ಪ್ರೀ-ಫೈನಲ್‌ ಪಂದ್ಯವೇ ಮೇರಿ ಕೋಮ್‌ ʼಫೈನಲ್‌ʼ ಪಂದ್ಯವಾಗಿಬಿಟ್ಟಿತು! - Vistara News

ಕ್ರೀಡೆ

ಪ್ರೀ-ಫೈನಲ್‌ ಪಂದ್ಯವೇ ಮೇರಿ ಕೋಮ್‌ ʼಫೈನಲ್‌ʼ ಪಂದ್ಯವಾಗಿಬಿಟ್ಟಿತು!

ಮೇರಿ ಕೋಮ್‌ ಫೈನಲ್‌ ಪಂದ್ಯವನ್ನು ಆಡದೆ ವೃತ್ತಿ ಜೀವನಕ್ಕೆ ವಿದಾಯ ಹೇಳಬೇಕಾದ ಸನ್ನಿವೇಶ ಎದುರಾಗಿದೆ. ಬಹುತೇಕ ಸಂಕಷ್ಟವೇ ಇದ್ದ ಮೇರಿ ಕೋಮ್‌ ಜೀವನದಲ್ಲಿ ಮತ್ತೊಂದು ಆಘಾತ.

VISTARANEWS.COM


on

-time world champion Mary Kom announced her retirement from boxing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಆರು ಬಾರಿಯ ವಿಶ್ವ ಚಾಂಪಿಯನ್‌ ಮೇರಿ ಕೋಮ್‌ ತಮ್ಮ ವೃತ್ತಿ ಜೀವನದ ಕೊನೆಯ ಬಾಕ್ಸಿಂಗ್‌ ಪಂದ್ಯ ಆಡುವುದರಿಂದ ವಂಚಿತರಾಗಿದ್ದಾರೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ಈ ಬಾರಿ ನಡೆಯಲಿರುವ ಕಾಮನ್‌ವೆಲ್ತ್‌ ಗೇಮ್ಸ್ ಮೇರಿ ಕೋಮ್‌ ಅವರ ವಿದಾಯದ ಪಂದ್ಯವಾಗಿತ್ತು. ಆದರೆ ದುರದೃಷ್ಟವಶಾತ್ ಮೇರಿ ಕೋಮ್‌ ಈ ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ. ʼಫೈನಲ್‌ʼ ಪಂದ್ಯವನ್ನು ಆಡದೇ ನಿವೃತ್ತಿ ಪಡೆಯುತ್ತಿರುವುದು ವಿಷಾದಕರ!

ಮೇರಿ ಕೋಮ್‌ಗೆ ಎದುರಾದ ದುರದೃಷ್ಟದ ಟ್ವಿಸ್ಟ್!

ಶ್ರೇಷ್ಠ ಬಾಕ್ಸಿಂಗ್‌ ಚಾಂಪಿಯನ್!‌ ಆರು ಬಾರಿ ವಿಶ್ವ ಚಾಂಪಿಯನ್‌ ಆದ ಹಿರಿಮೆ, ಭಾರತದ ಮಹಿಳೆಯರ ಬಾಕ್ಸಿಂಗ್‌ನಲ್ಲಿ ಹೊಸ ಚರಿತ್ರೆಯನ್ನು ಬರೆದ ಮೇರು ಆಟಗಾರ್ತಿ ಮೇರಿ ಕೋಮ್.‌ ಬಾಕ್ಸಿಂಗ್‌ನಲ್ಲಿ ಐತಿಹಾಸಿಕ ಗೆಲುವಿಗೆ ಪಾತ್ರರಾದ ಆಟಗಾರ್ತಿ ವೃತ್ತಿ ಜೀವನಕ್ಕೆ ವಿದಾಯ ಹೇಳುವ ಮುನ್ನ ಒಂದು ಪಂದ್ಯವನ್ನು ಆಡಿದ್ದರೆ, ಸರಿಯಾದ ರೀತಿಯಲ್ಲಿ ಬೀಳ್ಕೊಟ್ಟ ಹಾಗಾಗುತ್ತಿತ್ತು. ಬೇಸರದ ವಿಷಯವೆಂದರೆ ಮೇರಿ ಕೋಮ್‌ ಕೊನೆಯ ಪಂದ್ಯವನ್ನು ಆಡದೆ ವಿದಾಯ ಹೇಳಬೇಕಾದ ಸನ್ನೀವೇಶ ಎದುರಾಗಿದೆ.

ಮೇರಿ ಕೋಮ್‌ ಇನ್ನು 5 ತಿಂಗಳಲ್ಲಿ 40 ವರ್ಷಗಳನ್ನೂ ಪೂರೈಸುತ್ತಾರೆ. ಹಾಗಾಗಿ ಅವರು ಈ ಬಾರಿ ವೃತ್ತಿ ಜೀವನಕ್ಕೆ ವಿದಾಯ ಹೇಳಬೇಕು. 40 ವರ್ಷ ಪೂರೈಸಿದವರು ಬಾಕ್ಸಿಂಗ್‌ ಆಡುವಂತಿಲ್ಲ. ಅದು ಬಾಕ್ಸಿಂಗ್‌ನ ನಿಯಮ. ಆದ್ದರಿಂದ ಇದು ಅವರ ಕೊನೆಯ ಟೂರ್ನಮೇಂಟ್‌ ಆಗಿತ್ತು.

