Davis Cup: ಡೇವಿಸ್‌ ಕಪ್‌: ಭಾರತ ತಂಡಕ್ಕೆ ಡೆನ್ಮಾರ್ಕ್‌ ಸವಾಲು - Vistara News

ಕ್ರೀಡೆ

Davis Cup: ಡೇವಿಸ್‌ ಕಪ್‌: ಭಾರತ ತಂಡಕ್ಕೆ ಡೆನ್ಮಾರ್ಕ್‌ ಸವಾಲು

ಪ್ರತಿಷ್ಠಿತ ಡೇವಿಸ್‌ ಕಪ್‌ ಟೆನಿಸ್‌ ಟೂರ್ನಿಯ ವಿಶ್ವ ಗುಂಪಿನಲ್ಲಿ ಸ್ಥಾನ ಉಳಿಸಿಕೊಳ್ಳುವ ಪ್ರಯತ್ನದಲ್ಲಿರುವ ಭಾರತ ತಂಡಕ್ಕೆ ಡೆನ್ಮಾರ್ಕ್‌ ತಂಡದ ಸವಾಲು ಎದುರಾಗಿದೆ.

VISTARANEWS.COM


on

sumit nagal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಿಲರ್ಡ್‌, (ಡೆನ್ಮಾರ್ಕ್‌): ಡೇವಿಸ್‌ ಕಪ್‌(Davis Cup) ಟೆನಿಸ್‌ ಟೂರ್ನಿಯ ಪ್ಲೇ ಆಫ್‌ ಪಂದ್ಯ ಶುಕ್ರವಾರ ಆರಂಭವಾಗಲಿದೆ. ವಿಶ್ವ ಗುಂಪಿನಲ್ಲಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭಾರತ ತಂಡ ಡೆನ್ಮಾರ್ಕ್‌ ತಂಡದ ಸವಾಲನ್ನು ಮೀರಿ ನಿಲ್ಲಬೇಕಿದೆ.

ಭಾರತ ತಂಡದಲ್ಲಿರುವ ಆಟಗಾರರಲ್ಲಿ ಯಾರೂ ವಿಶ್ವ ರ‍್ಯಾಂಕಿಂಗ್‌ನಲ್ಲಿ ಉತ್ತಮ ಶ್ರೇಯಾಂಕ ಹೊಂದಿಲ್ಲ ಆದ್ದರಿಂದ ಎಟಿಪಿ ರ‍್ಯಾಂಕಿಂಗ್​ನಲ್ಲಿ 9ನೇ ಸ್ಥಾನದಲ್ಲಿರುವ ಡೆನ್ಮಾರ್ಕ್‌ ತಂಡದ ಯುವ ಆಟಗಾರ ಹೋಲ್ಗರ್‌ ರೂನ್‌ ಅವರು ಭಾರತದ ಆಟಗಾರರಿಗೆ ಪ್ರಬಲ ಪೈಪೋಟಿ ಒಡ್ಡುವ ನಿರೀಕ್ಷೆಯಿದೆ.

2022ರ ಮಾರ್ಚ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಭಾರತ 4-0 ಅಂತರದಲ್ಲಿ ಡೆನ್ಮಾರ್ಕ್‌ ತಂಡವನ್ನು ಮಣಿಸಿತ್ತು. ಇದೇ ಪ್ರದರ್ಶನವನ್ನು ಭಾರತ ಈ ಬಾರಿಯೂ ತೋರಿದರೆ ಗೆಲುವು ಖಚಿತ ಎನ್ನಲಡ್ಡಿಯಿಲ್ಲ. ಆದರೆ 19 ವರ್ಷದ ರೂನ್‌ ಅವರ ಸವಾಲನ್ನು ಮೆಟ್ಟಿನಿಲ್ಲಬೇಕು ಏಕೆಂದರೆ ಇತ್ತೀಚೆಗೆ ಮುಕ್ತಾಯ ಕಂಡ ಆಸ್ಟ್ರೇಲಿಯಾ ಓಪನ್‌ ಟೂರ್ನಿಯಲ್ಲಿ ಅವರು ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಅನುಭವಿ ಆಟಗಾರರನ್ನು ಮಣಿಸಿ ನಾಲ್ಕನೇ ಸುತ್ತು ಪ್ರವೇಶಿಸಿದ್ದರು.

