Viral News : ಮದುವೆಗೂ ಮೊದಲೇ ವಧುವಿನ ಕೋಣೆಗೆ ತೆರಳಿದ ವರ; ವಿವಾಹವನ್ನೇ ಮುರಿದುಕೊಂಡ ವಧು! - Vistara News

ವೈರಲ್ ನ್ಯೂಸ್

Viral News : ಮದುವೆಗೂ ಮೊದಲೇ ವಧುವಿನ ಕೋಣೆಗೆ ತೆರಳಿದ ವರ; ವಿವಾಹವನ್ನೇ ಮುರಿದುಕೊಂಡ ವಧು!

ವರ ವಧುವಿನ ಕೋಣೆಗೆ ಪದೇಪದೆ ಭೇಟಿ ಕೊಟ್ಟ ಎನ್ನುವ ಕಾರಣಕ್ಕೇ ವಧು ಮದುವೆ ಮುರಿದುಕೊಂಡಿದ್ದಾಳೆ. ಈ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ (Viral News) ನಡೆದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಮದುವೆಯ ಆಡಂಬರ ಕಡಿಮೆಯಾಯಿತು, ಅಡುಗೆ ಸರಿಯಿಲ್ಲ ಹೀಗೆ ಅನೇಕ ಕಾರಣಗಳಿಗೆ ಮಂಟಪಗಳಲ್ಲೇ ಮದುವೆ ಮುರಿದು ಬೀಳುವುದನ್ನು ನೋಡಿರುತ್ತೇವೆ. ಆದರೆ ಇದೀಗ ಉತ್ತರ ಪ್ರದೇಶದಲ್ಲಿ ವರನೊಬ್ಬ ವಧುವಿನ ಕೋಣೆಗೆ ತೆರಳಿದ ಎನ್ನುವ ಕಾರಣಕ್ಕೇ (Viral News) ಮದುವೆ ಮುರಿದುಬಿದ್ದಿದೆ!

ಹೌದು. ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಮದುವೆ ದಿಬ್ಬಣ ತೆಗೆದುಕೊಂಡು ವರನ ವಧುವಿನ ಊರಿಗೆ ಬಂದಿದೆ. ಬಂದ ತಕ್ಷಣ ಮಾಲೆ ಬದಲಾವಣೆ ಆಗಿದೆ. ಅದಾದ ನಂತರ ವಧು ಆಕೆಯ ಕೋಣೆಯಲ್ಲಿದ್ದಾಗ ವರ ಪದೇ ಪದೆ ಆಕೆಯ ಕೋಣೆಗೆ ತೆರಳಿದ್ದಾನೆ. ಈ ವಿಚಾರದಲ್ಲಿ ವರನ ತಂದೆಯೇ ಆತನಿಗೆ ಎಚ್ಚರಿಕೆ ನೀಡಿದರೂ ವರ ತಂದೆಯ ಮಾತು ಕೇಳಿಲ್ಲ.

ಇದನ್ನೂ ಓದಿ: Viral Video : ಐದು ವರ್ಷದ ಬಾಲಕನೇ ಪೊಲೀಸರಿಗೆ ಮುಖ್ಯಸ್ಥ! ವೈರಲ್‌ ಆಯ್ತು ಈ ವಿಶೇಷ ವಿಡಿಯೊ

ವರ ವಧುವಿನ ಕೋಣೆಗೆ ಹೋಗುವುದು ಹೆಚ್ಚಾದ ಹಿನ್ನೆಲೆ ವರನ ತಂದೆ ಆತನ ಕೆನ್ನೆಗೆ ಬಾರಿಸಿದ್ದಾರೆ. ಸಿಟ್ಟಿನಿಂದ ವರ ಕೂಡ ಆತನ ತಂದೆಗೆ ಬಾರಿಸಿದ್ದಾನೆ. ಈ ಜಗಳ ವಧುವಿನ ಕಿವಿಗೂ ಬಿದ್ದಿದ್ದು, ಆಕೆ ಮದುವೆಯನ್ನೇ ಬೇಡವೆಂದು ಪಟ್ಟು ಹಿಡಿದು ಕುಳಿತಿದ್ದಾಳೆ. ಸೊಸೆಯನ್ನು ಕರೆದುಕೊಂಡು ಹೋಗಬೇಕಿದ್ದ ದಿಬ್ಬಣ ಮದುವೆ ಇಲ್ಲದೆ ವಾಪಸು ಹೋಗಿದೆ. ಎರಡೂ ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಮದುವೆ ಮುರಿದುಕೊಂಡಿದ್ದಾಗಿ ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

RCB FANS BIKE RALLY: ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ.

