Pakistani Brides: ಸಿಕ್ಕಿಬಿದ್ದ ಪಾಕ್‌ ಯುವತಿಯ ಗಡಿಪಾರು ಸಿದ್ಧತೆ ; ಭಟ್ಕಳದಲ್ಲಿರುವ ಪಾಕಿಸ್ತಾನಿ ವಧುಗಳ ಭವಿಷ್ಯ ಏನು? - Vistara News

EXPLAINER

Pakistani Brides: ಸಿಕ್ಕಿಬಿದ್ದ ಪಾಕ್‌ ಯುವತಿಯ ಗಡಿಪಾರು ಸಿದ್ಧತೆ ; ಭಟ್ಕಳದಲ್ಲಿರುವ ಪಾಕಿಸ್ತಾನಿ ವಧುಗಳ ಭವಿಷ್ಯ ಏನು?

ಪಾಕಿಸ್ತಾನದಿಂದ ಬಂದು ಕರ್ನಾಟಕದ ಭಟ್ಕಳದ ಪುರುಷರನ್ನು ಮದುವೆಯಾದ ಅನೇಕ ಮಹಿಳೆಯರಿದ್ದಾರೆ. ಅವರ ವೀಸಾ ಅಥವಾ ಪೌರತ್ವ ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸೆರೆಯಾದ ಪಾಕಿಸ್ತಾನಿ ಯುವತಿಯ ಕಥೆ ಮತ್ತೆ ಈ ವಿಷಯದತ್ತ ಬೆರಳು ತೋರಿದೆ. ಈ ಕುರಿತ ವಿವರಣೆ ಇಲ್ಲಿದೆ.

VISTARANEWS.COM


on

pak woman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಾಕಿಸ್ತಾನಿ ಮಹಿಳೆಯೊಬ್ಬಳು ನೇಪಾಳದ ಮೂಲಕ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ, ಉತ್ತರಪ್ರದೇಶದ ಪ್ರಿಯತಮನನ್ನು ಮದುವೆಯಾಗಿ, ಬೆಂಗಳೂರಿನಲ್ಲಿ ನೆಲೆಸಿದ ನಂತರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಈ ಪ್ರಕರಣ, ದೇಶದ ಇನ್ನೂ ಹಲವು ಕಡೆ ಸಮಸ್ಯೆಯಾಗಿಯೇ ಉಳಿದಿರುವ ʼಪಾಕಿಸ್ತಾನಿ ವಧುʼಗಳ ಸಮಸ್ಯೆಯ ಕಡೆ ಬೆಳಕು ಬೀರಿದೆ. ಮುಖ್ಯವಾಗಿ, ಕರ್ನಾಟಕದ ಭಟ್ಕಳದಲ್ಲಿ ದೊಡ್ಡ ಸಂಖ್ಯೆಯ ʼಪಾಕ್‌ ವಧುಗಳುʼ ಇದ್ದಾರೆ.

ಪಾಕಿಸ್ತಾನದ ಇಕ್ರಾ ಜೀವನಿ ಎಂಬ 19 ವರ್ಷದ ಮಹಿಳೆ ಉತ್ತರ ಪ್ರದೇಶ ಮೂಲದ ಮುಲಾಯಂ ಸಿಂಗ್ ಯಾದವ್‌ನೊಂದಿಗೆ ಸಂಪರ್ಕಕ್ಕೆ ಬಂದಿದ್ದಳು. ಬೆಂಗಳೂರಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಈತ ಆನ್‌ಲೈನ್ ಗೇಮ್ ಮೂಲಕ ಆಕೆಯ ಗೆಳೆತನ ಬೆಳೆಸಿದ್ದ. ಸೆಪ್ಟೆಂಬರ್‌ನಲ್ಲಿ ನೇಪಾಳದ ಮೂಲಕ ಆಕೆ ದೇಶವನ್ನು ಪ್ರವೇಶಿಸಿದ್ದು, ಬೆಂಗಳೂರಿನಲ್ಲಿ ಇಬ್ಬರೂ ಜತೆಯಾಗಿ ವಾಸಿಸುತ್ತಿದ್ದರು. ಜನವರಿಯಲ್ಲಿ ಆಕೆಯನ್ನು ಬಂಧಿಸಲಾಗಿದ್ದು, ಸದ್ಯ ಪೊಲೀಸರು ಆಕೆಯನ್ನು ಮರಳಿ ಗಡಿಪಾರು ಮಾಡುವ ಪ್ರಕ್ರಿಯೆಯಲ್ಲಿದ್ದಾರೆ.

ಇದು ವಂಚನೆ ಪ್ರಕರಣ. ಆದರೆ ಕರ್ನಾಟಕ ಕರಾವಳಿಯ ಭಟ್ಕಳದಲ್ಲಿ ಇಲ್ಲಿನ ಮುಸ್ಲಿಂ ಪುರುಷರನ್ನು ವಿಧ್ಯುಕ್ತವಾಗಿ, ಕಾನೂನುಬದ್ಧವಾಗಿಯೇ ಮದುವೆಯಾಗಿರುವ ಪಾಕಿಸ್ತಾನಿ ಮಹಿಳೆಯರು ಹಲವರು ಇದ್ದಾರೆ. ಕಾನೂನುಬದ್ಧವಾಗಿ ವಿವಾಹವಾದ ಹಲವರು ತಮ್ಮ ಪೌರತ್ವವನ್ನು ಸ್ವೀಕರಿಸಿದ್ದಾರೆ; ಅಥವಾ ಅದಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಹಲವರ ವಾಸ ವೀಸಾ ದೊರೆಯದೆ ಅತಂತ್ರವಾಗಿದೆ.

ಭಟ್ಕಳದ ಪುರುಷರು ಕರಾಚಿಯ ಮಹಿಳೆಯರನ್ನು ಮದುವೆಯಾಗುವ ಸಂಪ್ರದಾಯ ಬಹಳ ಹಿಂದಿನಿಂದಲೂ ಇದೆ. ಆದರೆ ಭಯೋತ್ಪಾದನೆ ಪ್ರಕರಣಗಳು ಹೆಚ್ಚಿದ ಬಳಿಕ, 1990ರ ದಶಕದಿಂದ ಈ ಮಹಿಳೆಯರ ಜೀವನ ಕಷ್ಟಕರವಾಗಿದೆ.

ಜನವರಿ 6ರಂದು ವೀಸಾ ಉಲ್ಲಂಘನೆಗಾಗಿ ಇಲ್ಲಿದ್ದ ಒಬ್ಬ ಪಾಕಿಸ್ತಾನಿ ಮಹಿಳೆ ಮತ್ತು ಆಕೆಯ ಭಾರತೀಯ ಪತಿಗೆ ಕರ್ನಾಟಕದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಾಸಿರಾ ಪರ್ವೀನ್‌ಗೆ ಕಾರವಾರ ಜಿಲ್ಲೆ ಸೆಷನ್ಸ್ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದರೆ, ಆಕೆಯ ಪತಿ ಮೊಹಮ್ಮದ್ ಇಲಿಯಾಸ್‌ಗೆ ಒಂದು ತಿಂಗಳು ಜೈಲು ಶಿಕ್ಷೆ ವಿಧಿಸಿತ್ತು. ಇಬ್ಬರಿಗೂ ತಲಾ 10,000 ರೂ. ದಂಡ ಹಾಕಿತ್ತು.

bhatkal town
ಭಟ್ಕಳ ಪಟ್ಟಣ

ಇಲ್ಯಾಸ್ ಪರ್ವೀನ್ ವೀಸಾ ವಿಸ್ತರಣೆಗಾಗಿ ನವ ದೆಹಲಿಗೆ ಭಟ್ಕಳ ಪೊಲೀಸ್ ಠಾಣೆಗೆ ಮಾಹಿತಿ ನೀಡದೆ ಹೋದುದರಿಂದ ದಂಪತಿಯನ್ನು ಜೈಲಿಗೆ ಹಾಕಲಾಗಿತ್ತು. ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇಬ್ಬರ ವಿರುದ್ಧ 2014ರಲ್ಲಿ ಪ್ರಕರಣ ದಾಖಲಾಗಿತ್ತು.