ಭಾರತ ಪರ ಯೂಕಿ ಭಾಂಬ್ರಿ(yuki bhambri) ಸಿಂಗಲ್ಸ್‌ ಪಂದ್ಯದಲ್ಲಿ ಆಡಲಿದ್ದಾರೆ. ಉಳಿದಂತೆ ಪ್ರಜ್ಞೇಶ್‌ ಗುಣೇಶ್ವರನ್(prajnesh gunneswaran), ರಾಮಕುಮಾರ್‌ ರಾಮನಾಥನ್‌ ಮತ್ತು ಸುಮಿತ್‌ ನಗಾಲ್(sumit nagal) ಕೂಡ ಸಿಂಗಲ್ಸ್​ ಆಡಲಿದ್ದಾರೆ.

ಇದನ್ನೂ ಓದಿ Australian Open | ಸರ್ಬಿಯಾದ ನೊವಾಕ್​ ಜೊಕೊವಿಕ್​ ಆಸ್ಟ್ರೇಲಿಯನ್​ ಓಪನ್​ ಚಾಂಪಿಯನ್​

ಶುಕ್ರವಾರ ನಡೆಯಲಿರುವ ಸಿಂಗಲ್ಸ್‌ ಪಂದ್ಯಗಳಲ್ಲಿ ಯೂಕಿ-ರೂನ್‌ ಮತ್ತು ಸುಮಿತ್‌-ಹೋಮ್‌ಗ್ರೆನ್‌ ಎದುರಾಗಲಿದ್ದಾರೆ. ಶನಿವಾರ ನಡೆಯುವ ಡಬಲ್ಸ್‌ನಲ್ಲಿ ಅನುಭವಿ ರೋಹನ್‌ ಬೋಪಣ್ಣ(rohan bopanna) ಮತ್ತು ಯೂಕಿ ಭಾಂಬ್ರಿ ಜತೆಯಾಗಿ ಆಡಲಿದ್ದಾರೆ. ರೋಹನ್‌ ಬೋಪಣ್ಣ ಆಸ್ಟ್ರೇಲಿಯಾ ಓಪನ್​ ಮಿಶ್ರ ಡಬಲ್ಸ್​ ಪಂದ್ಯದಲ್ಲಿ ಸಾನಿಯಾ ಮಿರ್ಜಾ ಜತೆ ಆಡಿ ರನ್ನರ್​ ಅಪ್​ ಸ್ಥಾನ ಪಡೆದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

IND vs PAK: ಪಾಕಿಸ್ತಾನ ಟಿ20 ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ತೋರಿದೆ. 2009ರಲ್ಲಿ ಚಾಂಪಿಯನ್ ಆಗಿದ್ದ ತಂಡ, 2007 ಮತ್ತು 2022ರಲ್ಲಿ ರನ್ನರ್ ಅಪ್ ಆಗಿತ್ತು. ಒಟ್ಟು ಎಂಟು ಆವೃತ್ತಿಗಳಲ್ಲಿ ಆರು ಬಾರಿ ಸೆಮಿಫೈನಲ್ ತಲುಪಿದೆ. ಕಳೆದ ಆವೃತ್ತಿಯ ಫೈನಲ್‌ನಲ್ಲಿ ಇಂಗ್ಲೆಂಡ್‌ಗೆ ಮಣಿದಿತ್ತು.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್(t20 world cup 2024)​ ಪಂದ್ಯ ಭಾನುವಾರ(ಜೂನ್​ 9) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಪಾಕ್(pakistan cricket team)​ ತಂಡದ ನಾಯಕ ಬಾಬರ್​ ಅಜಂ(Babar Azam) ಅವರು ತಂಡದ ಸಹ ಆಟಗಾರರರಿಗೆ ಮಹತ್ವದ ಸಲೆಯೊಂದನ್ನು ನೀಡಿದ್ದಾರೆ. ಎಲ್ಲರು ಶಾಂತ ಚಿತ್ತರಾಗಿ ಆಡಬೇಕು ಎಂದಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಬಾಬರ್​, ಭಾರತ ಮತ್ತು ಪಾಕಿಸ್ತಾನ ಪಂದ್ಯಗಳಿಗೆ ಇರುವ ಅತಿಯಾದ ಪ್ರಚಾರ, ನಿರೀಕ್ಷೆ ಮತ್ತು ಒತ್ತಡಗಳು ಆಟಗಾರರಲ್ಲಿ ಸಹಜವಾಗಿಯೇ ಒತ್ತಡ ಉಂಟುಮಾಡುತ್ತದೆ. ತಮ್ಮ ತಂಡದ ಆಟಗಾರರು ಶಾಂತಚಿತ್ತರಾಗಿದ್ದುಕೊಂಡು, ಆಟದ ಮೂಲಭೂತ ಅಂಶಗಳ ಕಡೆಗಷ್ಟೇ ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