VISTARANEWS.COM


on

RCB FANS BIKE RALLY
Koo

ಬೆಂಗಳೂರು: ಐಪಿಎಲ್​ನ(IPL 20124) ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಚೆನ್ನೈ ಸೂಪರ್(Chennai Super Kings)​ ಕಿಂಗ್ಸ್​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡಗಳು ಇಂದು ನಡೆಯುವ ಪ್ಲೇ ಆಫ್​ ಪ್ರವೇಶದ ಮಹತ್ವದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಪಂದ್ಯಕ್ಕೂ ಮುನ್ನವೇ ಆರ್​ಸಿಬಿ(RCB) ಅಭಿಮಾನಿಗಳು(Craze RCB FANS) ಚಿನ್ನಸ್ವಾಮಿ ಮೈದಾನದ ಬಳಿ ಬೃಹತ್​ ಬೈಕ್​ ರ‍್ಯಾಲಿ(RCB FANS BIKE RALLY) ನಡೆಸಿ ತಮ್ಮ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪಂದ್ಯಕ್ಕೆ ಮಳೆಯ ಭೀತಿಯೂ ಇದ್ದು ಸಸ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಅಲ್ಲದೆ ರಾತ್ರಿ ಮಳೆಯಾಗುವುದು ಬಹುತೇಕ ಖಚಿತ ಎನ್ನುವಂತಿದೆ. ಒಂದೆಡೆ ಆರ್​ಸಿಬಿ ಅಭಿಮಾನಿಗಳು ಮಳೆ ಬಾರದಂತೆ ಪ್ರಾರ್ಥಿಸುತ್ತಿದ್ದರೆ, ಮತ್ತೊಂದು ಕಡೆ ಚೆನ್ನೈ ಅಭಿಮಾನಿಗಳಿ ಮಳೆ ಬಂದು ಪಂದ್ಯ ರದ್ದಾಗಲಿ ಎಂದು ಪ್ರಾರ್ಥಿಸುತ್ತಿದ್ದರೆ. ಪಂದ್ಯ ರದ್ದಾದರೆ ಚೆನ್ನೈ 4ನೇ ತಂಡವಾಗಿ ಅಧಿಕೃತ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ. ಒಟ್ಟಾರೆ ಮಳೆ ಯಾರಿಗೆ ಅನುವು ಮಾಡಿಕೊಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಸಬ್‌ ಏರ್‌ ಸಿಸ್ಟಮ್‌


ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

ಇದನ್ನೂ ಓದಿ RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ದಾಖಲೆ


ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್​ ಮತ್ತು ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳು ಜಯಿಸಿದೆ.

ಇತ್ತಂಡಗಳ ಒಟ್ಟು ಐಪಿಎಲ್​ ಮುಖಾಮುಖಿ


ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್​ ಆಗಿದೆ. ಈ ಬಾರಿಯ ಉದ್ಘಾಟನ ಪಂದ್ಯದಲ್ಲಿಯೂ ಚೆನ್ನೈ ಆರ್​ಸಿಬಿಗೆ ಸೋಲುಣಿಸಿತ್ತು.

Continue Reading

ವೈರಲ್ ನ್ಯೂಸ್

Lok Sabha Election 2024: ʼನನ್ನ ಸ್ಟೈಲು ಬೇರೇನೆ…ʼ; ಕತ್ತೆ ಮೂಲಕ ಪ್ರಚಾರ ನಡೆಸುವ ಅಭ್ಯರ್ಥಿಯ ಕಾರ್ಯ ವೈಖರಿ ಈಗ ವೈರಲ್‌

Lok Sabha Election 2024: ಬಿಹಾರದ ಗೋಪಾಲ್‌ಗಂಜ್‌ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಸತ್ಯೇಂದ್ರ ಬೈಥಾ ಚುನಾವಣಾ ಪ್ರಚಾರಕ್ಕೆ ಕತ್ತೆ ಮೇಲೆ ತೆರಳುವ ಮೂಲಕ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆಗೂ ಕತ್ತೆ ಮೇಲೆಯೇ ತೆರಳಿದ್ದರು. ಸತ್ಯೇಂದ್ರ ಬೈಥಾ ಆಗಮಿಸುತ್ತಿದ್ದಂತೆ ಅನೇಕರು ಮನೆಯಿಂದ ಹೊರಗೆ ಬಂದು ಅವರ ಜತೆ ಫೋಟೊ ಕ್ಲಿಕ್ಕಿಸುತ್ತಿದ್ದಾರೆ.

