ವಿಸ್ತಾರ TOP 10 NEWS : ಮನ್‌ ಕಿ ಬಾತ್‌ನಲ್ಲಿ ಕರ್ನಾಟಕ ಕಲರವದಿಂದ, ಮೈಸೂರಿನಲ್ಲಿ ವಿಷ್ಣು ಸ್ಮಾರಕ ಲೋಕಾರ್ಪಣೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS : ಮನ್‌ ಕಿ ಬಾತ್‌ನಲ್ಲಿ ಕರ್ನಾಟಕ ಕಲರವದಿಂದ, ಮೈಸೂರಿನಲ್ಲಿ ವಿಷ್ಣು ಸ್ಮಾರಕ ಲೋಕಾರ್ಪಣೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara-top-10-news-Karnataka praised in mann ki baat to vishnuvardhan memorial inauguration and more news of the day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Mann Ki Baat : ಚಿಕ್ಕಬಳ್ಳಾಪುರದ ತಮಟೆ ವಾದಕ ಮುನಿವೆಂಕಟಪ್ಪ ಸೇರಿ ಪದ್ಮಶ್ರೀ ಪುರಸ್ಕೃತರನ್ನು ಸ್ಮರಿಸಿದ ಪ್ರಧಾನಿ ಮೋದಿ
ಈ ಸಲ ಗಣರಾಜ್ಯೋತ್ಸವದಿನದಂದು ಹಲವಾರು ಪ್ರಥಮಗಳ ಸಾಧನೆಯನ್ನು (Mann Ki Baat) ದಾಖಲಿಸಲಾಯಿತು. ಕರ್ತವ್ಯಪಥದಲ್ಲಿ ಸಿಆರ್‌ಪಿಎಫ್‌ನ ಒಂಟೆಗಳ ತುಕಡಿಯನ್ನು ಮಹಿಳಾ ಅಧಿಕಾರಿಗಳು ವಹಿಸಿದ್ದರು. ಈ ಸಲದ ಪದ್ಮ ಪ್ರಶಸ್ತಿಯನ್ನು ನಾನಾ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿರುವ ಗಣ್ಯರಿಗೆ ನೀಡಲಾಗಿದೆ. ತಳ ಸಮುದಾಯದಲ್ಲಿ ಸಮಾಜದ ಅಭಿವೃದ್ಧಿಗೆ, ಕಲೆ, ಸಂಸ್ಕೃತಿಗೆ ಕೊಡುಗೆ ಸಲ್ಲಿಸಿದವರಿಗೆ, ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಸಮಾಜ ಸುಧಾರಣೆಗೆ ಯತ್ನಿಸಿದವರಿಗೂ ಪದ್ಮ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನೆಚ್ಚಿನ ಮನ್‌ ಕಿ ಬಾತ್‌ನಲ್ಲಿ ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Mann Ki Baat: ಇ-ವೇಸ್ಟ್‌ನಿಂದ ಅಮೂಲ್ಯ ಲೋಹ ತೆಗೆಯುವ ಟೆಕ್ನಿಕ್‌, ಬೆಂಗಳೂರಿನ ಇ-ಪರಿಸರಕ್ಕೆ ಮೋದಿ ಮೆಚ್ಚುಗೆ
ಹೆಚ್ಚಿನ ಓದಿಗಾಗಿ: Mann Ki Baat : Aland Bhutai: ಕಲಬುರಗಿಯ ತಡಕಲ್‌ನ ಆಳಂದ ಭೂತಾಯಿ ರೈತರ ಕಂಪನಿಯನ್ನು ಪ್ರಶಂಸಿಸಿದ ಪ್ರಧಾನಿ ಮೋದಿ
ಹೆಚ್ಚಿನ ಓದಿಗಾಗಿ: Mann Ki Baat : ಬೀದರ್‌ನ ಹುಲಸೂರಿನಲ್ಲಿರುವ ಮಿಲೆಟ್‌ ಪ್ರೊಡ್ಯೂಸರ್‌ ಕಂಪನಿಯ ಸಾಧನೆಗೆ ಪ್ರಧಾನಿ ಮೋದಿ ಪ್ರಶಂಸೆ