2021ರಲ್ಲಿ ದುಬೈನಲ್ಲಿ ನಡೆದಿದ್ದ ವಿಶ್ವಕಪ್‌ ಟೂರ್ನಿಯಲ್ಲಿ ನಾವು ಭಾರತ ವಿರುದ್ಧ 10 ವಿಕೆಟ್​ಗಳಿಂದ ಗೆಲುವು ಸಾಧಿಸಿದ್ದೆವು. ಈ ಗೆಲುವಿನ ಮಂತ್ರ, ನಾವು ಭಾರತೀಯ ಆಟಗಾರರನ್ನು ಕೆಣಕದೆ ಶಾಂತ ರೀತಿಯಲ್ಲಿ ಆಡಿದ್ದು. ಗೆಲುವಿನ ಬಳಿಕವೂ ದೊಡ್ಡ ಸಂಭ್ರಮಾಚರಣೆ ಮಾಡಿಲ್ಲ. ಈ ಬಾರಿಯೂ ನಾವು ಎಷ್ಟು ತಾಳ್ಮೆಯಿಂದ ಕ್ರಿಕೆಟ್​ ಆಡುತ್ತೇವೊ ಅಷ್ಟು ಉತ್ತಮ. ಇದು ನಮ್ಮ ಗೆಲುವಿಗೆ ಸಹಾಯ ಮಾಡುತ್ತದೆ. ಹೀಗಾಗಿ ಎಲ್ಲ ಆಟಗಾರರು ಈ ವಿಚಾರವನ್ನು ಗಮನದಲ್ಲಿರಿಸಬೇಕು ಎಂದರು.

ಪಾಕಿಸ್ತಾನ ಟಿ20 ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ತೋರಿದೆ. 2009ರಲ್ಲಿ ಚಾಂಪಿಯನ್ ಆಗಿದ್ದ ತಂಡ, 2007 ಮತ್ತು 2022ರಲ್ಲಿ ರನ್ನರ್ ಅಪ್ ಆಗಿತ್ತು. ಒಟ್ಟು ಎಂಟು ಆವೃತ್ತಿಗಳಲ್ಲಿ ಆರು ಬಾರಿ ಸೆಮಿಫೈನಲ್ ತಲುಪಿದೆ. ಕಳೆದ ಆವೃತ್ತಿಯ ಫೈನಲ್‌ನಲ್ಲಿ ಇಂಗ್ಲೆಂಡ್‌ಗೆ ಮಣಿದಿತ್ತು. ಭಾರತ ವಿರುದ್ಧ ಆಡುವಾಗ ಯಾವಾಗಲು ಕೂಡ ಆಟಗಾರರಲ್ಲಿ ಸಹಜವಾಗಿಯೇ ಒತ್ತಡವಿರುತ್ತದೆ. ಇದನ್ನು ಬದಿಗಿಟ್ಟು ಆಡಿದರೆ ಗೆಲುವು ಖಚಿತ ಎಂದು ಬಾಬರ್​ ಅಭಿಪ್ರಾಯಪಟ್ಟರು.

ಇದನ್ನೂ ಓದಿ IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಗೆ ನ್ಯೂಯಾರ್ಕ್​ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸ್ಟೇಡಿಯಂಗೆ ಈಗಿಂದಲೇ ಭಾರೀ ಭದ್ರತೆ ಏರ್ಪಡಿಸಲಾಗಿದೆ. ನ್ಯೂಯಾರ್ಕ್​ನ(New York stadium) ವಿಶೇಷ ಮಿಲಿಟರಿ ಪಡೆ ಸ್ನೈಪರ್ ಗನ್ ಹಿಡಿದು ಕಣ್ಗಾವಲಿಟ್ಟಿದೆ. ಇದರ ಫೋಟೊಗಳು ವೈರಲ್​ ಆಗಿದೆ.

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಪಾಕಿಸ್ತಾನ ತಂಡ


ಬಾಬರ್ ಅಜಂ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾಹ್ಮಾನ್ ಅಫ್ರಿದಿ, ಉಸ್ಮಾನ್ ಖಾನ್.

