Rakhi Sawant: ತಾಯಿಯ ಅಂತಿಮ ವಿಧಿ ವಿಧಾನ ಪೂರೈಸಿದ ರಾಖಿ ಸಾವಂತ್‌ ದಂಪತಿ: ವಿಡಿಯೊ ವೈರಲ್‌ - Vistara News

ಬಾಲಿವುಡ್

Rakhi Sawant: ತಾಯಿಯ ಅಂತಿಮ ವಿಧಿ ವಿಧಾನ ಪೂರೈಸಿದ ರಾಖಿ ಸಾವಂತ್‌ ದಂಪತಿ: ವಿಡಿಯೊ ವೈರಲ್‌

ಸುದೀರ್ಘ ಸಮಯದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಯಾ ಭೇದಾ, ಮುಂಬೈನ ಜುಹು ಪ್ರದೇಶದಲ್ಲಿರುವ ಸಿಟಿ ಕೇರ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಯಾ ಭೇದಾ ಅವರು ಹಲವು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

VISTARANEWS.COM


on

Rakhi Sawant mom's last rites
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಾಖಿ ಸಾವಂತ್‌ (Rakhi Sawant) ಅವರ ತಾಯಿ ಜಯಾ ಭೇದಾ ಸಾವಂತ್‌ ಶನಿವಾರ ಜನವರಿ 28ರಂದು ನಿಧನರಾಗಿದ್ದಾರೆ. ಭಾನುವಾರ, ರಾಖಿ ಮತ್ತು ಅವರ ಪತಿ ಆದಿಲ್ ಖಾನ್ ದುರಾನಿ ಮುಂಬೈನ ಡಾ ಆರ್‌ಎನ್ ಕೂಪರ್ ಮುನ್ಸಿಪಲ್ ಜನರಲ್ ಆಸ್ಪತ್ರೆಯಲ್ಲಿ ಅವರ ಅಂತಿಮ ವಿಧಿ ವಿಧಾನದಲ್ಲಿ ಕಾಣಿಸಿಕೊಂಡರು. ಮುಂಬೈನ ಓಶಿವಾರಾ ಕ್ರಿಶ್ಚಿಯನ್ ಸ್ಮಶಾನದಲ್ಲಿ ರಾಖಿ ತಾಯಿಯ ಅಂತ್ಯಕ್ರಿಯೆ ನೆರವೇರಿದೆ. ರಾಖಿ ಮತ್ತು ಆದಿಲ್ ತಾಯಿಯ ಅಂತಿಮ ಯಾತ್ರೆಗೆ ಮುಂಚಿತವಾಗಿ ಕೂಪರ್ ಆಸ್ಪತ್ರೆಗೆ ಆಗಮಿಸಿದಾಗ ಕೈ ಕೈ ಹಿಡಿದುಕೊಂಡು ನಡೆಯುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಅವರೊಂದಿಗೆ ಕೆಲವು ಹತ್ತಿರದ ಸಂಬಂಧಿಗಳು ಮತ್ತು ಆತ್ಮೀಯರೂ ಕಾಣಿಸಿಕೊಂಡರು. ಸುದೀರ್ಘ ಸಮಯದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಯಾ ಭೇದಾ, ಮುಂಬೈನ ಜುಹು ಪ್ರದೇಶದಲ್ಲಿರುವ ಸಿಟಿ ಕೇರ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಯಾ ಭೇದಾ ಅವರು ಹಲವು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರಿಗೆ ಸುದೀರ್ಘವಾಗಿ ಚಿಕಿತ್ಸೆ ನೀಡಿದರೂ ಕ್ಯಾನ್ಸರ್‌ ದೇಹದ ಹಲವು ಭಾಗಗಳಿಗೆ ವಿಸ್ತರಿಸಿತ್ತು. ಹಾಗಾಗಿ, ಕೆಲ ದಿನಗಳಿಂದ ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿತ್ತು.

