PhonePe : ಫೋನ್‌ಪೇ ಬಳಕೆದಾರರು ಈಗ ವಿದೇಶಗಳಲ್ಲೂ ಯುಪಿಐ ಮೂಲಕ ಪೇಮೆಂಟ್‌ ಮಾಡಬಹುದು: ಕಂಪನಿ ಘೋಷಣೆ - Vistara News

ಪ್ರಮುಖ ಸುದ್ದಿ

PhonePe : ಫೋನ್‌ಪೇ ಬಳಕೆದಾರರು ಈಗ ವಿದೇಶಗಳಲ್ಲೂ ಯುಪಿಐ ಮೂಲಕ ಪೇಮೆಂಟ್‌ ಮಾಡಬಹುದು: ಕಂಪನಿ ಘೋಷಣೆ

ಫೋನ್‌ಪೇ ಬಳಕೆದಾರರಿಗೆ ಇದು ಸಿಹಿ ಸುದ್ದಿ. ಗ್ರಾಹಕರು ವಿದೇಶಗಳಲ್ಲಿ ಫೋನ್‌ಪೇ (PhonePe) ಮೂಲಕ ಯುಪಿಐ ಆಧಾರಿತ ಹಣ ಪಾವತಿ ಮಾಡಬಹುದು ಎಂದು ಕಂಪನಿ ಘೋಷಿಸಿದೆ. ವಿವರ ಇಲ್ಲಿದೆ.

VISTARANEWS.COM


on

phonepe
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಫೋನ್‌ಪೇ ( PhonePe) ಬಳಕೆದಾರರು ಯುಪಿಐ ಮೂಲಕ ವಿದೇಶಗಳಲ್ಲಿ ಕೂಡ ಹಣ ಪಾವತಿ ಮಾಡಬಹುದು. ನೀವು ವಿದೇಶಗಳಿಗೆ ಪ್ರಯಾಣ ಮಾಡುವಾಗ ಇದರಿಂದ ಅನುಕೂಲವಾಗಲಿದೆ. ವಿದೇಶಿ ವ್ಯಾಪಾರಿಗಳಿಗೆ ಫೋನ್‌ಪೇನಲ್ಲಿ ಯುಪಿಐ ಮೂಲಕ ಹಣ ಪಾವತಿ ಮಾಡಬಹುದು. ಗ್ರಾಹಕರು ಸಿಂಗಾಪುರ, ಯುನೈಟೆಡ್‌ ಅರಬ್‌ ಎಮಿರೇಟ್ಸ್‌ (ಯುಎಇ), ಮಾರಿಷಸ್‌, ಭೂತಾನ್‌ ಮತ್ತು ನೇಪಾಳದಲ್ಲಿ ಯುಪಿಐ ಮೂಲಕ ಪೇಮೆಂಟ್‌ ಮಾಡಬಹುದು. ಆದರೆ ಅವರು ಸ್ಥಳೀಯ ಕ್ಯೂಆರ್‌ ಕೋಡ್‌ ಹೊಂದಿರಬೇಕು ಎಂದು ಫೋನ್‌ಪೇ ತಿಳಿಸಿದೆ.

ಎನ್‌ಐಪಿಎಲ್‌ (ಎನ್‌ಪಿಸಿಐ ಇಂಟರ್‌ನ್ಯಾಶನಲ್‌ ಪೇಮೆಂಟ್ಸ್‌ ಲಿಮಿಟೆಡ್)‌ ಸಹಯೋಗದಲ್ಲಿ ಫೋನ್‌ ಪೇ ತನ್ನ ಯುಪಿಐ ಇಂಟರ್‌ನ್ಯಾಶನಲ್‌ ಸೇವೆಯನ್ನು ಆರಂಭಿಸಿದ್ದು, ಶೀಘ್ರದಲ್ಲಿ ಮತ್ತಷ್ಟು ದೇಶಗಳಿಗೆ ವಿಸ್ತರಿಸಲಿದೆ. ನ್ಯಾಶನಲ್‌ ಪೇಮೆಂಟ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (NCPI) ಈ ಹಿಂದೆ ಅಂತಾರಾಷ್ಟ್ರೀಯ ಯುಪಿಐ ಪೇಮೆಂಟ್‌ಗಳಿಗೆ ಬೆಂಬಲ ಸೂಚಿಸಿತ್ತು.

