Viral Video: ಟರ್ಕಿ ಭೂಕಂಪನದ ಭಯಾನಕ ದೃಶ್ಯಗಳು; ಕುಸಿದು ಬಿದ್ದ ಅಪಾರ್ಟ್​ಮೆಂಟ್ - Vistara News

ವಿದೇಶ

Viral Video: ಟರ್ಕಿ ಭೂಕಂಪನದ ಭಯಾನಕ ದೃಶ್ಯಗಳು; ಕುಸಿದು ಬಿದ್ದ ಅಪಾರ್ಟ್​ಮೆಂಟ್

Turkey Earthquake: ಸ್ಯಾನ್ಲಿಯುರ್ಫಾ ನಗರದಲ್ಲಿ ಅಪಾರ್ಟ್​ಮೆಂಟ್​ವೊಂದು ನೋಡನೋಡುತ್ತಿದ್ದಂತೆ ಸಂಪೂರ್ಣವಾಗಿ ಕುಸಿದು, ಕ್ಷಣ ಮಾತ್ರದಲ್ಲಿ ಧ್ವಂಸಗೊಂಡಿದೆ. ಕಟ್ಟಡ ಬಿದ್ದ ಪರಿಣಾಮ ಆ ಪ್ರದೇಶವೆಲ್ಲ ಧೂಳುಮಯವಾಗಿತ್ತು.

VISTARANEWS.COM


on

Turkey Earthquake videos Viral
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟರ್ಕಿ ಮತ್ತು ನೆರೆರಾಷ್ಟ್ರ ಸಿರಿಯಾದ ವಾಯುವ್ಯ ಭಾಗದಲ್ಲಿ ಭೂಮಿ ಭಯಾನಕವಾಗಿ ಕಂಪಿಸಿದ ಪರಿಣಾಮ 4000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಸೋಮವಾರ ಮುಂಜಾನೆ, ಸಂಜೆ ಮತ್ತು ರಾತ್ರಿ ಮೂರು ಬಾರಿಯೂ ಪ್ರಬಲ ಭೂಕಂಪವೇ ಆಗಿದೆ. ಟರ್ಕಿ-ಸಿರಿಯಾಗಳಲ್ಲಿ ಮನೆ/ಬಹುಮಹಡಿ ಕಟ್ಟಡಗಳೆಲ್ಲ ಹಾಗಾಗೇ ಕುಸಿದು ಬೀಳುತ್ತಿವೆ. ನೋಡನೋಡುತ್ತಿದ್ದಂತೆ ಮರಗಳು/ವಿದ್ಯುತ್​ ಕಂಬಗಳು ಧರೆಗೆ ಉರುಳುತ್ತಿವೆ. ಹೀಗೆ ಕುಸಿದು ಬೀಳುವ ಬಹುಮಹಡಿ ಕಟ್ಟಡಗಳು, ಅಂಗಡಿಗಳು, ಮನೆಗಳಡಿ ಸಿಲುಕಿ ಮಾನವರು ನಲುಗಿ ಜೀವ ಬಿಡುತ್ತಿದ್ದಾರೆ. ಕಂಪಿಸಿ ಬಾಯ್ಬಿಟ್ಟ ಭೂಮಿ ಅಕ್ಷರಶಃ ಟರ್ಕಿ/ಸಿರಿಯಾದ ಹಲವು ಭಾಗಗಳನ್ನು ನುಂಗಿ ಹಾಕಿದೆ. ಈ ದಾರುಣ ಭೂಕಂಪದ ಹಲವು ಭಯಾನಕ ವಿಡಿಯೊಗಳು ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ.

ಸ್ಯಾನ್ಲಿಯುರ್ಫಾ ನಗರದಲ್ಲಿ ಅಪಾರ್ಟ್​ಮೆಂಟ್​ವೊಂದು ನೋಡನೋಡುತ್ತಿದ್ದಂತೆ ಸಂಪೂರ್ಣವಾಗಿ ಕುಸಿದು, ಕ್ಷಣ ಮಾತ್ರದಲ್ಲಿ ಧ್ವಂಸಗೊಂಡಿದೆ. ಕಟ್ಟಡ ಬಿದ್ದ ಪರಿಣಾಮ ಆ ಪ್ರದೇಶವೆಲ್ಲ ಧೂಳುಮಯವಾಗಿತ್ತು. ಒಂದಷ್ಟು ಜನರು ಕೂಗುವುದನ್ನು ವಿಡಿಯೊದಲ್ಲಿ ಕೇಳಬಹುದು. ಟರ್ಕಿಯ ಕಹ್ರಮನ್ಮಾರಾಸ್​​ನಲ್ಲಿ ಕೂಡ ಹಲವು ಕಟ್ಟಡಗಳು ಕುಸಿದು ಬಿದ್ದ ದೃಶ್ಯವನ್ನು ನೋಡಬಹುದು. ಗಾಜಿಯಾಂಟೆಪ್​ ನಗರದ ಸಮೀಪದ ಅಂಗಡಿಯೊಂದರ ಬಳಿ ಹಾಕಿದ್ದ ಸಿಸಿಟಿವಿಯಲ್ಲಿ ಕೂಡ ಪ್ರಬಲ ಭೂಕಂಪದ ಪರಿಣಾಮದ ದೃಶ್ಯ ಸೆರೆಯಾಗಿದೆ. ಇಲ್ಲಿವೆ ನೋಡಿ ಕೆಲವು ದೃಶ್ಯಾವಳಿಗಳು..