ಲಂಡನ್‌ನಲ್ಲಿ ನಡೆಯುತ್ತಿದ್ದ ಕಾಮನ್‌ವೆಲ್ತ್‌ನ ಪ್ರೀ-ಫೈನಲ್ ಪಂದ್ಯದ ವೇಳೆ ನೀತು ಘಂಘಸ್‌ ಹಾಗೂ ಮೇರಿ ಕೋಮ್‌ ಮುಖಾಮುಖಿಯಾಗಿದ್ದರು. ಪೈಪೋಟಿ ನಡೆಸುವಾಗ ಮೇರಿ ಕೆಳಕ್ಕೆ ಬಿದ್ದು ಕಾಲಿಗೆ ಪೆಟ್ಟು ಮಾಡಿಕೊಂಡರು. ಮೊಣಕಾಲಿಗೆ ತೀವ್ರವಾದ ಗಾಯವಾಯಿತು. ನೋವಿನಿಂದ ಬಳಲುತ್ತಿದ್ದ ಮೇರಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಪಂದ್ಯದಲ್ಲಿ ರಿತು ಅವರನ್ನು ವಿನ್ನರ್‌ ಎಂದು ಘೋಷಿಸಲಾಯಿತು. ಆದರೆ, ಇದರಿಂದ ಮೇರಿ ಕೋಮ್‌ ಅವರಿಗೆ ದೊಡ್ಡ ನಷ್ಟವಾಗಿದೆ. ಒಂದು ಫೈನಲ್‌ ಪಂದ್ಯವನ್ನು ಆಡುವ ಮೂಲಕ ವಿದಾಯ ಹೇಳಬೇಕೆಂಬುದು ಆಸೆಯಾಗಿಯೇ ಉಳಿದುಬಿಡುತ್ತದೆ!

ಮೇರಿ ಕೋಮ್‌ ನಡೆದು ಬಂದ ಹಾದಿ!

ಮೇರಿ ಕೋಮ್‌
ಚಿನ್ನದ ಪದಕ ಗೆದ್ದ ಸಂತಸದಲ್ಲಿ ಮೇರಿ

20 ದಶಕಗಳ ವೃತ್ತಿ ಜೀವನದಲ್ಲಿ ಮೇರಿ ಕೋಮ್‌ ಅನೇಕ ಕಷ್ಟಗಳನ್ನು ಎದುರಿಸಿ, ಅವುಗಳನ್ನು ಮೆಟ್ಟಿ ನಿಂತ ಸಾಧಕಿ. ಗಾಯಗಳಿಂದ, ಪೆಟ್ಟುಗಳಿಂದ ಆದ ನೋವನ್ನು ಮೀರಿ ಅತ್ಯಂತ ಉನ್ನತ ಮಟ್ಟದಲ್ಲಿ ಪದಕವನ್ನು ಗೆಲ್ಲುವಲ್ಲಿ ಮೇರಿ ಕೋಮ್‌ ಅನೇಕರಿಗೆ ಸ್ಫೂರ್ತಿಯಾದವರು. ಮಗುವಿಗೆ ಜನ್ಮ ನೀಡಿದ ಬಳಿಕವೂ ಮತ್ತೊಮ್ಮೆ ಬಾಕ್ಸಿಂಗ್‌ ಅಖಾಡಕ್ಕೆ ಕಾಲಿಟ್ಟು ಎದುರಾಳಿಗಳಿಗೆ ಸೋಲುಣಿಸಿದವರು.

ಇಂತಹ ಒಂದು ಅಪರೂಪದ ಆಟಗಾರ್ತಿಗೆ ಸೂಕ್ತ ವಿದಾಯ ದೊರಕಬೇಕಿತ್ತು!

ಮೇರಿ ಕೋಮ್‌ಗೆ ಪದಕವನ್ನು ಗೆಲ್ಲುವ ಹಂಬಲವೇನಿಲ್ಲ. ಈಗಾಗಲೇ ಕಾಮ್‌ವೆಲ್ತ್‌ ಗೇಮ್‌ನಲ್ಲಿ ಈಗಾಗಲೇ ಮೇರಿ ಕೋಮ್‌ ಚಿನ್ನದ ಪದಕವನ್ನು ಗೆದ್ದು ಸಾಧನೆ ಮಾಡಿದ್ದಾರೆ. ಅಲ್ಲದೆ, ವಿಶ್ವ ಚಾಂಪಿಯನ್‌ಶಿಪ್‌ನಿಂದ ಹಿಂದೆ ಸರಿದು ಯುವ ಆಟಗಾರರಿಗೆ ಅವಕಾಶ ನೀಡಿದ್ದರು. ಅಪರೂಪದ ಆಟಗಾರ್ತಿ ಮೇರಿ ಕೊಮ್‌ಗೆ ಸೂಕ್ತವಾದ ಬೀಳ್ಕೊಡುಗೆ ನೀಡುವುದು ಪದಕಕ್ಕಿಂತ ಅಮೂಲ್ಯವಾದದ್ದು.

ಯಾರೊಬ್ಬ ಕ್ರೀಡಾಪಟುವಿಗಾದರೂ ವೃತ್ತಿ ಜೀವನದ ಕೊನೆಯ ಪಂದ್ಯ ಅತ್ಯಂತ ಸ್ಮರಣೀಯವಾಗಿರುತ್ತದೆ. ಜೀವನ ಪರ್ಯಂತ ಅದನ್ನು ನೆನಪಿಗೆ ಬಂದು ಕಾಡುತ್ತದೆ. ಹಾಗಾಗಿ ಅಂತಿಮ ಪಂದ್ಯ ಎನ್ನುವುದು ಮಹತ್ವವಾಗಿರುತ್ತದೆ. ಇದರಿಂದ ವಂಚಿತವಾದರೆ ಕ್ರೀಡಾಪಟುವಿನ ಮನಸ್ಸಿಗೆ ಯಾತನೆ ಉಂಟಾಗಬಹುದು. ಅದರಲ್ಲೂ ಮೇರಿ ಕೋಮ್‌ ಕಾಮನ್‌ವೆಲ್ತ್‌ನ ಫೈನಲ್‌ ಪಂದ್ಯವನ್ನು ಆಡದೇ ವಿದಾಯ ಹೇಳಬೇಕಾಗಿರುವುದು ನಿಜಕ್ಕೂ ಬೇಸರ ಉಂಟುಮಾಡುತ್ತದೆ.

