HAL Helicopter Factory : ಇಲ್ಲಿ ರೆಡಿಯಾಗಿದೆ, 20,000 ಅಡಿ ಎತ್ತರದಲ್ಲಿ ಹಾರಬಲ್ಲ, ನೀರಲ್ಲೂ ಇಳಿಯಬಲ್ಲ ಎಲ್‌ಯುಎಚ್‌ ಹೆಲಿಕಾಪ್ಟರ್‌ - Vistara News

ಕರ್ನಾಟಕ

HAL Helicopter Factory : ಇಲ್ಲಿ ರೆಡಿಯಾಗಿದೆ, 20,000 ಅಡಿ ಎತ್ತರದಲ್ಲಿ ಹಾರಬಲ್ಲ, ನೀರಲ್ಲೂ ಇಳಿಯಬಲ್ಲ ಎಲ್‌ಯುಎಚ್‌ ಹೆಲಿಕಾಪ್ಟರ್‌

ತುಮಕೂರಿನ ಗುಬ್ಬಿಯಲ್ಲಿ ಸ್ಥಾಪನೆಯಾಗಿರುವ ಹೆಲಿಕಾಪ್ಟರ್‌ ಉತ್ಪಾದನಾ ಫ್ಯಾಕ್ಟರಿಯ ಸಾಮರ್ಥ್ಯವೇನು? ಅಲ್ಲಿ ತಯಾರಾಗುವ ಹೆಲಿಕಾಪ್ಟರ್‌ಗಳು ಯಾವುದಕ್ಕೆ ಬಳಕೆ ಆಗುತ್ತವೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

HAL LUH
ತುಮಕೂರಿನ ಎಚ್‌ಎಎಲ್‌ನಲ್ಲಿ ನಿರ್ಮಾಣವಾಗಲಿರುವ ಲಘು ಉಪಯೋಗಿ ವಿಮಾನದ ಮಾದರಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Gireesh linganna

ಗಿರೀಶ್ ಲಿಂಗಣ್ಣ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ

ರಾಜ್ಯ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ನಿರ್ಮಿಸಲಾಗಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್ಎಎಲ್) ನೂತನ ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು (HAL Helicopter Factory) ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಇದು ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್‌ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಯನ್ನು ಹೊಂದಿದೆ.

615 ಎಕರೆ ಭೂಪ್ರದೇಶದಲ್ಲಿ ವಿಸ್ತಾರವಾಗಿ ಹರಡಿರುವ ಈ ಘಟಕದ ಸ್ಥಾಪನೆಗೆ ಪ್ರಧಾನಿ ಮೋದಿ ಅವರು 2016ರಲ್ಲಿ ಶಂಕುಸ್ಥಾಪನೆ ನಡೆಸಿದ್ದರು. ಈ ಹೆಲಿಕಾಪ್ಟರ್ ಉತ್ಪಾದನಾ ಘಟಕದಲ್ಲಿ ಉತ್ಪಾದನೆ, ಪರೀಕ್ಷೆಗಳಿಗೆ ಬೇಕಾದ ವ್ಯವಸ್ಥೆಗಳು ಇವೆ. 3 ಟನ್‌ನಿಂದ 12 ಟನ್ ತೂಕದ ತನಕ ವಿವಿಧ ಶ್ರೇಣಿಗಳ ಹೆಲಿಕಾಪ್ಟರ್ ನಿರ್ಮಾಣ ಸಾಮರ್ಥ್ಯ ಈ ಸ್ಥಾವರಕ್ಕಿದೆ.

೨೦೧೬ರಲ್ಲಿ ಸ್ಥಾವರಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಿದಾಗ..

ಎಲ್‌ಯುಎಚ್‌ ಹೊಸ ತಲೆಮಾರಿನ ಹೆಲಿಕಾಪ್ಟರ್

ಇಲ್ಲಿ ಉತ್ಪಾದನೆಗೊಳ್ಳಲಿರುವ ಲೈಟ್ ಯುಟಿಲಿಟಿ ಹೆಲಿಕಾಪ್ಟರ್‌ (Light Utility Helicopter-LHU) ಒಂದು 3 ಟನ್ ವರ್ಗದ ಹೊಸ ತಲೆಮಾರಿನ ಹೆಲಿಕಾಪ್ಟರ್ ಆಗಿದ್ದು, ಎಚ್ಎಎಲ್ ಇದನ್ನು ಮಿಲಿಟರಿ ಮತ್ತು ನಾಗರಿಕ ಎರಡೂ ಅಗತ್ಯತೆಗಳನ್ನು ಪೂರೈಸಲು ನಿರ್ಮಿಸಿದೆ.

ಎಲ್‌ಯುಎಚ್ ಎನ್ನುವುದು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ನಿರ್ಮಿಸಿರುವ ಇತ್ತೀಚಿನ ಹೆಲಿಕಾಪ್ಟರ್ ಆಗಿದ್ದು, ಸಮುದ್ರ ಮಟ್ಟದಿಂದ 20,000 ಅಡಿ ಎತ್ತರದಲ್ಲಿ ಕಾರ್ಯಾಚರಣೆ ನಡೆಸಬಲ್ಲ ಸಾಮರ್ಥ್ಯ ಹೊಂದಿದೆ. ಈ ಆಧುನಿಕ ಹೆಲಿಕಾಪ್ಟರ್ ಗಾಜಿನ ಕಾಕ್‌ಪಿಟ್, ಡ್ಯುವಲ್ ಕಂಟ್ರೋಲ್ ಮತ್ತು ಒಂದು ಸಫ್ರಾನ್ ಅರ್ಡಿಡೆನ್ 1ಯು1 ಟರ್ಬೋಶಾಫ್ಟ್ ಇಂಜಿನ್ ಹೊಂದಿದೆ. ಈ ಹೆಲಿಕಾಪ್ಟರ್ ಅತ್ಯಂತ ಯಶಸ್ವಿಯಾಗಿದ್ದು, ಜಾಗತಿಕ ಗುಣಮಟ್ಟಗಳಿಗೆ ಅನುಗುಣವಾಗಿ ನಿರ್ಮಿಸಲಾಗಿದೆ. ಈ ಯಶಸ್ಸಿನ ಬಳಿಕ ಹೆಲಿಕಾಪ್ಟರ್ ಅನ್ನು ನಾಗರಿಕ ಬಳಕೆಗೆ ಬೇಕಾದಂತೆ ತಯಾರಿಸುವ ಪ್ರಯತ್ನಗಳೂ ಆರಂಭಗೊಂಡಿವೆ.