ಇದನ್ನೂ ಓದಿ: Rakhi Sawant Mother Dies | ನಟಿ ರಾಖಿ ಸಾವಂತ್‌ ತಾಯಿ ಜಯಾ ಭೇದಾ ಇನ್ನಿಲ್ಲ

ಇದನ್ನೂ ಓದಿ: Rakhi Sawant | ರಾಖಿ ಸಾವಂತ್‌ ಮನೆಗೆ ಹೋಗಲು ಅವಕಾಶ ನೀಡಿದ ಪೊಲೀಸರು: ವಿಚಾರಣೆ ಇನ್ನೂ ಮುಗಿದಿಲ್ಲ ಎಂದ ನಟಿ ಶೆರ್ಲಿನ್ ಚೋಪ್ರಾ

ಇತ್ತೀಚೆಗಷ್ಟೇ, ರಾಖಿ ಸಾವಂತ್‌ ಅವರು ತಾಯಿ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತ, ನೀವೂ ತಾಯಿ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

Mr. & Mrs. Mahi: ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

VISTARANEWS.COM


on

Mr. & Mrs. Mahi'
Koo

ಬೆಂಗಳೂರು: ಕ್ರಿಕೆಟ್​ ಭಾರತದಲ್ಲಿ ಒಂದು ಧರ್ಮ. ಎಲ್ಲರೂ ಒಂದಾಗುವ ಅಪರೂಪದ ಕ್ರೀಡೆ. ಅಂತೆಯೇ ಕ್ರಿಕೆಟ್​ ಮತ್ತು ಸಿನಿಮಾ ಕ್ಷೇತ್ರಕ್ಕೆ ಬಿಡಿಸಲಾಗದ ನಟು. ಹೀಗಾಗಿ ಬಾಲಿವುಡ್​ ಸೇರಿದಂತೆ ನಾನಾ ಭಾಷೆಗಳ ಸಿನಿ ಇಂಡಸ್ಟ್ರಿಯಲ್ಲಿ ಕ್ರಿಕೆಟ್​ ಆಧಾರವಾಗಿಟ್ಟುಕೊಂಡು ಹಲವಾರು ಸಿನಿಮಾಗಳನ್ನು ತೆಗೆಯಲಾಗಿದೆ. ಅವುಗಳಲ್ಲಿ ಬಹುತೇಕ ಸಿನಿಮಾಗಳು ಸಕ್ಸೆಸ್​ ಆಗಿವೆ. ಅಂತೆಯೇ ಕ್ರಿಕೆಟ್ ಕತೆಯನ್ನೇ ಮೂಲವಾಗಿಟ್ಟುಕೊಂಡಿರುವ ‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ (Mr. & Mrs. Mahi) ಸಿನಿಮಾವೊಂದು ರೆಡಿಯಾಗುತ್ತಿದೆ. ಆ ಸಿನಿಮಾದಲ್ಲಿ ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ಹಾಗೂ ಪ್ರತಿಭಾವಂತ ನಟ ರಾಜ್​ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ ಎಂಬ ಶೀರ್ಷಿಕೆಯ ಈ ಚಲನಚಿತ್ರವು ಕ್ರಿಕೆಟ್ ಕ್ರೀಡೆಯ ಮೇಲಿನ ತಮ್ಮ ಪ್ರೀತಿಯನ್ನು ಅರಸುತ್ತಾ ಹಲವಾರು ಸವಾಲುಗಳು ಮತ್ತು ಅಡೆತಡೆಗಳ ಮೂಲಕ ಎದುರಿಸುವ ಸುಂದರ ಜೋಡಿಯೊಂದರ ಸುತ್ತ ಸುತ್ತುತ್ತದೆ.

ಚಿತ್ರದ ಟ್ರೈಲರ್ ಇನ್ನೂ ಬಿಡುಗಡೆಯಾಗದಿದ್ದರೂ, ಪ್ರಮುಖ ನಟಿ ಜಾಹ್ನವಿ ಕಪೂರ್ ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಚಿತ್ರದ ಬಿಡುಗಡೆಯ ದಿನಾಂಕವನ್ನು ಅನಾವರಣಗೊಳಿಸಿದ್ದಾರೆ. ‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: IPL 2024 : ಐಪಿಎಲ್​ನಲ್ಲಿ ಹೊಸ ಇತಿಹಾಸ; ಸಚಿನ್​ ದಾಖಲೆ ಮುರಿದ ಸಾಯಿ ಸುದರ್ಶನ್​

