ಸಮಸ್ಯೆ ಕುರಿತು ಮಾಹಿತಿ ನೀಡಿತ್ತು. ಗೂಗಲ್‌ ಕಂಪನಿಯ ಯುಟ್ಯೂಬ್‌ನಲ್ಲಿ ವಿಡಿಯೊಗಳು ಸ್ಟ್ರೀಮ್‌ ಆಗುತ್ತಿಲ್ಲ. ಹೊಸ ವಿಡಿಯೊಗಳನ್ನು ಅಪ್‌ಲೋಡ್‌ ಮಾಡಲು ಕೂಡ ಆಗುತ್ತಿಲ್ಲ ಎಂಬುದಾಗಿ ನೂರಾರು ಜನ ದೂರುತ್ತಿದ್ದಾರೆ ಎಂಬುದಾಗಿ ತಿಳಿಸಿತ್ತು. ಯುಟ್ಯೂಬ್‌ ಬಳಕೆದಾರರು ಕೂಡ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊಗಳು ಸ್ಟ್ರೀಮ್‌, ಡೌನ್‌ಲೋಡ್‌ ಆಗದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Banking service down : ಸರ್ವರ್‌ ಸಮಸ್ಯೆಯಿಂದ ನೆಟ್ ಬ್ಯಾಂಕಿಂಗ್‌ ಸೇವೆಗಳಿಗೆ ಅಡಚಣೆ, ಗ್ರಾಹಕರ ಪರದಾಟ

Continue Reading

ದೇಶ

Congress Manifesto: ಮುಸಲ್ಮಾನರಿಗೆ ಸಂಪತ್ತು ಹಂಚಿಕೆ; ಮನಮೋಹನ್‌ ಸಿಂಗ್‌ ಹಳೆಯ ವಿಡಿಯೋ ಶೇರ್‌ ಮಾಡಿದ ಬಿಜೆಪಿ!

Congress Manifesto: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಗೆ ಪತ್ರ ಬರೆದಿರುವ ಬೆನ್ನಲ್ಲೇ ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಹಳೆಯ ವಿಡಿಯೋವೊಂದನ್ನು ಶೇರ್‌ ಮಾಡುವ ಮೂಲಕ ತಿರುಗೇಟು ಕೊಟ್ಟಿದೆ.

VISTARANEWS.COM


on

By

Koo

ನವದೆಹಲಿ: ಕೈ-ಕಮಲ ಪಾಳಯದಲ್ಲಿ ಪರಸ್ಪರ ವಾಕ್ಸಮರಕ್ಕೆ ಕಾರಣವಾಗಿರುವ ಕಾಂಗ್ರೆಸ್‌ ಪ್ರಣಾಳಿಕೆ (Congress Manifesto) ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿ (Narendra Modi)ಗೆ ಪತ್ರ ಬರೆದಿರುವ ಬೆನ್ನಲ್ಲೇ ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ (Manamohan Singh) ಅವರ ಹಳೆಯ ವಿಡಿಯೋವೊಂದನ್ನು ಶೇರ್‌ ಮಾಡುವ ಮೂಲಕ ತಿರುಗೇಟು ಕೊಟ್ಟಿದೆ. ವಿಡಿಯೋದಲ್ಲಿ ಅಲ್ಪಸಂಖ್ಯಾತರು ಇತರರಿಗಿಂತ ಹೆಚ್ಚು ವಿಶೇಷ ಸವಲತ್ತು ಪಡೆಯಲು ಅರ್ಹರು ಎಂದು ಮನಮೋಹನ್‌ ಸಿಂಗ್‌ ಹೇಳುತ್ತಿರುವುದು ಸ್ಪಷ್ಟವಾಗಿದೆ.

ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕಾಂಗ್ರೆಸ್‌ ಸಂಪತ್ತಿನ ಮರು ಹಂಚಿಕೆ ಭರವಸೆ ನೀಡಿರುವ ವಿಚಾರವನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸ್‌ ಮುಸ್ಲಿಂ ಓಲೈಕೆ ಪಕ್ಷ ಎಂಬುದನ್ನು ಮತ್ತೆ ಸಾಬೀತು ಪಡಿಸಿದೆ ವಾಗ್ದಾಳಿ ನಡೆಸಿದೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇದೇ ವಿಚಾರದ ಬಗ್ಗೆ ಮತ್ತೆ ಮತ್ತೆ ಪ್ರಸ್ತಾಪಿಸಿ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನ ಕಷ್ಟ ಪಟ್ಟು ದುಡಿದ ಹಣ, ಸಂಪತ್ತನ್ನು ತನ್ನ ಸ್ವಾರ್ಥಕ್ಕಾಗಿ ಒಳ ನುಸುಳುಕೋರರು ಮತ್ತು ಅತಿ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಲಿದೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಮಲ್ಲಿಕಾರ್ಜುನ ಖರ್ಗೆ, ಮುಖತಃ ಭೇಟಿಯಾಗಿ ಕಾಂಗ್ರೆಸ್‌ ಪ್ರಣಾಳಿಕೆಯನ್ನು ತಮಗೆ ವಿವರಿಸುವುದಾಗಿ ಹೇಳಿದ್ದರು.

ಇದರ ಬೆನ್ನಲ್ಲೇ ಬಿಜೆಪಿ 2009ರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದೆ. ಈ ವಿಡಿಯೋದಲ್ಲಿ ಅಲ್ಪಸಂಖ್ಯಾತರು, ಅದರಲ್ಲೂ ಮುಸ್ಲಿಂ ಅಲ್ಪ ಸಂಖ್ಯಾತರು ಒಂದು ವೇಳೆ ಬಡವರಾಗಿದ್ದರೆ ಅವರಿಗೆ ಮೊದಲ ಆದ್ಯತೆ ಕೊಟ್ಟು ಸವಲತ್ತುಗಳನ್ನು ಕೊಡಬೇಕು. ರಾಷ್ಟ್ರೀಯ ಸಂಪತ್ತಿನ ಹಂಚಿಕೆ ವಿಚಾರ ಬಂದಾಗ ಮುಸ್ಲಿಮರಿಗೆ ಮೊದಲ ಆದ್ಯತೆ ಕೊಡಬೇಕು. ರಾಷ್ಟ್ರೀಯ ಸಂಪತ್ತಿನಲ್ಲಿ ಮೊದಲ ಹಕ್ಕು ಮುಸ್ಲಿಮರದ್ದು ಎಂದು ಮನಮೋಹನ್‌ ಸಿಂಗ್‌ ಹೇಳಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಸಂಪತ್ತಿನ ಹಂಚಿಕೆ ಬಗ್ಗೆ ನೀಡಿರುವ ಹೇಳಿಕೆಗೆ ಸ್ಪಷ್ಟನೆ ನೀಡುತ್ತಿರುವ ಕಾಂಗ್ರೆಸ್‌ ನಿಜವಾದ ಉದ್ದೇಶ ಏನಿದೆ ಏಂಬುದಕ್ಕೆ ಈ ವಿಡಿಯೋ ಸಾಕ್ಷಿ. ಎಲ್ಲಾ ವಿಚಾರದಲ್ಲಿ ಕಾಂಗ್ರೆಸ್‌ ಮುಸ್ಲಿಂ ಓಲೈಕೆ ಮನಸ್ಥಿತಿಹ ಹೊಂದಿರುರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್‌ ಇದೀಗ ಮೀಸಲಾತಿಯಿಂದ ಸಂಪನ್ಮೂಲ ಹಂಚಿಕೆಯತ್ತ ತನ್ನ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದ್ದಾರೆ.

ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೇ ಮೊದಲ ಅಧಿಕಾರ ಇತ್ತು. ಕಾಂಗ್ರೆಸ್‌ನವರು ದೇಶದ ಸಂಪತ್ತನ್ನು ಒಟ್ಟುಗೂಡಿಸಿ ಅಕ್ರಮ ವಲಸಿಗರು, ಹೆಚ್ಚು ಮಕ್ಕಳನ್ನು ಹೊಂದಿರುವ ಸಮುದಾಯಕ್ಕೆ ನೀಡಲಿದೆ. ನಿಮ್ಮ ಶ್ರಮದ ಹಣವನ್ನು ಅಕ್ರಮ ವಲಸಿಗರಿಗೆ ನೀಡಬೇಕೆ? ನೀವು ಇದನ್ನು ಒಪ್ಪುವಿರೇ? ಕಾಂಗ್ರೆಸ್‌ ಪ್ರಣಾಳಿಕೆ ಇದನ್ನು ಹೇಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿದ್ದರು.