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Tax Returns: ಹಣದುಬ್ಬರದಿಂದ ಪಾಕಿಸ್ತಾನವು ತತ್ತರಿಸಿ ಹೋಗಿದೆ. ಒಂದೆಡೆ, ಪಾಕಿಸ್ತಾನಕ್ಕೆ ಬೇರೆ ದೇಶಗಳಿಂದ, ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ಹಣಕಾಸು ನೆರವು ಸಿಗುತ್ತಿಲ್ಲ. ಇನ್ನೊಂದೆಡೆ, ಹಣದುಬ್ಬರ ನಿಯಂತ್ರಣ ಮಾಡಲು ಆಗುತ್ತಿಲ್ಲ. ಹಾಗಾಗಿ, ಪಾಕಿಸ್ತಾನದ ನಾಗರಿಕರು ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಪಾವತಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಹಣದುಬ್ಬರ ಏರಿಕೆಯು ಅವರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಇದರ ಬೆನ್ನಲ್ಲೇ, ಸರ್ಕಾರವು ಜನರಿಗೆ ತೆರಿಗೆ ಎಂಬ ಗುರಾಣಿ ಬಳಸಲು ಮುಂದಾಗಿದೆ.

VISTARANEWS.COM


on

Tax Returns
Koo

ಇಸ್ಲಾಮಾಬಾದ್:‌ ಉಗ್ರರ ಪೋಷಣೆ, ಹಣಕಾಸು ನೆರವು, ಅಸಮರ್ಥ ನಾಯಕತ್ವ, ಕೊರೊನಾ ಬಿಕ್ಕಟ್ಟು ಸೇರಿ ಹಲವು ಕಾರಣಗಳಿಂದ ಪಾಕಿಸ್ತಾನ (Pakistan) ದಿವಾಳಿಯಾಗಿದೆ. ಇದೇ ಕಾರಣಕ್ಕಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ಎದುರು ಹಣಕ್ಕಾಗಿ ಭಿಕ್ಷಾ ಪಾತ್ರೆ ಹಿಡಿದು ನಿಂತಿದೆ. ಸಾಲ ಪಡೆಯಲು ಹೆಣಗಾಡುತ್ತಿದೆ. ಹಣದುಬ್ಬರದ ಏರಿಕೆಯಿಂದಾಗಿ ಜನರ ಜೀವನವೂ ಸಂಕಷ್ಟಕ್ಕೆ ಸಿಲುಕಿದೆ. ಇದರ ಬೆನ್ನಲ್ಲೇ, ದೇಶದ ನಾಗರಿಕರ ವಿರುದ್ಧ ಪಾಕಿಸ್ತಾನವು ತೆರಿಗೆಯ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಆದಾಯ ತೆರಿಗೆ ರಿಟರ್ನ್ಸ್‌ (Tax Returns) ಸಲ್ಲಿಸದ 5 ಲಕ್ಷ ಜನರ ಸಿಮ್‌ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲು ತೀರ್ಮಾನಿಸಿದೆ.

ಪಾಕಿಸ್ತಾನದ ಖಜಾನೆಯಲ್ಲಿ ಹಣವಿಲ್ಲ. ಇದರಿಂದ ಸುಗಮವಾಗಿ ಆಡಳಿತ ನಡೆಸುವುದು ಬಿಡಿ ನೌಕರರಿಗೆ ಸಂಬಳ ಕೊಡಲೂ ಆಗುತ್ತಿಲ್ಲ. ಹಾಗಾಗಿ, ಜನರಿಂದ ತೆರಿಗೆ ಸಂಗ್ರಹಿಸಲು ಪಾಕಿಸ್ತಾನವು ಮುಂದಾಗಿದೆ. ಇದರ ಭಾಗವಾಗಿಯೇ, 2023ರಲ್ಲಿ ಐಟಿ ರಿಟರ್ನ್ಸ್‌ ಸಲ್ಲಿಸದ 5,06,671 ಜನರ ಸಿಮ್‌ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲು ಪಾಕಿಸ್ತಾನದ ಫೆಡರಲ್‌ ಬೋರ್ಡ್‌ ಆಫ್‌ ರೆವೆನ್ಯೂ (FBR) ನಿರ್ಧರಿಸಿದೆ. ಅವರು ಐಟಿ ರಿಟರ್ನ್ಸ್‌ ಸಲ್ಲಿಸಿದ ಬಳಿಕವೇ ಸಿಮ್‌ಕಾರ್ಡ್‌ಗಳನ್ನು ಸಕ್ರಿಯಗೊಳಿಸಲಾಗುವುದು ಎಂದು ಕೂಡ ತಿಳಿಸಿದೆ.