2. BBC Documentary: ದೇಶದ ಜನರ ಮಧ್ಯೆ ಒಡಕು ಮೂಡಿಸಲು ಯತ್ನ, ಸಾಕ್ಷ್ಯಚಿತ್ರದ ಬೆನ್ನಲ್ಲೇ ಮೋದಿ ಹೇಳಿಕೆ
ಗೋದ್ರಾ ಹತ್ಯಾಕಾಂಡಕ್ಕೆ ನರೇಂದ್ರ ಮೋದಿ (Narendra Modi) ಅವರೇ ಕಾರಣ ಎಂಬುದಾಗಿ ಬಿಂಬಿಸಿರುವ ಬಿಬಿಸಿ ಡಾಕ್ಯುಮೆಂಟರಿ (BBC Documentary) ಕುರಿತು ಭಾರತದಲ್ಲಿ ಚರ್ಚೆಗಳು ನಡೆಯುತ್ತಿರುವ, ಜಾಗತಿಕವಾಗಿ ಸುದ್ದಿಯಾಗಿರುವ ಬೆನ್ನಲ್ಲೇ, “ಭಾರತದಲ್ಲಿ ಜನರ ಮನಸ್ಸುಗಳನ್ನು ಒಡೆಯಲು ಯತ್ನಿಸಲಾಗುತ್ತಿದೆ” ಎಂದು ನರೇಂದ್ರ ಮೋದಿ ಹೇಳಿದ್ದಾರೆ. ನ್ಯಾಷನಲ್‌ ಕೆಡೆಟ್‌ ಕಾರ್ಪ್ಸ್‌ (NCC) 75ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Pakistan: ಕಾಶ್ಮೀರ ಮರೆತು, ಭಾರತದ ಜತೆ ಸ್ನೇಹ ಸಂಪಾದಿಸಿ ಎಂದ ಸೌದಿ ಅರೆಬಿಯಾ; ಪಾಕಿಸ್ತಾನಕ್ಕೆ ಮುಖಭಂಗ
ಅಂತಾರಾಷ್ಟ್ರೀಯವಾಗಿ ಪಾಕಿಸ್ತಾನಕ್ಕೆ (Pakistan) ಮತ್ತೊಂದು ಮುಖಭಂಗವಾಗಿದೆ. ಕಾಶ್ಮೀರ ಸಮಸ್ಯೆಯನ್ನು (Kashmir issue) ಮರೆತು, ಭಾರತದೊಂದಿಗೆ ಸ್ನೇಹದಿಂದ ವರ್ತಿಸಿ ಎಂದು ಸೌದಿ ಅರೆಬಿಯಾ ಪಾಕಿಸ್ತಾನಕ್ಕೆ ಕಿವಿಮಾತು ಹೇಳಿದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತವು ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ್ದರ ಬಗ್ಗೆ ಅನಗತ್ಯವಾಗಿ ವಿವಾದವನ್ನು ಮಾಡುವುದು ಬಿಟ್ಟು ಬಿಡಿ ಎಂದು ಸೌದಿ ಅರೆಬಿಯಾ (saudi arabia) ಮತ್ತು ಯುಎಇ (UAE) ಸಲಹೆ ನೀಡಿದೆ ಎಂದು ತಿಳಿದು ಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. JDS Politics : ಜೆಡಿಎಸ್‌ನಲ್ಲಿ ಕುಮಾರಸ್ವಾಮಿ ನಿರ್ಧಾರವೇ ಅಂತಿಮ, ನಮ್ಮಿಬ್ಬರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದ ರೇವಣ್ಣ
ಕುಮಾರಣ್ಣ ನಮ್ಮ ಸರ್ವೋಚ್ಚ ನಾಯಕ. ಎಚ್‌.ಡಿ.ದೇವೇಗೌಡರು, ಎಚ್‌.ಡಿ. ಕುಮಾರಸ್ವಾಮಿ ಹಾಗೂ ಜಿಲ್ಲೆಯ ಶಾಸಕರು ಕುಳಿತು ಟಿಕೆಟ್‌ ನೀಡುವ ಬಗ್ಗೆ ತೀರ್ಮಾನ ಮಾಡುತ್ತಾರೆ. ನಾನು ಬದುಕಿರುವವರೆಗೂ ಕುಮಾರಸ್ವಾಮಿ ಹಾಗೂ ನಾನು ಹೊಡೆದಾಡುವ ಪ್ರಶ್ನೆಯೇ ಇಲ್ಲ, ನಮ್ಮಿಬ್ಬರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ (JDS Politics) ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. B.S. Yediyurappa : ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಬಿ.ಎಸ್‌. ಯಡಿಯೂರಪ್ಪ ಮಹತ್ವದ ಘೋಷಣೆ
ಮತ್ತೊಮ್ಮೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಕುರಿತು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ (B.S. Yediyurappa) ಮಹತ್ವದ ಘೋಷಣೆ ಮಾಡಿದ್ದಾರೆ. ಯಾವುದೇ ಕಾರಣಕ್ಕೆ ತಾವು ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Vishnuvardhan: ವಿಷ್ಣುವರ್ಧನ್ ಸ್ಮಾರಕವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ: ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಆಗ್ರಹಿಸಿದ ಅಭಿಮಾನಿಗಳು
ಮೈಸೂರಿನ ಎಚ್‌.ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಿರುವ ಸಾಹಸ ಸಿಂಹ ವಿಷ್ಣುವರ್ಧನ್ ( Vishnuvardhan ) ಅವರ ಸ್ಮಾರಕವನ್ನು ಭಾನುವಾರ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನಂತರ ಫೋಟೊ ಗ್ಯಾಲರಿ ವೀಕ್ಷಣೆ ಮಾಡಿ ವಿಷ್ಣುವರ್ಧನ್ ಅವರ 7 ಅಡಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು . ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್, ಪುತ್ರಿ ಕೀರ್ತಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Vishnuvardhan : ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬಸವರಾಜ ಬೊಮ್ಮಾಯಿ ಸಕಾರಾತ್ಮಕ ಸ್ಪಂದನೆ

7. U19 T20 World Cup : ಉದ್ಘಾಟನಾ ಆವೃತ್ತಿಯ ವಿಶ್ವ ಕಪ್​ ಗೆದ್ದು ದಾಖಲೆ ನಿರ್ಮಿಸಿದ ಭಾರತ ವನಿತೆಯರ ಕ್ರಿಕೆಟ್​ ತಂಡ
ಭಾರತ 19ರ ವಯೋಮಿತಿಯ ವನಿತೆಯರ ತಂಡ ಉದ್ಘಾಟನಾ ಆವೃತ್ತಿಯ ವಿಶ್ವ ಕಪ್​ (U19 T20 World Cup) ತನ್ನದಾಗಿಸಿಕೊಳ್ಳುವ ಮೂಲಕ ಇತಿಹಾಸ ಬರೆದಿದೆ. ಈ ಮೂಲಕ ಹಿರಿಯರ ತಂಡಕ್ಕೆ ಸಾಧ್ಯವಾಗದ ಸಾಧನೆಯನ್ನು ಕಿರಿಯರ ತಂಡ ಮಾಡಿದೆ. ಶಫಾಲಿ ವರ್ಮಾ ನೇತೃತ್ವದ ಭಾರತ ತಂಡ ಇಲ್ಲಿ ನಡೆದ (ಜನವರಿ 29ರಂದು) ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್​ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಟ್ರೋಫಿ ಎತ್ತಿ ಹಿಡಿಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Khalistani Sleeper Cells: ದೆಹಲಿಯಲ್ಲಿ ಖಲಿಸ್ತಾನಿ ಉಗ್ರರ ಸ್ಲೀಪರ್​ ಸೆಲ್​; ದೊಡ್ಡ ದಾಳಿಗೆ ಸಂಚು ನಡೆಯುತ್ತಿರುವ ಶಂಕೆ!
ಖಲಿಸ್ತಾನಿ ಉಗ್ರರ ಸ್ಲೀಪರ್​​ ಸೆಲ್​​ಗಳು ದೆಹಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಕ್ರಿಯವಾಗಿದೆ ಎಂದು ಗುಪ್ತಚರ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದಾಗಿ ಇಂಡಿಯಾ ಟುಡೆ ರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ. ಪಶ್ಚಿಮ ದೆಹಲಿಯ ಹಲವು ಪ್ರದೇಶಗಳಲ್ಲಿ ಇತ್ತೀಚೆಗೆ ಖಲಿಸ್ತಾನ ಪರ ಪೋಸ್ಟರ್​​ಗಳು, ಖಲಿಸ್ತಾನಿ ಉಗ್ರರ ಬರಹಗಳು ಕಾಣಿಸಿಕೊಳ್ಳುತ್ತಿವೆ. ಈ ವಿಷಯವನ್ನು ಪೊಲೀಸರು ಗಂಭೀರ ತನಿಖೆಗೆ ಕೈಗೆತ್ತಿಕೊಂಡಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Female Ownership : ಕರ್ನಾಟಕದ ಶೇ.68 ಆಸ್ತಿಗಳಿಗೆ ಮಹಿಳೆಯರು ಮಾಲೀಕರು : ವಿಶ್ವ ಬ್ಯಾಂಕ್‌ ಅಧ್ಯಯನ
ಮಹಿಳಾ ಸಬಲೀಕರಣದ ಕುರಿತು ಹೆಚ್ಚಾಗುತ್ತಿರುವ ಜಾಗೃತಿ, ಸರ್ಕಾರದ ಉತ್ತೇಜನ ಕ್ರಮಗಳು ಸೇರಿ ಕರ್ನಾಟಕದ ಶೇ.67.6 ಆಸ್ತಿಗಳಿಗೆ ಮಹಿಳೆಯರೂ ಮಾಲೀಕರಾಗಿದ್ದಾರೆ (Female Ownership). ಮಹಿಳೆಯರೇ ಪೂರ್ಣ ಮಾಲೀಕರಾಗಿರುವ ಹಾಗೂ ಜಂಟಿ ಮಾಲೀಕತ್ವ ಹೊಂದಿರುವ ಆಸ್ತಿಗಳನ್ನು ಪರಿಗಣಿಸಿ ವಿಶ್ವಬ್ಯಾಂಕ್‌ ಸಮೂಹದ ಅಧ್ಯಯನ ತಿಳಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Viral Video: ರೈಲ್ವೆ ಸಚಿವರ ಕ್ಲೀನಿಂಗ್ ವಿಡಿಯೋ ವೈರಲ್!, ಈಗ ವಂದೇ ಭಾರತ್ ಟ್ರೈನ್‌ಗಳಲ್ಲಿ ಸ್ವಚ್ಛತಾ ವ್ಯವಸ್ಥೆ ಬದಲು
ವಂದೇ ಭಾರತ್ ರೈಲುಗಳಲ್ಲಿ (Vande Bharat Train) ಪ್ರಯಾಣಿಕರು ಸ್ವಚ್ಛತೆಯನ್ನು ಕಾಪಾಡುತ್ತಿಲ್ಲ ಎಂಬ ಮಾಧ್ಯಮಗಳ ವರದಿಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆಯ, ಸ್ವಚ್ಛತೆ ಕೈಗೊಳ್ಳುವ ವ್ಯವಸ್ಥೆಯನ್ನು ಬದಲಿಸಿದೆ. ವಿಮಾನಗಳಲ್ಲಿ ಕೈಗೊಳ್ಳಲಾಗುವ ಸ್ವಚ್ಛತೆಯ ರೀತಿಯಲ್ಲಿ ರೈಲುಗಳಲ್ಲಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಸೂಚಿಸಿದ್ದಾರೆ. ಇದೇ ವೇಳೆ, ಬದಲಾದ ಸ್ವಚ್ಛತಾ ವ್ಯವಸ್ಥೆಯ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಷೇರ್ ಮಾಡಿಕೊಂಡಿದ್ದು, ಸಾಕಷ್ಟು ವೈರಲ್ ಆಗಿದೆ.‌ ವೈರಲ್‌ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