ಈ ಬಗ್ಗೆ ಮೇರಿ ಕೋಮ್‌ ಅವರ ಕೋಚ್‌ ಚೋಟೆ ಲಾಲ್‌ ಯಾದವ್‌ ಹಾಗೂ ಭಾಸ್ಕರ್‌ ಭಟ್‌ ಕೂಡ ಮಾತನಾಡಿ, ಮೇರಿ ಕೋಮ್‌ಗೆ ಎದುರಾದ ಸನ್ನಿವೇಶದ ಬಗ್ಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಮಿನಿ ಒಲಂಪಿಕ್ಸ್ ಪಂದ್ಯದಲ್ಲಿ ಶಿವಮೊಗ್ಗದ ಕ್ರೀಡಾಪಟುಗಳ ಗೆಲುವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

Novak Djokovic: ಹಾಲಿ ಚಾಂಪಿಯನ್‌ ಇಗಾ ಸ್ವಿಯಾಟೆಕ್‌ ಮತ್ತು ಅಮೆರಿಕದ ಕೊಕೊ ಗಾಫ್ ಫ್ರೆಂಚ್‌ ಓಪನ್‌ ಮಹಿಳಾ ಸಿಂಗಲ್ಸ್​ನ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದ್ದಾರೆ. ಸೆಮಿ ಫೈನಲ್​ನಲ್ಲಿ ಉಭಯ ಆಟಗಾರ್ತಿಯರು ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯ ಜೂನ್​ 6, ಗುರುವಾರದಂದು ನಡೆಯಲಿದೆ.

VISTARANEWS.COM


on

Novak Djokovic
Koo

ಪ್ಯಾರಿಸ್​: ಸರ್ಬಿಯಾದ ಪ್ರಸಿದ್ಧ ಟೆನ್ನಿಸ್ ಆಟಗಾರ, ವಿಶ್ವ ನಂ.1 ನೊವಾಕ್ ಜೊಕೊವಿಕ್(Novak Djokovic) ಅವರು ಬಲ ಮೊಣಕಾಲಿನ ಗಾಯದಿಂದಾಗಿ ಪ್ರಸಕ್ತ ಸಾಗುತ್ತಿರುವ ಫ್ರೆಂಚ್ ಓಪನ್‌(French Open 2024) ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ತಮ ಅಲಭ್ಯವನ್ನು ಜೊಕೊವಿಕ್​ ಮಂಗಳವಾರ ಖಚಿತಪಡಿಸಿದರು.

ಈ ಕೂಟದಲ್ಲಿ ಹಾಲಿ ಚಾಂಪಿಯನ್ ಆಗಿರುವ ಜೊಕೊವಿಕ್ ಐದು ಸೆಟ್‌ಗಳು ಮತ್ತು 4 1/2 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಫ್ರಾನ್ಸಿಸ್ಕೊ ​​ಸೆರುಂಡೊಲೊ ವಿರುದ್ಧದ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಗಾಯಗೊಂಡಿದ್ದರು. ಗಾಯದ ನಡುವೆಯೂ ಅವರು ತೀವ್ರ ಹೋರಾಟ ನಡೆಸಿ ಗೆಲುವು ಸಾಧಿಸಿದ್ದರು. ಪಂದ್ಯದ ಬಳಿಕ MRI ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಗಾಯದ ತೀವ್ರತೆ ಅರಿವಿಗೆ ಬಂದಿದೆ. ಅಂತಿಮವಾಗಿ ವೈದ್ಯರ ಸೂಚನೆ ಮೇರೆಗೆ ಟೂರ್ನಿಯಿಂದ ಹೊರ ನಡೆದಿದ್ದಾರೆ.

24 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಜೋಕೊ ಎರಡು ಬಾರಿ ಫ್ರೆಂಚ್ ಓಪನ್ ರನ್ನರ್ ಅಪ್ ಕ್ಯಾಸ್ಪರ್ ರೂಡ್ ವಿರುದ್ಧ ಬುಧವಾರ ಕ್ವಾರ್ಟರ್ ಫೈನಲ್‌ನಲ್ಲಿ ಕಣಕ್ಕಿಳಿಬೇಕಿತ್ತು. ಇದೀಗ ಜೋಕೊ ಹಿಂದೆ ಸರಿದ ಕಾರಣ ರೂಡ್​ ವಾಕ್​ ಓವರ್​ ಪಡೆದು ಸೆಮಿಫೈನಲ್​ ಪ್ರವೇಶಿಸಿದ್ದಾರೆ. ಸೆಮಿಫೈನಲ್​ ಪಂದ್ಯದಲ್ಲಿ ನಂ. 4 ಅಲೆಕ್ಸಾಂಡರ್ ಜ್ವೆರೆವ್ ಅಥವಾ ನಂ. 11 ಅಲೆಕ್ಸ್ ಡಿ ಮಿನೌರ್‌ ನಡುವಿನ ವಿಜೇತರನ್ನು ಎದುರಿಸಲಿದ್ದಾರೆ. 37 ವರ್ಷದ ಜೊಕೊವಿಕ್​ ಈ ವರ್ಷವೂ ಕೂಟ ಚಾಂಪಿಯನ್​ ಪಟ್ಟ ಅಲಂಕರಿಸಿ ಪ್ರಶಸ್ತಿಯನ್ನು ಉಳಿಸುವ ಯೋಜನೆಯಲ್ಲಿದ್ದರು. ಆದರೆ ಅವರ ಈ ಕನಸಿಗೆ ಗಾಯ ಅಡ್ಡಗಾಲಿಕ್ಕಿತು.

