IND VS AUS: ಬಾರ್ಡರ್​-ಗವಾಸ್ಕರ್ ಸರಣಿಯಲ್ಲಿ ಭಾರತಕ್ಕೆ ಪಂತ್ ಅವರ​ ಕೊರಗು ಕಾಡಲಿದೆ: ಚಾಪೆಲ್ - Vistara News

ಕ್ರಿಕೆಟ್

IND VS AUS: ಬಾರ್ಡರ್​-ಗವಾಸ್ಕರ್ ಸರಣಿಯಲ್ಲಿ ಭಾರತಕ್ಕೆ ಪಂತ್ ಅವರ​ ಕೊರಗು ಕಾಡಲಿದೆ: ಚಾಪೆಲ್

ಪ್ರತಿಷ್ಠಿತ ಬಾರ್ಡರ್​-ಗವಾಸ್ಕರ್(Border-Gavaskar)​ ಟ್ರೋಫಿ ಟೆಸ್ಟ್​ ಸರಣಿಯಲ್ಲಿ ಟೀಮ್​ ಇಂಡಿಯಾಕ್ಕೆ ರಿಷಭ್​ ಪಂತ್​ ಅವರ ಅನುಪಸ್ಥಿತಿ ಕಾಡಲಿದೆ ಎಂದು ಇಯಾನ್ ಚಾಪೆಲ್ ಹೇಳಿದ್ದಾರೆ.

VISTARANEWS.COM


on

Rishabh Pant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ(IND VS AUS) ವಿರುದ್ಧದ ನಾಲ್ಕು ಪಂದ್ಯಗಳ ಪ್ರತಿಷ್ಠಿತ ಬಾರ್ಡರ್​-ಗವಾಸ್ಕರ್(Border-Gavaskar)​ ಟ್ರೋಫಿ ಟೆಸ್ಟ್​ ಸರಣಿ ಫೆಬ್ರವರಿ 9ರಿಂದ ನಾಗ್ಪುರದಲ್ಲಿ ಆರಂಭವಾಗಲಿದೆ. ಪಂದ್ಯ ಆರಂಭಕ್ಕೂ ಮುನ್ನ ಆಸೀಸ್​ ಮಾಜಿ ಕ್ರಿಕೆಟ್​ ದಿಗ್ಗಜ ಇಯಾನ್ ಚಾಪೆಲ್(IAN CHAPPELL) ಅವರು ಭಾರತ ತಂಡಕ್ಕೆ ರಿಷಭ್​ ಪಂತ್(RISHABH PANT)​ ಅವರ ಕೊರಗು ಕಾಡಲಿದೆ ಎಂದು ಹೇಳಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಆಯೋಜಿಸಿದ್ದ ವರ್ಚುವಲ್ ಸಂದರ್ಶನದಲ್ಲಿ ಮಾತನಾಡಿದ ಆಸೀಸ್​ ತಂಡದ ಮಾಜಿ ನಾಯಕ ಇಯಾನ್ ಚಾಪೆಲ್, ಈ ಹಿಂದೆ ಆಸ್ಟ್ರೇಲಿಯಾ ಎದುರಿನ ಟೆಸ್ಟ್‌ ಸರಣಿಗಳಲ್ಲಿ ಪಂತ್​ ಅವರ ಆಟ ಅಮೋಘವಾಗಿತ್ತು. ಅವರು ಈ ಸರಣಿಯಲ್ಲಿ ಇದ್ದಿದ್ದರೆ ಆಸ್ಟ್ರೇಲಿಯಾ ಆಟಗಾರರಿಗೆ ನಿದ್ದೆಯೇ ಬರುತ್ತಿರಲಿಲ್ಲ. ಏಕೆಂದರೆ, ರಿಷಭ್ ಪಂತ್​ ಒಮ್ಮೆ ಕ್ರೀಸ್‌ನಲ್ಲಿ ಹೊಂದಿಕೊಂಡರೆ ಅವರನ್ನು ನಿಯಂತ್ರಿಸುವುದು ಕಷ್ಟ ಎಂದು ಹೇಳಿದರು.

ಇದನ್ನೂ ಓದಿ IND vs AUS : ಶ್ರೀಲಂಕಾದ ಮಾಜಿ ಕ್ರಿಕೆಟಿಗ ಜಯವರ್ಧನೆ ಪ್ರಕಾರ ಟೆಸ್ಟ್​ ಸರಣಿಯ ಟ್ರೋಫಿ ಗೆಲ್ಲುವವರು ಯಾರು?

ಭಾರತ ತಂಡವೇ ಫೇವರಿಟ್

ಕಾರು ಅಘಘಾತದಲ್ಲಿ ಗಾಯಕೊಂಡು ಚೇತರಿಕೆ ಕಾಣುತ್ತಿರುವ ರಿಷಭ್​ ಪಂತ್​ ಶೀಘ್ರ ಗುಣಮುಖರಾಗಿ ಮತ್ತೆ ಕ್ರಿಕೆಟ್​ಆಡುವಂತಾಗಲಿ. ಅವರ ಆಟವನ್ನು ಕ್ರಿಕೆಟ್​ ಜಗತ್ತು ತುಂಬಾ ಮಿಸ್​ ಮಾಡಿಕೊಳ್ಳುತ್ತಿದೆ. ಬಾರ್ಡರ್​-ಗವಾಸ್ಕರ್​ ಟ್ರೋಫಿಯಲ್ಲಿ ಅವರ ಅನುಪಸ್ಥಿತಿ ಇದ್ದರೂ ಭಾರತ ತಂಡವೇ ಫೇವರಿಟ್ ಆಗಿದೆ. ಏಕೆಂದರೆ ಸ್ಪಿನ್​ ಪಿಚ್​ಗಳಲ್ಲಿ ಆಸೀಸ್​ ಆಟಗಾರರು ಈ ಹಿಂದಿನಿಂದಲೂ ಉತ್ತಮ ದಾಖಲೆ ಹೊಂದಿಲ್ಲ ಎಂದು ಚಾಪೆಲ್​ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024: ಭಾರತ-ಅರ್ಜೆಂಟೀನಾ ಹಾಕಿ ಪಂದ್ಯ ವೀಕ್ಷಿಸಿದ ರಾಹುಲ್​ ದ್ರಾವಿಡ್​