  1. Odisha Health Minister Dies: ಎಎಸ್‌ಐ ಗುಂಡೇಟಿನಿಂದ ಗಾಯಗೊಂಡಿದ್ದಒಡಿಶಾ ಸಚಿವ ನಬಾ ದಾಸ್‌ ನಿಧನ
  2. Kshatriya Convention : ಕ್ಷತ್ರಿಯ ಸಮಾಜದ ಜತೆಗೆ ಸರ್ಕಾರ ಸದಾ ಇರುತ್ತದೆ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ
  3. Gujarat riots | ಗುಜರಾತ್‌ ಹತ್ಯಾಕಾಂಡ ಹಿಂದುಗಳ ಪರಾಕ್ರಮ: ವಿವಾದಾತ್ಮಕ ಹೇಳಿಕೆ ನೀಡಿದ ವಿಹಿಂಪ ನಾಯಕ ಶರಣ್‌ ಪಂಪ್‌ವೆಲ್‌
  4. Kerala Governor: ನನ್ನನ್ನು ಹಿಂದೂ ಎಂದು ಕರೆಯಿರಿ: ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್
  5. Actor Mandeep Roy : ಹಿರಿಯ ನಟ ಮನ್‌ದೀಪ್ ರಾಯ್‌ ನಿಧನ
  6. Giant Wheel Accident: ಜೈಂಟ್ ವ್ಹೀಲ್‌ಗೆ ಸಿಕ್ಕಿ ಪೂರಾ ಕಿತ್ತು ಬಂದ ಬಾಲಕಿ ತಲೆಕೂದಲು: ಶ್ರೀರಂಗಪಟ್ಟಣದಲ್ಲಿ ಅವಘಡ
  7. ಸಂಡೇ ರೀಡ್‌ | ಕ್ಯಾಪ್ಟನ್‌ ಗೋಪಿನಾಥ್‌ ಜೀವನದ ಒಳʼಹರಿವುʼ ತೆರೆದಿಡುವ ಪುಸ್ತಕ ʼನಮ್ಮ ಭಾರತʼ
  8. ಸಾಲಭಂಜಿಕೆ ಅಂಕಣ: ಎರಡು ಕವಿತೆಗಳಲ್ಲಿ ಒಂದೇ ಹಾಡು
  9. ಪೋಸ್ಟ್‌ ಬಾಕ್ಸ್‌ 143 ಅಂಕಣ: ತರ್ಕವಿಲ್ಲ, ಅರ್ಥವಿಲ್ಲ, ಬರಿಯ ಪ್ರೀತಿಗೀತ!
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

Lok Sabha Election 2024: ಮತ ಹಾಕದೆ ಮೈಸೂರು ಅರಮನೆ ನೋಡಲು ಬಂದವರಿಗೆ ನೋ ಎಂಟ್ರಿ ಬೋರ್ಡ್‌ ಅನ್ನು ನೇತುಹಾಕಲಾಗುವುದು. ಏ. 26ರ ಮತದಾನದ ದಿನಕ್ಕೆ ಮಾತ್ರ ಈ ನಿರ್ಬಂಧ ಅನ್ವಯವಾಗಲಿದೆ. 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಿಗೆ ಇದು ಅನ್ವಯವಾಗಲಿದೆ. ಮತ ಹಾಕದೆ ಅರಮನೆ ನೋಡಲು ಬಂದರೆ ಪ್ರವೇಶ ನಿರಾಕರಿಸಲು ಚಿಂತನೆ ನಡೆಸಲಾಗಿದೆ. ಇಂದು ಸಂಜೆಯೊಳಗೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹೇಳಿದ್ದಾರೆ.

VISTARANEWS.COM


on

Lok Sabha Election 2024 Are you planning to visit Mysore Palace on April 26 No entry if no vote
Koo

ಮೈಸೂರು/ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ (Voting) ನಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಹಲವು ಕಾರ್ಯತಂತ್ರಗಳನ್ನು ಹೆಣೆಯುತ್ತಿದೆ. ಅಲ್ಲದೆ, ಈಗಾಗಲೇ ಮತದಾನ ನಡೆಯುವ ದಿನ ಸರ್ಕಾರಿ ಕಚೇರಿಗಳ ಸಹಿತ ಐಟಿ ಬಿಟಿ ಕಂಪನಿಗಳಲ್ಲೂ ವೇತನ ಸಹಿತ ರಜೆ ನೀಡಲಾಗಿದೆ. ಈಗ ಮೈಸೂರಿನಲ್ಲಿ ಸಹ ಮಹತ್ವದ ಆದೇಶವೊಂದು ಹೊರಬಿದ್ದಿದೆ. ಏ. 26ರಂದು ಮೈಸೂರು ಅರಮನೆ (Mysore Palace) ವೀಕ್ಷಣೆಗೆ ಬರುವವರು ಕಡ್ಡಾಯವಾಗಿ ಮತ ಚಲಾವಣೆ ಮಾಡಿ ಬಂದಿರಬೇಕು ಎಂದು ಸೂಚನೆ ನೀಡಿದ್ದಾರೆ. ಇಲ್ಲದಿದ್ದರೆ ಪ್ರವೇಶವನ್ನು ನಿರಾಕರಣೆ ಮಾಡಲಾಗುತ್ತದೆ ಎಂದು ಘೋಷಿಸಲಾಗಿದೆ.