ಸಿಮ್‌ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವ ಕುರಿತು ಪಾಕಿಸ್ತಾನದ ಟೆಲಿಕಮ್ಯುನಿಕೇಷನ್‌ ಅಥಾರಿಟಿಗೆ (PTA) ನಿರ್ದೇಶನ ನೀಡಲಾಗಿದೆ. ಸಿಮ್‌ ಕಾರ್ಡ್‌ ಬಂದ್‌ ಮಾಡಿರುವ ಕುರಿತು ಮೇ 15ರೊಳಗೆ ವರದಿ ನೀಡುವಂತೆಯೂ ಸೂಚಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದಲ್ಲಿ ತೆರಿಗೆ ಪಾವತಿಸದ ಸುಮಾರು 24 ಲಕ್ಷ ತೆರಿಗೆದಾರರನ್ನು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಆರಂಭಿಕ ಹಂತದಲ್ಲಿ 5 ಲಕ್ಷ ತೆರಿಗೆದಾರರ ಸಿಮ್‌ ಕಾರ್ಡ್‌ ನಿಷ್ಕ್ರಿಯಗೊಳಿಸಲು ತೀರ್ಮಾನಿಸಲಾಗಿದೆ.

ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ

ಪಾಕಿಸ್ತಾನದಲ್ಲಿ ಹಣದುಬ್ಬರದ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯು ಗಗಣಕ್ಕೇರಿದೆ. ಒಂದು ಲೀಟರ್‌ ಹಾಲಿಗೆ 212 ರೂ., ಕೆ.ಜಿ ಅಕ್ಕಿಗೆ 330 ರೂ., ಒಂದು ಕೆ.ಜಿ ಸೇಬಿಗೆ 300 ರೂ., ಒಂದು ಕೆ.ಜಿ ಟೊಮ್ಯಾಟೊಗೆ 125 ರೂ., ಒಂದು ಕೆ.ಜಿ ಈರುಳ್ಳಿ 125 ರೂ., ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. ಇದೆ. ದಿನೇದಿನೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇರುವುದು ಪಾಕಿಸ್ತಾನದ ನಾಗರಿಕರನ್ನು ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ನಂತರದ ದುಸ್ಥಿತಿ ಹೀಗೆಯೇ ಮುಂದುವರಿದಿರುವುದು ಅವರನ್ನು ಆತಂಕಕ್ಕೆ ದೂಡಿದೆ.

ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯಲು ಹೆಣಗಾಡುತ್ತಿದೆ. ಈಗಾಗಲೇ ಐಎಂಎಫ್‌ 1.10 ಶತಕೋಟಿ ಡಾಲರ್‌ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಆದರೆ, ಮುಂದಿನ ಮೂರು ವರ್ಷಗಳವರೆಗೆ 6 ಶತಕೋಟಿ ಡಾಲರ್‌ ಸಾಲ ನೀಡಿ ಎಂಬುದಾಗಿ ಪಾಕಿಸ್ತಾನ ಮನವಿ ಮಾಡುತ್ತಿದೆ. ಆದರೆ, ಪಾಕ್‌ನಲ್ಲಿ ದಿನೇದಿನೆ ಹಣದುಬ್ಬರದ ಏರಿಕೆಯಾಗುತ್ತಿರುವ ಕಾರಣ ಸಾಲ ನೀಡಲು ಐಎಂಎಫ್‌ ಹಿಂದೇಟು ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Narendra Modi:”ಇಲ್ಲಿ ಕಾಂಗ್ರೆಸ್‌ ಸಾಯುತ್ತಿದೆ…ಅಲ್ಲಿ ಪಾಕಿಸ್ತಾನ ಅಳುತ್ತಾ ಪ್ರಾರ್ಥಿಸುತ್ತಿದೆ”-ಮೋದಿ ಅಟ್ಯಾಕ್‌

Continue Reading

ದೇಶ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕದ ಕಮಿಷನ್‌ ಆನ್‌ ಇಂಟರ್‌ನ್ಯಾಷನಲ್‌ ರಿಲಿಜಿಯಸ್‌ ಫ್ರೀಡಂ ಸಂಸ್ಥೆಯು ವರದಿ ಬಿಡುಗಡೆ ಮಾಡಿದೆ. ಇದರಲ್ಲಿ, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಆದರೆ, ಅಮೆರಿಕದ ವರದಿಗೆ ಕೇಂದ್ರ ಸರ್ಕಾರವು ಅಸಮಾಧಾನ ವ್ಯಕ್ತಪಡಿಸಿದೆ. ಇದು ರಾಜಕೀಯ ಪ್ರೇರಿತ ವರದಿ ಎಂದು ತಿರುಗೇಟು ನೀಡಿದೆ.

