Love Torture:‌ ಪ್ರೇಮದ ಸುಳಿಯಲ್ಲಿ ಸಿಲುಕಿದ ಬಾಲಕಿ ಆತ್ಮಹತ್ಯೆ; ಪ್ರಿಯಕರ ಅನುಮಾನಿಸಿ, ಅವಮಾನಿಸಿದ್ದೇ ಕಾರಣವಾಯ್ತಾ? - Vistara News

ಕರ್ನಾಟಕ

Love Torture:‌ ಪ್ರೇಮದ ಸುಳಿಯಲ್ಲಿ ಸಿಲುಕಿದ ಬಾಲಕಿ ಆತ್ಮಹತ್ಯೆ; ಪ್ರಿಯಕರ ಅನುಮಾನಿಸಿ, ಅವಮಾನಿಸಿದ್ದೇ ಕಾರಣವಾಯ್ತಾ?

Love Torture:‌ ಕಾಡಿಬೇಡಿ ಪ್ರೀತಿಯ ಬಲೆಯಲ್ಲಿ ಬಾಲಕಿಯನ್ನು ಬೀಳಿಸಿಕೊಂಡವನು ಆಕೆ ಇನ್ನೊಬ್ಬನ ಜತೆ ಹೊರಗೆ ಓಡಾಟ ನಡೆಸಿದ್ದನ್ನು ಅನುಮಾನಿಸಿದ್ದಾನೆ. ಜತಗೆ ಗಲಾಟೆ ಮಾಡಿದ್ದಾನೆ. ವಿಷಯ ತಿಳಿದ ಪೋಷಕರೂ ಬುದ್ಧಿ ಮಾತು ಹೇಳಿದ್ದರಿಂದ ವಿಷ ಸೇವಿಸಿದ್ದವಳು ಮೃತಪಟ್ಟಿದ್ದಾಳೆ.

VISTARANEWS.COM


on

hasana love affair
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಹದಿಹರೆಯದಲ್ಲಿ ಪ್ರೇಮಪಾಶದಲ್ಲಿ ಬಿದ್ದಿದ್ದ ಬಾಲಕಿಯೊಬ್ಬಳು ತನ್ನ ಪ್ರಿಯಕರನ ಅನುಮಾನದ ಕಾಟ (Love Torture) ತಾಳಲಾರದೆ, ಮನೆಯಲ್ಲಿಯೂ ವಿಚಾರ ತಿಳಿದಿದ್ದರಿಂದ ಮನನೊಂದು ವಿಷ ಸೇವಿಸಿದ್ದ ಪ್ರಕರಣದಲ್ಲಿ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾಳೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇಸ್‌ನಲ್ಲಿ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಹದಿಹರೆಯದ ಪ್ರೇಮಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಬಲಿಯಾದಂತೆ ಆಗಿದೆ. ಲೋಕೇಶ್‌ ಬಂಧಿತ ಆರೋಪಿಯಾಗಿದ್ದಾನೆ.

ಈಕೆಯನ್ನು ಪ್ರೀತಿಯ ಬಲೆಯಲ್ಲಿ ಬೀಳಿಸಿಕೊಂಡಿದ್ದ ಲೋಕೇಶ್, ಪ್ರತಿ ದಿನ ಭೇಟಿ ಮಾಡುತ್ತಿದ್ದ. ಹೀಗೇ ಒಂದು ದಿನ ಮತ್ತೊಬ್ಬ ಸ್ನೇಹಿತನೊಂದಿಗೆ ಬಾಲಕಿ ಓಡಾಟ ನಡೆಸಿದ್ದು ಕಂಡು ಲೋಕೇಶ್‌ ಸಿಟ್ಟಾಗಿದ್ದ. ಮಂಗಳವಾರ ತನ್ನ ಪ್ರಿಯತಮೆ ಇನ್ನೊಬ್ಬನೊಂದಿಗೆ ಬೈಕ್‌ನಲ್ಲಿ ಜಾಲಿ ರೈಡ್ ಹೋಗಿದ್ದನ್ನು ಲೋಕೇಶ್‌ ಕಂಡಿದ್ದಾನೆ. ಬೈಕ್‌ನಲ್ಲಿ ಹೋದವನೂ ಸಹ ಅಪ್ರಾಪ್ತ ವಯಸ್ಸಿನ ಬಾಲಕನಾಗಿದ್ದಾನೆ ಎಂಬ ವಿಚಾರ ತಿಳಿದುಬಂದಿದೆ.