ಮತ ಹಾಕದೆ ಮೈಸೂರು ಅರಮನೆ ನೋಡಲು ಬಂದವರಿಗೆ ನೋ ಎಂಟ್ರಿ ಬೋರ್ಡ್‌ ಅನ್ನು ನೇತುಹಾಕಲಾಗುವುದು. ಏ. 26ರ ಮತದಾನದ ದಿನಕ್ಕೆ ಮಾತ್ರ ಈ ನಿರ್ಬಂಧ ಅನ್ವಯವಾಗಲಿದೆ. 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಿಗೆ ಇದು ಅನ್ವಯವಾಗಲಿದೆ. ಮತ ಹಾಕದೆ ಅರಮನೆ ನೋಡಲು ಬಂದರೆ ಪ್ರವೇಶ ನಿರಾಕರಿಸಲು ಚಿಂತನೆ ನಡೆಸಲಾಗಿದೆ. ಇಂದು ಸಂಜೆಯೊಳಗೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹೇಳಿದ್ದಾರೆ.

ಏಪ್ರಿಲ್‌ 26ರಂದು ಬೆಂಗಳೂರಲ್ಲಿ ಐಟಿ ಕಂಪನಿಗಳಿಗೆ ಕಡ್ಡಾಯ ರಜೆ; ತುಷಾರ್ ಗಿರಿನಾಥ್ ಆದೇಶ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಖಾಡಕ್ಕಿಳಿದಿವೆ. ಎಲ್ಲ ಕಡೆಯೂ ಮತ ಬೇಟೆ ಭರದಿಂದ ಸಾಗಿದೆ. ಇನ್ನು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್‌ 26ರಂದು ನಡೆಯಲಿದೆ. ಈ ದಿನ (Voting Day) ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕಿದೆ. ಇನ್ನು ಐಟಿ – ಬಿಟಿ (IT BT Sector) ಮಂದಿ ಮತದಾನದ ವೇಳೆ ಹಿಂದೇಟು ಹಾಕಬಾರದು. ಎಲ್ಲರೂ ಮತ ಚಲಾವಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಅಂದು ಕಡ್ಡಾಯವಾಗಿ ರಜೆ ನೀಡಬೇಕು ಎಂದು ಬಿಬಿಎಂಪಿ ಆಯುಕ್ತ, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ (Tushar Girinath) ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ಮತದಾನದ ದಿನದಂದು ಸಂಬಳ ಸಹಿತ ರಜೆ ನೀಡಲು ಐಟಿ ಕಂಪನಿಗಳು ಸಹ ಒಪ್ಪಿಗೆ ನೀಡಿವೆ.

ಮತದಾನ ಸಂಬಂಧ ಐಟಿಬಿಟಿ ಕಂಪನಿಗಳಿಗೆ ಬಿಬಿಎಂಪಿಯಿಂದ ಆದೇಶವನ್ನು ರವಾನೆ ಮಾಡಲಾಗಿದೆ. ಮತದಾನದ ದಿನ ಕಂಪನಿಗಳು ಕಡ್ಡಾಯವಾಗಿ ರಜೆ ನೀಡಬೇಕು. ಸಿಬ್ಬಂದಿ ಮತದಾನ ಮಾಡುವ ಸಂಬಂಧ ರಜೆಯನ್ನು ಕೊಡಬೇಕು. ಈಗಾಗಲೇ ರಾಜ್ಯ ಸರ್ಕಾರ ಕೂಡ ರಜೆಯನ್ನು ಘೋಷಣೆ ಮಾಡಲಾಗಿದೆ. ಇನ್ನು ಮತದಾನ ಹೆಚ್ಚಳ ಸಂಬಂಧ ಐಟಿ ಬಿಟಿ ಕಂಪನಿಗಳ ಜತೆಗೆ ಬಿಬಿಎಂಪಿ ಮಂಗಳವಾರ (ಏಪ್ರಿಲ್‌ 16) ಸಭೆ ನಡೆಸಲಾಗಿದೆ. ಸಭೆ ಮಾಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಅಲ್ಲದೆ, ತಮ್ಮ ತಮ್ಮ ನೌಕರರು ತಪ್ಪದೇ ಮತದಾನ ಮಾಡಲು ಯಾವ ರೀತಿ ಪ್ರೋತ್ಸಾಹವನ್ನು ನೀಡಬಹುದು ಎಂಬ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆಗಳನ್ನು ನಡೆಸಲಾಗಿತ್ತು.

ಒಪ್ಪಿದ ಐಟಿ ಬಿಟಿ ಕಂಪನಿಗಳು

ಬಳಿಕ ಮತದಾನದ ದಿನದಂದು ಸಂಬಳ ಸಹಿತ ರಜೆ ನೀಡಲು ಐಟಿ ಕಂಪನಿಗಳು ಒಪ್ಪಿಗೆ ನೀಡಿದ್ದವು. ಈ ಹಿನ್ನೆಲೆಯಲ್ಲಿ 5 ಸಾವಿರಕ್ಕೂ ಅಧಿಕ ಐಟಿ ಬಿಟಿ ಕಂಪನಿಗಳು ಬಿಬಿಎಂಪಿ ಮನವಿಗೆ ಸ್ಪಂದಿಸಿದ್ದವು. ಹೀಗಾಗಿ ಮತದಾನ ಪ್ರಮಾಣದಲ್ಲಿ ಹೆಚ್ಚಳವಾಗುವ ನಿರೀಕ್ಷೆಯನ್ನು ಹೊಂದಲಾಗಿದೆ.

ಕರ್ನಾಟಕದಲ್ಲಿ ಮತದಾನ ನಡೆಯುವ 2 ದಿನವೂ ಸಾರ್ವತ್ರಿಕ ರಜೆ ಘೋಷಣೆ

ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಮತದಾನ ನಡೆಯುವ (Voting Day) ಆ ಎರಡು ದಿನವೂ ಸಾರ್ವತ್ರಿಕ ರಜೆಯನ್ನು (Government Holiday) ಘೋಷಿಸಲಾಗಿದೆ. ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆಯನ್ನು (Paid leave) ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಈಗಾಗಲೇ ಆದೇಶಿಸಿದ್ದಾರೆ.

ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ದಿನಗಳಂದು ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದರು.