ಇದನ್ನೂ ಓದಿ Australian Open 2024: ಫೆಡರರ್ ದಾಖಲೆ ಸರಿಗಟ್ಟಿದ ನೊವಾಕ್ ಜೊಕೊವಿಕ್

ಗಾಫ್-ಸ್ವಿಯಾಟೆಕ್‌ ಸೆಮಿ ಪ್ರವೇಶ


ಹಾಲಿ ಚಾಂಪಿಯನ್‌ ಇಗಾ ಸ್ವಿಯಾಟೆಕ್‌ ಮತ್ತು ಅಮೆರಿಕದ ಕೊಕೊ ಗಾಫ್ ಫ್ರೆಂಚ್‌ ಓಪನ್‌ ಮಹಿಳಾ ಸಿಂಗಲ್ಸ್​ನ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದ್ದಾರೆ. ಸೆಮಿ ಫೈನಲ್​ನಲ್ಲಿ ಉಭಯ ಆಟಗಾರ್ತಿಯರು ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯ ಜೂನ್​ 6, ಗುರುವಾರದಂದು ನಡೆಯಲಿದೆ.

ಇಂದು(ಮಂಗಳವಾರ) ನಡೆದ ಮಹಿಳಾ ಸಿಂಗಲ್ಸ್​ ಕ್ವಾರ್ಟರ್​ ಫೈನಲ್​ನಲ್ಲಿ ಸ್ವಿಯಾಟೆಕ್ ಅವರು ವಿಂಬಲ್ಡನ್ ಚಾಂಪಿಯನ್ ಮಾರ್ಕೆಟಾ ವೊಂಡ್ರೊಸೊವಾ ಅವರನ್ನು 6-0, 6-2 ನೇರ ಸೆಟ್‌ಗಳಿಂದ ಸೋಲಿಸಿದರು. ದಿನ ಮತ್ತೊಂದು ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಅಮೆರಿಕದ ಕೊಕೊ ಗಾಫ್ ಅವರು ಓನ್ಸ್ ಜಬೇರ್ ವಿರುದ್ಧ ಮೂರು ಸುತ್ತುಗಳ ಮ್ಯಾರಥಾನ್​ ಹೋರಾಟದಲ್ಲಿ 4-6 6-2 6-3 ಅಂತರದಿಂದ ಗೆದ್ದು ಬೀಗಿದರು.

Continue Reading

ಕ್ರಿಕೆಟ್

Hanuma Vihari: 2 ತಿಂಗಳ ಬಳಿಕ ನಿರಾಕ್ಷೇಪಣಾ ಪತ್ರ ಪಡೆದ ಹನುಮ ವಿಹಾರಿ

Hanuma Vihari: ಎರಡು ತಿಂಗಳಿಂದ ನಾನು ಎನ್‌ಒಸಿ ಕೇಳುತ್ತಿದ್ದೆ. ಎಸಿಎಗೆ ನಾಲ್ಕು ಬಾರಿ ಮೇಲ್ ಮಾಡಿದ್ದೇನೆ. ಆದರೂ ನೀಡಿರಲಿಲ್ಲ. ಈಗ ರಾಜ್ಯದಲ್ಲಿ ರಾಜಕೀಯ ಚಿತ್ರಣ ಬದಲಾಗಿದೆ. ಹೀಗಾಗಿ, ತಕ್ಷಣ ಎನ್‌ಒಸಿ ನೀಡಿದ್ದಾರೆ’ ಎಂದು ವಿಹಾರಿ ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ

VISTARANEWS.COM


on

Hanuma Vihari
Koo

ಆಂಧ್ರ ಪ್ರದೇಶ: ಟೀಮ್​ ಇಂಡಿಯಾದ ಟೆಸ್ಟ್‌ ಸ್ಪೆಷಲಿಸ್ಟ್‌ ಹನುಮ ವಿಹಾರಿ(Hanuma Vihari) ಕೊನೆಗೂ 2 ತಿಂಗಳ ಬಳಿಕ ಆಂಧ್ರ ಕ್ರಿಕೆಟ್‌ ಸಂಸ್ಥೆಯಿಂದ(Andhra Cricket Association) ನಿರಾಕ್ಷೇಪಣಾ ಪತ್ರವನ್ನು (NOC ) ಪಡೆದಿದ್ದಾರೆ. ಈ ವಿಚಾರವನ್ನು ವಿಹಾರಿ ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.

2023-24ರ ಸಾಲಿನ ರಣಜಿ ಟ್ರೋಫಿ ಟೂರ್ನಿ ಸಂದರ್ಭದಲ್ಲಿ ನಾಯಕತ್ವದಿಂದ ಕೆಳಗಿಳಿಸಿದ ವಿಚಾರವಾಗಿ ವಿಹಾರಿ ಎಸಿಎ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ತನ್ನನ್ನು ನಿರ್ದಾಕ್ಷಿಣ್ಯವಾಗಿ ನಾಯಕತ್ವದಿಂದ ಕೆಳಗಿಳಿಸಿ ಅವಮಾನಿಸಿದೆ. ಮುಂದೆಂದೂ ನಾನು ಆಂಧ್ರ ತಂಡಕ್ಕೆ ಆಡುವುದಿಲ್ಲ ಎಂದು ಹೇಳಿದ್ದರು. ಈ ಸಂಬಂಧ ವಿಹಾರಿ ಅವರಿಗೆ ಎಸಿಎ ನೋಟಿಸ್ ನೀಡಿತ್ತು.‌

ಅವಮಾನಿಸಿದ ಕ್ರಿಕೆಟ್​ ಬೋರ್ಡ್​ ತೊರೆದು ಬೇರೆ ರಾಜ್ಯದ ಪರ ಆಡಲು ನಿರಾಕ್ಷೇಪಣಾ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಪತ್ರವನ್ನು ನೀಡಲು ಎಸಿಎ ತಡ ಮಾಡಿತ್ತು. ಇದೀಗ ಕೊನೆಗೂ 2 ತಿಂಗಳ ಬಳಿಕ ವಿಹಾರಿಗೆ ನಿರಾಕ್ಷೇಪಣಾ ಪತ್ರ ನೀಡಿದೆ(Vihari receives NOC from ACA). ಹೀಗಾಗಿ ಮುಂದಿನ ಆವೃತ್ತಿಯಲ್ಲಿ ವಿಹಾರಿ ಬೇರೆ ರಾಜ್ಯದ ಪರ ಕ್ರಿಕೆಟ್​ ಆಡಬಹುದಾಗಿದೆ.

