Budget 2023 : ಮೋದಿ ಸರ್ಕಾರ ಅನುದಾನ ಘೋಷಿಸಿದ ಭದ್ರಾ ಮೇಲ್ದಂಡೆ ಯೋಜನೆ ಏನು? ಅದರಿಂದ ಯಾರಿಗೆ ಲಾಭ? ಇಲ್ಲಿದೆ ಸಂಪೂರ್ಣ ವಿವರ - Vistara News

ಕರ್ನಾಟಕ

Budget 2023 : ಮೋದಿ ಸರ್ಕಾರ ಅನುದಾನ ಘೋಷಿಸಿದ ಭದ್ರಾ ಮೇಲ್ದಂಡೆ ಯೋಜನೆ ಏನು? ಅದರಿಂದ ಯಾರಿಗೆ ಲಾಭ? ಇಲ್ಲಿದೆ ಸಂಪೂರ್ಣ ವಿವರ

ಮಧ್ಯ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ನೀರಿನ ಬವಣೆ ಪರಿಹರಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ನೀಡುವುದಾಗಿ ಬಜೆಟ್‌ನಲ್ಲಿ (Budget 2023) ಘೋಷಣೆ ಮಾಡಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

budget 2023 complete details about upper bhadra project
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೇಂದ್ರ ಸರ್ಕಾರ ಅನುದಾನ ನೀಡುವುದಾಗಿ ಕೇಂದ್ರ ಬಜೆಟ್‌ನಲ್ಲಿ (Budget 2023) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಇದರಿಂದ, ಬರಪೀಡಿತ ಮಧ್ಯ ಕರ್ನಾಟಕಕ್ಕೆ ಅನುಕೂಲವಾಗಲಿದೆ ಎಂದಿದ್ದಾರೆ. ಹಾಗಾದರೆ ಈ ಯೋಜನೆ ಏನು? ಯಾವಾಗ ಆರಂಭವಾಯಿತು? ಅದರಿಂದ ಯಾರಿಗೆ ಅನುಕೂಲ ಎಂಬ ಕುರಿತು ಪೂರ್ಣ ಮಾಹಿತಿ ಇಲ್ಲಿದೆ.

ಭದ್ರಾ ಮೇಲ್ದಂಡೆ ಯೋಜನೆ
ಭದ್ರಾ ಮೇಲ್ದಂಡೆ ಯೋಜನೆಯನ್ನು ಮಧ್ಯ ಕರ್ನಾಟಕದ ಬರಪೀಡಿತ ಚಿತ್ರದುರ್ಗ, ಚಿಕ್ಕಮಗಳೂರು,
ದಾವಣಗೆರೆ ಹಾಗೂ ತುಮಕೂರು ಜಿಲ್ಲೆಯಲ್ಲಿನ 2,25,515 ಹೆಕ್ಟೇರ್ (5,57,022 ಎಕರೆ) ಭೂ ಪ್ರದೇಶಕ್ಕೆ
ಹನಿ ನೀರಾವರಿ ಪದ್ದತಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ 367 ಕೆರೆಗಳಿಗೆ ನೀರನ್ನು ತುಂಬಿಸಲು
ಉದ್ದೇಶಿಸಿ ರೂಪಿಸಲಾಗಿದೆ.

➢ ನೀರಿನ ಹಂಚಿಕೆ:- ಭದ್ರಾ ಮೇಲ್ದಂಡೆ ಯೋಜನೆಗೆ 29.90 ಟಿ.ಎಂ.ಸಿ. ನೀರಿನ ಹಂಚಿಕೆ ಮಾಡಲಾಗಿದೆ.
➢ ಆಡಳಿತಾತ್ಮಕ ಹಾಗೂ ತಾಂತ್ರಿಕ ಮಂಜೂರಾತಿ:-
– 2020-21 ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತ 21473.67 ಕೋಟಿ ರೂ.ಗೆ ಅನುಮೋದನೆಯಾಗಿದೆ (16-12-2020).

ಯೋಜನೆಯ ಪ್ರಮುಖ ಅಂಶಗಳು ಹೀಗಿವೆ

ಅನುದಾನದ ವೆಚ್ಚ ಹೇಗೆ?

ಯೋಜನೆಯಿಂದ ತಾಲ್ಲೂಕಾವಾರು ನೀರಾವರಿ ಗೊಳಪಡುವ ಪ್ರದೇಶ ಹಾಗೂ ತುಂಬಿಸುವ ಕೆರೆಗಳ ವಿವರಗಳು
(ಜಿಲ್ಲಾ/ತಾಲ್ಲೂಕುವಾರು ನೀರಿನ ಹಂಚಿಕೆಯ ವಿವರಗಳೊಂದಿಗೆ)

ಯೋಜನೆಯ ರೂಪರೇಷೆಗಳು:

➢ ತುಂಗಾ ನದಿಯಿಂದ 17.40 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಭದ್ರಾ
ಜಲಾಶಯಕ್ಕೆ ನೀರು ಹರಿಸುವುದು, ಭದ್ರಾಜಲಾಶಯದಿಂದ 29.90 ಟಿ.ಎಂ.ಸಿ. ನೀರನ್ನು ಎರಡು
ಹಂತಗಳಲ್ಲಿ ಲಿಫ್ಟ್ ಮಾಡಿ ಅಜ್ಜಂಪುರ ¸ ಸುರಂಗದವರೆಗೆ ಕೊಂಡೊಯ್ಯುವುದು ಮತ್ತು ಅಜ್ಜಂಪುರ ಸುರಂಗ ಮಾರ್ಗದ ಮೂಲಕ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆಗಳಿಗೆ ನೀರು ಹರಿಸುವುದು.

➢ ಈ ಯೋಜನೆಗಾಗಿ ಒಟ್ಟು 4 ಸ್ಥಳದಲ್ಲಿ ನೀರನ್ನು ಲಿಫ್ಟ್ ಮಾಡಲಾಗುತ್ತದೆ. ತುಂಗಾ ನದಿಯಿಂದ ಭದ್ರಾ
ಜಲಾಶಯಕ್ಕೆ ಹೋಗುವ ಕಾಲುವೆ ಮಾರ್ಗದ 2 ಸ್ಥಳಗಳಲ್ಲಿ 80ಮೀ ಎತ್ತರಕ್ಕೆ (ಎನ್.ಆರ್.ಪುರ
ತಾಲ್ಲೂಕಿನ ಕಣಬೂರು ಮತ್ತು ಕುಸಬೂರು ಗ್ರಾಮಗಳ ಹತ್ತಿರ) ಹಾಗೂ ಭದ್ರಾ ಜಲಾಶಯದಿಂದ
ಅಜ್ಜಂಪುರ ಸುರಂಗಕ್ಕೆ ಹೋಗುವ ಕಾಲುವೆಯ ಮಾರ್ಗದಲ್ಲಿ 2 ಸ್ಥಳಗಳಲ್ಲಿ, 80ಮೀ ಎತ್ತರಕ್ಕೆ (ತರೀಕೆರೆ
ತಾಲ್ಲೂಕಿನ ಶಾಂತಿಪುರ ಮತ್ತು ಬೆಟ್ಟತಾವರೆಕೆರೆ ಗ್ರಾಮಗಳ ಹತ್ತಿರ) ಲಿಫ್ಟ್ ಮಾಡಲಾಗುವುದು.

➢ ತರೀಕೆರೆ ಏತ ನೀರಾವರಿ ಮುಖಾಂತರ ತರೀಕೆರೆ ತಾಲ್ಲೂಕಿನ 20,150 ಹೆಕ್ಟೇರ್ ಕ್ಷೇತ್ರಕ್ಕೆ ಹನಿ ನೀರಾವರಿ
ಮೂಲಕ ನೀರನ್ನು ಒದಗಿಸುವುದು ಹಾಗೂ 79 ಕೆರೆಗಳನ್ನು ತುಂಬಿಸುವುದು.