ಇದನ್ನು ಓದಿ: Palki Sharma: ಬ್ರಿಟನ್‌ನಲ್ಲಿ ಭಾರತದ ಏಳಿಗೆ ಬಿಚ್ಚಿಟ್ಟ ಪತ್ರಕರ್ತೆ ಪಾಲ್ಕಿ ಶರ್ಮಾಗೆ ಮೋದಿ ಮೆಚ್ಚುಗೆ!

ಈ ವಿಚಾರ ರಾಜಕೀಯ ತಿರುವು ಪಡ್ದುಕೊಳ‍್ಳುತಿದ್ದಂತೆ ಸ್ಪಷ್ಟನೆ ಕೊಟ್ಟ ಕಾಂಗ್ರೆಸ್‌, ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಅಂತಹ ಯಾವುದೇ ಭರವಸೆ ನೀಡಿಲ್ಲ ಎಂದು ಹೇಳಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಷ್ಟ್ರ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಸಮೀಕ್ಷೆ ನಡೆಸುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಿದೆ.

Continue Reading

ಪ್ರಮುಖ ಸುದ್ದಿ

PM Narendra Modi: “ಇವಿಎಂ ಅಪಪ್ರಚಾರ ಮಾಡುವವರಿಗೆ ಕಪಾಳಮೋಕ್ಷ…” ಸುಪ್ರೀಂ ಕೋರ್ಟ್‌ ತೀರ್ಪಿಗೆ ಪ್ರಧಾನಿ ಸ್ವಾಗತ

PM Narendra Modi: ಇಂದು ಮುಂಜಾನೆ, ಸುಪ್ರೀಂ ಕೋರ್ಟ್ ಪೇಪರ್ ಬ್ಯಾಲೆಟ್ ಮತದಾನದ ಮನವಿಗಳನ್ನು ತಿರಸ್ಕರಿಸಿತು. ಇವಿಎಂಗಳ ವಿಶ್ವಾಸಾರ್ಹತೆ ಮತ್ತು ವಿವಿಪ್ಯಾಟ್‌ಗಳೊಂದಿಗೆ ಅವುಗಳ ಸಂಯೋಜನೆಯನ್ನು ದೃಢಪಡಿಸಿತು. ಚುನಾವಣಾ ಮತಯಂತ್ರಗಳಲ್ಲಿ (EVM) ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ (VVPAT Verification) ಮಾಡಬೇಕು ಎಂದು ಸಲ್ಲಿಸಿದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

VISTARANEWS.COM


on

Modi in Karnataka PM Modi to address rally in Bengaluru Here live video
Koo

ಹೊಸದಿಲ್ಲಿ: ಇವಿಎಂ- ವಿವಿಪ್ಯಾಟ್ (EVM- VVPAT) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ (Supreme Court) ತೀರ್ಪನ್ನು ಶುಕ್ರವಾರ ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi), “ಈ ಆದೇಶವು ನಿರಂತರವಾಗಿ ಇವಿಎಂ ಬಗ್ಗೆ ಅಪಪ್ರಚಾರ ಮಾಡಲು ಪ್ರಯತ್ನಿಸುತ್ತಿರುವ ಜನತೆಗೆ ನೀಡಿದ ಬಿಗಿಯಾದ ಕಪಾಳಮೋಕ್ಷವಾಗಿದೆ” ಎಂದು ಹೇಳಿದ್ದಾರೆ.

“ಈ ಜನರು ನಿರಂತರವಾಗಿ ಇವಿಎಂ ಮೇಲೆ ದೋಷ ಹೇರಲು ಪ್ರಯತ್ನಿಸಿದರು. ಆದರೆ ಇಂದು ಸುಪ್ರೀಂ ಕೋರ್ಟ್‌ ಅವರಿಗೆ ಬಹಳ ಬಿಗಿಯಾದ ತಪರಾಕಿ ನೀಡಿದೆ. ಅವರು ಸತ್ಯವನ್ನು ನೋಡಲು ಇಷ್ಟಪಡುವುದಿಲ್ಲ. ಇಂದು ಪ್ರಜಾಪ್ರಭುತ್ವಕ್ಕೆ ಒಳ್ಳೆಯ ದಿನ” ಎಂದು ಬಿಹಾರದ ಅರಾರಿಯಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಹೇಳಿದರು.