ಈ ಯೋಜನೆಯ ಸುತ್ತ ತಿಂಗಳುಗಳ ಊಹಾಪೋಹಗಳಿವೆ. ಏತನ್ಮಧ್ಯೆ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಲಾಗಿದೆ. ಅಭಿಮಾನಿಗಳು ಅಂತಿಮವಾಗಿ ದೊಡ್ಡ ಪರದೆಯ ಮೇಲೆ ಜಾಹ್ನವಿ ಕಪೂರ್ ಅಭಿನಯ ನೋಡಲು ಕಾತರರಾಗಿದ್ದಾರೆ. ಅವರೆಲ್ಲರೂ ಅದಕ್ಕಾಗಿ ಕಾಯುತ್ತಿದ್ದಾರೆ.

ಇತ್ತೀಚೆಗೆ, ಜಾಹ್ನವಿ ಕಪೂರ್ ತಮ್ಮ ಮುಂಬರುವ ಚಿತ್ರದ ಪ್ರಚಾರದ ಕಾರಣಕ್ಕಾಗಿ ಈ ತಿಂಗಳ ಆರಂಭದಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್​​ ಪಂದ್ಯವನ್ನು ವೀಕ್ಷಿಸಿದ್ದರು.

ಎಲ್ಲವೂ ಗುಟ್ಟು

ಅಂದ ಹಾಗೆ ಸಿನಿಮಾದ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ಇಲ್ಲ. ಈ ಸಿನಿಮಾ ಧೋನಿಯ ಕತೆಯನ್ನು ಆಧರಿಸಿದ್ದು ಎಂದು ಎಂದು ಹೇಳಲಾಗುತ್ತಿದೆ. ಹೆಸರನ್ನು ಹೇಳುವಾಗ ಮಹೇಂದ್ರ ಸಿಂಗ್ ಧೋನಿಗೆ ಸಂಬಂಧಿಸಿದ ಕತೆ ಎಂದು ಹೇಳಲಾಗುತ್ತಿದೆ. ಆದರೆ, ಅದರ ಬಗ್ಗೆ ಖಚಿತತೆ ಇಲ್ಲ. ಆದರೆ, ಕ್ರಿಕೆಟ್​ ಆಧಾರಿತ ಸಿನಿಮಾ ಎಂಬುದು ಖಾತರಿ. ಹೀಗಾಗಿ ಸಿನಿ ಪ್ರೇಮಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳನ್ನು ಏಕಕಾಲಕ್ಕೆ ಸೆಳೆಯುವ ಉದ್ದೇಶವನ್ನು ನಿರ್ದೇಶಕರು ಹೊಂದಿದ್ದಾರೆ.

Continue Reading

ಸಿನಿಮಾ

Laila Khan: ಮಲತಂದೆಯಿಂದಲೇ ಹತ್ಯೆಯಾದ ಜಗ್ಗೇಶ್‌ ಚಿತ್ರದ ನಾಯಕಿ; 13 ವರ್ಷಗಳ ಬಳಿಕ ತೀರ್ಪು ಪ್ರಕಟ

Laila Khan: ಜಗ್ಗೇಶ್‌ ಅಭಿನಯದ ಕನ್ನಡದ ʼಮೇಕಪ್‌ʼ ಸೇರಿದಂತೆ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದ ಲೈಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಬೈ ಸೆಷನ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಪ್ರಕಟಿಸಿದೆ. 2011ರ ಫೆಬ್ರವರಿಯಲ್ಲಿ ಮುಂಬೈಯ ಇಗ್ತಪುರಿಯಲ್ಲಿರುವ ಬಂಗಲೆಯಲ್ಲಿ ನಟಿ ಲೈಲಾ ಖಾನ್ ಹಾಗೂ ಆಕೆಯ ತಾಯಿ ಸೆಲೀನಾ ಹಾಗೂ ನಾಲ್ವರು ಒಡಹುಟ್ಟಿದವರು ಸೇರಿ ಒಟ್ಟು 6 ಮಂದಿಯನ್ನು ಪರ್ವೀನ್ ತಾಕ್ ಬರ್ಬರವಾಗಿ ಹತ್ಯೆ ಮಾಡಿದ್ದ.