ಇದರಿಂದ ಲೋಕೇಶ್ ವಿಪರೀತವಾಗಿ ಕೋಪಗೊಂಡಿದ್ದ. ಹೀಗಾಗಿ ಬಾಲಕಿಯನ್ನು ಅಡ್ಡ ಹಾಕಿ ಈ ಬಗ್ಗೆ ಪ್ರಶ್ನೆ ಮಾಡಿದ್ದ. ಆಕೆ ಏನೇ ಸಮಜಾಯಿಷಿ ಕೊಟ್ಟರೂ ಲೋಕೇಶ್‌ ಮನಸ್ಸು ತಣ್ಣಗಾಗಲಿಲ್ಲ. ವಿಪರೀತವಾಗಿ ಜಗಳ ಮಾಡಿದ್ದ. ಬಾಲಕಿ ಮೇಲೆ ಪದೇ ಪದೆ ಅನುಮಾನಗೊಳ್ಳುತ್ತಿದ್ದ. ಇನ್ನು ಈ ಬಾಲಕಿ ಜಾಲಿ ರೈಡ್‌ ವಿಷಯ ಮನೆಯವರಿಗೂ ಗೊತ್ತಾಗಿದೆ. ಇದೇ ಕಾರಣದಿಂದ ಪೋಷಕರು ಬಾಲಕಿಗೆ ಬುದ್ಧಿ ಮಾತನ್ನೂ ಹೇಳಿದ್ದಾರೆ. ಇದರಿಂದ ಮನನೊಂದ ಬಾಲಕಿಯು ಬುಧವಾರ ವಿಷ ಕುಡಿದಿದ್ದಾಳೆ.

ಇದನ್ನೂ ಓದಿ: BSF Recruitment 2023: ಬಿಎಸ್‌ಎಫ್‌ನ 1410 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ತೀವ್ರ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾಳೆ. ಲೋಕೇಶ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯಳಸೂರು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kabini Dam: ಕಬಿನಿ ಡ್ಯಾಂಗೆ ಬಾಗಿನ ಅರ್ಪಿಸಿದ ಸಿಎಂ; ರಾಜ್ಯದ ಜಲಾಶಯಗಳು ತುಂಬಿದ್ದಕ್ಕೆ ಸಂತಸ

Kabini Dam: ಧನುರ್ ಲಗ್ನದಲ್ಲಿ ಪೂಜೆ ಸಲ್ಲಿಸಿ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಣೆ‌ ಮಾಡಿದರು. ಈ ವೇಳೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಉತ್ತಮ ಮಳೆಯಾಗಿರುವುದರಿಂದ ರಾಜ್ಯ ಸಮೃದ್ಧವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Kabini Dam
Koo