“ಇಂಡಿಯಾ ಮೈತ್ರಿಕೂಟʼದ ಪ್ರತಿಯೊಬ್ಬ ನಾಯಕನೂ ಇವಿಎಂ ಬಗ್ಗೆ ಸಾರ್ವಜನಿಕರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟುಹಾಕುವ ಪಾಪವನ್ನು ಮಾಡಿದ್ದಾರೆ. ಆದರೆ ಇಂದು, ದೇಶದ ಪ್ರಜಾಪ್ರಭುತ್ವದ ಶಕ್ತಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಶಕ್ತಿಯನ್ನು ನೋಡಿ. ಇಂದು ಅವರ ಕನಸುಗಳೆಲ್ಲವೂ ನುಚ್ಚುನೂರಾಗುವಂತೆ, ಮತಪೆಟ್ಟಿಗೆಯನ್ನು ಲೂಟಿ ಮಾಡಲು ಉದ್ದೇಶಿಸಿರುವವರಿಗೆ ಸುಪ್ರೀಂ ಕೋರ್ಟ್ ತೀವ್ರ ಹೊಡೆತ ನೀಡಿದೆ” ಎಂದಿದ್ದಾರೆ ಮೋದಿ.

“ಇಂದು ಇಡೀ ಜಗತ್ತು ಭಾರತದ ಪ್ರಜಾಪ್ರಭುತ್ವ, ಭಾರತದ ಚುನಾವಣಾ ಪ್ರಕ್ರಿಯೆ ಮತ್ತು ಚುನಾವಣೆಯಲ್ಲಿ ತಂತ್ರಜ್ಞಾನದ ಬಳಕೆಯನ್ನು ಹೊಗಳುತ್ತಿರುವಾಗ, ಈ ಜನರು ತಮ್ಮ ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಇವಿಎಂ ಅನ್ನು ದೂಷಿಸುವಲ್ಲಿ ನಿರತರಾಗಿದ್ದರು. ಅವರು ನಿರಂತರವಾಗಿ ಪ್ರಜಾಪ್ರಭುತ್ವಕ್ಕೆ ದ್ರೋಹ ಮಾಡಲು ಪ್ರಯತ್ನಿಸಿದ್ದರು” ಎಂದು ಅವರು ಹೇಳಿದರು.

ಇಂದು ಮುಂಜಾನೆ, ಸುಪ್ರೀಂ ಕೋರ್ಟ್ ಪೇಪರ್ ಬ್ಯಾಲೆಟ್ ಮತದಾನದ ಮನವಿಗಳನ್ನು ತಿರಸ್ಕರಿಸಿತು. ಇವಿಎಂಗಳ ವಿಶ್ವಾಸಾರ್ಹತೆ ಮತ್ತು ವಿವಿಪ್ಯಾಟ್‌ಗಳೊಂದಿಗೆ ಅವುಗಳ ಸಂಯೋಜನೆಯನ್ನು ದೃಢಪಡಿಸಿತು. ಚುನಾವಣಾ ಮತಯಂತ್ರಗಳಲ್ಲಿ (EVM) ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ (VVPAT Verification) ಮಾಡಬೇಕು ಎಂದು ಸಲ್ಲಿಸಿದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಹಾಗೆಯೇ, ದೇಶದಲ್ಲಿ ಬ್ಯಾಲಟ್‌ ಪೇಪರ್‌ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂಬ ಕುರಿತು ಸಲ್ಲಿಸಿದ ಅರ್ಜಿಗಳನ್ನು ಕೂಡ ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಇದರೊಂದಿಗೆ ದೇಶದಲ್ಲಿ ಬ್ಯಾಲಟ್‌ ಪೇಪರ್‌ ವ್ಯವಸ್ಥೆ ಬರಬೇಕು, ಇವಿಎಂ ಸುರಕ್ಷತೆ ಇಲ್ಲ ಎಂದು ವಾದಿಸುವವರಿಗೆ, ಅರ್ಜಿ ಸಲ್ಲಿಸಿದವರಿಗೆ ಭಾರಿ ಹಿನ್ನಡೆಯಾಗಿದೆ.