VISTARANEWS.COM


on

Lok Sabha Election 2024
Koo

ಪಟನಾ: ಲೋಕಸಭಾ ಚುನಾವಣೆಯ (Lok Sabha Election 2024) 4 ಹಂತಗಳ ಮತದಾನ ಈಗಾಗಲೇ ಪೂರ್ಣಗೊಂಡಿದೆ. ಇನ್ನುಳಿದ 3 ಹಂತಗಳಿಗೆ ಭರದ ಸಿದ್ದತೆ ನಡೆಯುತ್ತಿದೆ. ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಕೆ, ಪ್ರಚಾರದ ಭರಾಟೆಯಲ್ಲಿ ನಿರತರಾಗಿದ್ದಾರೆ. ಕೆಲವು ಕ್ಷೇತ್ರಗಳು ಘಟಾನುಘಟಿ ಸ್ಪರ್ಧಿಗಳ ಕಾರಣದಿಂದ ದೇಶದ ಗಮನ ಸೆಳೆದರೆ, ಇನ್ನು ಹಲವೆಡೆ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ವಿಭಿನ್ನ ಕಸರತ್ತು ನಡೆಸಿ ಸುದ್ದಿಯಾಗುತ್ತಿದ್ದಾರೆ. ಇದೇ ರೀತಿ ಇಲ್ಲಿಯೊಬ್ಬರು ಸ್ಪರ್ಧಿ ತಮ್ಮ ವಿಶಿಷ್ಟ ಪ್ರಚಾರದಿಂದ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕತ್ತೆ ಮೇಲೆ ತೆರಳುವ ಮೂಲಕ ಬಿಹಾರದ ಸ್ವತಂತ್ರ ಅಭ್ಯರ್ಥಿಯೊಬ್ಬರು ಇಡೀ ದೇಶವೇ ತಮ್ಮ ತಿರುಗಿ ನೋಡುವಂತೆ ಮಾಡಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral Video).

ಬಿಹಾರದ ಗೋಪಾಲ್‌ಗಂಜ್‌ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಸತ್ಯೇಂದ್ರ ಬೈಥಾ ಈ ರೀತಿ ಗಮನ ಸೆಳೆದವರು. ಗೋಪಾಲ್‌ಗಂಜ್‌ ಶ್ಯಾಮ್‌ಪುರ ನಿವಾಸಿಯಾದ ಅವರು ಚುನಾವಣಾ ಪ್ರಚಾರ ಮಾತ್ರವಲ್ಲ ನಾಮಪತ್ರ ಸಲ್ಲಿಕೆಗೂ ಕತ್ತೆ ಮೇಲೆಯೇ ತೆರಳಿದ್ದರು. ಸದ್ಯ ಅವರು ನಾಮಪತ್ರ ಸಲ್ಲಿಕೆಗೆ ಕತ್ತೆ ಮೇಲೆ ಮೆರವಣಿಗೆ ಮೂಲಕ ಸಾಗುತ್ತಿರುವ ವಿಡಿಯೊ ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಸತ್ಯೇಂದ್ರ ಬೈಥಾ ಹೇಳೋದೇನು?