ದೇಶದಲ್ಲಿ ಏಳು ಹಂತದಲ್ಲಿ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್‌ 19ರಂದು ಮೊದಲ ಹಂತದ ಚುನಾವಣೆ ಆರಂಭವಾಗಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಎರಡು ಮತ್ತು ಮೂರನೇ ಹಂತದಲ್ಲಿ ತಲಾ 14 ಜಿಲ್ಲೆಗಳಂತೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್‌ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಏಪ್ರಿಲ್‌ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ

1.ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)

2.ಹಾಸನ (ಸಾಮಾನ್ಯ)

3.ದಕ್ಷಿಣ ಕನ್ನಡ (ಸಾಮಾನ್ಯ)

4.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)

5..ತುಮಕೂರು (ಸಾಮಾನ್ಯ)

6.ಮಂಡ್ಯ (ಸಾಮಾನ್ಯ)

7.ಮೈಸೂರು-ಕೊಡಗು (ಸಾಮಾನ್ಯ)

8.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)

9. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)

10 ಬೆಂಗಳೂರು ಉತ್ತರ (ಸಾಮಾನ್ಯ)

11. ಬೆಂಗಳೂರು ಕೇಂದ್ರ (ಸಾಮಾನ್ಯ)

12. ಬೆಂಗಳೂರು ದಕ್ಷಿಣ (ಸಾಮಾನ್ಯ)

13.ಚಿಕ್ಕಬಳ್ಳಾಪುರ (ಸಾಮಾನ್ಯ)

14.ಕೋಲಾರ (ಪರಿಶಿಷ್ಟ ಜಾತಿ ಮೀಸಲು)\

Lok Sabha Election 2024 Karnataka declares 2 day general holiday

ಎರಡನೇ ಹಂತದ ಮತದಾನದ ವಿವರ ಹೀಗಿದೆ

ಚುನಾವಣೆ ಘೋಷಣೆ: ಮಾರ್ಚ್‌ 16

ಗಜೆಟ್‌ ನೋಟಿಫಿಕೇಶನ್‌: ಮಾರ್ಚ್‌ 28

ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ: ಏಪ್ರಿಲ್‌ 04

ನಾಮಪತ್ರ ಪರಿಶೀಲನೆ: ಏಪ್ರಿಲ್‌ 05

ನಾಮಪತ್ರ ಹಿಂದೆಗೆತಕ್ಕೆ ಕೊನೆ ದಿನ: ಏಪ್ರಿಲ್‌ 08

ಮತದಾನದ ದಿನಾಂಕ: ಏಪ್ರಿಲ್‌ 26, ಶುಕ್ರವಾರ

Lok Sabha Election 2024 Karnataka declares 2 day general holiday

ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ

1.ಚಿಕ್ಕೋಡಿ (ಸಾಮಾನ್ಯ)

2.ಬೆಳಗಾವಿ (ಸಾಮಾನ್ಯ)

3.ಬಾಗಲಕೋಟೆ (ಸಾಮಾನ್ಯ)

4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)

5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)

6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)

7.ಬೀದರ್ (ಸಾಮಾನ್ಯ)

8,ಕೊಪ್ಪಳ (ಸಾಮಾನ್ಯ)

9.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)

10. ಹಾವೇರಿ (ಸಾಮಾನ್ಯ)

11. ಧಾರವಾಡ (ಸಾಮಾನ್ಯ)

12.ಉತ್ತರ ಕನ್ನಡ (ಸಾಮಾನ್ಯ)

13.ದಾವಣಗೆರೆ (ಸಾಮಾನ್ಯ)

14.ಶಿವಮೊಗ್ಗ (ಸಾಮಾನ್ಯ)

Lok Sabha Election 2024 Karnataka declares 2 day general holiday

ಎರಡನೇ ಹಂತದ ಮತದಾನದ ವಿವರ ಹೀಗಿದೆ

ಚುನಾವಣೆ ಘೋಷಣೆ: ಮಾರ್ಚ್‌ 16

ಗಜೆಟ್‌ ನೋಟಿಫಿಕೇಶನ್‌: ಏಪ್ರಿಲ್‌ 12

ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ: ಏಪ್ರಿಲ್‌ 19

ನಾಮಪತ್ರ ಪರಿಶೀಲನೆ: ಏಪ್ರಿಲ್‌ 20

ನಾಮಪತ್ರ ಹಿಂದೆಗೆತಕ್ಕೆ ಕೊನೆ ದಿನ: ಏಪ್ರಿಲ್‌ 22

ಮತದಾನದ ದಿನಾಂಕ: ಮೇ 07, ಮಂಗಳವಾರ

ಇದನ್ನೂ ಓದಿ: Lok Sabha Election 2024: ಡಿಕೆಶಿ – ಎಚ್‌ಡಿಕೆ ವೈಯಕ್ತಿಕ ಕಾದಾಟಕ್ಕೆ ಇದೇ ಕಾರಣ! ಏನಿದು ಇನ್‌ಸೈಡ್‌ ಕಹಾನಿ?

ಈಗ ರಾಜ್ಯದ ರಾಜಕೀಯ ಸ್ಥಿತಿ ಗತಿ ಹೇಗಿದೆ?

ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು, ಎಲ್ಲ ಕಡೆ ಕಾಂಗ್ರೆಸ್‌ ಮತ್ತು ಎನ್‌ಡಿಎ ನಡುವೆ ಪ್ರಬಲ ಪೈಪೋಟಿ ಇದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆದ್ದಿದ್ದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಲಾ ಒಂದು ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆದಿದ್ದರು.

ಈ ಬಾರಿ ಬಿಜೆಪಿ ಮತ್ತು ಜೆಡಿಎಸ್‌ ಗಳು ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದ್ದು 28 ಕ್ಷೇತ್ರಗಳನ್ನು ಹಂಚಿಕೊಂಡಿವೆ. ಬಿಜೆಪಿ 25 ಮತ್ತು ಜೆಡಿಎಸ್‌ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು ಹೇಳಲಾಗಿದೆ. (ಇನ್ನೂ ಅಂತಿಮವಾಗಿಲ್ಲ.) ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಎನ್‌ಡಿಎ ನಡುವೆ ಹೋರಾಟ ನಡೆಯಲಿದೆ.

Continue Reading

ಹುಬ್ಬಳ್ಳಿ

Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Kidnap Case : ಜಾತ್ರೆಗೆ ಹೋಗಿ ಬರುವುದಾಗಿ ಮನೆಯಿಂದ ಹೊರಹೋದ ಅತಿಥಿ ಶಿಕ್ಷಕಿಯನ್ನು ಯುವಕನೊಬ್ಬ ಕಿಡ್ನ್ಯಾಪ್‌ ಮಾಡಿದ್ದಾನೆ. ಈ ಬಗ್ಗೆ ಯುವತಿ ತಂದೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ಮಗಳನ್ನು ಹುಡುಕಿಕೊಡಿ ಎಂದು ಮನವಿ ಮಾಡಿದ್ದಾರೆ.