ಭಾರತೀಯ ಸೇನಾಪಡೆಗಳಿಗೆ 20,000 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿ ಕಾರ್ಯಾಚರಣೆ ನಡೆಸಬಲ್ಲ ಹೆಲಿಕಾಪ್ಟರ್ ಅಗತ್ಯವಿದೆ. ಈ ಅಗತ್ಯತೆ ಹೆಲಿಕಾಪ್ಟರ್‌ಗೆ ವಿನೂತನ ಸವಾಲನ್ನು ತಂದೊಡ್ಡಿದೆ. ಇಂತಹ ಎತ್ತರದ ಪ್ರದೇಶದಲ್ಲಿ ಪ್ರಚಲಿತ ಗಾಳಿಯ ಸಾಂದ್ರತೆ ಅತ್ಯಂತ ಕಡಿಮೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಕೆಲವೇ ಕೆಲವು ಹೆಲಿಕಾಪ್ಟರ್‌ಗಳು ಮಾತ್ರ ಕಾರ್ಯಾಚರಿಸುವ ಸಾಮರ್ಥ್ಯ ಹೊಂದಿವೆ. ಅಂತಹಾ ಹೆಲಿಕಾಪ್ಟರ್‌ಗಳಲ್ಲಿ ಎಲ್‌ಯುಎಚ್ ಸಹ ಒಂದಾಗಿದೆ.

ಏನೇನು ವಿಶೇಷ ವ್ಯವಸ್ಥೆಗಳಿವೆ?
-ಇದು ಅತ್ಯಾಧುನಿಕ ತಂತ್ರಜ್ಞಾನಗಳಾದ ಗಾಜಿನ ಕಾಕ್‌ಪಿಟ್ ಹಾಗೂ ಬಹು ಕಾರ್ಯಗಳ ಡಿಸ್‌ಪ್ಲೇ ವ್ಯವಸ್ಥೆಗಳನ್ನು ಹೊಂದಿದೆ.

– ಎಲ್‌ಯುಎಚ್ 127 ನಾಟ್ಸ್ (ಪ್ರತಿ ಗಂಟೆಗೆ 230 ಕಿಲೋಮೀಟರ್ ಅಥವಾ 146 ಮೈಲಿ) ವೇಗದಲ್ಲಿ ಚಲಿಸಬಲ್ಲದಾಗಿದ್ದು, 350 ಕಿಲೋಮೀಟರ್ (217 ಮೈಲಿ) ಗರಿಷ್ಠ ವ್ಯಾಪ್ತಿ ಹೊಂದಿದೆ.

-ಇದು 500 ಕೆಜಿ (1,102) ಪೌಂಡ್‌ಗಳಷ್ಟು ಗರಿಷ್ಠ ಭಾರ ಹೊತ್ತು ಚಲಿಸಬಲ್ಲದು.

ತುಮಕೂರಿನ ಹೆಲಿಕಾಪ್ಟರ್‌ ನಿರ್ಮಾಣ ಸ್ಥಾವರದ ದೃಶ್ಯ

೩೯೪ ಲೈಟ್‌ ಹೆಲಿಕಾಪ್ಟರ್‌ಗಳು ಬೇಕು
ಎಲ್‌ಯುಎಚ್ ಭಾರತೀಯ ಸೇನೆ ಮತ್ತು ವಾಯುಪಡೆಗಳಿಗೆ ಅತ್ಯಂತ ಅಗತ್ಯವಾಗಿದ್ದ 394 ಲೈಟ್ ಹೆಲಿಕಾಪ್ಟರ್‌ಗಳ ಅವಶ್ಯಕತೆಯನ್ನು ಪೂರೈಸಲಿದ್ದು, ಆ ಮೂಲಕ ಹಳೆಯದಾಗುತ್ತಿರುವ ಚೀತಾ (ಲಾಮಾ) ಹಾಗೂ ಚೇತಕ್ (ಅಲೌಟ್ಟೆ III) ಹೆಲಿಕಾಪ್ಟರ್‌ಗಳ ಬದಲಿಗೆ ಕಾರ್ಯನಿರ್ವಹಿಸಲಿವೆ. ಭೂಸೇನೆಗೆ 126 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೆ, ವಾಯು ಸೇನೆಗೆ 61 ಹೆಲಿಕಾಪ್ಟರ್‌ಗಳ ಅವಶ್ಯಕತೆಯಿದೆ.

ಮುಂದಿನ ದಿನಗಳಲ್ಲಿ ನಾಗರಿಕ ಬಳಕೆಗೂ ಲಭ್ಯ

ಮಿಲಿಟರಿ ಅವಶ್ಯಕತೆಗಳನ್ನು ಪೂರೈಸುವ ಈ ಹೆಲಿಕಾಪ್ಟರ್‌ಗಳು ನಾಗರಿಕ ಬಳಕೆಗೂ ಲಭ್ಯವಾಗಲಿವೆ. ಮೂಲಗಳ ಮಾಹಿತಿಯ ಪ್ರಕಾರ, ಎಚ್ಎಎಲ್ 600ಕ್ಕೂ ಹೆಚ್ಚು ಎಲ್‌ಯುಎಚ್‌ಗಳನ್ನು ನಾಗರಿಕ ಬಳಕೆಗೆ ಪೂರೈಸಲಿದೆ. ಆರಂಭದಲ್ಲಿ ಈ ಬಳಕೆದಾರರು ಭಾರತೀಯರೇ ಆಗಿರಲಿದ್ದು, ಪ್ರವಾಸೋದ್ಯಮ, ವಾಯು ಆಂಬ್ಯುಲೆನ್ಸ್, ಇತ್ಯಾದಿ ಕ್ಷೇತ್ರಗಳಲ್ಲಿ ಬಳಕೆಯಾಗಲಿವೆ. 6-7 ಆಸನಗಳ ಸಾಮರ್ಥ್ಯ ಹೊಂದಿರುವ ಈ ಹೆಲಿಕಾಪ್ಟರ್‌ಗಳನ್ನು ನಾಲ್ಕು ಆಸನಗಳ ವಿಐಪಿ ಹೆಲಿಕಾಪ್ಟರ್ ಆಗಿಯೂ ಬಳಸಬಹುದಾಗಿದೆ.

ಎಲ್‌ಯುಎಚ್ ಹೆಲಿಕಾಪ್ಟರ್‌ಗಳನ್ನು 200-250 ಗಂಟೆಗಳ ಹಾರಾಟ ನಡೆಸಿ, ಸರ್ವಿಸ್ ನಡೆಸಿದ ಬಳಿಕ ಅದರ ಪ್ರಮುಖ ಮೂರು ಘಟಕಗಳಾದ ಗೇರ್‌ಬಾಕ್ಸ್, ಇಂಜಿನ್ ಹಾಗೂ ರೋಟಾರ್‌ಗಳು ಅತ್ಯುತ್ತಮ ಸ್ಥಿತಿಯಲ್ಲಿದ್ದವು.

ಏಳೇ ನಿಮಿಷದಲ್ಲಿ ರೆಕ್ಕೆ ಮಡಚಿ ಇಡಬಹುದು!