ಕಳೆದ ಆರು ವರ್ಷಗಳಲ್ಲಿ ನಾವು ಯುಪಿಐ ಪೇಮೆಂಟ್‌ಗಳ ಕ್ರಾಂತಿಯಲ್ಲಿ ತೊಡಗಿಸಿಕೊಂಡಿದ್ದೆವು. ಜನರ ದೈನಂದಿನ ಪಾವತಿಗೆ ಇದರಿಂದ ಅನುಕೂಲವಾಗಿದೆ. ಯುಪಿಐ ಇಂಟರ್‌ನ್ಯಾಶನಕ್‌ ಇತರ ಜಗತ್ತಿಗೂ ಯುಪಿಐ ವಿಸ್ತರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ಸೌಲಭ್ಯ ಕ್ರಾಂತಿಕಾರಕವಾಗಿ ಸಹಕರಿಸಲಿದೆ. ವಿದೇಶಗಳಿಗೆ ತೆರಳುವ ಭಾರತೀಯರಿಗೆ ಅಲ್ಲಿನ ಅಂಗಡಿಗಳಲ್ಲಿ, ಮಾಲ್‌ಗಳಲ್ಲಿ ಪೇಮೆಂಟ್‌ಗೆ ಅನುಕೂಲವಾಗಲಿದೆ. ಈ ಬದಲಾವಣೆಯಲ್ಲಿ ಫೋನ್‌ಪೇ ಮುಂಚೂಣಿಯಲ್ಲಿರುವುದಕ್ಕೆ ಹೆಮ್ಮೆ ಎನ್ನಿಸುತ್ತಿದೆ ಎಂದು ಫೋನ್‌ಪೇಯ ಸಹ ಸಂಸ್ಥಾಪಕ ರಾಹುಲ್‌ ಚಾರಿ.

ಫೋನ್‌ಪೇ ಬಳಕೆದಾರರು ವಿದೇಶ ಪ್ರವಾಸಕ್ಕೆ ಮುನ್ನ ತಮ್ಮ ಯುಪಿಐ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆಯನ್ನು ಯುಪಿಐ ಇಂಟರ್‌ನ್ಯಾಶನಲ್‌ ಸೇವೆಗೆ ಸಕ್ರಿಯಗೊಳಿಸಬಹುದು. ಭಾರತೀಯ ಬ್ಯಾಂಕ್‌ಗಳನ್ನು ಬಳಸಿಕೊಂಡು ಪೇಮೆಂಟ್‌ ಮಾಡಬಹುದು. ಸ್ವೀಕರಿಸುವವರು ಸ್ಥಳೀಯ ಕರೆನ್ಸಿಯಲ್ಲಿ ಪಡೆಯಬಹುದು. ಇದರಿಂದಾಗಿ ಇಂಟರ್‌ನ್ಯಶನಲ್‌ ಕ್ರೆಡಿಟ್‌, ಡೆಬಿಟ್‌ ಮತ್ತು ಫೋರೆಕ್ಸ್‌ ಕಾರ್ಡ್‌ಗಳನ್ನು ಬಳಸುವ ಅಗತ್ಯ ಇರುವುದಿಲ್ಲ. ಈ ಫೀಚರ್‌ ಅನ್ನು ಫೋನ್‌ಪೇ ಅನಾವರಣಗೊಳಿಸಿದ್ದು, ಗ್ರಾಹಕರಿಗೆ ಅವರ ಸ್ಮಾರ್ಟ್‌ಫೋನ್‌ನಲ್ಲಿ ಕೆಲ ದಿನಗಳಲ್ಲಿ ಲಭಿಸಲಿದೆ ಎಂದು ಕಂಪನಿ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Maharashtra Rain: ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ರಾಯಗಢ ಕೋಟೆಯಲ್ಲಿ ಪ್ರವಾಸಿಗರಿಗೆ ಪ್ರಾಣ ಸಂಕಟ; ವಿಡಿಯೊ ನೋಡಿ

Maharashtra Rain: ಮಹಾರಾಷ್ಟ್ರದಲ್ಲಿ ರಾಯಗಢ ಕೋಟೆಯಲ್ಲಿ ತೀವ್ರವಾದ ನೀರಿನ ತೊರೆಗಳಿಗೆ ಪ್ರವಾಸಿಗರು ತತ್ತರಿಸಿ ಹೋಗಿದ್ದಾರೆ. ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಈ ಧಾರಾಕಾರ ಮಳೆಗೆ ಐತಿಹಾಸಿಕ ಸ್ಥಳದಲ್ಲಿ ಅಪಾಯಕಾರಿ ಪರಿಸ್ಥಿತಿಗಳು ಉಂಟಾಗಿವೆ. ಜನಪ್ರಿಯ ಪ್ರವಾಸಿ ತಾಣವಾದ ರಾಯಗಡ್ ಕೋಟೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಕೋಟೆಯ ಮೆಟ್ಟಿಲುಗಳು ನೀರಿನಿಂದ ಜಲಪಾತಗಳಾಗಿ ಪರಿವರ್ತನೆಯಾಗಿವೆ.