Continue Reading

ಕ್ರಿಕೆಟ್

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

IND vs PAK: ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಗೆ ನ್ಯೂಯಾರ್ಕ್​ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಕ್ರಿಕೆಟ್​ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿರುವ, ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್(T20 world cup 2024) ಪಂದ್ಯ​ ಜೂನ್​ 9ರಂದು ನಡೆಯಲಿದೆ. ಈ ಪಂದ್ಯಕ್ಕೆ ಉಗ್ರರ ದಾಳಿಯ ಭೀತಿ(india vs pak terror threat) ಎದುರಾಗಿರುವ ಕಾರಣ ಪಂದ್ಯ ನಡೆಯುವ ಸ್ಟೇಡಿಯಂಗೆ ಈಗಿಂದಲೇ ಭಾರೀ ಭದ್ರತೆ ಏರ್ಪಡಿಸಲಾಗಿದೆ. ನ್ಯೂಯಾರ್ಕ್​ನ(New York stadium) ವಿಶೇಷ ಮಿಲಿಟರಿ ಪಡೆ ಸ್ನೈಪರ್ ಗನ್ ಹಿಡಿದು ಕಣ್ಗಾವಲಿಟ್ಟಿದೆ. ಇದರ ಫೋಟೊಗಳು ವೈರಲ್​ ಆಗಿದೆ.


ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಗೆ ನ್ಯೂಯಾರ್ಕ್​ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇದನ್ನು ಓದಿ IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

ಪಂದ್ಯದ ವೇಳೆ ಡ್ರೋನ್ ದಾಳಿ ನಡೆಸುವ ಸಾಧ್ಯತೆ ಕೂಡ ಕಂಡುಬಂದಿದೆ. ಹೀಗಾಗಿ ಪಂದ್ಯ ನಡೆಯುವ ಕ್ರೀಡಾಂಗಣದ ಸುತ್ತ ‘ನೊ-ಫ್ಲೈ ಝೋನ್’ ಎಂದು ಘೋಷಿಸುವಂತೆ ನ್ಯೂಯಾರ್ಕ್ ಪೊಲೀಸ್ ಯುಎಸ್​ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್‌ಗೆ ವಿನಂತಿಸಿದೆ. ಸದ್ಯ ಭಾರತ ಮತ್ತು ಪಾಕ್​ ತಂಡ ಆಟಗಾರರು ಮಿಲಿಟರಿ ರಕ್ಷಣೆಯಲ್ಲೇ ಓಡಾಡುತ್ತಿದ್ದಾರೆ. ಇದರ ವಿಡಿಯೊ ಕೂಡ ವೈರಲ್​ ಆಗಿದೆ.

“ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾರ್ವಜನಿಕರ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಪಂದ್ಯಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾನೂನು ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇನೆ” ಎಂದು ನ್ಯೂಯಾರ್ಕ್‌ನ ಗವರ್ನರ್‌ ಕ್ಯಾಥಿ ಹೊಚುಲ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರಂಭದಲ್ಲಿ ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್)ನಿಂದ ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಪಂದ್ಯಗಳಿಗೆ ದಾಳಿಯ ಬೆದರಿಕೆಯೊಂದು ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ  ವೆಸ್ಟ್​ ಇಂಡೀಸ್​ ಕ್ರಿಕೆಟ್​ ಮಂಡಳಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿತ್ತು.  ಕೆನ್ಸಿಂಗ್ಟನ್ ಓವಲ್(Kensington Oval Cricket Ground) ಕ್ರಿಕೆಟ್ ಮೈದಾನ, ಬಾರ್ಬಡೋಸ್​ನಲ್ಲಿ(Barbados) ಭದ್ರತಾ ಸಿಬ್ಬಂದಿಗಳು ಅಣುಕು ಪ್ರದರ್ಶನ ಮಾಡುತ್ತಿರುವ ಫೋಟೊ ಕೂಡ ವೈರಲ್​ ಆಗಿತ್ತು.

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಟಿ20 ಮುಖಾಮುಖಿ

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರಿಕೆಟ್

Rahul Dravid: ರೋಹಿತ್​, ಕೊಹ್ಲಿ, ಪಂತ್​ ಸೇರಿ ಎಲ್ಲ ಆಟಗಾರರಿಗೆ ಖಡಕ್​ ಎಚ್ಚರಿಕೆ ನೀಡಿದ ಕೋಚ್​ ದ್ರಾವಿಡ್​

Rahul Dravid: ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಟೀಮ್​ ಇಂಡಿಯಾ ಮೂರು ಪಂದ್ಯಗಳನ್ನು ಆಡಲಿದೆ. ಈ ಮೈದಾನ ಕ್ರಿಕೆಟ್​ ಆಡಲು ಅಷ್ಟಾಗಿ ಸೂಕ್ತವಿಲ್ಲದ ಕಾರಣ ಕೋಚ್​ ದ್ರಾವಿಡ್ ಅವರು​ ತಂಡದ ಆಟಗಾರರು ಬಹಳ ಎಚ್ಚರಿಕೆಯಿಂದ ಆಡಬೇಕಿದೆ ಎಂದು ಸೂಚನೆ ನೀಡಿದ್ದಾರೆ