ಹೊಸ ರೀತಿಯ ಪ್ರಚಾರ ಶೈಲಿಯ ಬಗ್ಗೆ ಮಾತನಾಡುವ ಸತ್ಯೇಂದ್ರ ಬೈಥಾ, ʼʼದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಾಗಿದೆ. ಹೀಗಾಗಿ ದುಬಾರಿ ಹಣ ಪಾವತಿಸಿ ನನ್ನಂತಹ ಅದೆಷ್ಟೋ ಜನರಿಗೆ ವಾಹನದಲ್ಲಿ ಸಂಚರಿಸಲು ಕಷ್ಟವಾಗುತ್ತಿದೆ. ಹೀಗಾಗಿ ಕತ್ತೆ ಮೇಲೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ನಿರ್ಧರಿಸಿದ್ದೇನೆ ನಾಮಪತ್ರ ಸಲ್ಲಿಕೆಗೂ ನಾನು ಕತ್ತೆ ಮೇಲೆಯೇ ತೆರಳಿದ್ದೆʼʼ ಎಂದು ಅವರು ವಿವರಿಸಿದ್ದಾರೆ. ಸತ್ಯೇಂದ್ರ ಬೈಥಾ ಆಗಮಿಸುತ್ತಿದ್ದಂತೆ ಅನೇಕರು ಮನೆಯಿಂದ ಹೊರಗೆ ಬಂದು ಅವರ ಜತೆ ಫೋಟೊ ಕ್ಲಿಕ್ಕಿಸುತ್ತಿದ್ದಾರೆ.

ಭರವಸೆ

ಒಂದು ವೇಳೆ ಚುನಾವಣೆಯಲ್ಲಿ ಗೆದ್ದರೆ ಜನರಿಗಾಗಿ ಯಾವೆಲ್ಲ ಕೆಲಸಗಳನ್ನು ಮಾಡ ಬಯಸುತ್ತೀರಿ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ʼʼಜಿಲ್ಲೆಯಲ್ಲಿ ಸಕ್ಕರೆ ಖಾರ್ಖಾನೆ ಮತ್ತು ವಿಶ್ವ ವಿದ್ಯಾನಿಲಯ ತೆರೆಯಲು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುತ್ತೇನೆ. ಶುಚಿತ್ವಕ್ಕೂ ನಾನು ಒತ್ತು ಕೊಡುತ್ತೇನೆ. ಈ ಹಿಂದೆ ಅನೇಕ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದ ನಂತರ ಐದು ವರ್ಷಗಳ ಕಾಲ ಜಿಲ್ಲೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಅವರು ದೆಹಲಿ ಅಥವಾ ಪಾಟನಾದಲ್ಲಿ ವಾಸಿಸುತ್ತಿದ್ದರು. ಆದರೆ ನಾನು ಹಾಗಲ್ಲ. ನಾನು ಸ್ಥಳೀಯ ನಿವಾಸಿಯಾಗಿದ್ದು, ಸಾರ್ವಜನಿಕರಿಗೆ ದಿನದ 24 ಗಂಟೆಯೂ ಲಭ್ಯವಿರಲಿದ್ದೇನೆʼʼ ಎಂದು ಭರವಸೆ ನೀಡಿದ್ದಾರೆ.

ನೆಟ್ಟಿಗರ ಪ್ರತಿಕ್ರಿಯೆ

ಇನ್ನು ಕತ್ತೆ ಸವಾರಿಗೆ ನೆಟ್ಟಿಗರು ವಿದ ವಿಧವಾಗಿ ಪ್ರತಿಕ್ರಿಯಿಸಿದ್ದಾರೆ. ʼʼಇದು ಬಹಳ ಮಜವಾಗಿದೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಪಾಪದ ಪ್ರಾಣಿಗೆ ಈ ರೀತಿಯ ಹಿಂಸೆ ನೀಡುತ್ತಿರುವುದು ಎಷ್ಟು ಸರಿ?ʼʼ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ. ʼʼಈ ರೀತಿ ಪ್ರಾಣಿ ಬಳಕೆಗೆ ಅನುಮತಿ ಇದೆಯೇ?ʼʼ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ. ಒಟ್ಟಿನಲ್ಲಿ ಈ ವಿಡಿಯೊ ಚರ್ಚೆ ಹುಟ್ಟು ಹಾಕಿದ್ದಂತೂ ಸತ್ಯ.