VISTARANEWS.COM


on

Maharashtra Rain
Koo

ಮುಂಬಯಿ: ಇತ್ತೀಚೆಗೆ ದೇಶದ ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದೀಗ ಅಂತಹದೊಂದು ಭೀಕರ ಘಟನೆ ಮಹಾರಾಷ್ಟ್ರದಲ್ಲಿ (Maharashtra Rain) ನಡೆದಿದ್ದು, ರಾಯಗಢ ಕೋಟೆಯಲ್ಲಿ ತೀವ್ರವಾದ ನೀರಿನ ತೊರೆಗಳಿಗೆ ಪ್ರವಾಸಿಗರು ತತತ್ತರಿಸಿ ಹೋಗಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಈ ಧಾರಾಕಾರ ಮಳೆಗೆ ಐತಿಹಾಸಿಕ ಸ್ಥಳದಲ್ಲಿ ಅಪಾಯಕಾರಿ ಪರಿಸ್ಥಿತಿಗಳು ಉಂಟಾಗಿವೆ. ಜನಪ್ರಿಯ ಪ್ರವಾಸಿ ತಾಣವಾದ ರಾಯಗಢ ಕೋಟೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಕೋಟೆಯ ಮೆಟ್ಟಿಲುಗಳು ನೀರಿನಿಂದ ಜಲಪಾತಗಳಾಗಿ ಪರಿವರ್ತನೆಯಾಗಿವೆ. ಮತ್ತು ಕೋಟೆಯ ಮೆಟ್ಟಿಲಿನಿಂದ ಇಳಿಯುವುದು ತುಂಬಾ ಕಷ್ಟಕರವಾಗಿದೆ. ಹಾಗಾಗಿ ಕೋಟೆಗೆ ಭೇಟಿ ನೀಡಿದ್ದ ಶಿವ ಭಕ್ತರು ಮತ್ತು ಪ್ರವಾಸಿಗರೂ ಸೇರಿದಂತೆ 30ಕ್ಕೂ ಹೆಚ್ಚು ಜನರು ಈ ನೀರಿನ ತೊರೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜನರು ಭಯಗೊಂಡಿದ್ದಾರೆ. ಆದರೆ ಈ ಪ್ರವಾಸಿಗರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಮುಖ್ಯ ಮೆಟ್ಟಿಲುಗಳ ಮೇಲಿನ ಅಪಾಯಕಾರಿ ಪರಿಸ್ಥಿತಿಗಳಲ್ಲಿ ಸಾಗಿ ದುರಂತದಿಂದ ಪಾರಾಗಿದ್ದಾರೆ.

ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಲಾಗಿದೆ, ಸಿಕ್ಕಿಬಿದ್ದ ಎಲ್ಲಾ ವ್ಯಕ್ತಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಭಾರೀ ಮಳೆಯ ಸಮಯದಲ್ಲಿ ಕೋಟೆಗಳು ಮತ್ತು ಇತರ ಅಪಾಯಕಾರಿ ಪ್ರದೇಶಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡುತ್ತಿದ್ದಾರೆ.

ಭಾರೀ ಮಳೆಗೆ ರಾಯಗಢ ಮಾತ್ರವಲ್ಲ ಮುಂಬೈ, ಥಾಣೆ, ನವೀ ಮುಂಬೈ ಮತ್ತು ಕಲ್ನೈ ಸೇರಿದಂತೆ ಮಹಾರಾಷ್ಟ್ರದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂಬ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಹಾಗಾಗಿ ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗ್ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಫಸ್ಟ್‌ ನೈಟ್‌ ವಿಡಿಯೊ ಹಂಚಿಕೊಂಡ ನವ ದಂಪತಿ! ಇನ್ನೇನು ಬಾಕಿ ಉಳಿದಿದೆ ಎಂದ ನೆಟ್ಟಿಗರು!

ವಿಶೇಷವಾಗಿ ರತ್ನಗಿರಿಯ ಮೇಲೆ ಭಾರಿ ಪರಿಣಾಮ ಬೀರಿದ್ದು, ನದಿಗಳ ನೀರಿನ ಮಟ್ಟವು ಅಪಾಯಕಾರಿಯಾಗಿ ಏರುತ್ತಿದೆ. ರಾಜಾಪುರ ತಾಲ್ಲೂಕಿನ ಜಗ್ಬುಡಿ ನದಿ ಅಪಾಯದ ಮಟ್ಟವನ್ನು ಮೀರಿದ್ದು, ಹತ್ತಿರದ ಹಳ್ಳಿಗಳಿಗೆ ಎಚ್ಚರಿಕೆ ನೀಡಲಾಗಿದೆ. ರತ್ನಗಿರಿಯಲ್ಲಿ ಭಾರಿ ಮಳೆಯ ಹಲವಾರು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪರಿಸ್ಥಿತಿಯ ತೀವ್ರತೆಯನ್ನು ಬಗ್ಗೆ ವಿವರವಾಗಿ ತಿಳಿಸುತ್ತಿವೆ.