Paris Olympics 2024: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿರುವ ಇಂಡಿಯಾ ಹೌಸ್‌ನಲ್ಲಿ ಸೋಮವಾರ ‘ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌; ಹೊಸ ಯುಗದ ಉದಯ’ ವಿಷಯದ ಕುರಿತು ಏರ್ಪಡಿಸಲಾಗಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡ ಬಳಿಕ ದ್ರಾವಿಡ್​ ಹಾಕಿ ಪಂದ್ಯವನ್ನು ವೀಕ್ಷಿಸಿದ್ದಾರೆ.

VISTARANEWS.COM


on

Paris Olympics 2024
Koo

ಪ್ಯಾರಿಸ್​: ಭಾರತ ಕ್ರಿಕೆಟ್​ ತಂಡದ ಮಾಜಿ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ(Paris Olympics 2024) ಸೋಮವಾರ ನಡೆದಿದ್ದ ಭಾರತ ಮತ್ತು ಅರ್ಜೆಂಟೀನಾ ವಿರುದ್ಧ ಹಾಕಿ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ಪೋಟೊ ಇದೀಗ ವೈರಲ್​ ಆಗಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿರುವ ಇಂಡಿಯಾ ಹೌಸ್‌ನಲ್ಲಿ ಸೋಮವಾರ ‘ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌; ಹೊಸ ಯುಗದ ಉದಯ’ ವಿಷಯದ ಕುರಿತು ಏರ್ಪಡಿಸಲಾಗಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡ ಬಳಿಕ ದ್ರಾವಿಡ್​ ಹಾಕಿ ಪಂದ್ಯವನ್ನು ವೀಕ್ಷಿಸಿದ್ದಾರೆ. ಇದೇ ವೇಳೆ ಮುಂದಿನ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಸೇರ್ಪಡೆಯಾಗದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದರು.

“ಮುಂದಿನ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಅದ್ಭುತವಾಗಿ ನಡೆಯಬೇಕು. ಭಾರತದ ಪುರುಷ ಮತ್ತು ಮಹಿಳೆಯರ ತಂಡಗಳೆರಡು ಚಿನ್ನ ಗೆಲ್ಲಬೇಕೆಂಬುದು ನನ್ನ ಕನಸು. ನಾನು ಯಾವುದಾದರೊಂದು ಸ್ಥಾನದ ಮೂಲಕ ಒಲಿಂಪಿಕ್ಸ್‌ನಲ್ಲಿ ಹಾಜರಿರುತ್ತೇನೆ. ಕೊನೆಗೆ ಮಾಧ್ಯಮ ಪ್ರತಿನಿಧಿಯಾಗಿಯಾದರೂ ಬರುತ್ತೇನೆ’ ಎಂದು ಹೇಳಿ ದ್ರಾವಿಡ್ ನಕ್ಕರು. ಲಾಸ್ ಏಂಜಲೀಸ್‌ನಲ್ಲಿ 2028ರಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಕೂಡ ಸೇರ್ಪಡೆಗೊಂಡಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸಲು ಇದರ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯನ್ನು ಮಾಡಿದೆ. ಉದ್ಘಾಟನ ಸಮಾರಂಭದ ಬಳಿಕ ಮಾತನಾಡಿದ್ದ ಈ ನೀತಾ ಅಂಬಾನಿ, ಭಾರತ ಒಲಿಂಪಿಕ್ಸ್‌ ಆತಿಥ್ಯ ವಹಿಸುವ ದಿನ ದೂರವಿಲ್ಲ ಎಂದರು.

ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರವೂ ಪ್ರಮುಖವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ(International Olympic Committee Session) ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.

ಇದನ್ನೂ ಓದಿ Kerala Cyclist Reaches Paris: ನೀರಜ್​ ಚೋಪ್ರಾಗೆ ಬೆಂಬಲ ಸೂಚಿಸಲು ಬರೋಬ್ಬರಿ 22 ಸಾವಿರ ಕಿ.ಮೀ ಸೈಕಲ್​ ತುಳಿದು ಪ್ಯಾರಿಸ್​ ತಲುಪಿದ ಕೇರಳದ ಅಭಿಮಾನಿ

ಐಪಿಎಲ್​ ಕೋಚಿಂಗ್​ನತ್ತ ಮುಖ ಮಾಡಿದ ದ್ರಾವಿಡ್​


ಟಿ20 ವಿಶ್ವಕಪ್​ ಬಳಿಕ ಭಾರತ ತಂಡದ ಕೋಚಿಂಗ್​ ಹುದ್ದೆಯಿಂದ ನಿವೃತ್ತಿ ಹೊಂದಿರುವ ದ್ರಾವಿಡ್​ ಮುಂದಿನ ಐಪಿಎಲ್​ನಲ್ಲಿ ಈ ಹಿಂದೆ ಕೋಚಿಂಗ್​ ನಡೆಸಿದ್ದ ರಾಜಸ್ಥಾನ್ ರಾಯಲ್ಸ್​(Rajasthan Royals) ತಂಡದ ಪರವೇ ಮತ್ತೆ ಕೋಚಿಂಗ್​ ನಡೆಸಲಿದ್ದಾರೆ ಎನ್ನಲಾಗಿದೆ.

