Kantara Movie : ಸಮಸ್ಯೆ ಹೇಳಿಕೊಂಡು ಬಂದ ವಿವಾಹಿತೆಯನ್ನು ತಾನೇ ವರಿಸುವುದಾಗಿ ಹೇಳಿದ ದೈವ ಪಾತ್ರಿ! - Vistara News

ಉಡುಪಿ

Kantara Movie : ಸಮಸ್ಯೆ ಹೇಳಿಕೊಂಡು ಬಂದ ವಿವಾಹಿತೆಯನ್ನು ತಾನೇ ವರಿಸುವುದಾಗಿ ಹೇಳಿದ ದೈವ ಪಾತ್ರಿ!

ಸಮಸ್ಯೆ ಹೇಳಿಕೊಂಡು ಬಂದ ವಿವಾಹಿತ ಮಹಿಳೆಯನ್ನು ದೈವ ಪಾತ್ರಿಯೊಬ್ಬ ತಾನೇ ಮದುವೆಯಾಗುವುದಾಗಿ ಘೋಷಿಸಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ. ಮಾತನಾಡಿದ್ದು ದೈವವೋ, ಪಾತ್ರಿಯೋ (Kantara Movie) ಎನ್ನುವ ಪ್ರಶ್ನೆ ಎದ್ದು ನಿಂತಿದೆ.

VISTARANEWS.COM


on

kantara patri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಕಾಂತಾರ ಸಿನಿಮಾದ (Kantara Movie) ಬಳಿಕ ಭೂತದ ಕೋಲ, ನೇಮಗಳ ಬಗ್ಗೆ ಜನರ ಕುತೂಹಲ ಹೆಚ್ಚಾಗಿದೆ. ದೈವಗಳ ಮುಂದೆ ತಮ್ಮ ಸಮಸ್ಯೆ ಹೇಳಿಕೊಂಡು ಬರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ನಡುವೆ ಕೆಲವು ಕಡೆ ಅಪಸವ್ಯಗಳು ಕೂಡಾ ನಡೆಯುತ್ತಿರುವುದು ಬೆಳಕಿಗೆ ಬರುತ್ತಿದೆ.

ಕಾಂತಾರ ಸಿನಿಮಾದ ಅತ್ಯಂತ ಮುಖ್ಯವಾದ ದೃಶ್ಯವೊಂದರಲ್ಲಿ ಭೂಮಾಲೀಕನ ಮಗ ಕೇಳುತ್ತಾನೆ: ಇದು ದೈವ ಮಾತನಾಡುವುದೋ, ದೈವ ನರ್ತಕ ಮಾತನಾಡುವುದೋ ಅಂತ. ಆಗ ದೈವ ನರ್ತಕ, ʻʻಮಾತನಾಡಿದ್ದು ದೈವ ನರ್ತಕನಾಗಿದ್ದರೆ ಮರಳಿ ಬರುತ್ತೇನೆ, ದೈವವೇ ಆಗಿದ್ದರೆ ಮರಳಿ ಬರುವುದಿಲ್ಲʼ ಎಂದು ಹೇಳಿ ಕಾಡಿನತ್ತ ಓಡಿ ಕಣ್ಮರೆಯಾಗುತ್ತಾನೆ. ಅಂಕೋಲಾದಲ್ಲಿ ನಡೆದ ಒಂದು ಘಟನೆಯಲ್ಲಿ ಈಗ ನಿಜಕ್ಕೂ ಮಾತನಾಡಿದ್ದು ದೈವವೋ, ದೈವದ ಪಾತ್ರಿಯೋ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ.

ಹಾಗಿದ್ದರೆ ಆಗಿದ್ದೇನು?
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಅಂಬಾರಕೊಡ್ಲು ಗ್ರಾಮದಲ್ಲಿ ಕಾಲಭೈರವ ದೇವಸ್ಥಾನದಲ್ಲಿ ನಡೆದ ದೈವಾರಾಧನೆಯ ಸಂದರ್ಭದಲ್ಲಿ ದೈವ ನರ್ತಕ ನೀಡಿದ ಅಭಯ ಸಂಶಯಕ್ಕೆ ಕಾರಣವಾಗಿದೆ.