VISTARANEWS.COM


on

By

Murder case in hublli
Koo

ಹುಬ್ಬಳ್ಳಿ: ಯುವಕನೊರ್ವ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ್ದಾನೆ (Kidnap Case) ಎಂಬ ಆರೋಪವೊಂದು ಕೇಳಿ ಬಂದಿದೆ. ಮಗಳ ಅಪಹರಣವಾಗಿದೆ ಎಂದು ಶಿಕ್ಷಕಿ ತಂದೆಯಿಂದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಳಸ ಗ್ರಾಮದ ಅಕ್ಷತಾ ಕಳಸೂರು ಅಪಹರಣಕ್ಕೊಳಗಾದ ಅತಿಥಿ ಶಿಕ್ಷಕಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಸುಬಾನಿ ದೊಡ್ಡಮನಿ ಎಂಬಾತನ ವಿರುದ್ಧ ದೂರು ಕೊಟ್ಟಿದ್ದಾರೆ. ಏಪ್ರಿಲ್ 18 ರಂದು ಯುವತಿಯನ್ನು ಯಾವುದೋ ದುರುದ್ದೇಶದಿಂದ ಅಪಹರಿಸಿದ್ದಾನೆಂದು ಅಕ್ಷತಾ ತಂದೆ ಆರೋಪಿಸಿದ್ದಾರೆ. ನಾಲ್ಕೈದು ವರ್ಷಗಳಿಂದ ಈ ಸುಬಾನಿ ಯುವತಿಯನ್ನು ಹಿಂಬಾಲಿಸುವುದು, ಪೀಡಿಸುವುದು, ದಾರಿಯಲ್ಲಿ ಬರುವಾಗ ಅಡ್ಡಗಟ್ಟುವುದು ಮಾಡುತ್ತಿದ್ದ. ಈ ಬಗ್ಗೆ ಅಕ್ಷತಾ ತನ್ನ ತಂದೆ ಬಳಿ ಹೇಳಿಕೊಂಡಿದ್ದಳು.

ಹೀಗಾಗಿ ಸುಬಾನಿ ಮತ್ತು ಕುಟುಂಬಸ್ಥರನ್ನು ಕರೆಸಿ ಬುದ್ಧಿವಾದ ಹೇಳಿ, ಮತ್ತೆ ಮಗಳಿಗೆ ತೊಂದರೆ ಕೊಡದಂತೆ ಎಚ್ಚರಿಕೆ ಕೊಟ್ಟಿದ್ದರು. ಆ ನಂತರವೂ ಈತನ ಕಾಟ ಮುಂದುವರಿದಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಳಸ ಗ್ರಾಮದ ಅಖಂಡೇಶ್ವರ ಜಾತ್ರೆಗೆ ಹೋಗಿ ಬರುವುದಾಗಿ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಹೋದವಳು ನಾಪತ್ತೆಯಾಗಿದ್ದಾಳೆ. ಅಕ್ಷತಾಳನ್ನು ಸುಬಾನಿ ಮಾಬುಸಾಬ್ ದೊಡ್ಡಮನಿ ಅಪಹರಿಸಿದ್ದಾನೆಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

ಬೆಂಗಳೂರು: ಕಳೆದ ಏ. 19ರಂದು ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ಮಹಿಳೆಯೊಬ್ಬರ ಬರ್ಬರ (Murder Case) ಹತ್ಯೆಯಾಗಿತ್ತು. ಶೋಭಾ (48) ಎಂಬಾಕೆಯ ಮೃತದೇಹವು ಬೆಡ್‌ ರೂಮಿನಲ್ಲಿ ನಗ್ನವಾಗಿ ಬಿದ್ದಿತ್ತು. ಇದೀಗ ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿರುವ ಕೊಡಿಗೇಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಹೇರೋಹಳ್ಳಿ ಮೂಲದ ನವೀನ್ ಬಂಧಿತ ಆರೋಪಿಯಾಗಿದ್ದಾನೆ. ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದ ಶೋಭಾ, ಕೊಡಿಗೆಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದರು. ಈ ವೇಳೆ ಶೋಭಾಗೆ ಇನ್ಸ್ಟಾಗ್ರಾಂನಲ್ಲಿ ಆರೋಪಿ ನವೀನ್ ಪರಿಚಯವಾಗಿದ್ದ. ಪರಿಚಯವು ಸ್ನೇಹ, ಪ್ರೀತಿಗೆ ತಿರುಗಿ, ಮಗನ ವಯಸ್ಸಿನ ಯುವಕನೊಂದಿಗೆ ಶೋಭಾ ಅನೈತಿಕ ಸಂಬಂಧವನ್ನು ಹೊಂದಿದ್ದರು.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸುತ್ತಿದ್ದಳು. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲಿ ಜತೆಯಾಗಿ ಇದ್ದಾಗಲೇ ಬರ್ಬರವಾಗಿ ಕೊಂದು ಪರಾರಿ ಆಗಿದ್ದ.

ನಂತರ ಶೋಭಾ ಮಗಳು ತಾಯಿಗೆ ಎಷ್ಟು ಬಾರಿ ಫೋನ್‌ ಮಾಡಿದರೂ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡು, ಮನೆಗೆ ಬಂದು ನೋಡಿದಾಗ ತಾಯಿ ನಗ್ನ ಸ್ಥಿತಿಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದು ಕಣ್ಣಿಗೆ ಬಿದ್ದಿತ್ತು. ಆ ಪ್ರಕರಣವು ಬೆಳಕಿಗೆ ಬಂದಿತ್ತು. ಸದ್ಯ ಆರೋಪಿಯನ್ನು ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Modi in Karnataka: ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

VISTARANEWS.COM


on

Modi in Karnataka PM Narendra Modi to visit from April 28 and 29
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ರಿಎಂಟ್ರಿ ಕೊಡಲಿದ್ದಾರೆ. ಈ ವೇಳೆ ಮೋದಿ (Modi in Karnataka) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್‌ 28 ಹಾಗೂ 29ರಂದು ಕರ್ನಾಟಕದಲ್ಲಿ ಜನರನ್ನು ಮೋಡಿ ಮಾಡಲು ಮೋದಿ ಮುಂದಾಗಿದ್ದಾರೆ.

ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

ಮೂರು ಕಡೆಯೂ ಬೃಹತ್‌ ಸಮಾವೇಶ

ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಬೃಹತ್‌ ಸಮಾವೇಶ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಂದು ಬೆಳಗಾವಿಯಲ್ಲಿ 28 ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

29ರಂದು 4 ಕಡೆ ಸಮಾವೇಶ

ಏಪ್ರಿಲ್‌ 29ರಂದು ಕಲಬುರಗಿ, ಬಳ್ಳಾರಿ, ರಾಯಚೂರು ಅಥವಾ ಕೊಪ್ಪಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶವನ್ನು ನಡೆಸಲಿದ್ದಾರೆ.

ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ

ಮಂಗಳವಾರ (ಏಪ್ರಿಲ್‌ 23) ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹಾಗೂ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka Vadra) ಅವರು ಅಬ್ಬರದ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿಯೇ ಮಂಗಳವಾರ ಅಮಿತ್‌ ಶಾ ಹಾಗೂ ಪ್ರಿಯಾಂಕಾ ವಾದ್ರಾ ಅವರು ಪ್ರಚಾರ ಮಾಡುತ್ತಿರುವುದು ವಿಶೇಷವಾಗಿದೆ. ಇಂದು ಸಂಜೆ 7.50ಕ್ಕೆ ಅಮಿತ್‌ ಶಾ ಅವರು ತೇಜಸ್ವಿ ಸೂರ್ಯ ಪರ ರೋಡ್‌ ಶೋ ನಡೆಸಲಿದ್ದಾರೆ. ಸ್ವಾಮಿ ವಿವೇಕಾನಂದ ವೃತ್ತದಿಂದ ಸೇಂಟ್‌ ಫ್ರಾನ್ಸಿಸ್‌ ಶಾಲೆವರೆಗೂ ಅಮಿತ್‌ ಶಾ ಅವರು ರೋಡ್‌ ಶೋ ನಡೆಸುವ ಮೂಲಕ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿದ್ದಾರೆ. ರೋಡ್‌ ಶೋಗಾಗಿ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. 8.45ರವರೆಗೆ ರೋಡ್‌ ಶೋ ನಡೆಯಲಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಪ್ರಿಯಾಂಕಾ ವಾದ್ರಾ ಅವರು ಭಾಷಣ ಮಾಡಲಿದ್ದಾರೆ. ಇದಾದ ನಂತರ ಸಂಜೆ ಬೆಂಗಳೂರಿಗೆ ಆಗಮಿಸುವ ಪ್ರಿಯಾಂಕಾ ವಾದ್ರಾ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಪ್ರಚಾರ ನಡೆಸುವ ಮೂಲಕ ಹೆಣ್ಣುಮಕ್ಕಳ ಮತ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.