ಕಟ್ಟುನಿಟ್ಟಾದ ಕಾನೂನು ಜಾರಿಯಿಂದಾಗಿ ಈ ಕುಟುಂಬಗಳು ಪಾಕಿಸ್ತಾನಿಗಳೊಂದಿಗಿನ ವಿವಾಹ ಸಂಬಂಧವನ್ನು ರಹಸ್ಯವಾಗಿಡುವಂತೆ ಮಾಡಿವೆ. “ದೇಶ ವಿಭಜನೆಯ ಮೊದಲು, ಇಲ್ಲಿನ ಅನೇಕ ಮುಸ್ಲಿಂ ಕುಟುಂಬಗಳು, ನವಾಯತ ಸಮುದಾಯ ಕರಾಚಿ ಮತ್ತು ಪಾಕಿಸ್ತಾನದ ಇತರ ಭಾಗಗಳಲ್ಲಿ ವ್ಯಾಪಾರ ಸಂಬಂಧಗಳನ್ನು ಹೊಂದಿತ್ತು. ವಿಭಜನೆ ನಂತರ, ಅನೇಕ ಕುಟುಂಬಗಳು ಒಡೆದುಹೋದವು. ಬಂಧುಗಳು ಬೇರೆಯಾದರು. ಈ ಸಂಬಂಧಗಳನ್ನು ಮುಂದುವರಿಸಲು ಕರಾಚಿಯ ಮಹಿಳೆಯರನ್ನು ಮದುವೆಯಾಗುವ ಅಭ್ಯಾಸ ಪ್ರಾರಂಭವಾಯಿತು. ಹೀಗೆ ಮದುವೆಯಾಗುವವರಲ್ಲಿ ಹೆಚ್ಚಿನವರು ಮದುವೆಯ ಬಳಿಕ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸುತ್ತಾರೆ.

1990ರ ದಶಕದಲ್ಲಿ ನಡೆದ ಆಗಿನ ಶಾಸಕ, ಜನಪ್ರಿಯ ಆರ್‌ಎಸ್‌ಎಸ್ ಮುಖಂಡ ಡಾ.ಯು.ಚಿತ್ತರಂಜನ್ ಕೊಲೆಯ ಬಳಿಕ ಈ ಪಟ್ಟಣದ ಭವಿಷ್ಯ ಬದಲಾಯಿತು. ಕರಾವಳಿಯ ಚಿತ್ರಣವೇ ಬದಲಾಯಿತು. ಕೋಮುಗಲಭೆಗಳು ನಡೆದವು. ಅಂತಿಮವಾಗಿ ಯಾಸಿನ್ ಮತ್ತು ರಿಯಾಜ್‌ನಂತಹ ಭಯೋತ್ಪಾದಕರ ಸೃಷ್ಟಿಗೆ ಕಾರಣವಾಯಿತು. ಭಟ್ಕಳದ ಹೆಸರಿನೊಂದಿಗೆ ಭಯೋತ್ಪಾದನೆಯ ಕೆಸರು ಅಂಟಿಕೊಂಡಿತು. ಹೀಗಾಗಿ ಭಟ್ಕಳದ ಅನೇಕ ಪಾಕಿಸ್ತಾನಿ ವಧುಗಳ ಪೌರತ್ವಕ್ಕೆ ಅನುಮೋದನೆ ಕಷ್ಟವಾಯಿತು.

ʼʼಇಂದಿಗೂ ಭಾರತೀಯ ಪೌರತ್ವಕ್ಕಾಗಿ ಸುಮಾರು 70 ಅರ್ಜಿಗಳು ಗೃಹ ಸಚಿವಾಲಯದ ಮುಂದೆ ಬಾಕಿ ಉಳಿದಿವೆ. 1992ರಿಂದ ಈಚೆಗೆ ನಮ್ಮ ದಾಖಲೆಗಳ ಪ್ರಕಾರ, ಭಟ್ಕಳ ಪಟ್ಟಣದಲ್ಲಿ ಪಾಕಿಸ್ತಾನದ 16 ಮಹಿಳೆಯರು ದೀರ್ಘಾವಧಿಯ ವೀಸಾದಲ್ಲಿ ವಾಸಿಸುತ್ತಿದ್ದಾರೆ. ಅವರಲ್ಲಿ 14 ಮಂದಿ ಭಾರತೀಯರನ್ನು ವಿವಾಹವಾಗಿದ್ದಾರೆ. ಅವರ ಹೆಚ್ಚಿನ ಮಕ್ಕಳು ಭಾರತದಲ್ಲಿ ಹುಟ್ಟಿದ್ದಾರೆʼʼ ಎಂದು ಉತ್ತರ ಕನ್ನಡದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸುತ್ತಾರೆ.

ಆದರೆ ಪೌರತ್ವಕ್ಕಾಗಿ ಕಾಯುವುದೇ ಕಷ್ಟ. ಜಾವೀದ್ (ಹೆಸರು ಬದಲಾಯಿಸಲಾಗಿದೆ) ಎಂಬವರ ಪತ್ನಿ ಪಾಕಿಸ್ತಾನದಿಂದ ಬಂದವರು. ವೀಸಾ ನಿರ್ಬಂಧಗಳಿಂದಾಗಿ ಅವರು ದೇಶದೊಳಗೆ ಪ್ರಯಾಣಿಸುವುದು ಕಷ್ಟವಾಗಿದೆ. “ನಾವು ಪ್ರಯಾಣಿಸಬೇಕಾದರೆ ಪೊಲೀಸರಿಂದ ಅನುಮತಿ ಪಡೆಯಬೇಕು, ಎಷ್ಟೋ ಕಚೇರಿಗಳಿಗೆ ಅಲೆದಾಡಬೇಕು. ಎಷ್ಟೋ ಬಾರಿ ಪೊಲೀಸ್ ಪರಿಶೀಲನೆ ನಡೆದಿವೆ. ಆದರೆ ಪೌರತ್ವದ ಅರ್ಜಿ ಮುಂದೆ ಹೋಗಿಲ್ಲʼʼ ಎನ್ನುತ್ತಾರೆ ಅವರು.

ಇದನ್ನೂ ಓದಿ: ಪ್ರವೇಶದ್ವಾರ ನಿರ್ಮಾಣ ವಿಚಾರಕ್ಕೆ 2 ಕೋಮುಗಳ ನಡುವೆ ಸಂಘರ್ಷ; ಭಟ್ಕಳದಲ್ಲಿ ಉದ್ವಿಗ್ನ ಸ್ಥಿತಿ