‘ಎರಡು ತಿಂಗಳಿಂದ ನಾನು ಎನ್‌ಒಸಿ ಕೇಳುತ್ತಿದ್ದೆ. ಎಸಿಎಗೆ ನಾಲ್ಕು ಬಾರಿ ಮೇಲ್ ಮಾಡಿದ್ದೇನೆ. ಆದರೂ ನೀಡಿರಲಿಲ್ಲ. ಈಗ ರಾಜ್ಯದಲ್ಲಿ ರಾಜಕೀಯ ಚಿತ್ರಣ ಬದಲಾಗಿದೆ. ಹೀಗಾಗಿ, ತಕ್ಷಣ ಎನ್‌ಒಸಿ ನೀಡಿದ್ದಾರೆ’ ಎಂದು ವಿಹಾರಿ ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಿಹಾರಿ ಅವರು 2024-25ರ ಋತುವಿನಲ್ಲಿ ಬಿಸಿಸಿಐಗೆ ಸಂಯೋಜಿತವಾಗಿರುವ ಯಾವುದೇ ತಂಡವನ್ನು ಪ್ರತಿನಿಧಿಸಲು ಆಂಧ್ರ ಕ್ರಿಕೆಟ್ ಸಂಸ್ಥೆಯಿಂದ ಯಾವುದೇ ಅಡೆ ತಡೆಗಳಿಲ್ಲ ಎಂದು ಎಸಿಎ ಕಾರ್ಯದರ್ಶಿ ಗೋಪಿನಾಥ್‌ ರೆಡ್ಡಿ ಎನ್‌ಒಸಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ Hanuma Vihari: ಹನುಮ ವಿಹಾರಿಗೆ ಶೋಕಾಸ್‌ ನೋಟಿಸ್‌ ನೀಡಿದ ಎಸಿಎ

ಹನುಮ ವಿಹಾರಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡಿ, ಬಂಗಾಳ ವಿರುದ್ಧದ ಮೊದಲ ಪಂದ್ಯದಲ್ಲಿ ನಾನು ತಂಡದ ನಾಯಕನಾಗಿದ್ದೆ. ಆಟದ ಸಮಯದಲ್ಲಿ ನಾನು 17 ನೇ ಆಟಗಾರನ ಮೇಲೆ ಕೂಗಾಡಿದ್ದೆ. ಅವನು ತನ್ನ ತಂದೆಗೆ (ರಾಜಕಾರಣಿಯಾಗಿದ್ದ) ದೂರು ನೀಡಿದ್ದ, ಪ್ರತಿಯಾಗಿ ಅವರ ತಂದೆ ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಸೋಸಿಯೇಷನ್​ಗೆ ಕೇಳಿದರು. ಬಂಗಾಳ ವಿರುದ್ದದ ಪಂದ್ಯದಲ್ಲಿ ನಾವು ಗೆದ್ದರೂ, ನನ್ನ ಯಾವುದೇ ತಪ್ಪು ಇಲ್ಲದ ಹೊರತಾಗಿಯೂ ರಾಜೀನಾಮೆ ಕೊಡಲು ನನ್ನಲ್ಲಿ ಅಸೋಸಿಯೇಶನ್​ ಕೇಳಿಕೊಂಡಿತು. ನಾನು ವೈಯಕ್ತಿಕವಾಗಿ ಆ ಆಟಗಾರನಿಗೆ ಏನೂ ಹೇಳಿರಲಿಲ್ಲ. ಆದರೆ ಕಳೆದ ಏಳು ವರ್ಷಗಳಲ್ಲಿ ಐದು ಬಾರಿ ತಂಡವನ್ನು ನಾಕೌಟ್​ಗೆ ತಲುಪಿಸಿದ, ತಂಡಕ್ಕೆ ಎಲ್ಲವನ್ನೂ ಕೊಟ್ಟ ಆಟಗಾರನಿಗಿಂತ ಆ ಆಟಗಾರನೇ ಮಂಡಳಿಗೆ ಪ್ರಿಯವಾದ. ನಾನು ಮುಜುಗರ ಅನುಭವಿಸಿದೆ. ಇನ್ನೆಂದೂ ನಾನು ಆಂಧ್ರಪ್ರದೇಶದ ಪರ ಆಡಲಾರೆ ಎಂದು ಹೇಳಿದ್ದರು. ಇದೇ ವಿಚಾರವಾಗಿ ವಿಹಾರಿ ವಿರುದ್ಧ ಎಸಿಎ ನೋಟಿಸ್‌ ಜಾರಿ ಮಾಡಿತ್ತು.

ವಿಹಾರಿ ಮಾಡಿದ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಎಸಿಎ, ವಿಹಾರಿ ನಾಯಕತ್ವದ ನಿರ್ಗಮನವು ವೃತ್ತಿಪರ ಪರಿಗಣನೆಯ ಪರಿಣಾಮವಾಗಿದೆಯೇ ಹೊರತು ರಾಜಕೀಯ ಹಸ್ತಕ್ಷೇಪವಲ್ಲ, ವಿಹಾರಿ ಆಟಗಾರರನ್ನು ಬೆದರಿಸಿ ಸಹಿ ಮಾಡಿಸಿದ್ದಾರೆ ಎಂದು ಆಂಧ್ರ ಕ್ರಿಕೆಟ್ ಸಂಸ್ಥೆ ಆರೋಪ ಮಾಡಿತ್ತು. 