VISTARANEWS.COM


on

Laila Khan
Koo

ಮುಂಬೈ: ಜಗ್ಗೇಶ್‌ ಅಭಿನಯದ ಕನ್ನಡದ ʼಮೇಕಪ್‌ʼ ಸೇರಿದಂತೆ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದ ಲೈಲಾ ಖಾನ್ (Laila Khan) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಬೈ ಸೆಷನ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ (Parvez Tak) ದೋಷಿ ಎಂದು ಪ್ರಕಟಿಸಿದೆ. ಘಟನೆ ನಡೆದು ಸುಮಾರು 13 ವರ್ಷಗಳ ಬಳಿಕ ಈ ತೀರ್ಪು ಹೊರಬಿದ್ದಿದೆ.

2011ರ ಫೆಬ್ರವರಿಯಲ್ಲಿ ಮುಂಬೈಯ ಇಗ್ತಪುರಿಯಲ್ಲಿರುವ ಬಂಗಲೆಯಲ್ಲಿ ನಟಿ ಲೈಲಾ ಖಾನ್ ಹಾಗೂ ಆಕೆಯ ತಾಯಿ ಸೆಲೀನಾ ಹಾಗೂ ನಾಲ್ವರು ಒಡಹುಟ್ಟಿದವರು ಸೇರಿ ಒಟ್ಟು 6 ಮಂದಿಯನ್ನು ಪರ್ವೀನ್ ತಾಕ್ ಬರ್ಬರವಾಗಿ ಹತ್ಯೆ ಮಾಡಿದ್ದ. ಅಚ್ಚರಿ ಎಂದರೆ ಪರ್ವೀನ್ ತಾಕ್ ಲೈಲಾ ಖಾನ್‌ ತಾಯಿ ಸೆಲೀನಾ ಅವರ ಮೂರನೇ ಪತಿ.

ಸೆಲೀನಾ ಹೆಸರಿನಲ್ಲಿರುವ ಭೂಮಿಗೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು. ಮೊದಲು ಪರ್ವೀನ್ ತಾಕ್ ಪತ್ನಿ ಸೆಲೀನಾ ಅವರನ್ನು ಕೊಲೆ ಮಾಡಿದ್ದ. ಬಳಿಕ ಮನೆಯಲ್ಲಿದ್ದ ಲೈಲಾ ಖಾನ್‌ ಹಾಗೂ ಆಕೆಯ ನಾಲ್ವರು ಒಡಹುಟ್ಟಿದವರ ಹತ್ಯೆ ಮಾಡಿ ಪರಾರಿಯಾಗಿದ್ದ. 2012ರಲ್ಲಿ ಆತನನ್ನು ಬಂಧಿಸಲಾಗಿತ್ತು. ಮೇ 14ರಂದು ಕೋರ್ಟ್‌ ಶಿಕ್ಷೆ ಪ್ರಕಟಿಸಲಿದೆ.