ಅರ್ಜಿದಾರರ ವಾದ-ಪ್ರತಿವಾದವನ್ನು ಆಲಿಸಿದ್ದ, ಚುನಾವಣೆ ಆಯೋಗದ ಮಾಹಿತಿಯನ್ನೂ ಪಡೆದಿದ್ದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತ ಅವರು, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದರು. “ನಾವು ತಾಂತ್ರಿಕ ವಿಭಾಗದ ಎಲ್ಲ ಮಾಹಿತಿಯನ್ನು ಗಮನಿಸಿದ್ದೇವೆ. ಹಾಗಾಗಿ, ಇವಿಎಂ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡುವ ಅವಶ್ಯಕತೆ ಇಲ್ಲ. ಹಾಗಾಗಿ, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದ್ದೇವೆ” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಇದನ್ನೂ ಓದಿ: VVPAT Verification: ಬ್ಯಾಲಟ್‌ ಪೇಪರ್‌ ಬೇಕಿಲ್ಲ, ವಿವಿಪ್ಯಾಟ್‌ 100% ತಾಳೆಯೂ ಬೇಡ ಎಂದ ಸುಪ್ರೀಂ; ಇವಿಎಂ ವಿರೋಧಿಗಳಿಗೆ ಹಿನ್ನಡೆ

Continue Reading

ದೇಶ

Palki Sharma: ಬ್ರಿಟನ್‌ನಲ್ಲಿ ಭಾರತದ ಏಳಿಗೆ ಬಿಚ್ಚಿಟ್ಟ ಪತ್ರಕರ್ತೆ ಪಾಲ್ಕಿ ಶರ್ಮಾಗೆ ಮೋದಿ ಮೆಚ್ಚುಗೆ!

Palki Sharma: ಜಾಗತಿಕವಾಗಿ ಅಭಿಪ್ರಾಯ ಮಂಡಿಸುವ ವೇದಿಕೆಯಾದ ಆಕ್ಸ್‌ಫರ್ಡ್‌ ಯುನಿಯನ್‌ನಲ್ಲಿ ಪತ್ರಕರ್ತೆ ಪಾಲ್ಕಿ ಶರ್ಮಾ ಮಾತನಾಡಿದ್ದಾರೆ. ಭಾರತದ ಅಭಿವೃದ್ಧಿ, ಜಾಗತಿಕವಾಗಿ ದೇಶದ ವರ್ಚಸ್ಸು, ಡಿಜಿಟಲ್‌ ರೂಪಾಂತರ, ರಾಜತಾಂತ್ರಿಕ ಸಂಬಂಧ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Palki Sharma
Koo

ನವದೆಹಲಿ: ದೇಶದ ಪತ್ರಕರ್ತೆ ಪಾಲ್ಕಿ ಶರ್ಮಾ (Palki Sharma) ಅವರು ಬ್ರಿಟನ್‌ನಲ್ಲಿ ಭಾರತದ ಅಭಿವೃದ್ಧಿ ಕುರಿತು ಅಂಕಿ-ಅಂಶಗಳ ಸಮೇತ ಮಾತನಾಡಿದ್ದಾರೆ. ಜಾಗತಿಕ ಚರ್ಚೆಯ ವೇದಿಕೆಯಾದ ಆಕ್ಸ್‌ಫರ್ಡ್‌ ಯುನಿಯನ್‌ನಲ್ಲಿ (Oxford Union) ಪಾಲ್ಕಿ ಶರ್ಮಾ (Palki Sharma) ಅವರು ಭಾರತದ ಏಳಿಗೆ ಕುರಿತು ಮಾತನಾಡಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಭಾರತವು ಹೇಗೆ ರೂಪಾಂತರ ಹೊಂದಿದೆ ಎಂಬುದನ್ನು ನೀವು ವಿವರಿಸಿದ್ದೀರಿ” ಎಂಬುದಾಗಿ ಮೋದಿ ಬಣ್ಣಿಸಿದ್ದಾರೆ.

ಪಾಲ್ಕಿ ಶರ್ಮಾ ಹೇಳಿದ್ದೇನು?