ಮೈಸೂರು: ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿನ ಕಬಿನಿ ಜಲಾಶಯಕ್ಕೆ (Kabini Dam) ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಅವರು ಸೋಮವಾರ ಸಂಜೆ ಬಾಗಿನ ಅರ್ಪಿಸಿದರು. ಧನುರ್ ಲಗ್ನದಲ್ಲಿ ಪೂಜೆ ಸಲ್ಲಿಸಿ, ಸಿಎಂ, ಡಿಸಿಎಂ ಬಾಗಿನ ಅರ್ಪಣೆ ಮಾಡಿದರು. ಈ ವೇಳೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೇರಿ ಹಳೆ ಮೈಸೂರು ಭಾಗದ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಉತ್ತಮ ಮಳೆಯಾಗಿ ರಾಜ್ಯ ಸಮೃದ್ಧಿಯಿಂದ ಕೂಡಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಹೀಗಾಗಿ ಕೆಆರ್‌ಎಸ್, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ಭರ್ತಿಯಾಗಿದೆ. ಇದರಿಂದ ರಾಜ್ಯ ಸಮೃದ್ಧಿಯಿಂದ ಕೂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಮಿಳುನಾಡು ನಮಗೂ ಕಾವೇರಿ ನೀರು ಹಂಚಿಕೆ ಸಮಸ್ಯೆ ಉಂಟಾಗಿದೆ. ಇದರಿಂದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 47 ಟಿಎಂಸಿ ನೀರು ಬಿಡುವಂತೆ ಆದೇಶ ನೀಡಿತ್ತು. ಇದೀಗ ತಮಿಳುನಾಡಿಗೆ 80 ಟಿಎಂಸಿಗೂ ಹೆಚ್ಚು ನೀರು ಬಿಡಲಾಗಿದೆ. ರಾಜ್ಯದಲ್ಲಿ 66 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ರಾಜ್ಯ ಸಮೃದ್ಧಿಯಿಂದ ಕೂಡಿದೆ ಎಂದು
ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ ಎಂದ ಡಿಸಿಎಂ

ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ. ತಮಿಳುನಾಡಿಗೆ ನೀರು ಬಿಡಬೇಕಿತ್ತು. ಜಲಾಶಯ ತುಂಬಿದ್ದರಿಂದ ನೀರನ್ನು ಬಿಡಲಾಗಿದೆ. ನಾನು, ಸಿಎಂ ಇಂದು ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೇವೆ. ಕಪಿಲೆ ಮೈದುಂಬಿ ಹರಿಯುತ್ತಿದ್ದಾಳೆ ಎಂದು ಬಾಗಿನ ಅರ್ಪಣೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ | BJP-JDS Padayatra: ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ; ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಬಾಗಿನ ಅರ್ಪಿಸಿದರು. ಬೆಳಗ್ಗೆ 11 ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಅವರು, ನಂತರ ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದರು.

ಬಾಗಿನ ಅರ್ಪಿಸುವ ವೇಳೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ ಎಂದ ಸಿದ್ದರಾಮಯ್ಯ

ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಜೆಪಿ ಪಾದಯಾತ್ರೆ: ರಾಜಕೀಯವಾಗಿ ವಿರೋಧಿಸುತ್ತೇವೆ

ವಾಲ್ಮೀಕಿ ಮತ್ತು ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಮಾಡಲಿ, ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇಡಿಯವರೂ ತನಿಖೆ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ | BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?

ಉಪಮುಖ್ಯಮಂತ್ರಿಗಳು ಅಯೋಗ್ಯ ಅಧಿಕಾರಿಗಳು ಹೀಗೆ ಮಾಡಿದ್ದಾರೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ ಎಂದರು. ಕೆಲವು ತನಿಖೆಗಳು ನಡೆಯುತ್ತಿವೆ. ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ. ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. 7-8 ಹಗರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ ಎಂದರು. ಈ ಕುರಿತ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದರು.


Continue Reading

ಬೆಂಗಳೂರು ಗ್ರಾಮಾಂತರ

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

Elephant attack: ಮೂವರನ್ನು ಬಲಿ ಪಡೆದಿದ್ದ ಮಕ್ನಾ ಆನೆಯೂ (Elephant combing) ಕೂನೆಗೂ ಸೆರೆಯಾಗಿದೆ. ಭೀಮ, ಮಹೇಂದ್ರರ ಆರ್ಭಟಕ್ಕೆ ಮಕ್ನಾ ಆನೆ ಮಂಡಿಯೂರಿದೆ. ಇತ್ತ ಕೊಡಗಿನಲ್ಲಿ ಮಕ್ನಾ ಆನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ.