➢ ಚಿತ್ರದುರ್ಗ ಶಾಖಾ ಕಾಲುವೆ ಮುಖಾಂತರ ಚಿಕ್ಕಮಗಳೂರು ಜಿಲ್ಲೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಹನಿ
ನೀರಾವರಿ ಮೂಲಕ 1,07,265 ಹೆಕ್ಟೇರ್ ಕ್ಷೇತ್ರಕ್ಕೆ ನೀರಾವರಿ ಕಲ್ಪಿಸಿ 36 ಕೆರೆಗಳಿಗೆ ನೀರನ್ನು
ತುಂಬಿಸುವುದು.

➢ ತುಮಕೂರು ಶಾಖಾ ಕಾಲುವೆ ಮುಖಾಂತರ ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ತುಮಕೂರು
ಜಿಲ್ಲೆಗಳಲ್ಲಿ ಹನಿ ನೀರಾವರಿ ಮುಖಾಂತರ 84,900 ಹೆಕ್ಟೇರ್ ಕ್ಷೇತ್ರಕ್ಕೆ ನೀರಾವರಿ ಕಲ್ಪಿಸಿ, 131 ಕೆರೆಗಳಿಗೆ
ನೀರನ್ನು ತುಂಬಿಸುವುದು.

➢ ಜಗಳೂರು ಕಾಲುವೆ ಮುಖಾಂತರ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಮತ್ತು ಚಿತ್ರದುರ್ಗ
ತಾಲ್ಲೂಕಿನ ಒಟ್ಟು 13,200 ಹೆಕ್ಟೇರ್ ಕ್ಷೇತ್ರಕ್ಕೆ ನೀರಾವರಿ ಕಲ್ಪಿಸಿ, 9 ಕೆರೆಗಳಿಗೆ ನೀರನ್ನು ತುಂಬಿಸುವುದು.
➢ ಹೊಳಲ್ಕೆರೆ ತಾಲೂಕಿನಲ್ಲಿ ಬರುವ 21 ಕೆರೆಗಳಿಗೆ, ಚಳ್ಳಕೆರೆ ತಾಲ್ಲೂಕಿನಲ್ಲಿ ಬರುವ 41 ಕೆರೆಗಳಿಗೆ,
ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಬರುವ 20 ಕೆರೆಗಳಿಗೆ ನೀರನ್ನು ತುಂಬಿಸುವುದು.
➢ ಪಾವಗಡ ತಾಲೂಕಿನಲ್ಲಿ ಬರುವ 30 ಕೆರೆಗಳಿಗೆ ನೀರನ್ನು ತುಂಬಿಸುವುದು.
➢ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ತುಮಕೂರು ಶಾಖಾ ಕಾಲುವೆ ಮುಖಾಂತರ 2.00 ಟಿ.ಎಂ.ಸಿ
ನೀರನ್ನು ಹರಿಸುವುದು.

ಇದನ್ನೂ ಓದಿ : Budget 2023 : ಭದ್ರಾ ಮೇಲ್ದಂಡೆಗೆ ಅನುದಾನ: ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಇಲ್ಲಿವರೆಗಿನ ಪ್ರಗತಿ(ಡಿಸೆಂಬರ್‌ 2022)

ಹಂತ-1
ಪ್ರಥಮ ಹಂತದಲ್ಲಿ ಈ ಕೆಳಗಿನ ಬರುವ ಮೂರು ಪ್ರಮುಖ ಕಾಮಗಾರಿಗಳನ್ನು 1,580 ಕೋಟಿ ರೂ. ಮೊತ್ತದಲ್ಲಿ 2008ರಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಪ್ರಗತಿಯಲ್ಲಿದೆ.
1. ತುಂಗಾ ನದಿಯಿಂದ ಭದ್ರಾಜಲಾಶಯಕ್ಕೆ ಲಿಫ್ಟ್ ಮಾಡುವುದು (ಪ್ಯಾಕೇಜ್‌-1): ಶೇ.65 ಕಾಮಗಾರಿ ಪೂರ್ಣಗೊಂಡಿದೆ.
2. ಭದ್ರಾ ಜಲಾಶಯದಿಂದ ಅಜ್ಜಂಪುರ ಸುರಂಗದವರೆಗೆ ನೀರನ್ನು ಲಿಫ್ಟ್ ಮಾಡುವುದು(ಪ್ಯಾಕೇಜ್-2): ಪೂರ್ಣಗೊಂಡಿದೆ.
3. ಅಜ್ಜಂಪುರ ಸುರಂಗ ನಿರ್ಮಾಣ (ಪ್ಯಾಕೇಜ್-3): ಪೂರ್ಣಗೊಂಡಿದೆ.

ಭದ್ರಾಜಲಾಶಯದಿಂದ ಅಜ್ಜಂಪುರ ಸುರಂಗದ ಮೂಲಕ ನೀರನ್ನು 2019-2020ನೇ ಸಾಲಿನಲ್ಲಿ ವಾಣಿ ವಿಲಾಸ ಸಾಗರಕ್ಕೆ 3.44 ಟಿ.ಎಂ.ಸಿ ಹರಿಸಿದ್ದು, 2020-21ನೇ ಸಾಲಿನಲ್ಲಿ ಭದ್ರಾಜಲಾಶಯದಿಂದ 6.61 ಟಿ.ಎಂ.ಸಿ ನೀರನ್ನು ವಾಣಿ ವಿಲಾಸ ಸಾಗರಕ್ಕೆ ಹರಿಸಲಾಗಿದೆ. 2021ರ ಜುಲೈ 7ರಿಂದ 2021ರ ಆಗಸ್ಟ್‌ 10ರವರೆಗೆ ವಾಣಿ ವಿಲಾಸ ಸಾಗರಕ್ಕೆ 6.82 ಟಿ.ಎಂ.ಸಿ ನೀರನ್ನು ಹರಿಸಲಾಗಿದೆ. 2022-23 ನೇ ಸಾಲಿನಲ್ಲಿ ಬಾರಿ ಮಳೆಯಿಂದಾಗಿ ಜಲಾಶಯವು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ್ದು, ಕೋಡಿ ಬಿದ್ದಿದೆ.

(ii)ಹಂತ-2
ಎರಡನೇ ಹಂತದಲ್ಲಿ ತರೀಕೆರೆ ಏತ ನೀರಾವರಿ, ಚಿತ್ರದುರ್ಗ ಶಾಖಾ ಕಾಲುವೆ ಮತ್ತು ತುಮಕೂರು ಶಾಖಾ ಕಾಲುವೆ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಪ್ರಸ್ತುತ ಹಂತ ಈ ಕೆಳಕಂಡಂತೆ ಪ್ರಗತಿಯಲ್ಲಿದೆ.