ಆಕ್ಸ್‌ಫರ್ಡ್‌ ಯುನಿಯನ್‌ನಲ್ಲಿ ಭಾರತದ ಏಳಿಗೆ ಕುರಿತು ಪಾಲ್ಕಿ ಶರ್ಮಾ ಮಾತನಾಡಿದರು. “ಭಾರತವು ಕಳೆದ 10 ವರ್ಷಗಳಲ್ಲಿ ಗಣನೀಯವಾಗಿ ಏಳಿಗೆ ಹೊಂದಿದೆ. ಭಾರತ ಈಗ ಯಾವುದೇ ತೀರ್ಮಾನ ತೆಗೆದುಕೊಳ್ಳಬಹುದು. ಜಾಗತಿಕ ಅಭಿಪ್ರಾಯದ ಮೇಲೆ ಭಾರತದ ನಿರ್ಧಾರ ಇರುವುದಿಲ್ಲ. ಈಗ ಭಾರತದ ನಿರ್ಧಾರಗಳನ್ನು ಜಗತ್ತೇ ಮೆಚ್ಚುತ್ತಿದೆ. ಜಾಗತಿಕ ವಿಷಯಗಳ ಮೇಲೆ ಭಾರತದ ಅಭಿಪ್ರಾಯವು ಪರಿಣಾಮ ಬೀರುತ್ತಿದೆ” ಎಂದು ಹೇಳಿದರು.

ಡಿಜಿಟಿಲ್‌ ಇಂಡಿಯಾ ಪ್ರಸ್ತಾಪ

ಭಾರತವು ಡಿಜಿಟಲೀಕರಣವಾಗುತ್ತಿದೆ. ಡಿಜಿಟಲ್‌ ಇಂಡಿಯಾ ಎಂಬ ಕಲ್ಪನೆಯು ಹಳ್ಳಿಗಳಿಗೂ ತಲುಪಿದೆ. ನರೇಂದ್ರ ಮೋದಿ ಆಡಳಿತದಲ್ಲಿ ದೇಶವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಭಾರತದಲ್ಲಿ ಇಂಟರ್‌ನೆಟ್‌ ಬಳಕೆಯು 10 ವರ್ಷದ ಹಿಂದೆ ಶೇ.17ರಷ್ಟಿತ್ತು. ಈಗ ಶೇ.48ರಷ್ಟು ಮಂದಿ ಇಂಟರ್ನೆಟ್‌ ಬಳಕೆಯಾಗುತ್ತಿದೆ. ತರಕಾರಿ ಮಾರುವವರೂ ಕ್ಯೂಆರ್‌ ಕೋಡ್‌ ಮೂಲಕ ವಹಿವಾಟು ನಡೆಸುತ್ತಿದ್ದಾರೆ. ಇದು ಡಿಜಿಟಲ್‌ ಇಂಡಿಯಾ ಏಳಿಗೆಗೆ ಸಹಕಾರಿಯಾಗಿದೆ” ಎಂದು ತಿಳಿಸಿದರು.

ಭಾರತದಲ್ಲಿ ಸಹಿಷ್ಣುತೆ

“ಭಾರತದಲ್ಲಿ ಸಹಿಷ್ಣುತೆ ಹೆಚ್ಚಿದೆ. ಹಜ್‌ ನೀತಿ ಮೂಲಕ ಮುಸ್ಲಿಮರು ಹಜ್‌ ಯಾತ್ರೆ ಕೈಗೊಳ್ಳಲು ಮೋದಿ ಸರ್ಕಾರ ನೆರವಾಯಿತು. ಸೌದಿ ಅರೇಬಿಯಾ ಸರ್ಕಾರದ ಜತೆ ಮಾತನಾಡಿ ಹಜ್‌ ಯಾತ್ರೆಗೆ ನೆರವು ಪಡೆದರು. ಈಗ ಭಾರತದಿಂದ ಹಜ್‌ ಯಾತ್ರೆಗೆ ಹೋಗುವವರ ಪ್ರಮಾಣ 2 ಲಕ್ಷ ದಾಟಿದೆ. ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಮುಸ್ಲಿಮರು ಹೆಚ್ಚಿನ ವಿದ್ಯಾರ್ಥಿ ವೇತನ ಪಡೆಯುತ್ತಿದ್ದಾರೆ. ತ್ರಿವಳಿ ತಲಾಕ್‌ ನಿಷೇಧಿಸಿ ಮುಸ್ಲಿಂ ಹೆಣ್ಣುಮಕ್ಕಳ ಹಕ್ಕುಗಳನ್ನು ರಕ್ಷಿಸಲಾಗಿದೆ” ಎಂದು ಪಾಲ್ಕಿ ಶರ್ಮಾ ಬಣ್ಣಿಸಿದರು.