ಕಾಲಭೈರವ ದೇವರ ದರ್ಶನ ಮಾಡಿ ತನ್ನ ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಬೆಳಗಾವಿಯಿಂದ ಮಹಿಳೆಯೊಬ್ಬರು ಬಂದಿದ್ದರು. ಆಕೆಗೆ ಮದುವೆಯಾಗಿ ಗಂಡ ಬಿಟ್ಟು ಹೋಗಿದ್ದು ಸಾಕಷ್ಟು ಸಮಸ್ಯೆಯಾಗಿತ್ತು. ಇಲ್ಲಿ ದೈವ ದರ್ಶನ ಕಾರ್ಯಕ್ರಮಕ್ಕೆ ಬಂದ ಆತ ಆ ಮಹಿಳೆಯ ಸಮಸ್ಯೆಯನ್ನು ಕೇಳಿಸಿಕೊಂಡಿದ್ದಾನೆ.

ಆಕೆಯ ಬಾಯಿಯಿಂದ ಸಮಸ್ಯೆ ಕೇಳಿಸಿಕೊಂಡ ದೈವ- ಪಾತ್ರಿ ಸಮಸ್ಯೆಗೆ ಪರಿಹಾರವಾಗಿ ತಾನೇ ಆಕೆಯನ್ನು ಮದುವೆಯಾಗುವುದಾಗಿ ಘೋಷಣೆ ಮಾಡಿಬಿಟ್ಟ. ಇದು ಆಲ್ಲಿದ್ದವರನ್ನು ಅಚ್ಚರಿಗೆ ಕೆಡವಿತು.

ʻʻಈ ಬಾಲಕಿಯನ್ನು ಈ ಬಾಲಕ ಮದುವೆಯಾಗುತ್ತಾನೆ. ಈವತ್ತಿನಿಂದ ಈ ಬಾಲಕಿ ನನ್ನ ಅರ್ಧಾಂಗಿ, ಅರ್ಧನಾರೀಶ್ವರಿಯಾಗಿ ನನ್ನ ಹೃದಯದಲ್ಲಿ ನೆಲೆಸುತ್ತಾಳೆ. ಮಂಜುನಾಥೇಶ್ವರನ ಮೂರು ಕ್ಷೇತ್ರಗಳ ಪೈಕಿ ಒಂದರಲ್ಲಿ ಈಕೆಯ ಕುತ್ತಿಗೆಗೆ ತಾಳಿ ಬೀಳುತ್ತದೆ. ಇದು ಸತ್ಯ ಸತ್ಯ ಸತ್ಯʼʼ ಎಂದು ಕಾಂತಾರ ಚಿತ್ರದ ಸ್ಟೈಲ್‌ನಲ್ಲಿ ದೈವ ಪಾತ್ರಿ ನುಡಿದಿದ್ದ. ಇದು ಜನರಿಗೆ ಸಂಶಯ ಮೂಡಿಸಿತು.

ಇಲ್ಲಿನ ಸಾರ್ವಜನಿಕರು ಹೇಳುವ ಪ್ರಕಾರ, ಮಹಿಳೆಯನ್ನು ಗಂಡ ಬಿಟ್ಟು ಹೋಗಿರುವ ಮಾಹಿತಿ ದೈವ ಪಾತ್ರಿಗೆ ಮೊದಲೇ ತಿಳಿದಿತ್ತು. ದೈವ ಪಾತ್ರಿಗೂ ಮದುವೆಯಾಗಿ ಹೆಂಡತಿ ಬಿಟ್ಟು ಹೋಗಿದ್ದಾಳೆ. ಹೀಗಾಗಿ ವಿವಾಹಿತ ಮಹಿಳೆಯನ್ನು ವರಿಸಲು ಆತ ದೈವದ ಹೆಸರು ಬಳಸಿಕೊಂಡನೇ ಎಂಬ ಸಂಶಯ ವ್ಯಕ್ತವಾಗಿದೆ.