VISTARANEWS.COM


on

Religious Freedom
Koo

ನವದೆಹಲಿ: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಸರ್ಕಾರದ ಕಮಿಷನ್‌ ಆನ್‌ ಇಂಟರ್‌ನ್ಯಾಷನಲ್‌ ರಿಲಿಜಿಯಸ್‌ ಫ್ರೀಡಂ (USCIRF Report) ವರದಿ ಬಿಡುಗಡೆ ಮಾಡಿದೆ. ಅದರಲ್ಲೂ, ಭಾರತ ಸೇರಿ 17 ದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ (Religious Freedom) ಕುರಿತು ಕಳವಳ ವ್ಯಕ್ತಪಡಿಸಿದೆ. ಇದಕ್ಕೆ ಭಾರತ ಸರ್ಕಾರವು ತಿರುಗೇಟು ನೀಡಿದ್ದು, “ಯುಎಸ್‌ಸಿಐಆರ್‌ಎಫ್‌ ವರದಿಯು ಪಕ್ಷಪಾತ ಹಾಗೂ ರಾಜಕೀಯ ಪ್ರೇರಿತವಾಗಿ ತಯಾರಿಸಿದ್ದಾಗಿದೆ” ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ಅಮೆರಿಕದ ವರದಿಯಲ್ಲಿ ಏನಿದೆ?

ಅಮೆರಿಕ ಸರ್ಕಾರದ ಆಯೋಗ ರಚಿಸಿದ ವರದಿಯಲ್ಲಿ ಭಾರತದ ಕುರಿತು ಉಲ್ಲೇಖವಿದೆ. “ಭಾರತ ಸೇರಿ 17 ದೇಶಗಳಲ್ಲಿ ಜನರು ತಮ್ಮ ಧರ್ಮವನ್ನು ಅನುಸರಿಸುವ, ಧಾರ್ಮಿಕ ವಿಚಾರಗಳ ಮೇಲೆ ನಂಬಿಕೆ ಇರಿಸುವ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತಿದೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಭಾರತದಲ್ಲಂತೂ ತಾರತಮ್ಯದಿಂದ ಕೂಡಿರುವ ರಾಷ್ಟ್ರೀಯವಾದ ನೀತಿಗಳ ಹೇರಿಕೆಯಿಂದಾಗಿ ಧಾರ್ಮಿಕ ನಂಬಿಕೆ ಹೊಂದಿದವರಿಗೆ ಹಿನ್ನಡೆಯಾಗುತ್ತಿದೆ” ಎಂಬುದಾಗಿ ವರದಿ ತಿಳಿಸಿದೆ.

“ಭಾರತದಲ್ಲಿ ರಾಷ್ಟ್ರೀಯವಾದಿ ನೀತಿಗಳ ಹೇರಿಕೆಯಿಂದಾಗಿ ಧರ್ಮಗಳಲ್ಲಿ ನಂಬಿಕೆ ಇಟ್ಟುಕೊಂಡವರಿಗೆ ಸಮಸ್ಯೆಯಾಗಿದೆ. ದ್ವೇಷ ಕಾರುವ ವಾಕ್ಚಾತುರ್ಯ, ಕೋಮುವಾದದಿಂದ ಕೂಡಿದ ಹಿಂಸಾಚಾರಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ಧಾರ್ಮಿಕ ವಿಚಾರಗಳನ್ನು ಇಟ್ಟುಕೊಂಡವರಿಗೆ ಅವುಗಳನ್ನು ಪಾಲಿಸಲು ಕಷ್ಟವಾಗುತ್ತಿದೆ. ಇದು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದಕ್ಕೆ ಉದಾಹರಣೆಯಾಗಿದೆ” ಎಂಬುದಾಗಿ ಅಮೆರಿಕದ ಆಯೋಗವು ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾರ ತಿರುಗೇಟು

ಅಮೆರಿಕದ ವರದಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಅವರು ತಿರುಗೇಟು ನೀಡಿದ್ದಾರೆ. “ಯುಎಸ್‌ಸಿಐಆರ್‌ಎಫ್‌ ಎಂಬುದು ಪಕ್ಷಪಾತದ ಧೋರಣೆಗಳಿಂದ ಕೂಡಿದ ಸಂಘಟನೆಯಾಗಿದ್ದು, ರಾಜಕೀಯದಿಂದ ಪ್ರೇರೇಪಿತವಾಗಿದೆ. ಇದಕ್ಕೂ ಮೊದಲು ಕೂಡ ಇಂತಹ ವರದಿಗಳನ್ನು ಅದು ಪ್ರಕಟಿಸಿತ್ತು. ಭಾರತದ ಕುರಿತು ಷಡ್ಯಂತ್ರದಿಂದ ಕೂಡಿದ ವರದಿ ಬಿಡುಗಡೆ ಮಾಡುವುದು ಅದಕ್ಕೆ ರೂಢಿಯೇ ಆಗಿದೆ. ಯುಎಸ್‌ಸಿಐಆರ್‌ಎಫ್‌ ವರದಿಯಲ್ಲಿ ಯಾವುದೇ ಹುರುಳಿಲ್ಲ” ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