Continue Reading

ಕರ್ನಾಟಕ

CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

CM Siddaramaiah: ಪರ್ಮಿಟ್ ಪಡೆಯದೆ ರಾಯಲ್ಟಿ ಸಂಗ್ರಹದಲ್ಲಿ ಸರ್ಕಾರಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ಸಚಿವ ಸಂತೋಷ್ ಲಾಡ್, ಈಶ್ವರ್ ಖಂಡ್ರೆ, ಶರಣಪ್ರಕಾಶ್ ಪಾಟೀಲ್ ಬೆಂಗಳೂರಿನಲ್ಲಿ ನಡೆದ ಡಿಸಿ-ಸಿಇಒಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದಾಗ, ಈ ಬಗ್ಗೆ ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಎಚ್ಚರಿಕೆ ನೀಡಿದರು. ಈ ಕುರಿತು ಕಠಿಣ ಕ್ರಮ ಕೈಗೊಂಡು ನಷ್ಟ ತಡೆಯುವಂತೆ ಹೇಳಿದರು.

VISTARANEWS.COM


on

defrauding the government in Quarry Mine Royalty CM Siddaramaiah instructs for strict action
Koo

ಬೆಂಗಳೂರು: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಎನ್ನುವ ದೂರಿನ ಬಗ್ಗೆ ಗರಂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ನಷ್ಟ ತಡೆಯುವಂತೆ ಸೂಚಿಸಿದ್ದಾರೆ.

ಡಿಸಿ-ಸಿಇಒಗಳ ಸಭೆಯಲ್ಲಿ ಸಚಿವ ಸಂತೋಷ್ ಲಾಡ್, ಈಶ್ವರ್ ಖಂಡ್ರೆ, ಶರಣಪ್ರಕಾಶ್ ಪಾಟೀಲ್ ಹಾಗೂ ಇತರರು, ಪರ್ಮಿಟ್ ಪಡೆಯದೆ ರಾಯಲ್ಟಿ ಸಂಗ್ರಹದಲ್ಲಿ ಸರ್ಕಾರಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದರು.

ಸಚಿವ ಸಂತೋಷ್ ಲಾಡ್ ಮಾತನಾಡಿ, ಕ್ವಾರಿ ಗಣಿಗಾರಿಕೆಯಲ್ಲಿ 50 ಲಕ್ಷ ಟನ್‌ಗೆ ಪರಿಸರ ತೀರುವಳಿ ಪಡೆದರೆ, 20 ಲಕ್ಷ ಟನ್‌ಗೆ ಮಾತ್ರ ಪರ್ಮಿಟ್ ಪಡೆಯುತ್ತಾರೆ. ಹಾಗಿದ್ದರೆ ಹೆಚ್ಚಿನ ಮಟ್ಟದ ಪರಿಸರ ತೀರುವಳಿ ಪಡೆದದ್ದು ಏತಕ್ಕೆ? ರಾಜ್ಯದಲ್ಲಿ ಪರಿಸರ ತೀರುವಳಿ ಪಡೆದಿರುವುದಕ್ಕೂ, ಪರ್ಮಿಟ್ ಪಡೆದಿರುವುದಕ್ಕೂ ಅರ್ಧಕರ್ಧ ಕಡಿಮೆ ಇದೆ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು.

ಇದನ್ನೂ ಓದಿ: PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

ಈ ವೇಳೆ ಸಂತೋಷ್ ಲಾಡ್ ಅವರ ಮಾತಿಗೆ ಹಲವು ಸಚಿವರು ಧ್ವನಿಗೂಡಿಸಿದರು. ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ ಸಿಎಂ, ಇದನ್ನೆಲ್ಲಾ ತಕ್ಷಣ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಬಗ್ಗೆ ಅಗತ್ಯವಿದ್ದರೆ ಸರ್ಕಾರದಿಂದ ಹೊಸ ನೀತಿಯನ್ನೇ ರೂಪಿಸೋಣ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಜಂಟಿ ಸಮೀಕ್ಷೆ ನಡೆಸಿ

ಯಾವುದೇ ಜಮೀನನ್ನು ತಪ್ಪಾಗಿ ಡೀಮ್ಡ್‌ ಅರಣ್ಯ ಪಟ್ಟಿಗೆ ಸೇರಿಸಿದ್ದರೆ, ಅಂತದ್ದನ್ನು ಗುರುತಿಸಲು ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ತಿಂಗಳ ಒಳಗಾಗಿ ಜಂಟಿ ಸಮೀಕ್ಷೆ ನಡೆಸಿ. ಅದನ್ನು ಸಂಪುಟದ ಮುಂದೆ ಮಂಡಿಸಲು ಸಿಎಂ ಸೂಚಿಸಿದರು.