➢ ತರೀಕೆರೆ ಏತ ನೀರಾವರಿ ಯೋಜನೆ: ತರೀಕೆರೆ ತಾಲ್ಲೂಕಿನ 20,150 ಹೆಕ್ಟೇರ್‌ ಪ್ರದೇಶಕ್ಕೆ ಹನಿ ನೀರಾವರಿ
ಪದ್ಧತಿಯಲ್ಲಿ ನೀರೊದಗಿಸುವ ಮತ್ತು 79 ಕೆರೆಗಳನ್ನು ತುಂಬಿಸಲು 812.02 ಕೋಟಿ ರೂ. ಮೊತ್ತದ (2
ಪ್ಯಾಕೇಜ್‌ಗಳಲ್ಲಿ) ತರೀಕೆರೆ ಏತ ನೀರಾವರಿ ಯೋಜನಾ ಕಾಮಗಾರಿಗಳು ಪ್ರಗತಿಯಲ್ಲಿವೆ. ತರೀಕೆರೆ ಏತ
ನೀರಾವರಿ ಪ್ಯಾಕೇಜ್-2ಗೆ ಸಂಬಂಧಿಸಿದಂತೆ 9,892 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವನ್ನು ಸೃಜಿಸಲಾಗಿರುತ್ತದೆ.
➢ ಚಿತ್ರದುರ್ಗ ಶಾಖಾ ಕಾಲುವೆ : 134.597 ಕಿಲೋಮೀಟರ್‌ವರೆಗಿನ ಚಿತ್ರದುರ್ಗ ಶಾಖಾ
ಕಾಲುವೆಯ 1639.53 ಕೋಟಿ ರೂ. ಮೊತ್ತದ ಕಾಮಗಾರಿಯನ್ನು 12 ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಂಡಿದ್ದು, ಕಾಮಗಾರಿಗಳ ಪ್ರಗತಿಯು ವಿವಿಧ ಹಂತದಲ್ಲಿರುತ್ತವೆ. ಒಟ್ಟು 134.597 ಕಿ.ಮೀ ಕಾಲುವೆ ಹಾದು
ಹೋಗುತ್ತಿದ್ದು, 118.41 ಕಿ.ಮೀ ಕಾಲುವೆ ಅಗೆತ ಪೂರ್ಣಗೊಂಡಿರುತ್ತದೆ. 103.56 ಕಿ.ಮೀ ಸಿ.ಬಿ.ಎಲ್‌ವರೆಗೆ ಕಾಲುವೆ ಅಗೆತ ಪೂರ್ಣಗೊಂಡಿರುತ್ತದೆ. 82.60 ಕಿ.ಮೀ ಕಾಲುವೆ ಲೈನಿಂಗ್ ಪೂರ್ಣಗೊಂಡಿದೆ.
➢ ತುಮಕೂರು ಶಾಖಾ ಕಾಲುವೆ: 159.684 ಕಿಲೋಮೀಟರ್‌ವರೆಗಿನ ತುಮಕೂರು ಶಾಖಾ
ಕಾಲುವೆಯ 1107.36 ಕೋಟಿ ರೂ. ಮೊತ್ತದ ಕಾಮಗಾರಿಯನ್ನು 9 ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಂಡಿದ್ದು, ಕಾಮಗಾರಿಗಳ ಪ್ರಗತಿಯು ವಿವಿಧ ಹಂತದಲ್ಲಿರುತ್ತವೆ. ಒಟ್ಟು 159.684 ಕಿ.ಮೀ ಕಾಲುವೆ ಹಾದು
ಹೋಗುತ್ತಿದ್ದು, 72.34 ಕಿ.ಮೀ ಕಾಲುವೆ ಅಗೆತ ಪೂರ್ಣಗೊಂಡಿದೆ. 43.68 ಕಿ.ಮೀ ಸಿ.ಬಿ.ಎಲ್‌ವರೆಗೆ ಕಾಲುವೆ ಅಗೆತ ಪೂರ್ಣಗೊಂಡಿದೆ. 15.50 ಕಿ.ಮೀ ಕಾಲುವೆ ಲೈನಿಂಗ್ ಪೂರ್ಣಗೊಂಡಿದೆ.

ಇದನ್ನೂ ಓದಿ : Budget 2023 : ರಾಜ್ಯದ ಮೇಲೆ ಮೋದಿ ಕಣ್ಣು: ಬಜೆಟ್‌ನಲ್ಲಿ ಪ್ರಸ್ತಾಪವಾದ ಏಕೈಕ ರಾಜ್ಯ ಕರ್ನಾಟಕ !

➢ ಕೆರೆ ತುಂಬಿಸುವ ಕಾಮಗಾರಿಗಳು:
✓ ಚಳ್ಳಕೆರೆ ಮತು ್ತ ಮೊಳಕಾಲ್ಮೂರು ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಕಾಮಗಾರಿ:
ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಕಾಮಗಾರಿ ಚಿತ್ರದುರ್ಗ ಶಾಖಾ ಕಾಲುವೆಯ 120.82 ಕಿ.ಮೀನಿಂದ ಪ್ರಾರಂಭವಾಗುತ್ತಿದ್ದು 705.87 ಕೋಟಿ ರೂ. ಮೊತ್ತದ ಕಾಮಗಾರಿಯನ್ನು 3 ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಂಡಿದ್ದು, ಪ್ರಗತಿಯಲ್ಲಿದೆ.
✓ ಪಾವಗಡ ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಕಾಮಗಾರಿ:
ಚಿತ್ರದುರ್ಗ ಶಾಖಾ ಕಾಲುವೆಯ 132.05 ಕಿ.ಮೀನಿಂದ ಪೈಪಲೈನ್ ಮೂಲಕ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕೆರೆಗಳನ್ನು ತುಂಬಿಸಲು 632.45 ಕೋಟಿ ರೂ. ಮೊತ್ತದ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು ಪ್ರಗತಿಯಲ್ಲಿದೆ.
✓ ಹೊಳಲ್ಕೆರೆ ಫೀಡರ್ ಕಾಲುವೆ: ಚಿತ್ರದುರ್ಗ ಶಾಖಾ ಕಾಲುವೆಯಡಿ ಬರುವ ಹೊಳಲ್ಕೆರೆ ಫೀಡರ್
ಕಾಲುವೆಯ ರೂ. 196.75 ಕೋಟಿ ಮೊತ್ತದ ಕಾಮಗಾರಿಯನ್ನು 3 ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಂಡಿದ್ದು, ಪ್ರಗತಿಯಲ್ಲಿದೆ.
✓ ಶಿರಾ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆರೆ ತುಂಬಿಸುವುದು.
ತುಮಕೂರು ಶಾಖಾ ಕಾಲುವೆಯ 159.180 ಕಿಮೀ ನಿಂದ ಪೈಪಲೈನ್ ಮೂಲಕ ಶಿರಾ ತಾಲ್ಲೂಕಿನ ಕೆರೆಗಳನ್ನು ತುಂಬಿಸಲು ರೂ.1165.29 ಕೋಟಿ ಮೊತ್ತದ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಪ್ರಗತಿಯಲ್ಲಿದೆ. ತುಮಕೂರು ಶಾಖಾ ಕಾಲುವೆಯ 113.329 ಕಿಮೀ ನಿಂದ ಪೈಪಲೈನ್ ಮೂಲಕ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆರೆಗಳನ್ನು ತುಂಬಿಸುವ 69.74 ಕೋಟಿ ರೂ. ಮೊತ್ತದ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಪ್ರಗತಿಯಲ್ಲಿದೆ.

➢ ಹನಿ ನೀರಾವರಿ :
ತರೀಕೆರೆ ಏತ ನೀರಾವರಿ ಯೋಜನೆ ಅಡಿ, 2022 ಮಾರ್ಚ್ ವೇಳೆಗೆ ತರೀಕೆರೆ ಏತ ನೀರಾವರಿ ಯೋಜನೆಯ ಎರಡನೇ ಪ್ಯಾಕೇಜನ್ನು ಪರೀಕ್ಷಾರ್ಥ ಚಾಲನೆಗೊಳಿಸಿ, ಒಟ್ಟು 9892.22 ಹೆಕ್ಟೇರ್ ಪ್ರದೇಶವನ್ನು Dry Potential ಅಡಿ ಸೃಜಿಸಲಾಗಿರುತ್ತದೆ. ಬಾಕಿ ಉಳಿದ 10,257.80 ಹೆಕ್ಟೇರ್ ಪ್ರದೇಶವನ್ನು ಸೃಜಿಸಕಾಗುತ್ತಿದೆ.