Continue Reading

ವೈರಲ್ ನ್ಯೂಸ್

Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

Viral News: ಕೇರಳ ಪ್ರವಾಸೋದ್ಯಮ ಇಲಾಖೆಯು ಬಸ್ ಬ್ರ್ಯಾಂಡಿಂಗ್ ಮೂಲಕ ಕೇರಳದ ಹಿರಿಮೆಯನ್ನು ವಿದೇಶಗಳಲ್ಲಿ ಪಸರಿಸಲು ಮುಂದಾಗಿದೆ. ದೂರದ ಇಂಗ್ಲೆಂಡ್‌ನಲ್ಲಿ ಇದೀಗ ಕೇರಳದ ಪ್ರಾಕೃತಿಕ ಸೌಂದರ್ಯ ಬಹು ಜನಪ್ರಿಯ. ಅದಕ್ಕೆ ಕಾರಣವಾಗಿದ್ದು ಲಂಡನ್‌ನ ಡಬಲ್ ಡೆಕ್ಕರ್ ಬಸ್‌ನ ಅಲಂಕರಿಸಿರುವ ಕೇರಳದ ಅದ್ಭುತ ದೃಶ್ಯಗಳು. ಸದ್ಯ ಬಸ್‌ ರಸ್ತೆಯಲ್ಲಿ ಸಂಚರಿಸುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Viral News
Koo

ಲಂಡನ್‌: ದೇವರ ಸ್ವಂತ ನಾಡು (God’s Own Country) ಎಂದು ಕರೆಯಲ್ಪಡುವ ಕೇರಳ (Kerala) ಪ್ರಾಕೃತಿಕವಾಗಿ ಸಂಪತ್ಭರಿತ ರಾಜ್ಯ. ಇದೇ ಕಾರಣಕ್ಕೆ ದೇಶ-ವಿದೇಶದ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಇದೀಗ ಕೇರಳ ಪ್ರವಾಸೋದ್ಯಮ ಇಲಾಖೆಯು ಬಸ್ ಬ್ರ್ಯಾಂಡಿಂಗ್ ಮೂಲಕ ಕೇರಳದ ಹಿರಿಮೆಯನ್ನು ವಿದೇಶಗಳಲ್ಲಿ ಪಸರಿಸಲು ಮುಂದಾಗಿದೆ. ದೂರದ ಇಂಗ್ಲೆಂಡ್‌ನಲ್ಲಿ ಇದೀಗ ಕೇರಳದ ಪ್ರಾಕೃತಿಕ ಸೌಂದರ್ಯ ಬಹು ಜನಪ್ರಿಯ. ಅದಕ್ಕೆ ಕಾರಣವಾಗಿದ್ದು ಲಂಡನ್‌ನ ಡಬಲ್ ಡೆಕ್ಕರ್ ಬಸ್‌ನ ಅಲಂಕರಿಸಿರುವ ಕೇರಳದ ಅದ್ಭುತ ದೃಶ್ಯಗಳು. ಸದ್ಯ ಬಸ್‌ ರಸ್ತೆಯಲ್ಲಿ ಸಂಚರಿಸುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದೆ.

ಡಬಲ್ ಡೆಕ್ಕರ್ ಬಸ್‌ನ ಸುತ್ತ ಕೇರಳದ ಸುಂದರ ಹಿನ್ನೀರಿನ ದೃಶ್ಯಗಳನ್ನು ಅಳವಡಿಸಲಾಗಿದೆ. ಈ ಮನವೋಹಕ ದೃಶ್ಯವನ್ನು ನೋಡಿದ ಎಂತಹವರೂ ತಲೆದೂಗಲೇಬೇಕು. ಕೇರಳದತ್ತ ಆಕರ್ಷಿತರಾಗಲೇಬೇಕು. ರಾಜ್ಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಈ ಜಾಹೀರಾತು ಈಗಾಗಲೇ ಹಲವರ ಗಮನ ಸೆಳೆದಿದೆ. ವಿಶೇಷವಾಗಿ ಬೇಸಿಗೆ ರಜಾದಿನಗಳಲ್ಲಿ ಪ್ರವಾಸಿಗರನ್ನು ಇನ್ನಷ್ಟು ರಾಜ್ಯದತ್ತ ಸೆಳೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೊವನ್ನು ಈಗಾಗಲೇ ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ಕೇರಳ ಪ್ರವಾಸೋದ್ಯಮವನ್ನು ಉತ್ತೇಜಿಸುವ ಜಾಹೀರಾತು ಹೊತ್ತ ಬಸ್‌ ದೂರದ ಲಂಡನ್‌ನಲ್ಲಿ ಸಂಚರಿಸುತ್ತಿರುವುದನ್ನು ನೋಡಿ ಅನೇಕರು ರೋಮಾಂಚಿತರಾಗಿದ್ದಾರೆ. ಬಸ್‌ನಲ್ಲಿ ಚಿತ್ರೀಕರಿಸಿರುವ ಹಿನ್ನೀರಿನ ದೃಶ್ಯಗಳನ್ನು ತೋರಿಸುವ ಮೂಲಕ ವಿಡಿಯೊ ಆರಂಭವಾಗುತ್ತದೆ. ಬಳಿಕ ವಿಡಿಯೊ ಬಸ್‌ನ ಸಂಪೂರ್ಣ ಚಿತ್ರಣವನ್ನು ಒದಗಿಸುತ್ತದೆ. ಅಲಪ್ಪುಳದ ಹೌಸ್‌ ಬೋಟ್‌, ಸ್ನೇಕ್ ಬೋಟ್ ರೇಸ್‌ ಮತ್ತು ನದಿ, ಹಸಿರಿನ ಚಿತ್ರದೊಂದಿಗೆ ಈ ಬಸ್‌ ಕೇರಳ ಪ್ರವಾಸೋದ್ಯಮದ ಲಾಂಛನವನ್ನೂ ಒಳಗೊಂಡಿದೆ. ಬಸ್‌ನ ಒಂದು ಬದಿಯಲ್ಲಿ #TravelForGood ಎಂದು ಹ್ಯಾಶ್ ಬರೆಯಲಾಗಿದೆ.