ಎಲ್‌ಯುಎಚ್‌ನ ರೋಟರ್ ವ್ಯವಸ್ಥೆಯಲ್ಲಿ ಇದೇ ಮೊದಲ ಬಾರಿಗೆ ‘ಟೂ ಸೆಗ್ಮೆಂಟ್ ಬ್ಲೇಡ್’ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇದು ಕಾಂಪ್ಯಾಕ್ಟ್ ಫೋಲ್ಡಿಂಗ್ ಆಯಾಮ ಒದಗಿಸುತ್ತದೆ. ಅಂದರೆ, ಏಳು ನಿಮಿಷಗಳ ಒಳಗೆ ಹೆಲಿಕಾಪ್ಟರ್ ರೆಕ್ಕೆಗಳನ್ನು ಮಡಚಬಹುದಾಗಿದ್ದು, ವಿಮಾನ ವಾಹಕ ನೌಕೆಗಳಲ್ಲಿ ಬಳಸಬಹುದಾಗಿದೆ.

ಎಲ್‌ಯುಎಚ್ ನಲ್ಲಿ ಎಮರ್ಜೆನ್ಸಿ ಫ್ಲೋಟಿಂಗ್ ಗೇರ್ (ಇಎಫ್‌ಜಿ) ಅಳವಡಿಸಲಾಗಿದ್ದು, ಇದು ತುರ್ತು ಪರಿಸ್ಥಿತಿಯಲ್ಲಿ ನೀರಿನ ಮೇಲೆ ಭೂಸ್ಪರ್ಶ ಮಾಡಲು ಅನುಕೂಲಕರವಾಗಿದೆ. ಅದರೊಡನೆ, ಇದು ಹೆಲಿಕಾಪ್ಟರ್ ನೀರಿನ ಮೇಲೆ ಕಾರ್ಯಾಚರಣೆ ನಡೆಸಲು ಪೂರಕವಾಗಿದೆ. ಇಎಫ್‌ಜಿ ಉದ್ದೇಶಪೂರ್ವಕವಾಗಿ ನೀರಿನ ಮೇಲೆ ಭೂಸ್ಪರ್ಶ ನಡೆಸುವ ‘ಫ್ಲೋಟ್ ಲ್ಯಾಂಡಿಂಗ್ ಗೇರ್’ ನಿಂದ ವಿಭಿನ್ನವಾಗಿದೆ.

ಇದರ ಹಿಂದಿರುವುದು ಯೋಧರ ಪತ್ನಿಯರ ಮನವಿ

ಭಾರತೀಯ ಸೇನಾ ಯೋಧರ ಪತ್ನಿಯರ ಸಂಘದ ಸದಸ್ಯೆಯರು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಹಳೆಯದಾಗಿರುವ ಚೀತಾ ಮತ್ತು ಚೇತಕ್ ಹೆಲಿಕಾಪ್ಟರ್‌ಗಳ ಬಳಕೆಯ ಮೂಲಕ ಸೇನೆ ತನ್ನ ಯೋಧರನ್ನು ಬಲಿ ಕೊಡುತ್ತಿದೆ ಎಂದಿದ್ದರು.

ತಾವು ಬರೆದ ಪತ್ರದಲ್ಲಿ ಇಂಡಿಯನ್ ಆರ್ಮಿ ವೈವ್ಸ್ ಅಜಿಟೇಷನ್ ಗ್ರೂಪ್ ಸದಸ್ಯೆಯರು 31 ಮಿಲಿಟರಿ ಪೈಲಟ್‌ಗಳು 2017ರ ಬಳಿಕ ಪ್ರಾಣಾರ್ಪಣೆ ಮಾಡಿದ್ದಾರೆ. ದುರದೃಷ್ಟವಶಾತ್ ಇವರು ಯಾರೂ ಶತ್ರುಗಳ ದಾಳಿಯಿಂದ ಬಲಿಯಾಗಿಲ್ಲ. ಬದಲಿಗೆ ಚೀತಾ ಮತ್ತು ಚೇತಕ್ ಹೆಲಿಕಾಪ್ಟರ್‌ಗಳ ಬಳಕೆಯ ವೇಳೆ ನಡೆದ ಅಪಘಾತದಲ್ಲಿ ಬಲಿಯಾಗಿದ್ದಾರೆ ಎಂದಿದ್ದಾರೆ.

ಚೀತಾ ಮತ್ತು ಚೇತಕ್ ಹೆಲಿಕಾಪ್ಟರ್‌ಗಳು 1960ರ ಕಾಲದ ವಿನ್ಯಾಸ ಹೊಂದಿದ್ದು, ಅದೇ ವಿನ್ಯಾಸದ ಆಧಾರದಲ್ಲಿ ನಿರ್ಮಾಣಗೊಳ್ಳುತ್ತಿವೆ. ಇಂದಿನ ಪರಿಸ್ಥಿತಿಗೆ ಹಳತಾಗಿರುವ ಈ ಮಾದರಿಯ 400 ಹೆಲಿಕಾಪ್ಟರ್‌ಗಳು ಭಾರತದಲ್ಲಿ ಕಾರ್ಯಾಚರಿಸುತ್ತಿವೆ. ಅವುಗಳ ಬದಲಿಗೆ ಸೇನೆ ನೂತನ ಎಲ್‌ಯುಎಚ್ ಗಳನ್ನು ಪಡೆದುಕೊಳ್ಳಲಿದೆ.

ಹೆಚ್ಚಲಿದೆ ಉದ್ಯೋಗಾವಕಾಶಗಳು

ತುಮಕೂರು ಜಿಲ್ಲೆಯಲ್ಲಿ 7 ಇಂಜಿನಿಯರಿಂಗ್ ಕಾಲೇಜುಗಳು, 60 ಐಟಿಐಗಳು, ಹಾಗೂ 16 ಪಾಲಿಟೆಕ್ನಿಕ್ ಕಾಲೇಜುಗಳಿವೆ. ಎಚ್ಎಎಲ್‌ನಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಲು ಪದವಿ ಪ್ರಮಾಣ ಪತ್ರಕ್ಕಿಂತಲೂ ಕೌಶಲ್ಯ ಹೆಚ್ಚು ಮುಖ್ಯವಾಗುತ್ತದೆ. ಆದ್ದರಿಂದ ಇಂಜಿನಿಯರಿಂಗ್ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಈ ತರಬೇತಿ ಪಡೆದ ಬಳಿಕ, ರಾಷ್ಟ್ರ ಮಟ್ಟದಲ್ಲಿ ಪರೀಕ್ಷೆಯನ್ನು ಎದುರಿಸಿ, ಅವರು ಎಚ್ಎಎಲ್‌ನಲ್ಲಿ ಉದ್ಯೋಗ ಪಡೆಯಬಹುದು.