ಗೋಪಾಲ್‌ಗಂಜ್‌ನಲ್ಲಿ ಮೇ 25ರಂದು 6ನೇ ಹಂತದಲ್ಲಿ ಮತದಾನ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿಯಾಗಿ ಅಲೋಕ್‌ ಕುಮಾರ್‌ ಸುಮನ್‌ ಮತ್ತು ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟದಿಂದ ಚಂಚಲ್‌ ಕುಮಾರ್‌ ಪಾಸ್ವಾನ್‌ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

Continue Reading

ಬೆಂಗಳೂರು

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಎಂಜಲು ಉಗುಳುವ ಬರದಲ್ಲಿ ಕಿಟಿಕಿಯ ಸಣ್ಣ ಸಂದಿಯೊಳಗೆ ತಲೆ ಹಾಕಿ ಪರದಾಡಿದ ಘಟನೆ ನಡೆದಿದೆ. ಮತ್ತೊಂದು ಕಡೆ ಕೆಎಸ್‌ಆರ್‌ಟಿಸಿ ಬಸ್‌ ಸಿಬ್ಬಂದಿ ಸೈಡ್‌ ಬಿಡಲಿಲ್ಲ ಎಂದು ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

KSRTC BUS Woman locks in window of KSRTC bus after going to spit
Koo

ಬೆಂಗಳೂರು/ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (KSRTC Bus) ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ತಲೆಯು ಲಾಕ್‌ ಆದ ಘಟನೆ ನಡೆದಿದೆ. ಕಿಟಿಕಿಯಲ್ಲಿ ತಲೆ ಸಿಕ್ಕಿಸಿಕೊಂಡ ಪರಿಣಾಮ ಮಹಿಳೆ ಕೆಲಕಾಲ ಪರದಾಡಬೇಕಾಯಿತು.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಎಂಜಲು ಉಗುಳಲು ಬಸ್‌ನ ಕಿಟಿಕಿಯ ಸಣ್ಣ ಸಂದಿಯೊಳಗೆ ತಲೆಯನ್ನು ಹೊರಹಾಕಿದ್ದರು. ಹೀಗೆ ಹೊರ ಹಾಕಿದ ತಲೆಯು ವಾಪಸ್‌ ಹಿಂದಕ್ಕೆ ಬಾರದೇ ಅಲ್ಲೆ ಲಾಕ್‌ ಆಗಿತ್ತು. ಕಾರಣ ಕಿಟಕಿಯ ಸಣ್ಣ ಜಾಗಕ್ಕೆ ನುಗ್ಗಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿತ್ತು.

ಈ ವೇಳೆ ಮಹಿಳೆಯ ಪರದಾಟ ಹಾಗೂ ಕೂಗಾಟ ಕಂಡು ಸಹ ಪ್ರಯಾಣಿಕರು ಸಹಾಯಕ್ಕೆ ಧಾವಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಬಳಿಕ ಮಹಿಳೆ ತಲೆ ಲಾಕ್‌ ಆಗಿರುವುದು ಗಮನಕ್ಕೆ ಬಂದಾಕ್ಷಣ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರು ಬಸ್ ನಿಲ್ಲಿಸಿದ್ದಾರೆ. ಬಳಿಕ 15 ನಿಮಿಷಗಳ ಕಾರ್ಯಾಚರಣೆ ಮಾಡಿ, ಜಾಗರೂಕತೆಯಿಂದ ಮಹಿಳೆಯ ತಲೆಯನ್ನು ಕಿಟಿಕಿಯಿಂದ ಬಿಡಿಸಿ, ರಕ್ಷಿಸಿದ್ದಾರೆ.

ಇತ್ತ ಮಹಿಳೆಯು ಬದುಕಿತು ಬಡ ಜೀವ ಎಂಬಂತೆ ತಲೆಯನ್ನು ಒಳಗೆ ಎಳೆದುಕೊಂಡಿದ್ದಾರೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಗೆ ಯಾಕ್ ಬೇಕಿತ್ತು ಈ ಅವಾಂತರ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ

ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಯ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಆಗುಂಬೆಯಿಂದ ಹೆಬ್ರಿಗೆ ಹೊರಟಿತ್ತು. ಈ ವೇಳೆ ಬಸ್ ಹಿಂದೆ ಇದ್ದ ಪ್ರವಾಸಿಗರ ಕಾರಿಗೆ ಸೈಡ್ ನೀಡಲಿಲ್ಲ ಎನ್ನುವ ಆರೋಪವಿದೆ. ಹೀಗಾಗಿ ಗಾಟಿಯ ಮಧ್ಯೆ ಬಸ್‌ಗೆ ಅಡ್ಡಹಾಕಿ ನಿರ್ವಾಹಕ ಮತ್ತು ಚಾಲಕನಿಗೆ ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ. ಈ ಗಲಾಟೆಯಿಂದಾಗಿ ಘಾಟಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