ನೆಟ್ಟಿಗರ ಪ್ರತಿಕ್ರಿಯೆ

ವಿಡಿಯೊ ನೋಡಿದ ನೆಟ್ಟಿಗರು ಖುಷಿಯ ಉದ್ಘಾರ ತೆಗೆದಿದ್ದಾರೆ. ʼʼವಾವ್‌! ಇಡೀ ಆಲಪ್ಪುಳವೇ ಈ ಒಂದು ಬಸ್‌ನಲ್ಲಿದೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಆಳಪ್ಪುಳ ಮತ್ತು ಕುಟ್ಟನಾಡು ತನ್ನ ಸೌಂದರ್ಯದಿಂದ ವಿದೇಶಿಗರನ್ನೂ ಸೆಳೆಯುತ್ತದೆʼʼ ಎಂದಿದ್ದಾರೆ ಮತ್ತೊಬ್ಬರು. ಇನ್ನೊಬ್ಬರು ಕಮೆಂಟ್‌ ಮಾಡಿ ʼʼಪ್ರಪಂಚದಾದ್ಯಂತದ ಜನರು ಭಾರತವನ್ನು ಕೇರಳದ ಮೂಲಕ ಗುರುತಿಸುತ್ತಿರುವುದು ಹೆಮ್ಮೆಯ ಸಂಗತಿʼʼ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಮಗದೊಬ್ಬರು ಈ ಜಾಹೀರಾತಿನ ಯೋಚನೆಯನ್ನು ಶ್ಲಾಘಿಸಿದ್ದಾರೆ. ʼʼಅತ್ಯುತ್ತಮ ಯೋಜನೆ ಇದು. ಕೇರಳ ಪ್ರವಾಸೋದ್ಯಮಕ್ಕೆ ಇಲಾಖೆಗೆ ಹ್ಯಾಟ್‌ಆಫ್‌ʼʼ ಎಂದಿದ್ದಾರೆ.

ಇದನ್ನೂ ಓದಿ: Vande Bharat Metro: ಮೊದಲ ವಂದೇ ಭಾರತ್‌ ಮೆಟ್ರೋ ಸಂಚಾರಕ್ಕೆ ಸಿದ್ಧ; ಇಲ್ಲಿದೆ ವಿಡಿಯೊ

ಕೇರಳ ಪ್ರವಾಸೋದ್ಯ,ಮ ಸಚಿವ ಪಿ.ಎ..ಮೊಹಮ್ಮದ್‌ ರಿಯಾಸ್‌ ಈ ವಿಡಿಯೊವನ್ನು ಶೇರ್‌ ಮಾಡಿದ್ದಾರೆ. ʼʼಕೇರಳ ಟೂರಿಸಂನ ಹೊಸ ಅಭಿಯಾನ ಇದು. ನಮ್ಮ ಆಲಪ್ಪುಳ ಮತ್ತು ಹೌಸ್‌ಬೋಟ್‌ ಲಂಡನ್‌ನ ಬಸ್ಸಿನಲ್ಲಿ ರಾರಾಜಿಸುತ್ತಿದೆ. ಇನ್ನಷ್ಟು ದೇಶಗಳಲ್ಲಿ ಈ ರೀತಿಯ ಜಾಹೀರಾತು ಅಭಿಯಾನ ಮುಂದುವರಿಸಲಿದ್ದೇವೆʼʼ ಎಂದು ತಿಳಿಸಿದ್ದಾರೆ. ಕೇರಳದ ಈ ರೀತಿಯ ಸೃಜನಶೀಲತೆ ಹಿಂದೆಯೂ ವಿದೇಶಿಗರ ಗಮನ ಸೆಳೆದಿತ್ತು. 2018ರಲ್ಲಿಯೂ ಲಂಡನ್‌ನ ಡಬಲ್‌ ಡೆಕ್ಕರ್‌ ಬಸ್‌ನಲ್ಲಿ ಕೇರಳದ ಪ್ರವಾಸಿ ತಾಣಗಳನ್ನು ಪ್ರಚುರಪಡಿಸಲಾಗಿತ್ತು. ಒಟ್ಟಿನಲ್ಲಿ ಕೇರಳದ ಈ ಐಡಿಯ ಸೂಪರ್‌ ಎಂದಿದ್ದಾರೆ ನೆಟ್ಟಿಗರು.