ಇತ್ತೀಚಿನ ವರ್ಷಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಈ ಪ್ರಕ್ರಿಯೆಯನ್ನು ಇನ್ನಷ್ಟು ಕಷ್ಟಕರವಾಗಿಸಿದೆ. ಇಲ್ಲಿನ ಶಂಕಿತ ಭಯೋತ್ಪಾದಕನೊಬ್ಬನ ಪತ್ನಿ ಪಾಕಿಸ್ತಾನಿಯಾಗಿದ್ದು, ಇದು ಈ ಸಂಕಷ್ಟಕ್ಕೆ ಹೊಸ ಸೇರ್ಪಡೆ. ಇಂಡಿಯನ್ ಮುಜಾಹಿದ್ದೀನ್ (ಐಎಂ) ಮೂಲಕ ಭಾರತದಾದ್ಯಂತ ಬಾಂಬ್ ದಾಳಿಗೆ ಬಳಸಿದ ಸ್ಫೋಟಕ ವಸ್ತುಗಳನ್ನು ಪೂರೈಸಿದ್ದಕ್ಕಾಗಿ ಸೈಯದ್ ಇಸ್ಮಾಯಿಲ್ ಅಫಾಕ್ ಎಂಬವನು ಈಗ ಜೈಲಿನಲ್ಲಿದ್ದಾನೆ. ಈತನ ಪತ್ನಿ ಅರ್ಸಾಲಾ ಅಬೀರ್. 2006ರಲ್ಲಿ ಅಫಾಕ್ ಜೊತೆಗಿನ ಮದುವೆಯ ನಂತರ ಅವಳ ಎರಡು ವರ್ಷಗಳ ವೀಸಾವನ್ನು ನವೀಕರಿಸಲಾಯಿತು. ಪತಿಯ ಬಂಧನದ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಆಗಸ್ಟ್‌ನಲ್ಲಿ ಆಕೆಯ ವೀಸಾ ನವೀಕರಣ ಅರ್ಜಿಯನ್ನು ತಿರಸ್ಕರಿಸಿತು. ಭಾರತದಿಂದ ತೆರಳಲು ಒಂದು ತಿಂಗಳ ಗಡುವನ್ನು ಈಕೆಗೆ ಕೇಂದ್ರ ಗೃಹ ಸಚಿವಾಲಯ ನಿಗದಿಪಡಿಸಿತು. ಅದನ್ನೂ ಮೀರಿ ಆಕೆ ಇಲ್ಲಿಯೇ ಇದ್ದುದರಿಂದ ಈಕೆಯನ್ನು ಅಕ್ಟೋಬರ್ 7, 2019ರಂದು ಗಡೀಪಾರು ಮಾಡಲಾಯಿತು. ಇಂಥ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಮ್ಮ ವೀಸಾ ನವೀಕರಣ ಮತ್ತು ಪೌರತ್ವ ಅರ್ಜಿ ವಿಲೇವಾರಿ ಪ್ರಕ್ರಿಯೆ ಇನ್ನಷ್ಟು ಕಟ್ಟುನಿಟ್ಟಾಗಿದೆ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಅಧಿಕಾರಿ.

ಆದರೆ ಹೆಚ್ಚಿನ ಪಾಕ್‌ ವಧುಗಳು ಇಲ್ಲಿಯೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಮಕ್ಕಳು ಇಲ್ಲಿಯೇ ಹುಟ್ಟಿ ಬೆಳೆದು ಶಿಕ್ಷಿತರಾಗಿದ್ದಾರೆ. ಅಂಥವರನ್ನು ಗಡಿಪಾರು ಮಾಡುವುದರಲ್ಲಿ ಅರ್ಥವಿಲ್ಲ ಎಂದೂ ಅಧಿಕಾರಿ ಹೇಳುತ್ತಾರೆ.

ಇದನ್ನೂ ಓದಿ: Bomb Threat | ಭಟ್ಕಳ ಪೊಲೀಸರಿಗೆ ಬಂತು ಬಾಂಬ್‌ ಬ್ಲ್ಯಾಸ್ಟ್‌ ಬೆದರಿಕೆ ಪತ್ರ; ಕಳ್ಳತನ ಮುಚ್ಚಿಡಲು ಕಳ್ಳನ ಕೃತ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mandya Election Result 2024 : ಮಂಡ್ಯದಲ್ಲಿ ಕುಮಾರ ಸ್ವಾಮಿಗೆ ಭರ್ಜರಿ ಗೆಲುವು

Mandya Election Result 2024 : 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು 7,03,660 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಅವರು ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆದ್ದಿದ್ದರು.

VISTARANEWS.COM


on

Mandya Election Result 2024
Koo

ಬೆಂಗಳೂರು: ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕ ಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಪಕ್ಷದ ವರಿಷ್ಠ ಎಚ್​ ಡಿ ಕುಮಾರಸ್ವಾಮಿ (8,51,881 ಮತಗಳು) ಗೆಲುವು ಸಾಧಿಸಿದ್ದಾರೆ. ಈ ಮೂಲಕ ತೀವ್ರ ಜಿದ್ದಾಜಿದ್ದಿಯಲ್ಲಿ ಅವರು ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು (5,67.261 ಮತಗಳು) ವಿರುದ್ಧ 2,84,620 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್​ ತನ್ನ ಕ್ಷೇತ್ರವನ್ನು ಮರುವಶಪಡಿಸಿಕೊಂಡಿದೆ. ಹಿಂದಿನ ಚುನಾವಣೆಯಲ್ಲಿ ಇದನ್ನು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ನಾನಾ ರಾಜಕೀಯ ಚಟುವಟಿಕೆ ಬಳಿಕ ಗೆಲುವು ಕಂಡಿದ್ದರು.

ಎಚ್​. ಡಿ. ಕುಮಾರಸ್ವಾಮಿ (ಜೆಡಿಎಸ್​)- 8,51,881 ಮತಗಳು
ಸ್ಟಾರ್​ ಚಂದ್ರು (ಕಾಂಗ್ರೆಸ್​)- 5,67.261 ಮತಗಳು
ಗೆಲುವಿನ ಅಂತರ-2,84,620

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು 7,03,660 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಅವರು ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆದ್ದಿದ್ದರು.

2018ರ ಉಪಚುನಾವಣೆಯಲ್ಲಿ ಜೆಡಿಎಸ್ ನ ಎಲ್.ಆರ್.ಶಿವರಾಮಗೌಡ 5,69,347 ಮತಗಳನ್ನು ಪಡೆದು ಗೆದ್ದಿದ್ದರು. ಬಿಜೆಪಿಯ ಡಿ.ಆರ್.ಸಿದ್ದರಾಮಯ್ಯ 2,44,404 ಹಾಗೂ ಪಕ್ಷೇತರ ಅಭ್ಯರ್ಥಿ ಎಂ.ಹೊನ್ನೇಗೌಡ 17,842 ಮತಗಳನ್ನು ಪಡೆದಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನ ರಮ್ಯಾ 4,84,085 ಮತಗಳನ್ನು ಪಡೆದು ಜಯಗಳಿಸಿದ್ದರು.

ಈ ಕ್ಷೇತ್ರವು 2009 ಮತ್ತು 2019 ರ ನಡುವೆ ಎರಡು ಉಪಚುನಾವಣೆಗಳಿಗೆ ಸಾಕ್ಷಿಯಾಗಿದೆ. 2009 ರವರೆಗೆ ಸತತ ಮೂರು ಅವಧಿಗೆ ಕನ್ನಡ ಚಲನಚಿತ್ರ ತಾರೆ ಅಂಬರೀಶ್ ಇಲ್ಲಿ ಗೆದ್ದಿದ್ದರು. ಅವರ ಪತ್ನಿ ಸುಮಲತಾ 2019 ರಲ್ಲಿ ಸ್ಪರ್ಧಿಸಿ ಗೆದ್ದರು. 2013ರಲ್ಲಿ ಜೆಡಿಎಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಚೆಲುವರಾಯಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ನಟಿ ರಮ್ಯಾ ಗೆಲುವು ಸಾಧಿಸಿದರು. 2018 ರ ಉಪಚುನಾವಣೆಯಲ್ಲಿ ಸಿ.ಎಸ್.ಪುಟ್ಟರಾಜು ರಾಜ್ಯ ವಿಧಾನಸಭೆಗೆ ಆಯ್ಕೆಯಾದ ನಂತರ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡಿತು.

ಹೇಗಿದೆ ಕ್ಷೇತ್ರ

ಮಂಡ್ಯ ಲೋಕಸಭಾ ಕ್ಷೇತ್ರವು (mandya lok sabha constituency) ಇಡೀ ಮಂಡ್ಯ ಜಿಲ್ಲೆ ಮತ್ತು ಮೈಸೂರು ಜಿಲ್ಲೆಯ ಒಂದು ಭಾಗವನ್ನು ಒಳಗೊಂಡಿದೆ. ಎಂಟು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಂಡ್ಯ ಕ್ಷೇತ್ರವು ಆರಂಭಗೊಂಡ ಬಳಿಕದಿಂದ ಶ್ರೀಮಂತ ರಾಜಕೀಯ ಇತಿಹಾಸ ಹೊಂದಿದೆ. ಮಂಡ್ಯದಲ್ಲಿ 3 ಬಾರಿ ಜೆಡಿಎಸ್ , 2 ಬಾರಿ ಜತನಾ ದಳ ಹಾಗೂ ಒಂದು ಬಾರಿ ಜನತಾ ಪಕ್ಷ ಗೆಲುವು ಸಾಧಿಸಿದೆ. ಹಿಂದಿನ ಬಾರಿ ಪಕ್ಷೇತರ ಅಭ್ಯರ್ಥಿ ಸುಮಲತಾ ವಿಜಯ ಕಂಡಿದ್ದರು. ಮೂಲತಃ ಮೈಸೂರು ರಾಜ್ಯದ ಭಾಗವಾಗಿದ್ದ ಮಂಡ್ಯ 1977 ರ ನಂತರ ಕರ್ನಾಟಕಕ್ಕೆ ಸೇರಿತು.

ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೃಷ್ಣರಾಜಪೇಟೆ ಮತ್ತು ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ 1 ಸ್ಥಾನಗಳನ್ನು ಹೊಂದಿವೆ.

2011ರ ಜನಗಣತಿ ಪ್ರಕಾರ ಮಂಡ್ಯದಲ್ಲಿ 1805769 ಜನಸಂಖ್ಯೆ ಇತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 70.40% – ಮಹಿಳೆಯರಲ್ಲಿ 62.54% ಮತ್ತು ಪುರುಷರಲ್ಲಿ 78.27% ಆಗಿತ್ತು. ಗ್ರಾಮೀಣ ಮತದಾರರು ಇಎಲ್ ನ 83.4% ರಷ್ಟಿದ್ದಾರೆ.

Continue Reading

Lok Sabha Election 2024

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

ಲೋಕಸಭಾ ಚುನಾವಣೆ ಕೊನೆಯ ಹಂತದಲ್ಲಿದೆ. ಈಗ ಎಲ್ಲರ ದೃಷ್ಟಿ ಫಲಿತಾಂಶದತ್ತ ನೆಟ್ಟಿದೆ. ಈ ನಡುವೆ ಎಕ್ಸಿಟ್ ಪೋಲ್ ನುಡಿಯುವ ಭವಿಷ್ಯದ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ. ಕಳೆದ ನಾಲ್ಕು ಲೋಕ ಸಭಾ ಚುನಾವಣೆಯಲ್ಲಿ ಎಕ್ಸಿಟ್ ಪೋಲ್ (Exit Poll) ನುಡಿದಿರುವ ಭವಿಷ್ಯ ಎಷ್ಟು ನಿಜವಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ. ಕಳೆದ ನಾಲ್ಕು ಬಾರಿಯ ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

Exit Polls
Koo

ಲೋಕಸಭೆ ಚುನಾವಣೆ-2024ರ (Loksabha election-2024) ಕೊನೆಯ ಹಂತದ ಮತದಾನ (voting) ಮುಗಿದ ಬಳಿಕ ಪ್ರಸಾರವಾಗಲಿರುವ ಎಕ್ಸಿಟ್ ಪೋಲ್ ಗಳ (Exit Poll) ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಜೂನ್ 1ರಂದು ಎಂಟು ರಾಜ್ಯಗಳ (states) 59 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಸಂಜೆ 6:30ಕ್ಕೆ ಮತಗಟ್ಟೆ ಸಮೀಕ್ಷೆ ಪ್ರಕಟವಾಗಲಿದೆ.

ಅಭಿಪ್ರಾಯ ಸಂಗ್ರಹಕ್ಕಿಂತ (opinion polls) ಎಕ್ಸಿಟ್ ಪೋಲ್ ಭಿನ್ನವಾಗಿರುತ್ತದೆ. ಎಕ್ಸಿಟ್ ಪೋಲ್ ಮತದಾನ ಮುಗಿದ ಅನಂತರ ತೆಗೆದುಕೊಳ್ಳಲಾಗುವ ಮತದಾರರ ಸಮೀಕ್ಷೆಯಾಗಿದೆ. ಜನರು ಹೇಗೆ ಮತ ಚಲಾಯಿಸಿದ್ದಾರೆ ಎಂಬ ಟ್ರೆಂಡ್ ಇದು ನೀಡುತ್ತದೆ.

ನಿರ್ದಿಷ್ಟ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯು ತನ್ನ ಪ್ರತಿಸ್ಪರ್ಧಿಗಿಂತ ಮುಂದಿದ್ದಾರೆ ಎಂಬ ನಿಖರವಾದ ಮಾಹಿತಿಯನ್ನು ಇದು ಒದಗಿಸುತ್ತದೆ. ಚುನಾವಣೆ ಆರಂಭಕ್ಕೂ ಮುನ್ನ ಅಭಿಪ್ರಾಯ ಸಂಗ್ರಹಣೆ ನಡೆಸಲಾಗುತ್ತದೆ. ಇದಕ್ಕಾಗಿ ಜನ ಯಾವ ಪಕ್ಷಕ್ಕೆ ಮತ ಹಾಕಬೇಕು ಎಂದು ಮತಗಟ್ಟೆಯವರು ಕೇಳುತ್ತಾರೆ. ಆದರೆ ಎಕ್ಸಿಟ್ ಪೋಲ್‌ಗಳಲ್ಲಿ ಜನರು ಯಾವ ಪಕ್ಷ ಅಥವಾ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎಂಬುದನ್ನು ಕಂಡುಕೊಳ್ಳುತ್ತಾರೆ.

ಎಕ್ಸಿಟ್ ಪೋಲ್‌ಗಳು ಎಷ್ಟು ನಿಖರವಾಗಿರುತ್ತದೆ?

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ.

ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

ಕಳೆದ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳು ಏನು ಭವಿಷ್ಯ ನುಡಿದಿವೆ ಮತ್ತು ನಿಜವಾದ ಫಲಿತಾಂಶಗಳು ಹೇಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

2019ರ ಎಕ್ಸಿಟ್ ಪೋಲ್‌ಗಳು

ಇಂಡಿಯಾ ಟುಡೇ- ಆಕ್ಸಿಸ್ ಮೈ ಇಂಡಿಯಾ ಪ್ರಕಾರ ಎನ್ ಡಿ ಎ: 339-365, ಯುಪಿಎ: 77-108
ನ್ಯೂಸ್ 24-ಟುಡೇಸ್ ಚಾಣಕ್ಯ ಪ್ರಕಾರ ಎನ್ ಡಿ ಎ-350, ಯುಪಿಎ-95
ನ್ಯೂಸ್ 18-ಐಪಿಎಸ್ ಒಎಸ್ ಪ್ರಕಾರ ಎನ್ ಡಿ ಎ- 336, ಯುಪಿಎ- 124
ಟೈಮ್ಸ್ ನೌ- ವಿಎಂಆರ್ ಪ್ರಕಾರ ಎನ್ ಡಿ ಎ- 306, ಯುಪಿಎ-132
ಇಂಡಿಯಾ ಟಿವಿ-ಸಿಎನ್ ಎಕ್ಸ್ ಪ್ರಕಾರ ಎನ್ ಡಿಎ-300, ಯುಪಿಎ-120
ಎಬಿಪಿ-ಸಿಎಸ್ ಡಿಎಸ್ ಪ್ರಕಾರ ಎನ್ ಡಿಎ- 277, ಯುಪಿಎ- 130
ಇಂಡಿಯಾ ನ್ಯೂಸ್-ಪೋಲ್ ಸ್ಟಾರ್ಟ್ ಪ್ರಕಾರ ಎನ್ ಡಿಎ- 287, ಯುಪಿಎ- 130
2019ರ ಅಂತಿಮ ಫಲಿತಾಂಶ ಹೀಗಿತ್ತು: ಎನ್ ಡಿ ಎ-353, ಯುಪಿಎ-91