ಪಾಲಿಟೆಕ್ನಿಕ್ ವಿದ್ಯಾರ್ಥಿಗಳೂ ಇದೇ ಮಾದರಿಯನ್ನು ಅನುಸರಿಸಿ ಉದ್ಯೋಗ ಪಡೆಯಬೇಕಾಗುತ್ತದೆ. ಅದೇ ರೀತಿ ಐಟಿಐ ವಿದ್ಯಾರ್ಥಿಗಳಿಗೂ ಅವಕಾಶ ಸೃಷ್ಟಿಸಲಾಗುತ್ತಿದೆ. ಒಟ್ಟಿನಲ್ಲಿ ಈ ತರಬೇತಿ ಪಡೆದವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಸ್ತುತ ಟಾಟಾ ಟೆಕ್ನಾಲಜಿ ಸಂಸ್ಥೆ ಏಳು ಐಟಿಐಗಳೊಡನೆ ಸಹಯೋಗ ಹೊಂದಿ, ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ಎಚ್ಎಎಲ್‌ ಚಳ್ಳಕೆರೆಯಲ್ಲಿ ಈಗಾಗಲೇ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಜೊತೆಗೂಡಿ, 75,000 ಚದರ ಅಡಿಗಳ ಕಟ್ಟಡ ನಿರ್ಮಾಣಗೊಳಿಸಿ, 250 ಜನರಿಗೆ ಏರೋಸ್ಪೇಸ್ ಮತ್ತು ಅಲೈಡ್ ಸೇವೆಗಳ ತರಬೇತಿ ಒದಗಿಸುತ್ತಿದೆ. ಈ ತರಬೇತಿಯೂ ಉದ್ಯೋಗಾವಕಾಶಗಳನ್ನು ಪಡೆಯಲು ಅನುಕೂಲಕರವಾಗಿದೆ.

ಗುಬ್ಬಿಯಲ್ಲಿ ೪೦೦೦ ಜನರಿಗೆ ಉದ್ಯೋಗ

ಗುಬ್ಬಿಯ ಹೆಲಿಕಾಪ್ಟರ್ ಘಟಕದಿಂದ ನೇರವಾಗಿ 4,000 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎನ್ನಲಾಗುತ್ತಿದೆ. ಗಮನಿಸಬೇಕಾದ ಅಂಶವೆಂದರೆ, 4,000 ಅತಿಸಣ್ಣ ಉದ್ಯಮಗಳು, 700 ಸಣ್ಣ ಉದ್ಯಮಗಳು ಹಾಗೂ 7 ಮಧ್ಯಮ ಗಾತ್ರದ ಉದ್ಯಮಗಳಿವೆ. ಈ ಉದ್ಯಮಗಳಲ್ಲಿ ಎಚ್ಎಎಲ್‌ಗೆ ಅಗತ್ಯವಿರುವ ಉತ್ಪಾದನೆ ನಡೆಸುವ ಸಂಸ್ಥೆಗಳು ಹೆಚ್ಚಿನ ಉತ್ಪಾದನೆ ಆರಂಭಿಸುತ್ತವೆ. ಆ ಮೂಲಕವೂ ಪರೋಕ್ಷವಾಗಿ ಉದ್ಯೋಗ ಸೃಷ್ಟಿಯಾಗುತ್ತದೆ. ಜೊತೆಗೆ ವಸಂತ ನರಸಾಪುರದಲ್ಲಿ ನಾಲ್ಕನೇ ಹಂತದ ಅಭಿವೃದ್ಧಿಯಾಗುತ್ತಿದ್ದು, ಅಲ್ಲೂ ಎಚ್ಎಎಲ್‌ನ್ನು ಗಮನದಲ್ಲಿಟ್ಟುಕೊಂಡು 3-4,000 ಉದ್ಯಮಗಳು ಬರಲಿದ್ದು, ಉದ್ಯೋಗ ಸೃಷ್ಟಿಯಾಗಲಿದೆ.

ಹೀಗೆ ಉದ್ಯೋಗ ಸೃಷ್ಟಿ ಹೆಚ್ಚಾದಾಗ, ಆ ಹೆಚ್ಚಿನ ಜನರಿಗೆ ಪೂರಕ ಸೇವೆಗಳಾದ ಟ್ಯಾಕ್ಸಿ, ಹೋಟೆಲ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮಗಳೂ ಬೆಳೆಯುತ್ತವೆ. ಆ ಮೂಲಕ ತುಮಕೂರು ಮತ್ತು ಗುಬ್ಬಿ ಸುತ್ತಮುತ್ತಲಿನ ಪ್ರದೇಶಗಳು ಅಭಿವೃದ್ಧಿಯಾಗುತ್ತವೆ.

ಇದನ್ನೂ ಓದಿ : India energy week 2023: ಪರಿಸರಕ್ಕೆ ಹಾನಿ ಮಾಡುವ ಪ್ಲಾಸ್ಟಿಕ್ ಬಾಟಲಿಗಳಿಂದ ಬಟ್ಟೆ! ಹೇಗೆ ತಯಾರಿಸುತ್ತಾರೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

Pradeep Eshwar: ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋಲಿನ ಬಗ್ಗೆ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಕ್ರಿಯಿಸಿದ್ದಾರೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ. ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ? ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ? ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.

VISTARANEWS.COM


on

Pradeep Eshwar
Koo

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಬಳಿಕ ಮತ್ತೆ ʼನಮಸ್ತೆ ಚಿಕ್ಕಬಳ್ಳಾಪುರʼ ಕಾರ್ಯಕ್ರಮದ ಮೂಲಕ ಮನೆಮನೆಗೆ ತೆರಳಿ ಜನರ ಅಹವಾಲು ಸ್ವೀಕರಿಸಲು ಶಾಸಕ ಪ್ರದೀಪ್‌ ಈಶ್ವರ್‌ ಮುಂದಾಗಿದ್ದಾರೆ. ಈ ವೇಳೆ ಕ್ಷೇತ್ರದ ನೂತನ ಸಂಸದ ಡಾ.ಕೆ.ಸುಧಾಕರ್‌ ಅವರಿಗೆ ಶುಭ ಹಾರೈಸಿರುವ ಅವರು, ಸುಧಾಕರ್ ದೆಹಲಿಯಲ್ಲಿ ಆರಾಮಾಗಿ ಇರ್ತಾರೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ, ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ, ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ ಎಂದು ಕಾರ್ಯಕರ್ತರಿಗೆ ಹೇಳಿದರು.

ಕ್ಷೇತ್ರದಲ್ಲಿ ಡಾ.ಕೆ. ಸುಧಾಕರ್‌ಗೆ ಒಂದು ವೋಟ್ ಲೀಡ್ ಬಂದರೂ ರಾಜೀನಾಮೆ ಕೊಡೋದಾಗಿ ಹೇಳಿದ್ದರಿಂದ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯಗಳು ಕೇಳಿಬಂದಿದ್ದವು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಶುಕ್ರವಾರ ʼನಮಸ್ತೆ ಚಿಕ್ಕಬಳ್ಳಾಪುರʼ ಕಾರ್ಯಕ್ರಮ ನಡೆಸಲಾಯಿತು. ನಗರದ 17ನೇ ವಾರ್ಡ್‌ನಲ್ಲಿ ಮನೆಮನೆಗೆ ತೆರಳಿ ಶಾಸಕ ಪ್ರದೀಪ್‌ ಈಶ್ವರ್, ಜನರ ಅಹವಾಲು ಆಲಿಸಿದರು.