ರಾಜಸ್ಥಾನ್ ರಾಯಲ್ಸ್ ಪರ ನಾಯಕರಾಗಿ ದ್ರಾವಿಡ್ ಒಮ್ಮೆ ತಂಡವನ್ನು ಪ್ಲೇ ಆಪ್​ಗೆ ಕೊಂಡೊಯ್ದಿದ್ದರು. ಚಾಂಪಿಯನ್ಸ್ ಲೀಗ್​ನಲ್ಲಿ ತಂಡ ಫೈನಲ್​ಗೇರಿತ್ತು. ರಾಜಸ್ಥಾನ್ ತಂಡದ ಪರ 40 ಪಂದ್ಯಗಳಲ್ಲಿ ನಾಯಕರಾಗಿದ್ದ ದ್ರಾವಿಡ್ 23 ಗೆಲುವು ಕಂಡಿದ್ದಾರೆ. ಎರಡು ಸೀಸನ್​ಗಳಲ್ಲಿ ರಾಜಸ್ಥಾನ್ ತಂಡದ ಕೋಚ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು. ಅಂಡರ್ 19 ತಂಡದ ಕೋಚ್ ಆದ ಕಾರಣ ಐಪಿಎಲ್​ ಕೋಚಿಂಗ್​ನಿಂದ ದೂರ ಉಳಿದಿದ್ದರು. ಇದಾದ ಬಳಿಕ ಟೀಮ್​ ಇಂಡಿಯಾ ಕೋಚ್​ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎಲ್ಲ ಹುದ್ದೆಗಳಿಂದ ನಿವೃತ್ತಿ ಹೊಂದಿರುವ ಅವರು ಐಪಿಎಲ್​ ಕೋಚಿಂಗ್​ ಕಡೆ ಗಮನಹರಿಸಿದ್ದಾರೆ.

Continue Reading

ಕ್ರೀಡೆ

SL vs IND 3rd T20I: ಇಂದು ಅಂತಿಮ ಟಿ20; ವೈಟ್‌ವಾಶ್‌ ಭೀತಿಯಿಂದ ಪಾರಾದೀತೇ ಶ್ರೀಲಂಕಾ?

SL vs IND 3rd T20I: ನೂತನ ನಾಯಕ ಸೂರ್ಯಕುಮಾರ್​ ಯಾದವ್​ ತಮ್ಮ ಎಂದಿನ ಹೊಡಿಬಡಿ ಶೈಲಿಯಲ್ಲೇ ಬ್ಯಾಟಿಂಗ್​ ನಡೆಸುತ್ತಾ ತಂಡಕ್ಕೆ ನೆರವಾಗುತ್ತಿದ್ದಾರೆ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಕೂಡ ಉತ್ತಮ ಬ್ಯಾಟಿಂಗ್​ ಲಯದಲ್ಲಿದ್ದಾರೆ.

VISTARANEWS.COM


on

SL vs IND 3rd T20I
Koo

ಪಲ್ಲೆಕೆಲೆ: ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿರುವ ಭಾರತ, ಅಂತಿಮ ಪಂದ್ಯವನ್ನು(SL vs IND 3rd T20I) ಆಡಲು ಸಜ್ಜಾಗಿದೆ. ಇತ್ತಂಡಗಳ ಈ ಅಂತಿಮ ಮುಖಾಮುಖಿ ಇಂದು(ಮಂಗಳವಾರ) ನಡೆಯಲಿದೆ. ಈ ಪಂದ್ಯವನ್ನು ಗೆದ್ದು ವೈಟ್‌ವಾಶ್‌ ಸಾಧಿಸುವುದು ಭಾರತದ ಗುರಿ.

ಭಾನುವಾರ ನಡೆದಿದ್ದ ದ್ವಿತೀಯ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತ್ತು. ಇದೀಗ ಇಂದು ನಡೆಯುವ ಪಂದ್ಯಕ್ಕೂ ಭಾರೀ ಮಳೆ ಮುನ್ಸೂಚನೆ ಇದೆ. ಕಳೆದ ಮಳೆಪೀಡಿತ ದ್ವಿತೀಯ ಪಂದ್ಯವನ್ನು ಭಾರತ 7 ವಿಕೆಟ್‌ಗಳಿಂದ ಗೆದ್ದು ಸರಣಿ ಗೆಲುವು ಸಾಧಿಸಿತ್ತು. ಯುವ ಭಾರತ ತಂಡ ಎಲ್ಲ ವಿಭಾಗಗಳಲ್ಲೂ ಬಲಿಷ್ಠವಾಗಿ ಗೋಚರಿಸಿದೆ. ಆದರೆ, ಸಂಜು ಸ್ಯಾಮ್ಸನ್​ ತಮಗೆ ಸಿಕ್ಕ ಅವಕಾಶವನ್ನು ಮತ್ತೆ ಕೈಚೆಲ್ಲಿದ್ದಾರೆ. ಕಳೆದ ಪಂದ್ಯಲ್ಲಿ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದ್ದರು. ಒಂದೊಮ್ಮೆ ಅಂತಿಮ ಪಂದ್ಯದಲ್ಲಿಯೂ ಆಡುವ ಅವಕಾಶ ಸಿಕ್ಕಿ ಇದನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲರಾದರೆ ಮತ್ತೆ ಅವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಕಷ್ಟಸಾಧ್ಯ.