Continue Reading

ಕ್ರಿಕೆಟ್

Election Results 2024: ಪಶ್ಚಿಮ ಬಂಗಾಳದಲ್ಲಿ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್​ಗೂ ಜಯಭೇರಿ

Election Results 2024: ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ಟಿಎಂಸಿ ಅಭ್ಯರ್ಥಿ ಕೀರ್ತಿ ಆಜಾದ್ 7,20,667 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್ 5,82,686 ಮತಗಳನ್ನು ಪಡೆದರು. ಈ ಮೂಲಕ 1,37,981 ಮತಗಳ ಅಂತರದಿಂದ ಆಜಾದ್​ ಗೆಲುವು ಸಾಧಿಸಿದರು.

VISTARANEWS.COM


on

Election Results 2024
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ(West Bengal) ಯೂಸುಫ್ ಪಠಾಣ್ ಮಾತ್ರವಲ್ಲದೆ ಮತ್ತೋರ್ವ ಭಾರತದ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್(Kirti Azad) ಕೂಡ ಟಿಎಂಸಿ(TMC) ಪರ ಗೆಲುವು ಕಂಡಿದ್ದಾರೆ. ಬರ್ಧಮಾನ್-ದುರ್ಗಾಪುರ ಕ್ಷೇತ್ರದಲ್ಲಿ ಕಣಕ್ಕಿಳಿದ್ದ ಅವರು ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್(Dilip Ghosh) ಅವರನ್ನು ಸೋಲಿಸುವಲ್ಲಿ(Election Results 2024) ಯಶಸ್ವಿಯಾಗಿದ್ದಾರೆ.

ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ಟಿಎಂಸಿ ಅಭ್ಯರ್ಥಿ ಕೀರ್ತಿ ಆಜಾದ್ 7,20,667 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್ 5,82,686 ಮತಗಳನ್ನು ಪಡೆದರು. ಈ ಮೂಲಕ 1,37,981 ಮತಗಳ ಅಂತರದಿಂದ ಆಜಾದ್​ ಗೆಲುವು ಸಾಧಿಸಿದರು. ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಈ ಹಿಂದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷವನ್ನು ಪ್ರತಿನಿಧಿಸಿದ್ದರು. ನವೆಂಬರ್ 2021ರಲ್ಲಿ ಟಿಎಂಸಿ ಪಕ್ಷವನ್ನು ಸೇರಿದರು. ಇದೀಗ ಲೋಕ ಸಮರ ಗೆದ್ದು ಬೀಗಿದ್ದಾರೆ.

85 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ ಪಠಾಣ್


ಯೂಸುಫ್ ಪಠಾಣ್(Yusuf Pathan) ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದಾರೆ. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದರು. ಈ ಮೂಲಕ ಯೂಸುಫ್ ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದರು.

ಇದನ್ನೂ ಓದಿ AP Election Results 2024: ಆಂಧ್ರದಲ್ಲಿ ಮತ್ತೊಮ್ಮೆ ಟಿಡಿಪಿ ಮ್ಯಾಜಿಕ್‌; ಆಡಳಿತ ವಿರೋಧಿ ಅಲೆಗೆ ಕೊಚ್ಚಿಹೋದ ಜಗನ್ ಮೋಹನ್ ರೆಡ್ಡಿ

ಗೆಲುವಿನ ಬಳಿಕ ಮಾತನಾಡಿದ ಯೂಸುಫ್, ನನಗೆ ಸಂತೋಷವಾಗಿದೆ, ಇದು ನನ್ನ ಬೆಂಬಲಿಗರ ಮತ್ತು ಕಾರ್ಯಕರ್ತರ ಗೆಲುವು. ಇದಕ್ಕಾಗಿ ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಜತೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ನಾನು ಮೊದಲು ಕ್ರೀಡಾ ಅಕಾಡೆಮಿ ಮಾಡುತ್ತೇನೆ, ಇದರಿಂದ ಯುವ ಪ್ರತಿಭೆಗಳು ವೃತ್ತಿಜೀವನ ಕಟ್ಟಿಕೊಳ್ಳಬಹುದು. ಕೈಗಾರಿಕೆಗಳಿಗೂ ಕೆಲಸ ಕೊಡಿಸುತ್ತೇನೆ. ನಾನು ಇಲ್ಲಿಯೇ ವಾಸಿಸುತ್ತೇನೆ ಮತ್ತು ನನ್ನ ಕ್ಷೇತ್ರದ ಜನರ ಸೇವೆಗಾಗಿ ಸದಾ ಸಿದ್ಧನಿರುತ್ತೇನೆ” ಎಂದು ಪಠಾಣ್​ ಹೇಳಿದರು.

400 ಸೀಟ್‌ ಗಳಿಸುವ ಎನ್‌ಡಿಎ ಕನಸು ನುಚ್ಚು ನೂರಾದದ್ದು ಹೇಗೆ?