ಈ ವೇಳೆ ನೂತನ‌ ಸಂಸದ ಡಾ.ಕೆ.ಸುಧಾಕರ್‌ಗೆ ಶುಭ ಹಾರೈಸಿದ ಪ್ರದೀಪ್ ಈಶ್ವರ್, ಒಳ್ಳೆ ಕೆಲಸ ಮಾಡಿಕೊಂಡು ಹೋಗಲಿ. ಜನಾಭಿಪ್ರಾಯ ಸುಧಾಕರ್ ಪರವಾಗಿ ಬಂದಿದೆ. ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಗಲಾಟೆಗಳಾಗುತ್ತಿವೆ. ನನ್ನ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ತಕ್ಷಣ ನಾನು ರಿಯಾಕ್ಟ್ ಮಾಡಿದ್ರೆ ನಮ್ಮ ಕಾರ್ಯಕರ್ತರು, ಅವರ ಕಾರ್ಯಕರ್ತರು ಹೊಡೆದಾಡಿಕೊಳುತ್ತಾರೆ. ನಾನು ಬೈಯ್ಯಬೇಕಾ, ನಾನೇ ಅಖಾಡಕ್ಕೆ ಇಳಿಯುತ್ತೇನೆ‌. ನನ್ನ ಕಾರ್ಯಕರ್ತರನ್ನು ಯಾವುದೇ ಕಾರಣಕ್ಕೂ ಬಲಿ ಕೊಡಲ್ಲ. ನನ್ಮ ಅಸ್ತಿತ್ವದ ಪ್ರಶ್ನೆ ನಾನೇ ಕಾಪಾಡಿಕೊಳ್ತೀನಿ ಎಂದರು.

ಇದನ್ನೂ ಓದಿ | DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

ನಾಲ್ಕೈದು ಕಡೆ ದಾಳಿಯಾದರೂ ನಾನು ತಾಳ್ಮೆಯಿಂದ ಇದ್ದೇನೆ. ಕೆ.ಸುಧಾಕರ್ ದೆಹಲಿಯಲ್ಲಿ ಆರಾಮಾಗಿ ಇರುತ್ತಾರೆ. ನಾನು ಬೆಂಗಳೂರಿನಲ್ಲಿ ಆರಾಮಾಗಿ ಇರುತ್ತೇನೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ. ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ? ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ? ನಮಗೆಲ್ಲಾ ನಮ್ಮ ಹೆಂಡತಿ ಮಕ್ಕಳೇ ಮುಖ್ಯ ಎಂದು ಹೇಳುವ ಮೂಲಕ ನಾವೆಲ್ಲಾ ಒಂದೇ ಎನ್ನುವ ಅರ್ಥದಲ್ಲಿ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ.

ಮನೆಗೆ ಕಲ್ಲು ಹೊಡೆದ ನಾಲ್ಕು ಜನರನ್ನು ಠಾಣೆಗೆ ಕರೆಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫೇಕ್ ರಾಜೀನಾಮೆ ಪತ್ರ ಹರಿಬಿಟ್ಟಿದ್ದಾರೆ. ಮೈಸೂರಿನ ಅವಿನಾಶ್ ಜೊತೆ ಇನ್ನಿಬ್ಬರು ಹುಡುಗರು ಈ ರೀತಿ ಮಾಡಿದ್ದಾರೆ. ಫೇಕ್ ರಾಜೀನಾಮೆ ಲೆಟರ್ ಹರಿಬಿಟ್ಟಿರುವ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಅಖಾಡದಲ್ಲಿ ನಾನು ಇದ್ದಿದ್ರೆ ಅದರ ಕಥೆ ಬೇರೆ ಆಗ್ತಿತ್ತು

ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಪರೋಕ್ಷವಾಗಿ ರಕ್ಷಾರಾಮಯ್ಯಗೆ ವಿರುದ್ಧ ಅಸಮಾಧಾನ ಹೊರಹಾಕಿದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಅಖಾಡದಲ್ಲಿ ನಾನು ಇದ್ದಿದ್ದರೆ ಅದರ ಕಥೆ ಬೇರೆ ಆಗ್ತಿತ್ತು. ಎಲ್ಲರೂ ಪ್ರದೀಪ್ ಈಶ್ವರ್ ಆಗಕ್ಕೆ ಸಾಧ್ಯವಿಲ್ಲ. ಇನ್ನು ಮುಂದೆ ನಾನೆ ಮನೆಮನೆಗೆ ಸುತ್ತುತ್ತೇನೆ. ಕಾರ್ಯಕರ್ತರನ್ನು ಬಲಪಡಿಸುತ್ತೇನೆ. ಕಾಂಗ್ರೆಸ್ ಪಕ್ಷ ದೊಡ್ಡದು, ಪ್ರದೀಪ್ ಈಶ್ವರ್ ಅಲ್ಲ. ನನ್ನಂಥಹ ಅಹಿಂದ ಹುಡುಗರ ರಕ್ಷಣೆ ಸಿಗಬೇಕಾದರೆ ಕಾಂಗ್ರೆಸ್ ಉಳಿಯಬೇಕು. ಚಿಕ್ಕಬಳ್ಳಾಪುರಲ್ಲಿ ಈ ಸೋಲು ಸೋಲಲ್ಲ, ಗೆಲುವು ಇನ್ನು ಐದು ವರ್ಷ ಮುಂದಕ್ಕೆ ಹೋಗಿದೆ ಅಷ್ಟೇ ಎಂದು ಹೇಳಿದರು.

ಇದನ್ನೂ ಓದಿ | Rahul Gandhi: ನನ್ನ ಮೇಲೆ ಮೋದಿಗಿರುವಷ್ಟು ದೇವರ ಕೃಪೆ ಇಲ್ಲ ಎಂದ ರಾಹುಲ್‌ ಗಾಂಧಿ; ಏಕಿಂಥ ಮಾತು?

ಯಾರೇ ಆಗಿದ್ರೂ ಶಿಕ್ಷೆ ಆಗಲೇ ಆಗುತ್ತೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಕೇಸ್‌ನಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ. ರೇಣುಕಾಸ್ವಾಮಿ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಪ್ಪಿತಸ್ತರು ಯಾರೆ ಇದ್ದರೂ ಕಾನೂನು ಕ್ರಮ ಜರುಗಿಸಬೇಕು. ಬೆಂಗಳೂರಿನ ಪೊಲೀಸರು ಬಲಿಷ್ಠವಾಗಿದ್ದಾರೆ. ಕಾನೂನಿಗಿಂತ ದೊಡ್ಡವರು ಈ ಭೂಮಿ ಮೇಲೆ ಯಾರೂ ಇಲ್ಲ. ಯಾರೇ ಆಗಿದ್ರೂ ತಪ್ಪಿಗೆ ಶಿಕ್ಷೆ ಆಗಲೇ ಆಗುತ್ತೆ ಎಂದು ಪ್ರದೀಪ್‌ ಈಶ್ವರ್‌ ಅಭಿಪ್ರಾಯಪಟ್ಟರು.