ಇದನ್ನೂ ಓದಿ: Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

ಅಕ್ರಮ ಗಣಿಗಾರಿಕೆಗೆ ತಡೆಗೆ ಕಟ್ಟುನಿಟ್ಟಿನ ಕ್ರಮ

ಅಕ್ರಮ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಕುರಿತು ಹಲವಾರು ದೂರುಗಳು ಬರುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಗಣಿಗಾರಿಕೆ ಮಾಡುವ ಮರಳು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಗ್ರಾಮ ಪಂಚಾಯಿತಿ ಮೂಲಕ ಮರಳು ಪೂರೈಕೆ ಮಾಡಲು ಈಗಾಗಲೇ ಗುರುತಿಸಲಾಗಿರುವ ಮರಳು ಬ್ಲಾಕ್‌ಗಳ ಮೂಲಕ ಮರಳು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಒಟ್ಟು 372 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದ್ದು, 102 ಮರಳು ಬ್ಲಾಕ್‌ಗಳು ಕಾರ್ಯ ಪ್ರಾರಂಭಿಸಿವೆ. ಇನ್ನೂ 270 ಮರಳು ಬ್ಲಾಕ್‌ಗಳು ಕಾರ್ಯಾರಂಭ ಮಾಡಬೇಕು ಎಂದು ತಿಳಿಸಿದರು.

Continue Reading

ಕರ್ನಾಟಕ

New Medical Colleges: ಕರ್ನಾಟಕಕ್ಕೆ 3 ಪದವಿಪೂರ್ವ ವೈದ್ಯಕೀಯ ಕಾಲೇಜು ಮಂಜೂರು; 350 ಸೀಟುಗಳು ಲಭ್ಯ

New Medical Colleges: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ)ವು ಕರ್ನಾಟಕಕ್ಕೆ ಈ ಬಾರಿ ಮೂರು ಪದವಿಪೂರ್ವ ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ. ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ನಗರೂರ್, ಬೆಂಗಳೂರು ಉತ್ತರ), ಪಿಇಎಸ್ ವಿಶ್ವವಿದ್ಯಾನಿಲಯ ಹಾಗೂ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆ (ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು) ಮತ್ತು ಎಸ್‍ಆರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಾಗಲಕೋಟೆ)ಗಳಿಗೆ ಅವಕಾಶ ಸಿಕ್ಕಿದೆ.

VISTARANEWS.COM


on

New Medical Colleges
Koo

ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ (New Medical Colleges) ಆಯೋಗ (ಎನ್‍ಎಂಸಿ)ವು ಕರ್ನಾಟಕಕ್ಕೆ ಈ ಬಾರಿ ಮೂರು ಪದವಿಪೂರ್ವ ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ. ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ನಗರೂರ್, ಬೆಂಗಳೂರು ಉತ್ತರ), ಪಿಇಎಸ್ ವಿಶ್ವವಿದ್ಯಾನಿಲಯ ಹಾಗೂ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆ (ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು) ಮತ್ತು ಎಸ್‍ಆರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಾಗಲಕೋಟೆ) ಆಗಿವೆ.

ಎಷ್ಟು ವೈದ್ಯಕೀಯ ಸೀಟು ಲಭ್ಯ?

ಈ ಮೂರು ವೈದ್ಯಕೀಯ ಕಾಲೇಜುಗಳು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭವಾಗಲಿದ್ದು, ಬಿಜಿಎಸ್‍ಗೆ 150, ಪಿಇಎಸ್‍ಗೆ 100 ಹಾಗೂ ಬಾಗಲಕೋಟೆ ಎಸ್‍ಆರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ 100 ವೈದ್ಯಕೀಯ ಸೀಟುಗಳು ಲಭ್ಯವಾಗಲಿವೆ.

ಇದನ್ನೂ ಓದಿ: Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

ರಾಜ್ಯದಿಂದ ಈ ಬಾರಿ ಒಟ್ಟು ಐದು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಬೇಕೆಂದು ಎನ್‍ಎಂಸಿಗೆ ಮನವಿ ಮಾಡಲಾಗಿತ್ತು. ಆದರೆ ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪನೆ ಮಾಡಬೇಕೆಂಬ ಬೇಡಿಕೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಕೆಲವು ತಾಂತ್ರಿಕ ಕಾರಣಗಳಿಂದ ಅನುಮೋದನೆ ನೀಡಿಲ್ಲ.

ಪ್ರಸ್ತುತ ಮೂರು ವೈದ್ಯಕೀಯ ಕಾಲೇಜುಗಳು ಹೊಸದಾಗಿ ಪ್ರಾರಂಭ ಆಗುತ್ತಿರುವುದರಿಂದ ಪ್ರಸ್ತುತ ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 73ಕ್ಕೆ ಏರಿದೆ. ಸದ್ಯ 11,745 ವೈದ್ಯಕೀಯ ಸೀಟುಗಳು ಲಭ್ಯವಾಗುತ್ತಿದ್ದು, 2024-25ನೇ ಸಾಲಿನ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಸೀಟುಗಳ ಸಂಖ್ಯೆ 12,095ಕ್ಕೆ ಏರಿಕೆಯಾಗಲಿದೆ.