ಇದನ್ನೂ ಓದಿ Paris Olympics: ಮನು ಭಾಕರ್​-ಸರಬ್ಜೊತ್‌ ಸಿಂಗ್​ ಕಂಚಿನ ನಿರೀಕ್ಷೆ; ಭಾರತದ ಇಂದಿನ ಸ್ಪರ್ಧೆಗಳ ವಿವರ ಹೀಗಿದೆ

ನೂತನ ನಾಯಕ ಸೂರ್ಯಕುಮಾರ್​ ಯಾದವ್​ ತಮ್ಮ ಎಂದಿನ ಹೊಡಿಬಡಿ ಶೈಲಿಯಲ್ಲೇ ಬ್ಯಾಟಿಂಗ್​ ನಡೆಸುತ್ತಾ ತಂಡಕ್ಕೆ ನೆರವಾಗುತ್ತಿದ್ದಾರೆ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಕೂಡ ಉತ್ತಮ ಬ್ಯಾಟಿಂಗ್​ ಲಯದಲ್ಲಿದ್ದಾರೆ. ಬೌಲಿಂಗ್​ನಲ್ಲಿ ಮೊಹಮ್ಮದ್​ ಸಿರಾಜ್​ ಹೊರತುಪಡಿಸಿ ಉಳಿದೆಲ್ಲ ಬೌಲರ್​ಗಳು ಸಂಘಟಿತ ಪ್ರದರ್ಶನ ತೋರುತ್ತಿದ್ದಾರೆ. ಸಿರಾಜ್​ ಆಡಿದ 2 ಪಂದ್ಯಗಳಲ್ಲಿಯೂ ಸರಿಯಾಗಿ ದಂಡಿಸಿಕೊಂಡಿದ್ದರು. ಹೀಗಾಗಿ ಅವರನ್ನು ಈ ಪಂದ್ಯದಿಂದ ಕೈಬಿಟ್ಟು ಖಲೀಲ್ ಅಹ್ಮದ್ ಅವರನ್ನು ಆಡಿಸುವ ಸಾಧ್ಯತೆ ಇದೆ. ಏಕದಿನ ಸರಣಿ ಆಡುವ ನಿಟ್ಟಿನಲ್ಲಿ ಗಿಲ್​ಗೆ ಈ ಪಂದ್ಯಕ್ಕೆ ವಿಶ್ರಾಂತಿ ನೀಡಬಹುದು. ಕುತ್ತಿಗೆ ನೋವಿಗೊಳಗಾಗಿದ್ದ ಕಾರಣ ಗಿಲ್​ ದ್ವಿತೀಯ ಪಂದ್ಯದಿಂದ ಹೊರಗುಳಿದಿದ್ದರು.

ಸಂಭಾವ್ಯ ತಂಡಗಳು


ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೀ), ಕುಸಲ್ ಪೆರೇರಾ, ಕಮಿಂದು ಮೆಂಡಿಸ್, ಚರಿತ್ ಅಸಲಂಕ (ನಾಯಕ), ದಸುನ್ ಶನಕ, ವನಿಂದು ಹಸರಂಗ, ರಮೇಶ್ ಮೆಂಡಿಸ್, ಮಹೀಶ್ ತೀಕ್ಷಣ, ಮತೀಶ ಪತಿರಣ, ಅಸಿತ ಫೆರ್ನಾಂಡೊ.

ಭಾರತ: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಭ್ ಪಂತ್ (ವಿಕೀ), ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ಅಕ್ಷರ್​ ಪಟೇಲ್, ಅರ್ಶದೀಪ್​ ಸಿಂಗ್, ರವಿ ಬಿಷ್ಣೋಯ್, ಖಲೀಲ್​ ಅಹ್ಮದ್​.

ಅಭ್ಯಾಸ ಆರಂಭಿಸಿದ ರೋಹಿತ್‌, ಕೊಹ್ಲಿ


ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಭಾರತ ತಂಡ ಲಂಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಆಗಸ್ಟ್​ 2ರಂದು ಮೊದಲ ಪಂದ್ಯ ನಡೆಯಲಿದೆ. ಈ ಸರಣಿಯನ್ನಾಡಲು ನಾಯಕ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಕೆ,ಎಲ್​ ರಾಹುಲ್​, ಜಸ್​ಪ್ರೀತ್​ ಬುಮ್ರಾ ಸೇರಿ ಕೆಲ ಆಟಗಾರರು ಈಗಾಗಲೇ ಲಂಕಾ ತಲುಪಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ. ಭಾರತದ ಏಕದಿನ ತಂಡದ ಸದಸ್ಯರು ಭಾನುವಾರ ಕೊಲಂಬೊಗೆ ಆಗಮಿಸಿದ್ದರು.

Continue Reading

ಕ್ರೀಡೆ

IPL 2025: ಆರ್​ಸಿಬಿ ಇನ್​ಸ್ಟಾಗ್ರಾಮ್​ ಖಾತೆ ಅನ್​ಫಾಲೋ ಮಾಡಿದ ಮ್ಯಾಕ್ಸ್​ವೆಲ್; ಕಾರಣವೇನು?