ಅಮಿತ್‌ ಶಾ ಅವರು ಬೊಮ್ಮನಹಳ್ಳಿ ವೃತ್ತದಿಂದ ಪ್ರಚಾರ ಆರಂಭಿಸಿದರೆ, ಪ್ರಿಯಾಂಕಾ ವಾದ್ರಾ ಅವರು ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಎಚ್.ಎಸ್. ಆರ್ ಬಡಾವಣೆಯಿಂದ ಪ್ರಚಾರ ಆರಂಭಿಸಲಿದ್ದಾರೆ. ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಏಪ್ರಿಲ್‌ 24ರಂದೇ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇದರಿಂದಾಗಿ ಮಂಗಳವಾರದ ಪ್ರಚಾರವು ಪ್ರಾಮುಖ್ಯತೆ ಪಡೆದಿದೆ. ಕರ್ನಾಟಕದಲ್ಲಿ ಈಗಾಗಲೇ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿದ್ದಾರೆ.

Continue Reading

ಬೆಂಗಳೂರು

Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

Murder Case : ಕೊಡಿಗೆಹಳ್ಳಿಯಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ ನಡೆದಿತ್ತು. ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಇದೀಗ ಹಂತಕನನ್ನು ಪೊಲೀಸರು ಬಂಧಿಸಿದ್ದು, ಮಹಿಳೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಹತ್ಯೆ ಮಾಡಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ.

VISTARANEWS.COM


on

By

Murder Case In Bengaluru
ಆರೋಪಿ ನವೀನ್‌ ಕೊಲೆಯಾದ ಶೋಭಾ
Koo

ಬೆಂಗಳೂರು: ಕಳೆದ ಏ. 19ರಂದು ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ಮಹಿಳೆಯೊಬ್ಬರ ಬರ್ಬರ (Murder Case) ಹತ್ಯೆಯಾಗಿತ್ತು. ಶೋಭಾ (48) ಎಂಬಾಕೆಯ ಮೃತದೇಹವು ಬೆಡ್‌ ರೂಮಿನಲ್ಲಿ ನಗ್ನವಾಗಿ ಬಿದ್ದಿತ್ತು. ಇದೀಗ ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿರುವ ಕೊಡಿಗೇಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಹೇರೋಹಳ್ಳಿ ಮೂಲದ ನವೀನ್ ಬಂಧಿತ ಆರೋಪಿಯಾಗಿದ್ದಾನೆ. ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದ ಶೋಭಾ, ಕೊಡಿಗೆಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದರು. ಈ ವೇಳೆ ಶೋಭಾಗೆ ಇನ್ಸ್ಟಾಗ್ರಾಂನಲ್ಲಿ ಆರೋಪಿ ನವೀನ್ ಪರಿಚಯವಾಗಿದ್ದ. ಪರಿಚಯವು ಸ್ನೇಹ, ಪ್ರೀತಿಗೆ ತಿರುಗಿ, ಮಗನ ವಯಸ್ಸಿನ ಯುವಕನೊಂದಿಗೆ ಶೋಭಾ ಅನೈತಿಕ ಸಂಬಂಧವನ್ನು ಹೊಂದಿದ್ದರು.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸುತ್ತಿದ್ದಳು. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲಿ ಜತೆಯಾಗಿ ಇದ್ದಾಗಲೇ ಬರ್ಬರವಾಗಿ ಕೊಂದು ಪರಾರಿ ಆಗಿದ್ದ.

ನಂತರ ಶೋಭಾ ಮಗಳು ತಾಯಿಗೆ ಎಷ್ಟು ಬಾರಿ ಫೋನ್‌ ಮಾಡಿದರೂ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡು, ಮನೆಗೆ ಬಂದು ನೋಡಿದಾಗ ತಾಯಿ ನಗ್ನ ಸ್ಥಿತಿಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದು ಕಣ್ಣಿಗೆ ಬಿದ್ದಿತ್ತು. ಆ ಪ್ರಕರಣವು ಬೆಳಕಿಗೆ ಬಂದಿತ್ತು. ಸದ್ಯ ಆರೋಪಿಯನ್ನು ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Love Case : ಪ್ರಿಯತಮೆಯ ಮದುವೆ ದಿನವೇ ಪ್ರಿಯತಮನ ರುಂಡ-ಮುಂಡ ಕಟ್‌; ಕೊಲೆಯೋ? ಆತ್ಮಹತ್ಯೆಯೋ?

ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

ರಾಯಚೂರು: ರಾಯಚೂರಿನಲ್ಲಿ ಮುಸ್ಲಿಂ ಯುವಕನ ಬರ್ಬರ ಹತ್ಯೆ (Murder Case) ನಡೆದಿದೆ. ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿರುವ ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ನಡೆದಿದೆ ಎನ್ನಲಾಗಿದೆ. ಖಾದರ್ ಭಾಷಾ (28) ಕೊಲೆಯಾದವನು. ಮಾರುತಿ ಆರೋಪಿಯಾಗಿದ್ದಾನೆ.

ಪತ್ನಿ‌ ಮೇಲೆ ಕಣ್ಣು ಹಾಕಿದ ಖಾದರ್‌ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಲಾಗಿದೆ. ಹನುಮ ಜಯಂತಿ ದಿನದಂದೆ ಬರ್ಬರವಾಗಿ ಕೊಲೆಗೈಯಲಾಗಿದೆ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಮಾರುತಿ ಕೊಲೆಗೈದು ತಾನೇ ಖುದ್ದಾಗಿ ಠಾಣೆಗೆ ಬಂದು ಶರಣಾಗತಿ ಆಗಿದ್ದಾನೆ.

ಮಂಗಳವಾರ ಬೆಳಗ್ಗೆ 9 ಗಂಟೆಗೆ ಸುಮಾರಿಗೆ ತುಗ್ಗಲದಿನ್ನಿ ಗ್ರಾಮದಲ್ಲಿ ಕೃತ್ಯ ನಡೆದಿದೆ. ಕೊಲೆಯಲ್ಲಿ 6 ರಿಂದ 7 ಜನ ಭಾಗಿಯಾಗಿರುವ ಶಂಕೆ ಇದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿ ಬಿದ್ದಿದ್ದ ಖಾದರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು

ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ದಲಿತ ಹಿಂದು ಯುವಕನ‌ (Murder Case ) ಹತ್ಯೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಕೇಶ್ (22) ಮೃತ ದುರ್ದೈವಿ.