ಒಂದು ವೇಳೆ ರಾಮನಗರ ಮತ್ತು ಕನಕಪುರಕ್ಕೂ ಈ ವರ್ಷದಿಂದಲೇ ವೈದ್ಯಕೀಯ ಕಾಲೇಜುಗಳ ಪ್ರಾರಂಭಕ್ಕೆ ಎನ್‍ಎಂಸಿ ಅನುಮೋದನೆ ನೀಡಿದರೆ ಹೆಚ್ಚುವರಿಯಾಗಿ ಇನ್ನು 300 ವೈದ್ಯಕೀಯ ಸೀಟುಗಳು ಸಿಗಲಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

ರಾಮನಗರದಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸಿಬ್ಬಂದಿ ಕೊರತೆ ಮತ್ತು 650 ಬೆಡ್‍ಗಳು ಇರಬೇಕೆಂಬ ನಿಯಮವಿದೆ. ಆದರೆ ಪ್ರಸ್ತುತ ರಾಮನಗರದಲ್ಲಿ ಸಿಬ್ಬಂದಿ ಕೊರತೆ ಇರುವ ಕಾರಣ ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲು ತಡವಾಗಿದೆ. ಒಂದು ವೈದ್ಯಕೀಯ ಕಾಲೇಜನ್ನು ಹೊಸದಾಗಿ ಪ್ರಾರಂಭಿಸಬೇಕಾದರೆ ಎಂಎನ್‍ಸಿ ಮತ್ತು ಎಂಸಿಐನ ಕೆಲವು ಮಾನದಂಡಗಳನ್ನು ಪಾಲಿಸಲೇಬೇಕಾಗುತ್ತದೆ.

ನಿಯಮಗಳು ಏನೇನು?

2024-25ನೇ ಶೈಕ್ಷಣಿಕ ಸಾಲಿನಿಂದ ಆರಂಭವಾಗುವ ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಸೀಟುಗಳ ಮಿತಿಯನ್ನು ಗರಿಷ್ಠ 150ಕ್ಕೆ ನಿಗದಿಪಡಿಸಿದೆ.

ರಾಜ್ಯಗಳಲ್ಲಿರುವ 10 ಲಕ್ಷ ಜನಸಂಖ್ಯೆಗೆ 100 ವೈದ್ಯಕೀಯ ಪದವಿ ಸೀಟುಗಳು ಎಂಬ ಅನುಪಾತಕ್ಕೆ ಅನುಗುಣವಾಗಿ ಈ ಮಾನದಂಡ ರೂಪಿಸಲಾಗಿದೆ. ಹೊಸ ವೈದ್ಯಕೀಯ ಕಾಲೇಜುಗಳಲ್ಲಿನ ವೈದ್ಯಕೀಯ ಪದವಿ ಕೋರ್ಸ್, ಹೊಸ ವೈದ್ಯಕೀಯ ಕೋರ್ಸ್ ಆರಂಭ, ಹಾಲಿ ಇರುವ ಸೀಟುಗಳ ಹೆಚ್ಚಳ, ಮೌಲ್ಯಮಾಪನ ಮತ್ತು ಮೌಲ್ಯಾಂಕನ ನಿಯಮಗಳಿಗೆ ಸಂಬಂಧಿಸಿದಂತೆ ಆಯೋಗ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಈ ಬಗ್ಗೆ ವಿವರಿಸಲಾಗಿದೆ.

ಯಾವುದೇ ಕಾಲೇಜಿಗೆ ಹೆಚ್ಚುವರಿಯಾಗಿ ಅನುಮತಿಸಿದ ಕೋಟಾ ಸೀಟುಗಳು ಕೂಡ ಕಾಲೇಜಿಗೆ ಮಂಜೂರು ಮಾಡಿರುವ ಒಟ್ಟು ಸೀಟುಗಳ ಮಿತಿಯನ್ನು ಮೀರಬಾರದು. ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆದಿರುವ ಹೊಸ ವೈದ್ಯಕೀಯ ಕಾಲೇಜುಗಳಿಗೆ ಮೊದಲ ಮೂರು ವರ್ಷಗಳಲ್ಲಿ ಅನುಕ್ರಮವಾಗಿ 50, 100 ಹಾಗೂ 150 ಸೀಟುಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.

ಹೊಸ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಸುಸಜ್ಜಿತ ಆಸ್ಪತ್ರೆ ಇರಬೇಕು. ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಇರಬೇಕು. ಆಸ್ಪತ್ರೆಯು ಕನಿಷ್ಠ 220 ಹಾಸಿಗೆ ಸಾಮರ್ಥ್ಯ ಹೊಂದಿರಬೇಕು. ಕಾಲೇಜು ಮತ್ತು ಆಸ್ಪತ್ರೆ ನಡುವೆ ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿಯ ಪ್ರಯಾಣದ ಅಂತರ 30 ನಿಮಿಷಕ್ಕೂ ಹೆಚ್ಚಿರಬಾರದು.