ಚಿತ್ರದುರ್ಗ ಶಾಖಾ ಕಾಲುವೆಯಡಿ 40,749 ಹೆಕ್ಟೇರ್, ತುಮಕೂರು ಶಾಖಾ ಕಾಲುವೆಯಡಿ 27,590 ಹೆಕ್ಟೇರ್ ಮತ್ತು ಜಗಳೂರು ಶಾಖಾ ಕಾಲುವೆಯಡಿ 13,200 ಹೆಕ್ಟೇರ್ ಪ್ರದೇಶವನ್ನು ಸೃಜಿಸಲು ಕಾಮಗಾರಿಗಳಿಗೆ ಗುತ್ತಿಗೆ ಕರಾರು ಮಾಡಿಕೊಂಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.

ಚಿತ್ರದುರ್ಗ ಶಾಖಾ ಕಾಲುವೆಯಡಿ ಬಾಕಿ ಉಳಿದ 66,516 ಹೆಕ್ಟೇರ್ ಪ್ರದೇಶಕ್ಕೆ ಟೆಂಡರ್ ಆಹ್ವಾನಿಸಲಾಗುತ್ತದೆ. ತುಮಕೂರು ಶಾಖಾ ಕಾಲುವೆಯಡಿ ಬಾಕಿ ಉಳಿದ 49,159.56 ಹೆಕ್ಟೇರ್ ಪ್ರದೇಶಕ್ಕೆ ಟೆಂಡರ್ ಆಹ್ವಾನಿಸಲಾಗುತ್ತದೆ. ಅದರವಿವರ ಈ ಕೆಳಗಿನಂತಿದೆ:
*ಚಿತ್ರದುರ್ಗ ಶಾಖಾ ಕಾಲುವೆಯ 61.23 ಕಿಲೋಮೀಟರ್‌ವರೆಗೆ 40749 ಹೆಕ್ಟೇರ್‌ ಪ್ರದೇಶಕ್ಕೆ ಹನಿ ನೀರಾವರಿ ಸೌಲಭ್ಯ ಕಲ್ಪಿಸುವುದಕ್ಕಾಗಿ 3 ಪ್ಯಾಕೇಜ್‌ಗಳಾಗಿ ಕೈಗೆತ್ತಿಕೊಳ್ಳಲಾಗಿದ್ದು, ರೂ. 2,389.87 ಕೋಟಿ ಮೊತ್ತದ ಟೆಂಡರ್ ಗುತ್ತಿಗೆ ಮಾಡಿಕೊಳ್ಳಲಾಗಿದೆ. ಒಂದು ಕಾಮಗಾರಿಯ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಕಾಮಗಾರಿಯು ಪ್ರಗತಿಯಲ್ಲಿದೆ. ಇನ್ನೆರಡು ಕಾಮಗಾರಿಯ ಸರ್ವೆ ಕಾರ್ಯವು ಪೂರ್ಣಗೊಂಡಿದ್ದು, ವಿನ್ಯಾಸವನ್ನು ಅನುಮೋದನೆಗೆ ಸಲ್ಲಿಸಲಾಗಿದೆ.
*ತುಮಕೂರು ಶಾಖಾ ಕಾಲುವೆಯ 76 kilOmIqrffvregin 27,590 ಹೆ. ಪ್ರದೇಶಕ್ಕೆ ಹನಿ ನೀರಾವರಿ ಸೌಲಭ್ಯ ಕಲ್ಪಿಸುವುದಕ್ಕಾಗಿ 2 ಪ್ಯಾಕೇಜ್‌ಗಳಾಗಿ ಕೈಗೆತ್ತಿಕೊಳ್ಳಲಾಗಿದ್ದು, ರೂ. 1,286.79 ಕೋಟಿ ಮೊತ್ತದ ಟೆಂಡರ್ ಗುತ್ತಿಗೆ ಮಾಡಿಕೊಳ್ಳಲಾಗಿದೆ. ಕಾಮಗಾರಿಗಳ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಕಾಮಗಾರಿಯು ಪ್ರಗತಿಯಲ್ಲಿದೆ.
*ತುಮಕೂರು ಶಾಖಾ ಕಾಲುವೆಯಡಿ ಹನಿ ನೀರಾವರಿ ಬ್ಲಾಕ್-4 ಕಾಮಗಾರಿಯ ಅಂದಾಜು ಪಟ್ಟಿಯಲ್ಲಿ ಹೊಸದುರ್ಗ ತಾಲ್ಲೂಕಿನ 8150.44 ಹೆ.ಅಚ್ಚುಕಟ್ಟು ಪ್ರದೇಶಕ್ಕೆ ಹನಿ ನೀರಾವರಿ ಮತ್ತು 25 ಕೆರೆಗಳಿಗೆ ನೀರು ಹರಿಸಲು ಅವಕಾಶ ಕಲ್ಪಿಸಲಾಗಿದೆ. ರೂ.465.00 ಕೋಟಿ ಮೊತ್ತದ ಅಂದಾಜು ಪಟ್ಟಿಗೆ ತಾಂತ್ರಿಕ ಮಂಜೂರಾತಿ ನೀಡಲಾಗಿದ್ದು, ಟೆಂಡರ್‌ ಆಹ್ವಾನಿಸಲಾಗಿದೆ.
*ತುಮಕೂರು ಶಾಖಾ ಕಾಲುವೆಯಡಿ ಹನಿ ನೀರಾವರಿ ಬ್ಲಾಕ್-5,6,7&8 ಕಾಮಗಾರಿಗ¼ À ಅಂದಾಜು
ಪಟ್ಟಿಗೆ ತಾಂತ್ರಿಕ ಮಂಜೂರಾತಿ ನೀಡಲಾಗಿದ್ದು, ಟೆಂಡರ್‌ನ್ನು ಆಹ್ವಾನಿಸಬೇಕಿರುತ್ತದೆ.
*ಜಗಳೂರು ಶಾಖಾ ಕಾಲುವೆ: ಈ ಕಾಲುವೆಯು ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಜಗಳೂರು
ತಾಲೂಕುಗಳಲ್ಲಿ ಬರುತ್ತದೆ. ಈ ಕಾಮಗಾರಿಯನ್ನು 2 ಪ್ಯಾಕೇಜ್‌ಗಳಾಗಿ ಕೈಗೆತ್ತಿಕೊಳ್ಳಲಾಗಿದ್ದು, ರೂ.1,833.45 ಕೋಟಿ ಮೊತ್ತದ ಟೆಂಡರ್ ಗುತ್ತಿಗೆ ಮಾಡಿಕೊಳ್ಳಲಾಗಿದೆ. ಸರ್ವೆ ಕಾರ್ಯ ಮುಗಿದಿದೆ.