Continue Reading

ವಿದೇಶ

Gangster Goldy Brar:”ಶೂಟೌಟ್‌ನಲ್ಲಿ ಸತ್ತಿದ್ದು ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಅಲ್ಲ”…ವದಂತಿಗೆ ತೆರೆ

Gangster Goldy Brar: ಕ್ಯಾಲಿಫೋರ್ನಿಯಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗೋಲ್ಡಿ ಬಾರ್‌ ಸಾವನ್ನಪ್ಪಿದ್ದಾನೆ ಎನ್ನಲಾದ ಸುದ್ದಿ ಸಂಪೂರ್ಣವಾಗಿ ಸುಳ್ಳು. ಘಟನೆಯಲ್ಲಿ ಫೇರ್‌ಮಾಂಟ್‌ ಮತ್ತು ಹಾಲ್ಟ್‌ ಅವೆನ್ಯೂ ಎಂಬಲ್ಲಿ ನಡೆದ ಶೂಟೌಟ್‌ನಲ್ಲಿ ಇಬ್ಬರು ಬಲಿಯಾದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Gangster Goldy Brar
Koo

ವಾಷಿಂಗ್ಟನ್: ಪಂಜಾಬ್​ ಗಾಯಕ ಸಿಧು ಮೂಸೆವಾಲಾ (Sidhu Moosewala) ಹತ್ಯೆಯ ರೂವಾರಿ, ಕೆನಡಾ ಮೂಲದ ಗ್ಯಾಂಗ್​ಸ್ಟರ್​ ಗೋಲ್ಡಿ ಬ್ರಾರ್ (Gangster Goldy Brar) ಅಮೆರಿಕದಲ್ಲಿ ಹತ್ಯೆ ಸುದ್ದಿಗೆ ಟ್ವಿಸ್ಟ್‌ ಸಿಕ್ಕಿದ್ದು, ಇದು ಸುಳ್ಳು ಸುದ್ದಿ ಎಂದು ಅಮೆರಿಕ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ ಫ್ರೆಸನೋ ಪೊಲೀಸರು ಈ ಬಗ್ಗೆ ಸಾಮಾಜಿಕ ಜಾಲತಾಣ(Social Media) ದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕ್ಯಾಲಿಫೋರ್ನಿಯಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗೋಲ್ಡಿ ಬಾರ್‌ ಸಾವನ್ನಪ್ಪಿದ್ದಾನೆ ಎನ್ನಲಾದ ಸುದ್ದಿ ಸಂಪೂರ್ಣವಾಗಿ ಸುಳ್ಳು. ಘಟನೆಯಲ್ಲಿ ಫೇರ್‌ಮಾಂಟ್‌ ಮತ್ತು ಹಾಲ್ಟ್‌ ಅವೆನ್ಯೂ ಎಂಬಲ್ಲಿ ನಡೆದ ಶೂಟೌಟ್‌ನಲ್ಲಿ ಇಬ್ಬರು ಬಲಿಯಾದ್ದಾರೆ.

ಘಟನೆ ಬೆನ್ನಲ್ಲೇ ಮೃತರಲ್ಲಿ ಒಬ್ಬ ಗೋಲ್ಡಿ ಬ್ರಾರ್‌ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಸ್ಪಷ್ಟನೆ ನೀಡಿರುವ ಪೊಲೀಸರು, ಮೃತರ ಫೊಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹರಡಿರುವ ಬೆನ್ನಲ್ಲೇ ಬಗ್ಗೆ ಪ್ರಪಂಚದ ಮೂಲೆ ಮೂಲೆಗಳಿಂದ ಅಧಿಕೃತ ಮಾಹಿತಿಗಾಗಿ ಮನವಿ ಬಂದಿತ್ತು. ಈ ಸುಳ್ಳು ಸುದ್ದಿಯನ್ನು ಹರಡಿದವರು ಯಾರು ಎಂಬ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಇಲ್ಲ. ಈ ವಿಚಾರ ಪ್ರಪಂಚಾದ್ಯಂತ ಕಾಡ್ಗಿಚ್ಚಿನಂತೆ ಹರಡಿತ್ತು. ಆದರೆ ಇದು ಸುಳ್ಳು ಸುದ್ದಿ. ಮೃತ ಖಂಡಿತವಾಗಿಯೂ ಗೋಲ್ಡಿ ಬ್ರಾರ್‌ ಅಲ್ಲ ಎಂದು ಪೊಲೀಸ್‌ ಅಧಿಕಾರಿ ಲೆಫ್ಟಿನೆಂಟ್‌ ವಿಯಮ್‌ ಡೂಲೆ ಹೇಳಿದ್ದಾರೆ.