ಇದನ್ನೂ ಓದಿ: PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

ಸಹಾಯಕ ವೈದ್ಯರಿಗೆ ನೆರವಾಗುವಂತೆ ಕಾಲೇಜಿನ ವ್ಯಾಪ್ತಿಯಲ್ಲಿ ಗ್ರಾಮೀಣ ಆರೋಗ್ಯ ಕೇಂದ್ರಗಳು/ ಸಮುದಾಯ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು ಇರಬೇಕು. ಪ್ರತಿ ವೈದ್ಯಕೀಯ ಸಂಸ್ಥೆಯಲ್ಲೂ ವಿದ್ಯಾರ್ಥಿಗಳ ಕೌಶಲ ವೃದ್ಧಿಗೆ ಪೂರಕವಾಗುವಂತಹ ಸುಸಜ್ಜಿತ ಪ್ರಯೋಗಾಲಯ ಇರಬೇಕಾಗುತ್ತದೆ.

Continue Reading

ಕ್ರೀಡೆ

Jay Shah: ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ದಿಢೀರ್​ ರಾಜೀನಾಮೆ ನೀಡಲು ಮುಂದಾದ ಜಯ್ ಶಾ; ಕಾರಣವೇನು?

Jay Shah: ಈಗಾಗಲೇ ಜಯ್​ ಶಾ ಬಿಸಿಸಿಐ ಜತೆಗೆ ಐಸಿಸಿ ಸಮಿತಿಯಲ್ಲಿ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಮಾತ್ರವಲ್ಲದೆ ಏಷ್ಯಾ ಕ್ರಿಕೆಟ್ ಕೌನ್ಸಿಲ್‌ (ಎಸಿಸಿ) ಅಧ್ಯಕ್ಷರೂ ಆಗಿದ್ದಾರೆ.

VISTARANEWS.COM


on

Jay Shah
Koo

ಮುಂಬಯಿ: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್‌ ಶಾ(Jay Shah) ಅವರು ತಮ್ಮ ಈ ಹುದ್ದೆಯನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಐಸಿಸಿಯ(ICC) ಹೊಸ ಅಧ್ಯಕ್ಷರ ಚುನಾವಣೆಗೆ ಜಯ್ ಶಾ ಸ್ಪರ್ಧಿಸಲಿರುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಐಸಿಸಿ ಚುನಾವಣೆ ಇದೇ ವರ್ಷ ನವೆಂಬರ್​ನಲ್ಲಿ ನಡೆಯಲಿದೆ.

ಈಗಾಗಲೇ ಜಯ್​ ಶಾ ಬಿಸಿಸಿಐ ಜತೆಗೆ ಐಸಿಸಿ ಸಮಿತಿಯಲ್ಲಿ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಮಾತ್ರವಲ್ಲದೆ ಏಷ್ಯಾ ಕ್ರಿಕೆಟ್ ಕೌನ್ಸಿಲ್‌ (ಎಸಿಸಿ) ಅಧ್ಯಕ್ಷರೂ ಆಗಿದ್ದಾರೆ. ಇದೀಗ ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿಂದೆಯೂ ಹಲವು ಬಾರಿ ಜಯ್​ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಸ್ಪಧಿಸಿರಲಿಲ್ಲ. ಈ ಬಾರಿ ಖಚಿತ ಎಂದು ಜಯ್​ ಶಾ ಆಪ್ತ ಮೂಲಗಳು ಮಾಹಿತಿ ನೀಡಿದೆ. ಜಯ್ ಶಾ 2019 ರಲ್ಲಿ ಬಿಸಿಸಿಐ ಕಾರ್ಯದರ್ಶಿ ಹುದ್ದೆಯನ್ನು ವಹಿಸಿಕೊಂಡಿದ್ದರು.

ಇದನ್ನೂ ಓದಿ Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

35 ವರ್ಷದ ಜಯ್​ ಶಾ ಒಂದೊಮ್ಮೆ ಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಐಸಿಸಿಯ ಅತ್ಯಂತ ಕಿರಿಯ ಅಧ್ಯಕ್ಷರಾದ ಗೌರವಕ್ಕೆ ಪಾತ್ರರಾಗಲಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ ಅಧಿಕಾರದಲ್ಲಿದ್ದಾರೆ. 2020ರಲ್ಲಿ ಈ ಸ್ಥಾನಕ್ಕೆ ಇವರು ಆಯ್ಕೆ ಆಗಿದ್ದರು. ಈ ವರ್ಷ ಅವರ ಅಧಿಕಾರಾವಧಿ ಕೊನೆಯಾಗಲಿದೆ.