ಭೂಸ್ವಾಧೀನ:
ಭದ್ರಾ ಮೇಲ್ದಂಡೆ ಯೊಜನೆಗೆ ಒಟ್ಟಾರೆ 7,720 ಎಕರೆ 36.94 ಗುಂಟೆ ಭೂಮಿ ಅವಶ್ಯಕತೆ ಇದ್ದು, ಇದರಲ್ಲಿ ಈವರೆಗೆ 3,922 ಎಕರೆ 13.88 ಗುಂಟೆ ವಶಕ್ಕೆ ಪಡೆಯಲಾಗಿದೆ. ಇಲ್ಲಿಯವರೆಗೂ ರೂ.8537.23 ಕೋಟಿಗಳನ್ನು ಠೇವಣಿ ಮಾಡಲಾಗಿದ್ದು, ರೂ.800.00 ಕೋಟಿಗಳ ಅನುದಾನ ಅವಶ್ಯಕತೆ ಇದೆ.
ಚಿಕ್ಕಮಗಳೂರು, ತರೀಕೆರೆ ಮತ್ತು ಕಡೂರು ಕೆರೆ ತುಂಬಿಸುವ ಯೋಜನೆಗೆ ಒಟ್ಟಾರೆ 63 ಎಕರೆ 33 ಗುಂಟೆ ಭೂಮಿ ಅವಶ್ಯಕತೆ ಇದ್ದು, ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ರೂ.0.96 ಕೋಟಿ ಅನುದಾನ ಅವಶ್ಯಕತೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Belagavi News : ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲೆ ಪಾಕ್​ ಪರ ಘೋಷಣೆ ಕೂಗಿದ ಆರೋಪಿ

Belagavi News ::

VISTARANEWS.COM


on

Belagvi Police
Koo

ಬೆಳಗಾವಿ : ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲೇ ನಟೋರಿಯಸ್​ ಕ್ರಿಮಿನಲ್ ಒಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ಆತನ ಕುಕೃತ್ಯದಿಂದ ಕೋಪಗೊಂಡ ಸ್ಥಳದಲ್ಲಿದ್ದವರು ಧರ್ಮದೇಟು ಕೊಟ್ಟಿದ್ದಾರೆ. ಪೊಲೀಸರ ಆತನನ್ನು ರಕ್ಷಿಸಿ ಮತ್ತೆ ಜೈಲಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ಆರೋಪಿಯನ್ನು ಐಪಿಎಸ್​ ಅಧಿಕಾರಿ ಅಲೋಕ್ ಕುಮಾರ್​ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಆತ ಪಾಕಿಸ್ತಾನ ಜಿಂದಾಬಾದ್​ ಎಂದು ಕೂಗುವ ಮೂಲಕ ಸ್ಥಳದಲ್ಲಿದ್ದವರನ್ನು ಕೆರಳಿಸಿದ್ದ.

ನಟೋರಿಯಸ್ ಪಾತಕಿ ಜಯೇಶ್ ಪೂಜಾರಿಯಿಂದ ಪಾಕಿಸ್ತಾನ ಪರ ಘೋಷಣೆ ಕೂಗಿ ಧರ್ಮದೇಟು ತಿಂದವು. ಆತ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರಿಂದ ಪೆಟ್ಟು ಬಿದ್ದಿದೆ. ಕೋರ್ಟ್ ಒಳ ಭಾಗದಲ್ಲೇ ಆತನಿಗೆ ಪೆಟ್ಟಿ ಬಿದ್ದಿದೆ. ಏಟು ಬೀಳುತ್ತಿದ್ದಂತೆ ಆರೋಪಿಯನ್ನು ರಕ್ಷಣೆ ಮಾಡಿ ಹೊರ ಕರೆದುಕೊಂಡು ಬಂದ ಪೊಲೀಸರು. ಅಲ್ಲಿಂದ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಜಯೇಶ್ ಪೂಜಾರ್​​ ಈ ಹಿಂದೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಜೈಲಿನಿಂದ ಜೀವ ಬೆದರಿಕೆ ಹಾಕಿದ್ದ. ಹಿಂಡಲಗಾ ಜೈಲಿನಲ್ಲಿದ್ದುಕೊಂಡು ಜೀವ ಬೆದರಿಕೆ ಹಾಕಿದ್ದ. ಈ ಕೇಸ್ ಹಿನ್ನೆಲೆಯಲ್ಲಿ ಕೋರ್ಟ್ ಗೆ ಕರೆ ತರಲಾಗಿತ್ತು. ಆರೋಪಿ ಜಯೇಶ್​ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೂ ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಕೋರ್ಟ್ ನಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಅಂತಾ ಪಾಕ್ ಪರ ಘೋಷಣೆ ಕೂಗಿರುವುದಾಗಿ ಆತ ಹೇಳಿದ್ದಾನೆ.

ವಾಟರ್​ ಮ್ಯಾನ್​ ಮೇಲೆ ಠಾಣೆಯಲ್ಲಿ ಹಲ್ಲೆ ; ಡಿವೈಎಸ್​ಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಎಫ್​ಐಆರ್​​

ತುಮಕೂರು: ಗ್ರಾಮ ಪಂಚಾಯತ್​ ವಾಟರ್ ಮ್ಯಾನ್ ಒಬ್ಬರನ್ನು ಎಳೆದೊಯ್ದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ಡಿವೈಎಸ್​ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕುಣಿಗಲ್​ ಪೊಲೀಸ್ ಠಾಣೆಯಲ್ಲಿ (Tumkur News) ದೂರು ದಾಖಲಾಗಿದೆ. ಎಫ್​ಐಆರ್​ ದಾಖಲಿಸುವಂತೆ ನ್ಯಾಯಾಲಯ ಆದೇಶದ ನೀಡಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ:Chikkaballapur News : ಒಂದೇ ಗ್ರಾಮದಲ್ಲಿ ನಾಲ್ವರ ಸರಣಿ ಸಾವು ; ಸ್ಥಳೀಯರಲ್ಲಿ ಆತಂಕ

ಕುಣಿಗಲ್ ಡಿವೈಎಸ್​​ಪಿ, ಓಂ ಪ್ರಕಾಶ್, ಸರ್ಕಲ್ ಇನ್ ಸ್ಪೆಕ್ಟರ್ ಮಾಧವ ನಾಯಕ್, ಅಮೃತ್ತೂರು ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಶಮಂತ್ ಗೌಡ, ಎಸ್​​ಎಚ್​ಒ ದಯಾನಂದ್ ವಿರುದ್ಧ ಎಫ್ ಐಆರ್ ದಾಖಲು ಮಾಡಲು ಕೋರ್ಟ್ ಆದೇಶಿದೆ.

ಮಾರ್ಚ್ 23ರಂದು ವಾಟರ್ ಮ್ಯಾನ್ ಗಂಗಾಧರ್ ಅವರನ್ನು ವಿಚಾರಣೆ ನೆಪದಲ್ಲಿ ಕುಣಿಗಲ್​ ಠಾಣೆಗೆ ಕರೆದೊಯ್ಯಲಾಗಿತ್ತು. ಅಮೃತ್ತೂರು ಹೋಬಳಿಯ ಕೆ.ಹೆಚ್ ಹಳ್ಳಿ ಗ್ರಾ.ಪಂನ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿರೋ ಗಂಗಾಧರ್ ಅವರನ್ನು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡದೇ ಕರೆದುಕೊರಮಡು ಹೋಗಲಾಗಿತ್ತು. ಅಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Tumkur News : ವಾಟರ್​ ಮ್ಯಾನ್​ ಮೇಲೆ ಠಾಣೆಯಲ್ಲಿ ಹಲ್ಲೆ ; ಡಿವೈಎಸ್​ಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಎಫ್​ಐಆರ್​​

Tumkur News :ಕುಣಿಗಲ್ ಡಿವೈಎಸ್​​ಪಿ, ಓಂ ಪ್ರಕಾಶ್, ಸರ್ಕಲ್ ಇನ್ ಸ್ಪೆಕ್ಟರ್ ಮಾಧವ ನಾಯಕ್, ಅಮೃತ್ತೂರು ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಶಮಂತ್ ಗೌಡ, ಎಸ್​​ಎಚ್​ಒ ದಯಾನಂದ್ ವಿರುದ್ಧ ಎಫ್ ಐಆರ್ ದಾಖಲು ಮಾಡಲು ಕೋರ್ಟ್ ಆದೇಶಿದೆ.