VISTARANEWS.COM


on

By

Elephant combing Makna elephant captured near Bannerghatta
Koo

ಬೆಂಗಳೂರು ಗ್ರಾಮಾಂತರ: ಕೊನೆಗೂ ಪುಂಡ ಮಕ್ನಾ ಆನೆ (Elephant attack) ಸೆರೆಯಾಗಿದೆ. ಮಕ್ನಾ ಅಡ್ಡೆಗೆ ನುಗ್ಗಿದ ಭೀಮ, ಮಹೇಂದ್ರ ತಟ್ಟಗುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ (Elephant combing) ಸೆರೆಹಿಡಿದಿದ್ದಾರೆ.

ಡ್ರೋನ್ ಮೂಲಕ ಮಕ್ನಾ ಲೋಕೇಷನ್ ಟ್ರಾಕ್ ಮಾಡಿ ಬಳಿಕ ಮಾವುತರು, ಕಾವಾಡಿಗಳು ಸುತ್ತುವರಿದರು. ಮಾವುತರು ಮತ್ತು ಕಾವಾಡಿಗಳ ಮಾಹಿತಿ ಆಧರಿಸಿ ವೈದ್ಯರ ತಂಡ ಅಖಾಡಕ್ಕೆ ಇಳಿದರು. ತಗ್ಗು ಪ್ರದೇಶದಲ್ಲಿದ್ದ ಮಕ್ನಾ ಚಲನವಲನ ಆಧರಿಸಿ ಶಾರ್ಟ್ ಶೂಟರ್ ರಂಜನ್ ಶೂಟ್‌ ಮಾಡಿದ್ದಾರೆ.

Elephant combing Makna elephant captured near Bannerghatta
Elephant combing Makna elephant captured near Bannerghatta

ಸಮೀಪದ ದಿಬ್ಬದ ಮೇಲೆ ನಿಂತು ಡಾಟ್ ಆಗುತ್ತಿದ್ದಂತೆ ಆಕ್ರೋಶಗೊಂಡ ಮಕ್ನಾ ಆನೆ ಸುಮಾರು ಒಂದು ಕಿ.ಮೀ ದೂರ ಸಾಗಿ ನಿತ್ರಾಣಗೊಂಡಿದೆ. ನಿತ್ರಾಣಗೊಂಡಿರುವುದನ್ನು ವೈದ್ಯರು ಖಚಿತ ಪಡಿಸುತ್ತಿದ್ದಂತೆ ಭೀಮ ಮತ್ತು ‌ಮಹೇಂದ್ರ ಸಾಕಾನೆ ಫೀಲ್ಡಿಗಿಳಿದಿದೆ.

ಭೀಮ ಹಾಗೂ ಮಹೇಂದ್ರ ಎದುರಿಗೆ ಬಾಲ ಬಿಚ್ಚದ ಮಕ್ನಾ ಆನೆಯನ್ನು ದಪ್ಪದಾಗಿರುವ ಹಗ್ಗದಿಂದ ಕಟ್ಟಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸೀಗೆ ಕಟ್ಟೆಯ ಆನೆ ಬಿಡಾರಕ್ಕೆ ರವಾನಿಸಿದ್ದಾರೆ.