ಜಯ್​ ಶಾ ನಾಯಕತ್ವವು ವಿಶ್ವಾದ್ಯಂತ ಕ್ರಿಕೆಟ್‌ನಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿದೆ. ಐಸಿಸಿ ಪುರುಷರ ವಿಶ್ವಕಪನ್ನು ಅವರು ಹೊಸ ಎತ್ತರಕ್ಕೆ ಮುನ್ನಡೆಸಿದ್ದಾರೆ. ಲಿಂಗ ಸಮಾನತೆಯನ್ನು ತರುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್​ನಲ್ಲಿ ಪುರುಷ ಮತ್ತು ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ಪದ್ಧತಿಯನ್ನು ಕೂಡ ಇವರ ಕಾರ್ಯವಧಿಯಲ್ಲಿ ಜಾರಿಗೆ ತರಲಾಗಿತ್ತು. ಮತ್ತು ಮಹಿಳಾ ಪ್ರೀಮಿಯರ್ ಲೀಗ್‌ನ ರಚನೆ, ಒಲಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆ, ಹೀಗೆ ಅನೇಕ ಕಾರ್ಯಗಳ ಮೂಲಕ ಕ್ರಿಕೆಟ್​ ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಿದ್ದಾರೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥರಾದ ಅತ್ಯಂತ ಕಿರಿಯ ಎನ್ನುವ ಹೆಗ್ಗಳಿಕೆಯೂ ಜಯ್​ ಶಾ ಅವರದ್ದಾಗಿದೆ. ಭಾರತದ ದೇಶೀಯ ಕ್ರಿಕೆಟ್ ಭವಿಷ್ಯವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಜಯ್​ ಶಾ ಹಲವು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ಪಾಕ್‌ಗೆ ಭಾರತ ಹೋಗಲ್ಲ; ಜಯ್​ ಶಾ


2025ರಲ್ಲಿ ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಜಯ್​ ಶಾ ಹೇಳಿದ್ದಾರೆ. ಕೆಲದಿನಗಳ ಹಿಂದಷ್ಟೇ ಚಾಂಪಿಯನ್ಸ್‌ ಟ್ರೋಫಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌, ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ನಿಗದಿ ಮಾಡಿತ್ತು. ಆದರೆ, ಭದ್ರತೆಯ ಕಾರಣವನ್ನು ನೀಡಿರುವ ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.

Continue Reading
Advertisement
Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ22 mins ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Maharashtra Rain
Latest24 mins ago

Maharashtra Rain: ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ರಾಯಗಢ ಕೋಟೆಯಲ್ಲಿ ಪ್ರವಾಸಿಗರಿಗೆ ಪ್ರಾಣ ಸಂಕಟ; ವಿಡಿಯೊ ನೋಡಿ

Money Guide
ಮನಿ-ಗೈಡ್32 mins ago

Money Guide: ಕಡಿಮೆ ಅವಧಿಯಲ್ಲಿ 1 ಕೋಟಿ ರೂ. ಗಳಿಸುವುದು ಹೇಗೆ? ಇಲ್ಲಿದೆ ಹೂಡಿಕೆಯ ಲೆಕ್ಕಾಚಾರ

land fraud
ಕರ್ನಾಟಕ35 mins ago

land fraud: ಭೂ ವಂಚನೆ ತಡೆಗೆ ಪಹಣಿ-ಆಧಾರ್‌ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ

Golden Star Ganesh starring Krishnam Pranaya Sakhi movie releasing on 15th August
ಕರ್ನಾಟಕ40 mins ago

Kannada New Movie: ಗಣೇಶ್‌ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ʼಕೃಷ್ಣಂ ಪ್ರಣಯ ಸಖಿʼ

Heavy rain in coastal areas of Uttara Kannada district
ಉತ್ತರ ಕನ್ನಡ42 mins ago

Uttara Kannada News: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 12 ಕಾಳಜಿ ಕೇಂದ್ರಗಳಲ್ಲಿ 437 ಜನರಿಗೆ ಆಸರೆ

Sri Kyatha Lingeshwara Swamy new temple Inauguration on 13th August
ತುಮಕೂರು45 mins ago

Shira News: ಆ.13ರಂದು ಶ್ರೀ ಕ್ಯಾತಲಿಂಗೇಶ್ವರ ಸ್ವಾಮಿ ನೂತನ ದೇವಾಲಯದ ಜೀರ್ಣೋದ್ಧಾರ ಸಮಾರಂಭ

defrauding the government in Quarry Mine Royalty CM Siddaramaiah instructs for strict action
ಕರ್ನಾಟಕ46 mins ago

CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

New Medical Colleges
ಕರ್ನಾಟಕ49 mins ago

New Medical Colleges: ಕರ್ನಾಟಕಕ್ಕೆ 3 ಪದವಿಪೂರ್ವ ವೈದ್ಯಕೀಯ ಕಾಲೇಜು ಮಂಜೂರು; 350 ಸೀಟುಗಳು ಲಭ್ಯ

Jay Shah
ಕ್ರೀಡೆ53 mins ago

Jay Shah: ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ದಿಢೀರ್​ ರಾಜೀನಾಮೆ ನೀಡಲು ಮುಂದಾದ ಜಯ್ ಶಾ; ಕಾರಣವೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ4 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ6 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ9 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು10 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