ಇನ್ನು ಮೃತ ವ್ಯಕ್ತಿಯನ್ನು 37 ವರ್ಷದ ಗ್ಸೇವಿಯರ್‌ ಗಾಲ್ಡ್‌ನೇ ಎಂದು ಗುರುತಿಸಲಾಗಿದ್ದು, ಗುಂಡಿನ ದಾಳಿಯಲ್ಲಿ ಈತ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿರುವ ಹೋಟೆಲ್‌ ಫೇರ್‌ಮೌಂಟ್‌ನಲ್ಲಿ ಲಖಬೀರ್‌ ಗ್ಯಾಂಗ್‌ನ ಸದಸ್ಯರು ಗುಂಡಿನ ದಾಳಿ ನಡೆಸಿದ್ದ ಗಂಭೀರವಾಗಿ ಗಾಯಗೊಂಡಿದ್ದ ಗೋಲ್ಡಿ ಬ್ರಾರ್‌ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ನಿನ್ನೆ ವರದಿಯಾಗಿತ್ತು.

ಗೋಲ್ಡಿ ಬ್ರಾರ್ ಎಂದೇ ಕುಖ್ಯಾತನಾಗಿರುವ ಸತೀಂದರ್ಜಿತ್ ಸಿಂಗ್, ವಿದ್ಯಾರ್ಥಿ ವೀಸಾ ಮೂಲಕ 2007ರಲ್ಲಿ ಕೆನಾಡಗೆ ಹೋಗಿದ್ದ. ಕೊಲೆ, ಸುಲಿಗೆ ಸೇರಿದಂತೆ ತನ್ನ ಕ್ರಿಮಿನಲ್ ಚಟುವಟಿಕೆಗಳನ್ನು ಕೆನಡಾದಲ್ಲಿದ್ದುಕೊಂಡೇ ನಡೆಸುತ್ತಿದ್ದ. ಗಡಿಯಾಚೆಗಿನ ಏಜೆನ್ಸಿಯ ಬೆಂಬಲದೊಂದಿಗೆ ಬ್ರಾರ್ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತು ರಾಷ್ಟ್ರೀಯವಾದಿ ಪರ ನಾಯಕರಿಗೆ ಬೆದರಿಕೆ ಕರೆಗಳನ್ನು ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

ಗೋಲ್ಡಿ ಬ್ರಾರ್ ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ ವಸ್ತುಗಳನ್ನು ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದ. ಭಾರತದಲ್ಲಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಈತನ ಪಾಲಿದೆ. ಬ್ರಾರ್ ಪಂಜಾಬ್‌ನ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದ. ವಿಧ್ವಂಸಕ ಕೃತ್ಯಗಳು, ಭಯೋತ್ಪಾದನಾ ಘಟಕಗಳನ್ನು ಹೆಚ್ಚಿಸುವುದು, ಉದ್ದೇಶಿತ ಹತ್ಯೆಗಳು ಮತ್ತು ಇತರ ದೇಶವಿರೋಧಿ ಚಟುವಟಿಕೆಗಳಿಗೆ ಈತ ಉತ್ತೇಜನ ನೀಡುತ್ತಿದ್ದ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 2022ರ ಮೇ 29ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿದ್ದು, ಈತನೇ ಮಾಸ್ಟರ್‌ಮೈಂಡ್‌ ಎಂದು ತಿಳಿದುಬಂದಿದೆ. ವರ್ಷಾರಂಭದಲ್ಲಿಯೇ ಈತನನ್ನು ಭಯೋತ್ಪಾದಕ ಎಂದು ಭಾರತ ಸರ್ಕಾರ ಘೋಷಿಸಿತ್ತು. ಸಿಧು ಹತ್ಯೆಯ ಮಾಸ್ಟರ್​ ಮೈಂಡ್​ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಎಂಬುದು ಸ್ಪಷ್ಟವಾಗಿದೆ. ಬಿಷ್ಣೋಯಿಯನ್ನು ಈಗಾಗಲೇ ಎನ್​ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಈ ಬ್ರಾರ್​ ಕೂಡ ಅದೇ ಬಿಷ್ಣೋಯಿ ಗ್ಯಾಂಗ್​​ನವನು.

Continue Reading
Advertisement
Lok Sabha Election
ಪ್ರಮುಖ ಸುದ್ದಿ4 hours ago

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Tsering Namgyal
ದೇಶ4 hours ago

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

IPL 2024
ಪ್ರಮುಖ ಸುದ್ದಿ4 hours ago

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

Ragini Khanna
ಸಿನಿಮಾ4 hours ago

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Rain News
ಪ್ರಮುಖ ಸುದ್ದಿ4 hours ago

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

Election campaign for Congress candidate Samyukta Patil in Prajadhwani convention at Bagalkot
ರಾಜಕೀಯ4 hours ago

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election
ದೇಶ5 hours ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ5 hours ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ5 hours ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ5 hours ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ9 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ23 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20245 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