ಸೆರೆಗೂ ಮುನ್ನ ಪುಂಡ ಮಕ್ನಾ ಕಾಡಾನೆಯ ಆರ್ಭಟ ಜೋರಾಗಿತ್ತು. ಈ ಹಿಂದೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಹಾವಳಿ ಎಬ್ಬಿಸಿದ್ದ ಮಕ್ನಾ ಆನೆ, ಅರಣ್ಯ ಸಿಬ್ಬಂದಿಯ ವಾಹನದ ಮೇಲೆ ಅಟ್ಯಾಕ್ ಮಾಡಿತ್ತು. ವಾಹನವನ್ನು ಹಿಂಬಾಲಿಸಿ ಅಟ್ಟಾಡಿಸಿತ್ತು. ಬನ್ನೇರುಘಟ್ಟ ಕಾಡಂಚಿನ ಭಾಗದಲ್ಲಿ ದಾಂಧಲೆ ಎಬ್ಬಿಸಿತ್ತು. ಮೂರು ಮಂದಿಯನ್ನು ತುಳಿದು ಕೊಂದು ಹಾಕಿತ್ತು.

ಇದನ್ನೂ ಓದಿ:Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಕಾಫಿ ತೋಟದಲ್ಲಿ ಮಕ್ನಾ ಕಾಡಾನೆ ಸಾವು

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಬಾಡಗ ಬಾಣಂಗಾಲದ ಹುಂಡಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಮಕ್ನಾ ಆನೆ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನೂ ಆಹಾರ ಅರಸಿ‌‌ ಕಾಡಿನಿಂದ ನಾಡಿಗೆ ಕಾಡಾನೆ ಹಿಂಡು ಲಗ್ಗೆ ಇಟ್ಟಿವೆ. ಹುಂಡಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿದ್ದು, ಹಗಲು ಹೊತ್ತಿನಲ್ಲೂ ಕಾಣಿಸಿಕೊಳ್ಳುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

KRS Dam: ಸಂಪ್ರದಾಯಕ್ಕೆ ಎಳ್ಳು ನೀರು; ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ!

KRS Dam: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಬೆಳಗ್ಗೆ ಬಾಗಿನ ಸಲ್ಲಿಸಿ, ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದರು. ಇದಾದ ಬಳಿಕ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿರುವುದು ಕಂಡುಬಂದಿದೆ.

VISTARANEWS.COM


on

KRS Dam
Koo

ಮಂಡ್ಯ: ಸಿಎಂ, ಡಿಸಿಎಂ ಭಾಗವಹಿಸಿದ್ದ ಕೆಆರ್‌ಎಸ್‌ಗೆ (KRS Dam) ಬಾಗಿನ ಸಲ್ಲಿಸುವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಕಾರ್ಯಕ್ರಮದ ಬಳಿಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದು, ಈ ಮೂಲಕ ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಸಂಪ್ರದಾಯ ಮುರಿದು ಬಾಗಿನ ದಿವಸ ಬಾಡೂಟ ಆಯೋಜನೆ ಮಾಡಲಾಗಿದೆ. ಸಿಎಂ, ಸಚಿವರು ಹೊರಟ ಬಳಿಕ ಇಲಾಖೆ ಅಧಿಕಾರಿಗಳು ಭರ್ಜರಿ ಬಾಡೂಟ ಸೇವಿಸಿದ್ದಾರೆ. ಕೆಆರ್‌ಎಸ್‌ನ ಖಾಸಗಿ ಹೋಟೆಲ್‌ನಲ್ಲಿ ಬಾಡೂಟ ಆಯೋಜನೆ ಮಾಡಲಾಗಿತ್ತು.

ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿವಸ ಬಾಡೂಟ ಆಯೋಜಿಸಿದ್ದ ಉದಾಹರಣೆ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಮೂಲಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಂಪ್ರದಾಯ ಮುರಿದಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಬಾಗಿನ ಅರ್ಪಿಸಿದರು. ಬೆಳಗ್ಗೆ 11 ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಅವರು, ನಂತರ ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದರು.

ಬಾಗಿನ ಅರ್ಪಿಸುವ ವೇಳೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಮೈಸೂರು: ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶದಿಂದ 20 ಸಾವಿರ ಜನ ಬೆಂಗಳೂರಿಗೆ ವಲಸೆ ಬಂದಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ತಿಳಿದಿಲ್ಲ. ವಿಚಾರ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಪಾದಯಾತ್ರೆ: ರಾಜಕೀಯವಾಗಿ ವಿರೋಧಿಸುತ್ತೇವೆ

ವಾಲ್ಮೀಕಿ ಮತ್ತು ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಮಾಡಲಿ, ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇಡಿಯವರೂ ತನಿಖೆ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?