2014ರ ಎಕ್ಸಿಟ್ ಪೋಲ್‌ಗಳು

ಸಿ ಎನ್ ಎನ್-ಐಬಿಎನ್– ಸಿಎಸ್ ಡಿಎಸ್–ಲೋಕ್ ನೀತಿ ಪ್ರಕಾರ ಎನ್ ಡಿ ಎ – 276, ಯುಪಿಎ -97, ಇತರೆ-148
ಇಂಡಿಯಾ ಟುಡೇ–ಸಿಸೆರೊ ಪ್ರಕಾರ ಎನ್ ಡಿ ಎ-272, ಯುಪಿಎ-115, ಇತರೆ- 156
ಸುದ್ದಿ 24–ಚಾಣಕ್ಯ ಪ್ರಕಾರ ಎನ್‌ಡಿಎ-340, ಯುಪಿಎ-70, ಇತರೆ-133
ಟೈಮ್ಸ್ ನೌ–ಒ ಆರ್ ಜಿ ಪ್ರಕಾರ ಎನ್‌ಡಿಎ- 249, ಯುಪಿಎ-148, ಇತರೆ- 146
ಎಬಿಪಿ ನ್ಯೂಸ್–ನೀಲ್ಸನ್ ಪ್ರಕಾರ ಎನ್‌ಡಿಎ-274, ಯುಪಿಎ-97, ಇತರೆ-165
ಎನ್ ಡಿ ಟಿವಿ –ಹಂಸ ಸಂಶೋಧನೆ ಪ್ರಕಾರ ಎನ್‌ಡಿಎ-279, ಯುಪಿಎ-103, ಇತರೆ-161
2014ರ ಫಲಿತಾಂಶ ಹೀಗಿತ್ತು: ಎನ್‌ಡಿಎ-336, ಯುಪಿಎ-66, ಇತರೆ-147 ಇದರಲ್ಲಿ ಬಿಜೆಪಿ 282, ಕಾಂಗ್ರೆಸ್ 44 ಸ್ಥಾನಗಳನ್ನು ಗಳಿಸಿತ್ತು.

2009ರ ಎಕ್ಸಿಟ್ ಪೋಲ್‌ಗಳು

ಸಿ ಎನ್ ಎನ್-ಐಬಿಎನ್ – ದೈನಿಕ್ ಭಾಸ್ಕರ್ ಪ್ರಕಾರ ಯುಪಿಎ 185– 205, ಎನ್‌ಡಿಎ 165– 185, ತೃತೀಯ ರಂಗ 110– 130, ನಾಲ್ಕನೇ ರಂಗ 25–35
ಸ್ಟಾರ್-ನೀಲ್ಸನ್ ಪ್ರಕಾರ ಯುಪಿಎ 199, ಎನ್‌ಡಿಎ 196, ತೃತೀಯ ರಂಗ 100, ನಾಲ್ಕನೇ ರಂಗ 36
ಭಾರತ ಟಿವಿ – ಸಿ ವೋಟರ್ ಪ್ರಕಾರ ಯುಪಿಎ 189–201, ಎನ್‌ಡಿಎ 183–195, ತೃತೀಯ ರಂಗ 105–121
2009ರ ಫಲಿತಾಂಶ ಹೀಗಿತ್ತು: ಯುಪಿಎ-262, ಎನ್‌ಡಿಎ-159, ತೃತೀಯ ರಂಗ-79, ನಾಲ್ಕನೇ ರಂಗ-27. ಇದರಲ್ಲಿ ಕಾಂಗ್ರೆಸ್- 206, ಬಿಜೆಪಿ 116 ಸ್ಥಾನಗಳನ್ನು ಗೆದ್ದುಕೊಂಡಿತ್ತು.

2004ರ ಎಕ್ಸಿಟ್ ಪೋಲ್‌ಗಳು

ಎನ್ ಡಿ ಟಿವಿ- ಎಸಿ ನೀಲ್ಸನ್ ಪ್ರಕಾರ ಎನ್ ಡಿ ಎ 230-250, ಕಾಂಗ್ರೆಸ್ 190-205, ಇತರೆ 100-120
ಆಜ್ತಕ್ ಒಆರ್ ಜಿ-ಮಾರ್ಗ್ ಪ್ರಕಾರ ಎನ್ ಡಿ ಎ 248, ಕಾಂಗ್ರೆಸ್-190, ಇತರೆ-105
ಸ್ಟಾರ್‌ನ್ಯೂಸ್ ಸಿ-ವೋಟರ್ ಪ್ರಕಾರ ಎನ್ ಡಿ ಎ 263-275, ಕಾಂಗ್ರೆಸ್ 174-186, ಇತರೆ 86-98
2004ರ ಫಲಿತಾಂಶ ಹೀಗಿತ್ತು: ಯುಪಿಎ- 208, ಎನ್‌ಡಿಎ- 181, ಎಡರಂಗ- 59. ಇದರಲ್ಲಿ ಕಾಂಗ್ರೆಸ್ 145, ಬಿಜೆಪಿ 138 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಎಷ್ಟು ನಿಖರ?

ಕಳೆದ ನಾಲ್ಕು ಬಾರಿಯ ಲೋಕಸಭೆ ಚುನಾವಣೆಗಳ ಮತಗಟ್ಟೆ ಸಮೀಕ್ಷೆಗಳಲ್ಲಿ ಮೂರು ಬಾರಿ ಬಹುತೇಕ ನಿಖರವಾಗಿತ್ತು. ಆದರೆ 2004ರಲ್ಲಿ ಮಾತ್ರ ಸಮೀಕ್ಷೆ ಸುಳ್ಳಾಗಿತ್ತು. ಇದೀಗ 2024 ಸಮೀಕ್ಷೆ ಕುತೂಹಲ ಮೂಡಿಸಿದೆ.

Continue Reading

Lok Sabha Election 2024

Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವನ್ನು ಎದುರು ನೋಡುತ್ತಿರುವಾಗಲೇ ಎಲ್ಲರ ದೃಷ್ಟಿ ಈಗ ಎಕ್ಸಿಟ್ ಪೋಲ್ ನತ್ತ ನೆಟ್ಟಿದೆ. ಈ ಮೂಲಕ ಚುನಾವಣಾ ಆಯೋಗದ (Election Commission) ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ಸುಳಿವು ಜನರಿಗೆ ಲಭ್ಯವಾಗುತ್ತದೆ. ಬಹುತೇಕ ಬಾರಿ ಎಕ್ಸಿಟ್ ಪೋಲ್ (Exit Poll) ಸಮೀಕ್ಷೆ ನಿಜವಾಗಿದ್ದರೂ ಹಲವು ಬಾರಿ ಉಲ್ಟಾ ಆಗಿದೆ. ಅದು ಯಾವಾಗ, ಎಲ್ಲಿ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Exit Poll
Koo

ಲೋಕಸಭಾ ಚುನಾವಣೆಯ (Loksabha election-2024) ಅಂತಿಮ ಹಂತದ ಮತದಾನ (voting) ಜೂನ್ 1ರಂದು ನಡೆಯಲಿದ್ದು, ಜೂನ್ 4ರಂದು ಏಳು ಹಂತದ ಮತದಾನದ ಫಲಿತಾಂಶ ಹೊರಬೀಳಲಿದೆ. ರಾಜಕೀಯ ನಾಯಕರು (political leaders), ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ (Exit Poll) ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ (Election Commission) ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಸಮೀಕ್ಷೆಗಳು ಬಹುತೇಕ ಯಾವಾಗಲೂ ನಿಖರವಾಗಿವೆಯೇ ಇದ್ದರೂ ಕೆಲವು ಬಾರಿ ತಪ್ಪಾಗಿದ್ದೂ ಇದೆ. ತೀವ್ರವಾದ ಪರಿಶೀಲನೆ, ಚರ್ಚೆಯ ಬಳಿಕವೂ ಎಕ್ಸಿಟ್ ಪೋಲ್‌ಗಳು ಯಾವಾಗಲೂ ಅಂತಿಮ ಫಲಿತಾಂಶಗಳನ್ನು ನಿಖರವಾಗಿ ಹೇಳುವುದಿಲ್ಲ. ಇತ್ತೀಚಿನ ವರ್ಷಗಳಲ್ಲಿ ಒಟ್ಟು ಐದು ಬಾರಿ ಎಕ್ಸಿಟ್‌ ಪೋಲ್‌ ಭವಿಷ್ಯ ಸುಳ್ಳಾಗಿದೆ. ಈ ಕುರಿತ ಹಿನ್ನೋಟ ಇಲ್ಲಿದೆ.
2004ರ ಲೋಕಸಭಾ ಚುನಾವಣೆ