ಉತ್ತರ ಪ್ರದೇಶದ ಜಾತಿ ಸಮೀಕರಣ

ಬಿಜೆಪಿ ಈ ಬಾರಿ ಉತ್ತರ ಪ್ರದೇಶದಲ್ಲಿ ಭಾರಿ ಹೊಡೆತ ತಿಂದಿದೆ. ಕಳೆದ ಸಲಕ್ಕಿಂತ 30ಕ್ಕೂ ಅಧಿಕ ಸ್ಥಾನಗಳನ್ನು ಕಳೆದುಕೊಂಡಿದೆ. ಇದಕ್ಕೆ ಈ ರಾಜ್ಯದ ಜಾತಿ ರಾಜಕೀಯವನ್ನು ಬಿಜೆಪಿ ಕಡೆಗಣಿಸಿದ್ದೇ ಕಾರಣ ಎನ್ನಲಾಗುತ್ತಿದೆ. ರಾಮ ಮಂದಿರದ ಅಲೆ ಏರಿ ಬಂದ ಬಿಜೆಪಿ, ಹಿಂದುತ್ವದ ಮೂಲಕ ಗೆಲ್ಲಬಹುದು ಎಂದುಕೊಂಡಿತು. ಆದರೆ ಇಲ್ಲಿ ಹಿಂದುತ್ವ ರಾಜಕಾರಣಕ್ಕಿಂತಲೂ ಜಾತಿ ರಾಜಕಾರಣದ ಸಮೀಕರಣವೇ ಹೆಚ್ಚು ಕೆಲಸ ಮಾಡಿದೆ. ಈ ಸಲ ದಲಿತ ಮತಗಳು ಸಾಮೂಹಿಕವಾಗಿ ಎಸ್‌ಪಿ ಸೇರಿದಂತೆ ಇಂಡಿಯಾ ಬ್ಲಾಕ್‌ನತ್ತ ತಿರುಗಿದೆ ಎನ್ನಲಾಗುತ್ತಿದೆ. ಹಾಗೆಯೇ ಮುಸ್ಲಿಂ ಮತಗಳೂ ಸಾಂಪ್ರದಾಯಿಕವಾಗಿ ಎಸ್‌ಪಿ ಹಾಗೂ ಬಿಎಸ್‌ಪಿಯ ಪಾಲಾದವು. ಇದು ಬಿಜೆಪಿಗೆ ನಷ್ಟ ಉಂಟುಮಾಡಿದೆ.

Continue Reading

ಕ್ರೀಡೆ

Election Results 2024: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ಭೂಷಣ್‌ ಪುತ್ರನಿಗೆ ಭರ್ಜರಿ ಜಯ

Election Results 2024: ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಕಾರಣದಿಂದ ನಾಲ್ಕನೇ ಬಾರಿ ಟಿಕೆಟ್‌ ಕೈತಪ್ಪಿತ್ತು. ಹೀಗಾಗಿ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಿತ್ತು.

VISTARANEWS.COM


on

Election Results 2024
Koo

ನವದೆಹಲಿ: ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್‌ಭೂಷಣ್‌ ಶರಣ್​ ಸಿಂಗ್‌(Brij Bhushan) ಅವರ ಕಿರಿಯ ಪುತ್ರ ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಅವರು ಸಮಾಜವಾದಿ ಪಕ್ಷದ ಭಗತ್ ರಾಮ್ ವಿರುದ್ಧ ಕೈಸರ್‌ಗಂಜ್(Kaiserganj) ಲೋಕಸಭಾ ಕ್ಷೇತ್ರದಲ್ಲಿ 1.4 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ತಂದೆ ಬ್ರಿಜ್​ ಭೂಷಣ್(Brij Bhushan)​ 2019ರ ಲೋಕಸಭಾ ಚುನಾವಣೆಯಲ್ಲಿ, ಕೈಸರ್‌ಗಂಜ್‌ನಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. 

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಕಾರಣದಿಂದ ನಾಲ್ಕನೇ ಬಾರಿ ಟಿಕೆಟ್‌ ಕೈತಪ್ಪಿತ್ತು. ಹೀಗಾಗಿ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಿತ್ತು. ಇದೀಗ ತಂದೆಯಂತೆ ಮಗನೂ ಕೂಡ ಭರ್ಜರಿ ಅಂತರದ ಗೆಲುವು ಸಾಧಿಸಿ ಕೈಸರ್‌ಗಂಜ್​ನಲ್ಲಿ ಪ್ರಾಬಲ್ಯ ಮೆರೆದಿದ್ದಾರೆ.

ಮಗನ ನಾಮನಿರ್ದೇಶನ ಮಾಡುವ ವೇಳೆ ಕೈಸರ್‌ಗಂಜ್‌ನಲ್ಲಿ ಬೃಹತ್​ ರ‍್ಯಾಲಿ ಮಾಡುವ ಮೂಲಕ ಬ್ರಿಜ್‌ಭೂಷಣ್‌ ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದರು. ಈ ರ‍್ಯಾಲಿಯಲ್ಲಿ 10,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದರಲ್ಲಿ ಶಾಸಕರು, ಎಂಎಲ್‌ಸಿಗಳು, ಜಿಲ್ಲಾ ಪಂಚಾಯತ್ ಮುಖ್ಯಸ್ಥರು, ಹತ್ತಿರದ ಜಿಲ್ಲೆಗಳ ಬಿಜೆಪಿಯ ಸ್ಥಳೀಯ ನಾಯಕರು, ಅಯೋಧ್ಯೆಯ ಪ್ರಮುಖ ಧಾರ್ಮಿಕ ಮುಖಂಡರು ಸೇರಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಜನ ಸಂಪರ್ಕ ಹೊಂದಿದ್ದಾರೆ.

ರಾಮ ಮಂದಿರ ನಿರ್ಮಿಸಿದರೂ ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು!


ಈ ವರ್ಷದ ಆರಂಭದಲ್ಲಿ ಭವ್ಯವಾದ ಶ್ರೀರಾಮ ಮಂದಿರದ (Ayodhya Ram Mandir) ಪ್ರಾಣಪ್ರತಿಷ್ಠೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya election results 2024) ಮಾಡಲಾಯಿತು. ಆದರೆ ಅಯೋಧ್ಯೆಯನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ (Faizabad Election Result) ಎಸ್‌ಪಿ (SP) ಅಭ್ಯರ್ಥಿಯ ಮುಂದೆ ಬಿಜೆಪಿ (BJP) ಅಭ್ಯರ್ಥಿ ಸೋತಿದ್ದಾರೆ.