Continue Reading

ಪ್ರಮುಖ ಸುದ್ದಿ

V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

V Somanna :ಸೋಮಣ್ಣ ಸ್ವಾಗತಕ್ಕೆ ಸಹಾಯಕ ಆಯುಕ್ತರನ್ನು ಕಳುಹಿಸಿದ್ದರು. ಅವರಿಬ್ಬರೂ ಜಿಲಾಸ್ತುವಾರಿ ಸಚಿವ ಜಿ.ಪರಮೇಶ್ವರ್ ಪ್ರವಾಸದ ಕಾರ್ಯಕ್ರಮಗಳಿಗೆ ಹಾಜರಾಗಲು ಹೋಗಿದ್ದರು. ಅವರಿಬ್ಬರ ನಡೆಯಿಂದ ಕೆಂಡಾಮಂಡಲರಾದ ಸೋಮಣ್ಣ ಫೋನ್ ಮೂಲಕವೇ ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

V Somanna
Koo

ತುಮಕೂರು: ಕೇಂದ್ರದ ಎನ್​ಡಿಎ ಸರ್ಕಾರದಲ್ಲಿ ಜಲಶಕ್ತಿ ರಾಜ್ಯ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ವಿ. ಸೋಮಣ್ಣ (V Somanna) ಅವರು ತಮ್ಮ ಸ್ವಕ್ಷೇತ್ರ ತುಮಕೂರಿಗೆ ಶುಕ್ರವಾರ ಮೊದಲ ಬಾರಿ ಆಗಮಿಸಿದ್ದರು. ಈ ವೇಳೆ ಶಿಷ್ಟಾಚಾರ ಉಲ್ಲಂಘಿಸಿ ಸ್ಥಳದಲ್ಲಿ ಹಾಜರಿರದ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಸೋಮಣ್ಣ ಅವರದ್ದು ಪೂರ್ವ ನಿಗದಿತ ಭೇಟಿಯಾಗಿದ್ದರೂ ಜಿಲ್ಲಾಧಿಕಾರಿ ಶುಭಕಲ್ಯಾಣ್, ಸಿಇಓ ಪ್ರಭು ಅವರು ಸ್ಥಳದಲ್ಲಿ ಹಾಜರಿರಲಿಲ್ಲ. ಬದಲಾಗಿ ಸೋಮಣ್ಣ ಸ್ವಾಗತಕ್ಕೆ ಸಹಾಯಕ ಆಯುಕ್ತರನ್ನು ಕಳುಹಿಸಿದ್ದರು. ಅವರಿಬ್ಬರೂ ಜಿಲಾಸ್ತುವಾರಿ ಸಚಿವ ಜಿ.ಪರಮೇಶ್ವರ್ ಪ್ರವಾಸದ ಕಾರ್ಯಕ್ರಮಗಳಿಗೆ ಹಾಜರಾಗಲು ಹೋಗಿದ್ದರು. ಅವರಿಬ್ಬರ ನಡೆಯಿಂದ ಕೆಂಡಾಮಂಡಲರಾದ ಸೋಮಣ್ಣ ಫೋನ್ ಮೂಲಕವೇ ತರಾಟೆಗೆ ತೆಗೆದುಕೊಂಡಿದ್ದಾರೆ. ವಿವಾದ ಮಾಡಿಕೊಳ್ಳಲು ಹೋಗಬೇಡಿ. ಸ್ಥಳದಲ್ಲಿ ಹಾಜರಿದ್ದು ಜನರ ಸಮಸ್ಯೆಗೆ ಕಿವಿಯಾಗಬೇಕು. ಇಲ್ಲದಿದ್ದರೆ ಜನವೇ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಕಲುಷಿತ ನೀರು ಸೇವನೆಯಿಂದ ವಾಂತಿ- ಭೇದಿ ಉಂಟಾಗಿ ಆಸ್ಪತ್ರೆಗೆ ದಾಖಲಾಗಿ ಮಧುಗಿರಿ ತಾಲೂಕಿನ ಸಂತ್ರಸ್ತರನ್ನು ಭೇಟಿಯಾದ ಸೋಮಣ್ಣ ಅವರು ಸಾಂತ್ವನ ಹೇಳಿದರು. ಈ ವೇಳೆಯೂ ಈ ವೇಳೆ ಸ್ಥಳದಲ್ಲಿ ಜಿಲ್ಲಾಧಿಕಾರಿ ಇಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಡಿಸಿ ಶುಭಕಲ್ಯಾಣ್, ಸಿಇಓ ಪ್ರಭುಗೆ ಪೋನ್ ಮಾಡಿ ವಿಚಾರಿಸಿದರು. ಪರಿಹಾರ ಹೇಳಲು ಇಲ್ಲಿ ಯಾರೂ ಇಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿಗೂ ಕುಡಿಯುವ ನೀರಿನ ಸಮಸ್ಯೆಗೆ ಏನು ಸಂಬಂಧ. ನೀರು ಕೊಡೋರು ಯಾರು ಎಂದು ಪ್ರಶ್ನಿಸಿದರು.

ಜಿಲ್ಲಾಸ್ಪತ್ರೆಗೆ ನಾನು ಬಂದರೆ ಕೇಳುವುದಕ್ಕೆ ಗತಿಯಿಲ್ಲ. ನನಗೂ ನನ್ನದೇ ಆದಂತಹ ಜವಬ್ದಾರಿಯಿದೆ. ಇಲ್ಲಿ ಒಬ್ಬ ಅಧಿಕಾರಿಯೂ ಇಲ್ಲ. ಸ್ಥಳದಲ್ಲಿ ನೀವು ಇರಬೇಕಿತ್ತು. ಎಲ್ಲೆಲ್ಲಿಗೂ ಹೋಗಿ ನನಗೆ ಟೋಪಿ ಹಾಕಬೇಡಿ. ನಾನು ಎಂಪಿಯಾಗಿ ಆಸ್ಪತ್ರೆಗೆ ಬಂದಿದ್ದೇನೆ. ನಿಮ್ಮ ಯಾವ ಅಧಿಕಾರಿಯೂ ಇಲ್ಲ ಇಲ್ಲ. ಒಬ್ಬ ವೈದ್ಯರು ಇಲ್ಲ. ಜನರಿಗೆ ಮೋಸ ಮಾಡಿದರೆ ಅವರೂ ಪಾಠ ಕಲಿಸುತ್ತಾರೆ ಎಂದು ತರಾಟೆಗೆ ತೆಗೆದುಕೊಂಡರು.