VISTARANEWS.COM


on

Rahul Dravid
Koo

ನ್ಯೂಯಾರ್ಕ್​: ಪ್ರಸಕ್ತ ಸಾಗುತ್ತಿರುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಜೂನ್​ 5, ಬುಧವಾರ ಐರ್ಲೆಂಡ್​ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನವೇ ತಂಡದ ಪ್ರಧಾನ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರು ವಿರಾಟ್​ ಕೊಹ್ಲಿ(Virat Kohli), ರೋಹಿತ್​ ಶರ್ಮ(Rohit Sharma), ಸೂರ್ಯಕುಮಾರ್​ ಯಾದವ್(Suryakumar)​, ರಿಷಭ್​ ಪಂತ್​ ಸೇರಿ ಎಲ್ಲ ಆಟಗಾರರಿಗೂ ಖಡಕ್​ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಟೀಮ್​ ಇಂಡಿಯಾ ಮೂರು ಪಂದ್ಯಗಳನ್ನು ಆಡಲಿದೆ. ಈ ಮೈದಾನ ಕ್ರಿಕೆಟ್​ ಆಡಲು ಅಷ್ಟಾಗಿ ಸೂಕ್ತವಿಲ್ಲದ ಕಾರಣ ದ್ರಾವಿಡ್​ ತಂಡದ ಆಟಗಾರರು ಬಹಳ ಎಚ್ಚರಿಕೆಯಿಂದ ಆಡಬೇಕಿದೆ ಎಂದು ಸೂಚನೆ ನೀಡಿದ್ದಾರೆ. ಈಗಾಗಲೇ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ನಮ್ಮ ಆಟಗಾರರ ಸಂಪೂರ್ಣ ಪ್ರಾಬಲ್ಯ ಮೆರೆದಿದ್ದಾರೆ. ಪಿಚ್ ಹೇಗೆ ಬದಲಾಗುತ್ತದೆ ಎಂಬುದರ ಬಗ್ಗೆ ನಮಗೆ ಅರಿವು ಮೂಡಿದೆ. ಈ ಮೈದಾನದಲ್ಲಿ ಫೀಲ್ಡಿಂಗ್ ಮಾಡುವಾಗ ಆಟಗಾರರು ತುಂಬಾ ಜಾಗರೂಕರಾಗಿರಬೇಕು ಎಂದು ಆಟಗಾರರಿಗೆ ದ್ರಾವಿಡ್ ಎಚ್ಚರಿಕೆ ನೀಡಿದ್ದಾರೆ.


ಮೈದಾನದ ಬಗ್ಗೆ ಅಸಮಾಧಾನ ಹೊರಹಾಕಿದ ದ್ರಾವಿಡ್, ಕ್ರಿಕೆಟ್​ ಆಡುಲು ಈ ಮೈದಾನ ಅಷ್ಟಾಗಿ ಯೋಗ್ಯವಾಗಿಲ್ಲ. ಇಬ್ಬನಿಯ ಸಮಸ್ಯೆಯಿಂದ ಮೈದಾನ ಜಾರುತ್ತಿದೆ. ಖಂಡಿತಾ ಆಟಗಾರರಿಗೆ ಮಾಂಸಖಂಡ, ಸ್ನಾಯುಸೆಳೆತದ ಸಮಸ್ಯೆ ಎದುರಾಗುವುದು ಖಚಿತ. ಹೀಗಾಗಿ ನಾವು ಆಟಗಾರರ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ ಎಂದಿದ್ದಾರೆ.

ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಈ ನಸ್ಸೌ ಕೌಂಟಿ ಕ್ರೀಡಾಂಗಣವನ್ನು ಕೇವಲ ಮೂರು ತಿಂಗಳಲ್ಲಿ ನಿರ್ಮಾಣ ಮಾಡಲಾಗಿತ್ತು. ಭಾರತ ಮತ್ತು ಪಾಕ್​ ನಡುವಣ ಪಂದ್ಯಕ್ಕಾಗಿಯೇ ಈ ಸ್ಟೇಡಿಯಂ ನಿರ್ಮಾಣ ಮಾಡಿದ್ದಾಗಿ ಹೇಳಲಾಗಿದೆ. 34,000 ಆಸನ ಸಾಮರ್ಥ್ಯವುಳ್ಳ ಈ ಸ್ಟೇಡಿಯಂ ಅನ್ನು ಟಿ20 ವಿಶ್ವಕಪ್​ ಮುಗಿದ ಬಳಿಕ ಕೆಡವಲಾಗುತ್ತದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. 