ದೈವ ಪಾತ್ರಿ ಹೇಳಿಕೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ : Kantara Movie: ಹಿಂದಿಯಲ್ಲಿ ನೂರು ದಿನಗಳನ್ನು ಪೂರೈಸಿದ ʻಕಾಂತಾರʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Temperature Warning: ಈ ವರ್ಷ ಬೆಂಗಳೂರು ತನ್ನೆಲ್ಲ ಹಳೆಯ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ದುಪ್ಪಟ್ಟು ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ನಡುವೆ 15 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ (Heat Wave alert) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು ದೂರ ಸರಿದಿದ್ದು, ಒಣಹವೆ (Karnataka Weather forecast) ಆವರಿಸಿದೆ. ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದೆ. ಮಾರ್ಚ್‌ನಲ್ಲಿ ಹಳೆಯ ಎಲ್ಲ ದಾಖಲೆ ಮುರಿದಿದ್ದ ಬೆಂಗಳೂರಲ್ಲಿ ಇದೀಗ ಏಪ್ರಿಲ್‌ 28ರಂದು ಗರಿಷ್ಠ ಉಷ್ಣಾಂಶವು 39 ಡಿ.ಸೆಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ (Bengaluru weather) ಮಾಹಿತಿ ನೀಡಿದೆ. ತಾಪಮಾನ (Bengaluru temperature) ಏರಿಕೆಯಿಂದ ಜನರು ಪರಿತಪಿಸುವಂತಾಗಿದೆ

ಕೂಲ್‌ ಸಿಟಿ (Cool city Bengaluru) ಎಂದು ಕರೆಸಿಕೊಳ್ಳುವ ಬೆಂಗಳೂರು ಹಾಟ್‌ ಸಿಟಿಯಾಗಿ (Bengaluru temperature) ಬದಲಾಗುತ್ತಿದೆ. ಬೆಂಗಳೂರಿನಲ್ಲೀಗ ದಾಖಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ (Temperature Warning) ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲನಾಡು ಎಂದು ಕರೆಸಿಕೊಳ್ಳುವ ಉತ್ತರ ಒಳನಾಡಿನ ಜಿಲ್ಲೆಗಳಿಗೂ ರಾಜಧಾನಿ ಬೆಂಗಳೂರು ಅಕ್ಷರಶಃ ಸೆಡ್ಡು ಹೊಡೆಯುತ್ತಿದೆ.

ಮಾರ್ಚ್‌ ಬಳಿಕ ಏಪ್ರಿಲ್‌ ಮೊದಲ ವಾರದಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಮಟ್ಟದಲ್ಲಿ ಗರಿಷ್ಠ ತಾಪಮಾನವು (Bengaluru heatwave) ದಾಖಲಾಗಿತ್ತು. ಇದೀಗ ಏಪ್ರಿಲ್‌ ಅಂತ್ಯದಲ್ಲೂ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ. ಇದರಿಂದಾಗಿ ಬಿಸಿಲ ಬೇಗೆಗೆ ತೇವಾಂಶದ ಕೊರತೆಯಿಂದಾಗಿ ಒಣ ಹವೆ (Bengaluru heat) ಮುಂದುವರಿದಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಹೀಟ್‌ ವೇವ್‌ ಶಾಕ್‌

ರಾಜ್ಯದಲ್ಲಿ ಏ.28ರಂದು ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಹೆಚ್ಚಾಗಲಿದೆ. ಹೀಗಾಗಿ ಈ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚಿಸಲಾಗಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೂ ಶುಕ್ರವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.2 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಒಳನಾಡಿನಲ್ಲಿ ವಿಪರೀತ ಬಿಸಿಲು; ಕರಾವಳಿಯಲ್ಲಿ ಬಿಸಿಗಾಳಿ, ಮಲೆನಾಡಿನಲ್ಲಿ ಗುಡುಗು ಮಳೆ