RCB vs CSK: ಹವಾಮಾನ ಇಲಾಖೆ ಪಂದ್ಯ ನಡೆಯುವ ಶನಿವಾರದಂದು ಶೇ.70ರಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆರ್​ಸಿಬಿ(RCB vs CSK) ಆಟಗಾರರು ಪಂದ್ಯದ ವೇಳೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ವಿಡಿಯೊವೊಂದು ಭಾರೀ ವೈರಲ್​(viral video) ಆಗಿದೆ.

VISTARANEWS.COM


on

RCB vs CSK
Koo

ಬೆಂಗಳೂರು: ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​(Chennai Super Kings) ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ(Royal Challengers Bengaluru) ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ ಅನುವು ಮಾಡಿಕೊಡುವುದು ಬಹುತೇಖ ಅನುಮಾನ ಎನ್ನುವಂತಿದೆ. ಶುಕ್ರವಾರವೇ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಇದೀಗ ಆರ್​ಸಿಬಿ(RCB vs CSK) ಆಟಗಾರರು ಪಂದ್ಯದ ವೇಳೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ವಿಡಿಯೊವೊಂದು ಭಾರೀ ವೈರಲ್​(viral video) ಆಗಿದೆ.

ಹವಾಮಾನ ಇಲಾಖೆ ಪಂದ್ಯ ನಡೆಯುವ ಶನಿವಾರದಂದು ಶೇ.70ರಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಪ್ಲೇ ಆಫ್​ ಪ್ರವೇಶ ಪಡೆಯಬೇಕಿದ್ದರೆ ಆರ್​ಸಿಬಿಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ ಪಂದ್ಯ ರದ್ದಾದರೆ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ. ಹೇಗಾದರೂ ಪಂದ್ಯದ ದಿನ ಮಳೆ ಬಾರದಿರಲಿ ಎಂದು ಆರ್​ಸಿಬಿ ಆಟಗಾರರು ಡ್ರೆಸಿಂಗ್​ ರೋಮ್​ನಲ್ಲಿ ಹರೇ ರಾಮ ಹರೇ ರಾಮ, ರಾಮ ರಾಮ ಹರೇ ಹರೇ, ಹರೇ ಕೃಷ್ಣ ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ ಎಂದು ಕೃಷ್ಣ ನಾಮ ಜಪಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಅಸಲಿಗೆ ಆರ್​ಸಿಬಿ ಆಟಗಾರರು ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿಲ್ಲ. ಬದಲಾಗಿ ನೆಟ್ಟಿಗರು ಈ ವಿಡಿಯೊವನ್ನು ಎಡಿಟ್​ ಮಾಡಿ ವೈರಲ್​ ಮಾಡಿದ್ದಾರೆ. ಪ್ರತಿ ಪಂದ್ಯ ಗೆದ್ದಾಗ ಆರ್​ಸಿಬಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಸಂಭ್ರಮಿಸುತ್ತಾರೆ. ಈ ವಿಡಿಯೊಗೆ ಕೃಷ್ಣ ನಾಮ ಜಪವನ್ನು ಮತ್ತು ಹವಾಮಾನ ಇಲಾಖೆಯ ವರದಿಯ ಫೋಟೊವನ್ನು ಎಡಿಟ್​​ ಮಾಡಲಾಗಿದೆ.

ಇದನ್ನೂ ಓದಿ RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

1. ಪಂದ್ಯದ ಸಮಯದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ.

2. ಆರ್​ಸಿಬಿ-ಸಿಎಸ್​ಕೆ​ ನಡುವಣ ಪಂದ್ಯದ ಅಂತಿಮ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.

3. ಒಂದು ವೇಳೆ ಮಳೆ ಬಂದು, ಉದಾಹರಣೆಗೆ ನಿಗದಿತ 10 ಓವರ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ 10 ಓವರ್ ಆಡಿ, 2ನೇ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ ತಂಡ 5 ಓವರ್​ಗಳನ್ನು ಪೂರ್ತಿಗೊಳಿಸಿದರೆ ಮಾತ್ರ ಆಗ ಡಕ್​ವರ್ತ್ ಲೂಯಿಸ್ ನಿಯಮ ಅನ್ವಯವಾಗುತ್ತದೆ.