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಬೇಡಿಕೆ ಕಳೆದುಕೊಂಡ ಭಾರತ-ಪಾಕ್​ ಪಂದ್ಯ?


ಭಾರತ ಮತ್ತು ಪಾಕ್​ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಈ ಬಾರಿ ಪ್ರೇಕ್ಷಕರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ. ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಇನ್ನೂ ಮಾರಾಟವಾಗಿಲ್ಲ. ಈ ಪಂದ್ಯದ ಟಿಕೆಟ್‌ಗಳು ಇನ್ನೂ ಐಸಿಸಿ ವೆಬ್​ಸೈಟ್​ನಲ್ಲಿ ಲಭ್ಯವಿದ್ದು, ಇನ್ನೂ ಕೂಡ ಮಾರಾಟವಾಗದಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು. ಈ ಪಂದ್ಯಕ್ಕಾಗಿ ಐಸಿಸಿ ಮೂರು ಪ್ಯಾಕೇಜ್‌ಗಳಲ್ಲಿ ಟಿಕೆಟ್‌ಗಳನ್ನು ಇರಿಸಿದೆ. ಇದರಲ್ಲಿ ಡೈಮಂಡ್ ಕ್ಲಬ್, ಪ್ರೀಮಿಯಂ ಕ್ಲಬ್ ಲಾಂಜ್​​ ಮತ್ತು ಕಾರ್ನರ್ ಕ್ಲಬ್​​ಗಳನ್ನು ಒಳಗೊಂಡಿವೆ.

ಡೈಮಂಡ್ ಕ್ಲಬ್ ಟಿಕೆಟ್ ಬೆಲೆ 8.34 ಲಕ್ಷ ರೂ. ಈ ಟಿಕೆಟ್​ ಖರೀದಿಸುವ ಅಭಿಮಾನಿಗಳಿಗೆ ಅತ್ಯುತ್ತಮ ಸೌಲಭ್ಯಗಳು ಸಿಗುತ್ತವೆ. ಪ್ರೀಮಿಯಂ ಕ್ಲಬ್ ಲಾಂಜ್​ ಟಿಕೆಟ್ ಬೆಲೆ 2 ಲಕ್ಷ ರೂ, ಮತ್ತು ಕಾರ್ನರ್ ಕ್ಲಬ್ ಟಿಕೆಟ್ ಬೆಲೆ 2.29 ಲಕ್ಷ ರೂ. ಆಗಿದೆ. ಭಾರತ-ಪಾಕಿಸ್ತಾನ ಪಂದ್ಯದ ದೃಷ್ಟಿಯಿಂದ ಐಸಿಸಿ ಟಿಕೆಟ್ ಬೆಲೆಯನ್ನು ಇಷ್ಟು ದುಬಾರಿ ಇರಿಸಿದೆ. ಇದಲ್ಲದೆ ಪಂದ್ಯಕ್ಕೆ ಉಗ್ರರು ಬಾಂಬ್​ ಬೆದರಿಕೆ ಹಾಕಿದ್ದು ಕೂಡ ಅಭಿಮಾನಿಗಳ ಹಿಂದೇಟಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಹೆಚ್ಚಿನ ಟಿಕೆಟ್​ಗಳು ಖರೀದಿಯಾಗದಿದ್ದಲ್ಲಿ ಐಸಿಸಿ ಮತ್ತೆ ಪರಿಷ್ಕೃತ ಟಿಕೆಟ್​ ದರ ಹೊರಡಿಡುವ ಸಾಧ್ಯತೆ ಇದೆ.

Continue Reading

ಕ್ರಿಕೆಟ್

Kedar Jadhav Retirement: ಧೋನಿ ಶೈಲಿಯಲ್ಲೇ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕೇದಾರ್​ ಜಾಧವ್

Kedar Jadhav Retirement: 39 ವರ್ಷದ ಕೇದಾರ್ ಜಾಧವ್ 2014 ಮತ್ತು 2020 ರ ನಡುವೆ ಭಾರತಕ್ಕಾಗಿ 73 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದಾರೆ. ಜಾಧವ್ 2019 ರ ವಿಶ್ವಕಪ್ ಆಡಿದ್ದರು. ಕೇದಾರ್ ಜಾಧವ್ ಭಾರತ ಪರ ಕೊನೆಯ ಕೊನೆಯ ಬಾರಿಗೆ ಆಡಿದ್ದು 2020ರಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ.