Karnataka Weather Forecast : ಉತ್ತರ ಕರ್ನಾಟಕದಲ್ಲಿ ತಾಪಮಾನ ಏರಿಕೆಯಿಂದ ಜನರು ತತ್ತರಿಸಿ ಹೋಗಲಿದ್ದಾರೆ. ಕರಾವಳಿಯಲ್ಲಿ ಬಿಸಿಗಾಳಿಯು (Hot weather) ಬೀಸಲಿದ್ದು, ದಕ್ಷಿಣ ಒಳನಾಡಲ್ಲಿ ಶುಷ್ಕ ವಾತಾವರಣ (Dry Weather) ಇರಲಿದೆ. ಮಲೆನಾಡಿನ ಕೆಲವಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾರಾಂತ್ಯದಲ್ಲಿ ರಾಜ್ಯಾದ್ಯಂತ ಹಗುರದಿಂದ ಕೂಡಿದ ಮಳೆಯಾಗುವ (Rain news) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದರೆ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಭಾಗಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ತಿಂಗಳಾಂತ್ಯದವರೆಗೂ ತಾಪಮಾನ ಹೆಚ್ಚಳ

ಗರಿಷ್ಠ ತಾಪಮಾನವು ಏಪ್ರಿಲ್‌ 30ರವರೆಗೆ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನ 12ರಿಂದ 3ಗಂಟೆವರೆಗೆ ಹೊರಾಂಗಣ ಚಟುವಟಿಕೆಗಳಿಂದ ದೂರ ಇರುವಂತೆ ತಜ್ಞರು ಸೂಚಿಸಿದ್ದಾರೆ. ಇನ್ನೂ ಕರಾವಳಿ ಕರ್ನಾಟಕದಲ್ಲಿ ವಾತಾವರಣವು ಬಿಸಿಯಾಗಿರಲಿದೆ. ಕೆಲವೊಮ್ಮೆ ಬಿಸಿ ಗಾಳಿಯೂ ಬೀಸಲಿದೆ.

ಯೆಲ್ಲೋ ಅಲರ್ಟ್‌

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಏರಿಕೆ ಆಗಲಿದೆ. ಹೀಗಾಗಿ ಈ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

ಸೆಕೆಗಾಲದಲ್ಲಿ ಟ್ರೆಂಡಿಯಾದ 3 ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್ಸ್!

ಈ ಬಾರಿಯ ಸಮ್ಮರ್‌ ಸೀಸನ್‌ನಲ್ಲಿ ಸೆಕೆಯಾಗದ 3 ಬಗೆಯ ಸಮ್ಮರ್‌ ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್‌ಗಳು (Summer Hairstyles) ಟ್ರೆಂಡಿಯಾಗಿವೆ. ತಕ್ಷಣಕ್ಕೆ ನೋಡಲು ಹಳೆಯ ಹೇರ್‌ಸ್ಟೈಲ್‌ ಎಂದೆನಿಸಿದರೂ ಅವುಗಳ ಜೊತೆಗೆ ನಾನಾ ಬಗೆಯ ವಿನ್ಯಾಸಗಳು ಸೇರಿಕೊಂಡಿವೆ.