IPL 2025: ಈ ಬಾರಿಯ ಆವೃತ್ತಿಯಲ್ಲಿ ಮ್ಯಾಕ್ಸ್​ವೆಲ್​ ಆರ್​ಸಿಬಿ ಪರ ಅತ್ಯಂತ ಕಳಪೆ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆಡಿದ 10 ಪಂದ್ಯಗಳಲ್ಲಿ ಗಳಿಸಿದ್ದು ಕೇಲವ 52 ರನ್​ ಮಾತ್ರ. ಹೀಗಾಗಿ ಈ ಬಾರಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಅಸಾಧ್ಯ.

VISTARANEWS.COM


on

IPL 2025
Koo

ಬೆಂಗಳೂರು: ಮುಂದಿನ ಆವೃತ್ತಿಯ ಐಪಿಎಲ್(IPL 2025)​ ಆರಂಭಕ್ಕೂ ಮುನ್ನ ಆಟಗಾರರ ಮೆಗಾ ಹರಾಜು(IPL Mega Auction 2025) ನಡೆಯಲಿದೆ. ಡಿಸೆಂಬರ್​ನಲ್ಲಿ ಈ ಹರಾಜು ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಎಲ್ಲ ಫ್ರಾಂಚೈಸಿಗಳು ಬಿಸಿಸಿಐ ಜತೆ ನಾಳೆ(ಬುಧವಾರ) ಸಭೆ ನಡೆಸಲಿದ್ದು ಎಷ್ಟು ಆಟಗಾರರನ್ನು ರೀಟೈನ್​ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಿದೆ ಎನ್ನಲಾಗಿದೆ. ಈಗಾಗಲೇ ಆರ್​ಸಿಬಿ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಂಡು ಉಳಿದೆಲ್ಲ ಆಟಗಾರರನ್ನು ತಂಡದಿಂದ ಕೈ ಬಿಡಲಿದೆ ಎಂದು ವರದಿಯಾದೆ. ಇದರ ಬೆನ್ನಲ್ಲೇ ಆರ್​ಸಿಬಿ ಆಟಗಾರ ಗ್ಲೆನ್​ ಮ್ಯಾಕ್ಸ್​ವೆಲ್(Glenn Maxwell)​ ಅವರು ಆರ್​ಸಿಬಿ(RCB) ಇನ್​ಸ್ಟಾಗ್ರಾಮ್​(RCB On Instagram) ಖಾತೆಯನ್ನು ಅನ್​ಫಾಲೋ ಮಾಡಿದ್ದಾರೆ.

ಮೂಲಗಳ ಪ್ರಕಾರ ಆರ್​ಸಿಬಿ ವಿರಾಟ್​ ಕೊಹ್ಲಿ, ಇಂಗ್ಲೆಂಡ್​ನ ವಿಲ್ ಜಾಕ್ಸ್​ ಮತ್ತು ಮೊಹಮ್ಮದ್​ ಸಿರಾಜ್​ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ. ನಾಯಕ ಫಾಫ್​ ಡು ಪ್ಲೆಸಿಸ್, ಕ್ಯಾಮರೂನ್​ ಗ್ರೀನ್​ ಸೇರಿ ಉಳಿದೆಲ್ಲ ಆಟಗಾರರನ್ನು​ ಕೂಡ ಕೈಬಿಡಲಿದೆ ಎಂದು ಮೂಲಗಳು 2 ದಿನಗಳ ಹಿಂದೆ ಮಾಹಿತಿ ನೀಡಿತ್ತು. ಈ ಬೆಳವಣಿಗೆ ಕಂಡು ಬಂದ ಬೆನ್ನಲ್ಲೇ ಗ್ಲೆನ್​ ಮ್ಯಾಕ್ಸ್​ವೆಲ್​ ಆರ್​ಸಿಬಿಯ ಅಧಿಕೃತ ​ಸ್ಟಾಗ್ರಾಮ್​ ಖಾತೆಯನ್ನು ಅನ್​ಫಾಲೋ ಮಾಡಿದ್ದಾರೆ. ಇದನ್ನು ನೋಡುವಾಗ ಮ್ಯಾಕ್ಸ್​ವೆಲ್​ಗೆ ಆರ್​ಸಿಬಿಯಿಂದ ಗೇಟ್​ ಪಾಸ್​ ಸಿಕ್ಕಿರುವುದು ಬಹುತೇಕ ಖಚಿತ ಎನ್ನುವಂತಿದೆ.

ಈ ಬಾರಿಯ ಆವೃತ್ತಿಯಲ್ಲಿ ಮ್ಯಾಕ್ಸ್​ವೆಲ್​ ಆರ್​ಸಿಬಿ ಪರ ಅತ್ಯಂತ ಕಳಪೆ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆಡಿದ 10 ಪಂದ್ಯಗಳಲ್ಲಿ ಗಳಿಸಿದ್ದು ಕೇಲವ 52 ರನ್​ ಮಾತ್ರ. ಹೀಗಾಗಿ ಈ ಬಾರಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಅಸಾಧ್ಯ.

ಆರ್​ಸಿಬಿ ಸೇರಲಿದ್ದಾರಾ ರಾಹುಲ್​?


ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ಬೇಸರಗೊಂಡಿರುವ ಕೆ.ಎಲ್​ ರಾಹುಲ್ ಈ ಬಾರಿ ಲಕ್ನೋ ತಂನಡ ತೊರೆಯುವುದು ಖಚಿತವಾಗಿದೆ. ಮೂಲಗಳ ಪ್ರಕಾರ ಅವರು ಆರ್​ಸಿಬಿ ತಂಡ ಸೇರಲಿದ್ದಾರೆ ಎನ್ನಲಾಗಿದೆ. ಆರ್​ಸಿಬಿ ಪರ ಆಡುವುದು ಕೂಡ ಅವರ ಬಯಕೆಯಾಗಿದೆ. ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆ.ಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. 

ಇದನ್ನೂ ಓದಿ IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರಮುಖ ಬೇಡಿಕೆ ಮುಂದಿಟ್ಟ ಫ್ರಾಂಚೈಸಿಗಳು

ಕಳೆದ ಮೂರು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ. ಈ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ಮೂಲಕ 700ಕ್ಕೂ ಅಧಿಕ ರನ್​ ಕಲೆ ಹಾಕಿ ಟೂರ್ನಿಯ ಅತ್ಯಧಿಕ ಸ್ಕೋರ್​ ಎನಿಸಿಕೊಂಡಿದ್ದರು.

Continue Reading

ಕ್ರೀಡೆ

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

Paris Olympics 2024 : 1900ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಾರ್ಮನ್ ಪ್ರಿಚರ್ಡ್ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಅಲ್ಲಿಂದ ಭಾರತ ಸಾಧನೆ ಮಾಡಿಲ್ಲ. ಮಂಗಳವಾರ ಅರ್ಜೆಂಟೀನಾ ವಿರುದ್ಧದ ಕಠಿಣ ಹೋರಾಟದ ಪಂದ್ಯವನ್ನು ಡ್ರಾದ ನಂತರ ಪುರುಷರ ಹಾಕಿ ತಂಡವು ಐರ್ಲೆಂಡ್ ವಿರುದ್ಧ ಆಡಲಿದೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್​ನಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಒಲಿಂಪಿಕ್ಸ್​ನಲ್ಲಿ (Paris Olympics 2024) ನಾಲ್ಕನೇ ದಿನದಲ್ಲಿ ಭಾರತ ಅಥ್ಲೀಟ್​ಗಳು ಕೆಲವು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತ ಇದುವರೆಗೆ ಕೇವಲ 1 ಕಂಚಿನ ಪದಕವನ್ನು ಮಾತ್ರ ಪಡೆದಿದೆ. ಆದಾಗ್ಯೂ ಇನ್ನೂ ಪದಕಗಳನ್ನು ಗೆಲ್ಲುವ ಭರವಸೆಯಿದೆ. ಹೀಗಾಗಿ ಕ್ರೀಡಾಭಿಮಾನಿಗಳಲ್ಲಿ ಹೆಚ್ಚು ಕುತೂಹಲ ಸೃಷ್ಟಿಯಾಗಿದೆ. ಪ್ರಮುಖವಾಗಿ ಒಂದು ಪದಕದ ಸ್ಪರ್ಧೆಯೂ ಮಂಗಳವಾರ ನಡೆಯಲಿದೆ.

ಒಲಿಂಪಿಕ್ಸ್​​ನ 4ನೇ ದಿನವಾದ ಜುಲೈ 30ರಂದು (Paris Olympics 2024) ಭಾರತದ ಶೂಟರ್ ಮನು ಭಾಕರ್ ಇತಿಹಾಸ ನಿರ್ಮಿಸುವ ಗುರಿ ಹೊಂದಿದ್ದಾರೆ. ಪ್ಯಾರಿಸ್ ಕ್ರೀಡಾಕೂಟದಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಪದಕ (ಕಂಚು) ಗೆದ್ದ ಭಾಕರ್, 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಮತ್ತೊಂದು ಕಂಚಿನ ಪದಕಕ್ಕಾಗಿ ಸ್ಪರ್ಧಿಸಲಿದ್ದಾರೆ. ಸ್ವಾತಂತ್ರ್ಯದ ನಂತರ ಒಲಿಂಪಿಕ್ ಕ್ರೀಡಾಕೂಟದ ಒಂದೇ ಆವೃತ್ತಿಯಲ್ಲಿ ಯಾವುದೇ ಭಾರತೀಯ ಕ್ರೀಡಾಪಟು ಎರಡು ಪದಕಗಳನ್ನು ಗೆದ್ದಿಲ್ಲ. ಹೀಗಾಗಿ ಮನು ಗೆದ್ದರೆ ದೊಡ್ಡ ಸಾಧನೆಯಾಗಲಿದೆ.

1900ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಾರ್ಮನ್ ಪ್ರಿಚರ್ಡ್ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಅಲ್ಲಿಂದ ಭಾರತ ಸಾಧನೆ ಮಾಡಿಲ್ಲ. ಮಂಗಳವಾರ ಅರ್ಜೆಂಟೀನಾ ವಿರುದ್ಧದ ಕಠಿಣ ಹೋರಾಟದ ಪಂದ್ಯವನ್ನು ಡ್ರಾದ ನಂತರ ಪುರುಷರ ಹಾಕಿ ತಂಡವು ಐರ್ಲೆಂಡ್ ವಿರುದ್ಧ ಆಡಲಿದೆ.

ಭಾಕರ್ ಮತ್ತು ಸರಬ್ಜೋತ್ ಭಾರತದ ಪದಕಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದರೆ, ಬಿಲ್ಲುಗಾರ ಧೀರಜ್ ಬೊಮ್ಮದೇವರ ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಭಜನ್ ಕೌರ್ ಮತ್ತು ಅಂಕಿತಾ ಭಕತ್ ಮಹಿಳೆಯರ ವೈಯಕ್ತಿಕ ಎಲಿಮಿನೇಷನ್ ಸುತ್ತುಗಳಲ್ಲಿ ಸ್ಪರ್ಧಿಸಲಿದ್ದಾರೆ.