VISTARANEWS.COM


on

Tumkur News
Koo

ತುಮಕೂರು: ಗ್ರಾಮ ಪಂಚಾಯತ್​ ವಾಟರ್ ಮ್ಯಾನ್ ಒಬ್ಬರನ್ನು ಎಳೆದೊಯ್ದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ಡಿವೈಎಸ್​ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕುಣಿಗಲ್​ ಪೊಲೀಸ್ ಠಾಣೆಯಲ್ಲಿ (Tumkur News) ದೂರು ದಾಖಲಾಗಿದೆ. ಎಫ್​ಐಆರ್​ ದಾಖಲಿಸುವಂತೆ ನ್ಯಾಯಾಲಯ ಆದೇಶದ ನೀಡಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಕುಣಿಗಲ್ ಡಿವೈಎಸ್​​ಪಿ, ಓಂ ಪ್ರಕಾಶ್, ಸರ್ಕಲ್ ಇನ್ ಸ್ಪೆಕ್ಟರ್ ಮಾಧವ ನಾಯಕ್, ಅಮೃತ್ತೂರು ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಶಮಂತ್ ಗೌಡ, ಎಸ್​​ಎಚ್​ಒ ದಯಾನಂದ್ ವಿರುದ್ಧ ಎಫ್ ಐಆರ್ ದಾಖಲು ಮಾಡಲು ಕೋರ್ಟ್ ಆದೇಶಿದೆ.

ಮಾರ್ಚ್ 23ರಂದು ವಾಟರ್ ಮ್ಯಾನ್ ಗಂಗಾಧರ್ ಅವರನ್ನು ವಿಚಾರಣೆ ನೆಪದಲ್ಲಿ ಕುಣಿಗಲ್​ ಠಾಣೆಗೆ ಕರೆದೊಯ್ಯಲಾಗಿತ್ತು. ಅಮೃತ್ತೂರು ಹೋಬಳಿಯ ಕೆ.ಹೆಚ್ ಹಳ್ಳಿ ಗ್ರಾ.ಪಂನ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿರೋ ಗಂಗಾಧರ್ ಅವರನ್ನು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡದೇ ಕರೆದುಕೊರಮಡು ಹೋಗಲಾಗಿತ್ತು. ಅಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Chikkaballapur News : ಒಂದೇ ಗ್ರಾಮದಲ್ಲಿ ನಾಲ್ವರ ಸರಣಿ ಸಾವು ; ಸ್ಥಳೀಯರಲ್ಲಿ ಆತಂಕ

ಗಂಗಾಧರ್ ಅವರನ್ನು ಕರೆದುಕೊಂಡು ಹೋದ ಪೊಲೀಸರು ಸಂಜೆ ವೇಳೆ ಬಿಟ್ಟಿದ್ದರು. ಈ ನಡುವೆ ಅವರಿಗೆ ಬಾಸುಂಡೆ ಬರುವಂತೆ ಬಾರಿಸಿದ್ದರು ಎಂದು ಹೇಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ತಮಗಾಗಿರುವ ಅನ್ಯಾಯವನ್ನು ಪ್ರಶ್ನಿಸಿ ಕೋರ್ಟ್​ ಮೆಟ್ಟಿಲೇರಿದ್ದರು. ಇದೀಗ ನ್ಯಾಯಾಲಯ ಪೊಲೀಸ್​ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಿಸಲು ಆದೇಶಿಸಿದೆ.

ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ


ಖಾಸಗಿ ಕ್ಷಣಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಾಕಿ ಮರ್ಯಾದೆ ಕಳೆಯುವುದಾಗಿ ಬೆದರಿಕೆ ಹಾಕಿದ್ದ ಪ್ರಿಯಕರನ್ನು ವಿವಾಹಿತ ಮಹಿಳೆಯೊಬ್ಬಳು ಸಹೋದರನ ಜತೆ ಸೇರಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ (Murder News) ಎಚ್​​​ಡಿ ಕೋಟೆ ತಾಲೂಕಿನ ಸಿದ್ದಯ್ಯನ ಹುಂಡಿ ಬಳಿ ನಡೆದಿದೆ. ಪ್ರೇಮಾ ಹಾಗೂ ಆಕೆಯ ಸಹೋದರ ಶಿವು ಕೊಲೆ ಆರೋಪಿಗಳು. 32 ವರ್ಷದ ರಾಜೇಶ್​ ಕೊಲೆಯಾದ ವ್ಯಕ್ತಿ.

ಆರೋಪಿ ಪ್ರೇಮಾ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದಾರೆ. ಅವರು 15 ವರ್ಷದ ಹಿಂದೆ ನಂಜನಗೂಡಿನ ಶ್ರೀರಾಂಪುರಕ್ಕೆ ಮದುವೆ ಆಗಿ ಬಂದಿದ್ದರು. ಒಂದು ತಿಂಗಳ ಹಿಂದೆ ಪ್ರೇಮಾಳ ಪತಿ ಆತ್ಮಹತ್ಯೆ. ಮಾಡಿಕೊಂಡಿದ್ದರು. ಆ ಬಳಿಕ ಪ್ರೇಮಾ ಪತಿಯ ಸ್ನೇಹಿತ ರಾಜೇಶ್​ ಜತೆ ಪ್ರೀತಿಯಲ್ಲಿ ಬಿದ್ದಿದ್ದಳು. ಅವರಿಬ್ಬರು ಖಾಸಗಿ ಕ್ಷಣಗಳನ್ನೂ ಕಳೆದಿದ್ದರು. ಇದನ್ನೇ ದುರ್ಬಳಕೆ ಮಾಡಿಕೊಂಡಿದ್ದ ರಾಜೇಶ್​​, ಆ ಕ್ಷಣದ ಫೋಟೋಗಳನ್ನು ತೆಗೆದಿಟ್ಟುಕೊಂಡು ಬೆದರಿಕೆ ಹಾಕಲು ಆರಂಭಿಸಿದ್ದ. ಬೆದರಿದ ಪ್ರೇಮಾ ಆತನ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದಾಳೆ. ಅಂತೆಯೇ ಆತನನ್ನು ತನ್ನ ಬಳಿಗೆ ಕರೆಸಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ.

Continue Reading

ಪ್ರಮುಖ ಸುದ್ದಿ

Lok Sabha Election : ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ ವಿಧಾನಸಭೆ ಚುನಾವಣೆಯಲ್ಲಿ 142 ಸ್ಥಾನ!

Lok Sabha Election: ರಾಜ್ಯ ಸರ್ಕಾರದ 18 ಮಂತ್ರಿಗಳು ತಮ್ಮ ಸ್ವಂತ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಮುನ್ನಡೆ ಕೊಡಿಸಲು ವಿಫಲರಾಗಿದ್ದರು. ಇದು ಕಾಂಗ್ರೆಸ್​ ಪಾಲಿಗೆ ಕಟು ಸತ್ಯವಾಗಿದೆ. ಉದಾಹರಣೆಗೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಬಿಟಿಎಂ ಲೇಔಟ್ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಅವರಿಗೆ 9,000 ಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿತ್ತು.

VISTARANEWS.COM


on

Lok Sabha Election
Koo

ಬೆಂಗಳೂರು: ಈ ಕ್ಷಣದಲ್ಲೇ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದರೆ ಮತ್ತು ಲೋಕಸಭಾ ಚುನಾವಣೆಯಂತೆಯೇ (Lok Sabha Election ) ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರೆ, ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ 142 ಸ್ಥಾನಗಳನ್ನು ಗೆಲ್ಲಲಿದೆ. ಈ ಮೂಲಕ ಇದು ರಾಜ್ಯದಲ್ಲಿ ಕಾಂಗ್ರೆಸ್ 2023ರಲ್ಲಿ ಪಡೆದ ಭಾರಿ ಜನಾದೇಶ ಬುಡಮೇಲಾಗಲಿದೆ. ಡೆಕ್ಕಲ್​ ಹೆರಾಲ್ಡ್​ ಪತ್ರಿಕೆಯು ಈ ಬಗ್ಗೆ ವರದಿಯೊಂದನ್ನು ಮಾಡಿದ್ದು ಜೆಡಿಎಸ್​, ಬಿಜೆಪಿ ಮೈತ್ರಿಯಿಂದಾಗಿ ಕಾಂಗ್ರೆಸ್​ಗೆ ನಷ್ಟವಾಗಲಿದೆ ಎಂದು ವರದಿ ಮಾಡಿದೆ.

ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ವಿಭಿನ್ನವಾಗಿ ಮತ ಚಲಾಯಿಸುವ ಸುದೀರ್ಘ ಇತಿಹಾಸವನ್ನು ಕರ್ನಾಟಕದ ಮತದಾರರು ಹೊಂದಿದ್ದಾರೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರು 28 ಸ್ಥಾನಗಳ ಪೈಕಿ ಬಿಜೆಪಿಗೆ 17 ಸೀಟ್ ಕೊಟ್ಟಿದ್ದಾರೆ. ಜೆಡಿಎಸ್ ಸ್ಪರ್ಧಿಸಿರುವ 3ರಲ್ಲಿ 2 ಮತ್ತು ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದ್ದುಕೊಂಡಿದೆ. 2019ರಲ್ಲಿ ಕೇವಲ ಒಂದು ಸ್ಥಾನ ಗೆದ್ದಿದ್ದ ಕಾಂಗ್ರೆಸ್ 14ರಿಂ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ, ಅದು ಕೆಲಸ ಮಾಡಿಲ್ಲ.

ರಾಜ್ಯ ಸರ್ಕಾರದ 18 ಮಂತ್ರಿಗಳು ತಮ್ಮ ಸ್ವಂತ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಮುನ್ನಡೆ ಕೊಡಿಸಲು ವಿಫಲರಾಗಿದ್ದರು. ಇದು ಕಾಂಗ್ರೆಸ್​ ಪಾಲಿಗೆ ಕಟು ಸತ್ಯವಾಗಿದೆ. ಉದಾಹರಣೆಗೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಬಿಟಿಎಂ ಲೇಔಟ್ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಅವರಿಗೆ 9,000 ಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿತ್ತು. ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅವರ ಪುತ್ರ ಮೃಣಾಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ ಅಲ್ಲಿ ಬಿಜೆಪಿ 50,000 ಮತಗಳ ಮುನ್ನಡೆ ಸಾಧಿಸಿದೆ.

ಮೈತ್ರಿ ಯಶಸ್ಸು

ಚುನಾವಣಾ ಬಳಿಕದ ಅಂಕಿ ಅಂಶಗಳ ಪ್ರಕಾರ, ಬಿಜೆಪಿ-ಜೆಡಿಎಸ್ ಮೈತ್ರಿ ಕೆಲಸ ಮಾಡಿದೆ. ಏಕೆಂದರೆ ಎರಡೂ ಪಕ್ಷಗಳು ಪರಸ್ಪರ ತಮ್ಮ ಮತಗಳನ್ನು ಹಂಚಿಕೊಳ್ಳುವಲ್ಲಿ ಯಶಸ್ವಿಯಾಗಿವೆ. ಇದು ಸಂಭವಿಸುವುದಿಲ್ಲ ಎಂದು ಕಾಂಗ್ರೆಸ್ ಭಾವಿಸಿತ್ತು. ಅವರ ನಿರೀಕ್ಷೆ ಸುಳ್ಳಾಗಿದೆ. ತುಮಕೂರು ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿಲ್ಲ ಎಂಬುದೇ ಇದಕ್ಕೆ ಸಾಕ್ಷಿ. ಅದೇ ರೀತಿ ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕೊಂಚವೂ ಮುನ್ನಡೆ ಸಿಕ್ಕಿಲ್ಲ.

ಇದನ್ನೂ ಓದಿ: Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

ವ್ಯತರಿಕ್ತ ಫಲಿತಾಂಶ

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು. ಬೀದರ್, ರಾಯಚೂರು ಮತ್ತು ಬಳ್ಳಾರಿಯಲ್ಲಿ ಇದು ಬಹುತೇಕ ಮೇಲುಗೈ ಸಾಧಿಸಿದೆ.
ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವ್ ಮತ್ತು ಫೈರ್ ಬ್ರಾಂಡ್ ಹಿಂದುತ್ವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಜಾಪುರ ನಗರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ವಿಶೇಷ.

ಒಂದು ವಿಧಾನಸಭಾ ಕ್ಷೇತ್ರದಲ್ಲಿ ಸಿಗುವ ಗಣನೀಯ ಮುನ್ನಡೆ ಇಡೀ ಫಲಿತಾಂಶವನ್ನು ಹೇಗೆ ತಿರುಗಿಸುತ್ತದೆ ಎಂಬುದಕ್ಕೂ ಉದಾಹರಣೆಯಿದೆ. ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್ ಅವರು ಮಹದೇವಪುರ ಕ್ಷೇತ್ರ ಒಂದರಲ್ಲಿಯೇ 1.14 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದರು. ಇದು ಫಲಿತಾಂಶವನ್ನೇ ಬದಲಾಯಿಸಿ ಗೆಲುವು ತಂದುಕೊಟ್ಟಿತು. ಮಹದೇವಪುರದ ಮತದಾರರ ಸಂಖ್ಯೆ 3 ವಿಧಾನಸಭಾ ಕ್ಷೇತ್ರಗಳಿಗೆ ಸಮನಾಗಿದೆ. ರಾಜಾಜಿನಗರ ಮತ್ತು ಇತರ ಸ್ಥಳಗಳಲ್ಲಿ ನನಗೆ ದೊರೆತ ಮುನ್ನಡೆ ಇಲ್ಲದಿದ್ದರೆ, ಮಹದೇವಪುರ ಮಾತ್ರ ಸಾಕಾಗುತ್ತಿರಲಿಲ್ಲ ಎಂದು ಮೋಹನ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆಯನ್ನು ಪಕ್ಷ ರಾಜಕೀಯಗೊಳಿಸದಿದ್ದರೆ ಬಿಜೆಪಿಗೆ ಇಷ್ಟೊಂದು ಸೀಟು ಸಿಗುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದರು. ಯಾಕೆಂದರೆ 2019ಕ್ಕೆ ಹೋಲಿಸಿದರೆ ಕಾಂಗ್ರೆಸ್ ಮತ ಹಂಚಿಕೆ ಶೇ.13ರಷ್ಟು ಹೆಚ್ಚಾಗಿದೆ ಎಂದು ಅಂಕಿ ಅಂಶಗಳ ಮೂಲ ಗೊತ್ತಾಗಿದೆ.

Continue Reading

ಪ್ರಮುಖ ಸುದ್ದಿ

Chikkaballapur News : ಒಂದೇ ಗ್ರಾಮದಲ್ಲಿ ನಾಲ್ವರ ಸರಣಿ ಸಾವು ; ಸ್ಥಳೀಯರಲ್ಲಿ ಆತಂಕ

Chikkaballapur News : ಎಲ್ಲರೂ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಆದರೆ, ಎಲ್ಲರೂ ಒಂದೇ ವಯಸ್ಸಿನವರು ಮೃತಪಡುತ್ತಿರುವುದು ಸ್ಥಳೀಯರ ಪಾಲಿಗೆ ವಿಶೇಷ ಎನಿಸಿದೆ. ಒಂದೇ ವಯಸ್ಸಿನವರು ಅನಾರೋಗ್ಯಕ್ಕೆ ಒಳಗಾಗುಗುವುದು ಯಾಕೆ. ಏನಾದರೂ ಸಮಸ್ಯೆ ಇದೆಯೇ ಎಂಬುದಾಗಿ ಅವರೆಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