VISTARANEWS.COM


on

Kedar Jadhav Retirement
Koo

ಮುಂಬಯಿ: ಟೀಮ್​ ಇಂಡಿಯಾದ ಹಿರಿಯ ಆಟಗಾರ, ಮಾಧ್ಯಮ ಕ್ರಮಾಂಕದ ಬ್ಯಾಟರ್​ ಕೇದಾರ್​ ಜಾಧವ್​(Kedar Jadhav ) ಅವರು ಅಂತಾರಾಷ್ಟ್ರೀಯ ಸೇರಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದಾರೆ. ಸೋಮವಾರ ಅವರು ತಮ್ಮ ನಿವೃತ್ತಿಯನ್ನು(Kedar Jadhav Retirement) ಪ್ರಕಟಿಸಿದರು.

“1500 ಗಂಟೆಗಳಿಂದ ನನ್ನ ವೃತ್ತಿಜೀವನದುದ್ದಕ್ಕೂ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ನನ್ನನ್ನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಎಂದು ಪರಿಗಣಿಸಿ” ಎಂದು ಕೇದಾರ್ ಜಾಧವ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವ ಮೂಲಕ ತಮ್ಮ ನಿವೃತ್ತಿಯನ್ನು ಪ್ರಕಟಿಸಿದರು.

ಜಾಧವ್​ ಅವರು ತಮ್ಮ ನಿವೃತ್ತಿ ಘೋಷಣೆಯನ್ನು ಎಂಎಸ್ ಧೋನಿ(Jadhav takes MS Dhoni’s route) ಅವರಂತೆ ಮಾಡಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ 2019 ರ ವಿಶ್ವಕಪ್‌ನಲ್ಲಿ ಭಾರತಕ್ಕಾಗಿ ತನ್ನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದ ಧೋನಿ, ಒಂದು ವರ್ಷದ ನಂತರ, ಆಗಸ್ಟ್ 15, 2020 ರಂದು ತಮ್ಮ ಇನ್​ಸ್ಟಾಗ್ರಾಮ್​ ಪ್ರೊಫೈಲ್‌ನಲ್ಲಿ ಎರಡು ಸಾಲಿನ ಹೇಳಿಕೆಯೊಂದಿಗೆ ನಿವೃತ್ತಿ ಘೋಷಿಸುವ ಮೂಲಕ ತಮ್ಮ ಅಭಿಮಾನಿಗಳಿಗೆ ಆಘಾತ ನೀಡಿದ್ದರು. “ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು. 1929 ಗಂಟೆಗಳಿಂದ ನನ್ನ ವೃತ್ತಿಜೀವನದುದ್ದಕ್ಕೂ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ” ಎಂದು ಬರೆದುಕೊಳ್ಳುವ ಮೂಲಕ ಧೋನಿ ನಿವೃತ್ತಿ ಪ್ರಕಟಿಸಿದ್ದರು. ಇದೇ ಹಾದಿಯನ್ನು ಜಾಧವ್​ ಕೂಡ ಅನುಸರಿಸಿದ್ದಾರೆ.

ಇದನ್ನೂ ಓದಿ T20 World Cup 2024 : ಉಗ್ರರ ಬೆದರಿಕೆ ನಡುವೆಯೂ ನ್ಯೂಯಾರ್ಕ್​ನಲ್ಲಿ ಭಾರತ ತಂಡದ ಆಟಗಾರರ ಬಿಂದಾಸ್​ ತಿರುಗಾಟ!

39 ವರ್ಷದ ಕೇದಾರ್ ಜಾಧವ್ 2014 ಮತ್ತು 2020 ರ ನಡುವೆ ಭಾರತಕ್ಕಾಗಿ 73 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದಾರೆ. ಜಾಧವ್ 2019 ರ ವಿಶ್ವಕಪ್ ಆಡಿದ್ದರು. ಕೇದಾರ್ ಜಾಧವ್ ಭಾರತ ಪರ ಕೊನೆಯ ಕೊನೆಯ ಬಾರಿಗೆ ಆಡಿದ್ದು 2020ರಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ. ಇದಾದ ಬಳಿಕ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಕೇದಾರ್ ಜಾಧವ್ 73 ಏಕದಿನ ಪಂದ್ಯಗಳಲ್ಲಿ 2 ಶತಕ ಮತ್ತು 6 ಅರ್ಧಶತಕ ಸೇರಿದಂತೆ 1389 ರನ್ ಗಳಿಸಿದ್ದಾರೆ. 9 ಟಿ20 ಪಂದ್ಯಗಳಲ್ಲಿ 122 ರನ್ ಗಳಿಸಿದ್ದಾರೆ.