ಘಟನೆಯ ವಿವರ

2011ರಲ್ಲಿ ಲೈಲಾ ಖಾನ್‌, ಆಕೆಯ ತಾಯಿ ಸೆಲೀನಾ ಮತ್ತು ಲೈಲಾ ಖಾನ್‌ ಒಡಹುಟ್ಟಿದವರಾದ ಆಮಿನಾ, ಅವಳಿಗಳಾದ ಝಾರ ಮತ್ತು ಇಮ್ರಾನ್‌, ಕಸಿನ್‌ ರೇಷ್ಮಾ ನಾಪತ್ತೆಯಾಗಿದ್ದಾರೆಂದು ಲೈಲಾ ಖಾನ್‌ ತಂದೆ ನಾದಿರ್‌ ಪಟೇಲ್‌ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ ತನಿಖೆ ಆರಂಭವಾಗಿತ್ತು. ತನಿಖೆ ಭಾಗವಾಗಿ ನಾಸಿಕ್ ಬಳಿಯ ಇಗ್ತಪುರಿಯಲ್ಲಿರುವ ಕುಟುಂಬದ ತೋಟದ ಮನೆ ಪರಿಶೀಲಿಸಲು ಅಧಿಕಾರಿಗಳು ನಿರ್ಧರಿಸಿದ್ದರು. ಆ ಬಂಗಲೆ ಬೆಂಕಿಯಲ್ಲಿ ಭಾಗಶಃ ಹಾನಿಯಾಗಿತ್ತು. ಅಲ್ಲದೆ ಲೈಲಾ ಖಾನ್‌ ಅವರ ಮೊಬೈಲ್‌ ನಾಪತ್ತೆಯಾಗುವ ವೇಳೆ ನಾಸಿಕ್‌ನಲ್ಲೇ ಇತ್ತು ಎನ್ನುವುದು ಕಂಡು ಬಂದಿತ್ತು. ಇದೇ ವೇಳೆ ಲೈಲಾ ಖಾನ್‌ಗೆ ಸೇರಿದ ವಾಹನ ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ತೆಯಾಗಿತ್ತು. ಪರ್ವೀನ್ ತಾಕ್ ಮೂಲತಃ ಕಾಶ್ಮೀರದವನು. ಹೀಗಾಗಿ ಪೊಲೀಸರಿಗೆ ಆತನ ಮೇಲೆ ಸಂಶಯ ಬಲವಾಗಿತ್ತು. ಬಳಿಕ ಆತನನ್ನು ಬಂಧಿಸಲಾಯಿತು. ಈ ವೇಳೆ ಆತ ಆಸ್ತಿ ವಿಚಾರದಲ್ಲಿ ಕೊಲೆ ಮಾಡಿರುವ ಸಂಗತಿ ಹೊರ ಬಿದ್ದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸೆಲೀನಾ ಅವರ ಇಬ್ಬರು ಮಾಜಿ ಪತಿಯರು ಸೇರಿದಂತೆ ಸುಮಾರು 40 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಲಾಗಿತ್ತು.

ಲೈಲಾ ಖಾನ್‌ ಮೊದಲ ಬಾರಿಗೆ 2002ರಲ್ಲಿ ತೆರೆಕಂಡ ಜಗ್ಗೇಶ್‌ ಅಭಿನಯದ ʼಮೇಕಪ್‌ʼ ಕನ್ನಡ ಸಿನಿಮಾದಲ್ಲಿ ಲೈಲಾ ಪಟೇಲ್‌ ಎಂಬ ಹೆಸರಿನಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರ ಅಷ್ಟೇನೂ ಸದ್ದು ಮಾಡಿರಲಿಲ್ಲ. ಬಳಿಕ ಲೈಲಾ 2008ರಲ್ಲಿ ರಾಜೇಶ್‌ ಖನ್ನಾ ನಟನೆಯ ʼವಫಾ: ಎ ಡೆಡ್ಲಿ ಲವ್‌ ಸ್ಟೋರಿʼ ಹಿಂದಿ ಸಿನಿಮಾದಲ್ಲಿ ನಾಯಕಿಯಾಗಿದ್ದರು. ಇದು ಕೂಡ ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡಲಿಲ್ಲ. ಆದರೆ ಲೈಲಾಗೆ ಒಂದಷ್ಟು ಜನಪ್ರಿಯತೆ ತಂಡುಕೊಟ್ಟಿತ್ತು. ಲೈಲಾ ಬಾಂಗ್ಲಾ ದೇಶ ಮೂಲದ ಮುನೀರ್‌ ಖಾನ್‌ ಎನ್ನುವವನನ್ನು ವರಿಸಿದ್ದರು.