2004ರಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ರಾಜ್ಯಗಳ ಚುನಾವಣೆಗಳಲ್ಲಿ ಭರ್ಜರಿ ಜಯ ಗಳಿಸಿ, ಆಡಳಿತಾರೂಢ ಬಿಜೆಪಿಯು ‘ಇಂಡಿಯಾ ಶೈನಿಂಗ್’ ಬ್ಯಾನರ್ ಅಡಿಯಲ್ಲಿ ಅವಧಿಪೂರ್ವವೇ ಲೋಕಸಭೆ ಚುನಾವಣೆ ಎದುರಿಸಿತು. ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ನಾಯಕರು ಭಾರಿ ಆತ್ಮವಿಶ್ವಾಸದಿಂದಿದ್ದರು. ಎಕ್ಸಿಟ್ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎಗೆ 240ರಿಂದ 250 ಸ್ಥಾನಗಳು ಬರಲಿವೆ ಎಂದು ಭವಿಷ್ಯ ನುಡಿದಿದ್ದವು. ಆದರೆ ನಿಜವಾದ ಫಲಿತಾಂಶಗಳು ಬಂದಾಗ ಸಂಖ್ಯೆಗಳು ಸಂಪೂರ್ಣವಾಗಿ ವಿರುದ್ಧವಾಗಿದ್ದವು. ಎನ್‌ಡಿಎ ಕೇವಲ 181 ಸೀಟುಗಳನ್ನು ಗೆಲ್ಲಲು ಸಾಧ್ಯವಾಯಿತು. 218 ಸ್ಥಾನಗಳನ್ನು ಗಳಿಸಿದ ಯುಪಿಎ ಮಿತ್ರ ಪಕ್ಷಗಳ ನೆರವಿನಿಂದ ಕೇಂದ್ರದಲ್ಲಿ ಅಧಿಕಾರ ನಡೆಸಿತು.


2015ರ ದೆಹಲಿ ಅಸೆಂಬ್ಲಿ ಚುನಾವಣೆ

2015ರ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 70ರಲ್ಲಿ 67 ಸ್ಥಾನಗಳನ್ನು ಗಳಿಸಿ ಅಭೂತಪೂರ್ವ ಜಯ ಸಾಧಿಸಿತು. ಆದರೆ ಮತದಾನದ ದಿನದಂದು ನಡೆಸಿದ ಎಕ್ಸಿಟ್ ಪೋಲ್‌ಗಳು ಆಪ್‌ಗೆ ಸ್ಪಷ್ಟ ಬಹುಮತ ಎಂದು ಹೇಳಿತ್ತಾದರೂ, 50ರಷ್ಟು ಸೀಟು ಬರಬಹುದು ಎಂದಿತ್ತು. ಆದರೆ ಆಪ್‌ ಎಲ್ಲರ ನಿರೀಕ್ಷೆಗೂ ಮೀರಿದಷ್ಟು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಮೂಲಕ, ಜನರ ತೀರ್ಪನ್ನು ಸ್ಪಷ್ಟವಾಗಿ ಗುರುತಿಸಲು ಎಕ್ಸಿಟ್‌ ಪೋಲ್‌ಗಳು ವಿಫಲವಾಗಿದ್ದವು.

2015ರ ಬಿಹಾರ ವಿಧಾನಸಭಾ ಚುನಾವಣೆ

2015ರ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ತೀವ್ರ ಪೈಪೋಟಿಯಿಂದ ಕೂಡಿತ್ತು. ಯಾವುದೇ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆಯುವುದಿಲ್ಲ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಆದರೆ ಈ ಮುನ್ಸೂಚನೆಯ ಹೊರತಾಗಿಯೂ ಆರ್‌ಜೆಡಿ-ಜೆಡಿಯು-ಕಾಂಗ್ರೆಸ್ ಒಕ್ಕೂಟವು ಭರ್ಜರಿ ಜಯ ಸಾಧಿಸಿತು. ಲಾಲು ಪ್ರಸಾದ್ ಅವರ ಆರ್‌ಜೆಡಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2017

ನೋಟು ಅಮಾನ್ಯೀಕರಣದ ಅನಂತರ ನಡೆದ 2017ರ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯ ಸಮೀಕ್ಷೆಗಳು ಭಾರಿ ಕುತೂಹಲ ಮೂಡಿಸಿದ್ದವು. ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದರೆ ಸರಳ ಬಹುಮತಕ್ಕೂ ಕೆಲವು ಸ್ಥಾನಗಳು ಕೊರತೆ ಆಗಲಿವೆ. ಬಿಜೆಪಿಗೆ ಹೆಚ್ಚೆಂದರೆ 185ರಿಂದ 200 ಸ್ಥಾನಗಳು ಬರಬಹುದು ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಎಸ್‌ಪಿ-ಕಾಂಗ್ರೆಸ್‌ ಮೈತ್ರಿಕೂಟ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಲಿದೆ ಎಂದು ಹೇಳಲಾಗಿತ್ತು. ಆದರೆ ಎಲ್ಲ ಮತಗಟ್ಟೆ ಸಮೀಕ್ಷೆಗಳಿಗೆ ವ್ಯತಿರಿಕ್ತವಾಗಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಒಟ್ಟು 403 ಸೀಟುಗಳಲ್ಲಿ 312 ಸೀಟುಗಳನ್ನು ಗೆದ್ದುಕೊಂಡಿತು. 2012ರ ಚುನಾವಣೆಯಲ್ಲಿ ಕೇವಲ 47 ಸ್ಥಾನ ಗಳಿಸಿದ್ದ ಬಿಜೆಪಿಗೆ 2017ರಲ್ಲಿ ಭರ್ಜರಿ ಜಯ ಸಾಧಿಸಿ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಸರ್ಕಾರ ರಚಿಸಿತು. ಆ ಚುನಾವಣೆಯಲ್ಲಿ ಬಿಎಸ್‌ಪಿ ಕೇವಲ 19 ಸ್ಥಾನ ಗೆದ್ದಿತು. ಎಸ್ಪಿಗೆ ಕೇವಲ 47 ಸೀಟುಗಳು ಸಿಕ್ಕಿದವು. ಕಾಂಗ್ರೆಸ್‌ಗೆ ಕೇವಲ 7 ಸ್ಥಾನಗಳು ಲಭಿಸಿದವು. ಮತಗಟ್ಟೆ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ಪರ ಭಾರಿ ಅಲೆ ಇರುವುದನ್ನು ಗುರುತಿಸುವಲ್ಲಿ ವಿಫವಾದವು.

ಇದನ್ನೂ ಓದಿ: PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

2014ರ ಲೋಕಸಭಾ ಚುನಾವಣೆ

2014ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಲಿದೆ ಎಂದು ಹೇಳಿತ್ತು. ಆದರೆ ಬಿಜೆಪಿಯೊಂದೇ ಸರಳ ಬಹುಮತಕ್ಕೆ ಅಗತ್ಯವಾದ 272 ಸಂಖ್ಯೆ ಪಡೆಯುವುದಿಲ್ಲ ಎಂದು ಬಹುತೇಕ ಸಮೀಕ್ಷೆಗಳು ಹೇಳಿದ್ದವು. ಟುಡೇಸ್‌ ಚಾಣಕ್ಯ ಸಮೀಕ್ಷೆಯೊಂದು ಮಾತ್ರ ಬಿಜೆಪಿಗೆ 291 ಸೀಟು ಬರಬಹುದು ಎಂದು ಹೇಳಿತ್ತು. ಆದರೆ ಅಂತಿಮ ಫಲಿತಾಂಶದಲ್ಲಿ ಬಿಜೆಪಿಗೆ ಭರ್ಜರಿ 282 ಸೀಟುಗಳು ಲಭಿಸಿದವು. ಎನ್‌ಡಿಎ ಸೀಟುಗಳ ಸಂಖ್ಯೆ 300 ದಾಟಿತು. ಕಾಂಗ್ರೆಸ್ ಕೇವಲ 44 ಸ್ಥಾನಗಳಿಗೆ ಸೀಮಿತವಾಯಿತು. ಬಿಜೆಪಿ ಮತ್ತು ಎನ್‌ಡಿಎಯ ಭಾರಿ ಗೆಲುವಿನ ಸುಳಿವು ಮತಗಟ್ಟೆ ಸಮೀಕ್ಷೆಗಳಿಗೆ ಸಿಕ್ಕಿರಲಿಲ್ಲ. ಹಾಗಾಗಿ ಮತಗಟ್ಟೆ ಸಮೀಕ್ಷೆಗಳು ಎಲ್ಲ ಕಾಲಕ್ಕೂ ಸರಿಯಾಗಿಯೇ ಇರುತ್ತವೆ ಎಂದು ಹೇಳಲಾಗುವುದಿಲ್ಲ.