ಸಂತ್ರಸ್ತರಿಗೆ ಸಾಂತ್ವನ

ಕಲುಷಿತ ನೀರು ಕುಡಿದು ಚನ್ನೆನಹಳ್ಳಿ ಗ್ರಾಮದ ಜನರಿಗೆ ಸಚಿವ ಸೋಮಣ್ಣ ಆಸ್ಪತ್ರೆಯಲ್ಲಿ ಸಾಂತ್ವನ ಹೇಳಿದರು. ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರಿಗೆ ಸಾಂತ್ವನ ಹೇಳಿದರು. ವಿ.ಸೋಮಣ್ಣಗೆ ಜಿಲ್ಲಾ ಆರೋಗ್ಯಧಿಕಾರಿ ಓ ಡಾ ಮಂಜುನಾಥ್, ಶಾಸಕ ಜಿ.ಬಿ ಜ್ಯೋತಿ ಗಣೇಶ್, ಸುರೇಶ್ ಗೌಡ ಸಾಥ್ ಕೊಟ್ಟರು.

ಸಿದ್ದಗಂಗಾ ಮಠಕ್ಕೆ ಭೇಟಿ: ತುಮಕೂರಿಗೆ ಆಗಮಿಸಿದ್ದ ಸೋಮಣ್ಣ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ನನ್ನನ್ನ ಎನ್ ಡಿಎ ಸರ್ಕಾರದ ಸಚಿವನನ್ನಾಗಿ ಮಾಡಿದ್ದಾರೆ, ಇದಕ್ಕಾಗಿ ಪ್ರಧಾನಿ ಹಾಗೂ ಗೃಹ ಸಚಿವರಿಗೆ ಧನ್ಯವಾದಗಳು. ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರಿಗೆ ಧನ್ಯವಾದ ಹೇಳುತ್ತೇನೆ. ಇಂದು ತುಮಕೂರು ಜಿಲ್ಲೆಯ ಸ್ವಾಮಿಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇವೆ ಎಂದು ಹೇಳಿದರು.

ಮಧುಗಿರಿಯಲ್ಲಿ ಕಲುಷಿತ ನೀರು ಕುಡಿದು ಸಾವನಪ್ಪಿದ್ದಾರೆ. ಇದು ನಡೆಯಬಾರದಿತ್ತು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಿದ್ದೇನೆ. ಜಿಲ್ಲಾಧಿಕಾರಿಯಿಂದ ವರದಿ ಪಡೆಯುತ್ತೇನೆ. ನಾನೂ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸುವುದಾಗಿ ಹೇಳಿದರು.

ಇದನ್ನೂ ಓದಿ: CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

ನನಗೆ ಕೊಟ್ಟ ಖಾತೆಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಪ್ರಧಾನಿ ಮೋದಿ ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ. ಎನ್ ಡಿಎ ಒಕ್ಕೂಟದಿಂದ ರಾಷ್ಟ್ರದ ಎರಡು ಉಪಯುಕ್ತವಾದ ಜವಾಬ್ದಾರಿಗಳನ್ನು ನನಗೆ ನೀಡಿದ್ದಾರೆ. ಇಲಾಖೆಯನ್ನು ಅರ್ಥಮಾಡ್ಕೊಂಡು ನನ್ನ 45 ವರ್ಷದ ರಾಜಕೀಯ ಅನುಭವ ಬಳಸಿಕೊಂಡು ಕೆಲಸ ಮಾಡುವೆ ಎಂದು ಹೇಳಿದರು.

ಭಾನುವಾರ ಕಾರ್ಯಕರ್ತರ ಸಭೆ ಕರೆದಿದ್ದೇನೆ. ಎರಡು ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆಯಲಾಗಿದೆ ಎಂದು ನುಡಿದರು.

Continue Reading

ಉತ್ತರ ಕನ್ನಡ

Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

Self Harming : ಕುಡಿದ ಅಮಲಿನಲ್ಲಿ ಠಾಣೆಗೆ ಬಂದ ವ್ಯಕ್ತಿಯೊಬ್ಬ ಪಿಎಸ್‌ಐ ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಠಾಣೆ ಎದುರೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

VISTARANEWS.COM


on

By

Self Harming
ಸಾಂದರ್ಭಿಕ ಚಿತ್ರ
Koo

ಕಾರವಾರ: ಪಿಎಸ್ಐ ಮಾನಸಿಕ ಕಿರುಕುಳ (Self Harming) ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾದ ರಾಮನಗರ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ.

ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ ಯತ್ನಿಸಿದವರು. ಜೂಜಾಟ ಆರೋಪದಡಿ ಭಾಸ್ಕರ್‌ ವಿರುದ್ಧ ರಾಮನಗರ ಪಿಎಸ್ಐ ಬಸವರಾಜ್ ಮಗನೂರು ಪ್ರಕರಣ ದಾಖಲಿಸಿದ್ದರು. ನಿನ್ನೆ ಗುರುವಾರ ಜಮೀನು ವಿಚಾರಕ್ಕೆ ಭಾಸ್ಕರ್‌ ಮದ್ಯ ಸೇವಿಸಿ ಬೈಕ್‌ ಮೂಲಕ ಠಾಣೆಗೆ ತೆರಳಿದ್ದಾನೆ.

ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಬಸವರಾಜ್‌ ಸೂಚಿಸಿದ್ದಾರೆ. ಇಷ್ಟಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್‌ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡ ಭಾಸ್ಕರ್‌ನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿ ಆತ್ಮಹತ್ಯೆ; ಮಕ್ಕಳಿಬ್ಬರು ಅನಾಥ

ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

ಮೈಸೂರು: ಬೆಳೆ ಸಾಲ ತೀರಿಸಲಾಗದೆ ಕೆರೆಗೆ ಹಾರಿ ರೈತರೊಬ್ಬರು (Farmer Death) ಆತ್ಮಹತ್ಯೆ (Self Harming) ಮಾಡಿಕೊಂಡು ಮೃತಪಟ್ಟಿದ್ದಾರೆ. ಮೈಸೂರು (Mysuru News) ಜಿಲ್ಲೆಯ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಘಟನೆ ನಡೆದಿದೆ. ಅಣ್ಣೇಗೌಡ (57) ಮೃತ ದುರ್ದೈವಿ.