ಇದನ್ನೂ ಓದಿ: Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

Continue Reading

Latest

Ranveer Singh: 2 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್ ಧರಿಸಿ ಗಮನ ಸೆಳೆದ ರಣವೀರ್ ಸಿಂಗ್

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದು ಬಿಳಿ ಬಣ್ಣದ ಧಿರಿಸಿಗೆ ಮ್ಯಾಚಿಂಗ್ ಆಗಿ ಹೈ ಹೀಲ್ಸ್ ಧರಿಸಿದ್ದರು. ಜೊತೆಗೆ ಅವರು ಹಾಕಿದ್ದ ದಪ್ಪನಾದ ವಜ್ರದ ನೆಕ್ಲೇಸ್ ಎಲ್ಲರ ಗಮನ ಅವರತ್ತ ಸೆಳೆಯುವಂತೆ ಮಾಡಿತ್ತು.

VISTARANEWS.COM


on

By

Ranveer Singh
Koo

ಬಹು ದಿನಗಳ ಬಳಿಕ ಮುಂಬಯಿಯ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ದುಬಾರಿ ಮೌಲ್ಯದ ವಜ್ರದ ನೆಕ್ಲೆಸ್ (diamond necklace), ಹೈ ಹೀಲ್ಸ್ ನೊಂದಿಗೆ (high heels) ಬಿಳಿ ಬಣ್ಣದ ದಿರಸಿನಲ್ಲಿ ಜನಮನ ಸೆಳೆದರು. ಬಿಳಿ ಸ್ಯಾಟಿನ್ ಶರ್ಟ್ (white satin shirt) ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ (matching trousers) ರಣವೀರ್ ಸ್ಟೈಲಿಶ್ ಆಗಿ ಕಾಣುತ್ತಿದ್ದರು.

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರು ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದರು. ಕೆಲವು ದಿನಗಳ ಬಳಿಕ ನಗರದಲ್ಲಿ ಕಾಣಿಸಿಕೊಂಡ ಅವರು, ಬಿಳಿ ಬಣ್ಣದ ಹೈ ಹೀಲ್ಸ್ ಧರಿಸಿದ್ದು, ಅವರ ದಿರಸಿಗೆ ಮ್ಯಾಚಿಂಗ್ ಆಗಿ ಹೊಳೆಯುತ್ತಿತ್ತು. ದಪ್ಪನಾದ ವಜ್ರದ ನೆಕ್ಲೇಸ್ ಅನ್ನು ಧರಿಸಿದ್ಧ ಅವರು ನಡೆಯುತ್ತಿದ್ದಾಗ ಎಲ್ಲರ ದೃಷ್ಟಿ ಅವರತ್ತ ನೆಟ್ಟಿತ್ತು.

ರಣವೀರ್ ಬಿಳಿ ಸ್ಯಾಟಿನ್ ಶರ್ಟ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕೊಂಚ ಕಪ್ಪಾಗಿ ಕಾಣುತ್ತಿದ್ದರು. ಆದರೆ ಉಬರ್-ಸ್ಟೈಲಿಶ್ ವೈಟ್ ಬೆಲ್ಟ್‌ನೊಂದಿಗೆ ತಮ್ಮ ಧಿರಿಸನ್ನು ಪೂರ್ಣಗೊಳಿಸಿದ ಅವರು ನೀಲಿ ಬಣ್ಣದ ಸನ್ ಗ್ಲಾಸ್ ಧರಿಸಿದ್ದರು. ಆದರೆ ಈ ಸಂದರ್ಭದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು ಅವರು ಧರಿಸಿದ್ದ ಡೈಮಂಡ್ ನೆಕ್ಲೇಸ್.

ಎಷ್ಟು ಮೌಲ್ಯ?