ಪುರುಷರ ಟ್ರ್ಯಾಪ್ ಶೂಟಿಂಗ್ ಅರ್ಹತೆಯ 2 ನೇ ದಿನದಂದು ಟ್ರ್ಯಾಪ್ ಶೂಟರ್ ಪೃಥ್ವಿರಾಜ್ ತೊಂಡೈಮನ್ ಪುಟಿದೇಳಲು ಪ್ರಯತ್ನಿಸಿದರೆ, ರಾಜೇಶ್ವರಿ ಕುಮಾರಿ ಮತ್ತು ಶ್ರೇಯಸಿ ಸಿಂಗ್ ಮಹಿಳೆಯರ ಟ್ರ್ಯಾಪ್ ಶೂಟಿಂಗ್ ಅರ್ಹತೆಯ ಮೊದಲ ದಿನದಂದು ಅಭಿಯಾನಪ್ರಾರಂಭಿಸಲಿದ್ದಾರೆ.

ಬಾಕ್ಸರ್​ಗಳು ಕಣಕ್ಕೆ

ಭಾರತದ ಆರು ಭಾರತೀಯ ಬಾಕ್ಸರ್ ಗಳಲ್ಲಿ ಮೂವರು ನಾಳೆ ಕಣಕ್ಕಿಳಿಯಲಿದ್ದಾರೆ. ಪುರುಷರ 51 ಕೆಜಿ ವಿಭಾಗದಲ್ಲಿ ಅಮಿತ್ ಪಂಗಲ್, ಮಹಿಳೆಯರ 57 ಕೆಜಿ ವಿಭಾಗದಲ್ಲಿ ಜಾಸ್ಮಿನ್ ಲಂಬೋರಿಯಾ ಮತ್ತು ಮಹಿಳೆಯರ 54 ಕೆಜಿ ವಿಭಾಗದಲ್ಲಿ ಪ್ರೀತಿ ಪವಾರ್ ಸ್ಪರ್ಧಿಸಲಿದ್ದಾರೆ.

ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಡೋನೇಷ್ಯಾ ವಿರುದ್ಧದ ಅಂತಿಮ ಗ್ರೂಪ್ ಪಂದ್ಯದಲ್ಲಿ ತಮ್ಮ ಗುಂಪಿನಲ್ಲಿ ಅಗ್ರ ಸ್ಥಾನ ಪಡೆಯುವ ಗುರಿ ಹೊಂದಿದ್ದಾರೆ. ಮಹಿಳಾ ಡಬಲ್ಸ್ ಜೋಡಿ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಆಸ್ಟ್ರೇಲಿಯಾ ವಿರುದ್ಧ ಸತತ ಎರಡು ಸೋಲುಗಳ ಬಳಿಕ ಮತ್ತೊಂದ ಪಂದ್ಯ ಆಡಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪುರುಷರ ಆರ್ಚರಿ ತಂಡಕ್ಕೆ ಆಘಾತ, ಕ್ವಾರ್ಟರ್​ಫೈನಲ್​ನಲ್ಲಿ ಸೋಲು

ಶೂಟಿಂಗ್, ಬಾಕ್ಸಿಂಗ್ ಮತ್ತು ಬ್ಯಾಡ್ಮಿಂಟನ್ ಜೊತೆಗೆ, ಪುರುಷರ ಸಿಂಗಲ್ಸ್ ಸ್ಕಲ್ಸ್​ನಲ್ಲಿ ಬಲರಾಜ್ ಪನ್ವಾರ್ ಮತ್ತು ಈಕ್ವೆಸ್ಟ್ರಿಯನ್​ ವೈಯಕ್ತಿಕ ಡ್ರೆಸ್ಸಿಂಗ್ ಅರ್ಹತಾ ಸ್ಪರ್ಧೆಯಲ್ಲಿ ಅನುಷ್ ಅಗರ್ವಾಲ್ಲಾ ಸ್ಪರ್ಧಿಸಲಿದ್ದಾರೆ.