ಅಣ್ಣೇಗೌಡ ಮೂರು ಎಕರೆಯಲ್ಲಿ ತಂಬಾಕು ಮತ್ತಿತರೆ ಬೆಳೆ ಬೆಳೆಯುತ್ತಿದ್ದರು. ಕೃಷಿ ಚಟುವಟಿಕೆಗಾಗಿ ಪಂಚವಳ್ಳಿಯ ಐಒಬಿ ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಸಾಲ ಪಡೆದಿದ್ದರು. ಖಾಸಗಿ ಬ್ಯಾಂಕ್‌ನಲ್ಲಿ 14 ಲಕ್ಷ ರೂ. ಹಾಗೂ 5 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹತ್ತದ ಕಾರಣ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆರೆಯಿಂದ ರೈತನ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Farmer Death : ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

Farmer Death : ಸಾಲದ ಶೂಲಕ್ಕೆ ಸಿಲುಕಿ ಮನನೊಂದ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಕೆರೆಯಿಂದ ಮೃತದೇಹವನ್ನು ತೆರವು ಮಾಡಿದ್ದಾರೆ.

VISTARANEWS.COM


on

By

Farmer Death
Koo

ಮೈಸೂರು: ಬೆಳೆ ಸಾಲ ತೀರಿಸಲಾಗದೆ ಕೆರೆಗೆ ಹಾರಿ ರೈತರೊಬ್ಬರು (Farmer Death) ಆತ್ಮಹತ್ಯೆ (Self Harming) ಮಾಡಿಕೊಂಡು ಮೃತಪಟ್ಟಿದ್ದಾರೆ. ಮೈಸೂರು (Mysuru News) ಜಿಲ್ಲೆಯ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಘಟನೆ ನಡೆದಿದೆ. ಅಣ್ಣೇಗೌಡ (57) ಮೃತ ದುರ್ದೈವಿ.

ಅಣ್ಣೇಗೌಡ ಮೂರು ಎಕರೆಯಲ್ಲಿ ತಂಬಾಕು ಮತ್ತಿತರೆ ಬೆಳೆ ಬೆಳೆಯುತ್ತಿದ್ದರು. ಕೃಷಿ ಚಟುವಟಿಕೆಗಾಗಿ ಪಂಚವಳ್ಳಿಯ ಐಒಬಿ ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಸಾಲ ಪಡೆದಿದ್ದರು. ಖಾಸಗಿ ಬ್ಯಾಂಕ್‌ನಲ್ಲಿ 14 ಲಕ್ಷ ರೂ. ಹಾಗೂ 5 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹತ್ತದ ಕಾರಣ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆರೆಯಿಂದ ರೈತನ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : ಒಂದೇ ದಿನ ನಾಲ್ವರು ಗೃಹಿಣಿಯರ ಆತ್ಮಹತ್ಯೆ; ಅವರಲ್ಲಿಬ್ಬರು ಯೋಧರ ಪತ್ನಿಯರು

6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

ಮೈಸೂರು: ಮದುವೆಯಾದ ಆರೇ ತಿಂಗಳಿಗೆ ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ (Self Harming) ಪತ್ತೆಯಾಗಿದ್ದಾಳೆ. ಮೈಸೂರಿನ ಮಾನಸಿ ನಗರ ಬಿಎಸ್ಎನ್ಎಲ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಸೌಮ್ಯಾಶ್ರೀ (27) ಮೃತ ದುರ್ದೈವಿ.

ಆರು ತಿಂಗಳ ಹಿಂದೆ ಮೈಸೂರಿನ ಮಂಜುನಾಥ್ ಎಂಬುವರ ಜತೆ ಸೌಮ್ಯಾಶ್ರೀ ಮದುವೆಯಾಗಿದ್ದರು. ಸೌಮ್ಯಾಶ್ರೀ ತಂದೆ ಶ್ರೀಧರ್ ಬೆಂಗಳೂರಿನಿಂದ ಮೈಸೂರಿಗೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಮದುವೆ ಆದ ಕೆಲವೇ ದಿನಗಳಲ್ಲಿ ಸೌಮ್ಯಾಳ ನಡತೆ ಮೇಲೆ ಪತಿ ಮಂಜುನಾಥ್ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

ಈ ಕುರಿತು ಸೌಮ್ಯಾ ಹೆತ್ತವರಿಗೆ ಮಾಹಿತಿ ನೀಡಿದ್ದಳು. ಹೀಗಾಗಿ ಮಂಜುನಾಥ್ ಹಾಗೂ ಅವರ ಮನೆಯವರೆಲ್ಲ ಸೇರಿ ಸೌಮ್ಯಾಳನ್ನ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಗಳ ಶವ ಕಂಡು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self Harming
ಸೌಮ್ಯಳ ಶವ ಕಂಡು ಪೋಷಕರ ಆಕ್ರಂದನ

ಸ್ಥಳಕ್ಕೆ ಮೈಸೂರಿನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Aliens
ವಿಜ್ಞಾನ15 seconds ago

Aliens: ಏಲಿಯನ್‌ಗಳು ಅನ್ಯಗ್ರಹ ಜೀವಿಗಳಲ್ಲ; ಈ ಭೂಮಿಯ ರಹಸ್ಯ ನಿವಾಸಿಗಳು! ಹಾರ್ವರ್ಡ್ ವಿಜ್ಞಾನಿಗಳ ಸಂಶೋಧನೆ

Actress Siri marriage to actor prabhakar
ಬಿಗ್ ಬಾಸ್45 seconds ago

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Yusuf Pathan
ಕ್ರೀಡೆ14 mins ago

Yusuf Pathan: ಜಮೀನು ಒತ್ತುವರಿ ಆರೋಪ; ನೂತನ ಸಂಸದ ಯೂಸುಫ್ ಪಠಾಣ್​ಗೆ ನೋಟಿಸ್

Pradeep Eshwar
ಪ್ರಮುಖ ಸುದ್ದಿ17 mins ago

Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

OTT Release
Latest19 mins ago

OTT Release: ಈ ವಾರ ಒಟಿಟಿಯಲ್ಲಿ ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು

Actor Darshan Assistant Malli missing case
ಸ್ಯಾಂಡಲ್ ವುಡ್25 mins ago

Actor Darshan: ಹಲವು ವರ್ಷಗಳಿಂದ ದರ್ಶನ್ ಆಪ್ತ ʻಮಲ್ಲಿʼನಾಪತ್ತೆ; ರೇಣುಕಾ ಸ್ವಾಮಿಯ ಗತಿಯೇ ಆಯ್ತಾ?

V Somanna
ಪ್ರಮುಖ ಸುದ್ದಿ37 mins ago

V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

Self Harming
ಉತ್ತರ ಕನ್ನಡ40 mins ago

Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

Shakib Al Hasan
ಕ್ರೀಡೆ58 mins ago

Shakib Al Hasan: ನಿವೃತ್ತಿಯಾಗಿ ಎಂದು ಲೇವಡಿ ಮಾಡಿದ ಸೆಹವಾಗ್​ಗೆ ತಕ್ಕ ತಿರುಗೇಟು ನೀಡಿದ ಬಾಂಗ್ಲಾ ನಾಯಕ

Farmer Death
ಮೈಸೂರು1 hour ago

Farmer Death : ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