Chikkaballapur News
Koo

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ(Chikkaballapur News ) ವೀರಪ್ಪಲ್ಲಿ ಗ್ರಾಮದಲ್ಲಿ ಒಂದೇ ವಯಸ್ಸಿನ ನಾಲ್ವರು ಮೃತಪಟ್ಟಿರುವ ಘಟನೆ ಸ್ಥಳೀಯರ ಆತಂತಕ್ಕೆ ಕಾರಣವಾಗಿದೆ. ಮೃತಪಟ್ಟವರೆಲ್ಲರೂ 70 ವರ್ಷ ದಾಟಿದವರಾಗಿದ್ದಾರೆ. ಹೀಗಾಗಿ ವಯೋವೃದ್ಧರಿಗೆ ಆತಂಕ ಹೆಚ್ಚಾಗಿದೆ. ಆದರೆ, ಸಾಂಕ್ರಾಮಿಕ ರೋಗದಿಂದ ಅವರ ಮೃತಪಟ್ಟಿರಬಹುದು ಎಂದು ಆರೋಗ್ಯ ಅಧಿಕಾರಿಗಳು ಶಂಕಿಸಿದ್ದಾರೆ. ಆರೋಗ್ಯ ಸಿಬ್ಬಂದಿ ಗ್ರಾಮದಲ್ಲಿ ಬೀಡುಬಿಟ್ಟು ಹಿರಿಯ ವಯಸ್ಸಿನವರ ಬಗ್ಗೆ ಕಾಳಜಿ ವಹಿಸಿದ್ದಾರೆ.

ಗಂಗಮ್ಮ,(70), ಮುನಿನಾರಾಯಣಮ್ಮ(74), ಲಕ್ಷ್ಮಮ್ಮ (70), ನರಸಿಂಹಪ್ಪ (75) ಮೃತಪಟ್ಟವರು. ಎಲ್ಲರೂ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಆದರೆ, ಎಲ್ಲರೂ ಒಂದೇ ವಯಸ್ಸಿನವರು ಮೃತಪಡುತ್ತಿರುವುದು ಸ್ಥಳೀಯರ ಪಾಲಿಗೆ ವಿಶೇಷ ಎನಿಸಿದೆ. ಒಂದೇ ವಯಸ್ಸಿನವರು ಅನಾರೋಗ್ಯಕ್ಕೆ ಒಳಗಾಗುಗುವುದು ಯಾಕೆ. ಏನಾದರೂ ಸಮಸ್ಯೆ ಇದೆಯೇ ಎಂಬುದಾಗಿ ಅವರೆಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.

ಮೃತಪಟ್ಟವರೆಲ್ಲರೂ ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡಿದ್ದಾರೆ ಎಂದು ವೈದ್ಯಕೀಯ ಸಿಬ್ಬಂದಿ ಹೇಳುತ್ತಿದ್ದಾರೆ. ಗ್ರಾಮದ ಹಲವರಲ್ಲಿ ಅದೇ ಲಕ್ಷಣ ಕಂಡು ಬಂದಿದೆ. ಆದರೆ ಅವರೆಲ್ಲರೂ ಸುಧಾರಿಸಿಕೊಳ್ಳುತ್ತಿದ್ದಾರೆ. ಆದರೆ, ಹೆಚ್ಚು ವಯಸ್ಸಿನವರು ಬದುಕುತ್ತಿಲ್ಲ ಎಂಬುದಾಗಿ ಹೇಳಿದ್ದಾರೆ. ಆದರೆ ವೈದ್ಯರ ಮಾತನ್ನು ತಕ್ಷಣಕ್ಕೆ ಗ್ರಾಮಸ್ಥರು ನಂಬುತ್ತಿಲ್ಲ.

ಇದನ್ನೂ ಓದಿ: Murder News : ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ

ಅರಿವು ಮೂಡಿಸಿದ ವೈದ್ಯರು

ಆರೋಗ್ಯ ಇಲಾಖೆ ಸಿಬ್ಬಂದಿ ಮನೆಮನೆಗೂ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಸ್ಥಳಕ್ಕೆ ಡಿಎಚ್​ಒ ,ಇಒ ,ಟಿಎಚ್​​ ಒ, ಡಿ ಎಸ್ ಒ , ಡಿಎಂಒ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅವರೆಲ್ಲರೂ ಹೆದರಿದ ಗ್ರಾಮಸ್ಥರಿಗೆ ಆತ್ಮಸ್ಥೈರ್ಯ್ಯ ತುಂಬುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಗ್ರಾಮದ ಸರ್ಕಾರಿ ಶಾಲೆಯಲ್ಲೇ ಬೀಡು ಬಿಟ್ಟಿರುವ ವೈದ್ಯಕೀಯ ಸಿಬ್ಬಂದಿ ಪ್ರಕರಣಗಳ ಬಗ್ಗೆ ಗಮನ ಹರಿಸಿದ್ದಾರೆ.

Continue Reading
Advertisement
Murder case
ಪ್ರಮುಖ ಸುದ್ದಿ2 mins ago

Murder Case: 300 ಕೋಟಿಯ ಆಸ್ತಿಗಾಗಿ ಮಾವನ ಕೊಲೆಗೆ ಸುಪಾರಿ ಕೊಟ್ಟ ಸೊಸೆ!

Chandrababu Naidu
ದೇಶ5 mins ago

Chandrababu Naidu: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪದಗ್ರಹಣ

Viral News
ರಾಜಕೀಯ5 mins ago

Viral News: ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕಾಯಿದೆ ಜಾರಿ?

Belagvi Police
ಪ್ರಮುಖ ಸುದ್ದಿ7 mins ago

Belagavi News : ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲೆ ಪಾಕ್​ ಪರ ಘೋಷಣೆ ಕೂಗಿದ ಆರೋಪಿ

Tumkur News
ಪ್ರಮುಖ ಸುದ್ದಿ30 mins ago

Tumkur News : ವಾಟರ್​ ಮ್ಯಾನ್​ ಮೇಲೆ ಠಾಣೆಯಲ್ಲಿ ಹಲ್ಲೆ ; ಡಿವೈಎಸ್​ಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಎಫ್​ಐಆರ್​​

Actor Darshan arest Actor Jaggesh Says Karma Follows You
ಸ್ಯಾಂಡಲ್ ವುಡ್33 mins ago

Actor Darshan: ದರ್ಶನ್‌ ಅರೆಸ್ಟ್​ ಆದ ಬೆನ್ನಲ್ಲೇ ಕರ್ಮ ಫಲ ಎಂದು ಜಗ್ಗೇಶ್‌ ಟ್ವೀಟ್‌!

Modi 3.0
ದೇಶ43 mins ago

Modi 3.0: ಶೀಘ್ರ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌, ಡೀಸೆಲ್‌? ಕೇಂದ್ರ ಸಚಿವರು ಹೇಳಿದ್ದೇನು?

Vinod Raj admitted hospital
ಸ್ಯಾಂಡಲ್ ವುಡ್1 hour ago

Vinod Raj: ಲೀಲಮ್ಮನ ಮಗ, ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲು

Lok Sabha Election
ಪ್ರಮುಖ ಸುದ್ದಿ1 hour ago

Lok Sabha Election : ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ ವಿಧಾನಸಭೆ ಚುನಾವಣೆಯಲ್ಲಿ 142 ಸ್ಥಾನ!

Actor Darshan arrest what about his future project
ಸ್ಯಾಂಡಲ್ ವುಡ್1 hour ago

Actor Darshan: ʻಡೆವಿಲ್‌ʼಗೆ ಜೈಲು ಗ್ಯಾರಂಟಿ ಆದ್ರೆ ಮುಂದಿನ ಸಿನಿಮಾಗಳ ಗತಿಯೇನು? ನಿರ್ಮಾಪಕರಿಗೆ ನಡುಕ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ20 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ22 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ23 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