Continue Reading

Lok Sabha Election 2024

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಈ ಬಾರಿ ಲೋಕ ಸಭಾ ಚುನಾವಣಾ ಪ್ರಚಾರದ ಅಂತ್ಯವನ್ನು ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ನಡೆಸಲಿದ್ದಾರೆ. ಇಲ್ಲಿ ಸುಮಾರು 45 ಗಂಟೆಗಳ ಕಾಲ ಅವರು ಕಳೆಯಲಿದ್ದಾರೆ.

VISTARANEWS.COM


on

By

PM Modi
Koo

ಲೋಕಸಭಾ ಚುನಾವಣೆ- 2024ರ (Loksabha election-2024) ಬಿಜೆಪಿ ಪ್ರಚಾರ ಕಾರ್ಯವನ್ನು ಅಂತ್ಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಕನ್ಯಾಕುಮಾರಿಗೆ ತೆರಳಲಿದ್ದು, ( Kanyakumari) ಇಲ್ಲಿನ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ (Vivekananda Rock Memorial) ಮೇ 30ರಿಂದ ಜೂನ್ 1ರವರೆಗೆ ಒಟ್ಟು 45 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ.

ಇದೇ ಸ್ಥಳದಲ್ಲಿ ಭಾರತದ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು 1892ರಲ್ಲಿ ಮೂರು ದಿನಗಳ ಕಾಲ ಧ್ಯಾನ ಮಾಡಿ ಜ್ಞಾನೋದಯವನ್ನು ಪಡೆದಿದ್ದರು.

2019ರ ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಮೋದಿ ಅವರು ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿ 15 ಗಂಟೆಗಳ ‘ಏಕಾಂತವಾಸ್’ (ಏಕಾಂತ ಧ್ಯಾನ) ಕೈಗೊಂಡಿದ್ದರು.

2014 ರಲ್ಲಿ ಮಹಾರಾಷ್ಟ್ರದ ಪ್ರತಾಪಗಢಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು. 1659ರ ನವೆಂಬರ್ ನಲ್ಲಿ ಬಿಜಾಪುರದ ಆದಿಲ್ ಶಾಹಿ ಸುಲ್ತಾನರ ಸೇನಾಪತಿ ಅಫ್ಜಲ್ ಖಾನ್ ಅವರನ್ನು ಕೊಂದು ಯುದ್ಧದಲ್ಲಿ ಗೆದ್ದ ಛತ್ರಪತಿ ಶಿವಾಜಿಗೆ ಗೌರವ ಸಲ್ಲಿಸಿದರು. ಈ ವಿಜಯವು ಮರಾಠಾ ಸಾಮ್ರಾಜ್ಯದ ಮುಖ್ಯಸ್ಥನಾಗಿ ಶಿವಾಜಿಯ ಪಟ್ಟಾಭಿಷೇಕಕ್ಕೆ ದಾರಿ ಮಾಡಿಕೊಟ್ಟಿತು. ಇದನ್ನು ಹಿಂದವಿ ಸ್ವರಾಜ್ ಎಂದು ಛತ್ರಪತಿ ಶಿವಾಜಿ ಕರೆದರು.

ಇದೀಗ ಜೂನ್ 4 ರಂದು ಪ್ರಕಟವಾಗಲಿರುವ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ ಮೋದಿ ಕನ್ಯಾಕುಮಾರಿ ಪ್ರವಾಸ ಯೋಜನೆ ಹಾಕಿಕೊಂಡಿದ್ದಾರೆ.


ವಿವೇಕಾನಂದ ಬಂಡೆಯ ಮಹತ್ವ ಏನು?

ಹಿಂದೂ ಮಹಾಸಾಗರ, ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿರುವ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ವವತುರೈ ಕಡಲತೀರದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ದ್ವೀಪದ ಮೇಲೆ ಧ್ಯಾನ ಮಾಡುವಾಗ ಸ್ವಾಮಿ ವಿವೇಕಾನಂದರು ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡಿದ್ದರು.

ಭಾರತದಾದ್ಯಂತ ನಾಲ್ಕು ವರ್ಷಗಳ ಕಾಲ ಅಲೆದಾಡಿದ ಅವರು ದೈವಿಕ ಸ್ವಭಾವ, ಸತ್ಯ, ಶುದ್ಧತೆ, ಪ್ರಾಮಾಣಿಕತೆ, ಪರಿಶ್ರಮ, ಧೈರ್ಯ, ಶಕ್ತಿ ಮತ್ತು ಪ್ರೀತಿಯಲ್ಲಿ ನಂಬಿಕೆಯ ಇಡುವ ತತ್ತ್ವವನ್ನು ಸಾರಿದರು.

ಸ್ವಾಮಿ ರಾಮಕೃಷ್ಣಾನಂದರಿಗೆ 1894ರಲ್ಲಿ ವಿವೇಕಾನಂದರು, ಭಾರತೀಯ ಬಂಡೆಯ ಕೊನೆಯ ತುಣುಕಿನ ಮೇಲೆ ಕುಳಿತು ನಾನು ಒಂದು ಯೋಜನೆಯನ್ನು ಕಂಡಿದ್ದೇನೆ. ಸನ್ಯಾಸಿಗಳು ಅಲೆದಾಡುತ್ತಾ ಜನರಿಗೆ ಆಧ್ಯಾತ್ಮಿಕತೆಯನ್ನು ಕಲಿಸುವುದು ಹುಚ್ಚುತನ. ಬಡವರು ಅತ್ಯಂತ ಕಷ್ಟವಾದ ಜೀವನ ನಡೆಸುತ್ತಿರುವುದು ಅವರ ಅಜ್ಞಾನದಿಂದಾಗಿ. ನಾವು ಅದನ್ನು ಹೋಗಲಾಡಿಸುವ ಬದಲು ಅವರ ರಕ್ತವನ್ನು ಹೀರುತ್ತಿದ್ದೇವೆ ಮತ್ತು ಅವರನ್ನು ಪಾದದಡಿಯಲ್ಲಿ ತುಳಿಯುತ್ತಿದ್ದೇವೆ ಎಂದು ಹೇಳಿದ್ದರು.

1963ರಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ಶತಮಾನೋತ್ಸವದ ಮುನ್ನಾದಿನ ಆರ್‌ಎಸ್‌ಎಸ್ ಕಾರ್ಯಕರ್ತ ಏಕನಾಥ್ ರಾನಡೆ ನೇತೃತ್ವದ ವಿವೇಕಾನಂದ ರಾಕ್ ಸ್ಮಾರಕ ಸಮಿತಿಯು ಈ ಸ್ಥಳವನ್ನು ನೆನಪಿಸಿತ್ತು. ಇದನ್ನು 1970 ರಲ್ಲಿ ರಾಷ್ಟ್ರಪತಿ ವಿ.ವಿ.ಗಿರಿ ಅವರು ಔಪಚಾರಿಕವಾಗಿ ಉದ್ಘಾಟಿಸಿದರು.

ಒಂದು ನಂಬಿಕೆಯ ಪ್ರಕಾರ ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿರುವಾಗ ಇದೇ ಬಂಡೆಯ ಮೇಲೆ ಒಂದೇ ಕಾಲಿನ ಮೇಲೆ ಧ್ಯಾನ ಮಾಡುತ್ತಿದ್ದಳು.