Summer Hairstyles

ಸೈಡಿಗೆ ಸರಿದ ಫ್ರೀ ಹೇರ್‌ಸ್ಟೈಲ್‌ಗಳು

“ಈ ಸಮ್ಮರ್‌ನಲ್ಲಿ ಫ್ರೀ ಹೇರ್‌ಸ್ಟೈಲ್‌ಗಳು ಸೈಡಿಗೆ ಸರಿದಿವೆ. ಕೇವಲ ಹೇರ್‌ ಕಂಡೀಷನ್‌ ಕೋಣೆಗಳಲ್ಲಿ ಹಾಗೂ ಇನ್‌ಡೋರ್‌ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮಾತ್ರ ಈ ಹೇರ್‌ ಸ್ಟೈಲ್‌ಗಳಲ್ಲಿ ಹೆಣ್ಣುಮಕ್ಕಳು ಕಾಣಸಿಗುತ್ತಿದ್ದಾರೆ. ಇನ್ನು ಹೊರಾಂಗಣದಲ್ಲಿ ಸೆಕೆಯಾಗದ ಹಾಗೂ ಆರಾಮ ಎಂದೆನಿಸುವ ಕಂಫರ್ಟಬಲ್‌ ಕೂದಲ ವಿನ್ಯಾಸಗಳು ಚಾಲ್ತಿಯಲ್ಲಿವೆ. ಇದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ! ಟೀನೇಜ್‌ ಹಾಗೂ ಯುವತಿಯರಲ್ಲೂ ಕಾಮನ್‌ ಆಗಿವೆ” ಎನ್ನುತ್ತಾರೆ ಹೇರ್‌ಸ್ಟೈಲಿಸ್ಟ್‌ ನಮಿತಾ. ಅವರ ಪ್ರಕಾರ, ಶಾರ್ಟ್‌ ಹೇರ್‌ಸ್ಟೈಲ್‌ಗಳು ಈ ಸೀಸನ್‌ನಲ್ಲಿ ತೀರಾ ಕಾಮನ್‌ ಆಗಿವೆ ಎನ್ನುತ್ತಾರೆ.

ಹೈ ಬನ್‌ ಹೇರ್‌ಸ್ಟೈಲ್‌

ನೆತ್ತಿಯ ಮೇಲೆ ಹಾಕುವಂತಹ ಹೈ ಬನ್‌ ಹೇರ್‌ಸ್ಟೈಲ್‌ಗಳು ಇದೀಗ ಬಿಸಿಲಿನ ಝಳದಲ್ಲಿ ಹೈಲೈಟ್‌ ಆಗುತ್ತಿವೆ. ಕೆಳಗಿನಿಂದ ಮೇಲಿನವರೆಗೂ ಕೂದಲನ್ನು ಕಟ್ಟಿ ಹಾಕುವಂತಹ ವಿನ್ಯಾಸದಲ್ಲಿ ಹಾಗೂ ನೆತ್ತಿಯ ಮೇಲೆ ಸುತ್ತಿ ಅಥವಾ ಹರಡಿದಂತೆ ಕಾಣುವ ರೀತಿಯಲ್ಲಿ ಹಾಕುವ ಹೇರ್‌ಬನ್‌ಗಳು ಈ ಸೀಸನ್‌ನಲ್ಲಿ ಟ್ರೆಂಡಿಯಾಗಿವೆ. ಇವು ನೋಡಲು ಕೂಡ ಆಕರ್ಷಕವಾಗಿ ಕಾಣಿಸುತ್ತವೆ. ಜೊತೆಗೆ ಸೆಕೆಯಾಗುವುದಿಲ್ಲ!

Summer Hairstyles

ಪೋನಿಟೈಲ್‌ ವಿತ್‌ ಫ್ರಿಂಝ್‌ ಹೇರ್‌ಸ್ಟೈಲ್‌

ಮುಂಭಾಗದಲ್ಲಿ ಹುಡುಗಿಯರ ಹಣೆಯನ್ನು ಕವರ್‌ ಮಾಡುವ ಫ್ರಿಂಝ್‌ ಹೇರ್‌ಸ್ಟೈಲ್‌ ಹಿಂದೆ ಸಿಂಪಲ್‌ ಪೋನಿಟೈಲ್‌ ಕೂಡ ಈ ಸೀಸನ್‌ನಲ್ಲಿ ಮರಳಿದೆ. ನೋಡಲು ಸಿಂಪಲ್ಲಾಗಿ ಕಾಣಿಸುವ ಈ ಹೇರ್‌ಸ್ಟೈಲ್‌ ನೋಡಿದಾಗ ಖಾಲಿ ಎಂದೆನಿಸುವುದಿಲ್ಲ. ಬದಲಿಗೆ ಎರಡು ಹೇರ್‌ಸ್ಟೈಲ್‌ ಕಾಂಬಿನೇಷನ್‌ ಇದಾಗಿರುತ್ತದೆ.