4. ಪಂದ್ಯ ಆರಂಭಗೊಂಡ ಬಳಿಕ ಮಳೆ ಬಂದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್ ಕಡಿತದೊಂದಿಗೆ ಟಾರ್ಗೆಟ್ ನೀಡಲಾಗುತ್ತದೆ. ಈ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

5. ಒಂದೊಮ್ಮೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಈಗಾಗಲೇ ಚೆನ್ನೈ 14 ಅಂಕಗಳನ್ನು ಹೊಂದಿದ್ದು ಪಂದ್ಯ ರದ್ದಾದ ಕಾರಣ ಸಿಗುವ ಒಂದು ಅಂಕದಿಂದ ಒಟ್ಟು ಅಂಕ 15ಕ್ಕೇ ಏರಿಕೆಯಾಗುತ್ತದೆ. ಇನ್ನುಳಿದ ಯಾವುದೇ ತಂಡಕ್ಕೂ ಈ ಮೊತ್ತವನ್ನು ಮೀರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಚೆನ್ನೈಗೆ ಮಳೆ ವರದಾನವಾಗಲಿದೆ. ಆರ್​ಸಿಬಿ ತಂಡವು 13 ಅಂಕಗಳೊಂದಿಗೆ ಐಪಿಎಲ್​ನಿಂದ ಹೊರಬೀಳಲಿದೆ.

Continue Reading
Advertisement
Famous Food of bangalore
ಆಹಾರ/ಅಡುಗೆ8 mins ago

Famous Food of Bangalore: ಬೆಂಗಳೂರಿಗೆ ಬಂದಾಗ ಈ ಖಾದ್ಯಗಳ ರುಚಿ ನೋಡಲು ಮರೆಯಬೇಡಿ!

Prime Minister of India
ರಾಜಕೀಯ12 mins ago

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

RCB FANS BIKE RALLY
ಕ್ರೀಡೆ18 mins ago

RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

Pavithra Jayaram Chandrakant are just friends, daughter said
ಕಿರುತೆರೆ24 mins ago

Pavithra Jayaram: ಚಂದ್ರಕಾಂತ್‌ ಹಾಗೂ ನನ್ನ ಅಮ್ಮ ಜಸ್ಟ್‌ ಫ್ರೆಂಡ್ಸ್‌, ಪವಿತ್ರಾ ಮಗಳ ಸ್ಪಷ್ಟನೆ!

Powerful Bike
ಪ್ರಮುಖ ಸುದ್ದಿ27 mins ago

Powerful Bikes : 2.5 ಲಕ್ಷ ರೂ.ಗಿಂತಲೂ ಕಡಿಮೆ ಬೆಲೆಗೆ ಸಿಗ್ತವೆ ಈ 5 ಪವರ್​ಫುಲ್ ಬೈಕ್​ಗಳು

Road Accident
ಶಿವಮೊಗ್ಗ37 mins ago

Road Accident : ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ; ಚಕ್ರಕ್ಕೆ ಸಿಲುಕಿ ಸಾವು

Kannada stone inscription found in Kashi Use as a foot bridge at the ghat
ಶಿವಮೊಗ್ಗ44 mins ago

Kannada stone inscription: ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆ; ಘಾಟ್ ನಲ್ಲಿ ಕಾಲು ಸಂಕವಾಗಿ ಬಳಕೆ!

Road Accident
ಬೆಂಗಳೂರು ಗ್ರಾಮಾಂತರ1 hour ago

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Hyderabadi Biryani
ಪ್ರಮುಖ ಸುದ್ದಿ1 hour ago

Hyderabadi Biryani : ಎಸ್​ಆರ್​ಎಚ್​ ಅಭಿಮಾನಿಗಳೊಂದಿಗೆ ಹೈದ್ರಾಬಾದಿ ಬಿರಿಯಾನಿ ಸವಿದ ಹೇಡನ್ ಪುತ್ರಿ ಗ್ರೇಸ್​, ಇಲ್ಲಿದೆ ವಿಡಿಯೊ

Job Alert
ಉದ್ಯೋಗ1 hour ago

Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ18 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