ಇದನ್ನೂ ಓದಿ Election Results 2024 : ಮೋದಿಯ ಸೋಲು ಎಂದ ಖರ್ಗೆ, ಸಂವಿಧಾನ ಉಳಿಸಿದೆವು ಎಂದ ರಾಹುಲ್​ ಗಾಂಧಿ

ಜನವರಿಯಲ್ಲಿ ರಾಮ ಮಂದಿರದಲ್ಲಿ ನಡೆದ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ, ಇಡೀ ಭಾರತದಲ್ಲಿಯೇ ಬಿಜೆಪಿಯ ಪುನಃ ಪ್ರತಿಷ್ಠಾಪನೆಗೆ ಮೂಲವಾಗಲಿದೆ ಎಂದು ಭಾವಿಸಲಾಗಿತ್ತು. ಕಡೇ ಪಕ್ಷ ಉತ್ತರ ಪ್ರದೇಶದಲ್ಲಾದರೂ ಭಾರಿ ಮೆಜಾರಿಟಿಯಲ್ಲಿ ಬಿಜೆಪಿ ಬರಲಿದೆ ಎಂದು ತರ್ಕಿಸಲಾಗಿತ್ತು. ಆದರೆ ಅದು ಆಗಿಲ್ಲ. ಅಯೋಧ್ಯೆಯನ್ನು ಒಳಗೊಂಡ ಫೈಜಾಬಾದ್‌ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಅಭ್ಯರ್ಥಿ ಅವಧೇಶ್ ಪ್ರಸಾದ್ ಮುಂದೆ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸೋತಿದ್ದಾರೆ.

ಫೈಜಾಬಾದ್‌ನಿಂದ ಮೂರು ಬಾರಿ ಸಂಸದರಾಗಿರುವ ಸಿಂಗ್ ಅವರ ಈ ಸಲದ ಸೋಲು ಅಚ್ಚರಿದಾಯಕವಾಗಿದೆ. ಸಮಾಜವಾದಿ ಪಕ್ಷದ ಅಭ್ಯರ್ಥಿಗಿಂತ 10,000ಕ್ಕೂ ಅಧಿಕ ಮತಗಳ ಅಂತರದಿಂದ ಸಿಂಗ್‌ ಹಿಂದುಳಿದರು. ಫೈಜಾಬಾದ್ ಜಿಲ್ಲೆಯನ್ನು 2018ರಲ್ಲಿ ಅಧಿಕೃತವಾಗಿ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಯಿತು. ಆದಾಗ್ಯೂ, ಲೋಕಸಭಾ ಸ್ಥಾನವನ್ನು ಇನ್ನೂ ಫೈಜಾಬಾದ್ ಎಂದು ಕರೆಯಲಾಗುತ್ತದೆ.

ಉತ್ತರ ಪ್ರದೇಶದ 43 ಲೋಕಸಭಾ ಸ್ಥಾನಗಳಲ್ಲಿ ಇಂಡಿಯಾ ಬ್ಲಾಕ್ ಮುನ್ನಡೆ ಸಾಧಿಸಿದೆ. ಮಧ್ಯಾಹ್ನದ ಹೊತ್ತಿಗೆ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಕ್ರಮವಾಗಿ 34 ಮತ್ತು ಒಂಬತ್ತು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದವು. 2019ರಲ್ಲಿ 62 ಸ್ಥಾನ ಗಳಿಸಿದ್ದ ಬಿಜೆಪಿ, ಈ ಬಾರಿ 34 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಕ್ಷೇತ್ರದಲ್ಲಿ ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ. ಮತಗಳ ಅಂತರ ಕಳೆದ ಸಲಕ್ಕಿಂತ ಕಡಿಮೆಯಾಗಿದೆ. ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿ ಗೆಲುವು ಸಾಧಿಸಿದರೆ, ಸ್ಮೃತಿ ಇರಾನಿ ಅಮೇಠಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ವಿರುದ್ಧ ಸೋತಿದ್ದಾರೆ.

Continue Reading
Advertisement
Anna Lezhneva
ರಾಜಕೀಯ2 hours ago

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ವಿದೇಶಿ ಮಹಿಳೆ ಯಾರು?

BJP celebration about lok sabha election results
ಕರ್ನಾಟಕ2 hours ago

R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

MLC TA Sharavana latest statement about lok sabha election results 2024
ಕರ್ನಾಟಕ2 hours ago

TA Sharavana: ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

Election Results 2024
ಪ್ರಮುಖ ಸುದ್ದಿ2 hours ago

Election Results 2024: ಬಿಜೆಪಿ ಹಿನ್ನಡೆ ನಡುವೆಯೂ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿ ಆಗುವುದು ಖಚಿತ!

Election Results 2024
ಪ್ರಮುಖ ಸುದ್ದಿ2 hours ago

Election Results 2024: ಲೋಕಸಭೆ ಚುನಾವಣೆಯ ರಾಜ್ಯವಾರು ಬಲಾಬಲ ಹೀಗಿದೆ

Assault Case
ಕರ್ನಾಟಕ2 hours ago

Assault Case: ಬೆಳ್ತಂಗಡಿಯಲ್ಲಿ ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ; ಸುರಪುರದಲ್ಲಿ ರಾಜುಗೌಡ ಅಳಿಯನ ಕಾರಿನ ಮೇಲೆ ಕಲ್ಲೆಸೆತ

Narendra Modi Election
ದೇಶ3 hours ago

Narendra Modi Election: ಚುನಾವಣೆ ಫಲಿತಾಂಶದ ಬಳಿಕ ತಾಯಿಯ ನೆನೆದು ಭಾವುಕರಾದ ಮೋದಿ

Karnataka Election Results 2024
ಕರ್ನಾಟಕ3 hours ago

Karnataka Election Results 2024: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರ್ತಿರಲಿಲ್ಲ: ಎಚ್‌ಡಿಕೆ

Novak Djokovic
ಕ್ರೀಡೆ3 hours ago

Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

Election Results 2024
Lok Sabha Election 20243 hours ago

Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ18 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