ವವತುರೈನಿಂದ 15 ನಿಮಿಷಗಳ ದೋಣಿ ಸಂಚಾರದ ಮೂಲಕ ಕಲ್ಲಿನ ದ್ವೀಪವನ್ನು ಪ್ರವೇಶಿಸಬಹುದು. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ.


ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ.

ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು.

ಈ ಬಾರಿ ತಮಿಳುನಾಡಿನ ಕನ್ಯಾಕುಮಾರಿಯನ್ನು ಅವರು ಧ್ಯಾನ ಮಾಡಲು ಅವರು ಆಯ್ಕೆ ಮಾಡಿರುವುದು ಈ ವರ್ಷದ ಚುನಾವಣಾ ಪ್ರಚಾರದ ಸಮಯದಲ್ಲಿ ಅವರ ಪಕ್ಷ ದಕ್ಷಿಣ ಭಾರತದಲ್ಲಿ ಬಲವಾಗಿರುವುದನ್ನು ಸೂಚಿಸುತ್ತದೆ. ಕಳೆದ ಮೂರು ವರ್ಷಗಳಲ್ಲಿ ಅವರ ಒಟ್ಟು ಪ್ರವಾಸಗಳಲ್ಲಿ ಮೂರನೇ ಒಂದು ಭಾಗದಷ್ಟು ಅವರು ದಕ್ಷಿಣ ಭಾರತಕ್ಕೆ ಪ್ರವಾಸ ಕೈಗೊಂಡಿದ್ದರು. 2024ರಲ್ಲಿ ತಮಿಳುನಾಡಿಗೆ ಏಳು ಭಾರಿ ಭೇಟಿ ನೀಡಿದ್ದಾರೆ.

ದಕ್ಷಿಣದ ರಾಜ್ಯಗಳ ಮೇಲೆ ದೃಷ್ಟಿ

ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕವು ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ 131 ಸ್ಥಾನಗಳನ್ನು ಹೊಂದಿವೆ. ತಮಿಳುನಾಡುವೊಂದೇ ಸಂಸತ್ತಿನಲ್ಲಿ 39 ಸ್ಥಾನಗಳನ್ನು ಹೊಂದಿದೆ. ದಕ್ಷಿಣದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದರು.

ಮೋದಿ ಭೇಟಿಗೆ ಸಿದ್ಧತೆ ಏನು?

ಗುರುವಾರ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ಪ್ರಧಾನಿಯವರ 45 ಗಂಟೆಗಳ ವಾಸ್ತವ್ಯ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸುಮಾರು 2,000 ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

ತಿರುನೆಲ್ವೇಲಿ ವ್ಯಾಪ್ತಿಯ ಡಿಐಜಿ ಪ್ರವೇಶ್ ಕುಮಾರ್ ಅವರು ಪೊಲೀಸ್ ವರಿಷ್ಠಾಧಿಕಾರಿ ಇ. ಸುಂದರವತನಂ ಅವರೊಂದಿಗೆ ಇಲ್ಲಿನ ಕಲ್ಲಿನ ಸ್ಮಾರಕ, ಬೋಟ್ ಜೆಟ್ಟಿ, ಹೆಲಿಪ್ಯಾಡ್ ಮತ್ತು ರಾಜ್ಯ ಅತಿಥಿ ಗೃಹದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಪ್ರಚಾರವನ್ನು ಮುಗಿಸಿದ ಅನಂತರ ಪ್ರಧಾನಿ ಗುರುವಾರ ಮಧ್ಯಾಹ್ನ ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ಸಂಜೆ ಕನ್ಯಾಕುಮಾರಿಯಲ್ಲಿರುವ ರಾಜ್ಯ ಅತಿಥಿ ಗೃಹ ತಲುಪಿ ದೋಣಿ ಮೂಲಕ ವಿವೇಕಾನಂದ ಕಲ್ಲಿನ ಸ್ಮಾರಕಕ್ಕೆ ತೆರಳಲಿದ್ದಾರೆ. ಅವರು ಶನಿವಾರ ಮಧ್ಯಾಹ್ನದವರೆಗೆ ಅಲ್ಲಿಯೇ ಇರುತ್ತಾರೆ ಎನ್ನಲಾಗಿದೆ.

ಮೋದಿ ಶನಿವಾರ ಸಂಜೆ ವೇಳೆಗೆ ಕನ್ಯಾಕುಮಾರಿ ಹೆಲಿಪ್ಯಾಡ್ ತಲುಪಿ ತಿರುವನಂತಪುರಕ್ಕೆ ಹಿಂತಿರುಗಿ ಅದೇ ದಿನ ದೆಹಲಿಗೆ ತೆರಳಲಿದ್ದಾರೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರವು ಪ್ರಧಾನಿಯವರ ಈ ಭೇಟಿಗೆ ಅನುಮತಿಯನ್ನು ವಿರೋಧಿಸಿ ಪ್ರಸ್ತುತ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿ ಸಂಹಿತೆ ಮತ್ತು ನಡೆಯುತ್ತಿರುವ ಪ್ರವಾಸೋದ್ಯಮ ಋತುವನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

Continue Reading
Advertisement
Virat Kohli
ಕ್ರೀಡೆ16 mins ago

Virat Kohli: ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕೊಹ್ಲಿಯನ್ನು ಗುರುತಿಸದ ನ್ಯೂಯಾರ್ಕ್​ ಜನತೆ; ವಿಡಿಯೊ ವೈರಲ್​

Cashless Health Claim
ಮನಿ ಗೈಡ್29 mins ago

Cashless Health Claim: ಸಂಪೂರ್ಣ ನಗದು ರಹಿತ ಆರೋಗ್ಯ ವಿಮೆ ಕ್ಲೈಮ್; ಆಗಸ್ಟ್ 1ರಿಂದ ಜಾರಿ

Shatrughan Sinha
ಸಿನಿಮಾ30 mins ago

Shatrughan Sinha: ಮುಸ್ಲಿಂ ಯುವಕನ ಜತೆ ಮಗಳ ವಿವಾಹ; ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ಏನು?

Amol Kale
ಪ್ರಮುಖ ಸುದ್ದಿ32 mins ago

Amol Kale: ಭಾರತ-ಪಾಕ್‌ ಪಂದ್ಯ ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ನಿಧನ

T20 World Cup 2024
ಕ್ರಿಕೆಟ್1 hour ago

T20 World Cup 2024: ಪಾಕ್​ಗೆ ಇನ್ನೂ ಇದೆ ಸೂಪರ್-8 ಅವಕಾಶ? ಇಲ್ಲಿದೆ ಲೆಕ್ಕಾಚಾರ

Narenda Modi
Lok Sabha Election 20241 hour ago

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

Smartphone Charging Tips
ತಂತ್ರಜ್ಞಾನ1 hour ago

Smartphone Charging Tips: ನಿಮ್ಮ ಸ್ಮಾರ್ಟ್ ಪೋನ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಹೀಗೆ ಮಾಡಿ

Bengaluru Crime News
ಬೆಂಗಳೂರು2 hours ago

ಬೈಕ್‌ ಮರೆತು ಬಂದಿದ್ದನ್ನು ಪ್ರಶ್ನಿಸಿದ ಮಗನನ್ನೇ ಕೊಂದ ತಂದೆ; ಕುಡಿದ ಮತ್ತಲ್ಲಿ ನಡೆಯಿತು ದುರಂತ!

RSA vs BAN
ಕ್ರೀಡೆ2 hours ago

RSA vs BAN: ಹ್ಯಾಟ್ರಿಕ್​ ಗೆಲುವು ಸಾಧಿಸಿ ಸೂಪರ್​-8 ಹಂತಕ್ಕೆ ಲಗ್ಗೆಯಿಟ್ಟ ದಕ್ಷಿಣ ಆಫ್ರಿಕಾ

Delhi Tour
ಲೈಫ್‌ಸ್ಟೈಲ್2 hours ago

Delhi Tour: ದೆಹಲಿಗೆ ಪ್ರವಾಸಕ್ಕೆ ಹೋದಾಗ ಮಿಸ್ ಮಾಡದೇ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