ರಣವೀರ್ ಅವರು ಆಭರಣ ಸಂಗ್ರಹವನ್ನು ಇಷ್ಟಪಡುತ್ತಾರೆ. ಅವರಲ್ಲಿ ಸಾಕಷ್ಟು ಸಂಗ್ರಹವೂ ಇದೆ. ಬಿಳಿ ಬಣ್ಣದ ಸೂಟ್ ನೊಂದಿಗೆ ಅವರು 2 ಕೋಟಿ ರೂಪಾಯಿ ಮೌಲ್ಯದ ಬೆಸ್ಪೋಕ್ ಟಿಫಾನಿ ನೆಕ್ಲೇಸ್ ಅನ್ನು ಧರಿಸಿರುವುದು ಅವರ ಲುಕ್ ಗೆ ಹೆಚ್ಚಿನ ಮೆರುಗು ನೀಡಿತ್ತು. ದಪ್ಪನಾದ ಹೀಲ್ಸ್‌ಗಳನ್ನು ಧರಿಸಿ ಫೋಟೋಗಳಿಗೆ ಪೋಸ್ ನೀಡಿದ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ತಮ್ಮ ಆಭರಣ ಪ್ರೀತಿಯ ಬಗ್ಗೆ ಮಾತನಾಡಿದ ರಣವೀರ್ ಸಿಂಗ್, ವೈಯಕ್ತಿಕ, ಭಾವನಾತ್ಮಕ ಮೌಲ್ಯವನ್ನು ಹೊಂದಿರುವ ಆಭರಣಗಳು ನನ್ನ ನೆಚ್ಚಿನ, ಅತ್ಯಂತ ಪ್ರಿಯವಾದ ತುಣುಕುಗಳಾಗಿವೆ. ಇದರಲ್ಲಿ ಮದುವೆಯ ಉಂಗುರವೂ ಒಂದು. ಇದು ನನ್ನ ಹೆಂಡತಿ ದೀಪಿಕಾ ಪಡುಕೋಣೆ ನನಗೆ ಉಡುಗೊರೆಯಾಗಿ ನೀಡಿರುವುದು. ಇನ್ನೊಂದು ಪ್ಲಾಟಿನಂ ಎಂಗೇಜ್‌ಮೆಂಟ್ ರಿಂಗ್ ಆಗಿದೆ. ತದನಂತರ ಸಹಜವಾಗಿ ನನ್ನ ತಾಯಿಯ ವಜ್ರದ ಕಿವಿಯೋಲೆಗಳು ಮತ್ತು ನನ್ನ ಅಜ್ಜಿಯ ಮುತ್ತುಗಳು ಎಂದು ತಿಳಿಸಿದರು.


ಮೊದಲ ಮಗುವಿನ ನಿರೀಕ್ಷೆ

ಪತ್ನಿ ದೀಪಿಕಾ ಪಡುಕೋಣೆ ಅವರೊಂದಿಗೆ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ರಣವೀರ್ ದೀರ್ಘ ಸಮಯದ ಬಳಿಕ ಬುಧವಾರ ಮುಂಬಯಿಗೆ ಮರಳಿದ್ದಾರೆ. ಗರ್ಭಧಾರಣೆಯ ಘೋಷಣೆಯ ಅನಂತರ ದಂಪತಿ ತಮ್ಮ ಸಂಪೂರ್ಣ ಗಮನವನ್ನು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಕೇಂದ್ರೀಕರಿಸಿದ್ದಾರೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ತಮ್ಮ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ.

ಇದನ್ನೂ ಓದಿ: Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

ಚಿತ್ರೀಕರಣದಲ್ಲೂ ಬ್ಯುಸಿ

ಸದ್ಯ ರಣವೀರ್ ಫರ್ಹಾನ್ ಅಖ್ತರ್ ಅವರ ಡಾನ್ ಫ್ರ್ಯಾಂಚೈಸ್‌ನಲ್ಲಿ ಹೊಸ ಡಾನ್ ಆಗಲು ಸಿದ್ಧರಾಗಿದ್ದಾರೆ. ಇದನ್ನು ಮೊದಲು ಶಾರುಖ್ ಖಾನ್ ಗಾಗಿ ನಿರ್ಮಿಸಲಾಗಿತ್ತು. ಇದಲ್ಲದೇ ರಣವೀರ್ ಹನುಮಾನ್ ನಿರ್ದೇಶಕ ಪ್ರಶಾಂತ್ ವರ್ಮಾ ಅವರ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.

Continue Reading

ಬಾಲಿವುಡ್

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Janhvi Kapoor ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ.