ಭಾನುವಾರ ರಾತ್ರಿ ರಾಕೇಶ್‌ ಊಟ ಮಾಡಲು ಹೊರಗೆ ಬಂದಿದ್ದ. ಅನ್ಯಕೋಮಿನವರ ಮನೆಯಲ್ಲಿ ರೊಟ್ಟಿ ಮಾರಾಟ ಮಾಡುತ್ತಿದ್ದರು. ಹೀಗಾಗಿ ಮನೆ ಸಮೀಪದಲ್ಲೇ ಇರುವ ರೊಟ್ಟಿ ಕೇಂದ್ರಕ್ಕೆ ರಾಕೇಶ್‌ ತೆರಳಿದ್ದ. ಈ ವೇಳೆ ಮನೆ ಬಾಗಿಲು ಬಡಿದು ರೊಟ್ಟಿ ಕೇಳಿದ್ದ, ಆದರೆ ರೊಟ್ಟಿ ಇಲ್ಲವೆಂದು ಕಳುಹಿಸಿದ್ದರು. ಮನೆಗೆ ವಾಪಸ್ ಬಂದ ರಾಕೇಶ್‌ ಖಾಲಿ ಹೊಟ್ಟೆಯಲ್ಲಿ ನಿದ್ರೆಗೆ ಜಾರಿದ್ದ.

ಸ್ವಲ್ಪ ಸಮಯದ ನಂತರ ರಾಕೇಶ್‌ ಮನೆಗೆ ಬಂದಿದ್ದ ಅನ್ಯಕೋಮಿನ ಯುವಕರು, ರೊಟ್ಟಿ ಕೇಳಲು ಮನೆಗೆ ಯಾಕೆ ಬಂದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಪ್ರಮುಖ ಆರೋಪಿ ಫೈಯಾಜ್ ಸೇರಿ ನಾಲ್ವರು ರಾಕೇಶ್‌ನ ಗುಪ್ತಾಂಗಕ್ಕೆ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ರಾಕೇಶ್‌ ಉಸಿರುಚೆಲ್ಲಿದ್ದಾನೆ ಎಂದು ರಾಕೇಶ್ ತಾಯಿ ಆರೋಪಿಸಿದ್ದಾರೆ.

ಇನ್ನು ಹಿಂದು ಯುವಕನ‌ ಹತ್ಯೆ ಮರೆಮಾಚಲು ಪೊಲೀಸ್ ಇಲಾಖೆ ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಭಾನುವಾರ ತಡರಾತ್ರಿ ಕೊಲೆ ನಡೆದಿದ್ದು, ಕೇಸ್ ದಾಖಲಿಸಿಕೊಂಡಿಲ್ಲ. ದಲಿತ ಕುಟುಂಬಕ್ಕೆ ಬಿಜೆಪಿ, ಹಿಂದು ಕಾರ್ಯಕರ್ತರು ಬೆಂಗಾವಲಾಗಿ ನಿಂತ ಕೂಡಲೇ ಎಚ್ಚೆತ್ತ ಪೊಲೀಸರು, ಕೊಲೆ ನಡೆದ 18 ಗಂಟೆಗಳ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಖುದ್ದು ಎಸ್‌ಪಿ ಜಿ.ಸಂಗೀತಾ ಅವರು ಸ್ಥಳದಲ್ಲಿ ನಿಂತು ಆಸ್ಪತ್ರೆಗೆ ರವಾನಿಸಿದ್ದರು.

ಪ್ರಕರಣ ಸಂಬಂಧ ಯಾದಗಿರಿ ಎಸ್‌ಪಿ ಜಿ.ಸಂಗೀತಾ ಪ್ರತಿಕ್ರಿಯಿಸಿ, ನಮಗೆ ಕೊಲೆ ನಡೆದಿರುವ ಬಗ್ಗೆ ಗೊತ್ತೇ ಇಲ್ಲ. ಕೊಲೆಯಾದ ಯುವಕನ ಕುಟುಂಬಸ್ಥರು ಇನ್ನೂ ಏನು ಹೇಳಿಲ್ಲ. ದೂರು ಕೊಡಿ ಎಂದರೆ ಅವರು ಬಂದಿಲ್ಲ. ಪ್ರಕರಣ ಸಂಬಂಧ ಮಾಹಿತಿ ಕೇಳಿದರೆ, ರೊಟ್ಟಿ ಕೇಂದ್ರಕ್ಕೆ ಹೋಗಿದ್ದ ಎನ್ನುತ್ತಿದ್ದಾರೆ. ಅವರ ಹಿರಿಯರ ಜತೆ ಚರ್ಚಿಸಿ ನಂತರ ಬಂದು ದೂರು ಕೊಡುತ್ತಾರೆ. ದೂರು ಕೊಟ್ಟ ನಂತರ ವಿಚಾರಣೆ ಮಾಡಿ ಆರೋಪಿಯನ್ನು ಬಂಧಿಸುತ್ತೇವೆ ಎಂದು ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
supreme court baba ramdev IMA
ಪ್ರಮುಖ ಸುದ್ದಿ35 seconds ago

Patanjali Case: ಮೊದಲು ನಿಮ್ಮನ್ನು ಸರಿಪಡಿಸಿಕೊಳ್ಳಿ: ಪತಂಜಲಿ ಪ್ರಕರಣದಲ್ಲಿ ವೈದ್ಯಕೀಯ ಸಂಘಕ್ಕೂ ಸುಪ್ರೀಂ ಚಾಟಿ

Lok Sabha Election 2024 Are you planning to visit Mysore Palace on April 26 No entry if no vote
Lok Sabha Election 20245 mins ago

Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

Murder case in hublli
ಹುಬ್ಬಳ್ಳಿ22 mins ago

Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Rafael Nadal
ಕ್ರೀಡೆ36 mins ago

Rafael Nadal: ಲೇವರ್‌ ಕಪ್‌ ಬಳಿಕ 22 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್​ ನಡಾಲ್‌ ನಿವೃತ್ತಿ!

Modi in Karnataka PM Narendra Modi to visit from April 28 and 29
Lok Sabha Election 202448 mins ago

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Murder Case In Bengaluru
ಬೆಂಗಳೂರು54 mins ago

Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

MDH everest spices row
ದೇಶ1 hour ago

Spices Row: ಸಿಂಗಾಪುರ, ಹಾಂಕಾಂಗ್‌ ಬಳಿಕ ಭಾರತದಲ್ಲೂ ಎವರೆಸ್ಟ್, ಎಂಡಿಎಚ್‌ ಮಸಾಲೆ ಪರಿಶೀಲನೆ ಶುರು

Narendra Modi and Siddaramaiah
ರಾಜಕೀಯ1 hour ago

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Gukesh D
ಕ್ರೀಡೆ1 hour ago

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

baba ramdev supreme court
ಪ್ರಮುಖ ಸುದ್ದಿ1 hour ago

Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು21 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ22 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