ಹನ್‌ ಹೇರ್‌ಸ್ಟೈಲ್‌

ಅರ್ಧ ಫ್ರೀ ಹೇರ್‌ಸ್ಟೈಲ್‌ ಹಾಗೂ ಅರ್ಧ ಕಟ್ಟಿದ ಬನ್‌ ಹೇರ್‌ಸ್ಟೈಲ್‌ ಕಾಂಬೀನೇಷನ್‌ ಈ ಸೀಸನ್‌ನ ಹನ್‌ ಹೇರ್‌ಸ್ಟೈಲ್‌ನಲ್ಲಿ ಸೇರಿದೆ. ಇವೆರಡರೊಳಗೆ ಹಣೆ ಮುಂಭಾಗದ ಫಿಂಝ್‌ ಹೇರ್‌ಸ್ಟೈಲ್‌ ಮಿಕ್ಸ್‌ ಆಗಿದೆ. ಇವೆಲ್ಲದರ ಸಮಾಗಮ ಫ್ರಿಂಝ್‌ ಹನ್‌ ಹೇರ್‌ಸ್ಟೈಲ್‌. ಇದು ಈ ಸೀಸನ್‌ನಲ್ಲಿ ಇದು ಹುಡುಗಿಯರ ಫೇವರೇಟ್‌ ಲಿಸ್ಟ್‌ನಲ್ಲಿದೆ.

Summer Hairstyles

ಬೇಸಿಗೆ ಹೇರ್‌ಸ್ಟೈಲ್‌ ಫಾಲೋ ಮಾಡಲು ಹೀಗೆ ಮಾಡಿ

  • ಹೊರಗಡೆ ಹೋಗುವಾಗ ಮೇಲಿನ ಹೇರ್‌ಸ್ಟೈಲ್‌ಗಳನ್ನು ಮಾಡಿ.
  • ಮುಖದ ಆಕಾರಕ್ಕೆ ತಕ್ಕಂತೆ ಇವನ್ನು ಆಯ್ಕೆ ಮಾಡಿ.
  • ಫ್ರಿಂಝ್‌ ಮಾಡದಿದ್ದವರೂ ಸೈಡ್‌ಲಾಕ್ಸ್‌ ಕೂದಲ ವಿನ್ಯಾಸ ಮಾಡಬಹುದು.
  • ತೀರಾ ಟೈಟಾಗಿ ಕಟ್ಟಬೇಡಿ. ತಲೆ ನೋವಾಗಬಹುದು.
  • ಮೇಲಿನ ಹೇರ್‌ಸ್ಟೈಲ್ಸ್‌ ನಿಮಗೆ ಸ್ಲಿಮ್‌ ಲುಕ್‌ ನೀಡಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Lok Sabha Election 2024: ರಾಜ್ಯದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತಗಳಲ್ಲೂ ಒಟ್ಟು ಶೇ. 68.96 ಮತದಾನ ನಡೆದಿತ್ತು. ಈ ಬಾರಿ ಮೊದಲ ಹಂತದಲ್ಲಿ ಶೇ.69.23 ವೋಟಿಂಗ್‌ ನಡೆದಿದೆ, ಇನ್ನು ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಬಹುತೇಕ ಶಾಂತಿಯುತವಾಗಿ ಶುಕ್ರವಾರ ಮತದಾನವಾಗಿದೆ.