ಉಪಮುಖ್ಯಮಂತ್ರಿಗಳು ಅಯೋಗ್ಯ ಅಧಿಕಾರಿಗಳು ಹೀಗೆ ಮಾಡಿದ್ದಾರೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ ಎಂದರು. ಕೆಲವು ತನಿಖೆಗಳು ನಡೆಯುತ್ತಿವೆ. ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ. ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. 7-8 ಹಗರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ ಎಂದರು. ಈ ಕುರಿತ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದರು.

ಇದನ್ನೂ ಓದಿ | CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ

ಮುಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು. ಕೋವಿಡ್ 19 ಸಂದರ್ಭದಲ್ಲಿ 3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ. ನ್ಯಾಯಾಂಗ ತನಿಖೆ ಅಥವಾ ಸಿಬಿಐಗೆ ವಹಿಸಲು ಕೊಡಿ ಎಂಡು ಒತ್ತಾಯಿಸಿದೆ. ಆದರೆ ಅವರು ಕೊಡಲಿಲ್ಲ ಎಂದರು. ಯಾವುದೇ ತಪ್ಪಿಲ್ಲದಿದ್ದರೂ ಕೂಡ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು. ಒಬ್ಬ ಸಚಿವರು, ಮುಖ್ಯಮಂತ್ರಿಯಾಗಿದ್ದವರು ಹೇಗೆ ಮಾತನಾಡಿದರೆ ಹೇಗೆ? ನಮಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ ಎಂದರು.

Continue Reading

ಕರ್ನಾಟಕ

‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

‌Actor Darshan: ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಇದರಿಂದ ಸದ್ಯಕ್ಕೆ ನಟ ದರ್ಶನ್‌ಗೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ.

VISTARANEWS.COM


on

‌Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಸದ್ಯಕ್ಕೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ. ಯಾಕೆಂದರೆ, ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (‌Actor Darshan) ಪರ ವಕೀಲರು ವಾಪಸ್‌ ಪಡೆದಿದ್ದಾರೆ.

ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಈ ಹಿಂದೆ ಮನೆಯೂಟ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಮ್ಯಾಜಿಸ್ಟ್ರೇಟ್ ಕೋರ್ಟ್‌ನಿಂದ ಅನುಮತಿ ಪಡೆಯಲು ಹೈಕೋರ್ಟ್‌ ಸೂಚಿಸಿತ್ತು. ಹೀಗಾಗಿ ಜುಲೈ 25ರಂದು ವಿಚಾರಣೆ ನಡೆಸಿದ್ದ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ, ಇದೀಗ ತಾಂತ್ರಿಕ ಕಾರಣದಿಂದ ನಟ ದರ್ಶನ್‌ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳ ಆಧಾರದ ಮೇಲೆ ಇತ್ತೀಚೆಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿ ವಜಾಮಾಡಿತ್ತು.

BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂದರ್ಭದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು. ಆದರೆ, ಮನೆಯೂಟಕ್ಕೆ ಕೋರ್ಟ್‌ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ದರ್ಶನ್‌ ಪರ ವಕೀಲರು ಮುಂದಾಗಿದ್ದಾರೆ.

ದರ್ಶನ್‌ಗಾಗಿ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

Actor Darshan Jail And Gave vijayalakshmi Prasada To Husband
Actor Darshan Jail And Gave vijayalakshmi Prasada To Husband

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದು ಗೊತ್ತೇ ಇದೆ. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮಿ.