VISTARANEWS.COM


on

Janhvi Kapoor Wears Cricket-Themed Dress
Koo

ಬೆಂಗಳೂರು: ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಜಾನ್ವಿ ಕಪೂರ್ ತನ್ನ ಇತ್ತೀಚಿನ ಫ್ಯಾಶನ್ ಸ್ಟೇಟ್‌ಮೆಂಟ್ ಮೂಲಕ ಗಮನ ಸೆಳೆದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಕ್ರಿಕೆಟ್ ಬಾಲ್‌ನಂತೆ ಕಾಣುವ ಉಡುಪನ್ನು ಧರಿಸಿದ್ದರು. ಇದೀಗ ಈ ಫೋಟೊ, ವಿಡಿಯೊಗಳು ವೈರಲ್‌ ಆಗಿವೆ.

ವೈರಲ್‌ ಆಗಿರುವ ವಿಡಿಯೊದಲ್ಲಿ, ಜಾಹ್ನವಿ ಕಪೂರ್ ಮತ್ತು ರಾಜ್‌ಕುಮಾರ್ ರಾವ್ ಒಟ್ಟಾಗಿ ಇರುವುದು ಕಾಣಬಹುದು. ಇದ್ದಕ್ಕಿದ್ದಂತೆ ರಾಜ್‌ಕುಮಾರ್ ರಾವ್ ಅವರು ನಟಿಯನ್ನು ತಿರುಗಿಸಿ ಅವರ ಉಡುಗೆಗೆ ಜೋಡಿಸಲಾದ ಕೆಂಪು ಬಣ್ಣದ ಕ್ರಿಕೆಟ್ ಬಾಲ್‌ಗಳ ಸಾಲನ್ನು ಕ್ಯಾಮೆರಾಗೆ ತೋರಿಸಿದರು. ಜಾಹ್ನವಿ ಕೂಡ ನಗುತ್ತಿದ್ದರು. ಅನೇಕರು ಜಾನ್ವಿ ಕಪೂರ್ ಹೊಸ ಸ್ಟೈಲ್‌ಗೆ ಹೊಗಳಿದ್ದಾರೆ.

ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ. ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ಇದನ್ನೂ ಓದಿ: Janhvi Kapoor: ರಾಧಿಕಾ ಮರ್ಚಂಟ್‌ ʻಬ್ರೈಡಲ್‌ ಶವರ್‌ʼ ಪಾರ್ಟಿಯಲ್ಲಿ ನಟಿ ಜಾನ್ವಿ ಕಪೂರ್!

ʻದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading
Advertisement
Dharwad News
ಕ್ರೈಂ18 seconds ago

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

cyber crime
ದೇಶ14 mins ago

Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

Murder Case
ಕ್ರೈಂ25 mins ago

Murder Case: ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

karnataka Weather Forecast
ಮಳೆ2 hours ago

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Joe Biden
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡನೀಯ

Cotton Candy
ಆರೋಗ್ಯ2 hours ago

Cotton Candy: ಕಾಟನ್‌ ಕ್ಯಾಂಡಿ ಯಾಕೆ ಎಷ್ಟೊಂದು ಅಪಾಯಕಾರಿ ಗೊತ್ತೆ?

Vitamin Side Effects
ಆರೋಗ್ಯ3 hours ago

Vitamin Side Effects: ವಿಟಮಿನ್‌ ಮಾತ್ರೆಗಳನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ?

Dina Bhavishya
ಭವಿಷ್ಯ3 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Narendra Modi
ದೇಶ8 hours ago

Narendra Modi: ಶಿಂಧೆ, ಅಜಿತ್‌ ಬಣಕ್ಕೆ ನೀವೇ ಸೇರಿಬಿಡಿ; ಠಾಕ್ರೆ, ಶರದ್‌ ಪವಾರ್‌ಗೆ ಮೋದಿ ಸಲಹೆ!

Wonderla Bengaluru
ಕರ್ನಾಟಕ8 hours ago

Wonderla Bengaluru: ತಾಯಂದಿರ ದಿನ ಹಿನ್ನೆಲೆ ವಂಡರ್‌ಲಾದಿಂದ ವಿಶೇಷ ಆಫರ್‌; 2 ಟಿಕೆಟ್‌ ಖರೀದಿಸಿದರೆ ತಾಯಿಗೆ ಫ್ರೀ ಎಂಟ್ರಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ18 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ19 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ21 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 day ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