VISTARANEWS.COM


on

Koo

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ (Lok Sabha Election 2024) ಮೊದಲ ಹಂತದ ಮತದಾನ ಶುಕ್ರವಾರ ಮುಕ್ತಾಯವಾಗಿದೆ. ಒಂದೆರಡು ಕಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ಹೊರತುಪಡಿಸಿದರೆ ಎಲ್ಲೆಡೆ ಬಹುತೇಕ ಶಾಂತಿಯುತವಾಗಿ ಮತದಾನ ಜರುಗಿದ್ದು, 14 ಕ್ಷೇತ್ರಗಳಲ್ಲಿ ಸಂಜೆ 6 ಗಂಟೆವರೆಗೆ ಒಟ್ಟು ಶೇ.69.23 ಮತದಾನ ದಾಖಲಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.81.48 ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 52.81 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇನ್ನು ಮೊದಲ ಹಂತದಲ್ಲಿ ಒಟ್ಟು 2,88,08,182 ಮತದಾರರು ಮತ ಚಲಾಯಿಸಿದ್ದು, 14 ಕ್ಷೇತ್ರಗಳಲ್ಲಿ 118 ಪಕ್ಷೇತರ ಅಭ್ಯರ್ಥಿಗಳು ಸೇರಿ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇದರಲ್ಲಿ 226 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಜೂನ್‌ 4ರಂದು ಫಲಿತಾಂಶ ಹೊರಬೀಳಲಿದೆ.

14 ಕ್ಷೇತ್ರಗಳ ಶೇಕಡಾವಾರು ಮತದಾನ ಪಟ್ಟಿ

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಕ್ಷೇತ್ರಲೋಕಸಭಾ ಚುನಾವಣೆ-2024ಲೋಕಸಭಾ ಚುನಾವಣೆ-2019
ಉಡುಪಿ-ಚಿಕ್ಕಮಗಳೂರುಶೇ. 76.06ಶೇ. 76.07
ಹಾಸನಶೇ. 77.51ಶೇ. 77.35
ದಕ್ಷಿಣ ಕನ್ನಡ
ಶೇ. 77.43ಶೇ. 77.99
ಚಿತ್ರದುರ್ಗ
ಶೇ. 73.11ಶೇ. 70.80
ತುಮಕೂರು
ಶೇ. 77.70ಶೇ. 77.43
ಮಂಡ್ಯಶೇ. 81.48ಶೇ. 80.59
ಮೈಸೂರುಕೊಡಗು
ಶೇ. 70.45ಶೇ. 69.51
ಚಾಮರಾಜನಗರ
ಶೇ. 76.59ಶೇ. 75.35
ಬೆಂಗಳೂರು ಗ್ರಾಮಾಂತರ
ಶೇ.67.29ಶೇ. 64.98
ಬೆಂಗಳೂರು ಉತ್ತರ
ಶೇ.54.42ಶೇ. 54.76
ಬೆಂಗಳೂರು ಸೆಂಟ್ರಲ್‌
ಶೇ. 52.81ಶೇ. 54.32
ಬೆಂಗಳೂರು ದಕ್ಷಿಣ
ಶೇ. 53.15ಶೇ. 53.70
ಚಿಕ್ಕಬಳ್ಳಾಪುರ
ಶೇ. 76.82ಶೇ. 76.74
ಕೋಲಾರಶೇ. 78.07
ಶೇ. 77.25
ಒಟ್ಟು ಶೇಕಡಾವಾರು ಮತದಾನ 69.23

2019ರ ಲೋಕಸಭಾ ಚುನಾವಣೆಯ ಒಟ್ಟು ಮತದಾನ ಎಷ್ಟು?
2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತ ಸೇರಿ ಒಟ್ಟು ಶೇ. 68.96 ಮತದಾನ ನಡೆದಿತ್ತು. ಮಂಡ್ಯದಲ್ಲಿ ಅತಿಹೆಚ್ಚು ಶೇ. 80.59, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 53.70 ಮತದಾನ ದಾಖಲಾಗಿತ್ತು.

ಇದನ್ನೂ ಓದಿ | Lok Sabha Election 2024: ಮತ ಹಾಕದವರನ್ನು ಮತ ಪಟ್ಟಿಯಿಂದ ತೆಗೆದುಹಾಕಬೇಕು: ಅನಂತ್ ನಾಗ್ ಸಲಹೆಗೆ ಏನಂತೀರಿ?