ದರ್ಶನ್ ಅವರು ಹೊರಗೆ ಬರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕೇಸ್ ತುಂಬಾನೇ ಗಂಭೀರ ಆಗಿದೆ. ಎಲ್ಲರ ಕಣ್ಣು ಈ ಕೇಸ್​ಮೇಲೆ ಇದೆ. ಅಲ್ಲದೆ, ಇನ್ನು ಈ ಕೇಸ್​ನಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿಲ್ಲ. ಈ ಎಲ್ಲಾ ಕಾರಣದಿಂದ ಅವರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಪೊಲೀಸರು ಕೋರ್ಟ್​ ಎದುರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ.

Continue Reading
Advertisement
Manu Bhaker
ಪ್ರಮುಖ ಸುದ್ದಿ2 mins ago

Paris Olympics 2024 : ಮನು ಭಾಕರ್ ಸೇರಿದಂತೆ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರ ಎಕ್ಸ್​ ಖಾತೆಯಲ್ಲಿ ಐಫೆಲ್​ ಟವರ್ ಚಿತ್ರ

Viral Video
Latest6 mins ago

Viral Video: ಕಚೇರಿಯ ಟೇಬಲ್‌ನೊಳಗೆ ಅಡಗಿದ್ದ ಬೃಹತ್‌ ಹಾವನ್ನು ಹಿಡಿದ ಮಹಿಳಾ ಸಿಬ್ಬಂದಿ! ವಿಡಿಯೊ ನೋಡಿ

Kabini Dam
ಕರ್ನಾಟಕ9 mins ago

Kabini Dam: ಕಬಿನಿ ಡ್ಯಾಂಗೆ ಬಾಗಿನ ಅರ್ಪಿಸಿದ ಸಿಎಂ; ರಾಜ್ಯದ ಜಲಾಶಯಗಳು ತುಂಬಿದ್ದಕ್ಕೆ ಸಂತಸ

Paris Olympics 2024
ಪ್ರಮುಖ ಸುದ್ದಿ48 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ ಹೋದ ಇಸ್ರೇಲ್ ಅಥ್ಲೀಟ್​ಗಳಿಗೆ ಜೀವ ಬೆದರಿಕೆ!

Viral News
ದೇಶ56 mins ago

Viral News: ಕಾಲಿಗೆ ಕಬ್ಬಿಣದ ಸರಪಳಿ.. ಕೈಯಲ್ಲಿ ಅಮೆರಿಕ ಪಾಸ್‌ಪೋರ್ಟ್‌..ದಟ್ಟ ಕಾಡಿನಲ್ಲಿ ಮಹಿಳೆ ಪತ್ತೆ-ವಿಡಿಯೋ ವೈರಲ್‌

Kannada New Movie Audio rights of Niveditha Shivarajkumar produced movie sold for huge amount
ಸ್ಯಾಂಡಲ್ ವುಡ್59 mins ago

Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 hour ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

KRS Dam
ಪ್ರಮುಖ ಸುದ್ದಿ1 hour ago

KRS Dam: ಸಂಪ್ರದಾಯಕ್ಕೆ ಎಳ್ಳು ನೀರು; ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ!

Rajya Sabha
ರಾಜಕೀಯ1 hour ago

Rajya Sabha: ಸತ್ನಾಮ್‌ ಸಿಂಗ್‌ ಸಂಧು ಬಿಜೆಪಿ ಸೇರ್ಪಡೆ; ರಾಜ್ಯಸಭೆಯಲ್ಲಿ ಕೇಸರಿ ಪಕ್ಷದ ಬಲ 87ಕ್ಕೆ ಏರಿಕೆ

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಕ್ರಿಕೆಟ್ ಕೆಲಸದಿಂದ ನಿರಾಳ; ಒಲಿಂಪಿಕ್ಸ್​​ವೀಕ್ಷಿಸಲು ತೆರಳಿದ ರಾಹುಲ್ ದ್ರಾವಿಡ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 hour ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ24 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಟ್ರೆಂಡಿಂಗ್‌