ಜಾಗತಿಕವಾಗಿ ಭಾರತ ಬಲಿಷ್ಠ

“ಭಾರತವು ಜಾಗತಿಕವಾಗಿ ಬಲಿಷ್ಠವಾಗುತ್ತಿದೆ. ಕಾಶ್ಮೀರದಲ್ಲಿ ಪಾಕ್‌ ಉಗ್ರರ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, ಬಾಲಾಕೋಟ್‌ ದಾಳಿ ಮೂಲಕ ಪ್ರತ್ಯುತ್ತರ ನೀಡುತ್ತಿದೆ. ಭಾರತದ ಆರ್ಥಿಕ ಬೆಳವಣಿಗೆಯು ಶೇ.7ರಷ್ಟಿದೆ. ಶ್ರೀಲಂಕಾ ಆರ್ಥಿಕತೆ ಮುಳುಗುತ್ತಿದ್ದಾಗ ಯಾವುದೇ ಫಲಾಪೇಕ್ಷೆ, ಕುತಂತ್ರ ಇಲ್ಲದೆ 4 ಶತಕೋಟಿ ಡಾಲರ್‌ ನೆರವು ನೀಡಿದೆ. ಭಾರತದ ವಿಮಾನ ನಿಲ್ದಾಣಗಳು ಜಾಗತಿಕ ಮಟ್ಟದಲ್ಲಿವೆ. ಇಲ್ಲಿಗೆ ಆಗಮಿಸುವವರ ಸಂಖ್ಯೆ ಹೆಚ್ಚಾಗಿದೆ. ವಿದೇಶಿ ಬಂಡವಾಳ ಹೂಡಿಕೆ ಪ್ರಮಾಣವೂ ಅಧಿಕವಾಗಿದೆ” ಎಂದರು.

ಇದನ್ನೂ ಓದಿ: Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

Continue Reading
Advertisement
lok sabha election
ಪ್ರಮುಖ ಸುದ್ದಿ6 mins ago

Lok Sabha Election : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ; ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆ

Karnataka weather Forecast
ಮಳೆ21 mins ago

Karnataka Weather : ಹಾಟ್‌ ಸಿಟಿಯಾದ ಬೆಂಗಳೂರು; ಇನ್ನು 3 ದಿನಗಳು ಈ ಜಿಲ್ಲೆಗಳು ಕಾದ ಕೆಂಡ

Lok Sabha Election 2024
ಕರ್ನಾಟಕ22 mins ago

Lok Sabha Election 2024: ಸಂಜೆ 5 ಗಂಟೆವರೆಗೆ ಶೇ.63.90 ಮತದಾನ; ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ!

Flower Crown Trend
ಫ್ಯಾಷನ್34 mins ago

Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

Rinku Singh
ಕ್ರೀಡೆ50 mins ago

Rinku Singh : ಹಠ ಹಿಡಿದು ಕೊಹ್ಲಿಯಿಂದ ಮತ್ತೊಂದು ಬ್ಯಾಟ್ ಪಡೆದುಕೊಂಡ ರಿಂಕು ಸಿಂಗ್​​

Tejasvi Surya
ಕರ್ನಾಟಕ58 mins ago

Tejasvi Surya: ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌

Lok Sabha Election 2024 Two die of heart attack in Tumakuru and Kodagu
Lok Sabha Election 20241 hour ago

Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

Lok Sabha Election 2024 Anant Nag outrage against non-voters
ಸ್ಯಾಂಡಲ್ ವುಡ್2 hours ago

Lok Sabha Election 2024: ಮತ ಹಾಕದವರನ್ನು ಮತ ಪಟ್ಟಿಯಿಂದ ತೆಗೆದುಹಾಕಬೇಕು: ಅನಂತ್ ನಾಗ್ ಸಲಹೆಗೆ ಏನಂತೀರಿ?

Healthcare Tips For Women
ಆರೋಗ್ಯ2 hours ago

Healthcare Tips For Women: 30 ವರ್ಷದ ಬಳಿಕ ಮಹಿಳೆಯರು ಮಾಡಿಸಿಕೊಳ್ಳಲೇಬೇಕಾದ ಆರೋಗ್ಯ ಪರೀಕ್ಷೆಗಳಿವು

Lok Sabha Election 2024
ಬೆಂಗಳೂರು2 hours ago

Lok Sabha Election 2024: ಮೋದಿ ಮತ್ತೊಮ್ಮೆ ಎಂಬ ನುಡಿ ಸತ್ಯವಾಗಲಿದೆ: ಎಂಎಲ್‌ಸಿ ಟಿ.ಎ.ಶರವಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ7 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20247 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20248 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ14 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