ಇಂಡಿಗನತ್ತ ಮತಗಟ್ಟೆಯಲ್ಲಿ ಮರು ಮತದಾನ ಸಾಧ್ಯತೆ

ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಮರು ಮತದಾನ ನಡೆಯುವ ಸಾಧ್ಯತೆ ಇದೆ. ಶುಕ್ರವಾರ ಕೇವಲ 10 ಮತದಾರರು ಮಾತ್ರ ಹಕ್ಕು ಚಲಾವಣೆ ಮಾಡಿದ್ದಾರೆ. ಮತಗಟ್ಟೆಯಲ್ಲಿ ಮೂಲಸೌಕರ್ಯ ಇಲ್ಲ ಎಂದು ಮತದಾರರು ಅಸಮಾಧಾನ ಹೊರಹಾಕಿ ಮತದಾನ ಬಹಿಷ್ಕರಿಸಿದ್ದರು. ಹೀಗಾಗಿ 2 ದಿನಗಳೊಳಗೆ ಅಧಿಕಾರಿಗಳು ಮಾತುಕತೆ ನಡೆಸಿ ಮರು ಮತದಾನ ಮಾಡಿಸುವ ಸಾಧ್ಯತೆ ಇದೆ.

ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಅಂತ್ಯಗೊಂಡಿತು. ನಿಗದಿತ ಸಮಯವಾಗುತ್ತಿದ್ದಂತೆ ಅಧಿಕಾರಿಗಳು ಮತಗಟ್ಟೆಯ ಪ್ರಮುಖ ದ್ವಾರಗಳನ್ನು ಮುಚ್ಚಿದರು. ಸಂಜೆ ಐದು ಗಂಟೆಯ ವೇಳೆಗೆ ಶೇ 63.90 ಮತದಾನ ದಾಖಲಾಗಿತ್ತು. ಮತದಾನ ಅವಧಿ ಮುಕ್ತಾಯಗೊಂಡ ಬಳಿಕ 6 ಗಂಟೆ ವೇಳೆಗೆ ಸಾಲಿನಲ್ಲಿದ್ದವರಿಗೆ ಮಾತ್ರ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇವಿಎಂಗಳಿಗೆ ಸೀಲ್​

ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಗೇಟ್​ ಮುಚ್ಚಿದರು. ಈ ವೇಳೆ ಮೊದಲೇ ಬಂದು ಸರತಿಯಲ್ಲಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ನೀಡಲಾಯಿತು. ಕೆಲವರು ಅ ಬಳಿಕ ಬಂದರೂ ಅವರಿಗೆ ಅವಕಾಶ ನೀಡಲು ಹಿರಿಯ ಅಧಿಕಾರಿಗಳು ಒಪ್ಪಲಿಲ್ಲ. ಎಲ್ಲರೂ ಮತ ಚಲಾವಣೆ ಮಾಡಿದ ಬಳಿಕ ಹಿರಿಯ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದರು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅವರು ಮತ ಯಂತ್ರಗಳನ್ನು ಪ್ಯಾಕ್ ಮಾಡಿದರು. ಈ ಮತಪೆಟ್ಟಿಗಳು ಇನ್ನು ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಲಿವೆ.

ಇದನ್ನೂ ಓದಿ | Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

ಭರ್ಜರಿ ಪ್ರತಿಕ್ರಿಯೆ

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಮುಂಜಾನೆಯಿಂದಲೇ ಜನರು ಅತ್ಯಂತ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಬೇಸಿಗೆ ಬಿಸಿಲು ಹೆಚ್ಚಿರಬಹುದು ಎಂಬ ಕಾರಣಕ್ಕೆ ಮುಂಜಾನೆ ಅವಧಿಯಲ್ಲಿ ಮತಗಟ್ಟೆಗಳ ಬಳಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಕಂಡು ಬಂದರು. ಕೆಲವೊಂದು ಜನನಿಬಿಡ ಮತಗಟ್ಟೆಗಳಲ್ಲಿ 2 ಗಂಟೆಗಳಷ್ಟು ಕಾಲ ಜನ ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದರು.

Continue Reading
Advertisement
love jihad
ಕರ್ನಾಟಕ31 mins ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ44 mins ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು1 hour ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ1 hour ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ1 hour ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20241 hour ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ2 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ2 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ2 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ2 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20248 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202410 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202412 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202413 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ15 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ20 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