ಭಾರತದ ಪಂದ್ಯಗಳ ವಿವರ ಇಲ್ಲಿದೆ

  • ಶೂಟಿಂಗ್​​: ಪುರುಷರ​​ ಟ್ರ್ಯಾಪ್ ಅರ್ಹತಾ ಸುತ್ತಿನ 2ನೇ ದಿನ; ಪೃಥ್ವಿರಾಜ್ ತೊಡೈಮನ್, ಮಧ್ಯಾಹ್ನ 12.30ಕ್ಕೆ
  • ಶೂಟಿಂಗ್​: ಟ್ರ್ಯಾಪ್ ಮಹಿಳಾ ಅರ್ಹತಾ ಸುತ್ತಿನ ಮೊದಲ ದಿನ, ಶ್ರೇಯಸಿ ಸಿಂಗ್/ ರಾಜೇಶ್ವರಿ ಕುಮಾರಿ, ಮಧ್ಯಾಹ್ನ 12.30ಕ್ಕೆ
  • ಶೂಟಿಂಗ್: 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ, ಕಂಚಿನ ಪದಕ ಪಂದ್ಯ, ಮನು ಭಾಕರ್-ಸರಬ್ಜೋತ್ ಸಿಂಗ್, ಮಧ್ಯಾಹ್ನ 1 ಗಂಟೆಗೆ
  • ಟೇಬಲ್ ಟೆನಿಸ್- ಮಹಿಳೆಯರ ಸಿಂಗಲ್ಸ್, ಶ್ರೀಜಾ ಅಕುಲಾ
  • ರೋಯಿಂಗ್- ಪುರುಷರ ಸಿಂಗಲ್ಸ್ ಸ್ಕಲ್ ಕ್ವಾರ್ಟರ್ ಫೈನಲ್ 4, ಬಲರಾಜ್ ಪನ್ವಾರ್ , ಮಧ್ಯಾಹ್ನ 1.40ರಿಂದ
  • ಈಕ್ವೆಸ್ಟ್ರಿಯನ್ ವೈಯಕ್ತಿಕ ಡ್ರೆಸೇಜ್​- ಅನುಷ್ ಅಗರ್ವಾಲಾ, ಮಧ್ಯಾಹ್ನ 2.30 ರಿಂದ
  • ಹಾಕಿ: ಪುರುಷರ ಪೂಲ್ ಬಿ ಪಂದ್ಯ: ಐರ್ಲೆಂಡ್ ವಿರುದ್ಧ , ಸಂಜೆ 4.45ಕ್ಕೆ
  • ಆರ್ಚರಿ: ಮಹಿಳೆಯರ ವೈಯಕ್ತಿಕ 32ನೇ ಸುತ್ತು, ಅಂಕಿತಾ ಭಕತ್, ಸಂಜೆ 5.14ಕ್ಕೆ
  • ಆರ್ಚರಿ: ಮಹಿಳಾ ವೈಯಕ್ತಿಕ 32ನೇ ಸುತ್ತು, ಭಜನ್ ಕೌರ್, ಸಂಜೆ 5.27ಕ್ಕೆ
  • ಬ್ಯಾಡ್ಮಿಂಟನ್: ಪುರುಷರ ಡಬಲ್ಸ್ ಗ್ರೂಪ್ ಸಿ: ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ, ಸಂಜೆ 5.30
  • ಬ್ಯಾಡ್ಮಿಂಟನ್: ಮಹಿಳಾ ಡಬಲ್ಸ್ ಗ್ರೂಪ್ ಸಿ: ತನಿಶಾ ಕ್ರಾಸ್ಟೊ/ಅಶ್ವಿನಿ ಪೊನ್ನಪ್ಪ, ಸಂಜೆ 6.20ಕ್ಕೆ
  • ಬಾಕ್ಸಿಂಗ್: ಪುರುಷರ 51 ಕೆ.ಜಿ ವಿಭಾಗ : ಅಮಿತ್ ಪಂಗಲ್, ಸಂಜೆ 7.16ಕ್ಕೆ
  • ಬಾಕ್ಸಿಂಗ್: ಪುರುಷರ 57 ಕೆ.ಜಿ ವಿಭಾಗ ಜೈಸ್ಮಿನ್ ಲಂಬೋರಿಯಾ, ರಾತ್ರಿ 9.08ರಿಂದ
  • ಆರ್ಚರಿ: ಪುರುಷರ ವೈಯಕ್ತಿಕ ಸುತ್ತಿನಲ್ಲಿ 32 ಧೀರಜ್ ಬೊಮ್ಮದೇವರ, 10.46ರಿಂದ
  • ಬಾಕ್ಸಿಂಗ್: ಮಹಿಳೆಯರ 54 ಕೆ.ಜಿ ವಿಭಾಗ, ಪ್ರೀತಿ, 01.06 ಗಂಟೆಗೆ
Continue Reading
Advertisement
WhatsApp Shut down
ದೇಶ11 mins ago

Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆಪ್‌? ಕೇಂದ್ರ ಸರ್ಕಾರ ಹೇಳೋದೇನು?

Karnataka Rain
ಮಳೆ12 mins ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

ಮಳೆ19 mins ago

Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Paris Olympics 2024
ಕ್ರೀಡೆ28 mins ago

Paris Olympics 2024: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಮನು ಭಾಕರ್-ಸರಬ್ಜೋತ್‌ ಜೋಡಿ

Mekedatu Project
ಕರ್ನಾಟಕ34 mins ago

Mekedatu Project: ಎಚ್‌ಡಿಕೆ ಅನುಮತಿ ಕೊಡಿಸಿದರೆ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

HD Kumaraswamy
ಕರ್ನಾಟಕ57 mins ago

Wayanad Landslide: ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

Bharachukki falls
ಚಾಮರಾಜನಗರ1 hour ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

Nawab Malik
ದೇಶ1 hour ago

Nawab Malik:‌ ದಾವೂದ್‌ ಇಬ್ರಾಹಿಂ ಜೊತೆ ನಂಟು ಆರೋಪ ಹೊಂದಿರುವ NCP ನಾಯಕ ನವಾಬ್‌ ಮಲಿಕ್‌ಗೆ ಜಾಮೀನು

SSC Recruitment 2024
ಉದ್ಯೋಗ1 hour ago

SSC Recruitment 2024: 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯುಸಿ ಪಾಸಾದವರು ಅಪ್ಲೈ ಮಾಡಿ

Paris Olympics 2024
ಕ್ರೀಡೆ1 hour ago

Paris Olympics 2024: ಭಾರತ-ಅರ್ಜೆಂಟೀನಾ ಹಾಕಿ ಪಂದ್ಯ ವೀಕ್ಷಿಸಿದ ರಾಹುಲ್​ ದ್ರಾವಿಡ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 mins ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 hour ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ20 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ21 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