ಫೆಬ್ರವರಿಯಲ್ಲಿ ಪುಣೆಯಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ವಿದರ್ಭ ವಿರುದ್ಧ ಮಹಾರಾಷ್ಟ್ರದ ಪರವಾಗಿ ಸ್ಪರ್ಧಾತ್ಮಕ ಪಂದ್ಯವನ್ನು ಆಡಿದ್ದರು. ಜಾಧವ್ ಮಹಾರಾಷ್ಟ್ರದ 2023-24 ರ ರಣಜಿ ಟ್ರೋಫಿ ಅಭಿಯಾನದಲ್ಲಿ ಒಂದು ಶತಕ ಮತ್ತು ಅರ್ಧಶತಕ ಸೇರಿದಂತೆ 5 ಪಂದ್ಯಗಳಲ್ಲಿ 379 ರನ್ ಗಳಿಸಿ ಉತ್ತಮ ಫಾರ್ಮ್‌ನಲ್ಲಿದ್ದರು.

ಕೇದಾರ್ ಜಾಧವ್ 93 ಐಪಿಎಲ್ ಪಂದ್ಯಗಳನ್ನು ಆಡಿದ್ದು 1196 ರನ್ ಗಳಿಸಿದ್ದಾರೆ. ಅವರು 2018 ರಲ್ಲಿ ಐಪಿಎಲ್​ ಪ್ರಶಸ್ತಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರು. ಜಾಧವ್ 2010 ರಲ್ಲಿ ಡೆಲ್ಲಿ ಡೇರ್‌ ಡೆವಿಲ್ಸ್ (ಈಗ ದೆಹಲಿ ಕ್ಯಾಪಿಟಲ್ಸ್), 2011 ರಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು 2013 ಮತ್ತು 2015 ರ ನಡುವೆ ಡೆಲ್ಲಿ ಮತ್ತು ಆರ್​ಸಿಬಿ ಪರ ಆಡಿದ್ದಾರೆ.

Continue Reading
Advertisement
IND vs PAK
ಕ್ರಿಕೆಟ್5 mins ago

IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

Bangalore Rain
ಪ್ರಮುಖ ಸುದ್ದಿ13 mins ago

Bangalore Rain: ರಾಜಕಾಲುವೆ ಒತ್ತುವರಿ; ಮುಲಾಜಿಲ್ಲದೆ ತೆರವು ಮಾಡಲು ಡಿಕೆಶಿ ಸೂಚನೆ

Stock Market
ವಾಣಿಜ್ಯ24 mins ago

Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Dharwad Lok Sabha Constituency
ಧಾರವಾಡ32 mins ago

Dharwad Lok Sabha Constituency: ಜೋಶಿ vs ಅಸೂಟಿ; ಯಾವ ಅಭ್ಯರ್ಥಿಗೆ ಧಾರವಾಡ ಪೇಡಾ?

Anant Ambani Radhika Merchant Pre Wedding
ಫ್ಯಾಷನ್45 mins ago

Anant Ambani Radhika Merchant Pre Wedding: ಅಂಬಾನಿ ಫ್ಯಾಮಿಲಿಯ ಕ್ರ್ಯೂಸ್ ಟೂರ್‌ನಲ್ಲಿ ಸ್ಟಾರ್‌ಗಳ ಮಕ್ಕಳ ಲುಕ್‌ ಹೇಗಿದೆ ನೋಡಿ!

Vijaypur Lok Sabha Constituency
ವಿಜಯಪುರ51 mins ago

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

IND vs PAK
ಕ್ರಿಕೆಟ್1 hour ago

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

Lok Sabha Election Result 2024
ದೇಶ1 hour ago

Lok Sabha Election Result 2024: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ಯಾರಿಗೆ ಅಧಿಕಾರ? ನಿಮ್ಮ ಅಭಿಪ್ರಾಯ ತಿಳಿಸಿ

Maldives
ವಿದೇಶ1 hour ago

Maldives: ಇಸ್ರೇಲಿಗರ ಪ್ರವೇಶವನ್ನು ನಿಷೇಧಿಸಿದ ಮಾಲ್ಡೀವ್ಸ್‌; ಭಾರತದ ಬೀಚ್‌ಗೆ ತೆರಳಿ ಎಂದು ತಿರುಗೇಟು ನೀಡಿದ ಇಸ್ರೇಲ್‌

Cow including lineman dies of electric shock
ಉಡುಪಿ2 hours ago

Electric shock : ಪ್ರತ್ಯೇಕ ಕಡೆ‌ ಕರೆಂಟ್‌ ಶಾಕ್‌ಗೆ ಲೈನ್‌ಮ್ಯಾನ್‌ ಸೇರಿ ಹಸು ಬಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